ಒಟ್ಟು 43 ಕಡೆಗಳಲ್ಲಿ , 22 ದಾಸರು , 41 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾಮಕೆಣೆ ಕಾಣೆ ಮುಕುಂದನ ಪ ಶ್ರೀ ಮನೋರಮ ಸುರಸ್ತೋಮವಿನುತ ನಾಮ ಕಾಮಿತಪ್ರದ ನಾಮ ಮುಕುಂದನ 1 ಕೆಟ್ಟ ಕಿರಾತನು ಮುಟ್ಟಿ ಭಜಿಸಿ ತಾನು ಉ- ತ್ಕøಷ್ಟ ಮುನಿಯಾದನು ಮುಕುಂದನ 2 ಘೋರ ನಾರಕಿಗಳು ನಾರಾಯಣನೆಂದು ಸೂರೆಗೊಂಡರು ಸ್ವರ್ಗವ ಮುಕುಂದನ 3 ನಾರಣ ಬಾರೆಂದು ಚೀರಲು ಅಜಾಮಿಳ ಸೇರಿದನಾಪುವರ್ಗವ ಮುಕುಂದನ 4 ಲಕ್ಷ್ಮೀಕಾಂತನ ನಾಮೋಚ್ಚಾರದಿ ದ್ರೌಪದಿ ರಕ್ಷಿತೆಯಾದಳಿಂದು ಮುಕುಂದನ 5
--------------
ಲಕ್ಷ್ಮೀನಾರಯಣರಾಯರು
ನಾರಾಯಣಯೆಂಬೊ ನಾಮವನು ನೆನೆದರೆ ಹಾರಿ ಹೋಹುದು ಜನ್ಮಜನ್ಮದ ಪಾಪಗಳು ಮುಕ್ತಿದೋರಿಸು ಮುರಾರಿ ಪ. ಸಕಲವೇದ ಪುರಾಣ ಶಾಸ್ತ್ರಗಳ ತಿಳಿದೋದಿ ಭಕ್ತಿಯಲಿ ತಾಯತಂದೆಯ ಚಿತ್ತವಿಡಿದವರ ಸುಕುಮಾರನೆನಿಸಿಕೊಂಡು ಪ್ರಕೃತಿಯಲಿ ಹೋಮಕ್ಕೋಸ್ಕರ ಸಮಿದೆ ತರಹೋಗಿ ದುಷ್ಕøತ್ಯದ ಫಲದಿಂದ ಅಂತ್ಯಜಳನು ಕಂಡು ಕಾ- ಅರಿತರಿಯದೆ 1 ನಿಲ್ಲು ನಿಲ್ಲೆಲೆ ಕಾಂತೆ ನಿನಗೊಲಿದೆ ನೀನಾರು ಸೊಲ್ಲಿಸೆನ್ನೊಡನೆ ಸತಿಯರ ಕುಲಕೆ ಕಟ್ಟಾಣಿ ಹುಲ್ಲೆನೋಟದ ಭಾವಕಿ ಸಲ್ಲಿಲಿತ ಗಾತ್ರೆ ಸೊಕ್ಕಾನೆ ಮೆಲ್ಲಡಿಯವಳೆ ಮಲ್ಲಿಗೆಗಂಧಿ ಮದನನ ಕೈಯ ಮಸೆದಲಗೆ ಸೆರಗ ಪಿಡಿದ 2 ವಿಪ್ರ ಕೇಳು ನಾವು ಕುಲಹೀನರೆಮ್ಮನೆಯ ಹೊಲಸಿನ ಮಾಂಸ ಗೋವಿನ ಚರ್ಮದ್ಹಾಸಿಕೆಯು ಹಿಂಡು ಬಲು ಘೋರ ಎನಿಸಿಪ್ಪುದು ಬಲೆಗೆ ಸಿಕ್ಕಿದ ಪಕ್ಷಿ ಬೇಂಟೆಯವಗಲ್ಲದೆ ಕುಲವ ಕೂಡುವದೆ ಕಾಮಿನಿ ಕೇಳು ನಿನ್ನೊಡನೆ ಛಲವೊಂದೆ ಎನಗೆ ಎಂದ3 ವ್ಯರ್ಥ ಎನ್ನೊಡನೆ ಮಾತ್ಯಾಕೆಲೊ ವಿಪ್ರ ಚಿತ್ತವೆನ್ನಲ್ಲಿ ಇದ್ದರೆ ಹೋಗಿ ನೀ ಎನ್ನ ನಿನಗೊಲಿವೆನೆಂ[ದಳು] ಅತ್ತ ಕಾಮಿನಿಯ ಒಡಗೂಡಿ ಆಕೆಯ ಪಿತನ ಹತ್ತಿರಕೆ ಹೋಗಿ ಕೇಳಿದರಾತನಿಂತೆಂದ ಇಂಥ ಮೊತ್ತಕೊಳಗಾಗದಿರೊ 4 ಆಗದಾಗದು ಎನ್ನ ಕುಲಬಂಧು ಬಳಗವÀನು ನೀಗಿ ನಿಮ್ಮೊಡನೆ ಕೂಡುವೆನೆಂಬ ಮತವೆನಗೆ ನಾಗಭೂಷಣನ ಪಣೆಗಣ್ಣಿಂದ [ಲುರಿದನ] ಬಾಣತಾಗಿತೆನ್ನೆದೆಯನೆಂದ ಕೂಗಿ ಹೇಳಿದೆ ನಿನ್ನ ಕುಲವಳಿಯದಿರೆಂದು ಹೋಗಿ ಕೂಡೊ ಹೆತ್ತ ತಾಯಿತಂದೆಗಳ ಅದು ಆಗದಿದ್ದರೆ ಆಚೆ ಮನೆಯೊಳಗೆ ನೀವಿಬ್ಬರಲ್ಲಿರಿ ಹೋಗ್ಯೆಂದನು 5 ಹಾಲಂತ ಕುಲವ ನೀರೊಳಗದ್ದಿಪೂರ್ವದ ಶೀಲವನಳಿದು ಸತಿಯೊಡಗೂಡಿ ತಾನು ಚಾಂ- ಡಾಲತಿಗೆ ಹತ್ತುಮಕ್ಕಳ ಪಡೆದು ತಾನವರ ಲೀಲೆಯನು ನೋಡಿ ಹಿಗ್ಗಿ ಆಲಂಬನದಲಿ ಅಜಾಮಿಳನು ಇರುತಿರಲಾಗ ಕಾಲ ಬಂದೊದಗಿ ಕರೆಯಿರೊ ಪಾತಕಿಯನೆಂದು ಯಮನಾಳುಗಳು ಇಳಿದರಾಗ 6 ಎಡೆಗೈಯ ಪಾಶಗಳು ಹಿಡಿದ ಚಮ್ಮಟಿಗಳು ಒಡನೊಡನೆ ಚವುರಿಗಳು ವಜ್ರದ ಮೋತಿಯ [ಕಾಗಡಿ] ಘುಡು‌ಘುಡಿಸುತಲಿ ನಿಂತರು ಕಡುಹಸುಳೆ ಕಂದನಿವನೆಷ್ಟು ಅಂಜುವನೆಂದು ಗಡಗಡನೆ ನಡುಗಿ ಕಂಗೆಟ್ಟು ಅಜಾಮಿಳ ತಾನು ಲಾಲಿಸಿದ ಸ್ವಾಮಿ 7 ಮರಣಕಾಲದಿ ಶ್ರೀಹರಿಯೆಂಬ ನಾಮವನು ಹರಿವುದಾಕ್ಷಣದಲ್ಲಿ ಕರುಣದಿಂದಜಮಿಳನ ಕರೆತನ್ನಿರಿಲ್ಲಿಗೆಂದ ಉರದೊಳೊಪ್ಪುವ ತುಳಸಿದಂಡೆ ಪೀತಾಂ- ಬರವು ಗದೆ ಶಂಖ ಚಕ್ರ ದ್ವಾದಶನಾಮವನು ಧರಿಸಿ ಕರವೆತ್ತಿ ಅಂಜ ಬ್ಯಾಡೆಲೊ ಎಂದು ಹರಿದಾಸರೈ ತಂದರು 8 ಪುಂಡರೀಕಾಕ್ಷನ ಭೃತ್ಯನ ಭಾಧಿಸುವ ಲಂಡರಿವರ್ಯಾರು ನೂಕಿ ನೂಕಿರೊ ಎಂದು ಯಮನ ದಂಡವನು ಮುರಿದು ಬಿಸಾಡಿ ನಿಮ್ಮಸುವ ಹಿಂಡುವೆವು ಎಂದರಾಗ ಕಂಡ ಹರಿದೂತರಿಗೆ ಯಮನಾಳುಗಳೆರಗಿ ಭೂ- ಮಂಡಲದೊಳಗೆ ಎಮ್ಮೊಡೆಯ ಯಮಧರ್ಮನ ಉದ್ದಂಡರಹುದೆಂದರಾಗ 9 ತಂದೆ ಕೇಳೆಮ್ಮ ಬಿನ್ನಪವ ಲಾಲಿಸಿ ನೀವು ಒಂದು ದಿನ ಹರಿಯೆಂಬ ಧ್ಯಾನವನರಿಯನು ನಾವು ಬಂದೆಳೆಯಲಾತ್ಮಜನ ನಾರಗಾ ಎನಲು ಕುಂದಿತೆ ಇವನ ಪಾಪ ಹಂದಿಕುರಿಗಳಿರ ನಿಮಗಿಷ್ಟು ಮಾತುಗಳ್ಯಾಕೆ ನಿಂದಿರದೆ ಹೋಗ್ಯೆಂದು ನೂಕಿ ಯಮನಾಳ್ಗಳನು ತಂದಪೆವು ದಿವ್ಯ ಪುಷ್ಪಕವನೆಂದೆನುತ ಬಂದರಾ ವೈಕುಂಠಕೆ 10 ಎದ್ದು ಅಜಾಮಿಳನು ಮೂರ್ಛೆಯ ತಿಳಿದು ಎಚ್ಚೆತ್ತು ಬಿದ್ದ ಕಾಯವನು ಭಾದಿಸಿದವರ್ಯಾರು ಉ- ಪದ್ರವನು ಬಿಡಿಸಿದ ದಿವ್ಯ ಸ್ವರೂಪ[ದ] ಸುಧಾತ್ಮರಾರು ಎಂದ ಮದ್ಯಪಾನವ ಮಾಳ್ಪ ಹೆಂಗಸಿನ ಒಡನಾಡಿ ಅದ್ದಿದೆ ನೂರೊಂದು ಕುಲವ ನರಕದೊಳೆಂದು ತಾನತಿ ಮರುಗುತ 11 ವಿಪ್ರ ಕುಲದಲ್ಲಿ ಪುಟ್ಟಿ ವೇದಶಾಸ್ತ್ರವನೋದಿ ಮುಪ್ಪಾದ ತಾಯಿ-ತಂದೆಯ ಬಿಟ್ಟು ಬುಧÀ ಜನರು ಮದನ ಬಾಧೆಗೆ ಸಿಲುಕಿ ದುಷ್ಟ ತಾಪವ ಪೊತ್ತೆ ಜನನಿಂದಕನಾದೆ ಅಪ್ರತಿಮ ಅನಂತಪಾತಕಿ ಭುವನದಲಿ ತಪ್ಪಲಿಲ್ಲವೆ ಪಣೆಯ ಬರದ ಬರಹಗಳು ಇನ್ನು ಭಾಪುರೆ ವಿಧಿ ಎಂದನು 12 ಇಷ್ಟು ದಿನ ಹರಿಯೆಂಬೊ ನಾಮವರಿಯೆನು ನಾನು ದುಷ್ಟಯವÀುದೂತರನು ಕಂಡು ಚಂಡಾಲತಿಗೆ ಪುಟ್ಟಿದ ಮಗನ ನಾರಗನೆಂದು ಕರೆದರೆ ಮುಟ್ಟಿದವೆ ನಿಮಗೆ ದೂರು ಇಷ್ಟು ಅವಗುಣಗಳನು ಎಣಿಸಲಿಲ್ಲವೆ ಸ್ವಾಮಿ ಎಷ್ಟು ಕರುಣಾಕರನೊ ಎಂದು ಸ್ನಾನವ ಮಾಡಿ ಬಿಟ್ಟು ತಾಪತ್ರಯವ ಭಯ ನಿವಾರಣ ಹರಿಯ ಗಟ್ಯಾಗಿ ಧ್ಯಾನಿಸಿದನು 13 ತನ್ನ ನಾಮವ ನೆನೆವ ಭಕ್ತರಾದವರೆಲ್ಲ ಧನ್ಯರಿವರಹುದೆಂದು ಜಗವರಿಯಬೇಕೆಂದು ಉನ್ನತವಾದ ಪುಷ್ಪಕವ ತಾ ಕಳುಹಿದ ಪನ್ನಗಾರಿವಾಹನ ಅನ್ಯಾಯ ಇವಗಿಲ್ಲ ಅವನಿಯೊಳಗುತ್ತಮನು ಎನ್ನಯ್ಯ ಏಳೆಂದು ಕೈಲಾಗವÀನು ಕೊಡಲು ಉನ್ನತವಾದ ಪುಷ್ಪಕವೇರಿ ಅಜಮಿಳನು ಹರಿಯ . ಸನ್ನಿಧಿಗೆ ನಡೆದ 14 ಜಲಜನಾಭನ ದಿವ್ಯನಾಮವನು ನೆನೆದರೆ ಕುಲಕೋಟಿ ದೋಷಗಳಿಲ್ಲ ಕುಂದುಗಿಂದುಗಳಿಲ್ಲ ಸಲುವರಲ್ಲೆಂದ ಯಮನು ನಲವಿಂದ ಹೆಳವನಕಟ್ಟೆ ಶ್ರೀ ವೆಂಕಟನ ನೆಲೆಯರಿತು ನೆನೆದವರ್ಗೆಮನ ಭಾದೆಗಳಿಲ್ಲ ಸಾಯುಜ್ಯ ಪದವೀವ ಬಲು ನಂಬಿ ಭಜಿಸಿ ಜನರು 15
--------------
ಹೆಳವನಕಟ್ಟೆ ಗಿರಿಯಮ್ಮ
ಪರಿಪಾಲಿಸೈ ವರ ವೆಂಕಟೇಶ ಚರಣಾಬ್ಜಯುಗ ಸ್ಮರಣೆಯನಿತ್ತು ಪ ದುರಿತಾಧಿದೂರ ಪರತತ್ವಸಾರ ಪರಮಾತ್ಮನೆ ಪೊರೆ ಎನ್ನುತ ಕರಿರಾಜ ಮೊರೆಯಿಡುತಿರಲು ನೀ ಗರುಡನ ಏರಿ ತ್ವರೆಯಿಂದ ಬಂದೆ ಪರಮ ದಯಾಕರ ಶ್ರೀನಿವಾಸ 1 ಪಾಪಿಷ್ಠನು ಅಜಾಮಿಳನೆಂದು ಕೋಪದಿ ಯಮ ಭಟರೆಳೆಯುತಿರೆ ತಾಪಕೆ ತನ್ನ ಪುತ್ರನ ಕೂಗುತಲಿರೆ ಕೃಪೆಯಿಂದ ನಿಜಪುರಕೆ ಒಯ್ದೆ 2 ಕನಕಾಚಲನಿಧಿ ಲಕ್ಷ್ಮೀಕಾಂತ ಪ್ರಣತಾರ್ಥಿಹರ ಆನಂದಕರ ವನಜಾಸನಾದಿ ಅಮಿಷಪಾಲ ಯೋಗಿ ಮನ ಕುಮುದಲೋಲ 3
--------------
ಲಕ್ಷ್ಮೀನಾರಯಣರಾಯರು
ಬ್ರಹ್ಮ ಲಿಖಿತವ ಮೀರಿ ಬಾಳ್ವರುಂಟುನಿರ್ಮಳದಿ ವೈಷ್ಣವರ ಮನಮುಟ್ಟಿ ಭಜಿಸಿ ಪ ಪಾಪಕೆ ಹೇಸದ ಶಬರ ಬಟ್ಟೆಯನು ಕಾದಿರಲುಆ ಪಥದಿ ಸಲೆ ವೈಷ್ಣವನು ಬಂದುಪಾಪವನು ತಪ್ಪಿಸಿ ರಾಮನಾಮವ ಕೊಡಲುಕಾಪಥಕ ವಾಲ್ಮೀಕಿ ಮುನಿಯಾಗಲಿಲ್ಲವೆ ? 1 ಪಂಚಮಹಾಪಾತಕವ ಮಾಡಿದ ಅಜಾಮಿಳನವಂಚಿಸಿ ಯಮದೂತರೆಳೆದೊಯ್ಯುತಿರಲುಕಿಂಚಿತ್ತು ಹರಿನಾಮವನಾಕಸ್ಮಿಕದಿ ನೆನೆಯೆಅಂಚಿಗೆಳೆದೊಯ್ದವರು ವಿಷ್ಣುದೂತರಲ್ಲವೆ ?2 ಬಾಲಕ ತನ್ನ ತಾಯ್ತಂದೆಯೊಳ್ ಮುನಿದು ಹಲವುಕಾಲ ವನದೊಳು ತಪವ ಮಾಡಲುನೀಲಮೇಘಶ್ಯಾಮ ಮೆಚ್ಚಿ ಬಾಲಕನಿಗೆಮೇಲಾದ ಪದವಿಯನು ಕೊಡಲಿಲ್ಲವೆ ? 3 ದಶಕಂಠನನುಜನು ಜಾನಕಿಯ ಬಿಡ ಹೇಳೆಅಸುರ ಕೋಪವ ತಾಳಿ ಹೊರಗಟ್ಟಿದಾಗಪೆಸರಗೊಳುತ ಬಂದು ಮೊರೆಹೊಕ್ಕ ವಿಭೀಷಣಗೆಶಶಿರವಿ ಪರ್ಯಂತ ಪಟ್ಟಗಟ್ಟಲಿಲ್ಲವೆ ? 4 ಕಲಿಗೆ ಬೆದರುವರಲ್ಲ ಕಾಲನ ಬಾಧೆಗಳಿಲ್ಲಛಲದಿ ನರಳಿ ಪುಟ್ಟುವ ಗಸಣೆಯಿಲ್ಲಒಲಿದು ಕಾಗಿನೆಲೆಯಾದಿಕೇಶವರಾಯನಸಲೆ ನಂಬಿದವರಿಗೆ ಮುಕುತಿಯಿತ್ತುದಿಲ್ಲವೆ ? 5
--------------
ಕನಕದಾಸ
ಭಜಿಸು ಮಾನಸ ತ್ರಿಜಗದರಸ ಪ. ನಿಜಭಜಕ ಜನಾಶ್ರಯ ಸುಜನಬಾಂಧವ ಅಜಮುಖಾರ್ಚಿತ ಪಾದಪಂಕಜ ಅಜಾಮಿಳವರದನಂಘ್ರಿಯ ಅ.ಪ. ಪವನನಂದನ ಸೇವ್ಯನ ಪದ್ಮಾಕ್ಷನ ಪಾವನಗುಣಶೀಲನ ಪರಮಾತ್ಮನ ಪತಿತಪಾವನ ನಾಮನ ಅಪಾರ ಮಹಿಮನ ಸುರನರೋರುಗ ನಮಿತ ಚರಣನ ತರಣಿವಂಶಾಬ್ಧಿ ಚಂದ್ರಮನ ಪುರವೈರಿ ಪ್ರಿಯಸಖನ ಪರಂತಪ ರಾಘವೇಂದ್ರನ 1 ವಿಕ್ರಮನ ಭಯನಾಶನ ಕಾಕುತ್ಸ್ಧಕುಲದೀಪನ ಸುಗುಣಾ ರಾಮನ ಪಾಕಾರಿವಿನುತ ಸಾಕೇತನಿಲಯನ ರಾಕೇಂದುನಿಭಾಸ್ಯ ಶ್ರೀ ವರನ ಲೋಕಮೋಹನ ಮೇಘ ಶ್ಯಾಮನ ವೈಕುಂಠಪತಿ ಲಕ್ಷ್ಮೀಶ ಕೇಶವನ2 ಪಾಲಲೋಚನನ ಪಂಕಜಾಸನ ಪಾಕಾರಿಮುಖ ನಮಿತ ಚರಣನ ಶ್ರೀಲೋಲ ಶೇಷಾಚಲನಿಲಯ ಶ್ರೀವೇಂಕಟನ3
--------------
ನಂಜನಗೂಡು ತಿರುಮಲಾಂಬಾ
ಮರದೆನೋ ಯನ್ನ ಶ್ರೀಹರಿಯೇ ಭಕ್ತರಿಸಿರಿಯೇ ಸ್ಮರಿಸುವರ ಧೊರಿಯೇ ಭಜಿಸವರನ ಬಿಡದಲೆ ಬಿರುದು ನಿನ್ನದೆಂದು ಪೇಳುತಿರೆ ಶೃತಿ ಪ ತಂದೆ ಕಂದನ ಭಾದಿಸಲು ಶ್ರೀಧರ ಬೇಗ ಬಂದೆನ್ನ ಸಲಹೆನ್ನಲು ಮಂದರಧರ ವಳಿ- ತೆಂದು ಸಂಧಿಸಿ ಕಾಲದ್ವಂದ್ವ ರೂಪವನೇ ಕರುಣಾಸಿಂಧು ಶ್ರೀಹರಿ 1 ಅಂದು ಅಜಾಮಿಳನು ಅಕ್ಷರದ್ವಯದಿಂದ ಮುಕ್ತನಾದನು ಕುಂದರದನ ದ್ರೌಪದಿ ಮಾನಕಾಯಿದಿ ಇಂದಿರೇಶನೆ ಮುದದಿ ಭವ ಬಂಧನದಿ ಬಲುನೊಂದೆನೋ ಇಂದು ವದನ 2 ಘನತರ ಶಿಲೆಯಾಗಿರಲು ಪಾದಸ್ಮರಿಸಲಾಕೆಯು ದುರಿತ ಕರಿವರದ 'ಹೆನ್ನೆಯ ಉರಗಶಯನಾಂಬುರುಹ ನಯನ 3
--------------
ಹೆನ್ನೆರಂಗದಾಸರು
ಮಾವಿನಕೆರೆ ಎಲ್ಲಿರುವೆ ಬಾರಂಗ ಬಾ ಮೋಹನಾಂಗ ಎಲ್ಲಿರುವೆ ನೀಲಾಂಗ ಮಾಂಗಿರಿರಂಗ ಪ ಇಲ್ಲಿರುವೆಯಾರಂಗ ಸಲ್ಲಲಿತ ರಂಗ ಮೆಲ್ಲನೇ ರಂಗ ಓ ಮುದ್ದುರಂಗಾ ಅ.ಪ ಅಲ್ಲಿ ನೋಡಿದರಿಲ್ಲ ಇಲ್ಲಿ ಕಾಣಿಸಲಿಲ್ಲ ಬಲ್ಲೆ ನಾನೀ ಚೆಲ್ಲ ವರದಾತನಲ್ಲ ಇಲ್ಲಿ ತಿಳಿಗೊಳವಿಲ್ಲ ಮಲ್ಲಿಗೆಯ ಹೂವಿಲ್ಲ ಇಲ್ಲಿರುವ ಧೃಢವಿಲ್ಲ ನೀ ಬರುವೆ ಅರಿವಿಲ್ಲ 1 ಗಜರಾಜ ಕರೆದನೆ ಅಜಾಮಿಳನು ಕೂಗಿದನೆ ಅಜನು ಬಾರೆಂದನೆ ಲೋಕವಂದಿತನೆ ರಜತಾದ್ರಿ ವಾಸನೆ ಪೂಜಿಸಲು ಕರೆದನೊ ಸುಜನ ವರದಾಯಕನೆ ವಿಜಯ ಪೂರಿತನೇ 2 ವನವನದಿ ಸಂಚರಿಸಿ ದನಿದನಿಯನನುಸರಿಸಿ ಮನದಿ ನೋವನನುಭವಿಸಿ ಕನಸೆಂದು ಭಾವಿಸಿ ಕನವರಿಪ ಯೆನ್ನೊಳಗೆ ಕನಿಕರವ ಸೂಸಿ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮುನಿಯುವರೇ ಕೃಷ್ಣಾ ಮುನಿಯುವರೆ ಪ ದಣಿಸಲಾಗದೊ ನಿನ್ನ ನೆನೆವ ಭಕುತರೊಳು ಅ.ಪ ಮುನಿಗಳು ಮನದೊಳು ಕ್ಷಣಬಿಡದಲೆ ನಿನ್ನ ದಣಿಸಿ ಕುಣಿಸುವರೊ ಮೌನದಿಂದಲಿ ನಾ ಮಣಿದು ಬೇಡುವೆ ಬರಿದೆ ಹಣಿದು ಬಿಸುಡುವರೆ ಕೆಣಕಿದವರ ನೀ ಕ್ಷಣದಿ ಕಾಪಾಡಿದೆ 1 ಬಲಿಯ ಯಾಚಿಸಿ ಭಕ್ತಿಬಲೆಗೆ ನೀ ಸಿಲುಕಿದೆ ಶಿಲೆಯನೊತ್ತಿ ಸುಶೀಲೆಯ ಪೊರೆದೆ ಜಲಧಿಶಯನಾ ನೀ ರಥಕೆ ಸಾರಥಿಯಾದೆ ಛಲವೇತಕೆನ್ನೊಳು ನೀನೆ ಗತಿ ಎಂದರೆ2 ಎಂಜಲಾಸೆಗೆ ಸೋತು ಶಬರಿಯ ಪೊರೆದೆ ಸಂಜೆ ಹಗಲೆನ್ನದೆ ಎಂಜಲ ಬಳಿದೆ ಅಂಜದೆ ಅಜಾಮಿಳಗೊಲಿದೆಯೋದೇವ ಅಂಜೆನೊ ಎಂದಿಗೂ ಕುಂಜರವರದಾ 3 ಶಪಥಮಾಡಿ ನಿನ್ನ ಪಂಥವ ಕೆಡಿಸಲು ಕುಪಿತನಾಗಲಿಲ್ಲ ಕುರುಪಿತಾಮಹನೊಳು ಆಪ್ತನಿಮಿತ್ತಬಾಂಧವನೆಂದು ನಿನ್ನ ಪ್ರಾಪ್ತಿಯ ಬೇಡಲು ಬಂದುದಕೆ ಈಗ 4 ಪರಿ ಅಂಕಿತ ಪೇಳದೆ ಬಿಂಕತನದಲಿ ಕಾಲವ ಕಳೆದೆ ಶಂಕರನುತ ಶ್ರೀ ವೇಂಕಟೇಶ ನಿನ್ನ ಕಿಂಕರನೆನಿಸೆನ್ನ ಸಂಕಟ ಹರಿಸೂ5
--------------
ಉರಗಾದ್ರಿವಾಸವಿಠಲದಾಸರು
ಯಾಕೆ ನಿರ್ದಯ ಮಾಡಿದೆ ರಂಗಯ್ಯ ನೀನ್ಯಾಕೆ ನಿರ್ದಯ ಮಾಡಿದೆ ಪ ವ್ಯಾಕುಲ ಪಡಲಾರೆ ನಿಮ್ಮ ಲೋಕವ ಸೇರಿಸು ಅ.ಪ ದುಷ್ಟರ ಮಧ್ಯದಲ್ಲಿ ನಾನಿರಲಾರೆ ಸೃಷ್ಟಿಗೀಶ್ವರನೆ ಕೇಳು ಮುಟ್ಟಿ ಭಜಸಿ ನಿಮ್ಮ ಪಾದಪದ್ಮದ ಭಕ್ತಿಯಿಟ್ಟೇನೆಂದರೆ ದುಷ್ಟ ಇಂದ್ರಿಯ ಬಿಡದೆನ್ನ 1 ಪಂಚೇಂದ್ರಿಯಗಳೆನ್ನ ಬಹುಬೇಗ ವಂಚನೆ ಮಾಡುತಿದೆ ಪಂಚಬಾಣನ ಪಿತ ಪರಮಪುರುಷ ರಂಗ ಅ ಕಿಂಚನಾದೆ ನಿನ್ನಂಘ್ರಿಯ ಸೇರಿಸು 2 ಸಂಸಾರವೆಂಬ ಸರ್ಪ ಕಚ್ಚಿ ವಿಷ ಕ್ಷಣದಲ್ಲಿ ತಲೆಗೇರಿತು ಪರಮ ಹಂಸರ ಸಂಗದೊಳಗೆಯಿರಿಸಿ ಎನಗೆ ಭರದಿಂದೇರಿದ ವಿಷ ತಿರುಗೆಸೋ ಶ್ರೀಹರಿ 3 ಸರ್ಪ ತುಂಬಿದ ಕೂಪದಿ ಬಿದ್ದಿಹೆನು ಎನ್ನಪ್ಪ ರಕ್ಷಿಸೊ ಬೇಗದಿ ಸರ್ಪಶಯನ ಶ್ರೀಅಪ್ರಮೇಯ ರಂಗ ಇನ್ನು ಕ್ಷಿಪ್ರದಿಂ ಮುಕ್ತಿಯ ಒಲಿದು ಪಾಲಿಸು ರಂಗ 4 ಅಮ್ಬುಜನಾಭನೆ ನಿಮ್ಮ ಪಾದದಧ್ಯಾನ ಒಂದು ನಿಮಿಷವಾದರು ಮಾಡಲೀಸದು 5 ಹಿಂದಿನ ಕರ್ಮಂಗಳು ಇಂದಿರೇಶ ನಿಂದಕರ ವಶವಾಯಿತು ಇಂದು ಧರ್ಮದಲಿರ್ದೆ ಬಂಧುಗಳ ವಶವಾಯ್ತು ಇನ್ನು ಬಂಧನವೇನಯ್ಯ ಮುಕ್ತ್ಯಾನಂದ ತೋರುವುದಕ್ಕೆ 6 ಎಂದಿಗಾದರೂ ಮುಕ್ತಿಯ ಕೊಡುವೆಯೆಂದಾನಂದ ಇಂದು ಈ ಸಂಸಾರ ಬಂಧನದೊಳಗೆ ನಾ ಒಂದು ನಿಮಿಷ ಜೀವಿಸಲಾರೆನು ರಂಗ 7 ಅಂದು ದ್ರೌಪದಿ ಧ್ರುವÀ ಗಜೇಂದ್ರನ ರಕ್ಷಿಸಲಿಲ್ಲವೆ ಬಂದು ಅಂಬರೀಷ ಅಜಾಮಿಳರ ಪ್ರಹ್ಲಾದನ ಕಂಬದಿಂದಲೆ ಬಂದು ಕಾಯ್ದ ಗೋವಿಂದ 8 ಭಕ್ತವತ್ಸಲನೆಂತೆಂಬೊ ಬಿರುದು ಈಗ ವ್ಯರ್ಥವಾಯಿತೆ ಶ್ರೀರಂಗ ಉತ್ತಮ ಗುರುಗಳು ಶ್ರೇಯೋನಿಧಿಗಳ ವಾಕ್ಯ ಸತ್ಯವ ಮಾಡಿ ಮುಕ್ತ್ಯಾನಂದ ಪಾಲಿಸು 9 ರಂಗನಾಥ ನೀ ಕೈ ಬಿಟ್ಟರೆ ಎನ್ನ ಲೋಕಮಾತೆ ಬಿಡುವಳೆ ಬೇಗ ಮುಕ್ತಿಪಥವ ಪಾಲಿಸುವಳು 10 ಮಾಡಬಾರದ ಮಾಡಿದೆ ಈ ಸಂಸಾರದೆ ನೋಡಬಾರದ ನೋಡಿದೆ ಆಡಬಾರದ ವಾರ್ತೆಗಳನಾಡಿದೆ ಇನ್ನು ಗಾಡನೆ ಮುಕ್ತಿಯ ನೀಡೊ ವೆಂಕಟರಮಣ 11
--------------
ಯದುಗಿರಿಯಮ್ಮ
ವೆಂಕಟರಮಣ ಮಾಂಪಾಹಿ ಸಂಕಟಹರಣ ಸರ್ವಲೋಕಕಾಧಾರ ಪ ಮತ್ಸ್ಯರೂಪವತಾಳಿ ವೇದಗಳ ರಕ್ಷಿಸಿದೆ ಮತ್ತೆ ಬೆಟ್ಟವ ಪೊತ್ತೆ ಕೂರ್ಮನಾಗಿ ಹೊತ್ತು ಭೂಮಿಯ ಪೊರೆದೆ ವರಾಹಾವತಾರದಲಿ ಬತ್ತಿ ಕಂಬದಿ ಬಂದೆ ನರಸಿಂಹನಾಗಿ ನೀ ಇತ್ತೆ ವರವನು ತುಳಿದು ಬಲಿಯು ನೀಡಲು ತಲೆಯ ವಟುರೂಪಿನಿಂದ ವೆಂಕಟರಮಣ ಮಾಂ ಪಾಹಿ 1 ಹೊತ್ತು ಪರಶುವ ಭುವಿಯ ಕ್ಷಾತ್ರಿಯರನೀ ಕೊಂದೆ ಮತ್ತೆ ರಾಮಾವತಾರದಲಿ ರಾವಣನ ಕೊಂದೆ ನಿತ್ತು ಕಾಪಾಡಿದೆಯೋ ಕೃಷ್ಣ ಪಾಂಡವರನ್ನು ಮತ್ತೆ ಬುದ್ದನರೂಪ ತಾಳಿ ಮೆರೆದೆ ತಾಳಿ ದರುಳ ದುರ್ಜನರನ್ನು ಮೆಟ್ಟಿ ಕುಟ್ಟಿದೆಯೋ ವೆಂಕಟರಮಣ ಮಾಂ ಪಾಹಿ 2 ಬೇಡಿದವರ ಇಷ್ಟಾರ್ಥಗಳನೀವ ಕಾಡಿದ ರಕ್ಕಸರ ಜೀವ ಕೊಳುವ ನೋಡಿ ದಯಮಾಡಿ ನೀಸುಜನರನು ಕಾವ ಆಡಿ ಅಡಗಿಸೋ ನೀನೇ ಮನದ ನೋವ ಗಾಢ ರಕ್ಷಿಸು ಕಡು ಬಾಡಿದೆ ಭಯದಲ್ಲಿ ವೆಂಕಟರಮಣ ಮಾಂ ಪಾಹಿ 3 ವರ ಅಜಾಮಿಳಗೆ ವರವಿತ್ತು ಸಲಹಿದೆಯೋ ಕರಿ ರಾಜ ಬರಲಿದಡೆ ಬಂದು ಕಾಯ್ದೆ ದುರುಳ ಕಾಳಿಂಗನನು ಮೆಟ್ಟಿಕುಣಿದಾಡಿದೆಯೋ ಧರಿಸಿ ಗೋವರ್ಧನವ ಕಾಯ್ದೆಗೋವಳರನ್ನು ವೆಂಕಟರಮಣ ಮಾಂ ಪಾಹಿ 4 ಇಳೆಯೊಳಗೆ ಮೂಡಲಗಿರಿವಾಸನಾಗಿ ನೆಲೆಯ ನರಿದು ಭಜಿಪರ ಪಾಪನಾಶ ಸೂರ್ಯ ಕೋಟಿ ಪ್ರಕಾಶ ಕಲಿಯುಗದೊಳು ನಿನ್ನ ಮಹಿಮೆ ವಿಶೇಷ ಸಲಹೋ ಪಾತಳ ಸೇವೆಯ ಗೆಣಸಿನ ಕುಣಿ ವೆಂಕಟರಮಣ ಮಾಂ ಪಾಹಿ 5
--------------
ಕವಿ ಪರಮದೇವದಾಸರು
ಏನೆಂತೊಲಿದೆ ಇಂತವರಂತೆ ಕೆಡುಬುದ್ಧಿ - ಎನ್ನೊಳಿಲ್ಲಗುಣ |ಹೀನರಲ್ಲದ ದೀನ ಜನರ ಪಾಲಿಪ ಬುದ್ಧಿ ನಿನ್ನೊಳಿಲ್ಲ ಪತರಳ ಪ್ರಹ್ಲಾದನಂದದಿ ನಿನ್ನಯರೂಪ ಕೆಡಿಸಲಿಲ್ಲನರನಂತೆ ತನ್ನ ಬಂಡಿಯ ಬೋವನ ಮಾಡಿ ಹೊಡಿಸಲಿಲ್ಲ ||ಸುರನದೀಸುತನಂತೆ ಪಣೆಯೊಳು ಬಾಣವ ಸಿಡಿಸಲಿಲ್ಲದೊರೆ ಅಂಬರೀಷನಂದದಿ ಈರೈದು ಜನ್ಮವ ಪಡಿಸಲಿಲ್ಲ 1ನಾರದನಂತೆ ಕಂಡವರ ಕೊಂಡೆಯವ ನಾ ಪೇಳಲಿಲ್ಲ |ಪರಾಶರನಂತೆ ನದಿಯೊಳಂಬಿಗ ಹೆಣ್ಣ ಕೊಡಲಿಲ್ಲ ||ಆ ರುಕುಮಾಂಗದನಂತೆ ಸುತನ ಕೊಲ್ಲಲು ಧೃಢಮಾಡಲಿಲ್ಲಮಾರುತನಂತೆ ನೀನುಣುತಿದ್ದ ಎಡೆಯ ಕೊಂಡೋಡಲಿಲ್ಲ 2ವಿದುರನಂತೆ ನನ್ನ ಸದನವ ಮುರಿದು ನಾ ಕುಣಿಯಲಿಲ್ಲಮದಕರಿಯಂತೆ ಮಕರಿಯ ಬಾಯೊಳು ಸಿಕ್ಕಿ ಒದರಲಿಲ್ಲ ||ಹೆದರದೆ ಬಲಿಯಂತೆ ಭೂಮಿಯ ಧಾರೆಯನೆರೆಯಲಿಲ್ಲಸದರ ಮಾತುಗಳಾಡಿ ಶಿಶುಪಾಲನಂತೆ ನಾ ಜರೆಯಲಿಲ್ಲ3ಸನಕಾದಿ ಮುನಿಯಂತೆಅನುದಿನ ಮನದೊಳು ಸ್ಮರಿಸಲಿಲ್ಲಇನಸುತ ಕಪಿಯಂತೆ ವಂಚಿಸಿ ವಾಲಿಯ ಕೊಲಿಸಲಿಲ್ಲ ||ಬಿನುಗು ಬೇಡತಿಯಂತೆ ಸವಿದುಂಡ ಹಣ್ಣ ನಾ ತಿನಿಸಲಿಲ್ಲಘನ ಅಜಾಮಿಳನಂತೆ ಸುತನ ನಾರಗನೆಂದು ಕರೆಯಲಿಲ್ಲ4ವರ ಶೌನಕನಂತೆನಿತ್ಯ ಸೂತನ ಕಥೆ ಕೇಳಲಿಲ್ಲಪಿರಿದು ತುಂಬುರುನಂತೆ ನಾಟ್ಯ - ಸಂಗೀತವ ಪೇಳಲಿಲ್ಲ ||ಉರಗಾಧಿಪತಿಯಂತೆ ಉದರದೊಳಿಟ್ಟು ನಾ ತೂಗಲಿಲ್ಲಪಿರಿದು ಕುಚೇಲನ ತೆರನಂತೆ ಅವಲಕ್ಕಿ ಈಯಲಿಲ್ಲ 5ಭೃಗುಮುನಿಯಂತೆ ಗರ್ವದಿ ನಿನ್ನ ಎದೆಯನು ಒದೆಯಲಿಲ್ಲಅಗಣಿತ ಮಹಿಮ ನೀನಹುದೆಂದು ಧ್ರುವನಂತೆ ಪೊಗಳಲಿಲ್ಲ ||ಖಗರಾಜನಂತೆ ನಿನ್ನನು ಪೊತ್ತು ಗಗನದಿ ತಿರುಗಲಿಲ್ಲಅಗಜೆಯರಸನಂತೆ ಮಸಣದಿ ರಾಮನ ಸ್ಮರಿಸಲಿಲ್ಲ 6ಅವಹಿತದಲಿ ವಿಭೀಷಣನಂತೆ ಅಣ್ಣನ ಕೊಲಿಸಲಿಲ್ಲಯುವತಿ ದ್ರೌಪದಿಯಂತೆ ಪತ್ರಶಾಕವನುಣಬಡಿಸಲಿಲ್ಲ ||ತವೆ ಪುಂಡಲೀಕನಂದದಿ ಇಟ್ಟಿಗೆಯ ಮೇಲೆ ನಿಲಿಸಲಿಲ್ಲ ದೇವಇವರಂತೆಪುರಂದರ ವಿಠಲ ನಿನ್ನಯ ಕೃಪೆಯೆನ್ನೊಳಿಲ್ಲ7ಅಂಕಿತದಲ್ಲೂ ಇವೆ.)
--------------
ಪುರಂದರದಾಸರು
ಜಯ ಪಾಂಡುರಂಗ - ನಾ ನಿನ್ನ ಮನಕೆ ಬಾರೆನೆ ಪನಾ ನಿನ್ನ ಮನಕೆ ಬಾರೆನೆ ಬಂದರೆ ಈ ಭವದಬಲೆಯೊಳು ಸಿಲುಕುವೆನೆ - ಜಯ ಪಾಂಡುರಂಗ ಅ.ಪಕೆಟ್ಟ ಕಿರಾತನ ಬೆಟ್ಟದಂಥ ಪಾಪವಸುಟ್ಟು ವಾಲ್ಮೀಕಿ ಮುನಿಯೆನಿಸಿದೆ 1ಅಂತ್ಯಸಮಯದಲ್ಲಿ ಅತಿ ಭ್ರಷ್ಟ ಅಜಾಮಿಳಗೆಅಂತಕನ ಬಾಧೆಯ ಬಿಡಿಸಿದೆಯೊ 2ತಂದೆ ತಾಯ್ಗಳನು ತೊರೆದ ಧ್ರುವನಿಗೆಚೆಂದದಿಂದ ಮಾರ್ಗವ ತೋರಿದೆಯೊ 3ಪಂಕಜನಾಭನೆ ಕುಬುಜೆಯ ಡೊಂಕ ತಿದ್ದಿಶಂಕೆಯಿಲ್ಲದೆ ಅವಳ ಕೂಡಿದೆಯೊ 4ತೊತ್ತಿನ ಮಗನ ಮನೆಯಕೂಡತೆಪಾಲನು ಸವಿದುಮತ್ತವಗೆ ಮುಕ್ತಿಯ ತೋರಿದೆಯೊ 5ಐದು ಮಂದಿಯ ಕೂಡ ಸರಸವು ದ್ರೌಪದಿಗೆಐದೆಲಜ್ಜೆಯ ಕಾಯ್ದೆಯೊ6ದೀನರನುದ್ಧರಿಪಪುರಂದರವಿಠಲಏನು ಕಾರಣ ನನ್ನ ಮರೆತೆಯೊ 7
--------------
ಪುರಂದರದಾಸರು
ದಯಮಾಡು ದಯಮಾಡು ಶ್ರೀನಿವಾಸಭವಭಯ ನಿವಾರಣ ಭಜಕ ಭಕ್ತರಘನಾಶ ಪ.ನೇಮವೆನ್ನಲಿಲ್ಲ ನಾಮದರಿಕೆಯಿಲ್ಲನಾ ಮಹಾಪಾಪಿಯು ಸ್ವಾಮಿ ನೀನೊಲಿದು ಗಡ 1ಸದ್ಧರ್ಮ ಸರಕಿಲ್ಲ ಶುದ್ಧ ಬುದ್ಧಿಯಿಲ್ಲಉದ್ಧರಿಸೆನ್ನನಿರುದ್ಧಹರಿಕರುಣಿ2ಸತ್ಕುಲ ಹೊಂದೇನು ಸತ್ಕರ್ಮ ಮಾರ್ಗಿಲ್ಲಭಕ್ತರಕ್ಷಕ ಪಾಪಮುಕ್ತ ದೇವರ ದೇವ 3ಅವಗುಣದೆಣಿಕೆಯ ವಿವರ ನೋಡದೆ ಅಯ್ಯಜವನ ಬಲೆಯನು ತಪ್ಪಿಸುವ ಸರೀಸೃಪಶಯ್ಯ4ಅಜಾಮಿಳವ್ಯಾಧಆಗಜಅಹಲ್ಯೋದ್ಧರನಿಜ ಪ್ರಸನ್ವೆಂಕಟೇಶಸುಜನಪರಿಪೋಷ5
--------------
ಪ್ರಸನ್ನವೆಂಕಟದಾಸರು
ನಂಬೊ ನಂಬೊ ಹರಿಪದವ ನಂಬೊ ಪ.ಮಾತುಳನಚಂದನಪ್ರೀತಿಲಿ ಕೊಟ್ಟ ಮನಸೋತವಳಂಗಪುನೀತಮಾಡಿದನಂಘ್ರಿಯ1ಅಜಾಮಿಳ ಸಹಜ ತನುಜನ ಕರೆಯಲಾಗಿನಿಜಭಟರಟ್ಟಿದ ಸುಜನೇಶನಂಘ್ರಿಯ 2ನಂಬಿದರವಗುಣಕುಂದನೋಡದೆಹೊರೆವತಂದೆ ಪ್ರಸನ್ನವೆಂಕಟೇಶನಂಘ್ರಿಯ 3
--------------
ಪ್ರಸನ್ನವೆಂಕಟದಾಸರು
ನಾರಾಯಣ ಪಂಜರನಾರಾಯಣಾಯ ನಮೊ ನಾರಾಯಣಾಯ ನಮೊನಾರಾಯಣಾಯ ನಮೊ ನಾರಾಯಣನಾರದರ ಮುಖದಿಂದ ನರಕಸ್ಥರೆಬ್ಬಿಸಿದೆನಾರಾಯಣಾಯ ನಮೊ ನಾರಾಯಣ ಪ.ಮತ್ತಕರಿಯವಸಾನಕಂಜಿ ಹರಿಯೆ ನೀ ಕಾಯ್ದೆ *ಭಕ್ತ ಪ್ರಹ್ಲಾದನೇಕಾಂಗ ನಿಷ್ಠೆಗೆ ಒಲಿದೆ 1ಪೃಥುವಿಗಳ್ಳನನಿರಿದು ಸತಿಯನುದ್ಧರಿಸಿದೆಪೃಥುಚಕ್ರವರ್ತಿಗೆ ಪ್ರತ್ಯಕ್ಷನಾಗ್ಯೊಲಿದೆ2ಶೂಲಿಯನು ಬೆಂಬತ್ತಿ ಸುಡುವೆನೆಂಬನ ಸುಟ್ಟೆಶೀಲವಿಡಿದಂಬರೀಷನ ಮತವ ಗೆಲಿಸಿದೆಯೊ 3ಮಕರರೂಪದಿ ಸತ್ಯವ್ರತಗೆ ತತ್ವವನೊರೆದೆಮುಖದಿಶ್ರುತಿಪಿಡಿತಂದು ವಾರಿಜಾಸನಗಿತ್ತೆ4ಪುರುಹೂತಗಖಿಳ ಪರಮಾರ್ಥವನು ಅರುಹಿದೆಸುರಪನ್ನ ಭಯವಟ್ಟಿ ಧ್ರುವಗೆ ಧ್ರುವಪದವಿತ್ತ್ತ್ತೆ 5ಮಹಾಪಾಪನಿರತ ಅಜಾಮಿಳನಿಷ್ಟ ಕರಿಸಿದೆಮಹಿದಾಸನಾಗಿ ತಾಯಿಗೆ ತತ್ವವನು ಪೇಳ್ದೆ 6ಮುನಿ ಕಾಲಲೊದೆಯೆ ಎದ್ದು ಕರುಣಿಸಿದೆ ಕರುಣಾನಿಧಿಮುನಿವೆಂಗಳರೆಯಾಗೆ ಪದಸೋಂಕಿಸ್ಯೆತ್ತಿದೆಯೊ 7ಮಖವ ರಕ್ಷಿಸಿ ರಾಜಋಷಿಗಭೀಷ್ಟೆಯನಿತ್ತೆಮಕರಧ್ವಜಾರಿ ಧನು ಮುರಿದವನಿಜೇಶ8ಶುಭಕಪೀಶಗೆ ಅಭಯವರವಿತ್ತು ಕೈಪಿಡಿದೆಶುಭಕಂಠನಂಜಿಕೆಯ ಹನುಮ ಹೇಳಲು ಕಳೆದೆ 9ಶರಣು ಹೊಕ್ಕಿರೆ ವಿಭೀಷಣಗರಸುತನ ಕೊಟ್ಟೆಶರದಿ ರಾವಣನರಿದು ಸುರರ ಸಂಕಟ ಹರಿದೆ 10ಅನುಜನಗ್ನಿಗೆÉ ಧುಮುಕಲವಧಿ ಮೀರದೆ ಪೊರೆದೆಅನಿಮಿಷರ ನಿಕರಕತಿ ಆಹ್ಲಾದ ಬೆಳೆಯಿಸಿದೆ 11ಉರಿನುಂಗಿ ಗಿರಿನೆಗಹಿ ವ್ರಜವ ಪಾಲನೆ ಮಾಡ್ಡೆಉರಗನೆಳೆತಂದವನ ರಾಣಿಯರ ಸ್ತುತಿಗೊಲಿದೆ 12ಕ್ರತುನಾರಿಯರನ್ನ ಸವಿದುಂಡು ಸುಖವಿತ್ತೆಕ್ರತುಭೋಕ್ತø ಕ್ರತುಗಾತ್ರ ಕ್ರತುಪಾಲ ಕ್ರತುಶೀಲ13ಗೋಪ ಸ್ತ್ರೀಯರ ಕುಚದಿ ನ್ಯಸ್ತ ಚರಣಾಬ್ಜಯುಗಗೋಪೀ ಜನಜಾರನವನೀತದಧಿಚೋರ14ವಂಶಗಾಯನ ಪ್ರಿಯ ವಿಧುಕುಲೋದ್ಭವ ಕೃಷ್ಣವಂಶವರ್ಧಕಸುಜನವಂಶಮರ್ದಕ ಕುಜನ15ಅಕ್ರೂರವಂದ್ಯಕಂಸಾರಿಕುಬ್ಜಾರಮಣಆಕ್ರಂದಿಸಿದ ತಂದೆ ತಾಯಿಯರ ಭಯವಳಿದೆ 16ಅದಿತಿ ಕುಂಡಲದಾತ ಭಗದತ್ತವರದನೆಅಧಿಪತಿಗಳಧಿಪತಿಯೆ ಭೈಷ್ಮಿ ಸತ್ಯಾರಮಣ 17ಶಂಭುವಂದಿತಪಾದ ಸಾಂದೀಪೋದ್ಧವ ಪ್ರಿಯಶಂಬರಾರಿಯ ಜನಕ ಯಜÕಪೂಜಾಗ್ರಣಿಯೆ 18ಪಾಂಡವರ ಪ್ರಾಣ ದ್ರೌಪದಿ ಮಾನರಕ್ಷಕನೆಪೌಂಡ್ರಕಶೃಗಾಲಕೌರವ ಭೂಮಿ ಭಾರಹರ19ಅಭಿಮನ್ಯುನಾತ್ಮಜನ ಬಸುರೊಳಗೆ ಸಲಹಿದೆಯೊಅಭಯದಲಿ ಪಾಂಡವರ ಸಂತತಿಯ ಬೆಳೆಸಿದೆಯೊ 20ಗರುಡ ಗಂಧರ್ವಕಿನ್ನರಗೀತ ಸಂಪ್ರೀತಗರುವೆ ಲಕುಮಿಯ ಕೂಡ ಕ್ರೀಡಾದ್ರಿಯಲ್ಲಿರುವೆ 21ಶಂಖ ಚಕ್ರ ಗದಾಬ್ಜ ಶ್ರೀವತ್ಸ ಶೋಭಿತನೆಸಂಖ್ಯೆರಹಿತಾಭರಣ ಭೂಷಣಾವ್ಯಾಕೃತನೆ 22ಮೀನ ಕಶ್ಯಪ ಪೋತ್ರಿ ನೃಹರಿ ವಾಮನ ಭಾರ್ಗ್ವಮಾನವಪ ಕೃಷ್ಣಬುದ್ಧಕಲ್ಕಿ ಕಪಿಲಾತ್ರೇಯ23ಸ್ವಾಮಿ ತೀರ್ಥಾಂಬು ಅಂತರ್ಗಂಗಾಭಿಷಿಕ್ತಸ್ವಾಮಿ ಭೂವರಾಹ ವೈಕುಂಠನಾಥ ವಿಶ್ವೇಶ 24ಷಟ್ಕೋಟಿ ತೀರ್ಥಯುತಚರಣ ಶ್ರೀಭೂರಮಣಷಟ್ಕಮಲನಿಲಯ ಚಿನ್ಮಯ ಚಿದ್ಗುಣಾರ್ಣವನೆ 25ಭಕ್ತಾಭಿಮಾನಿ ಭವದೂರ ಭಕ್ತರ ಪ್ರಭುವೆಭಕ್ತವತ್ಸಲ ಕೃಪಾಂಬುಧಿಪರಾತ್ಪರಕೃಷ್ಣ26ವಸುಧೆವೈಕುಂಠ ಮಂದಿರವಾಸ ಶ್ರೀನಿವಾಸವಸುಪ್ರೀತ ವಸುಕರ್ತ ವಸುದಾತ ವಸುಪೂರ್ಣ 27ಆದಿನಾಥÀಪ್ರಮೇಯಾದಿ ಪುರುಷೋತ್ತಮನೆಆದಿಮಧ್ಯಾಂತ ರಹಿತಾದ್ಯಮೂರುತಿ ವಿಷ್ಣು 28ಬದುಕಿಪ್ಯಾದರೆ ನಿನ್ನ ಹೊಗಳಿಕೆಲಿ ಬದುಕಿಸೈಬುಧರ ಸಂಗತಿ ಕೊಟ್ಟು ಮನ್ನಿಸೆನ್ನನು ತಂದೆ 29ಕಿವಿಯಲ್ಲಿ ಮುಖದಲ್ಲಿ ನಾಮಾಮೃತವÀ ತುಂಬುಕವಲಾಗದೆ ಮನೋಳಿ ಮಿಗೆ ಪದಾಬ್ಜವ ತೋರು 30ಭವಭವದಿ ತೊಳತೊಳಲಿ ಬಳಬಳಲಿ ಬಲುದಣಿದೆಭವವಿರಿಂಚ್ಯಾದಿ ಕರಿಗಭಯದನೆ ನೀ ಸಲಹು31ನೀ ತಾಯಿ ನೀ ತಂದೆ ನೀ ಬಂಧು ನೀ ಬಳಗನೀತಿಗಳನರಿಯೆ ನಿನ್ನಯ ನಾಮವೆ ಗತಿಯು 32ತನು ನೆಚ್ಚಿಕಿಲ್ಲ ಚಿತ್ತದ ಗತಿಯು ನೀಟಿಲ್ಲತನಯತರುಣಿ ಕೊನೆಯ ಸಂಗತಿಗೆ ಆರಿಲ್ಲ33ದೋಷಗಳನರಸದೆನ್ನನು ಸಾಕು ಸಾಕಯ್ಯದಾಸಪಾಲಕ ದೇವ ಡಿಂಗರರ ಸಂಜೀವ 34ನಿನ್ನ ಮೂರುತಿ ನೋಡಿ ನೋಡಿ ನೋಡಿ ನೋಡಿನಿನ್ನ ಬಿಂಬವನೆಂದು ಕಂಡು ಕೊಂಡಾಡುವೆನೊ 35ನಿನ್ನ ಮೈ ಬೆಮರ್ಹೊಳೆಯಲ್ಲೆನ್ನ ಮುಳುಗಿಸಿನಿನ್ನವ ನಾ ನಿನ್ನವರ ಕೈಲಿ ಕೊಡು ಗಡಗಡ 36ವಾರಿಯಲಿ ಸ್ಥಳದಲ್ಲಿ ಅಡವಿಲೆಲ್ಲೆಲ್ಲಿ ಕಾಯೊವಾರಾಹ ವಾಮನ ನೃಸಿಂಹ ಕೇಶವ ಸ್ವಾಮಿ 37ಸತ್ಕುಲೋದ್ಭವನಾದೆ ಸನ್ಮಾರ್ಗರಿಯಲಿಲ್ಲಸತ್ಕರ್ಮಗಳಿಗೆ ಬಹಿಷ್ಕøತನಾಗಿ ಬಾಳುತಿಹೆ 38ಒಂದು ಜಾವದ ತಪ್ಪನೆಂದೆಂದಿಗುಣಲಾರೆವಂದಿಸುವೆ ಸಾಷ್ಟಾಂಗತ್ರಾಹಿತ್ರಾಹಿಪಾಹಿತ್ರಾಹಿ39ಮಧ್ವೇಶ ಮಧ್ವಪ್ರಿಯ ಮಧ್ವಮತ ಪ್ರತಿಪಾಲಮಧ್ವಗುರು ಸ್ತುತ್ಯ ಮಧ್ವಾರ್ಚಿತ ಪದಾಬ್ಜಹರಿ40ಏನರಿಯೆನೇನರಿಯೆ ನೀನೆ ನೀಗೆಲೆಲೆಎನ್ನಘವ್ರಜ ಪ್ರಸನ್ನವೆಂಕಟ ಕೃಷ್ಣ 41
--------------
ಪ್ರಸನ್ನವೆಂಕಟದಾಸರು