ಒಟ್ಟು 21 ಕಡೆಗಳಲ್ಲಿ , 14 ದಾಸರು , 20 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಹರಿ ಹರಿಯೆನ್ನಿ ಮಂದರಧರನೆ ಗತಿಯೆನ್ನಿ ದೀನ ದಯಾಕರನು ದಿವಿಭುವಿ ಪ. ಮಾನ ಭರಾಕರನು ನೀನೆಂದೊರವರನು ದುರಿತ- ಹೀನರ ಮಾಡುವನು 1 ತರಳನ ಮೊರೆ ಕೇಳಿ ವರ ನರ ಹರಿಯ ರೂಪವ ತಾಳಿ ದುರುಳ ಹಿರಣ್ಯಕನಾ ಕರುಳನು ಕೊರಳೊಳು ಧರಿಸಿದನಾ 2 ಗಜರಾಜನ ಕಾಯ್ದಾ ಬಾಣನ ಭುಂಜ ಪುಂಜವ ಕೊಯ್ದಾ ಗಜಪುರವರಗೊಲಿದಾ ಚರಣಾಂ- ಬುಜವೀವುತ ನಲಿದಾ 3 ನೆನೆದಲ್ಲಿಗೆ ಬರುವಾ ನಂಬಿದ ಜನರ ಸಂಗಡವಿರುವಾ ಅನುಗಾಲವು ಪೊರೆವಾ ಮನಸಿಜ ಜನನಿಯನಪ್ಪಿರುವಾ 4 ದಾಸರ ಸಲಹುವದು ಶೇಷ ಗಿ- ರೀಶನ ಮಹಾ ಬಿರುದು ದೋಷಗಳನು ತರಿದು ಈರೆರ- ಡಾಸೆ ಪೂರಿಪ ನೆರೆದೂ 5
--------------
ತುಪಾಕಿ ವೆಂಕಟರಮಣಾಚಾರ್ಯ
ಆರಿದ್ದರೇನಯ್ಯ ನೀನಲ್ಲದೆನಗಿಲ್ಲಕಾರುಣ್ಯ ನಿಧಿ ಹರಿಯೆ ಕೈಯ ಬೆಡಬೇಡ ಪದುರುಳಕೌರವನಂದು ದ್ರುಪದಜೆಯ ಸೀರೆಯನುಕರದಿಂದ ಸೆಳೆಯುತಿರೆ ಪತಿಗಳೆಲ್ಲ ||ಗರಹೊಯ್ದರಂತಿದ್ದರಲ್ಲದೇ ನರಹರಿಯೆಕರುಣದಿಂ ನೀನಲ್ಲದಾರು ಕಾಯ್ದವರು 1ಅಂದು ನೆಗಳಿನ ಬಾಧೆಯಿಂದ ಗಜರಾಜನನುತಂದೆ ನೀ ವೈಕುಂಠದಿಂದ ಬಂದು ||ಇಂದಿರೇಶನೆ ಚಕ್ರದಿಂದ ನೆಗಳಿನ ಬಾಯಸಂಧಿಯನು ಸೀಳಿ ಪೊರೆದೆಯೆಲೊ ನರಹರಿಯೇ 2ಅಜಮಿಳನು ಕುಲಗೆಟ್ಟು ಕಾಲದೂತರು ಬರಲುನಿಜಸುತನ ಕರೆಯಲವನತಿ ವೇಗದಿ ||ತ್ರಿಜಗದೊಡೆಯನೆಪುರಂದರವಿಠಲ ಕರುಣದಲಿನಿಜದೂತರನು ಕಳುಹಿ ಕಾಯ್ದೆ ಗಡ ಹರಿಯೇ 3
--------------
ಪುರಂದರದಾಸರು
ದೇವದೇವೇಶ ಶ್ರೀ ಹರಿಯಲ್ಲದೆ ಪ.ಆವ ತಂದೆಯು ಸಲಹಿದನು ಪ್ರಹ್ಲಾದನಆವ ತಾಯಿ ಸಲಹಿದಳು ಧ್ರುವರಾಯನಆವ ಸುತ ಸಲಹಿದನು ಆ ಉಗ್ರಸೇನನಜೀವರಿಗೆ ಪೋಷಕನು ಹರಿಯಲ್ಲದೆ 1ಆವ ಬಂಧುವು ಸಲಹಿದನು ಗಜರಾಜನನುಆವಪತಿ ಕಾಯ್ದ ದ್ರೌಪದಿಯಮಾನ ||ಆವ ಸೋದರರು ಸಲುಹಿದರು ವಿಭೀಷಣನಜೀವರಿಗೆ ದಾತೃ ಶ್ರೀ ಹರಿಯಲ್ಲದೆ 2ಆವನಾಧಾರ ಅಡವಿಯೊಳಿಪ್ಪ ಮೃಗಗಳಿಗೆಆವ ರಕ್ಷಕ ಪಕ್ಷಿಜಾತಿಗಳಿಗೆಆವ ಪೊಷಕನು ಗರ್ಭದಲ್ಲಿದ್ದ ಶಿಶುಗಳಿಗೆದೇವ ಶ್ರೀ ಪುರಂದರವಿಠಲನಲ್ಲದಲೆ 3
--------------
ಪುರಂದರದಾಸರು
ಪ್ರಸನ್ನವದನ ಹಯಸೂದನ ಪಾಲಿಸು ಹಯವದನ ಪ.ಚಂದ್ರಮಂಡಲ ಗ್ರಹಮಾಲಾನಂದ ವಿಶಾಲಇಂದಿರೆರಮಣ ಖಗಗಮನಸ್ಯಂದನಾಂಗದರರವಿಂದ ಗದಾಕರಸುಂದರಗಾತ್ರಧಿ ವಂದ್ಯವಿಧಾತ್ರ 1ನಿಗಮೋದ್ಧಾರಕಾಘ ವಾರಕ ತ್ರಿಜಗರಕ್ಷಕಮೃಗಮುಖನೃದೇಹಿ ಧಾರ್ಮಿಕದ್ಯುಗಶಶಿ ಸಮತೇಜ ದೃಗಯುತ ಗಜರಾಜನಿಗಡ ಶಿಥಿಲಕಾರಿ ಬಿಗಡರ ಭಾರಿ 2ಗುರುವಿನ ಬಾಲ ಪಾಲನಶೀಲ ಸಾಗರಸುತೆಲೋಲಗುರುವಾದಿರಾಜಾರ್ಚಿತ ಪಾದಾಬ್ಜವರಸೋದೆ ಮಠವಾಸ ಸುರಮುನಿ ಪರಿತೋಷಪರಸನ್ನವೆಂಕಟೇಶಹರಿತುರಗಾಸ್ಯ3
--------------
ಪ್ರಸನ್ನವೆಂಕಟದಾಸರು
ಯಾಕೆನ್ನೊಳು ಪಂಥಾ ಶ್ರೀಕಾಂತಾ ಪ.ಯಾಕೆ ಪಂಥ ಲೋಕೈಕನಾಥ ದಿ-ವಾಕರಕೋಟಿಪ್ರಭಾಕರ ತೇಜನೇ ಅ.ಪ.ಪೂರ್ವಾರ್ಜಿತ ಕರ್ಮದಿಂದಲಿಇರ್ವೆನು ನರಜನ್ಮ ಧರಿಸುತಗರ್ವದಿಂದ ಗಜರಾಜನಂತೆ ಮತಿಮರ್ವೆಯಾಯ್ತು ನಿನ್ನೋರ್ವನ ನಂಬದೆಗರ್ವಮದೋನ್ಮತ್ತದಿ ನಡೆದೆನುಉರ್ವಿಯೊಳೀ ತೆರದಿ ಇದ್ದೆನಾದರೂಸರ್ವಥಾ ಈಗ ನಿಗರ್ವಿಯಾದೆಯಹಪರ್ವತವಾಸ ಸುಪರ್ವಾಣ ವಂದಿತ 1ಯಾರಿಗಳವಲ್ಲಮಾಯಾಕಾರ ಮಮತೆ ಸಲ್ಲ ಸಂತತಸಾರಸಾಕ್ಷ ಸಂಸಾರಾರ್ಣವದಿಂದಪಾರಗೈದು ಕರುಣಾರಸ ಸುರಿವುದುಭಾರವಾಯ್ತೆ ನಿನಗೆನತಮಮಕಾರ ಹೋಯ್ತೆ ಕಡೆಗೆ ಏನಿದುಭಾರಿ ಭಾರಿಶ್ರುತಿಸಾರುವುದೈ ದಯವಾರಿಧಿನೀನಿರಲ್ಯಾರಿಗುಸುರುವುದು2ಬಾಲತ್ವದ ಬಲೆಗೆ ದ್ರವ್ಯದಶೀಲವಿತ್ತೆ ಎನಗೆ ಆದರೂಪಾಲಿಸುವರೆ ನಿನಗಾಲಸ್ಯವೆ ಕರು-ಣಾಳು ಶ್ರೀಲಕ್ಷ್ಮೀಲೋಲ ಮಮ ಮನಕೆಸಾಲದೆರಡು ಮೂರು ನಿನ್ನಯಮೂಲ ಸಹಿತ ತೋರು ಮುನಿಕುಲಪಾಲ ಶ್ರೀಲಕ್ಷ್ಮೀನಾರಾಯಣಗುಣಶೀಲ ಕಾರ್ಕಳ ನಗರಾಲಯವಾಸನೇ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ