ಒಟ್ಟು 165 ಕಡೆಗಳಲ್ಲಿ , 35 ದಾಸರು , 158 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂತು ವರ್ಣಿಪೆ ನಮ್ಮಮ್ಮಾ | ಯಂತ್ರೋದ್ಧಾರಕÀನಾಗಿ ಮೆರೆವನಾ ಪ ಕೋತಿ ರೂಪದಲಿ ಬಂದು | ಭೂತಳಕೆ ಬೆಡಗು ತೋರಿ || ಈ ತುಂಗಭದ್ರೆಯಲ್ಲಿ | ಖ್ಯಾತಿಯಾಗಿಪ್ಪ ಯತಿಯಾ1 ಸುತ್ತಲು ವಾನರ ಬದ್ಧ | ಮತ್ತೆ ವಲಯಾಕಾರ ಮಧ್ಯ || ಚಿತ್ರಕೋಣ ಅದರೊಳು | ನಿತ್ಯದಲಿಯಿಪ್ಪ ಯತಿಯಾ 2 ವ್ಯಾಸ ಮುನಿರಾಯರಿಂದ | ಈ ಶಿಲೆಯೊಳಗೆ ನಿಂದು || ಶ್ರೀಶ ವಿಜಯವಿಠ್ಠಲನ್ನ | ಏಸು ಬಗೆ ತುತಿಪನ್ನ 3
--------------
ವಿಜಯದಾಸ
ಎಂದು ಕಾಂಬೆನೊ ರಾಘವೇಂದ್ರ ಗುರುಗಳನಾ | ಕಾಯ ಆನಂದ ನಿಧಿಯ ಪ ತಾಯಿಯಂದದಿ ನಮ್ಮ ಕಾಯುವ ಧಣಿಯಾ ನ್ಯಾಯ ಸದ್ಗುಣ ಪೂರ್ಣ ಮಾಯಿ ಜಗ ಹರಿಯಾ 1 ಮಾಯಾ ರಮಣನ ನಾಮ ಗಾಯನ ಪರನ ದಾಯಾದಿ ಕುಲವೈರಿ ಶ್ರೇಯ ಬಲಯುತನಾ2 ನರರೂಪ ಧರಿಸಿ ವಾನರÀ ಭಕ್ತವರನಾ ನರಶೌರಿ ಪ್ರೀಯ ದೀನರ ಕಾಯುತಿಹರಾ 3 ಜನರನ ಪೊರೆವನೆಂದೆನುತ ಭೂಮಿಯಲಿ ಜನಿಸಿದ ತನ್ನವನ್ನ ವನುತಿ ಸಹಿತದಲಿ 4 ದುರಿತ ವರೆಕೆ ತಾಮುರುತನಾಗಿಪ್ಪ ಗುರುವೆಂಬ ಸಿರಿಗೆ ಇವ ನಿರಂತರದಿ ಸುರಪಾ 5 ಭಕ್ತರ ಬಯಕೆ ಪೂರೈಪಾ ಸುರತರುವೇ ಶಕ್ತ ವಿರಕ್ತ ಹರಿಭಕ್ತ ಮದ್ಗುರುವೆ 6 ಭುವನದಿಂ ದಾಟಿಸೆ ನೌಕವಾಗಿಹಿನಾ ನವ ಭಕುತಿಯನೀವ ಕುವಿಕುಲ ವರನಾ 7 ಇವನೇ ಗತಿಯೆನೆ ಜ್ಞಾನ ತವಕದಿ ಕೊಡುವಾ 8 ನಿಂದಿಪ ಜನರಲ್ಲಿ ಪೊಂದಿಪ ಪ್ರೇಮ ವಂದಿಪ ಜನರಿಗೆ ಸತತ ಶ್ರೀ ರಾಮ 9 ಶ್ರೀನಿವಾಸ ಪುತ್ರ ಪರಮ ಪವಿತ್ರಾ ಜ್ಞಾನಿ ಜನರ ಮಿತ್ರ ವಿಹಿತ ಚರಿತ್ರಾ 10 ನಷ್ಟ ತುಷ್ಟಿಗೆ ಅಂಜಾ ದುಷ್ಟ ಶೇರಾ ಕಷ್ಟ ಕಳೆಯುವ ನಮ್ಮ ಕೃಷ್ಣ ಪಾರಿಜಾತ 11 ಪೊಳಲುರಿ ಸಖನಾ ಘನಪೊಳಿಯುವ ಪಾದಯುಗವಾ ಘಳಿಗಿ ಬಿಡದಲೆ ನೋಡುತ ನಲಿಯುತಿರುವಾ 12 ಅರಿದು ಈತನೇಯನ್ನ ಗುರುವೆಂಬಗೆ ರುದ್ರಾ ಧುರದೊಳು ಭೀಮ ಗುರುವಿಗತಾ ದಾರಿದ್ರ್ಯಾ 13 ಅನಿಮಿತ್ತ ಬಂಧು ಬ್ರಾಹ್ಮಣ ವಂಶಜಾ ಭವ ತ್ರಾತಾ 14 ತಪ್ಪು ನೋಡದಲೆ ಕಾಯುತಿಪ್ಪ ನಮ್ಮಪ್ಪ ಸರ್ಪ ತಲ್ಪನ ಧ್ಯಾನದಿಪ್ಪ ನಿಪ್ಪ 15 ಅರುಣಾಭಿ ಚರಣ ತಲೆಬೆರಳು ಪಂಕ್ತಿಗಳಾ ಸರಸಿಜ ಪೋಲ್ವ ಮೃದುತರ ಪಾದಯುಗಳಾ 16 ವಲಿದ ಭಕ್ತರಿಗಿಷ್ಟ ಸಲಿಸುವ ಪಾದ17 ಸಕಲ ರೋಗವ ಕಳೆವ ಅಕಳಂಕ ಪಾದ ಪಾದ 18 ಹರಿಯಂತೆ ಹರನೊಲ್ ಸಾಸಿರ ನಯನನಂತೆ ಶಿರಿಯಂತೆ ತೋರ್ಪ ಭಾಸ್ಕರ ನರನಂತೆ 19 ಸುಳಿರೋಮಗಳುಳ್ಳ ಚಲುವ ಜಾನುಗಳಾ ಎಳೆಬಾಳೆ ತೆರ ಊರು ಹೊಳೆವ ಸುಚೈಲ 20 ತಟಿತ ಸನ್ನಿಭವಾದ ಕಟಿಗಿಪ್ಪ ಸೂತ್ರ ನಟ ಶೇವಸಿವಲಿ ತಾನು ಪುಟಿಯು ಉದರಾ 21 ಎದೆಯಲಿಪ್ಪುದÀು ನಮ್ಮ ಪರಮೇಶನ ಮನೆಯೊ ವದಗಿ ಭಕ್ತರಿಗೆ ಕರುಣದಿ ಕಾಯ್ವ ಖಣಿಯೂ 22 ಹುತವಾಹನನಂತೆ ಭಾರತೀಕಾಂತನಂತೆ ಚತುರಾಶ್ಯ ಈ ಕ್ಷಿತಿಯಂತೆ ಇಹನಂತೆ23 ಹಸುವಿನಂದದಲಿ ಪಾಗಸನೊಳಿಹನ ವಸುಧಿಯೊಳಿಂತಿದೊಮ್ಮೆ ಪಸುಯನಿಸಿದನಾ 24 ಭೂಧರತನಂತೆ ವಸುಧರನಂತೆ ಭೂಧರನಂತೆ ಸೋದರನಂತೆ 25 ಚರ್ಚಿತ ಸುಂದರ ರೂಪ ಕಂಬು ಲೋಕ ಕಂಧರಾಯುತನ 26 ಕರೆದು ಭಕ್ತರಿಗಿಷ್ಟಗರಿಯುವ ಚೆಲ್ವಾ ವರ ರೇಖೆಯುತ ಶಿರಕರದಾ ವೈಭವನಾ 27 ಮಂಗಳದಾಯಕ ಅಂಗೈಯಿಯುಗಳಾ ಭಂಗಾರ ದುಂಗಾರ ಇಟ್ಟಿಪ ಬೆರಳು 28 ಕೆಂದುಟಿ ಮೊದನಾಗಿ ಇಂದಿಪ್ಪ ವದನಾ ಪೊಂದಿದ ದಂತಗಳಿಂದ ಸ್ವಾರಚನಾ29 ಹಸನಾದ ದೊಕರದಂತೆಸೆವ ಗಲ್ಲಗಳಾ ಬಿಸಜದಂತೆ ರಾಜಿಸುವ ನೇತ್ರಗಳಾ 30 ನಾಸಿಕದಲಿಪ್ಪ ಮೀಸಿ ದ್ವಂದ್ವಗಳಾ ದೇಶಾದಿ ಪಾಲ್ಮೂರು ವಾಸಿ ಕರ್ಣಗಳಾ 31 ಗಿಳಿಗೆ ವಾಚ್ಯಾಪದೊಳ ಹೊಳೆವಾ ಪುಚ್ಛಗಳಾ ತಿಲಕಾ ಮುದ್ರೆ ಪುಂಡ್ರಗಳುವುಳ್ಳ ಫಾಲಾ 32 ಹರಿಪಾದ ಜಲವನ್ನು ಧರಿಸಿದ ಶಿರವಾ ಶಿರಿಗೋವಿಂದ ವಿಠಲನ್ನಡಿಗೆಯರಗುವಾ ಶಿರವಾ33
--------------
ಅಸ್ಕಿಹಾಳ ಗೋವಿಂದ
ಎಂದು ನೋಡುವೆ ಎನ್ನ ಗುರುವಿನಾ | ನಿಂದು ನಂದಿಗಮನನಾ ಎಂದೆಂದಿಗೆ ಪೊಂದಿದವರಿಗಾ | ಇಂದು ಮೌಳಿಯ ಪ ತ್ರಿಗುಣ ರೂಪನ ತ್ರಿಭುವನೇಶನ | ಜಗತಿಧರ ವಿಭೂಷನ || ನಗವತಿ ಸುತಿಪತಿಯ ರುದ್ರನ 1 ತಪೋಧನೇಶನ ತಪ ಪ್ರತಾಪನ | ತಪನ ಶಶಿ ಅಗ್ನಿನೇತ್ರನ | ಕುಪಿತ ರಹಿತ ಕುಜನ ಮಥನನ | ಅಪರಮಿತ ಗುಣ ವನದಿ ಶಿವನ 2 ವಿಮಲಗಾತ್ರನ ವಿಶ್ವಪಾಲನ | ರಮೆಯರಸ ಪದಿಧಾರನ || ಸುಜನ ರನ್ನನ | ನಮಿಸುವರ ಮನೋವಾಸ ಈಶನ 3 ಅಂಧಹರಣನ ಅರ್ಧವೇಷನ | ಮಂದಮತಿ ವಿದುರನ | ಬಂಧು ಬಳಗನ ಬಹು ಉದ್ದಂಡನ | ಅಂಧ ಏಕೇಶವರ್ನ ವದನನ 4 ತತುವನಾಥನ ತುಂಗ ವರದನ | ಸತತ ವೈರಾಗ್ಯ ಭಾಗ್ಯನ || ಪತಿತ ಪಾವನ ವಿಜಯ ವಿಠ್ಠಲನ್ನ | ಪತಿ ವಿಶ್ವೇಶನ 5
--------------
ವಿಜಯದಾಸ
ಎಂದೆಂದಿಗೂ ಎರಡು ಒಂದಾಗವು | ಒಂದೆ ಕುಲದಲಿ ಜನಿಸಿದ ಪಕ್ಷಿಗಳು ಪ ಒಂದೇ ರೂಪಪಕ್ಷಿ ಒಂದರಲಿ ತಿರಗೋವು | ಒಂದೀಗ ಪಂಚವರ್ಣದ ಕೋವಿದಾ || ಒಂದೆಲ್ಲ ಸಮನೆಂದು ಪೇಳುತ ಬದುಕುವುದು | ಒಂದಕ್ಕೆ ಗುರುತು ಮತ್ತೊಂದಕ್ಕೆ ಯಿಲ್ಲ 1 ಒಂದೇ ಕೊಂಬಿನಲಿ ಎರಡು ಸೇರಿಕೊಂಡು | ಒಂದು ಸಾರವನುಂಬದೊಂದರಿಯದು || ಒಂದು ಬುದ್ಧಿಯಲ್ಲಿಪ್ಪದೊಂದು ಇರಲೊಲ್ಲದು | ಒಂದು ನಾನೆಂಬೋದು ಮತ್ತೊಂದು ಪೇಳದು 2 ಒಂದೀಗ ತನ್ನ ಫಲ ಪರರಿಗೆ ಕೊಡುವದು | ಒಂದು ತನ್ನ ಫಲ ತಾ ತಿಂಬೋದು || ಒಂದು ಏರು ಇಳಿವ ಮೆಟ್ಟಗಳು ಬಲ್ಲದು | ಒಂದೀಗ ಕಾಣದೆ ಕಮರಿ ಬೀಳುವದು 3 ಒಂದು ಸುಡಗಾಡು ಸಿದ್ಧ ಎಂದು ಕೂಗುವದು | ಒಂದು ಕೂಗುವದು ಪ್ರಸಿದ್ಧನೆಂದು || ಒಂದು ಬೆಳೆದಿಂಗಳೊಳು ಹರುಷದಲಿ ಆಡುವದು | ಒಂದು ಕತ್ತಲೆಯೊಳು ಆಡುವುದು ನಿತ್ಯಾ 4 ಒಂದಕೆ ಒಂದು ಸಂವಾದವನು ಮಾಡುವವು | ಹಾರುವುದು | ಪುರಂದರ ವಿಜಯವಿಠ್ಠಲನ್ನ | ಒಂದು ಪೊಂದಿತು | ಒಂದು ಪೊಂದದಲೆ ಹೋಯಿತು 5
--------------
ವಿಜಯದಾಸ
ಎದ್ದು ಬರುತಾರೆ ನೋಡೆ ತಾ - ವೆದ್ದು ಬರುತಾರೆ ನೋಡೆ ಪ ಮುದ್ದು ಬೃಂದಾವನ ಮಧ್ಯದೊಳಗಿದ್ದು ತಿದ್ದಿ ಹಚ್ಚಿದ ನಾಮ - ಮುದ್ರೆಗಳೊಪ್ಪುತೀಗ ಅ.ಪ ಗಳದೊಳು ಶ್ರೀ ತುಳಸಿ ನಳಿನಾಕ್ಷಿ ಮಾಲೆಯು ಚಲುವ ಮುಖದೊಳು ಪೊಳೆವೊ ದಂತಗಳಿಂದ 1 ಹೃದಯ ಸದನದಲ್ಲಿ ಪದುಮನಾಭನ ಭಜಿಸಿ ನಿತ್ಯ ಸದಮಲ ರೂಪತಾಳಿ 2 ದಾತ ಗುರು ಜಗನ್ನಾಥವಿಠಲನ್ನ ಪ್ರೀತಿಯ ಬಡಿಸುತ ದೂತರ ಪೊರೆಯುತ 3
--------------
ಗುರುಜಗನ್ನಾಥದಾಸರು
ಎಷ್ಟು ಪುಣ್ಯ ಮಾಡಿ ಇಲ್ಲಿ ಇಟ್ಟಿಗೆ ನೆಲಸಿತೋ ವಿಠ್ಠಲನ್ನ ಚರಣ ಶಿರದಿ ಮೆಟ್ಟಿಸಿ ಕೊಂಡಿತೋ ಪ. ಭಕ್ತನಾದ ಪುಂಡಲೀಕನ ಕರಕೆ ಸೋಕಿತೋ ಚಿತ್ತಧೃಡನು ಎಸೆಯೆ ರಂಗನ ಪಾದಕೆರಗಿತೋ 1 ಹರಿಯೆ ಎನ್ನ ಶಿರವ ಮೆಟ್ಟೆಂದ್ಹರಿಕೆ ಮಾಡಿತೋ ಪರಮ ಪುರುಷ ಬಂದು ನಿಲ್ಲೆ ಖ್ಯಾತಿ ಪೊಂದಿತೋ 2 ಪಾದ ಶಿರದಿ ಪೊತ್ತಿತೋ ಪಾದ ಇಲ್ಲಿ ಅಡಿಗಿಸಿಕೊಂಡಿತೋ 3 ಪಾದ ಸೋಕಿಸಿಕೊಂಡಿತೋ ಪಾದ ನನ್ನದೆಂದಿತೋ 4 ಯಮುನ ದಡದಿ ಸುಳಿದ ಪಾದಯತ್ನದಿ ಪೊಂದಿತೋ ಪಾದ ರಜವ ಧರಿಸಿತೋ 5 ಬಂಧ ಬಿಡಿಸುವಂಥ ಪದದಿ ಬಂಧಿಸಿಕೊಂಡಿತೋ ಪಾದ ಸೂಕ್ಷ್ಮದಿ ಪೊತ್ತಿತೋ 6 ಪಾದ ಘಳಿಗೆ ಬಿಡದಾಯ್ತೋ ಜಗದಲಿಟ್ಟಿಗೆ ನಿಲಯನೆಂಬೊ ಲಾಭ ಹೊಂದಿತೋ 7 ನಂದ ಕಂದ ಬಂದನೆಂದು ನಲಿದು ನಿಂತಿತೋ ಇಂದಿರೇಶ ಪೋಗದಿರೆಂದು ಇಲ್ಲೆ ಹಿಡಿದಿತೋ 8 ಪಾಪ ಕಳೆದು ಪಾವನ್ನದಲಿ ಮುಕ್ತಿ ಪೊಂದಿತೋ ಗೋಪಾಲಕೃಷ್ಣವಿಠ್ಠಲನ ಚರಣ ಸೇರಿತೋ9
--------------
ಅಂಬಾಬಾಯಿ
ಎಷ್ಟು ಪುಣ್ಯ ಮಾಡೀ ಕಂಬ ವಿಠ್ಠಲನ್ನ ಗುಡಿ ಸೇರಿತೋ ಪ. ಪುರಂದರ ದಾಸರನ್ನು ಕಟ್ಟಿಸಿಕೊಂಡು ತಾ ಪೂಜೆಗೊಂಡಿತೊ ಅ. ಎಲ್ಲಾ ಕಂಬಗಳಿದ್ದರೂ ಇಂತು ಇಲ್ಲೀ ಇದಕೆ ಈ ಖ್ಯಾತಿಯು ಬಂತು ಸುಜನ ವಂದಿಪರಿ ಪುಲ್ಲನಾಭನ್ನ ಕೃಪೆಯ ಪಡೆದಿತು 1 ಮಾಯಾಕಾರನು ನೀರನು ತಂದು ಈಯಲು ಪುರಂದರದಾಸರಿಗಂದು ನೋಯಿಸೆ ತಿಳಿಯದೆ ಮನಕದ ತಂದು ನ್ಯಾಯದಿ ಕಟ್ಟಿಸಿ ಹೊಡೆಸಿದನಂದು 2 ದಾಸರಂತೆ ತಾನು ವೇಷವ ಧರಿಸಿ ವೇಶ್ಯೆಗೆ ತನ್ನ ಕಂಕಣವನ್ನೆ ಕೊಡಿಸಿ ತಾಸೊತ್ತಿನಾ ರಾತ್ರೆ ಹೊಡೆದದ್ದ ನೆನಸಿ ವಾಸುದೇವ ಬೈಲಿಗೆಳೆಸಿದ ಬಿಗಿಸಿ 3 ಜ್ಞಾನ ಪುಟ್ಟಲು ಹರಿಮಾಯವಿದೆಂದು ಶ್ರೀನಿವಾಸ ತಾ ವಲಿದನು ಅಂದು ಆನಂದದಿಂದೊಂದು ಕವನ ಗೈದು ಶ್ರೀನಿಧೆ ಮುಟ್ಟಿತು ಮುಯ್ಯವಿದೆಂದು4 ದಾಸರ ಅಂಗವು ಸೋಕಿದ್ದರಿಂದ ಶ್ರೀಶನು ಹಗ್ಗದಿ ಬಿಗಿಸಿದ್ದರಿಂದ ದಾಸರ ಪೆಸರಲಿ ಮೆರೆವುದರಿಂದ ಭವ ಬಂಧ5 ಹಿಂದೆ ಕಂಬದಿ ನರಹರಿ ಅವತರಿಸೆ ಅಂದಿನ ಕಂಬವೆ ಈಗಿಲ್ಲ್ಲಿ ಉದಿಸೆ ಸಿಂಧುಶಯನನ್ನ ದಾಸತ್ವ ವಹಿಸೆ ಬಂದಿತು ವಿಠಲನ್ನ ಗುಡಿಯನಾಶ್ರೈಸೆ6 ಕರ್ಮ ಕಳೆವುದು ದಾಸರ ವಾಕ್ಶ್ರವಣ ಜ್ಞಾನವೀಯುವುದು ದಾಸರ ಉಪದೇಶ ಹರಿಯ ತೋರುವುದು ದಾಸರ ಸ್ಪರ್ಶವು ಮುಕ್ತಿಗೊಯ್ಯವುದು7 ಕಂಭವೆ ಸಾಕ್ಷಿಯು ಈ ಕಲಿಯುಗದಿ ಡಾಂಭಿಕ ಜನರಿಗೆ ತಿಳಿಯದು ಹಾದಿ ಬೆಂಬಿಡದೆ ಹರಿ ಕಾಯುವ ಭರದಿ ಇಂಬುಗೊಟ್ಟು ತನ್ನ ನಿಜ ದಿವ್ಯ ಪುರದಿ 8 ದಾಸರ ಮಾರ್ಗವೆ ಸುಲಭವೆಂತೆಂದು ದಾಸರ ಕೃಪೆ ದ್ವಾರ ವಲಿಯುವೆನೆಂದು ದಾಸರ ದೂಷಿಸೆ ಗತಿ ಇಲ್ಲೆಂದು ಶ್ರೀಶ ತಾನಿಲ್ಲೀ ನಿಂತನು ಬಂದು 9 ಶ್ರೀ ರಮಾಪತಿ ಓಡಿ ಬಂದ ನಿಲ್ಲೆಂದೂ ದ್ವಾರಕ ಪುರದೊಂದು ಕಂಭವೆ ಬಂದು ಸೇರಿತೊ ವಿಠಲನ ಮಂದಿರವಂದು ಸೂರೆಗೈದರೊ ಖ್ಯಾತಿ ದಾಸರು ಬಂದು 10 ನಿಜದಾಸರಂಗಸಂಗದ ಫಲದಿ ರಜತದ ಕಟ್ಟಿನಿಂ ಮೆರೆದಿತು ಜಗದಿ ಸುಜನರ ಸಂಗದಿ ಮುಕುತಿಯ ಹಾದಿ ಭುಜಗಶಯನ ತೋರುವ ನಿರ್ಮಲದಿ 11 ತತ್ವವನಿದರಿಂದ ತಿಳಿವುದು ಒಂದು ಉತ್ತಮತ್ವ್ವವು ಜಡಕಾಯಿತು ಬಂದು ಪಾದ ಸೋಂಕಲು ಅಂದು ವ್ಯರ್ಥವಾಗದು ಹರಿಭಕ್ತರೆ ಬಂಧು12 ಪಾಪ ನಿರ್ಲೇಪವಾಗೋದು ವಿಠ್ಠಲನ್ನ ಆಪಾದ ಮೌಳಿಯ ರೂಪ ದರುಶನ್ನ ಪರಿ ಖ್ಯಾತಿ ಪೊಂದಿತು ಕಂಬ ಘನ್ನ ಗೋಪಾಲಕೃಷ್ಣವಿಠ್ಠಲ ಸುಪ್ರಸನ್ನ 13
--------------
ಅಂಬಾಬಾಯಿ
ಏತಕೀ ಭಯ ನೀತಿಯೇನಯ್ಯ ಪ ಮಾತುಕೇಳು ತಾಮನದಲ್ಲಿನೊಂದು ಅ.ಪ ತಬ್ಬಿಕೊಂಡಿರ್ಪ ಪ್ರಾರಬ್ದ ಬಿಡುವುದೆ ಅಬ್ಜನಾಭನಿರುವ ನಮ್ಮರಕ್ಷಿಸಲು 1 ಬೊಬ್ಬೆರೋಗ ಬಂತೆಂದಬ್ಬರ ಜನಗೈಯ್ಯೆ ಉಬ್ಬಿಉಬ್ಬಿನೀ ಊರಬಿಟ್ಟೋಡಲು 2 ಹುಲಿಗಳಂಥನರರು ಇಲಿಯ ನೋಡಿ ಬೆದರಿ ಕಳೆದುಕೊಂಬರು ತಮ್ಮ ಸರ್ವಸ್ವವ 3 ಛಳಿ ಮಳೆಯು ಬಿಸಿಲು ಗಾಳಿಯೊಳು ಬಳಲುವುದ್ಯಾಕೆ ಬುದ್ಧಿಯಿಲ್ಲದೆ 4 ಕುನ್ನಿ ನಿನ್ನಂಥವರೆಷ್ಟುಮಂದಿ ಪೋದರು ಘನ್ನಗುರುರಾಮವಿಠಲನ್ನ ನಂಬು5
--------------
ಗುರುರಾಮವಿಠಲ
ಏನು ಕಾರಣ ಮತಿಯಿಲ್ಲ ಮನವೆ ಪ ಹೀನಾಯವಾಡದಿರು ಪರರ ಗುಣಗಳ ಎಣಿಸಿ ಅ.ಪ ಅವನ ಗೊಡವೆಯೇಕೆ ಅವನಾರು ನೀನಾರು | ಅವನ ಪಾಪಕ್ಕೆ ನೀ ಭಾಗಾದಿಯೆ | ಅವನುತ್ತಮನಾದಡವನೆ ಬದುಕಿದ ಕಾಣೊ ಅವ ಪುಣ್ಯಮಾಡಿದರೆ ಅವನ ಕುಲ ಉದ್ಧಾರ 1 ನಿನಗೆ ಕೊಡುವುದರೊಳಗೆ ಬೇಡ ಬಂದವನಲ್ಲ | ನಿನಗೆ ಅವನಿಗೆ ಏನು ಸಂಬಂಧವೊ | ಮನೆ ಒಡವೆ ವಸ್ತುಗಳ ಹಂಚಿಕೊಂಬುವುದಲ್ಲ | ಕ್ಷಣ ಕ್ಷಣಕೆ ಕ್ಲೇಶವನು ಮಾಡಿಕೊಂಬುದು ಸಲ್ಲ 2 ನಿನ್ನ ಗತಿ ಮಾರ್ಗಕ್ಕೆ ಅವನಡ್ಡ ಬಾಹನೆ | ನಿನ್ನಿಂದ ಪರಲೋಕ ಅವನಿಗುಂಟೆ | ನಿನ್ನೊಳಗೆ ನೀ ತಿಳಿದು ವಿಜಯವಿಠ್ಠಲನ್ನ | ಸನ್ನುತಿಸಿ ಭವರೋಗ ಬನ್ನವನು ಕಳೆಯೊ 3
--------------
ವಿಜಯದಾಸ
ಏನು ಕಾರಣ ಹರಿಯೆ ಅನುಮಾನಿಸಿದಿ ದೊರೆಯೆ ಘನವಲ್ಲ ನಿನಗಿದು ತೆರೆದ ಬೀಗ ಜೋಡಿಸುವುದು ಪ ವದನದಿಂದಲಿ ನಿನ್ನ ಮಹಿಮೆ ಪೊಗಳಲರಿಯದೆ ಸದನದಿ ಅನ್ಯರ ಪಾಡುತ್ತಿದ್ದೆನೇನೋ 1 ಪಾಡದಿದ್ದರೆ ನಾನೊಬ್ಬ ನೋಡಿ ಬಂದದ್ದೇನೊ ನಿನಗೆ ಬೇಡಿಕೊಂಬೆನೊ ಬಾಯ ಬೀಗ ತÉಗೆಸೊ ಹರಿಯೆ 2 ವೇದ ಪೊಗಳಲರಿಯದ ವಿಜಯ ರಾಮಚಂದ್ರವಿಠಲನ್ನ ಮೋದಮಯ ದೇವ 3
--------------
ವಿಜಯ ರಾಮಚಂದ್ರವಿಠಲ
ಒಂದಾನೊಂದು ದಿವಸದಲ್ಲಿ ಗುರುವ್ಯಾಸರಾಯರು | ಪ ಅಂದದಿಂದ ಪುರಂದರದಾಸರಿ | ಗಿಂದು ಭೋಜನಕ್ಕೆ ಬನ್ನಿರೆಂದು ಕರೆದರೂ ಅ.ಪ ಪೇಳಿತೆಂದು ದಾಸರು ಪೋಗಿ ತಾವು ನಿರ್ಮಲ ಸ್ನಾನ ಜಪಮಂತ್ರ ಹರಿಪೂಜೆಯನೆ ಮಾಡಿ || ಧಳಥಳಿಸುವ ವಿಠಲನ ದಿವ್ಯ ಪಾದ ಗಳ ಧ್ಯಾನಿಸಿ ಕುಳಿತರು ಜನಗಳೆಲ್ಲ ಕೇಳಿ 1 ವಿಠಲನ ದಿವ್ಯ ಮೂರ್ತಿಯ ಪಾಡಿ ದೃಷ್ಟಿಯಿಂದಲಿ ನೋಡಿ | ಮುಟ್ಟಿ ಮುಂದೊಲಿದು ಕುಣಿಕುಣಿದಾಡಿ || ಥಟ್ಟನೆ ವೇದಕ್ಕೆ ಸಮನಾದ ಪದಗಳು | ನಿಷ್ಠೆಯಿಂದ್ಹೇಳಿ ಅಭೀಷ್ಟವ ಪಡೆದರು2 ಎಡೆಯೊಳು ಷಡ್ರಸದನ್ನವ ನೀಡೆ | ಕಡು ಮಮತೆಗಳಿಂದ | ಬಿಡದೆ ದಾಸರ ದಾರಿಯ ನೋಡಿ || ಯೆಡ ಬಲದಷ್ಟ ದಿವ್ಯದಿಂಡೆಯರೆಲ್ಲಾ | ಕಡೆಯದೆಶೆ ಧರಿಸಿದರು ದಾಸರಾ 3 ಹಗಲು ಒಂಭತ್ತು ತಾಸಾಗಿರಲು | ಆಗೆದ್ದು ಬೇಗ ಗುರುಗಳ ಸಮೀಪಕ್ಕೆ ಬರಲು || ಮುಗಿದು ಕರಯುಗ್ಮವ ಬಗೆ ಬಗೆ ಸ್ತುತಿಸುತಾ | ಜಗದೊಳು ನಾನಪರಾಧಿಯೆಂದರೂ 4 ಭೋಜನವ ಮಾಡಿ ಗುರುಗಳಂದು ಸಿಂಹಾಸನದಲ್ಲಿ | ರಾಜಿಸುತ್ತ ಬಂದು ಕುಳಿತಿರಲಂದೂ || ಆ ಜನದೊಡಗೀ ದಾಸರು ಕರೆಯಲು | ನೈಜಭಾವದಿಂದು ಬಂದು ಕುಳಿತರೂ 5 ಪದಗಳು ಬರದ ವಹಿಯಕೊಂಡು ಪೋಗಿ | ಮಧ್ವಶಾಸ್ತ್ರದ ಮೇಲೆ ಕುಳ್ಳಿರಲಾಗ || ಅದನರಿಯದೆ ದಿಂಡೆಯನೊಬ್ಬನು ಆ | ಪದವಹಿಯ ತೆಗೆದು ಬಿಸುಟನಾಗಾ 6 ಯೆರಡಾವರ್ತಿ ತೆಗೆಯಲು ಆಗ | ತಿರುತಿರುಗಿ ಬಂದು ವರಪುಸ್ತಕದ ಮ್ಯಾಲೆ ಕುಳ್ಳಿರಲಂದೂ || ಗುರು ವ್ಯಾಸರಾಯರು ನೋಡಿ ಹರುಷದಿಂದ | ಕರೆದು ಬೈದರವಗೆ ಕಡು ಮೂರ್ಖನೆಂದೂ 7 ಪದದೊಹಿ ತೆಗೆದು ಬಿಸಾಡಿದರೆ ತಿರುತಿರು ಗ್ಯದರಮ್ಯಾಲೆ ವರನಾಲ್ಕು ವೇದಾರ್ಥದರೊಳಗುಂಟು || ನರರುತ್ತಮರೆಲ್ಲ ನೋಡಿ ಹರುಷದಿಂದ | ಪುರಂದರ ಉಪನಿಷತ್ತೆಂದರೂ 8 ಗುರುರಾಯರು ದಾಸರ ನೋಡಲಾಗ ಭರದಿಂದ ಯೆದ್ದು | ಅರಿವೆಯ ಕೈಯಿಂದೊರಸಲು ಆಗ || ತ್ವರಿತದಿ ಕೇಳಲು ವಿಠಲನ ಗುಡಿಯೊಳು | ಪಡದಗುರಿ ಹತ್ತವು ವರಿಸಿದೆವೆಂದರು 9 ಹಾಗೆಂದು ನುಡಿದಾಕ್ಷಣದಲಿ ಬೇಗ ಶಿಷ್ಯರಿಗೆ | ಹೋಗಿ ನೋಡಿ ಬಾರೆಂದೆನಲಾಗಿ || ಬೇಗದಿಂದಲಿ ಬಂದು ಕೇಳಲು ಅವರು | ಈಗ ದಾಸರು ಬಂದು ಪರಿಹರಿಸಿದರೆಂದು 10 ಆ ಮಾತು ಕೇಳಿದಾಕ್ಷಣದಿ ಬೇಗ | ಪ್ರೇಮದಿ ಬಂದು ಸ್ವಾಮಿರಾಯರಿಗೆ ಪೇಳಲು ಆಗ || ನಾಮವ ಸ್ಮರಿಸುತ ಪ್ರೇಮಾಲಿಂಗನವಿತ್ತು | ಕಾಮಿತಾರ್ಥ ಫಲವೀವ ಕಲ್ಪತರುವೆಂದರೂ 11 ಇಂತು ಅನುಭವ ಮಾತುಗಳನಾಡಿ ಲಕ್ಷ್ಮೀಕಾಂತನ | ಅಂತರಂಗದಲಿ ಅತಿಮಾನವ ಮಾಡಿ || ಮೂರ್ತಿ | ಶಾಂತತ್ವದಿ ನೋಡುತ ಶರಣು ಮಾಡಿದರೂ 12 ಗಜಪುರದಲ್ಲಿ ಇರುವರು ಕೂಡಿ ವಿಜಯವಿಠ್ಠಲನ್ನ | ಭಜನೆಯಿಂದ ದಿನ ದಿನ ಪೊಗಳಿ || ತ್ರಿಜಗದೊಡೆಯ ಗುರು ಪುರಂದರವಿಠಲನ | ನಿಜ ವೈಕುಂಠದ ಮುಕ್ತಿಯೈದಿದರೂ 13
--------------
ವಿಜಯದಾಸ
ಕಂಗಳಿದ್ಯಾತಕೊ ಕಾವೇರಿ ರಂಗನ ನೋಡದ ಪ. ರಂಗನ ಶ್ರೀಪಾದಂಗಳ ನೋಡದ ಅ.ಪ ಎಂದಿಗಾದರೊಮ್ಮೆ ಜನರುಬಂದು ಭೂಮಿಯಲ್ಲಿ ನಿಂದುಚಂದ್ರ ಪುಷ್ಕರಣಿ ಸ್ನಾನವ ಮಾಡಿ ಆ-ನಂದದಿಂದಲಿ ರಂಗನ ನೋಡದ 1 ಹರಿ ಪಾದೋದಕ ಸಮ ಕಾವೇರಿವಿರಜಾನದಿಯ ಸ್ನಾನವ ಮಾಡಿಪರಮ ವೈಕುಂಠ ರಂಗಮಂದಿರಪರವಾಸುದೇವನ ನೋಡದ 2 ಹಾರ ಹೀರ ವೈಜಯಂತಿತೋರ ಮುತ್ತಿನ ಹಾರ ಧರಿಸಿತೇರನೇರಿ ಬೀದಿಲಿಮೆರೆವ ರಂಗವಿಠಲನ್ನ ನೋಡದ 3
--------------
ಶ್ರೀಪಾದರಾಜರು
ಕಂಡೆ ಕಂಡೆನೊ ಕಂಗಳಲಿ ಭೂ | ಮಂಡಲಾಬ್ಧಿಗೆ ಸೋಮನೆನಿಪ ಅ | ಖಂಡ ಮಹಿಮಾ ವಾದೇಂದ್ರ ಗುರುಗಳ ಪ ನಸುನಗಿಯ ಮೊಗ | ಪಸರಿಸಿದಾ ದ್ವಾದಶನಾಮಗಳು ಶ್ರೀ ಮುದ್ರೆ ಮುದದಿಂದ | ನೊಸಿಲಿಲೊಪ್ಪುವ ಗಂಧ ಅಕ್ಷತಿ ಎಸೆವ ಸಣ್ಣಂಗಾರ ಕಿವಿಯಲಿ ಹಸನಾದ ಎಳೆ ತುಲಸಿ ಶೋಭಿಸಿ | ಬೆಸಸುವ ಒಂದೊಂದು ಮಾತಾ | ಲಿಸಿದರದು ವೇದಾರ್ಥತುಲ್ಯಾ | ಲಸವ ಗೈಯಿಸದೆ ಬರುವ ಗುರುಗಳ1 ಮೊಸಳಿವಾಯಪಲಕ್ಕಿ ಸುತ್ತಾ ಭಾ | ರಿಸುವ ನಾನ ವಾದ್ಯಾದಾ ಘೋಷಾ | ಪುಸಿಕರೆದೆದಲ್ಲಣರು ಎಂಬಾ | ದಶ ದಿಕ್ಕಿನೊಳು ಕೀರ್ತಿ ತುಂಬಿರೆ | ಶಿಶುವು ಮೊದಲಾದವರು ತಮ ತಮ | ಬೆಸನೆ ಪೇಳಲು ಕೇಳಿ ಅವರು | ಋಷಿಕುಲೋತ್ತಮರಾದ ಗುರುಗಳ2 ಶ್ವಶನ ಮತ ವಾರಿಧಿಗೆ ಪೂರ್ಣ | ಶಶಿ ಎನಿಸಿಕೊಂಬ ಧೀರುದಾರರೆ | ಅಸಮ ತತ್ವ ಪ್ರಮೆಯದಲಿ ನಿರ್ಮಿಸಿದನೆ | ಲೋಕೇಶ ಇವರನ್ನ ವಸುಧಿ ಅಮರರು | ಪ್ರಸರ ಎಡಬಲ ಎಸದು ತುತಿಸಲು ಹಿಗ್ಗಿ ಕರುಣಾ | ರಸಭರಿತರಾಗಿ ನೋಡುತ್ತ ಮಾ | ಸನದಿ ಹರಿಪದ ಭಜಿಪ ಗುರುಗಳ3 ಕುಸುವಶರನ ಬಾಣವನು ಖಂಡ್ರಿಸಿ ಬಿಸುಟ ಸಂಪನ್ನ ವಿದ್ಯಾ | ವಸುವಿನಲಿ ಆವಾಗ ತಲೆ ತೂ | ಗಿಸುವರು ಪಂಡಿತರ ಮೆಚ್ಚಿಸಿ | ವಶವೆ ಪೊಗಳಲು ಎನಗೆ ಇವರ ದ | ರುಶನದಿಂದಲಿ ಗತಿಗೆ ಪಥನಿ | ವಿಷದೊಳಗೆ ಇದು ಸಿದ್ಧವೆಂದು ವಂ | ದಿಸಿದಿರೊ ಮರಿಯದೆ ಈ ಗುರುಗಳಾ 4 ಮಿಸುಣಿ ಮಂಟಪದೊಳಗೆ ರಂ | ಜಿಸುವ ರಾಮನÀ ಕುಳ್ಳಿರಿಸಿ ಅ | ರ್ಚಿಸುವ ಚಿತ್ತೇಕಾಗ್ರದಲಿ ವೊ | ಲಿಸುವ ತಂತ್ರ ಸಾರೋಕ್ತ ಬಗೆಯನು | ಕುಶಲರಾದ ಉಪೇಂದ್ರ ಮುನಿಕರ | ಬಿಸಜದಿಂದಲಿ ಜನಿಪ ಭಕುತಿಲಿ | ಸಿರಿ ವಿಜಯವಿಠ್ಠಲನ್ನ | ಪೆಸರುಗಳು ಎಣಿಸುವ ಗುರುಗಳ 5
--------------
ವಿಜಯದಾಸ
ಕಮಲಾಲಯ ವಿಠಲ | ಕಾಪಾಡೊ ಇವಳಾ ಪ ಅಮಿತ ಮಹಿಮಾತ್ಮಾ ಅ.ಪ. ಪಾದ | ವಂದನೆಯ ಬಯಸೀಬಂದಿಹಳು ಎನ್ನಲ್ಲಿ | ಕಂದರ್ಪಪಿತ ನಿನ್ನ |ಅಂದ ದಾಸ್ಯವ ಬಯಸಿ | ಪ್ರಾರ್ಥಿಸುತ್ತಿಹಳೋ 1 ಮನ್ನಿಸುತ ಮನ್ಮನದ | ಬಿನ್ನಪವ ಸಲಿಸುತ್ತನನ್ನೆಯಿಂ ತೈಜಸನು | ನೀನೇವೆ ಆಗೀಚೆನ್ನಮುತ್ತೈದುಳ್ಳ |ಹೆಣ್ಣೆನ್ಯ ರೂಪದಲಿಸನ್ನಿಹಿತ ದಂಕಿತವೆ ಸೂಚಿಸಿದೆ ಹರಿಯೇ 2 ವಜ್ರ ಕವಚವ ತೊಡಿಸಿಶ್ರೇಷ್ಠಭಕುತಳ ಗೈಯ್ಯೊ | ವಿಷ್ಠರ ಶ್ರವನೇ 3 ಎಲ್ಲೆಲ್ಲೂ ನೀನಿದ್ದು | ಬೆಲ್ಲದಚ್ಚಿನ ಪರಿಯಮಲ್ಲ ಮರ್ಧನ ಕೃಷ್ಣ | ಕೈಪಿಡಿದು ಇವಳಾಬಲ್ಲವರ ಸಂಗದಲಿ | ಚೆಲ್ವತವ ಮಹಿಮೆಗಳಸಲ್ಲಲಿತ ಮನದಲ್ಲಿ ಕೇಳುವಂತೆಸಗೋ 4 ಪತಿಸುತರುಹಿತರಲ್ಲಿ | ವಿತತ ನಿನ್ನಯಮೂರ್ತಿಅತಿಶಯಂಗಳ ಕಂಡು | ಮರುತಮಾರ್ಗದಲೀಹಿತ ಗುರು ಗೋವಿಂದ | ವಿಠಲನ್ನ ಸೇವಿಸುವಮತಿಯನೇ ಕೊಡು | ಪ್ರಾರ್ಥಿಸುವೆ ಹರಿಯೇ 5
--------------
ಗುರುಗೋವಿಂದವಿಠಲರು
ಕರುಣವ ಮಾಡೊ ಶರಣರ ಪ್ರೇಮಿಕರುಣವ ಮಾಡೊ ಅರುಣನಿಭನೆ ಗುರು | ಕರುಣವ ಮಾಡೊ ಪ ಸುರ ತರುವಿನ ಅನುಸರಿಸಿದ ಮನುಜಗೆ ಮೃಷ್ಟಾನ್ನದ ಬರವೆಸುರನದಿ ಅನುಸರಿಸಿದ ಮನುಜಗೆ ಘನ ತೃಷಿಯ ಬಾಧೆ 1 ಕಾಮಧೇನು ತನ್ನ ಧಾಮದೊಳಗೆಯಿರೆ ಸೀಮೆ ಆಳುವರಾಸೆರಾಮನ ಪದಯುಗ ತಾಮರಸವನಂಬೆ ಪಾಮರರಂಜಿಕೆಯೆ 2 ವ್ರಜತಾಧಿಪ ವೇಣುಗೋಪಾಲ ವಿಠಲನ್ನ ನಿಜವಾಗಿ ಸ್ಮರಿಸುವರಕುಜನ ದಲ್ಲಣ ಗುರು ವಿಜಯದಾಸರೆ ಸ್ಮರಿಸುವರೆಯಿವರ3
--------------
ವೇಣುಗೋಪಾಲದಾಸರು