ಒಟ್ಟು 25 ಕಡೆಗಳಲ್ಲಿ , 19 ದಾಸರು , 25 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾಯುವಂದಿತ ವಿಠಲ | ಪೊರೆಯ ಬೇಕಿವನಾ ಪ ಪಾದ | ಭಜಕನಾದವನಾಅ.ಪ. ಗುರುಹಿರಿಯರಾ ಸೇವೆ | ನಿರುತ ಗೈಯುವ ಮನವಕರುಣಿಸುವುದಿವ ನೀಗೆ | ಮರುತಾಂತರಾತ್ಮಗರುಡ ಗಮನನೆ ದೇವ | ಗರ್ವಗಳ ಪರಿಹರಿಸಿಸರ್ವಾಂತರಾತ್ಮಕನೆ | ಕಾಪಾಡೊ ಇವನಾ 1 ಹರಿಯೆ ಪರನೆಂಬಂಥ | ವರಸುಜ್ಞಾನವ ಕೊಟ್ಟುತರತಮಂಗಳು ಅಂತೆ | ಎರಡು ಮೂರುರ್ಭೇದಾಪರಮ ಸತ್ಯವು ಎಂಬ | ವರಜ್ಞಾನ ಪಾಲಿಸುತಪರಿಪರಿಯ ಭವಭಂದ | ಪರಿಹರಿಸೊ ಹರಿಯೇ 2 ಕಾಕು ಸಂಗಮಕೆಡಿಸೊಪ್ರಾಕ್ಕುಕರ್ಮವ ಕಳೆಯೊ | ಶ್ರೀ ಕರಾರ್ಚಿತನೆ 3 ದುರಿತವನ ಕುಠಾರ | ಶರಣಜನ ವತ್ಸಲನೆದುರಿತಾಳಿ ದೂರೈಸಿ | ಪೊರೆಯೊ ಹರಿಯೇಕರುಣ ನಿಧಿ ನೀನೆಂದು | ಮರೆಹೊಕ್ಕೆ ತವಪಾದಚರಣ ದಾಸನ ಪೊರೆಯೊ | ಹರಿಯೆ ಪರಮಾಪ್ತ 4 ಶ್ರೀವರನೆ ಸರ್ವೇಶ | ಭಾವದಲಿ ಮೈದೋರಿಭಾವುಕನ ಪೊರೆ ಎಂದು | ದೇವ ಪ್ರಾರ್ಥಿಸುವೇಈ ವಿಧದ ಬಿನ್ನಪವ | ನೀವೊಲಿದು ಸಲಿಸುವುದುದೇವ ದೇವೇಶ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶಿರಿ ಮುದ್ದು ಕೃಷ್ಣವಿಠಲ | ಪೊರೆಯ ಬೇಕಿವಳಾ ಪ ಪಾದ | ಸಾರಿ ಭಜಿಸುವಳಾ ಅ.ಪ. ಪರಿಪರಿಯ ವಿಧದಿಂದ | ತೈಜಸನೆ ನೀನಾಗಿವರಸೂ ರೂಪಗಳಿಂದ | ವಸುದೇವ ಸುತನೇತರಳೆಗತಿ ಆಶ್ಚರ್ಯ | ತೋರಿ ಅಡಗಿದೆ ದೇವಶಿರಿಮುದ್ದು ಕೃಷ್ಣನೇ | ಮರುತಂತರಾತ್ಮ 1 ಸುಪ್ತಿಯಲಿ ಗುರುಪಾದ | ಭಕ್ತಿಯಲಿ ನಮಿಸುತ್ತತೀರ್ಥವನೆ ತಕ್ಕೊಂಡು | ಧನ್ಯನಾನೆಂದುಅತ್ಯಂತ ಹರ್ಷದಲಿ | ಸ್ತೋತ್ರವನೆ ಮಾಡುತ್ತಸಕ್ತಿಯನೆ ತೋರಿಹಳು | ದಾಸಪಂಥದಲೀ 2 ಭುವನ ಪಾವನವೆನಿಪ | ಮಧ್ವಮತದಾಸಕ್ತಿಶ್ರವಣಕಾನಂದವೆನೆ | ಕವನ ಸಂಸ್ಪೂರ್ತೀಜೀವೊತ್ತಮರ ಭಕುತಿ | ವಿಷಯದಲಿ ವಿರಕ್ತಿಹವಣಿಸೋ ಶ್ರೀಹರಿಯೆ | ಭವಕರಿಗೆ ಹರಿಯ 3 ಪತಿಸುತರು ಹಿತರಲ್ಲಿ | ಮತಿಮತಾಂವರರಲ್ಲಿರತನು ಶ್ರೀಹರಿಯೆಂಬ | ಸುಜ್ಞಾನವನ್ನುಕೃತಿಪತಿಯ ಕರುಣಿಸುತ | ಸಾಧನವ ಗೈಸುವುದುಚತುರಾಸ್ಯಪಿತ ಹರಿಯೆ | ದುರಿತವನ ದಾವಾ 4 ಮಾನನಿಧಿ ಶ್ರೀಹರಿಯೆ | ಧ್ಯಾನಾನುಕೂಲಿಸುತಸಾನುರಾಗದಿ ನಿನ್ನ | ರೂಪಹೃದ್ಗುಹದೀಕಾಣಿಪಂತಸಗೊ ಗುರು | ಗೋವಿಂದ ವಿಠಲನೆಆವಾದದನ್ಯವನು | ಬೇಡ ಬಂದಿಲ್ಲ5
--------------
ಗುರುಗೋವಿಂದವಿಠಲರು
ಸಕಲಲೋಕಪಾಲಕ ರಕ್ಷಿಸೈ ನಿಖಿಲವ್ಯಾಪಕ ಪ ಚರಣದಾಸನ ಮೊರೆಯ ಪಾಲಿಸಿ ಕರುಣವಂ ಬೆರೆಸಿ ಪೊರೆಯೊ ಶರಣಜನ ಪ್ರಿಯಕರನೆ ಮರೆಯ ಹೊಕ್ಕೆನು 1 ಇಂದೊದಗಿಬಂದ ದುರಿತವನು ತಂದೆ ನೀಬಂದು ಪರಿಹರಿಸೊ ಮುಂದಿನ್ನು ಬಂಧನದ ಬಲೆಯಚಿಂದಿಸಿ ಚಂದದಿಂ ಕಾಯೊ 2 ಕಾಯಜಪಿತನೆ ನಿನ್ನ್ಹೊರತು ಕಾಯುವ ಹಿತರು ಇಲ್ಲಯ್ಯ ದೂರದ ಸುತನ ಮೊರೆ ಕೇಳೊ ಕ್ಷಿತಿಜಪತಿಯೆ ಶ್ರೀರಾಮ 3
--------------
ರಾಮದಾಸರು
ಸ್ಮರಿಸುವೆನು ಗುರುರಾಯ ವರಮಂತ್ರ ಪುರಾಧಿಪ ಪೊರೆಯೊ ಎನ್ನನು ಜೀಯಾ ತವ ಮಹಿಮ ವರ್ಣಿಸ ಲರಿಯ ಮುರಹರಪ್ರೀಯಾ ಅಧ ಮಾಧಮನ ಮಮ ಪರಿಯ ನೀ ಬಲ್ಲೆಯ್ಯಾ ತೋರಯ್ಯಾ ದಯ ವರದ ಚರಿತೆಯ ಅರುಹುವದಕೆ ಪರವಾಕ್ಯರಣಿಯನು ಪಾಲಿಸಿ ನಿರುತ ಹರಿಗುರು ಚರಣದಲಿ ರತಿ ತ್ವರಿತ ಕರುಣಿಸು ರಾಘವೇಂದ್ರನೆ ಪ ಹಿಂದೆ ಕೃತಯುಗದಲಿ ಪ್ರಹ್ಲಾದ ನಾಮದಿ ತಂದೆ ಹಿರಣ್ಯಾಕ್ಷನಲಿ ಸರ್ವೋತ್ತಮನು ಹರಿ ದ್ವಂದ್ವ ಕರ್ಮವನಲಿ ಅರ್ಪಿಸಲು ಮಹದಾ ನಂದ ಪೊಂದುವರಲ್ಲಿ ಎಂದು ಪೇಳುತಿರೆ ಮಂದ ದೈತ್ಯವನಂದ ಮಾತಿಗೆ ಬಂಧನಾದಿಗ ಳಿಂದ ಶಿಕ್ಷಿಸೆ ಬಂದ ದುರಿತವನಂದು ಕಳೆದಾ ಕಂದನನು ಹರಿಪೊರೆಯೆ ದಿತಿಜನು ಒಂದೂ ತಿಳಿಯದೆ ಮಂದಿರ ಗೋವಿಂನೆಲ್ಲಿಹ ನೆಂದು ಕೇಳುತ ಮಂದರರೋದ್ಧಾರ ನಿಲ್ಲದಿಹ ಸ್ಥಳ ವಂದೂ ಇಲ್ಲವೂ ಎಂಂದು ಸಾರಿದೆ ತಂದು ತೋರಿಸು ಸ್ತಂಭದಲಿ ತವ ಇಂದಿರಾಪತಿಯೆಂದು ಗರ್ಜಿಸೆ ಕಂದನಾಡಿದ ಮಾತುಗಳನು ನಿಜ ವೆಂದು ನರಹರಿ ಪೊರೆದೆ 1 ಶ್ರೀಶನಾಜ್ಞೆಯ ವಹಿಸಿ ದ್ವಿತೀಯಾವತಾರದಿ ವ್ಯಾಸರಾಯನು ಎನಿಸಿ ಬ್ರಹ್ಮಣ್ಯರÀಲಿ ಸ ನ್ಯಾಸವನು ಸ್ವೀಕರಿಸಿ ಸರ್ವಜ್ಞ ಶಾಸ್ತ್ರಾಭ್ಯಾಸವನು ಪೂರೈಸಿ ವ್ಯಾಸತ್ರಯ ರಚಿಸಿ ದೇಶದೇಶಗಳನ್ನು ಚರಿಸುತ ಆ ಸಮಸ್ತ ಕುವಾದಿಗಳ ಮತ ನಾಶಗೊಳಿಸಿ ರ ಮೇಶ ಶ್ರೀ ವೆಂಕಟೇಶನನು ಬಹುದಿನವು ಪೋಜಿಸಿ ವಾಸಿಸುತ ಗಜರಾಮ ಪುರಧಾಧೀಶರಾಯನ ಕುಹಯೋಗವ ಪುರಂದರ ದಾಸರಿಂದೊಡಗೂಡಿ ಕೃಷ್ಣನುಪಾಸನೆಯ ಭಕ್ತಿಯಲಿ ಗೈಯುತ ವಾಸುದೇವನ ಶಿಲ್ಪ ಶಾಸ್ತ್ರದ ಶಾಸನಕೆ ಪ್ರತಿಯಾಗಿ ನಿಲ್ಲಿಸಿ ತೋಷಿಸಿದ ಸೌಭಾಗ್ಯ ವೈಭವ 2 ಪದುವ ಸಂಭವ ಜಾತ ಶ್ರೀ ರಾಘವೇಂದ್ರ ಸು ಪದವ ಪಡೆದ ಪ್ರಖ್ಯಾತ ಜಯತೀರ್ಥ ಮುನಿಕೃತ ಸುಧೆಗೆ ಪರಿಮುಳ ಗ್ರಂಧ ರಚಿಸಿ ಮೆರೆದಾತ ಬಧಿರ ಮೂಕಾಂಧ ವ್ಯಂಗ್ಯರು ವಿಧ ವಿಧಿದ ಘನರೋಗಗ್ರಸ್ತರು ಸದಯ ನೀಗತಿಯೆಂದು ಸೇವಿಸೆ ತ್ರಿದಶ ಭೂರುಹದಂತೆ ಸಲಹುವಿ ಕುಧರ ತೀರದಿ ಮೂಲ ರಘುಪತಿ ಪದವ ಪೂಜಿಸುತಲಿ ಸಜೀವದಿ ಮುದದಿ ವೃಂದಾವನ ಪ್ರವೇಶಿಸಿ ಪದುಮನಾಭ ಶ್ರೀ ಶಾಮಸುಂದರ ಮಧು ವಿರೋಧಿಯನು ಧ್ಯಾನಿಸುತ ಶಿರಿ ಸದನನು ವಲಿಸುತ್ತ ಕರುಣಾ ನಿಧಿಯು ಭಜಕರ ಪೊರೆವ ಮಹಿಮೆಯ 3
--------------
ಶಾಮಸುಂದರ ವಿಠಲ
ಸ್ಮರಿಸೊ ಮನವೆ ಸಿರಿಲೋಲ ಶ್ರೀ ಕೃಷ್ಣನ ಸ್ಮರಿಸಲೊದಗುವ ಸ್ವಾಮಿ ಶ್ರೀ ವಿಷ್ಣುವಿನ ಧ್ರುವ ಸ್ಮರಿಸಿ ಕರಿರಾಜ ಸೆರೆಯಿಂದ ಬಿಡಲಿಲ್ಲವೆ ದುರಿತವನು ಗೆದ್ದರುಷಬಡಲಿಲ್ಲವೆ 1 ಪರಿ ಹರಿ ಮಹಿಮೆ ತಿಳಿಯಲಿಲ್ಲವೆ2 ಸ್ಮರಿಸಿ ದ್ರೌಪದಿ ಅಪತ್ತುಗಳಿಲಿಲ್ಲವೆ ಮೊರೆಯಗೇಳಿ ಕೃಷ್ಣ ಸುಳಿಯಲಿಲ್ಲವೆ 3 ಸ್ಮರಿಸಿ ಪಾಂಡವ ಸತ್ವವು ನಡೆಲಿಲ್ಲವೆ ಅರಗಿನ ಮನೆಯೊಳು ಉಳಿಲಿಲ್ಲವೆ 4 ಸ್ಮರಿಸು ಮಹಿಪತಿ ಮನವ ನಿಜಗೊಲಿಲ್ಲವೆ ಗುರು ಚರಣ ಸ್ಮರಿಸಿ ನೆಲೆಗೊಳಲಿಲ್ಲವೆ5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹಣವೆÉ ನಿನ್ನಯ ಗುಣವೇನು ಬಣ್ಣಿಪೆನೊ ಪ. ಹಣವಿಲ್ಲದವನೊಬ್ಬ ಹೆಣವೇ ಸರಿ ಕಂಡ್ಯಾ ಅ.ಪ. ಬೆಲೆಯಾಗದವನೆಲ್ಲ ಬೆಲೆಯ ಮಾಡಿಸುವಿ ಎಲ್ಲ ವಸ್ತುಗಳನಿದ್ದಲ್ಲೆ ತರಿಸುವಿ ಕುಲಗೆಟ್ಟವರ ಸತ್ಕುಲಕೆ ಸೇರಿಸುವಿ ಹೊಲೆಯನಾದರೂ ತಂದೊಳಗಿರಿಸುವಿ 1 ಅಂಗನೆಯರ ಸಂಗ ಅತಿಶಯದಿ ಮಾಡಿಸುವಿ ಶೃಂಗಾರಾಭರಣಂಗಳ ಬೇಗ ತರಿಸುವಿ ಮಂಗನಾದರೂ ಅನಂಗನೆಂದೆನಿಸುವಿ ಕಂಗಳಿಲ್ಲದವಗೆ ಮಗಳ ಕೊಡಿಸುವಿ 2 ಚರಣಕ್ಕೆ ಬಂದಂಥ ದುರಿತವನು ಬಿಡಿಸುವಿ ಸÀರುವರಿಗೆ ಶ್ರೇಷ್ಠನರನ ಮಾಡಿಸುವಿ ಅರಿಯದ ಶುಂಠನ ಅರಿತವನೆನಿಸುವಿ ಸಿರಿ ಹಯವದನನ ಸ್ಮರಣೆ ಮರೆಸುವಿ 3
--------------
ವಾದಿರಾಜ
ಜಯಿಸಬೇಕು | ಮನವನು | ವೈಸಬೇಕು ಪಜಯಿಸಬೇಕು ಅರಿಷಡ್ವರ್ಗವನು |ವೈಸಬೇಕು ಹರಿಚರಣದಿ ಮನವ |ಸೈಸಬೇಕು ಶೀತೋಷ್ಣದ ಬಾಧೆಯ |ಲೈಸಬೇಕು ಭವದುರಿತವನೂ1ಗ್ರಹಿಸಬೇಕು ತವರ್ಚನ ಮರಣಸ್ಥಿತಿ |ಕಾಯಿಸಬೇಕು ಸುಕಾರ್ಯದಲಿ |ಗೈಸಬೇಕುಪರಸೇವೆಗೆ ತನುವನು |ಮೋಹಿಸಬೇಕು ಕುಲಸತಿ ಪತಿಯ2ಕೊೈಸಬೇಕು ದುರ್ವಾಕ್ಯದ ರಸನೆಯ |ಸಾೈಸಬೇಕು ಋಣ ರೋಗ ಸಸಿ |ಈಸಬೇಕು ಬಡತನದಲಿ ಮಾನವಾ |ಬೈಸಬೇಕುಗೋವಿಂದ ದಾಸರ ಸಂಗ3<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ನಾರಾಯಣ ನಿನ್ನ ನಾಮವನು ನೆನೆದರೆ |ಹಾರಿಹೋಹುದು ಪಾಪ ಜನ್ಮಜನ್ಮಾಂತರದಿ |ಶ್ರೀ ರಮಣ ನಿನ್ನ ಕೃಪೆಯಿತ್ತೆಮಗೆ ಮುಕ್ತಿಯ -ದಾರಿ ತೋರಿಸೊ ಮುರಾರಿ ಪಸಕಲ ವೇದ ಪುರಾಣ _ ಶಾಸ್ತ್ರವನು ತಿಳಿದೋದಿ |ತಿಯಿಂಭಕುತ ತಾಯ್ತಂದೆಗಳ ಚಿತ್ತವಿಡಿದರ |ರಕುಷಣೆಯ ಮಾಡಿ ಜಗದೊಳಗೆ ವಿಖ್ಯಾತ ಸುಕು -ಮಾರ ತಾನೆಸಿಸಿಕೊಂಡ1ಪ್ರಕೃತಿಯಲಿ ಹೋಮಕೋಸ್ಕರ ಸಮಿಥೆ ತರಹೋಗಿ |ಶುಕರುಮಗಳಿಂದ ಚಾಂಡಾಲಿಲೆಯ ಕಂಡು ತಾ - |ಮೂಕನಾಗಿನಿಂದು ಮೈಮರೆದು ಪಾತಾಕಿಯ ಬಹ -ದುರಿತವನು ತಾನರಿಯದೆ 2ನಿಲ್ಲು ನಿಲ್ಲೆಲೆ ಕಾಂತೆ, ನಿನಗೊಲಿದೆ ನೀನಾರೆ |ಸೊಲ್ಲಿಸೆನ್ನೊಡನೆ ಸತಿಯರ ಕುಲಕೆಕಟ್ಟಾಣಿ |ಚೆಲ್ಲೆನ್ನ ಮೇಲೆ ಕರುಣವನಿಂತು ಕೋಮಲೆಯೆನಿಲ್ಲೆಂದು ಸೆರಗ ಪಿಡಿದ 3ಎಲೊವಿಪ್ರ ಕೇಳು ನಾ ಕುಲಹೀನೆ ನಮ್ಮ ಮನೆ |ಹೊಲನೆನದು ಗೋಮಾಂಸ ಚರ್ಮದಾ ಹಾಸಿಕೆಯು |ಎಲುವಿನಾ ರಾಶಿ ಒದರುವ ನಾಯ ಹಿಂಡುಗಳು -ಬಹು ಘೋರಘೋರ ವಿಹುದು 4ಬಲೆಗೆ ಸಿಲ್ಕಿದ ಪಕ್ಷಿ ಬೇಟೆಗಾರನದಲೇ ? |ಕುಲವನ್ನು ಕೂಡೆ ನಾ ಕಾಮಿನೀರನ್ನಳೆ |ಚಲದಿಂದ ಬದುಕುವೆನು ಸುಖದಿಂದಲಿರುವೆ ನೀಒಲವು ನನಗೊಂದೆ ಎಂದ 5ವ್ಯರ್ಥ ಎನ್ನೊಡನೆ ಮಾತೇತಕೆಲೊ ಹಾರುವಾ |ಚಿತ್ತ ನನ್ನಲ್ಲಿ ಇದ್ದರೆ ಹೋಗಿ ನೀ ನಿನ್ನ |ಹೆತ್ತ ತಾಯ್ತಂದೆಯರ ಕೇಳು ಸಮ್ಮತಿಸಿದರೆ -ಮತ್ತೆ ನಿನಗೊಲಿವೆನೆನಲು 6ಅತ್ತ ಕಾಮಿನಿಯ ಒಡಗೊಡಿ ತನ್ನಯ ಪಿತನ |ಹತ್ತಿರಕೆ ಹೋಗಿ ಕೇಳಿದರೆ ಆತನು ಎಂದ |ಉತ್ತಮದ ಕುಲವನೀಡಾಡಿ ಈ ಪಾತಾಕಿಯ -ಹಸ್ತಕೊಳಗಾಗದಲಿರೈ 7ಆಗದಾಗದು ನನ್ನ ಕುಲಬಂಧು - ಬಳಗವನು |ನೀಗಿ ನಿನ್ನೊಡನೆ ಕೂಡುವೆನೆಂಬ ಮತವೆನಗೆ |ನಾಗಭೂಷಣನ ಪಣೆಗಣ್ಣಿಲುರಿದನ ಬಾಣತಾಗಿತೆನ್ನೆದೆಗೆ ಎಂದ 8ಕೂಗಿ ಹೇಳುವೆ ನಿನ್ನ ಕುಲವಳಿಯದಿರು ಎಂದ |ಹೋಗಿ ಕೂಡದೆ ನಿನ್ನ ಹೆತ್ತ ತಾಯ್ತಂದೆಗಳಿ - |ಗಾಗದಿದ್ದರೆ ಆಚೆಯಾ ಮನೆಯೊಳಗೆ ಹೋಗಿಇಬ್ಬರೂ ಇರುವೆವೆಂದ 9ಹಾಲಂತ ಕುಲವ ನೀರೊಳಗದ್ದಿ ಪೂರ್ವದಾ |ಶೀಲವನ್ನಳಿದು ಸತಿಯಳ ಕೂಡಿ ತಾನು ಚಾಂ - |ಡಾಲಿತಿಗೆ ಹತ್ತು ಮಕ್ಕಳನು ಪಡೆಕೊಂಡವರಲೀಲೆ ನೋಡುತಲಿ ಹಿಗ್ಗಿ 10ಬಾಳಿನಲ್ಲೀ ರೀತಿ ಅಜಮಿಳನು ಇರುತಿರಲು |ಕಾಲ ಬಂದೊದಗಿತ್ತು ಕರೆಯಿರೆವೆ ಪಾತಕನ |ಜೋಲುದುಟಿಡೊಂಕು ಮೋರೆಯ ಅಬ್ಬರದಿ ಯಮನ -ಆಳುಗಳು ಬಂದರಾಗ 11ಎಡಗೈಯೊಳಗೆಪಾಶ ಹಿಡಿದು ಚಮ್ಮತಿಗೆಗಳ |ಒಡನೆ ಜಾವಳಿನಾಯಿ ವಜ್ರಮೋತಿಯ ಕಾಯಿ |ತುಡಿಕಿರೋ ಕೆಡಹಿ ಕಟ್ಟಿರೋ ಪಾತಕನನೆಂದುಘುಡುಘುಡಿಸಿ ಬಂದರಾಗ 12ಗಡಗಡನೆ ನುಡುಗಿ ಕಂಗೆಟ್ಟು ಅಜಮಿಳನು ತಾ |ಕಡೆಯ ಕಾಲಕೆ ಅಂಜಿ ಮಗನ ನಾರಗನೆಂದು |ಒಡನೊಡನೆ ಕರೆಯಲ್ಕೆ ಯಮನಾಳ್ಗಳೋಡಿದರುಮುಟ್ಟಿದುದು ಹರಿಗೆ ದೂರು 13ಕೊರಳ ತುಳಸಿಯ ಮಾಲೆಯರಳ ಪೀತಾಂಬರದ |ವರಶಂಖ ಚಕ್ರದ್ವಾದಶನಾಮಗಳನಿಟ್ಟ |ಹರಿಯ ದೂತರು ಅಂಜಬೇಡ ಬೇಡನ್ನುತಲಿಹರಿದೋಡಿಬಂದರಲ್ಲಿ 14ಪುಂಡರೀಕಾಕ್ಷನೀ ಭೃತ್ಯನನು ಬಾಧಿಸುವ |ಲಂಡಿರಿವರಾರು ನೂಕಿರಿ ನೂಕಿರೆಂತೆಂದು |ದಂಡವನು ತೆಗೆದು ಬೀಸಾಡಿ ಯಮನವರಿಗು - |ದ್ದಂಡರಿವರೆಂದರಾಗ 15ತಂದೆ ಕೇಳಿರಿ ಒಂದು ಭಿನ್ನಪವ ಲಾಲಿಸಿರಿ |ಒಂದು ದಿನ ಹರಿಯೆಂದು ಧ್ಯಾನವನ್ನರಿಯ ನಾವ್ - |ಬಂದಾಗ ಆತ್ಮಜನ ನಾರಗನೆ ಎಂದೆನಲುಕುಂದಿದುವೆ ಇವನ ಪಾಪ ? 16ಹಂದೆ - ಕುರಿಗಳಿಗೆ ನಿಮಗಿಷ್ಟು ಮಾತುಗಳೇಕೆ |ನಿಂದಿರದೆ ಹೋಗಿ ನಿಮ್ಮೊಡೆಯನಿಗೆ ಪೇಳೆನಲು |ಸಂದಲಾ ಯಮಭಟರು ಅಜಮಿಳನ ಹರಿಭಟರುತಂದರೈ ವೈಕುಂಠಕೆ 17ಮದ್ಯಪಾನವ ಮಾಡಿ ಪೆಂಗಳನು ಒಡಗೂಡಿ |ಅದ್ದಿದೆನು ನೂರೊಂದು ಕುಲವ ನರಕದೊಳೆಂದು |ಹದ್ದಿನಾ ಬಾಯೊಳಗಿನುರಗನಂತಜಮಿಳನುಇದ್ದನವ ನೆರೆಮರುಗುತ 18ವಿಪ್ರಕುಲದಲಿ ಹುಟ್ಟಿ ವೇದಶಾಸ್ತ್ರವನೋದಿ |ಮುಪ್ಪಾದ ತಾಯಿ - ತಂದೆಗಳೆಲ್ಲರನು ಬಿಟ್ಟು |ಒಪ್ಪಿ ಧಾರೆಯನೆರೆದ ಕುಲಸತಿಯ ಬಿಟ್ಟು ಕಂ -ದರ್ಪನಾ ಬಲೆಗೆ ಸಿಕ್ಕಿ 19ವಿಪ್ರ ನಾನಾದರೂ ಜಗದಿ ನಿಂದ್ಯನು ಆಗಿ |ಇಪ್ಪೆ ನೀ ಪರಿಯೊಳೆನ್ನಂಥ ಪಾತಕಿಯಿಲ್ಲ |ತಪ್ಪಲಿಲ್ಲವೊ ಹಣೆಯಬರೆಹವಿದು ಭುವನದೊಳುಬೊಪ್ಪರೇ ವಿಧಿಯೆಂದನು 20ಇಳೆಯೊಳಗೆ ಶ್ರೀಪುರಂದರ ವಿಠಲನಾಮವನು |ನೆಲೆಯರಿತು ನೆನೆವರಿಗೆ ಯಮನ ಬಾಧೆಗಳಿಲ್ಲ |ಸುಲಭದಿಂದಲ್ಲಿ ಸಾಯುಜ್ಯಪದವಿಯು ಸತ್ಯಬಲುನಂಬಿ ಭಜಿಸಿ ಜನರು21
--------------
ಪುರಂದರದಾಸರು
ಮಂಡೆಬಾಗಿಕರವಮುಗಿವೆ ಕಾಯೊ ಹರಿಹರಿ |ಪುಂಡರೀಕನಯನ ಮರೆಯಬೇಡವೊ ಹರಿಹರಿ ಪಕರಿವರದನೆ ಸರ್ವಾಂತರ್ಯಾಮಿ ಹರಿಹರಿ |ಕರುಣಾಸಾಂದ್ರ ತರುಣಿ ಮಾನಕಾಯ್ದ ಹರಿಹರಿ ||ಶರಧಿಸುತೆಯ ರಮಣ ದೀನಬಂಧು ಹರಿಹರಿ |ಅರಿಯೆ ನಿನ್ನನುಳಿದು ಕಾಯ್ವರನ್ನು ಹರಿಹರಿ 1ಮೀನನಾಗಿ ವೇದಗಳನು ತಂದೆಹರಿಹರಿ|ಆ ನಗವನು ಪೊತ್ತು ಅಮೃತವೆರೆದೆಹರಿಹರಿ||ನೀನೇ ವರಾಹನಾಗಿಯವನಿಯ ತಂದೆಹರಿಹರಿ|ದಾನವನುದರವ ಬಗೆದು ಅಂದುಹರಿಹರಿ 2ಚಿಕ್ಕ ರೂಪದಿಂದ ಬಲಿಯ ತುಳಿದೆಹರಿಹರಿ|ಸೊಕ್ಕಿದರಸುಗಳನು ಸವರಿಬಿಟ್ಟೆಹರಿಹರಿ||ರಕ್ಕಸರನು ಕೊಂದು ಸತಿಯ ತಂದೆಹರಿಹರಿ|ಅಕ್ಕರದಲಿ ಪಾರಿಜಾತ ತಂದೆಹರಿಹರಿ3ಅಂಬರವನು ತೊರೆದೆ ಬೌದ್ಧನಾಗಿ ಹರಿಹರಿ |ಕುಂಭಿಣಿಯೊಳು ಕುದುರೆಯೇರಿ ಮೆರೆದೆಹರಿಹರಿ||ಶಂಬರಾಂ ಜನಕ ಧರ್ಮತನಯಹರಿಹರಿ|ಅಂಬುಜಾಸನಾದಿ ದಿವಿಜವಂದ್ಯಹರಿಹರಿ4ಶೌರಿರಘುಜ ಮುನಿಜ ಪ್ರಾಣೇಶ ವಿಠಲಹರಿಹರಿ|ಸಾರಿದ ಶರಣರಿಗೆ ಕಲ್ಪತರುವೆಹರಿಹರಿ||ಘೋರದುರಿತವನಕೆ ಧನಂಜಯನೆ ಹರಿಹರಿ |ಭಾರನಿನ್ನದೆವೆ ಹೇಳಲ್ಯಾಕೆಹರಿಹರಿ 5
--------------
ಪ್ರಾಣೇಶದಾಸರು
ಹರಿಯೆನ್ನಬಾರದೆಜಿಹ್ವೆವಾರಂವಾರಪ.ಪರಗತಿ ಮಾರ್ಗವು ದುರಿತವನಾಗ್ನಿಯುಪರಿಪರಿಭವರೋಗಕೌಷಧಅ.ಪ.ಉರಿವ ಕಾಳಕೂಟ ಕಂಠದಿ ದಹಿಸಲುಹರಿನಾಮ ಹರನ ಕಾಯ್ತುಕರಿಉರಗವಿಷಾಗ್ನಿ ಶಸ್ತ್ರ ಭಯದಲಿಹರಿನಾಮ ಶಿಶುವ ಕಾಯ್ತುಶರಧಿಲಿ ನಕ್ಕರ ಚರಣವ ಕಚ್ಚಿ ಬರೆಹರಿನಾಮ ಕರಿಯ ಕಾಯ್ತುನಿರಯನಿವಾಸರಸುರಋಷಿಮುಖದಿಂದಹರಿನಾಮ ಎಲ್ಲರ ಕಾಯ್ತು 1ಹಿರಿಯರ ನಿಕ್ಕರ ನುಡಿಯಿಂದಡವಿಲಿರೆಹರಿನಾಮ ಧ್ರುವನ ಕಾಯ್ತುಕುರುಕಂಟಕರುÀ ಅಭಿಮಾನವ ಕೊಳುತಿರೆಹರಿನಾಮ ಸತಿಯ ಕಾಯ್ತುಮರಳೊಮ್ಮೆ ದುರ್ವಾಸ ದ್ರೌಪದಿಗುಣಬೇಡೆಹರಿನಾಮ ಇರುಳೆ ಕಾಯ್ತುಗುರುಪುತ್ರನುರಿಬಾಣದುರವಣೆಗಡ್ಡಾಂತುಹರಿನಾಮ ಭ್ರೂಣವ ಕಾಯ್ತು 2ವರಬಲದಿಂದಲ್ಲಿ ಅಸುರರು ನೋಯಿಸಲುಹರಿನಾಮ ಸುರರ ಕಾಯ್ತುಚಿರಪಾಪ ಭವಯಾತ್ರೆ ಘಟಿಸಲು ತುದಿಯಲಿಹರಿನಾಮ ಭಟರ ಕಾಯ್ತುಶರಣರ ಮಹಿಮೆಯಂತಿರಲಿ ಅಪಮರಣದಿಹರಿನಾಮ ನನ್ನ ಕಾಯ್ತುಗುರುಮಧ್ವವರದ ಪ್ರಸನ್ವೆಂಕಟೇಶ ಶ್ರೀಹರಿನಾಮಗತಿಎನ್ನೆ ಕಾಯ್ತು3
--------------
ಪ್ರಸನ್ನವೆಂಕಟದಾಸರು