ಒಟ್ಟು 60 ಕಡೆಗಳಲ್ಲಿ , 25 ದಾಸರು , 56 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದತ್ತಾತ್ರೇಯನ್ನಮೋ ದತ್ತಾತ್ರೇಯಾ ಅತ್ರಿ ವರದಾಯಕನೇ ದತ್ತಾತ್ರೇಯಾ ಪ ಭಕುತಿ ಮಾಡಲು ಮೆಚ್ಚಿ ಅನಸೂಯಾ ಕರದೊಳಗ ಸುಕುಮಾರ ವೇಷದವತಾರ ತಾಳಿ ಪಥ ದೋರಲಿಕೆ ಅಕಳಂಕ ಯೋಗ ರೂಪವ ಭರಿಸಿದೆ 1 ಉದಯದೊಳು ವಾರ್ಣಾಸಿಸುರನದಿಯಲಿ ಸ್ನಾನ ವದಗಿ ಕೊಲ್ಹಾಪುರಕ ಮಧ್ಯಾಹ್ನದೀ ವಿದಿತ ಭಿಕ್ಷವನುಂಡು ಪೋಗಿ ಸಂಜೆಗೆ ಮಾಹು ನಿತ್ಯ ವಿಧಿಯಲಿ ಚರಿಸುವೇ2 ದತ್ತಹರಿ ಸಾಕ್ಷಾತ ಉನ್ಮದೋನಂದದಾಯಕ ದತ್ತವರ ಮುನಿ ದಿಗಂಬರ ಬಾಲಕಾ ನಿತ್ಯ ಪ್ರಕಾಶಮಯ ಜ್ಞಾನಸಾಗರನೆಂಬರ ದುರಿತ ಭಯವಾರಿಸುವೆ3 ಆವನಾಗಲಿ ಮರೆದು ನಿಮ್ಮ ನಾಮವ ನೆನೆವ ಠಾವಿನಲಿಸುಳಿವ ಪ್ರತ್ಯಕ್ಷದಿಂದಾ ಭಾವದಿಂದಲಿ ಸ್ಮರಿಸಿದವಗ ಇಹಪರ ಸುಖವ ನೀವ ಕರುಣಾಳು ದೀನೋದ್ಧಾರಕಾ 4 ಇಪ್ಪತ್ತು ನಾಲ್ಕು ಗುರುಗಳ ಕ್ರಮವ ದೋರಿಭವ ಮುಪ್ಪು ಬಿಡಿಸಿದೆ ಯದುರಾಯಗಂದು ಒಪ್ಪಿನಿಂದಲಿ ಗುರು ಮಹಿಪತಿ ಪ್ರಭುಯನಿಸಿ ತಪ್ಪ ನೋಡದೆ ನಂದ ನುದ್ಧರಿಸಿದೆಲೆ ದೇವಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದುರ್ಜನರ ಸಂಗ ಎಂದಿಗೂ ಒಲ್ಲೆನು ಇಂಥ,ಸಜ್ಜನರ ಸಂಗದೊಳಗಿರಿಸೆನ್ನ ರಂಗ ಪ ಭಂಗ ರಂಗ 1 ನಂಬಿದ ಠಾವಿನಲಿ ಕೇಡನೆಣಿಪನ ಸಂಗಸಂಭ್ರಮದಿ ಜಗಳ ಕಾಯುವನ ಸಂಗಹಂಬಲಿಸಿ ಭವದ ಸುಖ ಮೆಚ್ಚಿದಾತನ ಸಂಗರಂಭೆಯರ ನೋಡಿ ಮೋಹಿಪನ ಸಂಗ2 ಕುಹಕ ಮಾಡುವಾತನ ಸಂಗಬಲು ಬೇಡೆ ಕೊಡದಿರುವ ಲೋಭಿ ಸಂಗಕುಲಹೀನರ ಕೂಡೆ ಸ್ನೇಹ ಬೆಳೆಪನ ಸಂಗಹಲವು ಮಾತಾಡಿ ಆಚರಿಸದನ ಸಂಗ3 ಗುರುಸತಿಗೆ ಪರಸತಿಗೆ ಎರಡು ಎಣಿಪನ ಸಂಗಗುರುನಿಂದೆ ಪರನಿಂದೆ ಮಾಡುವನ ಸಂಗಪರಹಿತಾರ್ಥದ ಧರ್ಮ ಪಡೆಯದಾತನ ಸಂಗಪರಮಪಾಮರ ಸಂಗ ಬಹುಭಂಗ ರಂಗ 4 ಭಂಗ 5
--------------
ಕನಕದಾಸ
ದೇವಕಿಯ ಗರ್ಭದಲಿ ಲೋಕವಕಾವ ಕೃಷ್ಣನು ಬಂದು ನಂದನಠಾವಿನಲಿ ತಾ ಬೆಳೆದು ಗೋವನುಕಾವ ನೆವದಲಿ ಗೋಪಗೋಪೀಭಾವವನು ನೆಲೆಗೊಳಿಸಿ ದುಷ್ಟರಜೀವವನು ನೆರೆ ತೆಗೆದ ಹಾಗೆಮಾವ ಕಂಸಗೆ ಮುಕ್ತಿುತ್ತಾಮಾತೃ ಪಿತೃ ಬಂಧನವ ಬಿಡಿಸಿದಭಾಗವತವೂ ಲಾಲಿಸಿದನೂ ದೇವದೇವಾ 1ನಡೆಯಲುಪನಯನಾಖ್ಯ ಕರ್ಮವದೊಡನೆ ವಿದ್ಯವನೋದಿ ದುಷ್ಟರಬಡಿದು ಪತ್ನಿಯರೆಂಟುಮಂದಿಯಪಡೆದು ದ್ವಾರಕಿಯಲ್ಲಿ ಯಾದವರೊಡನೆ ಭೋಗಿಸಿ ಭೋಗಭಾಗ್ಯವತಡುಕಿದರಿಗಳ ತರಿದು ಕೌರವಪಡೆಯ ಮರ್ದಿಸಿ ಪಾಂಡವರನಾಪೊಡವಿಪಾಲರ ಮಾಡಿದಂಥಾಭಾಗವತವೂ ಲಾಲಿಸಿದನೂ ದೇವದೇವಾ 2ಪರಿಹರಿಸಿ ಭಾರವನು ಭೂಮಿಗೆಪರಮ ಭಕತರ ಸಲಹಿ ಕಥೆಯನುಹರಹಿ ಮುಂದಣ ಜನರು ಸಂಸ್ಕ øತಿಶರಧಿಯನ್ನಿದರಿಂದ ದಾಂಟುವತೆರನ ಮಾಡಿಯೆ ಕಾಯ್ದ ಕರುಣಾಶರಧಿ ತಿರುಪತಿ ವೆಂಕಟೇಶನೆನಿರುಪಮಾಮಿತ ಮಹಿಮ ನೀನೇಚರಿಸಿದಂಥಾ ಚಾರುತರವಹಭಾಗವತವೂ ಲಾಲಿಸಿದನೂ ದೇವದೇವಾ 3ಓಂ ಧೇನುಕಾಸುರ ಭಂಜನಾಯ ನಮಃ
--------------
ತಿಮ್ಮಪ್ಪದಾಸರು
ದೇವಾ ಬಾರಯ್ಯಾ ವೈಭವದಿ ರಥವನೇರಿ ಸೇವಿಸುವೆನು ಮಧ್ಭಾವದಿ ನೆಲಸೆಂದು ಪಾವನ ಮಣಿಪುರ ಠಾವಿನೊಳಿಹ ಭೂದೇವ ವರ್ಯ ಸಂಶೇವಿತ ಕೇಶವ ಪ ದೇವಗಂಗೆಯಪೆತ್ತ ಪಾವನಗಾತ್ರಧ್ರುವ ಭೂವರೋÀಪಾಸಿತನಾಗಿ ಈ ವಸುಧಿಗೆ ಬಂದು ಪಾವಮಾನ ಶಾಸ್ತ್ರದಿ ಕೋವಿದಯತಿ ವರ ಶ್ರೀ ವಿದ್ಯಾನಿಧಿ ತೀರ್ಥ ಸೇವಿತ ಸಂಸ್ಥಾಪಿತ ಸೇವಕ ಜನ ಸಂಭಾವಿತ ಕಾಮಿತ ವೀವ ಕಾವ ಸದಶಾವತಾರ ನಮೋ ಶ್ರಿವಿರಂಚಿಮುಖ ದೇವನ ಮಿತ ಕಂಚೀವರದನೆ ಪೊರೆ ಶ್ರೀ ವರಕೇಶವ 1 ಕಡು ಶೋಭಿಸುವ ಬಿಳಿಗೊಡೆ ಚಾಮರಾದಿಗಳ ಪಿಡಿದು ಶೇವಿಪ ಜನರೆಡಬಲದಿ ಬರೆ ಸುರರು ಪಂಥsÀವಿಡಿದು ವೇದಪಠಣ ಬಿಡದೆ ಮಾಡುತ ಬರೆ ನುಡಿವ ವಾದ್ಯಗಳಿಂದ ಸಡಗರದಲಿ ದ್ವಿಜಮಡದಿಯರಾರುತಿ ಪಿಡಿದು ಬೆಳಗುತಿರೆ ಕಡು ವೈಭವದಲಿ ಅಡಿಗೆರಗುವೆ ಪಾಲ್ಗಡಲ ಶಯನ ಮೂ- ರಡಿ ರೂಪನೆ ಜಗದೊಡೆಯ ಕೇಶವ 2 ನಂದ ತೀರ್ಥರ ಮತ ಸಿಂಧುವಿಗೆ ಪೂರ್ಣ ಚಂದ್ರರೆನಿಪಯತೀಂದ್ರ ಸತ್ಯ ಪ್ರಮೋದ ರಿಂದ ಪೂಜಿತ ಪದ ದ್ವಂದ್ವ ಮಧ್ಯದೊಳಿಹ ಮಂದಾಕಿನಿಗೆ ಪಿತನೆಂದು ತೋರಿಸಿದಂಥ ಇಂದಿರೆಯರಸನೆ ಮಂದರಧರ ಗೋ ವಿಂದ ಪಾಹಿ ಮುಕುಂದನೆ ಬಾಬಾ- ರೆಂದು ಕರೆವ ದ್ವಿಜ ವೃಂದಮಧ್ಯದಲಿ ಶ್ಯಂದನ ವೇರಿದ ಸುಂದರ ಕೇಶವ 3 ಅಂಬುಜನಾಭನೆ ನಿತಂಬದಿ ಪೊಳೆವ ಪೀ- ತಾಂಬರ ಧೃತ ಶಾತಕುಂಭ ಮಕುಟವದ- ನಾಂಬೋಜವನು ತೋರೋಕುಂಭೀನಸ ಪರಿಯಂಕ ಶಂಭ್ವಾದಿನಮಿತ ನೀಲಾಂಬುಧ ನಿಭಗಾತ್ರ ಕಂಬುಚಕ್ರಸುತ- ದಾಂಬುಜಧರ ಬಲು ಸಂಭ್ರಮದಲಿ ಮುನಿಕುಂಭಜ ಪೂಜಿತ ಕದಂಬ ದುರಿತ ಕಾದಂಬನಿ ಪವನ ಕೃ ಪಾಂಬುಧೆ ಕೇಶವ 4 ಗರುಡ ಮಾರುತರಿಂದ ಪರಶೇವಿತನೆ ಬಾರೊ ಶರಣು ಜನರ ಸುರತರುವೆ ಚನ್ನಕೇಶವ ಧರೆಯೊಳಧಿಕ ಮಣಿಪುರ ಪಂಡಿತಾಗ್ರಣಿ ಸನ್ನುತ ಸರಸಿಜಾಸನ ಪಿತ ಸಿರಿದೇವಿಯು ಈರೆರಡು ರೂಪದಲಿ ಕರದೊಳಗಾರುತಿ ವರಚಾಮರಗಳ ಧರಿಸಿ ಸಿರಿ ' ಕಾರ್ಪರ ನರಹರಿ ' ರೂಪನೆ ಮಾಂ ಪೊರೆವುದು ಕೇಶವ 5
--------------
ಕಾರ್ಪರ ನರಹರಿದಾಸರು
ಧರ್ಮೇಂದ್ರಿಯಕ್ಕೆ ದಟ್ಟಡಿಯನಿಡಲೊಲ್ಲೆ ದುಷ್ಕರ್ಮೇಂದ್ರಿಯಕ್ಕೆ ಕಾಲ್ಗೆರಗುತ್ತಲಿಹೆ ಮರುಳೆ ಪ ಪುಸ್ತಕವ ಬಿಚ್ಚಿ ಪೌರಾಣ ಶಾಸ್ತ್ರಂಗಳಿಂವಿಸ್ತರಿಸಿ ಹರಿಯ ಕಲ್ಯಾಣಗುಣ ಕಥೆಯನ್ನುಸ್ವಸ್ಥದಿಂ ಕುಳ್ಳಿರ್ದು ಕೇಳೆಂಬ ಠಾವಿನಲಿಮಸ್ತಕಕೆ ವ್ಯಥೆಯೆಂದು ಮನೆಯತ್ತ ನೀ ನಡೆವೆಹಸ್ತದಿಂ ಹಣ ಭತ್ತ ಹಚ್ಚಡಂಗಳ ಕೊಟ್ಟುಕುಸ್ತರಿಸಿ ಬಿನಗು ಚಾರಿತ್ರ್ಯವಂ ಲಾಲಿಸುತದುಸ್ತರದ ಲೆತ್ತ ಚದುರಂಗ ಪಗಡೆಯನು ಉದಯಾಸ್ತದವರೆಗಾಡುತ ಮೇಲೇಳದಿಹೆ ಮರುಳೆ 1 ಸುರಭಿ ಸೇವಂತಿ ಮಲ್ಲಿಗೆ ಮೊಲ್ಲೆ ಬಕುಳ ಪಾದರಿ ಚಂಪಕಾ ಕಂಜ ಕಣಿಗಲು ಶ್ರೀ ತುಳಸಿಪರಿಮಳದ ಪಚ್ಚೆತೆನೆ ಹರಿಪಾದಕರ್ಪಿಸುತೆನಿರುಮಾಲ್ಯ ಪರಿಮಳವನಾಘ್ರಾಣಿಸೆನೆ ಒಲ್ಲೆಬಿರಿದ ಕೆಂಜಾಜಿ ಪುಷ್ಪಂಗಳಂ ವನಿತೆಯರಸಿರಿ ಮುಡಿಗೆ ಮುಡಿಸಿ ಕುಂತಳ ಸೌರಭವ ಕಂಡುಹರುಷದಿಂ ರೋಮ ಪುಳಕಿತನಾಗುತಡಿಗಡಿಗೆಪರಮ ಸಂತೋಷಮಂ ನೀ ಪಡೆಯುತಿಹೆ ಮರುಳೆ 2 ಭಾಗವತ ನೃತ್ಯವಂ ನೋಡುತತಿಶಯದ ಹರಿದಿನವ್ರತದಲ್ಲಿ ಜಾಗರವ ಮಾಡದಲೆ ನಿದ್ರೆಗೈವೆಕೃತಕ ಪಣ್ಯಾಂಗನೆಯ ಚತುರ ನೃತ್ಯಕೆ ಮನೋ-ರಥ ಸಿದ್ಧಗೊಳಿಸಿ ಈಕ್ಷಿಪೆನೆಂದು ಕುಜನ ಸಂ-ಮತವೆರಸಿ ಬೆಳತನಕ ಕುಳ್ಳಿರುತ ನಿದ್ರಾ ವ-ರ್ಜಿತನಾಗಿ ಪರಮ ಸಂತಸ ಪಡೆಯುತಿಹೆ ಮರುಳೆ 3 ಗಂಧ ಶಾಲ್ಯಾನ್ನ ನವಘೃತ ತೋಯ ಪಳಿದ್ಯ ನಲ-ವಿಂದ ಪರಮಾನ್ನ ಮಹಶಾಕ ಸೀಕರಣೆಯನುಒಂದೆರಡು ಪರುಠವಿಸಿ ದ್ವಾದಶಿ ದಿನದಂದು ಮು-ಕುಂದಾರ್ಪಣವ ಮಾಡಿ ಮನೆಯೊಳಗೆ ಉಣ್ಣದಿಹೆಬಂದಾವನಾದೊಡಂ ಕರೆಯೆ ದೇಹದ ಪುಣ್ಯವೆಂದವರ ಮನೆಗಳಿಗೆ ಹೋಗಿ ನೀ ಕುಳ್ಳಿರ್ದುಚಂದದಿಂ ಬಣ್ಣಿಸುತ ಮಿಂಚುಕೂಳುಗಳನ್ನುತಿಂದೊಡಲ ಪೊರೆದು ಕಾಲವ ಕಳೆಯುತಿಹೆ ಮರುಳೆ4 ಸಿರಿ ವೈಕುಂಠ ಪದವಿಯನು ಪಡೆ ಮರುಳೆ 5
--------------
ಕನಕದಾಸ
ನಿತ್ಯ ಮಾರುತನ ರಾಣಿ | ಭಾರ ನಿನ್ನದೇ ವಾಣೀ ಪ ಅನುದಿನ | ಅಕಟನಿಲ್ಲದೆ | ಸಕಲ ಠಾವಿನಲ್ಲಿ ಅರ್ಭಕನಾಗಿ ತಿರುಗಿ ಪಾ | ಪಕೆ ಎರಗಿದೆ ಯಾತಕೆ ಬಾರದವನಾದೆ 1 ಆರನ್ನ ಕಾಣದೆ ನಿನ್ನನು ನಾ | ಸಾರಿದೆ ಮಾಣದೆ | ವಾರ ವಾರಕೆನ್ನ ಉದ್ಧಾರವ ಮಾಳ್ಪುದು | ಕಾರುಣ್ಯದಿಂದಲಿ ಶೃಂಗಾರವಾರಿಧಿ ವೇಗ 2 ನಿತ್ಯ | ಕೃತಿಯನಂದನೆ | ಸತತ ವಿಜಯವಿಠ್ಠಲನ ಪದಾಬ್ಜದಿ | ರತಿ ಆಗುವಂತೆ ಸುಮತಿಯನು ಕರುಣಿಸೇ 3
--------------
ವಿಜಯದಾಸ
ನಿನ್ನೊಳಗೆ ನೀ ತಿಳಿದುನೋಡು ನಿರ್ಮಲನಾಗಿ ಪ ನಿನ್ನೊಳಗೆ ನೀ ತಿಳಿದುನೋಡು ಚೆನ್ನಾಗಿ ಗುರುಭಕ್ತಿಯ ಮಾಡು ಭಿನ್ನಪದಾರ್ಥಗಳನ್ನು ಬಯಸದೆ ಅನನ್ಯಭಾವದಿ ನಿಜವನ್ನು ನಿತ್ಯಾತ್ಮನ ನರದೇಹದಿಂದಧಿಕವಿಲ್ಲಾ ಸ್ಥಿರವಾಗಿ ನಿಂದಿರುವುದಲ್ಲಾ ಬರಿದೆ ಕೆಡಿಸುವುದು ಸಲ್ಲಾ ಗುರುತಿಗೆ ಬೆರೆಸಲು ಬಲ್ಲಾ ಗುರುನಾಥನಿಂದುಪದೇಶವಾ ಕೈಕೊಂಡು ಇ ತರ ಪರಿಕರಂಗಳ ಆಶಾಪಾಶವಾ ವರ್ಜಿಸಿ ನಿನ್ನ ದುರಿತ ದುಃಖ ವಿನಾಶವಾಮಾಡಲು ಭವ ಶರಧಿಯ ದಾಟುವಾ ಆಯಾಸವಾ ನಿಲ್ಲುವದಿನ್ನು ಕುರಿತುಮನದಲಿ ತಿಳಿದುನೋಡು ಕಾಂಡುವ ಆರು ಅರಿಗಳ ವಿಚ್ಛೇಧನ ಮಾಡು ಅವಿದ್ಯೆಯನ್ನು ಶರಗು ಹಿಡಿದು ಹೊರಗೆ ದೂಡು ಹಮ್ಮಿನಹಲ್ಲು ಮುರಿದು ನಿನ್ನೊಳಗೆ ಕೂಡು ಹರಿಚರಣದೊಳಾಡು ಗುರುಮಂತ್ರವನುಚ್ಚರಿಸಿ ಕರ್ಪೂರವನು ಜಗದೊಳಿರುವುದೆಲ್ಲ ನಶ್ವರಸಂತೆ ನೋಡೆ ಬರುವದೆಲ್ಲ ಬಯಲಿನ ಭ್ರಾಂತಿ ಅರಿತಮಹಾತ್ಮರ ಚರಣನರಸಿಜಕೆ ಎರಗಿ ತತ್ವಾನಂದ ಭರಿತನೆಂದೆನಿಸುವ ನಿನ್ನೊಳಗೆ1 ವಾದಿಸಿ ಶುದ್ಧತತ್ವದ ಹಾದಿಯ ಬಲ್ಲವರಾದ ಸಾದು ಸತ್ಪುರುಷರಪಾದ ಕೊಡಿ ಶ್ರೀ ಗುರುಪ್ರಸಾದ ಸಾಧಿಸಿ ಸವಿಯನು ಬೇಡಿಕೊ ಬ್ರಹ್ಮಾನಂದದ ಬೋಧೆಯಿಂದ ನೀ ಲೋಲಾಡಿಕೊ ನಿತ್ಯನಿರ್ಮಲವಾದ ವಸ್ತು ನೀ ದೃಢಮಾಡಿಕೊ ಅಂತರಾತ್ಮನ ಶೋಧಿಸಿ ಸಜ್ಜಾಗಿ ನೋಡಿಕೊ ಅಷ್ಟರಮೇಲೆ ಹಾ ಧನ್ಯಧನ್ಯನೆನಿಸಿ ಮೆರೆವ ವರ್ಣಾಶ್ರಮದ ಭೇದವಳಿದು ಮಾಯೆಯ ಜರಿವೆ ನಿತ್ಯಾನಂದವಿನೋದಕೆ ಮಹಾತ್ಮರನು ಕರಿವೆ ನೋಡಲು ದ್ವೈತವಾದ ಮಿಥ್ಯವೆಂಬುದನರಿವೆ ಮಧ್ಯಾಂತ ಶ್ರೀ ಗುರುದೇವಾ ಬಹುಆದರವಿಡಿದು ಶಿಷ್ಯರಕಾವಾ ಸಂಪಾದಿಸಿಕೊಡುವಾ ಮುಕ್ತಿಯಠಾವಾ ನಿತ್ಯಾರಾಧಕರಿಗೆ ಸದ್ಗತಿಗಳನೀವಾ ತ್ರಿಮೂರ್ತಿಗಳಾದರೆಂತೆಂಬುದ ನಿನ್ನೊಳಗೆ 2 ನಿತ್ಯನಿರ್ಮಲದೊಳಗಾಡಿ ಪ್ರತ್ಯುಗಾತುಮನ ನೋಡಿ ಇತ್ತಣದ ಹಂಬಲವ ಬಿಡಬೇಕು ತನುಮನಧನ ಜೊತ್ತಾಗಿ ಶ್ರೀ ಗುರುವಿಗೆ ಕೊಡಬೇಕು ಕರುಣದವಜ್ರ ಕೆತ್ತಿದ ಕವಚವನು ತೊಡಬೇಕು ಬಿಡಬೇಕು ಇಂತಾಗಿ ಬಿಡದೆ ಮತ್ತಿ ತಾತ್ವರ್ಥವ ತಿಳಿದು ಕಾಣುಕಾಣದರೊಳು ಪ್ರತ್ಯಕ್ಷ ಹೊಳದಾಡುವ ಚಿದ್ಭಾನು ಪ್ರಕಾಶವನ್ನು ಅತ್ಯಧಿಕತೆಯಿಂದಲೀವನು ಜ್ಞಾನಿಗಳೊಳು ವಿಸ್ತಾರ ವಸ್ತು ವಿಚಾರವನು ಮಾಡಿ ನೋಡಿದರೆ ಕತ್ತಲೆ ಬೆಳಕೆರಡಿಲ್ಲದು ಸ್ವಯದಲಿ ಎತ್ತನೋಡಿದರು ಪ್ರಜ್ವಲಿಸುವುದು ತಾಂ ಉತ್ತಮಾನಂದದಿ ಸಲಿಸುವುದು ಗುರು ಭಕ್ತರ ನಿಜದಲಿ ನಿಲಿಸುವದು ಸುತ್ತು ಮುತ್ತು ಸುಳಿದು ತಾನೆ ಬಯಸುವದು ನೆತ್ತಿಯೊಳಗೆ ಹೊಳೆಯುತ್ತಿಹ ಜ್ಯೋತಿಯು ಎತ್ತಿತೋರಿತು ವಿಮಲಾನಂದ ಬ್ರಹ್ಮನ ನಿನ್ನೊಳಗೆ 3
--------------
ಭಟಕಳ ಅಪ್ಪಯ್ಯ
ಪುಷ್ಟಿ ಎಲ್ಲಿಯದು ಪ ದೃಷ್ಟಿ ಕಡಿಮೆಯು ಕಿವಿಯು ಕೇಳದು ಶ್ರೇಷ್ಠ ನಾನೆಂದು ಕುಣಿವುದಕೆಅ.ಪ ಪರಿವ್ರಾಜಕನಾಗಬೇಕೆಂ- ದುರುತರಾಶ್ರಮ ಧರ್ಮಶಾಸ್ತ್ರಗ- ಳೊರೆಯುತಿಹುದದರರ್ಥ ತಿಳಿಯದೆ 1 ಕಾಮ್ಯಕರ್ಮಳನು ತ್ಯಜಿಸಿ ಭ್ರಾಮ್ಯಜನಗಳ ನಡತೆ ಬಿಟ್ಟು ರಮ್ಯವೆಂದರಿಯುವುದು ಸೌಖ್ಯವು 2 ಎಮ್ಮೆಯೋಲ್ ತಿನ್ನುತಲಿ ಬಾಯಲಿ ಹೆಮ್ಮೆ ಮಾತುಗಳಾಡುತಿರುತಿಹ ಗ್ರಾಮ್ಯ ಜನಗಳ ಸಂಗವೆಂದಿಗು ಗತಿವಿದೂರನ ಮಾಡದೆ ಬಿಡದು 3 ಗಣ್ಯತಾನೆಂದುಕೊಳ್ಳದೆ ದಾ- ಅನ್ನಕೋಸುಗ ಪರರ ಪೊಗಳದೆ ಧನ್ಯರಡಿಗಳ ಠಾವಿನಲಿ ನಲಿ ಸುಖ 4 ಪಾಮರರು ಪ್ರತಿದಿನವು ದುಸ್ತರ ತಾಮಸ ನರಕದೊಳು ಮುಣುಗುತ್ತ ಸ್ವಾಮಿಯಾಗಿ ಮೆರೆವ ಶ್ರೀಗುರು- ರಾಮವಿಠಲನ ಮರೆತು ಕೆಡುವರು 5
--------------
ಗುರುರಾಮವಿಠಲ
ಪೂಜಾನುಷ್ಠಾನವ ಯೋಚಿಸಿ ಮನದೊಳುಪೂಜೆ ಷೋಡಶಗಳ ಮಾಜದೆ ಮಾಡಿರೋ ಪ ಉಷಃ ಕಾಲದಲೆದ್ದು | ಝಷಕೇತು ಪಿತ ನಾಮಉಸುರು ತಿಪ್ಪುದೇ ಪೂಜೆಯೋ 1 ಶೌಚ ಬಾಹ್ಯವು ಮೃತ್ತು ಶೌಚ ಮಾಡಿಕೊಂಡುಶುಚಿಷತ್ತು ನಿನ ನಾಮ ಉಚ್ಚರಿಪುದೆ ಪೂಜೆಯೋ2 ತುಲಸಿ ಮೃತ್ತಿಕೆ ಹಚ್ಚಿ | ತುಲಸಿ ವಂದನೆ ಮಾಡಿಅಲಸಾದೆ ಕೃಷ್ಣನ ವಲಿಸೂವುದೇ ಪೂಜೆಯೋ 3 ಗೋವನೆ ಬಳಸುತ್ತ ಗೋಪುಚ್ಛ ಪಿಡಿಯುತ್ತಗೋವ ವಂದಿಪುದೆಲ್ಲ ಗೋಪಾಲ ನಿನ ಪೂಜೆಯೋ4 ಸ್ನಾನ ಸಂಧ್ಯಾನ ಮೇಣೂಧ್ರ್ವ ಪುಂಡ್ರವ ಧರಿಸಿಭಾನುಗಘ್ರ್ಯವ ನೀಯೆ ಶ್ರೀನಿವಾಸ ಪೂಜೆಯೋ 5 ಪಾದ ತೀರ್ಥ ಸೇವನೆ ಪೂಜೆಯೋ 6 ಅಷ್ಟ ಮಹಾಮಂತ್ರ ಶಿಷ್ಪನಾಗುತ ಹೃದಯಅಷ್ಟ ಕಮಲದಲ್ಲಿ ಧ್ಯಾನ ಮಾಳ್ಪುದೆ ಪೂಜೆಯೋ 7 ಮಂಟಪೋತ್ತಮ ಪೂಜೆ ಸುಷ್ಠು ಕಲಶ ಪೂಜೆಶ್ರೇಷ್ಠ ಪಂಚಾಮೃತ ಪೀಠ ಶಂಖ ಪೂಜೆಯೋ 8 ಘಂಟನಾದಾ ಅಖಂಡ ಶ್ರೇಷ್ಠ ದೀವಿಗೆ ಪೂಜೆಪೀಠಾವರಣ ಹೃತ್ಪೀಠ ಚಿಂತನೆ ಪೂಜೆಯೋ 9 ಮೂರ್ತಿ ಗುರುಮೂತ್ರ್ವೆಕ್ಯವೆ ಪೂಜೆಯೋ || ಚಿಂತಿಸಿ ಸ್ವಾಂತಸ್ಥ ಬಿಂಬನೋಳೈಕ್ಯವಚಿಂತಿಸುತ್ತಾನೇಕ ಗೈವ ವೈಭವ ಪೂಜೆಯೋ 11 ಹೃತ್ಪುಂಡರೀಕಗೆ ಕಲ್ಪ ತರುವನೆ ಬೇಡುತ್ತಪ್ರೀತ್ಯಾದ ಮಾನಸ ಪದಾರ್ಥಗಳ ಪೂಜೆಯೋ 12 ಪೂರ್ಣ ಶೃತಿಯ ಭಾವ ಚೆನ್ನಾಗಿ ಗ್ರಹಿಸುತ್ತಪೂರ್ಣನ ಕಳೆಯೊಂದು ಪ್ರತಿಮಾದಲ್ಲಿರಿಸೋ 13 ನಿಷುಸೀದ ಶ್ರುತಿಯಂತೆ ವಸುದೇವ ಕೃಷ್ಣನೆಅಸಮ ಪೂಜಕ ಪೂಜ್ಯ ಅವನೇವೆ ತಿಳಿಯೊ 14 ಬಾಹ್ಯದರ್ಚನೆಗಳು ಶ್ರೀ ಹಸ್ತದಿಂದಲಿವ್ಯಾಹರಣೆಂಬೋದೆ ಹರಿ ಪೂಜೆಯೋ 15 ಆವಾಹನಭಿಷೇಕ ನೈವೇದ್ಯಾದಿ ಪೂಜೆದೇವಗಾರುತಿ ಶಂಖ ಭ್ರಮಣಾದಿ ಪೂಜೆಯೋ 16 ಸರ್ವವನರ್ಪಿಸಿ ಅಸ್ವಾತಂತ್ರ್ಯವ ಗ್ರಹಿಸಿಶರ್ವಾದಿ ವಂದ್ಯ ಬಿಂಬಗೆ ಸರ್ವ ಪೂಜೆಯೋ 17 ಸರ್ವಾಪರಾಧವ ಸರ್ವೇಶನಲಿ ಪೇಳಿವೈಶ್ವ ದೇವಾದಿಗಳ್ ಸತ್ಕರ್ಮಗಳೆ ಪೂಜೆಯೋ 18 ಯತಿಗಳರ್ಚನೆಯನ್ನು ಮತಿಯಿಂದ ಗೈಯುತ್ತಸುತ ವಿಪ್ರಾದಿಯ ಸಹ ಹುತಶೇಷ ಮೆಲ್ಲೋದೆ ಪೂಜೆಯೋ 19 ಪ್ರಾಣಾಗ್ನಿ ಹೋತ್ರಾನು ಸಂಧಾನದಲಿ ಮದ್ದುಪ್ರಾಣನ ಪ್ರಾಣ ವೈಶ್ವಾನರಗೀಯೋದೆ ಪೂಜೇ 20 ಅಂತರಂಗದ ಪೂಜೆಗೊಲಿದ ಸಂತತ ಹರಿಕಂತು ಪಿತನು ಗುರು ಗೋವಿಂದ ವಿಠಲಾ 21
--------------
ಗುರುಗೋವಿಂದವಿಠಲರು
ಬಲ್ಲೆ ಬಲ್ಲೆನು ಕೃಷ್ಣ ನಿನ್ನ ಮಹಿಮೇ ಪ ಗುಲ್ಲು ಮಾಡದೆ ಬೇಗ ನಿಲ್ಲೈಯ ಮನದಲಿ ಅ.ಪ ತಿರುಪೆ ಬೇಡಿದೆ ಯಾಕೆ ಪರಮ ಪುರುಷನು ಎನಿಸಿ ತುರುವ ಕಾಯ್ದೇಕೆ ಪರಿವಾರ ಸುರರಿರಲು ಕರಡಿಕಪಿಗಳ ಸೈನ್ಯ ನೆರವು ಯಾತಕೆ ನಿನಗೆ ಚರಿತೆ ಸೋಜಿಗವಯ್ಯಾ 1 ಅಷ್ಟಕರ್ತನಿಗೇಕೆ ಸಂತತವು ಜಪತಪವು ಪಟ್ಟ ಮಹಿಷಿಯರಿರಲು ಕುಬ್ಜೆಕೂಡಿದೆ ಯಾಕೆ ಉಟ್ಟು ಸೀರೆಯ ಖಳರ ವಂಚಿಸಿದ ಬಹು ಶೂರ ನಿಷ್ಟೆಯಿಂದಲಿ ಬಲಿಯ ಬಾಗಿಲನು ಕಾಯುವನೆ 2 ಬೆಣ್ಣೆ ಕಳ್ಳರ ಗುರುವೆ ಹೆಣ್ಣು ಕದ್ದವ ನೀನು ಮಣ್ಣು ಮಾಡಿದೆ ಕುಲವ ಯೆಂಜಲುಂಡವ ದೊರೆಯೆ ಅಣ್ಣ ತಮ್ಮಂದಿರಲಿ ಕಲಹವನು ವÀಡ್ಡುತಲಿ ನುಣ್ಣ ಗೆಲ್ಲರ ಮಾಡಿ ನಿಷ್ಕಪಟಿಯೆನಿಸಿದೆಯೊ 3 ಅನ್ಯರಿಗೆ ಉಪಕಾರಿ ಅನನ್ಯರಾ ಶತ್ರುವು ಭವ ಭ್ರಷ್ಟತ್ವ ನೀಡುವೆಯೊ ನಿನ್ನಾಳ ನಿಖಿಳರಿಗು ತೊರ್ಗೊಡದ ಬಹುಗೂಢ ಕಣ್ಣು ಕೈ ಕಾಲೆಲ್ಲ ಸಮವೇನೆ ನಿನಗಯ್ಯ 4 ದೊಡ್ಡ ದೇವನು ಎನಿಸಿ ಗುಡ್ಡವೇತಕೆ ಹೊಕ್ಕೆ ಗಿಡ್ಡರೂಪವ ತೋರಿ ದೊಡ್ಡದಾಗುತ ಎಂದು ಅಡ್ಡಿಯಿಲ್ಲದೆ ಬಲಿಯ ಹೆಡ್ಡನೆನಿಸಲು ಬಹುದೆ ಗುಡ್ಡೆಯಿಲ್ಲದೆ ಚರಿಪ ವಡಲು ಬಗೆದಾ ಘೋರ 5 ಪೂಡವಿಗೊಡೆಯನು ಎನಿಸಿ ಹಡೆದ ಮಾತೆಯ ಕಡಿದೆ ಅಡವಿ ಬೇರನು ತಿಂದೆ ಕಡಲೊಳಗೆ ಸಂಚರಿಪೆ ಮಡದಿಯನು ಕಳಕೊಂಡು ಹುಡುಕುತಲಿ ತಿರುಗಿದೆಯೋ ಸಡಗರದಿ ಹಯವೇರಿ ಕೆಡುಕು ಕಡಿಯುವೆಯಂತೆ 6 ನಾಮಕುಲಗೋತ್ರಗಳ ನೆಲೆಯಕಂಡವರಿಲ್ಲ ಸಾಮಸರಿ ನಿರ್ಗುಣವು ಪೂರ್ಣಗುಣ ನೀನಂತೆ ವಾಮನೀನಾವರಿಸಿ ವಳ ಹೊರಗೆ ಲೋಕಗಳ ನೇಮದಿಂ ಕಾಯುವನು ಪುಡುಕಿದರು ಸಿಗೆಯೇಕೇ 7 ಮಂಗಳಾಂಗನು ಅಂತೆ ಲಿಂಗವರ್ಜಿತನಂತೆ ಶೃಂಗಾರರಸನಂತೆ ಭಂಗರಹಿತನು ಅಂತೆ ಲಿಂಗವೆರಡೂ ಅಂತೆ ಸಿಸ್ಸಂಗ ನೀನಾಗಿ ಅಂಗದಲಿ ಅಂಗನೆಯ ಧರಿಸಿ ಮೆರೆಯುವೆಯೇಕೆ 8 ವೇದ ಬೋಧೆಯನಿತ್ತಗಾಧ ವರ್ಜಿತ ಮಹಿಮ ಮೋದ ಮಯ ನೀ ನಿನ್ನ ನಾದಿನಿಯ ಬೆರೆದೇಕೆ ಸಾಧುಗುಣಪೂರ್ಣ ಭಾನುವನು ಮರೆ ಮಾಡಿ ಮೈದುನನ ಸಲಹಿದ್ದು ಬಹುನ್ಯಾಯ ವೇನೈಯ್ಯ 9 ಹಾಲು ಕೊಟ್ಟವಳನ್ನು ಲೀಲೆಯಿಂದಲಿ ಕೊಂದೆ ಶೀಲಸತಿಯಳ ಬೆರದು ವ್ರತವಳಿದು ಪರವಿತ್ತೆ ಕಾಲನಾಮಕನಾಗಿ ಜಗವೆಲ್ಲ ನುಂಗುವನೆ ಹೇಳುವರು ಕೇಳುವರು ನಿನಗಿಲ್ಲವೇನೈಯ್ಯಾ 10 ಏನೆಂದು ವರ್ಣಿಸಲಿ ನಿನ್ನಯ ವಗತನವ ಸತಿ ಚಂಚಲೆಯು ಮಗಳ ಮಾರ್ಗವುಡೊಂಕು ಮಾನಾಭಿಮಾನಗಳ ಬಿಟ್ಟವರೆ ಪರಿವಾರ ನೀನಿರದಠಾವಿಲ್ಲ ನಿನಗಿಲ್ಲ ತುದಿಮೊದಲು 11 ಸರ್ವಜ್ಞನಾದವಗೆ ಸಾಂದೀಪ ಗುರುವೇಕೆ ಸರ್ವ ನಾಮವು ಕೂಡೆ ನಾಮಕರಣವು ಏಕೆ ಸರ್ವಸ್ವಾಮಿಯು ಎನಿಸಿ ಸಾರಥಿಯು ಆದೇಕೆ ಸರ್ವ ತೋಮುಖ ನೀನು ಜಗವಿಲಕ್ಷಣ ನೈಯ್ಯಾ12 ಒಬ್ಬರಲಿ ನೀಜನಿಸಿ ಮತ್ತೊಬ್ಬರಲಿ ನೀ ಬೆಳೆದೆ ತಬ್ಬಲಿಯೆ ವಾಸ್ತವದಿ ಉಬ್ಬಿಳಿತವರ್ಜಿತವೆ ಅಬ್ಬಬ್ಬ ಬ್ರಹ್ಮಾಂಡ ಹಬ್ಬಿ ನಡೆಸುವ ಧೀರ ಕೊಬ್ಬಿದಾ ಖಳಗಂಜಿ ಮಧುರೆಯನು ತೊರೆದೇಕೊ 13 ಮೇದಿನಿಗೆ ನೀ ಸ್ವಾಮಿ ಮದುವಾದೆ ಮಗಳನ್ನು ಬೈದವಗೆ ಗತಿಯಿತ್ತೆ ಭಕ್ತರಿಗೆ ಕೂಳಿಲ್ಲ ಮೋದ ಮಯ ನುಂಡುಣಿಸಿ ನಿರ್ಲೇಪನೀ ನಿರ್ಪೆ ವಿದುರ ನೌತಣ ಕೊಂಡೆ ಕನ್ಯೆಯಲಿ ನೀ ಬಂದೆ 14 ಜಯ ಮುನಿ ಹೃದಯದಲಿ ವಾಯುವಿನಂತರ ದಿರ್ಪ ಶ್ರೀಯರಸ ತಾಂಡವ ಕೃಷ್ಣವಿಠಲನೆ ನೀನು ಮಾಯಾವಿ ತೋರಗೊಡೆ ನಿಜಮರ್ಮಖಳಜನಕೆ ಜೀಯನೆ ಮೊರೆಹೊಕ್ಕೆ ನಿನ್ನಿರವ ತೋರೈಯ್ಯಾ 15
--------------
ಕೃಷ್ಣವಿಠಲದಾಸರು
ಬಿಡೋ ಬಿಡು ಮನುಜ ಭ್ರಾಂತಿಯ ಪಡಕೊ ನಿನ್ನೊಳು ತಿಳಿಯುವ್ಹಾಂಗ ಸದ್ಗುರು ಭಕ್ತಿಯ ಧ್ರುವ ಬುಡದಲಿ ಫಲವಿರಲಿಕ್ಕೆ ಅಡರುವದ್ಯಾಕೊ ತುದಿಗೆ ಪಡಬ್ಯಾಡೋ ನಾನಾ ಸಾಯಾಸ ತೊಡಕಿ ಬೀಳುವ 1 ಕಾಶಿಗೆ ಹೋಗಬೇಕೆಂದು ಕಾಸಿನ ಚಾಲವರಿಕ್ಯಾಕ ಆಸಿ ಅಳಿದರೊಂದೇ ಸಾಕು ಭಾಸುದು ತನ್ನೊಳಗೆ 2 ದೇವರೆ ತಾ ದೂರಿದ್ದರೆ ಆವದೊ ನಿನ್ನ ಕಾವ ದೈವ ಠಾವಿಕಿ ಮಾಡಿಕೊಳ್ಳೊ ಸಾವಧ ವಾಗಿ 3 ಹೇಳಿಕೊಡುವ ಸ್ವಾಮಿ ಬೆಳಗ ತಾ ಝಾಡಿ 4 ಸಾಯಾಸವಿಲ್ಲದೆ ಮಹಿಪತಿಗೆ ಶ್ರಯದೋರಿತು ಗುರುವಾಕ್ಯದಲಿ ಆಯಿತು ಮಾಡಿದ ಗುರು ತಾಯಿತಂದೆನಗೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬೀದಿಯೊಳು ಯಾತರಾ ನಂಟು ಬೇಡ ದಮ್ಮಯ್ಯ ಪ ಭೇದಿಸಿ ನೋಡುವರುಂಟು ಬೆಂಬತ್ತಿ ಬಾರದಿರಯ್ಯ ಅ ಕಂಡ ಕಂಡ ಠಾವಿನಲಿ ಕಣ್ಣೆತ್ತಿ ನೋಡದಿರಯ್ಯಕಂಡಿಯೊಳು ಕೈಸನ್ನೆ ಮಾಡದಿರಯ್ಯಗಂಡನುಳ್ಳವಳ ಜೊತೆ ಭಂಡಾಟವ್ಯಾಕಯ್ಯಕೊಂಡೆಗಾತಿಯರುಂಟು ದುಡುಕದಿರಯ್ಯ 1 ಬೇಳುವೆಯ ಮಾತಾಡಿ ಗಾಳ ಹಾಕದಿರಯ್ಯಬಾಳೆ ಹಣ್ಣಿಗೆ ಕೊಡಲಿ ಬೇಕೆ ದಮ್ಮಯ್ಯಆಳುವ ಅರಸಾಗಿ ನಿನಗಾವ ಬರವಯ್ಯಮೇಳದವರ ಬಿಟ್ಟು ಮೇರೆದಪ್ಪುವರೇನಯ್ಯ 2 ನೋಡುವರು ಜನರೆಲ್ಲ ನಾಚಿಕೆ ಇಲ್ಲವೇನಯ್ಯಜೋಡು ಕಳಸವ ಹಿಡಿಯದಿರು ಜೋಕೆ ದಮ್ಮಯ್ಯಮಾಡುವ ದೈನ್ಯ ಬಲ್ಲೆ ಮದ್ದೂರು ನರಸಿಂಹಯ್ಯಕೂಡಿದ ಕನಕನಾದಿಕೇಶವ ನೀನಹುದಯ್ಯ 3
--------------
ಕನಕದಾಸ
ಬೇಡಧ್ಯಾನಿಸಿ ನೋಡು ಪ ಭವ ಮುಳುಗಿ ನೀನಾರು ಅಲ್ಲಿ ತಂದೆ ತಾಯಿಗಳು ಮತ್ತವರಾರು ಅಂದಿನವನಿತೆಯಾಗಿಗಳಾರು ನಿನ್ನ ನಂದನರೆನಿಸಿ ಬಂದವ ರಾರೋ 1 ಮುನ್ನ ಮಾಡಿದ ಹೊಲಮನೆಯೆಲ್ಲ ನಿನ್ನ ಬೆನ್ನು ಬಂದಗ್ರಜಾನುಜರೆಲ್ಲ ಚೊಕ್ಕ ಚಿನ್ನ ಚಿಗುರು ಬೆಳ್ಳಿ ನಗವೆಲ್ಲಿ ಪಶು ಹೊನ್ನು ಕನಕ ಮಿತ್ರ ಜನರೆಲ್ಲ 2 ಇಂದಿನ ಭವದೊಳು ನಿನಗೆಲ್ಲಿ ಈಗ ಬಂದು ಕೊಡಿದ ಸಂಸಾರವೆಲ್ಲಿ ಮುಂದೆ ಹೊಂದಿ ಹುಟ್ಟುವ ಠಾವುಗಳೆಲ್ಲ ಅಲ್ಲಿ ಬಂಧು ಬಳಗ ನೆರೆದಿಹುದೆಲ್ಲ 3 ಹಲಬರ ನೆರವಿಯ ದೇಹವಿದು ಹೊಳೆ ಚಳಿಕ ತನ್ನಯ ಈ ಋಣ ತೀರುವುದು ಎಲ್ಲ ಬಯಲಿಗೆ ಬಯಲಾಗಿ ಹೋಗುವುದು 4 ಸಾರವಿಲ್ಲದ ಸಂಸಾರವಿದು ನಿ ಪರ ಕೆಡುತಿಹುದು ಈ ಘೋರವನುಳಿದು ನಿರ್ಮಲನಹುದು ಲಕ್ಷ್ಮೀ ಪಾದ ಕೊಡುವುದು5
--------------
ಕವಿ ಪರಮದೇವದಾಸರು
ಭವ ನಿಂದುದಗಣಿತ ಕರ್ಮವೆಂದು ನಿನ್ನವನೆನಿಪುದೊ ಹರಿಯೇ ಅ.ಪಸೂಸುತಿದೆಯಜ್ಞಾನ ಮಾಸುತಿದೆ ಸುಜ್ಞಾನದೋಷಗಳು ಬಹುವಾಗಿವೆ ಹರಿಯೇಆಶೆಯೆಂಬುದಕಂತವಿಲ್ಲ ಬಹುಬಗೆ ತರದಪಾಶದಲಿ ಬಿಗಿವಡೆದೆನೋ ಹರಿಯೇಈಶ ನಿನ್ನಯ ಮಾಯೆಯೆಂಬ ಬಲು ಹುರಿ ಬಲೆಯುಬೀಸಿ ಸೋವುತ್ತಲಿದೆಕೋ ಹರಿಯೇಕ್ಲೇಶಸಾಗರದಲ್ಲಿ ಮುಳುಗಿ ತಡಿಯನು ಕಾಣೆವಾಸುದೇವ ಕಡೆಹಾುಸೋ ಹರಿಯೇ 1ಆವರಣ ವಿಕ್ಷೇಪವೆಂದೊಂದು ಶಕ್ತಿ ತಾನಾವರಿಸಿ ಬ್ರಹ್ಮಾಂಡವ ಹರಿಯೇತೀವಿಕೊಂಡೊಳಹೊರಗೆ ವಿಕ್ಷೇಪ ಶಕ್ತಿ ತಾಜೀವಕೋಟಿಗಳ ಸೃಜಿಸಿ ಹರಿಯೇಠಾವುಗಾಣದ ತೆರದಿ ಬಹುವಿಧದ ಕರ್ಮದಲಿಜೀವರನು ಬಂಧಿಸಿಹುದು ಹರಿಯೇಈ ವಿಧದ ಮಾಯೆ ತಾ ಯೋಗಿಗಳಿಗಸದಳವುದೇವ ಕೃಪೆಮಾಡಿ ಸಲಹೋ ಹರಿಯೇ 2ಮೂರು ಗುಣ ಮೂಲದಲಿ ಮೂರು ಕರ್ಮಗಳುದಿಸಿಮೂರಾರು ಕವಲಾದುದೋ ಹರಿಯೇಸಾರಿ ವೃಕ್ಷವ ಬಳ್ಳಿ ಮೀರಿ ಮುಸುಕಿದ ತೆರದಿತೋರದಿದೆ ನಿನ್ನ ನಿಜವ ಹರಿಯೇಬೇರುವರಿದಿಹ ಕರ್ಮಲತೆಯ ಜಾರಿಸಿ ಗುಣವಮೀರುವ ಉಪಾಯವೆಂತೋ ಹರಿಯೇಸೇರಿದೆನು ನಿನ್ನ ಚರಣವನು ವೆಂಕಟರಮಣದಾರಿಯನು ತೋರಿ ಸಲಹೋ ಹರಿಯೇ 3ಕಂ||ಗುರುವಾರದರ್ಚನೆಯನಿದಗುರುವಾಗಿಯೆ ಪೇಳ್ದೆ ನೀನೆ ಮೂಢನ ಸಲಹಲ್‍ಗುರುಸೇವೆಯೆಂತೊ ತಿಳಿಯದುಗುರುವರ ಸಂಗತಿಯನರಿಯೆ ನೀನೇ ಗತಿಯೈಓಂ ದಾಮೋದರಾಯ ನಮಃ
--------------
ತಿಮ್ಮಪ್ಪದಾಸರು
ಭಾವಭಕ್ತಿಗೊಲಿವ ತಾಂ ಶ್ರೀಹರಿ ಕಾವ ಕರುಣದಲಿ ಪರೋಪರಿ ಧ್ರುವ ಕಂದ ಪ್ರಹ್ಲಾದನ ಸದ್ಭಾವಕಾಗಿ ಸಂಧಿಸೊದಗಿ ಬಂದ ನರಸಿಂಹನಾಗಿ ತಂದೆ ತಾಯಿ ಬಂಧು ಸಮಸ್ತವಾಗಿ ಬಂದು ರಕ್ಷಿಸಿದ ಪ್ರತ್ಯಕ್ಷವಾಗಿ 1 ಭಾವದಿಂದ ದ್ರೌಪದಿಗಾಗ್ಯಧ್ಯಕ್ಷ ಠಾವಠಾವಿಲಿ ಕಾಯಿದೆ ಪ್ರತ್ಯಕ್ಷ ಭುವನದೊಳಾಗಿ ಪಾಂಡವಪಕ್ಷ ಜೀವ ಪ್ರಾಣಾಗಿ ಮಾಡಿದ ಸಂರಕ್ಷ 2 ಭಾವದಿಂದಾಗುವ ಭಕ್ತರಾಧೀನ ದೇವೋತ್ತಮದ ಬಿಟ್ಟು ಹಿರಿಯತನ ದಾವದೊಂದೇಕಾಗಿ ತಾಂ ಸಾವಧಾನ ಈವ್ಹಾಭಕ್ತರ ಮನಿಲ್ಯನುದಿನ 3 ಭಾವದಿಂದುದಿಸುವ ಸ್ವಯಂಭಾನು ಭಾವಿಕರಿಗಾಗುವ ಶ್ರಯಧೇನು ಭಾವದಿಂದಾಗುವ ಸಫಲ ತಾನು ಭಾವದಿಂದ ಭಾವ ಪೂರಿಸಿದನು 4 ಭಾವವೆಂಬಂಜನ ಕಣ್ಣಿಲೂಡಿ ಭಾವದಲುಂಬುದನು ಒಡಮೂಡಿ ಭಾವದಿಂದ ಮಹಿಪತಿ ಕೈಯಗೂಡಿ ಜೀವ ಪಾವನ್ನಗೈಸÀುತಿಹ್ಯ ನೋಡಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು