ಒಟ್ಟು 230 ಕಡೆಗಳಲ್ಲಿ , 54 ದಾಸರು , 209 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆತ್ಮಚರಿತ್ರೆ ಆರಿಗಾರಿಲ್ಲ ಆಪತ್ಕಾಲದೊಳಗೆ ಪ ವಾರಿಜಾಕ್ಷನ ನಾಮ ನೆನೆ ಕಂಡ್ಯ ಮನವೆ ಅ ಹಗೆ ಕೈಗೆ ಸಿಲುಕಿದಾಗದೆಸೆಗೆಟ್ಟು ಅಧಿಕ ವ್ಯಾಧಿಯಲಿ ಇರುವಾಗಅಸಮಾನನಾದಾಗ ಅತಿ ಭೀತಿಗೊಂಡಾಗಬಿಸಜನಾಭನ ನಾಮ ನೆನೆಕಂಡ್ಯ ಮನವೆ 1 ಸಾಲದವರೆಳೆವಾಗ ಚಾಡಿ ಮಾತಿಗೆ ಭೂಪಘಳುಘುಳಿಸುತ ಕೋಪವನು ತೋರಿದಾಗಮೇಲು ತಾನರಿಯದಯೆ ನಿಂದೆ ಹೊಂದಿರುವಾಗನೀಲಮೇಘಶ್ಯಾಮನ ನೆನೆಕಂಡ್ಯ ಮನವೆ 2 ಪಂಥದಲಿರುವಾಗ ಪದವಿ ತಪ್ಪಿರುವಾಗದಂತಿಮದವೇರಿ ಬೆನ್ನತ್ತಿದಾಗಕಂತುಪಿತ ಕಾಗಿನೆಲೆಯಾದಿಕೇಶವನ ನಿ-ಶ್ಚಿಂತೆಯಿಂದಲಿ ನೀನು ನೆನೆಕಂಡ್ಯ ಮನವೆ 3
--------------
ಕನಕದಾಸ
ಆನಂದಮೆಂದಿದಕೆ ಹೆಸರಿಟ್ಟೀ ಪಾಪಿ ಪ ಮನಬಂದತೆರ ಸೇಂದಿ ಸೆರೆಕುಡಿದು ಉಬ್ಬಿ ಅ.ಪ ಕೊಡ ಪಡಗ ಹೆಂಡವನು ಕುಡಿದು ಎಚ್ಚರದಪ್ಪಿ ತಡೆಯದಲೆ ಮಲಮೂತ್ರ ಬಿಡುತದರೋಳುರುಳಿ ಬಡಿಸಿಕೊಂಡಟ್ಟೆಯಿಂ ಒಡನೆ ಎಚ್ಚರವೊಂದಿ ಕೆಡಿಸಿದಾನಂದಮ್ಹಿಡಿ ಕೊಡುವೆ ಶಾಪೆನುವಿ 1 ಅವಸರದಿಂ ಜಿಹ್ವೆಯ ಸವಿರುಚಿ ಲವಲವಿಕೆಯಿಂ ಭವಿಜನುಮಿಗಳು ಎಲ್ಲ ಕವಿದುಬಂದಿಳಿದು ಸವಿಯಬಾರದ್ದು ಸವಿದು ಶಿವನೆನಾವೆಂದೆನುವ ಭವಿಗಳೆಲ್ಲರು ಜಗದಿ ಶಿವನ ಪೋಲುವರೆ2 ಕದ್ದು ಮುಚ್ಚಿಲ್ಲದಲೆ ಮುದ್ದೆ ಮುದ್ದೆ ಗಾಂಜವನು ಸಿದ್ಧಪತ್ರೆಂದೆನುತ ಶುದ್ಧಮತಿಗೆಟ್ಟು ಬದ್ಧರೆಲ್ಲ ಸೇದಿ ನಿಜ ಪದ್ಧಿತಿಯನ್ಹದಗೆಡಿಸಿ ಶುದ್ಧಾತ್ಮರೆನಲು ಪರಿಶುದ್ಧರಾಗುವರೆ 3 ನಾನುನೀನೆಂದೆಂಬ ಖೂನಡಗಿ ಎತ್ತ ತಾನೆ ತಾನೆಂದು ಹೊಳೆವ ಬ್ರಹ್ಮ ಆನಂದ ಸೊಬಗು ಏನೊಂದು ತಿಳಿಯದೆ ಆನಂದವೆಂದೆನುತ ಶ್ವಾನನಂದದಿ ಕೂಗ್ವಿ ಜ್ಞಾನಾಂಧ ಅಧಮ 4 ಹುಚ್ಚುಮನುಜನೆ ನಿನಗೆ ಹೆಚ್ಚಿನ ಗೋಜ್ಯಾಕೆ ನಿಶ್ಚಲಭಕುತಿಂ ಬಚ್ಚಿಟ್ಟು ಮನದಿ ಅಚ್ಯುತ ಶ್ರೀರಾಮನ ಹೆಚ್ಚೆಂದು ದೃಢವಹಿಸಿ ಎಚ್ಚರದಿ ಭಜಿಸಿ ಭವಕಿಚ್ಚಿನಿಂದುಳಿಯೊ 5
--------------
ರಾಮದಾಸರು
ಇಂದಿಗೆ ಕಡೆಮಾಡು ಎನ್ನ ಮಂದಬುದ್ದಿ ತಂದೆ ಕೇಳಿ ಮರೆಬಿದ್ದೆ ನಿನ್ನವರ ಸುದ್ದಿ ಪ ಒಪ್ಪಿಡ್ಯವಲಕ್ಕಿಗೆ ಒಪ್ಪಿ ಘನ ಬಡತನವ ಕಪ್ಪುಕುಲದವನಿಂಗೆ ತುಪ್ಪ ಸಕ್ಕರೆಯನ್ನು ಗಪ್ಪತ್ತಿಲುಂಡು ಮುಕ್ತಿ ಸಂಪದ1 ವಿದುರನರ್ಧಾಂಗಿಯ ಸದಮಲದ ತವಪಾದ ಸದನಕೈಯಲು ಪದುಮವದನೆ ಮೈ ಮರೆದು ಕದಳಿಫಲ ಮೇಲ್ಭಾಗ ವದನದಿಕ್ಕಲು ಸವಿದು ಸದುಯಾಂಬುಧೊಲಿದಸಮಪದವಿ ದಯಮಾಡ್ದಿ2 ಅಧಮಾಧಮಾಗಿ ದುರ್ಮದದಿಂದ ಮತಿಗೆಟ್ಟು ಸದಮಲ ಕುಲಪದ್ಧತಿ ವಿಧಿಯನ್ನು ಮರೆತು ಅಧಮಕುಲಜಳಿಗೊಲಿದು ಮದುವ್ಯಾದ ಅಜಮಿಳಗೆ ಒದಗಿ ಬಂದಂತ್ಯಕೆ ನಿಜಪದವಿ ಕರುಣಿಸಿದಿ3 ವರಧರ್ಮ ಹಿತಭಕ್ತ ನರನಿವರ ಲೆಕ್ಕಿಸದೆ ಕರುಣದ್ವಿದುರನ ಮನೆಗೆ ಭರದಿ ಬಂದಿಳಿದಿ ಪರಮಪಾವನ ನಿಮ್ಮ ಚರಣಭಕ್ತ್ಯೊಂದೆನಗೆ ಕರುಣಿಸು ಮತ್ತಾವ ಸಿರಿಯ ನಾನೊಲ್ಲೆ 4 ನಿನ್ನ ಎಂಜಲು ಉಣಿಸಿ ನಿನ್ನವರೊಳಾಡಿಸಿ ನಿನ್ನ ಉನ್ನತ ಧ್ಯಾನವನ್ನೆ ದಯಮಾಡಿ ಮನ್ನಿಸಿ ಸಲಹಯ್ಯ ನಿನ್ನ ದಾಸನೆಂದೆನಿಸಿ ಎನ್ನಯ್ಯ ಶ್ರೀರಾಮ ನಿನ್ಹ್ನೊರತನ್ಯರಿಯೆ 5
--------------
ರಾಮದಾಸರು
ಇಂದು ಶೇಖರ ರಕ್ಷಿಸೋ ಎನ್ನ ತಂದೆ ಶಂಕರ ಹಿಂದೆ ಪೊಂದಿದ ದೇಹದ ಮತ್ತಿಂದು ಹಿಡಿಯುತ ಪ ಹಿಂದೆ ಬಿಸುಟೊಡಲು ಮರು ಕೊಳಿಸಿ ಸಾರಿ ಬಂದುದು ತಂದೆ ತಾಯಿಯ ಗಣನೆ ಉರ್ವಿಸಿಕವನು ಮೀರಿತು ಅಂದು ಮೊದಲು ಜನನೀಸ್ತನವನುಂಡು ಪಾಲಸವಿದುದು ಇಂದು ಕಂದು ಗೊರಳನೆ 1 ಕಾಲ ಬಾಲವನಿತೆ ಬಾಳು ಬದುಕಿನೊಳಗೆ ತೊಳಲಿ ಬಳಲಲು ಕಾಯದೊಳಗೆ ಮುಸುಕಲು ಕೊಳುವೋದೆ ಯಮಗೆ ಶೂಲ ಪಾಣಿ ನೀಲಕಂಠನೆ 2 ಎನ್ನದಾನದೆಂಬ ಹಮ್ಮವಶದಿ ಸುಮ್ಮನೆ ಹೊನ್ನು ಹೆಣ್ಣು ಮಣ್ಣು ಮೂರು ತನ್ನದೆಂದು ನಂಬುತ ಬನ್ನ ಬಟ್ಟು ಸಾಯುತ ಭವದಶರಧಿ ಬೇಗೆಯನ್ನು ಈಸಲಾರೆನೋ 3 ಸಿಂಧು ತೆರೆಯೊಳು ಮಂದ ಗಜವು ಕುಣಿಯೋಳ್ ಬಿದ್ದು ಏಳಲಾರದಂದದಿ ಇಂದ್ರಜಾಲದೊಳಗೆ ಸಿಲುಕಿಮಂದಗೆಟ್ಟು ನೊಂದೆನೋ 4 ದುರಿತ ಮರಣ ಕಾಲದೊಳಗೆ ನಾಮಸ್ಮರಣೆ ಯಾದಗುವಂದದಿ ತರಣಿ ತಮವ ಕಡಿಸಿ ಧರೆಯ ಬೆಳಗುವಂತೆ ಹೃದಯದಿ ಕರುಣದಿಂದಲಿ ನಿರುತಸಲಹೋ ಇಕ್ಕೆರಿ ಅಘೋರೇಶಲಿಂಗನೆ 5
--------------
ಕವಿ ಪರಮದೇವದಾಸರು
ಈಡುಗಾಣೆನಯ್ಯ ಜಗದೊಳಗೆ ಪ. ಬೇಡಿದಭೀಷ್ಟಗಳ ಕೊಡುವ ಹನುಮ ಭೀಮ ಮಧ್ವರಾಯ ಅ.ಪ. ಅಷ್ಟದಿಕ್ಕಲಿ ಭೂಪರಾಳಿದ ದುಷ್ಟರಾವಣನ್ನ ಪುರವ ದೃಷ್ಟಿಸಿ ನೋಡಿ ಸಮರದಲಿ ಪ್ರಹಾರವನೆ ಕೊಡಲು ಕಷ್ಟದಿ ಮೂಛ್ರ್ಯಕೃತನಾಗಿಯೆದೆ ಹಿಟ್ಟಾಗಿಸನಂತಕಂದಿಸಿಯೆ ಕಂಗೆಟ್ಟು ಹತ್ತು ದಿಸೆಗೆ ಓಡಿಸಿದ್ಯೊ ದಿಟ್ಟನಾಗಿ ನಿರಂತರದಿ ಹನುಮಾ 1 ನಾರದ ಅಯೋಧ್ಯದಿ ಪೇಳಲು ಶ್ರೀ ರಾವಣ ಸೈನ್ಯಗಳ ಓಡಿಸಿ ವಾರಿಧಿಗಳ ದಾಟಿ ಬೇಗ ನೂರುತಲೆ ಅಸುರನ ಪಟ್ಟಣದ ದ್ವಾರ ಬಂಧಿಸಿ ಸಕಲದ್ವೀಪದಲ್ಲಿದ್ದ ಕ್ರೂರ ಅಸುರನ್ನ ಕಾಲಲೊದ್ದು ವರ ವಿಭೀಷಣ ಸುಗ್ರೀವರ ಪುಚ್ಛದಲಿ ತರುಬಿದಿಯೊ ಸಮರ್ಥ ಹನುಮಾ 2 ರುದ್ರ ಬ್ರಹ್ಮರ ವರದಲವಧ್ಯನಾದ ಜರಾಸಂಧನಾ ಖಳರ ಸೀಳಿದ್ಯೊ ನೃಪರ ನಿಂದೆ ಯುದ್ಧದಲಿ ದುರ್ಯೋಧನನ ಕೊಂದ ಪ್ರಸಿದ್ಧ ಭೀಮರಾಯ ನಿಮಗೆ3 ವಾದಿಗಜಕೆ ಮೃಗೇಂದ್ರ ವಾದಿವಾರುಧಿ ಬಡಿವ ಮಾಯಾ ವಜ್ರ ಭೇದ ಮತಾಂಬುಧಿಗೆ ಚಂದ್ರ ಮೋದತೀರ್ಥಾನಂದಗೆ ಕೃಷ್ಣಾ ಅಷ್ಟವಾಳುಕ ಮುಷ್ಟಿ ತಂದೆ ಸಾಧುಜನರಿಗೆ ತತ್ವಬೋಧಿಸಿದೆ ಮೇದಿನಿಯೊಳು ಮಧ್ವರಾಯ ನಿಮಗೆ 4 ಇಂದುಮುಖಿ ಸೀತೆಗೆ ಮುದ್ರಿಕೆಯನಿತ್ತು ವಂದಿಸಿ ರಾಮಕಥೆಯ ಪೇಳಿದೆ ಅಂದು ರೋಮಕೋಟಿ ಶಿವರಮಾಡಿ ಪುರುಷಮೃಗವನೆ ತಂದೆ ಚಂದದಿಂ ಮಣಿಮಂತನ ಕೊಂದು ಸೌಗಂಧಿಕವ ತಂದೆ ನಂದತೀರ್ಥರಾದ ಅಚಲಾನಂದ ವಿಠಲನ ದಾಸ ನಿಮಗೆ5
--------------
ಅಚಲಾನಂದದಾಸ
ಉದಯರಾಗ ಜನಿಸಲಾರೆನು ಜಗದೊಳಗೆ ಹರಿಯೆ ಪ ಕನಸಿನೊಳು ನೆನೆಯೆ ಕಂಪನವಾಗುತಿದೆ ಮನಕೆ ಅ.ಪ ವಾರಿಮಂಡಲ ವೃಷ್ಟಿಧಾರೆ ಧಾರುಣಿ ಜನಕ ದ್ವಾರದಿಂ ಸರಿದುಪೋಗಿ-ಸಾಗಿ ಜಾರಿ ಜನನೀ ಜಠರ ನಾರುವ ದುರ್ಗಂಧ ಸೇರಿ ಬೊಬ್ಬುಳಿಯ ತೆರದಿ-ಭರದಿ ವಾರಿವಾರಕೆ ಬೆಳೆದು ತಾರಿತಗಲಿ ಬಳಲಿ ಶರೀರವನ್ನೆ ಪೊತ್ತು-ತೆತ್ತು ಖಾರ ಕಟು ಲವಣಾದಿ ಘೋರತರ ಮಹಕ್ಲೇಶ ವಾರಿಧಿಯೊಳಗೆ ಮುಳುಗಿ ಮರುಗಿ ಸೊರಗಿ 1 ಲೇಶಾವಕಾಶವಿಲ್ಲದ ದೇಶದೊಳು ಸನ್ನಿ ವಾಸ ಉಲ್ಬಣದೊಳಿದ್ದು-ಕುದ್ದು ಘಾಸಿಯಲ್ಲಿ ಪರಿತಾಪ ಸೂಸಲು ಹಾಹಾಯೆಂಬ ಘೋಷಧ್ವನಿಯಿಂದ ಬೆದರಿ-ಅದರಿ ರೋಷವಾಗಿದ್ದ ಕ್ರಿಮಿರಾಶಿ ಮುಖ ಕಾಟದಿಂ ಏಸು ಬಗೆಯಿಂದ ನೊಂದು ಬೆಂದು ಶ್ವಾಸ ಬಿಡುವುದಕೆ ವ್ಯತ್ಯಾಸವಾಹುದು ಮುಂದೆ ಮೋಸಗೊಂಡು ಮತಿಗೆಟ್ಟು ಬೇಸರಿಕೆ ಅಕಟಕಟ 2 ಜಾನು ಮಧ್ಯದಲಿ ಶಿರಗೋಣು ತೂರಿಸಿಕೊಂಡು ಮಾಣದಲೆ ಬಿಕ್ಕಿ ಬಿಕ್ಕಿ-ಸಿಕ್ಕಿ ಏನೆಂಬೆ ಮಸೆದುಕ್ಕಿನ ಬಾಣ ಪೆಟ್ಟಿನ ಸಮ- ಬೇನೆಯಿಂದಧಿಕವಾಗೆ ಮೈಗೆ ಮೇಣು ಕೈಕಾಲುಗಳು ಕಾಣಿಕಾ ಕಾಲವಗ- ಲಾನು ಚರಿಸದಾದೆನೊ ಇನ್ನೇನೊ ಗಾಣ ತಿರುಗಿದಂತೆ ಗೇಣು ಬೈಲೊಳಗೆ ಈ ಆ-ನನ ಮೇಲಡಿಯಾಗಿ ಬಂದೆ-ನೊಂದೆ 3 ಸೂತಿಕಾಮರುತ ಬೀಸಿದಾತುರಕೆ ಬೆಸಸುವ ಯಾತನೆಗೆ ಕಾಣೆ ಲೆಖ್ಖ-ದು:ಖ ಗಾತುರವು ಕಿರಿದಾಗಿ ಪೋತಭಾವವ ವಹಿಸೆ ಭೂತಳಕೆ ಉಗ್ಗಿಬಿದ್ದು-ಎದ್ದು ಶೀತೋಷ್ಣ ಮಲರೋಗ ಭೀತಿ ಲಾಲನೆಯಿಂದ ಮಾತೆಯ ಮೊಲಿಯನುಂಡು-ಉಂಡು ಆ ತರುವಾಯ ಉಪನೀತ ವಿವಹಗಳಲ್ಲಿ ವ್ರಾತ ಕೈಕೊಂಡೆನಯ್ಯ ಜೀಯ 4 ಯೌವನದಿ ಚತುರ್ವಿಂಶತಿ ತತ್ವಜ್ಞಾನವ ಜರಿದು ಯುವತಿಯರ ರೂಪಲಾವಣ್ಯ ನೋಡಿ-ಬಾಡಿ ನೆವನೆವದಿ ಭೋಗಗಳ ಸವಿ ಸವಿದಿಪೇಕ್ಷಿಸಿ ಭವನ ಭವನವÀನು ಪೊಕ್ಕು -ಸೊಕ್ಕು ಅವರಿವರ ಜಾತಿಯೆನ್ನದೆ ಮಾತುಗಳನಾಡಿ ದಿವರಾತ್ರಿಯಲ್ಲಿ ಹೊರಳಿ-ಉರುಳಿ ಕವಿಜನರ ಧಿಕ್ಕರಿಸಿ ಕೋಣನಂತೆ ಸದಾ ಕಾಲ ಕಳೆದೆ ಉಳಿದೆ 5 ಹೆಂಡ್ರು ಮಕ್ಕಳಿಗಾಗಿ ಎನ್ನ ಹಿತಮನೆ ಮರೆದು ಕಂಡಕಂಡವರ ಕಾಡಿ-ಬೇಡಿ ಉಂಡುಟ್ಟು ಸುಖಪಟ್ಟು ಪಾರತ್ರಯವ ಜರೆದು ಕೊಂಡೆಯಲಿ ನಿಪುಣನಾಗಿ ತೂಗಿ ಮಂಡೆಯನು ಬಲಿತ ಪಶುವಿನಂತೆ ಮದವೇರಿ ಚಂಡ ವೃತ್ತಿಯಲಿ ನಡೆದು-ನುಡಿದು ಹಿಂಡು ಮಾತೇನು ಈ ಜರೆನರೇ ಬಂದೆನ್ನ ಲಂಡತನ ಪೋಗದಕಟ್ಟ-ಉಂಬೆ ವಿಕಟ 6 ನಾನಾ ಯೋನಿಗಳಲ್ಲಿ ಬರಲಾರೆ ಬರಲಾರೆ ನಾನು ಪೇಳುವುದು ಏನೋ-ಇನ್ನೇನೊ ನೀ ನೋಡಿದರೆ ಅನ್ಯ ಕಾವ ದೈವರ ಕಾಣೆ ಮಾನಸದೊಳಗೆ ಒಮ್ಮೆ-ಇಮ್ಮೆ ದೀನರಕ್ಷಕ ಬಿರುದು ಅನವರತ ನಿನ್ನದು ಎಣಿಸದಿರು ಎನ್ನ ದೋಷ ಲೇಶ ಶ್ರೀನಾಥ ವಿಜಯವಿಠ್ಠಲರೇಯ ನೀನೊಲಿದು ಧ್ಯಾನದಲ್ಲಿ ಬಾರೊ ನಿಜ ಮೂರುತಿಯ ತೋರೊ 7
--------------
ವಿಜಯದಾಸ
ಉದರ ಪೂರ್ತಿಯ ಕೊಡದಿರು ಉದಧಿಶಯನ ಪ ಮುದದಿ ನಿನ್ನನು ನೆನೆದು ಮಲಗುವೆನೊ ಸುಖದಿ ಅ.ಪ ಮುದದಿ ನಿನ್ನ ಚರಣವನು ಸ್ಮರಿಸುವುದು | ಪರಿಹಾರವು ಬಹು ಗರ್ವ ಹೆಚ್ಚುವುದು ಎನಗೆ | ಅರವಿಂದನಾಭ ಹರಿ ವರವಿದೆ ನಿನ್ನ ಕೇಳ್ವೆ | ಪರಿಹಾಸ್ಯ ನುಡಿಯಲ್ಲ ಪರಮ ಪಾವನಗೆ 1 ತನುಮನವು ನಿನ್ನ ವಿಷಯಕ್ಕೆರಗಲಿ | ಅನುಮಾನವಿದ್ದ ಪರಿಯೆಲ್ಲ ತೊಲಗಿ || ವನಜಸಂಭವನೈಯ್ಯ ವೈಕುಂಠಪತಿ ನಿನಗೆ | ಅನವರತ ದೊರೆ ಎಂಬೊ | ಘನತೆ ತಪ್ಪದೆ ಇರಲಿ2 ಗಜಮದದಿ ಕಂಗೆಟ್ಟ ಪರಿಯನ್ನ ಮಾಡದೇ | ಅಜಮಿಳಗೆ ಒಲಿದಂತೆ ಎನಗೆ ವೊಲಿದೂ || ಸುಜನ ರಕ್ಷಕನೆಂಬೊ ಬಿರುದು ಬೇಕಾದರೆ | ನಿಜವಾಗಿ ದಯಮಾಡೊ ವಿಜಯವಿಠ್ಠಲನೇ3
--------------
ವಿಜಯದಾಸ
ಉದ್ಧರಿಸೆನ್ನಯ್ಯ ಮುದ್ದು ಶ್ರೀಹರಿಯೆ ಬಿದ್ದು ಬೇಡುವೆ ನಿಮ್ಮ ಪಾದಪದ್ಮದೊಳು ಪ ಬದ್ಧಗುಣ ಬಚ್ಚಿಟ್ಟು ಶುದ್ಧ ಮನದವನಂತೆ ಸುದ್ದಿ ಹೇಳುತ ಸತತ ಕದ್ದು ತಿನ್ನುವ ಎನ್ನ ಬದ್ಧ ಮನಸಿನ ಡೊಂಕ ತಿದ್ದು ಬೇಗದೊಳು 1 ನಂಬಿಗುಳ್ಳವನಂತೆ ಹೇಳುವ ಪರರ ಅಂಬುಜಾಕ್ಷಯರೊಲುಮೆ ಹಂಬಲವ ಮನದಿ ತುಂಬಿಕೊಂಡಿಹ್ಯ ಎನ್ನಡೊಂಕ ಶಂಭುವಿನುತನೆ ತಿದ್ದಿ ಇಂಬುಗೊಡು ಜವದಿ 2 ಸಫಲಮಾನಿಸನಂತೆ ಜಪಮಾತುಗಳಾಡಿ ಕಪಟತ್ವದಿಂದಿತರ ಅಪಹರಿಸುವ ಕುಪಿತ ಮನಸಿನ ಡೊಂಕ ಅಪರೂಪತಿದ್ದಿ ನುತ ಸುಫಲದಾಯಕ ಹರಿ ಕೃಪೆಮಾಡು ಜವದಿ 3 ಹಸುತೃಷಳಿದವನಂತೆ ವಸುಧೆಜನರಿಗೆ ತೋರಿ ಬಸವಳಿದು ಬಾಯಾರಿ ದೆಸೆಗೆಟ್ಟು ಪರರ ಅಶನ ಬೇಡುಂಬ ಪುಸಿಯ ಮನಸಿನ ಡೊಂಕ ಹಸನಾಗಿ ತಿದ್ದಿ ಲಕುಮೀಶ ಒಲಿ ದಯದಿ 4 ಪಾಮರಮನದ ದುಷ್ಕಾಮಿತಗಳನೆಲ್ಲ ಕ್ಷೇಮದಿಂ ಕಡೆಹಾಯ್ಸಿ ಸ್ವಾಮಿಯೇ ನಿಮ್ಮ ನಾಮಧ್ಯಾನದ ನಿತ್ಯನೇಮವನು ಪಾಲಿಸಿ ಪ್ರೇಮದ್ಹಿಡಿಕರ ಶ್ರೀರಾಮಪ್ರಭುತಂದೆ 5
--------------
ರಾಮದಾಸರು
ಋಣವ ಮಾಡ್ದಧಮಗುಸುರಲೆುಲ್ಲ ನೀತಿಯಮನು ಮುಖ್ಯಸ್ಮøತಿಕರ್ತರೂ ಪಕಣುಗೆಟ್ಟಿನೀ ದೋಷ ಕಡಲೊಳಗೆ ಮುಳುಗಿ ಮುಂದಣ ಗತಿಯದೇನೆನಗೆ ಕರುಣಿಸೈ ಗುರುವೆ ಅ.ಪಹೇಮಾದ್ರಿ ಮಾಧ'ೀಯಾದಿ ಪ್ರಾಯಶ್ಚಿತ್ತ ನೇಮ 'ಧಿ ಕಾಂಡಗೆಗಳೊಳೂಕಾಮದಿಂದಲಿ ಮಹಾಪಾತಕಗಳನು ಮಾಡಿದೀ ಮಹಾ ತಂಡಗಳೊಳೂಭೂ'ು ಗೋ ದ್ವಿಜರಾಜ ಸ್ತ್ರೀ ದ್ರೋ'ಗಳೊಳು ಪರಭಾ'ುನೀಗಾ'ುಗಳೊಳೂತಾಮಸಾಧಮರೊಳಧರ್ಮನೆನಿಸಿಹೆನೆಂದೇ ಮರಳಿ ಮರಳಿ ಪೇಳಿಹುದಲ್ಲವೆ ಗುರುವೆ 1ಹದಿನೆಂಟು ಬಗೆ ಮಹಾ ಪೌರಾಣ ಕಥೆಗಳೊಳಗಧಮನೀ ಋಣವಂತನೆವದರುತಿವೆಯುಪಪುರಾಣಂಗಳಷ್ಟಾದಶಗಳಧಮನೀ ಋಣವಂತನೆಒದಗಿದೀ ಸಂಖ್ಯೆಯುಪಸ್ಮøತಿಗಳೊಳಗೂ ಪೇಳ್ವುದಧಮನೀ ಋಣವಂತನೆಸದಯತನ ಪುಟ್ಟದಾುತೀ ಪತಿತ 'ಷಯದಲಿಹದನೆನಂಮುಂದೆ ಮುಳುಗಿದೆನೆಲ್ಲೊ ಗುರುವೆ 2ಮೂರು ಮತ್ತೈದಾ ಭೇದ ಋಣ 'ದ್ದರೆಯು ತೀರುವರೆ ಮಾರ್ಗಗಳಿವೆತೀರದಿದ್ದರು ಜನುಮಗೊಡುವವಲ್ಲದೆ ವೃದ್ಧಿಸಿರಿ ಬೆಳೆಯದೆ ನಿಂತಿವೆಆರು ಬಗೆುಂ ಬಡ್ಡಿ ನುಡಿಯದಿದ್ದರು ದಿನವು'ುೀರಲಿದಕೊದಗುತಲಿವೆದಾರಿಯ ನನಗೀಪರಿಯ ಧನ ಋಣವ ದೈವಹೇರಿ ತಳವಳಿದೆನೈರಕ್ಷಿಸೈ ಗುರುವೆ 3ಕಾಶಿಗೈದುವರಾಗದಡ'ಯೊಳಿರುವರಾಗದೀಶ ಭಜನೆಯ ಗಣಿಸದೂುೀಷಣೆಗಳನು ಬಿಟ್ಟು ಸನ್ಯಾಸವನು ಮಾಡಲೀಸದೆ ತನವನರಸದೂದೇಶದೇಶವ ತಿರುಗೆ ತೀರ್ಥಗಳೊಳ್ಮಿಂದರೂಲೇಶ ಮಾತ್ರವು ಸವೆಯದೂಈ ಶರೀರವು ಬೀಳೆ ಕ್ರಮವಾಗಿ ತೊತ್ತು ಸತಿದಾಸಸುತ ಕತ್ತೆಭವಗೊಡುವದೈ ಗುರುವೆ 4ಋಣವು ಮಾಡಿದ ಪತಿತನುಂಬ ಪಂಕ್ತಿಯೊಳು ಜನರುಣಲಾಗದುಂಡರವನೂತನಯ ಪೌತ್ರರು ಸ'ತ ಪತಿತನಪ್ಪನು ನಿಮಂತ್ರಣಗೈಸೆ ಧನ ಋಣಿಯನೂಎಣಿಸಲಾ ಕಲ್ಪನರಕವು ಪಿತೃಗಳಿಗೆ ಕರ್ತನನುಭ'ಪ ನರಕಗಳನೂಎನುತ ಭೀಷ್ಮಾಚಾರ್ಯರುಸುರಿದರು ಧರ್ಮನಂದನಗೆ ಭಾರತ ಶಾಂತಿಪರ್ವದೊಳು ಗುರುವೆ 5ತಲೆಯೋಡ ಪಿಡಿದು ಚಂಡಾಲಗೇರಿಯಲಾದರಳುತ ಕೊಟ್ಟ ಪರಧನವಸಲಿಸದೆ ಕೆಟ್ಟು ಬಂದೆನು ಭಿಕ್ಷಗೊಡಿಯೆಂದುಹಲವು ನಿಂದ್ಯದ್ರವ್ಯವಾಅಳುಕದೆ ತಂದು ಜೀವನಗೈಯ್ದುದರಿಂದುಸಲೆಗೈದು ತಂದ ಋಣವಾಕಳಿವ ನವನರಕಗಳೆಂದು ಹರಿಶ್ಚಂದ್ರ 'ಭುತಿಳು'ದರು ದುರ್ಮನ ಬಿಡದಲ್ಲೊ ಗುರುವೆ 6ಸುತನ ಮಾರಿದ ದೋಷ ಸತಿಯ ಮಾರಿದ ದೋಷಪಿತೃ ಮಾತೃಹತ್ಯ ದೋಷಾಪತಿತನಾಗುವ ದೋಷ ಪತ್ರವನು ಬರದು ತನುಪತನವಾಗುವ 'ಶೇಷಯತನದಿಂದ ಮಾಡ್ದ ಪುಣ್ಯವು ಪೋಪದೋಷ ಪರಸುತ ಭೃತ್ಯನಪ್ಪ ದೋಷಜೊತೆಗೂಡಿ ಗಣಿಸದೆ ಸಾಲವನು ಮಾಡಿದೀಪತಿತನನು ನರಕಕಿಳುಹುವದೆಲ್ಲೊ ಗುರುವೆ 7ನಿತ್ಯಕರ್ಮವ ಮಾಡುವಧಿಕಾರ ಮೊದಲಿಲ್ಲಸತ್ತ ಸೂತಕಕಧಿಕವೂಹೆತ್ತ ತಾು ತಂದೆಗಳ ಮೃತ ದಿನದಿ ಪಿಂಡಗಳನಿತ್ತರವರನುಸಿರವೂಸತ್ತರೂ ಬಿಡದೆ ಬೆಂಬತ್ತಿ ಪೈಶಾಚದಂತೊತ್ತುವದೇಳೇಳು ಭವವೂಇತ್ತಲ್ಲದೆ ಬಡ್ಡಿಸಹ ಮೌಲ್ಯವನು ಪೋಗದೆತ್ತ ಹೋಗಲಿ ಯೇನಮಾಡಲೈ ಗುರುವೇ 8ವರುಷ ಸಾ'ರವಾದರೆಯು ಋಣದ ಮ'ಮೆಯನುಬರೆಯುವದಸಾಧ್ಯ ಗುರುವೆಪರಮ ಋಣಿಗಳು ಸ್ಮøತಿ ಪುರಾಣೇತಿಹಾಸಗಳೊಳರುಪುತಿಹರಿಂತು ಗುರುವೆಹರತು ಋಣಗತ್ತಲೆಯು ನಿನ್ನ ಪದಗಾಬಂತೆಕರುಣಿಸೈ ಬೇಗ ಗುರುವೆಮರೆಯೊಕ್ಕೆ ನಾನು ತಿಮ್ಮದಾಸ ಚಿಕ್ಕನಾಗಪುರವರನಿಲಯ ವಾಸುದೇವಾರ್ಯ ಸದ್ಗುರುವೆ 9
--------------
ತಿಮ್ಮಪ್ಪದಾಸರು
ಎಚ್ಚತ್ತು ಇರು ಕಂಡ್ಯ ಮನವೇ | ನಮ್ಮ | ಅಚ್ಯುತನಂಘ್ರಿಗಳನು ನೆನೆ ಕಂಡ್ಯ ಮನವೆ ಪ ಆಡದಿರಪವಾದಗಳನು ಕೊಂ | ಡಾಡದಿರಿನ್ನು ಚಿಲ್ಲರೆ ದೈವತಗಳನು || ಬೇಡದಿರು ಭಯ ಸೌಖ್ಯವನು ನೀ | ಮಾಡದಿರಿನ್ನು ದುರ್ಜನ ಸೇವೆಯನು || ಸಜ್ಜನ ದ್ವೇಷವನು1 ನರಜನ್ಮ ಬರುವದೆ ಕಷ್ಟ ಇದ- | ನರಿದು ನೋಡು ವಿಪ್ರಾದಿ ಶ್ರೇಷ್ಠ || ಮರಳಿಬಾಹುದು ಉತೃಷ್ಟ | ಕೇಳೆಲವೊ ಮರ್ಕಟ 2 ಹಾಳು ಹರಟೆಗೆ ಹೋಗಬೇಡ ನೀ ಕಂಡ | ಕೂಳನು ತಿಂದು ಒಡಲ್ಹೊರಿಯಬೇಡ || ಕಾಲ ವ್ಯರ್ಥ ಕಳಿಯ ಬೇಡ ನಮ್ಮ | ಶ್ರೀ ಹರಿಯ ದಯಮಾಡ 3 ಅನ್ಯ ಸ್ತ್ರೀಯರ ನೋಡ ಬೇಡಾ ಹಿಂದೆ | ಮಣ್ಣುಕೂಡಿದವರ ನೀ ನೋಡಾ || ಅನ್ಯ ಶಾಸ್ತ್ರವನೋದಬೇಡಾ ನಮ್ಮ | ಬೋಧ ಮೈ ಮರೆತಿರಬೇಡಾ 4 ಗೋ ವಿಪ್ರರ ಸೇವೆ ಮಾಡು ಸೋಹಂ | ಭಾವಗಳನು ಬಿಟ್ಟು ದಾಸತ್ವ ಕೊಡು || ಕೇವಲ ವೈರಾಗ್ಯ ಮಾಡು ವಿಜಯ || ಲಜ್ಜೆಯ ಈಡ್ಯಾಡೊ5 ನಾನು ಎಂಬುದು ಬಿಡು ಕಂಡ್ಯ ಎನ್ನ | ಮಾನಾಪಮಾನಕ್ಕೆ ಹರಿಯೆನ್ನು ಕಂಡ್ಯ || ಜ್ಞಾನಿಗಳ ಒಳಗಾಡು ಕಂಡ್ಯ ವಿಷಯ | ಬೀಳುವಿ ಯಮಗೊಂಡಾ 6 ಕಷ್ಟ ಪಡದೆ ಸುಖಬರದು ಕಂ- | ಗೆಟ್ಟ ಮೇಲಿನ್ನು ಕಷ್ಟ ತಿಳಿಯೋದು || ದುಷ್ಟ ವಿಷಯ ಆಶೆ ಜರಿದು ವಿಜಯ- | ಕೂಗೆಲವೊ ಬಾಯಿ ತೆರೆದು 7
--------------
ವಿಜಯದಾಸ
ಎಂತುನುತಿಪೆ ನಾನು ಈ ಜಗದಂತರ್ಯಾಮಿಯನು ಪ ಪರಿಯವು ಸಂತತ ವಾಙ್ಮನ ಅ.ಪ ಸಾಸಿರಮುಖದವನ ಅವಯವಸಾಸಿರವುಳ್ಳವನ ಮೀಸಲಳಿಯದಂತೀ ಸಚರಾಚರ ವಾಸಿಯಾದ ಶ್ರೀ ವಾಸುದೇವನನು 1 ಜಗವನು ನಿರ್ಮಿಸುವ ಬೊಮ್ಮನು ಮಗನೆಂದೆನಿಸಿರುವ ಬಗೆಯುವಡೀ ಜಗವ ಜಠರದಿ ನುಸುಳಿಕೊಂಡಿರುವ ಮ್ಮೊಗನೆಂಬುವರೀಯಗಣಿತ ಮಹಿಮನ 2 ನಿಗಮವ ಪೆತ್ತವನ ಬೊಮ್ಮಗೆ ನಿಗಮವನಿತ್ತವನ ನಿಗಮೋದ್ಧಾರಕನ ನಿತ್ಯದಿ ನಿಗಮಗೋಚರನ [ಸುಗುಣ]ಶ್ರೀಪದಯುಗಳಾಂಬುಜನನು 3 ಮಾಯಾಧೀಶ್ವರನ ದೇವನಿಕಾಯಾರಾಧಿತನ ಕಾಯಜ ಸುಂದರನಾ ಜೀವನಿಕಾಯಕೆ ಮಂದಿರನಾ ದಾಯಗೆಟ್ಟರನ್ಯಾಯದಿ ಮುನಿಗಳು 4 ಪರಮಪದದೊಳಿಹನಾ ಪುನರಪಿ ತರಣಿಯೊಳಿರುತಿಹನ ಶರನಿಧಿ ಮಂದಿರನಾ ಶ್ರೀಪುಲಿಗಿರಿಯೊಳು ನಿಂದಿಹನಾ ಪೊರೆಯುವ ವರದವಿಠಲನ ನಾ5
--------------
ವೆಂಕಟವರದಾರ್ಯರು
ಎಂತುನುತಿಪೆ ನಾನು-ಈ ಜಗ | ದಂತರ್ಯಾಮಿಯನು ಪ ಸಂತತ ವಾಙÁ್ಮನ ಅ.ಪ. ಸಾಸಿರ ಮುಖದವನ-ಅವಯವ-ಸಾಸಿರವುಳ್ಳವನ ಸಾಸಿರ ಪೆಸರವನ-ರೂಪಿ ಸಾಸಿರವಾಗಿಹನ ಮೀಸಲಳಿಯದಂತೀ ಸಚರಾಚರ ವಾಸಿಯಾದ ಶ್ರೀ ವಾಸುದೇವನು1 ಜಗವನು ನಿರ್ಮಿಸುವ-ಬೊಮ್ಮನು-ಮಗನೆಂದೆನಿಸಿರುವ ಬಗೆಯುವದೀಜಗವ-ಜಠರದಿ-ನುಸುಳಿಸಿಕೊಂಡಿರುವ ಮಗುಳಿದ ನಳಿಯುವ ನಗಚಾಪರಮೊಮ್ಮಗನೆಂಬುವರೀ | ಯಗಣಿತ ಮಹಿಮನ 2 ನಿಗಮವ ಪೆತ್ತವನ-ಬೊಮ್ಮಗೆ-ನಿಗಮವನಿತ್ತವನ ನಿಗಮೋದ್ಧಾರಕನ-ನಿತ್ಯದಿ-ನಿಗಮಗೋಚರನ ಬಗೆಬಗೆಯೋಗಿಗಳ ಧ್ಯಾನಕೆನುಗಳಿದ ಶ್ರೀಪದ ಯುಗಳಾಂಬುಜನನು 3 ಮಾಯಾಧೀಶ್ವರನ-ದೇವನಿ-ಕಾಯಾರಾಧಿತನ ಕಾಯಜ ಸುಂದರನಾ-ಜೀವನಿ-ಕಾಯಕೆ ಮಂದಿರನಾ ಮಾಯಾಕಾರನಿವ ನಾಯವ ನರಿಯದೆ ದಾಯಗೆಟ್ಟರ ನ್ಯಾಯದಿ ಮುನಿಗಳು 4 ಪರಮಪದದೊಳಿಹನಾ ಪುನರಪಿ- ತರಣಿಯೊಳಿರುತಿಹನ ಶರನಿಧಿ ಮಂದಿರನಾ-ಶ್ರೀ ಪುಲಿಗಿರಿಯೊಳು ನಿಂದಿಹನ ನಿರುತವು ತನ್ನಯ ಚರಣವ ನಂಬಿದ ಶರಣರ ಪೊರೆಯುವ-ವರದ ವಿಠಲನಾ 5
--------------
ಸರಗೂರು ವೆಂಕಟವರದಾರ್ಯರು
ಎಂಥಾದರು ಬಂದರು ಚಿಂತೇ ಇಲ್ಲಾ ಪಂಥವು ಸರಿಯಲ್ಲಾ ಪ ಚಿಂತೆ ಎಂದೆಂಬುದೆ ಮನಸಿನ ರೋಗಾ ಸಂತಸ ಸಂತ್ಯಾಗ ಎಂಥೆಂಥ ಮಿಂಚುವ ದೇಹವಿದೀಗ ಕೃಂತನ ವಿಧಿಭಾಗ ಎಂತಲ್ಲಿ ನೆಲೆಸಿ ಹವಣಿತ ರೋಗಾ ಸಂತತ ಜಡ ಬೀಗಾ ನೀ ನೆನ್ನೊ 1 ಹಿತಾಹಿತವೆಂದಿಗೂ ಕೈಶೇರಿಲ್ಲಾ ಕೃತಿಪತಿ ತಾ ಬಲ್ಲಾ ಮತಿಗೆಟ್ಟು ಸತಿಯೇ ಗತಿಯೆಂದೆಲ್ಲಾ ಸುತಮೋಹ ಬಿಡಲಿಲ್ಲಾ ಮಿತಿಮೀರಿ ಪಣ ಭಂಡಾರದೊಳೆಲ್ಲಾ ರತಸುಖರೆ ಡಿಲ್ಲಾ ಕೇಸರಿ ಸುಖಗುರಿ ಮುರಿಯಲು ಧೃತಿಗೆಟ್ಟು ಬಳಲುವ ಸಂಗತಲ್ಯಾರು ತಿಳಿಯೋ 2 ನೀರಿನ ಬುದ್ಬುದ ಪರಿಸಂಸಾರಾ ದುಃಖದ ಆಗಾರಾ ಶ್ರೀರಾಮ ಮಂತ್ರದ ಸಾರಾ ನಿಜ ಸೌಖ್ಯದ ದ್ವಾರಾ ಶೇರಿ ಹಣ ಹೊನ್ನು ಹೆಂಣ ವಿಚಾರಾ ಗಂಜಾಸಮ ತಾರಾ ನಿಜಸುಖವನು ಪಡೆಯೇ 3
--------------
ನರಸಿಂಹವಿಠಲರು
ಎನ್ನ ಸಲಹುದೋ ರಂಗಾ ಎನ್ನ ಸಲಹು| ನಿನ್ನ ಚರಣ ಕಮಲದೋರಿ| ಗಮನ ರಂಗಾ ಪ ನಷ್ಟ ಪರಮ ಪತಿತ ಗತಿಯ|ಗೆಟ್ಟು ಅಜಮಿಳ ತನ್ನ| ಕಷ್ಟ ಬಡುವ ಕಾಲದಲ್ಲಿ ಸುತನ ಪೆಸರನು| ಮುಟ್ಟಿ ಕರಿಯೇ ತೃಪ್ತನಾಗಿ|ಅಷ್ಟರಿಂದ ಅವಗ ನಿನ್ನ| ಪಟ್ಟಣಕ ನೀ ಅಟ್ಟಿ ಗತಿಯ|ಕೊಟ್ಟು ಸಲುಹಿದೆ ರಂಗಾ 1 ಸಂಧಿಸಿ ಮಧ್ಯರಾತ್ರಿಯೊಳಗ|ಬಂದು ದೂರ್ವಾಸನ್ನವ ಬೇಡ| ಲಂದು ದೃಪದ ನಂದನೆ|ನಿನ್ನೆ ಸ್ಮರಿಸೆ ತ್ವರಿತದಿ| ಬಂದು ನಿಂದು ಬೇಡಿದುದನು|ಛಂದದಿಂದಲಿತ್ತು ದ್ವಿಜರಾಜ| ನಂದ ಬಿಡಿಸಿ ಐವರ ಮಾನ ಕುಂದಂತೆ ಕಾಯ್ದೆ ರಂಗಾ 2 ಐದು ವರುಷ ಹಸುಮಗನಾ|ಬೈದು ಮಲತಾಯಿ ಪೊರಗೆ| ಹಾಕಲಾಗ ಧೃವನು ನಿನ್ನ ಕುರಿತು ಧ್ಯಾನವಾ| ಗೈಯ್ಯಲಾಗಿ ಅಚಲ ಪದಕ|ಒಯ್ದು ಇಟ್ಟು ನೀನು ಅವನ| ಕಾಯ್ದೆ ಮಹಿಪತಿ ನಂದನೊಡೆಯನಾದ ದೇವ ರಂಗಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎನ್ನೊಳು ನ್ಯೂನವಾರಿಸದೇ ಸಲಹಯ್ಯಾ ಪ ಕಾಮಕ್ರೋಧ ಸಂಗವ ಮಾಡೀ | ತಾಮಸ ಲೋಭದಿ ಮೋಹವ ಕೂಡಿ | ತಾಮದ ಮತ್ಸರದಲಿ ಬೆರೆದಾಡೀ | ನೇಮದಿಗೆಟ್ಟೆ ವೃಥಾಯಕ1 ವಿಷಯೇಂದ್ರಿಯ ಸುಖ ವಿಷಯೆಂದರಿಯದೆ | ವಿಷಯದಿ ನಿಸಿದಿನಗಳೆದೆನು ಹರಿಯೇ | ಕುಶಲದ ಕರ್ಮದ ದಾರಿಯ ವಿಡಿಯೆ | ಘಸಣಿಗೆ ಬಿದ್ದೆನು ಭವದಿಂದ2 ತಂದೆ ಮಹಿಪತಿ ನಂದನ ಪ್ರಾಣಾ | ಮುದದಿ ಕೈಯನು ಪಿಡಿಯಲೋ ಪೂರ್ಣಾ | ಛಂದದಿ ತೋರಿಸಿ ನಾಮದ ಖೂನಾ | ಇಂದಿಗೆ ಧನ್ಯನ ಮಾಡು3
--------------
ಕಾಖಂಡಕಿ ಶ್ರೀ ಕೃಷ್ಣದಾಸರು