ಒಟ್ಟು 62 ಕಡೆಗಳಲ್ಲಿ , 37 ದಾಸರು , 60 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಟೀಕಾಕೃತ್ಪಾದ ಕರುಣಾಕರ ಗುರು ಶ್ರೀಕಾರಸರಿತವಾಸ ನಾಕಾಧಿಪನೆ ಮನಶೋಕಾ ಹರಿಸಿ ನಿತ್ಯ 1 ಪೂರ್ಣಬೋಧರ ಮತಾರ್ಣವಚಂದಿರ ನಿರ್ಣಯಿಸಿದೆ ಟೀಕಾರ್ಣವದೊಳು ಸುಧ ಉಣ್ಣಿಸಿದೆಯೊ ಗ್ರಂಥ ವರ್ಣಿಸಿಇರುವೆ ಸತ್ಯ 2 ಮಿಥ್ಯಾವಾದಿಗಳ ಸತ್ಯ ತತ್ತ್ವವೆಲ್ಲ ಕತ್ತರಿಸಿದೆ ನಿತ್ಯ ದೈತ್ಯೋನ್ಮತ್ತರನೆಲ್ಲಾ ಸದೆದೆ3 ನಾಕಾಪತಿಗೆ ದೈತ್ಯಲೋಕಗಳಾ ಬಾಧೆ ತಾ ಕಳೆಯಲು ನಿತ್ಯ ಶ್ರೀಕರದಮೃತವ ಶ್ರೀಕಾಂತನಿತ್ತಂತೆ ನೀ ಸುಧೆಯನು ತಂದೆ 4 ದಶಪ್ರಮತಿಸುಶಾಸ್ತ್ರಶರಧಿಯೊಳು ವಾಸಿಸುವೆಯೊ ನಿತ್ಯ ಮೀಸಲಮನ ಕೊಟ್ಟೆನ್ನಾಸೆಯ ಹ ರಿಸಿ ಪದಸೇವೆಯ ಕೊಡೊ ನಿತ್ಯ5 ಪಾಕಶಾಸನ ಸುಖ ಬೇಕಾಗಿ ತೊರೆದು ನೀ ನೇಕಾಂತದಲಿ ನಿಂತೇ ಲೋಕಸುಖದಿ ಭವಶೋಕದಲ್ಲಿಹ ಎ ನ್ನ ಕಾಪಾಡುವುದು ನಿತ್ಯ6 ಶೇಷಾವೇಶ ಆವೇಶಾಮಹಿಮ ಎನ್ನ ದೋಷರಾಶಿಯ ಕಳೆದು ಶೋಷಿಸು ಮನಕಲ್ಮಷವಿಷವನೆಲ್ಲ ನಿ ಶ್ಶೇಷವ ಮಾಡಿ ಸಲಹೊ 7 ಹಲವು ವಿಷಯದ ಹಂಬಲದಿಂದ ಎನ್ನ ಜ್ಞಾನ ಹೊಲಬುಗೆಟ್ಟುದು ನಿತ್ಯ ಅಲವಬೋಧರ ತತ್ತ್ವ ಲವಮಾತ್ರವಾದರು ನೀ ಎನಗೆ ಪಾಲಿಸೊ8 ಮುಕ್ತಿಮಾರ್ಗಕೆ ಜ್ಞಾನಭಕ್ತಿವೈರಾಗ್ಯಗುರು ಭಕ್ತಿಯೆ ಮುಖ್ಯಕಾರಣ ಯುಕ್ತಶಾಸ್ತ್ರ ಪ್ರಸಕ್ತಿ ಇಲ್ಲದ ತ್ವ ದ್ಭಕ್ತನಾದೆನ್ನ ಸಲಹೊ9 ಅಕ್ಷೋಭ್ಯ ಕಟಾಕ್ಷದಿ ಯತಿ ಹ ರ್ಯಕ್ಷನಾಗಿಹೆ ದೀಕ್ಷಾ ಶಿಕ್ಷೆಮಾಡಿ ಪರಪಕ್ಷವಾದಿಗಳನ್ನು ಸ ತ್ಶಿಕ್ಷಕನಾಗಿ ಮೆರೆದೆ10 ಮರುತಾಂತರ್ಗತ ಶ್ರೀ ವೇಂಕಟೇಶನ ಪಾದ ಚರಣಕಮಲಮಧುಪ ನಿರುತ ನೀ ಕರುಣಿಸು ಉರಗಾದ್ರಿವಾಸವಿಠಲನ ನಿಜದಾಸ 11
--------------
ಉರಗಾದ್ರಿವಾಸವಿಠಲದಾಸರು
ದಾಸನಾದವನಿಗೆ ಭವಭೀತಿಯುಂಟೆ ಆಸೆಬಿಟ್ಟವನಿಗೆ ಘಾಸಿಯಿನ್ನುಂಟೆ ಪ ವನಿತೆಯರಾಸ್ಯಳಿದವಗೆ ಮನಸಿಜನರ ಭೀತಿಯೆ ಮಣ್ಣಿನಾಸೆ ಪೋದವಗೆ ಅವನಿಪರ ಭಯವೆ ಧನದಾಸೆ ಪೋದವಗೆ ಬಿನುಗುಜನರಂಜಿಕೆಯೆ ತನುಮೋಹ ಬಿಟ್ಟವಗೆ ಮರಣದ ಭಯವೆ 1 ನಿಂದೆಯನು ಬಿಟ್ಟವಗೆ ಬಂಧಸೋಂಕುವ ಭಯವೆ ಸಂದೇಹವಳಿದವಗೆ ಕರ್ಮಗಳ ಭಯವೆ ಮಂದಿಗೋಷ್ಠಿಯಿಲ್ಲದವಗೆ ಅಪವಾದ ಭೀತಿಯೆ ಸಿಂಧುಶಯನನರ್ಚಕಗೆ ಕಾಲನ ಭಯವೆ 2 ಪರಮ ಧಾರ್ಮಿಕನಿಗೆ ಬಡತನದ ಭೀತಿಯೆ ಪರವ ಸಾಧಿಪನಿಗೆ ಕಷ್ಟಗಳ ಭಯವೆ ಅರಿವಿಟ್ಟು ನಡೆವವಗೆ ದುರಿತದ ಭಯವಿಹುದೆ ಶರಣರೊಳಾಡುವಗೆ ನರಕಂದಜಿಕೆಯೆ 3 ತತ್ವದರ್ಥಿಕನಿಗೆ ಮಿಥ್ಯಶಾಸ್ತ್ರದ ಭಯವೆ ನಿತ್ಯನಿರ್ಮಲನಿಗೆ ಮಡಿ ಮುಟ್ಟು ಭಯವೆ ಸತ್ಯಸನ್ಮಾರ್ಗಿಕಗೆ ಮತ್ರ್ಯದವರಂಜಿಕೆಯೆ ಸತ್ಯರೊಳಾಡುವಗೆ ಮೃತ್ಯುವಿನ ಭಯವೆ 4 ಕೊಟ್ಟು ಹುಟ್ಟಿದವಗೆ ಹೊಟ್ಟೆ ಬಟ್ಟೆಯ ಭಯವೆ ಇಟ್ಟು ಹಂಗಿಸದವಗೆ ಹೊಟ್ಟೆ ಬೇನೆ ಭಯವೆ ಸೃಷ್ಟಿಯೊಳಗೆ ನಮ್ಮ ದಿಟ್ಟ ಶ್ರೀರಾಮನಡಿ ಮುಟ್ಟಿ ಭಜಿಪಗೆ ಮತ್ತೆ ಹುಟ್ಟುವ ಭಯವೆ 5
--------------
ರಾಮದಾಸರು
ದಾಸರಾಯರ ಪಾಡಿರೋ | ರಂಗನೊಲಿದ ಶ್ರೀ |ದಾಸರಾಯರ ಪಾಡಿರೋ ಪ ದಾಸರಾಯರ ಪಾಡಿ | ದೋಷಗಳೀಡಾಡಿಶಾಶ್ವತ ಲೋಕಗ | ಳಾಶಿಪ ಜನರೆಲ್ಲಾ ಅ.ಪ. ಮಾನವಿ ಕ್ಷೇತ್ರಸ್ಥಿತನೂ | ಘನಕರ್ಣೀಕ ನರಸಪ್ಪನೆಂಬ ದ್ವಿಜನೂ |ಜ್ಞಾನಿ ತಿಮ್ಮಣ್ಣನ ಸತಿಸಹಿತ ಸೇವಿಸೆಮಾನ್ಯ ಸಹ್ಲಾದ ತಾ ಸುತನಾಗಿ ಜನಿಸಿದ 1 ಶಾಲಿವಾಹನ ಶಕವೂ | ಮತ್ತೇಗಾಳಿಗಣಯುತ ಹತ್ತಾರ್ನೂರು |ಕೀಲಕವತ್ಸರ ಶುಕ್ಲ ಶ್ರಾವಣದಲ್ಲಿಶೀಲ ವೆರಡೆನೆ ದಿನ ಜನಿಸಿಹರನ್ನಾ 2 ಈತನು ಹರಿಭಕ್ತನೊ | ಪ್ರಹ್ಲಾದಗೆಪ್ರೀತಿಯ ಸೋದರನೋಧಾತ ಜನಕ ಹರಿ ಮಾತಿನಿಂದಲಿ ಇವಖ್ಯಾತನಾಗಿ ಶ್ರೀನಿವಾಸನೆಂದೆನಿಸಿದ 3 ಆದ ಸಕಾಲದಿ ದ್ವಿಜನು | ಸದ್‍ಬೋಧಿತ ವರದೇಂದ್ರರಿಂ |ಭೇದ ಮತದೊಳದ್ವಿತೀಯ ನೆಂದೆನಿಸುತ್ತವಾದಿ ನಿಗ್ರಹದೊಳತ್ಯಾದರವನೆ ಪೊತ್ತ4 ಒದಗಲುದ್ಧುøತ ಕಾಲವೂ | ಪ್ರಾಪ್ತಸಾಧು ವಿಜಯ ದಾಸರು | ಮುದದಿ ನರ್ತವಗೈದು ಕೀರ್ತನೆ ಪಾಡಲುಹದಗೆಟ್ಟನಿವನೆಂದು ಬಿರುನುಡಿ ನುಡಿದಂಥಾ5 ಒದಗಲುದರ ರೋಗವೂ | ಮುಂದೆಹದನ ಕಾಣದೆ ತಪಿಸಾಲು |ಮೋದ ತೀರ್ಥರ ರೂಪ ಆದರದಲಿ ಭಜಿಸಿಸಾಧು ಸೋತ್ತಮ ದ್ರೋಹ ಕಳವ ಮಾರ್ಗವ ತಿಳಿದ6 ವಿಜಯ ದಾಸರ ಪಾದವಾ | ತಮ್ಮಯನಿಜ ಶಿರದೊಳು ಪೊತ್ತು ಮೆರೆವಾ |ನಿಜ ಶಿಷ್ಯ ಗೋಪಾಲದಾಸರಲ್ಲಿಗೆ ಬಂದುಭಜಿಸೆ ಅವರ ಆಯು ನಾಲ್ವತ್ತು ಪಡೆದಂಥ 7 ಮಂತ್ರಿತ ಭಕ್ಕರಿಯಾ | ಭುಜಿಸೆ ದೇಹಯಂತ್ರ ಸಾಧನ ಕೊದಗಲೂ |ಮಂತ್ರೋಪದೇಶವ ಗೊಳ್ಳುತ ಮುದದಿಂದೆಯಂತ್ರೋದ್ಧಾರಕ ಪ್ರಿಯ ರಂಗನ ಒಲಿಸಿದ 8 ಇಂದು ಭಾಗದಿ ಸ್ನಾನವೂ | ಮಾಡುತಲಿರೆಸ್ಕಂಧಾ ರೋಹಿತ ಶಿಲೆಯಸ್ಥ |ಇಂದಿರಾ ರಮಣ ಶ್ರೀ ಜಗನ್ನಾಥ ವಿಠಲನಸುಂದರಾಂಕಿತವನ್ನು ಧರಿಸಿದ ಶಿರದಲ್ಲಿ 9 ಪಾಂಡುರಂಗನ ಕಾಣುತ | ತನ್ನಯದಿಂಡುಗೆಡಹಿದ ಆಕ್ಷಣಾ |ಅಂಡಜಾಧಿಪನುದ್ದುಂಡ ದೇವರ ದೇವಪುಂಡರೀಕಾಕ್ಷನ ಪಾದಕೆ ಶರಣೆಂದ 10 ಸ್ವಾದಿ ಕ್ಷೇತ್ರಕ್ಕ ಪೋಗೀ | ಪೂಜ್ಯರಾದವಾದಿರಾಜರ ಪೂಜಿಸೀ |ಸಾಧು ವರ್ಯರ ಆಜ್ಞಾಧಾರಕರಿವರಾಗಿಬುಧರಿಗೆ ಹರಿಕಥಾ ಸುಧೆಯ ಸಾರವನಿತ್ತ 11 ಪದ ಸುಳಾದಿಗಳಿಂದಲಿ | ಹರಿಯ ಪಾದಸದ್ವನಜವ ಸ್ತುತಿಸುತಲೀ |ಹೃದಯ ಸದ್ಮದಿ ತದ್ಧಿಮಿ ಧಿಮಿ ಧಿಮಿಕೆಂದುವಿಧಿಪಿತ ಹರಿಯನ್ನ ಕುಣಿಸಿ ಮೋದಿಸಿದಂಥ 12 ಸುವತ್ಸರವು ಶುಕ್ಲದೀ | ಸಿತಭಾದ್ರನವಮಿ ತಾರೆಯು ಮೂಲದೀ |ರವಿಯ ವಾರವು ಸಂದ ಶುಭದಿನದಲಿ ಗುರುಗೋವಿಂದ ವಿಠಲನ ಸೇರಿ ತಾಮೆರೆದಂಥ 13
--------------
ಗುರುಗೋವಿಂದವಿಠಲರು
ದುರಿತ ತಿಮಿರಕೆ ಸೂರ್ಯ ಶರಣ ಜನ ಭಾಗ್ಯೋದಯ ಪ ನರಹರಿಯ ದಾಸಾರ್ಯ ಮರುತಮತ ಪರಿಚರ್ಯ ಶಿರಬಾಗಿ ಮುಗಿವೆ ಕೈಯ್ಯ ಅ.ಪ. ಘೋರತರ ಸಂಸಾರ ಸಾರತರವೆಂದರಿದು ಪಾರಮಾರ್ಥಿಕವ ತೊರೆದು ಭೂರಿ ನರಕದಿ ಬೆಂದು ಗಾರಾಗಿ ಪೋಪರಂದು ನಾರದರೆ ನೀವ್ ಬಂದು ನಾರಾಯಣಾ ಎಂದು ಚೀರಿದಾ ಧ್ವನಿಗೆ ಅಂದು ಘೋರ ಪಾತಕವೆಲ್ಲ ದೂರಾಗಿ ಸ್ವರ್ಗವನು ಸೇರಿ ಸುಖಿಸಿದರು ಎಂದು 1 ಸರಸಿಜಾಕ್ಷನ ಸ್ತುತಿಸಿ ವರ ಪಡೆದು ಧರಣಿಯೊಳು ಮೆರೆವ ಕನ್ನಡ ದೇಶದಿ ಸಿರಿಯಿಂದಲೊಪ್ಪುತಿಹ ಪುರಂದರಗಡದೊಳಗೆ ಇರುವ ಭೂಸುರ ವಂಶದಿ ವರಗರ್ಭದಲಿ ಜನಿಸಿದಿ ನರರಂತೆ ಚರಿಸುತ್ತ ಲೌಕಿಕೆ ಮರುಳಾಗಿ ಸರ್ವಭಾಗ್ಯವ ಗಳಿಸಿದಿ 2 ಚಿನಿವಾರ ವ್ಯಾಪಾರದನುವರಿತು ನವಕೋಟಿ ಧನಕಧಿಪನೆಂದೆನಿಸುತ ಧನಕನಕ ವಸ್ತು ವಾಹನನಿಚಯ ಸಂಗ್ರಹದಿ ತನುಮನಂಗಳ ಶ್ರಮಿಸುತ ಕನಸಿಲಾದರು ದಾನಧರ್ಮಗಳ ನೆನೆಯದೆಲೆ ದಿನಮಾನಗಳ ಕಳೆಯುತ ಇನಿತು ಮಾಯೆಗೆ ಸಿಲುಕಿ ತನ್ನ ಮರೆದಿರಲಾಗ ಘನ ಮಹಿಮ ಬಂದ ನಗುತ 3 ಅಂದು ತಾನೊಲಿದಿತ್ತ ಚೆಂದದಾ ವರಗಳನು ಇಂದು ಸಲಿಸುವೆನು ಎಂದು ಬಂದು ಬ್ರಾಹ್ಮಣ ರೂಪದಿಂದ ನಿಮ್ಮನು ಹರಿಸಿ ಕಂದನಿಗೆ ಮುಂಜಿಯೆಂದು ಮಂದ ಭಾಗ್ಯನ ತೆರದಿ ಪೊಂದಿ ಯಾಚಿಸಲು ನಿಂದು ಒಂದು ದುಡ್ಡನ್ನು ಲೋಭದಿಂ ದೆಸೆಯಲದನುಳಿದು ಸಿಂಧು 4 ಅತ್ತಣಿಂ ಶ್ರೀನಿಧಿಯು ಮತ್ತೆ ಮನೆಯೊಳು ನಿಮ್ಮ ಪತ್ನಿಯನು ಯಾಚಿಸಿದನು ಉತ್ತಮ ಪತಿವ್ರತೆಯೆ ಪುತ್ರನುಪನಯವೆಂದು ಇತ್ತ ಬಂದಿಹೆನೆಂದನು ಚಿತ್ತದೊಲ್ಲಭನ ಸಮ್ಮತಿಯಿಲ್ಲದೆಲೆ ನಾ ನಿತ್ತು ಕಳುಹೆನು ಏನನೂ ಅತ್ತ ಗಮಿಸಿರಿ ಎನಲು ಹೆತ್ತತಾಯ್ ನಿನಗಿತ್ತ ನತ್ತನ್ನು ಕೊಡು ಎಂದನು 5 ನಾಗಾರಿವಾಹನನ ನುಡಿಯು ಮನಸಿಗೆ ಹಿಡಿಯೆ ಮೂಗುತಿಯ ತೆಗೆದಿತ್ತಳು ಭಾಗ್ಯವಂತಳೆ ನಿನಗೆ ಲೇಸಾಗಲೆಂದ್ಹರಿಸಿ ಸಾಗಿ ಬಂದನು ಇತ್ತಲು ಹೋಗು ಹೋಗೆಲೊ ಮತ್ತೆ ನೀನೇಕೆ ಬಂದೆನಲು ಮೂಗುತಿಯ ಕ್ರಯಕೆ ಕೊಡಲು ಈಗ ಬಂದಿಹೆನೆಂದು ನಿಮಗದನು ತೋರಲು ಹೇಗೆ ಬಂದಿತು ಎನ್ನಲು 6 ಮನಕೆ ಸಂಶಯ ಮೂಡಿ ಚಿಂತಿಸುತಿರೆ ನೋಡಿ ವನಜನಾಭನು ಪೇಳ್ದನು ನನಗೀಗ ಧನಬೇಡ ನಿನ್ನಲ್ಲಿಯೇ ಇರಲಿ ಅನುವರಿತು ಬಹೆನೆಂದನು ಸಂತೈಸಿ ಪೊರಮಡಿಸಿ ನಿನಗೆ ನಾಮವನಿಡುವೆನು ಎನುತ ಹರುಷದಿ ನಗುತ ಮನೆಗೆ ಬರುತಲೆ ಕಂಡೆ ವನಿತೆಯಾ ಬರಿ ಮೂಗನು 7 ಮುತ್ತಿನಾ ಮೂಗುತಿಯು ಎತ್ತ ಹೋಯಿತು ಎನಲು ಮುತ್ತೈದೆ ಮನದಿ ನೊಂದು ಮತ್ತೆ ಮುರಿಯಿತು ಎಂದು ತತ್ತರಿಸುತಿರೆ ಕಂಡು ಇತ್ತ ತಾರೆನಲು ನಿಂದು ವಿಪ್ರ ಮತ್ತೇನು ಮಾಡುವರೊ ಕತ್ತಲೆಯು ಮುತ್ತಿ ತಿಂದು ಭಕ್ತವತ್ಸಲ ನಿಂಗೆ ತೆತ್ತರೀತನುವನ್ನು ಕುತ್ತು ಪಾರಾಹುದೆಂದು 8 ತರುವೆನೀಗಲೆ ಎಂದು ತೆರಳಿ ವಿಷವನೆ ಅರೆದು ಕರದಿ ಬಟ್ಟಲನು ಹಿಡಿದು ಹರಣದಾಸೆಯ ತೊರೆದು ಸಿರಿವರನ ಪದನೆನೆದು ಕುಡಿಯುವನಿತರೊಳು ತಿಳಿದು ಕರುಣದಿಂ ಮೂಗುತಿಯ ಗರಳದಲು ಕೆಡಹಲಾ ಮಣಿ ಹರುಷದಳೆದು ಪರಮ ಸಂಭ್ರಮದಿಂದ ಕೊಡಲದನು ನೀವ್ ಕೊಂಡು ಭರದಿ ಅಂಗಡಿಗೆ ಬಂದು 9 ಬೀಗ ಮುದ್ರೆಯ ತೆಗೆದು ನೋಡೆ ಭೂಸುರನಿತ್ತ ಮೂಗುತಿಯು ಕಾಣದಿರಲು ಹೇಗೆ ಹೋಯಿತು ಎಂದು ಮನದೊಳಚ್ಚರಿಗೊಂಡು ಬೇಗನೆ ಮನೆಗೆ ಬರಲು ಹೇಗೆಂದು ತಿಳಿಸದಿರಲು ನೀಗುವೆನು ತನುವನೆಂದು ಬೆದರಿಸಲು ಸಾಧ್ವಿಯಾ ಬಾಗಿ ವಂದಿಸಿ ನುಡಿದಳು 10 ವೃದ್ಧ ಬ್ರಾಹ್ಮಣನಾಗಿ ಹೆದ್ದೈವನೇ ಬಂದು ಪೊದ್ದಿಯಾಚಿಸಲು ಜರಿದೆ ಲುಬ್ಧನಾಗತಿಶಯದಿ ಬದ್ಧನಾದೆನು ದ್ರವ್ಯ ವೃದ್ಧಿಗೋಸುಗವೆ ಬರಿದೆ ಇದ್ದುದಕೆ ಫಲವೇನು ಸದ್ಧರ್ಮದಲಿ ಕೊಡದೆ ಉದ್ಧಾರವಿಲ್ಲೆಂದು ತಿಳಿದೆ ಶುದ್ಧ ಭಾವದಿ ಹರಿಯ ಪದ್ಮಪಾದವ ನೆನೆದು ಹೆದ್ದಾರಿ ಹಿಡಿದು ನಡೆದೆ 11 ಶಿಷ್ಟ ಬ್ರಾಹ್ಮಣರು ನೆಂಟರಿಷ್ಟ ಮಿತ್ರರಿಗೆ ವಿ- ಶಿಷ್ಟವನು ದಾನಗೈದು ನಿಷ್ಠೆಯಿಂ ಮಡದಿ ಮಕ್ಕಳನ್ನೊಡಗೊಂಡು ವಿಠ್ಠಲನ ಪುರಕೆ ನಡೆದು ಕಷ್ಟ ನಿಷ್ಠುರ ಸಹಿಸಿ ಕೃಷ್ಣನಂಘ್ರಿಯ ಭಜಿಸಿ ಇಷ್ಟಾರ್ಥ ಸಿದ್ಧಿಗೈದು ನೆಟ್ಟನೇ ಹಂಪೆ ಪಟ್ಟಣದಿ ವ್ಯಾಸಮುನಿ ಶ್ರೇಷ್ಠರಿಂದುಪದೇಶ ಪಡೆದು 12 ಮಧ್ವಮತ ಸಿದ್ಧಾಂತ ಪದ್ಧತಿಯನುದ್ಧರಿಸಿ ಗದ್ಯಪದ್ಯಗಳಿಂದಲಿ ಮಧ್ವಪತಿ ಪದಪದ್ಮ ಹೃದ್ಯದೊಳು ನೆನೆನೆನೆದು ಮುದ್ದಾಗಿ ವರ್ಣಿಸುತಲಿ ಮದ್ದಳೆಯ ತಾಳ ವೀಣೆಗಳ ಗತಿಹಿಡಿದು ಶುದ್ಧರಾಗಗಳಿಂದಲಿ ಉದ್ಧವನ ಸಖನೊಲಿದು ತದ್ಧಿಮಿತ ಧಿಮಿಕೆಂದು ಪೊದ್ದಿ ಕುಣಿಯುವ ತೆರದಲಿ 13 ಈರೆರೆಡು ಲಕ್ಷಗಳ ಮೇಲೆ ಎಪ್ಪತ್ತೈದು ಸಾ- ವಿರ ಗ್ರಂಥ ರಚಿಸಿ ಈರೆರೆಡು ದಿಕ್ಕಿನಲಿ ಚರಿಸಿ ತೀರ್ಥಕ್ಷೇತ್ರ ಸಾರ ಮಹಿಮೆಗಳ ತುತಿಸಿ ಶೌರಿದಿನದಲಿ ಮಾಳ್ಪ ವ್ರತನೇಮ ಉಪವಾಸ ಪಾರಣೆಯ ವಿಧಿಯ ತಿಳಿಸಿ ತಾರತಮ್ಯವು ಪಂಚ ಭೇದಗಳು ಸ್ಥಿರವೆಂದು ಸಾರಿ ಡಂಗುರವ ಹೊಯಿಸಿ 14 ತರುಣಿ ಮಕ್ಕಳು ಶಿಷ್ಯ ಪರಿವಾರಗಳ ಸಹಿತ ಧರೆಯನೆಲ್ಲವ ತಿರುಗುತ ಕರದಿ ಕಿನ್ನರಿ ಧರಿಸಿ ಸ್ವರವೆತ್ತಿ ಪಾಡುತಿರೆ ಕೊರಳುಬ್ಬಿ ಶಿರ ಬಿಗಿಯುತ ಎರಡು ಕಂಗಳು ಧಾರೆ ಸುರಿಯೆ ಬಾಷ್ಪೋದಕವ ಹರಿ ಮಹಿಮೆ ಕೊಂಡಾಡುತ ತಿರಿ ತಂದ ಧನದಿಂದ ವಿಪ್ರರಿಗೆ ಮೃಷ್ಟಾನ್ನ ಹರುಷದಿಂದಲಿ ಉಣಿಸುತ 15 ಗುಪ್ತವಾಗಿರೆ ಕಂಡು ವ್ಯಕ್ತ ಮಾಡುವೆನೆಂದು ಶಕ್ತನಹ ದೇವ ಬಂದ ಓಗರ ಉಂಡ ಸುತನಾಗಿ ನೀರ ತಂದ ಯತಿಯ ಪಂಕ್ತಿಗೆ ಭಾಗಿರಥಿಯನ್ನು ತರಿಸಿದ ಕ್ಷಿತಿಪತಿಗೆ ದೃಢ ತೋರಿದ ಸತಿಯೆಂದ ಮಾತಿಗೆ ಅತುಳ ಭಾಗ್ಯವನಿತ್ತು ಪಥದಲ್ಲಿ ತಲೆಗಾಯಿದ 16
--------------
ಲಕ್ಷ್ಮೀನಾರಯಣರಾಯರು
ನಿಖಿಳ ಗುಣಪೂರ್ಣ ಪ ಭಾರತೀಶ ಸಕಲಪ್ರಾಣಿಗಳ ಹೃದಯಾಬ್ಜ ವಾಸ ಸುರೇಶಅ.ಪ ವಾತಸುತನಾಗಿ ರಘುನಾಥ ಪ್ರಿಯ ದೂತ ಬಲುಯೂಥ ಲಂಕೆಯ ಪೊಕ್ಕು ಖ್ಯಾತಿಯನು ಪಡೆದೆಸೀತೆಗುಂಗುರವಿತ್ತು ವೀತಿಹೋತ್ರಗೆ ಪುರವಪ್ರೀತೆನಿಸಿದಾತ ದಿತಿಜಾತರಿಗೆ ಭೀತಿಕರ 1 ಲಂಡ ಕೀಚಕ ಬಕರ ಮಂಡೆಯನು ಒಡೆದು ಉ-ದ್ದಂಡ ಮಗಧಾಧಿಪನ ದಂಡವನು ಸೀಳಿಭಂಡ ಕೌರವರ ಶಿರ ಚೆಂಡಾಡಿ ಪ್ರಬಲ ರಣ-ಮಂಡಲದಿ ಚಂಡರಿಪು ದಂಡೆಗಳ ಖಂಡಿಸಿದೆ 2 ಭೃಂಗ ಮೂಜ್ಜಗದೊಳಗೆತುಂಗ ಭವಭಂಗ ದಯಾಪಾಂಗ ಯತಿಪುಂಗವನೆ3
--------------
ವ್ಯಾಸರಾಯರು
ನೋಡು ಗರ್ವ ಹಿಡಿಯ ಬ್ಯಾಡಾ ಪ ಜಗದೊಳಗ ಹಿತ ಮಾಡಿಕೊ | ಸಂತರೊಳು ಕೂಡಿ ನೀ ಪ್ರಾಣಿ ಅ.ಪ ಸುರಪದ ಮದ-ಗಜವೇರಿ ಸುರಸೈನ್ಯದಿಂಬರಲು | ಕರುಣದಿಂ ದೂರ್ವಾಸ ಸರ್ವ ಕುಡಲು | ಕೊರಳಿಗಿಕ್ಕದೆ ಬಿಡಲು ಧರೆಗೆರಗುವದ ಕಂಡು | ಮೊರೆದು ಕೋಪಿಸಲು ಸಿರಿಹರದ್ಹೋಯಿತು ಪ್ರಾಣಿ 1 ನೃಪತಿ ನಹುಷನನು ಯಜ್ಞ ಅಪರಿಮಿತ ಮಾಡಿ ನಿಜ | ಉಪಬೋಗಿಸದೆ ತಾ ಸುರಪ ಪದವಿಯಾ | ವಿಪುಲ ಋಷಿಯರ ಕೂಡ ಅಪಹಾಸ ಮಾಡಲಿಕೆ | ಶಪಿಸಲಾಕ್ಷಣ ಉರಗಾಧಿಪನಾದ ಪ್ರಾಣಿ 2 ವೈರಿ ಗರ್ವ ವಿದ್ಯಕ ಹಾನಿ | ಗರ್ವದಿಂ ಕೆಡಬಹುದುರ್ವಿಯೊಳಗ | ಸರ್ವಥಾ ಬ್ಯಾಡೆಂದು ಹೊರೆಯೊ ಗುರು ಮಹಿಪತಿ | ಅರ್ವವನು ಕೊಟ್ಟೆನಗ ಸರ್ವರೊಳು ಪ್ರಾಣಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪಾದ ಪದುಮವ ನಿತ್ಯದಿ | ಭಜಿಸುವರ ಸತ್ಯಲೋಕೇಶನ ಪೆತ್ತ ಪರಮಾತ್ಮನು | ನಿತ್ಯದಿ ಕರಪಿಡಿವ ತಿಳಿ ಮಾನವಾ ಪ ರವಿಸನ್ನಿಭಾಂಗರು | ಭುವಿ ದಿವಿಜೇಂದ್ರರು | ಕವಿಗಣ ಸನ್ನುತರು | ಭವದೂರರು | ಭುವನದೋಳ್ ಧೃಡಚಿತ್ತದವರಾಗಿ | ತಪದಲ್ಲಿ ಧ್ರುವನಂತೆ ತೋರುವರು ಮಹಾತ್ಮರು1 ಭುಜಗಾಧಿಪನಯಂತೆ ಯೋಗ ಸುಸಾಧಕರು ಭುಜಗ ಭೂಷಣನಂತೆ ವಿಜಯಾನಂದದಿ | ದಿಗ್ವಿಜಯ ಶಾಲಿಗಳಿವರು 2 ನೇಮಪೂರ್ವಕವಾಗಿ | ನಿತ್ಯದಲ್ಲಿ ಶಾಮಸುಂದರ ಸೀತಾ ರಾಮನರ್ಚಿಸುತಲಿ | ಭೂಮಿಯೋಳು ಮೆರೆದಿಹರು ಸುಧೀರರು 3
--------------
ಶಾಮಸುಂದರ ವಿಠಲ
ಪ್ರಾಣನ ನೋಡಿರೈ ಮುಖ್ಯಪ್ರ್ರಾಣನ ಪಾಡಿರೈ ಪ. ಕ್ಷೋಣಿಯೊಳಗೆ ಎಣೆರಹಿತ ಪಾವನಚರಿತ ಸದ್ಗುಣಭರಿತಅ.ಪ. ಅಂಜನೆ ಸುತನೊ ಮಹಾ ಅದ್ಭ್ಭುತನೊತರÀಣಿ ಮಂಡಲಕೆ ಮುಟ್ಟಿಹಾರಿದ ಬಲದ ಶ್ರುತಿಯೊ ವಿಕ್ರಮಗತಿಯೊಸುರರಾಯುಧ ನೆಗ್ಗಿಸಿದ ಕಪಿಯಗ್ರಣಿಯೊ ವಜ್ರದ ಖಣಿಯೊಶರಣ ವಂದಿತ ಚರಿತ ಮೂರ್ಲೋಕ ಗುರುವೊ ಕಲ್ಪತರುವೊ1 ರಾಮ ಪದಾಂಬುಜ ಬಿಂಬಪರಾಗ ಮಧುಪನೊ ದೇವಾಧಿಪನೊತಾಮಸ ರಾವಣನೆದೆಗೊತ್ತಿದ ಈ ಕರವೊ ಸಿಡಿಲಬ್ಬರವೊಪ್ರೇಮದಿ ರಣದೊಳಗ್ಹಾರಿ ರಥವನೊದ್ದ ಮಾರುತಿಯೊ ಪುಣ್ಯ ಮೂರುತಿಯೊರೋಮಕೆ ಸಿಲ್ಕದ ಹನುಮನ ಬಾಲದ ಸರಳೊ ದೈತ್ಯರಿಗುರುಳೊ 2 ಪಾದ ಪಡೆದಂಥ ಪದವೊ ಸಾಗರ ಮದವೊನೆನೆಯಲು ದುರಿತನಿವಾರಣ ಕರುಣಾವಾರಿಧಿಯೊ ಭಕ್ತರ ಸುಧೆಯೊಅನುದಿನದಲಿ ಹಯವದನನ ನೆನೆಯುವ ದಯವೊ ಗತಿ ಆಶ್ರಯವೊ3
--------------
ವಾದಿರಾಜ
ಭವ ವನಧಿಗೆ ನವಪೋತ | ಪಾಲಿಸು ವಿಖ್ಯಾತ ಪ ವಿಯದಧಿಪನೆ ಎನ್ನ ಕೈಯ್ಯನು ಪಿಡಿಯೋ | ಜ್ಞಾನ ಭಿಕ್ಷ ಈಯೋ ಅ.ಪ. ಮಾಯಾಪತಿ ಪದ ಪದ್ಮಯುಗಳ ಭಜಿಪಾ | ಉತ್ತಮ ಪಥತೋರ್ಪಾಶ್ರೇಯಸು ಸಾಧನ ವೆನಿಸಿ ಮೆರೆಯುರ್ತಿರ್ಪಾ | ಹರಿಪರಮನು ಎನಿಪಾ ||ಮಾಯಾಮತ ತಮ ಸೂರ್ಯನೆನಿಸಿ ಮೆರೆವಾ | ಸುಜನಸುರದ್ರುಮವಾನ್ಯಾಯ ಸುಧೆಯನೇ ತಾರಚಿಸಿರುವಾ | ಮುಕುತಿ ಮಾರ್ಗ ತೋರ್ವಾ 1 ಕಾಕು ವೃತ್ರನಿಂದಾವೃತ ಜಗವಿರಲೂ | ಜ್ಞನರಹಿತ ವಿರಲೂಲೋಕ ಮಹಿತ ಮಂತ್ರವು ನಿನಗಿರಲೂ | ಜಪಿಸುತಾಸ್ತ್ರ ಬಿಡಲೂ ||ಆ ಕುಯೋನಿಗತ ಚಿತ್ರಕೇತು ಮೋಕ್ಷ | ಆಯಿತು ಸುರರಾಧ್ಯಕ್ಷಲೋಕಾಮಯವನು ಹರಿಸಿ ಜಗದಿ ಮೆರೆದೇ | ಮಹಾನ್ನು ಎನಿಸೀದೇ2 ಚಾಪ ಜೇತಾಕುಕ್ಷಿಯೊಳಗೆ ಬಲು ಬಲು ವಿಖ್ಯಾತಾ | ಕಾಗಿನಿ ತಟದಿಸ್ಥಿತ ||ಅಕ್ಷರೇಡ್ಯ ಗುರುಗೊವಿಂದ ವಿಠ್ಠಲನಾ ತನ ಹೃದ್ಗನಾಗಿರುವವನ ||ಅಕ್ಷಿಯೊಳಗೆ ಕಂಡು ಮೋಕ್ಷ ಪಧವ ಸೇರ್ದ | ಆನಂದವ ಬೀರ್ದ 3
--------------
ಗುರುಗೋವಿಂದವಿಠಲರು
ಭಾರತೀಶನೆ ಬೇಗ ಬಾರೊ ಮನ್ಮನದಲಿ ಹರಣ ಪ ಚಾರು ಭಾಸ್ಕರ ಕ್ಷೇತ್ರ ಗಾರನೆ ದಶರಥಕುಮಾರ ಸೇವಕಾಗ್ರಣಿ ಅ.ಪ ವಾರಿಧಿ ಲಂಘಿಸಿದ ಶೂರನೆ ಗಿರಿಯಾಶ್ರಯದಿ ತೋರುವಿ ಶ್ರಮಪರಿ- ಹಾರಾರ್ಥಿಗಳ ತೆರ ಘೋರ ಪಾತಕಾಂಬುದ ಸ ಮೀರ ಪಾಲಿಸೆನ್ನನು 1 ತಂದು ನೀಡಿದಿ ದ್ರುಪದ ನಂದಿನಿಯಳಿಗೆ ಸೌ ಗಂಧಿಕ ಪುಷ್ಪ ದಯದಿ ವಂದಿಸುವೆನು ಮನ ಮಂದಿರದಲಿ ಯದು ನಂದನನಂಘ್ರೀ ನೋಳ್ಪಾ ನಂದವ ಕರುಣಿಸೊ 2 ಭೇದಾಬೋಧಿಸಿ ಬಲುಮೋದವ ಗರಿವ ಶಾಸ್ತ್ರ ನೀದಯದಲಿ ರಚಿಸಿ ವಾದಿ ಮದಗಜ ಮೃ ಗಾಧಿಪನೆನಿಸಿದ ಮೋದತೀರ್ಥಾಹ್ವಯಾ- ಗಾಧ ಮಹಿಮ ಗುರು 3 ಸತತ ಸೇವಿಪ ಗರ್ಭವತಿಯಾಗಿರುವ ವಿಪ್ರ ಸತಿಯ ನುಡಿಯ ಲಾಲಿಸಿ ನತಜನ ಪಾಲನೆ ಪ- ರ್ವತ ದಿಂದಿಳಿದಶ್ವತ್ಥ ಕ್ಷಿತಿರುಹ ಮೂಲದಿ ಪಾ- ರ್ವಾತಿ ನಾಥ ಸೇವಿತನೆ 4 ಈ ಸುಕ್ಷೇತ್ರದೊಳು ವಿದ್ವಾಂಸ ದೇವರಾಜಾಖ್ಯ ಸನ್ನುತ ವಾಸಕಾರ್ಪರ ನರ ಕೇಸರಿ ಗತಿ ಪ್ರಿಯ ದಾಸ ಪಾಲಿಸೊ ಗುರು ವ್ಯಾಸರಾಜ ಪೂಜಿತ 5
--------------
ಕಾರ್ಪರ ನರಹರಿದಾಸರು
ಭೀಮಸೇನ ಭಾಮಿನಿಯಾದನು ಪ. ಭೀಮಸೇನ ಭಾಮಿನಿಯಾಗಲುಪ್ರೇಮದ ಸತಿಯ ಕಾಮಿಸಿದವನಝಾಮರಾತ್ರಿಗೆ ಸೀಳುವೆನೆನ್ನುತಸಾಮಜವರದನ ಪಾಡುತಲಿ ಅ.ಪ. ರಾಜಾಧಿರಾಜನು ಗಜಪುರದಲ್ಲಿಜೂಜಾಡಿ ತಮ್ಮ ರಾಜ್ಯವನು ಸೋತುವಿಜಯಮುಖ್ಯ ಅನುಜರೊಡಗೂಡಿಭುಜಂಗಶಾಯಿಯ ಭಜಿಸುತ್ತಸೂಜಿಮೊನೆಯಷ್ಟು ಗೋಜಿಲ್ಲದೆ ಬೇರೆವ್ಯಾಜದಿಂದ ರೂಪಮಾಜಿಕೊಂಡು ಪೋಗೆರಾಜ ಮತ್ಸ್ಯನೊಳು ಭೋಜನ ಮಾಡುತ್ತಪೂಜಿಸಿಕೊಂಬೋ ಸೋಜಿಗವೇನಿದು1 ಮಾನಿನಿ ದ್ರೌಪದಿ ಶ್ರೇಣಿಯೊಳು ಬರುತ ತ್ರಾಣಿ ವಿರಾಟನ ರಾಣಿಯು ಕಾಣುತಧ್ಯಾನಿಸಿ ಯಾರೆಂದು ಮನ್ನಿಸಿ ಕೇಳಲುಮುನ್ನಿನ ಸಂಗತಿ ಪೇಳಿದಳುಆಣಿಮುತ್ತಿನಂಥಾ ವಾಣಿಯ ಕೇಳಲುಕ್ಷೋಣಿಲಿ ನಿನ್ನಂಥ ಜಾಣೆಯ ಕಾಣೆನುಪ್ರಾಣ ನೀನೆನಗೆ ವೇಣಿ ಹಾಕೆನುತಪಾಣಿ ಪಿಡಿದು ಕರೆತಂದಳಾಗ2 ಈಶ ಕೇಳೊ ಪರದೇಶದಿಂದೊಬ್ಬಳುಕೇಶಕಟ್ಟುವಂಥ ವೇಷದಿ ಬಂದಳುಸಾಸಿರಮುಖದ ಶೇಷನೀರೂಪವಲೇಶವು ತಾ ವರ್ಣಿಸಲರಿಯನುವಾಸಮಾಡುವೆನು ಮಾಸಯೀರಾರುಗ್ರಾಸವ ಕೊಟ್ಟೆನ್ನ ಪೋಷಿಸೆಂದಾ ನುಡಿದೋಸನು ಪೇಳಲು ಮೀಸೆಯ ತಿರುವುತಮೀಸಲೆನಗೆಂದು ತೋಷಿಸಿದ 3 ನಾರಿ ಅಕ್ಕನಲ್ಲಿ ಸೇರಿಕೊಂಡಿಹಳುಮೋರೆಯ ನೋಡಲು ಭಾರಿ ಗುಣವಂತೆತೋರುತಲಿದೆ ಎನ್ನ ಸೇರಿದ ಮೇಲನು-ಚಾರಿ ಎನಿಸುವೆ ಮೀರಿದ್ದಕ್ಕೆವಾರೆಗಣ್ಣಿಲೊಂದು ಸಾರಿ ನೋಡ್ಯಾಳೆಂದುಬಾರಿ ಬಾರಿಯಾಕೆ ಮೋರೆ ನೋಡುತಿರೆನೀರೆ ಆ ಕ್ರೂರನ್ನ ಘೋರರೂಪಕಂಜಿಮೋರೆ ತೋರದೆ ಗಂಭೀರದಿಂದಿರೆ 4 ಅಕ್ಕನಿಗೆ ಬಾಚಿ ಹಿಕ್ಕುವ ಸೇವೆಗೆಪುಕ್ಕಟೆ ಅನ್ನಕೆ ಸಿಕ್ಕುವರೆ ನೀನುಚಿಕ್ಕಪ್ರಾಯಕೆನ್ನ ಪಕ್ಕಕ್ಕೆ ಬಂದರೆಸಕ್ಕರೆದುಟಿಸವಿ ದಕ್ಕಿಸುವೆರಕ್ಕಸ ನಿನಗೆ ದಕ್ಕುವಳೆ ನಾನುಮುಕ್ಕಣ್ಣನಾದರು ಲೆಕ್ಕಿಸದಾ ಪತಿಗಕ್ಕನೆ ಬಂದರೆ ತಿಕ್ಕಿ ನಿನ್ನ ಕಾಯದಿಕ್ಕು ದಿಕ್ಕಿಗೆ ಬಲಿಯಿಕ್ಕುವರೊ 5 ಭಂಡಕೀಚಕನುದ್ದಂಡತನ ಕೇಳುಮಂಡೆ ಹಿಕ್ಕುವಳೆಂದು ಕಂಡಕಂಡ ಬಳಿಪುಂಡು ಮಾಡುವನು ಗಂಡಕಂಡರೆ ತಲೆಚಂಡನಾಡುವನು ಖಂಡಿತದಿಮಂಡಲಾಧಿಪನ ಹೆಂಡತಿ ನೀನಮ್ಮಉಂಡಮನೆಗೆ ಹಗೆಗೊಂಡಳೆನ್ನದಿರುಲಂಡನಿಗೆ ಬುದ್ಧಿ ದಂಡಿಸಿ ಪೇಳದೆಹಿಂಡಿಕೊಳ್ಳದಿರು ದುಂಡುಮುಖ 6 ತರಳ ನಿನ್ನಯ ದುರುಳತನದಬೆರಳ ಸನ್ನೆಯು ಗರಳವಾಯಿತೆಸರಳ ಗುರಿಗೆ ಕೊರಳ ಕೊಡದೆಪುರದೊಳಿರದೆ ತೆರಳೊ ನೀಅರಳಮೊಗ್ಗೆಯ ಹೆರಳಿಗ್ಹಾ ಕುತಕುರುಳು ತಿದ್ದುವ ತರಳೆಯ ಕಂಡುಇರಳು ಹಗಲು ಬಾರಳು ಎನ್ನುತಮರುಳುಗೊಂಡರೆ ಬರುವಳೆ 7 ನಿಷ್ಠೆ ಸೈರಂಧ್ರಿಯ ದೃಷ್ಟಿಸಿ ನೋಡಲುನಷ್ಟವಾಗುವುದು ಅಷ್ಟೈಶ್ವರ್ಯವುಭ್ರಷ್ಟ ನಿನಗೆ ನಾನೆಷ್ಟು ಪೇಳಲಿನ್ನುಕಟ್ಟಕಡೆಗೆ ನೀನು ಕೆಟ್ಟಿಕಂಡ್ಯಾಸೃಷ್ಟಿಲಿ ನನ್ನಂಥ ಗಟ್ಟಿಗನ್ಯಾರಕ್ಕದುಷ್ಟರ ಎದೆಯ ಮೆಟ್ಟಿ ಸೀಳುವೆನುಗುಟ್ಟಿಂದ ನಾರಿಯ ಕೊಟ್ಟುಕಳುಹಲುಪಟ್ಟದ ರಾಣಿಯೊಳಿಟ್ಟುಕೊಂಬೆ 8 ಕರವ ಬಾಚಿದನುಬಾಚಿ ಹಿಕ್ಕುವಂಥ ಪ್ರಾಚೀನವೇನಿದುವಾಚನಾಡು ಮೀನಲೋಚನೆ ಎನ್ನಲುಆಚರಿಸಿ ಮುಂದುತೋಚದೆ ಖಳನವಿಚಾರಿಸಿಕೊ ಶ್ರೀಚಕ್ರಪಾಣಿ 9 ಪೊಡವಿಪತಿಗಳ ಮಡದಿ ನಾನಾಗಿಬಡತನವು ಬಂದೊಡಲಿಗಿಲ್ಲದೆನಾಡದೊರೆಗಳ ಬೇಡುವುದಾಯಿತುಮಾಡುವುದೇನೆಂದು ನುಡಿದಳುಕೇಡಿಗ ಕೀಚಕ ಮಾಡಿದ ಚೇಷ್ಟೆಗೆಕಡಲಶಾಯಿ ಕಾಪಾಡಿದ ಎನ್ನನುಆಡಲಂಜಿಕೇನು ಷಡುರಸಾನ್ನದಅಡುಗೆ ರುಚಿಯ ನೋಡುವರೇ 10 ನಡುಗುವೊ ಧ್ವನಿ ಬಿಡುತ ಕಣ್ಣೀರಿಂ-ದಾಡುವ ಮಾತನು ಬಾಡಿದ ಮುಖವನೋಡಿದನಾಕ್ಷಣ ತೊಡೆದು ನೇತ್ರವಬಿಡುಬಿಡು ದುಃಖ ಮಾಡದಿರುಪುಡುಕಿ ನಿನ್ನನು ಹಿಡಿದವನನ್ನು ಬಡಿದು ಯಮಗೆ ಕೊಡುವೆ ನೋಡೀಗತಡವ ಮಾಡದೆ ಗಾಢದಿ ಪೋಗು ನೀಮಾಡಿದ ಚಿಂತೆ ಕೈಗೊಡಿತೆಂದು 11 ಶಶಿಮುಖಿ ಕೇಸರಿ ಗÀಂಧವದಾಸಿಯರಿಂದ ಪೂಸಿಕೊಂಡುಹಾಸುಮಂಚದಲ್ಲಿ ಬೀಸಿ ಕೊಳುತಲಿಗಾಸಿ ಪಡುತಿರೆ ಆ ಸಮಯದಲಿಲೇಸಾಗಿ ನಿನ್ನಭಿಲಾಷೆ ಸಲ್ಲಿಸುವೆಈಸು ಸಂಶಯ ಬೇಡ ಭಾಷೆ ಕೊಟ್ಟೆ 12 ನಳಿನಮುಖಿಯು ಪೇಳಿದ ಮಾತನುಕೇಳಿ ಹರುಷವ ತಾಳಿದನಾಕ್ಷಣಖಳನು ಹೊನ್ನಿನ ಜಾಳಿಗೆಯ[ತೊಟ್ಟಿನ್ನುಳಿಯದಲೆ] ರತಿಕೇಳಿಗಿನ್ನುಕಾಳಗದ ಮನೆಯೊಳಗೆ ಬಾರೆಂದುಪೇಳಿದ ಸುಳುವು ಪೇಳಲು ಭೀಮಗೆಖಳನ ಕಾಯವ ಸೀಳುವವೇಳೆ ಬಂತೆನ್ನುತ ತೋಳ ಹೊಯಿದ 13 ನಾರಿಯಿನ್ಯಾವಾಗ ಬರುವಳೋಯೆಂದುದಾರಿಯ ನೋಡುವ ಚೋರ ಕೀಚಕನುತೋರಿದ ಠಾವಿಲಿ ಸೇರುವ ಬೇಗನೆಊರೊಳಗಾರು ಅರಿಯದಂತೆಕ್ರೂರನು ಮೋಹಿಪತೆರದಿ ಎನಗೆನಾರಿಯ ರೂಪ ಶೃಂಗರಿಸು ನೀನೆಂದುವಾರಿಜಮುಖಿಯ ಮೋರೆಯ ನೋಡಲುನೀರೆ ದ್ರೌಪದಿ ತಾ ನಾಚಿದಳು14 ಬಟ್ಟ ಮುಖಕೆ ತಾನಿಟ್ಟಳು ಸಾದಿನಬಟ್ಟು ಫಣೆಯಲಿ ಇಟ್ಟು ಕಣ್ಣಕಪ್ಪಪಟ್ಟ್ಟೆಪೀತಾಂಬರ ಉಟ್ಟುಕೋ ನೀನೆಂದುಪುಟ್ಟಾಣಿ ಕುಪ್ಪಸ ಕೊಟ್ಟಳಾಗಕಟ್ಟಾಣಿ ಮುತ್ತು ತಾಕಟ್ಟಿ ಕೊರಳಿಗೆಗಟ್ಟ್ಯಾಗಿ ಚಿನ್ನದಪಟ್ಟಿಯುಡುದಾರದಿಟ್ಟನ ಬೆರಳಿಗಿಟ್ಟಳು ಉಂಗುರವಿಟಪುರುಷರ ದೃಷ್ಟಿತಾಕುವಂತೆ15 ಮುತ್ತಿನ ಮೂಗುತಿ ಕೆತ್ತಿದ ವಾಲೆಯುಇತ್ತೆರÀ ಬುಗುಡಿಯು ನೆತ್ತೀಗರಳೆಲೆಚಿತ್ರದ ರಾಕಟೆ ಉತ್ತಮಕ್ಯಾದಿಗೆಒತ್ತೀಲಿ ಶ್ಯಾಮಂತಿಗ್ಹ್ಹೂವು ಗೊಂಡ್ಯಾಹಸ್ತದ ಕಡಗವು ಮತ್ತೆ ಚೂಡ್ಯ ವಂಕಿಮುತ್ತಿನ ಹಾರವು ರತ್ನದ ಪದಕವುಅರ್ತಿಲಿ ನಾರಿಯು ಕುತ್ತಿಗ್ಗ್ಯೆಹಾಕಲುಹಸ್ತಿನಿಯೋ ಈಕೆ ಚಿತ್ತಿನಿಯೊ16 ಮುಡಿಗೆ ಮಲ್ಲಿಗೆ ಮುಡಿಸಿ ಸುಗಂಧತೊಡೆದು ತಾಂಬೂಲ ಮಡಿಸಿಕೊಡುತಪ್ರೌಢನ ಸ್ತ್ರೀರೂಪ ನೋಡಲು ಖಳನುಕೊಡದೆ ಪ್ರಾಣವ ಬಿಡನೆಂದಳುಮಾಡಿದ್ಯೋಚನೆ ಕೈಗೂಡಿತು ಇಂದಿಗೆನೋಡು ಆ ಕೃಷ್ಣನು ಹೂಡಿದ ಆಟವಮಡದಿ ನೀನೆನ್ನ ಒಡನೆ ಬಾರೆಂದುನಡೆದ ಖಳನ ಬಿಡಾರಕೆ 17 ಇಂದುಮುಖಿ ಅರವಿಂದನಯನದ ಮಂದಗಮನೆಯು ಬಂದಳು ಎನ್ನುತನಂದನತನಯನ ಕಂದನ ಬಾಧೆಗೆಕಂದಿ ಕುಂದಿ ಬಹು ನೊಂದೆನೆಂದಹಿಂದಿನ ಸುಕೃತದಿಂದಲಿ ನಿನ್ನೊಳಾ-ನಂದವಾಗಿಹುದು ಇಂದಿಗೆ ಕೂಡಿತುಕುಂದದಾಭರಣ ತಂದೆ ನಾ ನಿನಗೆಚಂದದಿಂದಿಟ್ಟು ನೀನಂದವಾಗೆ18 ಗುಲ್ಲುಮಾಡದಿರೊ ಮೆಲ್ಲಗೆ ಮಾತಾಡೊವಲಭರ್ತಾಕಂಡರೆ ಹಲ್ಲು ಮುರಿವರೊಬಲ್ಲವ ನಿನಗೆ ಸಲ್ಲದು ಈ ಕಾರ್ಯಗೆಲ್ಲಲರಿಯೆ ನೀ ಕೊಲ್ಲಿಸಿಕೊಂಬೆಚೆಲ್ವೆ ಕೇಳು ನಿನ್ನ ಹುಲ್ಲೆಗಣ್ಣ ನೋಟಕೊಲ್ವಬಗೆ ಗೆಲ್ಲಲಾರೆನೆಂದುಗಲ್ಲವ ಮುದ್ದಿಟ್ಟು ಮೈಯೆಲ್ಲ ಹುಡುಕಲುಕಲ್ಲೆದೆಯಲ್ಲ್ಲಿರೆ ಖೂಳ ನೊಂದ 19 ನಾರಿಯೊ ನೀನೇನು ಮಾರಿಯೊ ಇನ್ನೊಂದುಬಾರಿ ನೀ ಎನಗೆ ಮೋರೆ ತೋರಿಸೆಂದಧೀರನ ಸಮೀಪಬಾರದೆ ಓಡುವದಾರಿಯ ನೋಡುತಿರಲಾಗಬಾರದಂಥಾ ಪರದಾರರ ಮೋಹಿಪಕ್ರೂರಗೆ ಈ ರೂಪ ಘೋರವಾಗಿಹುದುಸಾರದ ಮಾತಿದು ಯಾರಾದರೇನೀಗಮಾರನ ತಾಪವ ಪರಿಹರಿಸುವೆ 20 ಸಮೀರಜ ಗುದ್ದಲು ಕೀಚಕಬಿದ್ದನು ಭೂಮಿಲಿ ಗೆದ್ದೆನೆನುತ ಅನಿ-ರುದ್ಧನ ಸ್ಮರಿಸುತಲೆದ್ದ ಭೀಮ 21 ಕೆಟ್ಟ ಕೀಚಕ ತಾ ತೊಟ್ಟ ಛಲದಿಂದಬೆಟ್ಟದಂಥ ದೇಹ ಬಿಟ್ಟಿನ್ನವನಪಟ್ಟಾಗಿ ತೋರುವೆ ದೃಷ್ಟಿಸು ಎನ್ನಲುಭ್ರಷ್ಟನ ನೋಡುವುದೇನೆಂದಳುಕೊಟ್ಟ ಭಾಷೆಯು ಈಗ ಮುಟ್ಟಿತು ನಿನಗೆಕೃಷ್ಣನ ದಯದಿ ಕಷ್ಟವು ಹಿಂಗಿತುಪಟ್ಟಣಕೀಸುದ್ದಿ ಮುಟ್ಟದ ಮುಂಚೆಗುಟ್ಟಲಿ ಪೋಗುವ ಥಟ್ಟನೆಂದ 22 ಅರಸಿ ನಿನ್ನೊಳು ಸರಸ ಬೇಕೆಂದಪುರುಷನ ಜೀವ ಒರೆಸಿ ಕೊಂದೆನುಹರುಷದೀ ಪುರದರಸು ನಮ್ಮನುಇರಿಸಿಕೊಂಡೊಂದೊರುಷವಾಯಿತುಬೆರೆಸಿದ ಸ್ನೇಹಕ್ಕೆ ವಿರಸ ಬಂತೆಂದುಸರಸಿಜಾಕ್ಷಿಯು ಕರೆಸಿ ನಿನ್ನೊಳಗಿರಿಸದಿದ್ದರೆ ಹಯವದನನಸ್ಮರಿಸಿ ಗದೆಯನು ಧರಿಸುವೆ23
--------------
ವಾದಿರಾಜ
ಭೂಮಿಜೆಯು ಸೀತೆಯು ಜನನಿ ಗರ್ಭವ ವಡೆದು ಬಂದಳು ದನುಜ ವಧಕೆಂದೇ ಪ ದುರುಳ ದನುಜರು ಪೆಸರು ರಾವಣ ಕುಂಭಕರ್ಣರು ಋಷಿ ಜನಂಗಳ ಮುಖವ ಕೆಡಿಸುತ ಮೆರೆಯುತಿರೆ ಕೇಳ್ದು 1 ಭವದ ಭಟ ಶ್ರೀರಾಮಚಂದ್ರನು ಮೂವರನು ಜರ ಕೂಡಿ ಜನಿಸಿದಾ ಭುವನ ಭಾರವ ಪರಿಹರಿಪೆನೆಂದಭಯ ತೋರುತಲೀ 2 ಸಿರಿಲಕುಮಿ ನಿಜವರನು ಜನಿಸಿದ- ನರಿತು ¥ರಮಾನಂದದಲಿ ತಾ ಭರದಿ ಮೈದೋರಿದಳು ಹರಿಗೆ ತಾನರಸಿ ಎನಿಸಿದಳು 3 ವಾನರರ ಸೇನಾಧಿಪನು ಪವ- ಸೂನು ಶ್ರೀ ಹನುಮನೆಂಬುವನು ದಾನವಾರಿ ಶ್ರೀ ರಾಮಚಂದ್ರಗೆ ಭೃತ್ಯನೆನಿಸಿದನು 4 ವಿಪಿನ ಚರವ್ಯಾಜದಲಿ ರಕ್ಕಸ- ರಪರಿಮಿತ ಕೆಡಹಿದನು ಧರಣಿಗೆ ವಿಪರೀತ ಬತ್ತದ ಶರಧಿಯನು ಹನುಮಂತನ್ಹಾರಿದನು 5 ಪ್ರತಿಭಟಿಸಿ ಶ್ರೀ ರಾಮಚಂದ್ರನು ಅತಿಮೆರೆವ ರಾವಣನ ಮಡುಹಿದಾ ಮತಿವಂತ ಹನುಮನಿಗೆ ಇತ್ತಾ ಚತುರವದನ ಪದಾ 6 ಧರಣಿ ಮಗಳಿಂಗೂಡಿ ರಾಮನು ಧರೆಯನೆಲ್ಲವನಾಳಿ ನ್ಯಾಯದಿ ಸ್ವರಗವಾಸಕೆ ತೆರಳಿದನು ನರಸಿಂಹವಿಠಲನು 7
--------------
ನರಸಿಂಹವಿಠಲರು
ಮುಕ್ಕೋಟ ದ್ವಾದಶಿಯ ದಿವಸ (ಮಾರ್ಗಶಿರ ಶುದ್ಧ ದ್ವಾದಶಿಯ ಉತ್ಸವ) ರಂಭೆ : ಮತಿವಂತೆ ಪೇಳೀತನ್ಯಾರೆ ದೇವ ವ್ರತತಿಯಧಿಪನಂತೆ ನೀರೆ ತೋರ್ಪ ಅತಿಶಯಾಗಮ ಬಗೆ ಬ್ಯಾರೆ ರತ್ನ ದ್ಯುತಿಯಾಭರಣವ ಶೃಂಗಾರ ಆಹಾ ಶ್ರುತಗೊಲಿಸೆನಗೆ ಆಶ್ರಿತ ರಕ್ಷಾರ್ಥಿತನ ಸಂ- ಗತಿ ಸ್ಮøತಿ ತತಿಗಳ ಮತಿಗಗೋಚರನಂತೆ 1 ಊರ್ವಶಿ : ಲಾಲಿಪುದೆಲೆಗೆ ಪೇಳುವೆನು ನೂತನವ ಲೋಲ ಲೋಚನನ ನಾಟಕ ಸತ್ಕಥನವ ಮೇಲಾಗಿ ಜಗದಿ ಶೋಭಿಪ ಶೇಷಾದ್ರಿಯಲಿ ಬಾಲಾರ್ಕಸದೃಶನೀತನು ಇರ್ಪನಲ್ಲಿ ನೀಲನಿಭಾಂಗನು ನೆನೆವರ ಪಾಪವ ಘೋಲುಘಡಿಸಲೆಂದೆನುತಲಿ ಭಾರ್ಗವ ಕೋಲಿಂದೆಸಗಿದ ಧರಣಿಗೆ ಬಂದು ಸ- ಲೀಲೆಗಳೆಸಗುವ ಜಾಲವಿದೆಲ್ಲ 2 ಸರಸಿಜಗಂಧಿ ಕೇಳ್ ದಿಟದಿ ತನ್ನ ಅರಮನೆಯಿಂದ ಸದ್ವಿಧದಿ ಈರ್ವ- ರರಸಿಯರ್ ಸಹಿತ ಮಿನಿಯದಿ ಅತಿ ಭರದಿಂದ ಸೂರ್ಯನುದಯದಿ ಆಹಾ ಉರುತರ ಹೇಮಪಲ್ಲಂಕಿಯೊಳಡರಿ ತ್ವರಿತದಿ ಪೋಗುವ ಭರವಿದೆಲ್ಲಿಗೆ ಪೇಳೆ3 ಊರ್ವಶಿ : ಮದ್ದಾನೆಗಾತ್ರೆ ಲಾಲಿಸಿ ಕೇಳು ಮಾತ ಬದ್ಧ ನೀ ಪೇಳ್ದ ಮನದ ಶಂಕಾವ್ರಾತ ತಿದ್ದಿಪೆ ಕೇಳು ಮಾರ್ಗಶಿರ ಮಾಸದೊಳು ಸೂರ್ಯ ಉದಯ ಕಾಲದೊಳು ಭದ್ರಭವನವನು ಪೊರಟು ವಿನೋದದಿ ಅದ್ರಿಧರನು ಸಜ್ಜನರೊಡಗೂಡಿ ಉ- ಪದ್ರಿತ ಪಾಪವ ಛಿದ್ರಿಪ ಸ್ನಾನಕೆ ರೌದ್ರಿತ ರಾಮಸಮುದ್ರದ ಬಳಿಗೆ 4 ರಂಭೆ : ಆರರೆ ಆಶ್ಚರ್ಯವಾಯ್ತೆನಗೆ ಅತಿ ಪರಮ ಮಹಿಮೆನೆಂದ ಮೇರೆಗೆ ಘನ- ತರ ಸ್ನಾನವೇನಿದು ಕಡೆಗೆ ವೃತ ದಿರವೋ ಉತ್ಸವವೋ ಪೇಳೆನಗೆ ಆಹಾ ತರುಣಿ ರನ್ನಳೆ ನಿನ್ನ ಚರಣಕ್ಕೆ ನಮಿಪೆ ಈ ಪರಿಗಳ ಸಾಂಗದಿಂದರುಹಬೇಕೆನಗಿನ್ನು 5 ಊರ್ವಶಿ : ಅಕುಟಿಲೆ ಬಾಲೆ ಯೌವನವಂತೆ ಕೇಳೆ ಸಕಲಾಂತರ್ಯಾತ್ಮನೀತನು ಸತ್ಯಶೀಲೆ- ಪ್ರಕಟ ವ್ರತವಿದಲ್ಲ ಅಂಜನಾದ್ರಿಯಲಿ ಭಕುತವತ್ಸಲನು ಉತ್ಸವಿಸುವನಲ್ಲಿ ವಿಕಳಹೃದಯ ನರನಿಕರಕಸಾಧ್ಯವೆಂ ದ್ಯುಕುತದಿ ಈ ಧರೆಯಲ್ಲಿ ಪ್ರತ್ಯೇಕದಿ ಅಖಿಳೋತ್ಸವ ಮಸ್ತಕಕಿದು ವೆಗ್ಗಳ ಮುಕುಟೋತ್ಸವವೆಂದೆನುತಲಿ ರಚಿಸುವ 6 ರಂಭೆ : ನಳಿನಾಕ್ಷಿ ಲಾಲಿಪುದಿನ್ನು ಸ್ನಾನ ವೊಲವಿಂದ ಗೈದ ಮೇಲಿವನು ತನ್ನ ರಮಣಿಯರ್ಸಹಿತಂದಣವನು ಏರಿ ನಿಲುನಿಲುತ್ಯಾಕೆ ಬರುವನು ಆಹಾ ಪೊಳಲೊಳಗಿಹ ಜನನಿಳಯದ ದ್ವಾರದಿ ಕಳಕಳವೇನಿದ ತಿಳುಪೆನಗೀ ಹದ7 ಊರ್ವಶಿ : ಕುಂದರದನೆ ಬಾಲೆ ಚದುರೆ ಸೈ ನೀನು ಮಿಂದು ತೋಷದಿ ಅಂದಣವನ್ನೇರಿ ತಾನು ಇಂದೀ ಪುರದೊಳಿರ್ಪ ಜನರ ದೋಷಗಳ ಕುಂದಿಸಲೆಂದವರವರ ದ್ವಾರದೊಳು ನಿಂದಿರುತಲ್ಲಿಯದಲ್ಲಿ ಆರತಿಗಳ ಚಂದದಿ ಕೊಳುತೊಲವಿಂದ ಕಾಣಿಕೆ ಜನ- ವೃಂದದಿ ಕೊಡುತಾನಂದ ಸೌಭಾಗ್ಯವ ಒಂದಕನಂತವ ಹೊಂದಿಸಿ ಕೊಡುವ 8 ರಂಭೆ : ಸರಸಿಜಾನನೆ ಮತ್ತೇನಿದನು ತನ್ನ ಅರಮನೆಯಲ್ಲಿ ಭೂದ್ವಿಜನರನು ಸರ್ವ ಪುರಜನ ಸಹಿತೊಳಗಿವನು ನಾನಾ ತರದಿ ಮೆರೆವ ಭೋಜನವನು ಆಹಾ- ಕರಿಸಿ ಆಮೇಲೆ ರಾತ್ರಿಯಲಿ ಸಾಲಿನಲಿ ವಿ- ಸ್ತರದ ಲಾಜದ ರಾಸಿಗಿರದೆ ಪೂಜಿಪುದ್ಯಾಕೆ 9 ಊರ್ವಶಿ : ಮಂಗಲಾನನೆ ಲೇಸು ನುಡಿದೆ ಕೇಳ್ ನೀನು ಗಂಗಾಜನಕ ತನ್ನ ಗೃಹದಿ ವಿಪ್ರರನು ಹಿಂಗದೆ ಕರೆಸಿ ವಿಪ್ರರನೆಲ್ಲ ಬರಿಸಿ ಸಂಗಾತದಲಿ ಆರೋಗಣೆ ಗೈದು ಮೆರೆಸಿ ಅಂಗಣದಲಿ ರಾತ್ರೆಯಲಿ ವಿನೋದದಿ ಕಂಗೊಳಿಸುವ ಉರಿದರಳ ಸಮೂಹಕೆ ರಂಗಪೂಜೆಯನುತ್ತಂಗವಿಸುವ ನಿಗ- ಮಂಗಳೊಡೆಯನು ವಿಹಂಗಮಾರೂಢ 10 ರಂಭೆ : ಅಮಮ ಮತ್ತೇನಿದ ಪೇಳು ಶ್ವೇತ- ಕುಮುದಾಪ್ತ ಠಾವಿನ ವೋಲು ಬಂದು ಆದರಿಸಲಿದರ ಮಧ್ಯದೊಳು ತನ್ನ ರಮಣಿಯರ್ ಸಹಿತ ತೋಷದೊಳು ಆಹಾ ವಿಮಲವನ್ನೇರಿನ್ನೆಲ್ಲಿಗೈದುವನೆಂಬಾ- ಗಮವ ಪೇಳೆನೆಗೆ ನೀ ನಮಿಪೆ ನಿನ್ನಂಘ್ರಿಯ 11 ಊರ್ವಶಿ : ಥೋರ ಕನಕುಂಭಕುಚಭಾರೆ ಕೇಳೆ ಶ್ರೀ ರಮಾರಮಣ ಪೂಜೆಯಗೊಂಡಾ ಮೇಲೆ ಚಾರು ಈ ಹೂವಿನ ತೇರನೇರುತಲಿ ಕೇರಿ ಕೇರಿಯೊಳಾರತಿಗೊಳ್ಳುತಲಿ ಭೋರಿಡುತಿಹ ವಾದ್ಯಧ್ವನಿ ಘನತರ ಭೇರಿ ಮೃದಂಗಾದ್ಯಖಿಳ ವಿನೋದದಿ ಸ್ವಾರಿಗೆ ತೆರಳುವ ಕ್ರೂರ ನರರ ಆ- ಘೋರ ಪಾಪ ಜರ್ಝರಿಸಲೆಂದು 12 ರಂಭೆ : ಅರವಿಂದಾಕ್ಷಿಯೆ ಮತ್ತೇನಿದನು ತನ್ನ ಅರಮನೆಯಿದಿರು ರಥವನು ತಾನು ಭರದೊಳಗಿಳಿದಂದಣವನು ಏರಿ ಮೆರೆವಾಲಯದ ಸುತ್ತುಗಳನು ಆಹಾ ತಿರುಗುವನ್ಯಾಕೆ ಭೂದ್ವಿಜರ ಘೋಷದಿ ವಾದ್ಯ- ಭರಿತ ಗಾಯನ ಭೇರಿ ಧ್ವನಿಗಳೇನಿದ ಪೇಳೆ13 ಊರ್ವಶಿ : ಕೃಷ್ಣಾಂಕ ವದನೆ ಕೇಳೆಲೆ ಪೇಳ್ವೆ ನಿನಗೇ ದುಷ್ಟಮರ್ದನ ರಥವಿಳಿವುತ್ತಲಾಗೇ ಅಷ್ಟದಿಗ್ಭಾಗದಿ ಗೃಹಸುತ್ತಿನೊಳಗೆ ಅಷ್ಟಾವಧಾನವ ರಚಿಸುತ್ತ ಕಡೆಗೆ ಶ್ರೇಷ್ಠನು ರತ್ನಾಸನದಿ ಗ್ರಹದಿ ಪರ ಮೇಷ್ಟಜನಕೆ ಸಂತೋಷಾನಂದದಿ ಸೃಷ್ಟಿಯ ಜನರ ಅನಿಷ್ಟವ ತ್ಯಜಿಸುತ ಇಷ್ಟವನೀವ ಯಥೇಷ್ಟ ದಯಾಬ್ಧ 14 ರಂಭೆ : ಅರಿತೆನಾ ಸ್ವಚ್ಛ ಚಿತ್ತದಲಿ ಇನ್ನು ಹರಿ ಏಕರೂಪನೆನ್ನುತಲಿ ಲಕ್ಷ್ಮೀ ಕರವೆನಿಸುವ ಕಾರ್ಕಳದಲಿ ಭಾಗ್ಯೋ- ದಯ ದೇವಾಲಯದ ಮಧ್ಯದಲಿ ಆಹಾ ತ್ವರಿತದಿ ನುತಿಸಿರೊ ಗುರು ನಾರಸಿಂಹ ಶ್ರೀ- ಕರ ವೆಂಕಟೇಶನ ಚರಣಕಮಲಗಳ 15
--------------
ತುಪಾಕಿ ವೆಂಕಟರಮಣಾಚಾರ್ಯ
ಮುನಿರಾಯರ ಸ್ಮರಣೆ ಮಾಡಿರೊ ಮಧ್ವ ಮುನಿರಾಯರ ಸ್ಮರಣೆ ಪ ಚರಣಕಮಲವ ಭರದಿ ಭಜಿಸುವ ಧರಣಿ ಸುರರಾದರದಿ ಪೊರೆಯುವ ತರಣಿ ಮಂಡಲಗಣವ ಗೆಲಿಯುವ ಹರಿಣವಾಹನನಂಶನಾದ ಅ.ಪ ಕಪಿರೂಪವÀ ಧರಿಸಿ ರಾಮನ ಆಜ್ಞೆಯನು ಶಿರದಲಿ ವಹಿಸಿ ವಾರಿಧಿಯನು ನಿಮಿಷ ಮಾತ್ರದಿ ಲಂಘಿಸಿ ದಶವದನನ ಅಶೋಕವನದಲಿ ಶಶಿಮುಖಿಯ ತಾ ಕಂಡು ವಂದಿಸಿ ದಶರಥ ಸುತನ ವಾರ್ತೆ ಪೇಳಿ ನಿಶಿಚರೇಶನ ಪುರವ ವಹಿಸಿದ 1 ಕುರುಕುಲದೊಳಗೆ ಪುಟ್ಟಿ ಮತ್ಸಾಧಿಪನ ನಗರದೊಳಗೆ ತಾ ಜಟ್ಟಿ ಕಾಳಗದಲ್ಲಿ ಮಲ್ಲರ ತಲೆಯ ಮೆಟ್ಟಿ ದುರುಳ ದುರ್ಯೋಧನನ ಸೇನೆಯು ಬರಲು ಪಶುಗಳ ಕದಿಬೇಕೆಂದು ತಿರುಗಿ ಓಡಿಸುವಂತೆ ಮಾಡಿದ 2 ಪರಬ್ರಹ್ಮ ಅಗುಣನೆಂದು ಜೀವೇಶರಿಗೆ ಬೇಧವೇ ಇಲ್ಲವೆಂದು ಪ್ರಪಂಚಕ್ಕೆ ಸತ್ಯತ್ವ ಯಾವುದೆಂದು ಜಗನ್ಮಿಥ್ಯಾವಾದಿ ಜನಗಳ ನಿಗಮ ಯುಕುತಿಗಳಿಂದ ಖಂಡಿಸಿ ಖಗವಾಹನ ನಾಮಗಿರಿ ಸಿರಿ ನೃಹರಿ ಮೂರುತಿಗರ್ಪಿಸಿದ 3
--------------
ವಿದ್ಯಾರತ್ನಾಕರತೀರ್ಥರು
ಮೋಹನ ನವ ಭವನ ಪರೇಶನ ಪ ದುರಿತ ಭವ ಭಯ ವಿಮೋಚನನ ನೇಹದ ಗೇಹವು ಸಕಲ ಭುವನ ಸನ್ ಅ.ಪ. ಮಣಿ ಸ್ತಂಭಗಳು ಲಲಿತಕಾಂತಿಗಳ ಬೀರುತಲಿರ್ಪ 1 ನಿರುಪಮಾದ್ಭುತ ಶರೀರವಾಂತಿಹ ಉರಗಾಧಿಪನಿರವು ಕಾಣುವ ತ್ರಿಜಗನ್ 2 ಭೋಗಿರಾಜಶಯನೆ ವರಮೇಘಕಾಯನೆನಿಸಿ ಯೋಗಿವಿನುತ ನಿಜ ಲೀಲೆಯ ಪಾರ್ಥನಿ ಗಾಗಿ ತೋರಿಸಿದ ಶ್ರೀ ಕರಿಗಿರೀಶನ 3
--------------
ವರಾವಾಣಿರಾಮರಾಯದಾಸರು