ಒಟ್ಟು 21 ಕಡೆಗಳಲ್ಲಿ , 14 ದಾಸರು , 21 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಿಶೇಷ ಸಂದರ್ಭದ ಹಾಡು ಶ್ರೀ ವರದೇಂದ್ರಾಖ್ಯಾನ ಉತ್ಸವ ವರ್ಣನೆ 39 ಇರುಳುಹಗಲು ತವಸ್ಮರಿಸುತಲಿಹ ಭಕು - ತರಿಗಿಹ ಪರಸುಖಸುರಿಸುವ ಶ್ರೀ ಗುರು ಪ ಲಿಂಗಸುಗುರುನಿವಾಸ ಭಕ್ತ ಜಂಗುಳಿ ದುರಿತವಿನಾಶ ಮಂಗಳ ಚರಿತ ಮೌನೀಶ ವಿಹಂಗವಾಹನ ನಿಜದಾಸ 1 ಸಿರಿ ವಸುಧಿಜಾಪತಿ ಪದದೂತ ವಸುಧಿಯೊಳಗೆ ವಿಖ್ಯಾತ ಸುಮನಸರ ಸುವಂಶಜನೀತ 2 ಸುದರುಶನ ಮಾಲಾ ಕಲುಷ ನಿರ್ಮೂಲಾ 3 ವಾಯುಮತಾಬ್ಧಿವಿಹಾರಾ ಕಾಷಾಯ ಕಮಂಡಲಧಾರಾ ಮಾಯಿ ಜಲಜ ಚಂದಿರ ಗುರುರಾಯರ ಮಹಿಮೆಯಪಾರಾ 4 ಪಂಡಿತಮಂಡಲಭೇಶ ಪಾಖಂಡಿಮತೋರುಗವೀಶ ಕುಲಿಶ ತನ್ನ ತೊಂಡನೆಂದವರಘನಾಶ 5 ತಿಮಿರ ತರಣಿಯೊ ಕನಳನೀ ಮುನಿಯೋ 6 ಸುರನದಿಪತಿಯೊ ಧೈರ್ಯದಿ ಭೂಭತ್ಪತಿಯೊ ಚಾತುರ್ಯದಿ ವರಬ್ರಹ್ಮಸ್ಪøತಿಯೊ 7 ದಾನದಿರವಿಜನೆನಿಪನು ಸುವಿಧಾನದಿ ಕ್ಷಿತಿಯ ಪೋಲುವನು ಮೌನದಿ ಶುಕಮುನಿವರನು ಅಸಮಾನಯೋಗಿ ಎನಿಸುವನು 8 ಹರಿಸ್ಮರಣಿಯಲಿರುತಿರುವ ನರಹರಿನಿಂದಿಪ ಮತತರಿವ ಹರಿಪನೆಂಬರೆ ಪೊರೆವ ಶ್ರೀ ಹರಿಯಿವರಗಲದಲಿರುವ9 ಪ್ರಾಣೇಶ ದಾಸರೆನಿಪರು ಶ್ರೀ ಶ್ರೀನಿವಾಸನ ವಲಿಸಿಹರು ಜ್ಞಾನಿಗಳಿಗೆಅತಿ ಪ್ರೀಯರು ಅಸಮಾನದಾಸರೆನಿಸುವರು 10 ವರಕÀವಿ ಶ್ರೀ ಜಗನ್ನಾಥಾರ್ಯರ ಕರುಣ ಪಡೆದನವರತ ಧರಣಿಯೊಳಗೆ ವಿಖ್ಯಾತ ನರಹರಿ ಯಸ್ಮರಿಸುತಿಹ ನಿರುತ 11 ಹಿಂದಿನಸುಕೃತದಿ ಫಲದಿ ವರದೆಂದ್ರಾರ್ಯರು ವಂದಿನದಿ ಚಂದದಿ ದಾಸಗೃಹದಿ ನಡೆತಂದರು ಬಹುಸಂಭ್ರಮದಿ12 ಬಿನ್ನೈಸಿದ ಭಕುತಿಂದ ಮುನಿಮಾನ್ಯದರುಶನದಿಂದ ಧನ್ಯಧನ್ಯನಾನೆಂದ ಪಾವನ್ನವಾಯ್ತು ಕುಲವೆಂದ 13 ದಾಸಾರ್ಯರ ಭಕುತಿಯನು ನಿರ್ದೋಷವಾದ ಙÁ್ಞನವನು ತೋಷಬಡುತ ಮುನಿವರನು 14 ಶ್ರೇಷ್ಠನಾದಯತಿವರನು ಉತ್ಕøಷ್ಟವಾದಸ್ಥಳವನ್ನು ನಮಗೆನುತಿಹನು15 ದೇಶಕರಿಂಗಿತವರಿದು ವರದಾಸಾರ್ಯರು ಕೈಮುಗಿದು ಈ ಶರೀರತಮ್ಮದೆಂದು ಮಧ್ವೇಶಾರ್ಪಣವೆಂತೆಂದು 16 ತಪ್ಪದೆ ಸರ್ವದೇಶದಲಿ ತಾಕಪ್ಪವ ಕೊಳುತಲ್ಲಲ್ಲಿ 17 ಸಿರಿ ನಿಲಯನಂಘ್ರಿ ಸ್ಮರಿಸುತಲಿ ಕಳೇವರ ತ್ಯಜಿಸಿದರಲ್ಲಿ ಆಬಳಿಕ ಲಿಂಗಸುಗೂರಲ್ಲಿ 18 ತುಲಸಿ ವೃಕ್ಷರೂಪದಲ್ಲಿ ಇಲ್ಲಿನೆಲೆಸಿಹವೆಂದು ಸ್ವಪ್ನದಲಿ ಗಂಜಿಯ ಮರಡಿಯಲಿ ಇದ್ದಶಿಲೆ ತರಿಸೆಂದು ಪೇಳುತಲಿ 19 ಬಣವಿಯ ತ್ವರ ತೆಗೆಸುತಲಿ ತರುಮನುಜನಸರಿನೋಡುತಲಿ ಮುನಿ ವಚನವನಂಬುತಲಿ ಶಿಲೆಯನು ತಂದಿರಿಸಿದರಿಲ್ಲಿ 20 ಪುರುದಲಾಗಯಿರುತಿಹನು ತ್ವರದಿಂದಲಿ ಕಳುಹಿದನು ನರಹರಿ ಸಾಲಿಗ್ರಾಮವನು 21 ವರಪುಣ್ಯ ಕ್ಷೇತ್ರದಲಿಂದ ಮುನಿವರ ತಾನಿಲ್ಲಿಗೆ ಬಂz ಶರಣರ ಪಾಲಿಪೆನೆಂದ ಸುಖಗರೆಯುತ ಅಲ್ಲಿಯೆ ನಿಂದ 22 ಸುಂದರಪಾದುಕೆಗಳನು ಪುಣೆಯಿಂದಿಲ್ಲಿಗೆ ತರಿಸಿದನು ವಂದಿಸುವವರ ಘಗಳನ್ನು ತ್ವರದಿಂದ ತರಿದು ಪೊರೆಯುವನು 23 ದಾಸಕುಲಾಗ್ರಣಿಯನಿಪ ಪ್ರಾಣೇಶ ಕರಾರ್ಚಿತ ಮುನಿಪ ದೇಶಿಕ ವರರೆಂದೆನಿಪ ರಘುಜೇಶ ಪದಾಂಬುಜ ಮಧುಪ 24 ವೃಂದಾವನದಿ ನಿಂದಿರುವ ರಾಘವೇಂದ್ರರ ಧ್ಯಾನದಲಿರುವ ಅಂದಣೇರಿ ತಾಮೆರೆವ ಭಕ್ತವೃಂದವ ಕಾದುಕೊಂಡಿರುವ 25 ಪ್ರತಿಗುರುವಾಸರದಲ್ಲಿ ಜನತತಿ ಸಂಭ್ರಮದಿಂದಿಲ್ಲಿ ಮಿತಿಯಿಲ್ಲದೆ ಭಕುತಿಯಲಿ ನಲಿಯುತ ವಾಲ್ಗೈಸುವರಿಲ್ಲಿ 26 ಪ್ರತಿ ಪ್ರತಿ ವತ್ಸರದಲ್ಲಿ ಗ್ರೀಷ್ಮಋತು ಆಷಾಢಮಾಸದಲ್ಲಿ ತಿಥಿ ಷಷ್ಟಿಯ ದಿವಸದಲಿ ದ್ವಿಜತತಿ ಸುಭೋಜನ ವಿಲ್ಲಿ 27 ಮರುದಿವಸದ ಸಂಭ್ರಮವು ಶ್ರಿಂಗರಿಸಿದ ರಥದುತ್ಸವವು ಪರಿಪರಿ ಜಸಂದಣಿಯು ಇದು ವರಣಿಪುದಕೆ ದುಸ್ತರವು 28 ಯತಿವರ ಪರಮಾನಂದದಿಂದ ರಥವೇರಿ ಬರುವದು ಚಂದ ಅತಿಹರುಷದಿ ಜನವೃಂದಗುರು ಸ್ತುತಿಮಾಳ್ಪದು ಮುದದಿಂದ 29 ಝಾಂಗಟಿ ದಮ್ಮುಡಿಯು ಕಾಲುಗೆಜ್ಜೆಕಟ್ಟಿದಡಿಯುದಿವ್ಯ ಮೇಲು ಸರದ ಪದನುಡಿಯು 30 ಭೇರಿ ಭಜಂತ್ರಿ ತುತ್ತೂರಿಗಂಭೀರದಿ ಹೊಡೆವನಗಾರಿ ಅಂಬರ ಮೀರಿ 31 ಪರಿ ಪರಿಧೂಪಗಳು ಫಲÀಗಳನೈವೇದ್ಯಗಳು ಮಂಗಳ ಕರ್ಪೂರ ದೀಪಗಳು 32 ಥಳಿಪ ಪತಾಕಿ ಬೆತ್ತಗಳು ಮಿಗಿಲು 33 ಸಂತಜನರ ಜಯಘೋಷ ಅತ್ಯಂತ ಮನಕೆ ಸಂತೋಷ ಕುಣಿಯುತಿಹ ಶೀಶ 34 ಕಂತುಪಿತನದಯದಿಂದ ಇಲ್ಲಿ ನಿಂತಿಹ ಸುರರಾನಂದ ಎಂತೊರಣಿಪೆ ಮತಿಮಂದ ದುರಂತ ನಿಮ್ಮಯ ಗುಣವೃಂದ 35 ಸುವಿನಯದಿಂದ ನಮಿಸುವರು ಭಯವನು, ಈಡಾಡುವರು ತಮ್ಮಬಯಕೆ ಪೂರೈಸಿಕೊಳ್ಳುವರು 36 ಜ್ವರಛಳಿ ವ್ಯಾಧಿ ಪೀಡಿತರು ಮತ್ತುರಗವೃಶ್ಚಿಕದಂಶಿಕರು ಕುಂಟರು ಬಧಿರÀರು 37 ಪರಿಪರಿಗ್ರಹಪೀಡಿತರು ಬಹುಪರಿ ಶುಭಕಾಮಿಪ ಜನರು ಪೊರೈಸಿಕೊಂಬುವರು 38 ಸಾಷ್ಟಾಂಗದಿ ವಂದಿಪರು ಅಭಿಷ್ಟೇಯ ಪಡೆದುಕೊಳ್ಳುವರು ಕಷ್ಟಗಳನು ನೀಗುವರು ಸಂತುಷ್ಟರಾಗಿ ತೆರಳುವರು 39 ಇದುಪುಣ್ಯಕ್ಷೇತ್ರ ವೆನಿಸಿತು ಶ್ರೀಪದುಮೇಶಗಾವಾಸಾಯ್ತು ಮುದದಿಂದನಲಿಯುವರಾಂತು 40 ಈಸುಪದ ಪೇಳ್ವನೆಧನ್ಯ ಜಗದೀಶನ ತುತಿಸಿದ ಪುಣ್ಯ ದೇಶಿಕಪತಿ ಮುನಿಮಾನ್ಯ ವರದೇಶ ವಿಠಲಾಗ್ರಗಣ್ಯ 41
--------------
ವರದೇಶವಿಠಲ
ಶೇಷ ಪರ್ಯಂಕ ಶಯನ ವಿಷಯದಭಿ ಲಾಷೆ ಪರಿಹರಿಸಿ ಕಾಯೋ ಪ ರೆನದೆ ಮನೆಮನೆ ತಿರುಗಿದೆ ಅನಿಮಿಷೋತ್ತಂಸ ನಿನ್ನ ಪಾದವೊಂ ದಿನ ಭಜಿಸಿದವನಲ್ಲವೋ 1 ಹರಿ ಗುರುಗಳನು ನಿಂದಿಪ ನೀಚರನು ಸರಿಸಿ ಅವರನು ಸ್ತುತಿಸಿದೆ ಪೊರೆಯಲೋಸುಗ ಉದರವ - ಜನರಿಂದ ಹರಿದಾಸನೆನಿಸಿಕೊಂಡೆ 2 ಭಗವಂತ ನಿನ್ನ ಗುಣವ ವರ್ಣಿಸದೆ ಭಗವತಿಯರವಯವಗಳಾ ಸೊಗಸಿನಿಂದಲಿ ವರ್ಣಿಸಿ ಎನ್ನ ನಾ ಲಗೆ ಎರಡು ಮಾಡಿಕೊಂಡೆ 3 ಸರ್ವಪ್ರಕಾರದಲ್ಲಿ ಹಗಲಿರುಳು ದುರ್ವಿಷಯಕೊಳಗಾದೆನೋ ಶರ್ವಾದಿ ವಂದ್ಯ ಚರಣಾ ನೀನೊಲಿ ದುರ್ವಿಯೊಳು ಸಲಹ ಬೇಕು 4 ಉಪರಾಗ ಪರ್ವಗಳಲಿ ಸ್ನಾನ ಜಪ ತಪ ಅನುಷ್ಠಾನ ಜರಿದು ನೃಪರ ಮಂದಿರವ ಕಾಯ್ದು ಧನವ ತಂ ದುಪ ಜೀವಿಸಿದೆನೊ ಜೀಯಾ 5 ವೇದ ಶಾಸ್ತ್ರಾರ್ಥಗಳನು ತಿಳಿದು ಸ ನ್ಮೋದ ಬಡದಲೆ ಕುಶಾಸ್ತ್ರ ಓದಿ ಪಂಡಿತನೆನಿಸಿದೆ ಕೀರ್ತಿ ಸಂ ಪಾದಿಸಿದೆ ವ್ಯರ್ಥ ಬಾಳಿದೇ 6 ವೈರಾಗ್ಯ ಪುಟ್ಟಲಿಲ್ಲ ಘೋರ ಸಂ ಸಾರದೊಳು ಮಗ್ನನಾದೆ ಸೂರಿಗಳ ಮಧ್ಯದಲ್ಲಿ ಬುಧನಂತೆ ತೋರುವೆನು ನೋಳ್ಪ ಜನಕೆ 7 ನಾ ಮಾಡ್ದ ಪಾಪರಾಶಿ ಎಣಿಸಲ್ಕೆ ತಾಮರಸಭವಗಸದಳ ಸ್ವಾಮಿ ಎನಗೇನು ಗತಿಯೋ ಭಾರವಾದೆ ಈ ಮಹಿಗೆ ಪ್ರತಿದಿನದಲೀ 8 ಭೂತ ಸಂಬಂಧದಿಂದ ಬಹುವಿಧದ ಪಾತಕವೆ ಸಮನಿಸಿದವೋ ದಾತೃನೀ ಕಡೆ ಗೈದಿಸೋ ಭವದಿ ಜಗ ನ್ನಾಥ ವಿಠ್ಠಲ ಕೃಪಾಳೋ 9
--------------
ಜಗನ್ನಾಥದಾಸರು
ಸಾರಿದ ಡಂಗುರ ಯಮನು ಪ ಅಘ ನಾರೇರ ಎಳತಂದು ನರಕದಲ್ಲಿಡಿರೆಂದು ಅ.ಪ. ಹೊತ್ತಾರೆ ಎದ್ದು ಪತಿಗೆ ಎರಗದವಳ ಮೃತ್ತಿಕೆ ಶೌಚ ಮಾಡದೆ ಇಪ್ಪಳಾ ಬೆತ್ತಲೆ ಕುಳಿತು ಮೈದೊಳೆವಳ ನಾದಿನಿ ಅತ್ತೆ ಮಾವನ ಬೈವವಳೆಳೆದು ತನ್ನೀರೆಂದು 1 ತಿಲಕಾಯುಧವ ಬಿಟ್ಟು ಕುಂಕುಮವಿಡುವಳ ಬೆಳಗಾದ ಕಾಲಕ್ಕೂ ಮಲಗಿಪ್ಪಳ ಮಲಿನ ವಸ್ತ್ರದಲಿ ಪತಿಯ ಬಳಿಗೆ ಪೋಗುವಳ ಕಲಹಕಾರಿಯ ಹಿಡಿದೆಳೆದು ತನ್ನಿರಿಯೆಂದು 2 ಉತ್ತಮ ಗುರುಹಿರಿಯರನು ನಿಂದಿಸುವಳ ಪೆತ್ತ ಮಕ್ಕಳ ಮಾರಿ ಬದುಕುವಳ ಪ್ರತ್ಯೇಕ ಶಯ್ಯದಿ ಮಲಗಿ ಇಪ್ಪಳ ಪಿಡಿ ದೆತ್ತ ಎಳೆದು ತಂದು ನರಕದಲ್ಲಿಡಿರೆಂದು 3 ಜಲ ಜಕ್ಕಿ ಸಾಳಿ ಕಂಬಳಿ ಬೋಳಿ ಬಕ್ಕಿ ಗೊಂ ಡಳಿ ಮೊದಲಾದವು ದೈವವೆಂದು ತಿಳಿದು ಪಿಶಾಚಿ ಎಂಜಲ ಉಂಡು ಹಿಗ್ಗುವ ಲಲನೇರಾ ಸೆಳೆದು ತನ್ನಿರೋ ಎಂದು 4 ನಾಗೇಂದ್ರ ಶಯನನ ದಿನದುಪವಾಸದ ಜಾಗರ ಮಾಡದೆ ಮಲಗಿಪ್ಪಳಾ ಭಾಗವತ ಸಚ್ಛಾಸ್ತ್ರ ಕೇಳದೆ ಉನ್ಮತ್ತ ಳಾಗಿರುವಳ ಎಳೆದು ತನ್ನಿರೆಂದು 5 ಗಂಡ ನಿರ್ಧನಿಕನೆಂದಪಮಾನ ಮಾಳ್ಪಳ ಉಂಡ ಶೇಷಾನ್ನುವನುಣಿಸುವಳಾ ಕೊಂಡೆ ಮಾತುಗಳಾಡಿ ಕಳವಳಗೊಳಿಪಳ ಮಂಡೆಗೊದಲು ಹಿಡಿದು ಎಳೆದು ತನ್ನಿರಿ ಎಂದು6 ಉಡಲಿಲ್ಲ ಉಣಲಿಲ್ಲ ಇಡಲಿಲ್ಲ ತೊಡಲಿಲ್ಲ ಸುಡಲಿಗಂಡನ ಒಗೆತನವೆನ್ನುತಾ ಹಡೆದವರನು ನುಡಿನುಡಿಗೆ ಬಯ್ಯುತಿಪ್ಪಂಥ ಕಡು ಪಾಪಿಗಳ ಹೆಡ ಮುಡಿಗಟ್ಟಿ ತನ್ನಿರಿ ಎಂದು7 ಸಾಲೆಡೆಯಲಿ ಭೇದ ಮಾಡಿ ಬಡಿಸುವಳ ನೀಲಾಂಬರವನುಟ್ಟು ಮಡಿಯೆಂಬಳ ಬಾಲಕರ ಬಡಿದಳಿಸುತಿಪ್ಪಳ ಹಿಂ ಗಾಲ ತೊಳೆಯದವಳ ಎಳೆದು ತನ್ನಿರೋ ಎಂದು8 ಪತಿಗೆ ಬೇಕಾದವರ ಅಪಮಾನ ಮಾಳ್ಪಳ ಮೃತವತ್ಸ ಗೋವಿನ ಪಾಲುಂಬಳಾ ಹುತವಾದ ಅಗ್ನಿ ತೊಳೆದು ನಂದಿಸುವಳ ಮತಿಗೇಡಿಯ ಬಿಡದೆಳೆದು ತನ್ನಿರೋ ಎಂದು 9 ಒಲಿವ ಔಷಧ ಮಾಡಿ ಪತಿಯ ಬಳಲಿಸುವಳ ಮಲಮಕ್ಕಳೊಳು ಮತ್ಸರಿಸುತಿಪ್ಪಳಾ ಕಳವಿಲಿ ಕಾಂತನ ಧನವ ವಂಚಿಸುವಳ ಗಳಕೆ ಪಾಶವ ಕಟ್ಟ ಎಳೆದು ತನ್ನಿರೋ ಎಂದು 10 ಮಿಥ್ಯಾವಾದಿಯ ಕೂಡ ಸ್ನೇಹ ಮಾಳ್ಪಳಾ ವೃತ್ತಿಲಿ ಬದುಕುವಳೆಳೆದು ತನ್ನಿರೋ ಎಂದು 11 ಲಶನು ವೃಂತಕಾದಿಗಳನು ಭಕ್ಷಿಸುವಳಾ ಸೊಸೆಯರೊಡನೆ ಮತ್ಸರಿಸುತಿಪ್ಪಳಾ ಹಸಿದು ಬಂದವರಿಗೆ ಅಶನವಿಲ್ಲೆಂಬಳಾ ಉಸಿರು ಬಿಡದಂತೆ ಎಳೆದು ತನ್ನಿರೊ ಎಂದು 12 ತುಲಸಿ ವೃಂದಾವನಕಭಿನಮಿಸದವಳ ಜಲವ ಸೋಸದೆ ಪಾನವ ಮಾಳ್ಪಳಾ ಫಲ ಧಾನ್ಯಾದಿಗಳ ನೋಡದೆ ಪಾಕ ಮಾಳ್ಪಳ ಮಳೆ ಗಾಳಿ ನಿಂದಿಪಳ ಎಳೆದು ತನ್ನಿರೋ ಎಂದ 13 ಮೀಸಲು ಮಡಿ ಎನ್ನದೆ ಭಕ್ಷಿಸುವಳ ಕೇಶಿಯೊಡನೆ ಗೆಳೆತನ ಮಾಳ್ಪಳ ದಾಸೆರಿಂದಲಿ ಪಾಕ ಪಾತ್ರೆ ಮುಟ್ಟಿಸುವಳ ನಾಸಿಕ ಬಂಧಿಸಿ ಎಳೆ ತನ್ನಿರೋ 14 ಬಾಲಕರನು ತೊಟ್ಟ್ಟಿಲೊಳಿಟ್ಟು ತೂಗುತ ಪಾಲೆರೆವುತ ಬೀಸುತ ಕಟ್ಟುತಾ ಆಲಯದೊಳು ಕೆಲಸಗಳ ಮಾಡುತ ಲಕ್ಷ್ಮೀ ಲೋಲನ ಗುಣವ ಪಾಡುವರ ಮುಟ್ಟದಿರೆಂದು15 ಅರಿಷಣ ಕುಂಕುಮ ಪುಷ್ಟಾಂಜನ ವಸ್ತ್ರಾ ಸರಸವಾಡುತ ಸುಖ ಹರಿಗೆ ಅರ್ಪಿತವೆಂಬ ಹರಿದ್ದೇರಿದೆಡೆಗೆ ಕೈಮುಗಿದು ಬನ್ನಿರಿ ಎಂದು16 ಅಗಣಿತ ಮಹಿಮ ಶ್ರೀ ಜಗನ್ನಾಥ ವಿಠಲನ್ನ ಬಗೆಬಗೆಯಿಂದ ಪಾಡುತಲೀ ಹೊಗಳುವ ದಾಸರ ಬಗೆಯ ನೇಮಿಸಿ ಕಾಯ್ವ ಸುಗುಣೇರಿದ್ದೆಡೆಗೆ ಕೈಮುಗಿದು ಬನ್ನಿರೆಂದು 17
--------------
ಜಗನ್ನಾಥದಾಸರು
ಸಂಸಾರ ನಂಬುವೆಯ ಹೆಡ್ಡ ಈಸಂಸಾರವಿಹುದು ಮುಕ್ತಿಗೆ ಅಡ್ಡಪಮನೆಯು ಎಂಬುದುವಸ್ತಿ ಮಳಿಗೆಸತಿತನಯಹೋಹರು ಹಾದಿಗಳಿಗೆಎನಿತು ಮಮತೆ ಇದರೊಳಗೆ ಯಮಮನಮುಟ್ಟಿ ಹಿಡಿದಿಹ ಗುದಿಗೆ1ಸುಳ್ಳುಗಳಾಡೋದು ಎಷ್ಟುಮಹಾತಳ್ಳಿಕಾರಿಕೆ ಬೆಟ್ಟದಷ್ಟುಬೆಳ್ಳಿಟ್ಟು ಬಗುಳೋದು ಯಷ್ಟು ಯಮ ಕಕ್ಕಲಿಹಶೀಳುಯಂಬಾಕೊಲ್ಲೆಯಿವನ ಕುಟ್ಟುಕುಟ್ಟು2ಮಕ್ಕಳು ಮನೆಗಿಲ್ಲವೆಂಬ ಎನಗೆತಕ್ಕ ಹೆಂಡತಿ ಅಲ್ಲವೆಂಬರೊಕ್ಕವ ದಿನ ನೋಡಿಕೊಂಬ ಯಮಕಕ್ಕರಲಿರು ಶೀಳುಯೆಂಬ3ಗುರುಹಿರಿಯರ ನಿಂದಿಪನುಸತಿಮರುಕಕೆ ಹಲ್ಲು ತೆರವನುಹೊರಡಿಪ ತಂದೆ ತಾಯಿಯನುಯಮನರಕಕೆ ಹಾಕುಯೆಂಬುವನು4ನಾನಾರುಯೆಂಬುದು ಅಣಕೆ ಹಿಂದಕ್ಕೆನಿದ್ದೆಯೆಂಬುದು ಒಣಗಿಏನೋಮುದೆಂಬುದು ಜಣಗಿ ಚಿದಾನಂದ-ನೆಂಬುದು ಮುಣಗಿ5
--------------
ಚಿದಾನಂದ ಅವಧೂತರು
ಸ್ಥಳವಲ್ಲದ ಸ್ಥಳದಲ್ಲಿ ಕಸ್ತೂರಿಯನಿಟ್ಟ ಬ್ರಹ್ಮಬಳಿಕ ಬೈದರೆ ವಿವೇಕವಹುದೇ ಎಲೆ ತಮ್ಮಪಶೀಲಮೃಗ ನಾಭಿಯಲಿ ಕಸ್ತೂರಿಯನಿಡುವುದುಖೂಳರ ಜಿಹ್ವೆಯಲಿ ಅದನಿಡಲು ನೀತಿಯಹುದುನಾಲಗೆಯ ಲೋಕೋಪಕಾರವಹುದುಮೇಲೆ ಕಸ್ತೂರಿಬಹುದು ಜಗಸಮ್ಮತವಹುದು1ಕಸ್ತೂರಿಗೋಸ್ಕರವೆ ಧರ್ಮ ಮೃಗವಾದುದನು ಬಿಡದೆಕೊಲ್ಲುವವನು ವ್ಯಾಧನೀಗಸಂಚಲ ಚಿತ್ತವುಳ್ಳವನು ವಿಧಿವರವರಿಯನುಅಸ್ತವ್ಯಸ್ತದಿ ಪಶುಗೆ ನೀರತಿದ್ದಿದನು2ಧರಿಸಿದನು ದೋಷವನು ತಾನೀಗ ಎರಡನ್ನಹಿರಿಯರನು ನಿಂದಿಪುದು ಮೃಗವ ಕೊಂದವನುಕರುಣೆ ಚಿದಾನಂದ ಸದ್ಗುರುವಿಗೆ ಮೆಚ್ಚಿಸು ಅದುಮರವಾದ ಮುಪ್ಪಿನಲಿ ವಿಧಾತ್ರನು3
--------------
ಚಿದಾನಂದ ಅವಧೂತರು
ಹೇಳಿದ ಯಮಧರ್ಮ ತನ್ನಾಳಿಗೆ ಪ.ಹೇಳಿದ ಯಮ ತನ್ನೂಳಿಗದವರಿಗೆಖೂಳದುರಾತ್ಮರಾಗಿ ಬಾಳುವರನು ತರ1ಹರಿಸಂಕೀರ್ತನೆಯನರನಾರಿಯರು ಆದರದಲಿ ಮಾಡಿದವರ ನಿಂದಿಪನ ತರ 2ಹರಿದಾಸರಿಗೆ ಉಣಕರಿಯದೆ ಜನ್ಮಾಂತಒರಟುಮಾತಿನ ಲುಬ್ಧನರನ ನಿಲ್ಲದೆ ತರ 3ಹರಿಕಥಾಮೃತ ಉಪಚಾರಕಾಗಿ ಕೇಳುವಪರನಾರೇರಾಳುವ ದುರುಳನಕಟ್ಟಿತರ4ಗುರುಹಿರಿಯರೊಳು ನೀಚೋತ್ತರವನು ಕೊಡುವಮರುಳಾಗಿ ಮತಿಯ ಸತಿಯರಿಗಿತ್ತವನ ತರ 5ಅಂಬುಜಾಕ್ಷನ ಪೂಜೆ ಸಂಭ್ರಮದಿ ಮಾಡದೆರಂಭೆಯೊಡನಾಡುವ ಡಂಭಕನ ಹಿಡಿ ತರ 6ಒಳ್ಳಿದರ್ಹಳಿದು ತಾ ಬಲ್ಲವನೆನುವಚೆಲ್ವ ಪ್ರಸನ್ವೆಂಕಟ ವಲ್ಲಭನ ವೈರಿಯ ತರ 7
--------------
ಪ್ರಸನ್ನವೆಂಕಟದಾಸರು