ಒಟ್ಟು 192 ಕಡೆಗಳಲ್ಲಿ , 41 ದಾಸರು , 120 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉಡುಪಿ ಪರಿಸರದ ದೇವತೆಗಳು ಕಣ್ವ ಋಷಿ ತಪಗೈದ ಅಜ್ಜರ್ಕಾಡೆಂಬಲ್ಲಿ ಅವನಿಗೊಲಿದಿರುವ ದುರ್ಗೆ ವಾಸವಾಗಿಹಳು ಒಳಕಾಡು ಎಂಬ ತಾನವೆ ಚಂದ್ರನ ತಪೋ ಭೂಮಿ ಇಲ್ಲಿಯೇ ಸಕಲ ವಿದ್ಯಾಲಯವಾಯ್ತು 132 ಬೆಳ್ಳಿ ಮಂಚದ ಕಾಲುಗಳು ನಾಲ್ಕು ಎಂಬಂತೆ ಆರ್ಮೊಗನ ರೂಪಗಳು ನಾಲ್ಕು ದೆಸೆಗಳಲಿ ಮಾಂಗೋಡು ತಾಂಗೋಡು ಆರಿತೋಡು ಮುಚ್ಲಿಕೋಡು ನಾಮದಿಂ ಬೆಳಗುವವು ಷಷ್ಠಿದಿನದಂದು 133 ಕಡಿಯಾಳಿ ಎಂಬಲ್ಲಿ ಮಹಿಷಮರ್ದಿನಿಯಾಗಿ ದುರ್ಗಾಲಯವು ಉಡುಪಿ ಪೂರ್ವದ್ವಾರದಲ್ಲಿ ಪುತ್ತೂರು ಬೈಲೂರು ಬಡಗು ತೆಂಕು ದೆಸೆಯಲ್ಲಿ ಕೃಷ್ಣ ಸೇವೆಗೆ ದುರ್ಗೆ ಕಟಿಬದ್ಧಳಿಹಳು 134 ಸತ್ಯ ನುಡಿಯಲ್ಲಿರಲಿ ಧರ್ಮ ನಡೆಯಲ್ಲಿರಲಿ ಸ್ವಾಧ್ಯಾಯದಲಿ ಎನಗೆ ಎಚ್ಚರವದಿರಲಿ ಅಜ್ಞಾನದಂಧಕಾರದ ದಿಕ್ಕಿನಿಂದೆನ್ನ ನಿನ್ನ ಬೆಳಕಿನ ಕಡೆಗೆ ಕರೆದೊಯ್ಯು ದೇವಾ 135 ಪರಶುರಾಮಕ್ಷೇತ್ರ ಹುಟ್ಟುಭೂಮಿಯು ಎನಗೆ ಪರಶುರಾಮನು ನೀನೆ ನಿನ್ನ ಕ್ಷೇತ್ರವಿದು ಪರಮಹಂಸಾಖ್ಯಯತಿಗಳ ಮಾನಸಹಂಸ ಸೋಹಂ ಎನ್ನುವ ಬ್ರಹ್ಮ ಎನ್ನೊಳಗೆ ಇರುವೆ 136 ಕೃಷ್ಣಾರ್ಪಣವದಿಲ್ಲದಾವುದು ಫಲ ಕೊಡದು ಅದರಿಂದ ಕೃಷ್ಣನಿಗೆ ಕೃತಿಯನರ್ಪಿಸುತ ಸಾಲೋಕ್ಯ ಸಾಮೀಪ್ಯವನ್ನು ಬಯಸುವೆ ನಾನು ಯೋಗ್ಯತಾನುಗುಣವಾಗಿ ಫಲವ ಕೊಡು ಹರಿಯೆ137 ಪರಶುರಾಮನು ರಾಮ ಪರಶು ರಾಮನು ಕೃಷ್ಣ ರಾಮದಾಸನು ನಾನು ಕೃಷ್ಣದಾಸನಿಹೆ ಬರೆದ ಕೃತಿಯಿಂದ ನೀನ್ ಸುಪ್ರಸನ್ನತೆ ಪಡೆದು ಭಕ್ತಿ ಮುಕ್ತಿಗಳ ಕೊಟ್ಟು ರಕ್ಷಿಸು ಶ್ರೀಶ 138 ಉಡುಪಾನ್ವಯಜ ನಾನು ಉಡುಪಾನ್ವಯದ ನೀನು ಉಡುಪಿ ಹುಟ್ಟೂರೆನಗೆ ನೀನುಡುಪಿಗತಿಥಿ ಮಧ್ವ ಹೃದಯವು ನಿನಗೆ ವಾಸದ ಸ್ಥಾನವಿರೆ ಮಾಧ್ವಕೋಟಿಗಳಲ್ಲಿ ಕೀಟನಾಗಿಹೆ ನಾನು 139 ವಿಷ್ಣು ಪದದೊಳಗಿರುವ ಜ್ಯೋತಿಲೋಕದ ಒಡೆಯ ಆ ಜ್ಯೋತಿಲೋಕಕ್ಕೆ ಕರೆದೊಯ್ಯುತ ನನ್ನ ಭಕುತರಿಗೆ ಮುಕುತಿ ಕೊಡುವುದೆ ನಿನ್ನ ಸಂಕಲ್ಪ ಅದರಿಂದ ನಿನ್ನನ್ನು ಶರಣು ಶರಣೆಂಬೆ 140 ಚಾಂದ್ರಮಾನದ ಪಿಂಗಳಾಖ್ಯ ಸಂವತ್ಸರದಿ ಚೈತ್ರ ಮಾಸದ ನವಮಿಯ ದಿನದಲ್ಲಿ ಕಾಲ ಇದನರ್ಪಿಸುತ ನಾನು ಕೃತಕೃತ್ಯನಾದೆ ಶ್ರೀಕೃಷ್ಣ ಕಾಪಾಡು 141
--------------
ನಿಡಂಬೂರು ರಾಮದಾಸ
ಎಚ್ಚತ್ತಿರಬೇಕು ಮಾ ಧ್ರುವ ಎಚ್ಚತ್ತಿರಬೇಕು ನೆಚ್ಚಿ ನಿಜಘನ 1 ರಚ್ಚಿಗೆ ಬಾರದೆ ಬಚ್ಚಿಟ್ಟು ನಿಜಘನ 2 ಕಚ್ಚಿ ಕೈ ಬಾಯಿಲೆ ಹುಚ್ಚಿಟ್ಟು ಹೋಗದೆ 3 ಕಚ್ಚಿಕಿಡದೆ ನೀನು ಕಾಂಚನದಾಶೆಗೆ 4 ನೆಚ್ಚಿಕೊಂಡಿರಬ್ಯಾಡಿ ವ್ಯಚ್ಚಾಗು ಬದುಕಿಗೆ 5 ತುಚ್ಛರ ಮಾತಿಗೆ ನೆಚ್ಚಿ ನಡಿಯದೆ 6 ಮತ್ಸರಕೆ ನೀವು ಹುಚ್ಚಾಗಿ ಹೋಗದೆ 7 ಅಚ್ಯುತ ಭಕ್ತಿಗೆ 8 ಸಚ್ಚಿದಾನಂದನ ನಿಶ್ಚಲರಿಯಲಿಕ್ಕೆ 9 ಎಚ್ಚರಿಸಿದ ಗುರುಪಾದ ನಿಶ್ಚೈಸಲು 10 ಸೂಚಿಸಿ ಹೇಳಿದ ಗುರುದಾಸಮಹಿಪತಿ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎಚ್ಚರ ಹಿಡಿ ಮನವೇ | ನಿಚ್ಚದಿ ಮೆಚ್ಚಿನ ಅಚ್ಚುತನಂಘ್ರಿ ಪ ಹಾಡುತಾ ನೋಡುತಾ ನೀಡದೊಳಾಡುತಾ ನಡೆ ನುಡಿಯೊಳು ಬಿಡ ದಡಿ ಗಡಿಗೊಮ್ಮೆ 1 ಹೇಳುತ ಕೇಳುತ ಮೇಳದಿ ಬಾಳುತ | ಕಳವಳದಳುಕಿನ ಡಳಮಳದೊಳಗೆ 2 ಬಂದದ ಛಂದವಿಂದೇ ಹೊಂದು ಮುಕುಂದನೆಂದು | ತಂದೆ ಮಹೀಪತಿ ಕಂದಗ ಬೋಧಿಸಿದ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಚ್ಚರ ಹೇಳುವೆ ನಾನೀಗ ನಿನಗೆ ಎಚ್ಚರಿಕೆಚ್ಚರಿಕೆಸಚ್ಚಿದಾನಂದನೆ ನೀನೆಂದು ತಿಳಿ ನಿನ್ನ ಎಚ್ಚರಿಕೆಚ್ಚರಿಕೆ ಪ ಈಷಣವೆಂದೆಂಬ ಕಾಡಿನೊಳಗೆ ಹೊಕ್ಕಿ ಎಚ್ಚರಿಕೆಚ್ಚರಿಕೆದೋಷಕಾರಿಗಳು ಇಂದ್ರಿಯನಾಯ್ಗಳು ಎಳೆದಾವು ಎಚ್ಚರಿಕೆಚ್ಚರಿಕೆ 1 ಅಷ್ಟಮದವೆಂಬ ಆನೆ ಕೈಗೆ ಸಿಕ್ಕಿ ಎಚ್ಚರಿಕೆಚ್ಚರಿಕೆದುಷ್ಟ ಪಂಚಕ್ಲೇಶದ ಪೊದೆಗೆ ಸಿಲುಕೀಯೆ ಎಚ್ಚರಿಕೆಚ್ಚರಿಕೆ2 ವ್ಯಸನಗಳೆಂಬ ಕುದುರೆಯ ಕಾಲೊಳಾದೀಯೆ ಎಚ್ಚರಿಕೆಚ್ಚರಿಕೆದುಶ್ಮನರಾರ್ವರ ಕಣ್ಣಿಗೆ ಬಿದ್ದೀಯೆ ಎಚ್ಚರಿಕೆಚ್ಚರಿಕೆ 3 ತಾಪತ್ರಯದ ಹಳ್ಳದಿ ಹರಿದುಹೋದೀಯೆ ಎಚ್ಚರಿಕೆಚ್ಚರಿಕೆಪಾಪವೆಂಟು ಪಾಶವೆಂಬ ಉರುಲಿಗೆ ತಗುಲೀಯೆ ಎಚ್ಚರಿಕೆಚ್ಚರಿಕೆ 4 ಸಂಸಾರ ನಂಬಲು ಕೆಟ್ಟುಹೋಗುವೆ ಎಚ್ಚರಿಕೆಚ್ಚರಿಕೆಹಂಸ ಚಿದಾನಂದ ಗುರುಹೊಂದೆ ಕಡೆಹಾಯುವೆ ಎಚ್ಚರಿಕೆಚ್ಚರಿಕೆ5
--------------
ಚಿದಾನಂದ ಅವಧೂತರು
ಎಚ್ಚರಾದರು ದೇವಗಣರಿಂದು ನಮ್ಮ ಲಕ್ಷ್ಮೀರಮಣ ಕೃಷ್ಣ ರಥವನೇರುವನೆಂದು ಪ. ಶಿಂಶುಮಾರ ಚಕ್ರದಂಶಮಕರ ತಿ- ಗ್ಮಾಂಶು ಸಂಕ್ರಮಿಸುವ ಸಮಯದಲಿ ಕಂಸಮರ್ದನ ಯದು ವಂಶಾಬ್ಧಿ ಚಂದ್ರ- ವಿಪಾಂಗಗಮನನಾಗಿ ವೀಧಿಗೆ ಬಹನೆಂದು 1 ಕಂದನ ಸಂಭ್ರಮ ತಂದೆಗೆ ಸುಖಕರ- ವೆಂದು ಪೇಳುವ ಮಾತ ನಿಜವ ದೋರಿ ಮಂದರಧರ ಮನ್ಮಥನ ಕೇತು ಬೆಳಗುವಾ- ನಂದದಿ ರಥವೇರುತ್ತಿಂದು ಬರುವನೆಂದು 2 ಮೋಕ್ಷದಾಯಕ ಕಮಲಾಕ್ಷ ಕೃಷ್ಣನ ಸ- ತ್ಕಟಾಕ್ಷ ಸಂಪಾದಿಪಪೇಕ್ಷೆಯಲಿ ತ್ರ್ಯಕ್ಷಾಧ್ಯಕ್ಷಲೋಕಾಧ್ಯಕ್ಷರೆಲ್ಲರು ಕೂಡಿ ಪಕ್ಷಿವಾಹನನನ್ನು ಈಕ್ಷಿಪ ತವಕದಿ 3 ಪೃಥೆಯ ಕುಮಾರನ ರಥವ ನಡಸುತತಿ- ರಥರನು ಗೆಲಿಸಿ ಸಾಮ್ರಾಜ್ಯವಿತ್ತ ಕಥೆಯ ಕೇಳ್ಪರ ಮನೋರಥಗಳ ಕೊಡುವ ಮ- ನ್ಮಥನ ಜನಕ ಮುಕ್ತಿ ಪಥವ ತೋರುವನೆಂದು 4 ಸಿದ್ಧಿ ವಿಘ್ನಮುಖ ದೋಷಭೇಷಜ ಭಕ್ತಿ ಸಿದ್ಧ ಜಪರಿಗೆ ಸಿದ್ಧಿಸುವನೆಂದು ಮಧ್ವಮುನಿಯು ತಂದಿಲ್ಲಿರಿಸಿ ಪೂಜಿಸಿದಂಥ ಸಿದ್ಧಾಂತವೇದ್ಯನಿರುದ್ಧನಿಲ್ಲಿಹನೆಂದು 5 ಧಾರುಣಿಯೊಳಗಿನ ವಿಷ್ಣುಭಕ್ತರ ಸಂಘ ಸೇರಿ ಸಂತೋಷದಿ ಜಯವೆನಲು ಪಾರಿವ್ರಾಜರು ಕೂಡಿ ಪರತತ್ವ ನುಡಿಯೆ ಸ- ರ್ಪಾರಿಯನೇರಿ ಸಮೀರೇಡ್ಯಬಹನೆಂದು 6 ಮಾಯಿಜನರ ಮುರಿದೊತ್ತುತ ತತ್ವರ- ಸಾಯನ ಸುಧೆಯ ಸಜ್ಜನರಿಗಿತ್ತು ವಾಯುಮುನಿಯು ಪ್ರತಿಷ್ಠೆಯ ಗೈದ ಪುರುಷಾರ್ಥ ದಾಯಕ ವೆಂಕಟರಾಯನೀತನೆಯೆಂದು 7
--------------
ತುಪಾಕಿ ವೆಂಕಟರಮಣಾಚಾರ್ಯ
ಎಚ್ಚರಿಕೆ ಎಚ್ಚರಿಕೆ ಅಚ್ಚುತ ಮೆಚ್ಚನು ಎಚ್ಚರಿಕೆ ಪ. ಇಚ್ಛಿಸದಿಹ ಸುಖ ಸ್ವಚ್ಛ ಭಕುತಿಯಲಿ ಹರಿ ಇಚ್ಚೆಯಲಿರು ಮನವೆಅ.ಪ. ಹಗಲು ಹಸಿ ಮುಂದಿರುಳು ನಿದ್ರೆ ಹಗೆಯಹುದೆಂದು ಬಗೆಯದೆ ನೀ ಜಗದೊಡೆಯನು ಸಿಗ್ಯಮಿಗೆ ಧ್ಯಾನಿಸದೆ ಅಘ ಪೋಗುವುದೆ ಮನವೆಚ್ಚರಿಕೆ 1 ಯಾಕೆಂತು ನೀ ಪರರ ಯೊಚಿಸುವೆ ನಿನ ಸಾಕುವನ್ಯಾರೆಂದು ಯೋಚಿಸದೆÉ ಆ ಕೈವಲ್ಯಾಧಿಪನೆಂದು ತಿಳಿ ಅ ನೇಕ ರೂಪಿಲಿಹ ಎಚ್ಚರಿಕೆ 2 ಪರಸಖನ ಎನಗೆ ಹರಿಯೆಂದ ತರಳನ ಸಲಹಿತು ನಾರಾಯಣ ನಾಮ ಗರುಡಗಮನ ಶ್ರೀ ಶ್ರೀನಿವಾಸನೆ ನಿರುತ ಮರೆಯದಿರು ಮನವೆಚ್ಚರಿಕೆ 3
--------------
ಸರಸ್ವತಿ ಬಾಯಿ
ಎಚ್ಚರಿಕೆ ಎಚ್ಚರಿಕೆ ಎಲೋ ದೇವ | ಎಚ್ಚರಿಕೆ ಎಚ್ಚರಿಕೆ | ಅಚ್ಚ ಕಲ್ಯಾಣ ಮೂರುತಿ ತಿರುವೆಂಗಳಾ ಪ ಅಜ ದ್ವಿಜಗಜ ಅಜಾಮಿಳ ಪರಿಪಾಲನೆಯಾ | ದ್ವಿಜ ರಾಜಾಂಗಾ ಗಂಗಜ ಭಕ್ತವರದನೆಯಾ | ಗಜ ಕುಜ ದನುಜ ಭೂ ಭುಜರ ಸಂಹಾರನೆಯಾ | ಪಂಕಜ ಹೃದಯಾರ್ಕನೆಯಾ1 ಪರಮೇಷ್ಠಿ ವಂದನೆಯಾ | ಶರಧಿ ತಾರಾ ಕರುಗಳ ಕಾಯಿದನೇಯಾ | ಎರಡೇಳು ಲೋಕ ಪೊರೆವಾ ಭಾರಣ ಹರಿಯಾ | ಶರಣು ಹೊಕ್ಕೆನು ಎನ್ನ ಮೊರೆ ವಿಚಾರಿಸೊಯಾ 2 ಜಯ ಜಯಾ ಚಿತ್ತಾವಾಧಾರು ಪರಾಕ್ರಮಯಾ | ಭಯ ನಿವಾರಣ ನಿಜ ಭಂಟರಿಗೆ ಬಂಟಯಾ | ನಯ ಮೂರುತಿ ನಮ್ಮ ವಿಜಯವಿಠ್ಠಲರೇಯಾ ಯಾ | ತ್ರಿಯಗುಣ ವಿರಹಿತ ಶೇಷಗಿರಿವಾಸಯಾ 3
--------------
ವಿಜಯದಾಸ
ಎಚ್ಚರಿಕೆಚ್ಚರಿಕೆ ಮನವೆ ಇನ್ನು | ಎಚ್ಚರಿಕೆಚ್ಚರಿಕೆ ಯಮನ ಪುರದ ಬಾಧೆ ಪ ಕಿಚ್ಚನಾದರು ಕೇಳಿ ದುಶ್ಚಿಂತನ ಬಿಡು ಅ.ಪ ಗಂಡ ಅತ್ತೆ ಮಾವ ಮೈದುನರ ಬೈವರ | ಖಂಡ ತುಂಡನೆ ಮಾಡಿ ಖಂಡವ ಕೊಯಿದು | ಕಂಡದೊಳಗೆ ಬೇಯ್ಸಿ ದಿಂಡುಗೆಡಹಿ ಕಟ್ಟಿ | ಮಂಡೆಯ ಒಡೆದು ಡಂಡದಿ ಶಿಕ್ಷಿಸಿ | ಹಿಂಡಿ ಹಿಪ್ಪೆಯ ಮಾಡಿ ಕೊಂಡೊಯ್ದು ಅಗ್ನಿಯ ಕುಂಡವ ಹೋಗಿಸುವರೊ-ಎದೆಯ ಮೇಲೆ | ಗುಂಡನೆ ಹೊರಿಸುವರೊ-ಬಾಯೊಳಗೆ | ಕೆಂಡವ ಸುರಿಸುವರೊ-ಕೋಟಿ ಜನ್ಮ ಚಂಡಾಲ ಯೋನಿಯಳಿಟ್ಟು ಬಾಧಿಸುವರೊ 1 ಉತ್ತಮ ಗುರು ಹಿರಿಯರುಗಳ ಬೈವರ | ತಿತ್ತಿಯ ಸುಲಿದು ಕತ್ತರಿಪ ಬಾಚೆಯ ತಂದು | ಕೆತ್ತಿ ಶರೀರಕ್ಕೆ ಹತ್ತೊ ನೀರನೆ ಚೆಲ್ಲಿ | ನೆತ್ತಿಯ ಕೊರೆದು ಖಾರವನೊತ್ತಿ ಹಾವಿನ ಹುತ್ತವ ಹೊಗಿಸಿ ವಿಷವನಿತ್ತು ಕೈ ಕಾಲು | ಕಿತ್ತು ಹೊಟ್ಟೆಯ ಕೊಯ್ವರೊ ಬೊಬ್ಬಿರಿ | ಯುತ್ತುರುಳು ಹಾಕುವರೊ ಬೆನ್ನೊಳಗೇ | ಎತ್ತಿ ಕರುಳ ತೆಗೆವರೊ ದೊಡ್ಡ ಬೆಟ್ಟ | ಹತ್ತಿಸಿ ತಲೆಕೆಳಗಾಗಿ ನೂಕಿಸುವರೊ 2 ಪರಧನ ಪರಸತಿ ಪರನಿಂದೆಗೆಳೆವರ | ಮರುಳುವ ಮರಳಿನೋಳ್ ಹೊರಳಿಸಿ ಅಸ್ಥಿಯ | ಮುರಿದು ಮುಟ್ಟಿಗೆ ಮಾಡಿ ಉರೆದ ಗುಂಡಿಗೆ ಸೀಳಿ | ಜಿಹ್ವೆ ಕೊರೆದು ತೈಲದೊಳಗೆ | ಅರಿವೆಯೆದ್ದಿ ಮೈಗೆ ಉರಿಯ ಸುತ್ತಲಿಕ್ಕೆ | ಉರವಣಿಸು ಕುಣಿಸುವರೊ-ಹೆರೆದಂಬಿಗೆ | ಗುರಿಮಾಡಿ ನಿಲಿಸುವರೊ ಉಕ್ಕಿನ ಕಂಭ | ಕ್ಕೊರಗಿಸಿ ನಿಲಿಸುವರೊ ಶೂಲಕೆ ಹಾಕಿ | ಎರಡು ಕಾಲೆಳೆದು ಕಾವಲಿ ಮೇಲೆ ನಿಲಿಸೀರೊ 3 ಹೆಣ್ಣುಮಾರಿ ಹೊನ್ನು ಕಟ್ಟಿದ ಮನುಜರ | ತುಂಬಿ | ಸುಣ್ಣದೊಳಗೆ ಹೂಳಿ ಜನ್ಮ ಕಳೆದು ಶಿರ | ವಣ್ಣಿಕಲ್ಲನೆ ಆಡಿ ಇನ್ನು ಉಕ್ಕಿನ ಕಾದ- | ಎಣ್ಣೆಯ ಸುರಿದು ನೀರನ್ನೆರದು ನರಮಾಂಸ- | ಉಣ್ಣೆಂದು ತಿನಿಸುವರೊ-ತಿತ್ತಿಯನಿಕ್ಕಿ | ಹಣ್ಣಣ್ಣು ಮಾಡುವರೊ-ಅಸೀಪತ್ರಾ- | ರಣ್ಯವ ಹೊಗಿಸುವರೊ-ಕ್ಷುಧೆಯೆನ್ನೆ | ತುಂಬಿ ಕುಟ್ಟಿ ಮೆಲ್ಲಿಸುವರೊ4 ವಾಸುದೇವನ ವಾಸರದಲ್ಲಿ ಉಂಬರ | ಹಾಸುಗಲ್ಲಿನ ಮೇಲೆ ಬೀಸಿ ಅಪ್ಪಳಿಸಿ ಆ- | ಕಾಶಕ್ಕೊಗೆದು ಖಡ್ಗ ರಾಸಿಯೋಳ್ ಬೀಳಲು | ಕೇಶ ಪಿಡಿದು ಕೆಡಹಿ ಘಾಸಿಸಿ ಬಾಯೊಳು | ತುಂಬಿ | ನಾಸಿಕ ಕೊಯ್ಸುವರೋ-ಕೀಸಿಸಿ ಗೂಟ | ಹೇಸದೆ ಬಡಿಸುವರೊ ಹಂದಿಯಂತೆ | ಈ ಶರೀರ ಸುಡಿಸವರೊ-ತಮಸಿನೊಳು | ಏಸು ಜನ್ಮಕೆ ಗತಿಯಲ್ಲವೆನಿಸುವರೊ 5 ಎಲ್ಲ ಒಂದೇ ಎಂಬ ಪಂಚ ಮಹಾಪಾತಕಿಯ | ಹಲ್ಲನ್ನು ಮುರಿದು ಗಂಟಲ ಶೀಳಿ ಅಂಗುಳಿಗೆ | ಮುಳ್ಳನ್ನು ತಂದೂರಿ ತಪ್ತ ಲೋಹದ ಮೇಲೆ | ಕುಳ್ಳಿರಿಸಿ ಕೊಡಲಿಯೊಳ್ ಎಲ್ಲವನು ಕಡಿದು | ಕೊಲ್ಲ ಬಡಿದು ಅಂಬಿನಲಿ ಚುಚ್ಚಿ ರಕ್ತ- | ಚೆಲ್ಯಾಡಿ ಬಗೆಯುವರೊ-ಉರಿಯ ಕೊಂಡ- | ದಲ್ಲಿ ಮುಳುಗಿಸಿಬಿಡವರೊ-ಹೊತ್ತು ಒಯ್ದು | ಕಲ್ಲುಗಾಣಕೆ ಹಾಕುವರೋ-ಕುಂಭೀಪಾಕ | ದಲ್ಲಿ ಕುದಿಸಿ ಬೇಯ್ಸಿ ಬೆಂಡು ಮಾಡುವರೊ6 ಒಂದು ನೋಡಿದರೊಂದು ಅಧಿಕ ಪಾಪಗಳಿವೇ- ನೆಂದು ಪೇಳಲಿ ಎನಗೊಂದಾದರಳವಲ್ಲ | ಹಿಂದಿನ ದುರ್ವಾರ್ತೆ ಮರೆದು ಮುಂದಾದರು | ನಂದತೀರ್ಥರ ಪಾದಾನಂದದಿ ಭಜಿಸಿ ಪು | ರಂದರನನು ಸರಿಸಿ-ವಿಜಯವಿಠ್ಠಲ | ನ್ಹೊಂದಿ ಪತಿಕರಿಸಿ-ಮುಕ್ತಿ ಮಾರ್ಗ- | ವಿಂದು ಆಶ್ರಿಯಿಸೊ ಗೋವಿಂದನ ಸ್ತುತಿಸಿ | 7
--------------
ವಿಜಯದಾಸ
ಎಚ್ಚರಿಲ್ಲೀ ಮನಕೆ ಯೋಚಿಸಿ ನೋಡದು ಚಿದ್ಫನಕೆ ಧ್ರುವ ನುಡಿದವು ಪರಮಾರ್ಥ ನಡೆಯೊಳಗಿಲ್ಲದೆ ನುಡಿದರ್ಥ ಹಿಡಿದು ವಿಷಯದ ಸ್ವಾರ್ಥಬಡುವುದು ಶ್ರಮತಾನೆ ವ್ಯರ್ಥ 1 ಓದುದು ವೇದಾಂತ ಭೇದಿಸಿ ತಿಳಿಯದೆ ಅದರಂತ ವಾದ ಮಾಡುದು ಭ್ರಾಂತ ಸಾಧಿಸಿ ನೋಡದು ತನ್ನೊಳು ತಾ 2 ಜನಕೇಳುದು ಬುದ್ದಿ ತನಗ ಮಾಡಿಕೊಳ್ಳದು ಸಿದ್ಧಿ ಕಾಣದ್ಹೇಳುದು ಸುದ್ಧಿ ಜ್ಞಾನಕ ಬಾರದು ತಾ ತಿದ್ದಿ 3 ತೊಟ್ಟು ಉತ್ತಮ ವೇಷ ಮುಟ್ಟಿಗಾಣದೆ ಸ್ವಪ್ರಕಾಶ ತುಟ್ಟಿಲಿ ಜಗದೀಶ ಗುಟ್ಟಿಲಿ ಬಲಿವದು ಧನದಾಶೆ 4 ಎಚ್ಚರಿಸಿತು ಖೂನ ನಿಶ್ಚಲ ಮಹಿಪತಿಗೆ ಗುರುಜ್ಞಾನ ಹುಚ್ಚುಗೊಂಡಿತು ಮನ ನೆಚ್ಚಿ ನಿಜಾನಂದದ ಘನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎನ್ನನುದ್ದರಿಸು ಗುರು ರನ್ನ ಮಹಿಪತಿದೇವ | ಚಿನ್ನನೆನುತಲಿ ಬಿಡದೆ ಘನ್ನ ದಯ ಮಳೆಗರೆದು | ಮುನ್ನಿನಪರಾಧಗಳನಿನ್ನು ಕ್ಷಮೆಯನು ಮಾಡಿ | ನಿನ್ನ ಸ್ಮರಣೆಯೊಳಿಪ್ಪ ಸನ್ಮತಿಯನಿತ್ತು 1 ನಿಚ್ಚಳದ ಪದಗಳಿಗೆ ಮುಚ್ಚಗೊಳ್ಳದೆ ನಿನ್ನ | ಎಚ್ಚರಿಕೆಯನು ತೊರೆದು ಬೆಚ್ಚಿ ಬೆದರುತೆ ವಿಷಯ | ಕಚ್ಚಿ ಬಳಲುವ ಈ ಹುಚ್ಚು ಮನಸ್ಸಿಗೆ ನೀ | ನಿಚ್ಚಟದರಹು ಕೊಟ್ಟು ನಿಶ್ಚಲದಲಿ ಸಲುಹು2 ಕುಂಭಿನಿಲಿ ಧೇನು ಬಸಿರಿಂ ಬಂದ ಕರುವಿಂಗೆ | ಹಂಬಲಿಸಿ ತಿರು ತಿರುಗಿ ಬೆಂಬಿಡದೆ ಬಪ್ಪಂತೆ | ಇಂಬಾಗಿ ಎನಗ ಕರುಣಾಂಬಕದಿ ನೋಡಿ ನೀ | ಸಂಬಾಳಿಸೈ ಕೃಷ್ಣನೆಂಬವನ ಸ್ವಾಮೀ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಲ್ಲಿಂದ ಬಂದಿದ್ದೆಲೆ ಖೋಡಿ ನೀ ನೆಲ್ಲಿಗೆ ಹೋಗ್ತಿದ್ದಿ ತ್ವರೆಮಾಡಿ ಪ ಕಲ್ಲುಮುಳ್ಳೆನ್ನದೆ ಮುಂದೆ ನೋಡಿ ಜರ ನಿಲ್ಲದೆ ಹೋಗ್ತಿದ್ದಿ ಓಡೋಡಿ ಅ.ಪ ಏಳುಗೇಣಿನ ಕುದುರೇರಿದ್ದಿ ಭವ ಮಾಲೆ ಕೊರಳಿಗೆ ಹಾಕಿದ್ದಿ ಮೂಲ ಲಗಾಮವೆ ತೆಗೆದಿದ್ದೀ ನೀ ಬೀಳುವ ಎಚ್ಚರ ಮರೆತಿದ್ದಿ 1 ಶೀಲ ಸನ್ಮಾರ್ಗವ ಬಿಟ್ಟಿದ್ದಿ ಮಹ ಕಾಳು ಕತ್ತಲೆಹಾದ್ಹಿಡಿದಿದ್ದಿ ಕಾಲನಾಳಿನ ಕೈಗೆ ಸಿಗುತಿದ್ದಿ ಬಹು ಗೋಳಿನೊಳಗೆ ಹೋಗಿ ಬೀಳುತಿದ್ದಿ2 ಅಸ್ಥಿರ ಕುದುರೆ ಹತ್ತಿದ್ದಿ ಬಲು ಮಸ್ತಿಲಿಂದ ಕಣ್ಣು ಮುಚ್ಚಿದ್ದಿ ಪುಸ್ತಿಯಿಲ್ಲದ ದಾರ್ಹಿಡಿದಿದ್ದಿ ಮುಂದೆ ಸ್ವಸ್ಥತೆ ನೀ ಹ್ಯಾಂಗೆ ಪಡೀತಿದ್ದಿ 3 ಯಾರನ್ನ ಬೇಡಿ ಬಂದಿದ್ದಿ ನೀ ನಾರಸೇವೆ ಕೈಕೊಂಡಿದ್ದಿ ದಾರಿ ತಪ್ಪಿದಾರ್ಹಿಡಿದಿದ್ದಿ ಸುವಿ ಚಾರ ಪಥವ ಧಾರೆರೆದಿದ್ದಿ 4 ಬಂದಕಾರ್ಯವನು ತೊರೆದಿದ್ದಿ ಮನ ಬಂದಂತೆ ಕುಣಿಕುಣಿದಾಡುತಿದ್ದಿ ತಂದೆ ಶ್ರೀರಾಮನ ಮರೆತಿದ್ದಿ ಈ ಬಂಧುರಸಮಯ ವ್ಯರ್ಥ ಕಳೀತಿದ್ದಿ 5
--------------
ರಾಮದಾಸರು
ಏನು ಹೇಳಿದರೇನು ಹೀನ ಮನಕ | ತಾನು ಎಚ್ಚರ ಹಿಡಿಯ ದನಕಾ ಪ ಬೂದಿಯೊಳಗ ಹೋಮ ಮಾಡಿದಂತೆ | ಬೋಧಾನುಗೃಹ ಕಳವದು ಮರೆತಕೆ 1 ಹರಿ ಕೀರ್ತನೆ ಇರಲಿಲ್ಲಾ | ಬರಡು ಮಾತಿಗೆ ಸುಖ ಪಡುದಲ್ಲಾ 2 ಒಮ್ಮೆಯಾದರೂ ಹರಿ ಹರಿಯಂದು | ಝಮ್ಮೆನೆವೆ ಪಶ್ಚಾತಾಪ ಬಾರದೆಂದು 3 ಗಾಳಿಯಂತೆ ಓಡಾಡುವದು ನೋಡಿ | ಕಾಲೂರಿ ನಿಲ್ಲದು ಮತಿಗೇಡಿ 4 ತಂದೆ ಮಹಿಪತಿ ದಯವಾಗದನಕ | ಒಂದು ಹಿಡಿಯದು ಸ್ವಹಿತ ವಿವೇಕಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏಳಯ್ಯ ಶ್ರೀ ಲಕ್ಷ್ಮೀರಮಣ ಸುರನÀುತ ಚರಣ ಏಳು ಶ್ರೀ ನೀಲಕಂಠನ ಮಿತ್ರ ಸುಚರಿತ್ರ ಏಳು ಶ್ರೀ ಭಾಗೀರಥೀ ಪಿತನೆ ಮತಿಯುತನೆ ಏಳು ಶ್ರೀ ಕೃಷ್ಣರಾಯ ಸ್ವಾಮಿ ಏಳಯ್ಯ ಬೆಳಗಾಯಿತು ಪ ನಸುಗೆಂಪಾಗಿ ತಾರಕಿಗಳಡುಗುತಿದೆ ಬೊಂಪು ಹರಿದೋಡುತಿದೆಕೋ ಸೊಂಪಡಗುತಿದೆ ಕುಮುದ ಕಮಲವರಳುತಿದೆ ನಾಗ ಸಂಪಿಗೆಯ ಬನದಿ ಸ್ವರ ಗೈಯುತಿದೆ ಮರಿದುಂಬಿ ಸಂಪತ್ತು ಬಡವಗೆ ಬರುವಂತೆ ರವಿ ಬಿಂಬ ಸೊಂಪಿ ನಿಂದೆಸೆಯುತಿದೆಕೋ ||ಸ್ವಾಮಿ|| 1 ಹಲವುಮೃಗ ಜಾತಿಗಳು ಹಳುವನಡ ಹಾಯುತಿವೆ ಫಲ ಪುಷ್ಪಚಯವು ಪಲ್ಲವಿಸಿ ಪಸರಿಸುತಲಿವೆ ಗಿಳಿ ವಿಂಡು ನಲಿಯುತಿದೆ ನವಿಲು ಜೇಂಕರಿಸುತಿವೆ ಹೊಲ ಮನೆಗಳೆಲ್ಲ ಹಸನಾಗಿ ಕಾಣಿಸುತಲಿವೆ ಸುಳಿಗಾಳಿ ಸುಳಿಯುತಿದೆ ಜಲಜಾಕ್ಷನುಪ್ಪವಡಿಸಾ ||ಸ್ವಾಮಿ|| 2 ಹಕ್ಕಿಗಳು ಹಾರುತಿದೆ ಕುಕ್ಕುಟವು ಕೂಗುತಿದೆ ನಕ್ಷತ್ರ ಪತಿಯ ಪ್ರಭೆ ಮಾಸುತಿದೆ ಸುರಭಿ ಬಲು ರಕ್ಕಸಾಂತರನೆವಳು ಮನೆಮನೆ ಬಿಡದೆ ಅಮ್ಮಿಯನು ಹುಡುಕುತಿವೆ ಚೊಕ್ಕ ಬೆಳಗಾಯಿತಿದೆ ಕೋ ||ಕೃಷ್ಣ || 3 ಪತಿವ್ರತೆಯರೆದ್ದು ಪುರುಷನ ಚರಣಕ್ಕೆರಗಿ ಚಮ ತ್ಕøತಿಯಿಂದ ಮುಖ ಮಜ್ಜನವಮಾಡಿ ಪಣೆಗಿಟ್ಟು ದಧಿ ಮಥಕನುವಾಗಿ ಕುಳಿತು ಅತಿಶಯ ದೊಳಗೆಲ್ಲ ಮನೆವಾರ್ತೆಯನು ಮುಗಿಸಿ ನಿಜ ಮತ ವಿಡದು ಭಕ್ತಿಯಲಿ ಗಿಂಡಿಲುದಕವ ತುಂಬಿ ನೀನು ಉಪ್ಪವಡಿಸ 4 ಮದ್ದು ಮಂತ್ರವು ಸಿದ್ದಿಸುವ ಕಳವಿನೊಳಗಿರ್ದ ಚೋರರಿ ಗೆದೆಯ ಧೈರ್ಯಗುಂದುವ ಸಮಯ ಉದ್ಯೋಗವಂತರಿಗೆ ಎಚ್ಚರಿಕೆ ಸಮಯ ದರಿದ್ರರಿಗೆ ನಿದ್ದೆ ಸಮಯ ಬುದ್ದಿಯುತರಾದ ಬುಧಬಾಲರಿಗರ್ಥಗ್ರಂಥ ದ್ಯಾನ ಶಾಸ್ತ್ರ ಪುರಾಣಗಳ ಬಹುವಿದ್ಯೆ ಪಠಿಸುವ ಮುದ್ದು ಗೋಪಾಲಕೃಷ್ಣ 5 ವ್ಯಾಸ ವಾಲ್ಮೀಕಿ ಶುಕನಾರದನು ಶೌನಕ ಪರಾಶರ ವಶಿಷ್ಟ ವೈಶಂಪಾಯ ಕಣ್ವ ವಿಶ್ವಾಮಿತ್ರ ಗೌತಮ ಭರದ್ವಾಜ ಸನಕ ದೂರ್ವಾಸ ಕೌಶಿಕ ಕಪಿಲರು ಕೌಶ್ಯಪ ದಧೀಚಿ ಭಾರ್ಗವರಗಸ್ತ್ಯ ಋಷಿ ಈ ಸಮಸ್ತಾದಿ ಹರಿಯೇ || ಸ್ವಾಮಿ || 6 ಜಾಂಬವ ವಿಭೀಷಣಾಶ್ವತ್ಥಾಮ ಹನುಮಂತ ಜಂಭಾರಿಸುತ ಧನಂಜಯ ಬಲಿಷ್ಠಹಲಾದರೆಂಬಸದ್ಭಕ್ತರುಗಳು ಅಂಬುಜೋದ್ಭವ ಮುಖ್ಯರಮರ ಗಂಧರ್ವಾದಿ ತುಂಬುರ ಭುಜಂಗ ಭೂಸುರರೆಲ್ಲರೊಂದಾಗಿ ಬಿಡದ ಹಂಬಲಿಸುತೈದಾರೆ ಹರಿಯೆ || ಸ್ವಾಮಿ || 7 ಗಂಗೆ ಗೋದಾವರಿಯ ಭೀಮರತಿವರದೆ ವರ ತುಂಗ ಭದ್ರೆಯು ಯಮುನೆ ಕಾವೇರಿ ಸಿಂಧು ಅಂಗನೆಯರೆಲ್ಲರೂ ಕೂಡಿ ರಂಗು ಮಾಣಿಕದ ಆಭರಣಗಳಲಂಕರಿಸಿ ಹಿಂಗದೆಲ್ಲರು ನೆರೆದು ಹರಿ ನಿಮ್ಮ ಬಾಗಿಲೋಳು ಮಂಗಳಭಿಷೇಕಕೆಂದು ಸ್ವಾಮಿ 8 ಕರುಗಳನು ಕಾಯ್ದ ಕಾರುಣ್ಯ ಮೂರುತಿ ಏಳು ವರ ಪಾಂಡುರಂಗ ವಿಠಲ ಹರಿಸುತನ ಹಯವರೂಥವ ಹರಿಸಿದವನೆ ಏಳು ಹರಿಸುತನ ಸುತನ ಸುತನ ಕಾಯ್ದವನೆ ಏಳು ಹರಿಸುತನ ಕೋಣೆ ಲಕ್ಷ್ಮೀರಮಣನೆ ಏಳು ಶ್ರೀ ಹರಿಯೆ ನೀನು ಉಪ್ಪವಡಿಸಾ ||ಕೃಷ್ಣ || 9
--------------
ಕವಿ ಪರಮದೇವದಾಸರು
ಏಳುತಲಿ ಎದ್ದು ಎಚ್ಚರಿಸುತ ನೀ ನೆನೆಯೊ | ಪಾಲಿಸುವ ಮೂಲೋಕ ಪರಮಾತ್ಮನಾ ಪ ಮೂರೊಂದು ಪದರದ ಚೀಲದೊಳು ಥಳಥಳಸಿ ದೋರುತಿಹ ರತ್ನ ಪರಿಚಿದ್ರೂಪನಾ | ಅರಿಗಳ ವಡೆದ ಘನ ತ್ರಿವೇಣಿ ತೀರದಲಿಹ | ಧೀರಯೋಗಿಯ ಕಂಗಳಾನಂದನ 1 ಬೇರು ಮೇಲಾಗಿ ಕೊಂಬುಗಳು ಕೆಳಗಾದ ಸಂ | ಸಾರ ವೃಕ್ಷವ ತ್ರಿಗುಣಮಯದಿಂದಲಿ || ವಾರಿಜಭವಾಂಡ ಪಿಂಡಾಂಡಗಳ ಪರಿಪರಿಯ | ತೋರಿ ತೋರದಲಿಪ್ಪ ನಿರ್ಲಿಪ್ತನಾ2 ನೋಡಿಸುವ ಕೇಳಿಸುವ ವಾಸಿಸುವ ಪರಿಮಳವ | ಆಡಿಸುವ ಕರಚರಣ ನುಡಿನುಡಿಸುವ | ರೂಢಿಯೊಳು ಸೂತ್ರಧಾರಕನಾಗಿ ಅಷ್ಟದಳದ | ಲಾಡುತಿಹ ಮಹೀಪತಿ ಸುತಪ್ರಭು ಭಕುತಿಯಲಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏಳೇಳು ಬಾಲಕನೆ ಅಜ್ಞಾನನಿದ್ರೆಯಿಂ ಏಳು ತಿಳಿವಿಕೆ ಎಂಬ ಎಚ್ಚರವ ಹೊಂದುತಲಿ ಪ ಹಾಳು ಮಾಯೆಯು ಎಂಬ ಮೇಲುಮುಸುಕನು ತೆಗೆದು ಕೀಳು ಬಾಳುವೆಯೆಂಬ ಹಾಸಿಗೆಯ ಸುತ್ತುತಲಿ ಕೇಳು ಕಿವಿದೆರದೇಕಚಿತ್ತದಿಂ ಶ್ರುತಿಯೆಂಬ ಕೋಳಿ ಕೂಗುತಲಿಹುದು `ತತ್ವಮಸಿ' ಎಂದು 1 ಬಿತ್ತರಿಸಿಹುದು ಮುಮುಕ್ಷುತ್ವ ಮುಂಬೆಳಗಾಗೆ ಚಿತ್ತವೆನ್ನುವ ಕಮಲವರಳಿಹುದು ನೋಡೀಗ ಸುತ್ತಲಡಿಗಿದ ಸುವಾಸನೆಯ ಮೂಸುತಲಿ ನೀ ಉತ್ತು ಮೋತ್ತುಮ ನಿಜಾನಂದವನು ಪಡೆವುದಕೆ 2 ಜ್ಞಾನನಿಂದಕರೆಂಬ ಗೂಗೆಗಳು ಅಡಗಿದವು ಕಾಣದಾದವು ಕುತರ್ಕಗಳೆಂಬ ತಾರೆಗಳು ಸ್ವಾನುಭವಸುಜ್ಞಾನಭಾನುವುದಯಿಸುತಿಹನು ಜ್ಞಾನಿಶಂಕರನ ಸದ್ಬೋಧವನೆ ಸ್ಮರಿಸುತಲಿ 3
--------------
ಶಂಕರಭಟ್ಟ ಅಗ್ನಿಹೋತ್ರಿ