ಒಟ್ಟು 40 ಕಡೆಗಳಲ್ಲಿ , 18 ದಾಸರು , 37 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬರಹೇಳಮ್ಮಾ ಭಾವೇ ಮನೆಗೆ ಬಿರದಂಕ ಹರಿಯಾ| ಚರಣವನ್ನು ಗಾಣದೆನ್ನ ಚಿತ್ರನೆಲೆ ಗೊಳ್ಳದಮ್ಮಾ ಪ ಬಾಲೆಕೇಳೆ ಕುಂತಳೆ ಬೇಸರ ವಿದೇನೇ| ಪಾಲಗಡಲ ಮನೆಯಾ ಬಿಟ್ಟು ಪವನಾಹಾರನ ಪರ್ಯಂಕವನು| ಜಾಳಿಸಿ ತಾನ್ಯಾಕ ಪೋದನೇ ಜಲರುಹ ನಾಭ| ಕಾಲಿಲಲ್ಲದವನಾಗಿ ಕೊಂದು ತಮನನೀಗಿ| ಮ್ಯಾಲಗಿರಿಯ ಪೊತ್ತ ಮರರಿಗ ಮೃತವಿತ್ತಾ| ಭೂಲಲನೆ ಬಡಿಸಿ ಭೂವರಾಹೆನಿಸಿ| ಬಾಲಕರಿಯಲು ರೂಪ ಬೆಡಗಾ ವಿಡಿಸು 1 ಉಡುರಾಜದವನೆ ಕೆಳದೀ ಉನ್ನತಿಯ ನೋಡೇ| ಷಡ್ಗುಣೈಶ್ವರ್ಯವುಳ್ಳಾ ಸುರಮುನಿಸೇವಿತ ಪಾದಾ| ಬೇಡಿ ಭಾಗ್ಯವ ನೀಡುವ ಬಲುದೊರೆ ತಾನಾಗಿ| ಬಡಹಾರುವನಂತೆ ಭೂಮಿ ಬೇಡಿದನಂತೆ| ಕೊಡಲಿಪಿಡಿದರೆ ಸಕುಲ ಮಾಡಿದ ನಾಶಾ ವಡನೆ ವಾನರ ಸಂಗ ವಿರಹರಿಸಿ ಸುರತುಂಗಾ| ತುಡುಗತನದಿ ಬೆಣ್ಣೆತಿನ್ನುವರೆ ರನ್ನೆ 2 ಕರಿರಾಜ ಗಾಮಿನೀ ಕಿರೀಟ ಕುಂಡಲದಾ ಶಿವತ್ವಕುಂಡಲದಿಂದಾ| ಪರಮಪುರಷದೇವನು ಪೀತಾಂಬರಧಾರೀ| ಬರಿಯ ಬತ್ತೆಲೆಯಾಡಿ ಬೌದ್ಯರೋಳಗ ಕೂಡೀ| ತುರಗೀರಿಯ ವನರ ತುಳಿಸುತ ಸುರವರ ಮೊರೆಗೇಳಿ ಬಂದನು ಮನದೊಳು ನಿಂದನು| ಗುರು ಮಹಿಪತಿ ಪ್ರೀಯಾ ಗುಣಗಣನಿಲಯಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬೆಳಗಾಗಲು ಅರಘಳಿಗೆಯು ಇರುತಿರೆ ಸ್ಮರಿಸುವೆ ವಿಶ್ವಮೂರುತಿಯನ್ನು ಬೆಳಗಾಗಲು ಹರಿಧ್ಯಾನವ ಮಾಡುತ ಬಹಿರ ಭೂಮಿಗ್ಹೋಗುತ ಮುನ್ನು 1 ಕಲಿ ಮೊದಲಾಗಿಹ ದೈತ್ಯರನೆಲ್ಲಾ ವಿ- ಸರ್ಜನೆ ಮಾಡುತ ಮತ್ತಿನ್ನೂ ದಂತ ಧಾವನೆಯ ಮಾಡುತ ಶ್ರೀ ಮಾ- ಧವನನು ಸ್ಮರಿಸುವೆ ನಾನಿನ್ನೂ 2 ಮುಖವನು ತೊಳೆಯುತ ಮುರಹರಿ ಧ್ಯಾನದಿ ಶ್ರೀತುಳಸಿಯ ನಮಿಸುತಲಿನ್ನೂ ಮೀಸಲ ನೀರನು ಎರೆಯುತ ಬೇಗದಿ ಮೃತ್ತಿಕಿ ಫಣಿಗಿಡುತಲಿ ಇನ್ನು 3 ಮೂರು ಪ್ರದಕ್ಷಿಣಿ ಮಾಡುತ ಬೇಗದಿ ಮುದದಿ ನಮಸ್ಕರಿಸುತಲಿನ್ನೂ ದೇವರ ಮನೆಕಡೆ ಪೋಗುತ ನಿಂದಿಹ ಜಯವಿಜಯರಿಗೊಂದಿಸಿ ಮುನ್ನು 4 ದೇವರ ದರ್ಶನಕಾಜ್ಞೆಯ ಕೇಳುತ ದೇವರ ಗೃಹದೊಳು ಪೋಗುತಲಿ ಮಾಯಾ ಪತಿಯನು ಮನದೊಳು ಧ್ಯಾನಿಸಿ ವಂದನೆ ಮಾಡುತ ಬೇಗದಲಿ 5 ದೇವರ ಮನೆಯನು ಸಾರಿಸಿ ಶಂಖುಚಕ್ರವುಗದೆ ಪದುಮನ್ಹಾಕುತಲಿ ಗಜವರದನ ಕೊಂಡಾಡುತ ಮುದದಿ ಗಜೇಂದ್ರ ಮೋಕ್ಷನ ಸ್ಮರಿಸುತಲಿ 6 ಗೋವೃಂದದ ಕಡೆ ಪೋಗುತ ಶ್ರೀ- ಗೋವಿಂದನ ಸ್ಮರಿಸುತ ನಿತ್ಯದಲಿ ಗೋಪೀ ಬಾಲನ ಗೋಕುಲವಾಸನ ಗೋವ್ಗಳ ಮಧ್ಯದಿ ಸ್ಮರಿಸುತಲಿ 7 ಬಾಲಕೃಷ್ಣನ ಲೀಲೆಯ ಪೊಗಳುತ ಬಾಲಲೀಲೆಗಳ ಕೇಳುತಲಿ ಪುರಾಣವ ಪೇಳುವ ದ್ವಿಜರಿಗೆ ವೃದ್ಧರಿಗೆರಗುತ ಪ್ರತಿನಿತ್ಯದಲಿ 8 ಮುರಳಿಯನೂದುತ ಮೆರೆಯುವ ಕೃಷ್ಣನ ಅನುದಿನ ಮಾಡುತಲಿ ಸರಸಿಜನಾಭನ ಸ್ಮರಿಸುತ ಮನದಲಿ ಸ್ನಾನಕೆ ತೆರಳುತ ಶೀಘ್ರದಲಿ 9 ನದಿಯ ಸ್ನಾನಕೆ ಪೋಗುವ ಸಮಯದಿ ನಾರದವಂದ್ಯನ ಸ್ಮರಿಸುತಲಿ ಭಾಗೀರಥಿಯಲಿ ಸ್ನಾನವು ಮಾಡುತ ಬಾಗುತ ಸಿರವನು ಬೇಗದಲಿ10 ಫಣಿರಾಜನ ಶಯನದಿ ಮಲಗಿಹ ಶ್ರೀ- ಪರಮಾತ್ಮನ ನೋಡುತ ಬೇಗ ಪಾದಗಳ ಸೇವಿಪ ಶ್ರೀ ಭೂದೇವಿಯ- ರೇನುಧನ್ಯರೆಂದೆನುತಾಗ11 ಪೊಕ್ಕಳ ಮಧ್ಯದಿ ಪೊರಟಿಹ ನಾಳದ ತುದಿಯಲಿ ರಂಜಿಪ ಕಮಲದಲಿ ಉದ್ಭವಿಸಿದ ನಾಲ್ಮೊಗನನು ನೋಡುತ ಬಗೆ ಬಗೆ ಪ್ರಾರ್ಥಿಸುತಲಿ ಇನ್ನು 12 ನೆರೆದಿಹ ಸುರ ಪರಿವಾರವೆಲ್ಲ ಶ್ರೀ- ಹರಿಯನು ವಾಲೈಸುತಲಿನ್ನೂ ಪರಮವೈಭವದಿ ಮೆರೆಯುವ ದೇವನ ಸ್ಮರಿಸುವೆ ಜಲಮಧ್ಯದೊಳಿನ್ನು 13 ದೇವರ ರಥವನು ತೊಳೆಯುವೆನೆಂಬ- ನುಸಂಧಾನದಿ ಸ್ನಾನವು ಮಾಡಿ ದೇವರ ರಥ ಶೃಂಗರಿಸುವೆನೆನ್ನುತ ಶ್ರೀಮುದ್ರೆಗಳ್ಹಚ್ಚುತ ಪಾಡಿ 14 ನಿತ್ಯ ಕರ್ಮಮುಗಿಸುವ ಬೇಗದಿ ಶ್ರೀ- ಹರಿಪೂಜೆಗೆ ಅಣಿಮಾಡುತಲಿ ಪುಷ್ಪಗಳನು ಗಂಧಾಕ್ಷತೆ ಶ್ರೀ ತುಳಸಿಯ ತಂದಿಡುವೆನು ಮೋದದಲಿ 15 ಪಂಚಭಕ್ಷ ಪಾಯಸಗಳ ಮಾಡುತ ಪಂಚಾತ್ಮಕ ನ ಸ್ಮರಿಸುತಲಿ ಮಿಂಚಿನಂತೆ ಹೊಳೆಯುವ ತಬಕಿಲಿ ತಾಂಬೂಲವ ನಿರಿಸುತ ಬೇಗದಲಿ 16 ಬ್ರಹ್ಮನು ಈ ವಿಧ ಪೂಜೆಯ ಪ್ರತಿದಿನ ಬ್ರಹ್ಮನ ಪಿತಗರ್ಪಿಸುತಲಿರಲು ಸುಮ್ಮಾನದಿ ಮಹಲಕುಮಿಯು ಇದ- ನೊಯ್ಯತ ಸುರಮುನಿ ವಂದ್ಯನಿಗೆ ತಾನರ್ಪಿಸಲು17 ಪರಮಾತ್ಮನು ಈ ವಿಧ ಸೇವೆಯ ಕೈ- ಗೊಳುತಲಿ ಸಂತಸ ಪಡಲಿನ್ನು ಅರಿತವರೆಲ್ಲರು ನಿರುತದಿ ಹರಿ ಧ್ಯಾ- ನವ ಮಾಡುತಲಿರೆ ತಾವಿನ್ನು 18 ದೇವಪೂಜೆ ವೈಶ್ವದೇವವು ನಿತ್ಯದಿ ಗೋಬ್ರಾಹ್ಮಣನರ್ಚಿಸಿ ಇನ್ನು ಸಾಯಂ ಸಮಯದಿ ಸಾಧುಗಳೊಡನೆ ದೇವರ ಕಥೆ ಕೇಳುತಲಿನ್ನೂ 19 ಝಾಮಝಾಮದಿ ಜಯಶಬ್ದಗಳಿಂ ಜಯಾಪತಿಯನು ಪೊಗಳುತಲಿ ಆರತಿ ಜೋಗುಳ ಹಾಡುತ ಮುದದಲಿ ಮಧ್ವೇಶಾರ್ಪಣ ಪೇಳುತಲಿ 20 ಮಲುಗುವಾಗ ಮುಕುಂದನ ಸ್ಮರಿಸುತ ಲಯ ಚಿಂತನೆಯನು ಮಾಡುತಲಿ ಕರಮುಗಿಯುತ ಕಾಯೇನ ವಾಚಾ ಎಂ- ದ್ಹೇಳುತ ಪ್ರಾಜ್ಞನ ಸ್ಮರಿಸುತಲಿ 21 ಝಾಮಝಾಮದಿ ಶ್ರೀ ಹರಿ ಮಾಧವ ಆಗಲು ಬೆಳಗಿನ ಝಾವದಿ ಸೃಷ್ಟಿಯ ಚಿಂತನೆ ಮಾಡಿ ಎಂದೆನುತ22 ಮಳಲಗೌರಿ ನೋಂತಿಹ ಸತಿಯರಿಗೆ ಮುರಳೀಧರ ಒಲಿದಿಹನೆನ್ನುತ ಉದಯವಾಗಲು ವಿಶ್ವನ ಸ್ಮರಿಸುತ ವಿಧಿ ನೇಮಗಳನುಸರಿಸುತ್ತ 23 ನಿತ್ಯದಿ ಈ ತೆರವಾಚರಿಸುವ ನರ ಮುಕ್ತನು ಧರೆಯೊಳಗೆಂದೆನುತ ಅತ್ಯುತ್ಸಾಹದಿ ಬರೆದೋದುತಲಿ- ದರರ್ಥವ ತಿಳಿದಾಚರಿಸುತ್ತ24 ಈ ವಿಧ ಚಿಂತನೆ ಮಾಡುವ ಮನುಜಗೆ ದಾರಿದ್ರ್ಯವು ದೂರಾಗುವದು ಮಾರಮಣನು ತನ್ನವರೊಡಗೂಡುತ ವಾಸವಾಗುವನೆಂಬುವ ಬಿರುದು25 ಕರೆಕರೆಗೊಳ್ಳದೆ ಕೇಳಿರಿ ನಿತ್ಯವು ಕನಕಗಿರಿವಾಸನ ಮಹಿಮೆ ಕನಲಿಕೆ ಕಳೆವುದು ಕಮಲನಾಭ- ವಿಠ್ಠಲನು ಕೊಂಡಾಡುತ ಮಹಿಮೆ 26
--------------
ನಿಡಗುರುಕಿ ಜೀವೂಬಾಯಿ
ಭಕುತ ಜನ ಮುಂದೆ ನೀನವರ ಹಿಂದೆ ಪ ಯುಕುತಿ ಕೈಗೊಳ್ಳದೊ ಗಯ ಗದಾಧರನೆ ಅ ಪ ಕಟ್ಟೆರಡು ಬಿಗಿದು ನದಿ ಸೂಸಿ ಪರಿಯುತ್ತಿರೆ | ಕಟ್ಟಲೆಯಲಿ ಹರಿಗೋಲು ಹಾಕಿ || ನೆಟ್ಟನೆ ಆಚೆಗೀಚೆಗೆ ಪೋಗಿ ಬರುವಾಗ | ಹುಟ್ಟು ಮುಂದಲ್ಲದೆ ಹರಿಗೋಲು ಮುಂದೆ ? 1 ಕಾಳೆ ಹೆಗ್ಗಾಳೆ ದುಂದುಛಿ ಭೇರಿ ತಮಟೆ ನಿ- | ಸ್ಸಾಳ ನಾನಾವಾದ್ಯ ಘೋಷಣಗಳು || ಸಾಲಾಗಿ ಬಳಿವಿಡಿದು ಸಂಭ್ರÀಮದಿ ಬರುವಾಗ | ಆಳು ಮುಂದಲ್ಲದೆ ಅರಸು ತಾ ಮುಂದೆ?2 ಉತ್ಸಾಹ ವಾಹನದಿ ಬೀದಿಯೊಳು ಮೆರೆಯುತಿರೆ | ಸತ್ಸಂಗತಿಗೆ ಹರಿದಾಸರೆಲ್ಲ || ಸಿರಿ ವಿಜಯವಿಠ್ಠಲ ವೆಂಕಟಾಧೀಶ ವತ್ಸ ಮುಂದಲ್ಲದೆ ಧೇನು ತಾ ಮುಂದೆ ? 3
--------------
ವಿಜಯದಾಸ
ಮೋಸಗೊಳ್ಳದಂತೆ ಕಾಯೊ ಶ್ರೀಶ ಕರುಣಾಳೊ ಆಶಾಮಗ್ನಮನವ ಹೃಷೀಕೇಶ ನಿನ್ನ ಪದದಲ್ಲಿರಿಸು ಪ. ಹಾದಿ ಬೀದಿಯಲ್ಲಿ ತಿರುಗಿ ಬಾಧೆಗೊಂಡು ಬಳಲಿ ಕಡೆಗೆ ಬೂದಿಯ ಮೇಲೊರಗಿ ಶಾಂತವಾದ ಶ್ವಾನವದು ಕಾದುಕೊಂಡು ಬಾಗಿಲಲ್ಲಿ ಕಾದಲುದರ ತುಂಬುವುದಕೆ ಸಾದರ ಕೊಂಡನ್ಯದಿ ರಸಾಸ್ವಾದನ ಗೈವಂತಾಗಿಹುದು 1 ಕರ್ಣಧಾರರಹಿತ ನಾವೆ ಅರ್ಣವದಿ ಭ್ರಮಿಸುವಂತೆ ದುರ್ನಿವಾರ ಮನಸಿನಿಂದ ಶೀರ್ಣನಾದೆನು ಸ್ವರ್ಣಗರ್ಭಪಾಲಕನು ಪರ್ಣವರವಾಹನ ಹೃದಯಾ- ಕರ್ಣಿಕಾದರಲ್ಲಿ ನಿಂತು ನಿರ್ಣಯವ ತಿಳಿಸು ಬೇಗ 2 ಆಸೆಗೊಂಡು ದುರ್ವಿಷಯದಿ ಬೇಸರದೆ ಭ್ರಾಂತಿಯಿಂದ ದೋಷ ದುರಿತಂಗಳಿಗವಕಾಶನಾದೆನು ದಾಸನೆಂಬ ದೃಷ್ಟಿಯಿಂದ ಕ್ಲೇಶವೆಲ್ಲ ಓಡಿಸಯ್ಯ ಶೇಷಗಿರಿವರ ಶಿಖರಾವಾಸ ನೀನೆ ಶರಣ ಜೀಯಾ 3
--------------
ತುಪಾಕಿ ವೆಂಕಟರಮಣಾಚಾರ್ಯ
ಮೋಸಗೊಳ್ಳದಿರು ಮನವೆ ಹೇಸಿಕೆಯಲಿ ದೋಷವನ್ನು ತಿಳಿಯದೆ ಕೀಳಾಸೆ ಕೆಲಸ ಮಡುವಿನಲ್ಲಿ ಪ. ಫುಲ್ಲ ಪದ್ಮದಂತೆ ಪೊಳೆವ ಚೆಲ್ವ ಮುಖವೆಂಬೀ ಸುರಿವ ಜೊಲ್ವಿ ಶೀಗೆಬೀಜ ಪೋಲ್ವ ಹಲ್ಲ ಸಾಲನೆಲ್ಲಿ ಮರತಿ 1 ಗೆಜ್ಜೆ ಕಾಲುಂಗುರಗಳಿಟ್ಟು ಲಜ್ಜೆ ತೋರಿ ನಗುತ ಬರಲು ಹೆಜ್ಜೆಯನ್ನೆ ನೋಳ್ಪೆ ಹೊಲಸು ಖಜ್ಜಿಯ ಕಲೆಯ ಮರೆತಿ 2 ವಿಟರ ನೋಡುತ ಘಟ ಘಟನೆ ಬರುವಾಕೆಯ ಘಟನೆ ಬಯಸಿ ದುಸ್ಸಂ- ಕಟಗೊಂಬದ್ಯಾಕೆ ಮರೆತಿ 3 ಅಕ್ಷಿಯನ್ನು ತಿರುಹುತ್ತ ಸೂಕ್ಷ್ಮ ವಸ್ತ್ರ ಸುತ್ತಿ ವೇಶ್ಯಾ ಲಕ್ಷಣವ ಕಂಡು ಶುಂಭ ಮಕ್ಷಿಕಾ ವಿಹಾರ ಬಲದಿ 4 ವರನಾರಿಯೆಂಬುದೊಂದೆ ಮರುಳು ಭಾವನೆ ಮೋಹ ಕರವಲ್ಲದೆ ಬೇರೊಂದು ಸರಸತನವಿಲ್ಲಿಂದು 5 ಈಶನಿತ್ತದುಂಡು ನಿತ್ಯ ತೋಷಗೊಳ್ಳದಹೋರಾತ್ರಿ ಘಾಸಿ ಮಾಡದಿರು ಭಾರ- ತೀಶನ ಪದವ ಸೇರು 6 ಬೇಡ ಬೇಡವಿನ್ನು ಭ್ರಾಂತಿ ಮಾಡು ಮೋಹಾಗ್ನಿಗೆ ಶಾಂತಿ ಬೇಡು ಶೇಷಾದ್ರೀಶನಡಿಯ ಕೊಡುವಾಭೀಷ್ಟ ನಮ್ಮೊಡೆಯ7
--------------
ತುಪಾಕಿ ವೆಂಕಟರಮಣಾಚಾರ್ಯ
ರಾಜೀಸುವದು ನಾಭಿಯಾ ಸುರಗಂಗೆಯಂ ಶೇಧೀಭಿಯಾ ಪ ನೇತ್ರನ್ನದಯ ಪೂರ್ಣದಾ ಕಮಲಂ ಹಾರಿಸಿ ನೀಡುವ ಬುದ್ದಿ ವಿಮಲಂ ನೇ ಶ್ರೀ ವೆಂಕಟೇಶಂ ಸದಾ1 ಪೊಗಳಲಿಲ್ಲ ಮತಿ ಸಲ್ಲದೇ ಆಶ್ರಯಸಿ ನೆಲೆಗೊಳ್ಳದೇ ಭವಕಾದೆ ಪರಿಹಾರ ದಾ ಪರಿಯಂ ಕಾಣದೆ ಬೇಡಿ ಕೊಂಬೆ ಧೋರಿಯಂ ಶ್ರೀ ವೆಂಕಟೇಶಂ ಸದಾ 2 ಪಟನಾದೆ ನೆರೆ ಭಾಗ್ಯದೀ ನಡಲಂ ದೀಗಳಿ ಪಶ್ಚಾತ್ತಾಪ ಒಡಲಂ ಮನವಿಲ್ಲ ವೈರಾಗ್ಯ ದೀ ಮುಸುಕಿಷ್ಟು ದನಿವಾರ ದಾ ಕಡಲಂ ಮನಿಯೆ ಕಾಯೋ ಸಾಖರದಿಡಲಂ ಶ್ರೀ ವೆಂಕಟೇಶಂ ಸದಾ3 ಬಿದಿರೀಸಿ ವಢ ಮಾಡಿದೇ ಕೊನಿಯಿಂದ ಕಲಕ್ಯಾಡಿದೆ ಮುದವಿತ್ತೆ ಭಕ್ತಂಗದಾ ಮರಳಂ ಕಾವದು ಭಕ್ತಿಗಿಲ್ಲ ಹುರಳಂ ಶ್ರೀ ವೆಂಕಟೇಶಂ ಸದಾ 4 ಕಾಂತಿಚರಣಾಂಬುಜಭಾವ ಭಕ್ತಿಂದಲಿ ಶರಣಂ ಪೊಕ್ಕವರಿಂಗೆ ಜನ್ಮಮರಣಂ ಹರಿಸೂವದಯದಿಂದಲಿ ಸ್ಮರಣಂ ಮಾಡಲು ಪಾಪಹರಣಂ ಸಲೆ ಸಾಧ್ಯಸುರ ಸಂಪದಾ ಕರುಣ ಬೀರುತ ಕಾಯೋಯನ್ನಹರಣಂ ಶ್ರೀವೆಂಕಟೇಶಂ ಸದಾ 5 ಮಾನವ ತನುಂಪಡದೀಗ ಸದ್ಗತಿಯಾ ಗಡ ಹೊಂದಿ ವಿಷಯೇಚ್ಛೆಯಾ ಅಪರಾಧವನು ಗಣಿ ಸದಾ ಪಿತನಂ ತನ್ನಯ ಕಾಯೋ ಜ್ಞಾನ ಚ್ಯುತ ನಂ ಶ್ರೀ ವೆಂಕಟೇಶಂ ಸದಾ 6 ಮೆಚ್ಚಿ ಸುಮನ ನರಿಯೆನು ಯಂತ್ರಿಪ್ಪ ದಾಂನರಿಯೆನು ಗಜವಂ ತಾರಿಸಿದಂತೆಯನ್ನ ವೃಜಿನಂ ದಾಟೀ ಸುವಾ ಬಿರದಾ ಕುಜನಂ ಸೇರಿದಂತೆ ಯನ್ನಂ ಕಾಯೋದ್ವಿಜನಂ ಶ್ರೀ ವೆಂಕಟೇಶಂ ಸದಾ 7 ಸದನಂ ಸುದ್ಗುಣ ಗಾಣದಬ್ಜವದನಂ ಸ್ಪರ್ಧಿಸುತಿದನುಜರಾ ಕದನಂ ಕರ್ಕಶವಾಗಿ ಸೌಖ್ಯ ಪ್ರದನಂ ಭಾವಿಸುತಿಹ ಮನುಜರಾ ಸುಕುಮಾರ ಘನ ಶಾಮದಾ ಇದನಂ ಬಣ್ಣಿಪರಾರು ವೇದವಿದಿನಂ ಶ್ರೀ ವೆಂಕಟೇಶಂ ಸದಾ8 ಶಿಖಿ ಕೇತನಾ ಕಾಯ ಭಂಡಿಯವಾಧನು ಪ್ರಾರ್ಥನಾ ಪರಬ್ರಹ್ಮ ತುರುಗಾಯ್ವನೆಂದು ಪೊಗಳ್ವಾರಿಂತರಿವರೈ ಚರಿತದಾ ಗುರು ಮಹಿಪತಿ ಕಂದಸಲಹೋ ಸ್ಮರಿಸಲು ಅಷ್ಟಕವಾ 9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ವಾಸುದೇವನನಾ ಶ್ರೈಸದಿಹ ಉಪಾಸನ್ಯಾತಕೆ ಧ್ಯಾಸ ಬಲಿಯದಿಹ ಮಿಗಿಲಭ್ಯಾಸವ್ಯಾತಕೆ ಧ್ರುವ ಹೃದಯ ಶುದ್ಧವಾಗದೆ ಉದಯಸ್ನಾನವ್ಯಾತಕೆ ಬದಿಯಲೀಹ್ಯ ವಸ್ತುಗಾಣದ ಜ್ಞಾನವ್ಯಾತಕೆ ಉದರ ಕುದಿಯು ಶಾಂತ ಹೊಂದದ ಸಾಧನ್ಯಾತಕೆ ಬುಧರ ಸೇವೆಗೊದಗದೀಹ ಸ್ವಧನವ್ಯಾತಕೆ 1 ಭಾವ ನೆಲಿಯುಗೊಳ್ಳ ದೀಹ್ಯ ಭಕುತಿದ್ಯಾತಕೆ ಕಾವನಯ್ಯನ ಕಾಣದೀಹ್ಯ ಯುಕತದ್ಯಾತಕೆ ದೇವದೇವನ ಸೇವೆಗಲ್ಲದ ಶಕುತ್ಯದ್ಯಾತಕೆ ಹ್ಯಾವ ಹೆಮ್ಮೆ ಅಳಿಯದೀಹ್ಯ ವಿರುಕಿತ್ಯಾತಕೆ 2 ತತ್ವ ತಿಳಿಯದಿಹದೀ ವಿದ್ವತ್ವವ್ಯಾತಕೆ ಸತ್ವಗುಣದ ಲಾಚರಿಸದಿಹ್ಯ ಕವಿತ್ಯವ್ಯಾತಕೆ ಚಿತ್ತಶುದ್ಧವಾಗದಿಹ ಮಹತ್ವವ್ಯಾತಕೆ ವಿತ್ತ ಆಶೆಯು ಅಳಿಯದಿಹ ಸಿದ್ಧತ್ವವ್ಯಾತಕೆ 3 ನೀತಿಮಾರ್ಗವರಿಯದೀ ಹ ರೀತ್ಯದ್ಯಾತಕೆ ಮಾತುಮಿತಿಗಳಿಲ್ಲದವನು ಧಾತುವ್ಯಾತಕೆ ಅಮೃತ ಊಟವ್ಯಾತಕೆ ಜ್ಯೋತಿ ತನ್ನೊಳರಿಯದಲೆ ಉತ್ತಮದ್ಯಾತಕೆ 4 ನಿತ್ಯ ಶ್ರವಣವ್ಯಾತಕೆ ನೆನವು ನೆಲೆಯಾಗೊಳ್ಳದಿಹ ಮನನವ್ಯಾತಕೆ ತನುವಿನಲ್ಲಿ ಘನವು ಕಾಣದನುಭವ್ಯಾತಕೆ ದೀನಮಹಿಪತಿಸ್ವಾಮಿಗಾಣದ ಜನಮವ್ಯಾತಕೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ವ್ಯರ್ತವಾಯಿತು ಜನುಮಾ | ಹರಿಭಕ್ತಿ | ಅರ್ಥಿಯ ನೆಲೆಗೊಳ್ಳದೇ ಪ ನೊಣ ಮಧು ಬಿಂದುದಲೀ ಕುಳಿತಂತೆ | ವಣ ವಿಷಯದ ಸುಖಕ | ಹೆಣಗುತ ನಿಶಿದಿನದೀ | ತಾಪತ್ರಯ | ಕುಣಿಯೊಳು ಹೊರಳುತಲೀ 1 ಅವನಿಲಿ ಸಂಸಾರದೀ ಸಂಟರ್ಘಾಳಿ | ರವದಿಯಾ ತೆರೆ ಶಿಲುಕೀ | ವಿಧಿ ಬರ | ಹ್ಯಾವ ತಿಳಿಯದೆ ಮರುಗೀ 2 ಭೋಗಿನಾ ತ್ಯಾಗಿಯಾಗಿ ಆಯುಷ್ಯ | ನೀಗಿ ಯಚ್ಚರವಿಲ್ಲದೇ | ಶ್ರೀ ಗುರುಮಹಿಪತಿ ಸುತಪ್ರಭು | ಭಾಗವತರ ಕೂಡದೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶಾಂತನಾಗು ಮನಸೆ ನೀ ಶಾಂತನಾಗು ಕಂತುಪಿತನ ಅಂತರಂಗದಿ ಧ್ಯಾನಿಸುತ್ತ ಪ ಪೊಡವಿಜನರ ನಡೆಯ ಕಂಡು ಮಿಡುಕು ಗುಣವ ಕಲಿಯ ಬೇಡ ಕೊಡುವ ಸ್ವಾಮಿ ಬಡವನಿಹನೆ ದೃಢವಿಟ್ಟು ಅರಿದು ನೋಡು 1 ಭೂಮಿಯವರು ಕೈಯ ಬಿಡಲು ಸ್ವಾಮಿಕಾರ್ಯ ನಿಲ್ಲುತಿಹ್ಯದೆ ಪಾಮರಾಗದೆ ಸ್ವಾಮಿಸೇವೆ ನೇಮವಹಿಸಿ ಮಾಡು ಬಿಡದೆ 2 ಪಾಪಿನರರ ಮಾತಿಗಾಗಿ ಕೋಪಗೊಳ್ಳದೆ ಸತ್ಯನಾಗು ಗೋಪಾಳ ಸಣ್ಣದಲ್ಲ ನಂಬು ಭೂಪ ಶ್ರೀರಾಮನೊಲಿದು ಕೊಡುವ 3
--------------
ರಾಮದಾಸರು
ಶ್ರೀ ರಮಣಿಯರಸ ಕಂ ಜೋದ್ಬವಾರ್ಚಿತ ಪುಣ್ಯ | ಚಾರುತರ ಯುಗ್ಮಪದ ರಂಜನಾಸುರ ಸಂ | ಹಾರ ಸುರ ಜನ ಪಾಲ ಪರಮಾನಂದ ಸಾ | ಕಾರನಲಿದುಪ್ಪವಡಿಸಾ ಹರಿಯೇ ಪ ಹರಿವೇಗ ಮಂಮೀರ್ವ ಹರಿಗಳೇಳಂಗಳದಲಿ | ಹರಿಯಾಗ್ರಜನನಿಂದ ಹರಿಪದದೊಳಗ ಜವದಿ ಹರಿವುತಿಹ ಝಗ ಝಗಿಪ ಹರಿಮಯದ ರಥದೊಳಗ | ಹರುಷಾದೊಳಡರ್ದು ಬಳಿಕಾ || ಹರಿದಿಕ್ಕಿ ಲಿಂದೊಗೆದು ಹರಿಜಗಳ ವಿಸ್ತರಿಸಿ | ಹರಿಯುಮೊದಲಾದವರ ಹರಿಸಿ ತೇಜವ ಜಗಕ | ಪರಿ ಹರಿಸಿ ಉದಿಸಿದಹರಿಯು ನರಹರಿಯೆ ಉಪ್ಪವಡಿಸಾಹರಿಯೇ1 ಪವನಜ ಖಗರಾಜ | ಭಜಿಪಧ್ರುವದ ಶಶಿರಾನುಜ ಭಿಷ್ಮಾ ತನ್ನ ಆ | ತ್ಮ ಜರಿತ್ತ ರಿಕ್ಷಪತಿ ರಜನೀಶ ವಾನ್ನರ | ಧ್ವಜ ವಿಧುರ ಅಂಬರೀಷಾ || ದ್ವಿಜ ಪುಂಡಲೀಕ ಪದ್ಮಜ ಮುಖ್ಯರಾದ ನಾ | ಶುಕ ಉದ್ಧವ ಬಲಿ ಜಯ ವಿಜಯರ ಕೂಡಿ | ಸುಜನರೈ ತಂದ | ರಂಬುಜ ಪದಕ ನಮಿಸೆ ವಾ | ರಿಜನಾಭ ಉಪ್ಪವಡಿಸಾ ಹರಿಯೇ 2 ಪಾಕ ಶಾಸನ ಅಗ್ನಿ ಆಕಾಳ ನೈಋತಿರ | ತ್ನಾಕರ ಪ್ರಭಂಜನಪಿ ನಾಕಿವರ ಕೌಬೇರ | ನಾಕೆರಡು ದಿಕ್ಕಿನವರೇಕೋ ಭಾವದಲಿಂದ ನಾಕ ಪುರಗಜ ಅಜಮಹಾ ಕೋಣ ಮನುಜ ಮಕ | ಹಾಕುರಂಗಂದಣವು ಗೋಕುಲೆಂದ್ರನು ಇಂತು | ವಾಹನ ವಿವೇಕದೇರಿ ಬಂದಿದೆ | ಲೋಕೇಶ ಉಪ್ಪವಡಿಸಾ ಹರಿಯೇ3 ಶ್ರೇಷ್ಠ ಕಶ್ಯಪ ಋಷಿ ವಶಿಷ್ಠ ಗಾರ್ಗೇಯ ತಪೋ | ನಿಷ್ಠ ವಿಶ್ವಾಮಿತ್ರ ಸೃಷ್ಠಿಯೊಳ ಜಲದ ಸಂ | ದಷ್ಟ ವರುಣನ ಗರ್ವ ಭಷ್ಟ ಮಾಡಿದಗಸ್ತಿ | ಅಷ್ಟಾದಶ ಧ್ವಯ ಬಾರಿ ಸೃಷ್ಟಿರ ಚನೆಯ ಕಂಡ | ತುಷ್ಟ ಬಕದಾಲ್ಪ್ಯ ಉತ್ಕøಷ್ಟ ಸನಕಾದಿಗಳು | ದೃಷಮಾನಿಸರಾಗಿ ಮುಟ್ಟಿಸ್ತುತಿ ಸುತಲಿದೇ | ಕೃಷ್ಣ ನೊಲಿ ದುಪ್ಪವಡಿಸಾ ಹರಿಯೇ 4 ವರ ವಾಮ ದೇವಾತ್ರಿ ಪರಮಗಾಲ ವನುಸೌ | ಭರಿಯ ಕೌಡಿಣ್ಯ ಸುಖ ಭರಿತ ಕೌಸಿರ ಮತಿ | ಪರಿಪೂರ್ಣ ಜಯಾಮುನೀರ್ವರು ಭರತರುಸುಗುಣ ಶರಧಿ ವೈಶಂ ಪಾಯನಾ|| ಸುರಪುರೋಹಿತ ಮಹಾ ಸುರರ ವಂಶಾವಳಿಯು | ತರಣಿಜ ಬುಧಾದಿಗಳ | ಕರದೊಳು ಸುಫಲವಿರಿಸಿ ಹರುಷಾದಲಿ ನಿಂದಿದೆ || ಪರಬೊಮ್ಮ ಉಪ್ಪ ವಡಿಸಾ ಹರಿಯೇ 5 ಡಮರುಧರ ಜಡೆಯೊಳಗ ಸಮುಲ್ಲಾಸದಲಿ ಮೆರೆವ ಅಮರ ನದಿ ಪಾಪಹರ ಸಮಕೃಷ್ಣ ವೇಣಿ ಸು | ವಿಮಲ ಗೋದಾವರಿ ಕುಮುದ್ವತಿ ಕಾವೇರಿ | ಶ್ರಮಹಾರಿ ತುಂಗ ಭದ್ರಿ || ಯಮುನಿ ಫಲ್ಗುಣಿ ಮಹೋತ್ತಮ ಸರಸ್ವತಿ-ಕಪಿಲ | ನರ್ಮದಿ ಮೊಲಾಗಿ ಅಮಲಗ್ರೋದ ಕವ | ಕ್ರಮದಿಂ ಕೊಂಡು ನದಿ ಚಮು ಬಂದಿದೇ ಪೊರಗ | ಕಮಲಾಕ್ಷ ಉಪ್ಪವಡಿಸಾ ಹರಿಯೇ6 ದಾರುಣೀ ಚರರಾದಾ ಚಾರುಗೋ ಬ್ರಾಹ್ಮಣರು | ಸಂರಕ್ಷಣೆಯ ಮಾಳ್ವ ಧೀರಯ ಯಾತಿ | ಮೇರು ಸಮ ಹರಿಶ್ಚಂದ್ರ ವೈರಾಟ ಪತಿಜನಕ | ಆರಾಯ ನಳ ನಹುಷನು || ಶೂರ ಹಂಸಧ್ವಜನು ಸಾರಿ ವಿಷ್ಟಕ್ಸೇನ | ವೀರ ಪಾಂಚಾಲನ - ಕ್ರೂರ ಚಂದ್ರಹಾಸ ಮ | ಯೂರ ಧ್ವಜ ಪ್ರಮುಖರಾರತದಿ ಬಂದರಿದೆ | ಕಾರುಣನೆ ಉಪ್ಪಾವಡಿಸಾ ಹರಿಯೇ 7 ವಾರಿಯೋಳ್ ನಡೆವಹತೇರಗಜ ಶೃಂಗರಿಸಿ | ಏರಿಬಂದಿಳಿದು ಮಹಾ ವೀರ ಭಟರೋಗ್ಗೀನೊಳು | ಬಾರಿ ಬಾರಿಗೆ ನಿಮ್ಮ ಚೀರುತ ಬಿರುದಂಗಳನು ಭೂರಿಜನ ಸಚಿದಣಿಸುತಾ || ಪಾರವಿಲ್ಲದ ಪಟಹ ಭೇರಿ ನಿಸ್ಸಾಳತಹ | ಳಾರವರಿದು ಊದುತಲಿ ಈ ರೀತಿ ನೃಪರದಳ | ಚಾರುವಾಲಗವ ಮನವಾರಗುಡುತಿದೆ ಪರಮ ಶೌರಿ ವಲಿದು ಪ್ಪವಡಿಸಾಹರಿಯೇ 8 ಕೇಣವನು ಗೊಳ್ಳದಿಹ ಜಾಣ ಕಲೆಯಿಂದ ಗೀ | ರ್ವಾಣ ಸ್ತ್ರೀಯರು ನೃತ್ಯ ಮಾಣುತಲಿ ಬರೆಕರದಿ | ವೀಣೆಯನು ತಾಂ ಪಿಡಿದು ವಾಣಿ ತುಂಬರ ಸುಪ್ರ ವೀಣನಾರದ ಗಣಪನು || ಶ್ರೇಣಿಯಿಂ ತೊಡಗೂಡಿ ತ್ರಾಣದಿಂದಲಿ ನಾಮ | ವಾಣಿಯಲಿ ವಚಿಸುತಿದೆ ಕಾಣಲ್ಕೆ ನಿಂದಿದೆ | ಏಣಾಂಕನುಜೆ ಮುಗಿದು ಪಾಣಿಯನು ಗುರು ಮಹಿಪತಿ ಪ್ರಾಣನೊಲಿದುಪ್ಪವಡಿ ಸಾ ಹರಿಯೇ 9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಾರಿದವರನು ಹೊÉರೆವ ಧೀರನಿವನಾgನೀರೆ ನಂಬು ಹಯವದನನುದಾರ ಶ್ರೀಮಂತೂರ ಹರಿಯ ಪ. ವಜ್ರ ವಧುಗಳಲ್ಲಿವಾಕ್ಯಕೆ ತನ್ನ ನಿಜವ ತೋರನೆ1 ಅಸುರ ಭಟರ ನಿಶಿತ ಶರಕೆಪೆಸರುಗೊಳ್ಳದ ಗೋಪಸತಿಯರಶಶಿಮುಖಿಯರ ನಖದ ಕೊನೆಗೆವಶವ ಮಾಡನೆ ರಸಿಕರರಸ 2 ಮಲ್ಲರ ಬಲುಭುಜದ ಕುಶಲದಲ್ಲಿ ಸಿಲುಕದದ್ಭುತಮಹಿಮಚೆಲ್ವ ಗೋಪಿಯರಪ್ಪಲು ಕರ-ಪಲ್ಲವದೊಳಾದುದಿಲ್ಲವೆ 3
--------------
ವಾದಿರಾಜ
ಸುಮ್ಮನಹುದು ನೋಡಿ ಸ್ವಾತ್ಮ ಸುಖದನುಭವ ಹಮ್ಮಳಿದು ತನ್ನೊಳು ತಾ ತಿಳಿಯದನಕ ಧ್ರುವ ಏನು ಕೇಳಿದರೇನು ಏನು ಹೇಳಿದರೇನು ಖೂನದೋರದು ತಾನು ಸ್ವಾನುಭವದ ನಾನೆಂಬುದೆನಲಿಕ್ಕೆ ಏನು ಮಾಡಿದರೇನು ಜ್ಞಾನ ಗಮ್ಯವಸ್ತು ತಾನೊಲಿಯದನಕ 1 ಕನಸು ಮನಸಿನ ಕಲಿಯು ಕಲಿತು ಕೆಟ್ಟಿರಲಿಕ್ಕೆ ಅನುಮಾನಗಳಿಯದಪಭ್ರಂಶಗಳಿಗೆ ಅನುದಿನದಲಾಶ್ರಯಿಸಿ ಘನಗುರು ಶ್ರೀಪಾದವನು ನೆನೆನೆನೆದು ಸುಖವು ನೆಲೆಗೊಳ್ಳದನಕ 2 ಮಹಾ ಮಹಿಮೆಯುಳ್ಳ ಗುರುದಯ ಪಡಕೊಂಡು ಮನೋಜಯಸುದಲ್ಲದೆ ಘನಮಯ ಹೊಳೆಯದು ಮಹಿಪತಿಯ ಸ್ವಾಮಿ ಸದ್ಗುರು ಭಾನುಕೋಟಿ ತೇಜ ಬಾಹ್ಯಾಂತ್ರ ಪರಿಪೂರ್ಣ ತಾನಾಗದನಕ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸುಮ್ಮನೆ ದೊರಕೊಂಬುದೆ ಬ್ರಹ್ಮಾನಂದದ ಮೂರ್ತಿಯ ನೇಮಿಸಿ ನೋಡದೆ ಧ್ರುವ| ಕಣ್ಣುಗಳಾಡಗುಡದೆ ಕಣ್ಣಿನೊಳಗಿಟ್ಟುಕೊಂಡು ಕಣ್ಣುಕಂಡುಡುಗಾಣದೆ ಘನ ಗುರುಮೂರ್ತಿಯ 1 ಮನಗಲ್ಪನೆಗ್ಹರಿಯಗೊಡದೆ ಮನಸಿನೊಳಿಟ್ಟುಕೊಂಡು ಮನಗುಂಡು ನೆಲಿಯುಗೊಳ್ಳದೆ ಘನಗುರು ಶ್ರೀಪಾದ 2 ಹೃದಯದಲಿ ನೆಲಿಯುಗೊಂಬನೆ ಮಹಿಪತಿಗುರುಸ್ವಾಮಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಯಲರಿಯದು ಜನ್ಮ ಗುರುಪಾದವರಿಯದೆ ಧ್ರುವ ಬಯಲು ಭಾವಿಸಿ ನಿರ್ಬೈಲ ನೆಲೆಗೊಳ್ಳದೆ ಭಾವಭಕ್ತಿಯ ಕೀಲು ಹೊಯಿಲು ತಿಳಿಯದೆ 1 ರವಿ ಶಶಿಯನೊಡಗೊಡಿ ಶಿವಸುಖವ ತಿಳಿಯದೆ ಸೂತ್ರ ಸೋಹ್ಯ ಹೊಳಿಯದೆ 2 ಆಧಾರವಂ ಬಲಿದು ಆರೇರಿ ಬೇರಿಯದೆ ಮಹಿಪತಿ ನಿನ್ನೊಳು ಗುರುಗತಿ ಅರಿಯದೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರೇ ಕೃಷ್ಣ ಲೋಕನಾಯಕ ಪಾಲಿಸೆನ್ನ ದೊರೆ ಸರ್ವ ಸೌಖ್ಯದಾಯಕ ಪ. ಮೂಢ ಚಿಂತೆ ಎಂಬುದೋಡಿಸು ಕರುಣವಿರಿಸು ಸದಾ ನಿನ್ನ ಸ್ಮøತಿಯ ನೀಡಿಸು ಉದಾಸೀನಭಾವದೂಡಿಸು ಭೂಪ ನಿನ್ನ ಪದಾಬ್ಜವನು ಶಿರದೋಳಾಡಿಸು 1 ಪರಮನೋವೃತ್ತಿ ತಿಳಿಯದೆ ನಿತ್ಯದಲ್ಲಿ ಕರಗಿ ಕಲ್ಮಶವನು ತಾಳಿದೆ ಮರುಗಿ ಮುಗ್ಗಿ ಮುಂದುಗಾಣದೆ ತತ್ವ ತಿಳಿಯ- ದಿರುವೆ ನಿಂತು ಕಂಪುಗೊಳ್ಳದೆ 2 ಈಶ ನೀನೊಬ್ಬನಲ್ಲದೆ ದಾಸನನ್ನು ಪೋಷಿಸುವರ ಕಾಣೆ ಲೋಕದಲಿ ಬೇರಿನ್ನು ಬೇಡವೆನ್ನಲಿ ವೆಂಕಟಾದ್ರಿ ಭೂಪ ಬೇಗ ಕಾಯೊ ಕರುಣದಿ 3
--------------
ತುಪಾಕಿ ವೆಂಕಟರಮಣಾಚಾರ್ಯ