ಒಟ್ಟು 20 ಕಡೆಗಳಲ್ಲಿ , 9 ದಾಸರು , 20 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಜರು ಹರಿಭಟರು ದುರಿತಾರಿಗಂಜರು ಹರಿಭಟರುಮಂಜಿನ ದಂಡೋಡಿಪ ಮೂಡಣವರಕಂಜಸಖನ ಪೋಲ್ವವರು ಪ.ಅಗ್ಗಳಿಕೆಯೈಗಣೆಯನ ಬಲದಲಿಮುಗ್ಗದೆ ಕುಲಿಶೆದೆಯಲ್ಲಿ ವೈರಾಗ್ಯಾಸ್ತ್ರದಿ ಈರೈದಾಳಾಣ್ಮನಕುಗ್ಗಿಸಿ ಸೆರೆ ತರುವವರು 1ಮೂರರಾಯುಧ ಹತಿಭಯಜರಿದುವಾರಣನಾಕೆರಡಿರಿದು ಶೃಂಗಾರದ ರಾಹುತರೆಂಟರ ಸದೆವರುವೀರಹರಿಧ್ವನಿಯವರು2ಎರಡೊಂಬತ್ತು ನಾದಿಕಾಭೇರಿಎರಡು ಕಹಳೆಯ ಚೀರಿಸರಕುಮಾಡಿ ನವಕಲಿ ಸಂಜಿತರುಹರಿಮಂಡಿತ ನವರಥರು3ಒಂದೆ ನಿಷ್ಠೆಯ ರಣಧ್ವಜ ಮೇರೆಗೆಹಿಂದಾಗದೆ ಮುಂದಾಗಿಒಂದಿಪ್ಪತ್ತರಿ ವ್ಯೂಹ ಕೆಡಹುವರುಕುಂದದ ಧೃತಿ ಮತಿಯವರು 4ಹಂಗಿನ ಸ್ವರ್ಗವ ಸೂರ್ಯಾಡುವರುಡಂಗುರ ಹೊಯ್ಯುವ ಮಹಿಮರುರಂಗ ಪ್ರಸನ್ವೆಂಕಟಪತಿ ಭಟರುಮಂಗಳಪದ ಲಂಪಟರು 5
--------------
ಪ್ರಸನ್ನವೆಂಕಟದಾಸರು
ಏನೆಂತೊಲಿದೆ ಇಂತವರಂತೆ ಕೆಡುಬುದ್ಧಿ - ಎನ್ನೊಳಿಲ್ಲಗುಣ |ಹೀನರಲ್ಲದ ದೀನ ಜನರ ಪಾಲಿಪ ಬುದ್ಧಿ ನಿನ್ನೊಳಿಲ್ಲ ಪತರಳ ಪ್ರಹ್ಲಾದನಂದದಿ ನಿನ್ನಯರೂಪ ಕೆಡಿಸಲಿಲ್ಲನರನಂತೆ ತನ್ನ ಬಂಡಿಯ ಬೋವನ ಮಾಡಿ ಹೊಡಿಸಲಿಲ್ಲ ||ಸುರನದೀಸುತನಂತೆ ಪಣೆಯೊಳು ಬಾಣವ ಸಿಡಿಸಲಿಲ್ಲದೊರೆ ಅಂಬರೀಷನಂದದಿ ಈರೈದು ಜನ್ಮವ ಪಡಿಸಲಿಲ್ಲ 1ನಾರದನಂತೆ ಕಂಡವರ ಕೊಂಡೆಯವ ನಾ ಪೇಳಲಿಲ್ಲ |ಪರಾಶರನಂತೆ ನದಿಯೊಳಂಬಿಗ ಹೆಣ್ಣ ಕೊಡಲಿಲ್ಲ ||ಆ ರುಕುಮಾಂಗದನಂತೆ ಸುತನ ಕೊಲ್ಲಲು ಧೃಢಮಾಡಲಿಲ್ಲಮಾರುತನಂತೆ ನೀನುಣುತಿದ್ದ ಎಡೆಯ ಕೊಂಡೋಡಲಿಲ್ಲ 2ವಿದುರನಂತೆ ನನ್ನ ಸದನವ ಮುರಿದು ನಾ ಕುಣಿಯಲಿಲ್ಲಮದಕರಿಯಂತೆ ಮಕರಿಯ ಬಾಯೊಳು ಸಿಕ್ಕಿ ಒದರಲಿಲ್ಲ ||ಹೆದರದೆ ಬಲಿಯಂತೆ ಭೂಮಿಯ ಧಾರೆಯನೆರೆಯಲಿಲ್ಲಸದರ ಮಾತುಗಳಾಡಿ ಶಿಶುಪಾಲನಂತೆ ನಾ ಜರೆಯಲಿಲ್ಲ3ಸನಕಾದಿ ಮುನಿಯಂತೆಅನುದಿನ ಮನದೊಳು ಸ್ಮರಿಸಲಿಲ್ಲಇನಸುತ ಕಪಿಯಂತೆ ವಂಚಿಸಿ ವಾಲಿಯ ಕೊಲಿಸಲಿಲ್ಲ ||ಬಿನುಗು ಬೇಡತಿಯಂತೆ ಸವಿದುಂಡ ಹಣ್ಣ ನಾ ತಿನಿಸಲಿಲ್ಲಘನ ಅಜಾಮಿಳನಂತೆ ಸುತನ ನಾರಗನೆಂದು ಕರೆಯಲಿಲ್ಲ4ವರ ಶೌನಕನಂತೆನಿತ್ಯ ಸೂತನ ಕಥೆ ಕೇಳಲಿಲ್ಲಪಿರಿದು ತುಂಬುರುನಂತೆ ನಾಟ್ಯ - ಸಂಗೀತವ ಪೇಳಲಿಲ್ಲ ||ಉರಗಾಧಿಪತಿಯಂತೆ ಉದರದೊಳಿಟ್ಟು ನಾ ತೂಗಲಿಲ್ಲಪಿರಿದು ಕುಚೇಲನ ತೆರನಂತೆ ಅವಲಕ್ಕಿ ಈಯಲಿಲ್ಲ 5ಭೃಗುಮುನಿಯಂತೆ ಗರ್ವದಿ ನಿನ್ನ ಎದೆಯನು ಒದೆಯಲಿಲ್ಲಅಗಣಿತ ಮಹಿಮ ನೀನಹುದೆಂದು ಧ್ರುವನಂತೆ ಪೊಗಳಲಿಲ್ಲ ||ಖಗರಾಜನಂತೆ ನಿನ್ನನು ಪೊತ್ತು ಗಗನದಿ ತಿರುಗಲಿಲ್ಲಅಗಜೆಯರಸನಂತೆ ಮಸಣದಿ ರಾಮನ ಸ್ಮರಿಸಲಿಲ್ಲ 6ಅವಹಿತದಲಿ ವಿಭೀಷಣನಂತೆ ಅಣ್ಣನ ಕೊಲಿಸಲಿಲ್ಲಯುವತಿ ದ್ರೌಪದಿಯಂತೆ ಪತ್ರಶಾಕವನುಣಬಡಿಸಲಿಲ್ಲ ||ತವೆ ಪುಂಡಲೀಕನಂದದಿ ಇಟ್ಟಿಗೆಯ ಮೇಲೆ ನಿಲಿಸಲಿಲ್ಲ ದೇವಇವರಂತೆಪುರಂದರ ವಿಠಲ ನಿನ್ನಯ ಕೃಪೆಯೆನ್ನೊಳಿಲ್ಲ7ಅಂಕಿತದಲ್ಲೂ ಇವೆ.)
--------------
ಪುರಂದರದಾಸರು
ಕಕ್ಷಾದೇವತೆಗಳ ಮನನ115ಪ್ರಾಣ ಪಾಲೀಸಿಂದ್ರಾನ ರಾಣೀ ದಕ್ಷಾನಿರುದ್ಧಾ |ಮಾನಿನಿರತಿಮನುಗುರುವಾಯು ಕೋಲೆ ||ಮಾನಿನಿರತಿಮನುಗುರುವಾಯು ಯಮಸೋಮ|ಮಾನವಿ ಭಾಸ್ಕರಗೆರಗೂವೆ ಕೋಲೆ 1ವರುಣ ನಾರದವಹ್ನಿತರುಣಿ ಪ್ರಸೂತಿ ಭೃಗು |ಸರಸೀಜಾಸನನ ಪುತ್ರರಾರೊಂದು ಕೋಲೆ ||ಸರಸೀಜಾಸನನ ಪುತ್ರರಾರೊಂದು ಮಂದಿಗಳ |ವರನಾಮ ವಿಸ್ತರಿಸಿ ವಂದಿಪೆ ಕೋಲೆ 2ಅಂಗೀರಾ ಪುಲಸ್ತ್ಯ ಅತ್ರಿ ಮಂಗಳಾಂಗ ಪುಲಹ ಕೃತು |ತುಂಗವಶಿಷ್ಠಿ ಮರೀಚಿಗೊಂದಿಪೆ ಕೋಲೆ ||ತುಂಗವಶಿಷ್ಠ ಮರೀಚಿ ವಿಶ್ವಾಮಿತ್ರನಿಗೆ ಮತ್ಸ್ಯಾ |ನಂಗ ಕಂಡ ವೈವಸ್ವತಗೊಂದಿಸುವೆ ಕೋಲೆ3ನಿರರುತಿ ಪ್ರಾವಾಹಿಮಿತ್ರಗುರುಪತ್ನೀಗೆ ವಂದಿಸುವೆ |ಕರಿಮುಖ ವಿಶ್ವಕ್ಸೇನ ಪೌಲಸ್ತ್ಯ ಕೋಲೆ ||ಕರಿಮುಖ ವಿಶ್ವಕ್ಸೇನ ಪೌಲಸ್ತ್ಯ ಅಶ್ವಿನೀಗ |ಳಿರಳೂ ಹಗಲೂ ನಾ ಸ್ಮರಿಸೂವೆ ಕೋಲೆ 4ಮರುತೂ ನಾಲ್ವತ್ತೊಂಬತ್ತುಗುರುವಿಶ್ವೇದೇವ ಹತ್ತು |ಎರಡು ಅಶ್ವೀನೀ ರುದ್ರರ್ಹನ್ನೊಂದೂ ಕೊಲೆ ||ಎರಡು ಅಶ್ವೀನೀ ರುದ್ರರ್ಹನ್ನೊಂದೂ ವಸುಯಂಟು |ಎರಡಾರು ಸೂರ್ಯರಿಗೆರಗೂವೆ ಕೋಲೆ 5ಭಾರತೀ ಭರತಾಗೆ ಮೂರು ಪಿತೃಗಳಿಗೆ |ಧಾರೂಣೀ ಋಭುವೀಗೆರಗುವೆ ಕೋಲೆ ||ಧಾರೂಣೀ ಋಭುವೀಗೆರಗೂವೆ ತಿಳೀವದು |ನೂರು ಮಂದೆಂದೂ ಕರಸೋರು ಕೋಲೆ 6ಮೂರು ಮಂದೀ ಉಳಿದೂ ಈರೈದು ಒಂದು ಮನು |ಚಾರುನಾಮಗಳ ವರ್ಣೀಪೆ ಕೋಲೆ ||ಚಾರುನಾಮಗಳ ವರ್ಣೀಪೆ ದಯಮಾಡಿ |ಸೂರಿಗಳೆಲ್ಲಾ ಕೇಳ್ವೋದು ಕೋಲೆ 7ಸ್ವಾರೋಚೀಷೋತ್ತುಮಾನು ಶ್ರೀ ರೈವತ ಚಾಕ್ಷುಷಾ |ನಾರಾಯಣನ ದಾಸ ಸಾವರ್ಣಿ ದಕ್ಷಾ ಕೋಲೆ ||ನಾರಾಯಣನ ದಾಸ ಸಾವರ್ಣಿ ದಕ್ಷ ಬ್ರಹ್ಮ |ಮಾರಾರಿದೇವ ಧರ್ಮ ಇಂದ್ರ ಸಾವರ್ಣೀ ಕೋಲೆ 8ಎಂದಿವರೀಗೊಂದೀಸಿ ಮುಂದೆ ಚವನ ಋಷಿ |ನಂದಾನೋಚಿತ್ಥ್ಯ, ಪಾವಕಾ, ಧೃವ, ನಹುಷ ಕೋಲೆ ||ನಂದಾನೋಚಿತ್ಥ್ಯಪಾವಕಧೃವನಹುಷಶಶಿ|ಬಿಂದೂ ಪ್ರಹ್ಲಾದ ಪ್ರಿಯ ವೃತಗೊಂದಿಸುವೆ ಕೋಲೆ9ಶಾಮಲಾ ಗಂಗಾ ಉಷಾ ಸೋಮರಾಣಿ ಸಂಜ್ಞಾ |ಧೀಮಂತ ಪರ್ಜನ್ಯಾಖ್ಯ ಸೂರ್ಯಗೆ ಕೋಲೆ ||ಧೀಮಂತ ಪರ್ಜನ್ಯಾಖ್ಯ ಸೂರ್ಯಗೆ ವಂದಿಸೀ ಅನ |ಭೀ ಮಾನೀ ಸೂರರನ್ನ ಮನದೊಳು ನೆನವೆನೆ ಕೋಲೆ 10ಅನಲರಸೀಬುಧಅಶ್ವಿನಿ ಭಾರ್ಯಾ ಛಾಯಾ ಪುತ್ರ |ಶನಿ ಪುಷ್ಕರಜಾನೂಜ ದೇವತಿಗಳಿಗೆ ಕೋಲೆ ||ಶನಿ ಪುಷ್ಕರಜಾನೂಜ ಮನ ದೇವತೆಗಳಿಗೊಂದಿಪೆ ಸು |ಪ್ರಾಣೇಶ ವಿಠಲಾನಲ್ಲಿರಲೆಂದು ಕೋಲೆ 11ಉರುವಸೀ ಮುಖ್ಯ ಅಪ್ಸರ ಸ್ತ್ರೀಯರೀಗೊಂದಿಸೀ |ಹರಿನಾರಿಯರ ಪಾದಕ್ಕೆರಗೂವೆ ಕೋಲೆ ||ಹರಿನಾರಿಯರ ಪಾದಕ್ಕೆರಗಿ ಪಿತೃಗಂಧರ್ವ |ನರನಾರಪತಿಮನುಷ್ಯೋತ್ತಮರಿಗೊಂದಿಸುವೆ ಕೋಲೆ12ಈ ನಿರ್ಜರರ ಧ್ಯಾನವನ್ನು ಮಾಡುತ್ತಾ |ಪ್ರಾಣೇಶ ವಿಠಲನ ಆ ನಾಭಿಯಿಂದ ||ಪ್ರಾಣೇಶ ವಿಠಲನ ಆ ನಾಭಿಯಿಂದ ಬಂದ |ಜ್ಞಾನಿಗಳ ಸಂತತೀ ನಾ ವರ್ಣಿಸುವೆ ಕೋಲೆ 13
--------------
ಪ್ರಾಣೇಶದಾಸರು
ಭಳಿ ಭಳಿರೆ ಭಳಿರೆ ಹನುಮಭಳಿ ಭಳಿರೆ ಋಜುನಿಕರ ಮಕುಟಮಣಿ ಪ.ಅಂಜನಿಜಠರಸಂಜನಿತಪ್ರಾಜÕಮೌಂಜಿಯುತಕೋದಂಡಧೃತಕರಕಂಜನೆದುರಲಿ ಪ್ರಾಂಜಲಿತ ಬಹುಭಕುತಿ ಅಭಿನಯಅಚ್ಛಿನ್ನ ಅಚ್ಚಿನೊಳು ಶುಭಚಿಹ್ನಪಾವನ್ನಗುಣರನ್ನ ಪರಿಪೂರ್ಣಅ.ಪ.ತಾಟಕಾಂತಕ ಭಟರೊಳು ನೀಮೀಟೆನಿಸಿ ಧೀಂಕಿಟ್ಟು ಶರಧಿಯದಾಂಟಿದವನಿಜೆ ತೋಷಕಾರಿ ಅಶೋಕವನಹಾರಿಕೋಟಿ ಕೋಟಿ ನಿಶಾಟ ಹೃದಯಸ್ಫೋಟಕಕ್ಷಯ ಪಾಟವಕರಿತ್ತಟಕೇಸರಿಕಟಿತಟದಿ ಕರವಿಟ್ಟ ಹನುಮದಿಟ್ಟ ವಿಕಟ ಖಳಕಳ ಪಟಾರ್ಭಟಪಟು ಹರಿದ್ವಿಟ್ಟದ್ವಿಟ್ಟು ಚಟುಲವಟು 1ವೀರ ಸಮೀರಕುಮಾರ ಪಾರಾವಾರ ಚರಿತ ಮಾರಜಿತಘನವಾರಿಜೋದ್ಭವಶರಕೆ ಮನ್ನಿಸಿದೇರಿದೌದಾರಿಈರೈದು ಮುಖದವನ ಪುರಪ್ರಸರಾಗಾರವನುರುಹಿ ರಘುಜನಚಾರುಚರಣವ ಕಂಡ ಪ್ಲವಗಪ್ರಚಂಡಶುಭತುಂಡಬಾಲದಂಡಅಗಣಿತಲೆಂಡರ ಖಂಡಪುಂಡರಗಂಡಗಂಡಭೈರುಂಡುದ್ದಂಡ2ಜೀವಜಾಲರ ಜೀವ ವಿಪ ಮಹಾದೇವ ಮುಖ್ಯರ ದೇವ ಚತುರ್ದಶಭುವನಾಶ್ರಿತ ಭೂತಭರ್ಗಸದಾವಿರತಿಭರಿತಾಆವಜನುಮಜ್ಜನುಮ ಎನಗೆನೀ ಒಡೆಯನಾಗ್ಯಾಳುತ ನನಗೀವುದೆಲೆಗುರುಪರಮಭಾಗವತಾರ್ಯ ಆಚರಿಯಹರಿಯ ಕಾರ್ಯಕಕ್ಕರದ ಹಿರಿಯಪರಮವೀರ್ಯಾಚ್ಚರಿಯ ಸಚ್ಚರಿಯ3ಹರಿಸೇವ್ಯಂಗೀಕರಿಸಿ ಒಡನವತರಿಸಿ ಆಜÕಂವೆರಸಿ ಅಟ್ಟಿದಹರಸಿ ಮದಮತ್ತರಿ ಸಮೂಹ ಭಯಹರಿಸ್ಯಭಯ ಧರಿಸಿಹರಿಶುಭಚರಣ ಸರಸಿಜದಿ ಶಿರವಿರಿಸಿ ಸುಗಿರೋಚ್ಚರಿಸಿ ಅಖಿಳೊಪ್ಪಿರಿಸಿ ವಿಷಯ ಸ್ಪರ್ಶವಿಲ್ಲದ ಅರಸ ನೀನೆ ಕಣಾ ಜಾಣರೊಳು ಜಾಣ ಪ್ರಾಣಮುಖ್ಯಪ್ರಾಣಕೇಣಿಗರಗಂಟಲಗಾಣ ಪ್ರವೀಣ ಹನುಮ4ವಾಸವಾರಿಯ ಘಾಸಿಗಂದು ಕಪೀಶರಳಿದಿರಲಾಸಮಯದೊಳೌಷಧವ ತಂದಾಸಮರ್ಥರ ಪೊರೆದ ಕಪಿವರದಶ್ರೀಶ ವರದ ಪ್ರಸನ್ನವೆಂಕಟಾಧೀಶ ಭೃತ್ಯೋಲ್ಲಾಸ ಅಜಪದಧೀಶ ಮೂರವತಾರಿ ಸುಖಕಾರಿ ಸದಾಶೂರಿ ಸಮೀರ ಕುಮಾರ ಭಾರತ ಧೀರಸಾರಯಂತ್ರೋದ್ಧಾರ ತತ್ವವಿಚಾರ5
--------------
ಪ್ರಸನ್ನವೆಂಕಟದಾಸರು
ಸುಮ್ಮನಿರು ಬೇಡಿಕೊಂಬೆ ಕಾಡದಿರು ಕೃಷ್ಣ |ಉಮಾಪತಿಯೆಂಬ ಗುಮ್ಮ ಬಂದಿದೆಕೊ ಪಐದು ಮುಖ ಐದು ಈರೈದು ಕಣ್ಣುಗಳಿಂದ |ಐದು ಪಣೆಯೊಳಗಗ್ನಿ ಕಿಡಿಯುದುರುತ ||ಐದೆರಡು ತೋಳು ಭುಜಗಳ ಒಲೆದಾಡಿಸುತ |ಐದು ಬಾಣಗೆ ಮುನಿದ ಗುಮ್ಮ ಬಂದಿದೆಕೊ 1ಬಾಲಚಂದ್ರನ ಪೊತ್ತುಕೊಂಡು ತ್ರಿಶೂಲದಿ |ಮೇಲೆ ಒರಲುವ ಭೂತಗಣ ಸಹಿತದಿ ||ಕಾಲಭೈರವನ ಕಾವಲಿಗಿರಿಸಿ ಮರುಳ್ಗಳ |ಸಾಲುಸಹಿತನಾಗಿ ಬಾಗಿಲಿಗೆ ಬಂದಿದೆಕೊ 2ಲಂಡದಾನವರ ಶಿರಗಳ ತರೆದು ಬಿರುದಿನ |ರುಂಡಮಾಲೆಯ ಧರಿಸಿ ಆರ್ಭಟಿಸುತ ||ಅಂಡಲೆದು ಅಷ್ಟದಿಕ್ಕುಗಳೆಲ್ಲ ಬೆದರಿಸುತ |ಪುಂಡರೀಕಾಕ್ಷನ ತೋರು ತೋರೆನುತ 3ಕರಿಚರ್ಮವ ಪೊದ್ದು ಕರದಿ ಒಡನೆ ಪಿಡಿದು |ಕರಿಜಡೆಗಳನೆಲ್ಲ ಕೆದರಿಕೊಳುತ ||ಹರಿವ ನೀರನು ನೆತ್ತಿಯೊಳು ಹೊತ್ತು ಹಾವುಗಳಾ-|ಭರಣಸಹಿತಾಗಿ ಬಾಗಿಲಿಗೆ ಬಂದಿದೆಕೊ4ಮುದಿಯೆತ್ತನೇರಿ ಮೈಯೆಲ್ಲ ಬೂದಿಯ ಪೂಸಿ |ಮದನಾರಿಯೆಂಬಂಥ ಬಲಭೂತವು ||ಹೃದಯದಲಿ ನಿನ್ನ ನೋಳ್ಪೆನೆಂಬ ಧ್ಯಾನದಲಿ |ಒದಗಿ ಬಂದಿಹನಿದೊ ಪುರಂದರವಿಠಲ 5
--------------
ಪುರಂದರದಾಸರು