ಒಟ್ಟು 33 ಕಡೆಗಳಲ್ಲಿ , 18 ದಾಸರು , 31 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೆಡಗು ಅಗಮ್ಯವಿದು ಶ್ರೀ ಗುರುವಿನ ಬೆಡಗು ಅಗಮ್ಯವಿದು ಧ್ರುವ ಶೂನ್ಯಾಕಾರದ ಬಾಲೆ ಗಗನವ ಹಡೆದಳು ಏನೆಂದ್ಹೇಳಲಿ ಸೋಜಿಗೆ ಘನಲೀಲೆಯು 1 ವ್ಯೋಮಸುಂದರಿ ಜನಿಸಿದಳು ಮಾರುತನ ಭೀಮ ಪರಾಕ್ರಮನ ನೇಮದಿಂದಲಿ 2 ನಿಜ ವಾಯುಕುಮಾರಿ ಜನಿಸಿದಳು ತಾನೊಂದು ತೇಜ:ಪುಂಜದ ರೂಪವ ಮೂಜಗದೊಳು 3 ಥಳಥಳಿಸುವ ತೇಜದ ಖನಿಯು ಹಡೆದಳು ಜಲಮಯದ ರೂಪವ ನಲಿದಾಡುವ 4 ನಿರಾಕಾರದ ಕೂಸು ಭೂಮಿ ಹಡೆದುದ ಕಂಡು ಬೆರಗಾದ ಮೂಢ ಮಹಿಪತಿಯ ಗುರುಜ್ಞಾನದ 5 ಬೆಡಗು ತೋರಿದ ಗುರು ಒಡಿಯ ಸರ್ವೋತ್ಮನು ಪೊಡವಿಯೊಳೊಂದು ಸೋಜಿಗ ಗೂಢವಾಗಿಹ 6 ಕೌತುಕವನು ಕಂಡು ಕೈ ಮುಗಿದು ಮಹಿಪತಿ ತ್ರಾಹಿ ತ್ರಾಹಿ ತ್ರಾಹಿಯೆಂದ ಮನದೊಳಿನ್ನು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭಾರತೀ ಪತಿನುತ ವಿಠಲ ನೀನಿವಳ ಉದ್ಧಾರ ಮಾಡುವುದು ಹರಿಯೇ ಪ ತಾರಕನು ನಿನಗನ್ಯ ಉಂಟೇ ಈರೇಳು ಲೋಕದಲಿ ಧೊರೆಯೇ ಅ.ಪ. ಜನ್ಮಜನ್ಮದಲಿ ಬಲುನೊಂದು ಸತ್ಪುಣ್ಯಗಳನೇ ಮಾಡಿಜನ್ಮಪೊಂದುತಲಿ ಸತ್ಕುಲದಿ ಸನ್ಮತದವನ ಕೈಯ ಪಿಡಿದು |ಸನ್ಮಧ್ವಮತ ದೀಕ್ಷೆಗಳ - ಒಮ್ಮನದಿ ತಾಳುತ್ತನಿಮ್ಮಡಿಯ ನಾಶ್ರಯಿಸಿ ಬಂದಿಹಳ ಸಲಹುವುದು 1 ತರತಮ ಜ್ಞಾನದಲಿ - ಉರುತರೋತ್ಸುಕತೆಯನುನಿರತ ಹರಿಗುರುಗಳಲಿ ಉರುತರದ ಭಕ್ತಿಯನೂ |ಹಿರಿಯರನು ವಿನಯದಿಂ ಪರಿಚರಿಪ ಮತಿಯನ್ನುಕರುಣಿಸೀ ಸಲಹಯ್ಯ ಮರುತಾಂತರಾತ್ಮಾ 2 ಪಂಚಭೇಧದ ಜ್ಞಾನ ಸಂಚಿಂತನೆಯನೇ ಕೊಟ್ಟುಮಿಂಚಿನಂದದಿ ತೋರೊ - ಹೃತ್ಪಂಕಜನಲೀಅಂಚೆವಹಪಿತ ನಿನ್ನ ಪದಕಮಲ ಭಜಿಪಳಿಗೆವಾಂಛಿತಾರ್ಥದನಾಗಿ - ಸಲಹ ಬೇಕಿವಳಾ 3 ಪತಿ ನೀನೆ ಎಂಬಂಥಮತಿಯಿತ್ತು ಭವಗಳನ ಉತ್ತರಿಸು ಹರಿಯೇ 4 ನಿನ್ನ ಪದ ಕಮಲದಲಿ ಜ್ಞಾನಭಕುತಿಗಳಿತ್ತುನನ್ನೆ ಯಿಂದಿವಳ ಚೆನ್ನಾಗಿ ಸಲಹೊ ಹರಿಯೇ |ಸನ್ನುತಿಸಿ ಪ್ರಾರ್ಥಿಸುವೆ - ಮನ್ನಿಸೆನ ಬಿನ್ನಪವಘನ್ನ ಮಹಿಮನೆ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಮಾನಾಗ, ಉರಿಯು ಹೆಣ್ಣು ಹೈಕಳ ಕೂಡೆಶ್ರೀನಾಥ ನಿನಗೆ ಸಲ್ಲದು ಮಕ್ಕಳಾಟ ಪ ತರಳ ನೀನೆಮ್ಮ ಸೀರೆಗಳನೆತ್ತಿಕೊಂಡುತರುವನೇರುತ ಕಕ್ಕಳ ಕೆಳೆವೆತರುವಳಿತನ ಸಾಕು ನಿನ್ನ ಪೇರುರದಲಿತರುಣಿ ನಗುತಾಳೆ ಪೊಕ್ಕಾಟ ಸಾಕು 1 ಅರಸಿನ ಮಗನೆಂದು ತಾಳಿದೆವಲ್ಲದೆಸರಸಿಜಾಕ್ಷಿಯ ಮನೆಯ ಮಳಲಲ್ಲಿಸರಸದೊಳಿಹರೆ ನಿನ್ನಂಗದೊಳಿರ್ದಸುರರೋಡಬೇಕು ಸಲ್ಲದು ಮಕ್ಕಳಾಟ2 ಬೊಮ್ಮ ನಿನ್ನುದರದ ಜಗನಿನ್ನ ಅಂಗದೊಳಿದ್ದ ಸುರಮುನಿಗಳುನಿನ್ನನೆ ನಗುವರೊ ನೀನರಿಯದೆ ಎಮ್ಮಚೆನ್ನ ಹೆದ್ದಾಟ ಹೊಕ್ಕಾಟ ಸಾಕು 3 ಕಾಲ ಪೆಂಡೆಯುಹೊಸ ಹೊಸ ಚೆನ್ನಿಗ ಪರಿಹಾಸ ಸಾಕೋ4 ತುತಿಸಿ ತುತಿಸಿ ಕಾಣರು ಬ್ರಹ್ಮರುದ್ರರುಮತಿಗೊಳಗಾಗೆ ಮುನೀಶ್ವರರಶ್ರುತಿಗಳು ನಿನ್ನನು ಪುಡುಕಲರಿಯವು ಬಾಲಸತಿಯರೊಡನೆ ಖೇಳಮೇಳವೆ ಸಾಕು 5 ಸ್ನಾನಮಾಡಲೀಯೆ ಮೌನಗೌರಿಯನೋನಲೀಯದೆ ಮೌನವ ಕೆಡೆಸಿಧ್ಯಾನ ಮಾಡಲೀಯೆ, ನಿನ್ನ ಚೆನ್ನಿಗರುಹಾನಿ ನೀಗುವರು ಎಂಬುದರಿಯೆವೊ 6 ಚೆಲುವರರಸ ಶಿಖರ ಶಿಖಾಮಣಿಯೆಲಲನೆಯರ ಮನ ಸೂರೆಗಾರಫಲಿಸಿತು ವ್ರತ ನಮ್ಮ ಕೃಷ್ಣ ನಿನ್ನೊಲುಮೆಯಬಲೆಗೆ ಸಿಕ್ಕದರಾರೊ ಸೊಬಗು ಸುಗ್ಗುಳಿಯೇ7
--------------
ವ್ಯಾಸರಾಯರು
ರಾಮಚಂದ್ರ ರಘುವೀರಾ ನಮೋ ನಮೋ ಪ ಶ್ಯಾಮಾಂಗ ಸುಕುಮಾರಾ ನಮೋ ನಮೋ ಕಾಮಿತಾರ್ಥದಾತಾರಾ ನಮೋ ನಮೋ ಓಂಕಾರ ಅ.ಪ ವಸಿಷ್ಟಾದಿಮುನಿ ತೋಷಿತ ನಮೋ ನಮೋ ನಿಶಚರೇಭ ಕುಲಕಾಲಾ ನಮೋ ನಮೋ ಶ್ರೀ ಬಾಲಾ 1 ನೀತಿಸುಗುಣಯುತಶೀಲಾ ನಮೋ ನಮೋ ಘನಲೀಲಾ 2 ಮಾರೀಚಾಂತಕ ವೀರಾ ನಮೋ ನಮೋ ಶ್ರೀಕಾರಾ 3 ಖ್ಯಾತ ಮೃದುವಾಕ್ ದೀಪ್ತಾ ನಮೋ ನಮೋ ಸಂತೃಪ್ತಾ4 ಪರಮ ಪುಣ್ಯಚರಿತ್ರಾ ನಮೋ ನಮೋ ಶ್ರೀಗಾತ್ರಾ 5 ಅರಿಕುಲ ನಾಶಕ ರಂಗಾ ನಮೋ ನಮೋ ಶ್ರೀರಂಗ 6 ದೇವ ದಿವಿಜನುತ ನಮೋ ನಮೋ ಶ್ರೀರಾಮಾ 7 ನಿತ್ಯ ಮುಕ್ತ ವನಮಾಲಾ ನಮೋ ನಮೋ ಭೂಪಾಲಾ8 ಮಾಂಗಿರೀಶ ಮಾಲಿಂಗಾ ನಮೋ ನಮೋ ಶ್ರೀರಂಗ 9
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವನಜನಾಭನ ಅಡಿಯು ಮನುಜಾನೀಪತಿಯು ಪ ಅನುದಿನದೊಳೈತಂದು ಘನಸಿಂಧುಶಯನನು ಮಿಂದು ದ್ವಾದಶಿಯೊಳಿಂದು ಸನುಮತದಿಯರ್ಪಿಸಿದ ಎಡೆಯನು ಘನತರದ ಸಂಭ್ರಮದಿ ಭುಂಜಿಸಿ ಜನಿಸಿ ಭಕುತಿಯನೆನ್ನ ಮನದಿ ಪ್ರ- ಸನ್ನನಾದನು ಎನಿತು ಪೇಳಲಿ 1 ರಕ್ಕಸರಿಗತಿ ವೈರಿ ಮಿಕ್ಕಾನತರ ಸಹಕಾರಿ ಶ್ರೀಹರಿ ಮುರಾರಿ ತಕ್ಕ ವಿಜಯಗೆ ಸಾರಥ್ಯಾಗಿ ಇಕ್ಕರಿಸಿ ಕುರುಪತೀಯನನ್ವಯ ಅಕ್ಕರದಿ ದ್ರುಪದಸುತೆಯ ಸಲಹಿ ರುಕ್ಮಿಣೀಶನು ರಕ್ಷಿಪನು ಸಲೆ 2 ಕರಿವರದ ಶಿರಿಲೋಲಾ ಪರಮಾತ್ಮ ಶ್ರೀಘನಲೀಲಾ ಜರರಹಿತ ವಿಮಲಾ ನಿರುತದೀಪರಿ ಸ್ಮರಿಪ ನರನಿಗೆ ಕರುಣಸಾಗರನಾಗಿ ಸುರವರ ತ್ವರಿತದೀವನು ಹರಸಿ ವರಗಳ ಹರಗೊಲಿದ ನರಸಿಂಹವಿಠಲಾ 3
--------------
ನರಸಿಂಹವಿಠಲರು
ಶುದ್ಧ ಸನ್ಮಾರ್ಗ ಸರ್ವರಿಗಿದು ಒಂದೆ ಬುದ್ಧಿವಂತರು ತಿಳಿದರು ಇದರಿಂದೆ 1 ಇದರಿಂದೇವೆಂಬುದು ನಿರ್ವಾಣ ಒದರುತಲಿಹುದು ವೇದಪುರಾಣ 2 ಪುರಾಣ ಪುಣ್ಯದ ಹಾದಿಯು ನಿಜ ಸುರಮುನಿಗಳಿಗಿದು ಹೊಳೆವದು ಸಹಜ 3 ಸಹಜಾನಂದದ ಸುಖಸಾಗರ ಬಾಹ್ಯಾಂತ್ರ ಸದೋತಿತ ಸಹಕಾರ 4 ಸಹಕಾರವು ಚಿನ್ಮಯ ಚಿದ್ರೂಪ ಸೋಹ್ಯದೋರುವ ಶ್ರೀ ಗುರುಸ್ವರೂಪ 5 ಸ್ವರೂಪವೆ ಸದ್ಗೈಸುವ ಹಾದಿ ಪರಮ ವೈಷ್ಣವರ ಮೂಲಾಗ್ರದ ಆದಿ 6 ಅಧಿವೆಂಬುದು ನಿಜನಿರ್ಧಾರ ಸಾಧಿಸುದವರಿಗೆ ಸಾಕ್ಷಾತಾರ 7 ಸಾಕ್ಷಾತ್ಕಾರವೆ ಮೋಕ್ಷದಮನೆಯು ಅಕ್ಷಯ ಪದ ಅದ್ವೈತದ ಖಣಿಯ 8 ಅದ್ವೈತವೆ ಆಧ್ಮಾತ್ಮ ಸುವಿದ್ಯ ಸಿದ್ದಸಾಧಕರಿಗೆ ಆಗುವ ಸಾಧ್ಯ 9 ಸಾಧ್ಯವೆಂಬುದು ನಿಜಸಿದ್ಧಾಂತ ಭೇದಿಸಿದವರಿಗೆ ಇದು ಸನ್ಮತ 10 ಸನ್ಮತವೆ ಮತ ಸರ್ವರಿಗೆಲ್ಲ ಉನ್ಮನಲೀಹ ಮಹಾಯೋಗಿಯು ಬಲ್ಲ 11 ಬಲ್ಲೆವೆಂಬುದು ಬಲು ಅಗಾಧ ಸೊಲ್ಲಿಗೆ ಸಿಲುಕದು ಗುರುನಿಜಭೋದ 12 ಬೋಧವೆ ಸದ್ಗುರುವಿನ ದಯಕರುಣ ಸದ್ಗತಿಸುಖ ಸಾಧನದ ಸ್ಫುರಣ 13 ಸ್ಫುರಣವೆ ಬ್ರಹ್ಮಾನಂದದ ಹರುಷ ತರಣೋಪಾಯದ ಮಹಾ ಉಪದೇಶ 14 ಉಪದೇಶವೆ ನಿಜ ಉಪನಿಷದ್ವಾಕ್ಯ ಒಪ್ಪಿಡುವದು ಭೂಸ್ವರ್ಗತ್ರೈಲೋಕ್ಯ 15 ತ್ರೈಲೋಕ್ಯಕೆ ಇದು ನಿಜನಿಧಾನ ಭಯವಿಲ್ಲದ ಮಹಾಸುಖಸಾಧನ 16 ಸಾಧನದಿಂದ ಸದ್ಗತಿ ಸಂಪೂರ್ಣ ಸಾಧು ಸಜ್ಜನರಿಗೆ ಸಕಲಾಭರಣ 17 ಸಕಲಾಭರಣ ಸದ್ಗುರು ನಿಜ ಅಭಯವು ಶುಕಾದಿ ಮುನಿಗು ಕೂಡಿದ ಪ್ರಭೆಯು 18 ಪ್ರಭೆಗಾಣಲು ತೋರದು ನೆಲೆನಿಭವು ನಿಭವೆ ಮಹಾಮಂಗಳಕರ ಶುಭವು 19 ಶುಭದೋರುದು ಸದ್ಗುರು ಕೃಪೆಯಿಂದ ಭ್ರಮೆಹಾರಿತು ಮಾಯೆ ಇದರಿಂದ 20 ಇದರಿಂದೆ ಇದರಿಟ್ಟಿತು ಪುಣ್ಯ ಒದಗಿ ಕೈಗೂಡಿತು ಬಂತು ತಾರ್ಕಣ್ಯ 21 ತಾರ್ಕಣ್ಯವು ಬಂತೆನ್ನೊಳು ಪೂರ್ಣ ಸರ್ಕನೆ ದೊರೆಯಿತು ಸದ್ಗುರುಖೂನ 22 ಖೂನವೆ ಎನ್ನೊಳಗಾಯಿತು ಧ್ಯಾನ ಘನಸುಖದೋರುವ ಅನುಸಂಧಾನ 23 ಅನುಕೂಲಾದ ನಮ್ಮಯ್ಯ ಪ್ರಸಿದ್ಧ 24 ಪ್ರಸಿದ್ಧವೆ ಪ್ರತ್ಯಕ್ಷ ಪ್ರಮಾಣ ಭಾಸುತಿಹುದು ಶ್ರೀಗುರು ಶ್ರೀಚರಣ 25 ಶ್ರೀಚರಣಕೆ ಎರಗಿಹ ಮಹಿಪತಿಯು ಸೂಚನೆ ಮಾತ್ರ ಕೊಂಡಾಡಿದ ಸ್ತುತಿಯು 26
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶ್ರೀಪತಿಕೇಶವ ಒಲೀ ಒಲೀ ಪ ಸನ್ನುತ ಗೋಪೀನಂದನ ನಲೀ ನಲೀ ಅ.ಪ ನಳಿನನಾಭ ಮಾಂಗಿರಿಪತಿಯೆನ್ನಯ ಕೊಳೆಯಾವರಣವ ಸುಲೀ ಸುಲೀ || 1 ವಂದಿಸುವಗಾನಂದವನೀಯಲು ನೊಂದಿಹ ಭಕ್ತರ ಬಂಧನ ನೀಗಲು ನಿಂದು ನಲಿದು ನೀ ಕುಣೀ ಕುಣೀ 2 ಪಾಡಿಪೊಗಳಿ ಕೊಂಡಾಡುವರೆಡೆಯೊಳು | ದಯ ಬೇಡಿದ ವರಗಳ ನೀಡುತೆ ಭಕ್ತರು ಮಾಡಿದ ಪಾಪವ ಸೆಣೀ ಸೆಣೀ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸಣ್ಣವನೆ ಘನಲೀಲಾ|ಗೋಪಿ|ಸಣ್ಣವನೆ ಘನಲೀಲಾ ಪ ಶಿಶುವೆಂದು ಪೂತನಿ ಮೊಲೆಯನು ಕೊಟ್ಟರೆ| ಕಾಲ ಗೋಪಿ 1 ಚರಣವ ಕಟ್ಟಲು ಒರಳೆಳೆದೊಯ್ದಾ| ಮರಗಳ ಕೆಡಹಿದ ಬಾಲ2 ತಂದೆ ಮಹಿಪತಿ ಪ್ರಭು ನರನೆಂಬರೆ| ಪತಿ ಗೋಪಾಲಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸರಸಿಜನೇತ್ರ ನಿನ್ನಲೀಗ ಸ್ಮರಿಸುವೆ ಬೇಗದಿ ಬಾ ಪ ಸಿರಿ ಪಂಕಜಪೀಠರ ಸ್ತೋತ್ರವನು ಸರಸಾಗಿ ನೀ ಪರಿಗ್ರಹಿಸಿ ಇರುತಿರ್ಪ ಹರೇ 1 ಮುರಲೀಧರ ಶ್ರೀ ಅರಿಪಂಕಜವ ಕರದೊಳಗೆ ತಿರುಗಿಸುತ ವರಗಾನಿಸುವಾ 2 ಮರುಛ್ರೀಕರು ಈ ತರುವಾಗಿಹರು ಚರಣವ ಚರಣವ ಶ್ರೀ ನರಹರಿಯ ನೆರೆ ಚೀಪುತಲಿ * 3
--------------
ಪ್ರದ್ಯುಮ್ನತೀರ್ಥರು
ಸಾಧಿಸಿದೇ ಖೂನ ಸದಾಸದ್ಗುರು ಕೃಪೆ ಜ್ಞಾನ ಛೇದಿಸಲನುಮಾನ ಶೋಧಿಸ್ಯನುದಿನ ಭೇದಿಸಿ ನೋಡಿ ಸದೋದಿತಾತ್ಮಙÁ್ಞನ 1 ಹೇಳಿ ಕುಡುವದಲ್ಲ ಕೇಳಿ ಕೊಂಬುವುದಲ್ಲ ಹೇಳುವ ಮಾತಿನೊಳಿಲ್ಲ ಕೇಳುವ ಕಿವಿಯೊಳಿಲ್ಲ ತಿಳಿವಿನೊಳಿಹ ನಿಜಗುಟ್ಟು ತಿಳಿದವಬಲ್ಲ 2 ಸೋಹ್ಯ ಸೂತ್ರದ ಖೂನ ದೇಹಾತೀತನು ಬಲ್ಲನೆ ಪೂರ್ಣ ಗುಹ್ಯ ಗೊಪ್ಪದ ಧನ ಮಹಾನುಭವದ ಸ್ಥಾನ ಮಹಿಪತಿ ಮನೋನ್ಮನಲೀಯ ನಿಧಾನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
್ರೀಶಾಯ ನಮ:ಓಂ ರಮೇಶಾಯ ನಮ ಈಶಾಯ ನಮ:ಜಗದೀಶಾಯ ನಮ: ಸುರೇಶಾಯ ನಮ: ಪ ಭೂಧವ ನಮ:ಓಂ ಯಾದವ ನಮ: ಮಾಧವ ನಮ:ಮಧುಸೂದನ ನಮ:ಭವಭೇದ ನಮ: 1 ಅಚ್ಯುತ ನಮ:ಓಂ ಸಚ್ಚಿತ್ತ ನಮ: ಅಚ್ಯುತಾನಂತ ನಮ:ಮತ್ಸ್ಯಾವತರ ನಮ:ಇಚ್ಛಜಪಿತ ನಮ: 2 ತನುಶೀಲ ನಮ:ಓಂ ವನಮಾಲ ನಮ: ಘನಲೀಲ ನಮ:ಸುಜನಪಾಲ ನಮ:ಕುಜನಕಾಲ ನಮ: 3 ನರಹರಿ ನಮ:ಓಂ ಸಿರಿದೊರಿ ನಮ: ಶೌರಿ ನಮ: 4 ನುತಪ್ರೇಮ ನಮ:ಓಂ ಪಿತಕಾಮ ನಮ: ಸುಖಧಾಮ ನಮ:ಭಕ್ತ ಮುಕ್ತಿ ಸೋಮ ನಮ: ಓಂ ಶ್ರೀರಾಮ ನಮ: 5
--------------
ರಾಮದಾಸರು
ಅಂದುಂಟಿಂದಿಲ್ಲೇಮಾಧವನಿನ್ನ |ಹೊಂದಿದವರ ಭಯ ಕಳೆದು ಪೊರೆವ ದಯೆ ಪಶಂತನು ಭೂಪನರಸಿ ಬಳಲಿ |ಕಂತುಜನಕನೀ ಗತಿಯೆನಲೀ ||ಅಂತರಿಸದೆ ವಿಧವೆರಲಾಕ್ಷಣಸಂತತಿ ನೆಲಸಿದೆ ಮನ್ನಿಸುತಾ ದಯ 1ಕಲಿಯಾಳಿಕೆ ಬಹಳಾಗಿರಲು |ಮಲಿನಯುಕ್ತ ಧರೆಯಾಗಿರಲು ||ತಿಳಿದ ಹದಿನೆಂಟು ಪುರಾಣವ ವಿರಚಿಸಿ |ಸಲಹಿದೆಯುತ್ತಮ ಜೀವರನಾ ದಯೆ 2ತಿಳಿಯದೆ ನಿನ್ನೊಲುಮೆಯವಗೆಂದು |ನಳಿನಾನುಜ ನೀ ಬೇಕೆಂದು ||ಕೊಳಲರಿದರ ಕರದಿತ್ತಾರಣದೊಳು |ಗೆಲಿಸಿದೆ ತೋಂಡನ ಮುದದಿಂದಾ ದಯೆ 3ಪಾದಜಲರಸರ ಬದುಕಿಸಿತು |ಪಾದಪೆಸರೇ ಪತಿತನ ಕಾಯ್ತು ||ಪಾದದಮುಂದು ಕುಬೇರಜರೀರ್ವರ |ಪಾದವೇ ಸದ್ಗತಿಗೈದಿಸಿತಾ ದಯ 4ಆ ಸೈಂಧವನಳಿದರ್ಜುನನ |ಪೋಷಿಸಿದಂತೆ ಮೃತಾತ್ಮಜನಾ ||ಭೂಸರಗಿತ್ತಂತೀ ವಿಪ್ರರ ಪ್ರಾ |ಣೇಶ ವಿಠ್ಠಲ ರಕ್ಷಿಸಬೇಕಾ ದಯೆ 5
--------------
ಪ್ರಾಣೇಶದಾಸರು
ಒಲಿಯಯ್ಯಾ ರಂಗ ಒಲಿಯಯ್ಯಾನೆಲೆಗಾಣದಭವಜಲದೊಳು ಮುಳುಗುವೆಪ.ಮಾಯದ ಕೈಯಲಿ ಮೇಲೆ ಮೇಲೆ ಸುತ್ತಿಆಯಾಸಬಡುತಿದೆ ಪ್ರಾಣದಾತಬಾಯೆತ್ತಿ ಗೋವಿಂದ ಹರಿಯೆನ್ನಲೀಸದುಕಾಯೊ ದಯಾಳು ಕರಿವರದ ಕೃಷ್ಣ 1ಮನ ನೀರಾನೆಯ ಕಟ್ಟಿನೊಳಗೆ ಸಿಕ್ಕಿಕ್ಷಣ ಕ್ಷಣ ದೈನ್ಯದಿ ಒರಲುತಿದೆತನತನಗೆಳೆದು ದಣಿಸುವ ಇಂದ್ರಿಯ ಜಂತುಮುನಿಸೇವ್ಯ ನಿನ್ನೂಳಿಗಕ್ಕೆ ದೂರಾದೆ ಕೃಷ್ಣ 2ಬುದ್ಧಿ ತಪ್ಪಿದವಗೆ ಅಬದ್ಧ ನಡೆವವಗೆಶುದ್ಧ ಕಾರಣ ದಿವ್ಯನಾಮವಲ್ಲವೆಉದ್ಧರಿಸು ಬೇಗ ಪ್ರಸನ್ವ್ವೆಂಕಟ ಕೃಷ್ಣತಿದ್ದಿಟ್ಟುಕೊಳ್ಳೊ ನಿನ್ನವಗೆ ನಿರ್ಣಯ ನೀನೆ 3
--------------
ಪ್ರಸನ್ನವೆಂಕಟದಾಸರು
ಕರವೊಡ್ಡಿ ಬೇಡುವೆನು ಕಮಲದಳನೇತ್ರಕರುಣದಲಿ ಸಲಹೆನ್ನ ಕಾಮಹರ ಮಿತ್ರ ಪಕಾಯದಲಿ ಬಲವಿಲ್ಲ ಕಂಗಳಿಗೆ ಸುಖವಿಲ್ಲಕೈಯ್ಯೊಳಗೆ ಹಣವಿಲ್ಲ ಬಾಯಬಲವಿಲ್ಲಕಾಯವಿದು ನೀನಿಟ್ಟ ಮಾಯಪಾಶಕೆ ಸಿಕ್ಕಿಹೇಯವಾದುದು ಸಲಹೋ ಹೇ ಲಕ್ಷ್ಮೀರಮಣ 1ಕಾಲನಾಳುಗಳೆಮ್ಮ ಕಾಲಕೈಗಳಕಟ್ಟಿಕಾಲದಂಡದಿ ಬಡಿದು ಕಾಲನೆಡೆಗೈದೂಕಾಲಮೇಘದ ತೆರದಿ ಕಾಲನಂತೆ ಘರ್ಜಿಸುವಕಾಲದಲಿ ಕಾಯ್ವವರ ಕಾಣೆ ನಾಳಿನಲೀ 2ಕರಿರಾಜನನು ಕಾಯ್ದೆ ಕಂಬದಲಿ ಮೈತೋರ್ದೆಖರ ದೂಷಣ ನಿನ್ನ ಕರದಿ ಶಿರ ವರಿದೀಕರುಣದಿಂದಲಿ ದ್ರೌಪದಿಯ ಸೆರಗಿಗಕ್ಷಯವಿತ್ತೆಕರವಿಡಿದು ಸಲಹೆನ್ನ ಕಲುಶ ಸಂಹಾರಾ 3ಕಂದನಪರಾಧವನು ತಂದೆ ಕ್ಷಮಿಸುವ ತೆರದಿಕಂದುಕುಂದುಗಳೆನ್ನೊಳಿರಲು ನೀ ಕ್ಷಮಿಸಿಕಂದನಂದದಿ ನೋಡಿಕಂದರ್ಪಜನಕನೆಚಂದದಲಿ ಸಲಹೊ ಗೋವಿಂದದಾಸನನೂ 4
--------------
ಗೋವಿಂದದಾಸ
ಪಾಲಿಸಯ್ಯಾ ಫಣಿಗಿರಿವಾಸಜೀಯಾ ಪ.ಪಾಲಿಸೈ ಪಾಲಾಬ್ಧಿಶಾಯಿ ಸುಳೀನೀರದನಿಭಶರೀರ ಶ್ರೀಲೋಲಮೋಹನಲೀಲದುರ್ಜನಕಾಲಕಾಮಿತಫಲಪ್ರದಾಯಕಅ.ಪ.ಮುನ್ನ ಮಾಡಿದ ಕರ್ಮದಿಂದಲಿ ಬನ್ನಪಟ್ಟೆನು ಶ್ರೀಹರಿಇನ್ನು ನಿನ್ನಯ ಚರಣಯುಗವನು ನಿರ್ಣಯದಿ ನಂಬಿದಪರಿಉನ್ನತೋನ್ನತವಪ್ಪ ತೆರದಲಿ ಮನ್ನಿಪುದು ನೀ ಕೃಪೆದೋರಿಬನ್ನಪಡುವುದು ಸಾಕು ಸಂತತ ನಿನ್ನನೆ ನೆರೆನಂಬಿದೆನುಹರಿ1ವಾತಪಿತ್ತಕಫಾದಿ ರೋಗದ ವ್ರಾತದಿಂದ ಬಲು ನೊಂದೆನುಧಾತುಬಲವತಿ ತಗ್ಗಿ ಉಷ್ಣೋಪೇತದಿಂದಲಿ ಬೆಂದೆನುಚಾತುರ್ಥಿಕ ಜ್ವರಾತಿಶಯದಲಿ ಶೀತಸ್ಥಾನದಿ ನಿಂದೆನುಈ ತೆರದ ಕಷ್ಟಗಳು ಬಾರದ ರೀತಿಯಲಿ ಪರಿಹರಿಸು ಸಂತತ 2ನಿನ್ನನೆ ಮರೆಹೋಗುವ ತೆರದಲಿ ನಿನ್ನ ಸ್ಮರಣೆಯ ಮಾಡುವನಿನ್ನ ಭಕ್ತರ ಮೇಳದಲಿ ಸಂಪನ್ನನಾಗುತ ಕೂಡುವನಿನ್ನ ಮೂರ್ತಿಯ ನೊಡುವದು ಮತ್ತೆನ್ನ ಕಾಮಿತ ಬೇಡುವನಿನ್ನನೇ ಧ್ಯಾನಿಸುವ ಮತಿಸಂಪನ್ನವನು ನೀನಿತ್ತು ಕರುಣದಿ 3ವೀರ ವೈಷ್ಣವ ಮಾರ್ಗದೊಳು ಸಂಚಾರ ಮಾಡುವ ತೆರದಲಿಮಾರುತಿಯ ಚರಣಾರವಿಂದದದಿ ಸೇರಿ ನಿನ್ನನು ಧರೆಯಲಿಭೂರಿಮಹಿಮೆಯ ವರ್ಣಿಸುವ ಸಾಕಾರ ಮತಿಯನು ಎನ್ನಲಿಪ್ರೇರಿಸುತ ಕರುಣಾರಸಾಮೃತ ಬೀರಿ ಭೀತಿಯ ಪರಿಹರಿಸುತ್ತಲಿ4ಕೊಂಚ ಧನವನು ಕೊಟ್ಟು ಎನಗೆ ಪ್ರಪಂಚವಹಗೃಹಗೈದಿಸಿಮುಂಚೆಮಾಡಿದ ಪಾಪವನು ನಿರ್ಲಚದಿಂದಲೆ ಛೇದಿಸಿವಂಚಿಸುವ ಬಂಧುಗಳ ಮನವನುಮಿಂಚಿಯೆನ್ನೊಳು ಮೋದಿಸಿಪಂಚಬಾಣನ ಪಿತನೆ ಮಂಗಳ ವಾಂಛಿತವನೆನಗಿತ್ತು ವಿಭವದಿ 5ಕಷ್ಟದಲಿ ನಿನ್ನ ಧ್ಯಾನ ಬಾರದು ತುಷ್ಟಿಯಲಿ ನಾ ಧ್ಯಾನಿಪೆಇಷ್ಟವೇ ನೀನಿತ್ತೆಯಾದರೆ ಕಷ್ಟಗಳ ನಾ ದೂಷಿಪೆಶ್ರೇಷ್ಠ ಕಾರ್ಕಳ ಪುರದಿ ಭಕ್ತರ ಒಟ್ಟುಗೂಡುತ ತೋಷಿಪೆಭ್ರಷ್ಟಲೋಭದ ಬಂಧುಗಳು ಎನ್ನೊಳಿಷ್ಟವಾಗುವ ತೆರದಿ ದ್ರವ್ಯವ6ಕಾಲಭೈರವ ಪೇಳಿದಂದದಿ ನಾಲಿಗೆಯೊಳು ತಪ್ಪು ನೋಡದೆಪಾಲಿಸುತ ಇಷ್ಟಾರ್ಥವನು ಕೈ ಮೇಳವಿಸು ತಪ್ಪು ನೋಡದೆನೀಲಗಿರಿ ಸಮನಾಗಿ ಕಾರ್ಕಳದಾಲಯವ ನೀ ಮಾಡಿದೆಲೋಲಲಕ್ಷ್ಮೀನಾರಾಯಣಾಶ್ರಿತಪಾಲಪಡುತಿರುಪತಿ ಪುರೇಶನೆ 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ