ಒಟ್ಟು 14277 ಕಡೆಗಳಲ್ಲಿ , 133 ದಾಸರು , 6728 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದಿರಾನಂದ ಉದಧಿವರ್ಧನನೆಂದು ಪ ಕಂದರ್ಪಕೋಟಿ ಲಾವಣ್ಯನಿಧಿ ಮನಪೊಂದು ಅ.ಪ ನಾನು ನನ್ನದು ಎಂಬ ಜ್ಞಾನ ಸಂತತಿಯಿಂದ ನಾನಾ ಯಾತನೆ ಭಾವ ಬಲೆಯ ಕಟ್ಟಿ ಹೀನಗೋಜಿಲಿ ಸಿಕ್ಕಿ ಬಲುನೊಂದೆ ಗೋವಿಂದ ನೀನು ನಿನ್ನದು ಎಂಬ ಅಮೃತಗಾನದಿ ನಿಲಿಸು 1 ದರ್ವಿಯಂದದಿ ನಾನು ನೀ ಸರ್ವ ಸ್ವಾತಂತ್ರ ನಿರ್ವಾಹ ನಿನ್ನಿಂದ ಸರ್ವ ಜಗಕೆ ದೂರ್ವ ಏರಿಸೆ ಸಕಲ ದುರಿತವಳಿಸಿ ಮುಕ್ತಿಸುಖ ತೋರ್ವಂಥ ಗುಣನಿಧಿ ಸರ್ವಾತ್ಮ ಹೊರೆ ಹೊರೆಯೊ 2 ನಿನ್ನ ದರುಶನ ಬಿಟ್ಟು ಅನ್ಯತ್ರ ನಿರ್ಭೀತಿ ಎನ್ನಲಿ ಎಂದೆಂದು ವೇದವೇದ್ಯ ನಿನ್ನ ದರುಶನ ಫಲಕೆ ನಿನ್ನ ಮಹಕರುಣ ಇನ್ನು ಕಾರಣದೇವ ಧನ್ಯರಲಿ ಇಡು ಎನ್ನ 3 ಮನೋವಿಕಾರಗಳೆಂಬ ದುಃಖಾರ್ಣದಿ ಬಿದ್ದು ಅನುಮಾನ ಮಾಡಿದೆನೊ ನಿನ್ನ ಅಮೃತ ತನುಧ್ಯಾನ ಮನಕಿಡಿಯದೇನುಗತಿ ಯದುವರ್ಯ ತೃಣಕೆ ಕೈವಲ್ಲೀವ ತ್ರ್ಯಧೀಶಮನಪೊಂದು 4 ಜ್ಞಾನಮನ ಬಿಡದಿರು ದೀನ ಬಾಂಧವ ಕೃಷ್ಣ ಇನ್ನು ಮಾಯವನು ತೆಗೆದೆನ್ನ ಬೆರೆಯೊ ಜ್ಞಾನನಿಧಿ ಜಯೇಶವಿಠಲನೆ ವಿಧಿವಂದ್ಯ ಪ್ರಾಣಾಧಾರಕ ಶುಕನ ಆನಂದನಿಧಿ ಪಾಹಿ 5
--------------
ಜಯೇಶವಿಠಲ
ಈ ಮುದ್ದು ಕೃಷ್ಣನೀಕ್ಷಣದ ಸುಖವೆ ಸಾಕು ಪ. ಶ್ರೀಮಧ್ವಮುನಿಯ ಮನೆದೈವ ಉಡುಪಿನ ಕೃಷ್ಣ[ನ]ಅ.ಪ. ನಾಸಿಕ ಕರ್ಣಸುಳಿಗುರುಳು ಮಸ್ತಕದ ನಳಿನನಾಭನ ಸೊಬಗು1 ಕುಂಡಲ ಪ್ರಭೆಯಸಿರಿನಾಮ ಮಕುಟ ನಾಸಿಕದ ವರಮಣಿಯ 2 ಸಕಲ ದೇವೋತ್ತಮನೆ ಸರ್ವಗುಣ ಪೂರ್ಣನೆಅಕಳಂಕ ಅಖಿಳಾಗಮಸ್ತುತನೆ ಅಪ್ರಾಕೃತನೆಅಖಿಳ ಜೀವೋತ್ತಮರ ಭಿನ್ನ ಹಯವದನನೆಮುಕುರ ಕಡೆಗೋಲು ನೇಣುಗಳ ಪಿಡಿದಿಪ್ಪನೆ 3
--------------
ವಾದಿರಾಜ
ಉಗ್ರ ನರಸಿಂಹ ಜ್ವಾಲಾ ಉಗ್ರನರಸಿಂಹಶೀಘ್ರದಿ ಬಂದು ಪ್ರಹ್ಲಾದನ ಮೊರೆಯನುಕೇಳ್ವ ಅಸುರನ ಸೀಳ್ವಾ ಪ ಫಳ ಫಳಯೆನುತಾರ್ಭಟಿಸುತ ಕುಂಭದ ಲೊಡೆದು ಕೋಪವ ಝಡಿದು ಛಿಳಿ ಛಿಳಿಛಿಳಿರನೆ ಕಣ್ಣಲಿ ಕೆಂಗಿಡಿಯುಗುಳೇ ದಿವಿಜರು ಪೊಗಳೇಭಳಿ ಭಳಿ ಭಳಿರೆಂದಬ್ಬರಿಸುತ ದುಂದುಭಿ-ಯೊದರೇ ಅಸುರರು ಬೆದರೇಝಳಪಿಸಿ ಖಡುಗದಿ ರಕ್ಕಸ ಬಲವನು ತರಿದಾ ಶಿಶುವನು ಪೊರೆದಾ 1 ಭುಗು ಭುಗಲೆನೆ ನಾಸಿಕದಿ ಉಸುರ್ಹೊಗೆ ಹೊರಟು ಖಳನುದ್ದುರುಟುಜಿಗಿ ಜಿಗಿದವನನು ಕೆಡಹಿ ತೊಡೆಯೊಳಗಿಟ್ಟು ರೋಷವ ತೊಟ್ಟುಬಗೆದುದರವ ರಕ್ತವ ನೊಕ್ಕುಡಿತೆಯಲಿ ಸುರಿದು ತಾ ಚಪ್ಪರಿದುಸೊಗಸು ಉರಕೆ ಕರುಳ ಮಾಲೆಯ ಹಾಕಿದ ದೇವ ಭಕ್ತರಕಾಯ್ವ2 ಹಿರಣ್ಯಕಶಿಪನ ಹತ ಮಾಡಿದ ಭಕ್ತ ಪ್ರಹ್ಲಾದನಿಗೆ ಆಹ್ಲಾದದವರವನು ಪಾಲಿಸಿ ಸುರರನು ಪೊರೆದುಕರುಣದಿ ಸುರಿದು ಧರಣಿಯೊಳಗೆ ಪೆ-ಸರಾಗಿಹ ಅಹೋಬಲ ಸ್ಥಳದಿ ನೀನಾ ನೆಲದಿಗುರು ಚಿದಾನಂದ ಅವಧೂತರೆನಿಪ ದಾತಾ ಸಜ್ಜನ ಪ್ರೀತಾ 3
--------------
ಚಿದಾನಂದ ಅವಧೂತರು
ಉಣ್ಣು ಉಣ್ಣು ಉಣ್ಣು ದೇವ ಉಣ್ಣು ಪ ಕಣ್ಣಲಿ ನೋಡು ದೇವ ಮತ್ತನ್ನಕೆ ತುಪ್ಪ ಹಾಕುಚೆನ್ನಾಗಿ ಕಲಸಿ ಬಾಯೊಳಗಿಕ್ಕು 1 ಎಡದಲೀಶ ಕಂಡ್ಯ ನೀ ದೃಢ ಸಮಾಧಿಯ ಪುರುಷಬಿಡಬೇಡ ಬೇಡಿಕೋ ಪೂರ್ಣ 2 ನಿತ್ಯತೃಪ್ತನೆ ದೇವ ನೀ ನಿತ್ಯ ಪರವಸ್ತುನಿತ್ಯ ಚಿದಾನಂದ ತಾನಾದ ದೇವ3
--------------
ಚಿದಾನಂದ ಅವಧೂತರು
ಎಂದಾದರೊಂದು ದಿನ ನಿಂದು ನೋಡುವೆ ನಿನ್ನ ಸುಂದರ ಪದಾಂಬುಜವ ಇಂದಿರೇಶ ಪ ಬಂದ ಸುಖ ದು:ಖಗಳ ಒಂದಾಗಿ ತಿಳಿಯುತಲಿ ತಂದೆ ಗೋವಿಂದ ಸಲಹೆಂದು ನಂಬಿರುವಾಗ ಅ.ಪ ಮಾ ಮನೋಹರಾ ನಿನ್ನ ನಾಮ ಭಜನೆಯ ಗೈದು ಕಾಮಿತಾರ್ಥಂಗಳನು ನಾ ಮರೆಯುತೇ ನಾಮಾಳ್ಪ ಕರ್ಮಗಳ ನೇಮದಿಂದಲಿ ಗೈದು ರಾಮಾರ್ಪಣಾ ಎಂದು ಪ್ರೇಮದಿಂದರ್ಪಿಸಲು 1 ಬಂದ ಅಭ್ಯಾಗತರಿಗೊಂದು ಪಿಡಿ ಅನ್ನವನು ಎಂದೀಯಲೀವೆಯೋ ಅಂದು ಹರಿದಿವಸ ಎಂದೀಯಲಾರೆಯೋ ಅಂದೆನಗುಪೋಷ್ಯವನು ಸಂದೇಹವಿಲ್ಲದೀಯೆಂದು ನಂಬಿರುವಾಗ2 ದೊರೆಯದಿಹ ವಸ್ತುಗಳು ಹರಿಸಮರ್ಪಣವೆಂಬೆ ದೊರೆತ ವಸ್ತುಗಳೆಲ್ಲ ಹರಿಕರುಣವೆಂಬೆ ಗರುಡವಾಹನ ನಿನ್ನ ಶರಣು ಹೊಕ್ಕಿರುವಾಗ ಕೊರತೆ ಏನಿಲ್ಲ ಮಾಂಗಿರಿ ರಂಗವಿಠಲ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಎನಿಕೆ ಒಂದಾಗಲಿ ಗುರುವೆ ಎನಿಕೆ ಒಂದಾಗಲಿಎನಿಕೆ ಒಂದಾಗಲಿ ಯೋಚನೆ ಇದಾಗಲಿಧ್ಯಾನ ಚಿದಾನಂದ ಗುರುವ ಧ್ಯಾನ ಮರೆಯದಂತೆ ಎನಗೆ ಪ ಕಂಡವರು ಉಗುಳಲಿ ಕಾಲಲೆನ್ನ ಒದೆಯಲಿಭಂಡ ಮನುಜನಿವನು ಎಂದು ಬಾಳುಗೇಡಿ ಎನಲಿ ಎನಗೆ 1 ಅನಾಯಾಸ ಬರಲಿ ಅಸಹ್ಯಿಸಿಕೊಳ್ಳುತಿರಲಿಹೀನಮನುಜನಿವನು ಎಂದು ಬಾಳುಗೇಡಿ ಎನಲಿ ಎನಗೆ2 ಮುಂದೆ ಕೆಡಹಿ ಬೀಳಲಿ ಮುಂಗೈ ಮೊಳಕಾಲ್ಮುರಿಯಲಿಹಿಂದಣಿಂದ ಕಳ್ಳರು ಕಟ್ಟಿಯೆಹಿಮ್ಮಡ ಕಡಿಯಲೆನಗೆ 3 ತನುವು ಎಲ್ಲ ನೋಯಲಿ ತಲೆ ಬೇನೆಯು ಬರಲಿಘನ ಕುರುವು ಕುತ್ತವು ಬಲಿದು ಘನವಾಗಿ ಇರಲಿ ಎನಗೆ4 ಇಂತು ಎನಗಾಗಲಿ ಇದೇ ಎನಗಿರಲಿ ಚಿಂತಾಯುತ ಚಿದಾನಂದನ ಚಿಂತೆ ಮರೆಯದಂತೆ ಎನಗೆ 5
--------------
ಚಿದಾನಂದ ಅವಧೂತರು
ಎನ್ನ ಬಿನ್ನಪ ಕೇಳೊ ಘನ್ನ ಮಹಿಮನೆ ಭವ ಬನ್ನ ಬಡಿಸುತಲಿಹುದೋ ಸ್ವಾಮಿ ಪ ಇನ್ನು ನೀ ಪೊರೆಯೊ ಅಪನ್ನಜನರಾಪಾಲ ಮನ್ನಿಸಿ ಕಾಯೊ ಸ್ವಾಮೀ ಪ್ರೇಮೀ ಅ.ಪ ಆಗಾಮಿಸಂಚಿತಭೋಗಂಗಳು ಎನ್ನ ಯೋಗ ಮಾರ್ಗಕೆ ಪೋಗದಂತೆ ಹೇಗೆ ಮಾಡಿ ಙÁ್ಞನನೀಗೆ ನಿನ್ನಲಿ ಮನಸು ಯೋಗವನು ಮಾಡಗೊಡದೇ ಜಾಗುಮಾಡುತ ಪರಮಭಾಗವತರಲಿಸದಾ ಆಗಮಗಳ ತಿಳಿಯದೇ ಹೀಗಾಗಿ ನಾನು ಅಯೋಗ್ಯನೆನಿಸೀ ಜಗದಿ ಕಾಗಿಯಾಗಿ ತಿರುಗಿದೇ ಸ್ವಾಮಿ 1 ಹೆತ್ತ ಈ ಮೊದಲು ಮತ್ತಾರು ಜನರಿಲ್ಲ ಹೊತ್ತಿಗೇ ಕರೆದನ್ನವೀವರಿಲ್ಲಾ ಗೊತ್ತು ಸ್ಥಳಗಳು ಇಲ್ಲ ವೃತ್ತಿ ಸ್ವಾಸ್ಥ್ಯಗಳಿಲ್ಲ ಚಿÉತ್ತ ಶುದ್ಧಿಯು ಮೊದಲೆ ಇಲ್ಲಾ ಎತ್ತ ಪೋದರೆನ್ನ ಇತ್ತ ಬಾಯೆಂತೆಂದು ಹತ್ತಿರ ಕರೆವೊರಿಲ್ಲ ಎತ್ತ ಪೋದರೆನ್ನ ಮತ್ತೆ ಪಾಲಿಪರ್ಯಾರೊ ಉತ್ತಮನೆ ನೀನೆ ಕಾಯೋ ಸ್ವಾಮೀ 2 ಗರ್ಭವಾಸದಕಿಂತ ದುರ್ಭರಾಭವತಾಪ ನಿರ್ಭರಾವಾಗಿಹುದೋ ಅರ್ಭಕಾಮತಿಯಿಂದ ಅಭರ್Àಟಾ ಕಾರ್ಯವನು ನಿರ್ಭಯದಿ ಮಾಡಿದೆನೊ ಗರ್ಭ ನಾ ದೂತ ನೀ ನಿರ್ಭಯವ ಕೊಡದಿರಲು ಲಭ್ಯವೇ ಸರ್ವಕಾರ್ಯಾ ಲಭ್ಯ ಶ್ರೀಪತಿ ನೀನು ಲಭ್ಯನಾಗದಿರೆ ವೈ ದÀರ್ಭಿರಮಣಾ ಕಷ್ಟವೋ ಸ್ವಾಮಿ 3 ಉಡುವ ವಸ್ತ್ರಗಳಿಲ್ಲ ಒಡಲಿಗಶನವು ಇಲ್ಲ ಕೊಡುವ ಧನ ಮೊದಲೆ ಇಲ್ಲ ಪೊಡವಿಯೊಳು ನಾನತೀ ಬಡವನಲ್ಲದೆ ಮಹಾ ಕಡು ಪಾಪಿಯಾದೆನಲ್ಲೋ ತುಡುಗುತನದಲಿ ಪರರ ಮಡದಿಯರ ನಾ ಬಲು ದೃಢಮನಸಿನಿಂದ ಬಯಸಿ ಧೃಢ ಭಕುತಿಯಿಂದ ಅಡಿಗೆರಗದಲೆ ನಾನು ಪೊಡವಿಭಾರಾದೆನಲ್ಲೋ ಸ್ವಾಮೀ 4 ಓದಿ ಬರೆಯಾಲಿಲ್ಲ ವೇದ ಪಠಿಸಾಲಿಲ್ಲ ಮೋದತೀರ್ಥರ ಶಾಸ್ತ್ರ ತಿಳಿಯಲಿಲ್ಲಾ ವಾದಶಾಸ್ತ್ರಗಳಿಲ್ಲ ಭೇದಪಂಚಕವಿಲ್ಲ ಸಾಧನದ ಮಾರ್ಗವಿಲ್ಲ ಖೇದಗೊಳಿಸುವ ಭವದ ಹಾದಿ ತಿಳಿಯದೆ ನಾನು ಮೋದಕÀರವೆಂದು ಅಲ್ಲೀ ಸಾದರದಿ ಬಿದ್ದು ಆಮೋದಬಡುತಲಿ ದ್ವಿ ಪಾದಪಶು ನಾನಾದೆನಲ್ಲೋ ಸ್ವಾಮೀ 5 ಸತಿಸುತ ಮೊದಲಾದ ಅತಿಹಿತ ಜನರೆನ್ನ ಸತತ ಸಂತ್ಯಜಿಸಿಹರೋ ವಿತತವಾಗಿಹ ಮಹಾಪತಿತದಾರಿದ್ರ್ಯನ್ನ ಅತಿಬಾಧೆ ಬಡಿಸುತಿಹದೋ ಇತರ ಜನರೂ ಎನ್ನ ಅತಿದÀೂರದಲಿ ನೋಡಿ ಅತಿಹಾಸ್ಯ ಮಾಡುತಿಹರೋ ವ್ರತತಿಜಾಂಬಕÀ ನಿನ್ನ ನತಿಸಿ ಬೇಡಿಕೊಂಬೆ ಸತತ ನೀ ಪಾಲಿಸೆಂದೂ ಸ್ವಾಮೀ 6 ತಂದೆ ತಾಯಿಯೂ ನೀನೆ ಬಂಧು ಬಳಗವು ನೀನೆ ಇಂದು ಸಿಂಧು ಒಳಗೆ ಬಿದ್ದೆ ಮುಂದಕ್ಕೆ ಕರೆದು ಕಾಯೋ ಸುಂದರಾಂಗನೆ ಕೃಪಾಸಿಂಧು ನೀ ಬಿಡೆ ಎನ್ನ ನೊಂದದಲೆ ಸಲಹೊರ್ಯಾರೋ ಸ್ವಾಮಿ 7 ಹೊಟ್ಟೆಗಿಲ್ಲದೆ ನಾನು ಬಟ್ಟೆ ಹಾಸೀ ನರರಿ ಗ್ವಟ್ಟರಿಸಿ ಒದರುತಿಹೆನೋ ಪುಟ್ಟದಿರಲೂ ಅನ್ನ ಸಿಟ್ಟಿನಿಂದಾ ನಾಯಿ ಬೆಟ್ಟಕ್ಕೆ ಒದರಿ ತಾನೂ ಹೊಟ್ಟೆಯುಬ್ಬೀ ಕೊನೆಗೆ ಹೊರಳಿ ಹೊರಳಿ ತಾನು ಸುಟ್ಟ ಬೂದಿಲಿ ಬೀಳ್ವ ತೆರದೀ ಒಟ್ಟು ಮಾತಿದು ಕೃಪಾವಿಟ್ಟು ನೀ ಎನ್ನನು ಥsÀಟ್ಟನೇ ಕರಪಿಡಿದು ಕಾಯೋ ಸ್ವಾಮೀ 8 ನಿನ್ನ ದಾಸನು ಆಗಿ ಅನ್ಯರನ ಬೇಡಿದರೆ ಘನ್ನತೆಯು ನಿನಗುಂಟೇ ಘನ್ನ ಜನಪನ ತನುಜ ಇನ್ನು ದೈನ್ಯದಿ ತಾನೆ ಅನ್ಯರನು ಬೇಡುವುದು ಉಂಟೇ ಚೆನ್ನ ಸುಮನಸ ಧೇನು ಮುನ್ನ ಮನೆಯೊಳಿರೆ ಗೋ ವನ್ನು ಬಯಸುವರುಂಟೇ ಇನ್ನು ಪೇಳುವದೇನು ಎನ್ನಭವಣೇ ತಿಳಿದು ಇನ್ನು ಕಾಯಲಿ ಬೇಕೋ ಸ್ವಾಮೀ ಶುದ್ಧಮಾರ್ಗವ ಬಿಟ್ಟು ಬದ್ಧ ಭವಸಾಗರವೆ ಉದ್ಧಾರ ಮಾಳ್ಪದೆಂದೂ ಶಿದ್ಧಜನರಾ ಸೇವೆಗೆ ಬದ್ಧನಾಗದೆ ದುರಾ ರಾಧ್ಯ ಜನರನ್ನು ಭಜಿಸೀ ಉದ್ಧರಿಸುವೊ ಶ್ರೀ ಮಧ್ವಸಿದ್ಧಾಂತದ ಸೂ ಪದ್ಧತಿಯನ್ನೆ ಬಿಟ್ಟೂ ಸಿದ್ಧಮೂರುತಿ ಎನ್ನ ¥ದ್ಧಗಳ ಎಣಿಸದಲೆ ಉದ್ಧಾರಮಾಡೊ ಸ್ವಾಮೀ ಪ್ರೇಮೀ 10 ದಾತ ನೀನೇ ಎನ್ನ ಮಾತುಲಾಲಿಸಿ ಭವದ ರತಿಯನ್ನೇ ಬಿಡಿಸಿ ಕಾಯೋ ಪೊತನಲ್ಲವೆ ನಿನಗೆ ಆತುರದಿ ನಾನೀ ರೀತಿಯಿಂದಲಿ ಪೇಳಿದೆ ಯಾತರಾ ಮಾತೆಂದು ನೀ ಪ್ರೀತಮನಕೇ ತರದೆ ತಾತನೂಕೀ ಬಿಟ್ಟರೆನ್ನಾ ಸೋತುಬಂದಾ ನಿನಗೆ ಆತುರಾವ್ಯಾಕೆಂದು ನೀತವಾಗೀ ಕಾಯ್ವರಾರೋ ಸ್ವಾಮೀ 11 ಮಾತೆ ಮಕ್ಕಳಿಗೆ ವಿಷದಾತೆಯಾಗೇ ತಂದೆ ಪೋತರ ಮಾರಿದಾರೆ ದಾತನಾದಾ ರಾಜ ಆತುರಾದಿಂದಲಿ ನಿಜ ದೂತರರ್ಥಪಹಾರಮಾಡೆ ನೀತಸತಿಯು ತನ್ನ ನಾಥನಾಯು ತಾನೆ ಘಾತವನೆ ಮಾಡಿದಾರೆ ನೀತವೇ ನಿನಗಿದಕೆ ಯಾತರಾ ಚಿಂತೆ ಈ ಮಾತಿನಂತೆ ನಿನಗೆ ಪ್ರೀತೇ ಸ್ವಾಮೀ ಎಷ್ಟು ಪೇಳಲಿ ಎನ್ನ ಕಷ್ಟರಾಶಿಗಳೆಲ್ಲ ಶ್ರೇಷ್ಟವಾಗಿರುತಿಹವೊ ಸ್ವಾಮೀ ದುಷ್ಟನಾದರು vನ್ನ ಭ್ರಷ್ಟಮಗನನು ತಾಯಿ ಅಟ್ಟೀಸೂವಳೆ ಅಡವಿಗೆ ಎಷ್ಟು ಕೆಟ್ಟವ ನಾನಾರಿಷ್ಟನಾದರು ಕೃಪಾ ದೃಷ್ಟಿಯಿಂದಲಿ ನೋಳ್ಪಳೋ ನಷ್ಟದೈವ ನಾನರಿಷ್ಟ ಅಙÁ್ಞನಿ ಕರುಣಾ 13 ದೃಷ್ಟಿ ಯಿಂದಲಿ ನೋಡಿ ಸಲಹೋ ಸ್ವಾಮೀ ಕುಟಿಲ ಖಳಮತಿಯು ನಟಿನೆಮಾಡುತ ಭವಲಂ ಪಟದೊಳಗೆ ಬಿದ್ದಿಹೆನೂ ಸ್ವಾಮೀ ಶಠÀತರನು ನಾನತಿಕಠಿಣಮನಸೀನಿಂದ ಧಿಟಜ್ನಾನಿದ್ರೋಹಗೈದೆ ದಿಟರಿಲ್ಲ ಎನಗೆಂದು ನಟಿಸುತ್ತ ಸರ್ವದ ಅಟನೆಮಾಡಿದೆ ಸರ್ವರಲ್ಲಿ ಪಟುತರನು ನಾನೆಂದು ಧಿಟಗುರುಜಗನ್ನಾಥ ವಿಠಲ ದೇವಾ ನಿನ್ನ ಮರೆದೆ ಸ್ವಾಮೀ 14
--------------
ಗುರುಜಗನ್ನಾಥದಾಸರು
ಎಲ್ಲ್ಯಾಡಿಲ್ಲಿಗೆ ಬಂದನೆ ಈತನು ಕೌ- ಸಲ್ಯಾದೇವಿಯ ಕಂದನೆ ಎಲ್ಲ್ಯಾಡಿಲ್ಲಿಗೆ ಬಂದ ಚೆಲ್ವೆ ಕೌಸಲ್ಯೆ ಕಂದ ಫÀುಲ್ಲಲೋಚನೆ ಜಾನಕಿ ಲಕ್ಷ್ಮಣರನೆ ಕೂಡಿ ಪ ಸನಕಾದಿ ಸುರರ್ವಂದಿತ ಮಾಣಿಕ್ಯ ರತ್ನ ಪದಕ ಪಚ್ಛದಿ ಭೂಷಿತ ಜನಕ ಜಾನ್ಹವಿ ಜಾನಕಿ ರಾಮರಿಬ್ಬರು ವನಕೆ ಬಂದ್ವಾರಿಧಿ ಕಟ್ಟಿ ವಾನರನ ಕೂಡೆಲ್ಯಾಡಿಲ್ಲಿಗೆ ಬಂದನೆ 1 ನಾಸಿಕ ಭಂಗ ಮಾಡಿ ಮಾರೀಚನ್ವಧೆ ಮಂಡೋದರೀಪತಿ ಮರ್ದಕನಾಗಿದ್ದ ಬಂದಯೋಧ್ಯವನಾಳಿ ಭಕ್ತರ ಸಲಹೊ ದಾತ್ಯೆಲ್ಲ್ಯಾಡಿಲ್ಲಿಗೆ ಬಂದನೆ 2 ಬಿಲ್ಲುಪಿಡಿದು ನಿಂತನೆ ಭೀಮೇಶಕೃಷ್ಣ ಬಲ್ಲಿದ ಬಲವಂತನೆ ಕಲ್ಲ್ಹೆಣ್ಣು ಮಾಡಿದ ಕರುಣಕೃಪಾಳೋ ಕೈ- ವಲ್ಯದಾಯಕ ಸೀತಾವಲ್ಲಭೆಂದೆನಿಸುವೋನೆಲ್ಲಾಡಿಲ್ಲಿಗೆ ಬಂದನೆ 3
--------------
ಹರಪನಹಳ್ಳಿಭೀಮವ್ವ
ಏನ ಪಡೆದಿದ್ದೆನೋ ಸುಕೃತವ ಮುಂ-ದೇನ ಪಡೆದಿದ್ದೆನೋ ಮಾನ ನಿಧಿಯು ಚಿದಾನಂದ ಗುರುವ ಕಂಡುತಾನೆ ತಾನಾಗಿ ತನ್ನನು ಮರೆದಿರ್ದುದ ಪ ಆನಂದ ಮೂರುತಿಯ ನಾನೀಗ ಅತಿ ವೇಗ ಧ್ಯಾನಿಸಲುಏನೇನು ತೋರದೆ ಯೋಚನೆಗಳು ಕುಂದಿನಾನು ನೀನೆಂಬ ನೀತಿಯ ಮರೆದಿರ್ದುದಾ 1 ಶತಕೋಟಿ ಶಶಿಸೂರ್ಯರ ಪ್ರಭೆಯ ತಾಳ್ದುಶತ ಪತ್ರಗಳ ಗೇಹನ ಅತಿಹರುಷದಿ ಕಂಡು ಆತನೇ ತಾನಾಗಿಮತಿಯನೆ ತೊರೆದೆ ಮರೆತು ನಾ ನಿರ್ದುದ 2 ನಿರುಪಮ ನಿರ್ಗುಣನ ನಿರ್ವಿಕಲ್ಪ ನಿರವಯ ನಿರೀಹನವರಚಿದಾನಂದ ಗುರುವ ವರದಾತನಚರಣ ನೆನೆದು ಮನ ಚಲಿಸದಂತಿರ್ದುದ 3
--------------
ಚಿದಾನಂದ ಅವಧೂತರು
ಕಂಡಿರೆ ಬಗಳಾಶ್ಚರ್ಯವ ಕಂಡಿರೇ ಬಗಳಾಶ್ಚರ್ಯವದಿಂಡೆಯರಾದವರನ್ನೆಲ್ಲ ತುಂಡು ಮಾಡಿಶುಂಭ ನಿಶುಂಭರಸುವ ಕೊಂಡವಳ ಪ ಕ್ರೂರ ಧೂಮ್ರಾಕ್ಷ ಶುಂಭರಾಜನ ನೇಮದಿಂದಸಾರಿ ದೇವಿಯನ್ನು ಮುಂದಲೆ ಹಿಡಿದು ಎಳೆವೆನೆನಲುವೀರಳೀಗ ಕೇಳಿ ಅವಡುಗಚ್ಚಿ ಕಣ್ಣು ತೆರೆಯೆಹಾರಿದನು ಧೂಮ್ರಾಕ್ಷನುರಿದು ಭಸ್ಮವಾದನು1 ಚಂಡ ಮುಂಡಗಪ್ಪಣೆಯನುದ್ದಂಡ ಶುಂಭನೀಗ ಕೊಡಲುಖಂಡೆಯವನೆ ಹಿರಿದು ಮುಂಕೊಂಡು ದೇವಿ ಬಲಕೆ ನಿಂದುಗುಂಡೆಯರ ಕೂದಲು ಹಿಡಿದು ತುಂಡು ಮಾಡಿಯೆ ತಿಂದುಚಂಡ ಮುಂಡರ ತಲೆಯ ಖಂಡಿಸಿದ ವೀರಳ 2 ರಕ್ತ ಬೀಜನ ರಕ್ತದಿಂದ ರಕ್ತಬೀಜರಾಗೆರಕ್ತನಯನಿ ಹಾಸಿದಳು ನಾಲಿಗೆಯ ಭೂಮಿಗೆರಕ್ತ ಬೀಜರನ್ನು ಕಡಿದು ನುಣ್ಣಗೆ ನುಂಗಿ ಆದಿ-ರಕ್ತ ಬೀಜನನ್ನು ಶೂಲದಿಂದ ತಿವಿದು ತಿಂದಳು 3 ಅಂಬನ ಮೇಲೆ ನಿಶುಂಭನೆರಡು ಹಸ್ತ ಹೋಗಿಎಂಬೆನೇನು ಒದಯಲಾಗ ಅಂಬುಜಾಕ್ಷಿ ತೊಡೆಯ ಕಡಿಯೆತುಂಬಿ ಕೋಪದಿಂದಲವನು ತಿಂಬೆನೆಂದು ಮುಂದೆ ಬರಲುಅಂಬಿನಿಂದ ತಲೆಯ ಕಳೆದಳಂಬರದಲುಘೇ ಎನಲು 4 ತಕ್ಕೆಯಲ್ಲಿ ಬಿದ್ದು ದೆಕ್ಕಬುಕ್ಕಿಯಾಡೆ ಶುಂಭನನ್ನುನಕ್ಕು ಶಿವನ ಶೂಲದಿಂದಲಿಕ್ಕಿದಳು ಖಳನ ಎದೆಯಉಕ್ಕಿ ಹರುಷ ದೇವತೆಗಳು ಓಲಗವನೆ ಮಾಡಿದರುದುಃಖಾತೀತ ಚಿದಾನಂದ ತಾನಾದ ಬಗಳೆಗೇ5
--------------
ಚಿದಾನಂದ ಅವಧೂತರು
ಕಂದ ಮಾಡುವುದೇನು ಕಂಡಿರೆ ಗೋ- ವಿಂದನ್ನ ದೂರ್ಹೇಳ ಬಂದಿರಾ ಪ ಏನುಮಾಡಿದನೀಗ ನಮರಂಗ ಜೋಡೇನೆ ನಿಮಗೆ ಕೋಮಲಾಂಗ ಭಂಗ 1 ಅತ್ತೆ ಮಾವಂದಿರಂಜಿಕೆಯೇನೆ ಪರ ನೀಯೆಂಬೋದನು ಕಾಣೆ ಕೃಷ್ಣ ಕೊಳಲನೂದೊ ವನಕಿನ್ನು ಕತ್ತಲೊಳಗೆ ಬರುವ ಬುದ್ಧಿ ತರವೇನೆ 2 ಪುರುಷ ಮಕ್ಕಳನ್ನೆಲ್ಲ ತೊರೆದಿರೆ ನಮ್ಮ ಸರಸಿಜಾಕ್ಷನ ಹಿಂದೆ ತಿರುಗುವಿರÉ ಸರಿಬಂದ ಕ್ರೀಡ್ಯವಗರುಹಿರೆ ಅರಗಳಿಗೆ ಎನ್ನರಮನ್ಯಾಗಿರಗೊಡಿರೆ 3 ಕದ್ದುಬೆಣ್ಣೆಯ ಮೆಲ್ಲುವನೇನೆ ಮುದ್ದು ಕೂಸಿಗೀಪರಿ ಅಂಬುವರೇನೆ ಪದ್ಮಪಾದದ ಪರಮಾತ್ಮನೆ ಬಂ- ದಿದ್ದಲ್ಲೆ ನಿಮಗೆ ದಯಮಾಡುವನೆ 4 ಮಾನವಿಲ್ಲದೆ ಮಾರನಯ್ಯನ ಕೂಡಿ ವೃಂದಾ- ವನದೊಳಾಡುವುದೇನೆ ದೂರಿಕೊಂಬುವುದೇನು ಕಾರಣ ಭೀ- ಮೇಶ ಕೃಷ್ಣನು ನಿಮ್ಮನ್ಸಲಹುವನೆ 5
--------------
ಹರಪನಹಳ್ಳಿಭೀಮವ್ವ
ಕನಸ ಕಂಡೆ ನಿನ್ನಿನಿರುಳೊಳು ಕೇಳುಕನಸಿನ ಸೊಗಸನು ತರಳೆಚಿನುಮಯಾತ್ಮಕ ಚಿದಾನಂದ ಅವಧೂತದಿನಕರ ಪ್ರಭಾತೀತ ಗುರುನಾಥ ಬಂದಿಹ ಪ ಕಾಶ ಕೌಪೀನವನುಟ್ಟು ಚೆಲ್ವಬಾಸುರ ಕುಂಡಲವಿಟ್ಟುಕೇಶದ ಜಡೆಗಳು ಥಳಥಳಿಸಲು ಸರ್ವಭೂಷಿತನಾಗಿ ತನ್ನೆದುರಿಗೆ ನಿಂತಿಹ 1 ನೆಟ್ಟನೆ ನಡುಮನೆಯೊಳು ತಾನುನೆಟ್ಟನೆ ಬಂದು ಕುಳಿತಿಹನುಶಿಷ್ಟ ಮೂರುತಿ ತನ್ನ ಕಾಯಬೇಕು ಎಂದುಮುಟ್ಟಿ ಪಾದವ ನಾನು ಶರಣು ಮಾಡಲಿದ್ದೆ2 ಸುಂದರ ಕಳೆಯುಳ್ಳ ಸ್ವಾಮಿತಾನು ಸಿಂಧು ಕೃಪಾಕರನಾಮಿ ಎಂದಡಿಗಡಿಗೆ ಸಾಷ್ಟಾಂಗವೆರಗಿನಿಂದು ಪೂಜಿಸಿ ಕಣ್ತುಂಬ ನೋಡಿನಲಿವ 3 ನಾನಾ ಪೂಜೆಯನೆಲ್ಲವ ಮಾಡಿ ಗುರುಧ್ಯಾನದಿನಾನೋಲಾಡಿ ಮಾನವನಾಗಿನಾನು ನಿಂದಿರಲೆನ್ನ ಕಿವಿಯೊಳುನಾನು ನೀಗಿತ್ತೆಂದು ಉಪದೇಶ ನೀಡುವ4 ಈಪರಿ ಕನಸನು ಕಂಡು ಎಲ್ಲತಾಪವು ಪರಿಹಾರಗೊಂಡುಭೂಪ ಚಿದಾನಂದ ಅವಧೂತ ತಾನಾದರೂಪಾಗಿ ಬೆಳಗಿರೆ ಬೆಳಗಿರೆ ಬೆಳ್ಳನೆ ಬೆಳಕಿತ್ತು5
--------------
ಚಿದಾನಂದ ಅವಧೂತರು
ಕರುಣಿಸಯ್ಯ ಕಸ್ತೂರಿರಂಗ ಕರುಣಿಸಯ್ಯ ಪ ದುಷ್ಟಸಂಸಾರ ಬಹುಕಷ್ಟವಯ್ಯ ಇದ ರಟ್ಟೊಳಿಗಳ ತಾಳಲಾರೆನಯ್ಯ ಆರೆನಿದರ ಕೋಟಿಲೆಗಳಾರೆನಯ್ಯ ಪಾದ ಸೇರಿಸೈಯ್ಯ 1 ಕಾಮಕ್ರೋಧ ಲೋಭಮೋಹ ಬಿಡಿಸಯ್ಯ ಮದಮಾತ್ಸರ್ಯವೆಂಬ ಕಾಟ ನೀನೊತ್ತಿಸಯ್ಯ ಪಾದ ಹೊಂದಿಸಯ್ಯ ಸರ್ವಬಂಧು [ನೀ] ಎನ್ನ ಜಿಹ್ವೆಯಲಿ ನೆಲೆಸಯ್ಯ 2 ಆಶ ಪಾಶಕ್ಲೇಶವೆಲ್ಲ ನಾಶ ಮಾಡಿಸಯ್ಯ ಶ್ರೀಶ ನಿನ್ನ ದಾಸರಲ್ಲಿ ಸೇರಿಸಯ್ಯ ವಾಸುಕಿಶಯನ ಭವದಿ ನೊಂದೆನಯ್ಯ ಸ ರ್ವೇಶಬಂಧು ಎನ್ನನುದ್ಧರಿಸಯ್ಯ 3 ಪುತ್ರಮಿತ್ರಬಂಧುವರ್ಗದಿ ಬಿದ್ದಿಹೆನಯ್ಯ ಅ ನಿತ್ಯಮೋಹದಲ್ಲಿ ಮುಳುಗಿ ಪೋದೆನಯ್ಯ ವ್ಯರ್ಥನಾಗಿ ಕಾಲವನ್ನು ಕಳೆದೆನಯ್ಯ ಎನ್ನ ಮರಣ ಕಾಲದಿ ನಿಮ್ಮ ಸ್ಮರಣೆ ಕರುಣಿಸಯ್ಯ 4 ಜನನ ಮರಣವೆಂಬೊ ಜಾಡ್ಯ ಕ್ರೂರವಯ್ಯ ಇದರ ವಿಧವನರಿತು ವೈದ್ಯ ಮಾಳ್ವರ ಕಾಣೆನಯ್ಯ ಬ್ರಹ್ಮಾದಿ ದೇವತೆಗಳೂ ಅರಿಯರಯ್ಯ ಧನ್ವಂತ್ರಿರೂಪ ಶ್ರೀನಿವಾಸ ರಕ್ಷಿಸಯ್ಯ 5 ದೇಹವೆಲ್ಲ ಗಳಿತವಾಗಿ ಪೋಯಿತಯ್ಯ ಇಂದ್ರೀಯ ಸ್ವಾಧೀನದಲ್ಲಿ ನಿಲ್ಲದಯ್ಯ ವಿಷಯದಲ್ಲಿ ಮನಸು ಬಹಳ ಹರಿವುದಯ್ಯ ಲಕ್ಷ್ಮೀಪತಿಯೆ ನಿಮ್ಮ ಭಕ್ತಿಯಿತ್ತು ಸಲಹಯ್ಯ 6 ದೀನನಾಗಿ ನಿನ್ನ ಚರಣ ಸೇರಿದೆನಯ್ಯ ಜ್ಞಾನವೈರಾಗ್ಯವಿತ್ತು ಪಾಲಿಸೆನ್ನಯ್ಯ ಮರಳಿ ಜನ್ಮ ಬಾರದಂತೆ ಮಾಡಬೇಕಯ್ಯಾ ಗರುಡಗ ಮನ ವೆಂಕಟರಮಣ ಭವಸಂಕಟ ಬಿಡಿಸಯ್ಯ 7
--------------
ಯದುಗಿರಿಯಮ್ಮ
ಕರುಣಿಸಿ ವೃಷ್ಟಿಗರಿ ಕಮಲನಯನನರರಪರಾಧಗಳ ನೋಡದಲೆ ವೇಗದಲಿ ಪ ತ್ರಿವಿಧ ಸಾಧನ ಪೂರ್ತಿಪದು ||ಅನ್ನದಿಂದಲೆ ಅಭಿವೃಧ್ದಿ ಆಹದರಿಂದ ಪ-ರ್ಜನ್ಯದಿಂದಲಿ ಅನ್ನ ಜನಿಸುವ ಕಾರಣದಿ 1 `ಭೀಷ್ಮಾಸ್ಮಾದ್ವಹತಿ ಪವತಿ` ಎಂಬೋಕ್ತಿಯಲಿಈ ಸಮಸ್ತಮರರೂ ನಿನ್ನ ಭಯದಿ ||ಬ್ಯಾಸರವೆ ತಮ ತಮ್ಮ ವ್ಯಾಪಾರಗಳ ಮಾಡಿಪೋಷಿಸುವರು ಜಗವ ಪ್ರೀತಿಯಿಂದ 2 ಸುರರು ನಿಮಿತ್ಯ ಮಾತ್ರಪರಮ ಗುಣಸಾಂದ್ರ ಹೇ ಕರುಣಾಬ್ಧಿ ಚಂದ್ರ 3 ನರನೊಬ್ಬ ಪ್ರಭು ತನ್ನ ಪರಿಚಾರಿಗಳನ್ನು ಪರಮ ಅಭಿಮಾನದಲಿ ಪರಿಪಾಲಿಪ ||ಸುರರ ಬ್ರಹ್ಮಾದಿಗಳ ದೊರೆಯ ನಿನಗೀ ಮಾತುಸರಿಹೋದರೆ ವಚನ ಸಲಿಸು ಕೃಪೆಯಿಂದ 4 ಆವಾವ ಸಾಧನದಿ ಆವ ಸುಖವೈದುತಿರೆದೇವ ನಿನ್ನಯ ಕೀರ್ತಿ ಬರುವದೆಂತೋ ||ದೇವ ದೇವೇಶ ಗುರು ವಿಜಯ ವಿಠಲರೇಯ ಸಾವಧಾನದಲಿತ್ತು ಪರಿಪಾಲಿಪುದು ಬಿನ್ನಪವ 5
--------------
ಗುರುವಿಜಯವಿಠ್ಠಲರು
ಕವಚ ಕವಚದೊಳು ಬ್ರಹ್ಮಾಸ್ತ್ರ ವಜ್ರ ವಜ್ರ ವಜ್ರ ವಜ್ರ ಕವಚ 1 ಬಗಳಾದೇಹವ ತನ್ನದು ಮಾಡುವುದೇ ವಜ್ರ ಕವಚಬಗಳಳಾಗಿ ತಾನಿರುವುದೇ ವಜ್ರಕವಚಬಗಳಾ ಒಳಹೊರಗೆ ಒಂದಾಗಿಹುದೇ ವಜ್ರಕವಚಬಗಳೆ ನಿಜವಾಗಿ ಒಲಿದಿಹುದೇ ವಜ್ರಕವಚ 2 ನಾರಾಯಣ ಕವಚ ಶಿವಕವಚ ಶಕ್ತಿಕವಚಸೂರ್ಯ ಕವಚ ಎಲ್ಲ ದೇವ ಕವಚಕಾರಣಾತ್ಮಕ ಚಿದಾನಂದ ಬಗಳ ಕವಚಆರ ಯತ್ನವು ನಡೆಯದಿಹುದದು ವಜ್ರಕವಚ3
--------------
ಚಿದಾನಂದ ಅವಧೂತರು