ಒಟ್ಟು 24 ಕಡೆಗಳಲ್ಲಿ , 14 ದಾಸರು , 24 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನವೆ ನಿನಗೇಕಿನ್ನು ಲಜ್ಜೆದೋರದು ಬಳಿಕಕನಲಿ ನಿಂದಿಸುವೆ ಜನರನಿತರಾ ಪಘನಘೋರಮಲಜನಿತ ತನುವಿನೊಳುನೀನಿರುತಲನವರತ ತೊಳಲಬಹುದೇ ಬರಿದೆ ಅ.ಪಓದಿ ಗ್ರಂಥಗಳನು ಪಠಿಸಿಯದರರ್ಥವನುಬೋಧಿಸುವೆ ಪರರಿಗೆಲ್ಲಾ ಸೊಲ್ಲಾಸಾದರದಿ ತನ್ನಿಷ್ಠೆಯಲಿ ನಡೆಯುತನುಭವವನೀದಿನಕು ತಂದುದಿಲ್ಲವಲ್ಲಾಬೋಧೆವಡದಿಹ ಯೋಗಿಗಳ ಜರೆವ ಬಗೆಯಲ್ಲಿನೀ ದೊಡ್ಡ ಜಾಣನಲ್ಲಾ ಬಲ್ಲಸಾಧಿಸಿದ ವಿದ್ಯವನು ವಾದದಲಿ ನೀಗಾಡಿಬೀದಿಯಲಿ ನಿಂತೆಯಲ್ಲಾ ನಲ್ಲಾ 1ಧನಧಾನ್ಯ ದಾಸ ಕತಿಯೊಳಗೊಂದಿಕೊಂದಿರುವಜನರಲವಿವೇಕ ವಿಡಿದೂ ಜರಿದೂತನು ಪಾಶ ಬದ್ದದಲಿ ನರಕ ಭಾಜನರಾಗಿದಿನವ ಕಳೆಯುತ್ತಲಿಹರೂ ುವರೂಎನುತಲನುತಾಪದಲಿ ನೀ ಮತ್ತೆಯನವರತಧನಿಕರಿದ್ದೆಡೆಗೆ ಬಂದೂ ನಿಂದೂಧನವ ಕೊಡಿ ಸತ್ಪಾತ್ರನಾನೆಂದು ವೊಂದುವರೆಹಣವ ಕೈಯೊಡ್ಡಿ ಕೊಂಡೂ ಉಂಡೂ2ತೋರುವ ಜಗತ್ತಿದುವೆ ಪರಮಾತ್ಮನಿಂದಲೆತೋರುವದು ಭ್ರಮೆಗೆ ಹಲವೂ ಕೆಲವೂತೋರದಡಗದ ನಿತ್ಯ ವಸ್ತುವೆ ತಾನೆÀಂದುಧೀರತನದಿಂದಲಿರವೂ ಅರಿವೂಈ ರೀತಿಯಲಿ ತಿಳಿದು ಮುಕ್ತನಾಗದೆ ಬರಿಯಕ್ರೂರ ಬುದ್ದಿಯಲಿ ುರವೂ ಮರವೂದಾರಿಗಾಣದೆ ನಿನ್ನ ಅನುಭವವ ನೀ ಮತ್ತೆಹೊರುವುದೆ ನಿನಗೆ ಮತವೂ ದೃಢವೂ 3ಇಂದ್ರಿಯಂಗಳ ಸುಖವನೆ ಮೆಚ್ಚಿ ನೀನವರಹಿಂದುಗೊಂಡೆರಗಿ ಬಿಡದೆ ಪಡೆದೆಸಂದ ಭೋಗದ ಸವಿಯನೆನನೆನದು ಮತ್ತದನುಮುಂದು ಬೇಕೆಂದು ಹೊರೆದೆ ಬೆರೆದೆಕಂದಿ ಕಾಮಕ್ರೋಧದಗ್ನಿಯಲಿ ನೀ ಬೆಂದುಹೊಂದಿ ನೀಂ ಜನ್ಮಪಿಡಿದೆ ಮರೆದೆಹಿಂದುಗಳೆವಾತ್ಮನನು ಹಿತವೆಂದು ಮಿಥ್ಯವನುನೊಂ[ದು] ನೋಡದೆ ಬರಿದೆ 4ಚದುರ ವಿದ್ಯವ ಕಲಿತೆನೆಂಬುದೊಂದೇ ಘನತೆಸುದತಿ ಸಂಪತ್ತಿನಲ್ಲೆ ರಮತೆಒದಗಿ ಬಹಳೋದ್ಯೋಗಗಳ ಮಾಡಿ ಬಹುದಿವಸಬದುಕಿದವ ನೆಂಬುದರಲೆ ುರತೆಇದ ನಾನು ಸಂಪಾದಿಸಿದೆನೆನ್ನ ಶೌರ್ಯತೆಗೆಇದಿರಿಲ್ಲವೆಂದು ಇದಕೆ ಬೆರತೆಮುದದಿ ಗುರು ವಾಸುದೇವಾರ್ಯವೆಂಕಟರಮಣನೊಡಮೂಡದಿತರ ನಡತೆ ಜಡಕೆ 5
--------------
ತಿಮ್ಮಪ್ಪದಾಸರು
ಲೋಕೈಕ ಬಂಧು ಹೇ ದಯಾಸಿಂಧು ಜೋಕೆಮಾಡಭವ ನೀನೆನ್ನೊಳು ನಿಂದು ಪ ಹೇಯಪ್ರಪಂಚದ ಮಾಯಾಮೋಹದಿ ಎನ್ನ ಕಾವದೇವರು ನೀನೆ ಕೈಯ ಪಿಡಿದು ಸಲಹೊ 1 ದಿವನಿಶಿ ಬಿಡದೊಂದೇಸಮನೆ ಬೆನ್ನ್ಹತ್ತಿ ಮಾಯ ಕವಿದು ವಿಧವಿಧದೆನ್ನ ಸುವಿಚಾರ ಮರೆಸಿ ಭವಭವದೊಳಗೆಳಸಿ ಭವಿಯೆಂದೆನಿಸಿ ಕೆಟ್ಟ ಜವನಿಗೀಡೆನಿಸುವ ಭವಮಾಲೆ ಗೆಲಿಸು 2 ಘನದು:ಖಮಯವಾದ ಜನನಮರಣಬಾಧೆ ರಿಣಭಾದೆ ತನುಭಾದೆಯನು ಪರಿಹರಿಸಿ ತನುತ್ರಯದಲಿ ನಿನ್ನ ನೆನೆವೆನಗೆ ಪಾಲಿಸು ಕನಿಕರದಿಂ ಕಾಯೊ ಜನಕ ಶ್ರೀರಾಮ ಪ್ರಭು 3
--------------
ರಾಮದಾಸರು
ಶೋಭನವೆನ್ನಿರೋ ಶೋಭನ ಬನ್ನಿರೆ ಶೋಭನ ಬನ್ನಿ ಸವ್ಯದಿಂದ ಧ್ರುವ ಶೋಭಾನವೆಂಬೋದು ಸೋಹಂಭಾವಗುಣ ಅಹಂಭಾವಿಗಳು ಅರಿಯವು ಅಹಂಭಾವಿಗಳು ಅರಿಯುವು ಅನಂಗನ ಅಹಂಭ್ರಮೆಯು ವಿಪರೀತ 1 ಶೋಭನವೆನ್ನಿರೇ ಸಿದ್ಧಾಂತನುಭವಿಗಳು ಕಾಮಿ ಕಾಮಣ್ಣನ ಮದುವಿಗೆ ಪ್ರಾಣಿ ಮಾತ್ರಗಳೆಲ್ಲ ಬರಬೇಕು 2 ಶೋಭನವೆನ್ನಿರೇ ಮದೂಣಿಗಾನಂಗಗೆ ಕಾಮಿತದಳಗಿತ್ತಿ ಅರಸಗ ಕಾಮಿತದಳಗಿತ್ತಿ ಅರಸ ಮೋಹನ್ನಗೆ ನೆರೆಯಿತು ಲೋಕ ಧರೆಯೊಳು 3 ಶೋಭನವೆನ್ನಿರೇ ಕಾಮಿ ಕಾಮಣ್ಣಗೆ ಕಾಯದೊಳೀಹ್ಯ ಕರುಣಿಗೆ ಕಾಯದೊಳಿದ್ದು ಮೆರೆವ ಅನಂಗನು ಚರ್ಮದಬೊಂಬಿ ಗುರುತಾಗಿ 4 ಶೋಭನವೆನ್ನಿರೇ ಸಜ್ಜನ ಸಾವಿತ್ರೇರು ಆನಿ ಮೊದಲೆ ಇರುಹು ಕಡಿಗೆಲ್ಲ ಆನಿಮೊದಲೆ ಇರುಹು ಕಡಿಗೆಲ್ಲ ಮಹಿಪತಿ ಶೋಭಾನಯೆಂದ ಸಬೂದಿಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶ್ರೀ ಪ್ರಾಣೇಶ ದಾಸರಾಯರ ಸ್ತೋತ್ರ ಸಾನುರಾಗದಲಿ ಸ್ಮರಿಸುವರ ಭಕುತಿಯನ್ನು ಕೊಡುತಿಹರು ಪ ವರಕಾಶ್ಯೊಪಸದ್ಗೋತ್ರದಿ ಲಿಂಗಸು - ಗುರು ಕರಣಿಕರಲಿ ಸಂಜನಿಸಿ ತಿರುಕಾರ್ಯರ ಪರತನುಭವಯೋಗೀಂ - ದ್ರರು ಯಂಬ ಸುನಾಮದಿ ಕರಿಸಿ 1 ಕೆಲವುಕಾಲ ಲೌಕಿಕವನುಸರಿಸುತ ಲಲನೆ ತರಳರಿಂದೊಡಗೂಡಿ ಬಲು ವಿನಯದಿ ಸಾಧುಗಳರ್ಚಿಸಿ ನಿ - ರ್ಮಲ ವೈರಾಗ್ಯ ಮನದಿ ಕೂಡಿ2 ಮೂಜಗದೊಳು ಪ್ರಖ್ಯಾತರೆನಿಸಿದ ಶ್ರೀ ಜಗನ್ನಾಥಾರ್ಯರ ಪಾದಾಂ - ಭೋಜ ಭಜಿಸಿ ಪ್ರಾಣೇಶಾಂಕಿತವನು ತಾಜವದಿಂದವರಲಿಪಡೆದ 3 ಶ್ರೀಶಪಾದಯುಗ್ಮಗಳಲಿ ಸದ್ರತಿ ದಾಸಜನಗಳಲಿ ಸದ್ಭಕುತಿ ಹೇಸಿಭವದ ಸುಖದಾಸೆ ಜರಿದು ಸಂ - ತೋಷದಿ ಧರಿಸಿಹ ಸುವಿರಕುತಿ 4 ನೇಮದಿ ಯಮನಿಯಮವ ವಹಿಸಿ ತಾ ಮುದದಲಿ ನಲಿಯುತ ಕೀರ್ತಿಸುತಿಹ ಶ್ರೀ ಮನೋಹರನ ಸುಗುಣರಾಶಿ 5 ಪರಿಪರಿ ಹರಿಕಥೆವರ ಪ್ರಮೇಯಗಳ ಸರ್ವಜ್ಞ್ಞರ ಉಕ್ತ್ಯನುಸರಿಸಿ ವಿರಚಿಸಿ ಹರಿಮಂದಿರದ ಸುಪಥ ಪಾ - ಮರರಿಗೆ ಸೌಕರ್ಯವಗೈಸಿ 6 ವರದೆಂದ್ರರ ಪದಸರಸಿಜ ಸೇವಿಸಿ ಹರುಷದಲವರ ಕರುಣ ಪಡೆದ ವರವೃಂದಾವನ ಸಂಸ್ಥಾಪಿಸಿ ಪರಿಪರಿಯಿಂದಲಿಯಾರಾಧಿಸಿದ7 ಜ್ಞಾನದಿಲಯವನು ಚಿಂತಿಸುತಾ ಚಿತ್ರ ಬಾನುಸಪ್ತಮಿ ಯಾಶ್ವಿಜಶುದ್ಧ ಜಾನಕಿ ಪತಿಪದ ಧೇನಿಸಿಹರಿಪುರ ಕೀನರ ದೇಹ ಜರಿದು ಸಾರ್ದ 8 ಪರಮಭಾಗವತರೆನಿಸುವರಿವರನ ವರ ತನದ ಸುಮಾಲಿಕೆ ಸತತ ಸ್ಮರಿಸುವ ಭಕುತರ ಪುರುಷಾರ್ಥಗಳನು ವರದೇಶವಿಠಲನ ಕೊಡುವ ತ್ವರಿತ 9
--------------
ವರದೇಶವಿಠಲ
ಶ್ರೀಲೋಲನೆ ಪರಿಪಾಲಿಪುದೆಮ್ಮನು ಕಾಲವಿಳಂಬಿಸದೇ ಪ. ಪೇಳಲೆಮಗೀ ನಾಲಿಗೆ ಸಾಲದು ಅ.ಪ ಅನಿಮಿಷರೂಪದಿಂದಾಗಮವನು ನೀನಜನಿಗೆ ತಂದಿತ್ತೆ ಪೂರ್ವದಿ ಘನ ಕಚ್ಛಪರೂಪದೊಳಾಗಿರಿಯನು ಬೆನ್ನೊಳಗಾಂತೇ ಅನಿಮಿಷರೊಡೆಯನ ಮನವನು ತಣಿಸಿದ ಫನಮಹಿಮನೆ ಶ್ರೀ ವನಜಜ ಜನಕನೆ ಶ್ರೀಲೋಲನೆ 1 ದುರುಳನ ಕರದಲಿ ಧರಣಿಯು ಸಿಲುಕುತ ಕರೆಕರೆಗೊಳ್ಳುತಿರೆ ವರಸೂಕರನಾಗುತ ದುರುಳನ ಛೇದಿಸಿ ಧರಣಿಯ ಕೈಪಿಡಿದೆ ಮತ್ತೆ ತರಳನ ಪೊರೆಯಲು ನರಕೇಸರಿ ರೂಪದಿ ಹಿರಣ್ಯಕನುದರದ ಕರುಳನು ಕಿತ್ತೆಸೆದೆÉೀ ಶ್ರೀಲೋಲನೆ 2 ಕಪಟತನದಲಿ ವಟುವಂದದಿ ಬಂದು ನೆಲವದಾನವ ಬೇಡಿ ಕಪಟವನರಿಯದೆ ದಾನವ ಕೊಟ್ಟನ ಪಾತಾಳಕೆ ಗುರಿ ಮಾಡಿ ಅಪರಿಮಿತಾನಂದದಿ ಮೆಚ್ಚಿ ಬಲೀಂದ್ರನ ಮನೆಬಾಗಿಲ ಕಾಯುವ ಗೊಲ್ಲ ನೀನೆನಿಸಿದೆ 3 ವರಮುನಿ ಜಮದಗ್ನಿಯ ರೇಣುಕಾಸುತ ಭಾರ್ಗವ ನೀನಾಗಿ ವರಪರಶುದರನೆಂದೆನ್ನಿಸಿ ಭೂಭುಜರನು ತರಿದಟ್ಟಿ ಧರಣೀಸುರರಿಗೆ ಸುರತರುವೆನಿಸಿದ 4 ಹರವಿರಂಚಿಯರ ವರಗಳ ಗರ್ವದೆ ದಶಶಿರದೈತ್ಯನು ಮೆರೆದು ಪರಿಪರಿ ವಿಧದಿಂ ಸುರಭೂಸುರರನು ಕರೆಕರೆಗೊಳಿಸುತಿರೆ ಧರಣಿಪ ದಶರಥ ತನುಭ ವರೆನ್ನಿಸಿ ನಿಶಿಚರ ಕುಲವನೇ ಸವರಿದ ರಾಘವ 5 ಅಷ್ಟಮದಂಗಳ ದಟ್ಟಣೆಯಿಂದತಿ ಅಟ್ಟಹಾಸದಿ ಮೆರೆದಾ ದುಷ್ಟ ಕಂಸನ ಮರ್ಧಿಸಿ ಧರಣಿಯ ಶಿಷ್ಟರ ಪಾಲಿಸಲು ವೃಷ್ಟಿವಂಶದಿ ಬಂದು ಕೃಷ್ಣನೆನಿಸಿ ತನ್ನ ಇಷ್ಟರಾದ ಪಾಂಡುಪುತ್ರರ ಸಲಹಿದ6 ಸಿದ್ದಿ ಸಂಕಲ್ಪದಿ ಬಲಭದ್ರನೆನ್ನಿಸಿ ಭವಬದ್ಧ ಜೀವಿಗಳಂ ಶುದ್ಧ ಮಾರ್ಗದಿ ಸಂಸ್ಕರಿಸಿ ಜಗವನು ಉದ್ಧರಿಸಲ್ಕಂಡು ಬುದ್ಧನೆಂದೊಳಿಸಿ ಮೆರೆದ ಸಂಕರ್ಷಣ ಭದ್ರಮಂಗಳ ಭವ್ಯಸ್ವರೂಪನೆ7 ಕಲಿಮಲದೋಷವ ತೊಳೆಯಲು ಪುನರಪಿ ಕಳೆಯೆ ನೀನೈತರುವೆ ಫಲತೆರದಲಿ ಭಕ್ತರ ಸಲಹಲು ಫಲರೂಪಗಳ ಕೈಕೊಳುವೆ ಹಲುಬುವ ಕಂದನ ಸಲಹೈ ಸಿರಿದೊರೆ 8
--------------
ನಂಜನಗೂಡು ತಿರುಮಲಾಂಬಾ
ಸದ್ಭಾವದಿಂದ ಗುರುವೇ ಗುರುವೆಂದು ಬಾಗಿ ಸದ್ಭಕ್ತನಾಗಿ ಮರಿಯಾ ಮರಿಯಾದೆ ಹೋಗಿ ಸದ್ಭೋಧಸಾರ ಗರವಾ ಗರವಾಮೃತಾದಾ ಚಿದ್ಭಾನುದೋರಿ ಹೊರೆವಾ ಹರಿವಾಭವಾಂಧಾ 1 ಗುರುಪಾದ ಕಾಣದನಕಾದನ ಕಾವನಾಗೀ ಮರದೆನ್ನ ತನ್ನದೆನುತಾದೆನುತಾಂನರಾಗಿ ಅರಿತೀಗ ಮಾಡಿ ಗುರುತಾಗುರು ತಾತನಂಘ್ರಿ ಪರಮಾರ್ಥವಸ್ತು ವರ ದೇವರ ದೇಶಸಾರಿ 2 ಗುರುಮಾರ್ಗ ಬಿಟ್ಟು ಬರುದೇ ಬರುದೇನೊ ಪ್ರಾಣಿ ಅರತೇನುಶಾಸ್ತ್ರ ಪರಮಾಪರಮಾರ್ಥಗಣೀ ಇಂದು 3 ಗುರುಹಸ್ತಮಸ್ತಕದಲೀ ಕದಲೀತೆ ಕ್ಲೇಶಾ ದೊರವನು ಹೃತ್ಕಮಲದಾಮಲದಾತ್ಮ ಈಶಾ ಗುರುಮಿತ್ರ ಮಾತೃ ಜಕನಕಾಜನಕಾರ್ತಬಂಧು ಶರಣ್ಹೋಕ್ಕು ನೋಡಿ ಸುಖವಾ ಸುಖವಾಗದೆಂದು4 ಇರುತಿಪ್ಪನೆಲ್ಲಿ ಗುರುತಾ ಗುರುತಾದ ಕಾಶೀ ನೆರೆಗಂಗಿ ಪಾದತೀರ್ಥತೀರಥಾಧರಾಶಿ ಗುರು ವಿಶ್ವನಾಥನೆನುವಾನೆನುವಾವನೆಲ್ಲಿ ನರರೋಳು ಧನ್ಯ ತಮನುತ್ತ ಮನೊರ್ವಿಯಲ್ಲಿ5 ಕಾಣದೆ ಕಂಗಳಲಿತಾ ಲಲಿತಾದ ನೋಟಾ ಜಾಣೀಸಿ ಕೋಟಿ ತರಣೀ ತರುಣೀಯ ಕೂಟಾ ಕಾಣೀಸಿ ಉನ್ನಮನೆಯಾ ಮನಿಯಾವೆ ನೋಡಿ ಪ್ರಾಣವಕಾವ ಗುರುವೀ ಗುರುವೀನ ಪಾಡಿ 6 ಮನಮುಟ್ಟಿಮುದ್ರಿ ಸಲಿತಾಸತಿತಾಳಭೇರಿ ಅನುಹಾತ ಘೋಷಶ್ರವಣಾಶ್ರವಣಕ್ಕೆ ಬೀರಿ ತನುಭಾವವನ್ನು ಮರಸೀ ಮೆರಸೀದನೆಂದು ನೆನಿಬೇಕು ಸದ್ಗುರುವಿನಾರೂವ್ಹಿನಾಗತಂದು 7 ಗುರುಮೂರ್ತಿಗೆಂದನರನೇ ನರನೇವನವನು ಗುರುಭಕ್ತಿ ಗಳ್ಳಕುಶಲಾಕುಶಲಾದವನು ಗುರುನಾಮ ಕೂಗದವನೈದುವನೇ ಗತಿಯಾ ಗುರುಪಾದಪೂಜಿಮರತಾ ಮರತಾವನೀಯಾ 8 ಗುರುಅಷ್ಟಕದ ಮಹಿಮಾ ಮಹಿಮಗೇಬಲಾ ಸ್ಮರಿಸೀದನ್ನು ಭಕುತೀಭಕುತೀವದೆಲ್ಲಾ ಗುರು ಮಹೀಪತಿ ಕರುಣಾ ಕರುಣ ನುಪಾಡೀ ಕರಕೊಂಡುಜ್ಞಾನಸುಧೆಯಾ ಸುಧಿಯಾದೆ ನೋಡಿ9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಮೀರನ ಮಹಿಮೆ ಪೇಳುವೆವಾಸುದೇವ ವಿಧೀರ ಮುಖಸುರರಾಶಿತಸ್ತ್ರೀ ಮುನಿಯತೀಶ ಸು-ದಾಸರಭಿ ನಮಿಪೆ ಪ ವಾರಿಧಿಯನು ದಾಟುಲೋಸುಗಶ್ರೀ ರಮೇಶನ ನಮಿಸಿ ಗಿರಿಯನುಚಾರು ಚರಣದಿ ಮೆಚ್ಚಿ ಮೇಲಕೆ ಹಾರಿದನು ಹನುಮಾ 1 ಹರಿಯ ಬಲವನು ಸರಿಸಿ ಪೋದುವುತರುಗಳಬ್ಧಿಯು ಯಾದಸಂಗಳುಶರಧಿ ತಳಗತ ಕಪಿಯಗೋಸುಗಗಿರಿಯು ಎದ್ದಿಹನು 2 ಧರಣಿಧರ ಪಕ ನಾಶ ಕಾಲದಿಮರುತ ರಕ್ಷಿತ ಪಕ್ಷ ಹೈಮನುಶರಧಿ ಭೇದಿಸಿ ಹನುಮ ವಿಹೃತಿಗೆತ್ವರದಿ ಬಂದಿಹನು 3 ಪರಮ ಪೌರುಷ ಬ ಲನು ಕಪಿವರಚರಿಸದಲೆ ವಿಶ್ರಮವನದರೊಳುಹರುಷದಿಂದಪ್ಯವನ ಕಂಡನುಉರಗ ಮಾತೆಯನು 4 ಸುರಸೆಯೆಂಬುವ ನಾಗಮಾತೆಗೆವರವ ನೀಡುತ ಕಪಿಯ ಬಲವನುಅರಿಯಲೋಸುಗ ಕಳುಹಿಸೀದರುಸುರರು ಶರಧಿಯಲಿ 5 ಯಾವ ವಸ್ತುವ ತಿನ್ನೋ ಇಚ್ಛೆಯು ೀವಿ ನಿನಗಾಗುವದೊ ಅದು ತವಬಾಯಿಗನ್ನಾಗಿರಲಿ ಎಂದರುದೇವತೋತ್ತುಮರು 6 ಸುರರ ವರವನು ಕಾಯೊಗೋಸುಗಸುರಸೆ ಮುಖದೊಳು ಹೊಕ್ಕು ಹೊರಡುತಪರಮಮಣು ರೂಪದಲಿ ದಿವಿಜರಹರುಷ ಬಡಿಸಿದನು 7 ಅಸುವರಾತ್ಮಜನುರು ಪರಾಕ್ರಮಹೃಷಿತರಾಗುತ ನೋಡಿ ದಿವಿಜರುಕುಸುಮವೃಷ್ಟಿಯ ಮಾಡುತವನಲಿಯಶಸು ಪಾಡಿದರು 8 ಛಾಯಾ ಪ್ರಾಣಿಗಳನ್ನು ಹಿಡಿಯುವಮಾಯಾ ಸಿಂಹಕೆ ನಾಮ ಕಸುರಿಯವಾಯುಸುತ ನೋಡಿದನು ಎದುರೆ ವಿಹಾಯ ಮಾರ್ಗದಲಿ 9 ವಿಧಿಯು ಲಂಕೆಯ ಕಾಯಲೋಸುಗಸುತಿಗ್ವರಗಳನಿತ್ತು ಕಾದಿಹಾಮದದಿ ಅಸುರಿಯು ತನ್ನ ಛಾಯವವದಗಿ ಪಿಡಿದಿಹಳು 10 ಆಗ ಆಕೆಯ ಪೊಕ್ಕು ಪೊಟ್ಟೆಯಯೋಗದಿಂದಲಿ ಪಾವಮಾನಿಯುಬೇಗ ಬಂದನು ಹೊರಗೆ ತತ್ತನುಭಾಗ ಮಾಡುತಲೆ 11 ಆತ್ಮಬಲವಮಿತೆಂದು ತೋರಿವಿಧಾತೃ ವರವುಳ್ಳವಳ ಕೊಲ್ಲುತವಾತನಂತೆ ತ್ರಿಕೂಟ ಪರ್ವತಕೀತ ಹಾರಿದನು 12 ಬೆಕ್ಕಿನಂದದಿ ಹನುಮ ತನ್ನಯಚಿಕ್ಕ ರೂಪವ ಮಾಡಿ ಲಂಕೆಯಪೊಕ್ಕು ನಿಶಿಯಲಿ ಮಧ್ಯಮಾರ್ಗದಿರಕ್ಕಸಿಯ ಕಂಡಾ 13 ಬಟ್ಟಿಯಲಿ ಬಂದಡ್ಡಗಟ್ಟುವದುಷ್ಟ ರಾಕ್ಷಸೀಯನ್ನು ಗೆಲ್ಲುತಮುಷ್ಟಿಯಿಂದಲಿ ಹೊಡೆದು ಲಂಕಾಪಟ್ಟಣವ ಪೊಕ್ಕಾ 14 ಪುರದ ಹೊರಗೊಳಗ್ಹೊಕ್ಕು ರಾಮನತರುಳೆ ಕಾಣದೆ ಹನುಮ ಶಿಂಶುಪತರುನ ಮೂಲದಿ ಕಂಡ ಸೀತೆಯಉರುತರಾಕೃತಿಯಾ 15 ನರಜನಂಗಳ ಮೋಹ ಮಾಡುವಪರಮ ಪುರುಷನ ಚೇಷ್ಟೆಗಳನನುಸರಿಸಿ ನಡೆಯುವ ದೇವಿ ಚರಿಯನುಸರಿಸಿ ಚೇಷ್ಟಿಸಿದಾ 16 ರಾಮನಿಂದಲಿ ಅಂಗುಲಿಯನುಪ್ರೇಮದಿಂದಲಿ ಕೇಸರಿಯ ಸುತಾಭೂಮಿ ಜಾತೆಗೆ ಕೊಟ್ಟು ಸುಖಿಸಿದಾನಾಮ ಹದ್ದನದಿ 17 ರುಚಿ ನೀಡಿದವು ರಾವಣನ್ಹರಣ ಕಾಲದಲಿ 18 ಧರಣಿದೇವಿಯ ಸುತೆಯ ತನ್ನಯಪರಮ ಚೂಡಾಮಣಿಯನಿತ್ತಳುಗುರುತು ತೋರಿಸು ರಾಮದೇವಗೆಮರುತಾ ಸುತನೆಂದು 19 ಸೀತೆ ಹನುಮರದೀ ವಿಡಂಬನಯಾತು ಧಾನರಿಗಲ್ಲಾ ನಾಕಗಭೂತ ವಿಡಂಬನ ಧೈತ್ಯವಂಚನಹೇತು ಆಗುವದು 20 ಇಂಥ ಕಾರ್ಯವ ಮಾಡಿ ತನ್ನಯಾನಂಥ ಪೌರುಷ ಪ್ರಕಟ ಮಾಡುವದಿಂತು ಮನವನು ಮಾಡಿದನು ಮತಿವಂತ ವಾನರನು 21 ಚಾರು ಶಿಂಶುಪ ಬಿಟ್ಟು ರಾಕ್ಷಸವಾರ ವಳಿಸುವ ಮನದಿ ಹನುಮನುಭೂರಿವನವನು ಮುರಿದು ಲಂಕೆಯತೋರಣೇರಿದನು 22 ಭೃತ್ಯ ಜನರಿಗೆಕಟ್ಟಿ ಹಾಕಿರಿ ಕಪಿಯನೆಂದನುರುಷ್ಟನಾಗುತಲೆ 23 ಹರನ ವರದಲಿ ಮರಣ ವರ್ಜಿತಸರವ ಭೃತ್ಯರು ರಾಕ್ಷಸೇಶನಮರುತ ಸೂನುನ ಮೇಲೆ ಬಂದರುಪರಮ ವೇಗದಲಿ 24 ಹತ್ತು ಒಂದು ಕೋಟಿ ಯೂಥವತತ್ಸಮಾನ ಪುರಃ ಸರಾನ್ವಿತಎತ್ತಿ ಆಯುಧ ಸೈನ್ಯ ಹನುಮನಸುತ್ತಿಕೊಂಡಿಹುದು 25 ಹಿಡಿದು ಕರದಲಿ ಆಯುಧಂಗಳಹೊಡೆವ ಸೈನ್ಯವ ನೋಡಿ ಹನುಮನುಹೊಡೆದು ಕರತಳದಿಂದಲೆಲ್ಲರಪುಡಿಯ ಮಾಡಿದನು 26 ನೀಲಕಂಠನ ವರಗಿರಿಪ್ರಭಏಳುಮಂದಿಯ ಮಂದಿ ಪುತ್ರರಕಾಲಿನಿಂದಲಿ ಒದ್ದು ಕೆಡಹಿದನಾಳು ಮಾಧವನಾ 27 ಧುರದಿ ಮುಂಭಾಗದಲಿ ಪೋಗುವಗರುವ ಮಾಡುವ ರಾಕ್ಷಸಂಗಳಮುರಿದು ಸೈನ್ಯದ ತೃತೀಯ ಭಾಗವಹರಿಯು ಕೊಂದಿಹನು 28 ಪೋರ ಬಲವನು ಕೇಳಿ ಹನುಮನಚಾರ ಮುಖದಲಿ ಸ್ವಾತ್ಮ ಸದೃಶರುಮಾರ ಕಾಕ್ಷಾಭಿಧನ ಕಳುಹಿದ ವೀರ ರಾವಣನು 29 ಉತ್ತುಮಾಸ್ತ್ರಗಳಿಂದ ಮಂತ್ರಿತವೆತ್ತಿ ಬಾಣಗಳ್ಹೊಡೆದು ಹನುಮನಕೆತ್ತಿ ಹಾಕಲು ಅಕ್ಷ ಸಾಲದೆಶಕ್ತಿ ನಿಂತಿಹನು 30 ಮಂಡ ಮಧ್ಯೆಯ ತನಯ ಅಕ್ಷನುಪುಂಡ ರಾವಣ ಸಮನು ಸೈನ್ಯದಹಿಂಡಿನೊಳು ತೃತೀಯಾಂಶ ಯಂದುದ್ದಂಡ ಚಿಂತಿಸಿದಾ 31 ಹತ್ತು ತಲೆಯವನನ್ನೆ ಕೊಲ್ಲುವದುತ್ತಮಾತ್ಮವು ಆದರೀತನುತುತ್ತು ರಾಮಗೆ ಕಾರಣಿಂಥಾಕೃತ್ಯ ಥರವಲ್ಲಾ 32 ಇಂದ್ರಜಿತನನು ನಾನು ಈಗಲೆಕೊಂದು ಹಾಕಿದರಿವನ ಕೃತಿಗಳಛಂದ ನೋಡುವುದಿಲ್ಲಾ ಕಪಿಗಳವೃಂದ ಯುದ್ಧದಲಿ 33 ತತ್ಸಮಾಗಿಹ ಮೂರನೆಯವನ್ಹತ್ಯೆ ಮಾಡುವೆನೆಂದು ಹನುಮನುಚಿತ್ತದಲಿ ಚಿಂತಿಸುತ ತತ್ವದ ವೆತ್ತಿ ಹಾರಿದನು 34 ತಿರುಹಿ ಚಕ್ರದ ತೆರನೆ ರಾಕ್ಷಸರರಸೀನಾತ್ಮಜನನ್ನು ಕ್ಷಣದಲಿಧರಿಯ ಮೇಲಪ್ಪಳಿಸಿ ಒಗೆದನುಮರುತನಾತ್ಮಜನು 35 ಹನುಮನಿಂದಲಿ ತನ್ನ ಕುವರನುಹನನ ಪೊಂದಲು ನೋಡಿ ರಾವಣಮನದಿ ಶೋಕಿಸುತಾತನಣ್ಣನರಣಕೆ ಕಳುಹಿದನು36 ಇಂದ್ರಜಿತು ಪರಮಾಸ್ತ್ರಯುತ ಶರವೃಂದದಲಿ ಹೊಡೆದು ಹನುಮನಹಿಂದಕಟ್ಟಲು ಶಕ್ತಿ ಸಾಲದೆನಿಂದು ಚಿಂತಿಸಿದಾ 37 ಸರವ ದುಃಸಹವಾದ ಬ್ರಹ್ಮನಪರಮಮಸ್ತ್ರವ ಬಿಡಲು ರಾವಣಿಹರಿಯು ವ್ಯಾಕುಲನಾಗದಲೆ ಈಪರಿಯ ಚಿಂತಿಸಿದಾ 38 ವಾಣಿನಾಥನ ಎಷ್ಟೊ ವರಗಳನಾನು ಮೀರಿದೆ ದುಷ್ಟ ಜನದಲಿಮಾನಿನೀಯನು ಕಾರಣಾತನಮಾನ ಮಾಡುವೆನು 39 ದುಷ್ಟ ರಾಕ್ಷಸರೆಲ್ಲ ಎನ್ನನುಕಟ್ಟಿ ಮಾಡುವದೇನು ಪುರಿವಳಗಿಷ್ಟು ಪೋಗಲು ರಾಕ್ಷಸೇಶನಭೆಟ್ಟಿಯಾಗುವದು 40 ಹೀಗೆ ಚಿಂತಿಸಿ ಹನುಮನಸ್ತ್ರಕೆಬಾಗಿ ನಿಲ್ಲಲು ಅನ್ಯ ಪಾಶಗಳಾಗೆ ಬಿಗಿದರು ಬ್ರಹ್ಮನಸ್ತ್ರವುಸಾಗಿತಾಕ್ಷಣದಿ 41 ಕಟ್ಟಿ ಕಪಿಯನು ರಾಕ್ಷಸೇಶನ ಭೆಟ್ಟಿಗೊಯ್ಯಲು ಆತನೀತನದೃಷ್ಟಿಯಿಂದಲೆ ನೋಡಿ ಪ್ರಶವನೆಷ್ಟೊ ಮಾಡಿದನು 42 ಕಪಿಯೆ ನೀನು ಕುತೋಸಿ ಕಸ್ಯವಾಕೃತಿಯ ಮಾಡಿದಿ ಯಾತಕೀಪರಿಕಿತವ ಕೇಳಲು ರಾಮನೊಂದಿಸಿ ಚತುರ ನುಡಿದಿಹನು 43 ಹೀನ ರಾವಣ ತಿಳಿಯೇ ಎನ್ನನು ಮಾನವೇಶ್ವರ ರಾಮದೂತನುಹಾನಿಮಾಡಲು ನಿನ್ನ ಕುಲವನುನಾನು ಬಂದಿಹೆನು 44 ಜಾನಕೀಯನು ರಾಮದೇವಗೆಮಾನದಿಂದಲಿ ಕೊಡದೆ ಹೋದರೆಹಾನಿ ಪೊಂದುವಿ ಕೇಳೊ ನೀ ನಿಜಮಾನವರ ನೀ ಕೂಡಿ 45 ಶಕ್ತರಾಗರು ಸರ್ವ ದಿವಿಜರುಮತ್ರ್ಯನಾತನ ಬಾಣ ಧರಿಸಲುಎತ್ತೋ ನಿನಗಿವಗಿನ್ನು ಧರಿಸಲುಹತ್ತು ತಲೆಯವನೆ 46 ಸಿಟ್ಟು ಬಂದರೆ ಆತನೆದುರಿಲಿಘಟ್ಟಿನಿಲ್ಲುವನಾವ ರಾಕ್ಷಸಇಷ್ಟು ಸುರದಾನವರೊಳಾತನದೃಷ್ಟಿಸಲು ಕಾಣೆ 47 ಇಂಥಾ ಮಾತನು ಕೇಳುತಾತನಅಂತ ಮಾಡಿರಿಯನ್ನೆ ವಿಭೀಷಣಶಾಂತ ಮಾಡಲು ಪುಚ್ಛ ದಹಿಸಿರಿಯಂತ ನುಡಿದಿಹನು 48 ಅರಿವೆಯಿಂದಲಿ ಸುತ್ತಿ ಬಾಲಕೆಉರಿಯನ್ಹಚ್ಚಲು ಯಾತುಧಾನರುಮರುತ ಮಿತ್ರನು ಸುಡದೆ ಹನುಮಗೆಹರುಷ ನೀಡಿದನು 49 ಯಾತುಧಾನರು ಮಾಡಿದಂಥಪಘಾತವೆಲ್ಲವ ಸಹನ ಮಾಡಿದವಾತಪೋತನು ಲಂಕೆ ದಹಿಸುವಕೌತುಕಾತ್ಮದಲಿ 50 ತನ್ನ ತೇಜದಿ ವಿಶ್ವಕರ್ಮಜಘನ್ನಪುರಿಯನು ಸುಟ್ಟು ಬಾಲಗವನ್ಹಿಯಿಂದಲೆ ಸರ್ವತಃ ಕಪಿಧನ್ಯ ಚರಿಸುತಲೆ 51 ಹೇಮರತ್ನಗಳಿಂದ ನಿರ್ಮಿಸಿದಾಮಹಾ ಪುರಿಯನ್ನು ರಾಕ್ಷಸಸ್ತೋಮದಿಂದಲಿ ಸಹಿತ ಸುಟ್ಟುಸುಧಾಮ ಗರ್ಜಿಸಿದಾ 52 ಹನುಮಸಾತ್ಮಜ ರಾಕ್ಷಶೇಶನತೃಣ ಸಮಾನವ ಮಾಡಿ ನೋಡಲುದನುಜರೆಲ್ಲರ ಭಸ್ಮ ಮಾಡುತಕ್ಷಣದಿ ಹಾರಿದನು 53 ಕಡಲ ದಾಟುತ ಕಪಿಗಳಿಂದಲಿಧಡದಿ ಪೂಜಿತನಾಗಿ ಮಧುವನುಕುಡಿದು ರವಿಜನ ವನದಿ ರಾಘವನಡಿಗೆ ಬಂದಿಹನು 54 ಸೀತೆ ನೀಡಿದ ಚೂಡಾರತ್ನವನಾಥನಂಘ್ರಿಯೊಳಿತ್ತು ಸರ್ವಶಗಾತ್ರದಿಂದಲಿ ನಮಿಸಿ ರಾಮಗೆಶಾತ ನೀಡಿದನು 55 ರಾಮನಾದರು ಇವಗೆ ನೀಡುವಕಾಮ ನೋಡದೆ ಭಕ್ತಿಭರಿತಗೆಪ್ರೇಮದಿಂದಲಿ ಅಪ್ಪಿಕೊಂಡನುಶ್ರೀ ಮನೋಹರನು 56 ಇಂದಿರೇಶನೆ ಎನ್ನ ಚಿತ್ತದಿನಿಂದುಮಾಡಿದ ನೀಸುಕವನವನಿಂದು ಭಕ್ತಿಲಿ ತತ್ಪುದಾಂಬುಜದ್ವಂದ್ವಕರ್ಪಿಸುವೆ 57 ಇತಿ ಶ್ರೀ ಸುಂದರ ಕಾಂಡಃ ಸಮಾಪ್ತಃ (ಪ್ರಾಕೃತ)ಶ್ರೀ ಗುರುವರದ ಇಂದಿರೇಶಾರ್ಪಣಮಸ್ತು ನೋಡುವೆನು ನೋಡುವೆನು ತೋರಿಸುನಿಮ್ಮ ನೋಡುವೆ ಪ ನೋಡುವೆ ಮಾಡು ದಯ ಎನ್ನೊಳುರೂಢಿಯೊಳಗೆ ನಿಮ್ಮ ಪಾಡುತ ಮಹಿಮೆ ಅ.ಪ. ಮದನ ಜನಕನೊಳು ಕದನ ಮಾಡಿದ ದು-ರ್ಯೋಧನನ ಶಿರದೊಳಿಟ್ಟ ಪದುಮ ಪಾದಗಳನು 1 ನೂರುಗಾವುದ ಜಲ ಹಾರುವಾಗಲೆ ದಿವ್ಯಭೂರುಹ ಕೆಡದಿಹ ಊರುಗಳನ್ನು ಸ್ವಾಮಿ 2 ಕೆಟ್ಟ ಬಕನ ಕೊಂದು ಅಷ್ಟು ಅನ್ನವನುಂಡಹೊಟ್ಟಿ ನೋಡುವೆ ದಿವ್ಯ ದೃಷ್ಟಿ ನೀಡಿರಿ ಸ್ವಾಮಿ 3 ಭೂಮಿ ಸುತೆಯ ವಾರ್ತೆ ರಾಮನು ಕೇಳಿದಾಪ್ರೇಮಾಲಿಂಗನವಿತ್ತ ಆ ಮಹಾವುರವನ್ನೆ 4 ಮದಗಜಗಳ ಕೂಡ ಕದನ ಮಾಡಿದ ದಿವ್ಯಗದೆಯ ಪಿಡಿದ ಕರವದು ಮಗಳನು ಸ್ವಾಮಿ 5 ಅಜಗರ ನಹುಷನ ವಿಜಯ ಸಹೋದರ ಪದುಮನಾಭನ ಗುಣಮುದದಿ ಸಾರುತ ದೈತ್ಯ ಕದನಗೆಳೆದ ನಿನ್ನ ವದನಕಮಲವನ್ನು 6 ವೇದ ಶಾಸ್ತ್ರಗಳನ್ನು ಓದಿ ಹೇಳುತ ಶಿಷ್ಯಮೋದಗರೆವ ನಿನ್ನ ವಾಣಿ ಸ್ವಾದು ಕೇಳುವೆ ನಿನ್ನ 7 ಇಂದಿರೇಶನ ದಯದಿಂದ ಗೆಲಿದಿ ಇಪ್ಪ-ತ್ತೊಂದು ಮತವ ಆನಂದ ತೀರ್ಥರೆ ನಿಮ್ಮ 8
--------------
ಇಂದಿರೇಶರು
ಸವಿಸುಖ ಕಂಡೆ ಸುವಿದ್ಯ ಬ್ರಹ್ಮರಸವ ಧ್ರುವ ಅಧ್ಯಾತ್ಮಾನಂದದೂಟ ಸಿದ್ಧಾಂತನುಭವದಿಂದ ಬದ್ಧವಾಗಿ ಸೇವಸಿದ ಇದು ಏಕಾಗ್ರ 1 ಉಂಡು ಹರುಷವಾಯಿತು ಮಂಡಲದೊಳಗಿಂದು ಕಂಡು ಆನಂದ ಸುಖವ ಪಿಂಡಾಂಡದೊಳು 2 ಸುರಸ ಸಾರಾಯದೂಟ ಪರಿಪರಿ ಸವಿದಿನ್ನುಹರುಷವಾಯಿತು ಎನಗೆ ತರಳ ಮಹಿಪತಿಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸುಖದಕ್ಕಿತೇ | ಸುಖದಕ್ಕಿತು ಗುರುದಯ ಲೆಕ್ಕಾ ಪ ಕಂಡವರ ಮಾತಿಗೆ ಮನವಿಟ್ಟು ಜಗದೊಳು | ಹಿಂಡದೈವಕ ಬಾಯಿದೆರುತ್ತಿದ್ದೆನೆ | ಮಂಡಿಯ ಮ್ಯಾಲೆನ್ನಾ ಕರವಿಟ್ಟು ಹೊಳೆವಾ ಪಿಂಡಾಂಡದಿ ಗಂಡನ ತೋರಿದನಕ್ಕ 1 ಇಲ್ಲೆಂಬ ಸಂಶಯ ಹೋಯಿತು ಒಳಹೊರ | ಗೆಲ್ಲೆಲ್ಲಿ ನೋಡಲು ತಾನಾದನೇ | ಫುಲ್ಲನಾಭನ ಕೂಡಿ ತನುಭಾವ ಮರದು | ಕೈವಲ್ಯ ಮಂದಿರ ಸಾರಿದೆನಕ್ಕಾ 2 ಏನ ಹೇಳಲಿ ಆಡು ತಾಡುತಾ ಯಡಹಿನಿ | ಧಾನವ ಕಂಡಂತಾಯಿತೇ | ಮಾನುಭಾವರಸಾದ ತಂದೆ ಮಹಿಪತಿ | ತಾನೊಲಿದೆನ್ನನುದ್ಧರಿಸಿದನಕ್ಕಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು