ಮುತ್ತೂರೇಶ ಶ್ರೀ ಮರ್ಕಟಾ
ತುಲಸÀದಲಾಯತಾಕ್ಷ ಶ್ರೀರಾಮದೂತಾ ಪ
ಎತ್ತ ಚಲಿಸದಂತೆನ್ನ ಮನವ ತವ
ಪಾದ ಸರೋಜದೊಳಿಟ್ಟು
ಪತ್ತು ತಲೆಯನರಿಯಡಿದಾವರೆಯನು
ನಿತ್ಯ ಭಜಿಸುವಂದದಿ ಮಾಡಯ್ಯ 1
ಆಂಜನೇಯಾ ಭೀಕರ ರೂಪಾ ದಾನವ ಘಾತಕರಾ
ಸತಿ ಮೇದಿನಿ ಸುತೆಯಳ
ಮಂಜುಮಾಡಿ ಖಲ ರಾವಣನೊಯ್ಯಲು ಅಂಜದಿರೆಂದವನಿಪ-
ನಿಗಭಯವಿತ್ತು ಮಂಜುಂ ಕಾರ್ಯವ ನೆರೆದಪೆನೆಂದೀ 2
ಭಾರತೀಯ ಪವÀನತನಯ ಘನತರ ಕಾರ್ಯಕರ್ತಾ
ಶ್ರೀರಾಮದೂತಾ ಘೋರತರದ ಅಪರಾರ್ಣವನು
ಹಾರಿ ದಾಂಟಿ ಲಘು ದಶಮುಖಪುರವನು
ವೀರರಾಘವನಂಘ್ರಿಗೆ ಎರಗಿದಿ ನೀ 3
ದಾನವನಾಶಾ ಜಾನಕೀತ್ರಾತ ದಶರಥಸುತ ಭಜಕಾ
ಆನಂದತೀರ್ಥ ದಾನವ ಕೋಟಿಯ ನಡೆದು ಜವದಿ ನೀ
ಮೌನಿ ಹರಿಗೆ ಸಹಾಯಾಗ್ರಣಿಯಾಗಿ ಹೀನ ರಕ್ಕಸ ದಶ-
ಶಿರವನರಿಸಿ ನೀ ನರಸಿಂಹವಿಠಲನ ದಾಸನೆನಿಸಿದೀ 4