ಒಟ್ಟು 32 ಕಡೆಗಳಲ್ಲಿ , 19 ದಾಸರು , 32 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಾಮಿನಿ ಬಾರೆಲೆ ಕಾಮಿನಿಮಣಿಯೆ ನೀ ಕಾಮಜನಕನ ರಮಣಿ ರಾಜಿಪ ಪೀಠಕೆ ಪ. ಸರೋಜ ಮುಖಿಯೆ ನೀ ಸೋಜಿಗದಿಂದಲಿ ರಾಜಿಪಪೀಠಕೆ ರಾರಾಜಿಸುತ ಬಾ 1 ಕಂಗೊಳಿಸುವ ಬೆಳದಿಂಗಳ ಸೊಬಗಲಿ ರಂಗನಸಹಿತ ಶೃಂಗರದಿಂದಲಿ 2 ಮಂಗಳ ಮುಖಿಯೆ ನೀ ಚಂದದಿ ಬಾಬಾ ಮಾನಿನಿ ಮಣಿ 3
--------------
ಸರಸ್ವತಿ ಬಾಯಿ
ಮಂಗಲವಾ ಪಾಡುವೆನಾ ಮಂಗಲಾಂಗ ಗುರುದೇವಗೆ ಸಂಗರಹಿತ ಸಂಪೂರ್ಣಗೆ ಕಂಗೊಳಿಸುವ ಪರಮಾತ್ಮಗೆ ಪ ಬೋಧಿಸುತಲಿ ಪ್ರೇಮದಿಂದ ಸಾಧನೆ ಸಾಧ್ಯಗಳ ಮರ್ಮ ಛೇದಿಸುತಲಿ ಭವಜಾಲವ ಮೋದವೀವ ಘನ ಮಹಿಮಗೆ 1 ಬಲು ಶಾಸ್ತ್ರದ ತೊಡಕಿಲ್ಲದೆ ಸುಲಭದಿಂದ ಬೋಧಿಸುವಾ ತಿಳಿ ಆತ್ಮನೇ ನೀನೆನ್ನುತ ಘನ ಶಾಂತಿಯ ನೀಡಿದವಗೆ 2 ನಾರಾಯಣ ಗುರುದೇವನ ಪರಮ ಪ್ರೀತಿ ಪಾತ್ರನೀತ ಧರೆಯೊಳಗವತರಿಸಿದ ಶ್ರೀ ಗುರುಶಂಕರದೇವನಿಗೆ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಮುಕ್ಕೋಟ ದ್ವಾದಶಿಯ ದಿವಸ (ಮಾರ್ಗಶಿರ ಶುದ್ಧ ದ್ವಾದಶಿಯ ಉತ್ಸವ) ರಂಭೆ : ಮತಿವಂತೆ ಪೇಳೀತನ್ಯಾರೆ ದೇವ ವ್ರತತಿಯಧಿಪನಂತೆ ನೀರೆ ತೋರ್ಪ ಅತಿಶಯಾಗಮ ಬಗೆ ಬ್ಯಾರೆ ರತ್ನ ದ್ಯುತಿಯಾಭರಣವ ಶೃಂಗಾರ ಆಹಾ ಶ್ರುತಗೊಲಿಸೆನಗೆ ಆಶ್ರಿತ ರಕ್ಷಾರ್ಥಿತನ ಸಂ- ಗತಿ ಸ್ಮøತಿ ತತಿಗಳ ಮತಿಗಗೋಚರನಂತೆ 1 ಊರ್ವಶಿ : ಲಾಲಿಪುದೆಲೆಗೆ ಪೇಳುವೆನು ನೂತನವ ಲೋಲ ಲೋಚನನ ನಾಟಕ ಸತ್ಕಥನವ ಮೇಲಾಗಿ ಜಗದಿ ಶೋಭಿಪ ಶೇಷಾದ್ರಿಯಲಿ ಬಾಲಾರ್ಕಸದೃಶನೀತನು ಇರ್ಪನಲ್ಲಿ ನೀಲನಿಭಾಂಗನು ನೆನೆವರ ಪಾಪವ ಘೋಲುಘಡಿಸಲೆಂದೆನುತಲಿ ಭಾರ್ಗವ ಕೋಲಿಂದೆಸಗಿದ ಧರಣಿಗೆ ಬಂದು ಸ- ಲೀಲೆಗಳೆಸಗುವ ಜಾಲವಿದೆಲ್ಲ 2 ಸರಸಿಜಗಂಧಿ ಕೇಳ್ ದಿಟದಿ ತನ್ನ ಅರಮನೆಯಿಂದ ಸದ್ವಿಧದಿ ಈರ್ವ- ರರಸಿಯರ್ ಸಹಿತ ಮಿನಿಯದಿ ಅತಿ ಭರದಿಂದ ಸೂರ್ಯನುದಯದಿ ಆಹಾ ಉರುತರ ಹೇಮಪಲ್ಲಂಕಿಯೊಳಡರಿ ತ್ವರಿತದಿ ಪೋಗುವ ಭರವಿದೆಲ್ಲಿಗೆ ಪೇಳೆ3 ಊರ್ವಶಿ : ಮದ್ದಾನೆಗಾತ್ರೆ ಲಾಲಿಸಿ ಕೇಳು ಮಾತ ಬದ್ಧ ನೀ ಪೇಳ್ದ ಮನದ ಶಂಕಾವ್ರಾತ ತಿದ್ದಿಪೆ ಕೇಳು ಮಾರ್ಗಶಿರ ಮಾಸದೊಳು ಸೂರ್ಯ ಉದಯ ಕಾಲದೊಳು ಭದ್ರಭವನವನು ಪೊರಟು ವಿನೋದದಿ ಅದ್ರಿಧರನು ಸಜ್ಜನರೊಡಗೂಡಿ ಉ- ಪದ್ರಿತ ಪಾಪವ ಛಿದ್ರಿಪ ಸ್ನಾನಕೆ ರೌದ್ರಿತ ರಾಮಸಮುದ್ರದ ಬಳಿಗೆ 4 ರಂಭೆ : ಆರರೆ ಆಶ್ಚರ್ಯವಾಯ್ತೆನಗೆ ಅತಿ ಪರಮ ಮಹಿಮೆನೆಂದ ಮೇರೆಗೆ ಘನ- ತರ ಸ್ನಾನವೇನಿದು ಕಡೆಗೆ ವೃತ ದಿರವೋ ಉತ್ಸವವೋ ಪೇಳೆನಗೆ ಆಹಾ ತರುಣಿ ರನ್ನಳೆ ನಿನ್ನ ಚರಣಕ್ಕೆ ನಮಿಪೆ ಈ ಪರಿಗಳ ಸಾಂಗದಿಂದರುಹಬೇಕೆನಗಿನ್ನು 5 ಊರ್ವಶಿ : ಅಕುಟಿಲೆ ಬಾಲೆ ಯೌವನವಂತೆ ಕೇಳೆ ಸಕಲಾಂತರ್ಯಾತ್ಮನೀತನು ಸತ್ಯಶೀಲೆ- ಪ್ರಕಟ ವ್ರತವಿದಲ್ಲ ಅಂಜನಾದ್ರಿಯಲಿ ಭಕುತವತ್ಸಲನು ಉತ್ಸವಿಸುವನಲ್ಲಿ ವಿಕಳಹೃದಯ ನರನಿಕರಕಸಾಧ್ಯವೆಂ ದ್ಯುಕುತದಿ ಈ ಧರೆಯಲ್ಲಿ ಪ್ರತ್ಯೇಕದಿ ಅಖಿಳೋತ್ಸವ ಮಸ್ತಕಕಿದು ವೆಗ್ಗಳ ಮುಕುಟೋತ್ಸವವೆಂದೆನುತಲಿ ರಚಿಸುವ 6 ರಂಭೆ : ನಳಿನಾಕ್ಷಿ ಲಾಲಿಪುದಿನ್ನು ಸ್ನಾನ ವೊಲವಿಂದ ಗೈದ ಮೇಲಿವನು ತನ್ನ ರಮಣಿಯರ್ಸಹಿತಂದಣವನು ಏರಿ ನಿಲುನಿಲುತ್ಯಾಕೆ ಬರುವನು ಆಹಾ ಪೊಳಲೊಳಗಿಹ ಜನನಿಳಯದ ದ್ವಾರದಿ ಕಳಕಳವೇನಿದ ತಿಳುಪೆನಗೀ ಹದ7 ಊರ್ವಶಿ : ಕುಂದರದನೆ ಬಾಲೆ ಚದುರೆ ಸೈ ನೀನು ಮಿಂದು ತೋಷದಿ ಅಂದಣವನ್ನೇರಿ ತಾನು ಇಂದೀ ಪುರದೊಳಿರ್ಪ ಜನರ ದೋಷಗಳ ಕುಂದಿಸಲೆಂದವರವರ ದ್ವಾರದೊಳು ನಿಂದಿರುತಲ್ಲಿಯದಲ್ಲಿ ಆರತಿಗಳ ಚಂದದಿ ಕೊಳುತೊಲವಿಂದ ಕಾಣಿಕೆ ಜನ- ವೃಂದದಿ ಕೊಡುತಾನಂದ ಸೌಭಾಗ್ಯವ ಒಂದಕನಂತವ ಹೊಂದಿಸಿ ಕೊಡುವ 8 ರಂಭೆ : ಸರಸಿಜಾನನೆ ಮತ್ತೇನಿದನು ತನ್ನ ಅರಮನೆಯಲ್ಲಿ ಭೂದ್ವಿಜನರನು ಸರ್ವ ಪುರಜನ ಸಹಿತೊಳಗಿವನು ನಾನಾ ತರದಿ ಮೆರೆವ ಭೋಜನವನು ಆಹಾ- ಕರಿಸಿ ಆಮೇಲೆ ರಾತ್ರಿಯಲಿ ಸಾಲಿನಲಿ ವಿ- ಸ್ತರದ ಲಾಜದ ರಾಸಿಗಿರದೆ ಪೂಜಿಪುದ್ಯಾಕೆ 9 ಊರ್ವಶಿ : ಮಂಗಲಾನನೆ ಲೇಸು ನುಡಿದೆ ಕೇಳ್ ನೀನು ಗಂಗಾಜನಕ ತನ್ನ ಗೃಹದಿ ವಿಪ್ರರನು ಹಿಂಗದೆ ಕರೆಸಿ ವಿಪ್ರರನೆಲ್ಲ ಬರಿಸಿ ಸಂಗಾತದಲಿ ಆರೋಗಣೆ ಗೈದು ಮೆರೆಸಿ ಅಂಗಣದಲಿ ರಾತ್ರೆಯಲಿ ವಿನೋದದಿ ಕಂಗೊಳಿಸುವ ಉರಿದರಳ ಸಮೂಹಕೆ ರಂಗಪೂಜೆಯನುತ್ತಂಗವಿಸುವ ನಿಗ- ಮಂಗಳೊಡೆಯನು ವಿಹಂಗಮಾರೂಢ 10 ರಂಭೆ : ಅಮಮ ಮತ್ತೇನಿದ ಪೇಳು ಶ್ವೇತ- ಕುಮುದಾಪ್ತ ಠಾವಿನ ವೋಲು ಬಂದು ಆದರಿಸಲಿದರ ಮಧ್ಯದೊಳು ತನ್ನ ರಮಣಿಯರ್ ಸಹಿತ ತೋಷದೊಳು ಆಹಾ ವಿಮಲವನ್ನೇರಿನ್ನೆಲ್ಲಿಗೈದುವನೆಂಬಾ- ಗಮವ ಪೇಳೆನೆಗೆ ನೀ ನಮಿಪೆ ನಿನ್ನಂಘ್ರಿಯ 11 ಊರ್ವಶಿ : ಥೋರ ಕನಕುಂಭಕುಚಭಾರೆ ಕೇಳೆ ಶ್ರೀ ರಮಾರಮಣ ಪೂಜೆಯಗೊಂಡಾ ಮೇಲೆ ಚಾರು ಈ ಹೂವಿನ ತೇರನೇರುತಲಿ ಕೇರಿ ಕೇರಿಯೊಳಾರತಿಗೊಳ್ಳುತಲಿ ಭೋರಿಡುತಿಹ ವಾದ್ಯಧ್ವನಿ ಘನತರ ಭೇರಿ ಮೃದಂಗಾದ್ಯಖಿಳ ವಿನೋದದಿ ಸ್ವಾರಿಗೆ ತೆರಳುವ ಕ್ರೂರ ನರರ ಆ- ಘೋರ ಪಾಪ ಜರ್ಝರಿಸಲೆಂದು 12 ರಂಭೆ : ಅರವಿಂದಾಕ್ಷಿಯೆ ಮತ್ತೇನಿದನು ತನ್ನ ಅರಮನೆಯಿದಿರು ರಥವನು ತಾನು ಭರದೊಳಗಿಳಿದಂದಣವನು ಏರಿ ಮೆರೆವಾಲಯದ ಸುತ್ತುಗಳನು ಆಹಾ ತಿರುಗುವನ್ಯಾಕೆ ಭೂದ್ವಿಜರ ಘೋಷದಿ ವಾದ್ಯ- ಭರಿತ ಗಾಯನ ಭೇರಿ ಧ್ವನಿಗಳೇನಿದ ಪೇಳೆ13 ಊರ್ವಶಿ : ಕೃಷ್ಣಾಂಕ ವದನೆ ಕೇಳೆಲೆ ಪೇಳ್ವೆ ನಿನಗೇ ದುಷ್ಟಮರ್ದನ ರಥವಿಳಿವುತ್ತಲಾಗೇ ಅಷ್ಟದಿಗ್ಭಾಗದಿ ಗೃಹಸುತ್ತಿನೊಳಗೆ ಅಷ್ಟಾವಧಾನವ ರಚಿಸುತ್ತ ಕಡೆಗೆ ಶ್ರೇಷ್ಠನು ರತ್ನಾಸನದಿ ಗ್ರಹದಿ ಪರ ಮೇಷ್ಟಜನಕೆ ಸಂತೋಷಾನಂದದಿ ಸೃಷ್ಟಿಯ ಜನರ ಅನಿಷ್ಟವ ತ್ಯಜಿಸುತ ಇಷ್ಟವನೀವ ಯಥೇಷ್ಟ ದಯಾಬ್ಧ 14 ರಂಭೆ : ಅರಿತೆನಾ ಸ್ವಚ್ಛ ಚಿತ್ತದಲಿ ಇನ್ನು ಹರಿ ಏಕರೂಪನೆನ್ನುತಲಿ ಲಕ್ಷ್ಮೀ ಕರವೆನಿಸುವ ಕಾರ್ಕಳದಲಿ ಭಾಗ್ಯೋ- ದಯ ದೇವಾಲಯದ ಮಧ್ಯದಲಿ ಆಹಾ ತ್ವರಿತದಿ ನುತಿಸಿರೊ ಗುರು ನಾರಸಿಂಹ ಶ್ರೀ- ಕರ ವೆಂಕಟೇಶನ ಚರಣಕಮಲಗಳ 15
--------------
ತುಪಾಕಿ ವೆಂಕಟರಮಣಾಚಾರ್ಯ
ಮುಚ್ಚದಿರೆಲೊ ಮುರಾರಿ ಕಣ್ಣ ಪ ಮಂಗಳಕರ ಮಕರಂದ ಸೂಸುತಲಿರೆ ಕಂಗೊಳಿಸುವರೂ ಕಯ್ಯೂರಿ ಕೃಷ್ಣ 1 ಮುತ್ತಿನ ಹಾರಾ ಪದಕ ಮುದ್ರಿಕೆಯು ಒತ್ತುತಲಿಹವೊ ಬೆರಳೂರಿ 2 ಸುಲಭರರಸ ಕೇಳು ಶ್ರೀದವಿಠಲನ ಶೌರಿ 3
--------------
ಶ್ರೀದವಿಠಲರು
ಮುರಳಿಯ ನಾದವ ಕೇಳಿ ಬನ್ನಿರಿ ಪ ಮುರಳಿಯ ನಾದವ ಕೇಳಿ ಅ.ಪ ಮದುರಾನಾಥನು ಮುರಳಿಯನೂದಲು ಸುರಿವುದಾನಂದಜಲ ನಯನದಲಿ 1 ಕಂಗೊಳಿಸುವ ಬೆಳದಿಂಗಳ ಸೊಬಗಿನಲಿ ತಂಗಾಳಿಯ ಸುಖದಿ ಶ್ರೀರಂಗನ 2 ಶ್ಯಾಮಲಾಂಗನು ತನ್ನ ಕೋಮಲ ಕರದಲಿ ಪ್ರೇಮವು ತುಂಬುವುದು 3 ಪಂಚಬಾಣನ ಪಿತ ಮುರಳಿಯ ಮಧುರಸ ಹಂಚಲೆಮಗೆ ರೋಮಾಂಚವಾಗುವುದು 4 ರಜನೀಕಾಂತನ ಕುಲದಲಿ ಜನಿಸಿ ವ್ರಜಜನಗಳಿಗಧಿಕ ಪ್ರಸನ್ನನ 5
--------------
ವಿದ್ಯಾಪ್ರಸನ್ನತೀರ್ಥರು
ಯತಿರಾಜ ಯತಿರಾಜ ಕ್ಷಿತಿದೇವ ತತಿನುತ ರಾಘವೇಂದ್ರ ಆದಿಯುಗದಿ ಪ್ರಹ್ಲಾದ ಸುನಾಮದಿ ಮೋಹದಿ ಭಜಿಸುತ ಮಾಧವನೊಲಿಸಿದ 1 ಘನ ವಿರಾಗ್ರಣಿ ಜನಪತಿ ಬಾಹ್ಲೀಕ ನೆನಿಸಿ ದ್ವಾಪರದಿ ಜನಿಸಿದ ಗುಣನಿಧಿ 2 ವಾಸವನಾಯಕ ದಾಸಾರ್ಯರಿಗುಪ ದೇಶಗೈದ ಗುರುವ್ಯಾಸ ಪೋಷಿಸೈ 3 ಕ್ಷೋಣಿಯೊಳಗೆ ಕುಂಭಕೋಣ ಸುಕ್ಷೇತ್ರದಿ ವೀಣೆ ವೆಂಕಟಾಭಿಧಾನದಿ ಜನಿಸಿದ 4 ದೀನ ಜನಾಮರಧೇನು ಸುಧೀಂದ್ರರ ಪಾಣಿಪದ್ಮಭವ ಮಾಣದೆ ಕಾಯೋ 5 ತುಂಗಭದ್ರ ಸುತರಂಗಿಣಿ ತೀರದಿ ಕಂಗೊಳಿಸುವ ಶತಪಿಂಗಳ ತೇಜ6 ಜಲಧಿ ಶಶಾಂಕ 7 ಬಾಲನ ಬಿನ್ನಪ ಲಾಲಿಸಿ ಪ್ರೇಮದಿ ಪಾಲಿಪುದೈ ಮಂತ್ರಾಲಯ ನಿಲಯ8 ಪರಿಮಳ ಗ್ರಂಥವ ವಿರಚಿಸಿ ದುರ್ಮತ ಮುರಿದು ಸಜ್ಜನರಿಗೊರೆದ ಮಹಾತ್ಮ 9 ಪರಿಪರಿಭವದೊಳು ಪರಿತಪಿಸುವೆನೈ ಪರಮ ಕರುಣದಲಿ ಪರಿಕಿಸಿ ಪೊರೆಯೊ 10 ಕಾಮಿತದಾಯಕ ಭೂಮಿಜೆನಾಯಕ ಶಾಮಸುಂದರನ ಪ್ರೇಮದ ಸೇವಕ 11
--------------
ಶಾಮಸುಂದರ ವಿಠಲ
ಯಮುನೇ ದುರಿತೋಪಶಮನೇ ಪ ಶರಣೆಂಬೆ ತವ ಪಾದಾಂಬುರುಹ ಯುಗಳಿಗೆ ದಿವಾ ಕರತನಯೆ ಸಪ್ತಸಾಗರ ಭೇದಿನೀ ಹರಿತೋಷ ಲಾಭ ಸುಂದರಿ ಸುಭಗೆ ನಿನ್ನ ಸಂ ದರುಶನಕೆ ಬಂದೆ ಭಕ್ತರ ಪಾಲಿಪುದು ಜನನಿ 1 ಮಕರಾದಿ ಮಾಸದಲಿ ವಿಖನಸಾವರ್ತ ದೇ ಶಕೆ ಬಂದು ವಿಜ್ಞಾನ ಭಕುತಿಯಿಂದಾ ತ್ರಿಕರಣದ ಶುದ್ಧಿಯಲಿ ಸಕೃತ ಸ್ನಾನದ ಗೈಯೆ ಸಕಲ ಸುಖವಿತ್ತು ದೇವಕೀಸುತನ ತೋರಿಸುವೆ 2 ಕನಕಗರ್ಭಾವರ್ತವೆನಿಪ ದೇಶದಲಿ ಸ ಜ್ಜನರ ಪಾಲಿಪೆನೆಂಬ ಅನುರಾಗದಿ ಪ್ರಣವಪಾದ್ಯಗೆ ವಿಮಲ ಮುನಿಯಂತೆ ನಿರುತ ಕುಂ ಭಿಣಿಯೊಳಗೆ ಸರಸ್ವತಿ ದ್ಯುನದಿಯಂದದಿ ಮೆರೆದೆ 3 ಜಮದಗ್ನಿ ಮುಖ್ಯ ಸಂಯಮಿಗಳನುದಿನದಿ ಆ ತಮ ತಮ್ಮೊಳಗೆ ರಮಾರಮಣ ದಾಮೋದರನ ಸುಮಹಿಮೆಗಳನು ಪೊಗಳುತಮಿತ ಮೋದದಲಿಹರು 4 ಪಿಂಗಳಾಧಿಷ್ಠಿತೆ ಶುಭಾಂಗಿ ಸುಮನವನಿತ್ತು ಕಂಗೊಳಿಸು ಎನ್ನಂತರಂಗದಲ್ಲಿ ತುಂಗ ಸುಮಹಿಮ ಜಗನ್ನಾಥ ವಿಠಲನ ಸುಗು ಣಂಗಳ ತುತಿಪುದಕೆ ಮಂಗಳ ಮತಿಯನೀಯೇ 5
--------------
ಜಗನ್ನಾಥದಾಸರು
ರಂಗನಾಥ ಮಾಂ ಗಂಗಾಜನಕ ತುಂಗ ಮಹಿಮ ಮಂಗಳಾಂಗ ಪಾಹಿ ಪ ತಿಂಗಳ ತೇಜದಲಿ ಪೊಳೆಯುತ ಕಂಗೊಳಿಸುವ ಮುಕುಟ ಮಂಡಿತ ಬಂಗಾರದಾಭರಣ ಭೂಷಿತ ಶೃಂಗಾರದಿ ರಥವನೇರುತ ಮಂಗಳ ವಾದ್ಯಂಗಳುಲಿಯೆ ರಂಗನಾಥ ಪ್ರತಿವರ್ಷದಿ ತುಂಗಛತ್ರ ಚಾಮರ ವ್ಯಜ- ನಂಗಳ ವಿಭವದಿ ಬರುತಿರೆ ಕಂಗಳಿಂದ ನೋಳ್ಪ ಭಕ್ತ ಜಂಗುಳಿ ಪಾಲಿಸಲೋಸುಗ ಮಂಗಳಸಿರಿ ಜಾಲಹಳ್ಳಿ ಪುರನಿಲಯ ಪೊರೆ ಎನ್ನ1 ಹಿಂದಕೆ ಮುದಗಲ್ಲು ಪುರದಿ ಬಂದಿಹ ಉಪ್ಪಾರ ಜನದಿ ಬಂದು ಗೋಣಿಯೊಳಗೆ ಮುದದಿ ನಿಂದಿಯೊ ಪದಮೆಟ್ಟೆ ಬೆಟ್ಟದಿ ಅಂದಿನ ರಾತಿಯ ಸ್ವಪ್ನದಿ ಸಂದರ್ಶನವಿತ್ತು ಪುರದಿ ಮಂದಿರಕಾರ್ಯವ ಸೂಚಿಸ- ಲಂದು ರಾಯಗೌಡನಿಂದ ಬಂಧುರದಲಿ ನಿರ್ಮಿತ ಆ- ನಂದನಿಲಯ ಮಂದಿರ ಮು ಕುಂದನಂದ ಕಂದನೆ ಮದ್ ಹೃದಯದಲಿ ಸದಾತೋರೋ2 ವಾರಿಚರ ಮಂದರಧರ ಭೂ ಚೋರಮಥನ ಘೋರರೂಪನೆ ಚಾರು ಬ್ರಹ್ಮಚಾರಿ ವಾಮನ ಶೂರ ಪರಶುರಾಮನೆ ನಮೊ ಧಾರುಣಿ ಜಾವಲ್ಲಭ ಕಂ- ಸಾರಿ ವಸನದೂರನೆ ಹಯ ವೇರಿ ದುಷ್ಟ ದಿತಿಜರ ಭಯ ದೂರ ಮಾಡಿ ಕಾವದೇವ ಧಾರುಣಿಸುರ ಪರಿಪಾಲಕ ವಾರಿಜಭವ ನುತ ಕಾರ್ಪರಾ- ಗಾರವೀರ ನಾರಸಿಂಹ ನಮಿಸುವೆನು ರಮಾರಮಣ3
--------------
ಕಾರ್ಪರ ನರಹರಿದಾಸರು
ವೃಂದಾವನದಿ ನಿಂದಾಡುತಿಹ ಸುಂದರ ಮೂರುತಿ ಇವನಾರೆ ಪ. ಇವ ನೋಡೆ ಅ.ಪ. ಕಡಗಕಂಕಣ ಬೆಡಗಿಲಿ ಹೊಳೆಯುತ ಸಡಗರದಿಂದಿಹ ಇವನ್ಯಾರೆ, ಸಖಿ ಮೃಡಸಖ ಎಮ್ಮಯ ಒಡೆಯನೆಂದಿಸುವ ಜಡಜಮುಖಿ ಇವನೋಡೆ 1 ಹರವಿದ ಕೇಶದಿ ಶಿರದÀ ಕಿರೀಟವು ವರಗೋವುಗಳ ಕಾಯ್ವ ಇವನ್ಯಾರೆ, ಸಖಿ ವರ ಕಾಳಿಂಗನ ಭಂಗವ ಮಾಡಿದ ಶರಧಿ ಗಂಭೀರ ಇವನೋಡೆ 2 ಪೊಂಗೊಳಲೂದುತ ಕಂಗೊಳಿಸುತಿಹ ಮಂಗಳಮೂರುತಿ ಇವನಾರೆ, ಸಖಿ ಪರಿ ಭಕುತರ ಸಲಹುವ ರಂಗ ಶ್ರೀ ಶ್ರೀನಿವಾಸ ಇವ ನೋಡೆ 3
--------------
ಸರಸ್ವತಿ ಬಾಯಿ
ಶ್ರೀ ರಾಘವೇಂದ್ರರು ರಾಘವೇಂದ್ರ ಗುರುರಾಯರ ಸೇವಿಸಿರೊ ಸೌಖ್ಯದಿ ಜೀವಿಸಿರೊ ಪ ವಾಸೋತ್ತುಂಗಾ ತೀರದಲ್ಲೆ ನಿಂತು ವಸುಧೆಯೊಳು ಬಂದು ಅ.ಪ. ಕರ ಸರೋಜ ಸಂಜಾತ ವಸುಧೆಯೊಳು ಪುನೀತಾ ದಾಶರಥಿಯ ದಾಸತ್ವವ ತಾನೂಹಿಸಿ ದುರ್ಮತಿಗಳ ಜಯಿಸಿ ತ್ಯಜಿಸಿ ಈ ಸಮೀರಮತ ಸಂಸ್ಥಾಪಕರಾಗಿ ನಿಂದಕರನು ನೀಗಿ ಭೂಸುರರಿಗೆ ಸಂಸೇವಸಹಾಚರಣೀ ಕಂಗೊಳಿಸುವ ಕರುಣಿ 1 ಕುಂದದೆ ವರ ಮಂತ್ರಾಲಯದಲ್ಲಿರುವಾ ಕರೆದಲ್ಲಿಗೆ ಬರುವಾ ಸಂದರುಶನದಿಂದಲಿ ಮಹತ್ಪಾಪ ಪರಿದೋಡಿಸಲಾಪಾ ವೃಂದಾವನ ಮೃತ್ತಿಕೆ ಜಲಪಾನ ಮುಕ್ತಿಗೆ ಸೋಪಾನ ಮಂದ ಭಾಗ್ಯರಿಗೆ ದೊರೆಯದಿವರ ಸೇವಾ ಶರಣರ ಸಂಜೀವಾ 2 ಶ್ರೀದವಿಠ್ಠಲನ ಸನ್ನಿಧಾನ ಪಾತ್ರಾ ಸಂಸ್ತುತಿಸಿದ ಮಾತ್ರಾ ಮೋದಬಡಿಸುವ ತಾನಿಹಪರದಲ್ಲಿ ಈತಗೆ ಸಮರೆಲ್ಲಿ ಮೇದಿನಿಯೊಳಗಿನ್ನರಸಲು ಕಾಣೆ ಪುಸಿಯಿಲ್ಲೆನ್ನಾಣೆ ಪಾದಸ್ಮರಣೆ ಮಾಡದವನೆ ಪಾಪಿ ನಾ ಪೇಳ್ವೆನು 3
--------------
ಶ್ರೀದವಿಠಲರು
ಸಡಿಲ ಬಿಡದೆ ಕೈಯ ಪಿಡಿದು ಉದ್ಧರಿಸಯ್ಯ ಬಡವನು ನಾನೈಯ್ಯ - ಕೊಡು ನಿನ್ನ ಸೇವೆಯ ಪ ಒಡಲಿಗೋಸುಗ ಪರರಡಿಗಳ ಪಿಡಿಯುತೆ ಭವ ಕಡಲಿನೊಳಗೆ ಅ.ಪ. ಪಡೆದು ವರಗಳನು ಕಡು ಖೂಳ ರಾವಣ ನಡುಗಿಸಿ ಸುರನರ ಭುಜಗರೊಡೆಯರನ್ನು ಹಿಡಿದು ಮುನೀಶರ ಹೊಡೆದು ಬಡಿದು ಹಿಂಸೆ - ಪಡಿಸುತ್ತ ಯುವತೇರ ದುಡುಕು ಮಾಡುತ್ತಲಿರೆ ಗಡಣೆಗಾರದೆ ಪಾಲ ಕಡಲ ತಡಿಗೆ ಬಂದು ದೃಢ ಭಕ್ತಿಯಲಿ ನಿಂದು ಜಡಜ ಭವಾದ್ಯರು ಪೊಡಮಟ್ಟು ಬೇಡಲು ಕೊಡುತೆ ಅಭಯವನು ಮಡದಿಯನೊಡಗೂಡಿ ಪೊಡವಿಗಿಳಿದು ಬಂದೆ 1 ಸತಿ ಕೌಸಲ್ಯದೇವಿಯ ಬಸುರೊಳು ಸಂಜನಿಸಿ ದಶದಿಶದೊಳು ಯಶ ಪಸರಿಸಿ ಅಸುರೆಯ ಅಸುವನು ಹಾರಿಸಿ ಕುಶಿಕ ಸುತನ ಯಜ್ಞ ಹಸನಾಗಿ ಪಾಲಿಸಿ ನಸುನಗುತಲಿ ಪದಸರಸಿಜ ಸೋಕಿಸಿ ಅಶಮವಾಗಿದ್ದ ಮುನಿಸತಿಯನುದ್ಧರಿಸಿ ಪಶುಪತಿ ಧನುಭಂಗವೆಸಗಿ ಸೀತೆಯ ಕರ ಬಿಸಜವ ನೊಶಗೈದ ಅಸಮ ಸಮರ್ಥ 2 ಚಂದದಿಂ ಶಾಙ್ರ್ಞವನೊಂದಿ ಅಯೋಧ್ಯೆಗೆ ಬಂದು ಪತ್ನಿಯಗೂಡಿ ನಂದದಿಂದಿರುತಿರ್ದು ಬಂದ ಕಾರ್ಯಕೆ ನೆವ ತಂದು ವನಕೆ ಬಂದು ನಿಂದಿರೆ ಜಾನಕಿ ಲಕ್ಷ್ಮಣರೊಡಗೊಂಡು ನೊಂದು ನೃಪನು ದಿನವನ್ನು ಹೊಂದಲು ಕರೆ- ತಂದು ಭರತನಿಗೆ ಅಂದು ರಾಜ್ಯವನೀಯೆ ಬಂದೊಲ್ಲದೆ ಬೇಗ ಬಂದು ವಂದಿಸೆ ಪದ ದ್ವಂದ್ವದ ಪಾದುಕವಂದದಿಂದೊಲಿದಿತ್ತೆ 3 ಚಿತ್ರಕೂಟಾದ್ರಿಯಿಂದತ್ತ ನಡೆದು ನೆಲ ಕೊತ್ತಿ ವಿರಾಧನ್ನ ವತ್ಸ ಲಕ್ಷ್ಮಣ ಸೀತಾ ಯುಕ್ತನು ನೀನಾಗಿ ಪೊರೆಯಲು ಇತ್ತು ಅಭಯವನ್ನು ಉತ್ತಮ ದಂಡಕದಿ ಸ್ತುತ್ಯ ಕುಂಭಜ ಮುನಿಯಿತ್ತ ಧನುವನಾಂತು ಕುತ್ಸಿತ ದನುಜೆಯ ಶಿಕ್ಷಿಸಿ ಖರ ಬಲ ಕತ್ತರಿಸುತೆ ಬೆನ್ಹತ್ತಿ ಮಾರೀಚನ್ನ ತುತ್ತು ಮೂರಾಗಿಸಿದತ್ಯಂತ ಶಕ್ತ 4 ಮೈಥಿಲಿಯಾಡಿದ ಮಾತಿಗೆ ಸೌಮಿತ್ರಿ ಪಾತಕಿ ದಶಮುಖ ಸಾತ್ವೀಕ ವೇಷದಿ ಸೀತೆಯ ನೊಯ್ದೆನೆಂದು ಆರ್ತ ಸ್ವರದಿ ಪೇಳಿ ಮೃತಿಯೊಂದೆ ಖಗಪತಿ ಆತಗೆ ಸದ್ಗತಿಯಿತ್ತು ನಡೆದು ಖಳ ಪೋತಕ ಬಂಧನ ತೋಳ್ಗಳ ಖಂಡಿಸಿ ಪ್ರೀತಿಲಿ ಶಬರಿಗೆ ಮುಕ್ತಿಯ ಪಾಲಿಸಿ ವಾತಸುತನ ಮನ ಪ್ರಾರ್ಥನೆ ಸಲಿಸಿದೆ 5 ಚರಣದಿಂದೊಗೆದು ದುಂದುಭಿಯ ಶರೀರವನ್ನು ತರುಗಳೇಳನು ಒಂದೇ ಸರಳಿನಿಂದುರುಳಿಸಿ ತರಣಿಸುತನ ಭಯ ಹರಿಸಿ ವಾಲಿಯ ಗರ್ವ ಮುರಿಸಿ ವಾನರ ರಾಜ್ಯ ದೊರೆತನ ಸಖಗಿತ್ತೆ ತರುಚರ ತತಿಗಳ ಕೆರಳಿಸಿ ಹರುಷದಿ ಪರನು ಭಕುತನನ್ನು ಕರೆದು ಕುರುಹುಗಳ ನೊರೆದು ಮುದ್ರಿಕೆಯಿತ್ತೆ ಕರುಣವಾರಿಧಿಯೆ 6 ತಿಂಗಳು ಮೀರಿತೆಂದು ಅಂಗದ ಪ್ರಮುಖರು ಕಂಗೆಟ್ಟು ಕುಳಿತಿರೆ ಭಂಗನ ಕಳೆದು ತ - ರಂಗಿಣಿ ಪತಿಯನ್ನು ಲಂಘಿಸಿ ಹನುಮನು ಕಂಗೊಳಿಸುವ ಲಂಕಾ ಪ್ರಾಂಗಣದಲಿ ನಿಂದು ಭಂಗಿಸಿ ಲಂಕಿಣಿಯನು ಸೀತಾಂಗನೆ - ಗುಂಗುರವಿತ್ತುತ್ತಮಾಂಗದ ಮಣಿಯಾಂತು ಕಂಗೆಡಿಸ್ಯಸುರರ ಜಂಗುಳಿಯನು ಭಕ್ತ ಪುಂಗವ ಬರೆ ನಿನ್ನಂಗ ಸಂಗವನಿತ್ತೆ 7 ಹರಿವರರನು ಕೂಡಿ ಶರಧಿಗೆ ಪಯಣಮಾಡಿ ಶರಣ ವಿಭೀಷಣನಿಗೆ ಸ್ಥಿರ ಪಟ್ಟವನು ನೀಡಿ ಭರದಿ ಸೇತುವೆಗಟ್ಟಿ ಅರಿಯ ಪಟ್ಟಣ ಮುಟ್ಟಿ ಧುರಕೆ ದೂತನ್ನ ಅಟ್ಟಿ ಪರಬಲವನು ಕುಟ್ಟಿ ಪುರಕೆ ಉರಿಯನಿಕ್ಕಿ ಶರವರ್ಷಂಗಳ ಕರಿ ರಥಾ ತುರಗ ಪದಾತಿಗ- ಳುರುಳಿಸಿ ದಶಶಿರನುರವನು ಇರಿದು ಪರಮ ಸಾಧ್ವಿಯ ಕರಸರಸಿಜ ಪಿಡಿದೆ 8 ಭಕ್ತ ವಿಭೀಷಣಗೆ ದೈತ್ಯಾಧಿಪತ್ಯವಿತ್ತು ಕೃತ್ತಿವಾಸನ್ನ ಸೇತು ಹತ್ತಿರ ಸ್ಥಾಪಿಸಿ ಪತ್ನಿ ಸಹೋದರ ಮಿತ್ರ ಭೃತ್ಯರ ಕೂಡಿ ಉತ್ತಮ ಪುಷ್ಪಕದಿ ಚಿತ್ರಕೂಟಕೆ ಬಂದೆ ಭಕ್ತನ ಕಳುಹಿ ಸದ್ವøತ್ತವ ಭರತಗೆ ಬಿತ್ತರಿಸಿ ಮಹದುತ್ಸವದಿ ಪುರ ಮತ್ತೆ ಪ್ರವೇಶಿಸಿ ರತ್ನ ಸಿಂಹಾಸನ ಹತ್ತಿ ಶ್ರೀಕಾಂತನೆ ನಿತ್ಯದಿ ಸಲಹುವೆ 9
--------------
ಲಕ್ಷ್ಮೀನಾರಯಣರಾಯರು
ಸುರಪನಾಲಯದಂತೆ ಮಂತ್ರಾಲಯ ಕರೆಸುವುದು ಕಂಗೊಳಿಸುವುದು ನೋಳ್ಪ ಜನಕೆ ಪ ಕಾಮಧೇನುವಿನಂತೆ ಇಪ್ಪ ಗುರುವರ ಸಾರ್ವ ಭೌಮ ಸುಧೀಯೀಂದ್ರಸುತ ರಾಘವೇಂದ್ರ ಆಮಯಾಧಿಪ ಖಳತಮಿಶ್ರ ಓಡಿಸುವ ಚಿಂ ತಾಮಣಿ ಪ್ರಕಾಶದಂತಿಪ್ಪ ವೃಂದಾವನದಿ 1 ಸುರತರುವಿನಂತಿಪ್ಪ ಕೀರ್ತಿ ಸಚ್ಚಾಯಾಶ್ರಿ ತರ ಮನೋರಥಗಳನು ಪೂರೈಸುವಾ ಧರಣಿಸುರಾಖ್ಯ ಷಟ್ಟದಗಳಿಗೆ ಸತ್ಯದಾ ಪರಿಮಳದಿ ತೃಪ್ತಿಬಡಿಸುವ ಮರುತನಂತೆ 2 ವಾರಾಹಿ ಎಂಬ ನಂದನ ವನದಿ ಜನರತಿ ವಿ ಹಾರ ಮಾಳ್ಪರು ಸ್ನಾನಪಾನದಿಂದಾ ಶ್ರೀ ರಾಘವೇಂದ್ರನಿಲ್ಲಿಪ್ಪ ಕಾರಣ ಪರಮ ಕಾರುಣ್ಯ ನಿಧಿ ಜಗನ್ನಾಥ ವಿಠಲನಿಹನು 3
--------------
ಜಗನ್ನಾಥದಾಸರು
126 - 3ಚತುರ್ಥ ಕೀರ್ತನೆಸತ್ಯ ಬೋಧಾರ್ಯರ ವೃತತಿಜಾಂಘ್ರಿಗಳಲ್ಲಿಸತತ ಶರಣಾದೆ ನಾಹಿತದಿ ಪಾಲಿಪರುಪ್ರತತ ಭೂಮಾದಿ ಗುಣಸಿಂಧು ಪುರುಷೋತ್ತಮನವಿತತ ಮನದಲಿ ಧ್ಯಾನಿಸಿ ಒಲಿಸಿಕೊಂಡ ಪಸತ್ಯಬೋಧಾರ್ಯರು ಭಾಗೀರಥಿ ಕುರಿತುಯಾತ್ರೆ ಮಾಡಲು ಮನದಿ ಯೋಚಿಸುತಲಿದ್ದಾಗಇದ್ದ ಕಡೆಯಲ್ಲೆ ಗಂಗಾ ಬಂದು ಒದಗುವಳುಎಂದು ಸ್ವಪ್ನವು ಆಯಿತು ಅಂದು ರಾತ್ರಿಯಲಿ 1ಶ್ರೀ ಮಠಕ್ಕೆ ಅರ್ಧಗಾವುದ ದೂರ ಇರುವಂಥಭೂಮಿಯಲಿ ಕೃಷಿಕೂಪ ಬಹು ದೊಡ್ಡದಲ್ಲಿಸಮೀಪಸ್ತ ಔದುಂಬರತರುಮೂಲದಿಂಅಮರ ತಟನೀ ಬರುವ ವೇಳೆಯು ತಿಳಿಯಿತು 2ಶ್ರೀಗುರು ನವಾಬನಿಗೂ ಖಂಡೇರಾಯನಿಗುನಗರಜನರಿಗು ತಿಳಿಸಿ ಆ ಸ್ಥಳಕ್ಕೆ ಪೋಗೆಗಂಗಾವತರಣವು ಆಯಿತು ಸೂಚಿತವೇಳೆಕಂಗೊಳಿಸುವ ಬಾಗೀರಥೀ ಧಾರಾಸುರಿದು 3ತ್ರಿವಿಕ್ರಮ ಸುಪಾದಜಾ ತ್ರಿಜಗತ್ ಪಾವನಿಗಂಗಾತ್ರಿದಶೇಶ್ವರಿ ನಳಿನಿ ಸೀತಾನಮಸ್ತೆತ್ರಾಹಿಜಾಹ್ನವಿಭಾಗೀರಥೀ ನಮೋ ಭೋಗವತಿತ್ರಿಪಥ್‍ಗಾಮಿನಿಪಾಹಿಮಾಲತಿ ನಂದಿನಿ4ನವಾಬನು ಮಂತ್ರಿಯು ನೆರೆದಿದ್ದ ಜನರೆಲ್ಲದೇವ ತಟಿನಿ ಧಾರಾ ಸುರಿದದ್ದು ನೋಡಿದೈವೀಕ ಈ ಮಹಿಮೆ ಕೊಂಡಾಡಿ ಸ್ನಾನಜಪಸೇವೆದಾನಾದಿಗಳ ಮಾಡಿದರು ಮುದದಿ 5ವಿಷ್ಣುತೀರ್ಥ ಎಂಬ ನಾಮ ಈ ತೀರ್ಥಕ್ಕೆವಿಷ್ಣು ಭಕ್ತಾಗ್ರಣಿ ಸದಾಶಿವನ ಲಿಂಗವಿಷ್ಣು ತೀರ್ಥದ ದಡದಿ ಇಹುದು ಶರಣೆಂಬೆವಿಷ್ಣು ್ವಂಘ್ರಿ ಜಾತೆಗೂ ಉಮೇಶನಿಗೂ ಶ್ರೀಶಗೂ 6ಶ್ರೀ ಸತ್ಯಬೋಧರು ಗಂಗೆಯ ತರಿಸಿದ್ದುಶ್ರೀ ಸತ್ಯಬೋಧರ ಬಹು ಇಂಥ ಮಹಿಮೆವಸುಮತಿಯಲಿ ಹರಡಿ ದೇಶ ದೇಶಗಳಿಂದಭೂಸುರರು ಸಜ್ಜನರು ಬಂದು ಸೇವಿಪರು 7ಪಟ್ಟಣದ ಮಧ್ಯದಿ ನವಾಬ ಕೊಡಿಸಿದ ಸ್ಥಳದಿಕಟ್ಟಡವು ಶ್ರೀಮಠ ವಿಸ್ತಾರವಾದ್ದುಮಠದಲ್ಲೇ ಉಂಟೊಂದು ಸೋಪಾನ ಭಾವಿಯುಕಟ್ಟೆಯಲಿ ಶಿವಲಿಂಗ ಭಾವಿಯಲಿ ಗಂಗಾ 8ಭೃಗು ಅಂಶ ವಿಜಯದಾಸಾರ್ಯರ ಪ್ರಭಾವವುಏಕದಂತಾಂಶ ಗೋಪಾಲ ದಾಸಾರ್ಯರ ಪ್ರಭಾವಭಾಗಣ್ಣಾನುಜರು ಈರ್ವರು ಪ್ರಭಾವವಶ್ರೀ ಗುರುಗಳು ಮೆಚ್ಚಿ ಮಾನ್ಯ ಮಾಡಿದರು 9ವಿದ್ವತ್ಸ್‍ಭೆಯಲಿ ಗೋಪಾಲದಾಸಾರ್ಯರುಆ ದಾಸವರ್ಯರ ಅನುಜರು ಈರ್ವರುದೇವತಾಂಶದವರುಅಪರೋಕ್ಷಪ್ರಚುರರುಎಂದು ಜನರಿಗೆ ನಿದರ್ಶನ ತೋರಿಸಿದರು 10ವಿಠ್ಠಲ ನೃಹರಿವ್ಯಾಸ ಶ್ರೀಸಹ ವೇಂಕಟರಾಮಘೋಟಕಾಸ್ಯ ಮಧ್ವೇಶನ್ನರಾಧಿಪಂತಮಠದಲ್ಲಿ ಜಗನ್ನಾಥ ದಾಸಾರ್ಯರ ಸೇವೆಕೊಂಡು ಬಹು ಪ್ರೀತಿಯಲಿ ಅನುಗ್ರಹ ಮಾಡಿಹರು 11ಅಮಲ ವೈದಿಕ ತತ್ವ ಮಧ್ವಸಿದ್ಧಾಂತವಭೂಮಿ ದೇವರಿಗೆ ಬೋಧಿಸಿ ಸರ್ವಜನರ್ಗುಕ್ಷೇಮ ಒದಗಿಸಿ ರಮಾಕಾಂತನ್ನ ಸ್ಮರಿಸುತಈ ಮಹಿಯೋಳ್ ಸರ್ವಜನ ಪ್ರಿಯತಮರಾಗಿಹರು 12ಒಳ್ಳೆರೀತಿಯಲಿ ಚತ್ವಾರಿವತ್ಸರಮಠಆಳಿ ಶಾಲಿಶಕ ಹದಿನೇಳ್ ನೂರೈದುಫಾಲ್ಗುಣ ಕೃಷ್ಣ ಪ್ರತಿಪದ ದಿನ ಹರಿಧ್ಯಾನದಲ್ಲಿ ಕುಳಿತರು ಲೋಕ ಚಟುವಟಿಕೆ ತೊರೆದು 13ಸತ್ಯಬೋಧರ ವೃಂದಾವನದಿ ಅವರೊಳಿಹನುಸತ್ಯಬೋಧಾಹ್ವಯನು ಶ್ರೀಸಹಹಯಾಸ್ಯವಾತಸೇವಿತ ರಾಮಕೃಷ್ಣನೃಹರಿ ವ್ಯಾಸಭೃತ್ಯವತ್ಸಲ ವಾಮದೇವನುತನಾಗಿ 14ದರ್ಶನ ಪ್ರದಕ್ಷಿಣೆ ನಮನ ಪಾದೋದಕಸಂಸ್ಕøತಿಸುಚರಿತ್ರೆ ಪಾರಾಯಣಸಚ್ಛಾಸ್ತ್ರ ಪ್ರವಚನ ಜಪತಪದಾನಾದಿಗಳುವಾಂಛಿತಪ್ರದ ಸರ್ವ ಪೀಡಹರವು 15ಪುತ್ರಧನ ಆರೋಗ್ಯ ಆಯುಷ್ಯ ಮಾಂಗಲ್ಯತಾಪತ್ರಯ ಪರಿಹಾರ ರೋಗ ನಿವೃತ್ತಿಕ್ಷಿಪ್ರಲಭಿಸುವುವು ಹರಿಗುರುಗಳ ದಯದಿಂದಸುಶ್ರವಣ ಪಠನ ಈ ಗ್ರಂಥಮಾಳ್ಪರಿಗೆ 16ಸತ್ಯಸಂಧಾರ್ಯರು ಮಹಾಮಹಿಮ ಶಿಷ್ಯರುಸತ್ಯಬೋಧರ ಆರಾಧನ ಭಕ್ತಿಉತ್ಸಾಹದಿ ಮಾಡಿದರು ಅದ್ಯಾಪಿ ಸಹಸ್ರಾರುಭಕ್ತರು ಸೇವಿಸುತಿಹರು ಪ್ರೇಮದಲಿ 17ಹೇಮಗರ್ಭನತಾತಶ್ರಿಪತಿ ಜಗನ್ನಾಥಅಮಲಗುಣಗಣಸಿಂಧು ಪ್ರಸನ್ನ ಶ್ರೀನಿವಾಸರಾಮ ಹಯಮುಖವ್ಯಾಸನೃಹರಿಗೆ ಪ್ರಿಯತಮರೆನಿಮ್ಮಲ್ಲಿ ಶರಣಾದೆ ಸತ್ಯಬೋಧಾರ್ಯ 18 ಪ|| ಇತಿ ಶ್ರೀ ಸತ್ಯಬೋಧ ಚರಿತ್ರೆ ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ತುಳಸಿ205ಎಲ್ಲಿ ಶ್ರೀ ತುಳಸಿಯ ವನವು |ಅಲ್ಲೊಪ್ಪುವರು ಸಿರಿ-ನಾರಾಯಣರು ಪಗಂಗೆ ಯಮುನೆ ಗೋದಾವರಿ ಕಾವೇರಿ |ಕಂಗೊಳಿಸುವ ಮಣಿಕರ್ಣಿಕೆಯು ||ತುಂಗಭದ್ರೆ ಕೃಷ್ಣವೇಣಿ ತೀರ್ಥಗಳೆಲ್ಲ |ಸಂಗಡಿಸುತ ವೃಕ್ಷಮೂಲದಲ್ಲಿರುವುವು 1ಸರಸಿಜಭವಭವಸುರಪಪಾವಕಚಂ-|ದಿರಸೂರ್ಯಮೊದಲಾದವರು ||ಸಿರಿರಮಣನ ಆಜೆÕಯಲಿ ಅಗಲದಂತೆ |ತರುಮಧ್ಯದೊಳುನಿತ್ಯನೆಲಸಿಪ್ಪರು2ಋಗ್ವೇದ ಯಜುರ್ವೇದಸಾಮಅಥರ್ವಣ |ಅಗ್ಗಳಿಸಿದ ವೇದಘೋಷಗಳು ||ಅಗ್ರಭಾಗದಲಿವೆ ಬೆಟ್ಟದೊಡೆಯನಲ್ಲಿ |ಶ್ರೀಘ್ರದಿ ಒಲಿವ ಶ್ರೀಪುರಂದರವಿಠಲ3
--------------
ಪುರಂದರದಾಸರು
ಮುಕ್ಕೋಟ ದ್ವಾದಶಿಯ ದಿವಸ(ಮಾರ್ಗಶಿರ ಶುದ್ಧ ದ್ವಾದಶಿಯ ಉತ್ಸವ)ವ್ರತತಿಯಧಿಪನಂತೆ ನೀರೆ ತೋರ್ಪಅತಿಶಯಾಗಮ ಬಗೆ ಬ್ಯಾರೆ ರತ್ನದ್ಯುತಿಯಾಭರಣವ ಶೃಂಗಾರ ಆಹಾಶ್ರುತಗೊಲಿಸೆನಗೆ ಆಶ್ರಿತ ರಕ್ಷಾರ್ಥಿತನ ಸಂ-ಗತಿಸ್ಮøತಿತತಿಗಳ ಮತಿಗಗೋಚರನಂತೆ1ಲೋಲಲೋಚನನ ನಾಟಕ ಸತ್ಕಥನವಮೇಲಾಗಿ ಜಗದಿ ಶೋಭಿಪ ಶೇಷಾದ್ರಿಯಲಿಬಾಲಾರ್ಕಸದೃಶನೀತನು ಇರ್ಪನಲ್ಲಿನೀಲನಿಭಾಂಗನು ನೆನೆವರ ಪಾಪವಘೋಲುಘಡಿಸಲೆಂದೆನುತಲಿಭಾರ್ಗವಕೋಲಿಂದೆಸಗಿದ ಧರಣಿಗೆ ಬಂದು ಸ-ಲೀಲೆಗಳೆಸಗುವ ಜಾಲವಿದೆಲ್ಲ 2ಸರಸಿಜಗಂಧಿ ಕೇಳ್ ದಿಟದಿ ತನ್ನಅರಮನೆಯಿಂದ ಸದ್ವಿಧದಿ ಈರ್ವ-ರರಸಿಯರ್ ಸಹಿತ ಮಿನಿಯದಿ ಅತಿಭರದಿಂದ ಸೂರ್ಯನುದಯದಿ ಆಹಾಉರುತರ ಹೇಮಪಲ್ಲಂಕಿಯೊಳಡರಿತ್ವರಿತದಿ ಪೋಗುವ ಭರವಿದೆಲ್ಲಿಗೆ ಪೇಳೆ 3ಬದ್ಧನೀ ಪೇಳ್ದ ಮನದ ಶಂಕಾವ್ರಾತತಿದ್ದಿಪೆ ಕೇಳು ಮಾರ್ಗಶಿರ ಮಾಸದೊಳುಶುದ್ಧ ದ್ವಾದಶಿಸೂರ್ಯಉದಯ ಕಾಲದೊಳುಭದ್ರಭವನವನು ಪೊರಟು ವಿನೋದದಿಅದ್ರಿಧರನು ಸಜ್ಜನರೊಡಗೂಡಿ ಉ-ಪದ್ರಿತ ಪಾಪವ ಛಿದ್ರಿಪ ಸ್ನಾನಕೆರೌದ್ರಿತ ರಾಮಸಮುದ್ರದ ಬಳಿಗೆ 4ರಂಭೆ : ಆರರೆ ಆಶ್ಚರ್ಯವಾಯ್ತೆನಗೆ ಅತಿಪರಮಮಹಿಮೆನೆಂದ ಮೇರೆಗೆ ಘನ-ತರ ಸ್ನಾನವೇನಿದು ಕಡೆಗೆ ವೃತದಿರವೋ ಉತ್ಸವವೋ ಪೇಳೆನಗೆ ಆಹಾತರುಣಿ ರನ್ನಳೆ ನಿನ್ನ ಚರಣಕ್ಕೆ ನಮಿಪೆ ಈಪರಿಗಳ ಸಾಂಗದಿಂದರುಹಬೇಕೆನಗಿನ್ನು 5ಸಕಲಾಂತರ್ಯಾತ್ಮನೀತನು ಸತ್ಯಶೀಲೆ-ಪ್ರಕಟ ವ್ರತವಿದಲ್ಲ ಅಂಜನಾದ್ರಿಯಲಿಭಕುತವತ್ಸಲನು ಉತ್ಸವಿಸುವನಲ್ಲಿವಿಕಳಹೃದಯ ನರನಿಕರಕಸಾಧ್ಯವೆಂದ್ಯುಕುತದಿ ಈ ಧರೆಯಲ್ಲಿ ಪ್ರತ್ಯೇಕದಿಅಖಿಳೋತ್ಸವ ಮಸ್ತಕಕಿದುವೆಗ್ಗಳಮುಕುಟೋತ್ಸವವೆಂದೆನುತಲಿ ರಚಿಸುವ 6ರಂಭೆ : ನಳಿನಾಕ್ಷಿ ಲಾಲಿಪುದಿನ್ನು ಸ್ನಾನವೊಲವಿಂದ ಗೈದ ಮೇಲಿವನು ತನ್ನರಮಣಿಯರ್ಸಹಿತಂದಣವನು ಏರಿನಿಲುನಿಲುತ್ಯಾಕೆ ಬರುವನು ಆಹಾಪೊಳಲೊಳಗಿಹ ಜನನಿಳಯದ ದ್ವಾರದಿಕಳಕಳವೇನಿದ ತಿಳುಪೆನಗೀ ಹದ 7ಮಿಂದು ತೋಷದಿ ಅಂದಣವನ್ನೇರಿ ತಾನುಇಂದೀ ಪುರದೊಳಿರ್ಪ ಜನರ ದೋಷಗಳಕುಂದಿಸಲೆಂದವರವರ ದ್ವಾರದೊಳುನಿಂದಿರುತಲ್ಲಿಯದಲ್ಲಿ ಆರತಿಗಳಚಂದದಿ ಕೊಳುತೊಲವಿಂದಕಾಣಿಕೆಜನ-ವೃಂದದಿ ಕೊಡುತಾನಂದ ಸೌಭಾಗ್ಯವಒಂದಕನಂತವ ಹೊಂದಿಸಿ ಕೊಡುವ 8ರಂಭೆ : ಸರಸಿಜಾನನೆ ಮತ್ತೇನಿದನು ತನ್ನಅರಮನೆಯಲ್ಲಿ ಭೂದ್ವಿಜನರನು ಸರ್ವಪುರಜನ ಸಹಿತೊಳಗಿವನು ನಾನಾತರದಿ ಮೆರೆವ ಭೋಜನವನು ಆಹಾ-ಕರಿಸಿ ಆಮೇಲೆ ರಾತ್ರಿಯಲಿ ಸಾಲಿನಲಿ ವಿ-ಸ್ತರದ ಲಾಜದ ರಾಸಿಗಿರದೆ ಪೂಜಿಪುದ್ಯಾಕೆ 9ಗಂಗಾಜನಕತನ್ನ ಗೃಹದಿ ವಿಪ್ರರನುಹಿಂಗದೆ ಕರೆಸಿ ವಿಪ್ರರನೆಲ್ಲ ಬರಿಸಿಸಂಗಾತದಲಿ ಆರೋಗಣೆ ಗೈದು ಮೆರೆಸಿಅಂಗಣದಲಿ ರಾತ್ರೆಯಲಿ ವಿನೋದದಿಕಂಗೊಳಿಸುವ ಉರಿದರಳ ಸಮೂಹಕೆರಂಗಪೂಜೆಯನುತ್ತಂಗವಿಸುವ ನಿಗ-ಮಂಗಳೊಡೆಯನು ವಿಹಂಗಮಾರೂಢ 10ರಂಭೆ : ಅಮಮ ಮತ್ತೇನಿದ ಪೇಳು ಶ್ವೇತ-ಕುಮುದಾಪ್ತ ಠಾವಿನ ವೋಲು ಬಂದುಆದರಿಸಲಿದರ ಮಧ್ಯದೊಳು ತನ್ನರಮಣಿಯರ್ ಸಹಿತ ತೋಷದೊಳು ಆಹಾವಿಮಲವನ್ನೇರಿನ್ನೆಲ್ಲಿಗೈದುವನೆಂಬಾ-ಗಮವ ಪೇಳೆನೆಗೆ ನೀ ನಮಿಪೆ ನಿನ್ನಂಘ್ರಿಯ 11ಶ್ರೀ ರಮಾರಮಣ ಪೂಜೆಯಗೊಂಡಾ ಮೇಲೆಚಾರುಈ ಹೂವಿನ ತೇರನೇರುತಲಿಕೇರಿ ಕೇರಿಯೊಳಾರತಿಗೊಳ್ಳುತಲಿಭೋರಿಡುತಿಹ ವಾದ್ಯಧ್ವನಿ ಘನತರಭೇರಿಮೃದಂಗಾದ್ಯಖಿಳ ವಿನೋದದಿಸ್ವಾರಿಗೆ ತೆರಳುವ ಕ್ರೂರ ನರರ ಆ-ಘೋರಪಾಪ ಜರ್ಝರಿಸಲೆಂದು12ರಂಭೆ : ಅರವಿಂದಾಕ್ಷಿಯೆ ಮತ್ತೇನಿದನು ತನ್ನಅರಮನೆಯಿದಿರು ರಥವನು ತಾನುಭರದೊಳಗಿಳಿದಂದಣವನು ಏರಿಮೆರೆವಾಲಯದ ಸುತ್ತುಗಳನು ಆಹಾತಿರುಗುವನ್ಯಾಕೆ ಭೂದ್ವಿಜರ ಘೋಷದಿ ವಾದ್ಯ-ಭರಿತ ಗಾಯನಭೇರಿಧ್ವನಿಗಳೇನಿದ ಪೇಳೆ13ದುಷ್ಟಮರ್ದನ ರಥವಿಳಿವುತ್ತಲಾಗೇಅಷ್ಟದಿಗ್ಭಾಗದಿ ಗೃಹಸುತ್ತಿನೊಳಗೆಅಷ್ಟಾವಧಾನವ ರಚಿಸುತ್ತ ಕಡೆಗೆಶ್ರೇಷ್ಠನು ರತ್ನಾಸನದಿ ಗ್ರಹದಿಪರಮೇಷ್ಟಜನಕೆ ಸಂತೋಷಾನಂದದಿಸೃಷ್ಟಿಯ ಜನರ ಅನಿಷ್ಟವ ತ್ಯಜಿಸುತಇಷ್ಟವನೀವ ಯಥೇಷ್ಟ ದಯಾಬ್ಧ 14ರಂಭೆ : ಅರಿತೆನಾ ಸ್ವಚ್ಛ ಚಿತ್ತದಲಿ ಇನ್ನುಹರಿಏಕರೂಪನೆನ್ನುತಲಿ ಲಕ್ಷ್ಮೀಕರವೆನಿಸುವ ಕಾರ್ಕಳದಲಿ ಭಾಗ್ಯೋ-ದಯ ದೇವಾಲಯದ ಮಧ್ಯದಲಿ ಆಹಾತ್ವರಿತದಿ ನುತಿಸಿರೊಗುರುನಾರಸಿಂಹ ಶ್ರೀ-ಕರವೆಂಕಟೇಶನ ಚರಣಕಮಲಗಳ15
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ