ಒಟ್ಟು 18 ಕಡೆಗಳಲ್ಲಿ , 13 ದಾಸರು , 18 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ವಾಂತವ ತೊಳೆಯುತಲಿರಬೇಕು ಶಾಂತಿನಿಕೇತನವಾಗುವ ತನಕ ಪ ಶಾಂತ ಮೂರುತಿ ಶ್ರೀಶಾಂತನು ತನ್ನ ಏ ಕಾಂತ ಮಂದಿರವೆಂದೊಪ್ಪುವ ತನಕ ಅ.ಪ ಕಾಮ ಕ್ರೋಧವೆಂಬೊ ಕಸಗಳನು ನೇಮದಿಂದ ಗುಡಿಸುತಲಿರಬೇಕು ಪ್ರೇಮಜಲದ ಸೇಚನೆ ಮಾಡಿ ಹರಿ ನಾಮಸ್ಮರಣೆ ಧೂಪವ ಕೊಡಬೇಕು 1 ಕಲಿಪುರುಷನ ಓಡಿಸಬೇಕು ತಿಳಿಯ ವೈರಾಗ್ಯ ಭಕ್ತಿಗಳೆಂಬ ತಳಿರು ತೋರಣವ ಕಟ್ಟಲಿಬೇಕು ನಳಿನನಾಭನ ಮನ ಸೆಳೆಯುವ ತೆರದಿ 2 ಕಾಣಲು ಪರಮತತ್ವದ ದಿವ್ಯ ಜ್ಞಾನದ ಜ್ಯೋತಿಯ ಮುಡಿಸಲಿ ಬೇಕು ಜ್ಞಾನ ಸುಖಾದಿ ಸದ್ಗುಣ ನಿಧಿಯು ತಾನೆ ಪ್ರಸನ್ನನಾಗುತ ನೆಲೆಸುವ ಪರಿ3
--------------
ವಿದ್ಯಾಪ್ರಸನ್ನತೀರ್ಥರು
ಅಗ್ರಪೂಜೆಯ ಮಾಡಿದಾ ಧರ್ಮಜ ತಾನುಅಗ್ರಪೂಜೆಯ ಮಾಡಿದಾ ಪರಾಜರಾಜರಗೂಡಿ ರಾಜಸೂಯದಿ ಧರ್ಮ-ರಾಜನು ಹರಿಗೆ ರಾಜರ ಸಭೆಯೊಳು ಅ.ಪಶುದ್ಧಾಚಮನ ಸಂಕಲ್ಪದಿಪಾದತೊಳೆದಿತ್ತಸದ್ಭಕ್ತಿಯಲಿ ಗಂಧಾಕ್ಷತೆ ವೇದವೇದ್ಯಗೆ 1ವಸನಾಭರಣದಿವ್ಯಕುಸುಮಧೂಪವು ದೀಪತೃಷೆನೈವೇದ್ಯವನಿತ್ತು ಕ್ಲೇಶನಾಶನಿಗಂದು 2ಕ್ರಮುಕವರ್ಪಿಸಿ ನೀಲಾಂಜನವೆತ್ತಿ ಧ್ಯಾನಿಸಿಸುಮವಿತ್ತು ಬಲವಂದು ಚಕ್ರವಿಕ್ರಮಗೆ 3ಪೊಡಮಟ್ಟಘ್ರ್ಯವ ಬಿಟ್ಟು ಒಡನೆ ಯಜ್ಞಾಂತದಿಬಿಡೆ ಬ್ರಹ್ಮಾರ್ಪಣ UÉೂೀವಿಂದನ ಪಾದದ್ವಂದ್ವಕೆ 4
--------------
ಗೋವಿಂದದಾಸ
ಹೆಂಡತಿ ಎಂಬ ದೇವರನು ನಂಬಿಹನಣ್ಣಹೆಂಡತಿಯೆ ದೇವರೆಂದು ಕೆಡುತಿಹನಣ್ಣಪತಲೆಗೆ ತಾನೆರೆಯುವುದೆ ಮಂಗಲ ಸ್ನಾನವಣ್ಣಬಲು ವಸ್ತ್ರವುಡಿಸುವುದೆ ಅಭಿವಸ್ತ್ರವಣ್ಣಎಲೆಗೊಪ್ಪು ಮೊದಲಾಗಿಡುವುದೇ ಆಭರಣವಣ್ಣಹಲವು ಪರಿಮಳ ಲೇಪನವೇ ಗಂಧವಣ್ಣ1ನಾನಾ ದಂಡೆಯ ಹಾರವ ಮುಡಿವುದೆ ಪುಷ್ಪವಣ್ಣನಾನಾ ಬಹುಮಾನ ಮಾಡುವುದೆ ಧೂಪವಣ್ಣನಾನಾಪರಿಉಣಿಸುವುದೆ ನೈವೇದ್ಯವಣ್ಣನಾನಾ ಸಂತಸಪಡಿಸುವುದೆ ದೀಪವಣ್ಣ2ನೆನೆದೂಳಿಗ ಮಾಡುವುದೆ ಪ್ರದಕ್ಷಿಣವಣ್ಣಮುನಿಸುವಳ ತಿಳಿಸುವುದೆ ಸಾಷ್ಟಾಂಗವಣ್ಣಇನಿತು ಪೂಜೆಯ ಮಾಡಿ ತಿರುಗೊಂದು ಭವವಣ್ಣಚಿನುಮಯ ಚಿದಾನಂದ ನಿನಗೆ ದೊರೆಯನಣ್ಣ3
--------------
ಚಿದಾನಂದ ಅವಧೂತರು