ಒಟ್ಟು 27 ಕಡೆಗಳಲ್ಲಿ , 14 ದಾಸರು , 20 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಿರಿ ನರಸಿಂಗನ ಪಾಡಿರೊ | ಮಂಗಳಮೂರುತಿ ಡಿಂಗರಿಗರ ಹೃಸ್ಸಂಗ ಕರುಣಾತರಂಗಾ ಪ ಮೊರೆಯಿಡಾ ಬಂದ | ಕಂಭದೊಳಿಂದ | ಲೋಕಸ್ವಾಮಿ | ಅಂತರ್ಯಾಮಿ || ಕರುಳಮಾಲೆ ಇಟ್ಟಾ | ಕೊರಳೊಳು ದಿಟ್ಟಾ | ಜಯವೆನುತಿರೆ ಮೆರೆದಾ | ಪ್ರಹ್ಲಾದವರದಾ 1 ಕೊಡುವನು ಚಲುವಾ | ಭಕುತರಿಗೊಲಿವ | ಹರಿ ನಮಗೆಲ್ಲಾ | ಭಕ್ತವತ್ಸಲಾ || ಗುಣಾಂಬುಧಿ ತೇಜ | ರಾಜಾಧಿ ರಾಜ | ಕರ್ತನು ಸಖ್ಯ 2 ಕನಕಮುನೀಶ್ವರ ತಪವನು ಮಾಡಲು ಮೆಚ್ಚಿ | ಬಂದನು ಮೆಚ್ಚಿ | ಕನಕ ವರುಷವನು ಗರೆವದು ಅಂದಿನ ದಿನದಿ | ಆನಂದವನಧಿ | ಕನಕ ನೃಕೇಸರಿ ಎನಿಸಿದಾ ಅಂದಿನಾರಭ್ಯಾ | ಈತನೆ ಸಭ್ಯಾ | ನುತಿಸಲು ಸುಳಿವಾ 3 ಇದು ಪುಸಿಯಲ್ಲಾ | ವೇದಾ | ಪೇಳ್ವದು ಮೋದಾ || ಅವನೇ ದನುಜಾ | ನಮಗೀತ ತಂದೆ 4 ನಿಧಿಯೊಳು ಧನದಾ | ದಿಕ್ಕಿಲಗಾಧಾ | ಮುನಿಜನ ಸಮ್ಮತ ಶ್ರುತಿ ಉಕ್ತಿಗಳಲ್ಲಿ ಅಕ್ಕು | ಕೇಳೀವಾಕು | ಮಾಡಲು ಭಕುತಿ | ಉಂಟು ವಿರಕುತಿ | ವಿಠ್ಠಲ ನರಸಿಂಗಾ | ರಿಪುಗಜ ಸಿಂಗಾ 5
--------------
ವಿಜಯದಾಸ
ಹನುಮನ ಬಲಗೊಂಬೆ ಹರುಷದಲೆನಮ್ಮ ತನುಮನ ಧನ ಈತಗೊಪ್ಪಿಸುತಲೆ ಪ. ರಾಣಿಗೆ ಮುದ್ರೆಯನಿಟ್ಟ ಜಾಣನೆನುತಲೆಮುಖ್ಯ ಪ್ರಾಣ ಮುಯ್ಯಾ ಗೆಲೆಸೋ ಈ ಕ್ಷಣ ಎನುತಲೆ 1 ಕೋತಿಯ ಸ್ವರೂಪನಾದ ಈತನೆನುತಲೆ ದೈತ್ಯ ಜಾತಿಯ ಸಂಹರಿಸಿ ಬಂದ ಖ್ಯಾತನೆನುತಲೆ2 ಸೀತೆಯ ಮನೆಗೆ ತಂದ ಮಹಾತ್ಮನೆನುತಲೆಈತಗೆ ಜೋಡ್ಯಾರು ಮುಂದೆ ಖ್ಯಾತನೆನುತಲೆ 3 ಕೃಷ್ಣನ ಸೇವೆಗೆ ಅತಿ ನಿಷ್ಠ ನೆನುತಲೆದುಷ್ಟ ಕೌರವರ ಕೊಂದ ಶ್ರೇಷ್ಠ ನೆನುತಲೆ 4 ಶ್ರೀಶ ರಾಮೇಶಗೆ ಮುಖ್ಯದಾಸನೆನುತಲೆ ವಾಸವಾದ ಬದರಿಯಲಿ ಮಧ್ವೇಶನೆನುತಲೆ5
--------------
ಗಲಗಲಿಅವ್ವನವರು
ಹ್ಯಾಗೆ ಉದ್ಧಾರ ಮಾಡುವನೋ ಹರಿ ಹೀಗೆ ದಿನಗಳ ಕಳೆಯುವರ ಪ. ಆದಿಮೂರುತಿ ಶ್ರೀ ದೇವ ಪದುಮನಾಭ ವೇದ ಉದ್ಧಾರನೆಂದನಲಿಲ್ಲ ಸಾದರದಲಿ ಹರಿ ಸಕಲರಿಗೊಡೆಯನೆಂ ದಾದರದಲಿ ನಾ ಪಾಡಲಿಲ್ಲ 1 ಮೃಚ್ಛಕೂರ್ಮಹರಿ ಸ್ವಚ್ಛÀವರಹನೆಂದು ಉಚ್ಚಧ್ವನಿಯಿಂದ ಕೂಗಲಿಲ್ಲ ತುಚ್ಛಕನ ಕೊಂದು ಅಚ್ಚ ಭಾಗವತಗೆ ಮೆಚ್ಚಿ ರಕ್ಷಿಸಿದನೆಂದೆನಲಿಲ್ಲ 2 ಚಲುವ ವಾಮನನಾಗಿ ಬಲಿಯ ದಾನವ ಬೇಡಿ ಮಲವನಳಿವ ಗಂಗೆ ಪಡೆದನೆಂದು ಕುಲವಳಿದು ಭೂಲಲನೆಯ ವಿಪ್ರರಿ ಗೊಲಿದು ಇತ್ತನೆಂದು ನೆನೆಯಲಿಲ್ಲ 3 ಸೀತೆಗಾಗಿ ಪಡೆಸವರುತ ಹರುಷದಿ ವಾತತನಯಗಜಪದವಿತ್ತನ ಈತನೆ ಪರದೈವನಾಥನು ಪರಕೆಂದು ಪ್ರೀತಿ ಭಕ್ತಿಯಲಿ ಮೈಮರೆಯಲಿಲ್ಲ 4 ಗೋಪಿಯರ ಕೂಡಿ ಗೋಪನ ಮನೆಯಲಿ ಶ್ರೀಪತಿ ಲೀಲೆಯ ತೋರ್ದನೆಂದು ಪಾಪದ ಕಾಷ್ಠಕೆ ಪಾವಕನಾಗಿಹ ತಾಪಹರನ ನಾ ನೆನೆಯಲಿಲ್ಲ 5 ಲಲನೇರ ವ್ರತವಳಿದು ಚಲುವ ಕುದುರೆ ಏರಿ ಕಲಿಮುಖರನು ಸದೆಬಡಿದನೆಂದು ಚಲುವ ಗೋಪಾಲನೆ ನೀನೇ ಗತಿ ಎಂದು ಹಲವು ಬಗೆಯಿಂದ ಪೊಗಳಲಿಲ್ಲ 6 ಗುರುಗಳು ಪೇಳಿದ ಪರಮ ರಹಸ್ಯವು ಅರಿವಾದರೂ ಅನುಭವ ಇಲ್ಲ ಪರಿಪರಿ ಮಹಿಮೆಯ ಉದಯಸ್ತ ಪರಿಯಂತ ಅರಿವು ಮನಕೆ ಎನಗಾಗಲಿಲ್ಲ 7 ದೇಹಸ್ತ ಹರಿ ಎಂದು ದೇಹವ್ಯಾಪ್ತನು ಎಂದು ದೇಹ ಗೇಹ ಜೀವ ಭಿನ್ನವೆಂದು ಶ್ರೀ ಹರಿ ಜೀವಾಂತರ್ಯಾಮಿಯಾಗಿಹನೆಂದು ಮೋಹವಳಿದು ಜ್ಞಾನ ಪುಟ್ಟಲಿಲ್ಲ 8 ತತ್ವಾಧಿಪತಿ ಹರಿ ತತ್ವಾಭಿಮಾನಿಗಳು ನಿತ್ಯ ಹರಿಮಾರ್ಗ ತೋರ್ವರೆಂದು ಸತ್ಯವಚನವನು ವಾಯು ಮತದಿ ನಂಬಿ ಭೃತ್ಯ ಭಾವವ ನಾ ವಹಿಸಲಿಲ್ಲ 9 ಎಷ್ಟು ಹೇಳಲಿ ಎನ್ನ ಅವಗುಣಗಳನೆಲ್ಲ ದೃಷ್ಟಿಯಿಂದಲಿ ನೋಡಿ ನೀನೆ ಸಲಹೋ ಬೆಟ್ಟದೊಡೆಯನಾಗಿ ಎಲ್ಲರ ಸಲಹುವ ಅಷ್ಟಭುಜ ಗೋಪಾಲಕೃಷ್ಣವಿಠಲ10
--------------
ಅಂಬಾಬಾಯಿ
ಉತ್ಥಾನ ದ್ವಾದಶಿಯ ದಿವಸ(ಕಾರ್ತೀಕ ಶುದ್ಧ ದ್ವಾದಶಿಯ ಉತ್ಸವ)ರಂಭೆ : ಮಾನಿನೀ ಈತನಾರೆಂದೆನೆಗೆ ಪೇಳೆ ಮಾನಿನೀ ಪ.ಮಾನಿನೀಮಣಿ ಈತನ್ಯಾರೆ ಕರುಣಾನಿಧಿಯಂತಿಹ ನೀರೆ ಹಾ ಹಾಭಾನುಸಹಸ್ರ ಸಮಾನಭಾಷಿತ ಮ-ಹಾನುಭಾವನು ಸುಪ್ರವೀಣನಾಗಿಹ ಕಾಣೆ 1ಭಯಭಕ್ತಿಯಿಂದಾಶ್ರಿತರು ಕಾಣಿ-ಕೆಯನಿತ್ತುನುತಿಸಿಪಾಡಿದರು ನಿರಾ-ಮಯ ನೀನೇ ಗತಿಯೆಂದೆಲ್ಲವರು ಹಾ ಹಾಭಯನಿವಾರಣ ಜಯ ಜಯವೆಂದು ನುತಿಸೆ ನಿ-ರ್ಭಯಹಸ್ತತೋರುತ ದಯಮಾಡಿ ಪೊರಟನೆ2ಭೂರಿವಿಪ್ರರ ವೇದ ಘೋಷದಿಂದಸ್ವಾರಿಗೆ ಪೊರಟ ವಿಲಾಸ ಕೌಸ್ತು-ಭಾರತ್ನ ಹಾರ ಸುಭಾಸ ಹಾ ಹಾಚಾರುಕಿರೀಟಕೇಯೂರಪದಕಮುಕ್ತಾಹಾರಾಲಂಕಾರ ಶೃಂಗಾರನಾಗಿರುವನು 3ಸೀಗುರಿ ಛತ್ರ ಚಾಮರದ ಸಮವಾಗಿ ನಿಂದಿರುವ ತೋರಣದ ರಾಜಭೋಗನಿಶಾನಿಯ ಬಿರುದ ಹಾ ಹಾಮಾಗಧಸೂತ ಮುಖ್ಯಾದಿ ಪಾಠಕರ ಸ-ರಾಗ ಕೈವಾರದಿ ಸಾಗಿ ಬರುವ ಕಾಣೆ 4ಮುಂದಣದಲಿ ಶೋಭಿಸುವ ಜನಸಂದಣಿಗಳ ಮಧ್ಯೆ ಮೆರೆವ ತಾರಾವೃಂದೇಂದುವಂತೆ ಕಾಣಿಸುವ ಹಾಹಾಕುಂದಣಖಚಿತವಾದಂದಣವೇರಿ ಸಾ-ನಂದದಿ ಬರುವನು ಮಂದಹಾಸವ ಬೀರಿ 5ತಾಳ ಮೃದಂಗದ ರವದಿಶ್ರುತಿವಾಲಗಭೇರಿರಭಸದಿ ಜನಜಾಲಕೂಡಿರುವ ಮೋಹರದಿ ಹಾಹಾಸಾಲು ಸಾಲಾಗಿ ಬೊಂಬಾಳ ದೀವಟಿಗೆ ಹಿ-ಲಾಲು ಪ್ರಕಾಶದಿ ಲೋಲನಾಗಿಹ ಕಾಣೆ 6ಊರ್ವಶಿ: ಈತನೆ ಭಾಗ್ಯನಿಧಿ ನೋಡೆ ನೀ ಮುದದಿ ಪ.ಈತನೆ ಈರೇಳು ಲೋಕದದಾತನಾರಾಯಣ ಮಹಾ ಪುರು-ಹೂತ ಮುಖ್ಯಾಮರವಿನುತನಿ-ರ್ಭೀತ ನಿರ್ಗುಣ ಚೇತನಾತ್ಮಕ ಅ.ಪ.ಮೀನ ರೂಪವೆತ್ತಾಮಂದರಪೊತ್ತಭೂನಿತಂಬಿನಿಯ ಪ್ರೀತಮಾನವಮೃಗಾಧಿಪ ತ್ರಿವಿಕ್ರಮದಾನಶಾಲಿ ದಶಾನನಾರಿ ನ-ವೀನ ವೇಣುವಿನೋದ ದೃಢ ನಿ-ರ್ವಾಣ ಪ್ರವುಢ ದಯಾನಿಧಿ ಸಖಿ 1ವಾರಿಜಾಸವಾನವಂದಿತ ಶ್ರೀಪಾದಯುಗ್ಮವತೋರಿಕೊಂಬುವ ಸಂತತಕೇರಿಕೇರಿಯ ಮನೆಗಳಲಿ ದಿ-ವ್ಯಾರತಿಯ ಶೃಂಗಾರ ಭಕ್ತರ-ನಾರತದಿ ಉದ್ಧಾರಗೈಯಲುಸ್ವಾರಿ ಪೊರಟನು ಮಾರಜನಕನು 2ಮುಗುದೆ ನೀ ನೋಡಿದನು ಕಾಣಿಕೆಯ ಕ-ಪ್ಪಗಳ ಕೊಳ್ಳುವನು ತಾನುಬಗೆಬಗೆಯ ಕಟ್ಟೆಯೊಳು ಮಂಡಿಸಿಮಿಗಿಲು ಶರಣಾಗತರ ಮನಸಿನಬಗೆಯನೆಲ್ಲವ ಸಲ್ಲಿಸಿ ಕರುಣಾಳುಗಳ ದೇವನು ಕರುಣಿಸುವ ನೋಡೆ 3ರಂಭೆ : ದೃಢವಾಯಿತೆಲೆ ನಿನ್ನ ನುಡಿಯು ಸುರಗಡಣಓಲಗಕೆ ಇಮ್ಮಡಿಯು ಜನ-ರೊಡಗೂಡಿ ಬರುತಿಹ ನಡೆಯು ಹಾ ಹಾಮೃಡಸರೋಜ ಸುರಗಡಣ ವಂದಿತಕ್ಷೀರಕಡಲ ಶಯನ ಜಗದೊಡೆಯನಹುದು ಕಾಣೆ 1ಮದಗಜಗಮನೆ ನೀ ಪೇಳೆ ದೇವಸದನವ ಪೊರಡುವ ಮೊದಲೇ ಚಂದ-ನದಪಲ್ಲಂಕಿಯ ತಂದು ಮ್ಯಾಲೆ ಹಾ ಹಾಮುದದಿಂದ ಬಾಲಕರೊದಗಿ ಸಂತೋಷದಿಚದುರತನದಿ ಪೋಗುವನು ಪೇಳೆಲೆ ನೀರೆ 2ಊರ್ವಶಿ: ನಾರೀಮಣಿ ನೀ ಕೇಳೆ ಚಕ್ರೋತ್ಸವಶ್ರೀರಮಾಧವನ ಲೀಲೆಘೋರದೈತ್ಯಕುಠಾರ ಲಕ್ಷ್ಮೀನಾರಾಯಣನ ಬಲಕರ ಸರೋಜದಿಸೇರಿ ಕುಳಿತ ಗಂಭೀರ ದಿನಪನಭೂರಿತೇಜದಿ ಮೆರೆವುದದು ತಿಳಿ 1ದೊರೆಯು ಬರುವನು ಎಂದು ಎಲ್ಲರಿಗೆ ಗೋ-ಚರಿಸುವನೊಲಿದುಇಂದುತರ ತರದ ಆರತಿಗಳನು ನೀವ್ಧರಿಸಿ ನಿಂದಿರಿಯೆಂದು ಜನರಿಗೆ-ಚ್ಚರಿಗೆಗೋಸುಗ ಮನದ ಭಯವಪ-ಹರಿಸಿ ಬೇಗದಿ ಪೊರಟು ಬಂದುದುರಂಭೆ :ಸರಸಿಜನಯನೆ ನೀ ಪೇಳೆಸೂರ್ಯಕಿರಣದಂತಿಹುದೆಲೆ ಬಾಲೆ ಸುತ್ತಿಗೆರಕವಾಗಿಹುದು ಸುಶೀಲೆ ಆಹಾಹರಿಯ ವೈಕುಂಠ ನಗರದಂತೆ ಜ್ಯೋತಿ ವಿ-ಸ್ತರವಾಗಿ ಸುತ್ತಿನೊಳ್ ಮೆರೆವುದಿದೇನೆಲೆ 1ಊರ್ವಶಿ : ಸಾದರದಲಿ ನೀ ಕೇಳೆ ಕಾರ್ತಿಕ ಶುದ್ಧದ್ವಾದಶಿಯೊಳಗೆ ಬಾಲೆಮಾಧವನ ಪ್ರೀತ್ಯರ್ಥವಾಗಿ ಶು-ಭೋದಯದಿ ಸಾಲಾಗಿ ದೀಪಾರಾಧನೆಯ ಉತ್ಸಹದ ಮಹಿಮೆಯಸಾದರದಿ ನೀ ನೋಡೆ ಸುಮನದಿ 1ನಿಗಮಾಗಮದ ಘೋಷದಿ ಸಾನಂದ ಸು-ತ್ತುಗಳ ಬರುವ ಮೋದದಿಬಗೆ ಬಗೆಯ ನರ್ತನ ಸಂಗೀತಾದಿಗಳ ಲೋಲೋಪ್ತಿಯ ಮನೋಹರದುಗುಮಿಗೆಯ ಪಲ್ಲಂಕಿಯೊಳು ಕಿರು 2ನಗೆಯ ಸೂಸುತ ನಗಧರನು ಬಹಚಪಲಾಕ್ಷಿ ಕೇಳೆ ಈ ವಸಂತ ಮಂ-ಟಪದಿ ಮಂಡಿಸಿದ ಬೇಗಅಪರಿಮಿತ ಸಂಗೀತ ಗಾನ ಲೋ-ಲುಪನು ಭಕ್ತರ ಮೇಲೆ ಕರುಣದಿಕೃಪೆಯ ಬೀರಿ ನಿರುಪಮ ಮಂಗಲಉಪಯಿತನು ತಾನೆನಿಸಿ ಮೆರೆವನು 3ಪಂಕಜಮುಖಿನೀ ಕೇಳೆ ಇದೆಲ್ಲವುವೆಂಕಟೇಶ್ವರನ ಲೀಲೆಶಂಕರಾಪ್ತನು ಸಕಲ ಭಕ್ತಾತಂಕವನು ಪರಿಹರಿಸಿಕರಚಕ್ರಾಂಕಿತನು ವೃಂದಾವನದಿ ನಿಶ್ಯಂಕದಿಂ ಪೂಜೆಯಗೊಂಡನು 4ಕಂತುಜನಕನಾಮೇಲೆ ಸಾದರದಿ ಗೃ-ಹಾಂತರಗೈದ ಬಾಲೆಚಿಂತಿತಾರ್ಥವನೀವ ಲಕ್ಷ್ಮೀಕಾಂತ ನಾರಾಯಣನು ಭಕುತರತಿಂಥಿಣಿಗೆ ಪ್ರಸಾದವಿತ್ತೇ-ಕಾಂತ ಸೇವೆಗೆ ನಿಂತಮಾಧವ5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಪೂರ್ಣಿಮೆಯ ದಿನ(ಗರುಡ ದೇವರನ್ನು ಕುರಿತು)ರಂಭೆ : ಮಂದಗಮನೆ ಪೇಳಿದಂದವನೆಲ್ಲ ಸಾ-ನಂದದಿ ತಿಳಿದೆನೆ ಬಾಲೆಇಂದಿದು ಪೊಸತು ಮತ್ತೊಂದುವಾಹನವೇರಿಮಂದರಧರಬಹನ್ಯಾರೆ1ಅಕ್ಕ ನೀ ಕೇಳಲೆ ರಕ್ಕಸವೈರಿಯಪಕ್ಕದ ಮೇಲೇರಿಸುತಅಕ್ಕರದಿಂದ ಕಾಲಿಕ್ಕಿ ಬರುವನೀತಹಕ್ಕಿಯಂತಿಹನೆಲೆ ಜಾಣೆ 2ಘೋರನಾಸಿಕದ ಮಹೋರಗ ಭೂಷಣಧಾರಿವನ್ಯಾರೆಂದು ಪೇಳೆಮಾರಜನಕಗೆ ವಾಹನನಾಗುವನೀತಕಾರಣವೇನೆಂದು ಪೇಳೆ 3ಊರ್ವಶಿ : ಈತನೆ ಮಹಾತಿಬಲ ಕಾಣೆ ಶ್ರೀವಿಷ್ಣುವಿಂಗೆಕೇತನನಾದ ಪುನೀತನೆಲೆ ಜಾಣೆಭೀತಿರಹಿತವಿಖ್ಯಾತಿ ಸರ್ಪಾ-ರಾತಿ ಸೂರ್ಯಾನ್ವಯನ ಬಲಗಳಚೇರಿಸಿದ ನಿಷ್ಕಾತುರನಹರಿಪ್ರೀತ ವಿನತಾ ಜಾತ ಕಾಣಲೆ 4ಗಂಡುಗಲಿ ಮಾರ್ತಾಂಡತೇಜಮಖಂಡಬಲನಿವನು ಮಾತೆಯಲಂಡಲೆಯ ಪರಿಖಂಡನಾರ್ಥದಿಚಂಡವಿಕ್ರಮನು ನೇಮವಗೊಂಡು ಬಳಿಕಾಖಂಡಲಾದ್ಯರತಂಡವೆಲ್ಲವನು ಕೋಪದಿಗಿಂಡುಗೆದರಿಯಜಾಂಡವೆಲ್ಲವನಂಡಲೆದು ಕರದಂಡನಾಭನಕಂಡು ಮೆಚ್ಚಿಸಿ ಅಮೃತಕುಂಭವಕೊಂಡುಬಂದವನಂಡಜಾಧಿಪ 5ವಾರಿಜಾಸನೆ ವಾಸುದೇವನುಭೂರಿವೈಭವದಿ ಗರುಡನನೇರಿ ಪೂರ್ಣಮಿವಾರದಲಿ ಸಾಕಾರವನುದಯದಿ ತೋರುತಸ್ವಾರಿ ಬರುತ ಶೃಂಗಾರಮೂರುತಿ ಭೇರಿಗಳರವದಿಸನಕಸ-ನಾರದಾದಿಮುನೀಂದ್ರವಂದಿತಚಾರುಚರಣವ ತೋರಿ ಭಕ್ತರಘೋರದುರಿತವ ಸೊರೆಗೊಳ್ಳಲುಶ್ರೀರಮಾಧವ ಮಾರಜನಕನು 6
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ