ಒಟ್ಟು 44 ಕಡೆಗಳಲ್ಲಿ , 24 ದಾಸರು , 42 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನವವಿಧ ಭಕ್ತಿ ಶ್ರವಣ ಪಾವನವಾದ ಹರಿಕಥೆ ಪುರಾಣ ಮೊದ ಲಾದುದನು ಕೇಳುತ್ತಿ ಪರಮಾತ್ಮನನ್ನು ಹೃದಯ ಪೀಠದಲಿರಿಸಿ ಪೂಜಿಸುವ ಭಕ್ತನೇ ಶ್ರವಣ ಫಲ ಹೊಂದಿದವ ಶ್ರವಣಭಕ್ತಿಯಿದು 64 ದಾಸಕೂಟದ ಭಕ್ತರಿಂ ರಚಿತವಾದ ಸು ಶ್ರಾವ್ಯ ಹಾಡುಗಳನ್ನು ಪಾಡಿ ಕುಣಿಯುತ್ತ ದೇವರನು ನೆನೆನೆನೆದು ಧ್ಯಾನಿಸುವ ಭಕ್ತರೇ ಕೀರ್ತನದ ಭಕ್ತರೆಂದರಿ ಮನುಜ ನೀನು 65 ವ್ಯಾಸ ದಾಸರ ಕೂಟದಿಂದರಿತ ದೇವರನು ಮಾನಸದ ಮಂಟಪದಲ್ಲಿರಿಸಿ ಪೂಜಿಸುತ ಅದನೆ ಪೌನಃಪುನ್ಯದಿಂದ ಮೆಲುಕಾಡುವದು ಸ್ಮರಣಭಕ್ತಿಯಿದೆಂದು ತಿಳಿ ಮನುಜ ನೀನು 66 ಅವತಾರ ರೂಪಗಳ ಮೂರ್ತಿಗಳ ರಚಿಸುತಲಿ ನಿನ್ನ ಚಿತ್ತದ ದೇವರನ್ನಲ್ಲಿಯಿರಿಸಿ ಅವನ ಗುಣಗಳ ನೆನೆದು ಪಾದಸೇವೆಯ ಮಾಡೆ ಪಾದಸೇವನಭಕ್ತಿಯೆಂದು ತಿಳಿ ಮನುಜ 67 ಹೂ ತುಳಸಿ ಮೊದಲಾದ ವಸ್ತುಗಳ ಶೇಖರಿಸಿ ದೇವ ಮೂರ್ತಿಗಳನ್ನು ಇದಿರಲ್ಲಿಯಿರಿಸಿ ಷೋಡಶದ ಉಪಚಾರ ಪೂಜೆಗಳ ನಿತ್ಯದಲಿ ಮಾಡುವುದೆ ಅರ್ಚನದ ಭಕ್ತಿಯಿದು ತಿಳಿಯೈ 68 ಎದೆ ಶಿರಸು ಕಣ್ಣು ಮನ ಕೈಕಾಲು ಮೊಣಕಾಲು ವಾಗೆಂಬುದೆಂಟಂಗಗಳನು ಪಾದದೆಡೆಯೀಡಾಡಿ ನಮಿಸುವುದೇ ವಂದನವು ಸಾಷ್ಟಾಂಗನಮನವಿದು ತಿಳಿಯೈ 69 ದಾಸೋಹವೆಂಬುದನು ತಿಳಿದು ನೀನನವರತ ಫಲದ ಬಯಕೆಯ ತೊರೆದು ಸೇವೆಯನು ಮಾಡೆ ಸೇವಕನ ನಿನ್ನನ್ನು ತನ್ನ ಬಳಿಗೊಯ್ಯುವನು ಭವಬಂಧ ತೊರೆಯಿಸುತ ಪಾಲಿಸುವನವನು 70 ಸಚ್ಚಿದಾನಂದ ಸ್ವರೂಪದವ ಪರಮಾತ್ಮ ತನ್ನ ಗುಣಗಳನ್ನೆಲ್ಲ ಭಕ್ತರಿಗೆ ಕೊಡುವ ನೀರು ಹಾಲನು ನಂಬಿದಂತೆ ನಂಬುವನನ್ನು ಭಕ್ತರಕ್ಷಕನವನು ಮುಕ್ತಿದಾಯಕನು 71 ಕೃಷ್ಣನು ಪರಬ್ರಹ್ಮ ಕೃಷ್ಣನನು ವಂದಿಸುವೆ ಕೃಷ್ಣನಿಂದಲೆ ಸಕಲ ವಿಶ್ವಗಳ ಸೃಷ್ಟಿ ಸುಕೃತ ದುಷ್ಕøತವೆಲ್ಲ ಕೃಷ್ಣನಡಿಯಲಿ ಮುಡಿಯು ಕೃಷ್ಣನಲಿ ಮನವು 72 ಕಾಮಹತಕನು ರುದ್ರದೇವನಿಲ್ಲಿಯೆ ಇದ್ದು ಅಷ್ಟಯತಿಗಳ ಶುದ್ಧಮಾನಸರ ಮಾಡಿ ಬಾಲಯತಿಗಳ ಮೂಲಕವೆ ಪೂಜೆಯನು ಪಡೆದು ರಾರಾಜಿಸುವೆ ದೇವ ಕೃಷ್ಣರೂಪದಲಿ 73 ಭಾರ್ಗವೀಪತಿಯಾದ ಸಿರಿವರನು ಮಾಧವನು ಭಾರ್ಗವೀರೂಪವನು ಶುಕ್ರವಾರದಲಿ ತಾಳ್ದು ಭಕುತರ ಹೃದಯವನ್ನರಳಿಸುವೆ ನೀನು ಮೋಹಿನೀರೂಪವದು ಮೋಹಕವದಲ್ತೆ 74 ಬಲ್ಲಾಳ ವಂಶಜರು ಉಡುಪ ಕುಲದವರೆಂದು ಭಕುತ ಗುರುವಾದಿರಾಜರ ಹಸ್ತದಿಂದ ಮೂರು ಅವತಾರ ಚಿಹ್ನೆಯ ತಾಳ್ದ ಮಾರುತಿಯ ಆರಾಧ್ಯ ಭೂವರಾಹರ ಕೊಡಿಸಿ ಪೊರೆದೆ 75 ದುಷ್ಟ ಜನಮರ್ದನ ಜನಾರ್ದನನು ನೀನಿರುವೆ ನಿನ್ನ ರೂಪವೆ ಪಕ್ಷನಾಥ ಸೇವಿತವು ಚಕ್ರ ಶಂಖಾಸಿ ಪಾನದ ಪಾತ್ರೆಗಳ ಧರಿಸಿ ದುಷ್ಟ ಶಿಕ್ಷಣಕಾಗಿ ಕಾಳಿ ಸೇವಿಪಳು 76 ಜಮದಗ್ನಿಪುತ್ರನಾಗವತರಿಸಿ ನೀನೊಮ್ಮೆ ಕೊಡಲಿಯಿಂ ಕಡಿಕಡಿದು ದುಷ್ಟರಾಜರನು ನಕ್ಷತ್ರ ಮಂಡಲವ ಭೂ ಮಂಡಲವ ಮಾಡಿ ಪರಶುರಾಮನು ಎಂಬ ಪೆಸರನ್ನು ಪಡೆದೆ 77 ಪರಶುರಾಮನು ರಾಮ ಪರಶುರಾಮನು ಕೃಷ್ಣ ಒಬ್ಬನೇ ಹಲವಾರು ರೂಪಗಳ ತಾಳಿ ಸಾಸಿರದ ನಾಮದಿಂ ಸ್ತುತಿಸಿಕೊಳ್ಳುವೆ ಹರಿಯೆ ನಿನ್ನ ಮಾಯಾರೂಪ ತಿಳಿದವರು ಯಾರು? 78 ಮೇಘದೆಡೆಯಿರುವ ಮಿಂಚಿನ ಹಾಗೆ ನೀನೆಂದು ತಿಳಿಸಲ್ಕೆ ನೀನು ಮೇಘದ ವರ್ಣದವನು ನೀಲತೋಯದ ಮಧ್ಯದಲ್ಲಿರುವ ವಿದ್ಯುತ್ತಿನಂತಿರುವಿ ಯೆಂದು ಶ್ರುತಿ ಹೇಳುವುದು ತಿಳಿಯೈ79 ಪುರುಷೋತ್ತಮನೆ ನಿನ್ನ ಪುರವೆಯೆನ್ನಯ ದೇಹ ಉತ್ತಮನು ನೀನಿರುವೆ ಅಧಮ ನಾನಿರುವೆ ಅಜ್ಞಾನದಾಚ್ಛಾದಿಕೆಯನೆನಗೆ ಹಾಕುತಲಿ ಬಿಂಬರೂಪದಲಿದ್ದು ಬೆಳಗಿಸುವೆ ನನ್ನ 80 ಶ್ರವಣಮನನಾದಿ ಸಾಧನದ ಬಲದಿಂದ ನಾ ನನ್ನ ಮುಸುಕನು ತೆಗೆದರೂ ನೀನು ಎನ್ನ ಬಳಿಯಲ್ಲಿದ್ದು ಕಾಣದಿಹೆ ಪರಮಾತ್ಮ ನಿನ್ನ ಪರಮಾಚ್ಛಾದಿಕೆಯ ತೆಗೆದು ತೋರು 81 ಗೋವರ್ಧನೋದ್ಧಾರಿ ಸಿರಿವರನೆ ನೀನೊಮ್ಮೆ ನಾಭಿರಾಜನ ಪುತ್ರನಾಗಿಯವತರಿಸಿ ಅಜನಾಭವೆಂಬ ಮೋಡವನು ಸೃಷ್ಟಿಸಿ ನೀನು ಲೋಕದ ಕ್ಷಾಮವನು ಹೋಗಲಾಡಿಸಿದೆ 82 ನೀನೊಮ್ಮೆ ದಕ್ಷಿಣದ ಕರ್ಣಾಟಕಕೆ ಬಂದು ಅಜಗರದ ವೃತ್ತಿಯಲಿ ದೇಹವನು ತೊರೆದು ನಿರ್ವಾಣ ಬೌದ್ಧಮತ ಜೈನಾದಿ ಮತಗಳಿಗೆ ಮೂಲಪುರುಷನದಾಗಿ ಮೆರೆದೆ ಪರಮಾತ್ಮ 83 ಸತ್ವ ರಜ ತಮವೆಂಬ ಮೂರು ಗುಣ ಪ್ರಕೃತಿಯದು ಪ್ರಾಕೃತದ ದೇಹವನು ಹೊಂದಿದಾ ಜನರು ಹುಟ್ಟುಗುಣ ಮೂರರಿಂ ಕರ್ಮವನು ಮಾಡುತ್ತ ಸುಖ ದುಃಖವನು ಹೊಂದಿ ಜೀವಿಸುವರವರು 84 ಸತ್ಯಾತ್ಮಕನು ನೀನು ಚ್ಯುತಿಯಿಲ್ಲ ಸತ್ಯಕ್ಕೆ ಅಚ್ಯುತನ ನಾಮದಿಂ ಪಾಪ ಪರಿಹರಿಪೆ ಅಂತವಿಲ್ಲದುದಾತ್ಮ ಆತ್ಮರಕ್ಷಕನಾಗಿ ನಾಮದಲನಂತನೆನಿಸಿರುವೆ ಶ್ರೀಹರಿಯೇ 85 ವೇದರಕ್ಷಕನಾಗಿ ಗೋವುಗಳ ರಕ್ಷಿಸುತ ಗೋವಿಂದನಾಮವನು ಧರಿಸುತಲಿ ನೀನು ನಾಮತ್ರಯಗಳಿವನು ಕರ್ಮಾಂತದಲಿ ಪಠಿಸೆ ಕರ್ಮದೋಷದ ಪಾಪ ಪರಿಹಾರವಹುದು 86 ಸಚ್ಚಿದಾನಂದಸ್ವರೂಪ ಹರಿ ನೀನಿರುವೆ ನಿನ್ನ ರೂಪಗಳೆಲ್ಲ ಪೂರ್ಣವಾಗಿಹವು ಜ್ಞಾನವಾನೆಂದವನು ಹೆರವರ್ಗೆ ತಿಳಿಸುತಿರೆ ನಮ್ಮಲ್ಲಿ ಹೆಚ್ಚುವವು ಅದರಿಂದ ಪೂರ್ಣ 87 ಹರದಾರಿ ಸಾವಿರಾರಿದ್ದರೂ ನಾದವನು ಚಣದೊಳಗೆಯಾಕಾಶವಾಣಿ ಕೇಳಿಸುವದು ಕಾಣದಿಹ ವಿದ್ಯುತ್ತುರೂಪವನು ತಾಳಿದವ ದೇವನಲ್ಲದೆ ಬೇರೆ ಯಾರ ಮಾಯೆಯಿದು 88
--------------
ನಿಡಂಬೂರು ರಾಮದಾಸ
ನಾರಸಿಂಹನೆ ಎನ್ನ | ದುರಿತೌಘಗಳನು ದೂರಕೈದಿಸಿ ಘನ್ನ | ಕರುಣಾವಲೋಕನ ಭವ ಭಯವನ್ನ | ಬಿಡಿಸಯ್ಯ ಮುನ್ನ ಪ ಧೀರ ಸುಜನೋದ್ಧಾರ ದೈತ್ಯ ವಿ ದೂರ ಘನಗಂಭೀರ ಶೌರ್ಯೋ ಧಾರ ತ್ರಿಜಗಾಧಾರ ಎನ್ನಯ ಭಾರ ನಿನ್ನದೊ ಹೇ ರಮಾವರ ಅ.ಪ. ಏನು ಬಲ್ಲೆನೊ ನಾನು | ಸುಜ್ಞಾನ ಮೂರುತಿ ಮಾನಸಾಬ್ಜದಿ ನೀನು | ನೆಲೆಯಾಗಿ ನಿಂತು ಏನು ನುಡಿಸಲು ನಾನು | ಅದರಂತೆ ನುಡಿವೆನು ಜ್ಞಾನದಾತನೆ ಇನ್ನು | ತಪ್ಪೆನ್ನೊಳೇನು ಸ್ನಾನ ಜಪತಪ ಮೌನ ಮಂತ್ರ ಧ್ಯಾನಧಾರಣ ದಾನ ಧರ್ಮಗ- ಳೇನು ಮಾಡುವುದೆಲ್ಲ ನಿನ್ನಾ- ಧೀನವಲ್ಲವೆ ಶ್ರೀನಿವಾಸನೆ ದಾನವಾಂತಕ ದೀನರಕ್ಷಕ ಧ್ಯಾನಿಪರ ಸುರಧೇನುವೆನ್ನುವ ಮಾನವುಳ್ಳವರೆಂದು ನಂಬಿದೆ ಸಾನುರಾಗದಿ ಕಾಯೊ ಬಿಡದೆ 1 ತಂದೆತಾಯಿಯು ನೀನೆ | ಗೋವಿಂದ ಎನ್ನಯ ಬಂಧು ಬಳಗವು ನೀನೆ | ಮು- ಕುಂದ ಗುರುಸಖ ವಂದ್ಯದೈವವು ನೀನೆ ನೀನೆ | ಆನಂದ ನೀನೆ ಹಿಂದೆ ಮುಂದೆಡಬಲದಿ ಒಳಹೊರ- ಗೊಂದು ಕ್ಷಣವಗಲದಲೆ ತ್ರಿದಶರ ವೃಂದ ಸಹಿತದಿ ಬಂದು ನೆಲಸಿ ಬಂದ ಬಂದಘಗಳನು ಹರಿಸಿ ನಂದವೀಯುತಲಿರಲು ಎನಗಿ- ನ್ನೆಂದಿಗೂ ಭಯವಿಲ್ಲ ತ್ರಿಕರಣ- ಕರ್ಮ ನಿನ್ನರು ಎಂದು ಅರ್ಪಿಸುವೆನು ನಿರಂತರ 2 ಪ್ರೀಯ ನೀನೆನಗೆಂದು | ಮರೆಹೊಕ್ಕು ಬೇಡುವೆ- ನಯ್ಯ ಗುಣಗಣಸಿಂಧು | ಮೈಮರೆಸಿ ವಿಷಯದ ಹುಯ್ಲಿಗಿಕ್ಕದಿರೆಂದು | ಶರಣನ್ನ ಬಿನ್ನಪ ಇಂದು | ಕೈಬಿಡದಿರೆಂದು ತಾಯನಗಲಿದ ತನಯನಂದದಿ ಬಾಯ ಬಿಡಿಸುವರೇನೊ ಚಿನ್ಮಯ ನ್ಯಾಯ ಪೇಳುವರ್ಯಾರೊ ನೀನೊ ಸಾಯಗೊಲುತಿರೆ ಮಾಯಗಾರನೆ ತೋಯಜಾಸನ ಮುಖ್ಯ ಸುಮನಸ ಧ್ಯೇಯ ಶ್ರುತಿ ಸ್ಮøತಿ ಗೇಯ ಕವಿಜನ ಗೇಯ ಚತುರೋಪಾಯ ಭಕ್ತ ನಿ- ಕಾಯ ಪ್ರಿಯ ಶ್ರೀಕಾಂತ ಜಯ ಜಯ
--------------
ಲಕ್ಷ್ಮೀನಾರಯಣರಾಯರು
ನಿನ್ನ ಬಿಟ್ಟಿರಲಾರೆ ನೀರಜಾಕ ್ಷ ಪ ಘನ್ನ ಮಹಿಮನೆ ನಿನ್ನ ಸನ್ನಿಧಾನವನೀಯೊ ಅ.ಪ. ಸರ್ವಧರ್ಮಗಳಿಗೆ ನೀನಿಲ್ಲದಿನ್ನಿಲ್ಲ ಉರ್ವಿಕರಿಗೆ ನೀನೆ ಉರ್ವೀಶನೆ ನಿರ್ವಿಕಾರ ಮಹಾತ್ಮ ನಿಖಿಲಾಂತರಾತ್ಮಕನೆ ಪಾದ ಸೇವೆಯೆನಗೀಯೊ 1 ತಡವ್ಯಾಕೆ ಬರಲಿನ್ನು ಪೊಡವೀಶ ಯನ್ನೊಡನೆ ತಡೆಯಲಾರೆನು ನಿನ್ನ ವಿರಹವನ್ನು ನುಡಿಯಬೇಡವೋ ಎನ್ನ ನೀ ಪೋಗು ಎಂದೆನುತ ಕಡು ದಯಾನಿಧಿ ನಿನ್ನ ನಾ ಬಿಡೆನೊ 2 ಆನಂದ ಪರಿಪೂರ್ಣ ಶ್ರೀನಾಥ ನಿನಗೇಕೆ ಕಾನನಾ ವಾಸವು ಕಮಲನಯನ ಜ್ಞಾನದಾಯಕ ನಿನ್ನ ಚರಣ ಶರಣನೊ ನಾನು ದೀನರಕ್ಷಕ ಸ್ವಾಮಿ ಶ್ರೀ ಕರಿಗಿರೀಶ 3
--------------
ವರಾವಾಣಿರಾಮರಾಯದಾಸರು
ನೋಡುವ ಬನ್ನಿ ಪೂಜೆ ಮಾಡುವ ಬನ್ನಿ | ಪಾಡಿ ನಲಿದಾಡುತಲಿ ಎನ್ನೊಡೆಯಾ ಲಿಂಗಗ ಪ ದೇಹ ದೇವಾಲಯದಲ್ಲಿ ಹೃದಯ ಜಲ ಹರಿಯಲಿ | ಊಹಿಸಿ ನೆಲೆಯಾಗಿ ಹೊಳೆವ ಆತ್ಮಲಿಂಗಗ 1 ಜ್ಞಾನದಭಿಷೇಕ ಸಮ್ಯಕ್ ಜ್ಞಾನದಾ ವಸ್ತ್ರ ನೀಡಿ | ಧ್ಯಾನದೀಪಾ ಸಂಚಿತದ ಧೂಪಾರತಿಯಾ ಲಿಂಗಗ 2 ಭಾವಭಕ್ತಿ ಗಂಧಾಕ್ಷತೆ ಸುಮನ ಪುಪ್ಪದಲಿಂದು ಅವಗು ಸುವಾಸನೆಯು ಪರಿಮಳ ಲಿಂಗಗ 3 ಘನ ಗುರು ಮಹಿಪತಿ ಸುತ ಪ್ರಭುಲಿಂಗಗ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪೂರ್ಣರೂಪನೆ ಎನ್ನ ಪೂರ್ಣ ಮನದಲಿ ನಿಂತು ಪೂರ್ಣಗೊಳಿಸಭಿಲಾಷೆಯ ಪ. ಪೂರ್ಣ ಚಂದ್ರನ ಕಾಂತಿ ಪೂರ್ಣಧಿಕ್ಕರಿಸುವೊ ಪೂರ್ಣ ಪ್ರಕಾಶ ಹರಿಯೆ | ನೀ ಪೊರೆಯೊ ದೊರೆಯೆ ಅ.ಪ. ಪೂರ್ಣಕಾಮನೆ ಸ್ವಾಮಿ ಪೂರ್ಣ ಆನಂದ ಸಂ- ಪೂರ್ಣ ಗುಣಗಣನಿಲಯನೆ ಪೂರ್ಣ ಭಕ್ತರದಾತ ಪೂರ್ಣ ಲಕ್ಷ್ಮೀಶಪ್ರೀತ ಪೂರ್ಣಭೋಧರ ವರದನೆ ಪೂರ್ಣ ಪ್ರಕಾಶ ನಿನ್ನ ಕಾಣದೆಲೆ ಕಂಗೆಡುವೆ ಪಾದ ನೀಡೋ 1 ಚಕೋರ ಪೂರ್ಣಚಂದ್ರನೆ ಭಕ್ತಿ ಪೂರ್ಣ ಶರಧಿಗೆ ಚಂದ್ರನೆ ಪೂರ್ಣ ಬಾಧೆಯಪಡುವೆ ಪೂರ್ಣಗೈಸೆನ್ನಭವ ಪೂರ್ಣಚಂದ್ರನೆ ತಾಪಕೆ ಪೂರ್ಣ ನಂಬಿರುವೆನೊ ಪೂರ್ಣದಯವನೆಗರೆಯೊ ಪೂರ್ಣ ಕೃಪೆ ಚಂದ್ರಿಕೆ ಈಗಲೇ | ಬೀರೆನ್ನ ಮೇಲೆ 2 ಪೂರ್ಣಚಂದ್ರನ ವಂಶ ಪಾವನವಗೈಯಲು ಪೂರ್ಣ ಯದುಕುಲದಿ ಜನಿಸಿ ಪೂರ್ಣ ಯುದ್ಧದಲಿ ಗೆಲಿಸಿ ಪೂರ್ಣ ರಾಜ್ಯವನಿತ್ತೆ ಪ್ರಾಣಿ ಹೃದ್ಗುಹವಾಸಿ ಪೂರ್ಣ ಶ್ರೀ ವೆಂಕಟೇಶ | ಶ್ರೀ ಶ್ರೀನಿವಾಸ 3 ಪೂರ್ಣತತ್ವಗಳಿಗೆ ಪೂರ್ಣ ಶಕ್ತಿಯನಿತ್ತು ಪೂರ್ಣಗೊಳಿಸಿದೆ ಸೃಷ್ಟಿಯ ಪೂರ್ಣತತ್ವಾಧಿಪತಿ ಪ್ರಾಣದೇವನ ಪ್ರಿಯ ಪೂರ್ಣ ಭಕ್ತರ ರಕ್ಷಕ ಪೂರ್ಣ ಮನೋರಥದಾತ ಜೀವನಂತರ ವ್ಯಾಪ್ತ ಜ್ಞಾನ ವಿಜ್ಞಾನದಾತ | ಸುಜನರಿಗೆ ಪ್ರೀತ 4 ಪೂರ್ಣ ಭೂಮಂಡಲಕೆ ಪೂರ್ಣ ಪ್ರಭು ನೀನೆಂದು ಪೂರ್ಣಬೋಧರು ನುಡಿವರೊ ಪೂರ್ಣ ದೇವತೆಗಳು ಪೂರ್ಣ ನಿನ್ನನು ಭಜಿಸಿ ಪೂರ್ಣ ಪದ ಪಡೆದಿರುವರೊ ಪೂರ್ಣ ಹರಿ ಗೋಪಾಲಕೃಷ್ಣವಿಠ್ಠಲ ಎನ್ನ ಪೂರ್ಣ ಇಚ್ಛೆಯನೆ ಸಲಿಸೊ | ನೀ ಮನದಿ ನೆಲಸೊ5
--------------
ಅಂಬಾಬಾಯಿ
ಪ್ರಾಣರಾಯನೆ ನಿನಗೆಣೆಯುಂಟೆ ಪಾಲಿಪ ಕ ರುಣಾಶಾಲಿಗಳನ್ನು ಪಣೆಗಣ್ಣ ಮೊದಲಾದಮರ ಗಣದೊಳು ಇನ್ನು ನಾ ಕಾಣೆ ಮುನ್ನ ಪ ಗುಣನಿಧಿಯೆ ಎಣಿಯಿಲ್ಲ ನಿನ್ನಯ ಅಣು ಮಹಘನರೂಪ ಕ್ರಿಯಗಳು ಕ್ಷಣಬಿಡದೆ ನೀನಖಿಳಜೀವರ ತ್ರಿ- ಗುಣ ಕಾರ್ಯವ ಗೈವೆ ಮುಖ್ಯ ಅ.ಪ ಕರ್ಮ ಜೀವರೊಳು ನೀನೆಸಗಿ ತೋರ್ಪುದೆ ಧರ್ಮ ನಾನರಿಯೆ ಪ್ರತಿ ಕರ್ಮ ಎನ್ನನುಭವಕೆ ತಂದಿಡುವುದೇ ನಿನ್ನ ಧರ್ಮ ನಾ ಕಾಣೆ ಮರ್ಮ ಜನುಮ ಕೋಟಿಗಳಿಂದಲಿ ಅನುಸರಿಸಿ ಬಂದಿಹ ಎನ್ನ ಕರ್ಮವ ಅನಿಲದೇವ ನಿನ್ನಿಂದ ಅಲ್ಲದೆ ಎನಿತು ಇತರನಿಮಿಷರು ಮಾಳ್ವರು ಜ್ಞಾನದಾಯಕ ನೀನೆ ಎನ್ನಯ ಮನದಲಿಹ ಜಂಜಡವ ಕಳೆದು ಹೀನಕರ್ತನು ತಾನು ಅಲ್ಲದೆ ನೀನೆ ಸರ್ವರ ಕರ್ತನೆಂಬುವ ಜ್ಞಾನಿ ಧ್ಯಾನ ಸ್ಮರಣೆಯನು ಸಾನುರಾಗದಿ ಇತ್ತು ನಿನ್ನ ಮತಾನುಗರಲ್ಲನವರತ ಇಡು ಅನೇಕ ಜನುಮಜನುಮಾಂತರದೊಳು 1 ಶ್ವಾಸನಾಮಕ ನೀನು ಜಗದೀಶ ನೀ ಜೀ- ವೇಶ ಸರ್ವಶಕ್ತಾನು ನೀ ತಾಸಿಗೊಂಭೈನೂರು ಶ್ವಾಸಗಳನ್ನು ಈ ಶರೀರದಿ ಜೀವರಿಂ ದೆಸಗುವೆಯೊ ನೀನು ಉಸುರಲೇನಿನ್ನು ವಾಸುದೇವಗೆ ಪ್ರೀತನಾಗಿ ಅ- ಶೇಷತತ್ತ್ವಕ್ಕೀಶನಾಗಿಹೆ ವಾಸವಾದಿಗಳೆಲ್ಲರೊಳು ಇನ್ನು ಈಸುಭಾಗ್ಯವು ಕಾಣಲಿಲ್ಲ ಏಸುಕಾಲಕು ನೀನೇ ಗತಿಯೆಂದು ಈಶ ಶೇಷ ಖಗೇಶ ಪ್ರಮುಖರು ದಾಸರಾಗಿಹಗರಯ್ಯ ಬಿಡದೆ ದೇಶಕಾಲಗಳಲ್ಲಿ ನಿನ್ನೊಳು ಸೂಸುವಾ ಅತಿಭಕುತಿಯಿಂದಲಿ ಈಶ ತಪದಲಿ ನಿನ್ನ ಮೆಚ್ಚಿಸೆ ಶೇಷಪದವಿಯ ಕೊಟ್ಟು ಶ್ರೀಶ- ನ ಶಯನಸೇವೆ ಸಂಪದವನಿತ್ತೆ 2 ಭಕುತ ಜನರ ಬಂಧೂ ಶ್ರೀಹರಿಗೆ ನೀ ಪ್ರಥ- ಮಾಂಗನಹುದೆಂದೂ ಈ ಸಕಲ ಜಗದಾ ಚೇಷ್ಟಪ್ರದನೆಂತೆಂದೂ ನೀನೆ ಭಗವತ್ಕಾರ್ಯಸಾಧಕನೆಂದೂ ಸಾರುತಿದೆ ಶ್ರುತಿ ಇಂದೂ ಲೋಕಮಾತೆಗೆ ನಮಿಸಿ ದಶಶಿರ ನಂದನನ ಸಂಹರಿಸಿ ಮಹದಾನಂದ ನೀ ವನವ ಭಂಗಿಸಿ ರಘುನಂದನಗೆ ಮುದದಿಂದ ವಂದಿಸಿ ನೊಂದ ದೃ- ಪದನಂದನೇಯಳಾ- ನಂದಪಡಿಸಲು ಕೊಂದೆ ಕೌರವ ವೃಂದವೆಲ್ಲವ ಸವರಿ ನಂದನಂದನಿಗಾನಂದ ಪಡಿಸಿದೆ ಇಂದಿರೇಶ ಶ್ರೀ ವೇಂಕಟೇಶನೆ ಎಂದಿಗೂ ಪರದೈವವೆಂದು ಬಂದು ಬೋಧೆಯನಿತ್ತ ಆ- ನಂದತೀರ್ಥ ನೀ ಸಮರ್ಥಾ3
--------------
ಉರಗಾದ್ರಿವಾಸವಿಠಲದಾಸರು
ಬೋಧಾ ಜ್ಞಾನದಾ ಬೋಧ ಮೋದಾ ಶಾಂತಿಯಾ ಸ್ವಾದಾ ಪ ಸ್ವರೂಪದಾ ಸುಖಸ್ಪದಾ ಪ್ರಶಾಂತ ಗುರುಬೋಧಾ ಬೋಧ ಅ.ಪ. ಸುಲಭಸಾಧ್ಯ ಸುವಿಚಾರಾ ವೇದಾಂತಶಾಸ್ತ್ರದ ಸಾರಾ ತಾನೇ ಪರಮಾತ್ಮನು ಎನುವಾ ಸ್ವಾನುಭವಾಮೃತಜಲಧಾರಾ ಘೋರಾ ಸಂಸ್ಕøತಿಯ ಪಾರಾ 1 ಜೀವಭಾವವ ಮರೆಯಿಸುತಿರುವಾ ಸಾವ ನೀಗುವಾ ಮಂತ್ರವಾ ಸಾರಿ ಪೇಳ್ವ ಶಂಕರಾರ್ಯ ಮೋದಾ ಶಾಂತಿಯಾ ಸ್ವಾದಾ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಭಕುತರ ಸಂರಕ್ಷಣಾ ನಾರಾಯಣ ಪ ಖಗಪನ ಸ್ಕಂದರೋಹ ಅಘದೂರ ಅಭಯಹಸ್ತ ಸ್ವಗತಭೇದಶೂನ್ಯ ಸರ್ವಾವಸ್ಥೆಯೊಳೆನ್ನ ವಿಗತಕ್ಲೇಶನ ಮಾಡಿ ಸತತಕಾಪಾಡಲಿ ನಿಗಮವಿನುತ ಜಗದಾದಿ ವಂದ್ಯನೆ ದೇವಾ 1 ವರುಣಪಾಶಗಳಿಂ ಜಲಚರಜಂತುಗಳಿಂ ಮತ್ಸ್ಯ ಮೂರುತಿ ತಾ ರಕ್ಷಕನಾಗಿರಲಿ ಧಾರುಣಿ ನೆಲದೊಳು ಶ್ರೀ ವಾಮನ ಕಾಯಲಿ ಸರ್ವಾಕಾಶದೊಳು ತ್ರಿವಿಕ್ರಮ ಕಾಯಲಿ2 ದುರ್ಗರಣಾಗ್ರವನ ಅರಿವರ್ಗಗಳಲಿ ನರಹರಿದೇವ ಸಂರಕ್ಷಕನಾಗಿರಲಿ ಮಾರ್ಗಗಳಲ್ಲಿ ಹಿರಣ್ಯಾಕ್ಷ ವೈರಿಯು ಕಾಯಲಿ ದುರ್ಗಮಶೈಲದೊಳು ಶ್ರೀ ಭಾರ್ಗವ ರಕ್ಷಿಸಲಿ 3 ದಾಶರಥಿ ಪ್ರವಾಸದಲಿ ನಿತ್ಯ ದೇಶಾಂತರಗಳಲ್ಲಿದ್ದರು ಕಾಯಲಿ ಈಶ ಶ್ರೀಮನ್ನಾರಾಯಣ ಎನ್ನ ಕ್ರೂರ ಕರ್ಮಗಳಿಂದ ರಕ್ಷಿಸಲನುದಿನ ನರಾವತಾರ ಎನ್ನ ಗರುವಿನಿಂ ರಕ್ಷಿಸಲಿ 4 ವಿರೋಧಿವರ್ಗದಿ ದತ್ತಾತ್ರೇಯ ಕಾಯಲಿ ಸರ್ವಕರ್ಮಬಂಧಜ್ಞಾನದಿಂದ ಕಪಿಲಾ ಮೂರುತಿ ರಕ್ಷಿಸಲಿ ಅನುದಿನದಲಿ ಎನ್ನ ಸನತ್ಕೂ- ಮಾರನು ಎನ್ನ ಕಾಯಲಿ ಕಾಮದಲ್ಲಿ 5 ದಾನವ ಮಧುಕೈಟಭ ಹರೆ ಹಯವದನ ಘನ್ನಪರಾಧದಿ ರಕ್ಷಕನಾಗಿರಲಿ ಮನ್ನಿಸಿ ದೇವತೆಗಳು ಸಾಧನವೀಯಲಿ ಸನ್ನುತಾಂಗ ಧನ್ವಂತ್ರಿಮೂರುತಿ ಹರಿ ಎನ್ನ ರಕ್ಷಕನಾಗಿರಲಿ ರುಜೆಯೊಳು6 ಜ್ಞಾನರೂಪಿ ವೃಷಭ ಸೀತಾತಪದಿಂದ ಎ- ನ್ನನುದಿನ ಈ ದ್ವಂದ್ವÀದಿ ಕಾಯಲಿ ಯಜ್ಞಮೂರುತಿ ಲೋಕಾಪವಾದದಿ ಕಾಯಲಿ ಸುಜ್ಞಬಲರಾಮನು ದುರ್ಜನರ ಭಯದಿಂ ಅನುದಿನ ರಕ್ಷಿಸಲಿ 7 ಘನ್ನಮಹಿಮ ಶೇಷ ಸರ್ಪಬಾಧೆಗಳಿಂದ ಜ್ಞಾನದಾತೃ ಹರಿಸೇವೆಗೆ ಬರುತಿಹ ನಾನಾ ವಿಘ್ನಗಳಿಂದ ರಕ್ಷಿಸುತಿರಲಿ ಘನ್ನ ಮ- ಹಾ ನರಕ ಬಾಧೆಯಿಂ ತಪ್ಪಿಸಲಿ ಕೂರ್ಮಮೂರುತಿ ಕಾಪಾಡಲಿ ನಿತ್ಯದಿ 8 ವೇದವ್ಯಾಸನು ಶುಧ್ಧಜ್ಞಾನವನೀಯಲಿ ಬುದ್ಧಿಮೋಹದಿಂದ ಬುದ್ಧನುದ್ಧÀ್ದರಿಸಲಿ ಹೃದಯದ ಕಲಿಭಾಧೆ ಕಲ್ಕಿ ತಾ ಹರಿಸಲಿ 9 ಉದಯಕಾಲದಿ ಶ್ರೀ ಕೇಶವ ರಕ್ಷಿಸಲಿ ವೇಣು ಹಸ್ತ ಗೋವಿಂದ ಸಂಗಮದಲ್ಲಿ ಪೂರ್ಣಕರುಣೆ ಯಿಂದ ಎನ್ನ ಕಾಪಾಡಲಿ ಪೂರ್ವಾಹ್ನದಲಿ ನಾರಾಯಣ ರಕ್ಷಿಸಲಿ10 ಮಾಧವ ಅಪ ರಾಹ್ನದಲೆನ್ನ ರಕ್ಷಿಸಲಿ ಬಾಧೆಯಿಂ ಸಾಯಂಕಾಲದಿ ರಕ್ಷಿಸಲಿ 11 ಪ್ರದೋಷದಲಿ ಹೃಷೀಕೇಶ ರಕ್ಷಿಸಲೆನ್ನ ಪದುಮನಾಭ ಅರ್ಧರಾತ್ರಿಯಲಿ ಸಲಹಲಿ ಶ್ರೀಧರನೆನ್ನಪರಾತ್ರಿಯಲಿ ಸಲಹಲಿ12 ಜನಾದರ್Àನನು ಎನ್ನನು ಉಷಃಕಾಲದಲಿ ಸಂಧ್ಯಾಕಾಲದಿ ದಾಮೋದರ ರಕ್ಷಿಸಲಿ ಕಾಲನಾಮಕ ಬೆಳಗಿನಝಾವದಿ ಕಾಯಲಿ 13 ನಕ್ರನ ಹರಿಸಿದ ಚಕ್ರಾಯುಧವು ಎನ್ನ ಶತ್ರುಬಾಧೆಗಳಿಂದ ರಕ್ಷಿಸುತಿರಲಿ ವಿಕ್ರಮಗದೆಯು ಆಶ್ರಿತರುಪದ್ರದು- ಅನುದಿನ 14 ಪ್ರಮಥ ಭೂತ ಪಿಶಾಚ ಪ್ರೇತ ಭಯದಿ ಪಾಂಚಜನ್ಯ ಶಂಖರಾಜ ರಕ್ಷಿಸಲಿ ದುಮ್ಮನ ಶತ್ರು ಬಾಧೆಗಳಿಂದ ಖಡ್ಗವು ಖೇಟವು ಸರ್ವ ಅನಿಷ್ಟದಿಂ ರಕ್ಷಿಸಲಿ 15 ಅವನ ನಾಮರೂಪ ದಿವ್ಯಾಯುಧದ ಸ್ಮರಣೆ ಸರ್ವ ಬಂಧಗಳೆಲ್ಲ ತಕ್ಷಣದಲ್ಲಿ ನಿವಾರಣೆಯಾಗಿ ನಿವೃತ್ತಿಮಾರ್ಗಕ್ಕೆ ಶುಧ್ಧಭಾವ ಭಕುತಿಗೆ ಕಾರಣವು ಸತ್ಯ ಗರುಡ ವಿಷ್ಟಕ್ಸೇನ ಕಷ್ಟದಿಂದ ರಕ್ಷಿಸಲಿ 16 ಹರಿಯ ವಾಹನಾದಿಗಳು ವಿಪತ್ತುಗಳ ಹರಿಸಲಿ ಸರ್ವರಂತರ್ಯಾಮಿ ನಿನ್ನ ನಂಬಿರಲು ಸರ್ವಭಾಧೆಗಳಲ್ಲ ಪರಿಹಾರವಾಗಲಿ 17 ಕಾಲ ಸರ್ವಾವಸ್ಥೆಯೊಳೆನ್ನ ಸರ್ವೋತ್ತಮ ದೇವ ಸರ್ವದಾ ರಕ್ಷಿಸಲಿ ಸರ್ವರೊಡೆಯ ಶ್ರೀಮನ್ನಾರಾಯಣ ನಿನ್ನ ಕರುಣ ಕವಚವು ಎನಗಿರಲನುದಿನ 18 ಬಹಿರಾಂತರದಿ ಮೇಲ್ ಕೆಳಗು ಮಧ್ಯದಲ್ಲಿ ದಿಕ್ಕುವಿದಿಕ್ಕಿನೊಳು ಉರಗಾದ್ರಿವಾಸವಿಠಲ ಸ್ವಾಮಿ 19
--------------
ಉರಗಾದ್ರಿವಾಸವಿಠಲದಾಸರು
ಭಾವಿ ಅಜನಂಘ್ರಿಯುಗವ ಭಜಿಸಬಾರದೆ ಪ ಭಜಕ ಮಾನವರ ವೃಜಿನಘನಸಮೀರ ಕುಜನವನಕುಠಾರ ಸುಜನರಿಗೆ ಮಂದಾರನೆಂದು ಭಜಿಸಬಾರದೆಅ.ಪ ಭೂತಳದಿ ಶ್ರೀರಾಮ ದೂತನೆನಿಸಿ ಭಕುತ ವ್ರಾತಕೆ ಸಕಲೇಷ್ಟದಾತನೆಂದು ಪ್ರೀತಿಯಿಂದ 1 ಪುಂಡ ಕೌರವರ ಹಿಂಡುಗೆಲಿದು ರಮೆಯ ಗಂಡನೊಲಿಸಿದ ಮಧ್ಯ ಪಾಂಡವನ ಪದ ಪಂಡರೀಕ 2 ಶ್ರೀನರಸಿಂಹನೆ ಜಗನಿರ್ಮಾಣ ಕಾರಣನೆಂದು ಜ್ಞಾನದಾಯಕ ಮಧ್ವ ಮೌನಿಯೆನಿಸಿದ ಪ್ರಾಣಪತಿಯ 3
--------------
ಕಾರ್ಪರ ನರಹರಿದಾಸರು
ಭಿಕ್ಷುಕನ ನಿಜ ಸುಖವು ಲಕ್ಷಕಗದೆಲ್ಲಿಹುದು | ಮೋಕ್ಷದಾ ಮಾರ್ಗವು ಅವಗಿಲ್ಲವು ಪ ಅಕ್ಷಯ ಧನವುಂಟು | ಕುಕ್ಷಿಯೊಳಗುಂಟು ವಾ ಭಿಕ್ಷಾನ್ನವೂ | ಶಿಕ್ಷೆ ಮಾಡಲು ಉಂಟು | ದೀಕ್ಷೆ ಕೊಡಲೂ ಉಂಟು | ರಕ್ಷಿಸುವದುಂಟು ವಾ ಸದ್ಭಕ್ತರಾ1 ಆನಂದ ಧನಿಯುಂಟು | ಸ್ವಾನಂದ ಸುಖವುಂಟು |ಧ್ಯಾನವೇ ಉಂಟು ಶ್ರೀಸದ್ಗುರುವಿನ | ಮೌನದಾ ಮನೆಯುಂಟು | ಜ್ಞಾನದಾ ಪ್ರಭು ಉಂಟು | ಮನ್ನಣೀಯುಂಟು ಸಾಧು ಸಜ್ಜನರ 2 ತಿತೀಕ್ಷೆ ಸೊಸೆಯುಂಟು | ಭಕ್ತಿಭಾವನು ಉಂಟು | ಕೀರ್ತಿ ಬರಲುಂಟು ಈ ತ್ರೈಲೋಕ್ಯದಿ 3 ಶಮದಮಾ ಸಖರುಂಟು | ಪ್ರೇಮ ದಾಸಿಯು ಉಂಟು | ಹಮ್ಮುಹಂಕಾರವೆಂಬಳಿಯರುಂಟು | ನಾಮದಾ ಬಲವುಂಟು | ನಮನ ಸರ್ವರಿಗುಂಟು | ಚಿನ್ಮಯಾನಂದವೈಕ್ಯದಲುಂಟು 4 ಭಿಕ್ಷೆ ಬೇಡಲುಂಟು 5
--------------
ಭೀಮಾಶಂಕರ
ಲಕ್ಷ್ಮೀಶ ನರಹರಿ ವಿಠ್ಠಲನೆ ಸಲಹೊ ಪ ಪಕ್ಷೀಂದ್ರ ವಾಹನನೆ ಈಕ್ಷಿಸುತ ಕರುಣದಿಂರಕ್ಷಿಸಲಿ ಬೇಕಿವಳ ಲಕ್ಷ್ಮಣಾಗ್ರಜನೇ ಅ.ಪ. ದೀನಜನ ಮಂದಾರ ಜ್ಞಾನದಾಯಕನೆ ಸುರ-ಧೇನು ಭಕ್ತರಿಗೆ ಕಾಮಿತವ ಕೊಡುವಲ್ಲಿ |ನೀನಿವಳಿಗೇ ಮೋಕ್ಷಜ್ಞಾನವನೇ ಪಾಲಿಸುತಸಾನುರಾಗದಿ ಸಲಹೊ ಪ್ರಾಣಾಂತರಾತ್ಮ 1 ಸೃಷ್ಟಿ ಸ್ಥಿತಿ ಸಂಹಾರ ಕರ್ತನೀನೆಂದೆನಿಪೆವೃಷ್ಟಿಕುಲ ಸಂಪನ್ನ ಜಿಷ್ಣು ಸಖ ಹರಿಯೇ |ಕಷ್ಟನಿಷ್ಠೂರಗಳ ಸಹಿಸುವಡೆ ಧೈರ್ಯವನುಕೊಟ್ಟು ಕೈ ಪಿಡಿಯುವುದು ಕೃಷ್ಣ ಮೂರುತಿಯೇ2 ಪತಿಯೆ ಪರದೈವ ವೆಂಬುನ್ನತದ ಮತಿಯಿತ್ತುಹಿತದಿಂದ ಹರಿಗುರು ಸೇವೆಯಲಿ ರತಿಯಸತತ ನಿನ್ನಯ ನಾಮ ಸ್ಮøತಿಯನ್ನೇ ವದಗಿಸುತಕೃತಿಪತಿಯೆ ನೀನಿವಳ ಉದ್ಧರಿಸು ಹರಿಯೇ 3 ತಾರತಮ್ಯ ಜ್ಞಾನ ವೈರಾಗ್ಯ ಭಕುತಿ ಕೊಡುಮೂರೆರಡು ಭೇಧಗಳ ಅರಿವಿತ್ತು ಹರಿಯೇಮಾರಪಿತ ಇವಳ ಹೃದ್ವಾರಿಜದಿ ತವ ರೂಪತೋರುತಲಿ ಸನ್ಮುದವ ಬೀರುವುದು ಹರಿಯೇ 4 ಸರ್ವಾಂತರಾತ್ಮನೆ ಗುರುಡವಾಹನ ದೇವಸರ್ವಜ್ಞ ಸರ್ವೇಶ ಮಮ ಕುಲ ಸ್ವಾಮೀ |ನಿರ್ವಿಘ್ನದಿಂದೆನ್ನ ಪ್ರಾರ್ಥನೆಯ ಪೂರೈಸೊಸರ್ವಸುಂದರ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವೇದದ ಮೂಲ ಆದಿ ಅನುಕೂಲ ಸಾಧು ಜನರ ಸದ್ಛನ ಲೋಲ ಧ್ರುವ ಕೀಲ ಬುಧರಕನುಕೂಲ ಇದೇ ನಿಜ ನೋಡಿರೊ ಸಾಧಿಸಿ ಘನಸುಖಗೂಡಿರೊ 1 ಜ್ಞಾನದಾಸರ ಧ್ಯಾನದಂತರ ಖೂನದಾ ವಿವರ ಅನುಭವಾಧಾರ ಕಣ್ಣಾರ ಎನ್ನ ಮನೋಹರ 2 ಗುಹ್ಯ ಗೌಪ್ಯಸ್ಥ ಮಹಾಪ್ರಶಸ್ತ ಈಹ್ಯ ಸೌಭ್ಯಸ್ಥ ಮಹಿಮರ ತಸ್ತ ಸುವಸ್ತ ಶ್ರೀಗುರು ಸಮರ್ಥ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶಾರದೇಂದು ಸನ್ನಿಭಾನನೇ ಸರಸಿಜಲೋಚನೆ ಪ. ಶಾರದೇ ಸುವಿಶಾರದೇ ದಯೆಬಾರದೇ ನತಕಾಮದೆ ಭೂರಿಹರ್ಷದೆ ಬೀರಿ ನಲ್ಮೆಯಾಪಾರ ಸೌಖ್ಯವ ತೋರು ಕೀರ್ತಿಯ 1 ವಾಣಿ ವೀಣಾಪಾಣಿ ಮಂಜಳವಾಣಿ ಪುಸ್ತಕಧಾರಿಣಿ ವೇಣುನಾದ ವಿನೋದಿನಿ ಸುಜ್ಞಾನದಾಯಿನಿ ಪಾಹಿ ಜನನೀ 2 ಮಾತೆ ಮಂಗಳ ಗೀತೆ ಕವಿಸುಪ್ರೀತೆ ಪದ್ಮಜದಯಿತೆ ಖ್ಯಾತೆ ಶೇಷಗಿರೀಶ ಭಕ್ತಿಪ್ರದಾತೆ ಸದ್ಗುಣಪೂತೆ ಮಹಿತೆ 3
--------------
ನಂಜನಗೂಡು ತಿರುಮಲಾಂಬಾ
ಶ್ರೀ ಗುರುವೇ ಮಹಾಮಹಿಮಾ ಪೂರ್ಣಾತ್ಮಸುಖಧಾಮಾ ಬಾಗಿ ನಮಿಪೆ ಪ್ರಶಾಂತಕಾಮಾ ಬೇಗ ನೀ ಬೋಧಿಸೈ ಅನುಭಾವಪೂರ್ಣ ಜ್ಞಾನದಾ ದಾರಿಯಾ ತೋರು ನೀ ದಯೆದೋರು ಜ್ಞಾನ ನಿಧಿಯೇ ವಂದಿಪೆ ಬೋಧಿಸೈ ಸಂಸಾರ ಘೋರವಾರಿಧಿ ದಾಂಟಿಪಾ ಧೀರ ನೀ ನಿಜರೂಪನಿಷ್ಠ ವಿಭುವೇ ವಂದಿಪೆ ಬೋಧಿಸೈ ಗುರುಸಾರ್ವಭೌಮ ನಿನ್ನ ಈ ಪಾದವಾ ನಂಬಿದೆ
--------------
ಶಂಕರಭಟ್ಟ ಅಗ್ನಿಹೋತ್ರಿ
ಶ್ರೀ ಗ್ರಂಥಮಾಲಿಕ ಮಧ್ವಸ್ತೋತ್ರ ಜಯ ಮಧ್ವ ಮುನಿರಾಯ ನಿನ್ನ ಚಾರು ತೋಯಜಾಂಘ್ರಿಯಲಿ ನಾ ಶರಣು ಅಹ ಮಾಯೇಶನಿಗೆ ಪ್ರಿಯ ಮುಖ್ಯಪ್ರಾಣನೇ ಎನ್ನ ಕರ್ಮ ದೋಷ ಮನ್ನಿಸಿ ಕಾಯೋ ಪ ಭಾವಿ ವಿರಂಚಿ ಮಹೋಜ ಜಯಾ - ದೇವಿ ಸಂಕರ್ಷಣ ತನೂಜ ಸೂತ್ರ ಸಂವಿದ್ ಬಲಾದಿ ಸುಭ್ರಾಜ ಶ್ರಧ್ಧಾ - ದೇವಿ ಹೃದಬ್ಜವಿರಾಜ ಅಹ ಇನಶಶಿ ಋಷಿಕುಲ ತಿಲಕ ಶ್ರೀವರನಂಘ್ರಿ ವನರುಹ ನಿಷ್ಠ ಹನುಮಭೀಮ ಮಧ್ವ 1 ಜಯತು ಶ್ರೀಹರಿ ರಾಮಚಂದ್ರ ಭಕ್ತ ಜಯದ ಮೋದದ ಅರ್ತಿಹಂತ ಕೃಷ್ಣ ಜಯತು ಕಾರುಣ್ಯ ಸಮುದ್ರ ಭಕ್ತ ಜಯದ ಕ್ಷೇಮದ ಜ್ಞಾನ ಸುಖದ ಅಹ ರಾಮವಚನ ಕಾರ್ಯರತ ಹನುಮಗೆ ನಮೋ ನಮೋ ಕುರುಕುಲ ಹರ ಭೀಮ ಕೃಷ್ಣೇಷ್ಟಗೆ 2 ಜಯತು ಶ್ರೀಹರಿ ವೇದವ್ಯಾಸ ಭಕ್ತ ಜಯದ ಹೃತ್ತಿಮಿರ ನಿರಾಸ ಮಾಳ್ಪ ಸೂರ್ಯ ಸ್ವಕಾಂತಿ ಪ್ರಕಾಶ ಮಧ್ವ - ರಾಯಗೆ ನಿಜಗುರು ಶ್ರೀಶ ಅಹ ವೈದಿಕಶಾಸ್ತ್ರದಿಂದಲೇ ವೇದ್ಯ ಶ್ರೀಶನ ಹಿತದಿ ನಮಗೆ ತೋರ್ಪಾನಂದ ಮುನಿಗೆ ನಮೋ 3 ಅಸುರರು ಪುಟ್ಟಿ ಭೂಮಿಯಲಿ ಸಾಧು ಭೂಸುರರೆಂದು ತೋರುತಲಿ ವೇದ ಶಾಸ್ತ್ರಕ್ಕೆ ಅಪಾರ್ಥ ಪೇಳಿ ಮೋಹ ವಶವಾಗೆ ಸುಜನರಲ್ಲಿ ಅಹ ಶ್ರೀಶನಾಜೆÉ್ಞ ಯತಾಳಿ ಮಧ್ವಾಭಿದಾನದಿ ಮೋಸ ದುರ್ಮತ ಧ್ವಾಂತ ಭಾಸ್ಕರನುದಿಸಿದಿ 4 ಮಧ್ಯಗೇಹರ ಮನೆಯಲ್ಲಿ ಮುಖ್ಯ ವಾಯುವೇ ಶಿಶುರೂಪ ತಾಳಿ ಬಲ ಸಂನ್ಯಾಸ ಸುಪ್ರಮೋದದಲಿ ಅಹ ಮಧ್ಯಗೇಹರ ಪುರುಷೋತ್ತಮತೀರ್ಥರ ಭಾಗ್ಯಕ್ಕೆ ಎಣೆವುಂಟೇ ಮೂರ್ಲೋಕದೊಳಗೆ 5 ಪುರುಷೋತ್ತಮಾಚ್ಚ್ಯುತಪ್ರೇಕ್ಷ ತೀರ್ಥ ಗುರುಗಳ ಸೇವಿಸಿ ಮೋಕ್ಷ ಮೋದ ಉರುಗುಣಸಿಂಧು ನಿರ್ದೋಷನಾದ ಶಿರಿವರನು ಕಮಲಾಕ್ಷ ಅಹ ಭಾರಿ ಪ್ರಸಾದವ ದಯದಿ ಬೀರಲ್ಲೇವೆ ದೊರೆಯುವದೆಂದು ಬೋಧಿಸಿದೆಯೋ ಮಧ್ವ 6 ಶ್ರೀಶ ವೇದವ್ಯಾಸನಲ್ಲಿ ಗೀತಾ ಭಾಷ್ಯ ಸಮರ್ಪಿಸಿ ಅಲ್ಯಿಲ್ಲಿ ಉಪ - ದೇಶಕೊಂಡು ಮತ್ತಿಲ್ಲಿ ಬಂದು ವ್ಯಾಸನಭಿಪ್ರಾಯದಲ್ಲಿ ಅಹ ಸರಿಯಾದ ತತ್ವಬೋಧಕ ಗ್ರಂಥಗಳ ಮಾಡಿ ಬೀರಿದ ಅಧಿಕಾರಿಗಳಿಗೆ ನೀ ದಯದಿ ಮೂಲಗ್ರಂಥಗಳು ಮೂವತ್ತು ಏಳು 7 ಳಾಳುಕ ಪ್ರಿಯತಮವಾದ್ದು ಭಕ್ತಿ ಪರ - ಕೈವಲ್ಯ ತೋರುವುದು ಅಹ ಪುನರಪಿ ಬದರಿಗೆ ಪೋಗಿ ಶ್ರೀಶನ ಕಂಡು ಧನ್ಯ ಮನದಿ ಬಂದು ಶಾಸ್ತ್ರ ಬೋಧಿಸಿದಿ 8 ಸೂತ್ರ ಭಾಷ್ಯಗೀತಾ ತಾತ್ಪರ್ಯ ಸೂತ್ರಾಣುಭಾಷ್ಯ ವಿಷ್ಣು ತತ್ವನಿರ್ಣಯಾ ಋಗ್ಭಾಷ್ಯ ತತ್ವೋ - ಭಾಗವತ ತಾತ್ಪರ್ಯ ಅಹ ನಿರ್ಣಯ ಶ್ರೀಮಹಾಭಾರತ ತಾತ್ಪರ್ಯ ಕರ್ಮ ನಿರ್ಣಯ 9 ಸನ್ನ್ಯಾಯ ವಿವರಣ ತಂತ್ರಸಾರ ಅನುವ್ಯಾಖ್ಯಾನವು ಸದಾಚಾರ ಸ್ಮøತಿ ಅನುತ್ತಮ ದ್ವಾದಶಸ್ತೋತ್ರ ಯತಿ ಪ್ರಣವ ಕಲ್ಪದಿ ಪ್ರಣವಸಾರ ಅಹ ಉಪನಿಷದ್ಭ್ಬಾಷ್ಯವು ಹತ್ತು ಉತ್ಕøಷ್ಟವು ಷಟ್ಟ್ರಶ್ನಕಾಠಕ ಬೃºದಾರಣ್ಯಾಖ್ಯ 10 ಮನನ ಮಾಡಲು ಐತರೇಯ ಪುನಃ ಶ್ರವಣ ಮಾಡಲು ತೈತಿರೀಯ ಸಂ - ಚಿಂತಿಸಲು ಈಶಾವಾಸ್ಯ ಬಹು ಘನವಿದ್ಯಾಯುತವು ಛಾಂದೋಗ್ಯ ಅಹ ಅರ್ಥವಣಮಾಂಡೂಕ್ಯ ತಲವ ಕಾರೋಕ್ತವು ಸತತ ಸಂಸ್ಮರಣೀಯ ಜ್ಞಾನದಾಯಕವು11 ಕೃಷ್ಣಾಮೃತ ಮಹಾರ್ಣದಿ ಬಾಲ ಕೃಷ್ಣ ಜಯಂತಿ ನಿರ್ಣಯದಿ ಭಕ್ತಿ ಜ್ಞಾನ ಸಾಧನವ ಬೋಧಿಸಿ ನರ - ಸಿಂಹನ ನಖಸ್ತುತಿ ಮುದದಿ ಅಹ ಪಠಿಸೆ ಭದ್ರದ ಕಥಾಲಕ್ಷಣದಲಿ ವಾದ ಮಾಡುವ ಬಗೆ ತೋರ್ದಿಯೈನೃಹರಿಯ ನಮಿಸಿ 12 ಅವಿದ್ಯಾ ಆವೃತವು ಬ್ರಹ್ಮ ಅದ್ಯಸ್ಥ ಜಗತೆಂಬ ಮತವ ತರಿದು ಮಾಯಾವಾದ ಖಂಡನವ ಮಾಡಿ ನ್ಯಾಯ ಪ್ರಮಾಣ ಲಕ್ಷಣವ ಅಹ ನುಡಿದು ಪ್ರಪಂಚ ಮಿಥ್ಯಾತ್ವಾನುಮಾನ ಖಂ - ಡನವ ಉಪಾಧಿಖಂಡನ ಸಹಗೈದಿ 13 ಪಂಚಭೇದ ಸತ್ಯ ಹರಿಯೇ ಸರ್ವೋತ್ತಮ ಸುಹೃದ ಶಿರಿ ವರನೇ ಸ್ವತಂತ್ರ ಪ್ರಮೋದ ಸ್ವಾಮಿ ಸೃಷ್ಟಾ ಪಾತಾ ಅತ್ತಾತ್ರಾಹ ಅಹ ತತ್ವ ವಿವೇಕವು ತತ್ವ ಸಂಖ್ಯಾನವು ನಿತ್ಯ ಸುಪಠನೀಯ ಹರಿ ಸರ್ವೋತ್ಕøಷ್ಟ 14 ನೀನಿಂತು ನುಡಿಸಿದೀ ನುಡಿಯು ನಿನ್ನ ಸನ್ನಿಧಾನದಿ ಸಮರ್ಪಣೆಯು ನಾನು ಏನೂ ಓದದ ಮಂದಮತಿಯು ನೀನು ಪೂರ್ಣಪ್ರಜ್ಞನು ಜೀವೋತ್ತಮನು ಅಹ ಎನ್ನ ಕೊರತೆಗಳ ನೀಗಿಸಿ ಹೃಸ್ಥಶ್ರೀ 'ಪ್ರಸನ್ನ ಶ್ರೀನಿವಾಸ' ನ್ನೊ ಲಿಸೋ ಎನಗೆ ಜೀಯ 15
--------------
ಪ್ರಸನ್ನ ಶ್ರೀನಿವಾಸದಾಸರು