ಒಟ್ಟು 198 ಕಡೆಗಳಲ್ಲಿ , 51 ದಾಸರು , 176 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂಥಾದೆಲ್ಲದೆ ತಾಂ ನೋಡಿ ಸತ್ಸಂಗದಸುಖಾ ಇಂಥಾ ಅಂಥಿಂಥವರಿಗಿಂಥಾದೈಲ್ಲದೆ ನೋಡಿ ಧ್ರುವ ಒಂದೊಂದುಪರಿ ಕೇಳಿಸುವ ಹ ನ್ನೊಂದರ ಮ್ಯಾಲಿನ್ನೊಂದರ ಘೋಷ ಧೀಂ ಧೀಂ ಧೀಂ ಧೀಂ ಧೀಂ ಧೀಂ ಧೀಂ ಧೀಂ ಮಿಡುಗತಿಹ್ಯ ಆನಂದಸುಖ 1 ಉದಯಾಸ್ತಿಲ್ಲದೆ ಬೆಳಗಿನ ಪ್ರಭೆಯು ತುದಿಮೊದಲಿಲ್ಲದೆ ತುಂಬಿತು ಪೂರ್ಣ ಬುಧಜನರನುದಿನ ಸೇವಿಸುತಿಹ್ಯ ಸದಮಲವಾದ ಸದಾ ಸವಿಸುಖ2 ವಿಹಿತ ವಿವೇಕದ ಅನುಭವಗೂಡಿ ಬಾಹ್ಯಾಂತ್ರದ ಘನದೋರುತಲಿಹ್ಯ ಸ್ವಹಿತಸುಖದ ಸುಧಾರಸಗರೆವ ಮಹಿಪತಿಗುರು ಕರಣದ ಕೌತುಕ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದಿನ ದಿನ ಸುದಿನವಿದು ನೋಡಿ ತಂದೆ ಸದ್ಗುರು ಕೀರ್ತಿಯ ಕೊಂಡಾಡಿ ಧ್ರುವ ಸಾರ್ಥಕವಾಯಿತು ಜನ್ಮಕ ಬಂದು ಕರ್ತು ಸದ್ಗುರು ಕರುಣವ ಪಡೆದಿಂದು ಮಾಯಾ ನೋಹದಸಂದು ಆರ್ಥಿ ಆಯಿತು ಮನದೊಳು ನಮಗಿಂದು 1 ಕೇಳಿದೆವು ಹರಿನಾಮದ ಘೋಷ ಹೊಳೆಯಿತು ಮನದೊಳು ಅತಿ ಉಲ್ಹಾಸ ಕಳೆದೆವು ಕತ್ತಲೆ ಜ್ಞಾನದ ದೋಷ ಬೆಳಗಾಯಿತು ಗುರುಜ್ಞಾನ ಪ್ರಕಾಶ 2 ಸೇವಿಸಿ ಸದ್ಗುರು ನಾಮಸುರಸ ಆಯಿತು ಮನ ಚಿದ್ಭನ ಸಮರಸ ಹೋಯಿತು ಭವಭಯದ ತಾ ಕ್ಲೇಶ ಮಹಿಪತಿಗಾಯಿತು ಅತಿ ಸಂತೋಷ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದಿರೆಯೊಡನೆ ನಿಲಯಕೆ ಬಂದಾ ಪ ಬೃಂದಾವನಾಂಚನನು ಶರ ದಿಂದುವದನ ಮುನಿವೃಂದ ನುತಚರಿತ ಅ.ಪ ಗಜ ತುರಗ ಪತಾಕ ತು ತ್ತೂರಿ ವರ ಛತ್ರಿ ಚಾಮರ ತಾಳ ಮೇಳ ಬಿರುದಾವಳಿ ಸಹಿತದಿ ಪೌರಬೀದಿಯಲಿ ಮೆರೆಯುತ ಶೌರಿಯು 1 ಪಾರಿಜಾತ ಸುಜಾತ ಮಲ್ಲಿಕಾ ಚಾರು ಮಾಲತೀಹಾರ ತುಳಸೀ ಹಾರವನರ್ಪಿಸಿ ನೀರಜನಾಭನಿಗೆ ನಾರಿಜನರು ಆರತಿಯನು ಬೆಳಗಿರೆ 2 ವೇದಘೋಷ ಜಯಘೋಷ ಜನರ ಸಂ ತೋಷ ಧ್ವನಿಯು ತುಂಬಿತು ಗಗನ ಯಾದವ ವಂಶ ಪ್ರಸನ್ನನು ಎಮ್ಮವ ನಾದನಿಂದು ಹಿರಿದಾಯಿತು ಜನುಮವು 3
--------------
ವಿದ್ಯಾಪ್ರಸನ್ನತೀರ್ಥರು
ಇಂದು ಧರಿಯೊಳು ಬ್ರಹ್ಮಾನಂದವನು ತುಂಬಿ ತುಳುಕತಿಹ್ಯಾನಂದಮಯ ಕಾಯದೊಳು ಕೌತುಕವು ನಾದಬಿಂದು ಕಳಿಯಲಿ ಸ್ತುತಿಸಲೆನ್ನಳವಲ್ಲ ಕ್ಷಿತಿಯೊಳು ಘನಮಹಿಮೆ ಅತಿಹರುಷವನು ದೋರುತಿಹ್ಯ ಸದ್ಗತಿ ಸುಖವು ಗುರುದಾಸರು 1 ಓಂಕಾರ ಮೊದಲಾದ ಶ್ರುತಿವೇದ ಘೋಷಗಳು ಧಿಮಿಧಿಮಿಸುವ ಮಹಾಶಬ್ದಗಳು ವಾದ್ಯಗಳು ಕೇಳುವದು ನೀದೃಶ್ಯೆಲಿ ಗರ್ಜಿಸುವ ಭೃಂಗಿಶಂಖನಾದ ಧ್ವನಿಯಗಳು ಭೋರಿಡುವ ಭೇರಿ ಮೃದಂಗ ವೇಣಿಯಗಳು ಚಿಣಿ ಚಿಣಿ ತಂತ್ರ ಮೊದಲಾದ ಸಂಕಾರಗಳು ಕೇಳಿ ಪಾವನವಾದೆನು 2 ಬೆರೆದು ನೋಡಲು ಅಂತರಾತ್ಮದೊಳು ಪ್ರಭೆಯಗಳು ಥಳಥಳಿಸುವಾ ಮಹಾತೇಜಗಳು ಪುಂಜಗಳು ಹೇಳಲಿನ್ನೇನದ ಹೊಳವಗಳು ಸುಳವಗಳು ನೋಡುವದು ಅನಿಮಿಷದಲಿ ರವಿ ಶಶಿ ತಾರೆಗಳು ಸೂಸುತಿಹ್ಯ ಕಿರಣಗಳು ಭಾಸಿಸುವ ನಾನಾವರ್ಣಗಳು ಛಾಯಗಳು ಬೆರಗಾದೆÀನಿಂದ 3 ವರ್ತಿಸುತ್ತಲಿಹ ಪ್ರವೃತ್ತಿ ನಿವೃತ್ತಿಗಳು ಅಂತರಾತ್ಮದ ವಾಯುಸ್ತುತಿಯಗಳು ಗತಿಯಗಳು ತಿಳಿವದೀ ಪ್ರಣಮ್ಯಲಿ ಸೂಸುತಿಹ ಶ್ವಾಸವುಚ್ಛ್ವಾಸನಿಯ ಭಾಸಿಗಳು ಶೋಭಿಸುವ ಜೀವನದ ಮಂತ್ರ ಸರ ಮಾಲೆಗಳು ಪಾವನವಾದೆನು 4 ಕರದ್ವಯಂ ಮುಗಿದು ವರಗುರುಚರಣಕಮಲಕಿ ನ್ನೆರಗಿ ಪರಮಾನಂದ ಹರುಷದಿ ಶಿರಸದಿ ಶ್ರೀಗುರುಮೂರ್ತಿಯ ನೆನೆವೆನು ಸದ್ಭಾವದಿಂದ ಸದ್ಗುರು ಪಾದಮಂಪಿಡಿದು ಸದ್ಬ್ರಹ್ಮರಸದೊಳು ಮುಳುಗಿ ಸದ್ಭಕ್ತಿಯಲಿ ಸದ್ಗತಿ ಸಾಧನವು ಸಾಧಿಸಿಹ್ಯ ಮಹಿಪತಿಯು ] ಶ್ರೀ ಗುರುಕೃಪೆಯಲಿನ್ನು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ವನಜದಳಾಂಬಕ ದೊರೆಯ ಪ. ಕನಸಿನಲೆ ಕಂಡೆನು ಮನಸಿಜನಯ್ಯನ ದನುಜಸಂಕುಲವನೆಲ್ಲವ ಕ್ಷಣದಿಸವರಿದ ಕಡುಗಲಿರಾಮನ ಅ.ಪ. ವರ ರನ್ನಹಾರ ಕಿರೀಟ ಕೋಟಿತರಣಿಸನ್ನಿಭಸಂಕಾಶ ಕೌಸ್ತುಭ ಶ್ರೀವತ್ಸ ಲಾಂಚಿತವಕ್ಷ | ಕೊರಳೊಳು ಧರಿಸಿರ್ಪ ವರರತ್ನ ಹಾರಂಗಳ್ | ತರುಣಿ ಶ್ರೀ ತುಳಸೀ ವನಮಾಲೆಯಿಂದೊಲಿಯಲ್ | ಪರಮ ಮಂಗಳಮೂರ್ತಿವರದ ಹಸ್ತವನೆತ್ತಿ | ಶರಣಜನ ಮೋಹಿಪ ದುರುಳ ರಕ್ಕಸರ ಬೇರಸವರಿದ ಪಾರಕೀರ್ತಿ | ಅರಿತೆನಾ ತರಳ ಪ್ರಹ್ಲಾದನಂ ಪೊರೆದ ಕರುಣಾಮೂರ್ತಿ 1 ವೇದಪಾರಾಯಣಗೈವ ವರದ್ವಾದಶನಾಮದಿ ಮೆರೆವ ಕೀರ್ತನದಿಂ ಮೈಮರೆವ | ಸಾಧುಸಜ್ಜನವೃಂದ ಭಕ್ತಿಭಾವದಿ ಕೈಕಟ್ಟಿ | ಶ್ರೀಧರಾಚ್ಯುತ ಪಾದ ಸಮ್ಮುಖದಿ ನಿಂದು ಭಜಿಪರ ಪರಮಾದರದೆನೋಡಿ | ಶ್ರೀದೇವಿ ಕೆಲದೋಳ್ ನೆಲಸಿರಲ್ ಮನದಿ ಸಂತಸವು ಮೂಡಿ | ಸಾದರದಿ ಕರೆದಾದರಿಸಿ ಕಾಂಕ್ಷಿತಾರ್ಥವನೀಡಿ | ಮೋದಗೊಳ್ಳುತಿಹ ಶ್ರೀಧರನ ಕಂಡು ಮೈಮರೆದೆನೇನಿವನ ನೋಡಿ 2 ಕನಕಖಚಿತ ರತ್ನಮಂಟಪದ ಮಧ್ಯೆ | ಮಿನುಗುವ ಮಣಿಪೀಠದಿ ವೈದೇಹಿ | ವನಜಾಕ್ಷಿ ಕುಳಿತಿರಲು ಕೆಲದೊಳ್ ಮರುತಾತ್ಮಜ | [ನುನಮಿಸ] (ರ)ಲು ಪರಮಸಂಭ್ರಮದಿ ಸೋದರರು ಸಂಸೇವಿಸೆ | [ವÀನ] ತರಣಿಸುತ ಸಪರಿವಾರ ಸಂಭ್ರಮಿಸೆ, ಶರಣ ವಿಭೀಷ | ಣನು ಜಯಘೋಷವೆಬ್ಬಿಸೆ ವರವಸಿಷ್ಟಾದೈಖಿಲ | ಮುನಿವರ ರಾಶೀರ್ವಚಿಸೆ ಸರಸವಚನವೆರಸಿ ರಘುವರ ವರನೆ ತಾನೆಂದು ತೋರೆ 3
--------------
ನಂಜನಗೂಡು ತಿರುಮಲಾಂಬಾ
ಇಂದೆನ್ನ ಜನ್ಮ ಪಾವನವಾಯಿತು ತಂದೆ ಶ್ರೀಗುರು ನಿಮ್ಮ ಚರಣ ದರುಶನದಿ ಧ್ರುವ ಅರ್ಕ ಮಂಡಲಗಳು ರವಿಶಶಿ ಕಿರಣವು ಝಳಝಳಿಸುವ ಪ್ರಭೆ ನೋಡಿ ಅನಿಮಿಷದಾದೃಷ್ಟಿಲೆನ್ನ ಲಕ್ಷಿಯೊಳು ಸಾಕ್ಷಾತ್ವಸ್ತು ಗತಿಯು ನಿಮ್ಮ ಪ್ರಕಾಶವನು ಕಂಡಾಂಧತ್ವಗಳದಿನ್ನು 1 ಓಂಕಾರ ಮೊದಲಾದ ದ್ವಾದಶ ನಾದದಾ ಭೇದದಾ ಘೋಷವನು ಕೇಳಿನ್ನೀ ದೃಶ್ಯದಾ ಕರ್ಣಲೆನ್ನಾ ಲಯಲೀಲೆಯೊಳು ಸಾದೃಶ್ಯ ಮೂರ್ತಿಯು ನಿಮ್ಮ ಶ್ರುತಿಗಳು ಕೇಳಿ ಬಧಿರತ್ವವಾಗಳಿದಿನ್ನು 2 ಜಪವನ್ನು ತಿಳಿದು ಪ್ರಣಮ್ಯಲೆನ್ನ ಮೂರ್ತಿ ನಿಮ್ಮ ಮಂತ್ರವನು ತಿಳಿದು ಪಿಶಾಚತ್ವ ಕಳೆದಿನ್ನು 3 ಸ್ತುತಿ ಸ್ತೌತ್ಯ ಸ್ಮರಿಸುವ ದಿವ್ಯನಾಮಾಮೃತವ ನುಡಿದು ಪಯಸ್ವನೀ ಜಿಹ್ವೆಲೆನ್ನ ಮೂರ್ತಿ ನಿಮ್ಮ ಸ್ಮರಿತ ಗತಿವರಿತು ಮೂಕತ್ವ ಕಳೆದಿನ್ನು 4 ಚಿನ್ಮಯ ಚಿದ್ರೂಪ ಕಂಡು ಬೆರಗಾಗಿ ಮನ ಭ್ರಾಂತಿ ಅಜ್ಞಾನವನ್ನು ಜರಿಯಲೆನ್ನ ಏಕೋದೇವ ಈತ ವಿಶ್ವಾತ್ಮ ಹಂಸನೆಂದು ಸಂದೇಹ ಸಂಕಲ್ಪ ಬಾಧೆಯಾಗಳದಿನ್ನು 5 ಭಕ್ತಿ ಮುಕ್ತಿ ಉದಾರಿ ಆತ್ಮದಲಿ ಸಾರಿದೋರಿ ನಿಜ ಬೋಧಾಮೃತ ಬೆರೆದು ತಾರಿಸಲೆನ್ನ ಗರ್ಭಪಾಶದ ಬಲಿಯು ಹರಿದು ಧರೆಯೊಳಿನ್ನು ಉತ್ಪತ್ತಿ ಸ್ಥಿತಿ ಲಯದ ಬೀಜವನ್ನು ಹುರಿದಿನ್ನು 6 ಭಾಸ್ಕರಸ್ವಾಮಿಯ ಕರುಣಾಳು ಮೂರ್ತಿಯ ಮೂಢ ಮಹಿಪತಿಯ ಕೃಪಾಂಬುಧಿಯು ಕರುಣದಭಯ ಹಸ್ತವನು ಶಿರಸದಲ್ಲಿಡಲಾಗಿ ಧನ್ಯನಾದೆನು ಸತಿಪತಿ ಸಹಿತವಾಗಿನ್ನು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇವೆ ಗುರುಕೃಪೆಯದಾಟಗಳು ಧ್ರುವ ಮನಯೋಗದ ಗೋಲ್ಹಾಟಗಳು ಅನುದಿನ ಅನಿಮಿಷ ನಯನದ ನೋಟಗಳು ಜ್ಞಾನ ಸಮುದ್ರದ ಲೋಟಗಳು ಏನೇಂದ್ಹೇಳಲಿ ಸ್ವಾನಂದದ ಸುಖ ಅನಂದೋಬ್ರಹ್ಮದ ಆಟಗಳು 1 ಸೊನ್ನೆಯ ಸೂಟಿಗಳು ತಾಳಮೃಂದಗವು ಭೇರಿಡುತಿಹ್ಯ ಕೇಳುವ ಧಿಮಿಧಿಮಿಟಗಳು ತಲ್ಲೀನದಿ ಶ್ರುತಿಘೋಷಾಲಿಸುವನೀದೃಶ್ಯದ ಉದಾಟಗಳು ತಿಳಿಯಲು ಬಲು ಆವ್ಹಾಟಗಳು 2 ಬಲ್ಲವೇನು ನರಕೀಟಗಳು ದೇವದೇವೋತ್ಮನ ನೋಟಗಳು ದಯಕರುಣದಿ ಜೀವನ ¸ದ್ಗೈಸುವ ಭವನಾಶನ ಕೃಪಾದೃಷ್ಟಿಗಳು ಧನ್ಯಧನ್ಯ ಕುಲಕೋಟಿಗಳು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಷ್ಟಲಿಂಗಾರ್ಚನವಾ | ಮಾಡುವರಾ | ಎಷ್ಟೆಂದ್ಹೇಳಲಿ ಭಾಗ್ಯವಾ | ಕಟ್ಟಿ ಉಡಲಾಗದೇನಟ್ಟುತ್ತ ಮಾಂಗದಿ | ಕಟ್ಟಲಿಲ್ಲದ ತೇಂಜಾಂಗುಷ್ಟದ ಲಿಪ್ಪಾ ಪ ಹೃದಯವೇ ಮಂದಿರವು | ಅಷ್ಟದಳ | ಪದುಮವೇ ಮಂಟಪವು | ವದಗಿ ಮರುಹು ಎಂಬುವದೇ ನಿರ್ಮಾಲ್ಯವ ಬಿಟ್ಟು | ಸದಮಲ ಅರುಹಿನಾ ಉದಕದ ಮಜ್ಜನದೀ 1 ಶ್ರೀ ವಿಭೂತಿಯ ನಿಟ್ಟು | ಭಾವಗಂಧ ಭಕ್ತೀವ ತಿಲಾಕ್ಷತೆ | ಸಾವಧಾನದಿ ತ್ರಿಗುಣವೇ ತ್ರಿದಳ ಬಿಲ್ವದಿ 2 ಪುಣ್ಯಗಂಧವೇ ಧೂಪವು ಸುಜ್ಞಾನದ | ರನ್ನ ಜೋತಿಯ ದೀಪವು | ತನ್ನನುಭವ ಸಂಪನ್ನ ನೈವೇದ್ಯವು | ಮುನ್ನೆ ತಾಂಬೋಲವಾನನ್ಯ ಚಿಂತನೆಯಂಬಾದಿ 3 ಕರಣ ದಾರತಿಗಳನ್ನು | ಬೆಳಗುವಾ | ಪರಿಚಾರ ಪ್ರಾಣಗಳು | ಸ್ಪುರಿತ ನಾಹತದ ವರವಾದ್ಯ ಘೋಷವು | ಪರಿಪರಿಯಾದ ಝೆಂಕರಿಸುವ - ರವದಿಂದಾ 4 ವೃಂದದಿ ಷಡ್ಡಸ್ಥಳದೀ ನುಡಿವ ಮಂತ್ರ | ವೆಂದು ಅಜಪ ಸೂತ್ರದೀ | ತಂದೆ ಮಹಿಪತಿ ನಂದನ ಪ್ರಭು ನಮೋ | ಯಂದು ನಿಷ್ಕಾವ್ಯದಾದ ಸಂದಿ ಸುಖಸುತ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಈತನೆ ಕಾಣಿರೊ ಮಧ್ವಮುನಿ ಪ. ಪರಿಪರಿ ಶ್ರುತಿಗಳೆಂಬ ಗುಹೆಗಳಲಿ ಕೇ-ಸರಿಯಂತೆ ಚರಿಸುತ್ತಹರಿಯೆ ಸರ್ವೋತ್ತಮನೆಂಬ ಘೋಷಗಳಿಂದದುರುಳ ವಾದಿಗಳೆಂಬ ನರಿಗಳೋಡಿಸಿದಾತ 1 ಸಕಲಾಗಮಗಳೆಂಬ ಶರಧಿಯೊಳಗೆಯುಕುತಿಯಿಂದಲಿ ಮಥಿಸಿಅಕಳಂಕ ಶ್ರೀಹರಿಯೆಂಬ ರತ್ನವ ಕಂಡುಮಕುಟದೊಳಿಟ್ಟು ಲೋಕದಿ ಮೆರೆಸಿದಾತ 2 ವೇದಸಾರವೆಂಬ ಈಶತತ್ವವಾದಸುಧೆಯ ಕಲ್ಪಿಸಿಕೊಂಡುಆದಿಮೂರುತಿ ಶ್ರೀ ಹಯವದನನ ದಿವ್ಯಪಾದ ಸೇವಕನಾದ ಮಧ್ವಮುನಿಯೆಂಬಾತ 3
--------------
ವಾದಿರಾಜ
ಉತ್ಥಾನ ದ್ವಾದಶಿಯ ದಿವಸ (ಕಾರ್ತೀಕ ಶುದ್ಧ ದ್ವಾದಶಿಯ ಉತ್ಸವ) ರಂಭೆ ಮಾನಿನೀ ಈತನಾರೆಂದೆನೆಗೆ ಪೇಳೆ ಮಾನಿನೀ ಪ. ಮಾನಿನೀಮಣಿ ಈತನ್ಯಾರೆ ಕರು ಣಾನಿಧಿಯಂತಿಹ ನೀರೆ ಹಾ ಹಾ ಭಾನುಸಹಸ್ರ ಸಮಾನಭಾಷಿತ ಮ- ಹಾನುಭಾವನು ಸುಪ್ರವೀಣನಾಗಿಹ ಕಾಣೆ 1 ಭಯಭಕ್ತಿಯಿಂದಾಶ್ರಿತರು ಕಾಣಿ- ಕೆಯನಿತ್ತು ನುತಿಸಿ ಪಾಡಿದರು ನಿರಾ- ಮಯ ನೀನೇ ಗತಿಯೆಂದೆಲ್ಲವರು ಹಾ ಹಾ ಭಯನಿವಾರಣ ಜಯ ಜಯವೆಂದು ನುತಿಸೆ ನಿ- ರ್ಭಯ ಹಸ್ತ ತೋರುತ ದಯಮಾಡಿ ಪೊರಟನೆ2 ಭೂರಿ ವಿಪ್ರರ ವೇದ ಘೋಷದಿಂದ ಸ್ವಾರಿಗೆ ಪೊರಟ ವಿಲಾಸ ಕೌಸ್ತು- ಚಾರುಕಿರೀಟಕೇಯೂರಪದಕಮುಕ್ತಾ ಹಾರಾಲಂಕಾರ ಶೃಂಗಾರನಾಗಿರುವನು3 ಸೀಗುರಿ ಛತ್ರ ಚಾಮರದ ಸಮ ವಾಗಿ ನಿಂದಿರುವ ತೋರಣದ ರಾಜ ಭೋಗ ನಿಶಾನಿಯ ಬಿರುದ ಹಾ ಹಾ ಮಾಗಧ ಸೂತ ಮುಖ್ಯಾದಿ ಪಾಠಕರ ಸ- ರಾಗ ಕೈವಾರದಿ ಸಾಗಿ ಬರುವ ಕಾಣೆ4 ಮುಂದಣದಲಿ ಶೋಭಿಸುವ ಜನ ಸಂದಣಿಗಳ ಮಧ್ಯೆ ಮೆರೆವ ತಾರಾ ವೃಂದೇಂದುವಂತೆ ಕಾಣಿಸುವ ಹಾಹಾ ಕುಂದಣ ಖಚಿತವಾದಂದಣವೇರಿ ಸಾ- ನಂದದಿ ಬರುವನು ಮಂದಹಾಸವ ಬೀರಿ5 ತಾಳ ಮೃದಂಗದ ರವದಿ ಶ್ರುತಿ ವಾಲಗ ಭೇರಿ ರಭಸದಿ ಜನ ಜಾಲ ಕೂಡಿರುವ ಮೋಹರದಿ ಹಾಹಾ ಸಾಲು ಸಾಲಾಗಿ ಬೊಂಬಾಳ ದೀವಟಿಗೆ ಹಿ- ಲಾಲು ಪ್ರಕಾಶದಿ ಲೋಲನಾಗಿಹ ಕಾಣೆ 6 ಊರ್ವಶಿ:ಈತನೆ ಭಾಗ್ಯನಿಧಿ ನೋಡೆ ನೀ ಮುದದಿಪ. ಈತನೆ ಈರೇಳು ಲೋಕದ ದಾತ ನಾರಾಯಣ ಮಹಾ ಪುರು- ವಿನುತ ನಿ- ರ್ಭೀತ ನಿರ್ಗುಣ ಚೇತನಾತ್ಮಕಅ.ಪ. ಮಂದರ ಪೊತ್ತ ಭೂನಿತಂಬಿನಿಯ ಪ್ರೀತ ಮಾನವಮೃಗಾಧಿಪ ತ್ರಿವಿಕ್ರಮ ದಾನಶಾಲಿ ದಶಾನನಾರಿ ನ- ವೀನ ವೇಣುವಿನೋದ ದೃಢ ನಿ- ರ್ವಾಣ ಪ್ರವುಢ ದಯಾನಿಧಿ ಸಖಿ 1 ವಾರಿಜಾಸವಾನವಂದಿತ ಶ್ರೀಪಾದಯುಗ್ಮವ ತೋರಿಕೊಂಬುವ ಸಂತತ ಕೇರಿಕೇರಿಯ ಮನೆಗಳಲಿ ದಿ- ವ್ಯಾರತಿಯ ಶೃಂಗಾರ ಭಕ್ತರ- ನಾರತದಿ ಉದ್ಧಾರಗೈಯಲು ಸ್ವಾರಿ ಪೊರಟನು ಮಾರಜನಕನು 2 ಮುಗುದೆ ನೀ ನೋಡಿದನು ಕಾಣಿಕೆಯ ಕ- ಪ್ಪಗಳ ಕೊಳ್ಳುವನು ತಾನು ಬಗೆಬಗೆಯ ಕಟ್ಟೆಯೊಳು ಮಂಡಿಸಿ ಮಿಗಿಲು ಶರಣಾಗತರ ಮನಸಿನ ಬಗೆಯನೆಲ್ಲವ ಸಲ್ಲಿಸಿ ಕರುಣಾ ಳುಗಳ ದೇವನು ಕರುಣಿಸುವ ನೋಡೆ3 ರಂಭೆ :ದೃಢವಾಯಿತೆಲೆ ನಿನ್ನ ನುಡಿಯು ಸುರ ಗಡಣ ಓಲಗಕೆ ಇಮ್ಮಡಿಯು ಜನ- ರೊಡಗೂಡಿ ಬರುತಿಹ ನಡೆಯು ಹಾ ಹಾ ಮೃಡ ಸರೋಜ ಸುರಗಡಣ ವಂದಿತ ಕ್ಷೀರ ಕಡಲ ಶಯನ ಜಗದೊಡೆಯನಹುದು ಕಾಣೆ1 ಮದಗಜಗಮನೆ ನೀ ಪೇಳೆ ದೇವ ಸದನವ ಪೊರಡುವ ಮೊದಲೇ ಚಂದ- ನದ ಪಲ್ಲಂಕಿಯ ತಂದು ಮ್ಯಾಲೆ ಹಾ ಹಾ ಮುದದಿಂದ ಬಾಲಕರೊದಗಿ ಸಂತೋಷದಿ ಚದುರತನದಿ ಪೋಗುವನು ಪೇಳೆಲೆ ನೀರೆ2 ಊರ್ವಶಿ: ನಾರೀಮಣಿ ನೀ ಕೇಳೆ ಚಕ್ರೋತ್ಸವ ಶ್ರೀರಮಾಧವನ ಲೀಲೆ ಘೋರ ದೈತ್ಯಕುಠಾರ ಲಕ್ಷ್ಮೀ ನಾರಾಯಣನ ಬಲಕರ ಸರೋಜದಿ ಸೇರಿ ಕುಳಿತ ಗಂಭೀರ ದಿನಪನ ಭೂರಿತೇಜದಿ ಮೆರೆವುದದು ತಿಳಿ1 ದೊರೆಯು ಬರುವನು ಎಂದು ಎಲ್ಲರಿಗೆ ಗೋ- ಚರಿಸುವನೊಲಿದು ಇಂದು ತರ ತರದ ಆರತಿಗಳನು ನೀವ್ ಧರಿಸಿ ನಿಂದಿರಿಯೆಂದು ಜನರಿಗೆ- ಚ್ಚರಿಗೆಗೋಸುಗ ಮನದ ಭಯವಪ- ಹರಿಸಿ ಬೇಗದಿ ಪೊರಟು ಬಂದುದು ರಂಭೆ :ಸರಸಿಜನಯನೆ ನೀ ಪೇಳೆ ಸೂರ್ಯ ಕಿರಣದಂತಿಹುದೆಲೆ ಬಾಲೆ ಸುತ್ತಿ ಗೆರಕವಾಗಿಹುದು ಸುಶೀಲೆ ಆಹಾ ಹರಿಯ ವೈಕುಂಠ ನಗರದಂತೆ ಜ್ಯೋತಿ ವಿ- ಸ್ತರವಾಗಿ ಸುತ್ತಿನೊಳ್ ಮೆರೆವುದಿದೇನೆಲೆ 1 ಊರ್ವಶಿ:ಸಾದರದಲಿ ನೀ ಕೇಳೆ ಕಾರ್ತಿಕ ಶುದ್ಧ ದ್ವಾದಶಿಯೊಳಗೆ ಬಾಲೆ ಮಾಧವನ ಪ್ರೀತ್ಯರ್ಥವಾಗಿ ಶು- ಭೋದಯದಿ ಸಾಲಾಗಿ ದೀಪಾ ರಾಧನೆಯ ಉತ್ಸಹದ ಮಹಿಮೆಯ ಸಾದರದಿ ನೀ ನೋಡೆ ಸುಮನದಿ1 ನಿಗಮಾಗಮದ ಘೋಷದಿ ಸಾನಂದ ಸು- ತ್ತುಗಳ ಬರುವ ಮೋದದಿ ಬಗೆ ಬಗೆಯ ನರ್ತನ ಸಂಗೀತಾ ದಿಗಳ ಲೋಲೋಪ್ತಿಯ ಮನೋಹರ ದುಗುಮಿಗೆಯ ಪಲ್ಲಂಕಿಯೊಳು ಕಿರು2 ನಗೆಯ ಸೂಸುತ ನಗಧರನು ಬಹ ಚಪಲಾಕ್ಷಿ ಕೇಳೆ ಈ ವಸಂತ ಮಂ- ಟಪದಿ ಮಂಡಿಸಿದ ಬೇಗ ಅಪರಿಮಿತ ಸಂಗೀತ ಗಾನ ಲೋ- ಲುಪನು ಭಕ್ತರ ಮೇಲೆ ಕರುಣದಿ ಕೃಪೆಯ ಬೀರಿ ನಿರುಪಮ ಮಂಗಲ ಉಪಯಿತನು ತಾನೆನಿಸಿ ಮೆರೆವನು3 ಪಂಕಜಮುಖಿ ನೀ ಕೇಳೆ ಇದೆಲ್ಲವು ವೆಂಕಟೇಶ್ವರನ ಲೀಲೆ ಶಂಕರಾಪ್ತನು ಸಕಲ ಭಕ್ತಾ ಕರ ಚ ಕ್ರಾಂಕಿತನು ವೃಂದಾವನದಿ ನಿ ಶ್ಯಂಕದಿಂ ಪೂಜೆಯಗೊಂಡನು4 ಕಂತುಜನಕನಾಮೇಲೆ ಸಾದರದಿ ಗೃ- ಹಾಂತರಗೈದ ಬಾಲೆ ಚಿಂತಿತಾರ್ಥವನೀವ ಲಕ್ಷ್ಮೀ ಕಾಂತ ನಾರಾಯಣನು ಭಕುತರ ತಿಂಥಿಣಿಗೆ ಪ್ರಸಾದವಿತ್ತೇ- ಕಾಂತ ಸೇವೆಗೆ ನಿಂತ ಮಾಧವ5
--------------
ತುಪಾಕಿ ವೆಂಕಟರಮಣಾಚಾರ್ಯ
ಉದಯರಾಗ ಜನಿಸಲಾರೆನು ಜಗದೊಳಗೆ ಹರಿಯೆ ಪ ಕನಸಿನೊಳು ನೆನೆಯೆ ಕಂಪನವಾಗುತಿದೆ ಮನಕೆ ಅ.ಪ ವಾರಿಮಂಡಲ ವೃಷ್ಟಿಧಾರೆ ಧಾರುಣಿ ಜನಕ ದ್ವಾರದಿಂ ಸರಿದುಪೋಗಿ-ಸಾಗಿ ಜಾರಿ ಜನನೀ ಜಠರ ನಾರುವ ದುರ್ಗಂಧ ಸೇರಿ ಬೊಬ್ಬುಳಿಯ ತೆರದಿ-ಭರದಿ ವಾರಿವಾರಕೆ ಬೆಳೆದು ತಾರಿತಗಲಿ ಬಳಲಿ ಶರೀರವನ್ನೆ ಪೊತ್ತು-ತೆತ್ತು ಖಾರ ಕಟು ಲವಣಾದಿ ಘೋರತರ ಮಹಕ್ಲೇಶ ವಾರಿಧಿಯೊಳಗೆ ಮುಳುಗಿ ಮರುಗಿ ಸೊರಗಿ 1 ಲೇಶಾವಕಾಶವಿಲ್ಲದ ದೇಶದೊಳು ಸನ್ನಿ ವಾಸ ಉಲ್ಬಣದೊಳಿದ್ದು-ಕುದ್ದು ಘಾಸಿಯಲ್ಲಿ ಪರಿತಾಪ ಸೂಸಲು ಹಾಹಾಯೆಂಬ ಘೋಷಧ್ವನಿಯಿಂದ ಬೆದರಿ-ಅದರಿ ರೋಷವಾಗಿದ್ದ ಕ್ರಿಮಿರಾಶಿ ಮುಖ ಕಾಟದಿಂ ಏಸು ಬಗೆಯಿಂದ ನೊಂದು ಬೆಂದು ಶ್ವಾಸ ಬಿಡುವುದಕೆ ವ್ಯತ್ಯಾಸವಾಹುದು ಮುಂದೆ ಮೋಸಗೊಂಡು ಮತಿಗೆಟ್ಟು ಬೇಸರಿಕೆ ಅಕಟಕಟ 2 ಜಾನು ಮಧ್ಯದಲಿ ಶಿರಗೋಣು ತೂರಿಸಿಕೊಂಡು ಮಾಣದಲೆ ಬಿಕ್ಕಿ ಬಿಕ್ಕಿ-ಸಿಕ್ಕಿ ಏನೆಂಬೆ ಮಸೆದುಕ್ಕಿನ ಬಾಣ ಪೆಟ್ಟಿನ ಸಮ- ಬೇನೆಯಿಂದಧಿಕವಾಗೆ ಮೈಗೆ ಮೇಣು ಕೈಕಾಲುಗಳು ಕಾಣಿಕಾ ಕಾಲವಗ- ಲಾನು ಚರಿಸದಾದೆನೊ ಇನ್ನೇನೊ ಗಾಣ ತಿರುಗಿದಂತೆ ಗೇಣು ಬೈಲೊಳಗೆ ಈ ಆ-ನನ ಮೇಲಡಿಯಾಗಿ ಬಂದೆ-ನೊಂದೆ 3 ಸೂತಿಕಾಮರುತ ಬೀಸಿದಾತುರಕೆ ಬೆಸಸುವ ಯಾತನೆಗೆ ಕಾಣೆ ಲೆಖ್ಖ-ದು:ಖ ಗಾತುರವು ಕಿರಿದಾಗಿ ಪೋತಭಾವವ ವಹಿಸೆ ಭೂತಳಕೆ ಉಗ್ಗಿಬಿದ್ದು-ಎದ್ದು ಶೀತೋಷ್ಣ ಮಲರೋಗ ಭೀತಿ ಲಾಲನೆಯಿಂದ ಮಾತೆಯ ಮೊಲಿಯನುಂಡು-ಉಂಡು ಆ ತರುವಾಯ ಉಪನೀತ ವಿವಹಗಳಲ್ಲಿ ವ್ರಾತ ಕೈಕೊಂಡೆನಯ್ಯ ಜೀಯ 4 ಯೌವನದಿ ಚತುರ್ವಿಂಶತಿ ತತ್ವಜ್ಞಾನವ ಜರಿದು ಯುವತಿಯರ ರೂಪಲಾವಣ್ಯ ನೋಡಿ-ಬಾಡಿ ನೆವನೆವದಿ ಭೋಗಗಳ ಸವಿ ಸವಿದಿಪೇಕ್ಷಿಸಿ ಭವನ ಭವನವÀನು ಪೊಕ್ಕು -ಸೊಕ್ಕು ಅವರಿವರ ಜಾತಿಯೆನ್ನದೆ ಮಾತುಗಳನಾಡಿ ದಿವರಾತ್ರಿಯಲ್ಲಿ ಹೊರಳಿ-ಉರುಳಿ ಕವಿಜನರ ಧಿಕ್ಕರಿಸಿ ಕೋಣನಂತೆ ಸದಾ ಕಾಲ ಕಳೆದೆ ಉಳಿದೆ 5 ಹೆಂಡ್ರು ಮಕ್ಕಳಿಗಾಗಿ ಎನ್ನ ಹಿತಮನೆ ಮರೆದು ಕಂಡಕಂಡವರ ಕಾಡಿ-ಬೇಡಿ ಉಂಡುಟ್ಟು ಸುಖಪಟ್ಟು ಪಾರತ್ರಯವ ಜರೆದು ಕೊಂಡೆಯಲಿ ನಿಪುಣನಾಗಿ ತೂಗಿ ಮಂಡೆಯನು ಬಲಿತ ಪಶುವಿನಂತೆ ಮದವೇರಿ ಚಂಡ ವೃತ್ತಿಯಲಿ ನಡೆದು-ನುಡಿದು ಹಿಂಡು ಮಾತೇನು ಈ ಜರೆನರೇ ಬಂದೆನ್ನ ಲಂಡತನ ಪೋಗದಕಟ್ಟ-ಉಂಬೆ ವಿಕಟ 6 ನಾನಾ ಯೋನಿಗಳಲ್ಲಿ ಬರಲಾರೆ ಬರಲಾರೆ ನಾನು ಪೇಳುವುದು ಏನೋ-ಇನ್ನೇನೊ ನೀ ನೋಡಿದರೆ ಅನ್ಯ ಕಾವ ದೈವರ ಕಾಣೆ ಮಾನಸದೊಳಗೆ ಒಮ್ಮೆ-ಇಮ್ಮೆ ದೀನರಕ್ಷಕ ಬಿರುದು ಅನವರತ ನಿನ್ನದು ಎಣಿಸದಿರು ಎನ್ನ ದೋಷ ಲೇಶ ಶ್ರೀನಾಥ ವಿಜಯವಿಠ್ಠಲರೇಯ ನೀನೊಲಿದು ಧ್ಯಾನದಲ್ಲಿ ಬಾರೊ ನಿಜ ಮೂರುತಿಯ ತೋರೊ 7
--------------
ವಿಜಯದಾಸ
ಊಟ ಮಾಡಿದೆನು ಬ್ರಹ್ಮಾನಂದದ ಊಟವಆರು ಅರಿಯದ ಯೋಗ್ಯರು ಎಂಬ ಊಟ ಪ ಸದ್ಗುರು ಎಂದೆಂಬ ಅನ್ನಪೂರ್ಣ ತಾನುಶುದ್ಧ ಹೃದಯವೆಂಬ ಹರಿವಾಣದೊಳಗೆಸಿದ್ಧನೆಂಬ ನಾನಾ ಭಕ್ಷ್ಯ ಭೋಜ್ಯ ಪಾಯಸವಸಿದ್ಧ ಗುರುವೇ ತಂದು ಎನ್ನ ಮುಂದಿಡಲು1 ಆತ್ಮ ಎಂಬ ಅನ್ನಕ್ಕೆ ಅಷ್ಟಾಂಗ ತೊವ್ವೆಯನು ಹಾಕಿಸ್ವಾತ್ಮ ಸುಖವೆಂದೆಂಬ ತುಪ್ಪವನೆ ಹೊಯ್ದುಆತ್ಮ ನಾನೆರಡಲ್ಲವೆಂಬ ಸಮರಸವ ಕಲಸಿಎತ್ತಿ ಸವಿದೆನು ನಾನು ಅನುಭವದ ತುತ್ತ 2 ಸಾರಾಮೃತವೆಂಬ ಸಾರನೇ ಸುರಿಯುತತೋರುತಿಹ ಚಿದ್ಬಿಂದು ಹಿಂಡಿಯನೆ ನಂಜಿಮೀರಿದಾನಂದಗುಳ್ಹೂರಿಗೆಯ ಮಂಡಿಗೆಯತೋರುವೆಚ್ಚರು ಮರೆತು ಹಾಯೆನುತಲುಂಡು 3 ಹೇಳಬಾರದ ಪರಮಾತ್ಮ ಪರಮಾನ್ನ ಸುರಿದುಮೇಲೆ ಗುರುದಯದ ಉದಕವನೆ ಕುಡಿದುಮೂಲನಾದವ ಘೋಷ ಸುತ್ತೆಲ್ಲ ಪಸರಿಸಲುಗೋಲ ನಾನಾ ತೇಜ ದೀಪ ಬೆಳಕಿನಲ್ಲಿ 4 ಇಂತೂಟವನೆ ಉಂಡು ನಿಜ ತೃಪ್ತಿಯದಾಗೆಅಂತು ಕಳೆದೆನು ಅವಿದ್ಯದ ಕಡು ಹಸಿವನುಚಿಂತಯಕ ಚಿದಾನಂದ ಅನ್ನ ಪೂರ್ಣನು ಎಣಿಸೆಎಂತು ಹೇಳಲಿ ಮರೆತೆ ಸರ್ವವನು ತೃಪ್ತಿಯಲಿ5
--------------
ಚಿದಾನಂದ ಅವಧೂತರು
ಎಂತು ಶೋಭಿಪ ನೋಡೀ ಶ್ರೀವ್ಯಾಸ ವಿಠ್ಠಲಸಂಪುಟನ ಮನೆ ಮಾಡೀ | ವಿಶ್ವಜ್ಞ ತೀರ್ಥರಶಾಂತ ಸೇವೆಯ ಗೂಡೀ | ಮೆರೆಯುತಿಹ ನೋಡಿ ಪ ಎಂತು ಶೋಭಿಪ ಕಂತುಪಿತ ಶಿರಿ | ಕಾಂತ ವಿಠ್ಠಲ ಶಾಂತಿ ಮೂರುತಿಸಂತ ಯುತಿವರ ರಂತರಂಗದಿ | ಚಿಂತಿಸುತಲೇಕಾಂತ ಪೂಜೆಗೆ ಅ.ಪ. ಶ್ರೀಮಧ್ವಮುನಿಗಳ ಕರಜ | ಶ್ರೀವಿಷ್ಣು ತೀರಥರಾ ಮಹಾಮುನಿ ಪೂಜಾ | ಗೊಂಡಿರುವ ಶ್ರೀರಾಮ ನರಹರಿ ಪೂಜಾ | ಶ್ರೀ ವ್ಯಾಸ ವಿಠ್ಠಲ ಪ್ರೇಮ ಗುರುಗಳ ಕರಜ | ಶ್ರೀವಿಶ್ವಜ್ಞ ತೀರ್ಥ ||ಪ್ರೇಮದಲಿ ಗೈವ ಸುನೇಮದಲಿ | ಸೀಮೆ ಸುಬ್ರಹ್ಮಣ್ಯದಲ್ಲಿ ಝಾವ ಝಾವಕೆ ಭಜಿಪ ಭಕ್ತರ | ಕಾಮಿತಾರ್ಥಗಳೀಯುತಿರೆ ಹರಿ 1 ವತ್ಸರ ಸುವಿಕ್ರಮದೀ | ಎರಡೊಂದು ಮಾಸದ ಸಿತ ಪಕ್ಷದಲಿ ಹರಿ ದಿನದೀ | ರವಿವಾರದೊಳು ಶ್ರೀಯತಿವರರು ಸ್ವಗೃಹದೀ | ಆಗಮಿಸಿ ಪೂಜೆಯ ಶೃತಿ ಉಕುತ ಮಾರ್ಗದೀ | ಗೈಯ್ಯೆ ಭಕುತರೂ ಕೃತಿಪತಿಯ ಚರಣಾಬ್ಜಗಳ ಸಂ | ಸ್ತುತಿಸುತ ಸುವೇದ ಘೋಷದಿ ಕೃತ ರಜತ ಪೀಠಸ್ಥ ನರಹರಿ |ಪ್ರತಿ ರಹಿತ ಮಹ ಅತುಳ ವಿಭವದಿ 2 ಪಾವನ್ನರಾದೆವು ನಾವು | ಸಂಯಮಿ ವರರ ಪಾವನ್ನ ಪದ ರಜಕಾವು | ದ್ವಾದಶಿಯ ದಿನಶ್ರೀವರನ ಮಹ ಅರ್ಚನವು ಗೈದ ವೈಭವವೂ ||ಕಾವ ಕರುಣೆಯ ಸ್ಮರಣೆ ತವಕದಿಂದಲಿ ಮಾಡ್ದತಾವಕನ ಪರಮಾಲ್ಪವೆನಿಪ | ಸೇವೆಯನೆ ಸ್ವೀಕರಿಸಿ ನರಹರಿ ದೇವ ಗುರು ಗೋವಿಂದ ವಿಠಲ | ಕಾವ ಕರುಣಾಳುಗಳ ಒಡೆಯ3
--------------
ಗುರುಗೋವಿಂದವಿಠಲರು
ಎಂಥಾ ದಯಾ ನಿಧಿಯೇ | ಸಂತತ ಭಕ್ತಿ ವಿಶ್ರಾಂತಿಯ ದೋರಿದ ಪ ಜ್ಞಾನಾಂಜ ನುಡಿದಾ | ಕಾಣಿಸಿ ಇದರ್ಹಿಡಿದಾ 1 ಮೂಲ ಮಂತ್ರದಳುದಿಂದಾ | ಹೇಳಲಿನ್ನೇನದ ಸ್ವಾನುಭವದ ಘೋಷಾ | ಫೇಳಗುಡಿಸಿ ನೋಡಿದಾ2 ಮುಂದತಿಯೊಳು ನೀಡಿದಾ | ಇಂದು ಧನ್ಯನ ಮಾಡಿದಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂದು ಕಾಂಬುವೆ ಮಾಧವತೀರ್ಥರ ಸುಂದರ ಮಂದಿರ ಪ ಚಾರುಚಿತ್ರ ಕಲಶಕನ್ನಡಿ ಆರೊಂದು ನೆಲೆಗೋಪುರವ ಸವಿ ಸ್ತಾರಮಾಗಿ ತೋರುವ ಮಹಾ ದ್ವಾರದಮುಂದೆ ಬಿದ್ದು ನಮಿಸಿ 1 ತೊಲೆತುಂಡು ಕಂಭ ಬೋದುಗೆ ಶಿಲೆಯಿಂದ ನಿರ್ಮಿತವಾಗಿ ಹೊಳೆವ ಮಂಟಪ ರಂಗು ಮಧ್ಯ ದೊಳಗೆಚೆಲುವ ವೃಂದಾವನವ 2 ಮೂಲ ಪ್ರತಿಮೆ ಸಾಲು ಸಾಲು ವಿ ಮೂಲಪೀಠದ ಪವಿತ್ರಶಾಲೆ ಕಾಲತ್ರಯದಿ ವೇದಘೋಷ 3 ಧಾತ್ರಿಜನರು ಬಂದು ಕೂಡಿ ಯಾತ್ರೆಗೈದು ಜನುಮ ನಿತ್ಯ ಸಾರ್ಥಮಾಡಿಕೊಂಡು ಸತತ ಅರ್ಥಿಯಿಂದ ಪೋಪ ಸಮಯ 4 ಧರೆಯೊಳಧಿಕ ಬುದ್ಧಿನ್ನಿಪುರದಿ ಮೆರೆವ ಶ್ರೀಗುರು ಮಾಧವೇಂದ್ರ ವರಮಂದಿರದಮಿತ ವೈಭವ ಕರುಣಿ ಶ್ರೀರಾಮ ನಿಂತು ನಡೆಸುವ 5
--------------
ರಾಮದಾಸರು