ಒಟ್ಟು 40 ಕಡೆಗಳಲ್ಲಿ , 5 ದಾಸರು , 25 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೊಮ್ಮಗೆ ಶರಣಿಂಬೆವಮ್ಮ ನಮ್ಮ ಗುರು ಎಂದುಹಮ್ಮಿನ ಸುಭದ್ರಾ ದೇವಿಗೆ ದಮ್ಮಯ್ಯ ಎನಲೆಂದು ಪ. ವಾಚಾಭಿಮಾನಿ ನಿಜ ಬುದ್ಧಿ ಸೂಚಿಸು ನಮಗೆಂದುನಾಚಿಸಿ ದ್ರೌಪತಿಯ ಆಣೆ ಅಚೆ-ಲಿಟ್ಟೆವೆಂದು1 ಮಂದ ಜಾಸನ ಜಗಕೆ ನೀವು ತಂದೆ ಹೌದೆಂದುನಿಂದಿಸಿ ಸುಭದ್ರೆ ಪಂಥ ಹಿಂದಕ್ಕೆ ಹಾಕೆವೆಂದು2 ಸರಸಿಜಾಸನ ರಾಮೇಶನ ಅರಸಿಯರ ಗೆಲಿಸೆಂದುಸರಸದಿ ಸುಭದ್ರಾ ಪಂಥ ಬಿರುಸು ಮಾಡೆವೆಂದು 3
--------------
ಗಲಗಲಿಅವ್ವನವರು
ಭಕುತಾಭಿಮಾನಿ ಸಕಲದೇವರ ಧಣಿ ನಿಖಿಲವ್ಯಾಪಕ ವಿಮಲ ಮುಕುತಿದಾಯಕನೆ ನೀ ಪ ವೇದವೇದಕ್ಕೆ ಸಿಲ್ಕದಾದಿಮೂರುತಿ ನಿನ್ನ ಪಾದಧ್ಯಾನದ ಶಕ್ತಿ ಸಾಧನಕೊಡು ಹರಿಯೆ 1 ಕಮಲಪೀಠಾದಿಸುರರು ಭ್ರಮಿಸುವ ತವಪಾದ ಕಮಲಕೃಪೆಯಿತ್ತೆನಗೆ ವಿಮಲಪತಿಯೆ ನೀಡೊ 2 ಭವಮಾಲೆ ಗೆಲಿಸೆನ್ನ ದಯದಿಂದ ಸಲಹಯ್ಯ ಭವರೋಗವೈದ್ಯನೆ ದಯಾಕರ ಶ್ರೀರಾಮ 3
--------------
ರಾಮದಾಸರು
ಭಾರತಿದೇವಿ ಭಕ್ತರತಾಯಿಭಾರತಿ ದೇವಿ ನಿಮ್ಮ ಆರಾಧಿಸುವೆವಮ್ಮನಾರಿಯರ ಸೋಲಿಸಮ್ಮಮಾರಿ ಮೇಲಾಗಿಸಮ್ಮ ಪ. ಮದನನತ್ತಿಗೆ ರಂಭೆ ಮೊದಲಿಗೆ ಬಲಗೊಂಬೆ ಮುದದಿಂದ ಗೆಲಿಸೆಂಬೆ ಸುದತೆ ಪುತ್ಥಳಿಗೊಂಬೆ1 ಸುಪ್ಪಾಣಿ ಕಲ್ಯಾಣಿ ನಿನ್ನನುಗಾಣೆ 2 ಪ್ರದ್ಯುಮ್ನನ ಮಗಳೆ ರುದ್ರಾದಿವಂದ್ಯಳೆಮುದ್ದು ರಾಮೇಶನ ಪ್ರವಾಳೆ ಶುದ್ಧಪಾತ್ರಳೆ ಕೇಳೆ 3
--------------
ಗಲಗಲಿಅವ್ವನವರು
ಮಣಿಗಣ ಭೂಷಣ ಅಣಿಗಾಣೆನಿಮಗಿನ್ನು ಗಣರಾಯ ಗಣರಾಯ ಪ. ರುದ್ರ ಕುಮಾರನೆ ಸಿದ್ಧಿ ನಿನಾಯಕ ವಿದ್ಯವಪಾಲಿಸೊಬುದ್ಧಿದಾತನೆ ಅ.ಪ. ಆನೆಯ ಮುಖದವನ ಧೇನಿಸಿನಮಿಸುವೆ ಗಣರಾಯ1 ಶ್ರೀನಿವಾಸನ ಪ್ರಿಯ ನೀನಮ್ಮಗೆಲಿಸೆಂದು ಗಣರಾಯ2 ಹಸ್ತಿಯ ಮುಖದವಗೆ ಹಸ್ತವ ಮುಗಿದೆವಸ್ವಸ್ಥ ಮನಸು ಕೊಡು ವಿಸ್ತರ ಉದರನೆ ಗಣರಾಯ3 ಗಂಧ ಅಕ್ಷತೆ ಪುಷ್ಪ ತಂದೆ ದುರ್ವಾಂಕುರ ಚಂದದ ವಸ್ತ್ರಗಳ ಒಂದೊಂದು ಕೈಕೊಳ್ಳೊ ಗಣರಾಯ 4 ರನ್ನ ಮಾಣಿಕ ಬಿಗಿದ ಚಿನ್ನದಾಭರಣವ ನಿನ್ನ ಪೂಜೆಗೆ ತಂದೆ ಚೆನ್ನಾಗಿ ಕೈಕೊಳ್ಳೊ ಗಣರಾಯ 5 ಚಕ್ಕಲಿ ತರುಗುಮಿಕ್ಕಾಗಿ ಲಡ್ಡುಗೆ ಚಿಕ್ಕಗಣಪ ಉಂಡು ಚಕ್ಕನೆ ವರಕೊಡು ಗಣರಾಯ 6 ಚಲ್ವ ರಾಮೇಶನನೆಲೆಕಂಡ ಪುರುಷನೆಇಲಿವಾಹನ ನಮ್ಮ ಸಲುಭದಿ ಗೆಲಿಸಯ್ಯ7
--------------
ಗಲಗಲಿಅವ್ವನವರು
ಮಂದರ ಧರನೆಂಬೊ ಕೋಲಸುಂದರಾಂಗನೆಂಬೊ ಯಾದವೇಂದ್ರಚಂದ್ರನೆಂಬೊ ಕೋಲ ಪಿಡಿದು ನಿಂತಾರು ಪ. ಹದಿನಾರು ಸಾವಿರ ಮಂದಿಮುದದಿಂದ ಹೆಜ್ಜೆಯನಿಕ್ಕುತ ಚದುರೆಯರು ಕೋಲಾಟಕ್ಕಾಗಿಒದಗಿ ನಿಂತಾರು1 ನೂರು ಮಂದಿ ನಾರಿಯರೆಲ್ಲಹಾರಭಾರ ಅಲಿಯುತಲೆಮುರಾರಿಯ ಮುಂದೆಲ್ಲಸಾಲು ಸಾಲಿಲೆನಿಂತರು 2 ನೀಲ ವರ್ಣನ ಮಡದಿಯರೆಲ್ಲಮೇಲಾದ ಕೋಲಾಟಕ್ಕಾಗಿಬಾಲೆಯರು ಬಂದೆಲ್ಲಸಾಲಾಗಿ ನಿಂತರು3 ಚಕ್ರಧರನ ಮಡದಿಯರೆಲ್ಲಚಕ್ಕನೆ ಕೋಲಾಟಕ್ಕಾಗಿನಕ್ಕು ಮುಗುಳನಗೆಯಸಖ್ಯದಲೆ ನಿಂತರು 4 ಪ್ರೇಮದಿಂದ ನಾರಿಯರೆಲ್ಲಭಾವೆ ರುಕ್ಮಿಣಿಗೆ ಎರಗಿಶ್ರೀಮಂತ ಧೀಮಂತ ನಮ್ಮಸ್ವಾಮಿ ಗೆಲಿಸೆಂದು 5 ಅಂಗನೆಯರು ರಾಮೇಶನ ಮಂಗಳ ಮಹಿಮೆಯಬೆಳದಿಂಗಳ ತುಂಬಿದರುಮೋಹನಾಂಗ ಚಂದ್ರಗೆ 6
--------------
ಗಲಗಲಿಅವ್ವನವರು
ಮಾಧವ ಸರ್ವೇಶ ಗೋವಿಂದಗೆಲಿಸೆಂದು ಕೋಲಸರ್ವೇಶ ಗೋವಿಂದಗೆಲಿಸೆಂದು ವಿಷ್ಣುವಿನ ಸೋಸಿಲೆ ಮೊದಲೆ ಬಲಗೊಂಬೆ ಕೋಲ 1 ಮಧುಸೂದನ ತ್ರಿವಿಕ್ರಮ ವಿಧಿಪಿತ ವಾಮನ ಸುದತೆ ಶ್ರೀಧರ ಋಷಿಕೇಶ ಕೋಲಸುದತೆ ಶ್ರೀಧರ ಋಷಿಕೇಶನ ನೆನೆದರೆ ಹದಕಾನೆ ವರವ ಕೊಡುವೊನು ಕೋಲ 2 ಪದ್ಮನಾಭ ದಾಮೋದರ ಮುದ್ದು ಸಂಕರ್ಷಣವಸುದೇವ ನಮ್ಮ ಗೆಲಿಸೆಂದು ಕೋಲವಸುದೇವನಮ್ಮ ಗೆಲಿಸೆಂದು ಪ್ರದ್ಯುಮ್ನಅನಿರುದ್ಧರ ಮೊದಲೆ ಬಲಗೊಂಬೆ ಕೋಲ 3 ಅಧೋಕ್ಷಜ ಹರುಷಾಗೊ ನಾರಸಿಂಹ ಪುರುಷ ಸೂಕ್ತದಲೆ ಪ್ರತಿಪಾದ್ಯ ಕೋಲಪುರುಷಸೂಕ್ತದಲೆ ಅಚ್ಯುತಹರುಷದಿ ನಮ್ಮ ಗೆಲಿಸೆಂದು ಕೋಲ 4 ಪಾದ ನೆನದೆವ ಪಂಥಗೆಲಿಸೆಂದು 5
--------------
ಗಲಗಲಿಅವ್ವನವರು
ವಾಣಿ ಪರಮಕಲ್ಯಾಣಿ ನಮೋ ನಮೋ ಅಜನರಾಣಿ ಪಂಕಜಪಾಣಿ ಪ. ಭಳಿರೆ ಭಳಿರೆ ಅಂಬೆ ಭಕ್ತಜನಸುಖದಂಬೆಸುಳಿದಾಡು ಶುಭನಿತಂಬೆ ಅಮ್ಮ ನಿಮ್ಮಹೊಳೆ ಹೊಳೆವ ಮುಖ ಮುಕುರ ಬಿಂಬೆಇಳೆಯೊಳಗೆ ಸರಿಗಾಣೆ ಶಾರದಾಂಬೆ ಪುತ್ಥಳಿಬೊಂಬೆ 1 ವಾಗ್ದೇವಿ 2 ಜಯಜಯತು ಜಗನ್ಮಾತೆ ಜಗದೊಳಗೆ ಪ್ರಖ್ಯಾತೆದಯಮಾಡು ಧವಳಗೀತೆ ಸತತ ಶ್ರೀಹಯವದನ ಪದಕೆ ಪ್ರೀತೆ ಇಳೆಯೊಳಗೆನಯದಿ ಗೆಲಿಸೆನ್ನ ಮಾತೆ ವಿಧಿಕಾಂತೆ 3
--------------
ವಾದಿರಾಜ
ಸರ್ವಾಂತರ್ಯಾಮಿ ಸರ್ವೇಶ ಬಾರೊ ಸರ್ವಸ್ವತಂತ್ರನೆ ಸರ್ವಭಯನಾಶ ಪ ಸರ್ವತಂತ್ರನೆ ಸರ್ವವೇದದಿ ಸರ್ವತತ್ತ್ವದಿ ಸರ್ವಸಾಕ್ಷಿ ನೀ ಸರ್ವವ್ಯಾಪಕ ಸರ್ವದೇವರ ಸಾರ್ವಭೌಮ ಅ.ಪ ಜಡಬೊಂಬೆ ನಾಟಕರಚಿಸಿ ಎಡಬಿಡದೆ ಕುಣಿಸ್ಯಾಡುವಿ ಕಡುಮೋಹಗೊಳಿಸಿ ಕಡುಗೌಪ್ಯದದರೊಳು ನೆಲೆಸಿ ನೀನೆ ಅಗಣಿತ ಕಲ್ಪನೆವೆರಸಿ ಜಡಕೆ ಜಡವಾದ ತೊಡರಿನಾಟದ ಕೆಡಕು ತಪ್ಪಿಸಿ ಪಿಡಿದು ಎನ್ನನು ಒಡೆಯ ನಿನ್ನಡಿ ಭಕ್ತರಾವಾಸ ದಿಡು ಎಂದೆರಗುವೆ ಪಾಲಿಸಭಯ 1 ನಾನಾವಿಧದ ಸೃಷ್ಟಿಗಳ ಸೃಜಿಸಿ ಪೋಣಿಸಿ ಮಾಡಿಟ್ಟ ಭವವೆಂಬ ಮಾಲೆ ಏಳು ಮೋಹವ ತುಂಬಿದೆಲ ಪುಸಿ ಕಾಣದಂತೊಗೆದಿ ಮಹಾಮಾಯದ ಜಾಲ ನಾನು ನೀನೆಂಬ ಜಾಣರೆಲ್ಲ ಬಿದ್ದು ಏನುಕಾಣದೆ ತ್ರಾಣಗೆಟ್ಟರು ಹೀನಮತಿ ನಾನೇನು ಬಲ್ಲೆನು ನೀನೆ ಸಲಹೆನ್ನ ದೀನರಕ್ಷಕ 2 ಪಾವನ ಪರಮಪ್ರಕಾಶ ದೇವ ಭಾವಜನಯ್ಯ ನಿಜಭಾವಿಗಳರಸ ಕೇವಲಸುಗುಣಾಂತರ್ವಾಸ ನಿನ್ನ ಸೇವಕನೆನಿಸೆನ್ನ ಕಾಯೊ ನುತಪೋಷ ಜೀವಜೀವರಜೀವ ಚೈತ್ಯನದೇವ ದೇವರ ದೇವ ನಂಬಿದೆ ಜಾವ ಜಾವಕೆ ಒದಗುತಿಹ್ಯ ಮಹ ನೋವು ಗೆಲಿಸೆನ್ನಯ್ಯ ಶ್ರೀರಾಮ 3
--------------
ರಾಮದಾಸರು
ವೃಂದಾವನ ಲಕ್ಷ್ಮಿ ಜಯಜಯತೂಸುಂದರಿ ಸುಗುಣೆ ಸುಶೀಲೆ ಜಯತು ಜಯಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಕ್ಷೀರಾಬ್ಧಿ ಮಥಿಸಲುಸುಧೆಹುಟ್ಟಿ ಬರಲೂನಾರಾಯಣ ಹರುಷಾಶ್ರು ಸುರಿಸಲೂಧಾರಿಣಿಯೊಳಗದು ಗಿಡವಾಗಿ ಶೋಭಿಸೆನಾರಿ ಲಕ್ಷುಮಿಯಂಗ ತುಳಸಿಯೆಂದೂ1ಆಲಯದಿಪ್ಪತ್ತೆಂಟು ಹೆಜ್ಜೆ ಈಶಾನ್ಯದಿಏಳುದಳಿದ ತುಳಸಿಗಿಡವಮೂಲದಿ ನವರತ್ನವಿಟ್ಟು ಪ್ರತಿಷ್ಠಿಸೆಪಾಲಿಸೆ ವಿಷ್ಣು ತಾನಲ್ಲಿರುವೆನೆಂದು2ಧಾತ್ರಿನೆಲ್ಲಿಯು ವಾಣಿ ಗಿರಿಜೆಯರಂಶದಿಪೃಥಿವಿಯೊಳಿರೆ ಕಂಡು ತುಳಸಿಯಂಕದಲಿಅರ್ತಿಯಿಂದಲಿ ನಟ್ಟು ಪೂಜೆಯನೆಸಗಲುಪ್ರೀತಿಸಿ ಬ್ರಹ್ಮ ವಿಷ್ಣು ರುದ್ರರೆ ವರವೀವರು3ಬೃಂದೆ ಜಲಂಧರನರಸಿ ಪತಿವ್ರತೆ-ಯಂದಿರೆ ವಿಷ್ಣುವೊಲಿಸಿ ದುರುಳರ ಗೆಲಿಸೆಬೃಂದೆ ವರವ ಬೇಡಿ ಸಹಗಮನವಾದ ಸ್ಥಳನಿಂದಾನು ವಿಷ್ಣು ತುಳಸಿಯೊಳ್4ಕಾರ್ತೀಕ ದಾಮೋದರನೆನಿಸಿ ಪ್ರೀತಿಯಿಂದಲಿತುಳಸಿಯಲಿ ತಾ ನೆಲಸಿಘೃತದಿ ಜ್ಯೋತಿಯನಿಟ್ಟು ಪೂಜಿಸಿದವರಿಗೆಅತಿಶಯ ವರವಿತ್ತು ಸ್ವಾಮಿ ಪರಸುವನು5ಕಟ್ಟಿಗೋಮಯದಿ ಬಳಿದೂಹಿಟ್ಟಲಿ ರಂಗೋಲಿ ಬರೆದೂ ನೀರೆರೆದುಶ್ರೇಷ್ಠದಿ ತೀರ್ಥವಗೊಂಡು ನಿರ್ಮಾಲ್ಯ ಧರಿಸಲುಅಕ್ಷಯವರವಿತ್ತು ದೇವಿ ಮನ್ನಿಪಳೂ6ವಿಷ್ಣು ಪಾದದಿ ತುಳಸಿ ದಳದಿಂದರ್ಚಿಸಲುಇಷ್ಟ ಪಡುವ ವಾಸುದೇವನು ತಾನುಇಷ್ಟದಿ ತುಳಸಿ ಚರಿತೆ ನಿತ್ಯದಿ ಪಠಿಸಲುಇಷ್ಟಾರ್ಥ ವರವೀವ ಗೋವಿಂದದಾಸರಿಗೆ7
--------------
ಗೋವಿಂದದಾಸ
ಹರಿನೀ ಪಿಡಿದ ಕಲ್ಲವೆ ರತುನಹರಿನಿನ್ನಡಿಗಲ್ಲದವನೆ ಯವನಪ.ಹರಿನೀನೊಲಿದ ಕಪಿರಾಜ ವಿಧಿಯುಹರಿನೀನೊಲಿಯದಿರೆ ಕಪಿಗೆ ವಧೆಯುಹರಿನೀ ಗೆಲಿಸೆ ಪಾರ್ಥನಿಗೆ ಗೆಲುವುಹರಿನಿನ್ನ ಛಲದಿ ಕೌರವರಿಗಳಿವು1ಹರಿನೀ ಮೆಚ್ಚಿದರ್ಭಕರಾರ್ಯರುಹರಿನೀ ಮೆಚ್ಚದಾರ್ಯರೆ ಕಿರಿಯರುಹರಿನಿನ್ನುಚ್ಚರಿಪರು ಮಾನ್ಯರುಹರಿನಿನ್ನೆಚ್ಚರಿಲ್ಲದ ಜನರ್ಹುಚ್ಚರು2ಹರಿನೀ ಕನಕಗಿರಿಗಣುಕಲ್ಲೆನಿಪೆಹರಿನೀ ತೃಣವೆಟ್ಟ ಮಾಡುತಲಿಪ್ಪೆಹರಿನೀ ಘನಕೆ ಘನತರ ಮಹಿಮಹರಿನೀ ಪ್ರಸನ್ವೆಂಕಟಪ ಹೊರೆಯೆಮ್ಮ3
--------------
ಪ್ರಸನ್ನವೆಂಕಟದಾಸರು