ಒಟ್ಟು 16 ಕಡೆಗಳಲ್ಲಿ , 12 ದಾಸರು , 16 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ವಾಮಿ ನೀನೆ ಸಾರ್ವಭೌಮ ಶ್ರೀ ರಘುರಾಮ ಸೋಮಶೇಖರ ಪ್ರಿಯ ದಿವ್ಯ ನಿನ್ನ ನಾಮ ಧ್ರುವ ಕಾಕುಸ್ಥತಿಲಕ ಕಾರುಣ್ಯನಿಧಿ ಕೃಪಾಲ ಪ್ರಕಟ ಪ್ರಖ್ಯಾತಲಿಹ ಸತ್ಯಶೀಲ ನಾಕಜರ ಸೆರೆಬಿಡಿಸ್ಯಾದೆ ಸಾನುಕೂಲ ಸಕಲ ಸುಖದೀವ ಮೂಲೋಕಪಾಲ 1 ಖರದೂಷಣಾರಿ ಶರಣಾಗತರ ಸಹಕಾರಿ ಸರ್ವರಾಧಾರಿ ಕೋದಂಡ ಧಾರಿ ದುರುಳ ದುಷ್ಟ ಜನಸಂಹಾರಿ ವರಪೂರ್ಣವೀವ ಪರಮ ಉದಾರಿ 2 ಅನುದಿನದಲಿ ನಿನ್ನ ನಡಿನುಡಿಗಳೊಂದವೆ ನೇಮ ಅನಂತಗುಣ ಪೂರ್ಣಾನಂದ ಮಹಮಹಿಮ ದೀನ ಮಹಿಪತಿ ಅತ್ಮಾರಾಮ ಪೂರಿತ ಕಾಮ ಭಾನುಕೋಟಿ ತೇಜ ಘನದಯ ನಿಸ್ಸೀಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು