ಒಟ್ಟು 32 ಕಡೆಗಳಲ್ಲಿ , 18 ದಾಸರು , 29 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಲಿಸೋ ಶ್ರೀ ಗುರುರಾಯಾ ಪ ಕಾಯ - ಭವ ಜಾಲ ತಪ್ಪಿಸೊ ಮಹರಾಯ - ಆಹಾ ಪಾಲಗು ಜನರ ಸು - ಪಾಲಕ ಹರಿಪಾದ ಭವ - ತೂಲಕಾನಲನೆ ಅ.ಪ ಶೇಷಾಂಶ ಪ್ರಹ್ಲಾದ ವ್ಯಾಸಾ - ಮುನಿ ವೇಷ ತಾಳಿದೆಯೊ ಯತೀಶಾ - ಜಾಗು ಪೋಷಣೆ ಗೈಯ್ಯೊ ಮನೀಷಾ - ಎನ್ನಾ - ಶೇಷ ಕ್ಲೇಶವಳಿದೀಶಾ - ಆಹಾ ಭವ ನಿ - ಸ್ಸೇಷ ಮಾಡಿ ಎನ್ನ ಪೋಷಿಸೊ ನಿರುತ ಧೃ - ತಾಷಾಢ ಗುರುವರ 1 ಕಾಮಧೇನು ಕಲ್ಪವೃಕ್ಷಾ - ನಿನ್ನ ಈ ಮಹಮಹಿಮೆ ನಿರೀಕ್ಷಾ - ಮಾಡಿ ಈ ಮಹಿ ಯಾಕೆಂದುಪೇಕ್ಷಾ - ಮಾಡಿ ಧಾಮ ಸೇರಿದವೊ ಭಕ್ತಪಕ್ಷಾ - ಆಹಾ ಸಾಮಜನಾಥನ ಪ್ರೇಮ ಪಾತ್ರನೆ ನಿನ್ನ ಈ ಮಹ ಮಹಿಮೆಗೆ ನಾಮಾಳ್ಪೆ ನಮೊ ನಮೊ 2 ಆಸೇತು ಹಿಮಾದ್ರಿ ತನಕಾ - ನಿನ್ನ ಆಸೆಯ ಮಾಳ್ಪರನೇಕಾ - ಅಂಥ ದಾಸಜನರಿಗೆ ಅನೇಕಾ - ಫಲ ರಾಶಿಯ ಕೊಡುವಿ ಮಜ್ಜನಕಾ - ಆಹಾ ಮಾನವ ಜನ್ಮ ಈಸೆ ಸಾಕೆಲೊ ಸ್ವಾಮಿ ಎಸು ಪೇಳಲಿ ನಿನ್ನ ದಾಸರ ದಾಸನೋ 3 ಎಲ್ಲಿ ಪೋದರು ಕಾಯ್ವರಿಲ್ಲ - ಜಗ - ದ್ವಲ್ಲಭ ಬಲ್ಲಿ ನಿನೆಲ್ಲಾ - ಬಹು ಬಲ್ಲಿದನೆಂಬುವರೆಲ್ಲಾ - ಜನ ಸೊಲ್ಲು ಕೇಳಿಬಂದೆನಲ್ಲಾ - ಆಹಾ ಪುಲ್ಲಲೋಚನ ನೀ - ನಲ್ಲದೆ ಎನ ಭವ ಣೆಲ್ಲ ಮಾತ್ರವು ಕಳೆಯೊ - ರಿಲ್ಲವೊ ಎನ್ನಜೀಯಾ 4 ನಾಥ ನಿನ್ನೊಳು ಜಗಕೆಲ್ಲ - ಮಹ ಪ್ರೀತಿಯು ಇರುತಿಹುದಲ್ಲ - ಸದ - ತಾತ ನೀನಾಗಿ ಜಗಕೆಲ್ಲಾ - ಮತ್ತೆ ಪೂತ ಫಲ ಕೊಡುವಿಯಲ್ಲಾ - ಆಹಾ ದಾತ ಗುರುಜಗ - ನ್ನಾಥವಿಠಲ ಸದಾ ಪ್ರೀತಿಂದ ಇರುವೊನು5
--------------
ಗುರುಜಗನ್ನಾಥದಾಸರು
ಬೇಡಿದೆನು ಕೊಡುಕಂಡ್ಯ ಬೇಡಿದೆನು ಕೊಡುಕಂಡ್ಯಬೇಡಿದೆನು ನೀ ನೀಡು ಕಂಡ್ಯಾ ಪ ನಿನ್ನ ಹಾಡನು ಹಾಡಿ ನಿನ್ನ ನಿಜದೊಳಗಾಡಿನಿನ್ನನೇ ಕಾಡಿ ನಿನ್ನನೇ ಬೇಡಿನಿನ್ನ ಓಲಗವ ಮಾಡಿ ನಿನ್ನ ನಿಟ್ಟಿಸಿ ನೋಡಿನಿನ್ನ ಲೀಲೆಯೊಳು ನಾನಿರುತಿಹುದದನಾ 1 ನೋಟದೊಳಗಿನ ನೋಟ ಕೂಟದೊಳಗಿನ ಕೂಟಆಟದೊಳಗಿನ ಆಟ ಇಂಥ ಆಟನೀಟದೊಳಗಿನ ನೀಟ ನಿನ್ನಲ್ಲಿ ಬೆರೆದಾಟಪಾಟ ಮಾಡಿಯೆ ಎನಗೆ ಪಾಲಿಸುವುದನ2 ಶರೀರದಿಚ್ಚೆಯನುಳಿದು ಶರೀರ ವಾಸನೆ ಕಳೆದುಶರೀರ ವಿಷಯದ ಹೊಲಬೆಲ್ಲ ಬಳಿದುಶರೀರದ ನೆಲೆಯು ತಿಳಿದು ಶರೀರದೊಳೊಬ್ಬನನುಳಿದುಶರೀರದ ಸಂಗ ದೊರಕದಿಹದದನಾ 3 ನಾದಲಕ್ಷಿಸಿ ಹಿಡಿದು ನಾದ ಸಂಗವ ಪಡೆದುನಾದಾಮೃತವ ಕಿವಿತುಂಬ ಕುಡಿದುನಾದ ದಾರಿಯ ನಡೆದು ನಾದ ದೊಳ್ವೆಳ ಗೊಡದುನಾದವನೆ ಮರೆತು ಸುಖಿಸುತಿಹದದನ 4 ನಿನ್ನ ನೀನುಳಿದಿಲ್ಲ ನೀ ದೈವ ಜಗಕೆಲ್ಲನಿನ್ನಂತೆ ಆಪ್ತರಿಲ್ಲ ನಿನ್ನ ನಂಬಿದೆನಲ್ಲನೀ ಕಾಯಬೇಕಲ್ಲ ಚೆನ್ನ ಚಿದಾನಂದನೆನೆಹಂಬತಾತ್ವಿಕ ಹಿನ್ನೆಲೆಯ ಕೀರ್ತನೆಗಳುದದನಾ 5
--------------
ಚಿದಾನಂದ ಅವಧೂತರು
ಭೂರಮಣ ರಘುರಾಮ ವಿಠ್ಠಲನೆ ನೀನಿವಳಭೂರಿ ಕರುಣದಲಿಂದ ಕಾಪಾಡಬೇಕೊ ಪ ಆರು ಇಲ್ಲವೊ ಗತಿಯು ನಿನ್ಹೊರತು ಶ್ರೀಹರಿಯೆಸಾರಿ ನಿನ್ನಯ ಪಾದವಾರಾಧಿಸುತ್ತಿಹಳಾ ಅ.ಪ. ತಾರತಮ್ಯ ಜ್ಞಾನ ಪಂಚಭೇದವನರುಹಿಪಾರು ಮಾಡೀಭವದ ಪರಿತಾಪವಾನೀರೇರುಹಾನಯನ ಕಾರುಣ್ಯ ಮೂರುತಿಯೆಪ್ರೇರಕನೆ ಜಗಕೆಲ್ಲ ಸರ್ವಾಂತರಾತ್ಮ 1 ಪತಿ ಸೇವೆಯಲಿ ಭಕುತಿ ಅತಿಶಯದಿ ಹರಿ ಭಕುತಿಮತಿಯು ತತ್ವಾರ್ಥಗಳ ಗ್ರಹಿಸುವಲಿ ರತಿಯೂಸತತ ವಿಷಯಾದಿಗಳು ನಶ್ವರವು ಎಂದೆನುತಮತಿಯಿತ್ತು ಇವಳೀಗೆ ಪಾಲಿಪುದು ವೀರಕುತಿ2 ಪ್ರಾಚೀನ ಕರ್ಮಗಳ ಯೋಚಿಸಲು ಎನ್ನಳವೆಕೀಚಕಾರಿ ಪ್ರೀಯ ಮೋಚಕನು ನೀನೇ |ಚಾಚಿ ಶಿರ ನಿನ್ನಡಿಗೆ ಯಾಚಿಸುವೆ ಶ್ರೀಹರಿಯೆಪಾಚ ಕಾಂತರ್ಯಾಮಿ ಕರ್ಮನಾಮಕನೆ 3 ಭವ ಬಂಧ ಕತ್ತರಿಸೊ ಹರಿಯೆ 4 ಕೃತ್ತಿವಾಸನ ತಾತ ಉತ್ತಮೋತ್ತಮ ದೇವಪುತ್ರಮಿತ್ರನು ನೀನೆ ಸರ್ವತ್ರ ಭಾಂಧವನೆ |ಪುತ್ರಿಯನು ಸಲಹೆಂದು ಪ್ರಾರ್ಥಿಸುವೆ ನಿನ್ನಡಿಗೆಆಪ್ತ ಗುರುಗೋವಿಂದ ವಿಠಲ ಮಮ ಸ್ವಾಮೀ 5
--------------
ಗುರುಗೋವಿಂದವಿಠಲರು
ಮಧ್ವರಾಯರ ಶುದ್ಧಸಿದ್ಧಾಂತ ಪದ್ಧತಿಯಲಿ ಇದ್ದ ಮನುಜಗೆ ಕರಸಿದ್ಧವೈಯ್ಯಾ ಮುಕುತೀ ಪ ಬಿದ್ದು ಪೋಗುವುದಘ ವೃಂದಗಳೆಲ್ಲವು ಶುದ್ಧಜ್ಞಾನದಿ ಸತ್ಯ ಉದ್ಭರಿಪ ಹರಿ ವೇದಸಿದ್ಧವಿದುಕಾಣೋ ಅ.ಪ. ಖ್ಯಾತಿಯಿಂದಲಿಲಂಕೆ ಸುಟ್ಟು ಪ್ರೀತಿಲಿ ರಾಮನ ಭಜಿಸಿದರೋ ವ್ರಾತಖಳಕುಲ ಘಾತಿ ಮಾಡಿಸಿ, ವೀತಿಹೋತ್ರಗೆ ತುತ್ತು ನೀಡುತ ನಾಥರಾಮನ ವರದಿ ಮುಂದಿನ ಧಾತನಾಗಿ ಬರುವ ನಮ್ಮ 1 ದ್ವಾಪರದಲಿವರು ಪಾಪಿ ದುರ್ಯೋಧನನ ಭೂಪನಂದದಿ ಅಳಿಸಿ ಶ್ರೀಪತಿಸೇವೆನಡಿಸಿದರೋ ಶ್ಯಾಮಸುಂದರ ಕೃಷ್ಣರಾಯನ ನೇಮದಿಂದಲಿನಾಮ ಪಠಿಸುತ ತಾಮಸಾರನು ಯಮಗೆ ಕಳಿಸಿ ಕಾಮವಿಲ್ಲದೆ ಯಜ್ಞವನಡೆಸಿದ ಭಾಮೆ ದ್ರೌಪದಿ ಪ್ರೇಮ ಪತಿಯಾದ2 ಕಲಿಯುಗ ಕಳ್ಳರು ಸಲ್ಲದರ್ಥಗಳನ್ನು ಸುರರು ಮೊರೆಯಿಡಲು ವಲ್ಲಭನು ಶ್ರೀನಲ್ಲ ನಲ್ಲದೆ ಇಲ್ಲ ಜಗದೊಳು ಎಂದು ಸ್ಥಾಪಿಸಿ ಎಲ್ಲವೇದದ ಎಲ್ಲನಾದವು ನಲ್ಲ ಹರಿ ಯಂತೆಂದು ತೋರಿದ 3 ಜೀವೇಶ ಬೇಧವು ಪಂಚಬೇಧವು ಸುಳ್ಳು ತಾವೆ ನಾಥರು ಜಗಕೆ ತಾರತಮ್ಯವು ಠಕ್ಕೂ ಶಿವನೆ ಸರ್ವೋತ್ತಮ ಬ್ರಹ್ಮನಿರ್ಗುಣನು ಈ ವಿಧವಾದವ ವೇದವ್ಯಾಸರ ಕಂಡು ಬದರಿಲಿ ಸೂತ್ರ ಭಾಷ್ಯವ ಮಾಧವನೆ ಜಗದಾದಿಕಾರಣ ಮೋದ ನೀಡಿದ 4 ಮಧ್ವರಾಯರವಾಣಿ ಶುದ್ಧವೇದದಸಾರ ವೇದವ್ಯಾಸರ ಮತವು ಇದುಸಿದ್ಧ ಹರಿ ಆಣೆ ಕೇಳಿ ಗದ್ದರಾಗದೆ ಬಿದ್ದು ಇವರಡಿ ತಿದ್ದಿ ಮನವನು ಒದ್ದುದುರ್ಮತ ಪದ್ಮನಾಭನ ಪಾದಧ್ಯಾನದಿ ಅದ್ದಿ ಚಿತ್ತವ ಸಿದ್ಧಮಾಡಿರೋ ಮುಕ್ತಿಪಥವ 5 ಪರಿಸರನೀತನು ಪರಮಾಪ್ತನುಹರಿಗೆ ಗುರುವೊ ಜಗಕೆಲ್ಲ ಬರುವ ಬ್ರಹ್ಮನು ಕಾಣೋ ಓಡಿಸುಮಾರಿಮತಗಳ ಇಲ್ಲವೊ ಹರಿಯ ಧಾಮವು 6 ಮೂರುಹತ್ತು ಎರಡು ಗುರುಲಕ್ಷಣ ಕಾಯರು ನಿರುತ ಹಂಸೋಪಾಸನೆ ಮೂರುವಿಧದಲ್ಲಿ ಮಾಳ್ವರು ಭಾರತೀಶನ ಸಾರಗುಣಗಳ ಸೂರಿಗಳಿಗಳವಲ್ಲ ಅರಿಯಲು ಚರಣಪಿಡಿಯಿರೋ 7 ದಶದಿಶೆಗಳ ವಳಗೆ ಬಿಸಜನಾಭನ ಕೀರ್ತಿ ಎಸೆದು ಹಿಗ್ಗುವ ನಮ್ಮ ಅಸಮ ಮಧ್ವರನೋಡೋ ನಾಶಮಾಡುತ ಭಾಸಕರು ಎಂದೆನಿಸಿದ 8 ಅನಿಲದೇವನ ನಾಮ ಕನಸಿಲಾದರು ಒಮ್ಮೆ ನೆನೆದವನೇ ಧನ್ಯ ಮಾನ್ಯನೋ ಜಗದೊಳಗೆ ದೀನನೆನಿಸುತಲಿ ದಾನಿ ಜಯಮುನಿ ಅನಿಲನಂತರ ಶ್ರೀನಿವಾಸ ಕೃಷ್ಣವಿಠಲಗೆ ಶರಣು, ಶರಣು, ಶರಣೆಂದು 9
--------------
ಕೃಷ್ಣವಿಠಲದಾಸರು
ಮಾತುಮಾತಿಗೆ ಕೇಶವ ನಾರಾಯಣ ಮಾಧವÀ ಎನಬಾರದೆಪ. ಪ್ರಾತಃಕಾಲದಲೆದ್ದು ಪಾರ್ಥಸಾರಥಿಯನುಪ್ರೀತಿಲಿ ನೆನೆದರೆ ಪ್ರೀತನಾಗುವ ಹರಿಅ.ಪ. ಜಿಹ್ವೆ 1 ಜಿಹ್ವೆ 2 ಹೇಮಕಶ್ಯಪಸಂಭವ ಈ ಜಗಕೆಲ್ಲ ನಾಮವೆ ಗತಿಯೆನಲುವಾಮನ ನೀನೆಂದು ವಂದಿಸಿದವರಿಗೆ ಶ್ರೀಮದನಂತಸ್ವಾಮಿ ಹಯವದನನುಕಾಮಿತಫಲವೀವನು ಹೇ ಜಿಹ್ವೆ3
--------------
ವಾದಿರಾಜ
ರುದ್ರದೇವರು ಭಜನೆ ಮಾಡೆಲೊ ಮನವೆ ಭಜನೆ ಮಾಡೆಲೊ ಪ ಭಜನೆಯನ್ನು ಮಾಡಿ ಸುಖಿಸೊಭುಜಗಭೂಷಣ ಶಿವನೆ ಅ.ಪ. ನಾನೆ ನಾನೆ ನಾನು ಎಂಬ ಶ್ವಾನಬುದ್ಧಿಯನ್ನು ಬಿಟ್ಟುನೀನೆ ನೀನೆ ಗತಿಯೆಂದು ಸಾನುರಾಗದಿಂದ ಮೃಡನ 1 ಕಾಕುಜನರ ವಾಸ ಬಿಟ್ಟು ಏಕಭಾವದಿಂದ ಕುಳಿತುಸಾಕು ಸಾಕೆನಿಸದಂತೆ ನಾಲ್ಕು ಮೊಗದವನ ಸುತನ 2 ತಂದೆವರದವಿಠಲನು ತಂದೆ ಜಗಕೆಲ್ಲವೆಂದುಛಂದಛಂದಾದಿ ಭಜಿಪ ಇಂದುಶೇಖರ ಭವನ 3
--------------
ಸಿರಿಗುರುತಂದೆವರದವಿಠಲರು
ವಂದಿಪೆ ಗುರುವೆ ನೀ ಕಲ್ಪತರುವೇ ಬಂಧನ ಕಳೆಯುವ ಭೋಧಾತ್ಮ ಗುರುವೆ ಅಗಣಿತ ಮಹಿಮಾ ಜಗದಾಧಾರ ಬಗೆಗೆ ನಿಲುಕದಿಹ ಘನನಿರ್ವಿಕಲ್ಪ ಮಾನವ ರೂಪದಿ ಸ್ವಾನುಭವವ ತೋರ್ದ ಮುಕುತಿದಾಯಕನೇ ಪರಮಾತ್ಮ ನೀನೆಂದು ಪರಶೃತಿ ಪೇಳೆ ಸರಿಯಾಗಿ ಬೋಧಿಸಿ ಕರುಣೆದೋರುವನೇ ಜಗವೆಲ್ಲ ಪುಸಿಯೆಂದು ಜಗಕೆಲ್ಲ ಪೇಳುವ ಭಗವಂತ ದಯದೋರಿ ಪೊರೆವುದು ದೇವಾ ಚಿನುಮಯರೂಪನೆ ಸ್ವಾನಂದರೂಪಾ ಮನವು ನಿನ್ನೊಳಗಿರಲಿ ಶಂಕರರೂಪಾ
--------------
ಶಂಕರಭಟ್ಟ ಅಗ್ನಿಹೋತ್ರಿ
ವಿಷ್ಣು ಮೂರ್ತಿಯೆ ಪಾಹಿ ಭುಕ್ತಿಪುರೇಶ ಜಿಷ್ಣು ನಂದನಸೂತ ವೃಷ್ಟಿಕುಲೇಶ ಪ ಮೃಷ್ಟಾನ್ನ ಭೋಜನವಿತ್ತ ಸಜ್ಜನರಿಗೆ ಕಷ್ಟವ ಪರಿಹರಿಸೀಷ್ಟವ ಕೊಡುವಿ | ಇಷ್ಟವ ಕೊಡದೇನೆ ದೂರ ಕೂಡಿಸುವಿ 1 ಭಕ್ತರಭೀಷ್ಟವ ಪೂರ್ತಿಗೊಳಿಸುವಿ | ಶಕ್ತ ಅಶಕ್ತನು ಎಂಬ ಭೇದಗಳಿಲ್ಲ ಭಕ್ತನೆಂದರೆ ಸಾಕು ಪಾಲಿಸುತಿರುವಿ 2 ಬಾಲಕನಾದರು ಕೊಟ್ಟ ನೈವೇದ್ಯವ ಬಾಲಕ ಪಿತ ಬಂದು ಪಾತ್ರವ ಕೇಳಲು ಜಲದೊಳಗುಂಟೆಂದು ಸ್ವಪ್ನದಿ ನುಡಿದಿ 3 ಬೇಸಿದ ಮಾವಿನ ಫಲದೊಳು ಪ್ರೇಮವೊ ಬಾಲನ ನುಡಿಯೊಳಗಾಯ್ತೇನೊ ಪ್ರೇಮ | ದಾಸರೊಳ್ನಿನಗಿಪ್ಪ ಪ್ರೇಮವ ಜಗಕೆಲ್ಲ ಬಾಲನಿಂದಲಿ ತೋರ್ದೆ ವಿಷ್ಣುಮೂರುತಿಯೆ 4 ರಾಜೇಶ ಹಯಮುಖಕಿಂಕರಾಗ್ರಣಿ ವಾದಿ- ರಾಜರಾಯರಿಗಿಷ್ಟವಿತ್ತು ಪಾಲಿಸಿದಿ | ಇಷ್ಟದ ಶಿಶುಗಳು ಬೇಡದಿದ್ದರು ಮಾತೆ ಇಷ್ಟವಿತ್ತಂತೆ ನೀ ಪೊರೆಯುವೆ ದೊರೆಯೆ 5
--------------
ವಿಶ್ವೇಂದ್ರತೀರ್ಥ
ವಿಷ್ಣುಶತಕ ಶಿರಿದೇವಿ ಹೃತ್ಕುಮುದ ಚಂದ್ರಮನೆ ಕರುಣಾರ್ಣವಾಗಣಿತ ಸದ್ಗುಣನೇ ಭಂಜನ ಮುರಾಂತಕನೇ ಪರಮಾತ್ಮ ಪಾಲಿಸು ಪರಾತ್ಪರನೇ 1 ಕಮಲಾಸನಾದ್ರಿಜೆ ಮನೋಹರ ಮು ಖ್ಯಮರಾಳಿಯಂ ಭಕುತಿಯಿಂ ಬಲಗೊಂಡು ಮ- ಹಾತ್ಮರಾದ ಗುರುಪಾದಕೆ ನಾಂ ನಮಿಸೀ ಪ್ರಬಂಧವನು ಹೇಳುತಿಹೇಂ2 ನೂರಾದ ಪದ್ಯಗಳೊಳಾಂ ಸಕಲಂ ಧಾರಾಳವಾಗಿ ತವ ಸನ್ನಿದಿಯೋಳ್ ಸಾರಂಗಳಂ ಗ್ರಹಿಸಿ ಬಿನ್ನಯಿಪೇಂ ಶ್ರಿರಾಮನೀಂ ದಯದಿ ಲಾಲಿಸಿ ಕೇಳ್ 3 ಕವಿತಾ ಧುರೀಣತೆಯು ಬಂದುದು ನಿ_ ನವ ಯುಕ್ತಿ ಚತುರತೆಗಳೊಂದರಿಯೇಂ 4 ಜೀವಕ್ಕೆ ನೀನು ಮಿಗೆ ಚಿತ್ತದಿ ಶ್ರೀ ದೇವೀ ಮನೀಷದೊಳು ಬ್ರಹ್ಮನಿಹಂ ಯಾ ವಿಶ್ವನಾಥ ಸಹ ರುದ್ರ ಮನೋ ಭಾವಂಗಳಿಂಗೊಡೆಯನಾಗಿರುವಂ 5 ಸಲೆ ಹಮ್ಮಿಗಾ ತ್ರಿಪುರ ಸಂಹರನೇ ಉಳಿದಿಂದ್ರಿಯಗಳಿಗೆ ಜಿಷ್ಣುಮುಖರ್ ಒಳಗಿದ್ದು ಒಳ್ಳಿದನು ಕೆಟ್ಟುದನೂ ಬಲವಿತ್ತು ಮಾಡಿಸುವರೈ ಹರಿಯೆ 6 ಜಲಜಾತ್ಮಜಾಭಿಮತ ಬಂಧು ಪಥಂ ಗಳು ಮೂರು ಬಗೆಯು ನೋಡಿದರೆ 7 ಮಿಗೆ ಕರ್ಮಕರ್ಮವು ವಿಕರ್ಮಗಳೂ ಜಗದಲ್ಲಿ ಎಲ್ಲರಿಗು ಮೂಲವಿದೂ ತ್ರಿಗುಣ ಪ್ರಬದ್ಧರಹ ಜೀವಗಣಾ ಖಗರಾಜ ವಾಹನನೆ ಸಾಕ್ಷಿಯು ನೀಂ 8 ಸದಸದ್ವಿವೇಕಾವನು ಕಾಣದೆ ಸ ಚಿದಚಿದ್ವಿಲಕ್ಷಣನು ನೀನೆನದೇ ಮದಗರ್ವದಿಂದ ಮೆರೆದಾಂ ಕೆಡುವೇಂ 9 ಕುಹುಕಾತ್ಮರಾದವರ ಸಂಗದಿ ಬಂ- ದಿಹ ನೋವು ನಾನಕಟ ಬಣ್ಣಿಸೇಂ10 ಅಂತವರ್ಗವಾರ್ವರು ಶರೀರದೊಳಿ ದುರ್‍ವೃತ್ತಿ ಪುಟ್ಟಿಸುತ ಕೊಲ್ಲುತಿಹರ್ ಪರಮಾತ್ಮ ನಿನ್ನವರ ಸೇರಿರುವೇಂ 11 ಮಲಮೂತ್ರ ಕೂಪವಹ ದೇಹವಿದು ಜಲಗುಳ್ಳೆ ಎಂದರಿತಡಂ ಬರಿದೇ ಕಲುಷಾತ್ಮನಾದೆ ಕರಿರಾಜವರದಾ 12 ಹಸನಾಗಿ ತೋರುತಿಹ ದುರ್ವಿಷಯಂ ಬಿಸಿನೀರು ತುಂಬಿರುವ ಬಾವಿಯಿದುಂ ಕುಸುಮಾಸ್ತ್ರನೆಂಬ ಕಡುಗಳ್ಳನು ತಾ ನೆಸಗೀ ಪ್ರವಾಹದಲಿ ನೂಕುತಿಹಂ13 ಪಾದ ಪದ್ಮಂಗಳ ನಂಬಿದೆ ವೆಂ- ಮ್ಮವಮಾನ ಮಾನಗಳು ನಿನ್ನದುದೆಂ- ದ್ವ್ಯವಸಾಯವಂತರೆ ಮಹಾತ್ಮಕರೂ 14 ಜನುಮಗಳನೆತ್ತುತಲಿ ಜೀವರು ನಿಂ ನನು ಕಾಂಬ ಯೋಚನೆ ತಿರಸ್ಕರಿಸೀ ಘನ ಕಾಮಭೋಗಗಳಪೇಕ್ಷಿಸಿತಾಂ ಧನಕಾಗಿ ದುರ್ಜನರ ಸೇವಿಸುವರು 15 ಹಿತದಿಂದ ಎಲ್ಲರಿಗೆ ನೀನೆ ಇದಂ ಮತಿಹೀನರಾದವರು ಬಾಹ್ಯರ ನಂ- ಬುತ ದುಃಖದಿಂದಲವಿವೇಕರಹರ್ 16 ಗುಣಶೂನ್ಯ ನೀನೆನುತ ಕೊಂಚ ಜನಂ ಗಣಿಸಲ್ಕಸಾಧ್ಯವಹ ವಾದಗಳಿಂ ಘನ ತರ್ಕದಿಂದ ಅನುವಾದಿಸಿ ದುರ್ ಜನ ಮುಖ್ಯರೆನಿಸುತಿಹರ್ ಭುವಿಯೊಳ್ 17 ಅನುಮಾನವೇ ತಮಗೆ ಮುಖ್ಯವೆನು- ತನುಸಾರಿ ರಾಜಸದಿ ತಾಂ ಮುಳುಗೀ ವನಜಾಕ್ಷ ಕೋರಿಕೆಗಳಿಂ ಭಜಿಪರ್ 18 ಉದರ ಪ್ರಯುಕ್ತ ಪರರಾಶ್ರಯಿಸಿ ಪದ್ಯ ಪದ್ಯ ಪೇಳಿ ಬಹುನೀಚನು ನಾ- ನುದಯಾಸಮುದ್ರರೆಲೆ ನೀವೆನುತೇ ಸುದುರಾತ್ಮರಂ ಪೊಗಳಿ ಕೆಟ್ಟೆನು 19 ಹಿತತತ್ವ ಭಾವದಲಿ ದುರ್ಜನರು ಮತಿವಂತರಂತೆ ಬಹಿಯೋಳ್ ನಟಿಸಿ ಸತಿ ಪುತ್ರ ವಿತ್ತಗಳ ಮೋಹದಲೀ ವ್ಯಥೆಪಟ್ಟು ಬಾಯ್ಬಿಡುತ ನೋಯುತಿಹರ್20 ಮೊದಲಾಗಿ ಎಲ್ಲರನು ಮಾಯದಿ ನಿ- ನ್ನುದ ರಾಖ್ಯ ವಾರಿನಿಧಿಯಿಂದಲಿ ತಾವ್ ಉದಿಸಿರ್ಪರೆಂದುಸುರುಗುಂ ಶ್ರುತಿಗಳ್ 21 ಅನುಮಾನವುಳ್ಳ ಜನಕೆಂದಿಗು ಪಾ- ಮೂರ್ತಿ ನಿನ್ನ ಘನ ಜ್ಞಾನ ಸುಖಂ ತೃಣ ಮಾತ್ರವೂ ಬರದು ಸ್ವಪ್ನದೊಳು ಜನದಲ್ಲಿ ಕೀರ್ತಿ ಬಹಿಯೊಳ್ ಬರಿದೆ 22 ಗುರುಸೇವೆಯಿಂದ ತನುದಂಡಿಸಿ ತಾ ನಿರುತಂ ಸುಶಾಸ್ತ್ರಗಳ ನೋಡುತಲಿ ಸ್ಥಿರ ಚಿತ್ತನಾಗಿ ಶ್ರವಣಾದಿಗಳಿಂ ಹರಿಭಕ್ತರಿಂದ ಕಡೆಸೇರುತಿಹಂ 23 ಕವಿಯಾದವರ್ ನಿರುತವುಂ ಮಿಗೆ ಭಾ- ಗವತಾದಿ ಗ್ರಂಥಗಳ ಸಜ್ಜನರಿಂ ಕಿವಿಯಿಂದ ಕೇಳುವುದಕಂ ಬಹು ಜ- ನ್ಮವು ಪಕ್ವವಾಗಿ ಸಲೆ ಪ್ರಾಪ್ತಿಸುಗುಂ 24 ಹರಿಕೃಷ್ಣ ಕೇಶವ ಮುಕುಂದ ನೃಕೇ- ಸರಿ ವಿಷ್ಣುವಾಮನ ತ್ರಿವಿಕ್ರಮ ಶ್ರೀ ಪದ್ಮನಾಭ ಮಧುಸೂದನ ಹೇ ಪುರಷೋತ್ತಮೌಚ್ಯುತ ಜನಾರ್ದನನೇ 25 ವಸುದೇವ ನಂದನ ಮುರಾಂತಕನೇ ಹೃಷಿಕೇಶ ನಾರೇಯಣ ಮಾಧವನೇ ಪರಿ ಪಾ- ಲಿಸುಪೇಂದ್ರ ಭಕ್ತರ ಅಧೋಕ್ಷಜನೇ 26 ಪರಮಾತ್ಮ ನೀನೆಮಗೆ ಎನ್ನುತನಂ- ಬರು ನಿನ್ನ ತಾಮಸರು ಸತ್ಯವಿದು ನೆರೆ ನೋವಿನಿಂಬಳಲಿ ತಾವ್ ಮಿಗೆ ಸಂ- ಸರಣ ಪ್ರವಾಹದೊಳು ಬೀಳುತಿಹರ್ 27 ದ್ಗುಣದಲ್ಲಿ ದುರ್ಗುಣಗಳೇ ಗಣಿಸಿ ಘನ ಮೋಹ ದುಃಖದೊಳು ಸತತ ನಿ- ನ್ನನು ಕಾಂಬ ಯೋಚನೆಯ ಬಿಟ್ಟಿರುವರ್ 28 ನ್ನನು ನಂಬಿ ನಂಬಿದಲೆ ತಾವ್ ನಿರತಂ- ಘನ ಕಾಮ ಕ್ರೋಧ ಮದ ಮತ್ಸರದಿಂ ಜನದಿಂದ ಯತ್ನವನು ಮಾಡುತಿಹರ್ 29 ದೇವಾದಿದೇವ ದಿವಿ ಭೂಮಿಗಳೋಳ್ ಭಾವ ಪ್ರಭೇದದಲಿ ಧ್ಯಾನಿಪರಿಂ- ಗೀ ವೇಷ್ಟಸಿದ್ಧಿಗಳ ನೀನೆ ಸದಾ 30 ಯೋಗಿ ಜನವಂದಿತ ಸ- ಜ್ಜನಕಲ್ಪವೃಕ್ಷ ಜಗದೇಕ ವಿಭೋ ವನಜಾಕ್ಷ ಇಂದಿರೆಯ ವಲ್ಲಭ ಬ್ರಾ- ಹ್ಮಣ ಪ್ರೀಯ ಭಕ್ತಸುಖದಾಯಕನೇ 31 ರವಿಕೋಟಿತೇಜ ರಮಣೀಯ ಕಥಾ- ತವನಾಮ ಕೀರ್ತನೆಯ ಮಾಳ್ಪರ ಪಾ- ಪವ ನೀನೆ ಓಡಿಸುವುದೇನರಿದೈ 32 ವರಾಹ ನೃಕೇ- ಸರಿ ವಾಮನಾವನಿ ಸುರೋತ್ತಮ ಭಾ- ಸ್ಕರ ವಂಶ ಚಂದ್ರವಸುದೇವಜ ಭಾ ಬುದ್ಧ ಕಲ್ಕ ವಪುಷೇ ನಮಃ 33 ಮುನಿಕರ್ದಮಂಗುದಿಸಿ ತಾಯಿಗೆ ಪಾ ವನ ರಾಜಯೋಗವನು ಬೋಧಿಸಿದೈ ಘನಯೋಗಿವರ್ಯ ಕಪಿಲಾಖ್ಯನೆನಿ- ನ್ನನು ನಂಬಿ ಪ್ರಾರ್ಥಿಸುವೆನಾನನಿಶಂ 34 ರ್ಜುನ ಕಾರ್ತವೀರ್ಯಗುಪದೇಶಿಸಿದೇ ಘನಯೋಗ ಬೋಧೆಯನು ಹೈಹಯರ್ ತಾ ವನುವಾದ ಶಿಷ್ಯರೆಲೆದತ್ತವಿಭೋ 35 ಋಷಭಾಖ್ಯನಾಗಿ ಸುತರಿಂಗೆ ಮಹಾ ಋಷಿಚರ್ಯ ಬೋಧಿಸಲವರ್ ತಿಳಿದು ದಶಯೋಗಿವಂದಧಿಕ ಎಂಬತ್ತು ಭೂ- ಮಿಸುರಕ್ರಿವೃತ್ತಿಯಲಿ ಶೋಭಿಸಿದರ್ 36 ಜಂಭ್ವಾಖ್ಯ ದ್ವೀಪದೊಳು ಖಂಡಗಳಿಂ ಅಂಭೋಜನಾಭ ತವನೇಮದಲೀ 37 ಹರಿ ನೀನೆ ಪುಟ್ಟಿಯದು ಸ್ಥಾಪಿಸಿ ದು ರ್ನರರನ್ನು ಕೊಂದು ಶರಣಾಗತರಂ ಪರಿಪಾಲಿಸುತ್ತಿರುವೆ ಸಂತತವುಂ 38 ಕಲಿಕಾಲವೀಗ ಖಳರೆಲ್ಲರು ಸ- ತ್ಕುಲದಲೆ ಪುಟ್ಟಿ ನೆರೆ ಸಾಧುಗಳಂ ಬಲುಬಾಧಿಸುತ್ತ ದುರಿತಂ ಘಳಿಸೇ ನರಕಂಗಳಲ್ಲಿ ನೆರೆಯಾಗುತಿಹರ್ 39 ಪರಮಾತ್ಮ ತತ್ವದಲಿಯೇ ಮರವು ದುರ್ವಿದ್ಯವಭ್ಯಸಿಪುದಕೆ ಮನವು 40 ಪರರನ್ನು ನೋಡಿಯವರಂತೆ ತಾ ವಿರಬೇಕೆನ್ನುತ್ತಲನಿಶಂ ಬಳಲೀ ಗುರುಯತ್ನಮಾಡಿ ವಿಫಲಾಗಲು ಶ್ರೀ ಹರಿ ನಿನ್ನದೂರುತಿರುವರ್ ದುರುಳರ್41 ಕರ್ಣ ಮುಖರಿಂದಲಿ ಸಂ ಗರದಲ್ಲಿ ಕಾದಿ ಮಡಿದಂ ಬರಿದೇ42 ಜಮದಗ್ನಿ ಪುತ್ರನಿಗೆ ಶಿಷ್ಯನು ಭೀ ಷ್ಮಮಹಾ ಪರಾಕ್ರಮಿಯು ದ್ರೋಣನುತಾಂ ಕಮಲಾಪ್ತಪುತ್ರ ಕಲಿ ಶಲ್ಯ ಮುಖ್ಯರ್ ಭ್ರಮೆಯಿಂದಲನ್ನಕಸುಗಳ್ ತೊರೆದರ್ 43 ಯಮಜಂ ವೃಕೋದರನು ಫಲ್ಗುಣನೂ ಯಮಳರ್ ತವಾಂಫ್ರಿಸ್ಮøತಿಯೇ ಬಲವಾ- ಗಿ ಮಹಾಪದಂಗಳನು ದಾಂಟಿದರೈ ಸುಮಬಾಣನಯ್ಯನೆ ಮಹಾತ್ಮರವರ್ 44 ಹರಿ ನಿನ್ನ ಡಿಂಗರಿಗರಿಗಾಶ್ರಯವೇ ವರಭಾಗ್ಯ ನಿತ್ಯಸುಖವೆನ್ನುತಲೀ ಅರಿದುತ್ತಮರ್ ಬಯಸರೆಂದಿಗು ಪಾ- ಮರರಂತೆ ತುಚ್ಛಗಳ ಸ್ವಪ್ನದೊಳು 45 ಸಲೆ ಚಿನ್ನ ಬೆಳ್ಳಿ ಬೆಲೆ ಹೆಚ್ಚು ಪಟ ಗಳ ಗೃಹಕ್ಷೇತ್ರ ಸುತದಾರ ಧನ- ಗಳ ನಿತ್ಯವೆಂದರಿದು ಲೆಕ್ಕಿಸದೇ ಜಲಜಾಕ್ಷ ನಿನ್ನ ಭಜಿಪರ್ ಸುಜನರ್ 46 ಸುಜನಾಬ್ಧಿ ಚಂದ್ರ ಸುಗುಣಾರ್ಣವ ನೀ ನಿತ್ಯ ನಿರವದ್ಯ ಸ್ವಭಾ ವಜ ಕರ್ಮದಿಂ ಸಕಲ ಪ್ರಾಣಿಗಳೂ ನಿಜಯೋಗ್ಯತೆಯಂತೆ ವರ್ತಿಪುದು 47 ಕರುಣಾನಿಧೇ ಕಮಲಲೋಚನನೆ ಸು- ರರಾಜ ಸೋದರನೆ ಭಾವಜನೈ ಯರಮಾಧಿನಾಥ ಯದುವಂಶ ಭೂ ರಥಾಂಗ ಪಾಣಿಯೆ ಜನಾರ್ದನನೇ 48 ರಘುವಂಶಕೇತು ರವಿಮಂಡಲದೋಳ್ ಭಗವನ್ನಿರಂತರದಿ ನೀನಿರುತೆ ಜಗಕೆಲ್ಲ ಕಾಲದನುಸಾರದಿ ನೀ ನಘನಾಳಿಯಿಂದ ಮಳೆಯಂ ಕೊಡುವೇ 49 ವಿಭುದಾಗ್ರಗಣ್ಯರಹ ಜ್ಞಾನಿಗಳೂ ಶುಭವನ್ನು ಲೋಕಕೆ ಸದಾಚರಿಸಿ ನಭ ಭೂಮಿ ಮಧ್ಯದಲಿ ಕೀರ್ತಿ ಸೌ- ರಭವಾಗಿ ಸ್ಥಾಪಿಸಿ ವಿಮುಕ್ತರಹರ್ 50 ಯೋಗ ಪ್ರವರ್ತನೆಯಲೇ ಸುಖಿಸಿ ರೋಗಾದ್ಯುಪದ್ರಗಳು ಇಲ್ಲದಲೇ ರಾಗಾದಿ ದೋಷಗಳ ಸುಟ್ಟಿರುವರ್ 51 ಮನವಾಕ್ಕು ಕಾಯಗಳೊಳೊಂದೆ ವಿಧಂ ಋಣಮುಖ್ಯ ಸೂತಕಗಳಿಲ್ಲದೆಲೇ ಗುಣವಂತರೆನ್ನಿಸಿಯೇ ಶೋಭಿಸುತಾ ಜನದಲ್ಲಿ ಮೌನದಲಿ ವರ್ತಿಸುವರ್ 52 ನರರೊಳ್ ದಿವೌಕಸರು ಪುಟ್ಟುತಲೀ ಹರಿಭಕ್ತಿಯುಕ್ತರೆನಿಸುತ್ತಲಿಸ- ತ್ವರದಿಂದ ಸಾಧನವ ಮಾಡುತಲೀ<
--------------
ಗುರುರಾಮವಿಠಲ
ವೇಣು ಗಾನಪ್ರಿಯ - ಗೋವಿಂದ ನಮ್ಮಮಾನ್ಯ ಮಾನದನೇ - ಗೋವಿಂದ ಪ ದಕ್ಷಿಣಾಕ್ಷಿಯಲಿಹ - ಗೋವಿಂದ | ನಮ್ಮ | ಪಕ್ಷಿಯ ವಾಹ - ಮುಕುಂದ ||ಕುಕ್ಷಿಲಿ ತ್ರಿಭುವನ - ಗೋವಿಂದ | ನಮ್ಮ | ಅಕ್ಷರ ಕ್ಷರವರ _ ಮುಕುಂದ1 ಪೂರ್ಣ ಗುಣಾರ್ಣವ - ಗೋವಿಂದ | ನಮ್ಮ | ಪೂರ್ಣ ಭೋದನುತ ಮುಕುಂದಪೂರ್ಣಾನಂದ ಪ್ರದ - ಗೋವಿಂದ | ಕುಭ | ವಾರ್ಣವ ದಾಟಿಸು ಮುಕುಂದ 2 ಭವ | ಗೋಜನೆ ಬಿಡಿಸೊ - ಮುಕುಂದ 3 ಕಾರಣ ಕಾರಣ - ಗೋವಿಂದ | ಜಗ | ಕಾರಣ ನೈಮಿತ್ಯ - ಮುಕುಂದಈರಣ ಜಗಕೆಲ್ಲ - ಗೋವಿಂದ | ಮದ ವಾರಣ ಮಾರಣ - ಮುಕುಂದ 4 ಶಿರಿ ಹಯವದನನೆ - ಗೋವಿಂದ | ನಮ್ಮ | ಶಿರಿ ಕೃಷ್ಣ ರಾಮನೆ - ಮುಕುಂದಶಿರಿ ವೇದವ್ಯಾಸ - ಗೋವಿಂದ | ಕಾಯೊ | ಗುರು ಗೋವಿಂದ - ವಿಠಲ ಮುಕುಂದ 5
--------------
ಗುರುಗೋವಿಂದವಿಠಲರು
ವೈದಿಕ ಧರ್ಮಧ್ವಜ ಫಡಫಡಿಸಲ ಗಗನದೊಳೆತ್ತರದಿವೈದಿಕ ತತ್ವಜ್ಞಾನ ಪ್ರಕಾಶವು ಪಸರಿಸಲೀ ಜಗದಿ 1ಜ್ಞಾನ ಭಕ್ತಿ ವೈರಾಗ್ಯ ಧೈರ್ಯ ಔದಾರ್ಯ ತಪಶ್ಚರ್ಯದಿನ ದಿನ ಬೆಳೆಯಲಿ ದಾನಧರ್ಮಗಳು ದಯಾ ಸತ್ಯ ಶೌರ್ಯ 2ದುಷ್ಟ ಶತ್ರುಗಳ ಸದ್ದು ಅಡಗಲಿ ಜಗನಿರ್ಭಯ'ರಲಿಭ್ರಷ್ಟಾಚಾರವು ನಿರ್ಮೂಲಾಗಲಿ ಸತ್ಯಕ್ಕೆ ಜಯ'ರಲಿ 3ವರ್ಣಾಶ್ರಮಗಳ ಧರ್ಮದ ಮರ್ಮವು ತಿಳಿಯಲಿ ಜಗಕೆಲ್ಲಾಕರ್ಮಾ ಕರ್ಮ 'ಕರ್ಮ ಮರ್ಮವನು ಅರಿಯಲಿ ಜನರೆಲ್ಲಾ 4ಜಯ ಜಗದೀಶ್ವರರೆಂಬ ನಿನಾದವು ತುಂಬಲಿ ಜಗದಲ್ಲಿಜಯ ಭೂಪತಿ'ಠ್ಠಲ ಸರ್ವೋತ್ತಮ ಜಯಹರಿ ಎಂದೆನಲಿ 5
--------------
ಭೂಪತಿ ವಿಠಲರು
ಶ್ರೀಹರಿ ಕೀರ್ತನೆ ಅಗಲದಿರೋ ಮನ ಮಂದೀರದಿಂದ ಲೆನ್ನ ಎಂದೆಂದಿಗೂ ಕೃಷ್ಣ ಪ ಅಗಲದಿರೋ ಬ್ರಹ್ಮಾದಿ ವಂದಿತ ಪರಿ ಪೂರ್ಣ ಏಕನೆ ವಿಶ್ವ ಸಗುಣ ನಿರ್ಗುಣ ನಿರಜ ನಿಸ್ಸೀಮ ಅ.ಪ. ಕಷ್ಟವಿಲ್ಲದೆ ಸಕಲ- ಚೇಷ್ಟೆಯ ನಡಿಸುವೆ ಕೊಟ್ಟು ದೇಹಾದಿಗಳ- ಬಿಟ್ಟೇ ಜೀವರ ಭವದಿ ಗಿಟ್ಟೀಸೆ ತಮ್ಮ ತಮ್ಮ- ಪಟ್ಟಾ ಮುಕ್ತಿಯ ಬೇಗ ಒಟ್ಟಿನಿಂದಲಿ ಜೀವ ಜಗವಂದಿಷ್ಟು ಚಲಿಸದು ಬಿಟ್ಟು ನಿನ್ನನು ಗುಟ್ಟು ತಿಳಿಯದೆ ಭವದಿ ಕಂ- ಗೆಟ್ಟು ಬಳಲಿದೆ ಭಕ್ತಬಾಂಧವ ನಷ್ಟಕಷ್ಟಗಳಿಲ್ಲದಾ ಸಂತುಷಷ್ಟ ನೀಡುವ ಪ್ರಭುವೆ ಕರುಣಾ- ದೃಷ್ಟಿ ಬೀರುತ ಭಕ್ತಿ ಭಾಗ್ಯವ ಪುಷ್ಟಿಗೈಸುತಲೆನಗೆ ಸಂತತ 1 ಶ್ರೀಶಾನೊಬ್ಬನೆ ಸರ್ವ ತಂತ್ರ ಸ್ವತಂತ್ರನು ನಾಶರಹಿತನಿಗೆಲ್ಲಾ ದಾಸರೆ ಸರಿಸತತಾ ವಾಸುದೇವನು ಜೀವ ಜಗದಿಂ ವಿಲಕ್ಷಣನು ಈಸುಜ್ಞಾನವನೀಯೋ ಜನ್ಮಜನ್ಮಾಂತರಕು ದೋಷದೂರ ವಿಶೇಷ ಮಹಿಮ ಪೂರ್ಣ ವಿಶ್ವಗ ಶಶ್ವದೇಕ ವಿ- ಲಾಸ ಮಿಷಣಾಭರಣ ಭೂಷಿತ ಸಾಮಸರ್ವಾಧಾರ ನಿರುಪಮ ಓಸು ಶಬ್ದಗಳಿಂದ ವಾಚ್ಯನೆ- ನಾಶಗೈಸುತ ಕರ್ಮತ್ರಯಗಳ ಹೃದಯಗುಹೆಯಲಿ 2 ನಿತ್ಯನಿಗಮಾತೀತ-ನೀನೆ ಸತ್ಯರ ಸತ್ಯ ನಿತ್ಯತೃಪ್ತನು ಸ್ವರತ-ಮುಕ್ತೇಶ ಚಿನ್ಮಯನೂ ನಿತ್ಯಜೀವಗೆ ನೀನಿರ್ನಿಮಿತ್ತ ಬಂಧು ಸತತ ನಿತ್ಯಸ್ತೋತ್ರವನು ನುಡಿಸು-ಮೃತ್ಯೋಮೃತ್ಯುವೆ ದೇವಾ ಧಾಮ ವಿಶ್ವೋ ತ್ಪತ್ತಿ ಸ್ಥಿತಿಲಯ ಕರ್ತ ಪರಿಪರಿ ಜೀವ ಸತ್ತಾದಿ ಭಾಸಕ ನಾಥ ಮುಕ್ತಾಮುಕ್ತ ವಂದಿತ - ಭೂತಿ ಭೂರಿದನಾಂತಾತ್ಮ ಖ್ಯಾತ ಸರ್ವೋತ್ತಮ ಪರತ:ಪರಾಕ್ಷರ ವಿಷ್ಣುಸರ್ವಜ್ಞ 3 ಅಂಬುಜಾಕ್ಷನು ನೀನೇ-ಉಂಬುವೆ ಸರ್ವಸಾರ ತುಂಬಿರುವೆ ಒಳಹೊರಗೆ-ಬೆಂಬಲನು ಜಗಕೆಲ್ಲ ಬಿಂಬ ನೀ ಚಲಿಸೆ ಪ್ರತಿ ಬಿಂಬಾ ನಾ ಚಲಿಸುವೆ ನಂಬಿದೆ ಸಲಹಯ್ಯ-ಕಂಬುಚಕ್ರಾಂಕಿತನೆ ಕುಂಭಿಣೀಪತಿ ಕೃಷ್ಣಕೈಬಿಡೆ ಗೊಂಬೆ ಸರಿನಾಲ್ಲವೇನೈ ಡಿಂಬದೊಳಗಿನ ವೈರಿವೃಂದವು ಹಂಬಲಿಸಲೆಡೆಗೊಡವುಭವ ದೊಂಬಿ ಅಡಗಿಸು ದಕ್ಷಣಾಕ್ಷಿಗ-ಸ್ಥಂಭರೂಪಿಯೆ ಶರಣುಶರಣು ಎನಿಸೈ ನೀಡಿ ವಿಜ್ಞಾನ 4 ಮಂದರೋದ್ಧರ ಗೋವಿಂದ ನಿನ್ನಯ ಮಹಿಮೆ ಇಂದಿರೆಗಾಗದು ಸಾಕಲ್ಯ ತಿಳಿಯೆಸಿದ್ಧವಿದೂ ಛಂದಾ ಛ್ಚಾದಿತ ಗಾತ್ರ-ಬಂಧ ಮೋಕ್ಷಪ್ರದನೆ ಎಂದು ಕಾಂಬೆನೋ ನಿನ್ನ-ಮಂದನಾನಿಹೆ ಜಗದೀ ಸದ್ಮ ಪೂರ್ಣಾನಂದ ನಿನ್ನಯ ನಾಮ ವೃಂದದಿ ಬಂಧಿಸಿಹೆ ಜಗವೆಲ್ಲ ವಿಷ್ಣುವೆ-ಛಂದಬೃಹತೀಪತಿಯೆ ನೀನೈ ನಾಡಿ ಮೆರೆಯುವ ಇಂದಿರಾಪತಿ ಕೃಷ್ಣವಿಠಲನೆ-ನಿಂದು ತೋರುತ ನಿನ್ನ ರೂಪವ 5
--------------
ಕೃಷ್ಣವಿಠಲದಾಸರು
ಸಿದ್ಧಬಸವ ಪ್ರಸಿದ್ಧನ ಮಹಿಮೆಯ ಕೇಳಿರಿ ನೀವಿನ್ನು |ವಿದ್ಯಾ ಬುದ್ಧಿ ಧನ ಧಾನ್ಯವನು ಸಿದ್ಧಿಸುವವಿನ್ನೂ ಪ ಶಿವನ ಅಪ್ಪಣೆ ತೆಗೆದುಕೊಂಡು ಶಿವಕಂಚಿಯೊಳಗೆ |ಪಾವನ ಚರಿತ ಬ್ರಾಹ್ಮಣನಲ್ಲಿ ಪುಟ್ಟಿದನು ಬೇಗ ||ದಿವಸ ದಿವಸಕೆ ಬೆಳೆದನು ಬಿದಗಿ ಚಂದ್ರಮನ ಹಾಗೆ |ಜಾವ ಜಾವಕೆ ಶಿವನ ಧ್ಯಾನವ ಮಾಡುವ ಮನದೊಳಗೆ1 ಮುಂಜಿ ಮಾಡಿಸಿಕೊಂಡನು ಸಿದ್ಧನು ಮದುವೆಯಾಗಲಿಲ್ಲ |ರಂಜಿಸುತಿಹನು ಸೂರ್ಯನಂತೆ ತೋರುವ ಜಗಕೆಲ್ಲ ||ಬಂಜೆ ಒಬ್ಬಳು ಇದ್ದಳು ಆಕೆಗೆ ಮಗನ ಕೊಟ್ಟನಲ್ಲ |ಸಂಜೆ ಹಗಲು ಕಾಣದ ಕುರುಡಗ ಕೊಟ್ಟನು ಕಣ್ಣುಗಳ 2 ತಂದೆ ತಾಯಿಗೆ ಹೇಳಿದನಾಗ ಪೋಗುವೆ ನಾನೆಂದು |ಕಂದ ನಮ್ಮನು ಬಿಟ್ಟು ಪೋಗುವದುಚಿತವೆ ನಿನಗೆಂದು ||ಅಂದ ತಾಯಿಗೆ ವಂದಿಸಿ ಹೇಳಿದ ಮಗನಾಗುವೆನೆಂದು |ಸಂದೇಹವು ಬೇಡೆಂದು ಪೇಳುತ ತೆರಳಿದ ದಯಾಸಿಂಧು 3 ಮಹಾಶಿವಾಲಯ ಕಂಡನು ಸಿದ್ಧನು ದೇಶ ತಿರುಗುತಲಿ |ಆ ಸೀಮೆಯಲಿ ಹಳ್ಳದ ನೀರು ನಿರ್ಮಲ ನೋಡುತಲಿ ||ಆಸನ ಹಾಕಿ ಕುಳಿತನು ಶಿವನ ಧ್ಯಾನವ ಮಾಡುತಲಿ |ಆ ಸಮಯದಿ ಬಂದನು ಕರಣಿಕ ಹೊಲಗಳ ನೋಡುತಲಿ 4 ಉದ್ದಂಡ ಸಂತತಿ ಆಗಲಿ ಇನ್ನು 5 ನಿನ್ನಯ ಪೂಜೆಯ ಮಾಡುವದ್ಹೇಗೆ ಹೇಳೋ ನಮಗೀಗ |ಮನ್ನಿಸಿ ಅವಗೆ ಪೇಳಿದ ಸಿದ್ಧ ಪುರುಷನು ತಾ ಬೇಗ ||ಸಣ್ಣ ಬಿಂದಿಗೆಯನಿಟ್ಟು ದ್ವಿಜರ ಪಾದೋದಕವೀಗ |ಸಂಖ್ಯೆಯಿಲ್ಲದ ಕೊಡಗಳ ಹಾಕಲು ತುಂಬದು ಎಂದೀಗೆ 6 ಅಂದಿಗೆ ಉಂಟು ಇಂದಿಗೆ ಇಲ್ಲ ಎನಲಾಗದು ನೀನು |ಸಂದೇಹವಿಲ್ಲ ಆಶ್ವೀನ ವದ್ಯ ದ್ವಿತೀಯದ ದಿನವು ||ಇಂದಿಗೆ ಕರಣಿಕ ವಂಶದವರು ಮಾಡುತಾರೆ ಇನ್ನೂ |ಮುಂದಕೆ ತೆರಳಿ ಕೊಳಕೂರಕೆ ಬಂದ ಸಿದ್ಧ ತಾನು 7 ಗಾಣಿಗರ ಮನೆಯೊಳಗಿದ್ದು ಗಾಣಾ ಹೂಡಿದನು |ಪ್ರಾಣ ತೊಲಗಿದ ಹೆಣ್ಣುಮಗಳಿಗೆ ಪ್ರಾಣವನಿತ್ತಾನು ||ಗೋಣಿಯೊಳಗೆ ಹೊಲಿದು ನದಿಯಲಿ ಪಾಚ್ಛಾ ಹಾಕಿದನು |ಕಾಣಿಸದಂತೆ ಬೇಗನೆ ಹೊರಗೆ ಹೊರಟು ಬಂದಾನು 8 ಹೆಸರು ನಿನ್ನದು ಏನು ಎಂದು ಪಾಚ್ಛಾ ಕೇಳಿದನು |ಹೆಸರು ನನಗೆ ಬಸವನೆಂದು ಕರೆತಾರೆ ಇನ್ನು ||ಪಶು ನೀನಾದರೆ ಸೊಪ್ಪಿಯ ಬೇಗ ತಿನಬಾ ಎಂದನು |ನಸು ನಗುತಲಿ ಸೊಪ್ಪಿಯ ತಿಂದು ಡುರಕಿ ಹೊಡೆದಾನು 9 ಗೊಂಬಿಗೆ ವಸ್ತಾ ಸೀರೆಯನುಡಿಸಿ ಸಿಂಗಾರ ಮಾಡಿದನು |ರಂಭೆಗೆ ಸರಿ ಈ ಹೆಣ್ಣು ಮಗಳಿಗೆ ಮದುವ್ಯಾಗೋ ನೀನು ||ಅಂಬುಜ ಮುಖಿ ಬಾರೆಂದು ಕರೆದನು ಸಿದ್ಧ ಮುನೀಶ್ವರನು |ತುಂಬಿದ ಬಸುರೊಳು ಮಗನ ಪಡೆದಳು ವಂಶಾದೆ ಇನ್ನು 10|| ನೇಮವ ಮಾಡಿ ಕೊಳಕೂರದಿ ಇರುವೆನು ನಾನೆನುತ |ಈ ಮಹಿಮೆಯೊಳಗೆ ಭೀಮಾ ದಕ್ಷಿಣವಾಹಿನಿ ಮಹಾಕ್ಷೇತ್ರ ||ಗ್ರಾಮಸ್ಥರನು ಕರೆದು ಹೇಳಿದನು ಅಡಗುವೆ ನಾನೆನುತ |ನೀವು ಮಾತ್ರ ನಾವಿದ್ದ ಸ್ಥಳವನು ನೋಡಬೇಡೆನುತ 11 ಕಲಿಕಾಲವನು ಕಂಡು ಸಿದ್ಧನು ಅದೃಶ್ಯನಾದನು |ತಿಳಿದು ಭಕ್ತಿ ಮಾಡಿದವರಿಗೆ ವರಗಳ ಕೊಡುತಿಹನು ||ಸುಳಿವನು ಕಣ್ಣಿಗೆ ಸತ್ಪುರುಷರಿಗೆ ಸಿದ್ಧ ಬಸವ ತಾನು |ಹಲವು ಹಂಬಲ ಮಾಡಲು ಬೇಡರಿ ಇರುವೆ ನಾನಿನ್ನೂ 12 ಹನ್ನೆರಡು ನುಡಿ ಸಿದ್ಧನ ಸ್ತೋತ್ರವ ಕೇಳಿದವರಿಗೆ |ಮುನ್ನ ಮಾಡಿದ ಪಾಪವು ನಾಶಾಗಿ ಹೋಗುವದು ಬೇಗ ||ಧನ್ಯನಾಗುವ ಕೀರ್ತಿ ಪಡೆಯುವ ಲೋಕದ ಒಳಗ |ಚನ್ನಾಗಿ ಶ್ರೀಪತಿ ಗುರುವಿಠ್ಠಲನು ಒಲಿವನು ತಾ ಬೇಗ 13
--------------
ವಿಶ್ವಪತಿ
ಹೃದಯಾಧಿವಾಸಾ ಚಿನ್ಮಂiÀi ಪಾವನ ಅವನೆ ದೇವಾಧಿದೇವ ಮೂರು ಕಾಲದ ಸಾಕ್ಷಿ ಪರಮಾತ್ಮನೇ ಅವನೇ ಜಗದಾಧಿವಾಸ ಪ ಆಕಾರದೊರ ಏಕಾಂತಪೂರ ಏಕಾಂತಘನಪೂರ ತಾ ನಿರ್ವಿಕಾರ ಮನೋವಾಣಿದೂರ ಮನೋವಾಣಿಗೆದೂರ ಜಗಕೆಲ್ಲ ಆಧಾರ ತಾನಾಗಿಹ ಇವನೆ ಪರಮಾತ್ಮ ಈಶ ಹೃದಯಾಧಿವಾಸ 1 ಮನವೆಲ್ಲ ಉಡುಗಿ ಅನಿಸಿಕೆಯಡಗಿ ಅನಿಸಿಕೆ ತಾನಡಗಿ ತನಿನಿದ್ರೆಯಲ್ಲಿ ಇವು ಎಲ್ಲ ಮುಳುಗಿ ತಾನೇ ತಾನಾಗಿರ್ದ ಚಿನ್ಮಾತ್ರನೆ ಅವನೆ ಆನಂದರೂಪ ಹೃದಯಾಧಿವಾಸ 2 ಅವನೇ ನಾನೆಂದು ತಿಳಿ ಈಗ ನಿಂದು ಜಗವೆಲ್ಲ ಕನಸೆಂದು ಪರಮಾರ್ಥ ಸತ್ಯ ಶ್ರೀನಾರಾಯಣ ಇವನೇ ಗುರುಶಂಕರೇಶ ಹೃದಯಾಧಿವಾಸ 3
--------------
ಶಂಕರಭಟ್ಟ ಅಗ್ನಿಹೋತ್ರಿ