ಒಟ್ಟು 7318 ಕಡೆಗಳಲ್ಲಿ , 132 ದಾಸರು , 4469 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಕ್ಷ್ಮೀದೇವಿ 13 ಭಾಗ್ಯವ ಕೊಡು ತಾಯೆ ಪ ಭಾರ್ಗವಿ ನಿನ್ನಯ| ಪದಯುಗಕೆರಗುವೆ| ಭಾಗ್ಯದ ಲಕ್ಷ್ಮೀ ಸೌ| ಭಾಗ್ಯದ ನಿಧಿಯೇ ಅ. ಪ ಸಾಗರಸಂಜಾತೆ| ದೇವಿ| ನಾಗವರದಪ್ರೀತೆ || ಯೋಗಿಜನಾವಳಿ| ಮಾನಸಪೂಜಿತೆ | ಅಗಣಿತಗುಣಮಣಿ| ತ್ರಿಜಗದ್ವಂದಿತೆ 1 ಸುರುಚಿರಸುಮಗಾತ್ರೆ | ದೇವಿ| ಹಿಮಕರನಿಭವಕ್ತ್ರೆ || ಕಿನ್ನರ | ಸುರಮುನಿ ಪೂಜಿತೆ | ಕಾಮಿತವೀಯುವ || ಕರುಣಾಕರೆಯೆ 2 ಜನನಿಯೆ ನಿರತವು ನೀ | ಪ್ರೇಮವ | ನಿರಿಸುತಲೆನ್ನೊಳು ನೀ | ಕನಕದ ವೃಷ್ಟಿಯ | ಕರೆಯುತಲನುದಿನ | ಮನ್ಮನದಿಷ್ಟವು | ಸಿದ್ಧಿಸುವಂದದ 3 ಅಹಿಪತಿ ಶಯನನಿಗೆ | ಮೋಹದ | ಮಹಿಷಿಯು ನೀನಾಗೆ || ಮಹಿಮಾಕರೆ ನೀ | ಮಹಿಯೊಳಗನಿಶವು | ಇಹಪರ ಸುಖವನು | ಭವಿಸುವ ತೆರದಾ 4 ಅಜಭವಸುರವಿನುತೆ | ದೇವಿ | ಸುಜನಾವಳಿಪ್ರೀತೆ || ಗಜವಾಹಿನಿ ವರ | ಮದಗಜಗಮನೆಯೆ | ವಿಜಯವಿಠಲಪ್ರಿಯೆ ಶ್ರೀ ಗಜಲಕ್ಷ್ಮಿಯೆ 5 ಶುಭ | ಮಂಗಳೆ ಸುಪವಿತ್ರೆ || ಮಂಗಳಾಂಗಿ ನರ | ಸಿಂಗನ ರಮಣಿಯೆ | ಮಂಗಳಕಾರ್ಯಗ | ಳನುದಿನವೆಸಗುವ 6 ಪಂಕಜದಳನೇತ್ರೆ | ದೇವಿ | ಕಿಂಕರನುತಿಪಾತ್ರೆ || ಶಂಖಚಕ್ರಾಂಕಿತ | ಶ್ರೀ ವೈಕುಂಠನ |ಅಂಕದಿ ಮೆರೆವಖಿ | ಳಾಂಕ ಮಹಿಮಳೇ 7
--------------
ವೆಂಕಟ್‍ರಾವ್
ಲಕ್ಷ್ಮೀದೇವಿ ಕಮಲಾಕ್ಷಿ ತಾಯೆ ಸೂಕ್ಷ್ಮಮತಿಯನಿತ್ತು ಪೊರೆದು ರಕ್ಷಿಪದೇವಿ ಪ ಹರಿಯರಾಣಿ ಭುಜಗವೇಣಿ ಪರಿಪರಿಯ ಕ್ಲೇಶಗಳಳಿವ ದುರಿತದೂರನ ಕರಪಿಡಿಯುತ ಬಾ ಪರಿ ವೈಭವದಿ 1 ವಂದಿಸುವೆ ನಿನ್ನ ಪದಕೆ ಅಂಬುಜಾಕ್ಷಿ ಕರುಣವ ಮಾಡಿ ಕಂಬು ಕಂಧರನೊಡಗೂಡುತ ಬಾ ಸಂಭ್ರಮ ಸೂಸುತಲಿ 2 ಗೆಜ್ಜೆ ಪೈಜನಿ ಪಾಡಗರುಳಿಯು ಸಜ್ಜಾಗಿಹ ಕಾಲುಂಗುರ ಧ್ವನಿಯ ಮೂರ್ಜಗದೊಡೆಯನ ಕರಪಿಡಿಯುತ ಬಾ ಸಜ್ಜನ ರಕ್ಷಕಳೆ 3 ನಡುವಿಗೆ ನವರತ್ನದ ಪಟ್ಟಿ ಬಿಡಿಮುತ್ತುಗಳುದುರುವ ಪೀತಾಂಬರ ಬಡನಡÀು ಬಳುಕುತ ಅಡಿ ಇಡು ಬಾ ನಿ- ನ್ನೊಡೆಯನ ಕೂಡುತಲಿ 4 ಕರದಲಿ ಕಂಕಣ ಹಾಸರ ಬಳೆಗಳು ಬೆರಳಲಿ ಉಂಗುರ ಥಳಥಳಿಸುತಲಿ ಗರುಡಗಮನ ನೊಡಗೂಡುತ ಬಾ ಬಾ ಗರುವವು ಮಾಡದಲೆ5 ವಂಕಿನಾಗಮುರುಗಿ ಕರದಲಿ ಬಿಂಕದಿ ಪಿಡಿದಿಹ ತಾವರೆ ಕುಸುಮವು ಪಂಕಜಾಕ್ಷನೊಡಗೂಡುತ ಮನ ಶಂಕೆಯು ಮಾಡದಲೆ6 ಕಠ್ಠಾಣಿಸರ ಪದಕಗಳ್ಹೊಳೆಯುತ ಕಟ್ಟಿದ ಉಂಗುರಡ್ಡಿಕಿ ಶೋಭಿಸುತ ಚಿತ್ತಜನಯ್ಯನನೊಡಗೂಡುತ ಬಾ ಮತ್ತೆ ಹರುಷದಲಿ 7 ಥಳಥಳಿಸುವ ಗಲ್ಲಕೆ ಅರಿಶಿನವು ನಲಿಯುವ ಮೂಗುತಿ ಮುಖುರ ಬುಲಾಕು ಹೊಳೆವ ಮೀನು ಬಾವಲಿ ಚಳತುಂಬುಗಳ್ಹೊಳೆಯುತ ಘಳಿಲನೆ ಬಾರಮ್ಮ 8 ಕುರುಡಿ ಬಾವಲಿ ಬುಗುಡಿ ಚಂದ್ರ ಮುರುವಿನ ಕಾಂತಿ ಮುಗುಳ್ನಗೆ ಮುಖವು ಉರುಗಾದ್ರೀಶನ ಕರಪಿಡಿಯುತ ಬಾ ಕರೆ ಕರೆ ಮಾಡದಲೆ 9 ಘಣೆಯಲಿ ಕುಂಕುಮ ಬೈತಲೆ ಬಟ್ಟು ಥಳಥಳಿಸುವ ಕಣ್ಣಿಗೆ ಕಪ್ಪಿಟ್ಟು ಎಳೆಬಾಳೆಯ ಸುಳಿಯಂದದಿ ಬಳುಕುತ ಘಳಿಲನೆ ಬಾರಮ್ಮ10 ಕೆಂಪಿನ ರಾಗುಟಿ ಜಡೆ ಬಂಗಾರವು ಸಂಪಿಗೆ ಮಲ್ಲಿಗೆ ಸರಗಳ ಮುಡಿದು ಸೊಂಪಿಲಿ ಶ್ರೀ ಹರಿಯೊಡನಾಡುತ ನಲಿಯುವ ಸಂತಸ ತೋರಮ್ಮ11 ಇಂದಿರೆ ಶ್ರೀರಮೆ ಭಾರ್ಗವಿಯೆ ನಂದತ್ರಯಾ ಸದಾಸುಶೀಲೆ ಸುಗಂಧಿ ಸುಂದರಿ ಮಂದಗ ಮನೆಯೆ ಚಂದದಿ ಬಾರಮ್ಮ 12 ಸುತ್ತೆಲ್ಲ ಸುರಸ್ತ್ರೀಯರು ಮುತ್ತಿನ ಛತ್ರ ಚಾಮರದರ್ಪಣ ಪಿಡಿದು ನೃತ್ಯಗಾಯನ ಮಾಡುತ ಕರೆವರು ಸತ್ವರ ಬಾರೆನುತ 13 ಶ್ರಮ ಪರಿಹರಿಸೆನುತಲಿ ಬೇಡುವೆನು ಮಮತೆಲಿ ಕರಗಳ ಮುಗಿಯುತ ಬೇಡಲು ಕಮಲನಾಭ ವಿಠ್ಠಲನೊಡನೆ ಶ್ರೀ- ಕಮಲೆಯು ಬರುತಿಹಳು14
--------------
ನಿಡಗುರುಕಿ ಜೀವೂಬಾಯಿ
ಲಕ್ಷ್ಮೀದೇವಿ ಸ್ತೋತ್ರ ಎಂದು ಬರುವಳೋ ಗೋ-ವಿಂದನೊಲ್ಲಭೆ ಲಕ್ಷ್ಮೀ ರಂಗನ ಸನ್ನಿಧಿಗೆ ಪ ಮಂಗಳಾಂಗಿ ಸರ್ವಾಂಗ ಬಳಲಿ ಮುಖಕಂದಿ ಕಳೆಗುಂದಿದಂತೆ | ಬಲು ವ್ಯಥೆಯಂತೆ ಅ.ಪ ಶೇಷನ ಶಿಖಿ ಮ್ಯಾಲೆವಾಸುದೇವರು ಲಕ್ಷ್ಮೀ ಸಮೇತರಾಗಿರುತಿರಲುಆ ಸಮಯದಿ ಭೃಗುಮುನಿ ಬಂದು ಕೋ-ಪಿಸೆ ಸೋಕಿಸಿದನು ಪಾದವಾ | ವಕ್ಷ ಸ್ಥಳವಾ 1 ಥಟ್ಟನೆ ಇಳಿದಾಳುಸಿಟ್ಟಿನಿಂದಲಿ ಬಹು ಧಿಕ್ಕಾರ ಮಾಡಿದಳುಲಕ್ಷ್ಮೀರಮಣನೆಂಬೊ ಬಿರುದು ನಿಮಗೆ ಈಹೊತ್ತಿಗೆ ಅಲ್ಲೆಂದಾಳು | ತೆರಳಿದಳು 2 ನಿಲ್ಲದೆ ಪೊರಟಾಳುಫುಲ್ಲಾಕ್ಷಿ ಮನದೊಳು ತಲ್ಲಣಿಸುತಿರಲುವಲ್ಲಭನರಿಯದ ಸ್ಥಳವಿಲ್ಲದಿರೆ ತಾಯಿ ಕೊಲ್ಲಾಪುರಕೆ ಬಂದಾಳು | ನೆಲೆಗೊಂಡಾಳು 3 ಜಾತೆ ಬಾಮಾರನ ಮಾತೆ ಬಾ ವಾರಿಜದಳನೇತ್ರೆ ಬಾಮೂರ್ಲೋಕದೊಳಗೆ ನೀ ಪ್ರಖ್ಯಾತೆ ಬಾರೆಂದು ಶ್ರೀಮ-ನ್ನಾರಾಯಣನೆ ಕರೆಯಲು | ನಸುನಗೆಯೊಳು 4 ಜಯ ಲಕ್ಷ್ಮೀರಮಣಗೆಜಯ ಶ್ರೀನಿವಾಸಗೆ ಜಯ ಮೋಕ್ಷದಾಯಕಗೆಜಯತು ಕೊಲ್ಹಾಪುರದೊಳ್ ನೆಲಸಿದವಳಿಗೆಶ್ರೀದೇವಿಯಳಿಗೆ5 ವೆಂಕಟ ವಿಠಲವೈಕುಂಠಪತಿ ಲಕ್ಷ್ಮೀ ಶಾಂತ ಏಕಾಂತದೊಳುಶಂಖಚಕ್ರಧರ ಸರ್ವಮಂಗಳಕಾರಸಂಚಿತಾಗಮದೂರನು ಮಲಗಿರುವನು6
--------------
ವೆಂಕಟೇಶವಿಟ್ಠಲ
ಲಕ್ಷ್ಮೀದೇವಿ ಸ್ತೋತ್ರ ದಯಮಾಡೆ ದಯಮಾಡೆ ||ಹಯಮುಖನಿಗೆ ಅತಿ ಪ್ರಿಯ ಕಮಲಾಲಯೆ ಪ ಭವ ಜಲಧಿಯೊಳಗೆ ತ್ಪರ |ಸಲಹು ನಿನ್ನ ಕರಜಲಜದಿ ಪಿಡಿದು 1 ನಳಿನ ಭವಾದ್ಯರ ಸಲಹುವಿ ಈಪ್ಸಿತ |ಫಲವಿತ್ತು ಕರುಣದಲಿ ಮಹಲಕುಮಿ 2 ಕ್ಷೋಣಿ ಭಣಗು ನಾನೋರ್ವನು ನಿನ್ನಯ |ಧ್ಯಾನವೆ ಪಾಲಿಸು ಮಾಣದೆ ಜವದಿಂ3 ಶರಣು ಪೊಕ್ಕವರ ಜರಿದರೆ ನನ್ನಯ |ಬಿರುದಿಗೆ ಬಾಹದೆ ಕೊರತೆಯು ಜಾನಕಿ 4 ಮಾನಿನಿ ಎನ್ನನು ಹೀನತೆ ಎಣಿಸದೆ 5
--------------
ಗುರುಪ್ರಾಣೇಶವಿಠಲರು
ಲಕ್ಷ್ಮೀನಾರಾಯಣ ಕಾಯೋ ನಿನ್ನ ನಂಬಿದವರÀುಕ್ಷಿಯೊಳು ಜಗಂಗಳನಿತ್ತು ರಕ್ಷಿಸಿದ ಶ್ರೀಶ ಪ. ಕಂದ ಪ್ರಹ್ಲಾದನ್ನ ಕಾಯ್ದೆ ಚಂದದಿ ಕಾಯೊಯೆಂದು ಬಂದಮುಂದೆ ನಿಂದ ಮಂದಿಯೊಳು ನಿಂದು ನೀ ಸಲಹಯ್ಯ 1 ಕರಿರಾಜ ಕರೆಯಲು ಭರದಿ ಬಂದು ಪೊರೆದೆ ನೀಶರಣು ರಕ್ಷಾಮಣಿಯೆ ಸಿರಿಯಮ್ಮಗೊಲಿದೆ ನೀ 2 ಶರಣು ಮುಖ್ಯ ಸುರರ ವರದೈವವಾದೆ ನೀನುಶರಣು ರಕ್ಷಾಮಣಿಯೆ ಸಿರಿಯಮ್ಮಗೊಲಿದೆ ನೀ 3 ಮೀನಾಂಕ ತಲೆದೊರಿದೆ ನೀ 4 ಹಯವದನನಾಗಿ ನೀ ತ್ರಯೀಚೋರರನ್ನು ಕೊಂದುಸ್ತ್ರೀಯರಿಗೆ ನ್ಯಾಯದಿಂದ ದಯ ಬೀರಿದೆಯಲ್ಲ 5
--------------
ವಾದಿರಾಜ
ಲಕ್ಷ್ಮೀವಲ್ಲಭ ವಿಠಲ | ಪೊರೆಯ ಬೇಕಿವಳಾ ಪ ಅಕ್ಷಯ್ಯ ಫಲದ ಕೃ | ಪೇಕ್ಷಣದಿ ನೋಡಿಅ.ಪ. ಸಂಸಾರ ವಿರಸತರ | ಅಂಶವನೆ ತಿಳಿಸೊ ಹರಿಕಂಸಾರಿ ನಿನ್ನ ಪದ | ಪಾಂಸು ಭಜಿಸುತ್ತಾ ಸಂಶಯ ರಹಿತ ಹರಿ | ಹಂಸನಾಮಕ ಸೇವೆಶಂಸಾರ್ಯ ಸರ್ವಧಿಕ | ಸವೋತ್ತಮೆನುತಾ 1 ಹರಿನಾಮ ಕವಚವನು | ಸರ್ವದಾ ಧರಿಸುತ್ತಾದುರಿತನಾಳುಟ್ಟಳಿಯ | ಪರಿಹಾರ ಮಾರ್ಗಅರಿವಿನಿಂದಲಿ ಹರಿಯ | ವರನಾಮ ಸ್ಮರಿಸುತ್ತಕರಗತವು ಆಗಲಿಯೊ | ವರಮುಕ್ತಿಪಥವು 2 ಎರಡು ಮಾರ್ಭೇದಗಳು | ಅರಿವಾಗಲೀಕೆಗೇತರತಮಂಗಳು ಮನಕೆ | ಬರುತಿರಲಿ ಸರ್ವದಾಸಿರಿವಾಯು ಮತ ದೀಕ್ಷೆ | ಗೆರಗಲೀಕೆಯ ಮನಸುಹರಿಯ ಮಮ ಕುಲದೈವ | ಉದ್ದರಿಸೊ ಇವಳಾ 3 ಸಾಧನಕೆ ಸತ್ಸಂಗ | ನೀದಯದಿ ಕೊಟ್ಟಿವಳಮೋದ ಬಡಿಪದು ದೇವ | ಆದಿ ಮೂರುತಿಯೇ |ಮಾಧವನೆ ಬಿನೈಸೆ | ಆದರಿಸುತಿವಳೀಗೆಕಾದುಕೊ ಬಿಡದಲೆ | ಹೇ ದಯಾ ಪೂರ್ಣ 4 ದೇವದೇವೊತ್ತಮನೆ | ಕಾವದೇವನೆ ಹರಿಯಭಾವದಲಿ ಮೈದೋರಿ | ಪೊರೆಯೊ ಇವಳಾಕಾವ ಕರುಣೆಯ ಗುರು | ಗೋವಿಂದ ವಿಠಲನೆನೀವೊಲಿಯದಿನ್ನಿಲ್ಲ | ಈ ವಾಣಿ ಬಲುಸತ್ಯ 5
--------------
ಗುರುಗೋವಿಂದವಿಠಲರು
ಲಕ್ಷ್ಮೀಶ ಪಾಲಿಸು ಎನ್ನ ಲಕ್ಷ್ಮೀಶ ಪ. ಲಕ್ಷ್ಮೀಶ ಪಾಲಿಸೊ ಎನ್ನ | ಜಗ ದ್ರಕ್ಷಕ ಪರಮಪಾವನ್ನ ಈಕ್ಷಿಸು ಕರುಣ ಕಟಾಕ್ಷವ ಬೀರುತ ಕುಕ್ಷಿಯೊಳಗೆ ಜಗ ರಕ್ಷಿಸುತಿಪ್ಪನೆ ಅ.ಪ. ನಾಗರಾಜನ ಗಿರಿವಾಸ | ಭೋಗ ಆಗುಮಾಡೆಲೊ ಸರ್ವೇಶ | ನಿನಗೆ ಬಾಗಿ ನಮಿಸುವೆ ಜಗದೀಶ | ಭವ ರೋಗ ಹರಿಸು ಕ್ಲೇಶನಾಶ | ಆಹ ಕೂಗಿದರು ನಿನಗೀಗ ಕೇಳಿಸದೇನೊ ಜಾಗುಮಾಡದೆ ನೀಡೊ 1 ಸೃಷ್ಟಿಗೆ ಎನ್ನನು ಕರೆದೆ | ಭವ ಕಷ್ಟದಿ ಬಂಧಿಸಿ ತಂದೆ | ಇನ್ನು ಘಟ್ಯಾಗಿ ಕಾಪಾಡು ಎಂದೆ | ಮೊರೆ ಮುಟ್ಟದೆ ನಿನಗಿನ್ನು ತಂದೆ | ಆಹ ಎಷ್ಟು ಬೇಡಿದರು ಸೊಟ್ಟ ತಿರುಗಿ ಮೊಗ ಅಟ್ಟಕೆ ಏರುವಿ ಬೆಟ್ಟದೊಡೆಯ ಹರಿ 2 ಕರ್ಮಬಂಧನಗಳ ಕಡಿಯೊ | ಶ್ರೀಶ ನಿರ್ಮಲರೂಪ ಕೈಪಿಡಿಯೊ | ಬೇಗ ಧರ್ಮ ಅಧರ್ಮವ ತಿಳಿಯೊ | ಜಗ ತ್ಕರ್ಮ ಸಾಕ್ಷಿಯೆ ಬೇಗ ಪೊರೆಯೊ | ಆಹ ಧರ್ಮವಲ್ಲವೊ ಹೀಗೆ ಮರ್ಮವ ನುಡಿವುದು ಪೆರ್ಮೆಯಿಂದಲಿ ಅಂತರ್ಮರ್ಮವರಿತು ಕಾಯೊ 3 ಶ್ರೀನಿವಾಸ ಬಾರೊ ಬೇಗ | ನಿನ್ನ ನಾನು ನಂಬಿದೆನೊ ಶ್ರೀ ಭೋಗ | ನೀಗು ನೀನೆ ತ್ರಿಕರ್ಮದ ಭೋಗ | ಬೇಗ ಭವ ರೋಗ | ಆಹ ಪೋಗುತಲಿದೆ ದಿನ ಜಾಗುಮಾಡಲು ಸಲ್ಲ ನಾಗಶಯನ ಎನ್ನ ಬೇಗನೆ ರಕ್ಷಿಸೊ 4 ಕಣ್ಣು ಬಿಟ್ಟಿರುವೆಯೊ ನೀನು | ನಿನ್ನ ಬೆನ್ನ ಭಾರವಿದಿನ್ನೇನು | ಕೋರೆ ಮಣ್ಣು ಆರ್ಭಟಿಸುವೆ ನೀನು | ವಟು ಚಿಣ್ಣ ಭಾರ್ಗವ ನೀನು | ಆಹ ಮನ್ನಿಸಿ ಕಪಿಗಳ ಬೆÉಣ್ಣೆ ಕಳ್ಳನೆನಿಸಿ ಬಣ್ಣಗೆಟ್ಟು ಹಯವನ್ನೇರಿದ ಧೀರ 5 ನಿತ್ಯ ತೃಪ್ತನೆ ಎನ್ನ ಮನದಿ | ಸರ್ವ ತತ್ವಾಧಿಪತಿಗಳು ಮುದದಿ | ಜಗ ತ್ಕರ್ತನೆ ಕಾಯ್ವ ದಯದಿ | ಬೇಗ ಇತ್ತು ಮತಿಯ ಸಲಹೊ ದೃಢದಿ | ಆಹ ಸತ್ಯರೂಪನೊ ನೀ ಸತ್ಯ ಸಂಕಲ್ಪನೊ ನಿತ್ಯ ನಿಂತು ಕಾಯೊ 6 ಗೋಪಾಲಕೃಷ್ಣ ವಿಠ್ಠಲ | ಭವ ಕೂಪದಿಂದೆತ್ತೊ ಶ್ರೀ ನಲ್ಲ | ಎನ್ನ ರಾಪು ಮಾಡುವುದುಚಿತಲ್ಲ | ಜಗ ದ್ವ್ಯಾಪಕ ಭಕ್ತವತ್ಸಲ | ಆಹ ಈ ಪಯೋಜಜಾಂಡದಿ ರೂಪ ರೂಪಾಂತರದಿ ವ್ಯಾಪಾರ ನಡೆಸುವ ಗೋಪಕುವರ ಕಾಯೊ 7
--------------
ಅಂಬಾಬಾಯಿ
ಲಕ್ಷ್ಮೀಶ ಹರಿ ವಿಠಲ ರಕ್ಷಿಸೋ ಇವಳಾ ಪ ಕುಕ್ಷಿಯೊಳಗನ್ಯರೆನೆ | ರಕ್ಷಕರ ಕಾಣೇ ಅ.ಪ. ಮಧ್ವ ಮತದಲ್ಲಿಹಳು | ಶ್ರದ್ಧೆ ಭಕ್ತೇಯುತಳುಪದ್ಧತಿಗಳಲವಡಿಸಿ | ಶುದ್ಧ ಸಾಧನದಾ |ಅಧ್ಯಾನ ಕಳೆ ತಂದು | ಬದ್ಧಳನ ಮಾಡುತ್ತಉದ್ಧರಿಸೋ ಶ್ರೀ ಹರಿಯೆ | ಪದ್ಮನಾಭಾಖ್ಯಾ 1 ಸಿರಿ ಭವ ಹಾರೀ 2 ಸಾರ ಸಾಧನಕೇ |ಚಾರು ನಿನ್ನಯ ನಾಮ | ಸಾರಸದಿ ಸವಿದುಂಬಭರಣಿಯಲಿರಿಸಯ್ಯ | ಮಾರಪಿತ ಹರಿಯೇ 3 ಕರ್ಮಗಳ ಮಾಳ್ಪವಲಿ | ಮರ್ಮಗಳ ತಿಳಿಸಯ್ಯನಿರ್ಮಮತೆ ನೀಡುತ್ತ | ಧರ್ಮ ಸಾಧನಕೇ |ಕರ್ಮ ನಾಮಕ ಹರಿಯೆ | ಪೇರ್ಮೆಯಲಿ ಇವಳನ್ನಕ್ರಮ್ಮಿಸೋ ಕರ್ಮದಲಿ | ಧರ್ಮಗುಪ್‍ಧರ್ಮೀ 4 ಧಾವಿಸೀ ಬಂದಿಹಳು | ದೇವ ತವ ದಾಸ್ಯವನೆ ಭಾವುಕಳಿಗಿತ್ತಿಹೆನೋ | ಓವಿ ಉಪದೇಶಾಗೋವಳರ ಪ್ರೀಯ ಗುರು | ಗೋವಿಂದ ವಿಠ್ಠಲನೆನೀವೊಲಿದು ಪೊರೆ ಇವಳ | ದೇವ ದೇವೇಶಾ 5
--------------
ಗುರುಗೋವಿಂದವಿಠಲರು
ಲಾಲಿ ಆಡಿದ ರಂಗ ಲಾಲಿ ಆಡಿದ ಪ. ಬಾಲೆ ರುಕ್ಮಿಣಿ ದೇವೇರೊಡನೆ ಮೂರು ಲೋಕನಾಳ್ವ ದೊರೆಯುಅ.ಪ. ಸಾಧು ಮಚ್ಚಕಚ್ಚಪರೂಪನಾಗಿ ಭೇದಿಸಿ ತಮನ ಕೊಂದುವೇದವನ್ನು ಮಗನಿಗಿತ್ತು ಭೂದೇವಿಯರೊಡನೆ ಕೃಷ್ಣ 1 ಅಮೃತ ಬಡಿಸಿ ಸತ್ಯಭಾಮೆಯರೊಡನೆ ಕೃಷ್ಣ2 ವರಾಹ ರೂಪನಾಗಿ ಆದಿ ಹಿರಣ್ಯಕನ ಕೊಂದುಮೇದಿನಿಯ ಮೇಲಕೆ ತಂದು ರಾಧೆಯೊಡನೆ ನಗುತ ಕೃಷ್ಣ 3 ಪುಟ್ಟಬಾಲನ ನುಡಿಯ ಕೇಳಿ ಕೆಟ್ಟ ಕಶ್ಯಪನುದರ ಸೀಳಿಅಷ್ಟಮಂಗಳವಾದ್ಯವಾಗಲು ಅಷ್ಟ ಸ್ತ್ರೀಯರೊಡನೆ ಕೃಷ್ಣ 4 ಸುರರು ಲಕುಮಿಯೊಡನೆ ನಗುತ ಕೃಷ್ಣ 5 ಯುದ್ಧದಲಿ ಕೊಡಲಿ ಪಿಡಿದು ಗುದ್ದಿ ಕ್ಷತ್ರೇರ ಶಿರವ ತರಿದುಗೆದ್ದ ಸಿಂಹನೆನಿಸಿಕೊಂಡು ಪದ್ಮಾವತಿಯ ಕೂಡೆ ಕೃಷ್ಣ 6 ಸೇತುಬಂಧನವನ್ನೆ ಮಾಡಿ ಧೂರ್ತರಾವಣನ್ನ ಕೊಂದುಖ್ಯಾತಿಪಡೆದು ಪುರಕೆ ಬಂದು ಸೀತೆಯೊಡನೆ ರಾಮಚಂದ್ರ 7 ಒಂದು ಏಳು ಎಂಟುಸಾವಿರ ಇಂದುಮುಖಿಯರನ್ನು ಕೂಡಿಮಂದಮಾರುತ ಚಂದ್ರ ಬರಲು ನಂದಗೋಕುಲದ ದೊರೆಯು 8 ಅಂಬರವ ತೊರೆದು ದಿಗಂಬರÀ ವೇಷವನ್ನೆ ಧರಿಸಿಮಂಗಳಾಂಗ ಮಾರಜನಕ ರಂಗನಾಯಕಿಯೊಡನೆ ಕೃಷ್ಣ9 ಅಚ್ಚಮುತ್ತಿನಾಭರಣವಿಟ್ಟು ಲಕ್ಷವಿಲ್ಲದೆ ಹಯವನೇರಿಭಕುತರಿಗೆ ಅಭಯಕೊಡುತ ಭಕ್ತವತ್ಸಲ ಹಯವದನ 10
--------------
ವಾದಿರಾಜ
ಲಾಲಿ ಲಾಲಿ ನಮ್ಮ ಹರಿಯೆ ಲಾಲಿ ಪ ಶ್ರೀಲತಾಂಗಿಯೊಡನೆ ಮೆರೆವದೊರೆಯೆ ಲಾಲಿ ಅ.ಪ ನಂದಲಾಲಿ ಗೋವಿಂದ ಲಾಲಿ ಕಂದನಾಗಿ ಲೋಕ ತಂದೆ ಲಾಲಿ 1 ಬಾಲಲಾಲಿ ತುಲಸಿಮಾಲ ಲಾಲಿ ಕಾಲಕಾಲವಂದ್ಯ ಗೋಪೀಲೀಲ ಲಾಲಿ 2 ವಾಸುದೇವ ಲಾಲಿ ದೇವಕೀತನಯ ಸದ್ಭಾವಲಾಲಿ 3 ರಂಗಲಾಲಿ ಮಂಗಳಾಂಗಲಾಲಿ ಗಂಗಾತಾತ ಲೋಕೋತ್ತುಂಗ ಲಾಲಿ4 ರಾಮಲಾಲೀ ಭಕ್ತಪ್ರೇಮ ಲಾಲಿ ಶ್ಯಾಮಸುಂದರಾಂಗ ನಮ್ಮ ಸ್ವಾಮಿ ಲಾಲಿ 5 ಸತ್ಯ ಲಾಲಿ ಮೌನಿಸ್ತುತ್ಯ ಲಾಲಿ ನಿತ್ಯ ನಿಗಮವೇದ್ಯ ಅನ್ಯುಕ್ತಲಾಲಿ6 ರಾಜಲಾಲಿ ರತ್ನತೇಜ ಲಾಲಿ ರಾಜರಾಜಪೂಜ್ಯ ಜಾಜಿಶ್ರೀಶ ಲಾಲಿ 7
--------------
ಶಾಮಶರ್ಮರು
ಲಾಲಿ ಶ್ರೀ ಕೃಷ್ಣ ಬಾಲ ಲಾಲಿ ನಂದ ಯಶೋದೆ ಲೀಲ ವೇಣುಗೋಪಾಲ ಪ. ವಸುದೇವ ಸುತನಾಗಿ ಬಂದು ಎಸೆವೊ ಗೋಕುಲದಲಿ ನಿಂದು ಅಸುರಕುಲ ಸಂಹಾರಕೆಂದು ನಸುನಗುತ ಗೋಪಿಯರ ವಶವಾಗ್ವೆನೆಂದು 1 ಪುಟ್ಟಿದಾ ಶಿಶುವನ್ನೆ ನೋಡಿ ನಕ್ಷತ್ರ ರೋಹಿಣಿ ಎಂದು ತಿಳಿದು ಅಷ್ಟಜನ ಸಹಿತ ಗೋಕುಲದಿ ಸಂತುಷ್ಟಿಯೊಳು ನಾಮಕರಣವ ಮಾಡಿ ನಲಿದೂ 2 ವೇದ ಘೋಷಗಳಾಗುತಿರಲೂ ಆದಿ ಮೂರುತಿಗೆ ಮೋಹದಲಿ ಕೃಷ್ಣನೆಂದ್ಹೆಸರನಿಡಲೂ ಸಾದರದಿ ಗೋಪ ದಕ್ಷಿಣೆ ತಾಂಬೂಲ ಅಗಾಧದಲಿ ಬ್ರಾಹ್ಮಣರಿಗೆ ಕೊಟ್ಟು ನಲಿದೂ 3 ಚತುರ ವೇದದ ನಾಲ್ಕು ಸರಪಣಿಯ ಹೂಡಿ ಚತುರ ದಿಕ್ಕನೆ ನಾಲ್ಕು ಚೌಕ ತೊಟ್ಟಿಲನೆ ಕಟ್ಟಿ ಚತುರ್ಮುಖನಯ್ಯನ ತೊಟ್ಟಿಲೊಳಗಿಟ್ಟು ಅತಿಶಯದಿ ನಾರಿಯರು ತೂಗಿದರು ಹರಿಯಾ ಲಾಲಿ4 ಮಚ್ಛಕೂರ್ಮನೆ ವರಹ ಲಾಲಿ ತುಚ್ಛ ದೈತ್ಯನ ಕೊಂದ ನರಹರಿಯೆ ಲಾಲಿ ಅಚ್ಚವಾಮನ ಭಾರ್ಗವ ಕೃಷ್ಣ ಲಾಲಿ ಸಚ್ಚ ಬೌದ್ಯಕ ಶ್ರೀ ಶ್ರೀನಿವಾಸನೆ ಲಾಲಿ 5
--------------
ಸರಸ್ವತಿ ಬಾಯಿ
ಲಾಲಿ ಶ್ರೀ ಹಯವದನ ಲಾಲಿ ರಂಗವಿಠಲÁಲಿ ಗೋಪೀನಾಥ ಲಕ್ಷ್ಮೀಸಮೇತ ಪ. ಮುತ್ತು ಮಾಣಿಕ ಬಿಗಿದ ತೊಟ್ಟಿಲೊಳಗೊಲ ಮನೆಯೊಳಗೆ ಇರನೀತ ಬಹುರಚ್ಚೆವಂತಮನೆವಾರ್ತೆ ಯಾರು ಮಾಡುವರು ಶ್ರೀಕಾಂತಗುಣಿಗುಣಗಳೊಳಗಿಪ್ಪ ಬಹು ಗುಣವಂತಗುಣಬದ್ಧನಾಗದಿಹÀ ಶ್ರೀ ಲಕ್ಷ್ಮೀಕಾಂತ2 ಕ್ಷೀರಾಂಬುನಿಧಿಯೊಳಗೆ ಸೆಜ್ಜೆಯೊಳಗಿರುವಶ್ರೀರಮಣ ಭಕ್ತರಿಚ್ಚೆಗೆ ನಲಿದು ಬರುವಕಾರುಣ್ಯ ಹಯವದನ ಕಾಯ್ವ ತುರುಕರುವನೀರೆ ಗೋಪಿಯರೊಳು ಮೆರೆವ ಕಡುಚೆಲುವ 3
--------------
ವಾದಿರಾಜ
ಲಾಲಿತ್ರಿ ಗುಣಗಾತ್ರ ಲಕ್ಷ್ಮಿಕಳತ್ರಾ ಲಾಲೀ ಪ ನೀರೊಳಗೆ ಮನೆಯು ಮಾಡಿಓಡ್ಯಾಡೀ | ಕೋರೆಯನೆ ಮಸೆದು ಭೂಮಿಗೆ ಕಡೆದಾಡೀ ಮೋರೆಯನು ಮುಚ್ಚಿಕೈಕಾಲು ತೂಗ್ಯಾಡೀ ಘೋರ ರೂಪವ ಧರಿಸಿ ಬಲಿದಾನವನೆ ಬೇಡೀ 1 ಕೊಡಲಿಯನು ಪಿಡಿದು ಮಾತೆಯ ಶಿರವನೇ ಒಡೆದೂ ಮಡದಿಗೋಸ್ಕರ ದಶಶಿರನ ಶಿರವತರಿದೂ ತುಡುಗ ತನದಿ ಮೊಸರು ಗಡಿಗೆಗಳ ಒಡೆದೂ ಮಡದಿಯರ ವ್ರತಭಂಗ ಮಾಡಿದೆಯೊ ಪಿಡಿದೂ 2 ಹಯವನೇರಿದ ಹರಿಯು ಬಹುಜನರ ಪೊರೆಯೇ ಚೆಲುವ ಮೂರುತಿ ತೊಟ್ಟಿಲೊಳು ಮುದ್ದು ಸುರಿಯೇ ಪರಮ ಪುರುಷ ಸದ್ಭಕ್ತರ ಸಿರಿಯೇ ಪವಡಿಸೋ ನರಸಿಂಹ ವಿಠಲಾ ಧೊರಿಯೇ ಲಾಲೀ 3
--------------
ಓರಬಾಯಿ ಲಕ್ಷ್ಮೀದೇವಮ್ಮ
ಲಾಲಿಸಿ ರಘುವರನ ಚರಿತೆಯ ಸಾರ ಪೇಳುವೆ ಸುಖನಾಥನ ಪ ಶ್ರೀ ಲಲಾಮನು ಸುರರ ಮೊರೆಯನು ಭಾರ ಹರಿಸಲು ಲೀಲೆಯಲು ದಶರಥ ನೃಪಾಲನ ಬಾಲನೆನಿಸುತ ಅವತರಿಸಿದನು ಅ.ಪ. ಕುಶಿಸುತನ ಯಜ್ಞವ ರಕ್ಷಿಸಿ ಪಥದಿ ಋಷಿ ಪತ್ನಿಯ ಶಿಲಾರೂಪವ ಬಿಡಿಸಿದ ದೇವ ಪಶುಪತಿಯ ಕೋದಂಡ ಖಂಡಿಸಿ ಶಶಿವದನೆ ಜಾನಕಿಯ ಕರವನು ಕುಶಲದಲಿ ಪರಿಗ್ರಹಿಸಿ ಲೀಲೆಯ ನಸಮ ಭಾರ್ಗವನೊಡನೆ ತೋರಿದ 1 ತಂದೆ ವಾಕ್ಯವ ಪಾಲಿಸೆ ತಾ ಧರಣಿಗೆ ಬಂದ ಕಾರ್ಯವ ಸಲ್ಲಿಸೆ ಋಷಿಗಳಾಸೆ ತಂದು ತಾ ಮನಕಂಡು ವನಕೆ ಸತಿ ಸೋದರರ ಸಹಿತದಿ ಮುಂದೆ ಗಂಗೆಯ ದಾಟಿ ಭರದ್ವಾಜ ನಿಂದ ಸತ್ಕಾರವನು ಕೊಂಡನು2 ಚಿತ್ರಕೂಟದಲಿರಲು ವಿನಯದಿ ಬಂದು ಭಕ್ತ ಭರತನು ಬೇಡಲು ಪಾದುಕೆಯಿತು ಮತ್ತೆ ದಂಡಕವನ ಪ್ರವೇಶಿಸಿ ದೈತ್ಯರನು ಸಂಹರಿಸಿ ಶರಭಂಗ ಗಿತ್ತು ಮುಕ್ತಿಯ ಕುಂಭಸಂಭವ ನಿತ್ತ ದಿವ್ಯಾಸ್ತ್ರಗಳ ಪಡೆದನು 3 ವರಪಂಚವಟಿಯೊಳಗೆ ಶೂರ್ಪನಖಿಯು ದುರುಳ ಬುದ್ಧಿಯೊಳು ಬರೆ ಕಿವಿಮೂಗ ಕೊಯ್ಸಿ ಹರಿಣರೂಪದಿ ಬಂದ ದೈತ್ಯನ ಹರಣಗೈದಾಶ್ರಮಕೆ ತಿರುಗಲು | ಧರಣಿಸುತೆಯನು ಕಾಣದೆಲೆ ತಾ ನರರ ಪರಿಯಲಿ ಹಂಬಲಿಸಿದನು 4 ವನಜಾಕ್ಷಿ ವೈದೇಹಿಯ ಪುಡುಕುತ ಪಂಪಾ ಸನಿಹಕ್ಕೈತಂದು ವಾಲಿಯ ಸಂಹರಿಸ್ಯವನ ಅನುಜ ಸುಗ್ರೀವನಿಗೆ ಹರುಷದಿ ವಿನುತ ವಾನರ ರಾಜ್ಯದೊಡೆತನ ವನು ಕರುಣಿಸಿದ ಬಳಿಕ ಜಾನಕಿ ಯನು ಪುಡುಕೆ ಕಳುಹಿದನು ಕಪಿಗಳ 5 ಸ್ವಾಮಿಯ ಸ್ತುತಿಗೈಯುತ ಶ್ರೀ ಹನುಮಂತ ಆ ಮಹೋದದಿಯ ದಾಟುತ ಲಂಕೆಯ ಪೊಕ್ಕು ಭೂಮಿಜಾತೆಯ ಕಂಡು ರಾಮನ ಕ್ಷೇಮ ವಾರ್ತೆಯ ತಿಳುಹಿ ಬಹುಜನ ತಾಮಸರ ಸದೆಬಡಿದು ರಾವಣ ನಾ ಮಹಾ ನಗರಿಯನು ದಹಿಸಿದ 6 ಮರಳಿ ರಾಮನ ಬಳಿಗೆ ಬೇಗದಿ ಬಂದು ಮರುತ ಸುತನು ರಾಮಗೆ ಸೀತೆಯ ಕ್ಷೇಮ ವರುಹಿ ಚೂಡಾಮಣಿಯ ನೀಡಲು ಕರದಿ ಕೈಕೊಂಡದನು ನೋಡುತ ನರರ ಪರಿಯಲಿ ಹರುಷಬಾಷ್ಪವ ಸುರಿಸಿದನು ಶ್ರೀ ಕರಿಗಿರೀಶನು 7
--------------
ವರಾವಾಣಿರಾಮರಾಯದಾಸರು
ಲಾವಣಿ ಖೋಡಿಮನಸು ಇದು ಓಡಿ ಹೋಗುತದಬೇಡೆಂದರು ಕೇಳದು ಹರಿಯೆಜೋಡಿಸಿ ಕೈಗಳ ಬೇಡಿಕೊಂಬೆ ದಯಮಾಡಿಹಿಡಿದು ಕೊಡು ನರಹರಿಯೆ ಪ ಗಾಡಿಕಾರ ನಿನ್ನ ಮೋಡಿಯ ಮೂರ್ತಿಯಕೂಡಿಸಿ ಪೂಜಿಸಲಘ ಹರಿಯೆದೂಡುತ ಹೃದಯದ ಗೂಡಿನೊಳಗೆ ಸ್ಥಿರ ಮಾಡಲು ಹದವನು ನಾನರಿಯೆನೋಡಿಂದ್ರಿಯಗಳ ತೀಡಬಲ್ಲೆ ಮನತೀಡುವ ಯತ್ನವು ಬರೆಬರೆಯೆಬೇಡಬೇಡವೆಂದಾಡುವೆನೆ ನಿನ್ನನೋಡುವುದೆಂತೈ ಜಗದೊರೆಯೆಕೋಡಗನಂತಿದು ಕಿಡಿಗೇಡಿ ಜಿಗಿದಾಡಿ ಪೋಗುವುದು ತ್ವರೆಮಾಡಿಕೂಡಿಸದದು ಬಹುಕಾಡಿ ದಿಟಿಸ್ಯಾಡಿ ನೋಡಲದು ಅಡನಾಡಿಕಾಡಿಕಾಡಿ ಬಲು ಪೀಡಿಸುತಿರುವದುಕಾಡುವುದೇನಿದು ಈ ಪರಿಯಾಜೋಡಿಸಿ ಕೈಗಳ 1 ತುಣುಕು ತುಣುಕು ಮನಸು ಇದು ಕ್ಷಣದೊಳು ಹಿಡಿವುದುತಿಣಿಕಿ ತಿಣಿಕಿ ಗಡ ಇದನ್ಹಿಡಿಯೆ ಹೆಣಗಲ್ಯಾತಕೆಂದು ಗೊಣಗುತಿಹರುಜನ ಗುಣ ಗೊತ್ತಿತ್ತಿಲ್ಲಿದೆ ಗುಣ ಖಣಿಯೆಗುಣರಹಿತನೆ ನಿನ್ನ ಗುಣ ನಾಮಂಗಳನೆಣಿಸುತೆ ನಾಲಗೆ ತಾದಣಿಯೆ ಟೊಣೆದು ನಿಮ್ಮನು ಕ್ಷಣಕ್ಷಣಕೊಂದುಕಣಕೆ ಹಾರುವುದು ಸುರಧರಣಿಯೆಇಣಚಿಹಾಂಗೆ ಚಪಲವೋಧಣಿಯೆಅಣಕಿಸಿದ್ಹಾಂಗ ಕುಣಿಕುಣಿಯೆಬಣಗು ಜನರು ನಮಗದು ಹೊಣಿಯೆಒಣ ಮಾತಿದು ಕೇಳ್ ನಿರ್ಗುಣಿಯೆಮಣಿಯದು ದಣಿಯದು ಹಣಿಯದು ತಣಿಯದುಟೊಣಿಯಲು ನಿನ್ನದು ಅದರಣಿಯೆ 2 ಸ್ಪಷ್ಟ ಹೇಳುವೆನು ಚೇಷ್ಟೆಗಳದರದುಯ ಥೇಷ್ಟವಾಗಿ ಕಣಾ ಕಣಾಶಿಷ್ಯರನೆಲ್ಲಾ ಭ್ರಷ್ಟ ಮಾಡುವುದು ದೃಷ್ಟಿ ಇಂದೊಂದೇ ಕಾರಣಎಷ್ಟು ಮಾತ್ರಕಿವರಿಷ್ಟ ನಡೆಸದಿಂದಿಷ್ಟೇ ಇದರದು ಧೋರಣಾಕಷ್ಟದಿ ಹಿಡಿದಿಟ್ಟ ಅಷ್ಟು ಇಂದಿಯಕಿದೆದುಷ್ಟರುಪದೇಶದ ಪ್ರೇರಣಾನಷ್ಟಮಾಡೋ ಈ ಚೇಷ್ಟೆಗುಣ ಸುಪುಷ್ಟ ಮತಿಯ ಕೊಡೊ ಪೂರಣಮುಷ್ಠಿಯೊಳಗಿಸೊ ತನುಹರಣಸೃಷ್ಟಿಸ್ಥಿತಿಲಯ ಕಾರಣಸೃಷ್ಟಿಯೊಳಗೆ ಉತ್ಕøಷ್ಟ ಗದುಗಿನಶ್ರೇಷ್ಠ ವೀರನಾರಾಯಣ 3
--------------
ವೀರನಾರಾಯಣ