ಒಟ್ಟು 125 ಕಡೆಗಳಲ್ಲಿ , 45 ದಾಸರು , 123 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉಕ್ಕುವ ತುಪ್ಪಕೆ ಕೈಯಿಕ್ಕುವೆ ನಾನು ಪ ಚಕ್ರಧರ ಪರಮಾತ್ಮನೊಬ್ಬನಲ್ಲದಿಲ್ಲವೆಂದು ಅ.ಪ ಕರಿ ಮೊರೆಯಿಡಲು ಕಂಡುನೆರೆದ ಬೃಂದಾರಕರು ಅಂದು ಪೊರೆದರೆ ಬಂದುಕರದಲೊಪ್ಪುವ ಮುತ್ತಿಗೆ ಕನ್ನಡಿಯ ನೋಡಲೇಕೆಭರದಿ ಗಜೇಂದ್ರನ್ನ ಕಾಯ್ದ ಹರಿಯೆ ಪರದೈವವೆಂದು 1 ಮತಾಂತರದಲ್ಲಿ ಭಗವದ್ಗೀತೆಯನದ್ವೈತವೆಂದುವಾತಗುದ್ಧಿ ಕೈಗಳೆರಡು ನೋಯಿಸಲೇಕೆ‘ಏತತ್ಸರ್ವಾಣಿ ಭೂತಾನ್ಯೆಂ’ಬ ಶೃತ್ಯರ್ಥವ ತಿಳಿದುಜ್ಯೋತಿರ್ಮಯ ಕಿರೀಟಿ ಅಚ್ಯುತಾಂತರ್ಯಾಮಿಯೆಂದು 2 ತಾನೆ ಪರಬ್ರಹ್ಮನೆಂಬ ಮನುಷ್ಯಾಧಮನು ತಾನುಜ್ಞಾನಹೀನನಾಗೆ ಲೋಕದಾನವನೆಂದುಭಾನು ಕೋಟಿ ತೇಜೋತ್ತಮ ವರದ ಶ್ರೀಹರಿಯೆಂಬಜ್ಞಾನವೆ ಕೈವಲ್ಯದ ಸೋಪಾನವೆಂದು ಸಭೆಯಲ್ಲಿ 3 ತಪ್ಪಾದ ವಿಚಾರದಿಂದ ತತ್ತರವ ಪಡಲೇಕೆತಪ್ಪು ಶಾಸ್ತ್ರ ವೋದಿ ದೇಹ ದಂಡಿಸಲೇಕೆಕಲ್ಪ ಕಲ್ಪಾಂತರದಲ್ಲಿ ವಟಪತ್ರಶಯನನಾಗಿಮುಪ್ಪು ಮೊದಲಿಲ್ಲದ ಮುಕುಂದನಲ್ಲದಿಲ್ಲವೆಂದು 4 ಶಕ್ತಿ ಶೂನ್ಯನಿವನೆಂದು ಸಂಶಯವ ಪಡಲೇಕೆಕೃತ್ಯದಿಂದ ನೋಡೆ ಶ್ರೀಕೃಷ್ಣನೊಬ್ಬನೆಹತ್ತಾರು ಸಾಸಿರ ನೂರು ಗೋಪಸ್ತ್ರೀಯರನ್ನು ಆಳಿನಿತ್ಯ ಬ್ರಹ್ಮಚಾರಿಯೆನಿಪ ನಿಷ್ಕಳಂಕನೊಬ್ಬನೆಂದು 5
--------------
ವ್ಯಾಸರಾಯರು
ಉದಕ ಕಡೆದರೆ ಬೆಣ್ಣಿಲ್ಲಿಹ್ಯದೋ ಪ ಜೀವನ ಬಳಿಗ್ಹೋಗಿ ದೈನ್ಯಬಡುತ ಬಲು ಮಣಿದು ಬೇಡಲಲ್ಲೇನಿಹ್ಯದೋ ಅ.ಪ ಕಾಣದೆ ಬೊಗಳಿದರೇನಾದೋ ಒಣ ಗಾಣಾತರುವವಲಲ್ಲೇನಾದೋ ಕೋಣನ ಬಳಿಗ್ಹೋಗಿ ಸಾನುರಾಗದಿ ಒಳ್ಳೆ ವೀಣೆ ನುಡಿಸಲಲ್ಲೇನಾದೋ 1 ದೀನನ ಕಾಡಲು ಏನಾದೋ ಮಹ ಹೀನನ ಸೇರಿದರೇನಾದೋ ಜ್ಞಾನಬೋಧಾಮೃತ ಜಾಣತನದಿ ಅ ಜ್ಞಾನಿಗೆ ತೋರಿದರೇನಾದೋ 2 ಭಂಡರ ದಂಡಿಸಲೇನಾದೋ ಮಿಂಡೆ ಷಂಡನ ಕೂಡಿದರೇನಾದೋ ಮಂಡೆಬೋಳಿ ಮುಂದೆ ಗೊಂಡೆಮುತ್ತಿನ ಮಹ ದಂಡೆಯ ತಂದಿಡಲೇನಾದೋ 3 ಪಥ ಕೇಳೆಲೇನಾದೋ ಬಲು ದುರುಳ ಧರೆಯಾಳಿದರೇನಾದೋ ಕರುಣವಿಲ್ಲದ ಪರಮ ಪಾಪಿಗಳಿ ಗೆರಗಿ ಬೇಡಲಲ್ಲೇನಾದೋ 4 ಮಾನವ ಇಹ್ಯಮೆಚ್ಚಲಲ್ಲೇನಾದೋ ಮತಿ ಹೀನರ ಜಾಣತ್ವದೇನಾದೋ ಪ್ರಾಣೇಶ ರಾಮನ ಖೂನ ತಿಳಿಯದ ಮಾನವನಾದಲ್ಲೇನಾದೋ 5
--------------
ರಾಮದಾಸರು
ಉಪವಾಸ ಬೀಳುವುದ್ಯಾಕೋ ಮನುಜಉಪವಾಸ ಬೀಳುವುದ್ಯಾಕೋಉಪವಾಸ ಬೀಳಲಿಕೆ ನಿನಗೆ ಗ್ರಹಚಾರ ಸಾಲದೆ ಬೇಕೋ ಪ ಅಂಗದಿ ತತ್ವಾಭಿಮಾನವು ಇರಲಿಕೆ ಆಹಾರವರ್ಜಿಪುದ್ಯಾಕೋಮಂದ ಮತಿಗಳು ಕೂಡಿಯೆ ನೀನು ಮಂದಮತಿಯಾದೆ ಯಾಕೋ 1 ದೇಹದಿ ವೈಶ್ವಾನರನಿರಲಿಕೆ ದೇಹವ ದಂಡಿಪುದ್ಯಾಕೋಮಹಾವ್ರತವೆಂದು ಮೊಸರ ಬಿಟ್ಟು ಮಣ್ಣನೆ ಮುಕ್ಕುವಿಯಾಕೋ 2 ನಿತ್ಯಾತ್ಮನು ಚಿದಾನಂದ ತಾನಿರೆ ನಿರಾಹಾರವದ್ಯಾಕೋಮತ್ತೇಕಾದಶಿ ಶಿವರಾತ್ರೆನ್ನುತ ಬಿಣ್ಣನೆ ಬಳಲುವಿಯಾಕೋ 3
--------------
ಚಿದಾನಂದ ಅವಧೂತರು
ಎಚ್ಚರ ಹಿಡಿ ಮನವೇ | ನಿಚ್ಚದಿ ಮೆಚ್ಚಿನ ಅಚ್ಚುತನಂಘ್ರಿ ಪ ಹಾಡುತಾ ನೋಡುತಾ ನೀಡದೊಳಾಡುತಾ ನಡೆ ನುಡಿಯೊಳು ಬಿಡ ದಡಿ ಗಡಿಗೊಮ್ಮೆ 1 ಹೇಳುತ ಕೇಳುತ ಮೇಳದಿ ಬಾಳುತ | ಕಳವಳದಳುಕಿನ ಡಳಮಳದೊಳಗೆ 2 ಬಂದದ ಛಂದವಿಂದೇ ಹೊಂದು ಮುಕುಂದನೆಂದು | ತಂದೆ ಮಹೀಪತಿ ಕಂದಗ ಬೋಧಿಸಿದ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂತು ದೊರೆವುದೋ ಇಂತು ನರದೇಹ ಮುಂದೆ ಬಾಹ ದಿನ್ನೆಂದಿಗೆ ಇಚಿದು ಕರುಣಿಸಿ ಸಲಹುಯನ್ನ ಮು| ಕುಂದ ನಿನ್ನಂಘ್ರಿಗಳ ತೋರಿಸಿ 1 ಮೊದಲೇ ದುರ್ಲಭ ಮನುಷ್ಯಾಂಗವು ಅದರೊಳುತ್ತಮ ವರ್ಣದಿ ಉದಿಸಿ ಭಗವಂತಾಂಘ್ರಿ ದರುಶನ ವದಗಿ ಗತಿಗೈದಿಸುವ ಜನುಮವು 2 ಗುರುಹಿರಿಯರೆಂದೆರಿಸಿ ಅವರನು ಸ್ಮರಿಸಿ ಭಕ್ತಿಗೆ ಸೇರಿಸಿ ಮರೆಸಿ ಅನ್ಯವ ಬೆರೆಸಿ ನಿಜದೊಳು ತರಿಸಿ ತಾರಿಸುತಿಹ ಜನುಮವು 3 ಹರಿಯ ಲಾಂಛನ ಪೌಂಡ್ರವು ಕೊರಳು ತುಳಸಿಯ ಮಾಲೆಯಾ ಧರಿಸಿದಂಡಿಗೆ ವಿಡಿದು ಮಾಧವ ಚರಿತ ಪಾಡುತ ನಲಿವ ಜನುಮವು 4 ತನ್ನವರ ಪರಿಚಾರಕೆನಿಸುವ ಘನ್ನ ಬಿರದಿಗೆ ಪಾಲಿಸೀ ಸನ್ನುತನೆ ಗುರುಮಹಿಪತಿ ಪ್ರಭು ನಿನ್ನ ವಲುಮಿಂದಾದರಾಗಲಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂಥಾ ಬಲವಂತನೋ ಭಾರತೀಕಾಂತಾ ಎಂಥಾ ದಯವಂತನೋ ಪ ಎಂಥ ಮಹಬಲವಂತ ಬಹುಗುಣ - ವಂತ ಸರ್ವದಾನಂತಚೇತನ ರಂತರಾದೋಳ್ನಿಂತು ಪ್ರೇರಿಪ ನಂತು ಮಹಿಮೆಯ ಅಂತು ತಿಳಿಯದೊ ಅ.ಪ ವೀರರಾಘವನಂಘ್ರಿಯ ಭಜಿಸಿ ಕಪಿ - ವೀರನಾದನು ಮಹರಾಯಾ ವಾರಿಧಿಯಾಗಾಧತೋಯ ಲಂಘಿಸಿ ಲಂಕಾ ಸಾರಿ ಪೇಳಿದ ವಾರ್ತೆಯ ವೀರ ವನವನಂಗಾರಮುಖಕೆ ಇತ್ತು ವೀರಾಕ್ಷನೆನಿಪ ಕುಮಾರನ ದಂಡಿಸಿ ಸಾರಿ ಉಂಗುರವಿತ್ತು ಮತ್ತೆ ವಾರಿಧಿ ವಾನÀರೇಶನು ತೋರಿ ರಾಮನ ಪದಕೆ ನಮಿಸಿ ಚಾರು ರಾಗಟೆ ಇತ್ತ ತ್ವರದಿ 1 ತರುಳೆ ದ್ರೌಪದಿಯನ್ನು ಶರಗು ಪಿಡಿದು ಶಳದಾನು ಕರಿಯಲು ಬ್ಯಾಗ ಹರಿ ತಾನಂಬರವಿತ್ತನು ಧುರದಿ ಭೀಮನು ನಿನ್ನ ತರಿದರಕ್ತದಿ ತಾನು ಬೆರೆಸಿ ಕೇಶವ ಕಟ್ಟಿ ಕರುಳ ದಂಡೆಯನಿಟ್ಟು ಮೇರೆವೆ ಕೇಳೆಲೋ ದುರುಳನೆಂದಾ - ತರುಣಿವಚನವ ಸ್ಥಿರವ ಮಾಡಿದ ಧರಿಯತಳದಲಿ ಸರಿಯುಗಾಣೆನೊ ವgವÀೃಕೋದರ ಪರಮ ಕರುಣಿಯೆ 2 ಭೂತೇಶ ಸರ್ವೋತ್ತುಮಾನೆಂಬುವೊ ಮಹಾ - ಪಾತಕಿ ಜನಮಾತನೇಮ ಈತ ಮಾಡಿದ ನಿರ್ಧೂಮ ಹರಿಗೆ ಶಿವ ದೂತಜನರಿಗುತ್ತುಮ ಖ್ಯಾತಿ ಮಾಡಿದ ಜೀವಜಾತಿ ಪ್ರೇರಕನಾಗಿ ಶ್ವೇತವಾಹನ ದೂತನಾಗಿಹ ನಾಥ ಗುರು ಜಗನ್ನಾಥವಿಠಲ ಧಾತನಾಂಡಕೆನಾಥ, ನಿರ್ಜರÀ ನಾಥರೆಲ್ಲರೂ ದೂತರೆಂದರು 3
--------------
ಗುರುಜಗನ್ನಾಥದಾಸರು
ಎಂದಿಗಾದರು ಒಮ್ಮೆ ಕೊಡು ಕಂಡ್ಯ ಹರಿಯೆ ಪ ಬೃಂದಾವನಪತಿ ದಯದಿಂದಲೆನಗೆ ಅ ಫಲಭಾರಗಳಿಂದ ತಲೆವಾಗಿ ಶುಕಪಿಕಕಲಕಲದೊಳು ನಿನ್ನ ತುತಿಸಿ ತುಂಬೆಗಳಗಳರವದಿಂ ಪಾಡಿ ಅಪ್ಸರರಂತೆ ಪೂ-ಮಳೆಯಗರೆವ ತರುಲತೆಯ ಜನ್ಮವನು1 ಕೊಳಲ ಶೃತಿಯ ಕೇಳಿ ಸುಖದ ಸಂಭ್ರಮದಲಿಹೊಲಬು ತಪ್ಪಿ ತಾವು ಅರೆಗಣ್ಣು ಮುಚ್ಚಿನಳಿನಾಸನದಿ ಮೌನಗೊಂಡು ಪರಮ ಹಂಸಕುಲದಂತೆ ಧ್ಯಾನಿಪ ಹಂಸ ಜನ್ಮವನು 2 ಚಕೋರ ಜನ್ಮವನು3 ಭಾವಜನೈಯನ ಕಡುಚಲ್ವಿಕೆಯನ್ನುಭಾವಿಸಿ ನಿಡುಗಂಗಳಿಂದ ದಣಿದುಂಡುಗೋವಳೇರಂತೆ ಮನೆ ಮಕ್ಕಳ ಹಿಂಗಿ ನಿನ್ನ ಆವಾಗ ಈಕ್ಷಿಸುವ ಗೋವ್ಗಳ ಜನ್ಮವನ್ನು 4 ತೋಳದಂಡಿಗೆಮಾಡಿ ಹೀಲಿಯ ಚಾಮರವಮೇಲೆ ಎತ್ತಿದ ತಾವರೆ ಗೊಂಡೆಯಿಂದಓಲೈಸಿ ನಿನ್ನನು ಒಲಿಸಿ ಮುಕುತರಂತೆನಾಲೋಕ್ಯ ಸುಖವುಂಬ ಗೋಪರ ಜನ್ಮವನು5 ಕೊಳಲ ಧ್ವನಿಯ ಕೇಳಿ ಎದುರುಗೊಳ್ಳುತ ನಿನ್ನನಳಿನನಾಭಾ ಅವಧಾರೆಂದು ಪೊಗಳೇತಳಿಗೆ ಆರತಿಯೆತ್ತಿ ಲಕ್ಷ್ಮಿಯಂತೆ ನಿನ್ನಚೆಲುವ ಸವಿವಂಥ ಗೋಪೇರ ಜನ್ಮವನು 6 ಇಂದಿರೆಯರಸ ಬ್ರಹ್ಮೇಂದ್ರಾದಿ ವಂದಿತಎಂದು ಮೊಸರ ಕಡೆಯುತ್ತಲಿ ನಿನ್ನಅಂದಿನ ಶ್ರುತಿಯೋ ಉಪ್ಪವಡಿಪ ವ್ರಜ-ದಿಂದುಮುಖಿಯರ ಜನ್ಮವ ಸಿರಿಕೃಷ್ಣ7
--------------
ವ್ಯಾಸರಾಯರು
ಎಂದು ಕಾಂಬೆನು ಎನ್ನ ಸಲಹುವಬಂಧುಬಳಗ ನಮ್ಮಪ್ಪನ ತಿರುಪತಿಲಿಪ್ಪನವರಾಹ ತಿಮ್ಮಪ್ಪನ ಪ. ದಂಡಿಗೆಯ ಬಾರಿಸುತ ಶ್ರುತಿಗೂಡಿ-ಕೊಂಡು ಪಾಡುತ ಮನದಿ ಲೋಲ್ಯಾಡುತಕುಣಿಕುಣಿದಾಡುತ 1 ಬೆಟ್ಟದೊಡೆಯನ ಚರಣಕಮಲಕೆ ಶಿರ-ವಿಟ್ಟು ಕರಗಳ ಮುಗಿವೆ ನಾ ಕವಕವನಗುವೆ ನಾಎನ್ನೊಡೆಯನ ಪೊಗಳಿ ನಾ2 ಸ್ವಾಮಿಪುಷ್ಕರಿಣಿಯಲ್ಲಿ ಸ್ನಾನ ನೇಮ-ವ ಮಾಡುವೆ ಪುಣ್ಯಕ್ಷೇತ್ರವ ನೋಡುವೆಹಯವದನನ ಕೊಂಡಾಡುವೆ 3
--------------
ವಾದಿರಾಜ
ಎಂದೊಡನಾಡುವೆ ಎಂದರ್ಥಿಬಡುವೆ ಎಂದಿಗೆ ತಕ್ರ್ಕೈಸಿ ಸಂತೋಷಬಡುವೆ ಪ ಉತ್ಸವ ಮಂಟಪದೊಳಗೆ ಕುಳಿತು ಭಕ್ತ ವತ್ಸಲನೆಂದು ನುತಿಸಿಕೊಂಬನ ಕೂಡ 1 ಸಕಲ ಭೂಷಿತನಾಗಿ ಅಜಹರ ಸುರಮುನಿ ನಿಕರ ಕೈಯಿಂದ ಸ್ತುತಿಸಿಕೊಂಬನ ಕೂಡ 2 ಆಪೋಹಿಷ್ಠಾ ಮಯೋಭುವನೆಂಬೋ ಮಂತ್ರ ಆ ಪುರೋಹಿತರಿಂದ ಕಲಿತುಕೊಂಬನ ಕೂಡ 3 ನಾಲ್ವತ್ತುಮೂರು ಪದಂಗಳು ಮಾಡೆಂದು ಹೇಳಿದ ಹೇಮಾದ್ರಿ ಶಿಖರಾಕಾರನಕೂಡೆ 4 ದಂಡಿಗೆ ಕರೆದಲ್ಲಿ ಕೊಟ್ಟು ಅಮೃತದ ಕರ ಮಂಡೆಯಲ್ಲಿಟ್ಟ ಮಹಮಹಿಮನ ಕೂಡ 5 ಪಲ್ಲಕ್ಕಿ ಏರಿ ಪವಳಿಯ ಸುತ್ತಿ ಸರ್ರಗೆ ನಿಲ್ಲದೆ ಗುಡಿಪೊಕ್ಕ ನಿರ್ಮಳನ ಕೂಡ6 ವಾರಶನಿ ಚತುರ್ದಶಿ ಕೃಷ್ಣಪುಷ್ಯದಿ ಈ ರೀತಿಯಲಿ ಕೂಡ ಇಂದಿರೇಶನ ಕೂಡ 7 ರೌದ್ರಿ ಸಂವತ್ಸರ ಅರ್ಧರಾತ್ರಿಯಲಿ ಭದ್ರ ಮೂರುತಿಯಾದ ಭವಹರ ಕೂಡ 8 ಗುರುಪುರಂದರ ಉಪದೇಶನ ಬಲದಿಂದ ಸಿರಿ ವಿಜಯವಿಠ್ಠಲನ ಚರಣ ತಕ್ರ್ಕೈಸಿ 9
--------------
ವಿಜಯದಾಸ
ಎಲೆ ಮನಾ ವ್ಯರ್ಥಗಳೆವರೇ ಜನುಮವನು | ನೆಲಿಯ ನಿನ್ನರುವದಾ ಹೊಲಬು ಮರೆದು ಪ ಇಳಿಯೊಳಗ ನರದೇಹದಲಿ ಜನಿಸಿ ಕೊಡುವದು | ಸುಲಭವಲ್ಲವೊ ಹೋದ ಬಳಿಕ ನಿನಗದು ಮುಂದ ಅ.ಪ ಮೇದಿನಿಯೊಳಗ ಮಿಗಿಲಾದ ಜನ್ಮದಿ ಬಂದು| ಐದಿದಾವರ್ಣ ಕರ್ಮಾಧರಿಸಿ ಮಾಡುತಲಿ | ಗೈದು ನಿತ್ಯಾನಿತ್ಯ ವೈದಿಕ ವಿಚಾರವನು | ಆದಿ ಪುರುಷನ ಕಾಂಬ ಹಾದಿ ಕೂಡಿ | ಖೇದವನು ಕುಡುವ ವಿವಾದ ಗುಣವನೆ ನೀಗಿ | ಮೋದದಲಿ ಶರಣ್ಹೊಕ್ಕು ಸಾಧು ಜನರನು ಸರಿಸಿ | ವೇದಾಂತ ಬ್ರಹ್ಮ ಸೂತ್ರಾದಿ ವಾಕ್ಯಾರ್ಥವನು 1 ಬೋಧೆಯಲಿ ಪಡೆದು ಜ್ಞಾನೋದಯ ಕಾಣದೆ ಭವ ಶರಧಿಯನು ಗೆಲಲಾಗಿ | ಶರಣ ಜನರಿಗೆ ತೆಪ್ಪ ಪರಿಯಂದಾತಾಗಿಹ | ಹರಿನಾಮವ ನೆನೆದು ಹರಿಧ್ಯಾನಗೈವುತಲಿ | ಹರುಷದಲಿ ಪದಿನಾರು ತೆರ ಪೂಜಿಸಿ | ಪರಮ ಸದ್ಭಾವದಲಿ ಗುರುಡಿಂಗರ ಮೇಳದಲಿ | ಭರದಿ ತಾಳದಂಡಿಗೆಯ ಕರದೊಳಗ ತಾ ಪಿಡಿದು | ಶರೀರ ಭಾವನೆ ಮರೆದು ಭರಿತ ಪ್ರೇಮಿತನಾಗಿ | ಇರಳು ಹಗಲು ಪಾಡುತಲಿ ಹರಿಭಕ್ತನಾಗದೇ 2 ವನಧಿಯೊಳು ಥೆರೆಸಂಗ ಧನುಮತದಿದೋರ್ವ | ಗುಳ್ಳಿಯ ಪರಿಸೇವೆಯೀತನು ವೆಂದು-ದರಿಯು | ಆನದೊಳಗ ಉತ್ಕ್ರಷ್ಟ ತನದಿ ಮೆರೆಸ್ಯಾಡುತಿಹ | ಕನಕದಧಿದೇವಿ ಕಿವಿಯನು ಬೀಸುವಾಗ | ಅಣುಗ ಕರಿಯಂತೆ ಅರಕ್ಷಣದವಳು ಯಂದು ಅತಿ | ಹೆಣಗುತಿಹ ಸಾಯಾಸವನೆ ತ್ಯಜಿಸಿ ತಾ ದೊರಕಿ | ಧನಿತದರಿಂತುಷ್ಟವನು ಕರಿಸಿ ದೃಢದಿಂದ | ಘನ ನಂಬು ಗುರು ಮಹಿಪತಿ ಚರಣ ಬಿಡದಂತೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿಪ ವೇದಶಾಸ್ತ್ರ ಪಂಚಾಂಗವ ಓದಿಕೊಂಡು ಅನ್ಯರಿಗೆಬೋಧನೆಯ ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ 1 ಚಂಡಭಟರಾಗಿ ನಡೆದು ಕತ್ತಿ ಢಾಲು ಕೈಲಿ ಹಿಡಿದುಖಂಡ ತುಂಡ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 2 ಅಂಗಡಿ ಮುಂಗಟ್ಟನ್ಹೂಡಿ ವ್ಯಂಗ್ಯ ಮಾತುಗಳನ್ನಾಡಿಭಂಗ ಬಿದ್ದು ಗಳಿಸುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 3 ಕುಂಟೆ ತುದಿಗೆ ಕೊರಡು ಹಾಕಿ ಹೆಂಟೆ ಮಣ್ಣು ಸಮನು ಮಾಡಿರೆಂಟೆ ಹೊಡೆದು ಬೆಳೆಸುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 4 ಬೆಲ್ಲದಂತೆ ಮಾತಾನಾಡಿ ಎಲ್ಲರನ್ನು ಮರುಳು ಮಾಡಿಸುಳ್ಳು ಬೊಗಳಿ ತಿಂಬುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 5 ಕೊಟ್ಟಣವನು ಕುಟ್ಟಿಕೊಂಡು ಕಟ್ಟಿಗೆಯನು ಹೊತ್ತುಕೊಂಡುಕಷ್ಟ ಮಾಡಿ ಉಣ್ಣುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 6 ತಾಳ ದಂಡಿಗೆ ಶ್ರುತಿ ಮೇಳ ತಂಬೂರಿಯ ಹಿಡಿದುಕೊಂಡುಸೂಳೆಯಂತೆ ಕುಣಿಯುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 7 ಸಂನ್ಯಾಸಿ ಜಂಗಮ ಜೋಗಿ ಜಟ್ಟಿ ಮೊಂಡ ಬೈರಾಗಿನಾನಾ ವೇಷಗಳೆಲ್ಲ ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 8 ಹಳ್ಳದಲ್ಲಿ ಕುಳಿತುಕೊಂಡು ಕಲ್ಲು ದೊಣ್ಣೆ ಹಿಡಿದುಕೊಂಡುಕಳ್ಳತನವ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 9 ಅಂದಣ ಪಲ್ಲಕ್ಕಿ ಏರಿ ಮಂದಿ ಮಾರ್ಬಲ ಕೂಡಿಚಂದದಿಂದ ಮೆರೆಯುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 10 ಉನ್ನತ ಕಾಗಿನೆಲೆಯಾದಿಕೇಶವನಾ ಧ್ಯಾನವನ್ನುಮನಮುಟ್ಟಿ ಮಾಡುವುದು ಮುಕ್ತಿಗಾಗಿ ಆನಂದಕಾಗಿ 11
--------------
ಕನಕದಾಸ
ಎಲ್ಲಿಗೆ ಗಮನವಿದು ದುರ್ಗಾಂಬಿಕೆ ಎಲ್ಲಿಗೆ ಗಮನವಿದು ಪ. ಗಮನ ಹರವಲ್ಲಭೆ ನೀ ದಯ- ದಲ್ಲಿ ಬಾಲಕನೊಳು ಮೆಲ್ಲನಿಂದರುಹವ್ವಅ.ಪ. ಚಂಡಿಕೆ ಮಹಮ್ಮಾಯೆ ದೇವಿ ಪ್ರ- ಚಂಡ ಲೋಕತಾಯೆ ಖಂಡಪರಶುಪ್ರಿಯೆ ಅಖಿಲ ಭೂ- ಮಂಡಲಕಧಿಪತಿಯೆ ದಂಡಿಗೆ ಮೇಲೇರಿಕೊಂಡು ದುಷ್ಟರ ಶಿರ- ಚೆಂಡಾಡಿ ಶರಣರ ಕೊಂಡಾಡಿ ಪೊರೆವುತ1 ನಿಲ್ಲು ನಿಲ್ಲು ಜನನಿ ಬಾಲಕ- ನಲ್ಲವೆ ಹೇ ಕರುಣಿ ಪುಲ್ಲನಯನೆ ತ್ರಿಗುಣಿ ದಯವಿನಿ- ತಿಲ್ಲವೆ ನಾರಾಯಣಿ ಮಲ್ಲಿಗೆಗಂಧಿ ಪಥವೆಲ್ಲಿಯು ಕಾಣದೆ ಸಲ್ಲಲಿತಾಂಘ್ರಿಯ ನಿಲ್ಲದೆ ಬೇಡುವೆ 2 ದಾರಿ ಯಾವುದಮ್ಮ ಮುಕ್ತಿಯ ದಾರಿ ತೋರಿಸಮ್ಮ ಸೇರಿದೆ ನಾ ನಿಮ್ಮ ಭವಾಬ್ಧಿಯ ಪಾರುಗಾಣಿಸಮ್ಮ ಚಾರುನಿಗಮ ಶಿರಭೋರೆನಿಪ ವಿಚಾರ- ಸಾರವಿತ್ತು ದಯಪಾಲಿಸು ಶುಭವರ3 ಕಷ್ಟದುರಿತ ಭಯವ ತಾ ಬಡಿ- ದಟ್ಟಿ ಭಕ್ತಕುಲದ ಶ್ರೇಷ್ಠತನದಿ ಪೊರೆವ ತನ್ನ ಇಚ್ಛೆಯ ಕೈಗೊಳುವ ಲಕ್ಷ್ಮೀನಾರಾಯಣದಿಟ್ಟಭಗಿನಿ ಶಿವೆ ಕಟ್ಟಿಲಪುರದೊಳು ಗುಟ್ಟಿನಿಂ ನೆಲಸಿಹೆ4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಎಲ್ಲಿಗೆ ಗಮನವಿದು ದುರ್ಗಾಂಬಿಕೆ ಎಲ್ಲಿಗೆ ಗಮನವಿದುಪ. ಗಮನ ಹರವಲ್ಲಭೆ ನೀ ದಯ- ದಲ್ಲಿ ಬಾಲಕನೊಳು ಮೆಲ್ಲನಿಂದರುಹವ್ವಅ.ಪ. ಚಂಡಿಕೆ ಮಹಮ್ಮಾಯೆ ದೇವಿ ಪ್ರ- ಚಂಡ ಲೋಕತಾಯೆ ಖಂಡಪರಶುಪ್ರಿಯೆ ಅಖಿಲ ಭೂ- ಮಂಡಲಕಧಿಪತಿಯೆ ದಂಡಿಗೆ ಮೇಲೇರಿಕೊಂಡು ದುಷ್ಟರ ಶಿರ- ಚೆಂಡಾಡಿ ಶರಣರ ಕೊಂಡಾಡಿ ಪೊರೆವುತ 1 ನಿಲ್ಲು ನಿಲ್ಲು ಜನನಿ ಬಾಲಕ- ನಲ್ಲವೆ ಹೇ ಕರುಣಿ ಪುಲ್ಲನಯನೆ ತ್ರಿಗುಣಿ ದಯವಿನಿ- ತಿಲ್ಲವೆ ನಾರಾಯಣಿ ಮಲ್ಲಿಗೆಗಂಧಿ ಪಥವೆಲ್ಲಿಯು ಕಾಣದೆ ಸಲ್ಲಲಿತಾಂಘ್ರಿಯ ನಿಲ್ಲದೆ ಬೇಡುವೆ 2 ದಾರಿ ಯಾವುದಮ್ಮ ಮುಕ್ತಿಯ ದಾರಿ ತೋರಿಸಮ್ಮ ಸೇರಿದೆ ನಾ ನಿಮ್ಮ ಭವಾಬ್ಧಿಯ ಪಾರುಗಾಣಿಸಮ್ಮ ಚಾರುನಿಗಮ ಶಿರಭೋರೆನಿಪ ವಿಚಾರ- ಸಾರವಿತ್ತು ದಯಪಾಲಿಸು ಶುಭವರ 3 ಕಷ್ಟದುರಿತ ಭಯವ ತಾ ಬಡಿ- ದಟ್ಟಿ ಭಕ್ತಕುಲದ ಶ್ರೇಷ್ಠತನದಿ ಪೊರೆವ ತನ್ನ ಇಚ್ಛೆಯ ಕೈಗೊಳುವ ಲಕ್ಷ್ಮೀನಾರಾಯಣದಿಟ್ಟಭಗಿನಿ ಶಿವೆ ಕಟ್ಟಿಲಪುರದೊಳು ಗುಟ್ಟಿನಿಂ ನೆಲಸಿಹೆ4
--------------
ತುಪಾಕಿ ವೆಂಕಟರಮಣಾಚಾರ್ಯ
ಏನು ಪೇಳಲಮ್ಮಯ್ಯಾ ರಂಗನ ಕ್ರೀಡಾ ಏನು ದಂಡಿಸಲಮ್ಮಯ್ಯಾ ಶ್ರೀ ಕೃಷ್ಣನ್ನ ಪ ಪಿಡಿದು ನಿಂದಾ ದುರುಳ ದೈತ್ಯನ್ನೆಳದೊಡಲವೆ ಸೀಳಿದಾ ಬಲಿಯಲ್ದೈನ್ಯದಿ ದಾನಬೇಡಿ ತಾಯ ಶಿರವ ಕಡಿದು ತೋರಿದಾ ಕಲೆವೆಣ್ಣೈದ್ಮೊಲೆಯುಂಡು ಕಳದ್ವಟ್ಟೆ ಹಯವೇರಿದಾ 1 ಕಾನನದಾ ವರಹನಾದಾ ಆಗಲು ಪಂಚಾನನ ರೂಪನಾದಾ ಸೂನು ಪರಶುರಾಮನಾಗಿ ಜಾನಕಿವರನಾಗಿ ರಾವಣನಾಗಿ ಮಾನಬಿಟ್ಟು ವಾಜಿಯನೇರ್ದಾ 2 ನಿಗಮ ತೋರ್ದಾ ಬೆನ್ನಲಿ ಬೆಟ್ಟವಿರಿಸಿ ಸುರರಾ ಪೊರೆದಾ ಧರಾಲಲನೆಯನೆತ್ತಿ ತಂದಾ ದೈತ್ಯನ ಶೀಳಿ ತರಳನಳಲನು ಕಳೆದಾ ಸುರತಟಿನಿಯಂಗುಟದಿ ಜನಿಸೆ ಧರೆಯ ಪಾವನಗೊಳಿಸೆ ನರಲೋಕವುದ್ಧಾರ ಜನಕ ಸಿರಿಪಾವನ ನರಸಿಂಹವಿಠಲನ 3
--------------
ನರಸಿಂಹವಿಠಲರು
ಏನು ಸಾಧಿಸುವದೇನರಿದು ಙÁ್ಞನಗಮ್ಯ ಗುರುಮಾರ್ಗದೊರೆಯಲರಿಯದು ಧ್ರುವ ನೀತಿಶಾಸ್ತ್ರವನೋದಿ ಪಂಡಿತನಾಗಲಿಬಹುದು ಶ್ರುತಿ ಸ್ಮøತಿಗಳ ತಿಳಿದು ತರ್ಕಸ್ಯಾಡಲಿಬಹುದು ಅತಿ ಬಲ್ಲತನದಿ ಯತಿಯನಿಸಿಕೊಳ್ಳಲಿಬಹುದು ಕ್ಷಿತಿಯೊಳು ಮೆರೆಯಲಿಬಹುದು ಸುತತ್ವ ಜ್ಞಾನಖೂನ ದೊರೆಯಲರಿಯದು 1 ಗೃಹತ್ಯಾಗಮಾಡಿ ಸಂನ್ಯಾಸಿ ಅಗಲಿಬಹುದು ದೇಹ ದಂಡಿಸಿ ವನವಾಸಿಯಾಗಲಿಬಹುದು ಗುಹ್ಯಗೊಪೆಯಲಿ ಸೇರಿ ತಪಸಿಯೆನಿಸಲಿಬಹುದು ಬಾಹ್ಯನಿಷ್ಠೆಯದೋರಬಹುದು ಸೋಹ್ಯ ಸದ್ಗುರುಮಾರ್ಗ ದೊರೆಯಲರಿಯದು 2 ಹಲವು ಕುಟಿಲದ ವಿದ್ಯವನು ಸಾಧಿಸಲಿಬಹುದು ಜಲದೊಳಗೆ ಮುಳಗಿ ಮಂತ್ರವನು ಜಪಿಸಲಿಬಹುದು ಸೀಲಿ ಸಾಲ್ವಳಿಯ ಸುಶಕುನ ಪೇಳಲಿಬಹುದು ಮ್ಯಾಲೆ ಜನರಂಜಿಸಲಿಬಹುದು ಮೂಲ ಮುಕ್ತಿ ಕೀಲ ತಿಳಿಯಲರಿಯದು 3 ಪೃಥ್ವಿಯನೆ ತಿರುಗಿ ಬಹುಭಾಷೆಯಾಡಲಿಬಹುದು ಮತಿವಂತನಾಗಿ ಕವಿತ್ವಮಾಡಲಿಬಹುದು ಗೀತರಾಗವು ಜಂತ್ರದೊಳು ನುಡಿಸಲಿಬಹುದು ಚದುರಂಗ ಪಗಡ್ಯಾಡಿ ಗೆಲಬಹುದು ಮತ್ತ ಮನ ಬೆರೆವ ಘನಸುಖವು ದೊರೆಯಲರಿಯದು 4 ಶೂರತನದಲಿ ಪರಾಕ್ರಮ ಹಿಡಿಯಲಿಬಹುದು ಧೀರಗುಣದಲಿ ಮಹಾಧೀರನೆನಿಸಲಿಬಹುದು ನೂರ್ಬಲದ ಪೌರುಷಲಿ ರಾಜ್ಯನಾಳಲಿಬಹುದು ಸಿರಿಸೌಖ್ಯದೊಳಿರಲಿಬಹುದು ಸಾರ ಸುಜ್ಞಾನಸುಖ ದೊರೆಯಲರಿಯದು 5 ಪರ್ವತಾಗ್ರದಲೇರಿ ಧರೆಗೆರಗಲಿಬಹುದು ಹರಿವ ನದಿಯನೆ ಹಾರಿ ಹೋಗಲಿಬಹುದು ಮೊರೆವುತಿಹ್ಯ ಸರ್ಪದಾ ವಿಷವು ಧರಿಸಲಿಬಹುದು ಕ್ರೂರ ಮೃಗದೊಳು ತಿರುಗ್ಯಾಡಬಹುದು ಪಥ ದೊರೆಯಲರಿಯದು 6 ಪೊಡವಿಯೊಳು ಹವಲು ವಿದ್ಯವ ಸಾಧಿಸಲುಬಹುದು ಬಡದ ಬವಣಿಯ ಬಟ್ಟು ನಾಡ ಶೋಧಿಸಬಹುದು ಗೂಢ ವಿದ್ಯದ ಮಾತು ಆಡಿ ತೋರಿಸಬಹುದು ಹಿಡಿದು ಮೌನವ ಕೂಡಬಹುದು ಮೂಢಮಹಿಪತಿ ಒಡಿಯನ ಕೃಪೆ ಪಡೆವದೆ ದುರ್ಲಭವು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು