ಒಟ್ಟು 19 ಕಡೆಗಳಲ್ಲಿ , 12 ದಾಸರು , 19 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಿಗ್ಗಿದಳು ನಂದನ ಸತಿ ಮುಗ್ಧೆ ತನ್ನಯ ಸುತನ ಮುದ್ದು ಮುಖವ ನೋಡಿ ಅ.ಪ ಪಾಲು ಬೆಣ್ಣೆ ಕಳ್ಳ ತಾಳು ಕಟ್ಟುವೆ ನಿನ್ನ ಕಾಲುಗಳನೆಂದು ಕರಗಳಲಿ ಪಿಡಿದು ನೀಲಮೇಘಶ್ಯಾಮ ಶ್ರೀಲಕುಮಿಯರಸನನು ಬಾಲನೆಂದರಿತು ಆಲಿಂಗನದಿ ಮೈ ಮರೆತು1 ಅಂಬುಜೋದ್ಭವನಯ್ಯ ಅಂಬೆಗಾಲಿಡುವುದನು ನಂಬಬಹುದೇ ಮೋಹಜಾಲವಿರಲು ಸಂಭ್ರಮದಿ ಸುತನನ್ನು ಚುಂಬಿಸುತ ರಭಸದಲಿ ಮೋದ ಕಂಬನಿಯ ಸುರಿಸುತ್ತ 2 ಓರೆಗಣ್ಣಿನ ನೋಟ ನಾರಿಯರ ಪೇಚಾಟ ಮೂರು ಲೋಕಕೆ ಹರ್ಷಕರ ಮಂದಹಾಸ ಸೇರಿಸಿದ ಮುಕ್ತಗಳ ಮೀರಿ ಪೊಳೆಯುವ ದಂತ ಚಾರುಮುಖಿ ಸುತನ ಮನಸಾರ ದರುಶನದಿಂದ 3 ಭೃಂಗಗಳ ಧಿಕ್ಕರಿಪ ಮಂಗುರುಳು ಮಸ್ತಕದಿ ರಂಗಿನಾ ಕಸ್ತೂರಿತಿಲಕ ಪಣೆಯಲ್ಲಿ ಸಿಂಧು ಶ್ರೀರಂಗನ್ನ ನೋಡುತಲಿ ಅಂಗನಾಮಣಿ ಅಂತರಂಗ ಪ್ರೇಮದ ಭರದಿ 4 ತನ್ನ ಉದರದಿ ನಳಿÀನಜಾಂಡವನೆ ಪೊತ್ತಿರುವ ಉನ್ನತೋನ್ನತ ಸುಗುಣ ಜ್ಞಾನಮಯನ ತನ್ನ ಮಗನೆಂದರಿತು ಸ್ತನ್ಯಪಾನದಿ ಸುಪ್ರ ಸನ್ನಮುಖಿ ಹರುಷ ಪುಳಕಿತಳಾಗಿ ಹೆಮ್ಮೆಯಲಿ 5
--------------
ವಿದ್ಯಾಪ್ರಸನ್ನತೀರ್ಥರು
ಹುಡುಕಿದಳೆಶೋದ ಕಂದನ ಪಿಡಿದು ದಾರೆತ್ತಿಕೊಂಡ್ಹೋದರೆನುತ ಪ ಕಂಗಳನಿಕ್ಕಿ ಕಾದಿಹ್ಯದು ಸಿಂಗರದ ಗೋಪಿರ್ಹೆಂಗಳೆಯರು ರಂಗನ ಸುಖಕವರು ಗುಂಗುಹಿಡಿದು ಕುಳಿತಿಹ್ಯರು ರಂಗುಮಂಟಪದೊಳಗೆ ಎನ್ನ ಕಂಗಳಿದರ ಕಾಣನಾವ ಅಂಗನೆಯರಡಗಿಸಿದರೆಂದು ಅಂಗಲಾಚಿ ಅಂತರಂಗದಿ 1 ಉನ್ನತೋನ್ನತ ಋಷಿಗಣರು ಪನ್ನಂಗಶಾಯಿಯ ಸನ್ನಿಧಿಲವರು ಮುನ್ನಾವ ಕಾಲದಿಂ ಕುಳಿತಿಹರು ಭಿನ್ನವಿಲ್ಲದೆ ತಪವ ಮಾಳ್ಪರು ಇನ್ನು ಕಾಣಲವರು ತಮ್ಮಿಷ್ಟ ವನ್ನು ಪೂರ ಪಡೆವನಕ ಎನ್ನ ಕಣ್ಣಿಗೆ ಹಾಕರೆಂದು ಬನ್ನಬಡುತ ತನ್ನೊಳ್ತಾನು 2 ದೂಷಣೆ ಭೂಷಣಗಳನೊದೆದ ಮೋಸ ಕ್ಲೇಶಗಳನು ತರಿದ ಆಶಾ ಪಾಶಗಳನು ಜರಿದ ಈಶನುನ್ನತ ನಿಜವ ತಿಳಿದ ಶ್ರೀಶ ಶ್ರೀರಾಮ ನಿನ್ನ ಪಾದ ದಾಸರು ಕಾಣಲು ತಮ್ಮ ಭಕ್ತಿ ಪಾಶದಿಂದ ಬಿಗಿದು ಕಟ್ಟಿ ನ್ನೇಸು ಕಾಲದಿ ಬಿಡರೆಂದರಿದು 3
--------------
ರಾಮದಾಸರು
ನಿನ್ನ ಮಹಿಮೆಯನಾರು ಬಲ್ಲರುಚಿನ್ಮಯಾತ್ಮಕನಂತರೂಪನೆಮುನ್ನೆ ಕಮಲಜ ನಿನ್ನ ನಾಭಿಯೊಳುನ್ನತೋನ್ನತದಿಘನ್ನ ತಪವಂಗೈದು ಕಾಣನುಇನ್ನು ಶ್ರುತಿಸ್ಮøತಿ ಅರಸಿ ಅರಿಯವುಪನ್ನಗೇಂದ್ರನು ಪೊಗಳಲರಿಯ ಪ್ರಸನ್ವೆಂಕಟನೆ 1ಹರಿಯೆ ತ್ರಿದಶರ ದೊರೆಯೆ ಭಕುತರಸಿರಿಯೆ ದಿತಿಜರರಿಯೆಅನವರತಮರೆಯದಿಹ ಅಜಹರಯತೀಶ್ವರರರಿಯರಿನ್ನುಳಿದಇರವು ಮನುಜ ನಾನರಿಯಲಾಪೆನೆಪೊರೆಯೊ ಬಿಡದೆ ಪ್ರಸನ್ವೆಂಕಟಗಿರಿಯರಸ ಜಗದೆರೆಯ ಸುರವರವರಿಯ ಮಾಸಹನೆ 2ನಾಗರಿಪುಗಮನಾಗಭೃತಶುಭನಾಗಪಾಕ್ಷಘನಾಗಮನಿಗಮನಾಗಪತಿ ವದನೈಕಸ್ತುತ ಸುಗುಣ ಗುಣಾರ್ಣವನೆನಾಗಹರಸಖ ನಾಗಘನಮಣಿನಾಗಗ್ರಸಿತಭಾ ನಾಗದ್ವಿಟಮುಖನಾಗಧರನುತ ನಾಗಮದಹ ಪ್ರಸನ್ವೆಂಕಟೇಶ 3
--------------
ಪ್ರಸನ್ನವೆಂಕಟದಾಸರು
ಪಾಲಿಸಯ್ಯಾ ಫಣಿಗಿರಿವಾಸಜೀಯಾ ಪ.ಪಾಲಿಸೈ ಪಾಲಾಬ್ಧಿಶಾಯಿ ಸುಳೀನೀರದನಿಭಶರೀರ ಶ್ರೀಲೋಲಮೋಹನಲೀಲದುರ್ಜನಕಾಲಕಾಮಿತಫಲಪ್ರದಾಯಕಅ.ಪ.ಮುನ್ನ ಮಾಡಿದ ಕರ್ಮದಿಂದಲಿ ಬನ್ನಪಟ್ಟೆನು ಶ್ರೀಹರಿಇನ್ನು ನಿನ್ನಯ ಚರಣಯುಗವನು ನಿರ್ಣಯದಿ ನಂಬಿದಪರಿಉನ್ನತೋನ್ನತವಪ್ಪ ತೆರದಲಿ ಮನ್ನಿಪುದು ನೀ ಕೃಪೆದೋರಿಬನ್ನಪಡುವುದು ಸಾಕು ಸಂತತ ನಿನ್ನನೆ ನೆರೆನಂಬಿದೆನುಹರಿ1ವಾತಪಿತ್ತಕಫಾದಿ ರೋಗದ ವ್ರಾತದಿಂದ ಬಲು ನೊಂದೆನುಧಾತುಬಲವತಿ ತಗ್ಗಿ ಉಷ್ಣೋಪೇತದಿಂದಲಿ ಬೆಂದೆನುಚಾತುರ್ಥಿಕ ಜ್ವರಾತಿಶಯದಲಿ ಶೀತಸ್ಥಾನದಿ ನಿಂದೆನುಈ ತೆರದ ಕಷ್ಟಗಳು ಬಾರದ ರೀತಿಯಲಿ ಪರಿಹರಿಸು ಸಂತತ 2ನಿನ್ನನೆ ಮರೆಹೋಗುವ ತೆರದಲಿ ನಿನ್ನ ಸ್ಮರಣೆಯ ಮಾಡುವನಿನ್ನ ಭಕ್ತರ ಮೇಳದಲಿ ಸಂಪನ್ನನಾಗುತ ಕೂಡುವನಿನ್ನ ಮೂರ್ತಿಯ ನೊಡುವದು ಮತ್ತೆನ್ನ ಕಾಮಿತ ಬೇಡುವನಿನ್ನನೇ ಧ್ಯಾನಿಸುವ ಮತಿಸಂಪನ್ನವನು ನೀನಿತ್ತು ಕರುಣದಿ 3ವೀರ ವೈಷ್ಣವ ಮಾರ್ಗದೊಳು ಸಂಚಾರ ಮಾಡುವ ತೆರದಲಿಮಾರುತಿಯ ಚರಣಾರವಿಂದದದಿ ಸೇರಿ ನಿನ್ನನು ಧರೆಯಲಿಭೂರಿಮಹಿಮೆಯ ವರ್ಣಿಸುವ ಸಾಕಾರ ಮತಿಯನು ಎನ್ನಲಿಪ್ರೇರಿಸುತ ಕರುಣಾರಸಾಮೃತ ಬೀರಿ ಭೀತಿಯ ಪರಿಹರಿಸುತ್ತಲಿ4ಕೊಂಚ ಧನವನು ಕೊಟ್ಟು ಎನಗೆ ಪ್ರಪಂಚವಹಗೃಹಗೈದಿಸಿಮುಂಚೆಮಾಡಿದ ಪಾಪವನು ನಿರ್ಲಚದಿಂದಲೆ ಛೇದಿಸಿವಂಚಿಸುವ ಬಂಧುಗಳ ಮನವನುಮಿಂಚಿಯೆನ್ನೊಳು ಮೋದಿಸಿಪಂಚಬಾಣನ ಪಿತನೆ ಮಂಗಳ ವಾಂಛಿತವನೆನಗಿತ್ತು ವಿಭವದಿ 5ಕಷ್ಟದಲಿ ನಿನ್ನ ಧ್ಯಾನ ಬಾರದು ತುಷ್ಟಿಯಲಿ ನಾ ಧ್ಯಾನಿಪೆಇಷ್ಟವೇ ನೀನಿತ್ತೆಯಾದರೆ ಕಷ್ಟಗಳ ನಾ ದೂಷಿಪೆಶ್ರೇಷ್ಠ ಕಾರ್ಕಳ ಪುರದಿ ಭಕ್ತರ ಒಟ್ಟುಗೂಡುತ ತೋಷಿಪೆಭ್ರಷ್ಟಲೋಭದ ಬಂಧುಗಳು ಎನ್ನೊಳಿಷ್ಟವಾಗುವ ತೆರದಿ ದ್ರವ್ಯವ6ಕಾಲಭೈರವ ಪೇಳಿದಂದದಿ ನಾಲಿಗೆಯೊಳು ತಪ್ಪು ನೋಡದೆಪಾಲಿಸುತ ಇಷ್ಟಾರ್ಥವನು ಕೈ ಮೇಳವಿಸು ತಪ್ಪು ನೋಡದೆನೀಲಗಿರಿ ಸಮನಾಗಿ ಕಾರ್ಕಳದಾಲಯವ ನೀ ಮಾಡಿದೆಲೋಲಲಕ್ಷ್ಮೀನಾರಾಯಣಾಶ್ರಿತಪಾಲಪಡುತಿರುಪತಿ ಪುರೇಶನೆ 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ