ಒಟ್ಟು 48 ಕಡೆಗಳಲ್ಲಿ , 28 ದಾಸರು , 45 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯ ಕೊಲ್ಹಾಪುರ ನಿಲಯೇಶ್ರೀನಿವಾಸನ ಸತಿಯೇ ಸಾಗರರಾಜನ ಸುತೆಯೇನಾರಿಯರೆಲ್ಲದು ಕೂಡಿ ಆರತಿ ಬೆಳಗುವೆವು ಪ ಬಿಳಿಯ ಪತ್ತಲವುಟ್ಟು ಕಡಗ ಕಂಕಣ ತೊಟ್ಟುಜಡೆಗೆ ಮಲ್ಲೆಯ ಮಾಲೆ ಮುಡಿದಾ ವರಮಹಾಲಕ್ಷ್ಮಿಗೆ 1 ಮರುಗ ಮಲ್ಲಿಗೆ ಜಾಜಿ ಪಾರಿಜಾತದ ಕುಸುಮಸಿರಿಯ ಚರಣಕೆ ಅರ್ಪಿಸಲೆಂದು ಜಯ ಜಯ ಜಯ 2 ಬಡವರಾ ಮನೆತನಕೆ ಅಭಿಮಾನವನ್ನಿಟ್ಟುನಿರುತ ಕಳಶದಿ ಕುಳಿತ ಮಹಾಲಕ್ಷ್ಮೀಗೆ ಹಾಡುತ ಪಾಡುವೆವು 3 ಇಂದು ನಮ್ಮ ಸದನಕ್ಕೆ ಬಾ ಎಂದುಗದುಗಿನ ವೀರನಾರಾಯಣನ ಅರಸಿಗೆ ಹಾಡುತ ಪಾಡುವೆವು 4
--------------
ವೀರನಾರಾಯಣ
ದನವ ಕಾಯ್ವೊನೆ ದೈನ್ಯ ಬಡುವವನೆ ವನಜಭವಾಂಡಕೆ ಒಡೆಯನಾಗೆಂದರೆಒಲ್ಲದೆ ವನವನ ತಿರುಗಿದನಮ್ಮ ನೋಡಮ್ಮಯ್ಯ ಪ. ದನಗಾಹಿ ಎಂದರೆ ಎನಗೇನು ಸಂಶಯವಿಲ್ಲಜನರೆಲ್ಲ ಬಲ್ಲರು ಈ ಮಾತು ಜನರೆಲ್ಲ ಬಲ್ಲರು ಈ ಮಾತು ಭಾವಯ್ಯನೆನಪಿಸಿ ಕೊಟ್ಟೆಲ್ಲೊ ಮರೆತಿದ್ದೆ 1 ಗೋಪಾಲ ಶಬ್ದಾರ್ಥ ನೀ ಕೇಳಿಶ್ರೀ ಕೃಷ್ಣ ಕೋಪವಿನ್ಯಾಕೊ ಎನಮ್ಯಾಲೆ ಕೋಪ ವಿನ್ಯಾಕೊ ಎನ ಮ್ಯಾಲೆ ಭಾವಯ್ಯನೀ ಪೇಳಿಕೊಂಡ್ಯೊ ನಿಷ್ಕಪಟಿ 2 ಕುದುರೆಯ ಮಾರಿಯ ಹೂವು ಗಣ್ಣಿನ ವರನಿಗೆ ಮದಗಜಗಮನೆ ಮನಸೋತುಮದಗಜಗಮನೆ ಮನಸೋತು ಮ್ಯಾಲಿನ್ನುಬದಲು ಮಾತಾಡಿ ಫಲವೇನೊ3 ನಾರುವ ಮೈಯವ ನೀರೊಳು ಅಡಗಿದ ಹಂದಿ ಮೈಯವನೆ ಮಹಾಕೋಪಿಹಂದಿ ಮೈಯವನೆ ಮಹಾಕೋಪಿ ತಿರುತಿಂಬೊಹಾರುವನ ಗೊಡವೆ ನಮಗ್ಯಾಕೊ 4 ಕೊಡಲಿಯ ಪಿಡಕೊಂಡ ಪಡೆದಮಾತೆಯಕೊಂದೆ ಒಡಲಿಗಿಕ್ಕದಲೆ ಮಡದಿಯಒಡಲಿಗಿಕ್ಕದಲೆ ಮಡದಿಯ ಕೊಂಡೊಯ್ದುಅಡವಿಗಟ್ಟಿದ ಮಹಾ ಮಹಿಮನೆ5 ಜಾರ ಚೋರನೆಂದು ಜಗದೊಳು ಹೆಸರಾದಿಅಪಾರವಾದ ವನಿತೆಯರುಅಪಾರವಾದ ವನಿತೆಯರ ಒಗೆತನಕೆನೀರು ತಂದಿದ್ದ ಮಹಾಮಹಿಮನೆ 6 ಭಂಡ ಗಾರನಂತೆ ದೇಹ ಕಂಡಜನಕೆಲ್ಲತೋರಿ ಪುಂಡಗಾರನಂತೆ ಹಯವೇರಿಪುಂಡಗಾರನಂತೆ ಹಯವೇರಿ ಹಾರಿಸುವ ಲೆಂಡ ರಾಮೇಶನ ಅರಿವೆನೊ7
--------------
ಗಲಗಲಿಅವ್ವನವರು
ದಾಸರೆಂದು ಕರೆದ ಮಾತ್ರದಿ | ಈಗ ಎಮ್ಮ ದೋಷರಾಶಿ ನಾಶವಾಯಿತು ಪ. ಶ್ರೀಶ ತಾನು ಗುರುಗಳಿಂದ ಈ ಶರೀರಕೀ ಜನ್ಮದಲಿ ದಾಸತನದ ಪೆಸರನಿಟ್ಟು ವಾಸುದೇವ ಕಾಯ್ದ ಎನ್ನ ಅ.ಪ. ಏಸು ಜನ್ಮ ಯತ್ನ ಗೈಯ್ಯಲು | ಭೃತ್ಯಭಾವ ಪಾಶ ದುರ್ಲಭವು ಸುಜನಕೆ ಶ್ರೀಶನನುಗ್ರಹದ ಬಲದಿ ಈಸು ನಾಮ ದೊರೆಯಬೇಕು ಆಶಪಾಶ ತೊಲಗಿ ಭವ ಕ್ಲೇಶ ಕೊನೆಗಾಣಿಸುವುದು 1 ಪಂಡಿತನೆಂದೆನಿಸಿ ಮೆರೆಯಲು | ಜಗದೊಳಗೆ ಕಂಡಮಾತ್ರ ಗರ್ವ ಕಾರಣ ಮಂಡೆಬಾಗಿ ಹರಿಗೆ ನಿನ್ನ ತೊಂಡನೆಂದು ನಮಿಸೆ ನಲಿದು ಪುಂಡರಿಕಾಕ್ಷ ತಾನು ತಂಡ ತಂಡ ಪಾಪ ಕಳೆವ 2 ಹರಿಯದಾಸರೆಂದು ಎನಿಸಲು | ಧರೆಯೊಳಗೆ ಸುರರು ಬಯಸಿ ಬರುತಲಿಪ್ಪರು ಸರ್ವದೇವತೆಗಳು ಬಂದು ಹರಿಯದಾಸರೆನಿಸಿ ಮೆರೆದು ಪರಿಪರಿಯ ತತ್ವ ತಿಳುಹಿ ಹರಿಯ ಪುರಕೆ ತೆರಳಲಿಲ್ಲೆ 3 ದಾಸತನಕೆ ಅಧಿಕವಿಲ್ಲವು | ಸಾಧನವು ದಾಸತನವು ಗರ್ವವಳಿವಳಿವುದು ದಾಸ ದಾಸ ದಾಸ ನಿನಗೆ ವಾಸುದೇವ ಸಲಹೊ ಎನಲು ದೋಷನಾಶಗೈಸಿ ಹರಿಯು ದಾಸ ಜನರ ಕಾಯ್ದ ದಯದಿ 4 ಅಷ್ಟು ಭಾಗ್ಯಕಧಿಕ ಲಾಭವು | ದಾಸತನವು ಶ್ರೇಷ್ಠ ಗುರುಗಳಿಂದ ದೊರಕಿತು ಇಷ್ಟವೆನಗೆ ದಾಸಪೆಸರು ಶಿಷ್ಟರೆಲ್ಲ ಕರೆಯಲೀಗ ತುಷ್ಟಿಪಡುವೆ ಶ್ರೀ ಗೋಪಾಲ-ಕೃಷ್ಣವಿಠಲ ಸಲಹೊ ಎಂದು 5
--------------
ಅಂಬಾಬಾಯಿ
ಧ್ಯಾನವನು ಮಾಡು ಬಿಂಬ ಮೂರುತಿಯಪ ಆನಂದದಲಿ ಕುಳಿತು ಅಂತರಂಗದಲಿ ಅ.ಪ ಸದಾಚಾರನಾಗಿ ದ್ವಾದಶಗುರುಗಳಿಗೆರಗಿ ಮುದದಿಂದ ಮೂಲಮಂತ್ರವನು ಜಪಿಸಿ ಸದಮಲ ಭಕುತಿಯಲಿ ದೇಹಸ್ಥಿತಿಯನೆ ತಿಳಿದು ಪದಮಾಸನವ ಹಾಕಿ ಪರಮ ವಿಶ್ವಾಸದಲಿ1 ಅಂಗವನು ಚಲಿಸದೆ ಚೆನ್ನಾಗಿ ದೃಢವಾಗಿ ಕಂಗಳನೆ ಮುಚ್ಚಿ ಇಂದ್ರಿಯಗಳನೆ ತೆರೆದು ಮಂಗಳ ಶೋಭಿತ ಅಖಂಡ ಧ್ಯಾನದಂತ ರಂಗದೊಳಗೆ ನಿಲಿಸಿ ಎಲ್ಲವನು ಕಾಣೊ 2 ಭಗವದ್ರೂಪಗಳೆಲ್ಲ ಒಂದು ಬಾರಿ ಸ್ಮರಿಸಿ ಮಗುಳೆ ಪರಮ ಗುರುವಿನ ಮೂರ್ತಿಗೆ ತೆಗೆದು ಆಹ್ವಾನಮಾಡಿ ಅಲ್ಲಿಂದ ಹರುಷದಿ ಸ್ವಗುರು ಬಿಂಬಮೂರ್ತಿಯಲಿ ಐಕ್ಯವನೆ ಮಾಡು3 ತಿರುಗಿ ಮೆಟ್ಟಿಕೆ ಮೂರು ವೇಗದಿಂದಲಿ ನಿನ್ನ ಲ್ಲಿರುವ ಮೂರ್ತಿಯಲ್ಲಿ ಚಿಂತನೆಯ ಮಾಡೊ ಭರದಿಂದ ಎಲ್ಲವನು ತಂದು ಹೃದಯದಲ್ಲಿ ಸ್ಥಿರವಾಗಿ ಇಪ್ಪ ಮೂರುತಿಯೊಡನೆ ಕಲೆಸು 4 ಆತನೆ ಬಿಂಬ ಮೂರುತಿಯೆಂದು ತಿಳಿದುಕೊ ಆ ತರುವಾಯ ನಾಡಿಗಳ ಗ್ರಹಿಸಿ ಆ ತೈಜಸನ ತಂದು ವಿಶ್ವಮೂರ್ತಿಯಲ್ಲಿ ಪ್ರೀತಿಯುಳ್ಳವನಾಗಿ ಪತಿಕರಿಸು ಮರುಳೆ 5 ಜ್ಞಾನ ಪ್ರಕಾಶದಲಿ ಇದ್ದು ನಿನ್ನ ಹೃದಯ ಕಮಲ ಮಧ್ಯ ಮೂರ್ತಿ ನಿಲ್ಲಿಸಿ ಬಾಹ್ಯದಲಿ ಏನೇನು ಪೂಜೆಯನು ಉಳ್ಳದನು ಮಾಡೊ6 ಗುಣ ನಾಲ್ಕರಿಂದಲಿ ಉಪಾಸನವನೆ ಮಾಡು ಕ್ಷಣ ಕ್ಷಣಕೆ ಹರಿಪಾದವನು ನೋಡುತ ಅಣುರೇಣು ಚೇತನಾಚೇತನಕೆ ನೇಮಕ ಫಣಿಶಯನನಲ್ಲದೆ ಮತ್ತೊಬ್ಬರಿಲ್ಲವೆಂದು 7 ಮಮತೆಯನು ತೊರೆದು ಮೇಲೊಂದಪೇಕ್ಷಿಸದೆ ಸಮ ವಿಷಮ ತಿಳಿದೊಂದೆ ಭಕುತಿಯಲ್ಲಿ ಸ-ಮಾಧಿಗೊಳಗಾಗಿ ದಿವ್ಯ ದೃಷ್ಟಿಲಿ ಸರ್ವ ಕ್ರಮ ಅನುಕ್ರಮದಿಂದ ಭರಿತಭಾವುಕನಾಗೊ 8 ಪರಿ ಧೇನಿಸಲು ದೇವ ಕರುಣನ ಮಾಡೆ ಪಾಪ ಸಂಚಿತವು ಪ್ರಾರಬ್ಧ ನಾಶ ಅಪರೋಕ್ಷಿತನಾಗಿ ತನ್ನ ಯೋಗ್ಯತದಷ್ಟು ಗೋಪಾಲ ವಿಜಯವಿಠ್ಠಲನೊಲಿವನಾಗ9
--------------
ವಿಜಯದಾಸ
ನಮೋ ನಮಸ್ತೇ ನರಸಿಂಹ ದೇವಾ ಸ್ಮರಿಸುವವರ ಕಾವಾ ಪ ಸುಮಹಾತ್ಮ ನಿನೆಗೆಣೆ ಲೋಕದೊಳಾವಾ ತ್ರಿಭುವನ ಸಂಜೀವಾ ಉಮೆಯರಸನ ಹೃತ್ಕಮಲದ್ಯುಮಣಿ ಮಾ ರಮಣ ಕನಕ ಸಂಯಮಿ ವರವರದಾ ಅ ಕ್ಷೇತ್ರಜ್ಞ ಕ್ಷೇಮಧಾಮ ಭೂಮಾ ದಾನವ ಕುಲಭೀಮಾ ಸನ್ನುತ ಬ್ರಹ್ಮಾದಿ ಸ್ತೋಮಾ ಸನ್ಮಂಗಳ ನಾಮಾ ಚಿತ್ರ ಮಹಿಮನಕ್ಷತ್ರನೇಮಿಸ ರ್ವತ್ರಮಿತ್ರ ಸುಚರಿತ್ರ ಪವಿತ್ರ 1 ಅಪರಾಜಿತ ಅನಘ ಅನಿರ್ವಿಣ್ಣ ಲೋಕೈಕ ಶರಣ್ಯ ಶಫರಕೇತು ಕೋಟಿಲಾವಣ್ಯ ದೈತ್ಯೇಂದ್ರ ಹಿರಣ್ಯಕ ಶಿಪುಸುತನ ಕಾಯ್ದಪೆನೆನುತಲಿ ನಿ ಷ್ಕಪಟ ಮನುಜಹರಿವಪುಷ ನೀನಾದೆ 2 ತಪನ ಕೋಟಿ ಪ್ರಭಾವ ಶರೀರಾ ದುರಿತೌಘವಿದೂರಾ ಪ್ರಪಿತಾಮಹ ಮಂದಾರ ಖಳವಿಪಿನ ಕುಠಾರಾ ಕೃಪಣಬಂಧು ತವ ನಿಪುಣತನಕೆ ನಾ ನುಪಮೆಗಾಣೆ ಕಾಶ್ಯಪಿವರವಾಹನಾ 3 ವೇದವೇದಾಂಗವೇದ್ಯಾ ಸಾಧ್ಯ ಅಸಾಧ್ಯ ಶ್ರೀದ ಮುಕ್ತಾಮುಕ್ತರಾರಾಧ್ಯಾ ಅನವದ್ಯ ಮೋದಮಯನೆ ಪ್ರಹ್ಲಾದವರದ ನಿ ತ್ಯೋದಯ ಮಂಗಳ ಪಾದಕಮಲಕೆ 4 ಅನಿಮಿತ್ತ ಬಂಧು ಜಗನ್ನಾಥ ವಿಠಲ ಸಾಂಪ್ರತ ನಿನಗೆ ಬಿನ್ನೈಸುವೆ ಎನ್ನಯ ಮಾತಾ ಲಾಲಿಸುವುದು ತಾತಾ ಗಣನೆಯಿಲ್ಲದವ ಗುಣವೆನಿಸಿದೆ ಪ್ರತಿ ಕ್ಷಣಕೆ ಕಥಾಮೃತ ಉಣಿಸು ಕರುಣದಿ 5
--------------
ಜಗನ್ನಾಥದಾಸರು
ನಾರಿಯರಲಿ ಮಾದರಿಯೆಂದೆನಿಸಿರಮ್ಮ ಮೂರುಕುಲಕೆ ಕೀರುತಿಯನು ತನ್ನಿರಮ್ಮ ಸೇರಿದ ಪತಿಮಂದಿರವನುದ್ಧರಿಸಿರಮ್ಮ ಬೇರೆ ಜನಕೆ ಸೋದರಿಯೆಂದರಿಯಿರಮ್ಮ ಅಬಲೆಯರಿರಬಹುದು ದೇಹ ಶಕುತಿಯಲಿ ಪ್ರಬಲಸ್ಥಾನ ನಿಮಗಿಹುದು ಸಮಾಜದಲ್ಲಿ ಶುಭಪರಂಪರೆಗಳ ಪತಿಗೆ ಕೋರಿರಮ್ಮ ಲಭಿಸುವುದತಿಸುಲಭದಿ ಪರಲೋಕವಮ್ಮ ಗೃಹಿಣಿಯೇ ಗೃಹವೆಂಬ ಮಾತನರಿಯಿರಮ್ಮ ಗಹನದ ಸಂಸಾರಪಥವ ಜರಿಯಬೇಡಿರಿ 10 ವಹಿಸಿರಿ ಗೃಹಕೃತ್ಯಗಳನು ಆದರದಲ್ಲಿ ಸಹಿಸಿರಿ ಸುಖದು:ಖಗಳನು ಖೇದವಿಲ್ಲದೆ ಶ್ರದ್ಧೆಯಿರಲಿ ಗೃಹಿಣಿಯ ಕಾರ್ಯದಲಿ ಸರ್ವದ ಸ್ಪರ್ಧೆಯ ಮಾಡಬೇಡಿ ಪುರುಷಗುಚಿತ ಕಾರ್ಯದಿ ತಿದ್ದಿರಮ್ಮ ವಿನಯದಿಂದ ಪತಿಯ ದೋಷವÀ ಹದ್ದಿನಂತೆ ಕಾಯಿರಮ್ಮ ಪತಿಯ ಶ್ರೇಯವ ದೈವದತ್ತವಿಹುದು ನಿಮ್ಮ ಮುಖದ ಕಾಂತಿಯು ಸೇರಿಸಿ ಫಲವೇನು ವಿವಿಧ ಸುಣ್ಣಬಣ್ಣವ ಹೂವುಗಳನು ಕಸಕಲದರ ಗಂಧವಿರುವುದೆ ಯಾವ ಕೃತಕ ಬೇಕಿದೆ ಸ್ವಭಾವ ಶೋಭೆಗೆ 20 ಅನುಗಾಲವು ಊರಿಗೆ ಉಪಕಾರಿಯಾದರು ಮನೆಗೆ ಮಾರಿಯಾಗಬೇಡಿರಮ್ಮ ಎಂದಿಗು ವಿನಯವಿರಲಿ ನಡೆನುಡಿಯಲಿ ಸರ್ವ ಜನರಲು ಪ್ರಣಯ ಸರಸ ಬೇಡಿರಮ್ಮ ಬಂಧು ಜನರಲಿ ದುಡಿದು ದಣಿದು ಉಶ್ಶೆನುತಲಿ ಬರುವ ಪತಿಯಲಿ ಕಿಡಿಕಿಡಿಯಾಗಲಿ ಬೇಡಿರಿ ತರಲು ಮರೆತರೆ ಬಡತನವಿರಬಹುದು ಸದ್ಯ ನಿಮ್ಮ ಪಾಲಿಗೆ ಅಡಿಗಡಿಗದನಾಡಬೇಡಿ ಒಡೆಯನೆದುರಲಿ ನೆರೆಮನೆ ವೆಂಕಮ್ಮನೊಂದು ಸೀರೆ ಕೊಂಡರೆ ಗುರು ಗುರುಗುಟ್ಟುತಲಿ ನೋಡಬೇಡಿ ಪತಿಯನು 30 ಮರುಕದಿ ಸಂತೈಸಲವನು ಮನವು ಕರಗದೆ ಸೆರೆಸೆರೆ ಕಣ್ಣೀರುಗಳನು ಸುರಿಸಬೇಡಿರಿ ತುಳಸಿಯ ಪೂಜೆಯನು ಮಾಡ ಮರೆಯಬೇಡಿರಿ ಕೆಲಸಗಳನು ದಿಟ್ಟತನದಿ ಮಾಡಿ ಮುಗಿಸಿರಿ ಕಲಿಯಿರಿ ಸಂಸಾರದಲಿ ನೆಪ್ಪು ನೇರವ ಹಳಿಯಬೇಡಿರಮ್ಮ ನೀವು ನೆರೆ ಹೊರೆ ಜನರ ಉಳಿಸಿ ಬಳಸಿರಮ್ಮ ತಂದ ಧಾನ್ಯವ ತಿಳಿಸಬೇಡಿ ಮನೆಯ ಗೋಪ್ಯ ಪರರಿಗೆಂದಿಗು ಕಾಲ ಕಳೆಯಬೇಡಿ ಕೆಲಸವಿದ್ದರೆ ಪ್ರಳಯ ಮಾಡಬೇಡಿ ಸಣ್ಣ ಪುಟ್ಟ ಮಾತಿಗೆ 40 ಸೊಟ್ಟ ಬೈತಲೆಯನು ತಗೆಯಲಿಷ್ಟಪಡದಿರಿ ಅಷ್ಟವಕ್ರದುಡುಪುಗಳನು ಧರಿಸಬೇಡಿರಿ ರಟ್ಟು ಮಾಡಬೇಡಿರಮ್ಮ ರೂಪು ರಚನೆಯ ಸಿಟ್ಟು ಮಾಡಬೇಡಿ ಮುದಿಯ ಬುದ್ಧಿವಾದಕೆ ಶ್ರವಣ ಮಾಡಿರಮ್ಮ ಹರಿಯ ಕಥೆಗಳನುದಿನ ಶ್ರವಣ ಮಾಡುವಾಗ ಹರಟೆ ನಿದ್ರೆ ಬೇಡವು ಕಿವಿಯ ಕಚ್ಚಬೇಡಿರಮ್ಮ ಪರರ ವಾಕ್ಯಕೆ ಲವಲವಿಕೆಯು ಬೇಡಿರಮ್ಮ ಚಾಡಿ ಚುದ್ರದಿ ರೂಢಿಯಿಲ್ಲದಿರುವ ನಡತೆ ಬೇಡಿರೆಂದಿಗು ಮೂಢರೆನಿಸಬೇಡಿ ಹಾಡುಹಸೆಯ ಕಲಿಯದೆ 50 ಪಾಡುಪಡುತ ಪತಿಗೆ ಹರುಷನೀಡಿ ಗೃಹದಲಿ ಪ್ರೌಢವಿದ್ಯೆ ಕಲಿತು ದುಡಿಯಬೇಡಿ ಪರರಿಗೆ ಬಣ್ಣವಿಲ್ಲದಿರುವುದು ಬಂಗಾರವಲ್ಲವು ಕಣ್ಣಿಗೆ ಹಿತವಲ್ಲದು ಶೃಂಗಾರವಲ್ಲವು ಉಣಲು ತಾ ದೊರೆಯದಿರಲು ಸಂಪತ್ತಲ್ಲವು ಅನ್ನ ಮಾಡಲರಿಯದಿರಲು ಹೆಣ್ಣದಲ್ಲವು ದುಂದುಗಾರಿಕೆಯನು ಕಲಿಯಬೇಡಿರೆಂದಿಗು ಮುಂದೆ ಕಾಲಚಕ್ರಗತಿಯನು ಮನದಿ ಯೋಚಿಸಿ ಬಂದ ಮಾತುಗಳನು ಬಾಯಿತಡೆದು ಆಡಿರಿ ನಂದಗೋಕುಲವನೆ ಮಾಡಿ ಗೃಹವ ನಗುತಲಿ 60 ಬಳಕೆಯಲ್ಲದಿರುವ ಕಲೆಯ ಕಲಿಯಬೇಡಿರಿ ಕಲಿಸಿರಮ್ಮ ಕೆಲಸಕಾರ್ಯ ಮಕ್ಕಳುಗಳಿಗೆ ಗಳಿಸಿರಮ್ಮ ಪುಣ್ಯಕೀರ್ತಿ ತಿಳಿಯಮನದಲಿ ಸುಲಭವು ಸಾಧನವು ನಿಮಗೆ ಪುಣ್ಯಲೋಕಕೆ ಮನವತಿ ಚಂಚಲತೆಯನ್ನು ಹೊಂದಬಿಡದಿರಿ ಅನುಮತಿ ಕೊಡಬೇಡಿ ದುಷ್ಟ ಜನರ ಬೋಧೆಗೆ ಘನಮತಿಯನು ಪೊಂದಿ ಸತಿಯ ಮಾರ್ಗ ತೋರಿರಿ ಗುಣವತಿಯೆಂದೆನಿಸಿರಮ್ಮ ಹಿರಿಯ ಜನರಲಿ ದುಡುಕಿನ ಹೆಣ್ಣೆಂದು ಹೆಸರು ಪಡೆಯಬೇಡಿರಿ ಸಿಡುಕಿನ ಮೋರೆಯನು ತೋರಬೇಡಿ ಜನರಿಗೆ 70 ಒಡಕಿನ ಬಾಯವಳು ಎಂದು ಎನಿಸಬೇಡಿರಿ ಕೆಡುಕ ಕೋರಬೇಡಿ ಕೋಪದಿಂದ ಪರರಿಗೆ ಧ್ವನಿಯು ಮಧುರವಿರಲಿ ನಿಮ್ಮ ಮಾತುಕಥೆಯಲಿ ಕೆಣಕಬೇಡಿ ಮರೆತುಬಿಟ್ಟ ಜಗಳ ಕದನವ ಇಣಕಿ ನೋಡಬೇಡಿ ಪರರ ನಡೆನುಡಿಗಳನು ಸಾರಥಿಯೆಂದೆನಿಸಿರಿ ಸಂಸಾರ ರಥದಲಿ ವೀರರಮಣಿಯೆಂಬ ದಿವ್ಯ ಕೀರುತಿ ಬರಲಿ ನಾರಿಯರಲಿ ಮಾದರಿಯನು ಪಡೆದು ತೋರಿದ ಭಾರತ ಭೂಮಾತೆಗೆ ಪ್ರತಿಬಿಂಬವೆನಿಸಿರಿ 80 ದೇಶಸೇವೆಯೆಂದು ರಾಜಕೀಯ ಬೇಡಿರಿ ಮೋಸ ಹೋಗಬೇಡಿ ಆಸೆ ತೋರುವ ನುಡಿಗೆ ಕಾಯ ಕ್ಲೇಶ ಬೇಡಿರಿ ಭಾಷಣ ಬಹಿರಂಗದಲ್ಲಿ ಭೂಷಣಲ್ಲವು ಸಿರಿರಮಣಗೆ ತುಳಸಿಗಿಂತ ಪುಷ್ಪವಿಲ್ಲವು ಹಿರಿಯತನಕೆ ಸತ್ಯಕ್ಕಿಂತ ಯುಕ್ತಿಯಿಲ್ಲವು ಅರಸಿ ನೋಡೆ ತಾಯಿಗಿಂತ ನಂಟರಿಲ್ಲವು ಕರಿಮಣಿ ಸಮ ನಾರಿಜನಕೆ ನಗಗಳಿಲ್ಲವು ದಾಸರ ನುಡಿ ಧರ್ಮಗಳ ಪ್ರಕಾಶ ಮಾಡಿತು ಸ್ತ್ರೀ ಸಮೂಹದಿಂದ ನಾಶವಾಗದುಳಿದವು 90 ಆ ಸುಧಾಮ ಸತಿಯರೆ ಈ ದೇಶದ ಸೊಬಗು ಮಾಸದಂತೆ ರಕ್ಷಿಸಿ ಪ್ರಾಚೀನ ನಡತೆಯ ನುಡಿಯಬೇಡಿರಮ್ಮ ಪರರ ವಂಚನೆನುಡಿಯ ಕೊಡಲಿ ಹಾಕಬೇಡಿರಮ್ಮ ಕುಳಿತ ಕೊಂಬೆಗೆ ಇಡಲಿಬೇಡಿ ಮತ್ಸರವನು ದೀರ್ಘ ಕಾಲದಿ ಪುಡಿಯನಿಡಲಿಬೇಡಿರಮ್ಮ ಪುಣ್ಯ ಕಾರ್ಯಕೆ ಸಣ್ಣನುಡಿಗಳೆಂದು ತಿಳಿಯಬೇಡಿರಿವುಗಳ ಭಿನ್ನ ಭಿನ್ನ ದೇಶಕಾಲದನುಭವಗಳಿದು ಬಣ್ಣವತಿಶಯೋಕ್ತಿಯಲ್ಲ ಅರಿತು ನೋಡಿರಿ ಘನ್ನ ಸುಗುಣಭರಿತ ಶ್ರೀ ಪ್ರಸನ್ನ ಸಲಹುವ 100
--------------
ವಿದ್ಯಾಪ್ರಸನ್ನತೀರ್ಥರು
ನಿತ್ಯ ತೃಪ್ತಾ ಅನ್ಯರಿಂದಲಿ ಎನಗೆ ಏನು ಪ್ರಯೋಜನವೊ ಪ ದರುಶನಕೆ ಬಂದವ ನಾನಲ್ಲವೆಂದು ನಾನಂದು ಹರಿ ನಿನಗೆ ನುಡಿದದ್ದು ಮನಸ್ಸಿನೊಳಗೆ ಇರುತಿಪ್ಪದೇನಯ್ಯಾ ಬಿನ್ನಪವೆ ಲಾಲಿಸು ಶರಣ ಜನರ ಅಭಿಪ್ರಾಯವೊಂದು ಬಗೆ ಇಪ್ಪದೊ1 ನಿರುತ ವ್ಯಾಪ್ತತ್ವ ಕರುಣತ್ವ ಅಣುಮಹತ್ತು ಸರುವ ಚೇತನ ಜಡ ಮತ್ತೆ ಮತ್ತೆ ಪರಿ ಪರಿಯಿಂದಲಿ ನಿನ್ನಲಿ ಉಂಟು ನಿನ್ನ ವರ ಮೂರ್ತಿಗಳ ಪೇಳದೆ ಇದಷ್ಟು ವಿನಯದಲಿ 2 ಧ್ಯಾನಕ್ಕೆ ನೀನು ಪ್ರಧಾನನೆಂದು ನುಡಿದೆ ಅಪ್ರಮೇಯ ಕ್ಷೋಣಿಜನಕಿಂತ ದ್ವಾರದವರು ವೆಗ್ಗಳವಾಗೆ ಏನೆಂಬೆ ತಿರುವೇಂಗಳೇಶ ನಿನ್ನಾಟಕ್ಕೆ 3 ಮಿಕ್ಕ ಮಂದಜನಕೆ ನಿನ್ನ ಭಕುತರ ಮೇಲೆ ಭಕುತಿ ಪುಟ್ಟುವುದಕ್ಕೆ ನಾ ಪೇಳಿದದ್ದು ಅಕಟಕಟ ನಿನ್ನ ದೊರೆತನಕೆ ಏನೆಂಬೆ ತಕ್ಕ ಮಾತುಗಳೇನೊ ಆಲೋಚಿಸಿ ನೋಡೆ 4 ಹೊನ್ನು ಹಣ ತೂಗಬೇಕಾದರೆ ಮೊದಲಿಗೆ ಚಿನ್ನ ಹಾಕುವರೇನೊ ಚಿನ್ಮಯರೂಪ ಮುನ್ನೆ ನಿನ್ನವರ ದರುಶನವಾದ ಮೇಲೆ ಪಾ ವನ್ನ ಶಾರೀರನೆ ನಿನ್ನ ಕಾಂಬುವದುಚಿತ 5 ಜರೆಮರಣರಹಿತ ಸುಜನರ ಪರಿಪಾಲಾ ನಿ ನಿತ್ಯ ವಜ್ರಪಂಜರಾ ಜರಗೆ ವರವಿತ್ತ ದನುಜರ ವಂಶನಾಶಾ ನಿ ರ್ಜರ ನದಿ ಜನಕಾಂಬುಜ ರವಿ ನಯನ ದೇವಾ 6 ಸ್ಥೂಲಮತಿಯಿಂದ ಪೇಳಿದೆನೆಂದು ಚನ್ನಾಗಿ ಲಾಲಿಸು ಲಲಿತಾಂಗಿ ಲಕುಮಿ ರಮಣಾ ನೀಲಗಿರಿ ನಿವಾಸ ವಿಜಯವಿಠ್ಠಲ ವೆಂಕಟವಾಲಗವ ಕೈಗೊಳ್ಳು ಎನ್ನ ಯೋಗ್ಗಿತವರಿತು7
--------------
ವಿಜಯದಾಸ
ಪಾಲಿಸೆನ್ನ ವೇಲಾಪುರ ಚೆನ್ನ ಪ ಪಾಲಿಸು ಕರುಣಾ ನಿಲಯನೆಂದು ನಾ ಕೇಳಿ ಬಂದೆ ಬಹು ಸುಂದರಕಾಯ ಅ.ಪ ಅರಿ ಮುದದಿ ಗದಾಧರ ಪದಪದುಮದಿ ಮನ ಒದಗಿಸಿ ಬೇಗ 1 ಪೀತಾಂಬರ ಶ್ರೀವತ್ಸ ಕೌಸ್ತುಭದಿ ಅತಿಶೋಭಿಪನೀ ಸ್ತುತಿಗೊಲಿಯುತಲಿ 2 ಚನ್ನಕೇಶವ ಬಿನ್ನೈಸುವೆನೋ ಬೆನ್ನ ಬಿಡದಲಿ ಮನ್ನಿಸಿ ತ್ವರದಿ 3 ಕಂದನ ಕುಂದುಗಳೊಂದೆಣಿಸಲೆ ಬಂದು ಚಿಂತನಕೆ ಇಂದಿರೆರಮಣ 4 ಮೀನಕೇತುಪಿತ ಶ್ರೀ ನರಹರಿಯೆ ಜ್ಞಾನ ಭಕುತಿಯಿತ್ತು ಮೌನದಿಂದ ನೀ5
--------------
ಪ್ರದ್ಯುಮ್ನತೀರ್ಥರು
ಪಾಲಿಸೋಯನ್ನ ಪರಾತ್ಪರಾ - ಹರಿ ಪ ಪಾಲಿಸೊ ಬುಧಹಿತ ಫಾಲನಯನನುತ ಲೀಲಾನಟನ ಘಣಿಶೈಲ ನಿಲಯ-ಹರಿ ಅ.ಪ ಜಲಜಭವನ ನಿಜಕುಕ್ಷಿಯೊಳಿದ್ದ ಸುಲಲಿತ ವೇದಾಪಹಾರಿಯ ಕಂಡು ಜಲಜರೂಪಿನಿಂದಾ ಖಳ ಸಂಹರ ಗೈದು ಜಲಜಸಂಭವನಿಗೆ ಒಲಿದ ಮತ್ಸ್ಯಾವತಾರ 1 ಅಂದು ದೂರ್ವಾಸನ ಶಾಪದಿ ಜಗವು ಇಂದಿರೆ ಕರುಣಾವಿಹೀನದಿ ಬಲು ನೊಂದು ಕಂಗೆಡುತಲಿರೆ ಸಿಂಧುಮಥನಗೈದು ಕೂರ್ಮ 2 ಧರಣಿಯನಪಹಾರಗೈಯ್ಯಲು ಬೇಗ ಸೂಕರ ರೂಪವ ತಾಳಿ ಧರಣೀಚೋರನ ಕೊಂದ ಸರಸೀರುಹಾಂಬಕ3 ಸರಸಿಜಜನ ವರದರ್ಪದಿ ಜಗವನುರುಹಿ ತರಳನ ಬಾಧೆಗೈಸಿದ ಬಲು ದುರುಳ ಹಿರಣ್ಯಕನುರವ ನಖದಿಂದ ಸೀಳಿ ಕರುಳಮಾಲೆಯನಿಟ್ಟ ಧುರಧೀರ ನರಹರಿ 4 ಬಲಿಯ ಮೂರಡಿಭೂಮಿ ದಾನವ ಬೇಡಿ ಅಳೆದು ಈರಡಿಮಾಡಿ ಲೋಕವ ಮತ್ತೆ ಉಳಿದೊಂದು ಪಾದದಿ ಬಲಿಯ ತಲೆಯನು ಮೆಟ್ಟಿ ನಲಿದು ಗಂಗೆಯ ಪೆತ್ತ ಚೆಲುವ ವಾಮನರೂಪ5 ಚಕ್ರಾಂಶನಾದ ಕಾರ್ತಿವೀರ್ಯನ ಭುಜ ಚಕ್ರದೊಡನೆ ದುಷ್ಟ ಭೂಪರ ಅತಿ ಅಕ್ರಮವನು ಕಂಡು ವಿಕ್ರಮಾನ್ವಿತ ನೃಪ ಚಕ್ರವ ಮುರಿದ ಮುನಿಚಕ್ರರಕ್ಷಕ ರಾಮ 6 ಕ್ರೂರ ರಾವಣ ಕುಂಭಕರ್ಣರ ಬಲು ಘೋರತನಕೆ ತ್ರಿವೇಶರ ದೊಡ್ಡ ದೂರ ಕೇಳುತ ಮನುಜಾಕಾರವ ಧರಿಸಿ ದೈತ್ಯ ವೀರರ ಮಡುಹಿದ ಶ್ರೀರಾಮ ಮೂರುತಿ 7 ಬಲಭದ್ರನೆಂಬುವ ನಾಮದಿ ಧುರದಿ ಹಲ ನೇಗಿಲುಗಳನು ಹಸ್ತದಿ ಪಿಡಿದು ಬಲವಂತರಾದ ದೈತ್ಯಕುಲವ ತರಿದು ದಿವಿಜ ಕುಲವ ಸಂರಕ್ಷಿಸಿದ ಜಲಧರನಿಭಚೇಲ 8 ಭಾರ ಸೃಷ್ಟೀಶನಲ್ಲಿ ದೂರಿಡೆ ಬಲು ಭ್ರಷ್ಟ ಕೌರವ ಯುಧಿಷ್ಠಿರಗೆ ವೈರ ಪುಟ್ಟಿಸಿ ಭೂಭಾರ ಮಟ್ಟುಮಾಡಿದ ಕೃಷ್ಣ 9 ಕಲಿಯಿಂದ ಕಿಡೆ ನಿಜಧರ್ಮವು ಬಹು ಖಳರಿಂದ ವ್ಯಾಪಿಸೆ ಲೋಕವು ಆಗ ಲಲಿತ ತೇಜಿಯನೇರಿ ಕಲುಷಾತ್ಮಕರ ಕೊಂದು ವಿಲಸಿತ ಧರ್ಮವನು ಸಲಹಿದ ಕಲ್ಕಿರೂಪ 10 ಗಿರಿಜಾವಿವಾಹದಿ ತ್ವಷ್ಟ್ರನ ಶಾಪ ಶರಧಿಯೀಂಟಿದ ಮುನಿಗೈದಲು ಬೇಗ ವರವ್ಯಾಘ್ರ ಗಿರೀಶನೆ ಶರಣೆಂದ ಮುನಿಪಗೆ ವರವಿತ್ತು ಸಲಹಿದ ವರದವಿಠಲಹರಿ11
--------------
ವೆಂಕಟವರದಾರ್ಯರು
ಪುಣ್ಯ ಪಡೆಯೆ ನೀನು ಪೂರ್ಣೇಂದುವದನೆ ಪುಣ್ಯ ಪಡೆಯೆ ನೀನು ಪ ಕುಂದಣದಾರತಿ ಬೆಳಗಿ ಅಕ್ಷತೆನಿಟ್ಟು ಆ- ನಂದವಾಗಾಶೀರ್ವಾದ ಮಾಡ್ಹರಸುತಲಿ 1 ಅತಿ ಹರುಷದಿ ಗಂಡು ಸುತರನೆ ಪಡೆದು ನೀ ಪೃಥಿವಿನಾಳೆನುತ ದ್ರೌಪದಿ ಹರಸಿದಳು2 ಅಕ್ಕರದಿಂದ್ಹೆಣ್ಣುಮಕ್ಕಳ ಪಡೆದು ಪ- ಲ್ಲಕ್ಕಿನೇರೆನುತ ದೇವಕ್ಕಿ ಹರಸಿದಳು 3 ಕಟ್ಟಿದ್ದ ಮಾಂಗಲ್ಯ ಕರಿಯ ಕಾಜಿನ ಬಳೆ ಮುತ್ತೈದೆತನಕೆ ಸಾವಿತ್ರಿ ಹರಸಿದಳು 4 ಅನ್ನ ಗೋವ್ಗಳು ಕನ್ಯಾದಾನ ಮಾಡೆನುತ ಸಂ- ಪನ್ನ್ಯಾಗಿರೆನುತ ಅರುಂಧತಿ ಹರಸಿದಳು 5 ಆಯುಷ್ಯ ಆರೋಗ್ಯ ಶ್ರೇಯಸ್ಸು ಸೌಭಾಗ್ಯ ನೀ ಪಡೆ ಸುಖ ಶ್ರೀಮಹಾಲಕ್ಷ್ಮಿ ಹರಸಿದಳು 6 ಕಾಮಿತ ಫಲ ಇಷ್ಟದಾಯಕನಾದ ಶ್ರೀ ಭೀಮೇಶಕೃಷ್ಣರಾಯನ ಕರುಣದಲಿ 7
--------------
ಹರಪನಹಳ್ಳಿಭೀಮವ್ವ
ಬರಿದಿದೇಕೆಲೋ ನಿನ್ನಂತರಿರವು ಸಿರಿಯರರಸ ಅರಿಯನೇನೆಲೋ ಪ ಮರೆಯ ಮೋಸದಿ ಕುಕ್ಕಲು ಮೀನ ಹರಿವ ಉದಕದಿ ಬಕನು ಮೌನ ಧರಿಸಿದಂದದಿ ಪರಮಮೌನ ಧರಿಸಿ ಕುಳಿತು ಮರುಳುಗೊಳಿಸಿ ಪರರ ಕೊರಳ ಮುರಿವ ದುರುಳತನದ ಕೃತಿಗೆ ಹರಿಯು ಒಲಿಯುವನೇನು ಮರುಳೆ1 ಕಪಟ ನೀಗದೆ ಹುಚ್ಚು ಬಿಡದೆ ಗುಪಿತ ತಿಳಿಸದೆ ಮುಚ್ಚಿ ಕಣ್ಣು ತಪಸಿಯಂದದಿ ಕುಪಿತ ಮಾನಿಸನಾಗಿ ಕುಳಿತು ತಪಸಿಯಂತೆ ತೋರಿ ಜನರ ಅಪಾಯಮಾಳ್ಪ ಕಪಟವೇಷಕೆ ಸುಫಲ ದೊರೆಯುವುದೇನು ಮರುಳೆ 2 ಉದಯದೇಳುತ ಓಡಿ ಹೋಗಿ ನದಿಯ ಮುಳುಗುತ ತೀಡಿಗಂಧ ಹದದಿ ಬರೆಯುತ ವಿಧವಿಧಮಂತ್ರೊದರಿ ಇತರರ ಸದನ ಮುರಿದು ಸತಿಯ ಸುತರ ಮುದದಿ ಪೊರೆವ ಅಧಮ ವ್ರತಕೆ ಸದಮಲಾಂಗೊಲಿವನೆ ಮರುಳೆ 3 ಕಪಟ ನೀಗದೆ ಜಟೆಯ ಬೆಳಸಿನ್ನು ಚಪಲತನದಿಂ ದುಟ್ಟು ಕೌಪೀನ ನಿಟಿಲದಲ್ಲಿ ಭಸ್ಮಧರಿಸಿ ನಟಿಸಿ ಸಾಧುವರ್ತನದಿಂ ದ್ಹೊಟ್ಟೆ ಹೊರೆವ ಭ್ರಷ್ಟತನಕೆ ಕೆಟ್ಟ ಬವಣಳಿಯುವುದೆ ಮರುಳೆ 4 ತತ್ವದರ್ಥವ ಬೋಧಿಸುತ್ತ ಭೃತ್ಯ ಸಮೂಹವ ಸಂಪಾದಿಸುತ್ತ ನಿತ್ಯಸತ್ಯವ ವಿತ್ತದಾಸೆಗುತ್ತರಿಸುವಸತ್ಯಭ್ರಷ್ಟ ವರ್ತನಕೆ ಮುಕ್ತಿದಾಯಕ ಸಿರಿಯರಾಮ ಮುಕ್ತಿಸುಖ ನೀಡುವನೆ ಮರುಳೆ 5
--------------
ರಾಮದಾಸರು
ಮಾತು ಮನ್ನಿಸೊ ಪರಮಾತಮಾ ಮುದದಿಂದ ಮಾತು ವೈದವನಲವ ಮಾತುರದೊಳು ಗೆದ್ದು ಮಾತಿಯ ಸೆರೆ ಪ್ರೇಮಾತುರ ಭೇದಿಸಿದ ಮಾತುರಪತಿ ಚಿನ್ಮಾತುರ ತೋರೋ ಪ ಸೂಕರ ಘೂಕಾ ಮನಕಾಶಾ ಕಾಕಕಂಕಾ ದನ ಕತ್ತೆ ಮೊದಲಾದ ಜನ ಕಲಿಯುಗದೀ ತನಕೆ ಆದzಕಿನ್ನು ಮನಕಾನಂದವ ಕಾಣೆ ದಿನ ದಿನ ಕಾಂಚನಾಶಿಯಿಂದ ಘನಕಾಮ ಬದ್ಧನಾದೆ ಕನಕಾಂಬುಜ ಭವಜನಕ ಜಗತ್ಪತಿ ಜನ ಕಥೆಯಿಂದ ಭ ವನಕತಿ ಮೋಹಿಸಿ ಧನಕವಿಯೆನಿಸಿದೆ ಎನ್ನ ಕಡೆ ಮೊಗವಾಗು 1 ಸನಕಾದಿ ವಂದ್ಯ ತ್ರಿಭುವನಕಾದಿ ಮೂಲವೆನಿಸಿ ವನಕಾಯಿದ ಕಾರುಣ್ಯರತುನಕಾರ ಪೂರ್ಣನೀತಾ ಘನಕಾಯ ಒಂದಾರೆ ಸಾಧನಕಾಧಾರವಾದೊ ಪಾ ವನ ಕಾಲಾ ತೊರೆದು ಜೀವನ ಕಾದುಕೊಂಡೆನಯ್ಯಾ ಇನಕರ ತೇಜಾ ತುಹಿನಕರ ಚರಣನೆ ಚನ ಕತ್ತಲೆ ನಾಶನ ಕರಿವರದಾ 2 ಜನಕಾ ವನಿಕಾ ನಾಭಾ ಕಾಣಿಸಿದೆ ಮುನಿ ಜನಕಾಶ್ಚರ್ಯರಾಗೆ ವಾಗೆ ಅನನಕಾಮರಿ ತೂಗೆ ವಂ ಚನೆ ಕಾಠಿಣ್ಯ ಪಾಪಕಾನನಕಾನಳನೆ ಜಾ ವನ ಕಾಟ ಬಿಡಿಸಿ ಈಮ್ಮನ ಕಾದಂತಯ್ಯಾ ನನಕೂಡ ಹಾಕು ದುಷ್ಟನದೊಟ್ಟಿ ಸ ಜ್ಜನ ಕರ್ಮದಲಿ ಸೋಭನ ಕಡೆಯಲಿ ಇಡು ಕವನಕೆ ದಾಸನ ಕರವಿಡಿಯೊ 3
--------------
ವಿಜಯದಾಸ
ಲೋಕೇಶನೆನಿಪ ಶ್ರೀಗುರು ಸಿದ್ಧೇಶ್ವರಗೆ ಪ ನೀ ಕಮಲಮುಖಿ ಆಋವೈರಿಯ ನೇಕ ಮೈಯ್ಯಾಳು ಸುತ್ತಿಕೊಂಡು ವಿ ವೇಕವಿಲ್ಲದೆ ವಿಷವನುಂಡ ಪಿನಾಕಧರÀನಿಗೆ ಸೋಲುವರೆ ನೀ ಜಗವ ಮೋಹಿಪ ಮಾನಿನೀ ಮಣಿಯೇ ಅ.ಪ. ಶಿರದೊಳು ಶಶಿಯ ಕೆಂಜೆಡೆ ಇಹ ಜೋಗಿ ಸ್ಮರನ ದಹಿಸಿ ಭಸ್ಮ ಹಣೆಗಿಟ್ಟ ಯೋಗಿ ಇರುವರೆ ಸ್ಥಳವಿಲ್ಲದಂತೆ ತಾ ಪೋಗಿ ಮೆರೆವ ಸ್ಮಶಾನ ಮಂದಿರಕನುವಾಗಿ ಮರುಲು ಭೂತ ಪಿಶಾಚ ಯಕ್ಷರ ನೆರವಿಯಲಿ ಕುಣಿಕುಣಿದು ಬ್ರಹ್ಮನ ಶಿರವಿಡಿದು ತಿರಿದುಂಬ ಗೊರವಗೆ ಬರಿದೆ ತಿಳಿಯದೆ ಜಗವ ಮೋಹಿಪ ಮಾನಿನೀ ಮಣಿಯೇ 1 ಮಂಡೆಯೋಳ್ ಜಾನ್ಹವಿ ಶಶಿಯನ್ನೆ ಸೂಡಿ ರುಂಡಮಾಲೆಯ ಕೊರಳೊಳಗಿಟ್ಟಪಚಾಡಿ ಕುಂಡಲಿಗಳಾ ಧರಿಸಿರುವನ ನೋಡಿ ಖಂಡ ಪರಶುವೆಂದು ಅವನ ಕೊಂಡಾಡಿ ಧಿಂಡೆಯಾಗಿಹ ಪ್ರಾಯದವಳು ನೀ ನೀನವನನೊಲಿದೆ ಪ್ರ ಚಂಡೆ ಪಾರ್ವತಿ ಜಗವ ಮೋಹಿಪ ಮಾನಿನೀ ಮಣಿಯೇ 2 ಕರದಿ ತ್ರಿಶೂಲ ಧಮರುಗಳ ಧರಿಸಿರುವಾ ಕಂಚರ್ಮಾಂಬಕ ಪುಲಿದೊಗಲುಟ್ಟು ಮೆರೆವಾ ಹಿರಿಯತನಕೆ ವೃಷಭವನೇರಿ ಬರುವಾ ಶಿರಿಯ ಹೊಗಾಡಿ ಫಕೀರನಂತಿರುವಾ ವಿರಚಿಸಿದ ಲೀಲಾವಿನೋದದ ಪರತರ ಶ್ರೀ ಪ್ರಣವರೂಪನ ಗುರುವಿಮಲಾನಂದ ತೊಟ್ಟಿದ ಗುರು ಸಿದ್ಧೇ ಶ್ವರನೆಂದು ತಿಳಿಯದೆ ಜಗವ ಮೋಹಿಪ ಮಾನಿನೀಮಣಿಯೇ 3
--------------
ಭಟಕಳ ಅಪ್ಪಯ್ಯ
ವಿಜಯವಿಠ್ಠಲ ನಾಮ ಭಜಿಸಿದಾ ಮಾನವಗೆ ಸತತ ಸಂಪದವಕ್ಕು ಪ ಕಾಯ ಶುಚಿಯಾಗುವದು ಕಠಿನತನ ಪೋಗುವದು ಆಯು ಹೆಚ್ಚುವುದು ನಿಯೋಗಿ ಯಾಹಾ ನಾಯಿ ಮೊದಲಾದ ಪ್ರಾರಬ್ಧ ಜನುಮಗಳಿರಲು ಬಾಯಿಲಿಂದಾಕ್ಷಣ ತೀರಿ ಪೋಪವು ಕೇಳಿ 1 ದ್ವೇಷಿಗಳು ಎಲ್ಲ ಬಾಂಧವರಾಗಿ ಇಪ್ಪರು ದ್ವೇಷ ಪುಟ್ಟದು ತನಗೇತರ ಮೇಲೆ ದೇಶ ಮಧ್ಯದಲಿ ತಾನೆ ಎಲ್ಲಿ ಇದ್ದರೂ ಕೋಶಾಧಿಪತಿಯಾಗಿ ಸಂಚರಿಸುತಿಪ್ಪರು2 ಹೀನ ವಿಷಯಂಗಳಿಗೆ ಅವನ ಮನವೆರಗಿದರೆ ಕಾಣಿಸುವನು ತಾನೆ ಮುಂದೊಲಿದು ಏನು ಹೇಳಲಿ ಹರಿಯ ಅನುಕಂಪನಾತನಕೆ ಕಾಲ ಕಡೆಗಾಣನು 3 ದೇವಾದಿ ಮುನಿತತಿಯ ಮೊದಲಾದವರು ನೆನೆದು ಆವಾವ ಸೌಖ್ಯದಲಿ ಇಪ್ಪರದಕೋ ಭಾವದಲಿ ತಿಳಿದು ಭಕುತಿಯ ಮಾಡಿರೋ ಜನರು ಕಾವುತಲಿಪ್ಪ ಸರ್ವಾಶ್ರಯನಾಗಿ ಹರಿ4 ಕಂಡವಗೆ ದೊರಕದು ಈ ನಾಮ ಜಪಿಸಿದರು ಕಂಡವಗೆ ಬಲು ಸುಲಭ ಭಯವೆಯಿಲ್ಲಾ ಮಂಡಲವ ಚರಿಸಿ ನಾನಾ ವ್ರತ ಮಾಡದಿರಿ ಕೊಂಡಾಡು ವಿಜಯವಿಠ್ಠಲನ ಆಸರ ಸೇರಿ5
--------------
ವಿಜಯದಾಸ
ವಿಠಲ ನಮೋ ವಿಠಲ ಮುಟ್ಟಿಭಜಿಪ ದೀನನಿಷ್ಟಾರ್ಥ ಪಾಲಿಸು ಪ ಹೇಸಿಪ್ರಪಂಚದಿ ನಿಂದು ಮಹ ಕ್ಲೇಶಪಂಚಕದಲಿ ಬೆಂದು ಕೆಟ್ಟ ವಾಸನತ್ರಯದಿಂದ ನೊಂದು ಬಲು ಘಾಸಿಯಾದೆ ದಯಾಸಿಂಧು ಆಹ ದೋಷದೂರನೆ ಎನ್ನ ದೋಷನಾಶನ ಗೈದು ಪೋಷಿಸು ಅನುಮೇಶ ದಾಸನೊಳ್ದಯವಾಗಿ 1 ಮರವೆಯೆಂಬುವ ಕವಚ ತೊಟ್ಟು ಬಲು ದುರುಳತನಕೆ ಮನಗೊಟ್ಟು ಮಹ ದರಿವಿನ ಅರಮನೆ ಸುಟ್ಟು ಆಹ ಪರಮದುರಿತದಿ ಬಿದ್ದು ಮರುಳನಾಗಿ ನಿಮ್ಮ ಚರಣಸರೋಜಕ್ಕೆ ಮರೆಹೊಕ್ಕೆ ಕರುಣಿಸು 2 ಹೊಂದಿ ಭಜಿಪೆ ನಿನ್ನ ಬೇಡಿ ಎನ್ನ ಮಂದಮತಿಯ ಕಡೆಮಾಡಿ ನಿಜಾ ನಂದ ಸುಜ್ಞಾನಪದ ನೀಡಿ ಭವ ಬಂಧ ಸಂಕೋಲೆ ಗಡ ಕಡಿ ಆಹ ಸಿಂಧುನಿಲಯ ಬೇಗ ದಂದುಗ ಪರಿಹರಿಸಿ ಕಂದನ್ನ ಉದ್ಧರಿಸು ತಂದೆ ಶ್ರೀರಾಮಯ್ಯ 3
--------------
ರಾಮದಾಸರು