ಒಟ್ಟು 18 ಕಡೆಗಳಲ್ಲಿ , 9 ದಾಸರು , 17 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಭಜನೆ ಮಾಡುವಗೆ ಅನಂತಫಲವೂ ಹರಿ ಭಜನೆ ಇಲ್ಲದವಗೆ ಅತಿಘೋರ ತಮವೂ ಪ ಭವರೋಗ ಸಂಚಿತವು ಪರಿ ಪರಿಯ ನರಕಾದಿ ಬಂಧಕವು ಬಿಡದು 1 ಆ ರಾಮನಂಘ್ರಿಗಳ ಅರ್ತಿಯಲಿ ಅರ್ಚಿಸುವರಿ ಗಾರಾಮವಾದಂಥ ಸುಖಸೌಖ್ಯವು ಹೇರಾಮ ಎನದವಗೆ ಅತಿ ದು:ಖದಾರಿದ್ರ್ಯ ತೋರುವುದು ಅನುಗಾಲ ತಗಲಿ ಬಿಡದವೆಯಿನ್ನು 2 ವಿತರಣಾದಿ ಶ್ರೀ ಹೆನ್ನೆವಿಠ್ಠಲನ ಹೃದಯದಲಿ ಸತತಧ್ಯಾನವು ಮಾಡುವ ಸಾಧು ಜನರಾ ಪತಿತ ಪಾವನನಾದ ಪರಮಾತ್ಮ ಪಾಲಿಸೆ ಗತಿಯು ತೋರುವ ಇನ್ನು ಕರುಣದಲಿ ಹರಿಯು 3
--------------
ಹೆನ್ನೆರಂಗದಾಸರು
ಬಂದೆಯಾ ಬಾರೊ ಗೋಪಾಲ ಕೃಷ್ಣಬಂದೆಯಾ ಬಾರೊ ಪ.ಇಲ್ಲಿಯ ಗೊಲ್ಲತೇರೆಲ್ಲರುಬಲ್ಲಿದಕಾಮುಕ ನಲ್ಲೇರುಫುಲ್ಲಲೋಚನ ನಿನ್ನ ಮುದ್ದಿನ ಮೊಗವಮೆಲ್ಲನೆ ಚುಂಬಿಸಿ ಬಿಡರೊ ಮಗುವೆ 1ಚಿಕ್ಕವನೆಂದಾಡಿಸಿ ನಿನ್ನಚಕ್ಕಂದಿಲಿ ಬಾಡಿಸಿ ಚಿನ್ನಸಕ್ಕರೆ ಮಾತಲಿ ಬಿಗಿದಪ್ಪುವರೊಕಕ್ಕಸಕುಚದಂಗನೆ ಗೋಪಿಯರೊ 2ಇರುಳ್ಹಗಲೆನ್ನ ಕಂದನ್ನಮರುಳಿಕ್ಕುವರೆಂದಂಜುವೆ ನಾತರಳನ ಕಾಲಿಂಗೆರಗುವೆ ನೋಡೋತರಳೇರೊಡಗೂಡಾಡಲಿ ಬೇಡೊ 3ನಿಲ್ಲದೆ ನಿನ್ನ ಬರಮಾಡುವರೊಚೆಲ್ವಹ ಹಣ್ಣುಗಳ ನೀಡುವರೊಒಳ್ಳೆ ನಾರೇರನುದಿನ ನಿನ್ನಬುಲ್ಲಿ ಬೆಲ್ಲಕೆ ಮನಸೋತಿಹರಣ್ಣ 4ವಿಗಡೇರ ದೃಷ್ಟ್ಯಾಗಲೆತಗಲಿದವೈ ನಿನ್ನ ಮೈಯಲಿಅಗಲದಿರೆನ್ನ ಪ್ರಸನ್ನವೆಂಕಟನಗಪತಿ ಬಡವರ ಧನವೆ ಕೃಷ್ಣ 5
--------------
ಪ್ರಸನ್ನವೆಂಕಟದಾಸರು