ಒಟ್ಟು 45 ಕಡೆಗಳಲ್ಲಿ , 17 ದಾಸರು , 35 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಜಿಸಿ ಬದುಕಿರೋ _ ಭರದಿ ಸುಜನ ರೆನಿಸಿರೋ ಪ ಸುಜನ ರಾಜ ರಾಘವೇಂದ್ರರಾ ಅ.ಪ ಸುಜನ ಮಲಿನ ಕಳಿಯಲು ಒಲಿದು ಭವಿಯೊಳು _ ಬಂದ ಅಲವ ಮಹಿಮರ 1 ವೇಧ ದೂತರ _ ಪ್ರಹ್ಲಾದರೆಂಬರ ಸಾಧು ಸೇವ್ಯರ _ ದುರ್ಬೋಧೆ ಕಳಿವರ 2 ನಾರಸಿಂಹನ ಕರುಣ ಸೂರೆ ಪಡದಿಹ ಭಾರಿ ಭಕ್ತರ ದೇವರ್ಷಿ ಛಾತ್ರರ 3 ವ್ಯಾಸರಾಯರ _ ಶ್ರೀನಿವಾಸ ಯಜಕರ ಶೇಷದೇವರ ಆವೇಶ ಯುಕ್ತರ 4 ರಾಜ ಗುರುಗಳು ಕವಿರಾಜ ಮಾನ್ಯರು ನೈಜ ತೇಜರು ನಿವ್ರ್ಯಾಜ ಪ್ರೇಮರು 5 ಹರಿಯ ತರಿಸಿದಾ ಮುರಹರನ ಕುಣಿಸಿ ದಾ ಮುರವ ಹರಿಸಿದಾ ಧೊರೆಗೆ ಹರುಷ ಸುರಿಸಿದಾ 6 ಮಾನವಂತರಾ ಬಹುಜ್ಞಾನವಂತರಾ ದಾನ ಶೀಲರಾ ಅನುಮಾನ ರಹಿತರ 7 ಭ್ರಾಂತಿ ವಾದವ ವಿಶ್ರಾಂತಿ ಗೊಳಿಸಿದ ಶಾಂತಿ ಸಾಗರ ವೇದಾಂತ ಭಾಸ್ಕರ 8 ಶ್ರೀ ಸುಧೀಂದ್ರರ ವಿಶ್ವಾಸ ಪುತ್ರರ ದೋಷದೂರರ _ ಗುರು ದೋಷ ಕಳಿವರ 9 ಮಂತ್ರ ಸಿದ್ಧರು ಬಹು ಗ್ರಂಥ ಕರ್ತರು ತಂತ್ರ ಮಲ್ಲರು ಹರಿ ಮಂತ್ರಿ ಸಚಿವರು 10 ಭವ ರೋಗ ವೈದ್ಯರ ರಾಗ ರಹಿತರ ವೈರಾಗ್ಯ ಭಾಗ್ಯರ 11 ವಾದಿ ಭೀಕರ ಶ್ರೀವಿಜೀಂದ್ರ ಪೌತ್ರರ ನಿತ್ಯ ಮಿಂದು ಮೀಯ್ವರ 12 ತರ್ಕದಿಂದಲು ಹರಿಯು ಶಕ್ತಿಯಿಂದಲು ಯುಕ್ತಿಯಿಂದಲು ಒಲಿಯ ಭಕ್ತಿ ಇಲ್ಲದೆ 13 ಶ್ರೀಶ ದಾಸರ ಪದ ಪಾಂಶು ಧರಿಸದೆ ದೇಶ ತಿರುಗಲು ಬರಿಘಾಸಿ ಸಿದ್ಧವು 14 ಭಕ್ತರೊಲಿಯದೆ ನಿಜ ಭಕ್ತಿ ಸಿಕ್ಕದು ಪಕ್ವವಾಗದೆ ಭಕ್ತಿ ದಕ್ಕ ಶ್ರೀ ಹರಿ 15 ಇವರ ಮಂತ್ರವ ಭಕ್ತ ಜವದಿ ಜಪಿಸಲು ಅವಗೆ ಕರಗತ ಸಿದ್ಧ ಭವದಿ ವಾಂಛಿತ 16 ಶ್ರೀನಿವಾಸನ ಭಕ್ತ ಶ್ರೇಣಿ ಸೇರುವ 17 ಅಲ್ಪ ಸೇವೆಯೆ ಮೇರು ಕಲ್ಪ ವಾಹುದೊ ಕಾಕು ಸ್ವಲ್ಪ ತಟ್ಟದೊ 18 ನಿಖಿಳ ಯಾತ್ರೆಯಾ ಫಲ ಭಕ್ತ ಪಡೆಯುವ ಸಂದೇಹ ಸಲ್ಲದೊ 19 ಪುತ್ರ ನೀಡುವ ಸಂಪತ್ತು ದೊರಕಿಪ ವೃತ್ತಿ ಕಲ್ಪಿಪ ಆಪತ್ತು ಕಳಿಯುವ 20 ರಾಮ ನರಹರಿ ಕೃಷ್ಣ ಬಾದರಾಯಣ ದಿವಿಜ ಸ್ತೋಮ ವೆಲ್ಲವು 21 ಸೇರಿ ಇವರಿಗೆ ಕೀರ್ತಿ ಸೂರೆ ಕೊಡುತಿರೆ ಪಾರವಿಲ್ಲವು ಸತ್ಯ ಮಹಿಮೆ ಗೆಂಬುವೆ 22 ಕರ್ಣ ವಿದಿತರು ವಿಘ್ನ ಕಳಿವರು ಶ್ರೀ ಸತ್ಯ ಸಂಧರು 23 ಗುರುವು ಒಲಿದರೆ ತಾ ಹರಿಯು ಒಲಿಯುವ ಗುರುವು ಮುನಿದರೆ ಯಾರು ಪೊರೆವರಿಲ್ಲವೊ 24 ಶುದ್ಧ ಭಕ್ತಿಲಿ ಈ ಪದವ ಪಠಿಸಲು ಸಿಧ್ಧಿ ಸತ್ಯವು ಸರ್ವತ್ರ ವಿಜಯವು25 ಸಾರಿ ಸಾರುವೆ ಕೇಳಿ ಕ್ರೂರ ಕಲಿಯಲಿ ದೂರ ಸಾಧನೆ ಇವರ ಸೇರ ದಿರ್ಪಗೆ26 ಜಿಷ್ಣು ಸೂತ ಶ್ರೀ ಕೃಷ್ಣ ವಿಠಲನ ಶ್ರೇಷ್ಟ ಭಕ್ತರ ಶ್ರೀ ರಾಘವೇಂದ್ರರ27
--------------
ಕೃಷ್ಣವಿಠಲದಾಸರು
ಭೂಮಿಸುರರ ಘನ | ಸ್ತೋಮವಂದಿತ ಮಹಾ ಮಹಿಮಾ ಮಹಾಮಹಿಮ ಸಜ್ಜನ - ತತಿ - ಪ್ರೇಮಾ ಪ ಕಾಮಧೇನು ಸುಕಲ್ಪತರು ಚಿಂ - ತಾಮಣಿಯು ತಾನೆನಿಸಿ ಸರ್ವದ ಕಾಮಿತಾರ್ಥವನಿತ್ತು ಮೆರೆವನು ಈ ಮಹಿಯೊಳು ಸಾರ್ವಭೌಮನು ಅ.ಪ ಪ್ರಾಣತನಯ ವಿಷ್ವಕ್ಸೇನ ಶ್ರೀಹರಿ ಶಾಪದಿಂದ ಶಾಪದಿಂದ ಭೂತಳದಲಿ ಬಂದಾ ಮಾಣವಕ ಪ್ರಹ್ಲಾದನೆನಿಸಿ - ಪ್ರಾಣದೇವಾವೇಶ ಶೇಷನು ಕ್ಷೋಣಿಯೊಳು ಶಿರಿವ್ಯಾಸನೆನಿಸೀ ಮಾಣದಲೆ ಗುರುರಾಘವೇಂದ್ರನು 1 ಅಲವಬೋಧರ ಮತ - ಜಲಧಿಚಂದಿರನೆನಿಪನೀತಾ ನೆನಿಪನೀತ ಲೋಕದಿ ಬಹು ಖ್ಯಾತಾ ಲಲಿತ ವೃಂದಾವನದಿ ನಿಂತು ಹಲವು ಭಕುತರಭೀಷ್ಠಕಾರ್ಯವ ಸಲಿಸಿ ಸುಜನರ ಸಲಹೊಗೋಸುಗ ಸುಲಭತರನಾಗಿರುವ ಗುರುವರ 2 ಕಿಟಜಸರಿದ್ವರ - ತಟದಿ ಸಂತತ ತಾನಿರುವ ತಾನಿರುವ ಭಕ್ತರು ಕರೆಯೆ ಬರುವಾ ಧಿಟ ಸುಭಕ್ತರ ಬಿಡದೆ ತಾನು ಪ್ರ - ಕಟನಾಗಿ ಮಹಿಮೆ ತೋರುವ ಧಿಟ ಗುರು ಜಗನ್ನಾಥ ವಿಠಲನ ಭಟಜನಾಗ್ರಣಿ ಎನಿಸಿ ಮೆರೆವ 3
--------------
ಗುರುಜಗನ್ನಾಥದಾಸರು
ಮಲಗು ಮಲಗಯ್ಯ ಹನುಮ ಕಲಿಭಂಜನ ಭೀಮ ಜಲಧಿ ಅಲವಬೋಧನಾಮಾ ಜೋ ಜೋ ಪ ತ್ರೇತೆಯಲಿ ರಾಮದೂತನಾಗಿ ನೀ ಬಂದು ಭೀತಿಯಿಲ್ಲದೆ ಲಂಕೆಯ ದಹಿಸಿದೆಯೊ ಅಂದು ಸೀತೆಯಿತ್ತಂಥ ಚೂಡಾಮಣಿಯನು ತಂದು ಪ್ರೀತಿಪಡಿಸಿದೆ ರಾಮನ ನೀ ದಯಾಸಿಂಧು 1 ದ್ವಾಪರಾಂತದಲಿ ಭೀಮನಾಗಿ ನೀ ಬಂದೆ ಪಾಪಿ ಕೀಚಕ ದುಶ್ಶಾಸನಾದ್ಯರ ಕೊಂದೆ ಸಿರಿ ಕೃಷ್ಣನ ಪಾದಕೆರಗಿ ನಿಂದೆ ಭಾಪು ಭಾಪುರೆಂದೆನಿಸಿಕೊಂಡೆ ಅವನಿಂದೆ 2 ನಾನೆ ದೇವರೆಂಬ ಮತವನು ಹೆಮ್ಮೆಯಿಂದ ದಾನವರೀ ಕಲಿಯುಗದಲಿ ಪೊಗಳೆ ಮುದದಿಂದ ನೀನವತರಿಸಿ ಮಧ್ವಮುನಿ ಪೆಸರಿನಿಂದ ಹೀನ ಮತವ ಮುರಿದೆಯೊ ವಾಗ್ಭಾಣಗಳಿಂದ 3 ಏಕಾದ್ಯಶ ಕರ್ಮಗಳ ಶ್ರೀ ಹರಿಗರ್ಪಿಸಿ ಆತನನು ನೀ ಬಹು ಸಂತೋಷವನುಪಡಿಸಿ ಜಾತರಹಿತನಾಗೆನುತ ಆಶಿಷವ ವಹಿಸಿ ವಾತಸುತ ಕುಳಿತಿಹೆ ಯಂತ್ರೋದ್ಧಾರನೆನಿಸಿ 4 ಕಂಗಳನು ಮುಚ್ಚಿ ಜಪಮಾಲೆಯನು ತಿರುಗಿಸುತ ರಂಗೇಶವಿಠಲನ ತಾನದೊಳು ಸ್ಮರಿಸುತ ಹಿಂಗೇಕೆ ಕುಳಿತಿಹೆ ಮಲಗೇಳಯ್ಯ ದಾತ ತುಂಗ ವಿಕ್ರಮ ನೀನು ತ್ರಿಭುವನದಿ ಪ್ರಖ್ಯಾತ 5
--------------
ರಂಗೇಶವಿಠಲದಾಸರು
ಯತಿಗಳು ಟೀಕಾಚಾರ್ಯರು ಜಯರಾಯಾ ಜಯರಾಯಾ ಪ ದಯಕರ ಸಜ್ಜನಭಯಹರ ಗುರುವರ ಅ.ಪ ವಾಸವ ನೀ ವಸುಧೀಶನ ನಿಜ ಕೂಸೆನಿಸೀಪರಿ ದೇಶದಿ ಮೆರೆದೆ 1 ಸತಿಯಳ ತ್ಯಜಿಸಿ ಯತಿರೂಪ ಧರಿಸಿ ಪÀತಿತರ ಶಾಸ್ತ್ರವ ಹತಮಾಡಿದಿ ನೀ 2 ಸುಧಾದಿಗ್ರಂಥವ ಮುದದಲಿ ರಚಿಸಿ ಬುಧಜನಸ್ತೊಮಕೆ ಒದಗಿಸಿ ಕೊಟ್ಟಿ3 ಅಲವಬೋಧರ ಮತ ಬಲವತ್ತರಮಾಡಿ ಜಲಜನಾಭನ ಮನ ಒಲಿಸಿದ್ಯೊ ಜೀಯಾ 4 ಪ್ರಮಿತಜನಗಣನಮಿತ ಪದಾಂಬುಜ ಅಮಿತಮಹಿಮ ನಿನ್ನ ನಮಿಸುವೆ ದಿನದಿನ 5 ಯಾತಕೆ ಎನ್ನನು ಈ ತೆರನೋಡುವಿ ದಾತಗುರುಜಗನ್ನಾಥ ವಿಠಲ ಪ್ರೀಯ6
--------------
ಗುರುಜಗನ್ನಾಥದಾಸರು
ರಾಮನ ನೋಡಿರೈ ನಿಮ್ಮಯ ಕಾಮಿತ ಬೇಡಿರೈ ಪ ತಾಮರಸಸಖ ಸುವಾಂಶಾಬ್ಧಿಶರ ತ್ಸೋಮಾ ಕಮಲಧೀಮ ಅ.ಪ. ಅಜ ಜ್ಯೋತಿರ್ಮಯ ಜಾಬಾಲಿ ಮುನಿಯ ತಪವರಿದಾ ಕಾಮಿತ ನೆರೆದಾ ಭೂತಾಧಿಪನ ಭವನದೊಳರ್ಚನೆಗೊಂಡಾ ದೃತಕೋದಂಡಾ ಮಾತಂಗಾರಿ ವರೂಥಿಯ ಜನಕ ಮೇದಾಗಾರಕೆ ಪೋದಾ 1 ಸೌಭರಿ ಮುನಿಪಗೆ ಸೌಖ್ಯವ ಕರುಣಿಸಿ ಕೊಟ್ಟ ಜಗಕತಿಧಿಟ್ಟ ನಾಭಿಜನ್ಮನಿಹ ನಗವರ ಸ್ಥಾನಕೆ ಬಂದ ಶುಭಗುಣ ವೃಂದಾ ವೈಭವದಿಂದಲಯೋಧ್ಯಾ ನಗರದಿ ಮೆರೆದಾ ಕಾಮಿತವೆÀರೆದಾ ಸ್ವಾಭಿಮಾನದಲಿ ಸತಿಯಳಿಗಿತ್ತನು ವರವಾ ದೇವರ ದೇವಾ 2 ಜಾಂಬವಂತನಿಗೆ ಜಾನಕಿರಮಣನು ಇತ್ತ ತನ್ನಯಧ್ಯಾತ ಸಂಭ್ರಮದಲಿ ವೇದಗರ್ಭನೊಡನಾಡ್ದಾ ಮುಕ್ತಿಯ ನೀಡ್ದಾ ಕುಂಭೀಶ್ವರನ ಸುಕೋಶದಿ ಬಹುದಿನ ವಾಸ ವೆಸಗಿದನೀಶಾ ಒಲಿದಾ ಮೋದದಿ ನಲಿದ 3 ಅಲವಬೋಧಮುನಿ ಅತಿಮೋದದಲರ್ಚಿಸಿದ ಸಲೆ ಮೆಚ್ಚಿಸಿದ ಇಳೆಯೊಳು ಬಹು ಯತಿಕರ ಪೂಜಿತನಾದ ಲೀಲ ವಿನೊದಾ ಕಳೆದ ಮನದೊಳು ಪೊಳೆದ ಪ್ರೀಯ ಕವಿಜನಗೇಯ 4 ವಾರಿಧಿಬಂಧನ ವಾನರ ನಾಯಕರಾಳ ದೈತ್ಯರ ಸೀಳ್ದಾ ಪದಾಂಬುಜನೀತಾ ತ್ರಿಗುಣಾತೀತ ಆರಾಧಿಪರಿಗೆ ಅಖಿಳಾರ್ಥಗಳನು ಕೊಡುವಾ ದುರಿತವ ತಡೆವ ನೀರಜಾಕ್ಷ ಜಗನ್ನಾಥ ವಿಠ್ಠಲ ನಿಶ್ಚಿಂತಾ ಸೀತಾಕಾಂತ 5
--------------
ಜಗನ್ನಾಥದಾಸರು
ರಾಮನ ನೋಡಿರೋ ನಮ್ಮ ಸೀತಾರಾಮನ ನೋಡಿರೋ ಪ ರಾಮನನೋಡುತ ಪ್ರೇಮವ ಸುರಿಸುತ ನಾಮವ ನುಡಿಯುತ ನೇಮದಿ ಬೇಡುತ ಅ.ಪ ಅಜಭವಾದಿಗಳರಸನೀತಾ ಮತ್ತೆ ನಿಜಭಕುತರಿಗೆ ಮುಕ್ತಿಪ್ರದಾತ ತ್ಯಜಿಸಿ ದುಷ್ಟರಸಂಗ ಭಜಿಸಿ ಶಿಷ್ಯರ ಸಂಗ ಭುಜಗಭವವೆಂದರಿತು ನಿಜಸುಖಮೆಲ್ಲಲು 1 ಪಾದ್ಯ ಮತ್ತೆ ನಿತ್ಯಾನಿತ್ಯ ಜಗಸೃಜಿಪ ದೇವದೇವೇಶ ಮುಕ್ತಾಮುಕ್ತಾಶ್ರಯ ಸತ್ಯ ಪ್ರಾಣನ ಹೃಸ್ಥ ಉತ್ತಮೋತ್ತಮನೆಂದು ಎತ್ತಿಕೈಗಳ ಮುಗಿದು 2 ಭಕ್ತಿಯಿಂದಲಿ ನೋಡೆ ಸರ್ವಾಘಹರವೋ ಮತ್ತೆಪಾಡಲು ಕಾಮಿತ ಕರಗತವೊ ಹಸ್ತಿವರದನ ನೋಡೆ ಮತ್ತರಿಗೆ ಸಾಧ್ಯವೆ ವತ್ತುತ ಗೃಹಕೃತ್ಯ ಬೇಗ ಉತ್ತಮರಲ್ಲಿ 3 ಸುಲಭವಲ್ಲವೊ ಇಂಥಾ ಸಮಯ ಘಳಿಸಿ ನೋಡೀದವನೆ ಕೃತಾರ್ಥ ನಿತ್ಯ ಸಲಹುತ್ತಿರುವಂಥ ಅಲವ ಮಹಿಮಾರ್ಣವ ಲಲನೆ ಲಕ್ಷ್ಮಿಯ ನಾಳ್ವ 4 ಸರ್ವನಾಮಕ ನಿವನೂ ಮತ್ತೆ ಸರ್ವಪ್ರೇರಕ ಬಲಖ್ಯಾತ ನಿಹನೂ ಸರ್ವ ಸರ್ವಾಧಾರ ಸರ್ವೇಶ ಶಾಶ್ವತ ಸರ್ವಗುಣಗಣ ಪೂರ್ಣ ಸರ್ವವ್ಯಾಪ್ತನಾದ 5 ಆರಿಲ್ಲ ಸಮವಧಿಕ ಇವಗೇ ಮತ್ತೆ ಆರು ಕಾಣರು ನೆಲೆಯ ಸಾಕಲ್ಯ ಸತ್ಯ ಸಾರವಿಲ್ಲದ ಜಗದಿ ಸಾರನೊಬ್ಬನೆ ಇವನು ತೊರು ಪಾದಗಳೆಂದು ಸಾರಿಬೀಳುತ ಅಡ್ಡ 6 ಶರಣೆಂದ ವಿಭೀಷಣಗೆ ಪಟ್ಟ ಕಟ್ಟಿದನೂ ಕರುಣದಿಂದಲಿ ಶಬರಿಯ ಪೊರೆದವನು ದುರುಳ ಪಾಪಿಯ ದೊಡ್ಡ ಕವಿಯ ಮಾಡಿದ ಮಹಿಮ ಕರುಣ ಬೇಕಾದವರು 7
--------------
ಕೃಷ್ಣವಿಠಲದಾಸರು
ವರಗಿರಿವಾಸನ ಅರಮನೆ ಸೊಬಗನೆ ದೊರೆಗಳು ನೋಡಿ ಶಿರಗಳ ತೂಗುತ ಬೆರಗಾಗಿಪ. ಛÀತ್ರ ಚಾಮರ ರಾಜ ಪುತ್ರರು ಚಂದಾಗಿಅಚ್ಚಮುತ್ತುಗಳ ಅಲವುತಅಚ್ಚಮುತ್ತುಗಳ ಅಲವುತಬ್ಯಾಗ ಹೊಕ್ಕರು ಚಿತ್ತಜನೈಯ್ಯನÀ ಅರಮನೆಯೊಳಗೆ 1 ತಾರಾಪತಿಗಳಂತೆ ತೋರುತಲೈವರುಥೋರ ಮುತ್ತುಗಳ ಅಲವೂತಥೋರ ಮುತ್ತುಗಳ ಅಲವೂತ ಹೊಕ್ಕರುವೀರಕೃಷ್ಣಯ್ಯನ ಅರಮನೆ ಬ್ಯಾಗ2 ಪಚ್ಚದ ಪಾವಟಿಗೆ ರತ್ನ ಹಚ್ಚಿದ ಚೌಕಟ್ಟುಅಚ್ಚಮುತ್ತುಗಳ ಅಲವುತಅಚ್ಚಮುತ್ತುಗಳ ಅಲವುತ ಹೊಕ್ಕರುಚಿತ್ತಜನಯ್ಯನ ಅರಮನೆ ಬ್ಯಾಗ 3 ಪಕ್ಷಿ ವಾಹನನರಮನೆ ದಕ್ಷಿಣ ದ್ವಾರದಿಲಕ್ಷಣವುಳ್ಳ ವನಿತೆಯರುಲಕ್ಷಣವುಳ್ಳ ವನಿತೆಯರು ತೆರೆದ ಬಾಗಿಲೊಳು ನಕ್ಷತ್ರದಂತೆ ಹೊಳೆಯುತ4 ಎಡಬಲ ಶ್ರೀತುಳಸಿಗಿಡಗಳು ಅಲವುತ ಕಡಲಶಯನನ ಅರಮನೆ ಒಳಹೊಂದಿಕಡಲಶಯನನ ಅರಮನೆ ಒಳಗಿನ್ನುನಾರಿಯರು ನೆರೆದರು 5 ಗಂಧದ ಥಳಿ ಕೊಟ್ಟು ಚಂದುಳ್ಳ ಅಂಗಳಕಹಂದರಗಳ್ಹಾಕಿದ ಇಂದಿರೇಶನರಮನೆಇಂದಿರೇಶನ ಅರಮನೆಯೊಳಗೆಬಂದುನಾರಿಯರು ನೆರೆದರು 6 ಚಂದ್ರನಂತೊಪ್ಪುತ ಚಂದಾಗಿನಿಂತತಂದೆ ರಾಮೇಶನ ಅರಮನೆ ತಂದೆ ರಾಮೇಶನ ಅರಮನೆ ವೃಂದಾವನಕೆಹೊಂದಿ ನಾರಿಯರುನೆರೆದರು ಬೆರಗಾಗಿ 7
--------------
ಗಲಗಲಿಅವ್ವನವರು
ಶ್ರೀ ಜಯತೀರ್ಥ ಸ್ತೋತ್ರ ಯತಿಕುಲಮುಕುಟ ಶ್ರೀ ಜಯತೀರ್ಥ ಸದ್ಗುಣಗಣ ಭರಿತ ಅತಿಸದ್ಭಕುತಿಲಿ ನುತಿಪಜನರ ಸಂ - ತತ ಪಾಲಿಸುತಲಿ ಪೃಥಿವಿಲಿ ಮೆರೆವ ಪ ಶ್ರೀ ಮಧ್ವಮತ ವಾರಿಧಿನಿಜಸೋಮ ಅಗಣಿತಸನ್ಮಹಿಮ ಆಮಹಾಭಕ್ತಾರ್ತಿಹ ನಿಷ್ಕಾಮ ಈ ಮಹಿಸುರರನು ಪ್ರೇಮದಿ ಪಾಲಿಪ ಕಾಮಿತ ಫಲದ 1 ಮಧ್ವಮುನಿಗಳಗ್ರಂಥಕೆ ವ್ಯಾಖ್ಯಾನ ರಚಿಸಿದ ಸುಙÁ್ಞನ ವಿದ್ಯಾರಣ್ಯನ ಸದ್ವಾದÀದಿ ನಿಧನ ಗೈಸಿದಗುಣಪೂರ್ಣ ಅದ್ವೈತಾಟವಿ ದಗ್ಧಕೃತಾನಲ ಸದ್ವೈಷ್ಣವ ಹೃತ್ಪದ್ಮಸುನಿಲಯ 2 ಲಲಿತಾ ಮಂಗಳವೇಡಿಪÀ ರಘುನಾಥ ವನಿತಾಸಂಜಾತ ಮಳಖೇಡ ಕಾಗಿನಿ ತೀರನಿವಾಸ ಮಾಡಿಹ ಮೌನೀಶನಲವರದೇಶ ವಿಠಲನ ವಲಿಮೆಯಲಿ ಇಳಿಯೊಳು ಬೋಧಿಪ ಅಲವ ಬೋಧಾಪ್ತ 3
--------------
ವರದೇಶವಿಠಲ
ಶ್ರೀ ರಘೂತ್ತಮತೀರ್ಥರು ನೋಡಿದೆ ಗುರುಗಳ ನೋಡಿದೆ ಪ ನೋಡಿದೆನು ಗುರುಗಳ ಪಾದಾಬ್ಜವ ಪಾಡಿದೆನು ಸನ್ಮಹಿಮೆಗಳ ನಾ ಬೇಡಿದೆನು ಮನದಣಿಯೆ ವರಗಳ ಈಡು ಇಲ್ಲದೆ ಕೊಡುವ ಪ್ರಭುಗಳ ಅ.ಪ. ಪಂಚಕೃಷ್ಣಾರಣ್ಯಕ್ಷೇತ್ರ ಪಿನಾಕಿಯ ತೀರದಲ್ಲಿ ನಿಂತು ಮಿಂಚುತಿಹ ಕಾಷಾಯದಂಡ ಕಮಂಡಲವ ಧರಿಸುತ್ತ ಧರೆಯೊಳು ಪಂಚಬಾಣದ ಪಿತನ ಗುಣಗಳ ಅಂಚೆಯದಿ ಪೊಗಳುತ್ತ ಹರುಷದಿ ಸಂಚಿತಾಗಾಮಿಗಳ ಕಳೆದು ಪ್ರಪಂಚದಲಿ ಮೆರೆವಂಥ ಗುರುಗಳ 1 ಅಲವಬೋಧರ ಭಾಷ್ಯಟೀಕಾ ಭಾವವನು ಸುಜನರಿಗೆ ಬೋಧಿಸಿ ಕಲುಷಮತಗಿರಿ ಸಮುದ(ದಾ)ಯಂಗಳ ಕುಲಿಶದಂದಲಿ ಖಂಡಿಸುತಲಿ ಮೂಲರಾಮ ದಿಗ್ವಿಜಯರಾಮರ ಪಾದಕಮಲಕೆ ಭೃಂಗನೆನಿಸುತ ಶೀಲಭಕ್ತಿ ವಿರಕ್ತಿಮತಿಗಳ ಪಾಲಿಸುತ ಯತಿಮೌಳಿ ರತುನರ 2 ಕಾಮಧೇನು ಸುಕಲ್ಪತರು ಚಿಂತಾಮಣಿಯವೋಲ್ ಕಾಮಿತಾರ್ಥವ ಪ್ರೇಮದಲಿ ಬೀರುತ್ತ ಅಧ್ಯಾತ್ಮದಿ ತಾಪತ್ರಯ ಕಳೆಯುವ ಸ್ವಾಮಿ ಶ್ರೀಹರಿ ಶ್ರೀದವಿಠಲನ ದಾಸಾಗ್ರಣಿಯೆನಿಸಿ ಮರೆವರ ನೇಮದಿಂದಲಿ ಶ್ರೀ ರಘೂತ್ತಮ ಮೌನಿವರ್ಯರ ಕರುಣ ಬಯಸುತ 3
--------------
ಶ್ರೀದವಿಠಲರು
ಸಂಪ್ರದಾಯದ ಹಾಡುಗಳು ಕೋಲು ಹಾಡು ಆಕಾಶಕಭಿಮಾನಿ ಶ್ರೀಕಂಠ ವರಪುತ್ರಏಕದಂತನೆ ವಿಘ್ನೇಶ ಕೋಲೆಏಕದಂತನೆ ವಿಘ್ನೇಶ ನಿನ್ನ ಪದಏಕ ಚಿತ್ತದಲಿ ಬಲಗೊಂಬೆ ಕೋಲೆ 1 ನೆನೆಯಕ್ಕಿ ನೆನೆಗಡಲೆ ಗೊನೆಯ ಬಾಳೆಯ ಹಣ್ಣುಘನವಾದ ಚಿಗುಳಿ ತಂಬಿಟ್ಟು ಕೋಲೆಘನವಾದ ಚಿಗುಳಿ ತಂಬಿಟ್ಟು ತಂದೀವೆಗಣಪತಿ ಮತಿಯ ಕರುಣಿಸು ಕೋಲೆ 2 ಜಾಹ್ನವಿ ಜಾಹ್ನವಿ ಜನಕ ನಾರಾಯಣನಗಧರನ ಮುನ್ನ ಬಲಗೊಂಬೆ ಕೋಲೆ 3 ಮಚ್ಛ ಕೂರುಮ ವರಹ ನರಸಿಂಹ ವಾಮನಸ್ವಚ್ಛ ಭೃಗುರಾಮ ರಘುರಾಮ ಕೋಲೆಸ್ವಚ್ಛ ಭೃಗುರಾಮ ರಘುರಾಮ ಕೃಷ್ಣ ಬೌದ್ಧಅಚ್ಛ ಕಲ್ಕಿಯ ಬಲಗೊಂಬೆ ಕೋಲೆ 4 ಈಶ ಬ್ರಹ್ಮರಿಗೆ ನಿಯಾಮಕನಾಗಿದ್ದುಪೋಷಿಸುತಿಪ್ಪ ಪರಮಾತ್ಮ ಕೋಲೆಪೋಷಿಸುತಿಪ್ಪ ಪರಮಾತ್ಮನಾದ ಶ್ರೀಕೇಶವನ ಮೊದಲೆ ಬಲಗೊಂಬೆ ಕೋಲೆ 5 ನೀರಿಗಾಶ್ರಯನಾಗಿ ನೀರೊಳು ಮಲಗಿಪ್ಪನೀರಜ ನೇತ್ರ ನಿಗಮಾತ್ಮ ಕೋಲೆನೀರಜ ನೇತ್ರ ನಿಗಮಾತ್ಮನಾದ ಶ್ರೀನಾರಾಯಣನ್ನ ಬಲಗೊಂಬೆ ಕೋಲೆ 6 ಯಾದವ ಕುಲಜನೆ ಸಾಧುಗಳರಸನೆಮಾದೇವಿಗಾಶ್ರಯನಾಗಿಪ್ಪ ಕೋಲೆಮಾದೇವಿಗಾಶ್ರಯನಾಗಿ ಪಾಲಿಸುವಮಾಧವನ್ನ ಮೊದಲೆ ಬಲಗೊಂಬೆ ಕೋಲೆ 7 ಚಂದದಿಂದ ವೇದ ವೃಂದ ಪ್ರತಿಪಾದ್ಯನೆಇಂದಿರಾದೇವಿ ರಮಣನೆ ಕೋಲೆಇಂದಿರಾದೇವಿ ರಮಣನಾದ ಗೋ-ವಿಂದನ್ನ ಮೊದಲೆ ಬಲಗೊಂಬೆ ಕೋಲೆ 8 ಸೃಷ್ಟಿಯೊಳಗೆಲ್ಲ ವ್ಯಾಪ್ತನಾಗಿರುತಿಪ್ಪವೈಷ್ಣವಕುಲಕೆ ತಿಲಕನೆ ಕೋಲೆವೈಷ್ಣವ ಕುಲಕೆ ತಿಲಕನಾದ ಶ್ರೀವಿಷ್ಣುವಿನ ಮೊದಲೆ ಬಲಗೊಂಬೆ ಕೋಲೆ 9 ಅಧಮನಾಗಿದ್ದಂಥ ಅಸುರನ ಸಂಹರಿಸಿಮುದವ ಬೀರಿದನೆ ಸುರರಿಗೆ ಕೋಲೆಮುದವ ಬೀರುತ ಸುರರ ಪಾಲಿಸುವಂಥಮಧುಸೂದನನ್ನ ಬಲಗೊಂಬೆ ಕೋಲೆ 10 ಚಿಕ್ಕ ಬ್ರಾಹ್ಮಣನಾಗಿ ಬಲಿಯ ದಾನವ ಬೇಡಿಆಕ್ರಮಿಸಿದನೆ ತ್ರಿಲೋಕವ ಕೋಲೆಆಕ್ರಮಿಸಿ ತ್ರಿಲೋಕವನಳೆದ ತ್ರಿ-ವಿಕ್ರಮನ್ನ ಮೊದಲೆ ಬಲಗೊಂಬೆ ಕೋಲೆ 11 ಭೂಮಿಯೊಳಗೆ ಅತಿ ಸಂಭ್ರಮನಾಗಿದ್ದಕಾಮಿತಾರ್ಥಂಗಳ ಕರೆವನೆ ಕೋಲೆಕಾಮಿತಾರ್ಥಂಗಳ ಕರೆದು ಭಕ್ತರ ಪೊರೆವವಾಮನನ್ನ ಮೊದಲೆ ಬಲಗೊಂಬೆ ಕೋಲೆ 12 ವೇದಾಭಿಮಾನಿಗೆ ಸಾದರವಾಗಿಪ್ಪಬೌದ್ಧ ಮೂರುತಿಯೇ ಭವದೂರ ಕೋಲೆಬೌದ್ಧ ಮೂರುತಿಯೇ ಭವದೂರನಾದ ಶ್ರೀಶ್ರೀಧರನ್ನ ಮೊದಲೆ ಬಲಗೊಂಬೆ ಕೋಲೆ 13 ಸಾಕಾರ ಮೂರುತಿ ಸರ್ವೇಂದ್ರಿ ನಿಯಾಮಕನಾಕೇಶ ವಂದ್ಯ ನಳಿನಾಕ್ಷ ಕೋಲೆನಾಕೇಶ ವಂದ್ಯ ನಳಿನಾಕ್ಷನಾದ ಹೃಷಿ-ಕೇಶ ಹರಿಯ ಬಲಗೊಂಬೆ ಕೋಲೆ 14 ಪದುಮ ಸಂಭವ ಪಿತ ಪದುಮಿನಿ ವಲ್ಲಭಪದುಮ ಪೊಕ್ಕುಳಲಿ ಪಡೆದನೆ ಕೋಲೆಪದುಮ ಪೊಕ್ಕುಳಲ್ಲಿ ಪಡೆದು ಪಾಲಿಸುವಂಥಪದುಮನಾಭನ ಮುನ್ನ ಬಲಗೊಂಬೆ ಕೋಲೆ 15 ಕಾಮಿನಿ ಯಶೋದೆ ಒರಳಿಗೆ ಕಟ್ಟಲುಶ್ರೀ ಮನೋಹರ ಶೆಳೆದೊಯ್ದ ಕೋಲೆಶ್ರೀ ಮನೋಹರ ಶೆಳೆದು ಪಾಪವ ಕಳೆದದಾಮೋದರನ್ನ ಬಲಗೊಂಬೆ ಕೋಲೆ 16 ಕಿಂಕರರ ಚಿತ್ತ ದುರ್ವಿಷಯಕ್ಕೆರಗಲುಪಂಕಜನಾಭ ಶಳೆದನೆ ಕೋಲೆಪಂಕಜನಾಭ ಶಳೆದು ತನ್ನಲ್ಲಿಡುವಸಂಕರುಷಣನ್ನ ಬಲಗೊಂಬೆ ಕೋಲೆ 17 ಏಸು ಬ್ರಹ್ಮಾಂಡದೊಳು ವಾಸವಾಗಿರುತಿಪ್ಪದಾಸವರ್ಗವನೆ ಪೊರೆವನೆ ಕೋಲೆದಾಸ ವರ್ಗವನೆ ಪೊರೆವನೆ ನಮ್ಮ ಶ್ರೀವಾಸುದೇವನ್ನ ಬಲಗೊಂಬೆ ಕೋಲೆ 18 ಅದ್ವೈತ ಮಹಿಮನೆಸದ್ವೈಷ್ಣವರ ಪೊರೆವನೆ ಕೋಲೆಸದ್ವೈಷ್ಣವರ ಪೊರೆವನೆ ಅಜನಯ್ಯಪ್ರದ್ಯುಮ್ನ ಹರಿಯ ಬಲಗೊಂಬೆ ಕೋಲೆ 19 ಅನಿಮಿಷ ದೈತ್ಯರ ಮನಕೆ ಸಿಲುಕದಿಪ್ಪಸನಕಾದಿ ವಂದ್ಯ ಸಕಲೇಶ ಕೋಲೆಸನಕಾದಿ ವಂದ್ಯ ಸಕಲೇಶನಾಗಿಪ್ಪಅನಿರುದ್ಧ ಹರಿಯ ಬಲಗೊಂಬೆ ಕೋಲೆ 20 ಕ್ಷರಾಕ್ಷರದೊಳು ಪರಮೋತ್ತಮನಾದಕರಿರಾಜ ವರದ ಕವಿಗೇಯ ಕೋಲೆಕರಿರಾಜ ವರದ ಕವಿಗೇಯನಾದ ಶ್ರೀಪುರುಷೋತ್ತಮನ್ನ ಬಲಗೊಂಬೆ ಕೋಲೆ 21 ಅಕ್ಷಯ ಮೂರುತಿ ಮೋಕ್ಷದಾಯಕ ಸ್ವಾಮಿಕುಕ್ಷಿಯೋಳ್ ಜಗವ ರಕ್ಷಿಪ ಕೋಲೆಕುಕ್ಷಿಯೋಳ್ ಜಗವ ಪಾಲಿಪ ನಮ್ಮ ಅ-ದೋಕ್ಷಜ ಹರಿಯ ಬಲಗೊಂಬೆ ಕೋಲೆ 22 ಕ್ರೂರ ಖಳನುದರ ಸೀಳಿ ಪ್ರಹ್ಲಾದನಕಾರುಣ್ಯದಿಂದ ಕಾಯ್ದನ ಕೋಲೆಕಾರುಣ್ಯದಿಂದ ಕಾಯ್ದನ ನಮ್ಮ ಶ್ರೀನಾರಸಿಂಹನ್ನ ಬಲಗೊಂಬೆ ಕೋಲೆ 23 ಸಚ್ಚಿದಾನಂದನೆ ಸಕಲಗುಣ ಪರಿಪೂರ್ಣಮುಚುಕುಂದ ವರದ ಮುನಿನುತ ಕೋಲೆಮುಚುಕುಂದ ವರದ ಮುನಿನುತನಾದ ಶ್ರೀಅಚ್ಯುತನ ಮೊದಲೆ ಬಲಗೊಂಬೆ ಕೋಲೆ 24 ದುರ್ಧರ್ಷರಾಗಿದ್ದ ಖಳರ ಸಮುದಾಯವಮರ್ದನ ಮಾಡಿದ ಮಹಮಹಿಮ ಕೋಲೆಮರ್ದನ ಮಾಡಿದ ಮಹಮಹಿಮನಾದ ಜ-ನಾರ್ದನ್ನ ಮೊದಲೆ ಬಲಗೊಂಬೆ ಕೋಲೆ 25 ಇಂದ್ರಾನುಜನಾಗಿ ಸ್ವರ್ಗದೊಳಿರುತಿದ್ದುಸಾಂದ್ರ ಸುಖವೀವೆ ಸುರರಿಗೆ ಕೋಲೆಸಾಂದ್ರ ಸುಖವಿತ್ತು ಸುರರ ಪಾಲಿಸುವ ಉ-ಪೇಂದ್ರನ ಮೊದಲೆ ಬಲಗೊಂಬೆ ಕೋಲೆ 26 ಪರಮ ಭಕ್ತರ ಪಾಪ ಪರಿಹಾರವನೆ ಮಾಡಿಪರಮ ಪದವಿಯ ಪಾಲಿಪ ಕೋಲೆಪರಮ ಪದವಿಯ ಪಾಲಿಪ ನಮ್ಮ ಶ್ರೀ-ಹರಿಯ ಮೊದಲೆ ಬಲಗೊಂಬೆ ಕೋಲೆ 27 ಶಿಷ್ಟ ಪಾಲಕ ಉತ್ಕøಷ್ಟ ಜ್ಞಾನಾನಂದಕೃಷ್ಣೆಯ ಕಷ್ಟ ಬಿಡಿಸಿದ ಕೋಲೆಕೃಷ್ಣೆಯ ಕಷ್ಟ ಬಿಡಿಸಿದ ನಮ್ಮ ಶ್ರೀ-ಕೃಷ್ಣನ್ನ ಮೊದಲೆ ಬಲಗೊಂಬೆ ಕೋಲೆ 28 ಅನಿರುದ್ಧಾದಿ ರೂಪ ವಿಶ್ವಾದಿ ಅಜಿತಾದಿಸನತ್ಕುಮಾರಾದಿ ಅಜಾದಿ ಕೋಲೆಸನತ್ಕುಮಾರಾದಿ ಅಜಾದಿ ರೂಪನಾದಘನ ಮಹಿಮನ್ನ ಬಲಗೊಂಬೆ ಕೋಲೆ 29 ಹಯಗ್ರೀವ ದತ್ತ ಋಷಭ ಸಂಕರ್ಷಣಭಯರಹಿತ ಬಾದರಾಯಣ ಕೋಲೆಭಯರಹಿತ ಬಾದರಾಯಣ ಮಹಿದಾಸವಯಿಕುಂಠ ಹರಿಯ ಬಲಗೊಂಬೆ ಕೋಲೆ 30 ಆತ್ಮಾದಿ ವಾಸುದೇವಾದಿ ಮೂರುತಿಶ್ರೀ ತರುಣೇಶ ವಿಶ್ವೇಶ ಕೋಲೆಶ್ರೀ ತರುಣೇಶ ವಿಶ್ವೇಶ ರೂಪನಾದಜ್ಯೋತಿರ್ಮಯನ ಬಲಗೊಂಬೆ ಕೋಲೆ 31 ಮುನಿ ವೇದವ್ಯಾಸ ಸನತ್ಕುಮಾರ ಮೂರ್ತಿಮಿನಗುವ ದತ್ತಾತ್ರೇಯನೆ ಕೋಲೆಮಿನಗುವ ದತ್ತಾತ್ರೇಯ ಹಯಗ್ರೀವದನುಜಾಂತಕನ್ನ ಬಲಗೊಂಬೆ ಕೋಲೆ 32 ಕಂಗಳಾಪಾಂಗದಿಂ ಕಮಲಾಸನಾದಿಗಳಸಂಗಾತ ಸೃಷ್ಟಿಪ ಮಹಲಕ್ಷ್ಮೀ ಕೋಲೆಸಂಗಾತ ಸೃಷ್ಟಿಪ ಮಹಲಕ್ಷ್ಮೀ ನಿನ್ನ ಪಾ-ದಂಗಳಿಗೆರಗಿ ಬಲಗೊಂಬೆ ಕೋಲೆ 33 ಮಾಯಾ ಜಯಾಕೃತಿ ಶಾಂತಿ ಇಂದಿರಾದೇವಿಕಾಮನ ಜನನಿ ಜಯಂತಿ ಕೋಲೆಕಾಮನ ಜನನಿ ಜಯಂತಿ ಜಾನಕಿ ಸತ್ಯ-ಭಾಮಾ ರುಕ್ಮಿಣಿಯ ಬಲಗೊಂಬೆ ಕೋಲೆ 34 ಪರಮೇಷ್ಠಿ ಪರಮೇಷ್ಠಿ ನಿನ್ನ ಪದಪದುಮವ ಮುನ್ನ ಬಲಗೊಂಬೆ ಕೋಲೆ 35 ಹನುಮ ಭೀಮ ಮಧ್ವ ಮುನಿರಾಯ ಮಾರುತಿದನುಜಾರಿ ಭಕ್ತ ವಿರಕ್ತ ಕೋಲೆದನುಜಾರಿ ಭಕ್ತ ವಿರಕ್ತ ನಿನ್ನ ಪಾದವನಜವ ಮುನ್ನ ಬಲಗೊಂಬೆ ಕೋಲೆ 36 ವಾಣಿ ಅಜನ ಮುದ್ದು ರಾಣಿ ಪಲ್ಲವ ಪಾಣಿಜಾಣೆ ಕೊಡೆಮಗೆ ಮತಿಗಳ ಕೋಲೆಜಾಣೆ ಕೊಡೆಮಗೆ ಮತಿಗಳ ನಿನ್ನ ಪಾದರೇಣುವಿನ ಮುನ್ನ ಬಲಗೊಂಬೆ ಕೋಲೆ 37 ಭಾರತಿದೇವಿ ನಿನ್ನ ವಾರಿಜ ಚರಣವಬಾರಿ ಬಾರಿಗೆ ಭಜಿಸುವೆ ಕೋಲೆಬಾರಿ ಬಾರಿಗೆ ಭಜಿಸುವೆ ಎಮಗೆ ಶ್ರೀನಾರಾಯಣನಲ್ಲಿ ರತಿ ಕೊಡು ಕೋಲೆ 38 ಇಂದ್ರನ ಗೆದ್ದು ಸುಧೆ ತಂದು ಮಾತೆಯಬಂಧನ ಕಡಿದ ಬಲುಧೀರ ಕೋಲೆಬಂಧನ ಕಡಿದ ಬಲುಧೀರನಾದ ಖ-ಗೇಂದ್ರನ್ನ ಮುನ್ನ ಬಲಗೊಂಬೆ ಕೋಲೆ 39 ಸಾಸಿರ ಮುಖದಿಂದ ಶ್ರೀಶನ್ನ ತುತಿಸಿ ಶ್ರೀವಾಸುದೇವಂಗೆ ಹಾಸಿಕೆ ಕೋಲೆವಾಸುದೇವಂಗೆ ಹಾಸಿಕೆಯಾದ ಮಹ-ಶೇಷನ್ನ ಮುನ್ನ ಬಲಗೊಂಬೆ ಕೋಲೆ 40 ಅಪರಿಮಿತ ಕಾರ್ಯ ತ್ರಿಪುರ ದಹನನೆಚಪಲ ಮೂರುತಿ ಚಂದ್ರಚೂಡ ಕೋಲೆಚಪಲ ಮೂರುತಿ ಚಂದ್ರಚೂಡ ಭಜಕರಅಪಮೃತ್ಯು ಹರನ ಬಲಗೊಂಬೆ ಕೋಲೆ 41 ಖಗ ಶೇಷಶಂಭು ರಾಣಿಯರ ಬಲಗೊಂಬೆ ಕೋಲೆ 42 ಶಕ್ರ ಕಾಮಾದಿ ದೇವರ್ಕಳ ಚರಣಕ್ಕೆಅಕ್ಕರದಿಂದ ಅಭಿನಮಿಪೆ ಕೋಲೆಅಕ್ಕರದಿಂದ ಅಭಿನಮಿಸಿ ಪೇಳ್ವೆ ದೇ-ವಕ್ಕಿ ನಂದನನ ಚರಿತೆಯ ಕೋಲೆ 43 ಪದ್ಮನಾಭ ನರಹರಿತೀರ್ಥಶ್ರೀ ಮಾಧವಾರ್ಯ ಅಕ್ಷೋಭ್ಯ ಕೋಲೆಶ್ರೀ ಮಾಧವಾರ್ಯ ಅಕ್ಷೋಭ್ಯ ಜಯತೀರ್ಥಸ್ವಾಮಿಗಳ ಮೊದಲೆ ಬಲಗೊಂಬೆ ಕೋಲೆ 44 ನ್ಯಾಯಾಮೃತ ತರ್ಕ ತಾಂಡವ ಚಂದ್ರಿಕೆನ್ಯಾಯ ಗ್ರಂಥಗಳ ರಚಿಸಿದ ಕೋಲೆನ್ಯಾಯ ಗ್ರಂಥಗಳ ರಚಿಸಿದ ನಮ್ಮ ವ್ಯಾಸ-ರಾಯರ ಮುನ್ನ ಬಲಗೊಂಬೆ ಕೋಲೆ 45 ಜನನಿ ಗರ್ಭದಿಂದವನಿ ಸ್ಪರ್ಶಿಸದೆಜನಿಸಿ ಬ್ರಹ್ಮಣ್ಯ ಮುನಿಗಳ ಕೋಲೆಜನಿಸಿ ಬ್ರಹ್ಮಣ್ಯ ಮುನಿಗಳ ಮೃದು ಹಸ್ತವನಜ ಸಂಭವನ ಬಲಗೊಂಬೆ ಕೋಲೆ 46 ಶ್ರೀಪಾದರಾಯರಲಿ ಸಕಲ ವಿದ್ಯವನೋದಿಶ್ರೀಪತಿ ಪ್ರೀತಿ ಪಡಿಸಿದ ಕೋಲೆಶ್ರೀಪತಿ ಪ್ರೀತಿ ಪಡಿಸಿದ ವ್ಯಾಸಮುನಿಭೂಪನ ಮೊದಲೆ ಬಲಗೊಂಬೆ ಕೋಲೆ 47 ದೇಶಾಧಿಪತಿಗೆ ಬಂದ ಕುಯೋಗವನೆ ನೂಕಿತಾ ಸಿಂಹಾಸನವೇರಿ ಮೆರೆದನೆ ಕೋಲೆತಾ ಸಿಂಹಾಸನವೇರಿ ಮೆರೆದನೆ ವ್ಯಾಸ ಮು-ನೀಶನ್ನ ಮೊದಲೆ ಬಲಗೊಂಬೆ ಕೋಲೆ 48 ದಂಡ ಕಮಂಡಲು ಧರ ಪಂಡಿತಾರಾಧಾರಕುಂಡಲಿಶಯನನ ಭಜಕರ ಕೋಲೆಕುಂಡಲಿ ಶಯನನ ಭಜಕ ರಾಘವೇಂದ್ರರಕೊಂಡಾಡಿ ಪದನ ಗುಣಿಸುವೆ ಕೋಲೆ 49 ತಂತ್ರ ಸಾರಗಳಿಗೆ ಅರ್ಥವನ್ನು ಸ್ವ-ತಂತ್ರದಿಂದಲಿ ರಚಿಸಿದ ಕೋಲೆ ಸ್ವ-ತಂತ್ರದಿಂದಲಿ ರಚಿಸಿದ ರಾಘವೇಂದ್ರರಪಂಥವಿದ್ದಲ್ಲಿ ಬಲಗೊಂಬೆ ಕೋಲೆ 50 ವೇದಶಾಸ್ತ್ರಾಮೃತ ಸಾರಬಲ್ಲ ರಾಮವೇದವ್ಯಾಸರ ಭಜಕರ ಕೋಲೆವೇದವ್ಯಾಸ ಭಜಕ ರಾಘವೇಂದ್ರರಪಾದವಿದ್ದಲ್ಲಿ ಬಲಗೊಂಬೆ ಕೋಲೆ 51 ತುಂಗಭದ್ರಾ ತೀರ ಮಂತ್ರಾಲಯದಲ್ಲಿಮಂಗಳ ಮಹಿಮರೆನಿಪರೆ ಕೋಲೆಮಂಗಳ ಮಹಿಮರೆನಿಪ ರಾಘವೇಂದ್ರ-ರಂಘ್ರಿ ಕಮಲವ ಬಲಗೊಂಬೆ ಕೋಲೆ 52 ಗುರು ರಾಘವೇಂದ್ರರ ಚರಣ ಪಂಕಜವನ್ನುಸ್ಥಿರ ಬುದ್ಧಿಯಿಂದ ಸ್ಮರಿಸುವೆ ಕೋಲೆಸ್ಥಿರ ಬುದ್ಧಿಯಿಂದ ಸ್ಮರಿಸಿ ನಾ ಪೇಳ್ವೆನುಸರಸಿಜಾಕ್ಷನ್ನ ಚರಿತೆಯ ಕೋಲೆ 53 ರಾಜರಾಜೇಶ್ವರ ಸತ್ಯಾಭಿನವ ತೀರ್ಥರಾಜಕರಾಬ್ಜ ಸಂಭೂತ ಕೋಲೆರಾಜಕರಾಬ್ಜ ಸಂಭೂತ ಸತ್ಯಾಧಿ-ರಾಜರ ಮೊದಲೆ ಬಲಗೊಂಬೆ ಕೋಲೆ 54 ಕ್ಷೀರನದಿಯ ತೀರ ವೇಲೂರ ಪುರವಾಸಸಾರ ಸಜ್ಜನರ ಪೊರೆವನೆ ಕೋಲೆಸಾರ ಸಜ್ಜನರ ಪೊರೆವ ಸತ್ಯಾಧಿರಾಜಧೀರ ಯತಿಗಳ ಬಲಗೊಂಬೆ ಕೋಲೆ 55 ಸತ್ಯಬೋಧರೆಂಬ ಸದ್ಗುರು ಚರಣವಚಿತ್ತದೊಳಿಟ್ಟು ಚರಿಸುವೆ ಕೋಲೆಚಿತ್ತದೊಳಿಟ್ಟು ಸ್ಮರಿಸಿ ನಾ ಪೇಳ್ವೆನುಚಿತ್ತದೊಲ್ಲಭನ ಚರಿತೆಯ ಕೋಲೆ 56 ಪುರಂದರ ರಾಯರಪರಮ ಕೃಪಾಪಾತ್ರ ವಿಜಯರಾಯ ಕೋಲೆಪರಮ ಕೃಪಾಪಾತ್ರ ವಿಜಯರಾಯರ ಪಾದಪರಮ ಭಕ್ತಿಯಲಿ ಸ್ಮರಿಸುವೆ ಕೋಲೆ 57 ದೇವ ನಾರಾಯಣ ಭೂದೇವಿ ಮೊರೆ ಕೇಳಿದೇವಕಿಯಲ್ಲಿ ಜನಿಸಿದ ಕೋಲೆದೇವಕಿಯಲ್ಲಿ ಜನಿಸಿ ಧಾರುಣಿದೇವಿ ಭಾರವನೆಲ್ಲನಿಳುಹಿದ ಕೋಲೆ 58 ಶಕಟ ಪೂತನಿ ವತ್ಸ ಬಕಧೇನುಕ ಕಂಸಮುಖಾದ್ಯರನ್ನು ಮಡುಹಿದ ಕೋಲೆಮುಖಾದ್ಯರನ್ನು ಮಡುಹಿ ವಸುದೇವ ದೇ-ವಕಿಯರ ಬಂಧನ ಬಿಡಿಸಿದ ಕೋಲೆ 59 ಹೆತ್ತ ತಾಯಿಯ ಮೊಲೆಯರ್ತಿಲಿ ನಲಿದುಂಡುಮತ್ತೆ ಬಾಲಲೀಲೆ ತೋರಿದ ಕೋಲೆಮತ್ತೆ ಬಾಲಲೀಲೆ ತೋರಿ ತೋಷವ ಪಡಿಸಿಮುತ್ಯಾಗೆ ಪಟ್ಟವ ಕಟ್ಟಿದ ಕೋಲೆ 60 ಜರೆಯ ಸುತನು ತಾನು ಜಗಳಕ್ಕೆ ಬಹನೆಂದುಕರೆಸಿದ ವಿಶ್ವಕರ್ಮನ್ನ ಕೋಲೆಕರೆಸಿದ ವಿಶ್ವಕರ್ಮನ್ನ ದ್ವಾರಕಪುರವ ನಿರ್ಮಿಸೆಂದಾಕ್ಷಣ ಕೋಲೆ 61 ದ್ವಾರಕಪುರದ ಶೃಂಗಾರ ವರ್ಣಿಸಲುಮೂರು ಕಣ್ಣವಗೆ ವಶವಲ್ಲ ಕೋಲೆಮೂರು ಕಣ್ಣವಗೆ ವಶವಲ್ಲ ನಾಲ್ಕಾರುಮೋರೆಯವರಿಗೆ ವಶವಲ್ಲ ಕೋಲೆ 62 ತಳಿರು ತೋರಣಗಳುಮೇರುವಿಗೆ ಪೊನ್ನ ಕಲಶವು ಕೋಲೆಮೇರುವಿಗೆ ಕಲಶ ಕನ್ನಡಿ ಮನೋ-ಹಾರವಾಗಿರುವುದು ಸಟೆಯಲ್ಲಿ ಕೋಲೆ 63 ಹದಿನಾರು ಸಾವಿರ ಚದುರೇರ ಮಂದಿರವುಮದನನಯ್ಯನ ಮನೆ ಮಧ್ಯ ಕೋಲೆಮದನನಯ್ಯನ ಮನೆ ಮಧ್ಯ ಪ್ರದೇಶಅದುಭುತವಾಗಿ ಬೆಳಗೋದು ಕೋಲೆ 64 ನಾರಿ ರುಕ್ಮಿಣಿ ಸತ್ಯಭಾಮೆದೇವಿ ಮತ್ತೆವಾರಿಜಮುಖಿಯರ್ ನಾಲ್ಕೆರಡು ಕೋಲೆವಾರಿಜಮುಖಿಯರ್ ನಾಲ್ಕೆರಡು ಸಹಿತಾಗಿವಾರಿಜನಾಭ ಕುಳಿತಿದ್ದ ಕೋಲೆ 65 ಶ್ರೀ ಭೂರಮಣನಾದ ಶ್ರೀಕೃಷ್ಣನರಮನೆಗೆಸುಭದ್ರೆ ಮುಯ್ಯ ತರುತಾಳೆ ಕೋಲೆಸುಭದ್ರೆ ಮುಯ್ಯ ತರುತಾಳೆ ಗಜಪುರಭೂ ಭುಜರೆಲ್ಲ ಬರುತಾರೆ ಕೋಲೆ 66 ಧರ್ಮ ಭೀಮಾರ್ಜುನ ನಕುಲ ಸಹದೇವರುಪೆರ್ಮೆಯಿಂದಲಿ ಪೊರವಂಟು ಕೋಲೆಪೆರ್ಮೆಯಿಂದಲಿ ಪೊರವಂಟು ದಿಕ್ಪಾಲರುಕೂರ್ಮೆಯಿಂದಲಿ ಬರತಾರೆ ಕೋಲೆ 67 ವಜ್ರ ಧರಿಸಿ ಉ-ಪೇಂದ್ರನರಮನೆಗೆ ಬರುತಾರೆ ಕೋಲೆ 68 ಸತಿ ಸ್ವಾಹಾದೇವಿಯ ಕೂಡಿಅತಿಶಯದಿಂ ಮೇಷವೇರುತ್ತ ಕೋಲೆಅತಿಶಯದಿಂ ಮೇಷವೇರಿ ಶಕ್ತಿಯ ಪಿಡಿದುಕ್ರ್ರತುಪತಿ ಮನೆಗೆ ಬರುತಾನೆ ಕೋಲೆ 69 ಯಮನು ಮಹಿಷವೇರಿ ಗಮನದಿಂದಲಿ ಸತಿಶಾಮಲಾದೇವಿ ಸಹಿತಲಿ ಕೋಲೆಶಾಮಲೆ ಸಹಿತ ದಂಡಾಯುಧ ಧರಿಸಿರಾಮನ ಮನೆಗೆ ಬರುತಾನೆ ಕೋಲೆ 70 ನಿರರುತಿ ತಾನೊಂದು ನರನ ಪೆಗಲನೇರಿಪರಮಾಪ್ತ ಸ್ತ್ರೀಯನೊಡಗೂಡಿ ಕೋಲೆಪರಮಾಪ್ತ ಸ್ತ್ರೀಯನೊಡನೆ ಕುಂತವ ಧರಿಸಿಧರಾಧರನ ಮನೆಗೆ ಬರುತಾನೆ ಕೋಲೆ 71 ವರುಣ ತಾನೊಂದು ಮಕರಿಯನೇರಿಕೊಂಡುಸಿರಿ ಭಾಗೀರಥಿಯನೊಡಗೊಂಡು ಕೋಲೆಸಿರಿ ಭಾಗೀರಥಿಯನೊಡನೆ ಪಾಶಧರಿಸಿಸಿರಿವತ್ಸನರಮನೆಗೆ ಬರುತಾನೆ ಕೋಲೆ 72 ಮರುತದೇವನೊಂದು ಎರಳೆಯನೇರಿತರುಣಿ ಪ್ರಾವಹಿಯೊಡಗೂಡಿ ಕೋಲೆ ತರುಣಿ ಪ್ರಾವಹಿಗೂಡಿ ಧ್ವಜ ಧರಿಸಿ ಶ್ರೀ-ಧರನ ಮನೆಗೇ ಬರುತಾನೆ ಕೋಲೆ 73 ವಿತ್ತಪತಿಯೊಂದು ಉತ್ತಮ ಹಯವೇರಿಚಿತ್ತದೊಲ್ಲಭೆಯ ಒಡಗೂಡಿ ಕೋಲೆಚಿತ್ತದೊಲ್ಲಭೆಯ ಒಡನೆ ಖಡ್ಗ ಧರಿಸಿಕರ್ತನ್ನ ಮನೆಗೆ ಬರುತಾನೆ ಕೋಲೆ 74 ಈಶಾನ ತಾನೊಂದು ವೃಷಭವೇರಿಕೊಂಡುಶ್ರೀ ಸತಿದೇವಿಯೊಡಗೂಡಿ ಕೋಲೆಶ್ರೀ ಸತಿದೇವಿಯೊಡಗೂಡಿ ಶೂಲ ಧರಿಸಿ ನಾ-ರಸಿಂಹನ ಮನೆಗೆ ಬರುತಾನೆ ಕೋಲೆ 75 ಹರಿಯೇ ಸರ್ವೋತ್ತಮ ಹರಿಯೇ ಪರದೇವತೆಹರಿದಾಸರೆಂಬೋ ಬಿರುದಿನ ಕೋಲೆಹರಿದಾಸರೆಂಬೋ ಬಿರುದಿನ ಹೆಗ್ಗಾಳೆಹಿರಿ ಬಾಗಿಲೊಳು ಹಿಡಿಸಿಹರು ಕೋಲೆ 76 ಒಬ್ಬನೆ ವಿಷ್ಣುವಿನ್ನೊಬ್ಬ ದೈವಗಳಿಲ್ಲೆಂ-ದಬ್ಬರದಿಂದ ನಾಗಸ್ವರ ಕೋಲೆಅಬ್ಬರದಿಂದ ನಾಗಸ್ವರಂಗಳಹೆಬ್ಬಾಗಿಲೊಳಗೆ ನುಡಿಸೋರು ಕೋಲೆ 77 ಖಳನ ಬೆನ್ನ ಚರ್ಮ ಸುಲಿದು ಭೇರಿಗೆ ಹಾಕಿಅಲವ ಬೋಧರೆ ಜಗದ್ಗುರು ಕೋಲೆಅಲವ ಬೋಧರೆ ಜಗದ್ಗುರುಗಳೆಂತೆಂದುಛಲದಿಂದ ಭೇರಿಯ ಹೊಡಿಸೋರು ಕೋಲೆ 78 ವಿಷ್ಣು ಸರ್ವೋತ್ತಮ ವಿಷ್ಣು ಪರದೇವತೆವಿಷ್ಣುದಾಸರೆಂಬ ಬಿರುದಿನ ಕೋಲೆವಿಷ್ಣುದಾಸರೆಂಬ ಬಿರುದಿನ ಠೆಕ್ಕೆಯಘಟ್ಯಾಗಿ ಎತ್ತಿ ನಿಲಿಸೋರು ಕೋಲೆ 79 ಮತದೊಳು ಮಧ್ವಮತ ವ್ರತದೊಳು ಹರಿದಿನಕಥೆಯೊಳು ಭಾಗವತವೆನ್ನಿ ಕೋಲೆಕಥೆಯೊಳ್ ಭಾಗವತವೆನ್ನಿ ಇದರಂತೆಪ್ರತಿಮೆಯೊಳ್ ವಿಷ್ಣು ಪ್ರತಿಮೆನ್ನಿ ಕೋಲೆ 80 ಈಚಲ ಬನದೊಳು ಗೋ ಕ್ಷೀರ ಕುಡಿದಂತೆನೀಚರ ಸಂಗ ಸುಜನರು ಕೋಲೆನೀಚರ ಸಂಗ ಸುಜನರು ಮಾಡಲುಈಚೆ ನೋಡುವರಿಗೆ ಅನುಮಾನ ಕೋಲೆ 81 ಸೂರಿ ಜನರ ಸಂಗ ಸುಧೆಯ ಪ್ರಾಶನೆಯಂತೆಹೋರಣೆ ಗುಣವುಳ್ಳ ಅಧಮರ ಕೋಲೆಹೋರಣೆ ಗುಣವುಳ್ಳ ಅಧಮರ ಸಹವಾಸನೀರುಳ್ಳಿ ತಿಂದ ತೆರನಂತೆ ಕೋಲೆ 82 ಒಳ್ಳೆ ಮನುಜರ ಸಂಗ ಮಲ್ಲಿಗೆ ಮುಡಿದಂತೆಖುಲ್ಲ ಕುಮತಿಯ ಸಹವಾಸ ಕೋಲೆಖುಲ್ಲ ಕುಮತಿಯ ಸಹವಾಸ ಮಾಡಲುಮುಲ್ಲಂಗಿ ತಿಂದು ತೇಗಿದಂತೆ ಕೋಲೆ 83 ಭಾವಜ್ಞರ ಸಂಗ ಶ್ಯಾವಿಗಿ ಉಂಡಂತೆಭಾವವನರಿಯದ ಬಲುಹೀನ ಕೋಲೆಭಾವವನರಿಯದ ಬಲುಹೀನರ ಸಂಗಬೇವಿನಹಾಲ ಕುಡಿದಂತೆ ಕೋಲೆ 84 ಬಾಳುವರ ಸಂಗ ಹಾಲೋಗರುಂಡಂತೆಬಾಳುವೆಗೆಟ್ಟ ಅಧಮರ ಕೋಲೆಬಾಳುವೆಗೆಟ್ಟ ಅಧಮರ ಸಹವಾಸಹೇಳಬಾರದ್ದು ತಿಂದಂತೆ ಕೋಲೆ 85 ಹರಿಗುರು ದ್ರೋಹಿ ಮರಳಿ ಮಾತೃ ದ್ರೋಹಿವರ ವೈಷ್ಣವ ದ್ರೋಹಿ ಪಿತೃ ದ್ರೋಹಿ ಕೋಲೆವರ ವೈಷ್ಣವ ದ್ರೋಹಿ ಸ್ವಾಮಿ ದ್ರೋಹಿನೆರಳು ಬಿದ್ದವರ ನೆರೆಹೊಲ್ಲ ಕೋಲೆ 86 ಕತ್ತೆ ಕುದುರೆ ಒಂದೆ ಅತ್ತೆ ಸೊಸೆಯು ಒಂದೆಹೆತ್ತಮ್ಮ ಒಂದೆ ಹೆಂಡ್ತೊಂದೆ ಕೋಲೆಹೆತ್ತಮ್ಮ ಒಂದೆ ಹೆಂಡ್ತೊಂದಾದ ಮೇಲೆವ್ಯರ್ಥದ ಮದುವೆ ನಿನಗ್ಯಾಕೆ ಕೋಲೆ 87 ಅಕ್ಕ ತಂಗಿಯು ಒಂದೆ ಮಕ್ಕಳು ಸೊಸೆ ಒಂದೆಚಿಕ್ಕಮ್ಮ ಒಂದೆ ಹೆಂಡ್ತೊಂದೆ ಕೋಲೆಚಿಕ್ಕಮ್ಮ ಒಂದೆ ಹೆಂಡ್ತೊಂದಾದ ಮೇಲೆರೊಕ್ಕ ವೆಚ್ಚ ಮಾಡಿ ಮದುವ್ಯಾಕೆ ಕೋಲೆ 88 ಹಿಟ್ಟು ಬೂದಿ ಒಂದೆ ರೊಟ್ಟಿ ಮುಚ್ಚಳ ಒಂದೆಕಟ್ಟಿಗೆ ಒಂದೆ ಕಬ್ಬೊಂದೆ ಕೋಲೆಕಟ್ಟಿಗೆಯೊಂದೆ ಕಬ್ಬೊಂದಾದ ಮೇಲೆಕಟ್ಟಿಗೆ ಯಾಕೆ ಮೆಲುವೊಲ್ಲೆ ಕೋಲೆ 89 ಹಾಲು ಮಜ್ಜಿಗೆಯೊಂದೆ ಕೋಳಿ ಕೋಗಿಲೆಯೊಂದೆಮಾಳಿಗೆ ಒಂದೆ ಬಯಲೊಂದೆ ಕೋಲೆಮಾಳಿಗೆಯೊಂದೆ ಬಯಲು ಒಂದಾದರೆಹೇಳಬಾರದ್ದು ತಿನವಲ್ಯ ಕೋಲೆ 90 ಗಂಗೆಯ ತಡಿಯಲ್ಲಿ ಲಿಂಗವನರ್ಚಿಸಿಅಂಗೈಯಲಿಟ್ಟು ಪೂಜಿಸುವೆ ಕೋಲೆಅಂಗೈಯಲಿಟ್ಟು ಪೂಜಿಸುವೆ ಎಲೆ ಪಾಪಿಲಿಂಗನು ನೀನು ವಂದ್ಹ್ಯಾಗೆ ಕೋಲೆ 91 ಶಿವನು ನೀನಾದರೆ ಶಿವೆಯು ನಿನಗೇನುಅವಿವೇಕಿ ಮನುಜ ಈ ಮಾತು ಕೋಲೆಅವಿವೇಕಿ ಮನುಜ ಈ ಮಾತು ಕೇಳಿದರೆಕವಿಗಳು ನಗರೆ ಕೈ ಹೊಯ್ದು ಕೋಲೆ 92 ವೇದ ಪ್ರಾಮಾಣ್ಯಂದು ಸುಜನರಿಗೆಲ್ಲಬೋಧಿಸುತಿಪ್ಪ ಬೌದ್ಧನ ಕೋಲೆಬೋಧಿಸುತಿಪ್ಪ ಬೌದ್ಧನ ಎಳೆದೊಯ್ದುಕಾದೆಣ್ಣೆಯೊಳು ಕೆಡುಹೋರು ಕೋಲೆ 93 ಇಲ್ಲಿ ಮಾತ್ರ ಭೇದ ಅಲ್ಲಿಯೊಂದೆ ಎಂಬಕ್ಷುಲ್ಲಕರ ಹಿಡಿದು ಹಲ್ಮುರಿದು ಕೋಲೆಕ್ಷುಲ್ಲಕರ ಹಿಡಿದು ಹಲ್ಮುರಿದು ಯಮರಾಯಕಲ್ಲುಗಾಣಕ್ಕೆ ಹಾಕಿಸುವ ಕೋಲೆ 94 ಅಪ್ಪ ನಾರಾಯಣನಿಪ್ಪಂಥ ಅರಮನೆಅಪ್ರಾಕೃತದ ವೈಕುಂಠ ಕೋಲೆಅಪ್ರಾಕೃತದ ವೈಕುಂಠವೆಂಬೋದುಸ್ವ ಪ್ರಕಾಶದ ಪರಮಾತ್ಮ ಕೋಲೆ 95 ಸುತ್ತ ವಿರಜಾನದಿ ಮತ್ತೆ ಆನಂದ್ವನಚಿತ್ತಜನೈಯ್ಯನರಮನೆಗೆ ಕೋಲೆಚಿತ್ತಜನೈಯ್ಯನರಮನೆ ಎಂಬುದುಉತ್ತಮೋತ್ತಮ ವೈಕುಂಠ ಕೋಲೆ 96 ನೀಲ ವೈಢೂರ್ಯ ನಿಚ್ಚಳ ವಜ್ರಅಚ್ಚ ಮಾಣಿಕ್ಯದ ಅಳವಟ್ಟು ಕೋಲೆಅಚ್ಚ ಮಾಣಿಕ್ಯದ ಅಳವಟ್ಟು ಹರಿಪುರಅಚ್ಯುತನಿಪ್ಪ ಅರವನೆ ಕೋಲೆ 97 ಸಿರಿಯು ತಾ ಮುರಹರನ ಪಟ್ಟಣದಲ್ಲಿವಿರಜೆಯೆಂತೆಂದು ಕರೆಸೋಳು ಕೋಲೆವಿರಜೆಯೆಂತೆಂದು ಕರೆಸಿ ವೈಕುಂಠಕ್ಕೆಪರಿಖಾ ರೂಪದಲ್ಲಿ ಮೆರೆವಳು ಕೋಲೆ 98 ಉತ್ತರದಿ ನಾಲ್ಕು ತತ್ಥಳಿಸುವ ದ್ವಾರಮುತ್ತು ಮಾಣಿಕ್ಯ ನವರತ್ನ ಕೋಲೆಮುತ್ತು ಮಾಣಿಕ್ಯ ನವರತ್ನ ಝಲ್ಲಿಯಎತ್ತಿ ಮೇಲ್ಕಟ್ಟು ಬಿಗಿದಿದೆ ಕೋಲೆ 99 ಜಯ ವಿಜಯಾದ್ಯೆಂಟು ದ್ವಾರಪಾಲಕರುಜಯದೇವಿ ರಮಣನರಮನೆಗೆ ಕೋಲೆಜಯದೇವಿ ರಮಣನರಮನೆ ಬಾಗಿಲೊಳ್‍ಜಯ ಜಯವೆನುತ ನಿಂದಾರೆ ಕೋಲೆ 100 ಕಸವೆಲ್ಲ ಪರಿಮಳ ಕೆಸರೆಲ್ಲ ಶ್ರೀಗಂಧಬಿಸರುಹ ನೇತ್ರನ ಅರಮನೆ ಕೋಲೆಬಿಸರುಹ ನೇತ್ರನ ಅರಮನೆಯೊಳಗೆಲ್ಲಕುಸುಮದ ಮಳೆಯು ಗರೆವುದು ಕೋಲೆ 101 ಕಾಜಿನ ನೆಲೆಗಟ್ಟು ರಾಜ ಮಾಣಿಕ ಗೋಡೆಈ ಜಡ ದ್ರವ್ಯವಲ್ಲಿಲ್ಲ ಕೋಲೆಈ ಜಡ ದ್ರವ್ಯವಲ್ಲಿಲ್ಲ ಪುಸಿಯಲ್ಲಶ್ರೀ ಜನಾರ್ದನನರಮನೆಯೊಳ್ ಕೋಲೆ 102
--------------
ಮೋಹನದಾಸರು
ಸುಶರಣ ಸುರಪಾದಪ ಸುಶೀಲೇಂದ್ರ ಸನ್ಮುನಿಪ ಪ ಚಾರು ತುಳಸಿ ಸಾರಸಾಕ್ಷಮಣಿ ಚಾಪ 1 ಸಲೆ ಮಂತ್ರಾಲಯ ನಿಲಯರ ಒಲಿಸಿದ ಅಲವ ಬೋಧಮತ ಜಲಧಿಗೆ ಉಡುಪ 2 ಕ್ಷಿತಿದೇವ ತತಿನುತ ವರದಾತಟ ಪತಿ ಪದ ವೃತತಿಜ ಮಧುಪ 3 ಕೋವಿದ ಜನ ಸಂಸೇವಿತ ವರ ವೃಂ ದಾವನ ಮಂದಿರ ಪಾವನ ರೂಪ 4 ವರದ ಶಾಮಸುಂದರ ರಘುರಾಮನ ದುರಿತ ನಿರ್ಭೀತ 5
--------------
ಶಾಮಸುಂದರ ವಿಠಲ
ಹನುಮನ ಮನೆಯವರು ನಾವೆಲ್ಲರು ಹನುಮನ ಮನೆಯವರು ಪ ಅನುಮಾನಪಡದೆಲೆ ಸ್ಥಳವ ಕೊಡಿರಿ ಎಮಗೆ ಅ.ಪ ಊಧ್ರ್ವ ಪುಂಡ್ರವ ನೋಡಿ ಶ್ರದ್ಧೆ ಭಕುತಿ ನೋಡಿ ಹೃದ್ಗತವಾದೆಮ್ಮ ತತ್ವಗಳನೆ ನೋಡಿ ಇದ್ದುದನಿಲ್ಲೆಂಬ ಅಬದ್ಧ ನುಡಿವರಲ್ಲಾ ಮಧ್ವಮುನಿಯು ನಮ್ಮ ತಿದ್ದಿರುವುದ ನೋಡಿ 1 ಸತ್ಯ ಮಿಥ್ಯಗಳಿಗೆ ಅಂತರ ಬಲ್ಲೆವು ಉತ್ತಮ ನೀಚರೆಂಬುವ ಭೇದ ಬಲ್ಲೆವು ಸುತ್ತಲು ಕಂಡು ಕಾಣದೆ ಇಹ ಎಲ್ಲಕೂ ಉತ್ತಮನೊಬ್ಬನೇ ಹರಿಯೆಂದು ಬಲ್ಲೆವು 2 ಹಲವು ಲೋಕಗಳುಂಟೆಂಬುದ ಬಲ್ಲೆವು ಹಲವು ಯೋನಿಗಳಲ್ಲಿ ಜನ್ಮಗಳೊಲ್ಲೆವು ಅಲವಭೋಧರು ನಮ್ಮ ಕಳುಹಿದರಿಲ್ಲಿಗೆ ತಿಳಿಸಿ ಪ್ರಸನ್ನ ಶ್ರೀ ಹರಿಗೆ ವಿಚಾರವ 3
--------------
ವಿದ್ಯಾಪ್ರಸನ್ನತೀರ್ಥರು
ಹರಿಯೇ ಪೊರೆಯದಿಹುದು ಸರಿಯೆ | ಎನ್ನ ಮರೆತೆ ಯಾತಕೊ ನಾನರಿಯೆ ಪ ಸೂಕರ ಯೋನಿಯಲಿ ಬಂದು | ನಾನು ಮನುಜನಾಗಿ ನಿಂದಿಹೆನಿಂದು ನಿನ ಬೇಡಿಕೊಂಬೆ ದಯಸಿಂಧು | ಎನ್ನ ಪುನಹ ಪುಟ್ಟಿಸಬೇಡವೆಂದು 1 ಮನಸು ವಚನ ಕಾಯಗಳಿಂದ | ನಿನ್ನ ಅನುಚರನಾಗಿಹೆ ಮುದದಿಂದ ದನುಜಾರಿ ಬಿಡಿಸೆನ್ನ ಬಂಧ | ಭವ- ಜನಿತವಾಗಿಹ ಜಾಲದಿಂದ 2 ಹಲವು ಮಾತೇಕೊ ಮಾಲೋಲ | ಮೌನಿ ಅಲವ ಬೋಧಾರ್ಚಿತ ಗೋಪಾಲ ಕಲುಷ ರಾಸಿಗಳನೆಲ್ಲ ಕಳೆದು ಸಲಹೈಯ್ಯಾ ರಂಗೇಶವಿಠಲ 3
--------------
ರಂಗೇಶವಿಠಲದಾಸರು
ಹಂಸವಾಹನ ಜಾಯೆ ಕಾಯೆ ಪ ವಿಪಾಂಸಗನ ಪದಪಾಂಸು ಧರಿಸುವಳೆ ಮನ ಸಂಶಯವ ಕಳೆ ಅ.ಪ. ಸತಿ | ಅ-ಜ್ಞಾನ ನೀಗಿ ಸುಜ್ಞಾನ ವೀಯುತ |ಜ್ಞಾನ ಪೂರ್ಣ ಪ್ರಜ್ಞಾನ ಘನಗುಣಗಾನ ಮಾಳ್ಪ ವಿಜ್ಞಾನ ವೀವುದು 1 ಭಕ್ತಿರೂಪಿ - ಸುವ್ಯಕ್ತಿಗೈ ಹರಿಸಭಕ್ತಿಯನು ಗುರುಭಕ್ತಿಯೆನ್ನಲ್ಲಿ |ಶಕ್ತಿ ಕೊಟ್ಟಾಸಕ್ತಿಯಲಿ ವೇ-ದೋಕ್ತದಲಿ ಎನ ಯುಕ್ತ ನೆನಿಸಮ್ಮ 2 ವಾಣಿಯೇ ಬ್ರಹ್ಮಾಣಿಯೇ ವೇ-ದಾಣಿಯೇ ಸುಜ್ಞಾನಿಯೇ ಪೊರೆವೀಣೆ ಧರಿಸಿಹ ಪಾಣಿಯೇ ಸು-ಶ್ರೋಣಿಯೇ ಚತು | ರಾನನ ಪ್ರಿಯೆ 3 ನೆಲಸಿ ರಸನದಿ | ವಿಲಸಿತಾಮಲಲಲಿತ ಹರಿಗುಣ | ಫಲಿಸಿ ಕೀರ್ತಿಸುಅಲವ ಭೋದರ | ಲಲಿತ ಉಕ್ತಿಲಿಪುಳಕ ಪುಳಕದಿ | ನಿಲಿಸು ಮನ್ಮನವಾ 4 ಸನ್ನುತ ಕ | ಟಾಕ್ಷ ತೋರಿಸು 5
--------------
ಗುರುಗೋವಿಂದವಿಠಲರು
ಅರ್ಚನೆ ಮಾಡಿರಯ್ಯ ಶ್ರೀ ಭಗವದರ್ಚನೆ ಮಾಡಿರಯ್ಯಅರ್ಚನೆ ಮಾಡುವ ಅರ್ಚಕ ಬುಧರಿಗೆಅರ್ಚಿಪ ಪದದಲ್ಲಿಅಚ್ಯುತದೊರೆವನೆಂದುಪ.ಅಂತರಂಗದ ಶುದ್ಧಿಲಿ ತನ್ನ ಬಾಹ್ಯಂತರ ಪರಿಪೂರ್ಣನಚಿಂತಿಸಿ ಸರ್ವಸ್ವತಂತ್ರ ಶ್ರೀ ಹರಿವೇದತಂತ್ರೋಕ್ತ ಪಥದಿ ನಿರಂತರ ಮರೆಯದೆ 1ಪೃಥುಧ್ರುವ ಅಂಬರೀಶ ಸುಧರ್ಮಜ ದಿತಿಜೋದ್ಭವ ಅಕ್ರೂರಕೃತವರ್ಮ ಸಾತ್ಯಕಿ ಯದುಕುಲ ಸುರಖಷಿಯತಿತತಿ ಅರ್ಚಿಸಿ ಅತಿಧನ್ಯರಾದರೆಂದು 2ಅನಂತಮೂರ್ತಿಯೊಳು ತನಗೊಂದು ಧ್ಯಾನಕ್ಕೆ ತಂದುಕೊಂಡುಆನಂದತೀರ್ಥರ ಸಂತತಿಗಳಿಂದತಾನು ಇಷ್ಟನಾಗಿ ನಾರಾಯಣನಾತ್ಮನೆಂದು 3ಬ್ರಹ್ಮಸ್ತೋತ್ರದಿ ಸಹಸ್ರ ಸನ್ನಾಮಪೂರ್ವಕ ಸ್ತೋತ್ರದಿಶ್ರೀಮತ್ಪಂಚಸೂಕ್ತ ಪಂಚಾಮೃತ ಸ್ನಾನರಮ್ಯಾಯುಧ ಕೌಸ್ತುಭಮಣಿ ಮಾಲೆಯಿಂದ 4ಧ್ಯಾನಾವಾಹನ ಸ್ನಾನ ಸುಪಾದ್ಯಾಚಮನಾಘ್ರ್ಯ ಧೂಪದೀಪ ಪ್ರಸೂನ ತುಳಸಿ ಗಂಧಮೋಘ ನೈವೇದ್ಯದಿಂಮಾನಸಾರ್ಚನೆ ಪ್ರತ್ಯಕ್ಷಾಗಲಿ ಎಂತೆಂದು 5ವೀರಾವರ್ಣದ ಮಧ್ಯದಿ ಶ್ರೀ ಮಧುಕೈಟಭಾಂತಕ ಕೃಷ್ಣನಕೋಟಿಕಾಂಚನ ರತ್ನಾಭರಣವೈಜಯಂತಿಕಿರೀಟಕುಂಡಲದಾಮಹಾರ ನೂಪುರಗಳಿಂದ6ದಿವ್ಯಾಂಬರ ಭೂಷಣ ನವರತುನ ಭವ್ಯ ಮಂಟಪವಸನಅವ್ಯಾಕೃತಾಧ್ಯಕ್ಷ ಶ್ರೀಭೂಮುಕ್ತಾಮುಕ್ತಸೇವ್ಯಮಾನನಾಪಾದ ಮೌಳ್ಯಾಂತ ವೀಕ್ಷಿಸಿ7ಬಹು ನೀರಾಂಜನಗಳಿಂದ ಸದ್ವೇದೋಕ್ತ ಗಹಗಹನ ಸೂತ್ರಂಗಳಿಂದಅಹಿವರಶಯನಜ ಭವಾಹಿಪ ವಿಪ್ರವಂದ್ಯಮಹಿಮನನಂತನೆಂತೆಂದು ಪರವಶದಿಂದ 8ತಾಳದಂಡಿಗೆ ಜಾಗಟೆ ಶಂಖ ಮದ್ದಳೆ ಕಂಸಾಳೆಭೇರಿಆಲಾಬುತಂಬೂರಿಭಾಗವತಗಾನಮೇಳೈಸಿ ತುತೂರಿ ವಾಜಂತ್ರಿ ಘೋಷದಿಂದ 9ಅಲವಬೋಧರು ಪೇಳಿದ ಪೂಜಾವಿಧಿಗಳ ಪ್ರದಕ್ಷಿಣೆ ಪ್ರಮಾಣಲಲಿತ ಗೀತ ನೃತ್ಯ ಬಲು ಪ್ರೇಮದಲಿ ಮಾಡಿಹೊಳೆವ ಬಿಂಬಾತ್ಮನ ಕಾಂಬ ಲವಲವಿಕೆಯಿಂದ 10ಆತ್ಮ ಕರ್ತೃತ್ವನೀಗಿಸರ್ವಾಂತರಾತ್ಮ ಪರಮಾತ್ಮನೆಂದುಆತ್ಮ ಮತ್ತೆ ಜಾÕನಾತ್ಮ ಪ್ರೇರಕ ಪ್ರೇರ್ಯಾತ್ಮ ನಿವೇದನ ಭಕ್ತಿ ನವಕಗಳಿಂದ 11ಸರ್ವೇಂದ್ರಿಯ ಮನಸ್ಥ ಮುಖ್ಯಪ್ರಾಣನೋರ್ವ ನಿಯಂತ್ರಹರಿಸರ್ವ ಪ್ರೇರಕನೆಂಬೊ ವಿಜ್ಞಾನಮಾರ್ಗದಿಸರ್ವಕಾಲದಲಿ ಸರ್ವಸಮರ್ಪಣೆಯೆಂದು 12ಮಂದಜನರು ಭಕ್ತಿಲಿ ದೂರ್ವನೀರಿಂದೆ ಪೂಜೆಯ ಮಾಡಲುತಂದೆ ಪ್ರಸನ್ವೆಂಕಟಕೃಷ್ಣ ಕಾರುಣ್ಯಸಿಂಧುಪ್ರಸನ್ನಾತ್ಮಬಂಧು ಮುಕ್ತಿಯನೀವ13
--------------
ಪ್ರಸನ್ನವೆಂಕಟದಾಸರು