ಒಟ್ಟು 9952 ಕಡೆಗಳಲ್ಲಿ , 132 ದಾಸರು , 5277 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭೂತರಾಜರು ಭೂತರಾಜ, ಭೂತರಾಜ, ಭೂತರಾಜ ಜೈ ಜೈ ಜೈ ಪ ಭಾವಿರುದ್ರ ಜೈ ಜೈ ಜೈ ಅ.ಪ. ವಿನುತ ಗುರುವಿನಲ್ಲಿ ಮುನಿಗೆ ಜೈ ಜೈ ಜೈ 1 ಹರಿಯ ಮುಖಜರನ್ನು ಬಹಳ, ಜರಿದು ಜರಿದು ಗರ್ವ ದಿಂದ | ಬೊಮ್ಮರಕ್ಕಸ ಜೈ ಜೈ ಜೈ 2 ಘೋರ ಅಡವಿ ಸೇರಿ ಭರದಿ, ದಾರಿಯಲ್ಲಿ ಬಂದ ಜನರ | ಸೊರೆಕೊಂಡು ಮಾನಧನವ, ಕ್ರೂರನೆಂದು ಕರಸಿ ಕೊಂಡೆ3 ಜ್ಞಾನ ಪೂರ್ಣ ಗುರುವಿನೊಡನೆ, ಮಾನವಾದ ಪಕ್ಷಗೈದೆ4 ಶರಧಿ ವಾದಿರಾಜ, ಭರದಿ ಹರಿಸಿ ಕೀಳು ಜನ್ಮ | ಚರಣ ಭಜಿಪ ಭಾಗ್ಯಕೊಡಲು, ಮೆರದೆ ಭೂತರಾಜ ನೆನಿಸಿ |5 ಕ್ಷಮಿಸನೇನು ಸುತನಪಿತನು, ನಮಿಸಿ ನಿಂತ ನಿನಗೆ ನುಡಿದ | ಸುಖದಿ ಬಾಳೆಂದು6 ಗಾತ್ರ ಕೆಂಪು ನೇತ್ರ | ಚಾರು ವಡವೆ ಗಣವ ಧರಿಸಿ, ವೀರ ರೂಪದಿಂದ ಮೆರೆವೆ 7 ಹಾರಿ ಹೋಗಿ ಧನಪನೆಡೆಗೆ, ತೋರಿ ನಿನ್ನಶೌರ್ಯ ಪಡದು | ಭಾರಿ ರತ್ನ ಮಕುಟ ನುತಿಸಿ, ನೇರ ಶಿರದಲಿಟ್ಟೆ ಗುರುವಿಗೆ 8 ಪಥದಿ ಖಳನ ಕೊಂದು ಬೇಗ ರಥ ಸಮೇತ ಬದರಿಯಿಂದ ಪೃಥಿವಿ ಅಳೆದೆ ದೊರೆಯತಂದು, ವಿತತ ಮಹಿಮ ದುಷ್ಠದಮನ 9 ಕ್ಷೇತ್ರಪಾಲ ಶರಣು ಭಾವಿಸೂತ್ರ ವಲಿಯ ಬಿಡಲು ನಿನ್ನ ಗಾತ್ರಕೆಡಹಿ ಬೇಡಿ ಕೊಂಬೆ, ನೇತ್ರ ನೀಡೊ ಹರಿಯ ಕಾಂಬ ಜೈ10 ಕಳೆದು ಬೇಗ ಹೊಲಸು ಮನವ, ಬೆಳಿಸಿ ಹರಿಯ ದೃಢಸುಭಕ್ತಿ ಕಲಿಯ ತುಳಿವ ಶಕ್ತಿ ನೀಡಿ, ಕಲಸೊ ಸಾಧುಸಂಗ ಜೀಯ, ಜೈ11 ಭಂಗ ಗೈದು ನಿಂತೆ ಅಲ್ಲ ಲಿಂಗ ತಂದೆ ಕದರಿಯಿಂದ, ತುಂಗ ಮಹಿಮ ಮಂಗಳಾಂಗ ಜೈ12 ಕುಣಿದು ಮುದದಿ ಭಜಿಪೆ ಗರಳ ಕಂಠ ಭಾವಿ ಶರಣು, ಚರಣ ಪಿಡಿವೆ ಸ್ತೋತ್ರಪ್ರೀಯ ಜೈ13 ವೈರಿ ವೃಂದ ಮೋದ ಕೊಡಿಸು ತಿರ್ಪೆಭೂಪ |ಜೈ14 ರಾಜ ಬಿರುದು ಸಹಿತ ಭಾರಿ | ವಾಜಿ ಏರಿ ನಡೆಯೆ ವಾದಿ ಅಳಿಯೆ ಸಿಗದು ಜೈ 15 ವಂದು ಕಮ್ಮಿ ನಾಲ್ಕು ಹತ್ತು, ತಂದೆ ವಿಧಿಯ ಕಲ್ಪಗಳಲಿ | ಇಂದು ಉಂಬೆ ದಿವ್ಯ ಪದವಿ16 ಭೀತಿ ಕರವು ನಿನ್ನ ರೂಪ, ವ್ರಾತ್ಯಗಣಕೆ ವಾದಿ ರಾಜ | ದೂತ ನಿನಗೆ ಪ್ರತಿಯ ಕಾಣೆ, ಪ್ರೀತಿ ಸುರಿಸು ಭೃತ್ಯರೆಮಗೆ ಜೈ17 ರಾಜ ರೆಡೆಯ ಬಲದಿ ನೆಲಸಿ, ರಾಜ ಮಂತ್ರಿ ಕೆಲಸ ನಡೆಸಿ ಸೂಜಿ ತಪ್ಪಿಗೆಡೆಯ ಕೊಡದೆ, ರಾಜ ಕ್ಷೇತ್ರ ಕಾಯುತಿರ್ಪೆ ಬೈ18 ಕರ್ಣ ಗುಂಪು, ನಿನ್ನ ಸ್ತುತಿ ಸೇವಿಸುವರು | ದೊಣ್ಣಿ ಸೇವೆ ದುಡುಕಿ ದವಗೆ, ಚಿಣ್ಣರೆಂದು ತಪ್ಪ ಕ್ಷಮಿಸು ಜೈ19 ಚಿತ್ರ ವೈಯ ನಿನ್ನ ಚರಿತೆ, ಭಕ್ತರಿಂದ ಕೊಂಡು ಹರಿಕೆ ಕಿತ್ತು ವಗೆದು ವಿವಿಧ ದೋಷ, ಎತ್ತಿ ಕೊಡುವೆ ಕಾಮಿತಾರ್ಥಜೈ20 ಭೂತ ಪ್ರೇತ ಬಾಧೆ ಸಕಲ, ಆರ್ತಿನಾಶ ಪದವ ಪಠಿಸೆ | ನಲಿವ ಜೈ ಜೈ ಜೈ 21
--------------
ಕೃಷ್ಣವಿಠಲದಾಸರು
ಭೂರಿ ಕರುಣಾಕರನೋ ಸಾರುವ ತೆರೆದೊಳು ತೋರಿಹ ಭಕ್ತರ ಪ. ಅಗಣಿತ ಮಹಿಮನ ಪೊಗಳುವೆ ನಾನೆಂತು ಬಗೆ ಬಗೆ ರೂಪದಿ ಸಿಗದೆಸಿಗುವ ಹಾಂಗೆ ಪೊಗಳಿಸಿಕೊಂಡು ತಾ ಝಗಝಗಿಸುತ ಬಹ ನಗೆಮೊಗ ಚೆನ್ನಿಗ ನಿಗಮಗೋಚರ ಕೃಷ್ಣಾ 1 ಭಕ್ತ ಪ್ರಹ್ಲಾದಗೆ ಅತ್ಯಧಿಕ ಹಿಂಸೆ ಯಿತ್ತ ಪಿತನ ಕೊಂದು ಇತ್ತ ಮುಕುತಿ ಅವ ನತ್ಯಪರಾಧವನೆತ್ಯಾಡಿದನೇ ಚಿತ್ತಜನೈಯ್ಯನು ಭಕ್ತವತ್ಸಲ ದೇವ 2 ಅಣುರೇಣು ತೃಣಕಾಷ್ಠ ಪರಿಪೂರ್ಣ ನೀನೆಂದು ಕ್ಷಣ ಬಿಡದಲೆ ಗಜರಾಜನು ಸ್ತುತಿಸೆ ಅನುವಿಲಿ ಚಕ್ರದಿ ನಕ್ರನ ಹರಿಸಲು ದಣಿದ ಹರಿಗೆ ಗಜರಾಜನೇನಿತ್ತನೋ 3 ಭಕ್ತರ ಮನದಘ ನಿತ್ಯದಿ ಕಳೆದನೋ ಅಶಕ್ತ ಅಜಮಿಳನೆಮ ಭೃತ್ಯರೆಳೆಯಲು ಇತ್ತು ನಾರಗನುಡಿ ಮತ್ತೆ ಯಮಭಟರ ಇತ್ತ ಮುಕುತಿ ದೇವ ಅತ್ಯಧಿಕ 4 ಮೂಗುತಿ ನೆವದೊಳು ಸಾಗಿಸಿ ಭಾಗ್ಯವ ಜಾಗರ ಮೂರುತೆ ಯೋಗಿಗಳರಸನು ಬಾಗಿಸಿ ತನ್ನವರಾಗಿಸಿ ದಾಸರ ಸರ್ವರ ಅನುರಾಗದಿ ಸಲಹುವ 5
--------------
ಸರಸ್ವತಿ ಬಾಯಿ
ಭೂರಿ ನಿಗಮವ ಕದ್ದ ಚೋರದೈತ್ಯನ ಗೆದ್ದ ಸಾರ ವೇದಗಳ ವಿಧಿಗಿತ್ತ ಸಾರ ವೇದಗಳ ವಿಧಿಗಿತ್ತ ಮತ್ಸ್ಯಾವ- ತಾರಗಾರತಿಯ ಬೆಳಗಿರೆ 1 ವಾರಿಧಿ ಮಥನದಿ ನೀರೊಳು ಗಿರಿ ಮುಳುಗೆ ತೋರಿ ಬೆನ್ನಾಂತ ಸುರನುತ ತೋರಿ ಬೆನ್ನಾಂತ ಸುರನುತ ಕೂರ್ಮಾವ- ತಾರಗಾರತಿಯ ಬೆಳಗಿರೆ 2 ಧಾತ್ರಿಯ ಕದ್ದೊಯ್ದ ದೈತ್ಯನÀ ಮಡುಹಿದ ಎತ್ತಿ ದಾಡೆಯಲಿ ನೆಗಹಿದ ಎತ್ತಿ ದಾಡೆಯಲಿ ನೆಗಹಿದ ವರಾಹ- ಮೂರ್ತಿಗಾರತಿಯ ಬೆಳಗಿರೆ 3 ಕಡು ಬಾಲನ ನುಡಿಗೆ ಒಡೆದು ಕಂಬದೊಳುದಿಸಿ ಒಡಲ ಸೀಳಿದ ಹಿರಣ್ಯಕನ ಒಡಲ ಸೀಳಿದ ಹಿರಣ್ಯಕನ ನರಸಿಂಹ ಒಡೆಯಗಾರತಿಯ ಬೆಳಗಿರೆ 4 ಸೀಮಾಧಿಪತಿ ಬಲಿಯ ಭೂಮಿ ಮೂರಡಿ ಬೇಡಿ ಈ ಮೂರು ಜಗವ ಈರಡಿಯ ಈ ಮೂರು ಜಗವ ಈರಡಿ ಮಾಡಿ ಅಳೆದ ವಾಮನಗಾರತಿಯ ಬೆಳಗಿರೆ 5 ಅಂಬರಕೇಶನ್ನ ನಂಬಿದ ಕತ್ರಿಯರ ಸಂಭ್ರಮ ಕುಲವ ಸವರಿದ ಸಂಭ್ರಮ ಕುಲವ ಸವರಿದ ಪರಶುರಾ- ಮೆಂಬಗಾರತಿಯ ಬೆಳಗಿರೆ 6 ತಂದೆ ಕಳುಹಲು ವನಕೆ ಬಂದಲ್ಲಿ ಸೀತೆಯ ತಂದ ರಾವಣನ ತಲೆಹೊಯ್ದ ತಂದ ರಾವಣನ ತಲೆಹೊಯ್ದ ರಘುರಾಮ- ಚಂದ್ರಗಾರತಿಯ ಬೆಳಗಿರೆ 7 ಶಿಷ್ಟ ಯಮಳಾರ್ಜುನರಭೀಷ್ಟವ ಸಲಿಸಿದ ದುಷ್ಟ ಕಂಸನ್ನ ಕೆಡಹಿದ ದುಷ್ಟ ಕಂಸನ್ನ ಕೆಡಹಿದ ನಮ್ಮ ಶ್ರೀ ಕೃಷ್ಣಗಾರತಿಯ ಬೆಳಗಿರೆ 8 ರುದ್ರನ್ನ ತ್ರಿಪುರದೊಳಿದ್ದ ಸತಿಯರ ಬುದ್ಧಿ ಭೇದಮಾಡಿ ಕೆಡಿಸಿದ ಬುದ್ಧಿ ಭೇದಮಾಡಿ ಕೆಡಿಸಿ ಬತ್ತಲೆ ನಿಂದ ಬೌದ್ಧಗಾರತಿಯ ಬೆಳಗಿರೆ 9 ಪಾಪಿಜನ ಭಾರಕ್ಕೆ ಈ ಪೃಥ್ವಿ ಕುಸಿಯಲು ತಾ ಪಿಡಿದು ಖಡ್ಗ ತುರಗವ ತಾ ಪಿಡಿದು ಖಡ್ಗ ತುರಗವೇರಿದ ಕಲ್ಕಿ- ರೂಪಗಾರತಿಯ ಬೆಳಗಿರೆ 10 ಮುತ್ತೈದೆ ನಾರಿಯರು ಮುತ್ತಿನಾರತಿ ಮಾಡಿ ಹತ್ತವತಾರಿ ಹಯವದನ ಹತ್ತವತಾರಿ ಹಯವದನನ ಪಾಡುತ ಚಿತ್ರದಾರತಿಯ ಬೆಳಗಿರೆ 11
--------------
ವಾದಿರಾಜ
ಭೂರಿಜಗದುದ್ಧಾರೆ ಲೋಕವಿ-| ಸಾರೆ ಸರ್ವಾಧಾರೆ ಲೋಕವಿ-| ಚಾರೆ ನಿನ್ನಡಿದಾವರೆಗೆ ನಾ ಅ.ಪ ಚಂಡಿಕೆ ಗಿರಿಜಾತೆ || ದಿಂಡುಗೆಡಹುತ ರುಂಡಗಳ ಚೆಂ-| ಡಾಡಿ ರಕ್ತವನುಂಡ ಶಂಕರಿ1 ಕೌಮಾರಿ ಗೌರಿ ರುದ್ರಾಣಿ || ಕಾಮಹರ ಸುಪ್ರೀ(ಯೆ) ತ್ರಿಜಗ-| (ವಾಮೆ) ಪೊರೆ ಬ್ರಹ್ಮಾಂಡ ನಾಯಕಿ 2 ನಾದ ಬಿಂದು ಕಲಾದಿಮಯ(ಳೆ) ವಿ-| ಧ್ಯಾಂತರಹಿತೆ ಸದಾನಂದೋದ್ಧರೆ 3
--------------
ಸದಾನಂದರು
ಭೃಂಗ ಕುಂತಳೆಯರು ಮುಯ್ಯ ತಂದಾರೆಂದು ಪ. ಅಂದದ ವಸ್ತವಧರಿಸಿ ದೂತೆ ಚಂದದ ಸೀರೆ ಶೃಂಗರಿಸಿಇಂದಿರೇಶಗೆ ನಮಸ್ಕರಿಸಿತಾನು ಬಂದಾಳೆ ದ್ರೌಪತಿ ಸ್ಮರಿಸಿ 1 ಬಾಗಿಲಿಗೆ ಬಂದಾಳು ನೋಡಿದ್ವಾರಪಾಲಕಗೆ ಉಚಿತವ ಹೇಳಿಹೊನ್ನುಂಗುರಆತಗೆ ನೀಡಿಒಳಗೆ ಪೋದಳು ಹರಿಯ ಕೊಂಡಾಡಿ2 ವಂದಿಸಿ ಯದುನಾಥನಢಿಗೆಮಂದಹಾಸವ ಬೀರಿದೂತೆಯಡೆಗೆಬಂದಾರೈವರೆಂಬೊ ನುಡಿಗೆಆನಂದ ಬಟ್ಟ ಕೃಷ್ಣ ಬ್ಯಾಗನೆ3 ವೇಗದಿ ರುಕ್ಮಿಣಿಗೆಬಾಗಿ ಸುದ್ದಿ ಹೇಳಿ ಮುಯ್ಯದ ಬಗಿ ಬಗಿನಾಗವೇಣಿಯು ಹರುಷಾಗಿಕರೆಯ ಬರತೇವಂತ್ಹೇಳೆ ಹೋಗಿ4 ಪುತ್ಥಳಿ ಮನಕೆ ತಾರೆಂದು 5 ಗುರ್ತು ಹೇಳುವೆ ಕೇಳೊ ದೊರೆಯೆ ಕೃಷ್ಣಚರ್ಚೆ ಮಾತಿನ ಚಮತ್ಕಾರಿಯೆಶೃತ್ಯರ್ಥದಾ ಮಳೆಗರಿಯೆಪ್ರತಿಯುತ್ತರವಕೊಡೋದು ಮರಿಯೆ 6 ಕೋಕಿಲ ಸ್ವರದಂತೆ ಅಳಕು ಹರುಷಾಗಿರಾಮೇಶಗ್ಹಾಕಿ ಮಲಕುಆಗಮಾ ತರತಾಳೆ ಮಲಕುಎಲ್ಲಾ ನಾರಿಯರು ಅಕೆಗೆ ಅಳಕು 7
--------------
ಗಲಗಲಿಅವ್ವನವರು
ಭೃಂಗ ಜಯ ಶರಣು ಶ್ರೀ ಸುಜ್ಞಾನ ಭಕುತಿ ವೈರಾಗ್ಯಪರನೆ ಜಯ ಶರಣು ದಾಸೋತ್ತಮರ ಮಣಿಯ ನಿನಗ್ಯಾರೆಣಿಯೆ ಗುರು ಪುರಂದರದಾಸರೆ ನಿಮಗೆ ಪ ಪಾಕಶಾಸನಪುರದ ಚಿನಿವಾರ ವರದಪ್ಪ ನಾ ಕುಮಾರನಾಗಿ ಜನಿಸಿ ಸಂಸಾರದೊಳು ಸಂಚರಿಸಿ ಲೌಕಿಕವನ್ನೆ ತೊರೆದು ಈ ಕಲಿಯುಗದಲ್ಲಿ ತುಂಗಾತೀರ ಪಂಪಾ ರಾಕಾಬ್ಜನಂತೆ ಪೊಳೆವ ನಿಧಿಗೆ ಬಂದು ನಿ ರಾಕರಿಸಿ ದುಸ್ಸಂಗ ವೈಷ್ಣವರಾಗಿ ಪತಿಕರಿಸಿ ಹರಿಭಕುತಿಯಾ 1 ಕಾಮಕ್ರೋಧ ಲೋಭ ಮದ ಮತ್ಸರ ಡಂಭ ಈ ಮರಿಯಾದಿಗಳ ಮರ್ಮವನೆ ಕಡಿದು ನಿ ಸಿರಿ ಕೈಕೊಂಡು ಆ ಮಹಾ ರಚನೆಯಲ್ಲಿ ಸೀಮೆಯೊಳು ಪ್ರಾಕೃತದ ಗೀತೆಯಲಿ ಕೊಂಡಾಡಿ ತಾಮರಸ ಸದೆ ಬಡಿದು ಮಧ್ವಸಿದ್ಧಾಂತ ಲ ಹುಯಿಸಿ ಕಾವನೈಯನ ಕುಣಿಸಿದ 2 ಸಿರಿ ವಿಠ್ಠಲನ್ನ ಮೃದು ಪದ್ಮಗಂಧವನು ಮಧುಪÀನಂತೆ ಸೇವಿಸುತ್ತ ಬುದ್ಧಿ ಪೂರ್ವಕದಿಂದಲಿ ಶುದ್ಧ ಮಂದರನೆಲ್ಲ ಎಂದೆಂದಿಗೂ ಬಿಡದೆ ಪೊದ್ದರ್ದ ಪಾಪಗಳು ತಿರುಗಗೊಡದಲೆ ಕಾಲಿ ಮಾರ್ಗದ ಪದ್ಧತಿಯ ಸ್ಥಿತಿ ಪೇಳಿದ 3 ವರದಪ್ಪನೇ ಸೋಮ ಗುರುರಾಯ ದಿನಕರನು ಗುರು ಮಧ್ವಪತಿಯೆ ಭೃಗು ಅಭಿನವನೆ ಜೀವ ಉಪದೇಶಿಸಿ ಪರಮ ಜ್ಞಾನಿಗಳ ಮಾಡಿ ಶರಧಿ ತೆರೆಯಂತೆ ಹರಿಗುಣಗಳನ್ನು ಪೊಗಳುತಿಹ ತರಳರನು ನೋಡಿ ಗುರು ವ್ಯಾಸಮುನಿರಾಯರಿಗೆ ಕರಣ ಚರಿತೆಯಲಿ ನಲಿದಾಡಿದ 4 ಫೃತದ ಬಿಂದಿಗೆ ತಂದ ಅತಿಥಿಯ ವೋಗರನುಂಡ ಸತಿಯಳೆಂದಾ ನುಡಿಗೆ ಚತುರ ಭಾಗ್ಯವನಿತ್ತ ಹಿತನಾಗಿ ದೃಢನೋಡಿದ ಯತಿಯ ಪಂಕ್ತಿಗೆ ಭಾಗೀರಥಿ ನದಿಯ ತರಸಿದ ಸುತನಾಗಿ ನೀರು ನಿಶಿತದಲಿ ತಂದ ಅ ಪ್ರತಿ ದೈವತಾ ಕಿಂಕರ 5 ವಜ್ರ ಪ್ರಹರವಿದು ಸಜ್ಜನರ ದಿವ್ಯ ಚರಣಾಬ್ಜಕ್ಕೆ ಭೃಂಗವಿದು ಹೆಚ್ಚು ಲಜ್ಜೆಯನು ತೊರೆದು ನಿತ್ಯ ಹೆಜ್ಚ್ಚಿ ಹೆಜ್ಚಿಗೆ ಬಿಡದೆ ದಾಸರ ಕರುಣವೆಂಬ ವಜ್ರ ಕವಚವ ತೊಟ್ಟು ನುಡಿದವನ ನುಡಿ ಸತ್ಯ ಅಬ್ಜಭವನೊಡನೆ ಗತಿಗೆ 6 ಎಂತು ವರ್ಣಿಸಲಿ ಎನಗಳವಲ್ಲ ಧರೆಯೊಳಗೆ ಸಂತತಿ ನೆಲಸಿದಂತೆ ಕಾವ್ಯವನೆ ಸ್ಥಾಪಿಸಿ ದಾಸರನ ಸಂತರಿಸಿ ಧರೆಗೆ ತೋರಿ ಸಿರಿ ವಿಠಲನ ಸ್ಮರಿಸುತ ಸು ಪಂಥವನು ಹಿಡಿದು ಸದ್ಗತಿಯಲ್ಲಿ ಸೇರಿದರು ಚಿಂತೆಯೊಳಗಿಟ್ಟ ಗುರುವೆ 7
--------------
ವಿಜಯದಾಸ
ಭೋಗ ಬೇರಿಹುದಣ್ಣ ಭವ ಭೋಗಗಳೆಲ್ಲವು ರೋಗಗಳಣ್ಣ ಭೋಗವ ಪೊಂದುವ ಯೋಗವ ಮರೆಸುವ ರೋಗಗಳಿಗೆ ಗುರಿಯಾಗದಿರಣ್ಣ 1 ಬಗೆ ಬಗೆ ಭಕ್ಷಗಳ ಭೋಗವು ಸೊಗಸೆಂದರಿಯದಿರು ಹಗರಣದಲಿ ತನು ದುಗುಡಕೆ ಸಿಲುಕಲು ಸೊಗಸುಗಳೆಲ್ಲವು ಹಗೆಯಾಗುವುವು 2 ಅಂಗನೆಯರ ಸರಸ ಎಳೆಯ ಭು ಜಂಗನ ಸಹವಾಸ ಅಂಗಗಳಲಿ ಬಲ ಸಡಲಲು ನಿನ್ನಯ ಹಂಗಿಲ್ಲದೆ ಮಾನಭಂಗ ಮಾಡುವರು 3 ಉಡಿಗೆ ತೊಡುಗೆ ಯೋಗ ಜಗದಲಿ ಹುಡುಗುತನದ ಭೋಗ ಗಿಡಗ ಗಿಳಿಮರಿಯನೊಯ್ಯುವ ತೆರದಲಿ ಪಿಡಿಯಲು ದೂತರು ತಡೆ ಮಾಡುವರೇ 4 ಪ್ರಕೃತಿಯೊಳ್ ಸಿಲುಕಿರಲು ಭೋಗಕೆ ಶಕುತಿ ಸಾಲದಣ್ಣ ಭಕುತ ಪ್ರಸನ್ನನು ಭಕುತಿಯೆಂಬೊ ನಿನ್ನ ಯುಕುತಿಗೆ ನೀಡುವ ಮುಕುತಿಯೆಂಬ ದಿವ್ಯ 5
--------------
ವಿದ್ಯಾಪ್ರಸನ್ನತೀರ್ಥರು
ಭೋಜನ ಮಾಡೈಯ ಶ್ರೀರಾಮಚಂದ್ರ ಪ ರಾಜೀವಾನಯನ ಸ್ವರಾಜಾನುಜ ಮಹಾ ರಾಜ ವಂದಿತ ರಾಜಾರಾಜ ಸಖಾರ್ಚಿತ ಅ.ಪ ಉಪ್ಪು ಉಪ್ಪಿನಕಾಯಿ ಪಚ್ಚಡಿಗಳು ಗೊಜ್ಜು ಹಪ್ಪಳ ಸಂಡಿಗೆ ಶಾಖಗಳೂ ಒಪ್ಪುವ ರಸ ಕೂಟು ಹುಳಿ ಫಳಿದ್ಯವು ಸೂಪ ತುಪ್ಪ ಶಾಲ್ಯೋದನ ಚಿತ್ರಾನ್ನಗಳನ್ನು 1 ಹೊರೀಗೆ ಶಷ್ಕುಲಿ ಹೋಳಿಗೆ ಕಡುಬು ಮು- ಚ್ಚೋರೆಯು ಅತಿರಸ ಹೊಯಗಡಬೂ ಕೀರುಆಂಬೊಡೆ ಬೋಂಡ ಶಾವೀಗೆ ಹುಳಿದೋಸೆ ಕ್ಷೀರ ಶರ್ಕರ ಜೇನು ತುಪ್ಪವೆ ಮೊದಲಾಗಿ2 ಮಂಡೀಗೆ ಲಾಡು ಚಿರೋಟಿ ಘೀವರು ಪೇಣಿ ಬೆಂಡು ಸೋಮಾಶಿಬತ್ತಾಸು ಫೇಡಾ ಖಂಡ ಶರ್ಖರೆ ಕಬ್ಬು ಖರ್ಜೂರ ದ್ರಾಕ್ಷಿಗ- ಳುಂಡು ತ್ರಿಲೋಕಳುದ್ಧರಿಸುವ ಸ್ವಾಮಿ 3 ಪನಸು ಜಂಬೂ ಕದಳಿನಾರಂಗ ಎಳನೀರು ಪಾನಕ ತಕ್ರಬೆಣ್ಣೆಯು ಮೊಸರೂ ಸ್ವಾದೋದಕ ಮೊದಲಾಗಿ ಶ್ರೀ ಯರ್ಪಿಸುವಳು ಭಕ್ತಿಯಿಂದಾ ಕೈಕೊಂಡು ನೀ 4 ಸತ್ಯತಾಂಬೂಲ ವರ್ಪಿಸಲು ಯಥಾಶಕ್ತಿ ವಿತ್ತಸಮೇತವಾದಿದನು ಕೈಕೊಂಡು ನೀ 5 ಭೋಗದ್ರವ್ಯವು ಮುಕ್ತಚೂರ್ಣ ದಕ್ಷಿಣೆ ಸಹ ಈಗ ತಾಂಬೂಲ ವೊಪ್ಪಿಸಲು ಕೈಕೊಂಡು ನೀ6 ನವ್ಯ ಸುಗಂಧ ಪುನರ್ಧೂಪವರ್ಪಿಸಿ ಸೇವ್ಯಸೇವಕನಾಗಿ ಸೇವೆ ಕೈಕೊಳ್ಳೆಂದು ಭವ್ಯಚರಿತ ನಿನ್ನ ಪೊಗಳುತ್ತ ಕುಣಿವರು 7 ಅವ್ಯಯಾನಂತ ಜಗದ ಬದುಕು ನೀನೆಂದು ಸೇವ್ಯಸೇವಕನಾಗಿರುವೆ ಎಂದು ಭವ್ಯಚರಿತ್ರರು ಪೊಗಳುವರೈ ನಿನ್ನ ಸವ್ಯಸಾಚಿಯ ಸೂತ ಗುರುರಾಮ ವಿಠಲನೆ 8
--------------
ಗುರುರಾಮವಿಠಲ
ಭ್ರಮಮೂಲಮಿದಂ ಜಗತು ನೇಮದ ನಿಜಮಾತು ಧ್ರುವ ಭ್ರಮೆಯಿಂದಲಿ ಭ್ರಮಣ್ಹತ್ಯದ ನೋಡಿ ಭ್ರಮೆ ನೆಲೆಗೊಳಿಸದು ಮನ ಸ್ಥಿರಮಾಡಿ ಭ್ರಮಿಸೇದನೇಕ ಜನ್ಮ ತಿರುಗಾಡಿ ಭ್ರಮಿಯಲಿ ಬಾರದು ನಿಜ ಕೈಗೊಡಿ 1 ಭ್ರಮೆಯಕ ಭ್ರಮೆ ಹತ್ತೇದ ಬಲು ಬಹಳ ಭ್ರಮಯು ಮಾಡೇದ ಸಂಸಾರದ ಮೇಳ ಭ್ರಮೆ ಇಲ್ಲದ್ಯಾತಕೆ ಏನ್ಹೇಳ ನೇಮದಿ ಹೊಳೆವುದು ವಸ್ತು ಅಚಲ 2 ನಾ ನೀನೆಂಬುದು ಭ್ರಮೆಯದ ಮೂಲ ಅನುದಿನ ಬೆನ್ನಟ್ಟಿದೆ ಬಹುಕಾಲ ಖೂನಕೆ ಬಾರದೆ ಆತ್ಮಾನುಕೂಲ ತಾನೆ ಮುಸುಕ್ಯದೆ ಭ್ರಮಿ ಸಕಲ 3 ನಿಶ್ಚಲವಾಗದೆ ಜ್ಞಾನದ ಉಗಮವು ಹೆಚ್ಚು ಕುಂದಿಗೆ ಹೊಡೆದಾಡುದು ಭ್ರಮೆಯು ಹುಚ್ಚುಮಾಡೇದ ವಿಷಯ ಭ್ರಮೆಯು ಎಚ್ಚರಿಸುವ ಸದ್ಗುರು ದಯಕ್ರಮವು 4 ನಾ ಮವನಿಷ್ಟರೊಳಾಡಿದ ಮಾತು ನಿಮಿಷಾರ್ಧದಲಿ ಭ್ರಮೆಯಗಳೆಯಿತು ಸ್ವಾಮಿಸದ್ಗುರು ಕೃಪೆಯಲಿ ತಿಳದೀತು ನೇಮಿಸಿ ತಿಳಿಕೊ ಮಹಿಪತಿನಿವಾಂತು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭ್ರಮೆ ಬೇಡಲೆ ಮನ ತಿಳಿ ಜವದಿ ಹರಿ ವಿಮಲಚರಣಕಮಲ್ಹಿಡಿ ದೃಢದಿ ಪ ಸುಮನಸರಗೂಡಿ ನೀ ಸುಮಶರ ಪಿತನಂ ಸಮಯ ತಿಳಿದು ಭಜಿಸನುದಿನದಿ ಅ.ಪ ಸಾರವಿಲ್ಲದ ಸಂಸಾರ ಇದು ಮೇರೆನಿಲ್ಲದ ಸಾಗರ ಆರಿಗೆ ನಿಲುಕದೆ ಮೂರುಲೋಕವದ್ದಿ ಮೀರಿಬಡಿಸುವುದು ಬಲುಘೋರ 1 ಹೆಂಡರು ಮಕ್ಕಳೆಂದು ನಂಬಿದಿ ನಿನ್ನ ಹಿಂಡಿನುಂಗುವುದು ಅರಿಯದ್ಹೋದಿ ಕಂಡಕಂಡವರಿಗೆ ಮಂಡೆಬಾಗಿಸಿ ನಿನ್ನ ದಂಡನೆಗೆಳಪುದು ಅಂತ್ಯದಿ 2 ಕಾಕುಜನರ ಸಂಗ್ಹಿಡಿದಿದ್ದಿ ನೀ ಲೋಕನೆಚ್ಚಿ ನೂಕುನುಗ್ಗಾದಿ ಲೋಕಗೆಲಿದು ಭವನೂಕಿ ನಲಿಯುವರ ಸಾಕಾರಗಳಿಸದೆ ಕೆಟ್ಟ್ಹೋದಿ 3 ಧರೆಯ ಭೋಗವನು ಸ್ಥಿರ ತಿಳಿದಿ ನೀ ಹರಿದು ಹೋಗುವದಕೊಲಿತಿದ್ದಿ ಮರೆಮೋಸದಿ ಬಿದ್ದರು ಮೈಯಮರೆದು ಸ್ಥಿರಸುಖ ಪಡೆಯದೆ ದಿನಗಳೆದಿ 4 ಭೂಮಿಸುಖಾರಿಗೆ ನಿಜವಲ್ಲ ಇದು ಕಾಮಿಸಬೇಡೆಲೊ ಶೂಲ ಕಾಮಿತಗಳನಿತ್ತು ಕ್ಷೇಮದಿ ಸಲಹುವ ಸ್ವಾಮಿ ಶ್ರೀರಾಮನ ತಿಳಿಮಿಗಿಲ 5
--------------
ರಾಮದಾಸರು
ಭ್ರಮೆಯ ಪುಟ್ಟಿಸಬೇಡ ಭಾವಿ ಭಾರತೀಶಾ ಪ ದಾತ ಭವದಿ ಪ್ರಖ್ಯಾತ ಅ.ಪ. ಕೃತ ಪ್ರತೀಕದಿ ನಿಂದು ನಾಮರೂಪವ ಧರಿಸಿ ನಿರುತತ್ವದ್ದಾಸರಿಂದ ಪೂಜೆಯಾ ಗೊಂಬೀಮನ ಪಾಶದಿಂ ಬಿಗಿದೆನ್ನ ಮನಶೆಳೆಯುತಿಹರೈ ಕೃತಿರಮಣನ ಪ್ರೀಯನಿನ್ನ ಕೃತ್ಯಗಳಿಗೆ ನಮೋ ನಮೋ ಎಂಬೆನಲ್ಲದೆ 1 ಪಾದ ಕುಸುಮ ಶರವೈರಿ ಪದ ಪಿತನೆ 2 ಜ್ಞಾನವಿಲ್ಲದೆ ಮಧ್ಯಜ್ಞಾನ ಶರಧಿಯೊಳು ಮುಳುಗಿ ದೂರಾದೆನೋ ರಾಯಾನಿನ್ನ ವಿಷಯ ವಿರಕ್ತಿ ಅನ್ಯ ವಿಷಯ ಸುಭಕ್ತಿಯಿಂದ ನಿಜಭಕ್ತಿಗಾಣೆನೋಭಕುತಿರಮಣನೇ ನಿನ್ನ ಯುಕುತಿಗಳಿಗಭಿವಂದಿಪೆ ತಂದೆವರದಗೋಪಾಲವಿಠಲನ ತೋರಿಸೋ ಜೀಯಾ 3
--------------
ತಂದೆವರದಗೋಪಾಲವಿಠಲರು
ಭ್ರಷ್ಟನೆಂದಿಸಿದೆಯಾ ಕೃಷ್ಣನೇ ಎನ್ನ ಪ ಭ್ರಷ್ಟನೆಂದಿನಿಸಿದ್ಯಾ ಸೃಷ್ಟಿಗೀಶನೆ ಪರ ಮೇಷ್ಟಿ ಜನಕ ದಿವ್ಯ ದೃಷ್ಟಿ ಕೊಡದಲೆನ್ನ ಅ.ಪ ನರರ ಸಂದಣಿಯಲಿ ವಿರತಿ ಮಾತಾಡಿಸಿ ಮಾರನಾಟದಿ ಮನವೆರಗುವಂದದಿ ಮಾಡಿ 1 ಕಾಷಾಯ ದಂಡಿ ವೇಷವ ಧರಿಸಿ ಮುನ್ನ ಮೋಸಪಡಿಸಿ ಸ್ತ್ರೀಯರಾಸೆ ಬಿಡಿಸಿದೆನ್ನ 2 ಸೀಲರಂದಲಿ ಜಪಮಾಲೆ ಕೈಯಲಿ ಪಿಡಿಸಿ ಕಾಳಿಮರ್ಧನ ದೇವ ಮಲಿನ ಮನವನಿತ್ತು 3 ಕರವಶವನೆ ಮಾಡಿ ಸರಸದಿಂದ ಕಲೆಹಾಕಿ ಮರೆಸಿ ನಿನ್ನನೆ ಕೃಷ್ಣ ನಿರಯಭಾಗಿಯ ಮಾಡಿ4 ಕರುಣವಾರಿಧಿ ಎನ್ನ ಮರುಳುಗೊಳಿಸಿ ವಿಷಯ ಶರಪಂಜರದಿ ಬಿಗಿದು ಚರಣ ತೋರಿಸದೆಲೆ 5 ಮದ ಮತ್ಸರ ಕಾಮ ಕ್ರೋಧ ಲೋಭ ಮೋಹ ಮಾಧವ 6 ಪತಿತಾಗ್ರಣಿಯು ನಾನು ಪತಿತ ಪಾವನ ನೀನು ಸತತ ನಿನ್ನಯ ಸಂಸ್ಮøತಿಯ ನೀಡದಲೆನ್ನ 7 ದ್ವಿಜ ಅಜಮಿಳ ನಿಜನಾಮದಿಂದಲಿ ಸುಜನನೆಂದೆನಿಸಿದ್ದು ನಿಜತೋರದಲೆನ್ನ 8 ಹೀನರೊಳೆನ್ನೆಂಥ ಹೀನ ಜನರ ಕಾಣೆ ಸಾನುರಾಗದಿ ಕಾಯೊ ಶ್ರೀ ನರಹರಿಯೆ 9
--------------
ಪ್ರದ್ಯುಮ್ನತೀರ್ಥರು
ಮಗಟಖಾನ ಹುಬ್ಬಳ್ಳಿ ಶ್ರೀಯಾದವಾರ್ಯರ ಕರಾರ್ಚಿತ ಶ್ರೀನರಸಿಂಹ ಸ್ತೋತ್ರ ಕರುಣವೆಂತುಂಟೋ ನಿನಗೆ | ಶ್ರೀನಾರಸಿಂಹಾ ಪ ವರತಟನಿ ಮಲಪ್ರಭೆಯ | ತೀರಸ್ಥನೆನಿಸೀ ಅ.ಪ. ಪೂರ್ವದಲಿ ಋಷಿ ಚ್ಯವನ | ರಿಂದರ್ಚಿತವು ಎನೆಓರ್ವ ಶಿಲೆಯಲಿ ನಿಂದು ಯಾದವಾರ್ಯಾ |ಪಾರ್ವ ಯೋಗೀಶ ರಚಿ | ತಾಕಾರ ಗಂಧದಲಿಆಹ್ವಾನಿತನು ಆಗಿ ನೀನಿಲ್ಲಿ ಇರುವೇ 1 ಆದಿ ವ್ಯಾಧಿಲಿನೊಂದ | ಬುಧರಿಂದ ಬಹುಸೇವ್ಯಯಾದವಾರ್ಯಾಂತಸ್ಥ | ಶ್ರೀ ನಾರಸಿಂಹಾ |ಬಧಿರ ಮೂಕರು ತಮ್ಮ | ವ್ಯಾಕುಲವ ಕಳೆಯುತ್ತಮುದವಾಂತು ತವ ಮಹಿತಿ ಕೀರ್ತಿಸುತ್ತಿಹರೋ 2 ಮಾಸ ನಿಶಿ ಜೇಷ್ಠದಲಿಮತ್ತೆ ಹರಿದಿನದಲ್ಲಿ | ಮಂದವಾರದಲೀ |ಮತ್ಸರಾದ್ವಿರಹಿತರು | ಸತ್ಸುಜನರಿಂದ ಕೂಡಿಉತ್ಸಹದ ಜಾಗರವ | ನೀ ಮಾಡಿ ಮಾಡಿಸಿದ್ಯೊ 3 ಬೆಟ್ಟದಾಚಾರ್ಯರೆನೆ | ಸುಷ್ಠು ಕೀರ್ತನೆಗೊಂಡಶ್ರೇಷ್ಠ ಹುಚ್ಚಾಚಾರ್ಯ | ರಿಲ್ಲಿ ನೆಲೆಸುತಲೀಇಷ್ಟ ಸಿದ್ಧಿಗಾಗಿ ಶ್ರೇಷ್ಟ | ತಪವನೆ ಗೈದುಇಷ್ಟಾರ್ಥ ಪೊಂದಿತಾ | ಬೆಟ್ಟಕ್ಕೆ ತೆರಳಿದರೋ 4 ಮೋದ ಪಡಿಸುತ ಬುಧರಯಾದವೇಶನ ನೊಲುಮೆ | ಸಂಧಿಸುತ ಮೆರೆದೂ |ಆದರಿಸಿ ಮಂಗಳ ಸು | ಭೋದಗಳ ಬೀರುತಲಿಮೋದ ಬಡಿಸಿದ ಹರಿಯ | ಭೂದೇವ ಆರ್ಯ 5 ಪ್ರೇರ್ಯ ಪ್ರೇರಕರಾಗಿ | ಬೆಳಗಾವ್ಕರು ಎಂಬಪಾರ್ವನಲಿ ನೀ ನಿಂತು | ಅಚ್ಚರಿಯನೆಸಗೀಭಾರ್ಯೆ ತವ ಕೊಲ್ಲಾಪುರ | ಮ್ಮ ಸತ್ಯವ್ರತರಆರ್ಯಗೊಡ ದರ್ಶಿಸುವ | ಯೋಗ ನೀನಿತ್ತೇ 6 ಸೃಷ್ಠ್ಯಾದಿ ಅಷ್ಟಕವ | ದೃಷ್ಟಿ ಮಾತ್ರದಿಗೈವಇಷ್ಟ ಭಕುತಿಗೆ ಮೆಚ್ಚಿ | ಘಟ್ಟಿ ಕಂಬದಿ ಜಿಗಿದೂದುಷ್ಟನ್ನ ಸಂಹರಿಸಿ | ಕಷ್ಟಗಳ ಕಳೆದಂಥಕೃಷ್ಣ ಗುರು ಗೋವಿಂದ ವಿಠಲಾ ಗಾನಮಿಪೇ 7
--------------
ಗುರುಗೋವಿಂದವಿಠಲರು
ಮಗನೆಂದಾಡಿಸುವಳು ಮೊಗ ನೋಡಿ ನಗುವಳು ಪ ಜಗದುದ್ಧಾರನ ಮೊಗ ಮೊಗದೊಳಿರಿಸಿಕೊಂಡು ಅ ಕಾಲಲಂದುಗೆ ಗೆಜ್ಜೆ ತೋಳ ಮಣಿಯ ದಂಡೆಫಾಲದ ಅರಳೆಲೆಯು ಕುಣಿಯೆನೀಲದುಡುಗೆಯುಟ್ಟ ಬಾಲನೆ ಬಾರೆಂದುಪಾಲುಣಿಸುವ ಪುಣ್ಯವೆಂತು ಪಡೆದಳಯ್ಯ 1 ಬಣ್ಣ ಸರವಲ್ಲಾಡೆ ವರ ರನ್ನ ನೇವಳದಹೊನ್ನ ಗಂಟೆಯು ಘಣ ಘಣರೆನಲುಪನ್ನಗಶಯನನೆ ಕುಣಿಯೊಮ್ಮೆ ಕುಣಿಯೆಂದುಕುಣಿಸಿ ನಗುವ ಪುಣ್ಯವೆಂತು ಪಡೆದಳಯ್ಯ 2 ಪೊಡವಿಯ ಈರಡಿ ಮಾಡಿದ ದೇವನಕುಡಿಬೆರಳನೆ ಕರದಲಿ ಪಿಡಿದುಅಡಿಯಿಡು ಮಗನೆ ಮೆಲ್ಲಡಿಯಿಡು ಎನುತಲಿನಡೆಗಲಿಸುವ ಪುಣ್ಯವೆಂತು ಪಡೆದಳಯ್ಯ 3 ಕುಕ್ಷಿಯೊಳು ಈರೇಳು ಜಗವನ್ನು ಸಲಹುವನರಕ್ಷಿಪರು ಉಂಟೆ ತ್ರೈಜಗದೊಳಗೆಪಕ್ಷಿವಾಹನ ನೀನು ಅಂಜಬೇಡ ಎನುತಲಿರಕ್ಷೆ ಇಡುವ ಪುಣ್ಯವನೆಂತು ಪಡೆದಳಯ್ಯ 4 ಶಂಖ ಚಕ್ರ ಗದಾ ಪದುಮಧಾರಕನಪಂಕಜ ಮಿತ್ರ ಶತಕೋಟಿ ತೇಜನಸಂಖ್ಯೆಯಿಲ್ಲದಾಭರಣಗಳ ತೊಡಿಸಿಯಲಂಕರಿಸುವ ಪುಣ್ಯವೆಂತು ಪಡೆದಳಯ್ಯ 5 ಸಾಗರಶಯನನ ಭೋಗೀಶನ ಮೇಲೆಯೋಗ ನಿದ್ರೆಯೊಳಿಪ್ಪ ದೇವನನುಆಗಮ ನಿಗಮಗಳರಸಿ ಕಾಣದ ವಸ್ತುವನುತೂಗಿ ಪಾಡುವ ಪುಣ್ಯವೆಂತು ಪಡೆದಳಯ್ಯ 6 ವಾಹನ ದೇವರ ದೇವನಹಚೆನ್ನಾದಿಕೇಶವನನೆಂತು ಪಡೆದಳಯ್ಯ7
--------------
ಕನಕದಾಸ
ಮಗನೇ ಅವನೀಗ ತಾನೇಕೆ ಸುಡಲಿ ಮಾತೃವ ಬಳಲಿಪಮಗನೇ ಅವನೀಗ ತಾನೇಕೆ ಸುಡಲಿಮಗನಿಗೆಂತೆಂದು ಹೇಳಿಯೆ ಕೊಂಬ ಮ-ಲಗುವಳ ಮರಳೆಗೆ ನಾನೇನೆಂಬೆ ಪ ಮಡದಿಯ ಎತ್ತರಕೇರಿಸಿಹ ಹಡದ ತಾಯಿಗೆಝಡಿವ ಗಂಟುಗಳನೇ ಹೊರಿಸಿಹ ಹುಡುಗರ ಕೊಟ್ಟಿಹತುಡುಗ ರಂಡೆಮಗಳೋಡೋಡಿ ಬಾಯೆಂದುಬಿಡು ಮಾತುಗಳಿಂದ ಬೈಯುತಲಿ 1 ಒಳ್ಳೆಯದನು ತಾನುಣುತಲಂದು ನುಚ್ಚನು ನುರಿಯನುಕಲ್ಲಗಡಿಗೆಯೊಳು ಕುದಿಸಿಕೋ ಎಂದು ಕೆಕ್ಕರಿಸು-ತಲಂದು ಹಲ್ಲ ಕಿಸುವಳಿಗೆ ಜರಿಯ ಸೀರೆಯನುಡಿಸಿಝಲಕ ಬಟ್ಟೆಯ ಹಚ್ಚಿಕೋ ಎಂಬ 2 ಪಾತಕಿ ನಿನಗೆಂತೊಲಿವನು 3
--------------
ಚಿದಾನಂದ ಅವಧೂತರು