ಒಟ್ಟು 63 ಕಡೆಗಳಲ್ಲಿ , 22 ದಾಸರು , 55 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೇವ ಗುರುಸ್ತುತಿ ಅಂಗವೇ ಶ್ರೀ ಮಹಾಂಗಿರೀಶ ಲಿಂಗವಾದುದು ಸಂಗ ಸುಖದ ದುರಿತವೆಲ್ಲ ಹಿಂಗಿ ಪೋದುದು ಪ ನಿರ್ಮಲಾತ್ಮ ಗುರುಕಟಾಕ್ಷ ಮರ್ಮಸಿಕ್ಕಿತು ಕರ್ಮ ಹರಿದು ಜ್ಞಾನಜ್ಯೋತಿ ಬೆಳಕು ಮಿಕ್ಕಿತು ಧರ್ಮ ತತ್ವದಮೃತವೆಂಬ ಶರಧಿಯುಕ್ಕಿತು ಪ್ರೇಮದಿಂದ ಪ್ರಕಟವಾದ ಬ್ರಹ್ಮ ದಕ್ಕಿತು 1 ಮಾಯೆಯಿಂದ ಮಮತೆಯೆಲ್ಲ ಸತ್ಯವಾದುದು ನ್ಯಾಯಪಥವ ತಿಳಿಯೆ ಸರ್ವ ಮಿಥ್ಯವಾದುದು ಸಾಯುತೊಡನೆ ಹುಟ್ಟುವುದರ ಭೀತಿಪೋಪುದು ಕಾಯದೊಳಗೆ ದಿವ್ಯಜ್ಯೋತಿ ಪಥ್ಯವಾದುದು 2 ಪರಶಿವಾತ್ಮಲಿಂಗವೆನ್ನ ಮನಕೆ ಸಾರಿತು ತುಂಬಿ ತುಳುಕಿ ಬೀರಿತು ಪರಮಾನಂದರಸದ ಲಹರಿ ಉಕ್ಕಿ ಹರಿಯಿತು 3
--------------
ಭಟಕಳ ಅಪ್ಪಯ್ಯ
ನಿಜ ಭಕ್ತಿ ತೋರಿದನು ಜಗಕೆ ಕೃಷ್ಣ್ಣಾ ವಿಜಯನಾ ಸತಿಯರಿಬ್ಬರ ನೆವದಿ ಮುದದೀ ಪ. ಹಸ್ತಿವರದನು ತಂಗಿಯರ ನೋಡಬೇಕೆಂದು ಹಸ್ತಿನಾಪುರಕೆ ಬಂದ್ಹರುಷದಿಂದ ಚಿತ್ತ ನಿರ್ಮಲದಿ ಪಾಂಡವರು ಪೂಜೆಸೆ ನಲಿದು ಭಕ್ತಿ ಭಾವಕೆ ಮೆಚ್ಚಿ ದ್ರೌಪತಿಗೆ ವಲಿದೂ 1 ಅಣ್ಣನೆಂಬುವ ಭಾವದಲಿ ಸುಭದ್ರೆಯು ಇರಲು ಘನ್ನ ಮಹಿಮನು ಎಂದು ದ್ರೌಪತಿಯು ತಿಳಿದೂ ಸ್ವರ್ಣಗರ್ಭನ ಪಿತನು ಈರೇಳು ಜಗದೊಡೆಯ ಎನ್ನ ಭಾಗದ ದೈವ ಸಲಹೆಂದು ನುತಿಸೇ 2 ಅಂತರಂಗದ ಭಕ್ತಿ ಆನಂದಮಯ ತಿಳಿದು ಕಂತುಪಿತ ಕರಗಿದಾ ಮಮತೆ ಪ್ರೇಮದಲಿ ಶಾಂತಚಿತ್ತಳೆ ತಂಗಿ ದ್ರೌಪತಿಯೆ ಬಾರೆನುತ ಇಂತು ನುಡಿನುಡಿಗೆ ಆಡಲು ಕರುಣೆಯಿಂದ 3 ಕೇಳಿ ಇದನು ಸುಭದ್ರೆ ತಾಳಲಾರದೆ ಅಜ್ಞ ಬಾಲೆ ನಿಜ ತಂಗಿ ನಾನಿರಲು ಐವರಿಗೆ ಲೋಲೆಯಾದವಳೆ ಬಲು ಮೇಲಾದವಳೆ ಎಂದು ಬಾಲಚಂದ್ರನ ಪೋಲ್ವ ಮುಖ ಬಾಡಿಸಿರಿಲೂ 4 ಕಂಡು ಕಮಲಾಕಾಂತ ವಡಹುಟ್ಟಿದಳ ಬೆಂಡಾದ ತೆರವ ಪೇಳೆನಲು ಖತಿಯಿಂದಾ ಪುಂಡರೀಕಾಕ್ಷ ಎನ್ನುಳಿದು ನಿಜ ಭಾವದಲಿ ಕಂಡವರ ಸುತೆ ನಿನಗೆ ಮಿಗಿಲಾದಳೆನಲೂ 5 ಸಚ್ಚಿದಾನಂದ ವಿಗ್ರಹ ನಗುತ ನೆನೆದನೊಂ ದಚ್ಚರಿಯ ಕೌತುಕವ ತೋರ್ವೆನೆಂದೂ ಅಚ್ಛಿದ್ರ ಅಕ್ಲೇಶ ಆನಂದಮಯ ತಾನು ಕ್ಲೇಶ ಪಡುತ ವರಲಿದನೂ 6 ಬಾರಮ್ಮಾ ತಂಗಿ ಸುಭದ್ರೆ ಬೆರಳಲಿ ರಕ್ತ ಸೋರುತಿದೆ ಬೇಗೊಂದು ಚಿಂದಿ ತಾರೆ ತಾರೆನಲು ಗಡಬಡಿಸಿ ಮನೆಯಲ್ಲ ಹುಡುಕತಲಿ ಬಟ್ಟೆ ಕಂಗೆಡುತಾ 7 ಎತ್ತ ನೋಡಿದರತ್ತ ಪಟ್ಟೆ ಪೀತಾಂಬರವು ಕಂಚುಕ ಮಕುಟ ಮೆರೆಯೇ ಚಿತ್ರದಾ ವಸನ ಅರಮನೆಯಲ್ಲಿ ತುಂಬಿರಲು ಮತ್ತದರ ಮಮತೆ ಅಣ್ಣನಿಗೆ ಅಧಿಕವಾಗೆ 8 ಬರಲಿಲ್ಲ ಸುಭದ್ರೆ ಬಾರಮ್ಮ ದೌಪದಿಯೆ ವರ ತಂಗಿ ಬೇಗ ಕೊಡೆ ಹರಕು ಬಟ್ಟೆ ಸುರಿಯುತಿದೆ ರಕ್ತ ಬೆರಳಿಂದ ನೋಡೆಂದನಲು ಕಿರುನಗೆಯ ನಗುತ ಶರಗ್ಹರಿದು ಕಟ್ಟಿದಳೂ 9 ಬಂದಳಾ ವೇಳೆಯಲಿ ಸುಂದರಾಂಗಿ ಸುಭದ್ರೆ ನಿಂದು ನೋಡಿದಳೂ ದ್ರೌಪತಿಯ ಕೃತಿಯಾ ಮಂದಗಮನೆಯು ನಾಚಿ ಮೊಗವ ತಗ್ಗಿಸಿ ನಿಲಲು ಇಂದಿರೇಶನು ಇದರ ವಿವರ ತೋರಿದನು 10 ಬೆರಗಾದ ಪರಿತೋರಿ ಸಿರಿಕೃಷ್ಣ ಕೇಳಿದನು ಜರತಾರಿ ಸೆರಗ್ಹರಿದು ಕಿರುನಗೆಯ ನಕ್ಕಾ ಪರಿ ಏನೆ ಎಲೆ ತಂಗಿ ನರಳುವೋ ಎನ ನೋಡಿ ಪರಿಹಾಸ್ಯವಾಯಿತೆ ನಿನಗೆ ಎಂತೆಂದಾ 11 ಅಣ್ಣಯ್ಯ ನಿನಗೆ ಮಿಗಿಲಾಯಿತೇ ಈ ಶೆರಗು ಎನ್ನ ಅಭಿಮಾನ ಕಾಯುವ ದೈವ ನೀನೂ ಘನ್ನ ಮಹಿಮಾಂಗ ನಿನಗಿನ್ನು ಕ್ಲೇಶಗಳುಂಟೆ ನಿನ್ನ ಲೀಲೆಗೆ ಹರುಷ ಉಕ್ಕಿತೆಂದನಲೂ 12 ಹೇ ನಾರಿ ನಾನನಾಥರಿಗೆ ನಾಥನು ಮುಂದೆ ನೀನಿತ್ತ ವಸನ ಅಕ್ಷಯವಾಗಲೆಂದು ಶ್ರೀನಾಥ ದ್ರೌಪದಿ ಸುಭದ್ರೆಯ ಮನ್ನಿಸಿ ಮೆರೆದಜ್ಞಾನಿ ಜನಪ್ರಿಯನು ಗೋಪಾಲಕೃಷ್ಣವಿಠಲಾ13
--------------
ಅಂಬಾಬಾಯಿ
ನೋಡಿದೆನೋ ಕೊಂಡಾಡಿದೆನೋ ಪ ಜೋಡಿಸಿ ಕರಗಳ ಬೇಡಿದೆ ಕೃಷ್ಣನ ಅ.ಪ ಮೂಡಲು ಸೂರ್ಯನು ಹಿಮದ ಕಣಗಳಂತೆ ಓಡಿದು ಮೋಹವು ಕೂಡಿತು ಧೈರ್ಯವು ನೋಡಲು ಕೃಷ್ಣನ ಮಂಗಳ ಮೂರ್ತಿಯ ಈಡೇರಿತು ಮನದಾಸೆಯು ಕೃಷ್ಣನ 1 ಕಳೆಯಿತು ದುರಿತವು ಬೆಳೆಯಿತು ಸುಕೃತವು ಸೆಳೆದನು ಮನವನು ತನ್ನಡಿಗಳಲಿ ಬಳಿಯಲಿ ರುಕ್ಮಿಣೀ ಭಾಮೆಯರೊಡಗೂಡಿ ಕೊಳಲೂದುವ ಮಂಗಳಕರ ದೃಶ್ಯವ 2 ಉಕ್ಕಿತು ಹರುಷವು ಪರಮ ದರುಶನದಿ ನಕ್ಕನು ನೋಡುತ ಕರುಣಾಪಾಂಗದಿ ಭಕ್ತ ಪ್ರಸನ್ನನು ತಕ್ಕವನೆಂದೆನ್ನ ಅಕ್ಕರೆಯಿಂದಲಿ ಕರೆಯುವಂತಿರುವುದ 3
--------------
ವಿದ್ಯಾಪ್ರಸನ್ನತೀರ್ಥರು
ಬರುತಲಿಹರು ನೋಡಿ ಗುರುವರೇಣ್ಯ ಸುಖತೀರ್ಥ ಯತಿವರರು ಪ ಹರಿದು ಬರುವ ಸುರನದಿಯ ಪ್ರವಾಹದ ತೆರದಲಿ ಪರಿಪರಿ ಪರಿವಾರ ಸಹಿತ ಅ.ಪ ಕರದಲಿ ಪಿಡಿದಿಹ ದಂಡ ಕಮಂಡಲ ಕೊರಳೊಳು ತುಳಸಿಯ ಚಿಗುರಿನ ಮಾಲೆಯು ಅರಿವಾರಿಜ ಲಾಂಛನಗಳಿಂದೊಪ್ಪುವ ವರ ದ್ವಾದಶ ನಾಮಗಳನು ಧರಿಸುತ 1 ಯತಿಗಳು ಗೃಹಿಗಳು ಬ್ರಹ್ಮಚಾರಿಗಳು ಶತಶತ ಸಂಖ್ಯೆಗಳಲಿ ಸೇರಿಹರು ಅತಿ ಸಂಭ್ರಮದಲಿ ನೋಡಲು ಪುರುಷ ರತುನವು ಮಾರ್ಗದ ಖತಿಪರಿಹರಿಸುತ 2 ಅವನಿಸುರರು ಮುಂಬದಿಯಲಿ ತಮ್ಮಯ ಕವಿತೆಗಳಲಿ ಗೋವಿಂದನ ಗುಣಗಳ ನವ ನವ ಸ್ವರದಲಿ ಪಾಡುತ ಕುಣಿಯಲು ಶ್ರವಣ ನಯನಕಾನಂದವ ಬೀರುತ 3 ತ್ವರೆಯಲಿ ಸರಿದು ತಾ ಬರುತಿರೆ ಯುವ ಕೇ- ಸರಿಯ ಧಿಕ್ಕರಿಸುವ ಸಂಭ್ರಮ ಗಮನ ಚರಣಯುಗಳ ಕಾಂತಿಯ ಪಸರಿಸುತಲಿ ಧರಣಿಯ ಪಾವನ ಮಾಡುವ ಬಗೆಯಲಿ 4 ಏನಿರಬಹುದೆಂದು ನೋಡುವರಿಗೆ ಕಾಣಿಸುವುದು ತೇಜದ ಪುಂಜ ಭೂನಿಲಯವ ಬೆಳಗಲು ಅತಿ ನೂತನ ಭಾನು ಉದಯಿಸಿದ ತೆರದಲಿ ಪೊಳೆಯುತ 5 ಪದುಮರಾಗ ಕಾಂತಿಯ ಮೀರಿದ ನಖ ಕೂರ್ಮ ಪ್ರಪದಗಳು ವಿಧಿಭವಮುಖ ಸುರಸೇವಿತ ಜಂಘವು ಮದಗಜ ಕರವನು ಪೋಲುವ ತೊಡೆಗಳು 6 ಪುಷ್ಪ ನಿತಂಬಗಳಲಿ ಪೊಳೆಯುತಲಿಹ ರೇಷ್ಮೆಯ ವಸ್ತ್ರವ ಧರಿಸಿಹರು ಕುಕ್ಷಿಲಲಾಟ ಶಿರೋಧರಗಳಲತಿ ಶ್ರೇಷ್ಠದ ತ್ರಿವಳಿಗಳಿಂದ ರಾಜಿಸುತ7 ಕೆಚ್ಚಿನ ವಕ್ಷಸ್ಥಳವತಿ ಸುಂದರ ಉಚ್ಚ ಪೀವರದ ಸ್ಕಂಧಯುಗಳವು ಸ್ವಚ್ಛದ ಕೆಂಬಣ್ಣದ ಕರತಲದಲಿ ಬಿಚ್ಚಿ ಹಾರುತಿಹ ಧ್ವಜಲಾಂಛನದಿ 8 ಚಂದಿರ ಬಿಂಬವಿದೋ ಪ್ರೇಕ್ಷಕರಾ ನಂದತರಂಗವ ಉಕ್ಕಿಸುತಿಹುದು ಒಂದು ಕಳಂಕವು ಕಾಣದಿರುವ ಅತಿ ಸುಂದರ ಪುರುಷವರೇಣ್ಯರು ಸೊಗಸಿಲಿ 9 ಸುಂದರ ಮಂದಸ್ಮಿತದಿಂ ಶೋಭಿಪ ಕುಸುಮ ತೆರದಲಿ ದಂತಗಳು ಮಂದಿಗಳಿಗೆ ಬಲು ಹರುಷವಿತ್ತು ಅರ ವಿಂದ ನಯನ ಆನಂದತೀರ್ಥ ಮುನಿ 10 ಕಿವಿಯಲಿ ಪೊಳೆಯುವ ತುಳಸಿಯದಳಗಳು ಅವಿರಳ ತೇಜದಿ ಹೊಳೆಯುವ ಕಪೋಲ ಭುವನತ್ರಯಗಳಭೀಷ್ಟವ ನೀಡುವ ಸುವಿಮಲ ಸುಂದರ ಭ್ರಕುಟಿ ವಿಲಾಸದಿ 11 ಅಕಲಂಕ ಶರೀರರು ಬರುತಿಹುದನು ಸಕಲ ಕಲಾಕುಶಲರು ನೋಡಿ ಶಕುತಿಗೆ ಮೀರಿದ ಮಾದರಿಯೆಂದರು ಪ್ರಕೃತಿ ಮಧುರ ಸರ್ವಾಂಗ ಸುಂದರರು 12 ಕಾಂತಿ ಸುಧೆಯ ಪಾನವ ಮಾಡಿರಿ ಸುಖ ಶಾಂತಿ ನಿಲಯರಾಶ್ರಯದಲಿ ಬಾಳಿರಿ ಚಿಂತೆ ಸಂತಾಪಗಳೆಲ್ಲವ ತೊಳೆಯಿರಿ ಸಂತತ ಹರಿದಾಸ್ಯದಲಿ ಪ್ರಸನ್ನರು 13
--------------
ವಿದ್ಯಾಪ್ರಸನ್ನತೀರ್ಥರು
ಭಕ್ತಿನೋಡಿ ಜನ ಮಾಡುವ ಪರಿಯ ಮುಕ್ತಿಯ ಮಾರ್ಗವ ಯುಕ್ತಿಯನರಿಯದೆ ಭಕ್ತ ನಾನೆಂದಾಡುವರ್ಹೊರಿಯ ಧ್ರುವ ಚಕ್ಕಮಲಕು ಭಕ್ತಿಯ ನೋಡಿ ಉಕ್ಕಿ ದೋರುತಲ್ಯದ ಬಲಗೂಡಿ ಮಿಕ್ಕ ಮಾನವರಿಗೆ ದಯಮಾಡಿ 1 ಡಂಭದೋರು ವನೇಕಚಂದ ಗುಂಭಹೇಳನು ಸರಕ್ಕನೆ ಬಂದು ಕೊಂಬುಕೊಡುವ ಮಾತಿಗೆ ಬಂದರೆ ನಂಬದೆ ಹೋಗುವರತ್ತತ್ತ ಹಿಂದ 2 ಹೊಟ್ಟಿನಮ್ಯಾಲೆ ಸಾರಿಸಿದಂತೆ ನಿಷ್ಠೆನೋಡಿ ಜನ ಮೋಹಿಸುವಂತೆ ಘಟ್ಟಿಸುತ ತಮ್ಮ ಹೊಟ್ಟೆಯ ಹೊರೆದರು ಮುಟ್ಟ ಭಜಿಸುವ ಗುಟ್ಟುದೋರಿದಂತೆ3 ರಚ್ಚಿಗೆ ಬಂತು ಭಕ್ತಿ ಇದೇ ಬಹಳ ಹೆಚ್ಚು ನಮ್ಮದೆಂದು ಮಾಡುರು ಮ್ಯಾಳಿ ಮತ್ಸರದೊಳಗಿದ್ದು ಸಚಲಸ್ನಾನ ಮಾಡಿದೆವೆಂದು ಹೇಳುರು ನಿರ್ಮಲ4 ನಗೆ ಬರುತ್ತದೆ ಭಕ್ತಿಯ ಕಂಡು ಜಗದೊಳಗೆಲ್ಲ ಇದೇವೆ ಭಂಡು ಸುಗಮ ಸುಪಥ ಬ್ಯಾರದೆ ಎಂದು ಮಹಿಪತಿ ಘನಬೆರೆದು ಸದ್ಗುರು ಬಲಗೊಂಡು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಧ್ವನುದಿಸಿದನು ಭೂತಳದಲಿ ಪ ವದ್ದು ದುರ್ಮತ ತಿದ್ಧಿ ಸುಜನರ ಪದ್ಮನಾಭನ ಪಾದಸೇವಿಸೆ ಅ.ಪ ಕುಣಿದು ಕುಣಿಯೇ ಖೇದ ಉಕ್ಕಿಹರಿಯೆ ಸರ್ವಲಕ್ಷಣದಿಂದ ಶೊಭಿಪ ಸರ್ವತೆರದಲಿ ಪೂರ್ಣಕಾಯದಿ ಸರ್ವಜೀವರ ನಾಥನಾಯಕ ಸರ್ವರೀಶನ ಆಜ್ಞೆಧರಿಸುತ 1 ವಾಸುದೇವನಲ್ಲೆ ರತನು ವಾಸುದೇವನ ತೋರಿ ಪೊರೆವಾ ದೋಷವಿಲ್ಲದ ಮಹಾಮಹಿಮಾ ನಾಶವಿಲ್ಲದ ಜ್ಞಾನಸ್ವರೂಪಾ ವಾಸುದೇವ ಸುನಾಮಗೊಳ್ಳುತ ನಾಶಮಾಡುತ ದೋಷಜ್ಞಾನವ ಭಾಸಬೀರಲು ವೇದರಾಶಿಯ 2 ವನಜಜಾಂಡವ ಪೊತ್ತಿಹಧೀರ ವನಜನಾಭವ ಮುಖ್ಯದೂತ ಅನಿಲ ದೇವನ ತೃತೀಯ ರೂಪ ವನಜಸಂಭವ ಪದಕೆ ಬರುವ “ಶ್ರೀಕೃಷ್ಣವಿಠಲ” ದಣಿವು ಕಾಣದೆ ವೇದವತಿಯಲಿ 3
--------------
ಕೃಷ್ಣವಿಠಲದಾಸರು
ಮಾಧವ ಸ್ವಾಮಿ ಪ. ಬಿಕ್ಕಿ ಬಿಕ್ಕಿಯಳುತ ಬಂದ ಗೋಪಿಯ ಕಂದಉಕ್ಕಿಹರಿವ ಕಣ್ಣನೀರ ತೊಡೆದಳೆಶೋದೆಅಕ್ಕರದಿಂದಲಿ ಮಗನ ಅತಿಮುದ್ದನಾಡಿಮಕ್ಕಳ ಮಾಣಿಕ್ಯವೆ ನೀ ಮನೆಯೊಳಗಾಡೈ 1 ಹಳ್ಳಿಯ ಮಕ್ಕಳು ಎನ್ನ ಬೈದರಮ್ಮಕಳ್ಳನೆಂದು ಎನ್ನಕೂಡೆ ಆಡಲೊಲ್ಲರುಮೆಲ್ಲನೆ ಬೈಯುತ್ತ ಬರಲು ಕಲ್ಲಲಿಟ್ಟರಮಯ್ಯಅಲ್ಲಿಂದಂಜಿ ಅಳುತ ನಾನು ಓಡುತ ಬಂದೆ 2 ಬಾಗಿಲ ಗೊಲ್ಲರು ಗೋಪಗೋಪಿಯರೆಲ್ಲಹಗಲುಗಳ್ಳ ಹಾಲು ಬೆಣ್ಣೆ ಚೋರನೆಂದರುಮಗುವೆಂದೆನಿಸಿಕೊಂಡು ಮನೆಯೊಳಗಾಡೈಹೋಗುನ್ನಂತ ಉಡುಪಿಯಲ್ಲಿ ಮುದ್ದು ಹಯವದನರಾಯ 3
--------------
ವಾದಿರಾಜ
ಮೂಢನು ನಾನಯ್ಯ ನಿನ್ನನುಬೇಡಲರಿಯೆನಯ್ಯಪ. ದಯಾಸಿಂಧು ಹರಿಯೆ ದಯದಲಿ ನೋಡು ವಜ್ರದಖಣಿಯೆಭಯಪಡುವೆನು ಈ ಭವಸಾಗರದಿ ಅ-ಭಯವ ಪಾಲಿಸೊ ಹಯವದನನೆ ಹರಿ 1 ದಿಕ್ಕುಯಾರು ಇದಕೆ ಪಾಪವು ಉಕ್ಕಿತು ದಿನದಿನಕೆಸೊಕ್ಕಿ ಸಿಲುಕಿದೆನು ಯಮನ ಪಾಶಕೆಚಿಕ್ಕವನನು ನೋಡಕ್ಕರದಲಿ ಹರಿ 2 ಸಿರಿಹಯವದನನ್ನ ಶರಣರ ಶಿರೋಮಣಿರನ್ನಗುರುದೊರೆಯೆ ನಂಬಿದೆ ನಿನ್ನಕರಿಯ ರಕ್ಷಕನೆಂದು ಕರೆವೆನೊ ಮುನ್ನ3
--------------
ವಾದಿರಾಜ
ಮೂಲ ದೇಹದಿ ಪಾಳ್ಯ ಬಿಡುತಿದೆ ನಾಳೆ ನಾಡದೋ ಕಾಣೆ ತಮಪುರವಿದು ಕಾಲ ಬರುತಿದೆ ಪ ಬಂದು ಬಂದವರೆ ಮುಕ್ತಿಗೆಯಿಕ್ಕಿ ರವಿ ನಂದನ ನಾಳುಪದ್ರವನಿಕ್ಕಿ ಹಿಂದು ಮುಂದಕು ಛಾವಣೆಯಿಕ್ಕಿಪುರದ ಮಂದಿಯ ಕಾವಲನಿಕ್ಕಿ 1 ಪುರದೊಳಗೇನು ಬೀಯಗಳಿಲ್ಲ ಮುಂದೆ ಬರುವ ಮಾರ್ಗವ ಕಟ್ಟಿದರೆಲ್ಲ ಕರಣವೃತ್ತಿಗಳು ತಗ್ಗಿತು ಎಲ್ಲ ಕೋಟೆ ಜರಿದು ಹೋಯಿತು ಸುತ್ತಲು ಎಲ್ಲ 2 ಕಾಲು ಕೈಗಳ ಧಾತು ತಪ್ಪಿತು ನುಡಿದ ನಾಲಗೆ ಹಿಂದಕೆ ಸರಿಯಿತು ಕಣ್ಣಾಲಿಯೊಳಗೆ ನೀರು ಉಕ್ಕಿತು ವಸ್ತು ಗಾಳಿಯೊಳಗೆ ಮಾಯವಾಯಿತು 3 ಮಡದಿ ಮಕ್ಕಳಿಗೆಲ್ಲ ಹೊಡೆದಾಟ ಬಲಕೆ ಎಡಕೆ ಹೊರಳದಿರಿ ಎನುವಾಟ ಕಿಚ್ಚಿ ಯೊಡನೆ ಗೂಡನು ಸುಡುವಾಟ ಕೆಲವು ಕಡೆಯವರೆಲ್ಲ ತೆರಳುವಾಟ 4 ಹೇಳದ ಯಮದೂತರಿಗಂದು ಕಡು ಖೂಳ ಪಾಪಿಗಳೆಳತಹುದೆಂದು ಲಕ್ಷ್ಮೀ ಲೋಲ ನಾಳು ಗಳಮುಟ್ಟದಿರೆಂದು ತನ್ನಾಳಿಗೆ ಕಟ್ಟು ಮಾಡಿದನಂದು 5
--------------
ಕವಿ ಪರಮದೇವದಾಸರು
ಮೊದಲನೇ ಅಧ್ಯಾಯ ಪಾತಿವ್ರತ್ಯ ಮಹಾತ್ಮೆ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ನಿರ್ದೋಷ ಗುಣಪೂರ್ಣ ವಿಷ್ಣು ಸರ್ವೋತ್ತಮ ಸ್ವತಂತ್ರ ಶ್ರೀದ ಶ್ರೀಪತಿ ಜಗಜ್ಜನ್ಮಾದಿಕರ್ತನು ಸಚ್ಛಾಶ್ರ - ದಿಂದಲೇ ವೇದ್ಯನು ಮೂರು ವಿಧ ಜೀವರಿಗೆ ಯೋಗ್ಯ ಸಾಧನಕೆ ಗತಿಯ ಮಾಡುವ ಅವತಾರ ಲೀಲಾ 1 ಸುಪುಷ್ಪಭವ ಬ್ರಹ್ಮದೇವನೋಳ್ ತತ್ ಶಬ್ದವಾಚ್ಯನು ಶ್ರೀ ಪುರುಷೋತ್ತಮನೆ ಪ್ರಜಾಸೃಷ್ಟಿ ಮಾಡಿಸುವನು ತ್ರಿಪುರಾರಿ ಭಸ್ಮಧರ ರುದ್ರನೋಳ್ ತನ್ನಾಮದಲಿ ಶ್ರೀ ಪುರುಷೋತ್ತಮನೇ ಸಂಹಾರ ಮಾಳ್ಪ ಅಂತರ್ಯಾಮಿ 2 ಉರುಜ್ಞಾನ ಸುಖ ಬಲಾದ್ಯಮಿತ ಗುಣಧಾಮನ ಕರ ಚರಣಾದ್ಯವಯವಕ್ಕೂ ಅವಗೂ ಅವನು ಧರೆಯಲ್ಲಿ ಅವತಾರ ಮಾಡುವ ರೂಪಗಳಿಗೂ ಪರಿಪೂರ್ಣವಾಗಿ ಅಭೇದ ಭೇದಲೇಶವೂ ಇಲ್ಲ 3 ದ್ವಿ ಷೋಡಶ ಶುಭಲಕ್ಷಣ ತನುವುಳ್ಳ ಬ್ರಹ್ಮಗೂ ವಿಷಕಂಠ ರುದ್ರಗೂ ಪರಸ್ಪರ ಭೇದ ಅಂತಸ್ಥ ವಿಷ್ಣುಗೂ ಇವರುಗಳಿಗೂ ಭೇದವು, ಅಂತರ್ಯಾಮಿ ವಿಷ್ಣು ಒಬ್ಬನೇ ದ್ವಿರೂಪದಲ್ಲಿ ಇವರಲ್ಲಿಹ 4 ಹತ್ತಾವತಾರ ಮತ್ಸ್ಯಾದಿರೂಪಗಳು ಮಾತ್ರವಲ್ಲ ಅನಂತರೂಪನು ಅನಂತಗುಣ ಕ್ರಿಯಾವಂತನು ಕ್ಷಿತಿಯಲ್ಲಿ ಬಲಕಾರ್ಯಕ್ಕೆ ಕೆಲವು ಅವತಾರ ಹಿತಕರ ಹಲವು ಜ್ಞಾನಬೋಧಕ್ಕೇವೇ ಕೆಲವು 5 ಧ್ಯಾತ್ಮನು ಜ್ಞಾನಕಾರ್ಯಕ್ಕಾಗಿ ಅವತರಿಸುವನು ಶ್ರೀಮಾನ್ ಹಯಗ್ರೀವ ಸನತ್ಕುಮಾರ ದತ್ತ ಕಪಿಲ ಧೀಮಾನ್ ಪರಾಶರ ವಾಸವೀಸೂನು ಐತರೇಯಾದಿ 6 ದ್ವಾಪರದಲ್ಲೇವೆ ಅಲ್ಲಲ್ಲಿ ಕಲಿವಿಷ ಹರಡಿ ತಪೋಧನರು ಗೌತಮರು ಶಪಿಸೆ ಜ್ಞಾನಕುಂದೆ ಶ್ರೀಪ ವೇದವ್ಯಾಸ ಜ್ಞಾನ ತೇಜಃಪುಂಜ ಬಂದು ತೋರಿ ಆ ಪೀಡಿಸುವ ಅಜ್ಞಾನ ತರಿದು ಸಜ್ಞಾನ ಇತ್ತ 7 ಹಿಂದೆ ಬ್ರಹ್ಮದೇವರಾಜÉ್ಞಯಿಂ ಅತ್ರಿಋಷಿವರ್ಯರು ನಿಂತರು ಋಕ್ಷಗಿರಿಯಲ್ಲಿ ಅಪತ್ಯಾಪೇಕ್ಷೆಯಿಂದ ಅದ್ಭುತ ತಪವಚರಿಸಿ ಜಗದೀಶ್ವರ ಸಮ - ಪುತ್ರ ಕೊಡೆ ಚಿಂತಿಸಿ ಹರಿಯಲ್ಲಿ ಶರಣಾದರು 8 ಹರಿ ತಾನು ತನ್ನ ಅಧಿಷ್ಟಾನರಾದ ಬ್ರಹ್ಮೇಶ್ವರ ಕರಕೊಂಡು ಋಷಿ ಮುಂದೆ ನಿಂತು ಯುಕ್ತಮಾತನ್ನಾಡಿ ಮೂರು ಮಂದಿಗಳು ತಾವು ಪುತ್ರರಾಗುವೆವು ಎಂದ ತರುವಾಯ ತಾನಿತ್ತ ವರವ ಒದಗಿಸಿದನು 9 ಭಾಗವತ ಈ ವಿಷಯ ಒಳಗೊಂಡು ಇಹುದು ಪತಿ ವೇದವ್ಯಾಸ ಸಂಕೃತ ಈ ಭೂರಾದಿ ಜಗತ್ತಿನಲ್ಲಿ ಪ್ರಖ್ಯಾತ ಪುರಾಣಂಗಳೊಳ್ ಶ್ರೀ ಭಗವಾನ್ ದತ್ತಾತ್ರಯನ ಅವತಾರವು ವೇದ್ಯ 10 ಗೀರ್ವಾಣ ಛಂದಸ್ಸು ಅಷ್ಟಿಯಲಿ ಬರೆಯುವದೆಂದು ಶ್ರೀವರನ ಹಿತಾಜÉ್ಞಯಿಂ ಪ್ರಸನ್ನ ಶ್ರೀನಿವಾಸೀಯ ಶ್ರೀವಿಷ್ಣು ಸಹಸ್ರನಾಮ ಭಾಷ್ಯ ಕನ್ನಡದಲ್ಲಿ ಅಳವಡಿಸಿದಂತೆ ಅಷ್ಟೀ ಛಂದಸ್ಸಲಿ ಈ ಗ್ರಂಥವ 11 ಈ ಗ್ರಂಥದಲಿ ಶ್ರೀಭಾಗವತವು ಮಾರ್ಕಂಡೇಯವು ಭಾಗವತರಿಗೆ ಉಪಾಸನಾ ಹೇತು ಪಂಚರಾತ್ರ ಆಗಮವು ಒಳಗೊಂಡ ವಿಷಯಗಳು ಇವೆಯು ಕಾಯ ಶುದ್ಧಿಯಿಂ ಪಠಣೀಯವು 12 ಗುರುಮಂತ್ರ ಉಪದೇಶವಿಲ್ಲದಂತಹ ಸ್ತ್ರೀ ಜನ ಶೂದ್ರರು ಬ್ರಹ್ಮಬಂಧುಗಳು ಈ ಗ್ರಂಥ ಪಠಿಸಲು ಹರಿಭಕ್ತ ಸಾಧು ವೈದಿಕ ಬ್ರಾಹ್ಮಣರ ಅಪ್ಪಣೆ ಕೋರಿ ಅವರ ಅಪ್ಪಣೆಯಿಂದ ಓದಬಹುದು 13 ಪ್ರತಿಷ್ಠಾನಪುರದಲ್ಲಿ ಕೌಶಿಕಾಹ್ವಯ ದ್ವಿಜನು ವ್ಯಾಧಿ ಪೀಡಿತನು ಕುಷ್ಠಿ ನಡಮಾಡಲು ಅಶಕ್ತ ಆತನ ಪತ್ನಿಯು ಸಾಧುಗುಣವತಿ ಬಲುಶ್ರೇಷ್ಠ ಪತಿ ಹೇಳಿದಂತೆ ನಡೆಯುವಳು 14 ಒಂದು ದಿನ ಆ ಬ್ರಾಹ್ಮಣನು ನೋಡಿದ ಬಾಗಿಲಾಚೆ ಬೀದಿಯಲಿ ಹೋಗುತ್ತಿದ್ದ ಸುಂದರಿ ವೇಶ್ಯೆಯೋರ್ವಳಲಿ ಸೋತು ಮನ ಅವಳನ್ನು ತಾನು ಹೊಂದಬೇಕೆನ್ನಲು ಸಾಧ್ವಿಸತಿ ಪತಿಯನ್ನು ಎತ್ತಿದಳು ಸೊಂಟದಲಿ 15 ರಾತ್ರಿ ಕತ್ತಲೆಮಾರ್ಗ ತಿಳಿಯದಲೆ ಪತಿಯನ್ನು ಹೊತ್ತುಕೊಂಡು ಹೋಗುವಾಗ ಪತಿಯ ಕಾಲು ತಾಕಿತು ಹಾದಿಯಲ್ಲಿ ಕಬ್ಬಿಣ ಸಲಾಕದಲ್ಲಿ ಚುಚ್ಚಿಸಿ ಇದ್ದ ಕಟಿ ಸಮೀಪ ಹಾಹಾ 16 ಅನ್ಯಾಯದಿ ಆ ರಾಜ್ಯದರಸ ಆ ಮಹಾಮುನಿಯ ಧನಚೋರನೆಂದು ಶೂಲಕ್ಕೆ ಹಾಕಿಸಿದ್ದ ಆ ಶೂಲ ಕಾಣದೇ ಕೌಶಿಕನ ಕಾಲ್ತಗಲಿ ಬಲು ನೋವಾಗಿ ಮುನಿ ಶಾಪವಿತ್ತರು ಸೂರ್ಯೋದಯಲ್ಲೇ ಸಾಯೆಂದು 17 ಹಾಹಾ ಇದು ಏನು ಮುನಿಗಳಿಗೆ ನೋವಾಯಿತಲ್ಲಾ ಮಹಾತ್ಮರ ಶಾಪ ವೀಣಾಗಲಾರದು ಮಾಂಗಲ್ಯವ ಪತಿ ಅಂತಸ್ಥ ಶ್ರೀಹರಿಯ ಸ್ಮರಿಸಿ ಆ ಪತಿವ್ರತೆ ಹೇಳಿದಳು 18 ಸೂರ್ಯೋದಯವಾಗದಿದ್ದರೆ ಶಾಪವು ಫಲಿಸದು ಸೂರ್ಯೋದಯವಾಗಬೇಡಿ ಎಂದು ಹೇಳಿದಳು ಸಾಧ್ವಿ ಆರ್ಯಧರ್ಮ ಲೋಕಕಾರ್ಯ ಸರ್ವವೂ ಸ್ತಬ್ಧವಾದವು ಎಲೆಲ್ಲೂ ಕತ್ತಲೆಯು ಭಾನು ಉದಯಿಸಲಿಲ್ಲ 19 ಇಂದ್ರಾದಿ ದೇವರ್ಗಗಳು ಬ್ರಹ್ಮನಲಿ ಮೊರೆಯಿಡಲು ಪತಿವ್ರತೆ ಮಹಾತ್ಮನೆ ಮತ್ತೊಬ್ಬ ಪತಿವ್ರತೆಯೇ ಪ್ರತಿ ಮಾಡುವಳು ಅತ್ರಿಋಷಿ ಪತ್ನಿ ಅನಸೂಯಾ ಪತಿವ್ರತಾ ರತ್ನಳಾ ಸಹಾಯ ಕೇಳೆಂದರು ವೇಧ 20 ಶಕ್ರಾದಿ ಸುರರುಗಳು ಅನಸೂಯಾದೇವಿಯಲಿ ಕೋರಿಕೆ ಮಾಡಲು ಆಕೆ ದೇವತೆಗಳ ಸಮೇತ ಧೀರ ಪತಿವ್ರತೆಯಾದ ಕೌಶಿಕಾ ಗೃಹಕೆ ಹೋಗಿ ಪರಿಚಯ ಮಾಡಿಕೊಂಡು ಕೊಂಡಾಡಿದಳಾ ಸಾಧ್ವಿಯ 21 ಮಹಾಭಾಗರು ಇಂದ್ರಾದಿಗಳಿಗೂ ಅನಸೂಯಗೂ ವಿಹಿತೋಪಚಾರ ಪೂಜಾದಿಗಳ ಮಾಡಿ ಆ ಸಾಧ್ವಿ ಮಹಾಭಾಗ್ಯ ಆಗಮನ ಎನ್ನುತ್ತ ಕಾರಣವನು ಬಹು ಹಿತದಲಿ ಕೇಳಿದಳು ತನ್ನ ಸ್ಥಿತಿ ಹೇಳಿ 22 ಸೂರ್ಯ ಉದಿಸುವದಕ್ಕೆ ಪತಿ ಬದುಕಿಸಲ್ಪಡುವನು ಎನ್ನುತೆ ಕೌಶಿಕಾ ಸಾಧ್ವಿಯು ಅನುಮೋದನೆ ಕೊಂಡು ಇನ ಉದಿಸಲಿ ಎಂದ ಅಘ್ರ್ಯ ಕೊಟ್ಟಳು ಮುದದಿ 23 ಸೂರ್ಯ ಮುನಿಶಾಪ ಫಲಿಸಿತು ಬಿದ್ದ ಕೆಳಗೆ ಕೌಶಿಕ ತತ್‍ಕ್ಷಣವೇ ಬದುಕಿ ಎದ್ದ ಪತಿವ್ರತಾ ಶಿರೋಮಣಿ ಅನಸೂಯಾ ದೇವಿ ಪ್ರಭಾವ ಪತಿವ್ರತಾ ಮಹಾತ್ಮೆ ಜ್ವಲಿಸಿತು ಲೋಕದಲ್ಲಿ 24 ಕೌಶಿಕನ್ನ ಬದುಕಿಸಿದ್ದು ಮಾತ್ರವಲ್ಲದೇ ಸರ್ವ ಕುಷ್ಠಾದಿ ರೋಗ ಪರಿಹರಿಸಿ ಯುವವಾಗಿ ಮಾಡಿ ಅಯುಷ್ಯ ಬಹುನೂರು ವರ್ಷಗಳ ಅನುಗ್ರಹಿಸಿ ತುಷ್ಠಿ ಸುಖಜೀವನ ಒದಗಿಸಿದಳ್ ಅನಸೂಯಾ 25 ಅನಸೂಯೆಯ ಪಾತಿವ್ರತ್ಯ ಮಹಾತ್ಮೆಯ ಶ್ಲಾಘಿಸಿ ಏನು ವರ ಕೇಳಿದರೂ ಕೊಡುವವೆಂದು ಸುರಪ ಆನಿಮಿಷರು ಹೇಳಲು ಪತಿವ್ರತಾ ಶಿರೋಮಣಿ ವಿಧಿ ಶಿವ ತನ್ನಲ್ಲವತರಿಸಲೆಂದಳು 26 ತಥಾಸ್ತು ಎಂದ ದೇವತೆಗಳ ವರ ಸತ್ಯಮಾಡೆ ಸುತಪಸ್ವಿ ಅತ್ರಿಗೆ ಹಂಸ ವೃಷಾರೂಡರು ಪ್ರತ್ಯಕ್ಷದಿ ಹೇಳಿದಂತೆಯೂ ಅನಸೂಯ ಅತ್ರಿಗೆ ಪುತ್ರರೆಂದುದಿಸಿದರು ಸೋಮಸ್ತ ಬ್ರಹ್ಮೇಶ ವಿಷ್ಣು 27 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಾಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯನಮೋ ಪ್ರಿಯತಾಂ ಶರಣು 28 ಎರಡನೇ ಅಧ್ಯಾಯ ಶ್ರೀ ದತ್ತಾತ್ರಯ ಪ್ರಾದುರ್ಭಾವ ಸಾರ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಭೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಬ್ರಹ್ಮಾವಿಷ್ಟನು ಸೋಮ ಔಷಧಿಗಳ ರಾಜನಾದ ಉನ್ಮಾದ ಚರ್ಯದಿ ಕೋಪ ಪ್ರಕಟಿಸಿ ಮೆರೆವರು ತಮ್ಮ ಶಿಷ್ಯರೊಡಗೂಡಿ ಶಿವಾವತಾರ ದೂರ್ವಾಸ ಸುಮ್ಮನಸ ಸಜ್ಜನ ಹಿತರು ದುಷ್ಟನಿಗ್ರಹರು 1 ತನ್ನನ್ನ ತಾನೇ ಸುತನಾಗಿ ದತ್ತಮಾಡಿಕೊಂಡನು ವಿಷ್ಣು ಅತ್ರಿ ದಂಪತಿಗೆ ಆದ ಕಾರಣ ಪ್ರಖ್ಯಾತೆ ಉನ್ನಾಮ ದತ್ತಾತ್ರಯ ಕ್ಷೋಣಿ ಯೋಗ್ಯಾಧಿಕಾರಿಗಳಿಂ ಘನಭಕ್ತಿಯಿಂ ಶುಚಿಯಿಂ ಜಪ್ಯ ಸ್ಮರಣೀಯಿಂ ಶ್ರೋತವ್ಯ ಜಯತು 2 ಕಲ್ಯಾಣತಮ ಪೂರ್ಣ ಅಮಲ ಗುಣಗಣ ಸಿಂಧು ಮಾಲೋಲ ಶ್ರೀವಕ್ಷ ಶ್ರೀಶನೇ ಪ್ರಾದುರ್ಭವಿಸಿದನು ಚೆಲುವ ಅನುಪಮ ಸೌಂದರ್ಯಸಾರ ಸರ್ವೋತ್ತಮ ಲೀಲಾನಂದಮಯ ಚಿನ್ಮಾತ್ರಗಾತ್ರ ಭಕ್ತೇಷ್ಟದಾತ 3 ಕಮಲಾಸನಾವಿಷ್ಟ ಸೋಮ ರುದ್ರಾವತಾರ ದೂರ್ವಾಸ ತಮ್ಮ ತಮ್ಮ ಉದ್ಯೋಗಸಾಧನಕೆ ಬೇರೆ ಬೇರೆ ಹೋಗೆ ಸುಮನೋಹರ ರೂಪ ಶ್ರೀಮನೋರಮ ದತ್ತಾತ್ರಯ ಸುಮಹಾ ಯೋಗಿಯಾದ ನಿಸ್ಸಂಗ ಯೋಗೇಶ್ವರೇಶ್ವರ 4 ಅತ್ರೇಯರು ಮೂವರು ಹೀಗೆ ಬೇರೆ ಬೇರೆಯಾಗಿಯೇ ತಮ್ಮ ತಮ್ಮ ರೂಪದಲ್ಲೇ ಇದ್ದರು ಒಂದಾಗಿ ಅಲ್ಲ ಸೋಮ ಶಿವ ದತ್ತರಿಗೆ ಬೇರೆ ಬೇರೆ ಮಂತ್ರವುಂಟು ಸೋಮ ಪಂಚ ಶಿವ ಪಂಚ ದತ್ತ ನವಅಕ್ಷರವು 5 ಪ್ರೋದ್ಯ ದಿವಾಕರ ಪೋಲ್ವ ವರ್ಣವುಳ್ಳ ಶುಭಗಾತ್ರ ಆದಿತ್ಯ ಸಹಸ್ರಾಮಿತ ಮಹೋತ್ಕøಷ್ಟ ತೇಜಃಪುಂಜ ವ್ಯಾಪ್ತ ಸರ್ವತ್ರ ಜ್ಞಾನಾಭಯಕರನು ಬ್ರಹ್ಮಾದಿ ತ್ರಿದಿವ ಸುಬೋಧಕನು ಕಪಿಲನು ದತ್ತಾತ್ರಯ 6 ಇಂಥ ಮಹಾಮಹಿಮನು ಕಪಿಲ ದತ್ತಾತ್ರಯನು ಅಧಿಕಾರಿಗಳಿಗೆ ಅಪರೋಕ್ಷಜ್ಞಾನ ಮೋಕ್ಷದಾತ ಶ್ರೋತೃ, ಮಂತ್ರ, ಧ್ಯಾತೃಗಳಿಗೆ ಕಪಿಲ ದತ್ತಾತ್ರಯ ಭಕ್ತಿ ಮೆಚ್ಚಿ ಸದಾ ಸಂರಕ್ಷಿಸಿ ಇಷ್ಟಾರ್ಥ ಕೊಡುವ 7 ಪದ್ಮ ಭವಾದ್ಯಮರರಿಂ ಧ್ಯಾತ ದತ್ತಾತ್ರಯ ಹರಿ ಮೇದಿನಿ ನರರಂತೆ ಅವತಾರ ಲೀಲೆ ಚರಿಸಿ ಅದ್ಭುತ ಯೋಗಾನುಷ್ಠಾನದಿ ಇರುತಿರೆ ಜನರು ಈತನ ಸೌಂದರ್ಯ ಯೋಗಸಾಮಥ್ರ್ಯ ಹೊಗಳಿದರು 8 ಸಹಸ್ರಾರು ಋಷಿಪುತ್ರ ಬ್ರಹ್ಮಚಾರಿಗಳು ಬಂದು ಅಹರ್ನಿಶಿ ಯೋಗೇಶ್ವರೇಶ್ವರ ದತ್ತನಾಶ್ರಮದಿ ಬಹಳುತ್ಸಾಹದಲಿ ಸುತ್ತು ಮುತ್ತು ಗುಂಪುಗೂಡಿ ಮಹಾಯೋಗಾಭ್ಯಾಸಕ್ಕೆ ಚ್ಯುತಿಯ ಕಲ್ಪಿಸಿದರು 9 ಯೋಗ್ಯರು ಸಜ್ಜನರು ಈ ಭಕ್ತ ಋಷಿಕುವರರು ಯೋಗ್ಯಸಾಧನೆ ಅವರವರ ಆಶ್ರಮದಲ್ಲಿಯೇ - ಗೈಯಲಿ ಬೇಕೆಂದು ಅವರುಗಳು ಹೋಗೋ ಉಪಾಯ ನಿಶ್ಚೈಸಿ ಮುಳುಗಿದ ದತ್ತನು ಸರೋವರದೊಳು 10 ಸುರಮಾನದಿ ಸಾವಿರವರ್ಷ ಭಗವಾನ್ ದತ್ತನು ಸರೋವರದೊಳಿದ್ದನು ಹೊರಜನಕ್ಕೆ ಕಾಣದೆ ಆ ಋಷಿಪುತ್ರರು ತೀರದಲಿ ಇಕೋ ಈಗ ನಾಳೆ ಬರುವನು ಮೇಲೆ ಎಂದು ಕಾಯುತ್ತಿದ್ದರು ದೃಢದಿ 11 ಜಲಧಿ ಉಕ್ಕಿ ಹರಿದು ಕ್ಷೋಣಿಯ ಮುಳುಗಿಸದೆ ಜಲಮಧ್ಯ ತಾನಿದ್ದು ಕಾಯುವ ವಡವಾ ಮುಖಾಗ್ನಿ ಜಲಮಧ್ಯದಿ ಈಗ ಹೊಕ್ಕಿರುವ ದತ್ತಾತ್ರಯನು ಮುಳುಗಿರುವುದು ಆಶ್ಚರ್ಯವಲ್ಲ ಈರ್ವರೂ ಏಕ 12 ಬಲುದೀರ್ಘ ದೇವವರ್ಷಗಳು ಸಾಸಿರವಾದರೇನು ಶೀಲತಮ ವರವಾಯುವು ವರುಣನು ಬುಧಾದಿ ಜಲಾಭಿಮಾನಿಗಳು ಕಿಂಕರರಾಗಿ ಇರುತಿಹರು ಜಲಶಾಯಿ ನಾರಾಯಣ ಅವತಾರ ದತ್ತನಿಗೆ 13 ಒಂದು ದಿನ ಕೆರೆನೀರು ಚಲಿಸಲು ಸಂತೋಷದಿ ಬಂದರೂ ಬಂದರೂ ಎಂದು ಕೂಗೆ ಋಷಿಕುವರರು ಇಂದಿರಾಪತಿ ದತ್ತ ಮೇಲೆದ್ದು ಬಂದ ಬದಿಯಲ್ಲಿ ಇಂದಿರಾಂಗಿ ನಾರೀಮಣಿ ಓರ್ವಳ ಆಲಿಂಗಿಸುತ 14 ಯಾರನ್ನೂ ಲೆಕ್ಕಿಸದೆ ಕಾಮವಿಲಾಸ ಕೇಳಿಯ ಆ ಸ್ತ್ರೀಯೊಡನೆ ಮಾಡುತ್ತಿದ್ದುದು ಕಂಡು ಯುವಕರು ಯೋಗಿ ಹೀಗಾದರೆ ಎನ್ನುತ ತ್ವರಿತ ತೆರಳಿದರು ಜುಗುಪ್ಸೆಯಲ್ಲಿ ತ್ಯಜಿಸಿ 15 ಆ ಪುಣ್ಯವಂತ ಋಷಿಪುತ್ರರು ತಿಳಕೊಳ್ಳಲಿಲ್ಲ ಆ ಸ್ಛುರದ್ರೂಪಿಣಿ ನಾರಿ ಸಾಕ್ಷಾತ್ ಲಕ್ಷ್ಮೀದೇವಿಯೆಂದು ವಿಪುಲ ಮನ ಹರುಷ ತೋರಿಸಿ ದತ್ತಾತ್ರಯನು ಕೈಪಿಡಿದು ಲಕ್ಷ್ಮಿಯ ಕರೆದುಹೋದ ಆಶ್ರಮಕೆ 16 ಯಾವ ತನ್ನಾಶ್ರಮದಿ ಸ್ವಾಧ್ಯಾಯ ಪ್ರವಚನಗಳ್ ದಿವ್ಯ ಯೋಗ ಅಭ್ಯಾಸ ಶಿಷ್ಯರ್ಗೆ ಶೀಕ್ಷಾದಿಗಳ್ ಯಾವಾಗಲೂ ಹಿಂದೆ ನಡೆಸುತ್ತಿದ್ದನೋ ಅಲ್ಲಿ ಈಗ ದೇವಿಯೊಡನೆ ಲೀಲಾವಿಲಾಸಗಳ ತೋರಿಸಿದ 17 ಮಂದ ಧೀಗಳು ಈ ವಿಡಂಬನೆ ಕಂಡು ಮೋದದಲಿ ಶ್ರೀದತ್ತ ಈ ರೀತಿ ಆದನಲ್ಲಾ ಎಂದು ಮಾತನಾಡೆ ಸುಧೀಗಳು ಬೃಹಸ್ಪತ್ಯಾದಿಗಳು ದತ್ತಾತ್ರಯನು ಮೋದಚಿನ್ಮಯ ನಿರ್ದೋಷ ಹರಿ ಶ್ರೀಶನೆ ಎಂದರÀು 18 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯ ನಮೋ ಪ್ರಿಯತಾಂ ಶರಣು 19 -ಇತಿ ಎರಡನೇ ಅದ್ಯಾಯ ಸಂಪೂರ್ಣಂ - ಮೂರನೇ ಅದ್ಯಾಯ ಸಂಪತ್‍ಲಕ್ಷ್ಮೀ ವೃತ್ತಾಂತ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೊಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಸುರಪ ಜಂಭಾಸುರನಿಂದ ಅಪಜಯವ ಕೊಂಡು ಸುರಗುರು ಪ್ರೇರಣೆಯಿಂ ದತ್ತಾತ್ರಯನಲಿ ಹೋಗಿ ಶರಣು ಹೊಕ್ಕು ಸೇವಗೈಯಲು ಆಗ ಅವನನ
--------------
ಪ್ರಸನ್ನ ಶ್ರೀನಿವಾಸದಾಸರು
ಲಜ್ಜೆ ಲಜ್ಜೆ ನಿನ್ನ ನಂಬಿ ಕೆಟ್ಟೆನಾನು ಮಾಡೊದೇನು ಪ ಗೆಜ್ಜೆ ಕಟ್ಟಿದ್ದೊರೆ ಕೃಷ್ಣ ಭಜನೆಯಲ್ಲಿ ಮಾನದಲ್ಲಿ ಅ.ಪ. ಆರು ವಲಿದು ಮಾಡೊದೇನು ಆರುಮುನಿದು ಮಾಡೊದೇನು ಚಾರು ಚಾರು ಮೆಚ್ಚಲೇನು ಭಾರಿದೇವ ವಿಶ್ವಜನಕೆ ಹರಿಯದಾಸನೆಂದು ಇನ್ನು ಈರ ಮತವ ಸಾರಿಸಾರಿನಲಿದು ನಲಿದು ಸುಖಿಪುದಕ್ಕೆ 1 ದುಡ್ಡು ಕಾಸುಬೇಡ ನಮಗೆ ದೊಡ್ಡತನವು ಬೇಡ ಹಾಗೆ ಹೆಡ್ಡತನನ ಬಿಟ್ಟು ಪಿರಿಯಕೃಷ್ಣನನ್ನು ಭಜಿಸಲಿಕ್ಕೆ ಅಡ್ಡಿಏನು ಕುರುಡು ಮನವೆ ನೆನೆದುನೆನೆದು ನೋಡುನೀನೆ ದೊಡ್ಡತನವೆ ಸತ್ಯವೀದು ದಡ್ಡತನವೆ ದುರಭಿಮಾನ 2 ಹರಿಯದಾಸದೀಕ್ಷೆ ಪಡೆಯೆ ಸುಲಭವಲ್ಲ ಸುಲಭವಲ್ಲ ದುರಿತ ರಾಶಿಪೋಗಿ ಶುದ್ಧ ಚಿನ್ನದಂತೆ ಆಗದೇನೆ ಹಿರಿದು ಕಾಣೊ ಇಂಥಾ ಜನ್ಮ ಬರಿಯ ಮಾತಿಗೊಲಿಯದೇವ ಅರಿವಿನಂತೆ ನಡೆಯದಿರಲು ತೊರೆದು ಎಲ್ಲ ದುರಭಿಮಾನ 3 ಗೆಜ್ಜೆಕಟ್ಟಿ ಕುಣಿದು ಕುಣಿಯೆ ಲಜ್ಜೆನಾಶವಾಹುದೈಯ್ಯ ಲಜ್ಜೆನಾಶವಾಗಿ ಭಕ್ತಿಯುಕ್ತಿ ಉಕ್ಕಿಹರಿಯುತಿರಲು ಅಬ್ಜಪೀಠ ಪಿತನುತಾನೆ ಅಪ್ಪಿಕೊಂಡು ನಲಿದುನಲಿವ ಅಬ್ಜನಾಭ ನಲಿದು ವಲಿಯೆ ಹೆಚ್ಚುಉಂಟೆ ಅದರಕ್ಕಿಂತ 4 ಮೆರೆಯುತಿರಲು ದುಷ್ಟಕಲಿಯು ಅನ್ಯಮಾರ್ಗ ಸಾಧ್ಯವಿಲ್ಲ ಹರಿಯ ಭಜನೆ ಒಂದೇ ದಾರಿ ಹರಿಯ ವಲಿಸೆ ಸಿದ್ಧವೀದು ಜರಿದು ವಿಷಯ ಬೆರಸಿ ಭಕ್ತಿ ಸಿರಿಯ ರಮಣ “ಕೃಷ್ಣವಿಠಲ” ಚರಣ ಯುಗವ ಭಜಿಸಿ ನೀನು ಮಾನ್ಯನಾಗೋ ಧನ್ಯನಾಗೊ 5
--------------
ಕೃಷ್ಣವಿಠಲದಾಸರು
ಲೋಕ ಭರಿತನೊ ರಂಗಾನೇಕಚರಿತನೊ ಪ. ಕಾಕುಜನರ ಮುರಿದು ತನ್ನಏಕಾಂತಭಕ್ತರ ಪೊರೆವ ಕೃಷ್ಣ ಅ.ಪ. ರಾಜಸೂಯ ಯಾಗದಲ್ಲಿ ರಾಜರಾಜರಿರಲು ಧರ್ಮ-ರಾಜಸುತನುಯೀತನೇ ಸಭಾಪೂಜ್ಯನೆಂದು ಮನ್ನಿಸಿದನಾಗ 1 ಮಿಕ್ಕನೃಪರ ಜರಿದು ಅಮಿತವಿಕ್ರಮ ಯದುವರನೆ ತನಗೆತಕ್ಕ ರಮಣನೆಂದು ರುಕ್ಮಿಣಿ ಉಕ್ಕಿ ಮಾಲೆಯಿಕ್ಕಿದಳಾಗ2 ಜ್ಞಾನಶೂನ್ಯನಾಗಿ ಸೊಕ್ಕಿ ತಾನೆ ವಾಸುದೇವನೆನಲುಹೀನ ಪೌಂಡ್ರಕನ ಶಿರವ ಜಾಣರಾಯ ತರಿದನಾಗ 3 ಉತ್ತರೆಯ ಗರ್ಭದಲ್ಲಿ ಸುತ್ತಮುತ್ತಿದಸ್ತ್ರವನ್ನುಒತ್ತಿ ಚಕ್ರದಿಂದ ನಿಜಭಕ್ತ ಪರೀಕ್ಷಿತನ ಕಾಯ್ದ4 ತನ್ನ ಸೇವಕಜನರಿಗೊಲಿದು ಉನ್ನಂತ ಉಡುಪಿಯಲ್ಲಿ ನಿಂತುಘನ್ನಮಂದಿರ ಮಾಡಿಕೊಂಡ ಪ್ರಸನ್ನ ಹಯವದನ ಕೃಷ್ಣ 5
--------------
ವಾದಿರಾಜ
ವಿಜಯ ಗುರು ತವಪಾದರಜವ ಕರುಣಿಸಿ ಎನಗೆ ಭುಜಗಶಯನನ ಧ್ಯಾನ ಭಜನೆ ನೀಡುವುದು ಪ. ತವ ಶಿಷ್ಯವಂಶ ಸಂಜಾತಳೆನ್ನುತಲಿ ಬಹು ತವಕದಲಿ ಕರುಣಾರ್ದ ದೃಷ್ಟಿಯಿಂದ ತವ ಸೇವೆ ಎನಗಿತ್ತು ತವ ಕೀರ್ತನೆಯ ನುಡಿಸಿ ಮೂರ್ತಿ ತೋರೆನ್ನ ಭವತಾಪ ಹರಿಸಯ್ಯ 1 ನಿನ್ನ ಮಹಿಮೆಯ ಗುಟ್ಟು ವರ್ಣಿಪರು ಯಾರಿನ್ನು ನಿನ್ನ ಚರ್ಯೆಯ ಚರಿತೆ ಬರೆದವರ್ಯಾರೊ ನಿನ್ನ ನಿಜ ಸಂಕಲ್ಪ ಇನ್ನು ಅರಿಯುವರುಂಟೆ ಬನ್ನ ಭವ ಉಂಟೆ 2 ಆ ದೇವಮುನಿ ಆಜ್ಞೆ ಮೋದದಲಿ ಸ್ವೀಕರಿಸಿ ಪಾದನ್ಯೂನತೆ ಕವನ ಪೂರ್ಣಗೊಳಿಸಿ ವೇದಶಾಸ್ತ್ರಗಳರ್ಥ ಸುಲಭದಲಿ ತಿಳಿಸುತಲಿ ಹಾದಿ ತೋರಿದೆ ಶಿಷ್ಯರಾದ ಸುಜನರಿಗೆ 3 ಸತ್ಕರ್ಮ ಫಲಗಳನು ನಿತ್ಯದೊಳಗರ್ಪಿಸಲು ಉತ್ತಮನು ಆರೆಂಬ ಚಿತ್ತದಳಲ ಮುಕ್ತಿಯೋಗ್ಯರಿಗೆ ಬಹು ಯುಕ್ತಿಯಿಂದಲಿ ತೋರಿ ಉತ್ತಮನು ಹರಿಯೆಂದು ಶಕ್ತಿಯಿಂ ಸ್ಥಾಪಿಸಿದ 4 ವೈಕುಂಠಪುರದೊಳಗೆ ಶ್ರೀ ಕರನ ವಕ್ಷಕ್ಕೆ ಸೋಕಿಸಿದೆ ಚರಣವನು ಜೋಕೆಯಿಂದ ಈ ಕಾರ್ಯಕಾರಣವ ನಾ ಕೇಳಿ ನುಡಿವಂಥ ವಾಕು ಲಾಲಿಸುತ ವಿವೇಕ ಮತಿ ಕರುಣಿಪುದು 5 ಆ ಕಮಲನಾಭನಾ ಹೃದಯ ಕರುಣಾಮೃತವು ಸೋಕಿ ತುಂಬಿಹುದು ತವ ಚರಣ ಕಮಲದಲಿ ನಾ ಕೇಳ ಬಂದೆನಾ ಕರುಣಾಮೃತದ ಕಣವ ಯಾಕೆ ಮರೆಮುಚ್ಚಿನ್ನು ನೀ ಕೊಡೈ ತವಕದಲಿ 6 ಪಾದ ರೂಢಿಗೊಡೆಯಗೆ ಲಕುಮಿ ಓಡಿದಳು ಕರವೀರಪುರಕೆ ಸ್ವಾಮಿ ಬೇಡಾಗೆ ವೈಕುಂಠ ನೋಡಿ ಆನಂದಾದ್ರಿ ಮಾಡಿದನು ಮಂದಿರವ ಕೂಡಿ ಪದ್ಮಿನಿಯ 7 ನೋಡಿ ವೈಕುಂಠದೊಳು ನಾಡಿಗೊಡೆಯನ ಚರ್ಯ ರೂಢಿಯೊಳು ಜನಿಸಿ ಭೂಸುರವಂಶದಿ ದುರಿತ ಈಡಾಡಿ ಹರಿದಾಸ್ಯವನು ಬೇಡಿ ಬಯಸುತ ಪೊಂದಿ ನಾಡಿನೊಳು ಮೆರೆದೆ 8 ಪ್ರತಿವರ್ಷ ಬಿಡದೆ ತಿರುಪತಿ ಯಾತ್ರೆ ಭಕ್ತಿಯಲಿ ಪತಿತಪಾವನನ ಓಲೈಸಿ ಮೆರೆದೆ ಕ್ಷಿತಿಯಕ್ಷೇತ್ರ ಅಪ್ರತಿಮಹಿಮ ಸಂಚರಿಸಿ ಕ್ಷಿತಿಗೆ ತೋರಿದೆ ನಿನ್ನ ಮಹಿಮೆ ಜಾಲಗಳ 9 ಅಂಕಿತವದಲ್ಲದೆ ದಾಸತ್ವ ಸಿದ್ಧಿಸದು ಕಿಂಕರಗೆ ಅಂಕಿತವೆ ಕುರುಹು ಎಂದು ಅಂಕಿತವ ಪಡೆದು ಚಕ್ರಾಂಕಿತನ ಗುಣ ಮಹಿಮೆ ಶಂಕಿಸದೆ ಪೇಳ್ದೆ ತವ ಕಿಂಕರೋದ್ಧಾರಕನೆ 10 ನಿನ್ನ ಮಹಿಮಾದಿಗಳ ವರ್ಣಿಸಲು ಎನ್ನಳವೆ ಚನ್ನ ಗುರು ವಿಜಯವಿಠ್ಠಲನ ಪದಕಮಲ ಚನ್ನಾಗಿ ಕಂಡು ಹೃನ್ಮಂದಿರದಿ ಸತತದಲಿ ತನ್ಮಂತ್ರ ಕಿರಣವೆಮ್ಮಲ್ಲಿ ಬೀರಿದ ಕರುಣಿ 11 ವಿಕ್ರಮ ಕಾರ್ತೀಕ ಶುದ್ಧ ದಶವಿೂ ದಿವ್ಯ ಶುಕ್ರ ನಾಮರು ವಾರ ಶುಭದಿನದಿ ಇಂದು ಅಕ್ಕರದಿ ಕರಸಿಲ್ಲಿ ಉಕ್ಕಿಸಿದೆ ತವ ಸ್ತೋತ್ರ ಮಕ್ಕಳಂದದಿ ಪೊರೆವ ಅಕ್ಕರೆಯು ಉಂಟೊ 12 ಮಧ್ವರಾಯರ ಕುಲದಿ ಉದ್ಭವಿಸಿದಂಥ ಈ ಶುದ್ಧ ವೈಷ್ಣವ ಕುಲದಿ ಜನಿಸಿ ಬಂದೆ ಶುದ್ಧ ದಾಸತ್ವದ ಮುದ್ರಾಂಕಿತದ ರತ್ನ ಪಾದ ಕಂಡೆ 13 ಪಾಪಿ ಜನರುದ್ಧರಿಪ ಪಾವನಗಾತ್ರನೆ ಆ ಪಯೋಜಾಸನರ ತರತಮ್ಯವ ಸ್ಥಾಪಿಸಿದ ಮಹಿಮನೆ ಸದ್ಗುಣಾಂಬುಧಿ ನಿಲಯ ಗೋಪಾಲಕೃಷ್ಣವಿಠ್ಠಲನ ಪದಭೃಂಗ 14
--------------
ಅಂಬಾಬಾಯಿ
ವಿಜಯವಿಠ್ಠಲ ಶ್ರೀ ವಿಜಯವಿಠ್ಠಲ ಪ ವನಚರ ನಗಧರ ಅವನಿಯ ಉದ್ಧಾರ ಕಾನನ ವೇಗದಿ ಭು- ವನ ದಾನದ ನೆವನನು ಮಾಡಿ ಗಂಗೆಯ ಹ - ವಣದಿ ಪಡದೋ ಶ್ರೀ ವಿಜಯವಿಠ್ಠಲಾ 1 ಛಲದಿಂದ ಕುಲ ಕೋಲಾಹಲ ಮಾಡಿಸಿ ನೀ ತರಿದೆ ಬಾಲೆಯರ ಬಾಲರ ಬಿಡದೆ ಸುಲಭದಿ ಕರ್ಣಗೆ ಒಲಿದು ಪೇಳಿದೆ ಆ ಸುಲಲಿತಾ ಭಾರ್ಗವ ವಿಜಯವಿಠ್ಠಲ2 ಶತಮಖರಿಪು ಲೋಕಪಿತನೊರವಿನಿಂದಲಿ ಖತಿ ಸಕಲರಿಗೆ ನೀವು ತರಿದಿರಲು ಪತಿತಪಾವನ ರಾಮ ಅತಿ ವೇಗ ದನುಜನ ಹತವ ಮಾಡಿದೆಯೊ ಶ್ರೀ ವಿಜಯವಿಠ್ಠಲ3 ಬಕಮುಖ ದನುಜರ ಹಕ್ಕಲಗೊಳಿಸಿ ಬಲು ಯುಕುತಿಯಿಂದಲಿ ಭಕುತರ ಪೊರದೆ ವಿಕಸಿತ ಕಮಲನಯನ ಕಂಜನಾಭನೆ ಸಕಲ ಸುರರ ಪಾಲ ವಿಜಯವಿಠ್ಠಲಾ 4 ರಕ್ಕಸ ಮರ್ದನ ದಿಕ್ಕು ಮೋಹಿಪ ಕೃಷ್ಣ ರುಕ್ಮಿಣಿ ಪತಿಯಾದಾ ಚಕ್ರಪಾಣಿ ಉಕ್ಕಿದ ಮಗಧನ ಸೊಕ್ಕು ಮುರಿದು ಕಪಿ ರೆಕ್ಕ ಆಳ್ವನಿಗೆ ಒಲಿದೆ ವಿಜಯವಿಠ್ಠಲಾ 5 ಘನವಾದ ವಿಶ್ವರೂಪವ ತೋರಿದೆ ದಿನಮಣಿ ಕೋಟಿ ಅಧಿಕ ಕಾಂತಿ ನರಹರಿ ವನಜ ಸಂಭವನಯ್ಯ ವಿಜಯವಿಠ್ಠಲಾ 6 ವನಿತೆಯರ ವ್ರತ ಭಂಗವ ಮಾಡಿ ದಾನವರ ಮೋಹಿಸಿದೆಯೊ ಪವನನೊಡಿಯಾ ಉನುಮತ ಜನ ಕುಲ ಸನುಮತ ಶಾಸ್ತ್ರವ ವ- ದನದಲಿ ಮೆದ್ದಿಯೊ ವಿಜಯವಿಠ್ಠಲಾ 7 ರಜೋತಮ ಗುಣವನು ಭುಂಜಿಸುತ ವ್ರಜ ಭೂಮಿ ನಿಜವಾಗಿ ವ್ಯಾಪಿಸಿರೆ ಸುಜನಪಾಲ ನೀನು ವದಗಿ ವಾಜಿಯನೇರಿ ಭಜನಗೈಸಿದ ವೇಗ ವಿಜಯವಿಠ್ಠಲಾ 8 ಗೋಕುಲದಲಿ ಅನೇಕ ಲೀಲೆಯ ತೋರಿ ಬೇಕಾದ ವರ ಪುಂಡರೀಕಗಿತ್ತೆ ಸಾಕಾರ ಗುಣ ಪೂರ್ಣ ವೇಣುಗೋಪಾಲ ವಿ ವೇಕವ ಕೊಟ್ಟ ಕಾಯನ್ನ ವಿಜಯವಿಠ್ಠಲಾ9
--------------
ವಿಜಯದಾಸ
ವ್ಯಾಸರಾಯರ ಸ್ಮರಿಸಿ ಏಸು ಜನ್ಮದ ಪಾಪ ನಾಶವಾಗುವುದು ನಿಮ್ಮಾಶೆ ಸಿದ್ಧಿಸುವುದು ಲೇಸಾಗಿ ಸುಖಿಸಿ ಆನಂದ ವೈಕುಂಠದಲಿ ವಾಸವಾಗುವುದು ನಿಜ ಭಕುತಿಯಲಿ ಬಿಡದೆ ಪ ಪಿತನಿಂದ ನೊಂದು ರತಿಪಿತನ ಸ್ಮರಿಸುತ ಪ್ರತಿಬಂಧಕಗಳ ಪ್ರತಿಯಾಗಿ ಬಂದಿರಲು ಬಲು ಮತಿವಂತನಾಗಿ ಮುದದೀ ಕ್ಷಿತಿಯ ಭಾರವ ವೊಹಿಸಿ ಕೃತಭುಜ ಮುನೀಶ್ವರನ ಸ್ತುತಿಸುತಲ್ಲಿದ್ದು ಮಿತಿಕಾಲ ಹಿಂಗಳದು ಅಚ್ಯುತನ ವರದಿಂದ ಬಂದು 1 ಅಲ್ಲಿ ತ್ರಿಣಿನೇತ್ರ ಶ್ರೀ ವಲ್ಲಭನ ಶ್ರೀಪಾದ ಪಲ್ಲವಾರುಣಿ ಚಿತ್ತದಲ್ಲಿ ಪ್ರತಿದಿವಸದಲಿ ನಿಲ್ಲಿಸಿ ನಿಗಮಾರ್ಥದಿಂದ ಪೂಜಿಸುತ್ತಿದ್ದ ಬಲ್ಲ ಭಕುತಿಂದ ಸತತ ಖುಲ್ಲನಲಿ ಪುಟ್ಟಿದ ಪ್ರಲ್ಹಾದ ದೇವನು ಬಲ್ಲಿದಾನಾಗೆಲ್ಲಿ ಸಂಸಾರನುತ್ತರಿಸಿ ಮುನಿ ಮೆಲ್ಲನೇ ನಡತಂದನು2 ಬಂದ ನಾರದಗೆ ಪ್ರಲ್ಹಾದ ದೇವನು ಎರಗಿ ನಿಂದು ಕಂಗಳ ಮುಗಿದು ತ್ರಾಹಿ ತ್ರಾಹಿ ಎಂದು ಇಂದು ನಿಮ್ಮಯಾ ದರುಶನಾ ಛಂದವಾಯಿತೆನಗೆತ್ತಲಿಂದ ಬಂದಿರಿ ಇತ್ತ ಬಂದ ವಿಚಾರ ಪೇಳೆಂದು ಬಿನ್ನೈಸಲು ನಂದದಲಿ ಹಾಹಾ ಎನುತಾ 3 ವೃಕೋದರನಿಂದ ನೊಂದು ದೇಹವನು ಬಿಡುವಾಗ ಬಾ ಲ್ಹಕರಾಯನಾಗಿ ಹುಟ್ಟಿದ ಪ್ರಲ್ಹಾದನು ವೈದಿಕ ಮಾರ್ಗವನ್ನೇ ಧರಿಸಿ ಉಕುತಿಯನೇ ಸಾಧಿಸಿ ಕಲಿಯೊಳಗೆ ನಿಮ್ಮ ಪೂ ಜಕನಾಗಿಪ್ಪೆನೆಂದು ತಲೆವಾಗಲು ಇಂದು ಪ್ರಕಟವಾಯಿತು ಧರೆಯೊಳು 4 ದಿಕ್ಕುಗಳಂ ಮರದು ಧಿಗಿಧಿಗಿನೆ ಚಿಗಿದಾಡುತ್ತ ಉಕ್ಕಿದವು ಕಣ್ಣಿಂದ ಅಶ್ರು ಜಲಧಾರೆ ತಾ ಮೈಮರೆದು ದೇವಕಿ ನಂದನನ ನೆನೆದು ನಕ್ಕು ಕಿಲಿಕಿಲಿ ರಾಹಸ್ಯಗಳನುಚ್ಚರಿಸುತಾ ತಕ್ರ್ಕೈಸಿ ತಿಳುಪಿದನು ಮುಂದಣಾಗಮವೆಲ್ಲ ವೃತ್ತಾಂತ ಅಕ್ಕಟ ಅದ್ಭುತವೇನೆಂಬೆ 5 ಬನ್ನೂರು ಗ್ರಾಮದಲಿ ಜನಿಸಿದನು ಭೂಸ್ವರೂಪ ಮುನ್ನಿಲ್ಲದೇ ಬೆಳೆದು ಮುನಿ ಸುಬ್ರಾಹ್ಮಣ ರನ್ನು ಪಾಲಿಸುವ ಪರಮಾನಂದವುಳ್ಳ ಬ್ರಹ್ಮಣ್ಯತೀರ್ಥರ ಕರದಿ ಚೆನ್ನಾಗಿ ಪೋಷಿಸಿಕೊಂಡು ಉಪನೀತವಾಗಿ ಸನ್ಯಾಸಿ ಪಟ್ಟವನೆ ಧರಿಸಿ ಧರ್ಮದಲಿ ಸ ವಿದ್ಯವನೋದಿ ಧನ್ಯ ಕೀರ್ತಿಯಲಿ ಮೆರೆದಾ 6 ರಾಯಗದ್ದುಗೆನೇರಿ ಅವನಿಗೆ ಬಂದ ಮಹಾ ಕುಹುಯೋಗವ ನೂಕಿ ರಾಜ್ಯದೊಳಗೆ ಇದ್ದ ಸುವರ್ಣ ಛಾಯದಂತೆ ಕಾಂತಿಲೀ ನ್ಯಾಯಾಮೃತ ತರ್ಕ ತಾಂಡವ ಚಂದ್ರಿಕೆ ಎಂಬ ಸ್ಥಾಯವಾದರು ಪೊಂಪದಿ7 ಯಂತ್ರೋದ್ಧಾರಕನ ಪ್ರತಿಷ್ಠಿಸಿ ವಿಜಯೀಂದ್ರ ಸಂತ ವಾದಿರಾಜಗೊಲಿದು ಪುರಂದರ ಮಂತ್ರ ಸಿದ್ಧಿಯನೆ ಕೊಟ್ಟು ಭ್ರಾಂತಗೊಳಿಸುವ ಮಹಾ ಅನ್ಯಾಯ ಮತವೆಂಬ ಕಾಂತಾರ ಪಾವಕನೆ ವ್ಯಾಸಾಬ್ಧಿಯನು ಬಿಗಿದು ಚಿಂತಿತಾ ಫಲದಾಯಕ 8 ಮಧ್ವಮತವೆಂಬ ದುಗ್ಧಾಬ್ಧಿಗೆ ಪೂರ್ಣೇಂದು ಹೃದ್ವನಜದೊಳಗಿರಿಸಿ ಕೃಷ್ಣನ ಪದಾಂಬುಜವ ಚಿದ್ವಾತ್ಯದಲಿ ನಿಲಿಸಿ ಕಾವ್ಯದಲಿ ಕೊಂಡಾಡಿ ಸದ್ವೀರ ವೈಷ್ಣವರಿಗೆ ಪದ್ಧತಿಯನು ಪೇಳಿ ತವಕದಿಂದಲಿ ತಾವು ಸದ್ವೈಷ್ಣವ ಲೋಕ ಸಿರಿಮರಳೈದಿದರು ಪಾದದ್ವಯವ ಭಜಿಸುವವರೂ ಕೇಳಿ 9
--------------
ವಿಜಯದಾಸ