ಒಟ್ಟು 782 ಕಡೆಗಳಲ್ಲಿ , 90 ದಾಸರು , 663 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾರ್ವತಿರಮಣನಾ ನೋಡಿದೆನು | ನೋಡಿದೆನು | ಪರ್ವತ ಮಲ್ಲೇಶನಾ 1 ಆಟವಾಡುತ ಪಾಟ ಪಾಡುತ | ಕೋಟಿ ಜನರ ಸಹಿತಾಗಿ ಸಾಟಿಯಿಲ್ಲದ ಪರ್ವತ | ನಾಗಾ ಲೋಟಿಯನೆ ನಾ ನೋಡಿದೆ 2 ಅಲ್ಲಿದ್ದ ಜನರ ಸಹಿತಾಗಿ ಪೆದ್ದ ಚೆರುವನ್ನೆದಾಟಿದೆ | ಪುಟ್ಟ ಬೆಟ್ಟಗಳೇರಿ ಇಳಿಯುತ ಕೃಷ್ಣಧ್ಯಾನವ ಮಾಡುತ ದಿಟ್ಟ ಮಲ್ಲಿಕಾರ್ಜುನನ ಮನ ಮುಟ್ಟಿ ಸ್ನರಣೆಯ ಮಾಡುತ 3 ಶ್ರೀಭೌಮನ ಕೊಳ್ಳ ನೇಮದಿಂದಲಿ ದಾಟಿದೆ4 ಆ ಶೈಲ ಕೈಲಾಸ ಧಾಮರೆ | ಸೋಂಪಿನಿಂದಲಿ ಬಂದೆನೂ ಸಾಕ್ಷಿಗಣಪಗೆ ಕೈಯ ಮುಗಿದೂ | ಶ್ರೀ ಶೈಲಶಿಖರವ ಕಂಡೆನು5 ಭಂಗಾರ ಗೋಪುರದ ಮ್ಯಾಲೆ | ಶೃಂಗಾರವನು ನಾ ನೋಡಿದೆ ನಂದಿ ಭೃಂಗಿ ಮೊದಲು ಮಾಡಿ ಸಕಲ ತೀರ್ಥವ ನೋಡಿದೆ6 ಅಲ್ಲಿ ಸ್ನಾನವ ಮಾಡಿನಾನು | ಬಲ್ಲಿದನ ಬಲದಿಂದಲಿ ಎಲ್ಲ ಫಲ ಪುಷ್ಪಧರಿಸಿದ ಮಲ್ಲಿಕಾರ್ಜುನನ ನೋಡಿದೆ 7 ಪಂಚಾಮೃತವ ಮಾಡಿನಾನು | ಸಂಚಿತಾಗಮ ಕರ್ಮವು ವಂಚನಿಲ್ಲದೆ ಕರೆದು | ನಿಶ್ಚಿಂತೆ ಮನವನು ಮಾಡಿದೆ 8 ಜನಿತ ಪಾತಾಳಗಂಗಿ ಉದಕವು ತಂದು ಗಂಗಾಧರಗೆ ಎರೆದು ನಾನು | ಕಂಗಳಿಂದಲಿ ನೋಡಿದೆ 9 ಥೂಪ-ದೀಪ-ನೈವೇದ್ಯದಾರುತಿ | ಅನೇಕ ಭಕ್ತಿಲಿ ಮಾಡಿದೆ ಪ್ರೀತಿಯ ತೋರೆಂದು ಶಿವಗೆ | ಪ್ರೀತಿಲಿ ಕರಮುಗಿದೆನು 10 ಮುದ್ದು ಕೋಟಿಲಿಂಗಗೆ ನಾನು | ವಿಧ್ಯುಕ್ತದಿ ನಮಿಸಿದೆ ವೃದ್ಧ ಮಲ್ಲೇಶ್ವರನ ನೋಡಿ | ಅಲ್ಲಿದ್ದದೇವರ ಭಜಿಸಿದೆ 11 ಅಮರರಿಂದರ್ಚಿಸಿಗೊಂಬ | ಭ್ರಮರಾಂಬನ ನೋಡಿದೆ ಭ್ರಮೆಯು ಬ್ಯಾಡೆಂದು ಸಂಸಾರದ | ಬ್ಯಾಗದಿಂದಲಿ ಬೇಡಿದೆ 12 ಥಟ್ಟನೇ ಪಂಚಾ ಮಠವನೋಡಿ | ಅಟಕೇಶ್ವರಕೆ ಬಂದೆನು ಶಿಖರೇಶ್ವರನ ದರ್ಶನ ಮಾಡಿ | ಹಾಟಕೇಶ ಪುರ ನೋಡಿದೆ13 ಭಾರತಿಯ ಶೈಲಿ ವಿಸ್ತಾರ ಪತ್ರಿ ಪುಷ್ಪಗಳ ಫಲಗಳ ನಾರಸಿಂಹ ವಿಠಲಗರ್ಪಿಸಿ | ಧಾರೆ ಎರೆದು ಬಂದೆನು 14
--------------
ಓರಬಾಯಿ ಲಕ್ಷ್ಮೀದೇವಮ್ಮ
ಶ್ರೀಮದ್ರಾಮಾಯಣ ಮಂಗಳಂ ಮಂಗಳಂ ಮಹಾನುಭಾವಗೆ ಮಂಗಳಂ ಲೋಕಮಾತೆ ಸೀತೆಗೆ ಮಂಗಳಂ ಶತ್ರುಘ್ನ ಭರತಗೆ ಮಂಗಳಂ ಸೌಮಿತ್ರಿರಾಮಗೆ ಪ ದಶರಥನ ಉದರದಲಿ ಜನಿಸುವೆನೆಂದು ವರವನಿತ್ತ ರಾಮಚಂದ್ರಗೆ 1 ಭರತಸಹವಾಗಿ ಜನಿಸಿದ ರಾಮಚಂದ್ರಗೆ 2 ಜಾತಕರ್ಮವು ನಾಮಕರಣವು ಚೌಲ ಉಪನಯನಗಳ ಮಾಡಿ ವಿಶ್ವಾ ಮಿತ್ರರೊಡನೆ ಸಕಲ ವಿದ್ಯವ ಕಲಿಯೆ ಪೊರಟ ರಾಮಗೆ3 ಬಲ ಅತಿಬಲವೆಂಬ ವಿದ್ಯವ ವಿಶ್ವಾಮಿತ್ರರೊಡನೆ ಕಲಿತು ಅಶ್ವಿನಿದೇವತೆಗಳಂದದಿ ಬಂದ ಸೌಮಿತ್ರಿರಾಮ್ರಗೆ 4 ಭರದಲಿ ಅನಂಗನಾಶ್ರಮವನು ಪೊಕ್ಕು ಸರಯು ನದಿಯನು ದಾಟಿ ಬರದೂಷಣಜಾ ದೇಶದೊಳಗುಳ್ಳ ತಾಟಕಾಂತಕ ರಾಮಚಂದ್ರಗೆ 5 ಅಸ್ತ್ರವನ್ನು ಗ್ರಹಿಸಿ ಬೇಗನೆ ಸಿದ್ಧಾಶ್ರಮಕ್ಕೆ ನಡೆತಂದು ಸುಭಾಹುವ ನು ಸಂಹರಿಸಿ ಭರದಿ ಮಾರೀಚನ ಹಾರಿಸಿದ ರಾಮಗೆ 6 ವಿಶ್ವಾಮಿತ್ರರ ಯಜ್ಞ ಪಾಲಿಸಿ ಕುಶನ ವಂಶವಿಸ್ತಾರವ ಕೇಳಿ ಆಸರ [ಯು]ನದಿಯ ದಾಟಿ ಭರದದಿತಿಯಾಶ್ರಮಕೆ ಬಂದ ರಾಮಗೆ 7 ಮರುತ್ತ ಜನ್ಮವ ಕೇಳಿ ಅಹಲ್ಯೆಯನ್ನು ಪಾವನ ಮಾಡಿ ಬಂದ ರಾಮಗೆ 8 ಜನಕ ವಂದಿಸಿ ಧನ್ಯನೆನ್ನಲು ವಿಶ್ವಾಮಿತ್ರರು ವೃತ್ತಾಂತ ಹೇಳಿ ಧನುವ ತರಿಸಲು ನೋಡಿ ಕ್ಷಣದಿಮುರಿದಾ ರಾಮಚಂದ್ರಗೆ 9 ಕರವ ಪಿಡಿದು ಪೊರಟ ರಾಮಗೆ 10 [ಬೇಗ]ಮಾತಾಪಿತರ ಮಾತನಡೆಸಿ ಪ್ರೀತಿತೋರಿದ ಸೀತಾರಾಮಗೆ 11 ಕಂಡವರ ಮನದಲ್ಲಿ ರಮಿಸುವ ಪುಂಡರೀಕಾಕ್ಷನಿಗೆ ರಾಜ್ಯವ ಕೊಡುವೆನೆ[ನುತ] ದಶರಥ ವ್ರತವನಾಚರಿಸಿದ ರಾಮಚಂದ್ರಗೆ 12 ಕೈಕೆ ಪೂರ್ವದ ವರವ ಸ್ಮರಿಸಿ ಭರತನಿಗೆ ರಾಜ್ಯವನು ಬೇಡಿ ರಾಮನರ ಣ್ಯಕ್ಕೆ ಪೋಗೆನೆ ಬೇಗ ಪೊರಟ ಶ್ರೀರಾಮಚಂದ್ರಗೆ 13 ಮಾತೆಯನು ಬಹುವಿಧದಿ ಮನ್ನಿಸಿ ಪಿತನ ಪ್ರತಿಜ್ಞೆಯನು ಪಾಲಿಸಿ ಸೀತೆಲಕ್ಷ್ಮಣರೊಡನೆ ವನವಾಸಕ್ಕೆ ಪೊರಟ ರಾಮಚಂದ್ರಗೆ 14 ಪುರದ ಜನರನು ಸಂತವಿಟ್ಟು ಗುಹನ ಸಖ್ಯದಿ ನದಿಯ ದಾಟಿ ಭರದಿ ಭಾರದ್ವಾಜರ ಕಂಡು ಚಿತ್ರಕೂಟಕ್ಕೆ ಬಂದ ರಾಮಗೆ 15 ಅರಸು ಸ್ವರ್ಗವನೈದೆ ಭರತನಕರಸಿ ಕರ್ಮವನೆಲ್ಲ ಕಳೆದು [ವರ] ಮಾತೆಗೆ ಭಾಷೆ ಕೊಟ್ಟು ತಮ್ಮನಾಲಿಂಗಿಸಿದ ರಾಮಗೆ 16 ಭರತನಂಕದೊಳಿಟ್ಟು ಪ್ರೇಮದಿ ಮನ್ನಸಿ ಮೃದುವಾಕ್ಯದಿಂದ ಗುರುಗಳನುಮತದಿಂದ ಪಾದುಕೆಯಿತ್ತು ಕಳುಹಿದ ರಾಮಚಂದ್ರಗೆ 17 ಬೇಗನೆ ಚಿತ್ರಕೂಟವ ಬಿಟ್ಟು ಅತ್ರಿ ಯಾಶ್ರಮಕೆ ಬಂದು ಅಂಗರಾಗಾರ್ಪಣವನೆಲ್ಲ ಅಂಗೀಕರಿಸಿದ ರಾಮಚಂದ್ರಗೆ 18 ದಂಡಕಾರಣ್ಯವನ್ನು ಪೊಕ್ಕು ಉದ್ದಂಡವಿರಾಧನ್ನ ಕೊಂದು ಕಂಡು ಇಂದ್ರನ ಶರಭಂಗರಿಗೆ ಮುಕ್ತಿಯನಿತ್ತ ಶ್ರೀರಾಮಚಂದ್ರಗೆ 19 ಋಷಿಗಳಿಗೆ ಅಭಯವನು ಇತ್ತು ಲೋಕಮಾತೆಯ ನುಡಿಯ ಕೇಳಿ ಋಷಿಮಂಡಲವನು ಪೊಕ್ಕು ಬಂದು ಸುತೀಕ್ಷ್ಣರ ಕಂಡ ರಾಮಗೆ 20 ಅಸ್ತ್ರವನು ಕೊಡಲು ಗ್ರಹಿಸಿ ಪಂಚವಟಿಗೆ ಬಂದ ರಾಮಗೆ 21 ಶೂರ್ಪನಖಿ ರಘುಪತಿಯ ಮೋಹಿಸೆ ಕರ್ಣನಾಸಿಕವನ್ನು ಛೇದಿಸಿ ದುರುಳ ಖರದೂಷಣರ ಕೊಂದು ಸತಿಯನಾಲಿಂಗಿಸಿದ ರಾಮಗೆ 22 ದುರುಳ ಖಳನು ಜಾನಕಿಯ ಕದ್ದೊಯ್ಯೆ ಮಾರಿಚನ್ನ ಕೊಂದು ಬರುತ ಮಾರ್ಗದಿ ಗೃಧ್ರರಾಜಗೆ ಮುಕ್ತಿಯಿತ್ತ ಶ್ರೀರಾಮಚಂದ್ರಗೆ 23 ಕಬಂಧನಾ ವಾಕ್ಯವನು ಕೇಳಿ ಮಾರ್ಗದಲಿ ಅಯಮುಖಿಯ ಭಂಗಿಸಿ ಶಬರಿ ಭಕ್ತಿಯೊಳಿತ್ತ ಫಲವನು ಸವಿದು ಮುಕ್ತಿಯನಿತ್ತ ರಾಮಗೆ 24 ಸೀತೆಯರಸುತ ಮಾರ್ಗದಲಿ ಋಷ್ಯಮೂಕಪರ್ವತವ ಸೇರಿ ಪಂ ಪಾತೀರದಿ ತಮ್ಮನೊ[ಂದಿ]ಗೆ ನಿಂತ ಶ್ರೀರಘುರಾಮಚಂದ್ರಗೆ 25 ಪಂಪಾಪುಳಿನದ ವನವಕಂಡು ಪಂಕಜಾಕ್ಷಿಯ ನೆನೆದು ವಿರಹ [ತಾಪದರೆ] ಬಂದ ಆಂಜನೇಯಗೆ ಸಖ್ಯ ನೀಡಿದ ರಾಮಚಂದ್ರಗೆ 26 ಅಭಯವನು ಇತ್ತು ರವಿಜಗೆ ಏಳು ತಾಳೇಮರವ ಛೇದಿಸಿ ದುಂ ದುಭಿಯ ಕಾಯವನು ಒಗೆದ ಇಂದಿರಾಪತಿ ರಾಮಚಂದ್ರಗೆ 27 ಇಂದ್ರಸುತನು ರವಿಜನೊಡನೆ ದ್ವಂದ್ವಯುದ್ಧವ ಮಾಡುತಿರಲು ಒಂದುಬಾಣದಿಂದ ವಾಲಿಯ ಕೊಂದು ಕೆಡಹಿದ ರಾಮಚಂದ್ರಗೆ 28 ಮುದ್ರೆಯುಂಗುರವಿತ್ತು [ಅ]ಸಾಧ್ಯ ಇವನೆಂತೆಂದ ರಾಮಗೆ 29 ಬೆಳೆದ ಹನುಮಗೆ 30 ಶತ್ರುಪಟ್ಟಣವ ಕಂಡು ಛಾಯೆಯ ಕುಟ್ಟಿ ಸುರಚಿಯುಪಾಯದಿಮನ್ನಿ ಸುತ್ತ ಮೈನಕನ ಭರದಲಿ ಲಂಕಿಣಿಯನಡಗಿಸಿದ ಹನುಮಗೆ 31 [ವೀರ] ಹನುಮಗೆ 32 ದುರುಳ ರಾ ವಣನ ನಿಂದಿಸಿ ಪುರವಸುಟ್ಟಾ ವೀರಹನುಮಗೆ 33 ಸೀತೆಯೊಡನೆ ಗುರುತಕೇಳಿ ಸಮುದ್ರತೀರಕೆ ಬಂದು ಬೇಗನೆ ಜಾಂಬ ವಂತ ಅಂಗದರ ಕೂಡಿ ಮಧುವನವ ಭಂಗಿಸಿದ ಹನುಮಗೆ 34 ಕಂಡೆ ಲೋಕಮಾತೆಯನನ್ನೆನ್ನುತ ಬಂದು ಮುದದಿ ವಂದಿಸಿ ಇತ್ತ ಹನುಮನನಾಲಿಂಗಿಸಿದವಗೆ 35 ಬಂದ ರಾಮಗೆ 36 [ಭಕ್ತ] ವಿಭೀಷಣಗೆ ಅಭಯವನಿತ್ತು ಶರಧಿಗೆ ಸೇತುವೆಯನ್ನು ಬಂಧಿಸಿ ಮುತ್ತಿ ಲಂಕಾಪುರವ ಸಂಧಿಗೆ ಅಂಗದನ ಕಳುಹಿಸಿದ ರಾಮಗೆ 37 ಇಂದ್ರ[ಜಿತ್ತು]ವೊಡನೆ ಕಾದಿ ಸರ್ಪಾಸ್ತ್ರದಿಂದ ಬಿಡಿಸಿಕೊಂಡು [ಆ]ದುರುಳ ರಾವಣನ ನಡುಗಿಸಿ ಕಿರೀಟವನು ಭಂಗಿಸಿದ ರಾಮಗೆ 38 ಕುಂಭಕರ್ಣನ ತುಂಡುತುಂಡಾಗಿ ಕೊಂದುಕೆಡಹಿದ ರಾಮಚಂದ್ರಗೆ 39 ಕೊಂದು ವಜ್ರದಂಷ್ಟ್ರ ಆಕಂಪ ದೇವಾಂತಕ ನರಾಂತಕರನ್ನು ಮ ಹೋದರ ಮಹಾಪಾಶ್ರ್ವ ಅತಿಕಾಯ ತ್ರಿಶಿರಸ್ಸನ್ನು ಕೊಂದ ರಾಮಗೆ 40 ಮಾಯೆಯುದ್ಧದಿ ಮೇಘನಾಥನು [ಅನುಜನ] ಬ್ರಹ್ಮಾಸ್ತ್ರದಲಿ ಕಟ್ಟಲು ವಾಯುನಂದನನಿಂದ ಸಂಜೀವನವ ತರಿಸಿದ ರಾಮಚಂದ್ರಗೆ 41 ಮಾಯಾಸೀತೆಯ ಶಿರವನರಿಯಲು ವಿಭೀಷಣನ ಉ ಪಾಯದಿಂದ ಇಂದ್ರಜಿತ್ತು ಶಿರವಕಡಿದ ತಮ್ಮನಾಲಂಗಿಸಿದ ರಾಮಗೆ 42 ಮೂಲಬಲವನು ಕಡಿದು ರಾವಣನೊಡನೆ ಯುದ್ಧವ ಯೋಚಿಸೆ ಕಡಿದ ರಾಮಗೆ 43 ರಾವಣಾನೆಂಬ ಗಂಧಹಸ್ತಿಯ ರಾಮಕೇಸರಿ ಬಂದು ಮುರಿಯಲು ಸುರರು ಶಿರದಿ ಧರಿಸಿದ ರಾಮಚಂದ್ರಗೆ 44 ವಿಭೀಷಣಗೆ ಪಟ್ಟವನು ಕಟ್ಟಿ ಸೀತೆಯೊಡನೆ ಪ್ರತಿಜ್ಞೆ ಮಾಡಿ ರೆ ಬ್ರಹ್ಮರುದ್ರಾದಿಗಳು ಸ್ತುತಿಸಲು ತಂದೆಗೆರಗಿದ ರಾಮಚಂದ್ರಗೆ 45 ಸೀತೆಯಂಕದೊಳಿಟ್ಟು ಕಪಿಗಳಸಹಿತ ಪುಷ್ಪಕವೇರಿ ಭರದಿ [ಬ ರುತ್ತ] ಭಾರದ್ವಾಜರಿಗೆರಗಿ ಭರತನ ಮನ್ನಿಸಿದ ರಾಮಗೆ 46 ಕೈಕೆಸುತ ಕೈಮುಗಿದು ಕಿಶೋರ ಭಾರವ ತಾಳಲಾಗದೆಂದಾ ಳುತ [ಲಾ]ಯಿತ್ತ ರಾಜ್ಯವನ್ನು ಕೊಡಲು ಗ್ರಹಿಸಿದ ರಾಮಚಂದ್ರಗೆ 47 ಉಟ್ಟ ಮಡಿಯ ಜಟೆಯನುತಾ ಶೋಧಿಸೆ ಸೀತೆ ಸಕಲಾಭರಣ ತೊಟ್ಟು ಸುಗ್ರೀವ ಸಕಲರೊಡನೆ ರಥವನೇರಿದ ರಾಮಚಂದ್ರಗೆ 48 ಸರಮೆಪತಿ ಸೌಮಿತ್ರಿ ಚಾಮರ ಪಿಡಿಯೆ ಶತ್ರುಘ್ನ ಛತ್ರಿಯನು ಭರತ ಸಾರಥ್ಯವನು ಮಾಡಲು ಪುರಕೆತೆರಳಿದ ರಾಮಚಂದ್ರಗೆ 49 ರಾಜಗೃಹವನು ತೋರಿ ರವಿಜಗೆ ಶರಧಿಯುದಕಗಳೆಲ್ಲ ತರಿಸಿ [ವಿ ರಾಜಿಸಿ] ಪೀಠದಿ ಸೀತೆಯೊಡನೆ ವೊಪ್ಪಿದಾ ರಘುರಾಮಚಂದ್ರಗೆ 50 ವಸಿಷ್ಠ ಮೊದಲಾದ ಸಪ್ತ ಋಷಿಗಳು ಲಕ್ಷ್ಮೀಪತಿಗಭಿಷೇಕ ಮಾಡಲು ರಾಮಚಂದ್ರಗೆ 51 ಪಾದ ಪಿಡಿದಿಹ ರಾಮಚಂದ್ರಗೆ
--------------
ಯದುಗಿರಿಯಮ್ಮ
ಶ್ರೀವೇಂಕಟೇಶ ಸುಪ್ರಭಾತ ಶ್ರೀವೆಂಕಟೇಶಂಗೆ ಜಯ ಸುಪ್ರಭಾತ ದೇವಾದಿದೇವಂಗೆ ನವಸುಪ್ರಭಾತ ಪ ಪಾವನ ಶರೀರಂಗೆ ಜಯ ಸುಪ್ರಭಾತ ದೇವಪರಮಾತ್ಮಂಗೆ ನವಸುಪ್ರಭಾತ ಅ.ಪ ಅಂದು ಕೌಸಲ್ಯೆಯಣುಗ ರಾಮಾ ಏಳು ಎಂದಿನಂತೆ ಆಹ್ನಿಕವ ಮಾಡೆಂದು ನುಡಿಯಾ ಮುಂದೆ ವಿಶ್ವಾಮಿತ್ರ ಮುನಿ ರಾಮಭದ್ರಂಗೆ ಮಂದಹಾಸದಿ ಪೇಳ್ದ ಸರಯೂಬಳಿಯಲ್ಲಿ 1 ಎದ್ದೇಳು ಗೊವಿಂದ ಗರುಡಧ್ವಜಸ್ವಾಮಿ ಉದ್ಧರಿಸ ಬೇಕಯ್ಯ ಕರುಣಾಂತರಂಗ ಎದ್ದೇಳು ಚೈತನ್ಯ ಪುಣ್ಯದಾತ [ಎದ್ದೇಳು ಕಮಲಾಕಾಂತರಂಗ] 2 ಮಧುಕೈಟಭಾರಿಯಾ ವಕ್ಷಸ್ಥಲದಲಿ ನಿಂದ ಹದಿನಾಲ್ಕು ಲೋಕಗಳ ಮಾತೆಯೆನಿಸಿ ಪದುಮಾಕ್ಷಿ ಲಕ್ಷ್ಮೀಗೆ ಜಯಸುಪ್ರಭಾತ 3 ಸರ್ವಭುವನೇಶ್ವರಿ ಸರ್ವ ಭಕ್ತಂಕರಿ ಸರ್ವಲೋಕ ವಿಖ್ಯಾತೆ ಜಾತೆ ವಿನೀತೇ ಸರ್ವಲೋಕೇಶನ ರಾಣಿ ಕಲ್ಯಾಣಿ ಸರ್ವಸನ್ನುತೆ ನಿನಗೆ ಸುಪ್ರಭಾತ 4 ಸಪ್ತರ್ಷಿ ಮಂಡಲವು ಔಪಾಸನೆಯಾಗೆ ತೃಪ್ತರಾಗಿರುತಿಹರು ನಭದ ನದಿಯೊಳು ವ್ಯಾಪ್ತವಾದಖಿಳ ಕರಪುಷ್ಪಗಳ ಅರ್ಪಿಸಿ ಒಪ್ಪಿರ್ಪರೇಳೇಳು ವೆಂಕಟೇಶ 5 ಅಜ ನಿರಂಜನ ಸ್ಮರಿಸಿ ತ್ರೈವಿಕ್ರಮನ ಚರಿತೆಗೇಳು ಶಿರಬಾಗಿ ವಂದಿಪರು ಗುರು ಶುಭವ ಪೇಳುವನು ವರದರಾಜ ಏಳು ವೇಂಕಟೇಶ 6 ಈಗ ವಿಕಸಿತವಾದ ಕಮಲಸೌರಭದೊಡನೆ ರಾಗ ರಸ ತಂಪಿಂಪು ಮಿಳಿತಮಾಗಿ ಸಾಗುತಿದೆ ತಂಗಾಳಿ ಉಲ್ಲಾಸಮಂ ಬೀರಿ ತ್ಯಾಗಿ ನೀನೇಳಯ್ಯ ವೇಂಕಟೇಶ 7 ಕದಳಿ ಖರ್ಜೂರಗಳ ರಸಯುಕ್ತ ಪಾಯಸ ಮುದದಿ ಸಂಸೇವಿಸುತ ಉತ್ಸಾಹದೀ ಮಧುರ ಗಾನವ ಪಾಡಿ ಶುಕಪಿಕಗಳುಲಿಯುತಿವೆ ಪದುಮನಾಭ ಏಳು ವೇಂಕಟೇಶ 8 ದೇವರ್ಷಿನಾರದನು ಮಹತಿ ವೀಣೆಯ ನುಡಿಸಿ ದೇವದೇವನೆ ನಿನ್ನ ನುತಿಸುತಿಹನು ಭಾವರಸಯುತವಾದ ಗಾನಕೇಳುತಿಹುದು ಪಾವನಾತ್ಮನೇ ಏಳು ವೇಂಕಟೇಶ 9 ಸುರಿವ ಮಕರಂದವನು ಹೀರಿ ಹೀರಿ ಅರುಣನುದಯವ ತಿಳಿದು ಅರಳುತಿಹ ಕಮಲದಿಂ ಸರಸರನೆ ಝೇಂಕರಿಸಿ ಬರುತಿರ್ಪುವೈ ಸಿರಿಯ ದುಂಬಿಗಳೇಳು ವೆಂಕಟೇಶ 10 ಮಡದಿಯರು ಕೆನೆಮೊಸರನಾಂತ ಭಾಂಡಗಳಲ್ಲಿ ಕಡೆಗೋಲಿನಿಂ ಮಥಿಸಿ ಹಾಡುತಿಹರು ಅಡಿಗಡಿಗೆ ಜಯ ಘೋಷ ಕೇಳುತಿದೆಯಯ್ಯ ಪೊಡವೀಶ ನೀನೇಳು ವೇಂಕಟೇಶ 11 ಕಮಲದಿಂದೈತಂದ ದುಂಬಿಗಳು ಸುತ್ತಲಿನ ಕುಮುದಗಳ ಮೈಗಪ್ಪಿ ಝರಿಝರಿ ಗರ್ವದಿ ಅಮರ ದುಂದುಭಿಯಂತೆ ಝೇಂಕರಿಸುತಿವೆಯಿದೋ ವಿಮಲಾಂಗ ನೀನೇಳು ವೇಂಕಟೇಶ 12 ಶ್ರೀರಮೆಯ ನಿತ್ಯಯೋಗಸ್ಥಾನ ಹೇಸ್ವಾಮಿ ಭೂರಿಭಕ್ತರ ಕಾಯ್ವ ಕರುಣಾನಿಧೇ ಸ್ವಾಮಿ ಮೂರು ಲೋಕವನಳೆದು ಪಾಲಿಸುವ ಸ್ವಾಮಿ ಮಾರಮಣ ನೀನೇಳು ವೇಂಕಟೇಶ 13 ಅಜ ರುದ್ರ ಸನಕಾದಿ ಪರಮ ಭಕ್ತರ ಬಂಧು ಭಜಿಸಿ ತವ ದರ್ಶನವ ಕಾಯುತಿಹರು ವಿಜಯ ಜಯರೀರ್ವರು ತಡೆಯುತ್ತಲಿಹರಯ್ಯ ಗಜವಿನುತ ನೀನೇಳು ವೇಂಕಟೇಶ 14 ಶೌರಿ ನಿನ್ನಾವಾಸ ತಾಣ ವೈಕುಂಠದಿಂದ ನಾರಾಯಣಾದ್ರಿ ಗರುಡಾದ್ರಿ ಎಂತೆಂಬ ಆರೇಳು ನಾಮಗಳ ಪೇಳ್ವರಿದು ಶೇಷಾದ್ರಿ ಸಾರತರ ನಾಮವೈ ವೇಂಕಟೇಶ 15 ಭುವಿಯ ಗೋಪಾಲಕರು ಅನುಮತಿಯ ಬೇಡುವರು ರವಿಯಗ್ನಿಯುಕ್ತ ನವಗ್ರಹಗಳು ಕಾದಿಹರು ಭವದೂರನೇ ನಿನಗೆ ಸುಪ್ರಭಾತ 16 ದಿವಿಮೋಕ್ಷ ಬೇಡ ತವದರ್ಶನವು ಸಾಕೆಂದು ನವಭಕ್ತಿಯಿಂ ತಳೆದು ಭಜನೆ ಮಾಡುತಿಹರು ಪವಮಾನನುತ ನಿನಗೆ ಸುಪ್ರಭಾತ 17 ನಿನ್ನ ಧಾಮದ ಶಿಖರ ವೀಕ್ಷಣೆಯೊಳಾನಂದ ವನ್ನು ಪಡುತಿಹರೆಲ್ಲ ಶರಣ ಜನರು ನಿನ್ನ ದರ್ಶನವೊಂದೆ ಪರಮ ಪದವದನು ಸನ್ನುತಾಂಗನೆ [ತೋರೇಳು]ಸುಪ್ರಭಾತ 18 ಭೂಮಿಪತಿ ಕರುಣಾಂಬುಸಾಗರನೆ| ಧೀರ ಶೂರಾನಂತ ಗರುಡ ವಿಷ್ವಕ್ಸೇನ ರಾರಾಜಿಸುತ್ತಿಹರು ನಿನ್ನ ದರ್ಶನಕಾಗಿ ನಾರಾಯಣಾ ನಿನಗೆ ಸುಪ್ರಭಾತ|| 19 ಕಮಲನಾಭ ದೇವ ಪುರುಷೋತ್ತಮಾ ಸ್ವಾಮಿ ಅಮಲಸದ್ಗುಣಧಾಮ ಕೃಷ್ಣ ವೈಕುಂಠ ಸುಮಬಾಣಕೋಟಿ ಸೌಂದರ್ಯನುತ ಮಾರಮಣ ಕಮಲನಯನಾ ನಿನಗೆ ಸುಪ್ರಭಾತ|| 20 ದೀನರಕ್ಷಣೆಗಾಗಿ ಹತ್ತುಜನ್ಮದಿ ಬಂದೆ ಮಾನವ ಶ್ರೇಷ್ಠರೂ ಆಕಾಶಗಂಗೆಯಲಿ ನಾನಾ ಸುಗಂಧಗಳ ಬೆರೆಸಿ ಕಾಯುತ್ತಿಹರು ಭಾನುತೇಜನೆ ನಿನಗೆ ಸುಪ್ರಭಾತ 21 ದಿನಪನುದಯಿಸುತ್ತಿಹನು ಕಮಲವರಳುತ್ತಿಹುದು ಬನದ ಪಕ್ಷಿಗಳೆಲ್ಲ ಹಾಡುತ್ತಲಿಹವು ಘನವೈಷ್ಣವರು ಮಂಗಳಂಗಳಂ ಪಾಡುವರು ಮನುಜಪುಂಗವ ನಿನಗೆ ಸುಪ್ರಭಾತ 22 ಕಮಲಜಾದ್ಯಮರರೂ ಸಪ್ತರ್ಷಿಯೋಗಿಗಳು ವಿಮಲ ಮಾನಸರಾಗಿ ನಿನಗಾಗಿ ಕಾದಿಹರು ತಿಮಿರಸಾಗರವನ್ನು ದಾಟಿಸುವ ಪರಮಾತ್ಮ ಕಮನೀಯಗುಣ ನಿನಗೆ ಸುಪ್ರಭಾತ|| 23 ಭಾವನೆಯೊಳೀಯದ್ರಿ ವೈಕುಂಠವಾಗಿಹುದು ಮಾವನಿತೆಯುಪಚಾರದಭ್ಯರ್ಥಿಯಾಗಿಹಳು ಶ್ರೀವೈಷ್ಣವ ಕೇಳು ಕೈಮುಗಿದು ಕಾದಿಹರು ಕಾವಕಾರುಣ್ಯನಿಧಿ [ನಿನಗೆ ಸುಪ್ರಭಾತ] 24 ಅರುಣೋದಯದೊಳೆದ್ದು ಈ ಸುಪ್ರಭಾತವನು ಪರಮ ಭಕ್ತಿಯೊಳೊಮ್ಮೆ ಪಾಡುವರಿಗೆ ಪರಮಪುರುಷನು ದಿವ್ಯತಾಣವನು ನೀಡುವನು ಹಿರಿಯರಾ ವಚನವಿದು ಪರಮ ಚರಿತಾರ್ಥ25 ಶರಣಾಗತಿ ಒಂದೆರಡು ಮೂರು ನಾಲ್ಕೈದಾರು ಮೊಗದವರು ಬಂದು ವಂದಿಸುತಿಹರು ಪುರುಷೋತ್ತಮ ಬಂಧುರ ಶರೀರನೀ ಪಾಲಿಸೆಮ್ಮ ವೆಂಕಟೇಶ 26 ನಾನಾಪರಾಧಗಳ ಮಾಡಿರುವೆನಯ್ಯ ನೀನೆಲ್ಲವನು ಕ್ಷಮಿಸಿ ಪರಿಪಾಲಿಸಯ್ಯ ನೀನೇ ಸರ್ವಾಧಾರ ಕರುಣಾಂತರಂಗನು ದಾನಶೀಲಾ ಸ್ವಾಮಿ ಶ್ರೀವೇಂಕಟೇಶ 27 ಗೋಪಿಕಾ ಪರಿವೃತನೆ ಪರವಾಸುದೇವನೆ ಗೋಪಿಕಾ ಗೀತಗುಣ ಸಂಪೂಜ್ಯ ದೇವನೆ ಗೋಪಿಕಾ ಮನ್ಮಥನೆ ದೈತ್ಯಾರಿ ಶ್ರೀಕೃಷ್ಣ ನೀ ಪೊರತು ಬೇರೆ ದೇವರ ಕಾಣೆ ವೆಂಕಟೇಶ28 ದಶರಥನ ಸುತನಾಗಿ ಜಾನಕಿಯ ಕರವಿಡಿದು ದಶಮುಖಾದ್ಯಸುರರನು ಸಂಹರಿಸಿದಾತ ಶಶಿಮೌಳಿ ವಂದ್ಯನೆ ಲೋಕಮೋಹನ ಸ್ವಾಮಿ ಕ್ಲೇಶಗಳ ಸಹಿಸಿ ಶಾಶ್ವತ ಸುಖವ ನೀಡಯ್ಯ ವೆಂಕಟೇಶ 29 ಕಂಜಾಯತಾಕ್ಷಿಯೆ ಸರ್ವಲೋಕ ಶರಣೇ ಕಂಜವದನೆಯೆ ಸರ್ವವಾತ್ಸಲ್ಯ ಪೂರ್ಣೇ ಕಂಜನಾಭನ ದಿವ್ಯ ವಕ್ಷಸ್ಥಲಾವಾಸಿ ಕಂಜಸರ್ವಾಂಗಿ ಪೊರೆ ಪುಣ್ಯಚರಿತೆ ಶ್ರೀಯೆ 30 ಸರ್ವಲೋಕ ಶರಣ್ಯ ಸರ್ವಗುಣ ಸಂಪೂರ್ಣ ಸರ್ವದೇವರದೇವ ವೇದವಂದಿತ ಸರ್ವಕಾರುಣ್ಯನಿಧಿ ಸರ್ವಾತ್ಮ ಸಂಚಾರಿ ಸರ್ವಪೂಜಿತ ನಿನಗೆ ಶರಣು ವೆಂಕಟೇಶ 31 ರಕ್ಷಿಸು ಜಗನ್ಮಯ ರಕ್ಷಿಸು ದಯಾಮಯ ರಕ್ಷಿಸು ಮನೋಮಯಾ ಮಾಯ ನಿರ್ಮಾಯ ರಕ್ಷಿಸೈ ಸರ್ವಜ್ಞ ಸರ್ವಲೋಕಾಧ್ಯಕ್ಷ ರಕ್ಷಸೈ ಹರಿ ನಿನ್ನ ಚರಣ ವೆಂಕಟೇಶ 32 ಆವನಾದಿಯನಂತನೆಂದೆನಿಪನೊ ವರವ ಈವ ಕರುಣಾಳುವೋ ಜೀವರಾಶಿಯನೆಲ್ಲ ಕಾವನೋ ಸಹಸ್ರಾಕ್ಷನೆಂದೆನಿಪ ದೇವನಾ ಶ್ರೀವನಜ ಪದವೆನಗೆ ಶರಣು ವೆಂಕಟೇಶ 33 ವೇದಗಳ ತಂದು ಮಂದರವೆತ್ತಿ ಹರಿಯ ಮೇದಿನಿಯ ನಳೆದ ಭಾರ್ಗವನಾದ ರಾಮನೀ ನಾದೆ ಕಂಸನಕೊಂದೆ ಗೋಪಾಲಕೃಷ್ಣ ನಾದ ಕಲ್ಕೀ ನಿನ್ನ ಚರಣ ವೆಂಕಟೇಶ34 ಮೂರು ವೇಣಿಗಳುಳ್ಳ ಗಂಗೆ ಪುಟ್ಟಿದ ಪಾದ ಮೂರು ಲೋಕವನಳೆದ ಸುಪ್ರಸಿದ್ಧದ ಪಾದ ಮೂರು ಕಣ್ಣಾಂತವನು ಜಪಿಸುತಿರುವ ಪಾದ ಚಾರುತರ ಪದವೆನಗೆ ಶರಣು ವೆಂಕಟೇಶ 35 ಕಾಳಿಂಗನಾ ಹೆಡೆಯ ತುಳಿದು ಕುಣಿದಾ ಪಾದ ಖೂಳ ಶಕಟನನೊದ್ದು ಕೊಂದ ಪಾದ ಚೋಳರಾಯನು ತೊಳೆದು ವಂದಿಸಿದ ಪಾದ ನಾಳೀಕ ಪದವೆನಗೆ ಶರಣು ವೆಂಕಟೇಶ36 ಕ್ಷೀರವಾರಿಧಿತನುಜೆಯೊಪ್ಪಿ ವೊತ್ತುವ ಪಾದ ನಾರದಾದಿಗಳೆಲ್ಲ ಪಿಡಿದು ನಲಿವಾ ಪಾದ ಶ್ರೀರಮಣಿ ಮುದದಿಂದ ಕಣ್ಗೊತ್ತುವ ಪಾದ ಮಾರಮೋಹಕ ನಿನ್ನ ಚರಣ ವೆಂಕಟೇಶ37 ಮಂಗಳ ಕಲ್ಯಾಣ ರೂಪಂಗೆ ಅದ್ಭುತಾಕಾರಂಗೆ ಮಾಲ್ಯಪೀತಾಂಬರಾಂಗದ ಶೋಭಿತಂಗೆ ಶಾಲ್ಯನ್ನ ಸಂಪ್ರೀತ ಶ್ರೀ ವೇಂಕಟೇಶಂಗೆ ಬಾಲ್ಯಕುಂದದವಂಗೆ ಜಯಮಂಗಳ 38 ಭಕ್ತಪರಿಪಾಲಂಗೆ ಜಗದಾದಿ ಮೂಲಂಗೆ ಭಕ್ತಿದಾತಾರಂಗೆ ರಮೆಯರಸಂಗೆ ಮುಕ್ತಿ ಸೌಖ್ಯವನೀವ ಶ್ರೀವೇಂಕಟೇಶಂಗೆ ಶಕ್ತಿ ಸ್ವರೂಪಂಗೆ ಶುಭಮಂಗಳ 39 ಶೇಷಾದ್ರಿ ವಾಸಂಗೆ ದಿನಕರ್ತ ಭಾಸಂಗೆ ಕ್ಲೇಷದಾರಿದ್ರ್ಯಾದಿ ಪರಿಹಾರ ಕರ್ತಂಗೆ ಶೇಷ ಪಂiÀರ್iಂಕಂಗೆ ಶ್ರೀ ಶ್ರೀನಿವಾಸಂಗೆ ದೋಷಾಪಹಾರಂಗೆ ಜಯಮಂಗಳ 40 ಅರವಿಂದ ವದನಂಗೆ ಅರವಿಂದ ಲೋಚನಗೆ ಅರವಿಂದನಾಭನಿಗೆ ಅರವಿಂದ ಗಾತ್ರಗೆ ಅರವಿಂದ ಪಾದನಿಗೆ ಅರವಿಂದ ಭೂಷನಿಗೆ ಅರವಿಂದ ಹಸ್ತಂಗೆ ಶುಭಮಂಗಳಂ 41 ಹಿಂದಿನಾಚಾರ್ಯರಿಗೆ ಮುನಿಮುಖ್ಯಭಕ್ತರಿಗೆ ಇಂದಿನಾ ಭೂದೇವಿ ನೀಳಾದಿ ವಧುಗಳಿಗೆ ಮಂದಾಕಿನೀಧರಗೆ ಇಂದ್ರ ದಿಕ್ಪಾಲರಿಗೆ ವಂದಿಪೆನು ಮಂಗಳಾಚರಣೆ ಮಾಡಿ 42 ಫಲಶ್ರುತಿ ಹನ್ನೆರಡು ಮಾಸವು ತಪ್ಪದೆ ಹಾಡಿದರೆ ಮುನ್ನಮಾಡಿದ ಪಾಪವೆಲ್ಲ ಕಳೆಯುವುದು ಪನ್ನಗಾರಿಧ್ವಜನ ಕರುಣೆಯೊದಗುವುದು ಬನ್ನಗುಡುವನರಕಬಾಧೆ ತಪ್ಪುವುದು 43 ಶ್ರಾವಣಾಶ್ವೀಜದಲಿ ಮಾರ್ಗಶಿರ ಮಾಸದಲಿ ಭಾವಭಕ್ತಿಯಲಿಂತು ಹಾಡುವರಿಗೆ ನೋವು ಕಾಲನಭಟರ ಕಾಟನಶಿಪುದು ಹರಿಯ ಭಾವುಕರು ಸತ್ಕರಿಸಿ ಕರೆದೊಯ್ವರು 44 ಅಪ್ಪ ಮಾಂಗಿರಿರಂಗನಪ್ಪಣೆ ಪಡೆದಿದನು ಒಪ್ಪಿಸುವೆನೈ ನಿನಗೆ ವೇಂಕಟೇಶ| ತಪ್ಪು ನೆಪ್ಪುಗಳನ್ನು ಮನ್ನಿಸೈ ಜಗದೀಶ ಒಪ್ಪದಿಂ ಸಕಲರನು ಪೊರೆ ವೇಂಕಟೇಶ|| 45
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
(2) ವೇದಾಂತದೇಶಿಕರು ವೇದಾಂತ ಗುರು ಸಾರ್ವಭೌಮ ಜ್ಞಾನ ಬೋಧಾನುಕೂಲ ನಿಸ್ಸೀಮ ಪ ಆದಿನೋಡು ಅನಾದಿಯೆನ್ನುತ ಬೋಧೆಗೊಳಿಸುಪದೇಶ ಮಾಡಿದ ಸಾಧುಶಿಖರನೆ ಸರ್ವತಂತ್ರನೆ ವಾದಭೀಕರ ವೈಷ್ಣವೋ ನಿಜ 1 ದ್ವಿದಳ ದಾಸನ ಕೈದಸಿದ ನಿಜ ಪದವಿನೋಡೆಂದೆನುತ ಮನಸನು ಕದಿವ ಕಳ್ಳರ ಕೊಂದು ಹಿಡಿಯೆಂ ದೊದಗಿತ್ತನು ಮೊದಲಿನಕ್ಷರಾ2 ಮೂರು ಬಿಡು ನೀ ಮೂರು ಹಿಡಿ ಕೇ ಳಾರು ಚಕ್ರವ ದಾಂಟಿ ತ್ರಿಕುಟಿಯ ಸೇರಿ ಸಂಪದವಾರಿಯೊಳಗದ್ದು ತೋರಿದ ಪರಮಾತ್ಮ ಪರತರ 3 ಎಂಟು ಹಾರಿಸಿ ಎಂಟುಲಿಪಿಯನು ಗಂಟು ಮಾಡೆಂದೆನುತ ನನ್ನೊಳ ಗುಂಟುಮಾಡಿಯು ತೋರಿದ ವೈ ಕುಂಠನಾಥನ ನನ್ನೊಳಗ ನಿಜ 4 ಶುದ್ಧ ಹಂಸನ ಮಾಡಿ ನನಗಾ ಚಿದ್ವಿವೇಕದ ಕವಚ ತೊಡಿಸಿದ ಸತ್ಸ್ವರೂಪಾಚಾರ್ಯನಹುದೆಲೊ ಮದ್ಗುರುವೆ ಶ್ರೀ ತುಲಶೀರಾಮಾ 5
--------------
ಚನ್ನಪಟ್ಟಣದ ಅಹೋಬಲದಾಸರು
(3) ತುಳಸಿರಾಮದಾಸರು ದಯಮಾಡಬಾರದೇಕೊ ದಾಸನೊಳೆ ನೀ ಪ ಭಯ ವೇನಿಹುದೊ ನಿನ್ನ ಭಜಕನಾದ ಮ್ಯಾಲೆ ದಯ ಸಾಕ್ಷಿಯೊಳು ಜಗತ್ರಯ ಪೂಜ್ಯವಂತ 1 ಸಾಧು ಶಿಖರನೆ ಬಾರೊ ಸಕಲಾಂತರವತೋರೊ ಪಾದ ಸೇವಕನು ನಾನಾದಮೇಲೆ ನಿಂತು ನೀ 2 ನಿತ್ಯೋತ್ಸವನೇ ದೇವಾ ನೀನೆ ಮಹಾನುಭಾವಾ ಪ್ರತ್ಯಕ್ಷಮಾದ ಮದ್ಗುರುವೇ ತುಲಸೀರಾಮಾ 3
--------------
ಚನ್ನಪಟ್ಟಣದ ಅಹೋಬಲದಾಸರು
(3) ರೇವಣ್ಣ ಸಿದ್ದೇಶ್ವರ ಯತಿಗಳು ಬೆಂಗಳೂರು ಭೇಟಿ ಯೋಗಿಶೇಖರನಾಗಿ ಬೆಳಗುವ ಜಗದೊಳಗೆ ತಾ ನಿಜ ಪ ನಾಗಭೂಷಣನಡಿಗಳಂ ಪಿಡಿದಾಗ ಹೊಂದಿದನದ್ವಯಂ ಪದ ಜೋಗಿ ಜಂಗಮದೊಡೆಯ ನಮ್ಮಯ ರೇವಣಾಶಿದ್ಧೇಶ್ವರನೆ 1 ತಾನಿಹ ಶೈವಗಿರಿಯೊಳು ದೀನಜನಮಂದಾರ ಮುನಿಮಹ 2 ಅಂತರಾತ್ಮನೊಳಿಂತು ಹೊಂದಿಪ ರೆಂತು ಲೋಕೋಪಕಾರ ರಾಗಿಯು ಅಂತು ದಯಮಾಡಿರುವ ನೋಡಿ ಅ ನಂತ ಮಹಿಮನೆ ರುದ್ರಮುನಿ 3 ತತ್ಸ್ವರೂಪನು ತೋರಿ ಭುವನಕೆ ಸತ್ಸಹಾಯಕನಾದ ನಮ್ಮಯ ಮತ್ಸ್ಯಮೂರುತಿ ಪ್ರಿಯನೆ ಮುನಿಮಹಾ 4 ತಿರ್ಗಿ ಲೋಕಕೆ ಬಾರದಂದದಿ ಸ್ವರ್ಗಲೋಕದೊಳಿರುವ ಮುನಿಮಹಾ 5 ಭುವನದೊಳಗವತರಿಸಿಯಿರುತಿಹ ಸುಮನ ಸತ್ಯಸಮಾಜ ಭೋಜನೆ ತಾ ನಿವನೆನೆ ಹೊಳೆವ ಮುನಿಮಹಾ 6 ಬರುವ ಭಕ್ತರಿಗಾಗಿ ತನ್ನೊಳ ಗಿರುವ ಪರತತ್ವವನು ಭಕ್ತರ ಕರದುಕೊಡುವುದು ಕಂಡುಕೊಳ್ಳಿರೊ ತರುಣಿಮಣಿಯನು ಧರಸಿ ಧರೆಯೊಳು 7 ಪ್ರಣವಲಿಂಗದೊಳೈಕ್ಯಮಾಗುವ ಕಂಚಿವರದನ ಪ್ರೀಯನಾಗಿಯು 8
--------------
ಚನ್ನಪಟ್ಟಣದ ಅಹೋಬಲದಾಸರು
(3) ಶಿವಸ್ತುತಿಗಳು ನಮೋ ಗಿರೀಶ್ವರ ನಮೋ ಸುರೇಶ್ವರ ನಮೋ ಧರೇಶ್ವರ ಗಂಗಾಧರಾ ಪ ರಮಾರಮಣ ಹರ ಕುಮಾರ ಪಿತಹರ ನಮಾಮಿ ಶಂಕರ ಗಂಗಾಧರಾ ಅ.ಪ ಬಾಲಾರ್ಕ ಸುರುಚಿರ ಬಾಲೇಂದುಶೇಖರ ಬಾಲಾಂಬಿಕಾ ವರಗಂಗಾಧರಾ 1 ಮಹಾಜಟಾಧರ ಮಹಾನಟೇಶ್ವರ ಮಹಾ ಮಹೇಶ್ವರ ಗಂಗಾಧರ 2 ಮಹಾ ಮಹಿಮರ ಮಹಾಚತುರ ಹರ ಮಹಾ ಮುನೀಶ್ವರ ಗಂಗಾಧರ 3 ಪರೇಶ ನಿರುಪಮ ಪರಾಕ್ರಮಾ ಹಿಮ ಗಿರೀಂದ್ರ ಧಾಮಾ ಗಂಗಾಧರ 4 ಸುರಾಸುರೋತ್ತಮ ಕರಾರ್ಚಿತಾ ಮಾಂ ಗಿರೀಶ ನಾಮಾ ಗಂಗಾಧರಾ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
(37ನೇ ವರ್ಷದ ವರ್ಧಂತಿ) ದಯದೋರೊ ದೀನಾನುಕಂಪಾ ಲಕ್ಷ್ಮೀಶಾ ಭಯಹಾರಿ ಭಾಮಾ ಮುಖಾಬ್ಜ ದಿನೇಶ ಪ. ಒಂದೊಂದುಪಾಧಿ ಸಂಬಂಧಿಸಿ ಬರುವಾ ಮಂದಾಭಿಲಾಷಗಳಿಂದ ನಿಂದಿಸುವ ಕುಂದ ನಾನೆಂದಿಗು ಹೊಂದದಂದದಲಿ ನಿಂದು ಮನದಿ ಪೂರ್ಣಾನಂದ ಸಂತಸದಿ 1 ನಾವಿಬ್ಬರೊಂದೆ ವೃಕ್ಷದಿ ಸೇರಿರುವೆವು ಕೋವಿದ ನೀನಾದರಿಂದ ಎನ್ನಿರವು ಜೀವ ಕರ್ತೃತ್ವಾದಿ ಬಳಲುವದೈತು ತಾವಕನೆಂಬ ಭಾವನೆ ದೂರ ಹೋಯ್ತು 2 ಮತ್ತೇಳು ಮೂವತ್ತು ವತ್ಸರಗಳನು ಎತ್ತಿನಂದದಿ ಕಳೆವುತ್ತ ಬಾಳಿದೆನು ಎತ್ತಾಲು ಹೊಂದದೆ ಎರಡೇಳು ವಿಧದ ಭಕ್ತಿಯ ಬಯಸುವ ಭಯ ದೂರ ವರದ 3 ಮನಸಿನ ದೌರಾತ್ಮ್ಯವನು ಪೇಳಲಾರೆ ತನುವ ದಂಡಿಸಿ ಕರ್ಮಗಳ ತಾಳಲಾರೆ ಅನುಕೂಲವಲ್ಲದಿಂದ್ರಿಯಗಳನೆಲ್ಲ ವನಜಾಕ್ಷ ನಾನೆಂತು ಗೆಲ್ಲುವೆ ಶ್ರೀನಲ್ಲ 4 ಈರೇಳು ಭುವನಾಧಿನಾಥ ನಿನ್ನನ್ನು ಸೇರಿದೆ ಶೇಷಾದ್ರಿ ಶಿಖರವಾಸ ಸಾರಿದೆ ಸರ್ವಾಭೀಷ್ಟದ ಶ್ರೀನಿವಾಸ 5
--------------
ತುಪಾಕಿ ವೆಂಕಟರಮಣಾಚಾರ್ಯ
(ಅನಂತಚತುರ್ದಶಿಯ ದಿನದ ಪ್ರಾರ್ಥನೆ) ಪದ್ಮನಾಭ ಪರಿಪಾಲಿಸು ದಯದಿಂದ ಪದ್ಮಜಾದಿ ವಂದ್ಯ ಪರಮ ದಯಾಳೊ ಪದ್ಮಿಯಳರಸ ಹೃತ್ಪದ್ಮನಾಮಕ ಸ್ವರ್ಣ ಸದ್ಮ ವೃತ್ತಿಪದಪದ್ಮವ ತೋರೊ ಪ. ಚಿಂತಿತದಾಯಕ ಸಂತರ ಕುಲದೈವ ಕಂತು ಜನನಿಯೊಡಗೂಡಿ ನೀನು ನಿಂತು ಎನ್ನಲಿ ಕೃಪೆ ಮಾಡೆಂದು ನಮಿಪೆ ಧು- ರಂತ ಮಹಿಮ ನಿನ್ನ ಚರಣಾಬ್ಜಯುಗಲಾ 1 ಆದಿ ಮಧ್ಯಾಂತವಿದೂರ ನಿನ್ನಲಿ ಮಹ ದಾದಿ ತತ್ವಗಳೆಲ್ಲ ನಿಂತಿಹವು ಆದಿ ಭೌತಿಕ ಮೊದಲಾದ ತಾಪಗಳನ್ನು ಶ್ರೀದ ನೀ ಬಿಡಿಸಲು ಸದರವಾಗಿಹವು 2 ಒಂದರಿಂದೊಂದಾದರಿಂದ ಮೂರು ಮೂರ್ತಿ ಇಂದಿರೆ ಸಹಿತಾವಿರ್ಭೂತನಾಗಿ ಮುಂದಿನ ಮಹದಾದಿ ತತ್ವವ ನಿರ್ಮಿಸಿ ನಿಂದನಂತಾಸಂತರೂಪನಾದವನೆ 3 ಭವ ಚಕ್ರದೊಳು ತಂದು ನವ ನವ ಕರ್ಮಗಳನೆ ಮಾಡಿಸಿ ಅವರ ಯೋಗ್ಯತೆ ಮೀರದಲೆ ಫಲಗಳನಿತ್ತು ನಿತ್ಯ ತೃಪ್ತನಾಗಿರುವಿ 4 ಮಛ್ವಾದ್ಯನಂತವತಾರಗಳನೆ ಮಾಡಿ ಸ್ವೇಚ್ಛೆಯಿಂದ ಸುಜನರ ಸಲಹಿ ಕುಚ್ಛಿತ ಜನರಿಗೆ ತುಚ್ಛಗತಿಯನೀವೆ ಸ್ವಚ್ಛ ಬ್ರಮ್ಹಾದಿಕ ವಿವ್ಛಾ(?)ವಿಷಯನೆ 5 ನಾನಾವತಾರದಿ ನಂಬಿದ ಸುರರಿಗೆ ಆನಂದವಿತ್ತು ರಕ್ಷಿಪೆ ಕರುಣದಿ ದಾನವರಿಗೆ ಅಧ:ಸ್ಥಾನವ ನೀಡುವಿ ಮಾನವರನು ಮಧ್ಯಗತರ ಮಾಡಿಸುವಿ 6 ಹಿಂದೆ ಮುಂದಿನ ಭವದಂದವ ತಿಳಿಯದ ಮಂದಾಗ್ರೇಸರ ನಾನಾದೆಂಬುದನು ಅಂಧಕರಾರಣ್ಯದಿಂದ ಮೂಢನಾದಂ ದಿಂದ ಬಿನ್ನೈಪೆನು ಇಂದಿರಾಧವನೆ 7 ಮಾಡುವ ಕರ್ಮವು ನೋಡುವ ವಿಷಯಗ- ಳಾಡುವ ಮಾತು ಬೇಡುವ ಸೌಖ್ಯವು ನೀಡುವ ದಾನವೋಲ್ಯಾಡುವ ಚರ್ಯವ ನೋಡಲು ತಾಮಸ ಪ್ರಹುಡನಾಗಿಹೆನು 8 ಆದರು ನಿನ್ನಯ ಪಾದಾರವಿಂದ ವಿ- ನೋದ ಕಥಾಮೃತ ಪಾನದೊಳು ಸ್ವಾದ ಲೇಶದಾದರ ತೋರ್ಪದ- ನಾದಿ ಮೂರುತಿ ನೀನೆ ತಿಳಿಸಬೇಕದನೂ 9 ಇದರಿಂದಲೇ ಮುಂದೆ ಮದನನಯ್ಯನೆ ನಿನ್ನ ಪದವ ಕಾಣುವೆನೆನುತೊದರುವೆನು ಹೃದಯ ಮಂಟಪದಿ ನೀ ಹುದುಗಿರುವುದರಿಂದ ಕದವ ತೆರೆದು ತೋರೊ ವಿಧಿಭವವಿನುತಾ 10 ಕನ್ನೆ ಸುಶೀಲೆಯ ಕರಸೂತ್ರ ರೂಪದ ನಿನ್ನ ತಿಳಿಯದೆ ಕೌಂಡಿಣ್ಯನಂದು ಮನ್ನಿಸದಿರೆ ಮದ ಮೋಹಗಳೋಡಿಸಿ ನಿನ್ನ ರೂಪವ ತೋರ್ದ ನಿಜಪೂರ್ಣ ಸುಖದಾ 11 ಬ್ರಹ್ಮಾದಿಗಳನೆಲ್ಲ ನಿರ್ಮಿಸಿ ರಕ್ಷಿಸಿ ತಮ್ಮ ತಾವರಿಂiÀiದ ನಿಮ್ಮ ಸ್ತುತಿಪರೆ ಕು- ಕರ್ಮಿ ನಾನೆಂದಿಗಾದರೂ ಶಕ್ತನಹುದೆ 12 ಅದು ಕಾರಣದಿಂದ ಪದುಮನಾಭ ನಿನ್ನ ಪದ ಕಮಲಗಳಲಿ ರತಿಯನಿತ್ತು ಸದರದಿ ಸಲಹಯ್ಯ ವಿಧುಶೇಖರಾರ್ಚಿತ ಮದನನಯ್ಯ ಮರುದಾದಿ ವಂದಿತನೆ 13 ದೋಷರಾಶಿಗವಕಾಶನಾದರೂ ಯೆನ್ನ ಶ್ರೀಶ ನಿನ್ನ ದಾಸದಾಸನೆಂದು ಘೋಷವಾದುದರಿಂದ ಪೋಷಿಸಬೇಕಯ್ಯ ಶೇಷಗಿರೀಶ ಸರ್ವೇಶ ನೀ ದಯದಿ 14
--------------
ತುಪಾಕಿ ವೆಂಕಟರಮಣಾಚಾರ್ಯ
(ಅಮ್ಮೆಂಬಳದ ಕುರ್ನಾಡು ಸೋಮನಾಥ) ಕಾಮಿತ ಫಲದಾತ ಕಟ್ಟೆಯ ಸ್ವಾಮಿ ಸೋಮನಾಥಾ ಪೂಜೆಯ ನಿರುತದಿ ಕೊಳ್ಳುವ ಪ. ಅಂಬಿಕೆಯನು ವರಿಸಿ ಗಜಚ ರ್ಮಾಂಬರವನು ಧರಿಸಿ ಶಂಬರಾರಿಯನು ಸುಲಭದಿ ಗೆಲಿದಂ- ಮ್ಮೆಂಬಳಜನರನು ನಂಬಿಸಿ ಸಲಹುವ 1 ಒಡೆಯನು ನೀನೆಂದೂ ಊರಿನ ಬಡ ಜನರುಗಳಿಂದೂ ಕೊಡುವ ಪೂಜೆಯನು ಮಡದಿಸಮೇತೀ- ಗಿಡದ ಬುಡದಿ ಕೊಂಬುಡುಪತಿಶಿಖರ 2 ದೋಷಗಳನು ತರಿವಾ ಪನ್ನಗ ಭೂಷಣನೀ ಬರುವಾ ತೋಷಪಡುವ ಸಜ್ಜನರಿಗೆ ಶೇಷಗಿ ರೀಶನು ಸಕಲಭಿಲಾಷೆಯ ಸಲಿಸುವ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಆ). ವಿವಿಧ ದೇವತಾ ಸ್ತುತಿ ರುದ್ರದೇವರು ಬೇಡಿಕೊಂಬೆನು ನಾನು ರೂಢಿಗೊಡೆಯನಾಗಿ ಆಡುವನಂತೇಶನಿದಿರೊಳು ಮೂಡಿದ ಚಂದ್ರಶೇಖರನ ಪ ಒಪ್ಪುವ ಶಿರದೊಳಗೆ ಸರ್ಪನ ಮೇಲೊರಗಿಪ್ಪನ ಮಗಳನ್ನು ಒಪ್ಪದಿ ಧರಿಸಿದನ 1 ಮುಪ್ಪುರಹರನೆಂದು ಮೂರು ದೃಷ್ಟಿಗಳುಳ್ಳ ಕಪ್ಪುಕೊರಳ ದೇವನ ರೌಪ್ಯದ ಪುರವರಧೀಶನೆಂದೆನಿಸಿಯೆ ಇಪ್ಪಂಥ ಪರಶಿವನ 2 ಗಿರಿಯ ನಂದನೆಯನ್ನು ಉರದೊಳು ಧರಿಸಿಯೆ ಕರಿಚರ್ಮ ಪೊದ್ದವನ ಗರುಡನ ಭಯಕಂಜಿ ಮೊರೆಹೊಕ್ಕ ಶರಣನ ಕರುಣದಿ ಕಾಯ್ದವನ 3 ಉರಗಾಭರಣವ ಸುತ್ತಿಕೊಂಡಿರುವಂಥ ಗರುವ ದೇವರ ದೇವನ ಚರಣ ಸೇವಕರನ್ನು ಸ್ಥಿರವಾಗಿ ಸಲುಹುವ ಬಿರುದುಳ್ಳ ಪರಶಿವನ 4 ದ್ವಾರಕಿವಾಸನಾಚಾರ್ಯನ ಮುಖದಿಂದ ಸೇರಿಸಿಕೊಂಡವನ ಧಾರುಣಿ ಸುರರಿಗೆ ಶೈವ ವೈಷ್ಣವವೆಂಬ ಚಾರವ ತೋರಿದನ 5 ಮೀರಿದ ದಾರಿದ್ರ್ಯವೆಂಬ ವೃಕ್ಷದ ಬೇರ ಹಾರಿಸಿ ತರಿದವನ ಸಾರಿದ ಭಕ್ತರ ಸಲುಹುತ್ತ ಮುಂದಣ ದಾರಿಯ ತೋರ್ಪವನ 6 ಬತ್ತೀಸ ಗ್ರಾಮಕ್ಕೆ ಕರ್ತನೆಂದೆನಿಸಿಯೆ ಅರ್ತಿಯಿಂ ನಲಿವವನ ಪಾರ್ಥಸಂಗರದೊಳು ಮೆಚ್ಚಿಯೆ ಶರವಿತ್ತು ಕೀರ್ತಿಯ ಪೊತ್ತವನ 7 ಸ್ಮಾರ್ತರ ನಿಂದಿಸಿ ರಚಿಸುವ ಯಾಗಕ್ಕೆ ಮೃತ್ಯುವನೊಟ್ಟಿದನ ಮೃತ್ಯುಂಜಯನೆಂದು ಮೊರೆಹೊಕ್ಕ ನರರ ಕಾ- ಯುತ್ತಲಿರ್ಪವನ 8 ಕೊಡಲಿಯ ಪಿಡಿದವ ಪಡೆದಿಹ ಕ್ಷೇತ್ರದಿ ಉಡುಪಿನ ಸ್ಥಳವೆಂಬುದು ಪಡುವಲು ಮೂಡಲು ಎರಡಾಗಿ ತೋರುವ ಒಡಲೊಂದೆ ಮೃಡನೊಬ್ಬನೆ 9 ಕಡಗೋಲ ಪಿಡಿದಿಹ ಕೃಷ್ಣ ನಿಂತದರಿಂದ ಪೊಡವಿಯುತ್ತಮವಾದುದು ಬಡವರ ಬಡತನ ಉಡು (ಪಿಯ)1 ಕಾಣಲು ಸಡಲಿತು ಸುಲಭದಲಿ 10 ಚಿಂತೆಗಳೆನ್ನನು ಭ್ರಾಂತಿ(ಬ)2 ಡಿಸುತಿದೆ ಅಂತಕಾಂತಕ ಲಾಲಿಸು ಪಂಥವ ಮಾಡದೆ ಏಕಾಂತ ಭಕ್ತರಿಗೆಲ್ಲ ಸಂತೋಷವನು ಪಾಲಿಸು 11 ಪಿಂತೆನ್ನ ಕೃತ್ಯ ಬೆನ್ನಾಂತು ಬಂದರು ಇಭ- ವಾಂತದಿ ನೀ ಹಾರಿಸು ಸಂತತ ಎನ್ನನು ಸಲಹಯ್ಯ ಪಾರ್ವತೀ ಕಾಂತನೆ ಕಡೆ ಸೇರಿಸು 12 ಹರ ಹರ ಮಹಾದೇವ ಪರದೈವ ಶಂಕರ ಮೆರೆವ ಆ ವೃಷಭಧ್ವಜ ವರದ ಕೃತ್ತೀವಾಸ ಸ್ಮರನಾಶ ದೇವೇಶ ಸಿರಿಕಂಠ ಪುರಹರನೆ 13 ಗಿರಿಯ ಮಗಳ ಗಂಡ ಉರಿಗಣ್ಣ ಮಹಾರುದ್ರ ಸ್ಥಿರವಾದ ಶಿವಬೆಳ್ಳಿಯ ಪುರಪತಿ ಅನಂತೇಶ ವರಾಹತಿಮ್ಮಪ್ಪನ ಸರಿಯೆಂದು ತೋರ್ಪವನ14
--------------
ವರಹತಿಮ್ಮಪ್ಪ
(ಈ) ಯತಿವರ್ಯರು ಶ್ರೀ ವ್ಯಾಸರಾಯರ ಸ್ತುತಿ ಇದಿರ್ಯಾರೊ ಗುರುವೆ ಸರಿಯಾರೊ ಯತಿಗೆ ಸಮರ್ಯಾರೊ ಪ ದುರುಳ ವಾದಿಗಳನ್ನು ಮರುಳು ಮಾಡೋರನ್ನ ತರಿದಟ್ಟಿ ಚಂದ್ರಿಕೆ ಗ್ರಂಥವ ರಚಿಸಿ ಧರಣಿ ಸುರರ ಪರಿವೃಢರ ಸುನಿಕರಕೆ ಪರಿಪರಿಯಲಿ ಉಪದೇಶಿಸುತಿಪ್ಪಗೆ 1 ಕನಕ ಕಶಿಪುತನಯನ ಘನ ಅಂಶದಿ ಫಣಿಗಣ ರಮಣನಾವೇಶದಿ ಪೊಳೆಯುತ ದಿನದಿನದಲಿ ಹರಿಮನ ತಣಿಸುತಲಿಹ ಘನ ಮಹಿಮನೆ ಶ್ರೀ ಯತಿಕುಲತಿಲಕಾ 2 ಉದ್ದಂಡ ವಿತಂಡಕೆ ಗಂಡುಸಿಂಹ ತರ್ಕದೆ ತಾಂಡವ ಯುಕ್ತಿಯ ದಂಡುಗಳನೆ ಕಟ್ಟಿಕೊಂಡು ತಾರ್ಕಿಕರ ಷಂಡಗಳನೆ ಖಂಡಿಸುತಿಹ ಯತಿಯೆ 3 ಬ್ರಹ್ಮಣ್ಯತೀರ್ಥರ ಕರಕಮಲದಿ ಪುಟ್ಟಿ ಬ್ರಹ್ಮಜನಕ ನರಸಿಂಹ ಮೂರುತಿಯ ಹೃ- ದ್ಗಂಹ್ವರದಲಿ ಧ್ಯಾನಿಸುತಿಹ ವ್ಯಾಸರಾ ಹೃದಯಾಂಬುಧಿಯೊಳು ಮೆರೆವಗೆ 4 ದಶದಿಶೆಯಲಿ ದಶರಥಸುತ ಮಹಿಮೆಯ ಕುಶಲದಿಂದಲಿ ಸಭೆಯೊಳಗೆ ಸ್ಥಾಪಿಸುತ ಹೊಸ ಹೊಸ ಬಿರುದು ಸಂದ್ಹೆಸರುವೆತ್ತಿರುವಂಥ ವಸುಧಿಯೊಳಗೆ ಸುಕರ ಸುಚರಿತೆಗೆ 5 ಹೊಳೆಯುತಲಿರುವ ರುಕ್ಮಿಣಿಪತಿ ಕೃಷ್ಣನು ನಲಿಯುತ ಕುಣಿಕುಣಿದಾಡುತಲಿಪ್ಪನು ಥಳಥಳಿಸುವ ರಾಮ ವೇದವ್ಯಾಸರು ನಿಮ- ಗಿಳೆಯೊಳಮೂಲ್ಯ ಪ್ರಸಾದವನೀವರು 6 ಅಡಿಗಡಿಗತಿ ದೃಢತರ ಯುಕ್ತಿಗಳಿಂದ ಸಡಗರದಿಂದಲಿ ಬಿಡದೆ ನುಡಿಯುತ ನಡದದ್ವೈತದಡವಿಯೊಳಗೆ ಪೊಕ್ಕು ಕೆಡಗುತಿಹ ನ್ಯಾಯಾಮೃತಾಚಾರ್ಯರಿಗೆ 7 ಶ್ರೀದವಿಠಲಗತಿ ಪ್ರೀಯರಾದ ಶ್ರೀ- ಪಾದರಾಯರಲಿ ಓದಿ ಗ್ರಂಥಗಳ ವಾದಿರಾಜ ವಿಜಯೀಂದ್ರ ಪ್ರಮುಖರಿಗೆ ಆದರದಲಿ ಪಾಠ ಹೇಳುತಲಿಪ್ಪಗೆ 8
--------------
ಶ್ರೀದವಿಠಲರು
(ಈ) ಸರ್ವದೇವತಾಸ್ತುತಿಗಳು 1. ಶಂಕರ ಭಾಗವತಾಗ್ರೇಸರಾ ಶಿವಶಂಕರ ಭಾಗವತ ಪ್ರಿಯಂಕರ ಪ ಯೋಗಿ ಹೃತ್ಪದ್ಮಸ್ಥಿತ ಆಗಮನುತ ವಿಶ್ವನಾಥ ಶ್ರೀಗಣಪತಿ ಷಣ್ಮುಖ ಪಿತ ಭಾಗ್ಯದಾತ ಪ್ರಖ್ಯಾತ ಅ.ಪ ಬಾಲಚಂದ್ರಶೇಖರ ಹರ ಭವಹರ ಕಾಲಕಾಲ ಕಲ್ಮಷಹರ ಕರುಣಾಕರ ಶೂಲಪಾಣಿ ಡಮರುಗಾಕರ ಬಾಲಗೊಲಿದ ಭಸ್ಮಧರ ಶ್ರೀಲಲಿತಾ ಮನೋಹರ ನೀಲಕಂಠ ಮಹೇಶ್ವರ 1 ರಾಮನಾಮ ಬೋಧಕ ಭಕ್ತಪ್ರೇರಕ ಪ್ರೇಮರೂಪ ತ್ರ್ಯಂಬಕ ತ್ರಿಪುರಾಂತಕ ವಾಮದೇವ ವರಗಿರೀಶ ಕಾಮವೈರಿ ಕೃತ್ತಿವಾಸ ಶ್ರೀಮಜ್ಜಾಜಿಕೇಶವ ಸ್ವಾಮಿ ಭಜನದಾಯಕವರ 2
--------------
ಶಾಮಶರ್ಮರು
(ಊ) ಲೋಕನೀತಿ ತತ್ವ ಕೃತಿಗಳು ಅನುಭವವಿಲ್ಲದೇ ಅರಸಿದಡಾಹುದೇ ಆ ಹರಿದರುಶನವೂ ಪ ಮನುಮುನಿಯಾಗಲೀ ಮಾನ್ನವರಾಗಲೀ ಸನಮುಖರಾಗಲೀ ಸಾಧುಗಳಾಗಲೀ 1 ಅರಸು ತಾನಾಗಲೀ ಆಣಯತನಾಗಲಿ ಸುರಮಣಿ ಸೋಲಿಪ ಸುಂದರನಾಗಲಿ 2 ಪಂಡಿತನಾಗಲೀ ಪಾಮರನಾಗಲೀ ಅಂಡಜಗಮನನಾಗಲೀ ಶ್ರೀಗುರುವೆ ತುಲಶೀರಾಮಾ 3
--------------
ಚನ್ನಪಟ್ಟಣದ ಅಹೋಬಲದಾಸರು
(ಕೋಲ ಹಾಡು) ಕೋಲು ಕೋಲೆನ್ನ ಕೋಲೆ ಕೋಲು ಕೋಲೆನ್ನ ಕೋಲೆ ಕೋಲು ಶ್ರೀ ರಾಮನ ಬಲಗೊಂಬೆ ರನ್ನದ ಪ. ಭೂಮಿಯೊಳಗೆ ಸೀತಾರಾಮನು ಜನಿಸಲು ಸೀಮೆಯ ನಾರಿ ಜನರೆಲ್ಲ ರನ್ನದಾ ಸೀಮೆಯ ನಾರಿ ಜನರೆಲ್ಲ ನೆರೆದು ಸು ಪ್ರೇಮದಿ ಪಾಡಿ ನಲಿದರು ರನ್ನದಾ 1 ಕುಂಡಲ ಕಂಠ ಮಾಲೆಯ ನೊಸಲಾ ತಿಲಕವು ರನ್ನದ ಮಾಲೆಯ ತಿಲಕನೊಸಲೊಳಗಿರಿಸಿದ ಬಾಲೇರು ಕೂಡಿ ನಲಿವುದ ರನ್ನದ 2 ಸಾರಸಂಭವ ಕ್ಷೀರ ವಾರುಧಿ ತಡಿಯಲ್ಲಿ ಭೋರನೆ ಬಂದು ಸ್ತುತಿಸಲು ರನ್ನದ ಭೋರನೆ ಬಂದು ಸ್ತುತಿಸಲು ರಾಮವ ತಾರನಾಗುವೆನೆಂದು ನುಡಿದನು ರನ್ನದ 3 ಪೃಥಿವಿ ನಾಯಕ ದಶರಥನಲ್ಲಿ ಜನಿಸಿದ ಕಥನೀಯ ಸುಗುಣ ಸಂಭೃತ ರಾಮರನ್ನದ ಕಥನೀಯ ಸುಗುಣ ಸಂಭೃತ ರಾಮ ಕೌಸಲ್ಯ ಸುತನೆಂದು ನಗುತ ಮನ್ಮಥನ ಜನಕನಿಗೆ 4 ಕೌಶಿಕ ಮುನಿಯ ಮಹಾಶೆ ಪೂರಿಸಿ ಯಜ್ಞ ಘಾಸಿ ಮಾಡಿದ ರಾಮ ಘಾಸಿ ಮಾಡಿದ ಜಗ ದೀಶನು ಸಕಲಾಭಿಲಾಷಾ ಪೂರಿಪೆನೆಂದು 5 ಪಾದ ಪಲ್ಲವವಿರಿಸುತ ಕಲ್ಲಾದ ಶಿಲೆಯನ್ನಹಲ್ಯೆ ಮಾಡಿದ ರಾಮ ಕಲ್ಲಾದ ಶಿಲೆಯನ್ನಹಲ್ಯೆ ಮಾಡಿದ ಸಿರಿ ನಲ್ಲ ಶಿವನ ಮಹ ಬಿಲ್ಲ ಮುರಿದನು 6 ಭೂತಳಾಧಿಪಜನವ್ರಾತಮಂಡಲದೊಳು ಸೀತೆಯನೊಲಿಸಿ ಶುಭದಿಂದ ರನ್ನದಾ ಸೀತೆಯನೊಲಿಸಿ ಶುಭದಿಂದ ಸ್ವಜನ ಸ- ಮೇತಾಯೋಧ್ಯಗೆ ಬಂದ ಖ್ಯಾತ ರಾಘವನಿಗೆ 7 ಜನಕನ ವಾಕ್ಯದಿಂದ ಜನಕಾತ್ಮಜೆಯ ಕೂಡಿ ವನಕಾಗಿ ನಡೆತಂದ ವನಜಾಕ್ಷ ರನ್ನದಾ ವನಕಾಗಿ ನಡೆ ತಂದ ವನಜಾಕ್ಷನಲ್ಲಿ ಶೂ- ರ್ಪನಖಿಯ ಮಾನಭಂಗವನು ಗೈದ ರನ್ನದಾ 8 ಖರದೂಷಣಾದಿ ದೈತ್ಯರ ಕೊಂದು ಮಾರೀಚ ದುರುಳನ ಸದೆದಾ ಧುರಧೀರ ರನ್ನದ ದುರುಳನ ಸದೆದಾ ಧುರಧೀರ ಶ್ರೀ ರಾಮ ಪರಿಪಾಲಿಸೆಮ್ಮನು ಕರುಣಾಳು ರನ್ನದ 9 ಪಾತಕಿ ದಶಕಂಠ ಸೀತೆಯನೊಯ್ದನೆಂದು ಕಾತರಗೊಂಡಂತೆ ಜನಕೆಲ್ಲ ರನ್ನದಾ ಕಾತರಗೊಂಡಂತೆ ಜನಕೆಲ್ಲ ತೋರ್ದ ರಘು ನಾಥನ ಮೊಖಲೀಲೆ ಖ್ಯಾತಿಯ ಪೊಗಳುತ10 ಮಂದರಾವಣ ಮೋಸದಿಂದ ಕೆಡಹಿದಂಥ ತಂದೆಯ ಸಖನಿಗಾನಂದ ಪದವನಿತ್ತ ತಂದೆಯ ಸಖನಿಗಾನಂದವ ಸಲಿಸಿ ಕ- ಬಂಧನ ದೈತ್ಯಯೋನಿ ಇಂದ ಬಿಡಿಸಿದಗೆ 11 ಬೇಡತಿ ಶಬರಿಯನ್ನು ನೋಡಿ ರಕ್ಷಣೆ ಮಾಡಿ ಪ್ರೌಢ ಮಾರುತಿಯಿಂದ ಕೂಡಿದ ರನ್ನದಾ ಪ್ರೌಢ ಮಾರುತಿಯನ್ನು ಕೂಡಿ ರವಿಜನ ಕಾ ಪಾಡಿ ವಾಲಿಯ ವಧೆ ಮಾಡಿದ ರನ್ನದಾ 12 ಪ್ರಾಣಾತ್ಮಜನು ನಾಗವೇಣಿಯ ವಾರ್ತೆಯ ತಾರೆ ಜಾಣತನದಲಿದ ಕ್ಷೀಣಾಂಬುಧಿಯೊಳಂದು ಜಾಣತನದಲಿದ ಕ್ಷೀಣಾಂಬುಧಿಯೊಳು- ಪ್ರ ವೀಣತನದಿ ಸೇತು ಕಾಣಿಸಿದವನಿಗೆ 13 ದೋಷಿ ರಾವಣನನು ನಾಶಗೈದಸುರಾರಿ ನೀಶ ನೀನೆನುತ ವಿಭೀಷಣಗೊರವಿತ್ತಾ ಈಶ ನೀನೆನುತಲಿವಿಭೀಷಣಗೊರವಿತ್ತ ವೈರಿ ಜಗದೀಶ ರಾಮನಿಗೆ 14 ಸೃಷ್ಟಿಜಾತೆಯ ಕೂಡಿ ಪಟ್ಟಾಭಿಷೇಕಗೊಂಡು ಶಿಷ್ಟ ರಕ್ಷಕನಾದ ಸಿರಿನಾಥ ರನ್ನದಾ ಶಿಷ್ಟ ರಕ್ಷಕನಾದ ಸಿರಿನಾಥ ವೆಂಕಟ ಬೆಟ್ಟದೊಡೆಯ ನಮ್ಮಭೀಷ್ಟವ ಕೊಡುವನ 15
--------------
ತುಪಾಕಿ ವೆಂಕಟರಮಣಾಚಾರ್ಯ