ಒಟ್ಟು 15641 ಕಡೆಗಳಲ್ಲಿ , 133 ದಾಸರು , 7446 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನನ್ನೆ ನಂಬಿದೆನೊ ಪನ್ನಂಗಶಾಯಿ ಎನ್ನ ನೀ ಕಾಯಬೇಕೊ ಪ ದೀನದಯಾಳು ದೇವ ನೀನೆ ಕಾಯದೆ ಬಿಟ್ಟ ರಿನ್ನಾರು ಕಾಯ್ವರು ಎನ್ನನೀ ಜಗದೊಳುಅ.ಪ ಉನ್ನತ ಹೃದಯನೆ ಮುನ್ನ ನಾ ಮಾಡಿದ ಗನ್ನಗತಕತನವನ್ನು ದಯದಿ ಕ್ಷಮಿಸು ಇನ್ನೀಭವದಿ ಎನಗೆ ನಿನ್ನಯ ಸನ್ನುತಿ ಯನ್ನು ಪಾಲಿಸಿ ಸತತ ಬನ್ನಬಡಿಸದೆ ಕಾಯೊ 1 ಶರಣಾಗತರಕ್ಷಣಾನಾಥಜನಬಂಧುವೇ ಕರುಣದಿ ನಿಮ್ಮಂಥ ದೇವರನುಕಾಣೆ ದುರಿತದೂರನೆ ಎನ್ನ ದುರಿತದುರ್ಗಣವನ್ನು ಪರಿಹರಿಸಿ ಸಲಹಯ್ಯ ಶರಣುಜನರ ಪ್ರೀಯ 2 ಕೈಯ ಪಿಡಿದು ಪೊರೆಯೊ ಬಿಡದೆನಮ್ಮಯ್ಯ ಜಗ ದಯ್ಯ ಶ್ರೀರಾಮ ವಿಜಯವಿಠಲರಾಯ ಕೈಯ ಮುಗಿದು ಮರೆಹೊಕ್ಕು ಬೇಡುವೆಯ್ಯ ಜೀಯ ದಯದಿ ಕಾಯೊ ಪಂಢರಿರಾಯ 3
--------------
ರಾಮದಾಸರು
ನಿನ್ನಪಾದ ದೊರಕುವುದು ಎಂತೆನಗೆ ರಂಗ ಗನ್ನಗತಕ ನಾನು ಪುಣ್ಯದ್ಹಾದ್ಯರಿಯೆ ಪ ಕಳ್ಳನಾಗಿ ಜೀವಿಸಿದೆ ಸುಳ್ಳನಾಡಿ ನಾ ದಣಿದೆ ತಳ್ಳಿಕೋರತನದನ್ಯರ್ಹಾಳು ಮಾಡಿದೆನೊ ಖುಲ್ಲತನದಿಂ ಪರರ ನಲ್ಲೆಯರೋಳ್ಮನಸಿಟ್ಟು ಕ್ಷುಲ್ಲಕನಾದೆ ನಾನೆಲ್ಲಿ ನೋಡಲವ 1 ಅನ್ನಕೊಟ್ಟವರಿಗೆ ಅನ್ಯಾಯಯೋಚಿಸಿದೆ ಬನ್ನ ಬಡಿಸಿದೆನಯ್ಯ ನನ್ನನಂಬಿದವರ ಎನ್ನ ಪಡೆದವರನ್ನು ಮನ್ನಿಸಿನೋಡಿಲ್ಲ ನಿನ್ನ ಧ್ಯಾನದ ಖೂನವನ್ನರಿಯೆ ದೇವ 2 ಗುರುಹಿರಿಯರನು ಜರಿದೆ ಪರಿಪರಿಯಲಿ ನಾನು ಪರರಿಗೊಂದಿಕ್ಕಿ ನಾನುಂಡಿರುವೆನೊಂದು ಧರೆಯೊಳೆಣೆಯಿಲ್ಲದ ದುರಿತವನು ಗಳಿಸಿರುವೆ ಕರುಣಾಳು ಶ್ರೀರಾಮ ನೀನೆ ಪೊರಿಬೇಕೊ 3
--------------
ರಾಮದಾಸರು
ನಿನ್ನಬಿಟ್ಟನ್ಯಬಲ ಮುನ್ನಿಲ್ಲಸ್ವಾಮಿ ಎನ್ನಯ್ಯ ವಿಶ್ವೇಶ ಪನ್ನಂಗಶಾಯಿ ಪ ಇನಚಂದ್ರ ಮಂಗಳಬುಧಗುರು ಭಾರ್ಗವ ಶನಿರಾಹುಕೇತು ನವಮಹರ್ದಶನು ನೀನೆ ಘನನಿಮ್ಮ ಮಹಿಮೆಯಿಂ ವಿಧವಿಧದಿ ಸೃಷ್ಟಿಗೈ ದೊನರುಹ ಭುವನಂಗಳಾಳುವವ ನೀನೆ 1 ನಕ್ಷತ್ರಯೋಗಾದಿಕರಣಂಗಳು ನೀನೆ ಪಕ್ಷಮಾಸ ಸರ್ವಕಾಲ ವಾರ ತಿಥಿ ನೀನೆ ಸುಕ್ಷೇತ್ರಯಾತ್ರ ಮಹಪುಣ್ಯತೀರ್ಥವು ನೀನೆ ಸಾಕ್ಷಾತ ನಿಖಿಲ ಶುಭಮುಹೂರ್ತಗಳು ನೀನೆ 2 ಪರಮವೇದ ಪುಣ್ಯಪುರಾಣಕಥೆ ನೀನೆ ವರ ನಿಖಿಲ ಶಾಸ್ತ್ರರ್ಥ ಮೂಲವಿಧಿ ನೀನೆ ಚರಣದಾಸರ ಪ್ರಾಣಪದಕ ಶ್ರೀರಾಮಯ್ಯ ಸ್ಥಿರಮೋಕ್ಷ ಪಾಲಿಪ ಶ್ರೀಗುರುವು ನೀನೆ 3
--------------
ರಾಮದಾಸರು
ನಿನ್ನಯ ನಾಮಾಪನ್ನರಿಗೆಲ್ಲಾ ಪ್ರೇಮ ಪ ಪನ್ನಗ ಶಯನ ಪಾವನ ಚರಿತಅ.ಪ ಮಾಧವ ಭವ ಪಾಶ ವಿಮೋಚನ 1 ಕರಿಧೃವ ಬಲಿರುಕ್ಮಾಂಗದ ಪ್ರಹ್ಲಾದ ದ್ರೌಪದಿ ವರಚಂದ್ರಹಾಸಾದಿ ಭಕ್ತರÀನೆಲ್ಲ ಪಾಲಿಸಿತು 2 ಪರಮಾತ್ಮ ಹರಿಕೃಷ್ಣ ಧರಣಿಧರ ಮುಕುಂದ ವರೇಣ್ಯ ಶ್ರೀಗುರುರಾಮವಿಠಲ 3
--------------
ಗುರುರಾಮವಿಠಲ
ನಿನ್ನವ ನಾನೆಂದು ಸಿರಿನಲ್ಲಾ ರಕ್ಷಿಸೋ | ಎನ್ನವಗುಣಗಳ ಎಣಿಸದೆ ದಯದಿಂದ ಪ ನಿನ್ನ ಮೂರುತಿಯ ಬೆಳಗವದೋರಿಸಿ | ನಿನ್ನ ಪಾದಾಂಬುಜ ಪರಿಮಳ ಸುಳಿಸಿ | ನಿನ್ನ ನಾಮಾಮೃತ ಸವಿಸವಿ ಉಣಿಸಿ1 ನಿನ್ನ ಪೂಜಿಸಿಕೊಂಡು ಕರಗಳಿಂದ | ಚೆನ್ನಾಗಿ ಪ್ರದಕ್ಷಿಣೆಯಾ ಪಾದಗಳಿಂದ | ಕಾಯ ನಮನದಿಂದ - ಎನ್ನ ಮನವಿಟ್ಟು ನಿನ್ನ ನೆನುವಿನಿಂದಾ2 ಅನುದಿನ ಕೊಟ್ಟು ನಿನ್ನ ದಾಸರ ಸಂಗ | ಕೊನೆದೇಳದಿರಲೆನ್ನಾ ವಿಶ್ರಾಮದಂಗ | ನೀನಾಗಿರು ತುಂಬಿಯೆನ್ನಾ ಬಾಹ್ಯಾಂತರಂಗ | ಘನಗುರು ಮಹಿಪತಿ ಪ್ರಭುಶ್ರೀರಂಗ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನ್ನವನಲ್ಲವೇನೋ ಶ್ರೀಹರಿಯೆ ನೀನೆನ್ನೊಳಗಿಲ್ಲವೇನೊ ಪ ನಿನ್ನವನಲ್ಲವೆ ನೀ ನೆನ್ನೊಳಗಿಲ್ಲವೆನಿನ್ನ ಭಕುತುನೆಂದು ಮನ್ನಿಸಲೊಲ್ಲೇನೊ ಅ.ಪ. ಹೃದಯದೊಳೆಂಟುದಳ ಪದುಮವುಮುದದಿ ನೀನಿರುವ ಸ್ಥಳಹದನವನರಿತು ನಾ ಸದಾವಕಾಲದಿಸದಮಲ ಭಕುತಿಯನ್ನೊದವಿಸಿ ಸೇವಿಸೆ 1 ಎಂಭತ್ತುನಾಲ್ಕು ಲಕ್ಷ ಜೀವನರಾಶೀ-ಗಿಂಬಿತ್ತು ಕಾಯ್ವದ ಗೊಂಬೆಯ ಮಾಡುವಬಿಂಬ ಮೂರುತಿ ನಿನ್ನ ನಂಬಿದ ನನ್ನನ್ನುತುಂಬ ಮರೆತೆಯೇನೋ 2 ಗದುಗಿನನೊಳ್ಮೆರೆವ ವೀರನಾರಾಯಣಪದವ ನಂಬಿರುವೆ ಪೂರಾವಿಧವಿಧ ಪರಿಕಿಸು ಬದುಕಿಸು ಮುಳುಗಿಸುಬೆದರಿಸು ಕರುಣಿಸು ಕದಲಲೊಲ್ಲೆನು ದೇವಾ 3
--------------
ವೀರನಾರಾಯಣ
ನಿನ್ನವನೆನಿಸಿದಾ ಮಾನವನಿಂಗೆ ಇನ್ನು ಭವಭಯ ಉಂಟೇ ಭಕುತ ವತ್ಸಲ ಕೃಷ್ಣಾ ಪ ಶ್ರವಣ ದರಹು ಇಲ್ಲಾ ನವವಿಧ ಭಜನಿಲ್ಲಾ ಕವಿತದನುಡಿಯ ಚಾತುಯ್ರ್ಯವಿಲ್ಲಾ ತವಚರಣವನಂಬಿ ಅವನಿಯೋಳಗನಿಶಿ ದಿವಸದಿ ಅಚ್ಯುತಾನಂತ ಗೋವಿಂದ ಯನುತಲಿ 1 ಘನ್ನ ವಿರಕ್ತಿಯಿಲ್ಲಾ ಮನ್ನಣೆಯ ತಪವಿಲ್ಲಾ ಉನ್ನತ ದ ವ್ಯತಶೀಲ ಕರ್ಮವಿಲ್ಲಾ ಅನ್ಯದೈವ ಕೆರಗದೆ ನಿನ್ನ ನಾಮ ನಿನ್ನ ಮುದ್ರೆ ನಿನ್ನವರಪರಿಚಾರ ತನದಲ್ಲಿ ರಮಿಸುತಾ 2 ಮರೆದೊಮ್ಮೆನೆನೆದರೆ ಸರಿವದಘರಾಶಿ ಅರಿದೊಮ್ಮೆನೆನೆಯಲು ಗತಿಸಂಪದಾ ದೊರೆವುದೆನುತಶೃತಿ ನಿರುತ ಸಾರುತಲಿದೆ ಗುರುಮಹಿಪತಿ ಪ್ರಭು ಎನ್ನನುದ್ದರಿಸುದೈಯ್ಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನ್ನವರ ಧರ್ಮ ವಿಹಿತವಾಗುವುದು ಮ ತ್ತನ್ಯರಾಚರಿಸಿದ ಧರ್ಮ ಅಧರ್ಮ ಪ ಕಡಲ ಮಥನದಲಿ ಕಪರ್ದಿ ಕಾಳಕೂಟ ಕುಡಿಯಲು ಕಂಠಭೂಷಣವಾಯಿತು ಒಡನೆ ರಾಹು ಕೇತು ಸುಧೆಯ ಪಾನದಿಂದ ಮಡಿದರೆಂದು ಮೂರ್ಲೋಕವೇ ಅರಿಯೆ 1 ಬಲಿನಿನ್ನ ಮುಕುಟ ಕದ್ದೊಯ್ಯ ಪಾತಾಳಕೆ ಸಲೆ ಭಕ್ತನೆಂದು ಬಾಗಿಲ ಕಾಯ್ದೆ ಇಳೆಯೊಳು ಸುರರಿಗೆ ಗೋ ಭೂ ಹಿರಣ್ಯವಿತ್ತಾ ಖಳ ಜರಾಸಂಧನ ಕೊಲಿಸಿದೆ ಹೋಗಿ 2 ಪತಿವ್ರತ ಧರ್ಮದಿ ಮೃತರಾದ ತ್ರಿಪುರರ ಸತಿಯರು ಶಿವನಿಂದ ಹತರಾದರು ಸತಿ ಉಡುಪ ಪತಿಯಿಂದಲಿ ನಿತ್ಯ ಸೇವೆಯೊಳಿರುವಳು 3 ಮೇದಿನಿಯೊಳು ಪ್ರಾಣಿ ಹಿಂಸಕನೆನಿಸಿದಾ ವ್ಯಾಧನ ಯಮಿಕುಲೇಶನ ಮಾಡಿದೆ ವೇದೋಕ್ತ ಕರ್ಮವಾಚರಿಸಿದ ಜಿನನೊಳ್ ಪ್ರಾದುರ್ಭೂತನಾಗಿ ಕೆಡಹಿದೆ ತಮಕೆ 4 ಪರಾಶರನು ಸತ್ಯವತಿಯ ಸಂಬಂಧಿಸೆ ಶ್ರೀರಮಣ ನೀನವತರಿಸಿದಲ್ಲಿ ಭವ ಸರೋಜ ಕನ್ನಿಕೆಯಸಾರಲು ಬಿಡುವ ಜಗನ್ನಾಥ ವಿಠಲ 5
--------------
ಜಗನ್ನಾಥದಾಸರು
ನಿನ್ನವರ ಸಂಗ ಎಂತಹದಯ್ಯಾ ಅನಂತ ಜನ್ಮದ ಪಾಪ ಪುಂಜರ ನಾನು ಪ ಬಾರೆ ಸುಜನರ ಮನಕೆ ತಾರೆ ಗಂಗೋದಕವ ಸೇರೆ ನಿನ್ನಡಿಗಳಲಿ ಸಾರೆ ಉತ್ತಮರ ಕೀರ್ತಿ ಬೀರೆ ನಿನ್ನಯ ಮಹಿಮೆ ಕೋರೆ ನಿರ್ಮಳ ದಾರಿಯಾ ನೀರೆಯರ ಶಶಿಬಿಂಬ ಮೋರೆ ಬಣ್ಣಕೆ ಮೆಚ್ಚಿ ಕಾರ್ಯ ಕಾರಣ ಜರಿದು ಭಾರಿ ತಿರುಗವನಿಗೆ1 ಏಕಾದಶಿ ದಿನ ಬೇಕೆಂದು ಮನವಿಟ್ಟು ಪಾಕನ್ನ ಮಾಡಿಸುವನೊ ನೇಕಪರಿ ಮಾಡಿಸುವನೊ ಪೋಕತನದಲ್ಲಿ ವಿವೇಕ ರÀಹಿತನಾಗಿ ಗೋಕುಲವ ಹಳಿದು ಕೋ ವಾರೆವಿದ್ದವನಿಗೆ2 ಪರರ ವಡವೆಯ ನೋಡಿ ಧರಿಸಲಾರದೆ ಮನ ಮರಗಿ ನಿಷ್ಠುರನಾಡಿ ಇರಳು ಹಗಲೂತ್ತ- ಮರ ಬೈದು ಪಾಪಕ್ಕೆ ಗುರಿಯಾಗಿ ನಸುನಗುತ ಪಿರಿದು ದುರ್ವಿಷಯದೊಳು ಹೊರಳಿ ಹಕ್ಕಲನಾಗಿ ಮರಳಿ ಜನಗಳಲ್ಲಿ ಜನಮವಾಗುವನಿಗೆ 3 ಅತಿಥಿ ಅಭ್ಯಾಗತರ ಕಂಡು ಸ್ಮರಿಸದೆ ಮತಿಹೀನವಾಗಿ ಭ- ಕುತಿ ಲೇಸ ತಾ ತಾ ಕೊಂಬೆನಯ್ಯಾ ಆರನಾರನಾದರು ಕರಿಯೆ ಚತುರೋಕ್ತಿಯಲಿ ನೆನೆಸಿ ಪ್ರತಿ ಯಾರು ನಿನಗೆಂದು ಗರ್ವದಲ್ಲಿದ್ದವನಿಗೆ 4 ಆದಿಯಲಿ ಬಂದದ್ದು ಅಂತ್ಯದಲಿ ಪೋಗುವ ಹಾದಿಯನು ತಿಳಿತಿಳಿದು ಕ್ರೋಧವನು ಬಿಡದೆ ಕಾದುವೆನು ಹಲ್ಲು ಕಡಿದು ಸಾಧುಗಳ ನೋಡದಲೆ ವೇದಾರ್ಥಗಳ ಓದಿ ಶೋಧಿಸಿ ಕೇಳಿ ವಾದವನು ಮಾಡಿ ಸಂಪಾದಿಸುವ ದುರ್ಧರನಿಗೆ5 ದುರ್ಧನಕೆ ಕೈಕೊಡುವೆ | ಮೊದಲೆ ಕನಸಿನೊಳಗಾದರೂ ಗುಣಿಸುವೆ ಪರರ ಹಿಂಸೆಯನು ಬಿಡೆ ಕ್ಷಣವಾದರು ತನುವಿನ ಕ್ಲೇಶದಲಿ ದಿನವ ಹಾಕಿದೆ ವ್ಯರ್ಥ ದಣಿದಣಿದು ಈ ಪರಿಯನು ಮಾಡಿದವನಿಗೆ 6 ಹುಟ್ಟಿದಾರಭ್ಯವಾಗಿ ಶಿಷ್ಟಾಚಾರವ ತೊರೆದು ಕೆಟ್ಟ ಬಾಳಿದೆ ಧರಣೀಲೀ ಸುಟ್ಟ ಸಂಸಾರದೊಳು ಸಟಿಯಾಡಿ ಗುಟ್ಟಗುಂದಿದೆ ವಿಜಯವಿಠ್ಠಲ ನಿನ್ನ ನೆರೆ ಮರೆದು ಕೆಟ್ಟು ನರಕಕ್ಕೆ ಮನಮುಟ್ಟಿ ಬೀಳುವವನಿಗೆ 7
--------------
ವಿಜಯದಾಸ
ನಿನ್ನಾಧೀನ ----------- ವೆಂಕಟಾದ್ರಿವಾಸ ವೆಂಕಟ ಪರಹರಿಸೊ ನೀ ಎನ್ನ ಸಂಕಟ ಪ ಚಿನ್ಮಯ-----ನಾದ-----ಶ್ರೀನಿವಾಸ ಪರಮಪುರಷ ಮುನ್ನ ನಾ ಮಾಡಿದ ದೋಷದಿಂದ ಅಮಲನಾಗಿ ವ್ಯರ್ಥ ಬಳಲುತಿಹೆನಾ ------ ಘನವೆ ನಿನಗೆ ಇರುವುದಿನ್ನು ಅನಿಮಿಷವು ನಿಮ್ಮ ಧ್ಯಾನದಲ್ಲಿ ಮಗ್ನರಾದ ಅವರಾ 1 ಶರಣರಾದ ಅವರಾ ಪೊರೆವ ಬಿರುದು ನಿನ್ನದಾಗಿ ಇರಲು ಪರಮ ಪತಿತ ಪಾವನನೆ ಭಕ್ತ ಜನರ ಬಿಡದೆ ಕಾಯ್ವ ಧೊರಿಯು ನೀನೇ ಎಂದು ನಿನ್ನ ಚರಣಕಮಲ ನೆಚ್ಚಿದವನಾ ಪರಿವೆ ಮಾಡದೆ ಇರುವುದಿನ್ನು ಭರದಿ ಮೋಚನ ಪಾಪನಾಶನ 2 --------ದೊಳಧಿಕನಾದವನ ವರಹೊನ್ನ ನಿ--------- ನಿಗಮಗೋಚರ 'ಹೊನ್ನವಿಠ್ಠಲಾ’ ನಿತ್ಯ ಸತ್ಯ ಜಗವಿಲಾಸ --------ಯಿಂದ ನಿನ್ನ ಪಾಡುವಂಥ ಭಜಕರನ್ನ------------- ರಕ್ಷಿಸುವ ಅಭಯ ನಿನ್ನದಾಗಿ ಇರಲೂ 3
--------------
ಹೆನ್ನೆರಂಗದಾಸರು
ನಿನ್ನಿಂದ ನಿನ್ನ ದಾಸರೆ ಮಿಗಿಲೋ ಕೃಷ್ಣ ಪ ನಿನ್ನಿಂದ ನಿನ್ನ ದಾಸರೆ ಮಿಗಿಲಾಗಿಮನ್ನಿಸುವುದು ನಿನಗೇಸು ಪ್ರಿಯವೊರಂಗ ಅ.ಪ ತನ್ನ ¸ತ್ಯಕಾಗಿ ಸತ್ಯಕಾಮನೆಂಬ ನಿನ್ನ ಪ್ರತಿಜ್ಞೆಯ ಬಿಡಿಸನೆ ಭೀಷ್ಮನು 1 ಮೂರ್ಲೋಕಪತಿಯೆಂಬ ನಿನ್ನ ಧರ್ಮರಾಯಕಾಲು ತೊಳೆವ ಕೀಳು ಊಳಿಗಕ್ಕಿಕ್ಕನೆ2 ದೇವರಥಾಯೂಥಪತಿಯೆಂಬ ನಿನ್ನನುಬೋವನ ಮಾಡನೆ ಪಾರ್ಥನು ಬಂಡಿಯ3 ಬೊಮ್ಮಾದಿಗಳಗಮ್ಯಾಚೋರ ಪರ-ಬ್ರಹ್ಮ ನಿನ್ನನು ಬಲಿ ಬಾಗಿಲ ಕಾಯ್ಸನೆ 4 ಶ್ರೀಪತಿ ಭೂಪತಿ ಈ ಪೆಸರಿರಲುಗೋಪಾಂಗನೇಯರ ನೀ ಕೂಡಿದೆಯೊ ಕೃಷ್ಣ 5
--------------
ವ್ಯಾಸರಾಯರು
ನಿನ್ನೊಳಗಿರಿಸೆನ್ನ ಚಿತ್ತ ಚೆಲ್ವ ಪನ್ನಗಶಯನ ಶ್ರೀ ಆದಿರಂಗಯ್ಯ ಪ ಪರನನ್ನೊಳಗೆ ನಾ ಕಂಡು ನಿನ್ನೊಳಗೆ ನಾನೈಕ್ಯ ಇನ್ನೆಂದಿಗಾಗುವುದೊ ಇನಕುಲದ ಮಣಿಯೆ 1 ಎಂಟಾರರೊಳಗೆನ್ನ ಅಂಟಲೆಸಗೊಡಬೇಡ ಭಂಟನಾಗಿರು ವೈಕುಂಠನಾಯಕನೆ 2 ಕಾಕುಲದ ಕತ್ತಲೆಗೆ ನೂಕದಿರು ನೀಯೆನ್ನ ಏಕನಾಯಕನೆ ಕೇಳಿದು ಸತ್ಯಸಿದ್ಧಂ 3 ದೇಶಿಕಾಯೇನಮಃ ದಾಸನಗಿರುತಿರುವೆ ದೋಷರಹಿತಾಗುರುವು ಶ್ರೀತುಲಶಿರಾಮಾ 4
--------------
ಚನ್ನಪಟ್ಟಣದ ಅಹೋಬಲದಾಸರು
ನಿನ್ನೊಳಗೆ ನೀ ತಿಳಿದುನೋಡು ನಿರ್ಮಲನಾಗಿ ಪ ನಿನ್ನೊಳಗೆ ನೀ ತಿಳಿದುನೋಡು ಚೆನ್ನಾಗಿ ಗುರುಭಕ್ತಿಯ ಮಾಡು ಭಿನ್ನಪದಾರ್ಥಗಳನ್ನು ಬಯಸದೆ ಅನನ್ಯಭಾವದಿ ನಿಜವನ್ನು ನಿತ್ಯಾತ್ಮನ ನರದೇಹದಿಂದಧಿಕವಿಲ್ಲಾ ಸ್ಥಿರವಾಗಿ ನಿಂದಿರುವುದಲ್ಲಾ ಬರಿದೆ ಕೆಡಿಸುವುದು ಸಲ್ಲಾ ಗುರುತಿಗೆ ಬೆರೆಸಲು ಬಲ್ಲಾ ಗುರುನಾಥನಿಂದುಪದೇಶವಾ ಕೈಕೊಂಡು ಇ ತರ ಪರಿಕರಂಗಳ ಆಶಾಪಾಶವಾ ವರ್ಜಿಸಿ ನಿನ್ನ ದುರಿತ ದುಃಖ ವಿನಾಶವಾಮಾಡಲು ಭವ ಶರಧಿಯ ದಾಟುವಾ ಆಯಾಸವಾ ನಿಲ್ಲುವದಿನ್ನು ಕುರಿತುಮನದಲಿ ತಿಳಿದುನೋಡು ಕಾಂಡುವ ಆರು ಅರಿಗಳ ವಿಚ್ಛೇಧನ ಮಾಡು ಅವಿದ್ಯೆಯನ್ನು ಶರಗು ಹಿಡಿದು ಹೊರಗೆ ದೂಡು ಹಮ್ಮಿನಹಲ್ಲು ಮುರಿದು ನಿನ್ನೊಳಗೆ ಕೂಡು ಹರಿಚರಣದೊಳಾಡು ಗುರುಮಂತ್ರವನುಚ್ಚರಿಸಿ ಕರ್ಪೂರವನು ಜಗದೊಳಿರುವುದೆಲ್ಲ ನಶ್ವರಸಂತೆ ನೋಡೆ ಬರುವದೆಲ್ಲ ಬಯಲಿನ ಭ್ರಾಂತಿ ಅರಿತಮಹಾತ್ಮರ ಚರಣನರಸಿಜಕೆ ಎರಗಿ ತತ್ವಾನಂದ ಭರಿತನೆಂದೆನಿಸುವ ನಿನ್ನೊಳಗೆ1 ವಾದಿಸಿ ಶುದ್ಧತತ್ವದ ಹಾದಿಯ ಬಲ್ಲವರಾದ ಸಾದು ಸತ್ಪುರುಷರಪಾದ ಕೊಡಿ ಶ್ರೀ ಗುರುಪ್ರಸಾದ ಸಾಧಿಸಿ ಸವಿಯನು ಬೇಡಿಕೊ ಬ್ರಹ್ಮಾನಂದದ ಬೋಧೆಯಿಂದ ನೀ ಲೋಲಾಡಿಕೊ ನಿತ್ಯನಿರ್ಮಲವಾದ ವಸ್ತು ನೀ ದೃಢಮಾಡಿಕೊ ಅಂತರಾತ್ಮನ ಶೋಧಿಸಿ ಸಜ್ಜಾಗಿ ನೋಡಿಕೊ ಅಷ್ಟರಮೇಲೆ ಹಾ ಧನ್ಯಧನ್ಯನೆನಿಸಿ ಮೆರೆವ ವರ್ಣಾಶ್ರಮದ ಭೇದವಳಿದು ಮಾಯೆಯ ಜರಿವೆ ನಿತ್ಯಾನಂದವಿನೋದಕೆ ಮಹಾತ್ಮರನು ಕರಿವೆ ನೋಡಲು ದ್ವೈತವಾದ ಮಿಥ್ಯವೆಂಬುದನರಿವೆ ಮಧ್ಯಾಂತ ಶ್ರೀ ಗುರುದೇವಾ ಬಹುಆದರವಿಡಿದು ಶಿಷ್ಯರಕಾವಾ ಸಂಪಾದಿಸಿಕೊಡುವಾ ಮುಕ್ತಿಯಠಾವಾ ನಿತ್ಯಾರಾಧಕರಿಗೆ ಸದ್ಗತಿಗಳನೀವಾ ತ್ರಿಮೂರ್ತಿಗಳಾದರೆಂತೆಂಬುದ ನಿನ್ನೊಳಗೆ 2 ನಿತ್ಯನಿರ್ಮಲದೊಳಗಾಡಿ ಪ್ರತ್ಯುಗಾತುಮನ ನೋಡಿ ಇತ್ತಣದ ಹಂಬಲವ ಬಿಡಬೇಕು ತನುಮನಧನ ಜೊತ್ತಾಗಿ ಶ್ರೀ ಗುರುವಿಗೆ ಕೊಡಬೇಕು ಕರುಣದವಜ್ರ ಕೆತ್ತಿದ ಕವಚವನು ತೊಡಬೇಕು ಬಿಡಬೇಕು ಇಂತಾಗಿ ಬಿಡದೆ ಮತ್ತಿ ತಾತ್ವರ್ಥವ ತಿಳಿದು ಕಾಣುಕಾಣದರೊಳು ಪ್ರತ್ಯಕ್ಷ ಹೊಳದಾಡುವ ಚಿದ್ಭಾನು ಪ್ರಕಾಶವನ್ನು ಅತ್ಯಧಿಕತೆಯಿಂದಲೀವನು ಜ್ಞಾನಿಗಳೊಳು ವಿಸ್ತಾರ ವಸ್ತು ವಿಚಾರವನು ಮಾಡಿ ನೋಡಿದರೆ ಕತ್ತಲೆ ಬೆಳಕೆರಡಿಲ್ಲದು ಸ್ವಯದಲಿ ಎತ್ತನೋಡಿದರು ಪ್ರಜ್ವಲಿಸುವುದು ತಾಂ ಉತ್ತಮಾನಂದದಿ ಸಲಿಸುವುದು ಗುರು ಭಕ್ತರ ನಿಜದಲಿ ನಿಲಿಸುವದು ಸುತ್ತು ಮುತ್ತು ಸುಳಿದು ತಾನೆ ಬಯಸುವದು ನೆತ್ತಿಯೊಳಗೆ ಹೊಳೆಯುತ್ತಿಹ ಜ್ಯೋತಿಯು ಎತ್ತಿತೋರಿತು ವಿಮಲಾನಂದ ಬ್ರಹ್ಮನ ನಿನ್ನೊಳಗೆ 3
--------------
ಭಟಕಳ ಅಪ್ಪಯ್ಯ
ನಿನ್ನೊಳು ನೀ ತಿಳಿಯೋ ಮನುಜ ಪ ಪರಮಾತ್ಮನೆ ನೀನಿರುವಿಯೊ ಮನುಜಾ ಅರಿತು ನೋಡು ನಿನ್ನಯ ನಿಜವಾ ಮರೆತಿರುವಿಯೊ ನೀ ನಿನ್ನಿರುವಿಕೆಯಾ ತೋರುವ ದೇಹವು ನಾನಲ್ಲೆಂದು 1 ನನಸಿನ ದೇಹವು ಕನಸಿನೊಳುಂಟೆ ನೆನಸಿ ನೋಡು ನಿನ್ನಿರುವಿಕೆ ಸಮವು ನನಸಿನ ದೇಹವು ನಾನಲ್ಲೆಂದು 2 ಗಾಢನಿದ್ರೆಯಲಿ ಅಡಗಿತು ಬುಧ್ಧಿಯು ಗಡನೆ ನೋಡು ನಿನ್ನಿರುವಿಕೆಯಾ ಜಡದೇಹವು ಮನಬುದ್ಧ್ಯಾದಿಗಳಿಂ ಬಿಡಿಯಾದಿರುವಿಕೆಯುಳಿವುದು ನೀನೇ 3 ಮೂರು ಜಾಗೆಯಲಿ ನಿರುತದೊಳಿರುತಿಹ ಇರವರಿವಾನಂದವೆ ನೀನೈ ಮರೆತು ಇದನು ನೀ ಬರಿದೇ ಮಿಡುಕುವಿ ದೊರಕುವದೇ ಸುಖ ಹೊರಗೆ ಹುಡುಕಲು 4 ತೋರಿಕೆ ಅನಿಸಿಕೆಗಳು ಕ್ಷಣಭಂಗುರ ಮರಣರಹಿತ ಪರವಸ್ತುವು ನೀನೆ ಅರಿವೇ ಪರಬ್ರಹ್ಮವು ತಾನೆಂದು ವರಶ್ರುತಿ ಸಾರಿತು ಬ್ರಹ್ಮನೆ ನೀನೈ 5 ಗರುವಿನ ಕರುಣದಿ ತಿಳಿಯೇ ವಿಷಯವ ಮರುಳಾಗದಿರೈ ಮಾಯಾಕಾರ್ಯಕೆ ಗುರುಶಂಕರನಾ ಪದವಿಯ ಪಡೆಯುವಿ6
--------------
ಶಂಕರಭಟ್ಟ ಅಗ್ನಿಹೋತ್ರಿ
ನಿನ್ನೊಳು ನೋಡಾನಂದವ ಎನ್ನ ಮನವೆ ಚೆನ್ನಾಗಿ ಚಿನ್ಮಯವ ಇನ್ನೊಂದಿಹವೆಂಬನ್ಯ ಪಥವಳಿದು ಉನ್ಮನಿಯೊಳು ಘನಸುಖ ಅನುಭವಿಸುತ ಧ್ರುವ ಕಂಗಳ ಕೊನೆಯ ಮೆಟ್ಟಿ ಮುಂಗಡಿಯಲಿಹ ಮಂಗಳಾತ್ಮಕನ ನೋಡಿ ಲಂಘಿಸಿ ಮೂಲಸ್ಥಾನವ ತುಂಗ ವಿಕ್ರಮನ ಸಂಗ ಸುಖವನರಿದು ಅನುದಿನ ಇಂಗಿತವಾಗಿ ನೀ ಗಂಗೆಯೊಳು ಜಲ ಬೆರೆದಾ ಸುಸಂಗದಿ 1 ನಾನು ನಾನೆಂಬದಳಿದು ನಿನ್ನೊಳು ನೀನೆ ಏನೆಂದು ತಿಳಿದು ನೋಡು ಆನಂದೋ ಬ್ರಹ್ಮದಾಟವು ತಾನೆ ತಾನಾಗಿ ತನುವಿನೊಳು ತೋರುವದು ಘನಗುರುವಚನಾನುಭವದಲಿ ಸೇವಿಸಿ ಸ್ವಾನುಭವದ ಸುಖದಲಿ ಲೋಲ್ಯಾಡುತ 2 ಮರೆದು ಮಾಯದ ಮಾಟವ ಅರಿತು ನೋಡು ಬೆರೆದು ದಾಂಟಿ ತ್ರಿಕೂಟವ ತೋರುವ ದಿವ್ಯಭಾವವ ತಾರಕಗುರು ಸಾರುವ ಕರುಣ ನೋಟವ ಅರವಿನೊಳಿರು ಮಹಿಪತಿ ಗುರುಪಾದದಿ ಪರಮಾನಂದದಿ ಸುಖ ಸೂರ್ಯಾಡುತ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು