ಒಟ್ಟು 48 ಕಡೆಗಳಲ್ಲಿ , 21 ದಾಸರು , 45 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಪುಣ್ಯವ ಮಾಡಿದೆನೋ ಮುನ್ನೆ | ಧನ್ಯಗೈಸಿದ ಗುರು ಮಹೀಪತಿ ತಾನು ಪ ವಿಜಯಗ್ಹೇಳಿದ ಹರಿ ಗೀತೆಯಲಿ | ಸುಜನ ಸಂತರೊಳು ದುರ್ಲಭನೆನಲಿ 1 ಎನ್ನಯ ಸಿರದಲಿ ಅಭಯಕರವಿಟ್ಟು | ಚೆನ್ನಾಗಿ ಹೇಳಿದ ಸುಜ್ಞಾನ ಗುಟ್ಟು 2 ಕಣ್ಣುದೆರೆಸಿ ಭಕ್ತಿ ಮಾರ್ಗದಲಿ | ಸಣ್ಣವನೆಂದು ಚಿದ್ಭನದೋರಿಸಲಿ 3 ಇನ್ನೊಬ್ಬರಾಶೆ ಏತಕೆ ಎನಗಿನ್ನು | ಎನ್ನ ಹಂಬಲಿಸಿದಾಶೆಯ ಕಾಮಧೇನು 4 ತಂದೆ ತಾಯಿ ಗುರು ಬಂಧು ಬಳಗಾಗಿ | ಕಂದಗೊಲಿದ ನಿಂದು ತನ್ನಯ ಹೊಣೆಯಾಗಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಪುಣ್ಯವ ಮಾಡಿದೆನೋ ಮುನ್ನೆ | ಧನ್ಯಗೈಸಿದ ಗುರು ಮಹೀಪತಿ ತಾನು ಪ ವಿಜಯಗ್ಹೇಳಿದ ಹರಿ ಗೀತೆಯಲಿ | ಸುಜನ ಸಂತರೊಳು ದುರ್ಲಭನೆನಲಿ 1 ಎನ್ನಯ ಸಿರದಲಿ ಅಭಯಕರವಿಟ್ಟು | ಚೆನ್ನಾಗಿ ಹೇಳಿದ ಸುಜ್ಞಾನ ಗುಟ್ಟು 2 ಕಣ್ಣುದೆರೆಸಿ ಭಕ್ತಿ ಮಾರ್ಗದಲಿ | ಸಣ್ಣವನೆಂದು ಚಿದ್ಭನದೋರಿಸಲಿ 3 ಇನ್ನೊಬ್ಬರಾಶೆ ಏತಕೆ ಎನಗಿನ್ನು | ಎನ್ನ ಹಂಬಲಿಸಿದಾಶೆಯ ಕಾಮಧೇನು 4 ತಂದೆ ತಾಯಿ ಗುರು ಬಂಧು ಬಳಗಾಗಿ | ಕಂದಗೊಲಿದ ನಿಂದು ತನ್ನಯ ಹೊಣೆಯಾಗಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಪುಣ್ಯವ ಮಾಡಿದೆನೋ ಮುನ್ನೆ | ಧನ್ಯಗೈಸಿದ ಗುರು ಮಹೀಪತಿ ತಾನು ಪ ವಿಜಯಗ್ಹೇಳಿದ ಹರಿ ಗೀತೆಯಲಿ | ಸುಜನ ಸಂತರೊಳು ದುರ್ಲಭನೆನಲಿ 1 ಎನ್ನಯ ಸಿರದಲಿ ಅಭಯಕರವಿಟ್ಟು | ಚೆನ್ನಾಗಿ ಹೇಳಿದ ಸುಜ್ಞಾನ ಗುಟ್ಟು 2 ಕಣ್ಣುದೆರೆಸಿ ಭಕ್ತಿ ಮಾರ್ಗದಲಿ | ಸಣ್ಣವನೆಂದು ಚಿದ್ಭನದೋರಿಸಲಿ 3 ಇನ್ನೊಬ್ಬರಾಶೆ ಏತಕೆ ಎನಗಿನ್ನು | ಎನ್ನ ಹಂಬಲಿಸಿದಾಶೆಯ ಕಾಮಧೇನು 4 ತಂದೆ ತಾಯಿ ಗುರು ಬಂಧು ಬಳಗಾಗಿ |ಕಂದಗೊಲಿದ ನಿಂದು ತನ್ನಯ ಹೊಣೆಯಾಗಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಮಾಡಲಿ ವಿಠಲ ಏನು ತಿಳಿಯದು ವಿಠಲ ಏನಿತ್ತು ಮೆಚ್ಚಿಸಲಿ ವಿಠಲಾ ಪ. ಜ್ಞಾನ ಮೊದಲೇ ಇಲ್ಲ ಧ್ಯಾನ ಮಾಡುವುದರಿಯೆ ನೀನಾಗೆ ವಲಿದೆನ್ನ ಸಲಹಯ್ಯ ವಿಠಲಯ್ಯ ಅ.ಪ. ತಂದೆತಾಯಿಯು ನೀನೆ ಬಂಧು ಬಳಗವು ನೀನೆ ತಂದವನುಭವದಲ್ಲಿ ಎನ್ನ ನೀನೆ ಮುಂದೆ ಪೊರೆವವ ನೀನೆ ಹಿಂದೆ ಪೊರೆದವ ನೀನೆ ಇಂದು ಪೊರೆಯುವನು ನೀನೇ ಒಂದರಿಯೆ ತವ ಪದದ್ವಂದ್ವವೆ ಗತಿ ಎಂದು ಇಂದು ಚರಣದಿ ಬಿದ್ದೆ ಪೊರೆಯಯ್ಯ ವಿಠಲಯ್ಯ 1 ಹಿಂದಿನಾ ಭಕ್ತರನು ಪೊರೆದ ಕೀರುತಿ ನೋಡೆ ಒಂದು ನಿಜವೆಂದರಿಯೆ ವಿಠಲಾ ಇಂದೆನ್ನ ಕರಪಿಡಿದ ಮುಂದಕ್ಕೆ ಕರೆದು ನೀ ಒಂದು ಮಾತನಾಡೆ ವಿಠಲಾ ಅಂದಿನಾ ಭಕ್ತವತ್ಸಲನೆಂಬ ಕೀರ್ತಿ ನಿಜ ವೆಂದು ತಿಳಿಯುತಲಿ ಆನಂದಿಸುವೆ ವಿಠಲಯ್ಯ 2 ಸಿರಿವಂತರಿಗೆ ವಲಿವ ಬಿರುದೊಂದು ಘನವೆ ಕೇಳ್ ಪರಿ ವಿಠಲಾ ಪರಿಪರಿಯಲಿ ನಿನ್ನ ಚರಣ ಪಿಡಿದಾಲ್ಪರಿಯೆ ಥರವೆ ಗರುವಿಕೆ ಪೇಳು ವಿಠಲಾ ತೆರದು ನೋಡದೆ ನೇತ್ರ ಕರದಭಯ ಪೇಳದಲೆ ಪರಿ ಕರುಣೆಗೆ ಸರಿಯೆ ಪೇಳ್ ವಿಠಲಯ್ಯ3 ಹಿಂದೆ ಕೆಲವರ ಕಾಯ್ದುದೊಂದೆ ಕೀರ್ತಿಯು ಜಗದಿ ಮಂದಿ ಹೊಗಳುವರದನೆ ಮತ್ತೆ ಮತ್ತೆ ಇಂದು ಮುಂದೆ ಅಂಥ ಬಂದ ಭಕ್ತರು ಇಲ್ಲೆ ಇಂದಿಲ್ಲವೇ ನಿನಗೆ ಆ ಶಕ್ತೀ ಇಂದಿನವರಲಿ ಅಂಥ ಭಕುತಿ ಇಲ್ಲವೆ ಪೇಳು ಇಂದಿರೇಶನೆ ಎನಗೆ ವಲಿಯದಿಹೆ ವಿಠಲಯ್ಯ 4 ಅಂತರಂಗದಿ ನಿಂತು ಶಾಂತತ್ವ ಕೊಡುವುದಕೆ ಚಿಂತೆ ಏತಕೆ ಪೇಳು ವಿಠಲಾ ಸಂತತದಿ ನಿನಧ್ಯಾನ ಚಿಂತನೆಯ ಕೊಡು ಎನಗೆ ಚಿಂತಿತಾರ್ಥಪ್ರದನೆ ವಿಠಲಾ ಕಂತುಪಿತ ಗೋಪಾಲಕೃಷ್ಣವಿಠ್ಠಲ ಗುರುಗ ಕರ ಪಿಡಿದು 5
--------------
ಅಂಬಾಬಾಯಿ
ಏನೊ ಜೀವ ನನ್ನ ನುಡಿವ ನಾಲಗೆಯು ನಿನ್ನದೇನೊ ಕಾಣೆ ನಿನ್ನಾ ಬಣ್ಣವನೆನ್ನಾಣೆ ಕೇಳು ಪೇಳುವೆನೂ ಪಭೂತಂಗಳು ಪುಸಿಯೇನೊ ಮಾತೆ ಮಾಯೆಯಲ್ಲವೇನೊಏತಕೀಗರ್ವವು ನೀನು ಜಾತನಾದ ಬಗೆಯೇನೊಕೈತವವ ಬಿಡುುನ್ನೂ ಹೇತು ಹೀನೋಕ್ತಿಗಳೇನುನೀತಿಯಾಗಿ ಪೇಳು ನಾನು ತಾತಪ್ಯಮಾನನಪ್ಪೆನೂ 1ಬಿಸಿಲು ದೊರೆದೇರನೆ ನಾನು ಮಸಿಯಮಾತ ನುಡಿವೆ ನೀನುನಶಿದು ಪೋಪೆನಹುದು ನಾನು ಹಸದೊಳಿಪ್ಪುದುಂಟೆ ನೀನುಸಸಿನೆ ತಿಳಿದುಸುರಿನ್ನು ಕುಸಿಯ ಹಾಕದಿರೆನಿನ್ನೂನುಸುಳುದಾರಿ ಮನವನ್ನು ಹೊಸದು ಕೊಂಡಾಡಿದರೇನು 2ನೋಡುವ ಕಣ್ಣು ನಿನ್ನದೇನೊ ಆಡುವಾಟನಿನ್ನದೇನೊಓಡುವ ಕಾಲು ನಿನ್ನದೇನೊ ನೀಡುವ ಕೈ ನಿನ್ನದೇನೊಬೀಡ ಬಿಡುವರೆ ನೀನು ಗೂಡಾಗಿುದ್ದೆ ನಾನುಕೂಡಲಿಂದ್ರಿಯ ಕರಣ ತಾನು ಕಾಡುಪಾಲಾಗುವೆನೀನು 3ಎದ್ದು ನಡೆದಾಡುವೆ ನಾನು ನಿದ್ರೆಗೈವೆ ಮಲಗಿ ನಾನುಹೊದ್ದುಕೊಂಬೆ ಹೊದಿಕೆಗಳನು ಗದ್ದುಗೆಗಧಿಕಾರಿ ನಾನುಸಿದ್ದಿಯೆನ್ನಿಂದಲೆ ತಾನು ನಿರ್ಧರಿಪುದಿದ ನೀನುಬುದ್ದಿಹೀನನಾಗದಿರಿನ್ನು ಬದ್ಧವಾಡು ಕೇಳ್ವೆ ನಾನು 4ತಿರುಪತೀಶನಂಘ್ರಿ ನಾನು ಬರಿಯ ಪ್ರತಿಬಿಂಬ ನೀನುಗುರುವಾಸುದೇವಾರ್ಯರನ್ನು ಎರಗಿ ಸಂಪಾದಿಸಿದೆ ನಾನುಕರೆದು ಬಿಗಿದಪ್ಪಿದರೆನ್ನುವನು ಒರೆಯೆ ಕಿವಿಯೊಳ್ಮಂತ್ರವನ್ನುಭರದಲೆನ್ನ ಜಿಹ್ವೆ ಜಪಿಸಿ ಅಂತೆನೆಂಬೆ ನಿನ್ನ ನೀನು 5ಕಂ||ಒರಟುತ್ತರದಿಂದ ದೇಹವು ಬರಿ ಜಗಳವ ತೆಗೆಯೆ ಜೀವನರಿತಿದರಂದವ ನೆರೆಮೂರ್ಖರ ದಾರಿಯೊಳಗೆಬರುತರುಪುವ ಜಾಣನೆಂದು ನೀತಿಯ ನುಡಿದಂ
--------------
ತಿಮ್ಮಪ್ಪದಾಸರು
ಓಡಿಬಾರೊ ರಂಗನಾಥ ಪ್ರಿಯಾ ಪ ನೋಡೀ ಕೂಡೀ ಆಡೀ ಪಾಡುವೆ ಅ.ಪ ಮಾಡಬಾರದೆಲ್ಲ ಮಾಡಿ ಬಂದೆ ಬಂದೆ [ಓಡಿಬಂದು] ನಿಂದೆ ಕಂದಾ ತಂದೆಯೆ 1 ಏತಕೆನ್ನ ಮೇಲೆ ಇಷ್ಟು ಕೋಪ ಕೋಪಾ [ಆರ್ತರ] ಪಾಲಿಸ ಭೂಪಾ ಶ್ರೀಶನೆ2 ಗುರುವು ತುಲಸಿರಾಮ ದಾಸಪ್ರೇಮಾ ಪ್ರೇಮಾ [ವರ] ಕಾಮೀ ನಾಮ ಶ್ಯಾಮನೆ 3
--------------
ಚನ್ನಪಟ್ಟಣದ ಅಹೋಬಲದಾಸರು
ಜಗವಿದು ಪುಸಿಯೈ ಬಗೆವೊಡೆ ಮನುಜಾ ತೋರುತಿಹ ಕನಸಿನಂತೆ ಇರುವೆ ಪ ನನಸಿನ ಅರಿವದು ದೊರಕುವ ತನಕ ಕನಸಿದು ಎನ್ನುವ ಕಲ್ಪನೆ ಇಹುದೆ ? ನನಸಿನ ನನಸಾಗಿಹ ಪರವಸ್ತುವೆ ತಾನೆ ನಿಜವು ಎಂಬರಿವಾಗುತಲಿರೆ 1 ನಿರುತದಿ ಸಮನಾಗಿರಲರಿಯದ ಈ ತೋರಿಕೆ ಅನಿಸಿಕೆಗಳು ನಿಜವಲ್ಲವು ಪರಿಕಿಸೆ ಸತತದಿ ಸಮನಾಗಿರುತಿಹ ಪರಮ ಪದವೆ ತಾನೆಂದರಿಯುತಲಿರೆ 2 ಅಳಿಯುವ ಜಗವಿದು ಬೆದರುವಿ ಏತಕೆ ತಿಳಿಯುತಲೀಪರಿ ನಿಜವಸ್ತುವನು ಗಳಿಸಿಕೊಂಡು ನೀ ನಿನ್ನಯ ಮುಕುತಿಯ ಕಲುಷರಹಿತಶಂಕರನಡಿಯರಿಯಲು 3
--------------
ಶಂಕರಭಟ್ಟ ಅಗ್ನಿಹೋತ್ರಿ
ಜ್ಞಾನಶೂನ್ಯಗಾತ್ಮದನುಭವವ್ಯಾಕೆ ಹೀನ ಸಂಸಾರಿಗೆ ಪರದ ಸುದ್ದ್ಯಾಕೆ ಪ ಕತ್ತೆಗೆ ಬೆಲೆಯುಳ್ಳ ಉತ್ತಮ ಜೀನ್ಯಾಕೆ ಕೃತ್ರಾಮಗೆ ಸತತ ಸತ್ಪಥದ ಬೋಧ್ಯಾಕೆ ತೊತ್ತಿಗ್ಹೋಗುವಗರಸೊತ್ತಿಗಧಿಕಾರವ್ಯಾಕೆ ಮಿಥ್ಯೆಮತಿಗ್ಯಾತಕ್ಕೆ ಉತ್ತಮರ ನೆರೆಯು 1 ನಂಬಿಗಿಲ್ಲದವಗ್ಯಾಕೆ ಗುಂಭದ ಮಾತುಗಳು ಜಂಬಕೊಚ್ಚುವವಗ್ಯಾಕೆ ಗಂಭೀರತನವು ಅಂಬುಜಾಕ್ಷನ ಚರಿತ ಡಂಭನಿಗ್ಯಾತಕ್ಕೆ ಗೊಂಬೆಯಾಟಗಾರಗ್ಯಾಕೆ ತಂಬೂರಿ ತಬಲ 2 ದಾನಧರ್ಮದ ಮಹಿಮೆ ಜೀನನಿಗೆ ಏತಕ್ಕೆ ಗೋಣು ಮುರಿವವಗ್ಯಾಕೆ ದೈನ್ಯಮಾತುಗಳು ನಾನಾ ಬಯಕೆಯುಳ್ಳ ಮಾನವಗೆ ಭಕ್ತಜನ ಪ್ರಾಣ ಶ್ರೀರಾಮ ನಿಮ್ಮ ಧ್ಯಾನವಿನ್ಯಾಕೆ 3
--------------
ರಾಮದಾಸರು
ದಯವು ಏತಕೆ ಬಾರದೌ ದೇವಿ ಭಯವಿಮೋಚನೆ ಭಕ್ತ ಸಂಜೀವಿ ಪ ಚರಣಕಮಲಕ್ಕೆ ಶಿರವ ಬಾಗಿದೆನೆ ಸೆರಗನೊಡ್ಡಿ ಪರಮಭಕ್ತಿಲಿ ಬೇಡಿಕೊಂಡೆನೆ ಕರುಣಭರಿತ ಮೊರೆಯ ಕೇಳ ದಿರು ವಿಜಯವಾಣಿ ಪರಮಕಲ್ಯಾಣಿ ಸರಿಯೆ ನಿನಗಿದು ಶರಣಜನರ ಕರುಣಾಕರಿ ಅಂಬ ಪರತರ ಬಿರುದು ಇದೆಯೇನೆ 1 ಮಾರಮರ್ದನರಸಿ ಗಂಭೀರೆ ಶಾರದಾಂಬೆಯೆ ಮೂರುಲೋಕಂಗಳಿಗೆ ಆ ಧಾರಿ ಪಾರಮಹಿಮೆಯೆ ತೋರು ಕರುಣವ ಬೇಗ ವರಗೌರಿ ಮರೆಯದಿರು ಶೌರಿ ಚಾರು ಚರಿತವ ಪಾಡಿ ಬೇಡುವೆ ಸಾರಮನದಿಷ್ಟ ಪೂರೈಸಿದ ರೌದ್ರಿ 2 ಸ್ವಾಮಿ ರಾಮನನಾಮಮಹಿಮರತಿ ನೀ ಮನವ ಸೋತಿ ಪ್ರೇಮದಿಂದಲಿ ತ್ರಿಜ ಗನ್ಮಾತೆ ವಿಮಲಚರಿತೆ ಪ್ರೇಮಮಂದಿರೆ ಭಕ್ತ ವರದಾತೆ ಅಮರಾದಿವಿನುತೆ ಹೈಮವತಿ ನಿನ್ನ ನಂಬಿ ಭಜಿಸುವೆ ಕ್ಷೇಮಪಾಲಿಸೆನ್ವ್ಯಾಧಿ ಕಳೆದು ನಾಮರೂಪರಹಿತೆ ವಿಮಲೆ ಅಮಿತಮಹಿಮಳೆ ಮಮತೆದೋರೆ 3
--------------
ರಾಮದಾಸರು
ಧ್ಯಾನವ ಕೊಡು ಹರಿಯೆ | ನಿರಂತರ ಧ್ಯಾನವ ಕೊಡು ಹರಿಯೆ ಪ ನೀನೆ ಗತಿಯೆಂದಾನುಪೂರ್ವಕ ಧ್ಯಾನ ಮಾಳ್ವರ ಜನ್ಮಕರ್ಮಗ ಳೇನು ನೋಡದೆ ಪೊರೆವೆ ನಿನ್ನ ಸುನಾಮವೆ ಸುರಧೇನುವೆಂದು ಅ.ಪ. ನಿನ್ನ ನಾಮವ ನೆನೆದು | ಅಜಾಮಿಳನು ಧನ್ಯನು ತಾನಾದನು ಈ ಭುವನದಿ ತನ್ನ ದೇಹಾತುರದೊಳನ್ಯರ ಬನ್ನ ಬಿಡಿಸುತಲಿದ್ದ ಖಳನು ನಿನ್ನ ನಾಮಸ್ಮರಣೆ ಮಾತ್ರದಿ ಘನ್ನ ಮುನಿಪತಿ ಎನ್ನಿಸಿದನು 1 ದುರುಳ ದುಶ್ಯಾಸನನು | ಸಭೆಯೊಳಗಂದು ತರಳೆ ದ್ರೌಪದಿದೇವಿಯ ಸೆರಗನ್ನು ಸೆಳೆಯೆ ಮುರಹರನೆ ಹಾ ಕೃಷ್ಣ ದ್ವಾರಕಾ- ಪುರನಿಲಯ ಪರಮಾತ್ಮ ಭಕ್ತರ ಸುರತರುವೆ ಎಲ್ಲಿರುವೆ ಏತಕೆ ಮರೆವೆ ಎನ್ನುತ ಮೊರೆಯೆ ಪೊರೆದೆಯೊ 2 ನರಕ ಕೂಪದೊಳು ಬಿದ್ದು | ಏಳುತ್ತ ಮುಳುಗುತ ಪರಿಪರಿ ಭಾಷೆಯಲಿ ಮುಂದೋರದೆ ಹೊರಳುತ್ಹೊರಳುತ ಮರುಕಗೊಳುತ ಹರಿಹರಿ ನಾರಾಯಣೆನ್ನಲು ಸುರಲೋಕವನ್ನಿತ್ತು ಸಲಹಿದೆ ವರದ ಲಕ್ಷ್ಮೀಕಾಂತ ಶಾಶ್ವತ 3
--------------
ಲಕ್ಷ್ಮೀನಾರಯಣರಾಯರು
ನಾನಾ ವೇಷಗಳಿನ್ನು ನಿನಗ್ಯಾಕೊ ಹರಿಯೆ ನಿನ್ನ ಭಕ್ತರು ನಿನ್ನ ತಿಳಿಯದೆ ಬಿಡರು ಪ ಮೀನಾಗಿ ಜಲದೊಳು ತಿರುಗುವದ್ಯಾಕೊ ಚಾರಣನೆಂದೆನಿಸಿ ಭಾರವ ಪೊತ್ತುದ್ಯಾಕೊ 1 ಹಂದ್ಯಾಗಿ ದಿತಿಜನ ಬಡಿದೆ ನೀನ್ಯಾತಕೋ ಕಂದನ ಪೊರೆಯೆ ಕಂಬದಿ ತೋರಿದ್ಯಾಕೊ 2 ವಟುವಾಗಿ ಭೂಮಿಯ ಬೇಡಿದೆ ಏತಕೊ ಹಟವು ರಾಯರ ಮೇಲೆ ನಿನಗ್ಯಾಕೆ ಬೇಕೋ 3 ಮಲತಾಯಿ ನುಡಿಗಾಗಿ ವನವಾಸ ನಿನಗ್ಯಾಕೊ ಬಲದಿ ತಂದೆಯ ಬಂಧ ಬಿಡಿಸಿದ್ದು ಸಾಕೊ 4 ರಾಜೇಶ ಹಯಮುಖ ಬತ್ತಲೆ ನಿಂತೆ ಏಕೊ ತೇಜಿಯನೇರ್ದು ತೋರುವ ಶೌರ್ಯ ಸಾಕೊ 5
--------------
ವಿಶ್ವೇಂದ್ರತೀರ್ಥ
ಬಡವನಿಗೆ ನಂಟರುಂಟೆ ಪೊಡವಿಯಲಿ ಬಲಿದನಿಗೆ ತಂಟೆಯುಂಟೆ ಪ ಬಡವನನು ಕಂಡರೆ ಮಡದಿಯರು ಜರಿವರು ಬಲಿದನನು ಕಂಡರೆ ಹಲ್ಲುಗಳ ಕಿರಿವರು ಅ.ಪ ಸಿರಿಯ ಪೊಂದಿದ ಮನುಜ ಜಗದಲಿ ಸರಿಯೆಂದು ಎನಿಸುವನು ಮರುಕವಿಲ್ಲದೆ ನರರು ಪರಿಪರಿ ಜರಿವರು 1 ಕಾಸು ಪೊಂದಿದ ನರನ ಪರಿ ಹಾಸವೆ ಬಲು ಸೊಗಸು ಕಾಸಿನ ಮದದಿಂದ ಲೇಸವೂ ಇಲ್ಲದೆ ಕ್ಲೇಶ ಪಡುವನ ಕಂಡು ಮೀಸೆಯ ತಿರುವುವರು2 ಕ್ರೂರನಾದರು ಧನಿಕ ಇವನನು ಸೇರಲು ಬಯಸುವರು ಭಾರಿ ನಡತೆ ಇದ್ದು ಸೇರದಿರಲು ಧನ ಯಾರು ಕಂಡರು ಇವನ ಮೋರೆ ತಿರುಗುವರು 3 ಧನವಿದ್ದರೆ ಜೋಕು ಜಗದೊಳು ಘನತೆ ಏತಕೆ ಬೇಕು ಕನಸಿನಲ್ಲಿಯು ಧನ ಕಾಣದ ಮನುಜನ ಘನತೆಯು ಜನಗಳ ಮನಕೆಂತು ತೋರುವುದು 4 ಮದನ ಜಗದಲಿ ಕಾಸಿಲ್ಲದವನು ದನ ಕೋಶ ಪೊಂದಿದವನು ಕೀಶನಾದರು ಪ್ರೇಮ ಪಾಶಕ್ಕೆ ಬೀಳಲು ಆಸೆಯಪಡುವರು 5 ಹಣವಿದ್ದ ಪುರುಷನನ್ನು ಧರಣಿಯೊಳ್ ಕೆಣಕಿ ಬದುಕಬಹುದೆ ಗುಣಶಾಲಿಯಾದರು ಋಣಗಾರ ನರನನು ಕುಣಿಸುತ್ತ ಕ್ಲೇಶಕೆ ಹೊಣೆಯ ಮಾಡುವರು 6 ಝಣಿಝಣಿಸುವ ಧನವ ಪೊಂದಿರೆ ತೃಣವಂತೆ ಜಗವೆಲ್ಲ ಪಣಿಯಲಿ ಬೊಮ್ಮನು ಹಣವ ಬರೆಯದಿರೆ ಅಣಿಯಾದ ಜ್ಞಾನಿಯು ಹೆಣದಂತಾಗುವನು 7 ಶುಂಠನಾದರು ಧನಿಕ ಇವನಿಗೆ ಉಂಟೆ ಜಗದಿ ಎದುರು ಗಂಟು ಇಲ್ಲದವನ ನೆಂಟರು ಜರಿವರು ಕುಂಟು ಎತ್ತಿನಂತೆ ಒಂಟಿಯಾಗುವನು 8 ಹೊನ್ನು ಜರಠ ನರಗೆ ಸುಲಭದಿ ಹೆಣ್ಣು ಒದಗಿಸುವುದು ಸೊನ್ನೆಯಾದರೆ ಧನ ಚಿನ್ನದಂತಿರುವಗೆ ಇನ್ನಾರು ಕಾಣೆ ಪ್ರಸನ್ನ ಹರಿಯೇ ಗತಿ9
--------------
ವಿದ್ಯಾಪ್ರಸನ್ನತೀರ್ಥರು
ಬಣ್ಣ ಬಣ್ಣದ ಬುಗುರಿಯಾಟವ ಅಡುತಿಯರುವೆಯಾ ರಂಗ ಗಿಣ್ಣು ಗಿಣ್ಣಲಿ ಕನಿತುನಿಂತಿಹ ಹಣ್ಣನಿದನು ಕಾಣೆಯಾ ಪ ಮಮತೆ ಇಲ್ಲವೆ ಹೇದೇವ ಮಾತಿಗೆ ಮರುಳುಹೋಗಿ ಅ.ಪ ನಿನ್ನ ಊರಲಿ ನೀನು ಕುಳಿತರೆ ಭಾಗ್ಯವೆನಗದು ಆಯಿತೆ ನನ್ನ ಇಳಿಯಿಸಿ ಅರಿವು ಕೊಟ್ಟು ನಡೆಯ ಕಲಿಸಿದೆ ಏತಕೆ ಇನ್ನು ಬರದೇ ಇರುವೆಯಾ ನನ್ನಲ್ಲಿ ಸಹನೆ ಇಲ್ಲವೆಂದು ಅರಿಯಲಾರೆಯಾ ದೇವನೇ 1 ನೆನಪು ಕೊಟ್ಟಿಹೆ ರಂಗ ಆಸೆ ಮತಿಯು ದಾರಿ ನೋಡಿದೆ ದೂರ ದಡವನು ದಾಟಿಸೈ ನಾನು ಅದರೊಳು ನಿಂತಿಹೆ ಮಾಧವ ಮತ್ತೆಯಾರನು ಕೇಳಲಿ 2
--------------
ಸಂಪತ್ತಯ್ಯಂಗಾರ್
ಬಾಗಿಲು ತೆಗೆಯಲೆ ಭಾಮತಿ ರನ್ನಳೆ ಈಗ ನಾ ಬಂದೆನು ಇಂದುಮುಖಿ ಪ ನಾಗವೇಣಿಯೆ ನಿನ್ನೀಗಲೆ ನೋಡಲು ಬೇಗನೆ ಬಂದೆನು ತೆಗಿ ಕದವಾ ಅ.ಪ ಯಾರದು ಈ ಸಮರಾತ್ರಿಯ ವೇಳದಿ ಬಾಗಿಲು ತೆಗೆ ಎಂದೆನುತಿಹರು ತೋರದು ಎನಗೊಂದಾಲೋಚನೆ ನಿಮ್ಮ ನಾಮವು ಪೇಳಲು ತೆಗೆಯುವೆನು 1 ನೀಲವೇಣಿಯೆ ಕೇಳೆನ್ನ ಮಾತನು ಬಹಳ ಚಿಂತೆಯಾತಕೆ ಮನದಿ ನೀಲಕಂಠನೆಂದೆನ್ನನು ಕರೆವರು ಕೇಳು ಮನಸು ಚಂಚಲ ಬಿಟ್ಟು 2 ನೀಲಕಂಠನೆಂದರೆ ನೆನಪಾಯಿತು ನವಿಲಿನ ಮರಿ ಬಂದಿಹುದೆಂದು ನಾರಿಯರೆಲ್ಲರು ಹಾಸ್ಯವ ಮಾಳ್ಪರು ಸಾರುತ ವನಗಳ ಚರಿಸೆಂದು 3 ಬೆದರದೆ ತೆರೆ ಕದ ಸುದತಿಮಣಿಯೆ ನಾ ಬದಲೊಂದು ನಾಮವ ಪೇಳುವೆನು ಬುಧ ಜನರೆಲ್ಲರು ಭಕುತಿಲಿ ಸ್ಥಾಣು- ವೆನ್ನುತ ನಾಮವ ಕೊಂಡಾಡುವರು4 ಬೂಟಾಟಿಕೆ ಮಾತುಗಳನ್ನ ಏತಕೆ ಸಾಟಿಯಾರು ಜಗದೊಳಗಿನ್ನು ಮೋಟುಮರಕೆ ಸ್ಥಾಣುವೆನ್ನುತ ಕರೆವರು ಈ ಪೃಥ್ವಿಯ ಮೇಲಿನ ಜನರು 5 ಬಿಸುಜಮುಖಿಯೆ ಇನ್ನೊಂದು ಪೆಸರು ಕೇಳೆ ಪಶುಪತಿಯೆಂದು ಕರೆವರೆನ್ನ ವಸುಧೆಯ ಮೇಲಿನ ಪೆಸರುಗಳಿಗೆ ನೀ ಪ್ರತಿಯಾಗರ್ಥವ ಕಲ್ಪಿಸುವಿ 6 ವೃಷಭರಾಜ ನೀನಾದರೆ ಮುಂದಕೆ ಪಶುಗಳ ಮಂದೆಗೆ ತೆರಳುವದು ಕುಸುಮಗಂಧಿಯರ ಸದನದಿ ಕಾರ್ಯವು ವೃಷಭರಾಜಗಿಲ್ಲವು ಕೇಳೌ 7 ಶೀಲವಾಣಿಯೆ ಸುಶೀಲೆಯೆ ಎನ್ನಯ ವಾಣಿ ಕೇಳಿ ಕದವನು ತೆಗಿಯೆ ಪೇಳುವೆ ಮತ್ತೊಂದು ನಾಮವ ಎನ್ನನು ಶೂಲಿ ಎಂದು ಕರೆವರು ಜನರು 8 ಶೂಲಿಯಾದರೆ ನಿನ್ನ ಬಾಧೆಯ ಕಳೆಯಲು ಯಾರಿಗೆ ಸಾಧ್ಯವು ಜಗದೊಳಗೆ ನಾರಿಯರಿಗೆ ಹೇಳದೆ ಮುಂದಕೆ ನಡೆ ಶೂರರಾದ ವೈದ್ಯರ ಬಳಿಗೆ 9 ಕರಿಯ ಮುಖನ ಮಾತೆಯೆ ತಡಮಾಡದೆ ಕನಕಮಯದ ಕದ ತೆರೆ ಬೇಗ ಕಮಲನಾಭ ವಿಠ್ಠಲನನು ಪಾಡುತ ಶಿವನ ನಮಿಸಿ ತೆಗೆದಳು ಕದವ 10
--------------
ನಿಡಗುರುಕಿ ಜೀವೂಬಾಯಿ
ಭಕ್ತಿ ಒಂದೇ ಸಾಕು ಸಜ್ಜನರಿಗೆ | ಕು ಯುಕ್ತಿಯಾತಕೆ ಹಲವು ಬಗೆ ಪ ಶಕ್ತರಾಗಿಹ ಅಧಿಕಾರಿಗಳಿಗೆ ಕು- ಯುಕ್ತಿ ಏತಕೆ ಹಲವು ಬಗೆ ಅ.ಪ ದೀನರು ನಾವೆಂದು ದಿನ ದಿನದೀ ನಾನು ಎಂಬುದು ಬಿಟ್ಟಿರುವವಗೆ 1 ಲೇಸಾದ ದಾರಿಯೊಳ್ ನಡಿಯುವರಿಗೆ2 ಹರುಷ ಶೋಕಗಳೊಂದೆ ಸಮನಾಗಿ ತಿಳಿದು ಪುರುಷ ಪ್ರಯತ್ನಗಳನು ಮೆರೆದು ಗುರುರಾಮವಿಠಲನ ಸ್ಮರಿಪರಿಗೆ 3
--------------
ಗುರುರಾಮವಿಠಲ