ಒಟ್ಟು 29 ಕಡೆಗಳಲ್ಲಿ , 14 ದಾಸರು , 29 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಕ್ತಿಯನು ಪಾಲಿಸುತ ಭಕ್ತರನು ಪಾಲಿಸುವ ಮುಕ್ತಿದಾಯಕ ಹರಿಯ ಸೇವೆಯನು ಮಾಳ್ಪೇ ಪ ಪಂಚೇಂದ್ರಿಯವ ಗೆದ್ದು ಪಂಚಾಮೃತಗಳಿಂದ ಕಂಚಿಪುರ ವಾಸಿಯ ಕಾಯವನು ತೊಳೆದೂ 1 ಆರು ಅಂಗಳ ಜೈಸಿ ಆರು ಶಾಸ್ತ್ರಗಳಿಂದ ಧಾರೆ ಪುರವಾಸಿಗೇ ಗಂಧ ಲೇಪಿಸುತಾ 2 ಚಾರು ವೇದಗಳಿಂದ ನಿತ್ಯ ಪುಷ್ಪವೇರಿಸುತ 3 ಎಂಟ ಕೀಳರ ಗೆದ್ದು ತುಂಟರೈವರ ಕೊಂದು ಬಂಟನಾಗುತ ಹರಿಯ ಮಹಿಮೆಯನು ಭಜಿಸಿ 4 ಶಾಪ ತಾಪವ ಕಳೆದು ತ್ರಿಪುರಾರಿ ವದ್ಯನಿಗೆ ಧೂಪದೀಪಗಳಿಂದ ಆರತಿಯ ಬೆಳಗೀ 5 ಅನುಮಾನವನು ತ್ಯಜಿಸಿ ಶ್ರೀ ಚೆನ್ನಕೇಶವನಿಗೆ ತನುಮನ ಧನದಿಂದ ಆತ್ಮವರ್ಪಿಸುವೇ 6
--------------
ಕರ್ಕಿ ಕೇಶವದಾಸ
ಭವ ಮುಖ್ಯ ಸುರಗಣ ಮುನಿನಿಕರ ಸಿದ್ಧ ಪರಿವಾರವು 1 ಸರಿತು ಪ್ರವಾಹದಂತೆ ವಾಗ್ವೈಖರಿಯಿಂದ ನಿರುತ ತೃಪ್ತಿಪಡಿಸಲಾರರು ಇನ್ನು 2 ಉರು ಉಗ್ರಜಾತಿ ಅಸುರ ಕುಲದಿ ಪುಟ್ಟಿದ ನಾನು ನೆರೆ ತುತಿಸಿ ತೃಪ್ತಿಪಡಿಸಲಾಪೆನೆ ನಿನ್ನ 3 ಆದೊಡೆ ಕುಲ ರೂಪ ವಯಸ್ಸು ವಿದ್ಯೆಗೆ ನೀನು ಮೋದಪಡುವನಲ್ಲ ಭಕ್ತಿಯೊಂದಕೆ ನಲಿವೆ 4 ಕರಿರಾಜನೇ ಸಾಕ್ಷಿ ಕರುಣಾಮಯನೇ ನಿನ ಗಿರುವುದೇ ವೈಷಮ್ಯ ? ಭಕ್ತಗೆ ವಶ ನೀನು 5 ಅರವಿಂದನಾಭ ನಿನ್ನ ಚರಣಾರವಿಂದವನು ನಿರುತ ಭಜಿಸುವ ಉತ್ತಮನೆನಿಸುವ 6 ಸರುವ ಸ್ವತಂತ್ರ ಪೂರ್ಣಕಾಮ ನಿನ್ನನು ನಾವು ಹಿರಿದಾಗಿ ಆರಾಧಿಸಿ ತೃಪ್ತಿಪಡಿಸುವುದೇನೊ 7 ನಾವು ಮಾಡುವ ಕರ್ಮಸಾಧನದಿಂದ ನಿನಗೆ ಯಾವ ಫಲವೂ ಇಲ್ಲ ! ಫಲವೆಲ್ಲ ನಮಗಯ್ಯಾ 8 ಬಿಂಬವನಲಂಕರಿಸೆ ಕನ್ನಡಿಯೊಳಗೆ ಪ್ರತಿ ಬಿಂಬಕೆ ಅಲಂಕಾರ ಕಾಣುವ ಪರಿಯಲಿ 9 ತರಳನ ಮೊರೆಯನು ಲಾಲಿಸಿ ಪಾಲಿಸೊ 10 ನಮ್ಮ ಸಾಧನೆಗಾಗಿ ನಿನ್ನ ಆರಾಧಿಪೆವು ಬೊಮ್ಮನಯ್ಯನೆ ನಿನ್ನ ಆನುಗ್ರಹದಿಂದಲಿ 11 ಬ್ರಹ್ಮಾದಿ ಸುರರೆಲ್ಲ ನಿನ್ನ ಸೇವಕರಯ್ಯಾ ಹಮ್ಮು ಮತ್ಯಾತಕಯ್ಯಾ ನಮ್ಮಂಥವರಿಗೆಲ್ಲ 12 ನಿನ್ನ ಕೋಪಕೆ ಅಂಜಿ ನಡುಗದವರುಂಟೆ ಮನ್ನಿಸಿ ಕೋಪವ ಉಪಶಮ ಮಾಡೋ ಸ್ವಾಮಿ 13 ನಿನ್ನ ಈ ಉಗ್ರರೂಪ ಧ್ಯಾನವು ಜನರಿಗೆ ಘನ ಭಯವ ಕಳೆಯೆ ಸಾಧನವಾಗಲಿ 14 ದಿಗಿಲು ಪುಟ್ಟಿಸುವಂಥ ಈ ನಿನ್ನ ಮುಖ ಜಿಹ್ವೆ ಭೃಕುಟಿ ಕರಾಳ ದಂಷ್ಟ್ರ 15 ಕೊರಳಲ್ಲಿ ಧರಿಸಿಹ ಕರುಳ ಮಾಲಿಕೆ ರಕ್ತ ಬೆರದ ಕೇಸರ ಮತ್ತೆ ನಿಗುರಿದ ಕರ್ಣಗಳು 16 ಲೋಕ ಭಯಂಕರವಾಗಿವೆ ಆಂದೊಡೆ ಶ್ರೀಕರ ನಿನ್ನ ಕೃಪೆಯಲಿ ನಾನವಕೆ 17 ಅಂಜುವನಲ್ಲ ಕೇಳು ಕಂಜನಾಭನೆಯಿನ್ನು ಅಂಜುವೆನೊಂದಕೆ ಸಂಸಾರ ಚಕ್ರಕೆ 18 ತೊಳಲಿಸÀುವುದು ಜನ ದುಃಖದಿ ಸಂಸಾರ ಬಲು ಪರಿಯಲಿ ಅದು ದುಃಖದಿ ಸಾಗರ 19 ಇಷ್ಟವಾದದ್ದು ಕೊಡದೆ ಇಷ್ಟವಿಲ್ಲದ್ದುಣಿಸಿ ಭವ 20 ಸಂಸಾರ ಸಾಗರ ದಾಟಿಸೋ ಮಹಾಮಹಿಮ ಸಂಶಯವಿಲ್ಲದೆ ಸೇರಿಸೋ ನಿನ್ನ ಬಳಿ 21 ಕರುಣಾಸಾಗರ ನಮ್ಮ ಕರಿಗಿರೀಶನೆ ಸ್ವಾಮಿ ತರಳನ ಮೊರೆಯನು ಲಾಲಿಸಿ ಪಾಲಿಸೊ 22 ( ಪ್ರಹ್ಲಾದ ನರಹರಿಯನ್ನು ಸ್ತುತಿಸಿದ್ದು )
--------------
ವರಾವಾಣಿರಾಮರಾಯದಾಸರು
ಮನವೇ ಮರೆವರೇನೊ ಹರಿಯಾ ಪ ಬಹು ಜನುಮಗಳಲ್ಲಿ ಬಟ್ಟ ಬವಣಿಗಳರಿಯಾ ಅ.ಪ. ವಿಷಯ ಚಿಂತನೆ ಮಾಡಸಲ್ಲ ಮೇಷ ವೃಷನನಾದನು ಹಿಂದೆ ಪೌಲೋಮಿ ನಲ್ಲ ಝಷ ಕೇತುವಿನ ಮ್ಯಾಳ ಹೊಲ್ಲ ನಿರಾ ಶಿಷನಾಗು ಯಮರಾಯನೆಂದೆಂದೂ ಕೊಲ್ಲ 1 ಧನವೆ ಜೀವನವೆಂಬಿ ನಿನಗೆ ಸುಯೋ ಧನ ನೋಡು ಧನದಿಂದ ಏನಾದ ಕೊನೆಗೆ ಅನಿರುದ್ಧ ದೇವನ ಮನೆಗೆ ಪೋಪ ಘನ ವಿಜ್ಞಾನವನೆ ಸಂಪಾದಿಸು ಕೊನೆಗೆ 2 ಹರಿದಾಸನಾಗಿ ಬಾಳೋ ಗುರು ಹಿರಿಯರ ಪಾದಕಮಲಕೆ ನೀ ಬೀಳೋ ನರರ ನಿಂದಾಸ್ತುತಿ ತಾಳೋ ದೇಹ ಸ್ಥಿರವಲ್ಲ ಸಂಸಾರ ಬಹು ಹೇಯ ಕೇಳೋ 3 ಹಲವು ತೀರ್ಥಗಳಲ್ಲಿ ಸ್ನಾನ ಮಾಡೆ ಮಲ ಪೋಯಿತಲ್ಲದೆ ನಿರ್ಮಲ ಜ್ಞಾನ ಫಲಿಸದೆಂದಿಗು ಹೀನ ಬುದ್ಧಿ ಕಳೆದು ಸೇವಿಸು ಸಾಧುಗಳನನುದಿನ 4 ಜಿತವಾಗಿ ಪೇಳುವೆ ಸೊಲ್ಲಾ ಹರಿ ಕಥೆಯಲ್ಲಿ ನಿರತನಾಗಿರು ಲೋಹ ಕಲ್ಲಾ ಪ್ರತಿಮೆ ಪೂಜಿಸಿದರೇ ನಿಲ್ಲ ಪರೀ ಕ್ಷಿತನೆಂಬ ರಾಯ ಈ ಮಹಿಮೆಯ ಬಲ್ಲಾ 5 ಜ್ಞಾನೇಚ್ಛಾ ಕ್ರಿಯಾ ಶಕ್ತಿ ತ್ರಯವಾ ತಿಳಿ ದಾನಂದ ಪಡು ಬಯಸದಿರುಭಯವಾ ಸಾನುರಾಗದಿ ಬೇಡು ದಯವಾ ನೀ ಮ ದ್ದಾನೆಯಂದದಿ ಚರಿಸು ಬಿಟ್ಟು ಭಯವಾ 6 ಭಾವ ಕ್ರಿಯಾ ದ್ರವ್ಯಾದ್ವೈತ ತ್ರಯ ಆವಾಗ ಚಿಂತಿಸು ಭೂಮ್ಯಾದಿ ಭೂತಾ ಜೀವಿಗಳೊಳು ಜಗನ್ನಾಥ ವಿಠಲ ಗಾವಾಸ ಯೋಗ್ಯವೆಂದರಿಯೋ ಸಂತತಾ 7
--------------
ಜಗನ್ನಾಥದಾಸರು
ಮಾಡಬಾರದೇ ಸಂಗಾ | ಸಂತರ | ಮಾಡಬಾರದೇ ಸಂಗ | ಕೂಡಿ ಶ್ರವಣವ ಮಾಡಲು ಮನದೊಳು | ಮಾಡಿಬಹುನು ಶ್ರೀರಂಗಾ ಪ ದೇಶ ತಿರುಗುವದ್ಯಾಕ | ಕಾಸಿ ಆರಿದ ಹಾಲವು ಇದರಿಡೇ | ಆ ಶಿವಧ್ಯಾನವು ಬೇಕ 1 ನಾನಾ ಸಾಧನದಿಂದಾ | ಬಾಹು | ದೇನೆಲೋ ಮತಿಮಂದಾ | ಮನಿಯೊಳಗಿನ ಗಿಡ ಸಂಜೀವನಾಗಿರೆ | ಕಾನನ ತಿರುಗುವದೇ ಅಂಧಾ 2 ಲೋಹ ಪರುಷವ ಬಿಟ್ಟು | ಕಾಷ್ಟದ ಲಾಹುದೇ ಚಿನ್ನದ ಗಂಟು | ಮಹಿಪತಿ ನಂದನು ಸಾರಿದ ಸ್ವಹಿತಕ | ಮಹಾನುಭಾವದಾ ನಿಜಗುಟ್ಟು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಾಧವ ಪ ಮಾಧವ ಅ.ಪ. ಪಾರುಗಾಣೆನಯ್ಯ ಸಂಸಾರ ಬಂಧನದಿಂದ ನಾನುಸಾರಾಸಾರಾ ವಿಚಾರವಿಲ್ಲವೊ ಗಡ ತೀರ ಅಲ್ಪನು ತಿಳಿ 1 ಜ್ಞಾನಹೀನನಾಗಿ ನಿನ್ನ ಧ್ಯಾನಮಾಡದಾದೆ ನಾನುಮಾನಾಪಮಾನಕ್ಕೆ ನೀ ಹೊಣೆಗಾರನು ದೀನಜನಪಾಲಕನೆ 2 ಆರು ಹಗೆಗಳೆನ್ನ ಮೈಯ್ಯ ಸೇರಿ ನಿನ್ನ ಭಜಿಸಗೊಡರುಬಾರೊ ನೀ ದಯವನು ತೋರೊ ಗದುಗಿನ ವೀರನಾರಾಯಣನೆ 3
--------------
ವೀರನಾರಾಯಣ
ಮಾಧವಾ ನಿಮ್ಮ ನಾಮ ಸಾಲದೇ ಪ ಪರಗತಿ ಸುಖವನು ಸ್ಮರಿಸಲು ನಿನ್ನನಾ|| ಪರಿಪರಿ ತಪದಿಂದಾ ಚರಿಸುವ ದ್ಯಾತಕೆ ನಾ 1 ಕರಿಕಿರಿಯನ್ನಲು ಶರೆಯನು ಬಿಡಿಸಿದ| ಶರಣ ಪ್ರಹ್ಲಾದನ ದುರಿತದಿ ಕಾಯ್ದ2 ದ್ರೌಪದಿ ಸ್ಮರಿಸಲು ಆಪತ್ತ ಹರಿಸಿದ| ಆ ಪತಿತ-ಜಮಿಳ ಪಾಪದಿ ತರಿಸಿದ 3 ನೆನೆಯಲು ಪಿಂಗಳಾ ಕ್ಷಣದಿ ಗತಿಯ ಕೊಟ್ಟಾ| ಬಿನುಗು ಮಂಡೂಕನ ವಿಮಾನದಿ ಮೆರೆಸಿದಾ4 ದುರುಳನ ಕೈಯಿಂದ ಹರಣಿಯ ಕಾಯಿದಾ| ಗುರಿಯಾ ತಪ್ಪಿಸಿ ಸೆರೆ ಹೊರೆದ ಕಪೋತಕ5 ಹಲವು ಸಾಧನದಿಂದ ಬಳಲುವ-ದ್ಯಾತಕ| ತಿಳಿದವ ಬೇಡಿದ ಫಲವನೇ ಕೊಡುತಿಹ 6 ತಂದೆ ಮಹಿಪತಿ ನಂದನ ಸಾರಥಿ| ಎಂದೆಂದು ನನಗಿದೆ ಛಂರದಿ ಕುಡು ಕಂಡ್ಯಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ರಾಮ ರಾಮಯೆಂದು ನೇಮದಿಂದಲಿ ಪಾಡಿ ಪ್ರೇಮದಿ ನಮಿಸಿರಿ ಕಾಮನ ಪಿತನ ಪ ಭಾಮೆಗಕ್ಷಯ ವಿತ್ತು ಪ್ರೇಮದಿ ಸಲಹಿದ ಪಾದ ಸೇರೀ 1 ತನುಮನ ಧನದಿಂದ ಚನ್ನಕೇಶವನನ್ನು ಅನುದಿನ ಭಜಿಸಿ ಚಿನ್ಮಯಪಾದ ಸೇರಿ2 ಕರುಣದಿ ಭಕ್ತರ ಪೊರೆವ ಕೇಶವನ 3
--------------
ಕರ್ಕಿ ಕೇಶವದಾಸ
ಲೋಭಿಯು ಬೇಡಲು ಲಾಭವೇನಿರುವುದು ನಾಭಿಯು ಒಣಗುವುದು ಪ ಲೋಭಿಗೆ ಧನದಿಂದ ಶೋಭೆಯುಂಟೆ ಮನ ಕ್ಷೋಭೆಯಲ್ಲದೆ ಸತತ | ತನ್ನಯ ಮನಕ್ಷೋಭೆಯಲ್ಲದೆ ಸತತ ಅ.ಪ ನೂರು ಛಿದ್ರಗಳಲ್ಲಿ ತೋರುತಿದ್ದರು ದೇಹ ಕೋರನು ನವವಸನ | ಏನೆಂದು ಕೋರನು ನವವಸನ ಮೂರು ಕಾಸಿಗೆರಡು ಮಾರುತಿದ್ದರು ಅದ ದೂರದಿ ತ್ಯಜಿಸುವನು | ನೂತÀನವಸ್ತ್ರ ದೂರದಿ ತ್ಯಜಿಸುವನು 1 ಬಂಧು ಜನರು ತನ್ನ ಮಂದಿರಕ್ಕಿಳಿಯಲು ನೊಂದುಕೊಳ್ಳುವ ಮನದಿ | ತತ್ತಳಿಸುತ ನೊಂದುಕೊಳ್ಳುವ ಮನದಿ ತೊಂದರೆಗಳ ಪೊಂದಿಹೆನೆನ್ನುತ ಮುಂದಕೆ ಸಾಗಿಸುವ | ಬಂದವರನು ಮುಂದಕೆ ಸಾಗಿಸುವ 2 ಮುಗ್ಗಿದ ಧವಸವು ಅಗ್ಗÀದಿ ಮಾರಲು ಹಿಗ್ಗುತ ಕೊಳ್ಳುವನು | ಸೊಗಸಿನಲಿ ಹಿಗ್ಗುವನು ಒಗ್ಗಿಹುದೆನ್ನುತ ನುಗ್ಗಿಸಿ ಉದರದಿ ಸಗ್ಗದೆ ನಡೆಯುವನು | ಪರನುಡಿಗೆ ಸಗ್ಗದೆ ನಡೆಯುವನು 3 ಹಣದಲಿ ಲೋಭಕೆ ಕೊನೆ ಮೊದಲಿಲ್ಲದೆ ಒಣಗಿಸುವನು ತನುವ | ಕಾರ್ಪಣ್ಯದಿ ಒಣಗಿಸುವನು ತನುವ ಗೆಣೆಯನಿವನು ನಾಲ್ಕಾಣೆಯ ಕಂಡರೆ ಕುಣಿಯುವನು ಮನದಲ್ಲಿ | ಎಣೆಯಿಲ್ಲದೆ ಕುಣಿಯುವ ಮನದಲ್ಲಿ4 ಕಿಕ್ಕಿರಿದರು ಧನ ಕಕ್ಕುಲತೆಯೊಳ್ ತನ್ನ ಮಕ್ಕಳ ಸಲಹುವನು | ರಕ್ಕಸನಿವ ಮಕ್ಕಳ ಸಲಹುವನು ಮಿಕ್ಕ ಧನವ ಬಲು ಅಕ್ಕರೆಯಿಂದ ಎವೆ ಯಿಕ್ಕದೆ ನೋಡುವನು | ನೇತ್ರದಿ ಎವೆಯುಕ್ಕದೆ ನೋಡುವನು 5 ನುಡಿದರೆ ಸವಿಮಾತ ಒಡವೆ ವಸನಗಳಿ ಗ್ಹಿಡಿವಳೆಂದರಿಯುತಲಿ | ಸಡಗರದಿ ಹಿಡಿವಳೆಂದರಿಯುತಲಿ ಕರವ ಪಿಡಿವ ತನ್ನ ಮಡದಿಯ ಕಂಡರೆ ಸಿಡಿಮಿಡಿಗÀುಟ್ಟುವನು | ನಿರ್ಘೃಣನಿವ ಸಿಡಿಸಿಡಿ ಗುಟ್ಟುವನು 6 ರಾಯರೆ ನಿಮ್ಮ ಸಹಾಯ ಹೊರತು ಕಾಣೆನೆನಲು ಕಾಯುವ ಧಣಿ ನಾರಾಯಣನೆನುತಲಿ ನುಡಿಯುವನು 7 ಈ ಧನವೆ ದೊಡ್ಡ ಸಾಧನವೆನ್ನುವ ಮೇಧಾವಿಯು ಇವನು | ಓದಲರಿಯದ ಮೇಧಾವಿಯು ಇವನು ಪಾದ ಕಮಲದಲಿ ಆದರವರಿಯನಿವ | ಎಂದೆಂದಿಗು ಆದರವರಿಯನಿವ 8 ಘನತೆಯು ಬೇಡವು ಜನತೆಯು ಬೇಡವು ಧನವಿದ್ದರೆ ಸಾಕು | ಈ ನರನಿಗೆ ಧನವಿದ್ದರೆ ಸಾಕು ಮನುಜ ಮುಟ್ಟದ ಗುಬ್ಬಿಯನನುಕರಿಸುತ ಜೀ ವನವನು ಕಳೆಯುವನು | ಕ್ಲೇಶದಿ ಜೀವನವನು ಕಳೆಯುವನು9 ಗಳಿಸಿದವನ ಧನ ಬಳಸಿದವನಿಗೆಂಬ ಮುಳುಗಿ ಮುಳುಗುತಿರುವ | ಕ್ಲೇಶಗಳಲಿ ಮುಳುಗು ಮುಳುಗುತ್ತಿರುವ 10 ಭುಜಗಶಯನ ಹರಿ ಸುಜನರು ತನ್ನನು ಅಜನೆಂದು ಕರೆಯುತಿರೆ | ಸೃಷ್ಟೀಶನ ಅಜನೆಂದು ಕರೆಯುತಿರೆ ತ್ಯಜಿಸದೆ ಹೆಸರನು ಅಜಗಳ ಸ್ತನದಂತೆ ಸೃಜಿಸಿದನೀ ಜನರ | ಪ್ರಸನ್ನ ಹರಿ ಸೃಜಿಸಿದನೀ ಜನರ 11
--------------
ವಿದ್ಯಾಪ್ರಸನ್ನತೀರ್ಥರು
ಶುದ್ಧ ಸನ್ಮಾರ್ಗ ಸರ್ವರಿಗಿದು ಒಂದೆ ಬುದ್ಧಿವಂತರು ತಿಳಿದರು ಇದರಿಂದೆ 1 ಇದರಿಂದೇವೆಂಬುದು ನಿರ್ವಾಣ ಒದರುತಲಿಹುದು ವೇದಪುರಾಣ 2 ಪುರಾಣ ಪುಣ್ಯದ ಹಾದಿಯು ನಿಜ ಸುರಮುನಿಗಳಿಗಿದು ಹೊಳೆವದು ಸಹಜ 3 ಸಹಜಾನಂದದ ಸುಖಸಾಗರ ಬಾಹ್ಯಾಂತ್ರ ಸದೋತಿತ ಸಹಕಾರ 4 ಸಹಕಾರವು ಚಿನ್ಮಯ ಚಿದ್ರೂಪ ಸೋಹ್ಯದೋರುವ ಶ್ರೀ ಗುರುಸ್ವರೂಪ 5 ಸ್ವರೂಪವೆ ಸದ್ಗೈಸುವ ಹಾದಿ ಪರಮ ವೈಷ್ಣವರ ಮೂಲಾಗ್ರದ ಆದಿ 6 ಅಧಿವೆಂಬುದು ನಿಜನಿರ್ಧಾರ ಸಾಧಿಸುದವರಿಗೆ ಸಾಕ್ಷಾತಾರ 7 ಸಾಕ್ಷಾತ್ಕಾರವೆ ಮೋಕ್ಷದಮನೆಯು ಅಕ್ಷಯ ಪದ ಅದ್ವೈತದ ಖಣಿಯ 8 ಅದ್ವೈತವೆ ಆಧ್ಮಾತ್ಮ ಸುವಿದ್ಯ ಸಿದ್ದಸಾಧಕರಿಗೆ ಆಗುವ ಸಾಧ್ಯ 9 ಸಾಧ್ಯವೆಂಬುದು ನಿಜಸಿದ್ಧಾಂತ ಭೇದಿಸಿದವರಿಗೆ ಇದು ಸನ್ಮತ 10 ಸನ್ಮತವೆ ಮತ ಸರ್ವರಿಗೆಲ್ಲ ಉನ್ಮನಲೀಹ ಮಹಾಯೋಗಿಯು ಬಲ್ಲ 11 ಬಲ್ಲೆವೆಂಬುದು ಬಲು ಅಗಾಧ ಸೊಲ್ಲಿಗೆ ಸಿಲುಕದು ಗುರುನಿಜಭೋದ 12 ಬೋಧವೆ ಸದ್ಗುರುವಿನ ದಯಕರುಣ ಸದ್ಗತಿಸುಖ ಸಾಧನದ ಸ್ಫುರಣ 13 ಸ್ಫುರಣವೆ ಬ್ರಹ್ಮಾನಂದದ ಹರುಷ ತರಣೋಪಾಯದ ಮಹಾ ಉಪದೇಶ 14 ಉಪದೇಶವೆ ನಿಜ ಉಪನಿಷದ್ವಾಕ್ಯ ಒಪ್ಪಿಡುವದು ಭೂಸ್ವರ್ಗತ್ರೈಲೋಕ್ಯ 15 ತ್ರೈಲೋಕ್ಯಕೆ ಇದು ನಿಜನಿಧಾನ ಭಯವಿಲ್ಲದ ಮಹಾಸುಖಸಾಧನ 16 ಸಾಧನದಿಂದ ಸದ್ಗತಿ ಸಂಪೂರ್ಣ ಸಾಧು ಸಜ್ಜನರಿಗೆ ಸಕಲಾಭರಣ 17 ಸಕಲಾಭರಣ ಸದ್ಗುರು ನಿಜ ಅಭಯವು ಶುಕಾದಿ ಮುನಿಗು ಕೂಡಿದ ಪ್ರಭೆಯು 18 ಪ್ರಭೆಗಾಣಲು ತೋರದು ನೆಲೆನಿಭವು ನಿಭವೆ ಮಹಾಮಂಗಳಕರ ಶುಭವು 19 ಶುಭದೋರುದು ಸದ್ಗುರು ಕೃಪೆಯಿಂದ ಭ್ರಮೆಹಾರಿತು ಮಾಯೆ ಇದರಿಂದ 20 ಇದರಿಂದೆ ಇದರಿಟ್ಟಿತು ಪುಣ್ಯ ಒದಗಿ ಕೈಗೂಡಿತು ಬಂತು ತಾರ್ಕಣ್ಯ 21 ತಾರ್ಕಣ್ಯವು ಬಂತೆನ್ನೊಳು ಪೂರ್ಣ ಸರ್ಕನೆ ದೊರೆಯಿತು ಸದ್ಗುರುಖೂನ 22 ಖೂನವೆ ಎನ್ನೊಳಗಾಯಿತು ಧ್ಯಾನ ಘನಸುಖದೋರುವ ಅನುಸಂಧಾನ 23 ಅನುಕೂಲಾದ ನಮ್ಮಯ್ಯ ಪ್ರಸಿದ್ಧ 24 ಪ್ರಸಿದ್ಧವೆ ಪ್ರತ್ಯಕ್ಷ ಪ್ರಮಾಣ ಭಾಸುತಿಹುದು ಶ್ರೀಗುರು ಶ್ರೀಚರಣ 25 ಶ್ರೀಚರಣಕೆ ಎರಗಿಹ ಮಹಿಪತಿಯು ಸೂಚನೆ ಮಾತ್ರ ಕೊಂಡಾಡಿದ ಸ್ತುತಿಯು 26
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಂತರಾ ಪದವಿಡಿಯೋ ಪ ಸಂತರಾ ಪದವಿಡಿಯೋ | ಭ್ರಾಂತಿಗಳೆಲ್ಲಾ ಕಡಿಯೋ | ಅಂತಭಾವನೆಯಿಂದ ತಂತುವಿಡಿದು ನಿಜ | ಶಾಂತಿಸುಖವ ಪಡಿಯೋ ಮನುಜಾ | ಶಾಂ | 1 ಡಾಂಭಿಕಾತನಗಳೆದು | ಬೆಂಬಲಗುಣವಳಿದು | ಹಂಬಲಿಸದೇ ಮನ ಸ್ತಂಭಪರಿಯ ಮಾಡಿ | ನಂಬುಗೆ ದೃಢ ತಳೆದು ಮನುಜಾ | ನಂ | 2 ನಾನಾರೆಂಬುದು ಮರೆದೀ | ಜ್ಞಾನದೆಚ್ಚರ ತೊರೆದೀ | ಕಾನನ ಹೊಕ್ಕಂತೆ ನಾನಾ ಸಾಧನದಿಂದ | ಏನ ಸುಖವ ಪಡೆದೀ ಮನುಜಾ | ಏ | 3 ಸುಲಭವೇ ಮಾನುಷ ಜನ್ಮ | ಮ್ಯಾಲ ಅಗ್ರಜ ಧರ್ಮಾ | ಚಲಿಸಲಿ ಪರಿಮತ್ತೆ ಇಳೆಯೊಳು ದೊರಕುದೇ | ತಿಳಿನಿಜಗತಿ ವರ್ಮಾ ಮನುಜಾ | ತಿ| 4 ಕೋಟಿ ಮಾತಿಗೆ ವಂದೇ | ನೀಟ ಸುಪಥವಿದೇ | ಧಾಟಿಲಿ ಮಹಿಪತಿ ಸುತ ಪ್ರಿಯನೊಲುಮೆಯಿಂದ | ಕೋಟಿಳಗಳಿನಿಳದೇ ಮನುಜಾ | ಕೋ | 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸುಳಾದಿ ಧ್ರುವತಾಳ ಜಿಹ್ವೆ ಸಿರಿ ಗೋಪಾಲವಿಠಲಮೂರ್ತಿಮಂತನಾಗಿ ಇಪ್ಪ ಎಲ್ಲ ಸ್ಥಳದಿ 1 ಮಠ್ಯತಾಳ ಧನವೋದನವು ಇನ್ನು ಧನದೊಳಗಿಪ್ಪನ್ನನೆನೆದು ತೆಗೆದುಕೊ ಶೋಧನಮಾಡಿ ನೋಡಿತನುವಿಗೆ ಕೆಲಸವಿಡು ತನುಬಂಧುಗಳ ನೋಡುಎಣಿಕೆಗೆ ತಂದು ಭಾಗವನು ಮಾಡು ನಾಲ್ಕುಎಣಿಸುತಲ್ಲಲ್ಲಿ ನೆನೆ ಎಲ್ಲ ಸ್ಥಳದಿಗುಣ ಹರಿಯದೆಂದು ಗುಪ್ತನಾಗಿ ಇನ್ನುಅಣುಘನಪರಿಪೂರ್ಣ ಗೋಪಾಲವಿಠಲಅನಿಮಿತ್ತ ಬಂಧ್ವೆಂಬ ಗುಣವುಂಟವನಿಗೆ2 ರೂಪಕತಾಳ ಒಂದು ಅರ್ಥವು ನಿನಗೆ ದೊರಕಿದಡಾಯಿತೆಚಂದದಿ ಚಿಂತಿಸು ಅನಂತಪರಿಯಲ್ಲಿಒಂದುಭಾಗ ದೇವಸಮುದಾಯಕ್ಕೆ ಕೊಡುಒಂದುಭಾಗ ಪಿತೃಗಳಿಗೆ ಇನ್ನು ಮಾಡುಒಂದುಭಾಗ ಪರಿವಾರ ಬಂಧುಗಳಿಗೆಚಂದದಿ ಕೊಟ್ಟು ಆನಂದ ಉಣುಕಂಡ್ಯನಂದಗೋಪನ್ನ ಕಂದ ಗೋಪಾಲವಿಠಲನ್ನಚಂದದಿ ನಿನ್ನ ಮನಮಂದಿರದೊಳು ತಿಳಿ 3 ಝಂಪೆತಾಳ ಜ್ಞಾನವೆ ಮುಖ್ಯಸಾಧನ ನಿನಗೆ ನೋಡುಏನು ಧನದಿಂದಾಗೊ ಕರ್ಮವದರೊಳಗುಂಟುಪ್ರಾಣಹಿಂಸರಹಿತಕರ್ಮ ಮಾಡು ನಿತ್ಯಶ್ರೀನಿವಾಸನು ಅದಕೆ ಮೆಚ್ಚುವನುಜ್ಞಾನಮಯಕಾಯ ಗೋಪಾಲವಿಠಲರೇಯಕಾಣಿಸುವ ನಿನಗೆ ಕರುಣವಮಾಡಿ ನಿರುತ 4 ತ್ರಿಪುಟತಾಳ ತನುವು ಮಂಟಪಮಾಡು ಮನವೆ ಪೀಠವ ಇಡುನೆನೆದು ಕುಳ್ಳಿರಿಸು ನಿನ್ನ ಒಳಗಿದ್ದ ಮೂರ್ತಿಯಧ್ಯಾನ ಆವಾಹನಾದಿಗಳ ನೆನೆದು ಅಲ್ಲಿಪ್ಪಅಣುಮಹಾಮೂರ್ತಿಗೆ ಅಭಿಷೇಕ ಮಾಡಿಸುಗುಣಮೂರರೊಳಗಿದ್ದ ಹರಿಯ ನೆನೆದುಜಿನಸು ವಸನಾಭರಣ ಧೂಪದೀಪವ ಮಾಡಿನೆನಸು ಗಂಧ ಪುಷ್ಪವನು ಮಿಕ್ಕಾದದ್ದೆಲ್ಲಗುಣ ಮೂರುವಿಧದ ಪದಾರ್ಥಗಳನ್ನೆಲ್ಲನಿನಗೆ ಒಂದು ಉದಕಮಾತ್ರ ದೊರಕಿದರೆಇನಿತು ಪರಿಯು ಎಲ್ಲ ಅದರಿಂದ ಚಿಂತಿಸೊಧನದ ಪೂಜೆಗೆ ಅತ್ಯಾಯಾಸಪಡಲಿಬೇಡಘನದೈವ ನಮ್ಮ ಗೋಪಾಲವಿಠಲರೇಯನಿನಗೆಷ್ಟುಪರಿಯಲ್ಲಿ ಪೊರೆವನವನ ತಿಳಿ 5 ಅಟ್ಟತಾಳ ಒಳಗೆ ಬಂದರೆ ನಿನ್ನ ಒಳಗೆ ಇರುತಲಿಪ್ಪಸುಳಿಯುತಿಪ್ಪ ನಿನ್ನ ಸುತ್ತ ಬಿಡದೆ ಬೆನ್ನಹಲವುಪರಿಕರ್ಮ ನಿನಗಾಗಿ ಮಾಡುತ್ತಚೆಲುವ ನಿರ್ಲಿಪ್ತನ್ನ ತಿಳಿಯದೆ ಕೆಡುವಿ ಯಾಕೆಸುಲಭವಾಗಿ ಕರತಳದಲ್ಲಿದ್ದಂಥಫಲವ ನೀ ಕಾಣದೆ ಬಲು ದಣಿಸುವುದೇನೊಗೆಳೆಯನಾಗಿ ಪಾರ್ಥಗೊಲಿದ ನಮ್ಮ ಸ್ವಾಮಿಚೆಲುವ ಗೋಪಾಲವಿಠಲರೇಯನ ನೀನುಗಳಿಗೆ ಮರೆಯಬೇಡ ಬಲುಪ್ರಿಯಾ ಬಲುಪ್ರಿಯಾ 6 ಆದಿತಾಳ ಸೂರ್ಯ ಅಧಿಷ್ಠಾನದಲ್ಲಿದ್ದುದೇವನ ಸ್ಮರಣೆಯು ಬರುತಿರಲಿ ಕಂಡ್ಯಾಕಾವನು ಬಿಡನಿನ್ನು ಗೋಪಾಲವಿಠಲ 7 ಜತೆ ಗೃಹಮೇಧಿ ಮಾಡಿ ನಿನ್ನ ಗೃಹದೊಳಗಿಪ್ಪಂಥಶ್ರೀಹರಿ ಗೋಪಾಲವಿಠಲನ್ನ ನೆನೆಕಂಡ್ಯಾ
--------------
ಗೋಪಾಲದಾಸರು
ಹಣ್ಣ ಸವಿಯ ಬಾರದೇ ಪ ಹಣ್ಣನ್ನು ತಿಂದರೆ ಕೇಶವನೊಲಿಯುವಾ ಚನ್ನಕೇಶವ ಸ್ವಾಮಿ ಬಿಡದೆ ಪಾಲಿಸುವಾ ಅ.ಪ. ಪ್ರೀತಿಯೆನ್ನುವಂಥ ಬೀಜವನ್ನೇ ಬಿತ್ತಿ ಭೂತ ದಯೆಯೆಂಬುವ ವೃಕ್ಷವ ಬೆಳೆಸೀ ಆತುರದಲ್ಲಿ ಪರೋಪಕಾರವೆಂಬ ನೀತಿಯ ನೀರನ್ನು ನೇಮದೊಳೆರೆದೂ 1 ಅನುದಿನ ದಾನಧರ್ಮಗಳ ಟೊಂಗೆಗಳೇರಿ ತನುಮನ ಧನದಿಂದ ದೈನ್ಯರ ಸಲಹಿ ಘನತರ ಸ್ವಾರ್ಥ ತ್ಯಾಗವುಯೆಂಬ ಪರ್ಣವ ನೆನೆದು ಕೃತಜ್ಞತೆ ಕುಸುಮವ ಪಡೆದೂ 2 ವರತರ ದೇವಾಂಶ ಗುಣದಿಂದ ಬೆಳೆದಿರ್ಪ ಹರಿಭಕ್ತಿಯೆನ್ನುವ ಫಲವನ್ನೇ ಕೊಯ್ದು ಸರಸದಿ ಕೀರ್ತನೆ ಭಜನೆ ಸೂತ್ರಗಳಿಂದ ಪರಮ ಭಕ್ತೀಯೆಂಬ ಹಣ್ಣನು ತಿಂದೂ 3 ಧರೆಯಲ್ಲಿ ಸಿಗುವಂಥ ಹಣ್ಣನು ಸವಿದರೆ ನಿರುತ ತೃಪ್ತಿಯು ಆಗಲಾರದು ದೇವಾ ಅಮೃತ ಹರುಷದಿ ತಿನ್ನಲು ಘನಮುಕ್ತಿ ದಿಟವು 4
--------------
ಕರ್ಕಿ ಕೇಶವದಾಸ
ಹನುಮ-ಭೀಮ-ಮಧ್ವ ಭಾರತೀರಮಣ ಸಮೀರಣ ನಿನ್ನಯಚಾರುಲೀಲೆಯನೆಂತು ಬಣ್ಣಿಪೆ ಪ ಇನಕುಲ ರಾಮನ ವನಿತೆಯ ಶೋಧಿಸಿಮನುಜನ ರೂಪದ ಹರಿಯ ಚರಿತೆಯ ಸಾಧಿಸಿ 1 ತನುಮನಧನದಿಂದವನ ಸೇವೆಯನುಅನುದಿನ ಭಕುತಿಗಳಿಂದ ಮಾಡಿದಿಘನ ಭಕುತಿಯ ಫಲ ಬ್ರಹ್ಮ ಪದವಿಯಂದೆನಿತು ಮತವ ನೀ ಜಗಕೆ ತಿಳಿಸಿದಿ 2 ಭೀಮನ ನಾಮದಿ ಭೂಮಿಪರುಡಿಗೆಯನೇರಿಸಿಪಾಮರ ಜನರೊಳು ನಿಜ ಗಾರ್ಹಸ್ಥ್ಯರ ಬೀರಿಸಿಸ್ವಾಮಿಯ ವೈರಿಗೆ ಸೋಮನಧಾಮವ ತೋರಿಸಿಶ್ಯಾಮಲ ಕೃಷ್ಣನ ಪ್ರೇಮಕೆ ಸೀಮೆಯ ಮೀರಿಸಿ 3 ಶ್ರೀಮತ ಕೃಷ್ಣನ ಅಂತರಂಗದಲಿಕಾಮರಹಿತ ಭಕ್ತಿಗಳಿಂ ಮೆಚ್ಚಿಸಿಪ್ರೇಮದ ಫಲವಿದು ನೋಡಿರೆಂದು ಜನಸ್ತೋಮಕೆ ತಿಳುಹಿದ ಭೀಮ ಮಹಾತ್ಮಾ 4 ಸಾರಸ ನ್ಯಾಸವ ಯೋಜಿಸಿಸಾಸಿರನಾಮದ ಶ್ರೀಶನ ದಾಸ್ಯವನಾರ್ಜಿಸಿಭಾಸುರ ಗದುಗಿನ ವೀರನಾರಾಯಣ ನ್ಯಾಸದಿಂ ಬಹುಸರಳ ಭಾಷೆಯಲಿಈಶ ಜೀವಿಗಳ ತರತಮ ತಿಳಿಸುತಲೇಸಿದು ಮೋಕ್ಷಕ್ಕೆಂದು ತಿಳುಹಿದಿ 5
--------------
ವೀರನಾರಾಯಣ
ಹರಿ ಹರಿ ಗೋವಿಂದ ಯನಬಾರದೇ ಪ್ರಾಣಿ ಪ ಹರಿ ಹರಿ ಗೋವಿಂದಯನಲು ಭಕುತಿಯಲಿ | ಹರಿಸುವ ಪಾಪೌಘವನು ಸಾರಂಗ ಪಾಣೀ 1 ವೃತ ತಪ ಸಾಧನದಿಂದಲೀ ನಿಲುಕದ ನಿಜಗತಿಯಾ| ಕ್ಷೀತಿಯೋಳು ಸುಲಭದಿ ಕೊಡುವನು ದೀನಾಭಿಮಾನಿ 2 ತಂದೆ ಮಹಿಪತಿ ಕಂದಗ ಸಾರಿದ ಯಚ್ಚರ ನೀ | ಛಂದದಿ ಇಹಪರ ನೀವದು ಯದುರಾಜ ಸ್ಮರಣೀ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು