ಒಟ್ಟು 47 ಕಡೆಗಳಲ್ಲಿ , 27 ದಾಸರು , 44 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನರದೇಹ ನಿತ್ಯವಲ್ಲ ನಾಳೆ ಮೃತ್ಯು ಬಿಡುವದಲ್ಲ ಪ ಮರುಳುಮನವೆ ಕೇಳು ಸೊಲ್ಲ ಹರಿಯ ಮರೆವುದುಚಿತವಲ್ಲ ಅ.ಪ ಹಿಂದಿನವರು ಪಟ್ಟಪಾಡು ಇಂದು ನೀನು ತಿಳಿದು ನೋಡು ಸಂದೇಹಗಳೀಡಾಡು ಒಂದೇ ಮನದಿ ಹರಿಯ ಕೊಂಡಾಡು 1 ಹರಿ ನಮಗನಾದಿ ಮಿತ್ರ ವರಶೋಭನ ಚಾರಿತ್ರ ಪೊರೆವದೇನು ನಮ್ಮ ಚಿತ್ರ ಕರುಣಿಸುವನು ಕಮಲನೇತ್ರ 2 ಹೊನ್ನು ಹೆಣ್ಣು ಮಣ್ಣು ಮೂರು ನಿನ್ನದೆಂದು ಹಿಗ್ಗದಿರು ಬೆನ್ನು ಹೊಡೆವರು ಯಮನವರು 3 ಏನು ಸುಖವು ಕಾಣಲೇಶ ಜೋಕೆ ಬಿಡುಬಿಡು ದುರಾಶಾ ಬೇಕು ಸುಜನರ ಸಹವಾಸ 4 ಗುರುರಾಮವಿಠಲ ಮುಕುಂದ 5
--------------
ಗುರುರಾಮವಿಠಲ
ನಿಖಿಳ ಜನರು ಬಂದು ಮನ್ನಿಸುವರೊ ಮಹರಾಯ ಪ ಎನ್ನ ಪುಣ್ಯಗಳಿಂದ ಈ ಪರಿಯುಂಟೇನೊ ನಿನ್ನದೆ ಸಕಲ ಸಂಪತ್ತು ಅ.ಪ ಒಬ್ಬ ಹೆಂಗಸಿನ ಹೊಟ್ಟೆಗೆ ಹಾಕುವುದಕಿನ್ನು ತಬ್ಬಿಬ್ಬುಗೊಂಡನೊ ಹಿಂದೆ ನಿಬ್ಬರದಿಂದಲಿ ಸರ್ವರ ಕೂಡುಂಬೊ ಹಬ್ಬವನುಣಿಸುವಿ ಹರಿಯೆ 1 ಸಂಜೆತನಕವಿದ್ದು ಸಣ್ಣ ಸೌಟಿನ ತುಂಬ ಗಂಜಿ ಕಾಣದೆ ಬಳಲಿದೆನೋ ವ್ಯಂಜನ ಮೊದಲಾದ ನಾನಾ ರಸಂಗಳು ಭುಂಜಿಸುವುದು ಮತ್ತೇನೊ2 ಜೀರ್ಣ ಮಲಿನ ವಸ್ತ್ರ ಕಾಣದ ನರನಿಗೆ ಊರ್ಣ ವಿಚಿತ್ರ ಸುವಸನ ವರ್ಣವರ್ಣದಿಂದ ಬಾಹೋದದೇನೊ ಸಂ ಪೂರ್ಣಗುಣಾರ್ಣವ ದೇವ 3 ನೀಚೋಚ್ಚ ತಿಳಿಯದೆ ಸರ್ವರ ಚರಣಕ್ಕೆ ಚಾಚಿದೆ ನೊಸಲ ಹಸ್ತಗಳ ಯೋಚಿಸಿ ನೋಡಲು ಸೋಜಿಗವಾಗಿದೆ ವಾಚಕ್ಕೆ ನಿಲುಕದು ಹರಿಯೆ 4 ಮಧ್ಯಾಹ್ನ ಕಾಲಕ್ಕೆ ಅತಿಥಿಗಳಿಗೆ ಅನ್ನ ಮೆದ್ದೆನೆಂದರೆ ಈಯಗಾಣೆ ಸತ್ಪಾತ್ರ ಕೂಡುಂಬೊ ಪದ್ಧತಿ ನೋಡೊ ಪುಣ್ಯಾತ್ಮ 5 ಮನೆ ಮನೆ ತಿರಿದರು ಕಾಸು ಪುಟ್ಟದೆ ಸು ಮ್ಮನೆ ಚಾಲ್ವರಿದು ಬಳಲಿದೆನೊ ಹಣ ಹೊನ್ನು ದ್ರವ್ಯಂಗಳಿದ್ದಲ್ಲಿಗೆ ತನಗೆ ತಾನೆ ಪ್ರಾಪ್ತಿ ನೋಡೊ ಜೀಯಾ 6 ವೈದಿಕ ಪದವಿಯನೀವಗೆ ಲೌಕಿಕ ಐದಿಸುವುದು ಬಹು ಖ್ಯಾತೆ ಮೈದುನಗೊಲಿದ ಶ್ರೀ ವಿಜಯವಿಠ್ಠಲನ ನಿನ್ನ ಪಾದಸಾಕ್ಷಿಯನುಭವವೊ 7
--------------
ವಿಜಯದಾಸ
ನಿನ್ನದೇ ಸಕಲ ಸೌಭಾಗ್ಯ ಸಾಧನವು ಹರಿಯೆ ಪ ನಿನ್ನದೆಂಬಭಿಮಾನ ಲವಲೇಶ ಸಲ್ಲದಯ್ಯಾ ಅ.ಪ. ನಿನ್ನ ಪ್ರೇರಣೆ ಹೊರತು ತೃಣವೊಂದು ಚಲಿಸದು ನಿನ್ನಿಚ್ಛೆಗನುಸಾರ ಸಕಲ ಜಗವು ನಿನ್ನ ಚಿತ್ತಕೆ ಬಾರದಿಹುದೇನು ನಡೆಯುವುದೋ ನಿನ್ನ ನಂಬಿದವರನು ನೀನಾಗೆ ಸಲಹುವೆಯೊ 1 ಸರ್ವತಂತ್ರ ಸ್ವತಂತ್ರ ಸರ್ವಾಂತರಾತ್ಮಕನೆ ಸರ್ವಜಗದಾಧಾರ ಸರ್ವೇಶನೆ ಅಘ ದೂರ ಸರ್ವಕಾಲದಲೆನ್ನ ಗರ್ವರಹಿತನ ಮಾಡೊ 2 ಸತ್ಯಚಿತ್ತನೆ ನಿನ್ನ ಚಿತ್ತವೆನ್ನಯ ಭಾಗ್ಯ ಕರ್ತೃತ್ವದಭಿಮಾನ ಕಳೆದು ಕಾಯೊ ಮತ್ತೇನು ಬೇಡುವೆನು ಪರತಂತ್ರ ನಾನಯ್ಯ ಮುಕ್ತಿದಾಯಕ ಶ್ರೀಶ ಶ್ರೀ ಕರಿಗಿರೀಶ 3
--------------
ವರಾವಾಣಿರಾಮರಾಯದಾಸರು
ನೆನೆನೆನೆ ಮನವೆ ನೀ ಘನಸುಖವನೆ ಪಡೆವೆ ಪ ಭಾರ ನಿನ್ನದೆಂಬ ಪೋರ ಪ್ರಹ್ಲಾದನ ಘೋರಬಂಧವ ನಿವಾರಿಸಿ ಪೊರೆದವನ 1 ಕರಿಮಕರಿಗೆ ಸಿಲ್ಕಿ ಹರಿಯೆಂದು ಕೂಗಲು ಭರದಿ ಒದಗಿ ಮಹಕರುಣದಿ ಸಲಹಿದವನ 2 ದುರುಳನ ಸಭೆಯೊಳು ತರುಣಿಯು ಮೊರೆಯಿಡಲು ವರಹ ಶ್ರೀರಾಮ ನಾರಿಮರಿಯಾದೆ ಕಾಯ್ದವನ 3
--------------
ರಾಮದಾಸರು
ಪರಸಿರಿಗೆ ಕರಗುತಿಹುದು ಸರಿಯೇ ಯೋಚಿಸು ಪ ಹರಿಯು ಕರುಣದಿಂದ ಕೊಟ್ಟ ಸಿರಿಗೆ ತೃಪ್ತನಾಗದÀಂತೆ ಅ.ಪ ಉರಗನ ನೆರಳಲ್ಲಿ ಕಪ್ಪೆಯು ಚಿರಕಾಲ ಜೀವಿಸುವುದೇ ಧರೆತಲದಲಿ ನರರ ಸಿರಿಯು ಸ್ಥಿರವಲ್ಲವೆಂದರಿಯದಂತೆ 1 ಹಲವು ಜನುಮಗಳ ಕರ್ಮದ ಫಲವನರಿತು ಮೋಸವಿಲ್ಲದೆ ನಳಿನನಾಭ ನಾರಾಯಣನೊಲಿದು ಕೊಡುವನೆಂದರಿಯದೆ 2 ಎನ್ನದೆಂದು ನಿನ್ನದೆಂದು ಖಿನ್ನನಾಗುವುದು ಸರಿಯೆ ಸನ್ನುತ ಪ್ರಸನ್ನ ಹರಿಯು ತನ್ನ ಭಾಗ್ಯವನರಿತು ನೀಡಲು 3
--------------
ವಿದ್ಯಾಪ್ರಸನ್ನತೀರ್ಥರು
ಬಂದರೆ ಭಾಗ್ಯ ಲಕ್ಷ್ಮಿಯರುಮುಯ್ಯವ ಛಂದಾಗಿ ಗೆಲಿಸೆಂದುವಂದಿಸಿ ಹರಿಗೆ ಪ. ಇಂದು ಮುಖಿಯರೆಲ್ಲ ಛಂದಾದ ವಸ್ತಗಳಿಟ್ಟುಚಂದ್ರಗಾವಿಯನುಟ್ಟು ಚಂದ್ರನಂತೆ ಒಪ್ಪುತ 1 ನೀಲ ಮಾಣಿಕದ್ವಸ್ತ್ರಮೇಲುದು ಧರಿಸುತ ನೀಲಾದಿಗಳೆಲ್ಲ 2 ವಸ್ತ ಮುತ್ತಿನ ಇಟ್ಟು ಕಸ್ತೂರಿ ಬೊಟ್ಟಿಟ್ಟುಮಸ್ತಕದಲಿ ಮಾಣಿಕ್ಕಿಟ್ಟು ಭದ್ರಾದಿಗಳು 3 ಹಸ್ತಾಭರಣ ಸಮಸ್ತ ವಸ್ತಗಳಿಟ್ಟುಸ್ವಸ್ತ ಚಿತ್ತದಿಂದ ಮಿತ್ರ ವೃಂದಾರಕಾದಿಗಳು 4 ಕಾಲಿಂದ್ಯಾದಿಗಳೆಲ್ಲ ಬಹಳೆ ವಸ್ತಗಳಿಟ್ಟುವೈಯಾರಿಯರು ಒಲಿಯುತ ವ್ಯಾಲಾಶಯನನ ಬಳಿಗೆ5 ಲಕ್ಷಣಾದಿಗಳೆಲ್ಲ ಲಕ್ಷ ವಸ್ತಗಳಿಟ್ಟುಲಕ್ಷ್ಮಿರಮಣನೆ ಪಂಥ ವೀಕ್ಷಿಸಿಗೆಲಿಸೆಂದು 6 ಜಾಂಬವಂತ್ಯಾದಿಗಳು ತುಂಬಿದೊಸ್ತಗಳಿಟ್ಟುಸಂಭ್ರಮ ಸೂಸುತ ಅಂಬುಜಾಕ್ಷನ ಬಳಿಗೆ7 ಹದಿನಾರು ಸಾವಿರ ಚದುರೆಯರು ವಸ್ತಗಳಿಟ್ಟುಮದನ ಜನಕನ ಮುಯ್ಯ ಮುದದಿಂದ ಗೆಲಿಸೆಂದು8 ವೀರ ರಾಮೇಶ ನಾರಿಯರ ಸೋಲಿಸೋ ಭಾರನಿನ್ನದೆಂದು ನೂರು ಮಂದಿನುಡಿದಾರು 9
--------------
ಗಲಗಲಿಅವ್ವನವರು
ಬಾರಯ್ಯ ಬೇಗ ಶ್ರೀ ಶ್ರೀನಿವಾಸ ಭಕ್ತರ ನುಡಿಗೆ ಪ. ಬಾರೋ ನಿನ್ನ ಮುಖ ತೋರೊ ತ್ವರಿತದಲಿ ಸಾರಸಾಕ್ಷ ನಿನ್ನ ಸಾರಿದೆನಯ್ಯ ಅ.ಪ. ವೈಕುಂಠದಿಂದ ಬಂದೆಯೊ ಗಿರಿಗೆ | ಲಕ್ಷ್ಮಿಯು ತಾ ಪೋಗೆ ಬೇಕಾಗಲಿಲ್ಲವೊ ಅರಮನೆ ನಿನಗೆ | ಮುನಿಗಳ ವರದನಿಗೆ ಬೇಕಾದ್ವೈಭವ ನೀ ಕೈಕೊಳುತ ಸಾಕುತಲಿಪ್ಪೆಯೊ ನೀ ಕರೆದವರನು 1 ಶ್ರೀಸ್ವಾಮಿ ಪುಷ್ಕರಣಿಯ ದಡದಲ್ಲಿ | ನೀ ವಾಸಿಸುತಲ್ಲಿ ಸೇವಾದಿಗಳನು ಬಗೆಬಗೆ ಕೊಳ್ಳುತಲಿ | ಸುಜನರ ಪೊರೆಯುತಲಿ ಈ ವಿಧದಿಂದಲಿ ಭಾವಜನಯ್ಯನೆ ಪಾವಕಸಖನೊಳು ಪಾವನನಾಗಿಹೆ 2 ವರ್ಣಿಸಲರಿಯೆ ನಿನ್ನನು ದೊರೆಯೆ | ಲೋಕದಿ ಅಚ್ಚರಿಯೆ ಘನ್ನ ಸುಮಹಿಮನೆ ಬೇಡುವದರಿಯೆ | ನೀನೆ ಕೈಪಿಡಿಯೆ ಮುನ್ನ ಮಾಡಿದ ಘನ್ನ ಪಾಪಗಳು ಇನ್ನಿರಲಾರವೊ ಮನ್ನಿಸಿ ಪೊರೆಯೊ 3 ಜಗಸೃಷ್ಟಿಯಿಂದ ಜೀವರ ಮಾಳ್ಪೆ | ಜೀವರ ಸೃಷ್ಟಿಪೆ ತ್ರಿಗುಣಾದಿಗಳಿಂದ ತಿರುಗಿಸುತಿರ್ಪೆ | ಕರ್ಮದ ತೆರೆಮಾಳ್ಪೆ ವಿಗಡ ದೇಹದೊಳು ಬಗೆ ಬಗೆ ದೇವರು ತಗಲಿ ನಿನ್ನ ಪದನಗಧರ ಕಾಣರೊ 4 ಕಣ್ಣ ಬಿಟ್ಟಿರುವೆ ಬೆನ್ನೊಳೆ ಬೆಟ್ಟವೆ | ಮಣ್ಣ ತಿನುತಿರುವೆ ಚಿಣ್ಣ ನಿನಗೊಲಿದು ಚಿಣ್ಣನಾಗ್ವೆ | ಬೆನ್ನೊಳು ಪರಶುವೆ ಹಣ್ಣು ಕೊಟ್ಟವಳಿಗೆ ಒಲಿದು ಗೋಪಿಯರ ಕಾಯ್ದು ಬಣ್ಣಗೆಟ್ಟು ಹಯವನ್ನೇರಿದೆ5 ಆಕಾಶರಾಯನ ಮಗಳ ತಂದೆ | ಈ ಗಿರಿಯಲಿ ನೀನೆ ಸಾಕುವ ಬಿರುದು ನಿನ್ನದೆಂದೆ | ನೀ ಕಾಯಲೆಬೇಕೆಂದೆ ನೂಕಿ ಎನ್ನ ಭವತಾಪನೀಗಲೆ ಶ್ರೀಕಳತ್ರ ನಿನ್ನ ಭಕ್ತರೊಳಿಡಿಸೊ 6 ಅಪಾರಮಹಿಮ ಅದ್ಭುತಚರಿತ | ಶೇಷಾದ್ರಿಯೊಳ್ ನಿರುತ ವ್ಯಾಪಾರ ಮಾಡುತ ಗುಪ್ತದೊಳಿರುತ | ನಿಜ ಭಕ್ತಗೆ ಕಾಣುತ್ತ ಪರಿ ಅದ್ಭುತ ಚರಿತೆಯ ತೋರುವ ಗೋಪಾಲಕೃಷ್ಣ ವಿಠ್ಠಲನೆ ನೀ ಕಾಯೊ 7
--------------
ಅಂಬಾಬಾಯಿ
ಬಿಡೋ ಭ್ರಾಂತಿ ಜೀವಾ ಬಿಡೋ ಕಾಮ್ಯಸೇವಾ ಅಹಂತಾ ಮಮತ್ವ ಮಹಾಮೂಢಭಾವಾ ಪ ಜಗವನೆಲ್ಲ ಈಶ್ವರನೆ ಸೃಷ್ಟಿಸಿದ ಕೇಳೋ ಇದೋ ನಿನ್ನದೆಂಬುವದು ಏನಿಲ್ಲ ತಾಳೋ ಜಗವ ಸೃಷ್ಟಿಸಿದನಾತ ಪಾಲಿಸುವನಾತ ಇಗೋ ನಾನೆ ಪಾಲಿಸುವೆನೆನ್ನುವದು ವ್ಯರ್ಥ ಭಾರ 1 ನೀ ಧರಿಸಿರ್ದ ದೇಹವಿದ ನೀ ಸೃಷ್ಟಿಸಿದೆಯಾ ಇದೇ ರೀತಿ ಹೆರವರದು ಬಿಡು ನಿನ್ನ ಮಾಯಾ ಇದನು ಪಾಲಿಸುವನಾತನೀಶ್ವರನು ನೋಡಾ ಇದೇ ರೀತಿ ಪಾಲಿಸುವನೆಲ್ಲವನು ನೋಡಾ ಮಹಾ ವಿಶ್ವವೆಲ್ಲ ತಿಳೀ ಈಶಲೀಲಾ 2 ಜಗವ ನಾಶಗೊಳಿಸುವನು ಪ್ರಳಯದಲಿ ಈಶಾ ಮಗುಳೆ ಜಗ ಜೀವರನು ಸೃಷ್ಟಿಸುವ ತಾನೆ ಜಗದಿ ವರ್ಣವಾಶ್ರಮದ ಬಲುಕಾರ್ಯ ಪಾಶಾ ಬಗೆಯಲೀಗ ಪಶುವಿನೊಳು ತಿರುಗಿಸುವನೀಶ ಮಹಾಯೋಗಿ ಶಂಕರನ ಶರಣಾಗೋ ಜೀವಾ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಬುದ್ಧಿಮಾತು ಹೇಳಿದರೆ ಕೇಳ ಬೇಕಮ್ಮ ಮಗಳೆ ಮನ ಶುದ್ದಳಾಗಿ ಗಂಡನೊಡನೆ ಬಾಳ ಬೇಕಮ್ಮ ಪ ಮಾತು ಮಾತಿಗೆ ಮಾತ ಜೋಡಿಸಿ ಆಡಬೇಡಮ್ಮಮಗಳೆ ಪ್ರೀತಿ ಪಡುವ ಗಂಡನೆಂದು ಹೆಮ್ಮೆ ಬೇಡಮ್ಮ ನೀತಿ ತಪ್ಪಿ ನಡಿಯಬೇಡ ಯೆಂದಿಗಾದರೂ ಮಗಳೆ ಸೋತು ನಡೆಯಲು ಲೇಸುಯೆಂದು ತಿಳಿಯ ಬೇಕಮ್ಮ 1 ಅತ್ತೆ ಮಾವ ಗಂಜಿ ಕೊಂಡು ನಡಿಯ ಬೇಕಮ್ಮ ಮಗಳೆ ಮತ್ತೆ ಪತಿಯ ಮನವ ಮೆಚ್ಚಿಸಿ ಬಾಳ ಬೇಕಮ್ಮ ದುಡಿಯ ಬೇಕಮ್ಮ ಮಗಳೆ ಚಿತ್ತದಲ್ಲಿ ಹರಿಯ ಭಕ್ತಿ ಬಿತ್ತಬೇಕಮ್ಮ 2 ನೋಟ ಆಟದಲ್ಲಿ ಮಮತೆ ಬಹಳ ಬೇಡಮ್ಮ ಮಗಳೆ ಕೊಟ್ಟು ಕ್ರಯವ ತಿಂಡಿ ತಿಂಬೊ ನಡತೆ ಬೇಡಮ್ಮ ಕೂಟ ಜನರ ಮಾತು ಕೇಳೆ ಕೇಡು ಕೇಳಮ್ಮ ಮಗಳೆ ಸಾಟಿ ನಾನು ಗಂಡಗೆಂದು ಹಠವು ಬೇಡಮ್ಮ 3 ಕ್ಲೇಶ ಕೇಳಮ್ಮ ಮಗಳೆ ಗಂಡ ತಂದುದೆ ದೊಡ್ಡದೆಂದು ಉಂಡು ಬಾಳಮ್ಮ ಗಂಡೀ ನಂತೆ ಮೆರೆಯ ಬಾರ್ದು ತಗ್ಗಿ ನಡೆಯಮ್ಮ ಮಗಳೆ ತೊಂಡಳಾಗಿ ಹರಿಗೆ ಬಾಳೆ ಸುಖವು ನಿನಗಮ್ಮ 4 ಹರಿಯು ಕೊಟ್ಟರೂಪವೆ ಛಂದ ಲಜ್ಜೆ ಬೇಡಮ್ಮ ಮಗಳೆ ಬರಿಯ ವೇಷ ನಾಟಕದಂತೆ ಮೋಸ ಕಾಣಮ್ಮ ಜರಿಯ ಬೇಡ ಹಿರಿಯರ ಮಾತು ಹಾನಿ ಹೌದಮ್ಮ ಮಗಳೆ ಮರಿಯೆ ಹರಿಯ ಭವವು ತಪ್ಪದು ಜೋಕೆ ನೋಡಮ್ಮ 5 ಸೊಲ್ಲು ಕೇಳಮ್ಮ ಮಗಳೆ ನಲ್ಲನ ಬಲುಮೆಗೆ ಒಳ್ಳೆ ಗುಣವೆ ಮುಖ್ಯ ತಿಳಿಯಮ್ಮ ಮಗಳೆ ಒಳ್ಳೆ ಮಾತನಾಡಿ ಸರ್ವರ ಹಿತವ ಕೋರಮ್ಮ 6 ಏನೇ ಬಂದರು ಜರಿದು ಪತಿಯ ನುಡಿಯ ಬೇಡಮ್ಮಮಗಳೆ ನಿನ್ನದೆಂದು ಪುಟ್ಟಿದ ಮನೆಯ ತಿಳಿಯ ಬೇಡಮ್ಮ ಮಾನವೆ ಮುಖ್ಯ ಮಾನಿನೀಗೆ ತಿಳಿದು ಬಾಳಮ್ಮಾ ಮಗಳೆ ಮಾನವು ನೀಡೆ ಮಾನವು ಬಾಹೋದು ಮರ್ಮ ತಿಳಿಯಮ್ಮ 7 ನಾನು ನಾನು ನಾನೆಂಬೋದೆ ಹೀನ ಕೇಳಮ್ಮಾ ಮಗಳೆ ಸಾನುರಾಗದ ನುಡಿಯೆ ಸಕ್ಕರೆ ಕೀರ್ತಿ ಉಳಿಸಮ್ಮ ಸ್ನಾನ ಪಾನದಲ್ಲೇ ಮುಳುಗದೆ ಹರಿಯ ಸೆನೆಯಮ್ಮ ಮಗಳೆ ಶ್ರೀನಿವಾಸನ ಭಕ್ತರ ಪೂಜೆ ಯತ್ನದಿ ಮಾಡಮ್ಮಾ 8 ಪರರ ಸಿರಿಯ ನೋಡಿ ಮನದಿ ಕೊರಗ ಬೇಡಮ್ಮ ಮಗಳೆ ಹರಿಯು ನೀಡಿಹ ಸಿರಿಯೆ ಸಾಕುಯೆಂದು ಸುಖಿಸಮ್ಮ ಯರವಿನಿಂದ ಒಡವೆ ವಸ್ತ್ರ ಧರಿಸ ಬೇಡಮ್ಮ ಮಗಳೆ ಅರಿತು ಹರಿಯ ಗುಣಗಳ ಮನದಿ ನೆನೆದು ನೆನೆಯಮ್ಮ 9 ಸತತ ನಗೆ ಮೊಗಳಾಗಿ ಬಾಳು ಗಂಟು ಬೇಡಮ್ಮ ಮಗಳೆ ಸತತ ಕಾಯುವ ಹರಿಯೇಯೆಂದು ದೃಢದಿ ಭಜಿಸಮ್ಮ ಕೇಳಮ್ಮಾ ಮಗಳೆ ನಿತ್ಯ ಸುಖಿಸಮ್ಮ 10 ಪತಿಯ ಭಕ್ತಿಯೆ ತಾರಕ ನಿನಗೆ ಧೋರಣೆ ಬೇಡಮ್ಮ ಮಗಳೆ ಪತಿಯ ಜರಿಯುತ ವ್ರತಗಳ ಮಾಡೆ ಫಲವೇ ಇಲ್ಲಮ್ಮ ರತಿಯಿಂ ನುಡಿದಿಹೆ ಶೃತಿಗಳಸಾರ ಯುಕ್ತಿಗಳಮ್ಮ ಮಗಳೆ ಮೊರೆಯ ಹೋಗಮ್ಮ 11
--------------
ಕೃಷ್ಣವಿಠಲದಾಸರು
ಭಾರ ನಿನ್ನದೆಲೊ ಪ ಭವ ವಾರಿಧೀಯನು | ಪಾರು ಮಾಡುವರಾರು ಪೇಳೋಅ.ಪ. ವಾಸವ | ಪೋಷಕನೆ ಮಧ್ವೇಶ ಪೊರೆ 1 ವಿಶ್ವ ಮೋಹೈಶ್ವರ್ಯ ರೂಪೀ2 ವಿತತ ನೀನಹುದೋ ವಿಸ್ತರದ ಮಹಿಮ | ವೀತ ಭಯನಹುದೋ ||ಯತನ ಜ್ಞಾನೇಚ್ಛಾದಿ ಪ್ರೇರಕ | ಸ್ಥಿತಿ ಮೃತಿ ಸತ್ತಾದಿ ಪ್ರದನೇ 3 ಸುರ ತರುವೆ ನೀನಹುದೋ | ಶರಣ ಪೋಷಕ | ಸುರಧೇನು ನೀನಹುದೋ |ಶರಣ ಜನ ಕರ್ಮಾದಿ ಋಣಹರ | ಮೊರೆಯಿಡುವೆ ಚರಣಕ್ಕೆ ಎನ್ನ ಪೊರೆ4 ಸಿರಿ ಬೊಮ್ಮ ಇಂಬು ತವಪದ ಅಂಬುಜದಿ ಕೊಡು 5
--------------
ಗುರುಗೋವಿಂದವಿಠಲರು
ಭಾರ ನಿನ್ನದೋ ಮಾರಜನಕ ಭಾರ ನಿನ್ನದೊ ಪ ಭಾರ ನಿನ್ನದಯ್ಯ ಸರ್ವ ಸಾರತರದಿ ಕಾಯುವಂಥ ಪಾರಮಹಿಮ ನಿನ್ನ ಚರಣ ವಾರಿಜವೇ ಗತಿ ಎನಗೆ 1 ನಿನ್ನ ಧ್ಯಾನವೆ ಪರುವಕಾಲ ನಿನ್ನ ನಾಮವೆ ಸೌಖ್ಯ ಸಕಲ ನಿನ್ನ ಕೀರ್ತನೆನಗೆ ಸುಫಲ ಪನ್ನಂಗಶಯನ ವೇಣುಗೋಪಾಲ 2 ಕರಿ ಸಂಕಟ ವನ್ನು ನಿರುತ ಗೆಲಿದನಕಟ ನಿನ್ನ ಭಜಿಸಿ ವಿಭೀಷಣ ಪಟ್ಟ ವನ್ನು ಸ್ಥಿರಪಡೆದ ದಿಟ 3 ಜಯ ನಿನ್ನ ಧ್ಯಾನವೆಂದೆ ಜಯ ನಿನ್ನ ಚರಣವೆಂದೆ ಜಯ ನಿಖಿಲ ನಿನ್ನದೆಂದೆ ದಯಪಾಲಿಸು ಶ್ರೀರಾಮ ತಂದೆ 4
--------------
ರಾಮದಾಸರು
ಮನವೇ ಸುಮ್ಮನೆ ಇರಬೇಡ ಅರೆನಿಮಿಷವಾದರುಮನವೇ ಸುಮ್ಮನೆ ಇರಬೇಡಪ ಕನಸಿನಂತಿಹ ಸಂಸಾರವ ನೆಚ್ಚಿಘನತರ ಪಾಪಕೆ ಗುರಿಯಾಗಬೇಡ ಅ ರೊಕ್ಕದಾಸೆಯ ಬಿಡಬೇಕು ಸ್ತ್ರೀ ಮೋಹಕೆಸಿಕ್ಕದೆ ನಡಕೊಳಬೇಕುಅಕ್ಕರು ದೇಹದೊಳಿರದಿರಬೇಕುಶಕ್ತಿಯ ಮೀರಿ ಧರ್ಮವ ಮಾಡಬೇಕುಮುಕ್ಕಣ್ಣ ಹರನ ಪೂಜಿಸಬೇಕುಮುಕ್ತಿ ಮಾರ್ಗವ ಪಡಕೊಳಬೇಕು 1 ಸರ್ವನಿಸ್ಪøಹನಾಗಬೇಕು ಸಂಸಾರದಿಚರಿಸುತಲೂ ಇರಬೇಕುಗುರುಹಿರಿಯರ ಕಂಡು ನಡೆಯಲು ಬೇಕುಪರರ ನಿಂದಿಸಿ ನುಡಿಯದೆ ಇರಬೇಕುಬರೆ ಸುಖ ದುಃಖವು ಸಮಗಾಣಬೇಕುಇರುಳು ಹಗಲು ಶಿವ ಶಿವ ಎನ್ನಬೇಕು2 ತನ್ನ ತಾನೆ ತಿಳಿಯಬೇಕು ತೋರುವ ಲೋಕವನ್ನು ದೃಶ್ಯವೆಂದಿರಬೇಕುತನ್ನಂತೆ ಸಕಲರ ನೋಡಲು ಬೇಕುಮಾನ್ಯರ ಕಂಡರೆ ಮನ್ನಿಸಬೇಕುಅನ್ಯನಾದರು ಹಿತವನೆ ಮಾಡಬೇಕುಪ್ರಸನ್ನ ರಾಮೇಶನನೆನಹಿರಬೇಕು 3 ವಣಗಿದ ಕಂಭದೊಳೊಗೆದುಬಣಗು ದಾನವನ ಗೆಲಿದುಕುಣಿಕುಣಿದಾಡಿದೆಯಂತೆ ಯಾಕಯ್ಯ ಶ್ರೀಕೃಷ್ಣಸೆಣಸಿದ ರಾಕ್ಷಸನ ಗೆಲಿದುವಿನಯದೆ ಪ್ರಹ್ಲಾದಗೊಲಿದುಅಣಿಯರ ಲೋಕವ ಕಾಯ್ದೆ ಎಲೆಸತ್ಯಭಾಮೆ 4 ಬಲು ಚಂದವಾಯಿತಯ್ಯ ಲೋಕಾ-ವಳಿಯೊಳು ದೊಡ್ಡವನಯ್ಯಬಲಿಯ ಕೂಡೆ ದಾನವ ಬೇಡುವರೆ ಕೃಷ್ಣಬಲಿಯ ದಾನವನ್ನೇ ಬೇಡಿಇಳೆಯ ಮೂರಡಿಯ ಮಾಡಿಸಲಹಿದೆ ಸರ್ವಸುರರ ಎಲೆ ಸತ್ಯಭಾಮೆ 5 ಧರಣೀಪಾಲಕರ ಗೆಲಿದಗರ್ವವಿರಲಿ ಹೆತ್ತತಾಯಶಿರವನರಿದ ದುರುಳರುಂಟೆ ಹೇಳಯ್ಯ ಕೃಷ್ಣಗುರುವಚನವನ್ನು ಮೀರೆನರಕಲೋಕವೆಂದು ಕಾಯಶಿರವನರಿದು ಮರಳಿ ಪಡೆದ ಎಲೆ ಸತ್ಯಭಾಮೆ6 ಮೂರು ಲೋಕವರಿಯೆ ಸೀತಾನಾರಿಯ ಕಳೆದುಕೊಂಡುಊರೂರ ತಿರುಗಿದೆಯಂತೆ ಯಾಕಯ್ಯಾ ಕೃಷ್ಣನೀರೊಳು ಸೇತುವ ನಿಲಿಸಿವೀರ ರಾವಣನ ಜಯಿಸಿವಾರಿಜಾಕ್ಷಿಯ ತಂದೆನೆ ಎಲೆ ಸತ್ಯಭಾಮೆ 7 ದುರುಳ ಪರಮಹಂಸರಂತೆಕರದಿ ನೇಗಿಲ ಹಿಡಿದೆಶರಖಡ್ಗಗಳಿಲ್ಲವೇನೋ ಶ್ರೀಕೃಷ್ಣರಾಯಸುರರಿಪು ಪ್ರಲಂಬಾದಿಗಳಶಿರವನರಿದು ಜೈಸಿದಂಥಾಗುರುತಿನ ಆಯುಧ ಕಾಣೆ ಎಲೆ ಸತ್ಯಭಾಮೆ8 ಮಂದಿಯ ಮುಂದೆ ಬತ್ತಲೆನಿಂದು ಓಡಾಡಿದೆಯಂತೆಚಂದವಾಯ್ತು ನಿನ್ನ ನಡತೆ ಹೇಳೆಲೋ ಕೃಷ್ಣಹಿಂದೆ ತ್ರಿಪುರದ ನಾರೀವೃಂದವ ಮೋಹಿಸಿ ಸರ್ವವೃಂದಾರಕರ ಪೊರದೆ ಎಲೆ ಸತ್ಯಭಾಮೆ 9 ದೊರೆತನವು ನಿನ್ನದೆಂದುಧರಣೀದೇವತೆಯು ಬಂದುಮೊರೆಯಿಟ್ಟಳದೇಕೋ ಪೇಳೋ ಶ್ರೀಕೃಷ್ಣರಾಯತುರಗವನೇರಿ ಖಡ್ಗವಧರಿಸಿ ಯವನ ಸೈನ್ಯವನ್ನುಮುರಿದು ಧರೆಯ ಪೊರೆದೆ ಕಾಣೆ ಎಲೆ ಸತ್ಯಭಾಮೆ 10 ಇಂತು ಕೇಳ್ದ ಸತ್ಯಭಾಮಾಕಾಂತೆಯ ಮಾತಿಗೆ ಮೆಚ್ಚಿಕಾಂತೆಯರೊಳು ಕಟ್ಟಾಣಿ ಬಾರೆಂದು ಕರೆದುಕಂತುಜನಕ ಕೆಳದಿಪುರದಕಾಂತ ಗೋಪಾಲಕೃಷ್ಣನುಸಂತಸವ ಮಾಡಿದನಿನ್ನೆಂತು ಪೇಳ್ವೆನೆ11
--------------
ಕೆಳದಿ ವೆಂಕಣ್ಣ ಕವಿ
ಮರದೆನೋ ಯನ್ನ ಶ್ರೀಹರಿಯೇ ಭಕ್ತರಿಸಿರಿಯೇ ಸ್ಮರಿಸುವರ ಧೊರಿಯೇ ಭಜಿಸವರನ ಬಿಡದಲೆ ಬಿರುದು ನಿನ್ನದೆಂದು ಪೇಳುತಿರೆ ಶೃತಿ ಪ ತಂದೆ ಕಂದನ ಭಾದಿಸಲು ಶ್ರೀಧರ ಬೇಗ ಬಂದೆನ್ನ ಸಲಹೆನ್ನಲು ಮಂದರಧರ ವಳಿ- ತೆಂದು ಸಂಧಿಸಿ ಕಾಲದ್ವಂದ್ವ ರೂಪವನೇ ಕರುಣಾಸಿಂಧು ಶ್ರೀಹರಿ 1 ಅಂದು ಅಜಾಮಿಳನು ಅಕ್ಷರದ್ವಯದಿಂದ ಮುಕ್ತನಾದನು ಕುಂದರದನ ದ್ರೌಪದಿ ಮಾನಕಾಯಿದಿ ಇಂದಿರೇಶನೆ ಮುದದಿ ಭವ ಬಂಧನದಿ ಬಲುನೊಂದೆನೋ ಇಂದು ವದನ 2 ಘನತರ ಶಿಲೆಯಾಗಿರಲು ಪಾದಸ್ಮರಿಸಲಾಕೆಯು ದುರಿತ ಕರಿವರದ 'ಹೆನ್ನೆಯ ಉರಗಶಯನಾಂಬುರುಹ ನಯನ 3
--------------
ಹೆನ್ನೆರಂಗದಾಸರು
ಯಾಕೆ ಜೀವನವೆ ನೀ ಶ್ರೀಕಾಂತನನು ಮರೆವಿ | ವಿವೇಕವೇ ನಿನಗಿದು ? ಪ ಜೋಕೆಯಿಂದಲಿ ನಿನ್ನ ಸಾಕುವ ಶ್ರೀ ಹರಿಯು | ಬೇಕಾದ ವರವೀವ ಭಕ್ತವತ್ಸಲ ದೊರೆಯಾಅ.ಪ ಲೇಸಾದರು ವಿಷಯದಾಸೆಯ ಬಿಡಲೊಲ್ಲಿ | ಏಸು ಜನ್ಮಂಗಳಾದರು ಈ ಶರೀರವು ನಿನ್ನದೆಂದು ತಿಳಿದು || ಪೋಷಿಸುವಿಯೊ ಬರಿದೆ ದೋಷರಹಿತ ಶ್ರೀನಿ- | ವಾಸನ್ನ ನೆನೆದು ನಿರ್ದೋಷವ ಕಳೆದೆನ್ನ ಪೋಷಿಸು ಎನ್ನದಲೆ 1 ಸತಿ-ಸುತರನು ನೀನು ಸಲಹುವೆನೆನುತಲಿ | ಅತಿ ಚಿಂತೆ ನಿನಗ್ಯಾತಕೊ ಗತಿ ನಿನಗಾಗುವ || ಹಿತಚಂತನೆ ಮಾಡೊ ಸದ್ಗತಿಯಾಗುವ ತನಕ | ರತಿಪತಿ ಪಿತನ ನೆನೆದು ನೀ ಪ್ರತಿಕ್ಷಣ ಹರಿಕಥೆ ಕೇಳದಲೆ2 ಪೊಟ್ಟೆಗೋಸುಗ ಭ್ರಷ್ಟರ ಸ್ತುತಿಸಿ ನೀ | ಕೆಟ್ಟು ಪೋಗುವಿ ಯಾತಕೋ ಜೀವನವೆ || ಪುಟ್ಟಿಸಿದವ ನಿನ್ನ ಪೊಟ್ಟೆಗೆ ಕೊಡನೇನೋ | ಕೆಟ್ಟುಹೋಗದೆ ವಿಜಯವಿಠ್ಠಲನ್ನ ನೆನೆದು ಸುಖಿಯಾಗು3
--------------
ವಿಜಯದಾಸ
ಶೌರಿ ಪ ಕಾಣಿಸದೆ ಖತಿಗೊಳಿಸುವುದುಚಿತಲ್ಲ ಮೊರೆ ಕೇಳು ಅ.ಪ ಕಾಣುವುದು ಕೇಳುವುದು ಗಂಧ ರಸ ಸ್ಪರ್ಶಗಳು ನಾನಾ ಬಗೆ ವಿಷಯಗಳು ನೀನೆ ರಂಗ ಭಾನು ಕೋಟಿ ತೇಜ ಭಾವ ಭಕ್ತಿ ಸುಪ್ರೀಯ ನಾ ನಿನ್ನವರ ಪಾದರಜ ರಕ್ಷಿತನೊ ಸ್ವಾಮಿ 1 ಶ್ರೀ ರಮಣಿ ಆನಂದ ಅಂಬುಧಿಯೆ ಅಬುಜಭವ ಮೃಡ ಪಾದ ವನಜ ಆರು ನಾಲ್ಕು ತತ್ವ ಆದರ್ಶ ಪ್ರತಿಫಲಿತ ಆನಂದ ಚಿತ್ಪ್ರಚುರ ಅನುರೂಪನೆ ಪಾಹೀ 2 ಕಲ್ಯಾಣ ಗುಣವನಧಿ ಜಯೇಶವಿಠಲ ಕಲ್ಯಾಣ ಮಾಡೆನಗೆ ಕಾರುಣ್ಯಸಿಂಧು ಎಲ್ಲ ಗುಣತ್ರಯ ರೂಪ ನಿನ್ನದೆಂಬೊ ಜ್ಞಾನ ಎಲ್ಲ ಕಾಲದಿ ಕೊಟ್ಟು ಶಿಷ್ಟರಲಿ ಇಡು ಎನ್ನ 3
--------------
ಜಯೇಶವಿಠಲ