ಒಟ್ಟು 93 ಕಡೆಗಳಲ್ಲಿ , 34 ದಾಸರು , 86 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೃಷ್ಣಾ ಎನ್ನ ಕಷ್ಟ ಹರಿಸೊ ಜಿಷ್ಣು ಸಾರಥಿಯೆ ಪ ಪಾದ ಮುಟ್ಟಿ ಭಜಿಸುವರ ಇಷ್ಟಾರ್ಥಗಳನೀವೆ ಸೃಷ್ಟಿಗೊಡೆಯ ದೇವ ಅ.ಪ ಶಿಲೆಯಾದಹಲ್ಯೆಯ ದುರಿತವ ತರಿದೆ ಸಲಿಲ ಮಡುವಿಲಿ ಮಕರದಿ ಕರಿಯ ರಕ್ಷಿಸಿದೆ ಸುಲಭದಿಂದಜಮಿಳನ ದುರಿತವ ತರಿದೆ ಕಲಿ ಸುಯೋಧನನ ಓಲಗದಿ ಗರ್ವ ಮುರಿದೆ 1 ವಿಶ್ವರೂಪನು ನೀನೆ ವಿಶ್ವವ್ಯಾಪಕನೆ ವಿಶ್ವೋದರನೆ ಕೃಷ್ಣಾ ವಿಶ್ವನಾಟಕನೆ ವಿಶ್ವಬಾಯೊಳು ತೋರ್ದ ವಿಶ್ವೋದ್ಧಾರಕನೆ ವಿಶ್ವಮಯನೆ ಸರ್ವ ವಿಶ್ವನು ನೀನೆ2 ಅಗಣಿತ ಮಹಿಮ ಆಶ್ಚರ್ಯನು ನೀನೆ ಬಗೆ ಬಗೆ ನಾಮಗಳಿಂದ ಪೂಜಿತನೆ ಖಗವರವಾಹನ ಕಂಸ ಮರ್ದನನೆ ನಿಗಮಗೋಚರ ನಿತ್ಯತೃಪ್ತನು ನೀನೆ 3 ಕನಕಗರ್ಭನ ಪಿತ ಕರುಣದಿ ಸಲಹೊ ಇನಕುಲ ತಿಲಕ ಸುಂದರ ಮೇಘಶಾಮ ದಿನಕರ ತೇಜ ಶ್ರೀ ಸನಕಾದಿ ಮುನಿನುತ ಹನುಮನಂತರ್ಯಾಮಿ ಮಮತೇಲಿ ಸಲಹೊ 4 ಕಮಲ ಸಂಭವನಯ್ಯ ಕಮಲಜಾತೆಯ ಪ್ರಿಯ ಕಮಲ ಪುಷ್ಪ ಮಾಲಾಲಂಕೃತ ಹರಿಯೆ ಕಮಲಭವೇಂದ್ರಾದಿ ಸುಮನಸರೊಡೆಯ ಶ್ರೀ-ಕಮಲನಾಭ ವಿಠ್ಠಲ ಕರುಣದಿ ಸಲಹೊ 5
--------------
ನಿಡಗುರುಕಿ ಜೀವೂಬಾಯಿ
ಗರುವವು ನಿನಗ್ಯಾಕೆಲೋ ಎಲೋ ಜರ ನಾಚಿಕೆ ಬಾರದೇನೆಲೋ ಎಲೋ ಪ ಮರುಳನೆ ನಿನಗೀಪರಿ ಗರುವ್ಯಾತಕೋ ಅರಿತು ನೋಡ್ಹಿರಿಯರನೆಲೋ ಎಲೋ ಅ.ಪ ಘನತೆಲೊಸಿಷ್ಠನೇನೆಲೋ ಎಲೋ ಜನಕ ಭಾಗ್ಯದೊಳೆಲೋ ಎಲೋ ಮನುಗಳಲ್ವ್ಯಾಸನೇನೆಲೋ ಎಲೋ ನೀ ಮುನಿಗಳೋಳ್ಯುಕನೇನೆಲೋ ಎಲೋ ಮನೆತನದಲಿ ಘನದಶರಥನೆ ದಿನಮಣಿಯೆ ನೀ ಪ್ರಭೆಯೋಳೆಲೋ ಎಲೋ 1 ಧುರದಿ ಕಾರ್ತರ್ವ್ಯನೇನೆಲೋ ಎಲೋ ನೀ ನರಿವಿನೋಳ್ಪ್ರಹ್ಲಾದನೇನೆಲೋ ಎಲೋ ವಿರಸದಿ ರಾವಣನೇನೆಲೋ ಎಲೋ ನೀ ಸ್ಥಿರತನದ್ವಿಭೀಷಣನೇನೆಲೋ ಎಲೋ ಹರಿ ಒಲುಮೆಲಿವರ ಅಗಸ್ತ್ಯನೇನು ಸುರ ಗುರುವೇ ನೀ ಮತಿಯೋಳೆಲೋ ಎಲೋ 2 ತ್ರಾಣದಿ ವಾಲಿಯೇನಲೋ ಎಲೋ ನೀ ಜಾಣರೋಳ್ಬಲಿಯೇನೆಲೋ ಎಲೋ ಜ್ಞಾನದಿ ವಾಲ್ಮೀಕಿಯೇನೆಲೋ ಎಲೋ ನೀ ಗಾನದಿ ನಾರದನೇನೆಲೋ ಎಲೋ ದಾನದೊಳಗೆ ಹರಿಶ್ಚಂದ್ರನೇನೋ ನಿ ಧಾನದಿ ನಳನೇನೆಲೋ ಎಲೋ 3 ಪದವಿಯೊಳ್ಧ್ರುವನೇನೆಲೋ ಎಲೋ ನೀ ನಿಧಿಯೋಳ್ಕುಬೇರನೆಲೋ ಎಲೋ ಮದನನೆ ಪುರುಷರೋಳೆಲೋ ಎಲೋ ವರ ಮದದಿ ಕಶ್ಯಪನೇನೆಲೋ ಎಲೋ ಸದಮಲ ಕುಲದಲಿ ಗೌತಮ ಮುನಿಯೇ ನೀ ಕದನದಿ ಕುರುಪನೇನಲೋ ಎಲೋ 4 ನುಡಿವಲಿ ನರನೇನೆಲೋ ಎಲೋ ನೀ ಕೊಡುವಲಿ ಕರ್ಣನೇನೆಲೋ ಎಲೋ ಇಡುವಲಿ ಧರ್ಮನೇನಲೋ ಎಲೋ ನೀ ಕೆಡುಕಲಿ ಶಕುನಿಯೇನೆಲೋ ಎಲೋ ಕಡುಗಲಿತನದಲಿ ಕಲಿಭೀಮನೇ ಸಡಗರದಿಂದ್ರನೇನೆಲೋ ಎಲೋ 5 ಯುಕ್ತಿಲಿ ದ್ರೋಣನೇನೆಲೋ ಎಲೋ ನೀ ಶಕ್ತಿಲಿ ನಕುಲನೇನೆಲೋ ಎಲೋ ಭಕ್ತಿಲ್ವಿದುರನೇನೆಲೋ ಎಲೋ ನೀ ವೃತ್ತಿಲಿ ಸಹದೇನವನೇನೆಲೋ ಎಲೋ ಚಿತ್ತಶುದ್ಧಿಯಲಿ ವೀರ ಸುಧನ್ವನೆ ತೃಪ್ತಿಲಿ ಭೀಷ್ಮನೇನೆಲೋ ಎಲೋ 6 ದಿಟ್ಟರೋಳ್ಗರುಡನೇ ನೆಲೋ ಎಲೋ ನೀ ಶಿಷ್ಟರೋಳ್ಹನುಮನೇನೆಲೋ ಎಲೋ ಸೃಷ್ಟಿಯೋಳಾರನ್ಹೋಲ್ವೆಲೋ ಎಲೋ ನೀ ಭ್ರಷ್ಟನಾಗುವಿ ಯಾಕೆಲೋ ಎಲೋ ಬಿಟ್ಟುಗರ್ವಮಂ ಶಿಷ್ಟಶ್ರೀರಾಮನ ಮುಟ್ಟಿಭಜಿಸಿ ಉಳಿಯೆಲೋ ಎಲೋ 7
--------------
ರಾಮದಾಸರು
ಘಿಲ್ಲು ಘಿಲ್ಲೆನ್ನುತಲಿಘಮಕದಿಪಾಂಡವರುಫುಲ್ಲನಾಭನÀ ದಯಪಲ್ಲವನೋಡಿ ನಿಲ್ಲದಲೆ ಎಲ್ಲರೂ ಪ. ಸೂರಿ ಬಿಡವೋನೆ ದಯವನೆ1 ಸಲ್ಲು ಸಲ್ಲಿಗೆ ಲಕ್ಷ್ಮಿನಲ್ಲನ ಸ್ತುತಿಸುತಮಲ್ಲಿಗೆ ತುರುಬಿನಮಲ್ಲಿಗೆ ತುರುಬಿನ ಚಲುವಿಯರೆಲ್ಲ ಹೊರಡಲುಮಲ್ಲ ಮರ್ದನನ ಮನೆ ನೋಡ2 ಎಲ್ಲರು ಹೊರಡಲು ಹಲ್ಲಿ ಮಾತಾಡಿದವುಫುಲ್ಲನಾಭನ ದಯ ಚಲ್ಲುವುದೆನುತಲಿಫುಲ್ಲನಾಭನ ದಯ ಚಲ್ಲುವುದೆನುತಲಿವಾಲಿ ಗಂಟಿಟ್ಟ ನಕುಲನು3 ಅಂಗಳಕೆ ಬರುತಿರೆ ಮಂಗಳವಾದ್ಯಗಳಾದವುಹಂಗ ಹಾರಿದವು ಎಡಗಡೆಹಂಗ ಹಾರಿದವು ಎಡಗಡೆ ರಂಗಯ್ಯಆಲಿಂಗನವ ಕೊಡುವೋನು ನಿಜವೆಂದು 4 ತೇರಿನ ಬೀದಿಯ ದ್ವಾರದಿ ಬರುತಿರೆಕಾಗೆ ಹಾರಿದವು ಬಲಗಡೆ ಕಾಗೆ ಹಾರಿದವು ಬಲಗಡೆ ರುಕ್ಮಿಣಿಸೂರಿ ಬಿಡುವಳು ದಯವನ್ನೆ5 ರೂಢಿಗೊಡೆಯನ ಕೈಲಿ ನೀಡಿ ಮಂತ್ರಾಕ್ಷತೆನೋಡುವರು ದ್ವಿಜರು ದಯದಿಂದ ನೋಡುವರು ದ್ವಿಜರು ದಯದಿಂದ ಸತ್ಯಭಾಮಮಾಡುವಳು ಪರಮ ಕರುಣವ 6 ಅಕ್ಕಿ ತೆಂಗಿನಕಾಯಿ ಚಿಕ್ಕ ನಿಂಬೆ ಹಣ್ಣುಅಚ್ಚ ಮಲ್ಲಿಗೆ ಇದುರಿಗೆಅಚ್ಚ ಮಲ್ಲಿಗೆ ಇದುರಿಗೆ ರಮಿಯರಸುನಕ್ಕು ನುಡಿವನು ನಮಕೂಡ 7
--------------
ಗಲಗಲಿಅವ್ವನವರು
ಜನಕರಾಜನ ಸುತೆ ಜಾನಕಿ ಜೋ ಜೋ ಇನಕುಲತಿಲಕನರ್ಧಾಂಗಿಯೆ ಜೋ ಜೋ ಪ ಕುಂದಣ ಕೆತ್ತಿದ ಚಂದದ ತೊಟ್ಟಿಲ ಮಂದಗಮನೆಯರು ತಂದಿರಿಸಿದರು ಸುಂದರಾಂಗಿ ವೈದೇಹಿಯನೆತ್ತುವ ಆ- ನಂದದಿ ಜೋಗುಳ ಪಾಡ್ವರು ಜೋ ಜೋ 1 ರತ್ನ ಮುತ್ತುಗಳ ಕಿರೀಟವು ಹೊಳೆಯಲು ಮುತ್ತಿನ ತೊಡುಗೆಯಲಿ ರಂಜಿಸುವ ಸುಂದರಿಯ ಉತ್ತಮ ಸತಿಯರು ತೊಟ್ಟಿಲ ಪಿಡಿಯುತ ಅರ್ಥಿಯ ಜೋಗುಳ ಪಾಡ್ವರು ಜೋ ಜೋ2 ಕೌಸಲ್ಯದೇವಿಯ ಕಂದನ ರಮಣಿಯೆ ಕೌಶಿಕಯಜ್ಞದ ಪಾಲನಅರಸಿಯೆ ಹಂಸವಾಹನನ ಪಿತನ ಸತಿಯೆ ಖಳ ಧ್ವಂಸ ಮಾಡಿದ ರಘುರಾಮನರಸಿಯೆ 3 ಅಂಬುಜನಯನೆ ಪೀತಾಂಬರ ಶೋಭಿತ ಕಂಬುಕಂಠಿ ಕೋಕಿಲವಾಣಿ ಜೋ ಜೋ ತುಂಬುಗುರುಳ ಮುಖ ಕಮಲೆಯೆ ಜೋ ಜೋ ನಂಬಿದವರ ಕಾಯ್ವ ಕರುಣಿಯೆ ಜೋ ಜೋ4 ಕಮಲನಯನೆ ಕಮಲಾಲಯೆ ಜೋ ಜೋ ಕಮಲಗಂಧಿಯೆ ಕಮಲೋದ್ಭವೆ ಜೋ ಜೋ ಸತಿ ಜೋ ಜೋ ಕಮಲೆ ಹೃತ್ಕಮಲದಿ ವಾಸಿಸÀು ಜೋ ಜೋ5
--------------
ನಿಡಗುರುಕಿ ಜೀವೂಬಾಯಿ
ಜನನ ಮರಣ ಎರಡು ಇಲ್ಲವೊ ತಾ ತಿಳಿದ ಮೇಲೆ ಪ ಮನದೊಳಿರುವ ಮಮತೆ ಅಳಿದು ಘನವಿವೇಕವಾಗಿ ಕಾಣುವ ಇನಕುಲೇಶನನ್ನು ಬಿಡದೆಅನುರಾಗದೊಳು ಭಜಿಸಿದವಗೆ ಅ.ಪ ಆರುಮೂರು ಮೀರಿ ನೋಡೆಲೈ ಅಲ್ಲಿರುವ ತಾರಕದಾರಿ ಪ್ರಣವ ಸಾರುತಿದೆ ನೋಡೈ ಘೋರ ಕತ್ತಲೆಯನರಿದು ಮಾರಜನಕನನ್ನು ನೆನೆದು ಏರಿ ಶಿಖರದೊಳಗೆಯಿರುವ ತೇರು ಕಂಡುಬಂದಬಳಿಕ 1 ದಾನವಾರಿಯನ್ನು ಕಾಣೆಲೊ ಶ್ರೀಪರಮ ಚರಿತ ಗಾನಲೋಲನನ್ನು ಕಾಣೆಲೈ ಭಾನುಕೋಟಿರೂಪನಹುದು ಗುರುವು ತುಲಸಿರಾಮದಾಸ ದೀನರಕ್ಷಕನೆಂದು ಭಜನೆ ಮಾಡಿಕೊಂಡು ಬಂದಬಳಿಕ 2
--------------
ಚನ್ನಪಟ್ಟಣದ ಅಹೋಬಲದಾಸರು
ಜಯ ಮಂಗಳಂ ಮಹಾ ಶುಭಮಂಗಳಂ ಶ್ರೀಯಕರಾನಂದ ಘನಚಿನ್ಮೂರ್ತಿಗೆ ಪ ಅನಿಮಿಷಾಕ್ಷಗ ಧರಮಹೀಗ ಸಂಭೋದ್ಬವಗ ಮುನಿಪಟು ಕ್ಷತ್ರಿ ಕುಲಸಂಹಾರಗ ಇನಕುಲೋದ್ಭವ ವಾಸುದೇವಶ್ರೀ ಬೌದ್ಧಗ ಘನತರದ ತುರಗ ಹರರಾವುತಂಗೆ 1 ಮರಮತ್ಸ್ಯ ಶ್ರೀಕಮಠ ಹಿರಣ್ಯಕ್ಷಮರ್ಧನಗೆ ಕೊರಳೊನಮೂಲಿ ವಾಮನದೇವಗೆ ಧರಿ ಭೂಸುರಗಿತ್ತು ಧಾಶರಥಿ ಶ್ರೀ ಹರಿಗೆ ಸಿರಿದಿಂಗಬರ ಕಲ್ಕಿ ಯವತಾರಗೆ 2 ಕೂರ್ಮ ವರಾಹನರಸಿಂಹಗೆ ಅಗವೈರಿಯನುಜ ಪರಶುರಾಮಗ ರುಘುನಾಥ ಕೃಷ್ಣ ಬೌದ್ದೇಶಕಲಿನಾಶಗ ಜಗದ್ಗುರು ಮಹಿಪತಿ ಸುತಪ್ರಿಯಗೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯರಘುರಾಮಾ | ಸದ್ಗುಣ ಧಾಮಾ | ದಯದಾಗರ ಘನಶಾಮಾ ಪ ಜಯರಘರುರಾಮಾ | ಸದ್ಗುಣ ಧಾಮಾ ದಯದಾಗರ ಘನ ಶಾಮಾ | ಭಯಹರನೇಮಾ ರಣನಿಸ್ಸೀಮಾ | ತ್ರಯಂಬಕ ವಿಶ್ರಾಮಾ | ಪ್ರಿಯಕರ ನಾಮಾ ಪೂರಿತ ಕಾಮಾ | ಶ್ರಯಸುದಾಯಕ ಮಹಿಮಾ 1 ಸುರಸಹಕಾರ ಇನಕುಲೋದ್ದಾರಾ | ಧರಣೀಸುತೆ ಮನೋಹಾರಾ | ಶರಯುತೀರಾಯೋಧ್ಯ ವಿಹಾರಾ | ಚರಿತಪಾರಾ ವಾರಾ | ಪರಮೋದಾರಾ ಸರ್ವಾಧಾರಾ | ದುರತಾವಳಿವಿದಾರಾ 2 ವನರುಹಾಸನ ವಂದಿತಚರಣಾ | ಜನನಿ ಕೌಶಲ್ಯಾ ನಿಧಾನಾ | ಅಣುರೇಣು ಜೀವನಾ ವ್ಯಾಪಕಪೂರ್ಣ | ಕನಕಾಂಬರ ಭೂಷಣ | ಮುನಿಜನ ರಂಜನಾ ದೈತ್ಯವಿಭಂಜನಾ | ಮಹಿಪತಿ ನಂದನ ಪ್ರಾಣಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯಾ ಜಯಾ ಪ ಈ ಮುದ್ದುಮುಖವೊ ಮತ್ತೆ ತನುವಿನ ಕಾಂತಿ ಈ ಬಿಲ್ಲು ಈ ಬಾಣ ನಿಂತಭಾವ 1 ಬಂಟ ಈ ಭಾಗ್ಯ ಆವ ದೇವರಿಗುಂಟು ಮೂಲೋಕದೊಳಗೆ 2 ಜಯ ಇನಕುಲೋದ್ಧರಣ ಜಯ ಮುನಿಕೃತ ಶರಣ ಜಯ ದನುಜವಿದಾರಣ ಜಯ ತಮಹರಣ 3 ಧರೆಯೊಳತಿಭಾರವನು ಇಳುಹಿ ಕಮಲಜ ಮುಖ್ಯ ಸುರರ ಮೊರೆಯನು ಕೇಳ್ದು ನರರೂಪ ತಾಳ್ದು 4 ದಶರಥನ ಗರ್ಭದಲಿ ಜನಿಸಿ ಮುನ್ನ ಮುನಿ ಮನೋರಥ ಕಾಯಿದ ಪುಣ್ಯಚರಿತ್ರ5 ಅಸುರರನು ಅಳಿದು ಅಹಲ್ಯಳಿಗಿತ್ತ ವರವಿತ್ತು ಮಿಥಿಳ ಪುರದಿ ಹರನ ಧನುವನುರೆ ಮುರಿದು 6 ಅತುಳ ಬಲದಲಿ ಸೀತೆಯ ಒಲಿಸಿದ ಭಾರ್ಗವ ಮ- ಹಿತÀಳ ಬಲವಂತ ದೇವೋತ್ತುಂಗ ಜಯತು 7 ಭರದಿಂದಲಯೋಧ್ಯಾಪುರವನು ಶೃಂಗರಿಸೆ ಹರುಷತನದಲಿ ರಾಮಗರಸುತನವೆನಲು 8 ಕಿರಿಯ ಮಾತೆಯು ಬಂದು ಭರತನಿಗೆ ಪಟ್ಟವೆನೆ ಸಿರಿಸಹಿತ ಹೊರಹೊಂಟ ಕರುಣಾಳು ಜಯತು 9 ಅನುಜ ಅವನಿಜೆ ಸಹಿತ ವನವಾಸವ ಮಾಡಿ ವನಜಾಕ್ಷ ಪತಿಯಾಗೆಂದು ರಾಕ್ಷಸಿಯು ಬರಲು 10 ಅನುವಾಯಿತೆಂದು ನಾಸಿಕವ ಹರಿದು ಭಂಗಿಸಿದೆ ಬಿನುಗು ಹೊಮ್ಮøಗವೆಚ್ಚ ಘನಮಹಿಮ ಜಯತು 11 ಜಕ್ಕಿದ ವಾಲಿಯನು ಕೊಂದು ಕುಲಸೈನ್ಯ ಸಹವಾಗಿ ನಿಲ್ಲದೆ ಸೇತುವೆಗಟ್ಟಿ ಅಸುರರೊಡಗೂಡಿ 12 ಖುಲ್ಲ ದಾನವ ಕುಂಭಕರ್ಣ ರಣಮುಟ್ಟಿ ಎಲ್ಲರನು ತರಿದಂಥ ಬಲ್ಲಿದನೆ ಜಯತು 13 ದÉೀವಕ್ಕಳು ಹರುಷದಲ್ಲಿ ಪೂಮಳೆಗರೆಯೆ ಭೂಮಿಜೆಯ ಸಹಿತ ಸೌಮಿತ್ರಿಯೊಡಗೂಡಿ 14 ಕ್ಷೇಮದಿಂದಯೋಧ್ಯಪುರದಿ ಸುಖದಲ್ಲಿರ್ದ ಸ್ವಾಮಿ ಶ್ರೀಹಯವದನ ರಘುಕುಲತಿಲಕನಲ್ಲವೆ 15
--------------
ವಾದಿರಾಜ
ಜಾನಕಿರಾಮಾ ಸಾಮಜಪ್ರೇಮಾ ದಾನವಭೀಮಾ ಇನಕುಲಸೋಮಾ ಪ ಪಾವನನಾಮಾ ಜಗದಭಿರಾಮಾ ಸದ್ಗುಣಶ್ಶಾಮಾ ಅಂಬುದಶ್ಶಾಮಾ ಅ.ಪ ದಶರಥ ನಂದನ ಸುರಮುನಿಚಂದನ ಶರನಿಧಿ ಬಂಧನ ಶಶಿಸಮ ವದನಾ ಭಂಜನ ಜನಮನ ರಂಜನ ತ್ರಿಭುವನ ಪಾವನ ಮಾಂಗಿರಿಮೋಹನಾ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತಾಳಲ್ಲಲ್ಲಲ್ಲಲ್ಯೋ ಮಾಸಾಳಲ್ಲಲ್ಲಲ್ಲಲ್ಯೋ ಪ ಹೆಚ್ಚಿದ ತಮನೆಂಬ ದನುಜ ವೇದವ ಕದ್ದುಬಚ್ಚಿಟ್ಟು ನೀರೊಳು ಮುಳುಗಿರಲುಮಚ್ಚ ರೂಪದಿಂದ ಪೋಗಿ ಅವನ ಕೊಂದಅಚ್ಯುತರಾಯನೆಂಬ ಮಾಸಾಳಮ್ಮ1 ಕೂರ್ಮ ರೂಪಿನಿಂದೆತ್ತಿದ ಗೋ-ವಿಂದನೆಂಬುವ ಮಾಸಾಳಮ್ಮ2 ವರಾಹ ರೂಪಿ ಮಾಸಾಳಮ್ಮ 3 ಲೇಸು ತಪ್ಪಿದನೆಂದು ಹಿರಣ್ಯಕ ತನಯನಘಾಸಿ ಮಾಡಲು, ಕಂಬ ಒಡೆದುದಿಸಿರೋಷದಿ ದೈತ್ಯನ ಕರುಳ ಕಿತ್ತ ನರಕೇಸರಿ ರೂಪಿನ ಮಾಸಾಳಮ್ಮ 4 ಆ ಮಹಾಸಿರಿಯ ಗರ್ವದಿ ಮುಂದರಿಯದೆಭೂಮಿಯನು ಬಲಿ ತಾನಾಳುತಿರೆನೇಮಿಸಿ ಎರಡೇ ಹೆಜ್ಜೆಯೊಳಳಕೊಂಡವಾಮನ ರೂಪಿನ ಮಾಸಾಳಮ್ಮ 5 ಕಾಮಧೇನುವಿಗಾಗಿ ಕಾರ್ತವೀರ್ಯಾರ್ಜುನಆ ಮಹಾಮುನಿಯ ಪ್ರಾಣಕೆ ಮುನಿಯೆತಾಮಸವಿಲ್ಲದೆ ಕ್ಷತ್ರಿಯರ ಸಂಹರಿಸಿದರಾಮ ಭಾರ್ಗವನೆಂಬ ಮಾಸಾಳಮ್ಮ 6 ಜನಕ ಸುತೆಯನು ಕದ್ದೊಯ್ಯಲು ಲಂಕೆಗೆಗಣಿತಾತೀತ ಶರಧಿಯ ಕಟ್ಟಿಘನ ಕೋಪದಿ ದಶಿಶಿರನ ಕತ್ತರಿಸಿದಇನಕುಲ ರಾಮನೆಂಬ ಮಾಸಾಳಮ್ಮ 7 ದೇವಕಿ ಬಸುರೊಳು ಬಂದು ಗೋಕುಲದಿಆವ ಕಾವ ಗೊಲ್ಲರ ಸಲಹಿಮಾವನ ಕೊಂದು ಮತ್ತೈವರ ಸಲಹಿದದೇವ ಕೃಷ್ಣನೆಂಬ ಮಾಸಾಳಮ್ಮ8 ಪತಿವ್ರತೆಯರ ವ್ರತವಳಿಯಬೇಕೆನುತಲಿಅತಿಶಯದಿ ತ್ರಿಪುರದ ಸ್ತ್ರೀಯರನುತ ಬೌದ್ಧ ರೂಪದಿ ಬಹು ಭಂಗಪಡಿಸಿದರತಿಪತಿಪಿತನೆಂಬ ಮಾಸಾಳಮ್ಮ 9 ಖುಲ್ಲ ಮನುಜರನು ಕೊಲ್ಲಬೇಕೆನುತಲಿಭಲ್ಲೆ ಹಿಡಿದು ತುರಗವನೇರಿಅಲ್ಲಲ್ಲೆ ಸೊಲ್ಲಡಗಿಸಿ ವಲ್ಲಭನೆನಿಸಿದಬಲ್ಲಿದ ಕಲ್ಕಿಯೆಂಬ ಮಾಸಾಳಮ್ಮ 10 ಮಂಗಳ ಮಹಿಮ ಭುಜಂಗ ಶಯನ ಕಾ-ಳಿಂಗ ಮರ್ದನ ದೇವೋತ್ತುಂಗಅಂಗಜಪಿತ ನೆಲೆಯಾದಿಕೇಶವ ಅಂತ-ರಂಗದೊಳಿರುವ ಮಾಸಾಳಮ್ಮ 11
--------------
ಕನಕದಾಸ
ತೊಗಿರೆ ರಾಯರ ತೂಗಿರೆ ಗುರುಗಳ ತೂಗಿರೆ ಯತಿಕುಲ ತಿಲಕರ ಪ ತೂಗಿರೆ ಯೋಗೀಂದ್ರ ಕರಕಮಲ ಪೂಜ್ಯರ ತೂಗಿರೆ ಗುರುರಾಘವೇಂದ್ರರ ಅ.ಪ ಕುಂದಣಮಯವಾದ ಛಂದ ತೊಟ್ಟಿಲೊಳು ನಂದದಿ ಮಲಿಗ್ಯಾರ ತೂಗಿರೆ ನಂದನಂದನ ಗೋವಿಂದ ಮುಕುಂದನÀ ನಂದದಿ ಭಜಿಪರ ತೂಗಿರೆ 1 ಯೋಗನಿದ್ರೆಯನ್ನು ಬೇಗನೆಮಾಡುವ ಯೋಗೀಶ ವಂದ್ಯರ ತೂಗಿರೆ ಭೋಗಿಶಯನನಪಾದ ಯೋಗದಿ ಭಜಿಪರ ಭಾಗವತರನ ತೂಗಿರೆ 2 ನೇಮದಿ ತಮ್ಮನು ಕಾಮಿಪಜನರಿಗೆ ಕಾಮಿತ ಕೊಡುವರ ತೂಗಿರೆ ಪ್ರೇಮದಿ ನಿಜಜನರ ಆಮಯವನಕುಲ - ಧೂಮಕೇತೆನಿಪರ ತೂಗಿರೆ 3 ಅದ್ವೈತಮತದ ವಿಧ್ವಂಸನ ನಿಜ ಗುರು ಶುದ್ಧ ಸಂಕಲ್ಪದಿ ಬದ್ಧ ನಿಜಭಕ್ತರ ಉದ್ಧಾರಮಾಳ್ಪರ ತೂಗಿರೆ 4 ಭವ ತ್ಯಜನೆ ಮಾಡಿಸಿ ಅವರ ನಿಜಗತಿ ಇಪ್ಪರ ತೂಗಿರೆ ನಿಜಗುರು ಜಗನ್ನಾಥವಿಠಲನ್ನ ಪದಕಂಜ ಭಜನೆಯ ಮಾಳ್ಪರ ತೂಗಿರೆ 5
--------------
ಗುರುಜಗನ್ನಾಥದಾಸರು
ದೇವಾದಿದೇವನೇ ನಮೋ ನಮೋ ಪರವಾಸುದೇವನೇ ನಮೋ ನಮೋ ಪ. ನಿಗಮೋದ್ಧಾರನೇ ನಮೋ ನಮೋ ನಗಧರನೇ ನಮೋ ನಮೋ ಜಗತ್ಪತಿವರಾಹ ನಮೋ ನಮೋ 1 ನೃಪಂಚಮುಖಸ್ವರೂಪ ನಮೋ ನಮೋ ಕಪಟವಟುವಾಮನ ನಮೋ ನಮೋ ತಪನಕುಲತಿಲಕ ನಮೋ ನಮೋ 2 ನವನೀತಚೋರ ನಮೋ ನಮೋ ಭವಬಂಧಮೋಚನ ನಮೋ ನಮೋ ನವಮೋಹನಾಂಗ ನಮೋ ವಸುದೇವತನಯ ನಮೋ ನಮೋ 3 ಬುದ್ಧ ಸ್ವರೂಪ ನಮೋ ನಮೋ ಸಿದ್ಧಸಂಕಲ್ಪ ನಮೋ ನಮೋ ಚಿದ್ವಿಲಾಸ ನಮೋ ನಮೋ 4 ಸತ್ಯಕಾಮ ವೈಕುಂಠಧಾಮ ನಮೋ ನಮೋ ನಿತ್ಯತೃಪ್ತ ನಿರ್ಮಲಾತ್ಮ ನಮೋ ನಮೋ ಸತ್ಯಭಾಮಾರಮಾ ನಮೋ ನಮೋ 5
--------------
ನಂಜನಗೂಡು ತಿರುಮಲಾಂಬಾ
ನಂಬಿ ತುತಿಸಿರೋ ರಾಘವೇಂದ್ರ ಧ್ವರಿಯಾ ಸನ್ಮುನಿ ಕುಲವರಿಯಾ ಪ ಅಂಬುಜನಾಭನಿಗತಿ ಪ್ರೀಯಾ ಸಜ್ಜನರಿಗೆ ಸಹಾಯ ಅ.ಪ ಕನಕಶಯ್ಯನ ತನುಜನಾಗಿ ಜನಿಸಿ ನರಹರಿಯನ್ನೆ ಒಲಿಸಿ ಅನುಜರಿಗನುದಿನ ತತ್ತ್ವವ ತಾಕಲಿಸಿ ಮನದಲಿ ಶ್ರೀಹರಿ ಪದವನ್ನೇ ಭಜಿಸಿ ವರ ಕರುಣವನೇ ಸಲಿಸಿ ವನಜಭವಾಂಡದಿ ಬಹು ಬಲ್ಲಿದನೆನಿಪ ನತಜನರಿಗೆ ಸುರÀ 1 ಕಾಮಧೇನು ಸುರತರುವಿಗೆ ಸಮನೀತ ಕಾಮಿತ ಫಲ ದಾತಾ ರಾಮ ನರಹರಿ ಕೃಷ್ಣರ ಪದ ದೂತ ಲೋಕದಿ ಬಹು ಖ್ಯಾತ ಕಾಮಿನಿ ಸುತ ಧನ ಧಾನ್ಯದ ವ್ರಾತ ನೀಡುವೊನತಿ ಪ್ರೀತ ಪ್ರೇಮದಿ ನಿಜಜನಸ್ತೋಮಕೆ ಬಹು ದಾತ ಯತಿವರ ಕುಲನಾಥ 2 ಪಾತಕವನಕುಲ ವೀತಿಹೋತ್ರನೆನಿಸಿ ಭೂತಪ್ರೇತ ಮಹ ಭೀತಿಯನೇ ಬಿಡಿಸಿ ರೋಗವಪರಿಹರಿಸಿ ಮಾತಪಿತರ ತೆರ ದೂತರ ರಕ್ಷಿಸಿ ಮನೋಚಿಂತೆಯನೆ ಬಿಡಿಸಿ ದಾತಗುರುಜಗನ್ನಾಥವಿಠÀಲ ಪದದೂತ ದಾತ 3
--------------
ಗುರುಜಗನ್ನಾಥದಾಸರು
ನಮಗೆಲ್ಲಿ ಮನೆಗಳಯ್ಯ ನಾರಾಯಣ ಪ ಕಮಲ ಬ್ರಹ್ಮಾಂಡ ಕೋಟಿ ಒಡಲೊಳು ತಾಳ್ದಂಥರಮಾಧವ ನಿಮಗೆ ನೀರೊಳಗೆ ವಾಸವಾಯಿತುಅ ಜಲನಿಧಿಯನುತ್ತರಿಸಿ ಲಂಕೆಯನೈವುದಕೆಕುಲಗಿರಿಯ ಕಿತ್ತು ತಂದು ಸೇತುವೆ ಕಟ್ಟಿಸಲೆ ದೈತ್ಯನ ಕೊಂದು ಸೀತೆಯ ತಂದನಿಗೆ ಗಿರಿತಲೆಯ ಮೇಲೆ ಇಹ ಪ್ರಾಪ್ತಿಯಾಯಿತು 1 ಪೃಥ್ವಿಯ ತಲೆಯನು ಪರೆಮಾಡಿ ತಾಳಿದಳುತ್ಯಾನಮಮ್ಮನ ತಂದೆಯ ಮೆಲುವನಮೃತ್ಯುನಾಶಕನೆಂದು ಸುತ್ತಿದ್ದಾನೆಹುತ್ತಿನೊಳಗೆ ಇಹ ಪ್ರಾಪ್ತಿಯಾಯಿತು 2 ನಾಡದೇವತೆಗಳ ಸೆರೆಗಳ ಬಿಡಿಸಿಕ್ರೀಡೆಯಾಯಿತು ನಿಮ್ಮ ದಯದಿಂದಲಿರೂಢಿಯೊಳತಿ ಸೇವಕನಾದ ಗರುಡನಿಗೆಬೋಡು ಮರದ ಮೇಲೆ ಇಹ ಪ್ರಾಪ್ತಿಯಾಯಿತು 3 ಜಲನಿಧಿ ಸುತನ ಮೊಮ್ಮಗನ ಕೊಂದ ಶೂರ ನಕುಲ ಸಹದೇವ ಪಾಂಡವರೈವರುಲಲನೆ ದ್ರೌಪದಿಯೊಂದಿಗೆ ವನವಾಸ ಹೋಗಿಹೊಲದೊಳಗೆ ಇಹ ಪ್ರಾಪ್ತಿಯಾಯಿತು4 ಇಂಥಿಂಥವರಿಗೆಲ್ಲ ಮನೆಯಿಲ್ಲದಿರಲು ನ-ನ್ನಂಥವನಿಗಿನ್ನೆಲ್ಲಿ ಇರಲು ಸಾಧ್ಯಕಂತುಪಿತ ಕಾಗಿನೆಲೆಯಾದಿಕೇಶವನೆ ನಿ-ಶ್ಚಿಂತನಾಗಿ ನಿಮ್ಮ ಗುಡಿಯಲಿಪ್ಪೆನು 5
--------------
ಕನಕದಾಸ
ನಿನ್ನೊಳಗಿರಿಸೆನ್ನ ಚಿತ್ತ ಚೆಲ್ವ ಪನ್ನಗಶಯನ ಶ್ರೀ ಆದಿರಂಗಯ್ಯ ಪ ಪರನನ್ನೊಳಗೆ ನಾ ಕಂಡು ನಿನ್ನೊಳಗೆ ನಾನೈಕ್ಯ ಇನ್ನೆಂದಿಗಾಗುವುದೊ ಇನಕುಲದ ಮಣಿಯೆ 1 ಎಂಟಾರರೊಳಗೆನ್ನ ಅಂಟಲೆಸಗೊಡಬೇಡ ಭಂಟನಾಗಿರು ವೈಕುಂಠನಾಯಕನೆ 2 ಕಾಕುಲದ ಕತ್ತಲೆಗೆ ನೂಕದಿರು ನೀಯೆನ್ನ ಏಕನಾಯಕನೆ ಕೇಳಿದು ಸತ್ಯಸಿದ್ಧಂ 3 ದೇಶಿಕಾಯೇನಮಃ ದಾಸನಗಿರುತಿರುವೆ ದೋಷರಹಿತಾಗುರುವು ಶ್ರೀತುಲಶಿರಾಮಾ 4
--------------
ಚನ್ನಪಟ್ಟಣದ ಅಹೋಬಲದಾಸರು