ಒಟ್ಟು 22 ಕಡೆಗಳಲ್ಲಿ , 14 ದಾಸರು , 22 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾಮನ ವಿಠಲರ ಹಾಡು ಶ್ರೀಶ ಪ್ರಾಣೇಶರಾಯಾ | ದಯದಿ ಎಮ್ಮ |ಪೋಷಿಸು ಶುಭಕಾಯ್ಯಾ ||ಭೂಸುರಾಗ್ರಣಿ ಗುರುಪ್ರಾಣೇಶರಾಯರಿಂದ ಭಾಸುರ ಮಂತ್ರೋಪದೇಶವಕೊಂಡೆ ಪ ಗುರುವೆ ನಿಮ್ಮ ಪಾದಾಯುಗಾ |ಸರಸಿರುಹ ನೆರೆನಂಬಿದೆ ಭಾಗ್ಯ ||ಕರೆಕರಿ ಸಂಸ್ಕøತಿ ಶರಧಿಯೊಳಗೆ ಬಿದ್ದು |ಹೊರಳುವೆ ವೇಗದಿ ಕರಪಿಡಿದುದ್ದರಿಸೊ 1 ಮಂಗಳ ಮಹಿಮ ಸಿರಿವರನವೊಲಿಮಿ |ಸಂಗ ಪಡೆದ ಧೀರರು |ರಂಗವೊಲಿದ ಆರ್ಯಂಘ್ರಿಯ ಕಮಲತೆಭೃಂಗನಂತಿರುಪ್ಪ ಲಿಂಗಸುಗೂರವಾಸ 2 ಸುತ್ರಾಮ ವಂದಿತ ಸು |ನಾಮ ಸುಧೆಯಿತ್ತು ಪ್ರೇಮದಿ ಸಲಹೆಮ್ಮ 3
--------------
ಶ್ರೀಶಪ್ರಾಣೇಶವಿಠಲರು
ಅಂದಿಂದ ನಾ ನಿನ್ನನೆರೆನಂಬಿದೆನೊ ಕೃಷ್ಣತಂದೆ ಗೋವಿಂದ ಮುಕುಂದ ನಂದನ ಕಂದ ಪಬಲವಂತ ಉತ್ತಾನಪಾದರಾಯನ ಕಂದಮಲತಾಯಿ ನೂಕಲು ಅಡವಿಯೊಳು ||ಜಲಜಾಕ್ಷ ನಿನ್ನ ಧ್ಯಾನದಿ ತಪವಿರಲಾಗಿಒಲಿದು ಧ್ರುವಗೆ ಪಟ್ಟಕಟ್ಟಿದ್ದಕೇಳಿ1ನಕ್ರರಿಗೆ ಗಜರಾಜ ಸಿಕ್ಕಿ ಸರಸಿಯೊಳುದುಕ್ಖದಿ ಶ್ರೀಹರಿ ಸಲಹೆನ್ನಲು ||ಚಕ್ರದಿ ನೆಗಳ ಕಂಠವ ತರಿದು ಭಕ್ತನಅಕ್ಕಸಪರಿದಾದಿಮೂಲನೆಂಬುದಕೇಳಿ2ದ್ರುಪದನ ಸುತೆಯ ದುಃಶ್ಯಾಸನ ಸಭೆಯೊಳುಕಪಟದಿ ಸೀರೆಯ ಸೆಳೆಯುತಿರೆ ||ಸುಪರ್ಣವಾಹನ ಕೃಷ್ಣ ಸಲಹೆಂಬಬಲೆಯನುಅಪಮಾನದಿಂದ ಕಾಯ್ದ ಹರಿಯೆಂಬುದನುಕೇಳಿ3ಹರಿನಾರಾಯಣನೆಂದು ಪ್ರಹ್ಲಾದ ಬರೆಯಲುದುರುಳದಾನವ ಅವನಿಗೆ ಮುನಿದು ||ಕರೆ ನಿನ್ನ ಒಡೆಯನ ಎಂದು ಗರ್ಜಿಸೆನರಹರಿಬಂದು ಒಡನೆಯೆ ಕಾಯ್ದನೆಂಬುದಕೇಳಿ4ಅಂಬರೀಷಗೆದೂರ್ವಾಸಶಾಪವ ಕೊಡೆಅಂಬುಜಲೋಚನ ಚಕ್ರದಿಂದ ||ಬೆಂಬತ್ತಿ ಮುನಿಯ ಶಾಪವ ಪರಿಹರಿಸಿದಕಂಬುಚಕ್ರಧರಹರಿಯೆಂಬುದಕೇಳಿ5ಛಲಬೇಡ ರಾಮನ ಲಲನೆಯ ಬಿಡು ಎಂದುತಲೆಹತ್ತರವಗೆ ಪೇಳಲು ತಮ್ಮನ ||ಬಳಲಿಸಿ ಹೊರಡಿಸೆ ಅವ ನಿನ್ನ ಮೊರೆಹೊಗಲುಸಲೆ ವಿಭೀಷಣಗೆ ಲಂಕೆಯನಿತ್ತುದನುಕೇಳಿ6ಸುರ-ನರ-ನಾಗಲೋಕದ ಭಕ್ತ ಜನರನುಪೊರೆಯಲೋಸುಗ ವೈಕುಂಠದಿಂದ ||ಸಿರಿಸಹಿತದಿ ಬಂದು ಶೇಷಾಚಲದಿ ನಿಂತಪುರಂದರವಿಠಲ ನಿನ್ನಯ ಚರಣವ ಕಂಡು 7
--------------
ಪುರಂದರದಾಸರು
ಕಂಡೆ ನಾ ಗೋವಿಂದನಪುಂಡರೀಕಾಕ್ಷಪಾಂಡವ ಪಕ್ಷನಪಕೇಶವ ನಾರಾಯಣ ಶ್ರೀ ಕೃಷ್ಣನವಾಸುದೇವಅಚ್ಯುತಾನಂತನ ||ಸಾಸಿರ ನಾಮದ ಶ್ರೀ ಹೃಷಿಕೇಶನಶೇಷಶಯನ ನಮ್ಮ ವಸುದೇವ ಸುತನ 1ಮಾಧವಮಧುಸೂದನ ತ್ರೀವಿಕ್ರಮನಯಾದವ ಕುಲಜನ ಮುನಿವಂದ್ಯನ ||ವೇದಾಂತ ವೇದ್ಯನ ಶ್ರೀಇಂದಿರೆರಮಣನ-ನಾದಿ ಮೂರುತಿ ಪ್ರಹ್ಲಾದವರದನ 2ಪುರುಷೋತ್ತಮ ನರಹರಿ ಶ್ರೀಕೃಷ್ಣನಶರಣಾಗತ ವಜ್ರಪಂಜರನ ||ಕರುಣಾಕರ ನಮ್ಮಪುರಂದರವಿಠಲನನೆರೆನಂಬಿದೆನು ಬೇಲೂರ ಚೆನ್ನಿಗನ3
--------------
ಪುರಂದರದಾಸರು
ತೇಲಿಸೊ ಇಲ್ಲ ಮುಳುಗಿಸೊ- ನಿನ್ನ-|ಪಾಲಿಗೆ ಬಿದ್ದೆನೊಪರಮದಯಾಳೊಪಸತಿ-ಸುತ-ಧನದಾಶೆ ಎಂತೆಂಬ ಮೋಹದಿ |ಹಿತದಿಂದ ಅತಿನೊಂದು ಬಳಲಿದೆನೊ ||ಗತಿಯನೀವರ ಕಾಣೆ ಮೊರೆಯ ಲಾಲಿಸೊ ಲಕ್ಷ್ಮೀ-|ಪತಿನಿನ್ನ ಚರಣದ ಸ್ಮರಣೆಯಿತ್ತೆನ್ನ1ಜರೆರೋಗ ದಾರಿದ್ರ್ಯ ಕಶ್ಮಲವೆಂತೆಂಬ |ಶರಧಿಯೊಳಗೆ ಬಿದ್ದು ಮುಳುಗಿದೆನೊ ||ಸ್ಥಿರವಲ್ಲ ಈ ದೇಹ ನೆರೆನಂಬಿದೆನು ನಿನ್ನ |ಕರುಣಾಭಯವನಿತ್ತು ಪಾಲಿಸೊ ಹರಿಯೆ 2ದೋಷವುಳ್ಳವ ನಾನು ಭಾಷೆಯುಳ್ಳವ ನೀನು |ಮೋಸ ಹೋದೆನೊ ಭಕ್ತಿರಸವ ಬಿಟ್ಟು ||ದಾಸರ ಸಂಗವಿತ್ತು ಪಾಲಿಸೊ ಹರಿಯೆ 3
--------------
ಪುರಂದರದಾಸರು
ಪಾಲಿಸಯ್ಯಾ ಫಣಿಗಿರಿವಾಸಜೀಯಾ ಪ.ಪಾಲಿಸೈ ಪಾಲಾಬ್ಧಿಶಾಯಿ ಸುಳೀನೀರದನಿಭಶರೀರ ಶ್ರೀಲೋಲಮೋಹನಲೀಲದುರ್ಜನಕಾಲಕಾಮಿತಫಲಪ್ರದಾಯಕಅ.ಪ.ಮುನ್ನ ಮಾಡಿದ ಕರ್ಮದಿಂದಲಿ ಬನ್ನಪಟ್ಟೆನು ಶ್ರೀಹರಿಇನ್ನು ನಿನ್ನಯ ಚರಣಯುಗವನು ನಿರ್ಣಯದಿ ನಂಬಿದಪರಿಉನ್ನತೋನ್ನತವಪ್ಪ ತೆರದಲಿ ಮನ್ನಿಪುದು ನೀ ಕೃಪೆದೋರಿಬನ್ನಪಡುವುದು ಸಾಕು ಸಂತತ ನಿನ್ನನೆ ನೆರೆನಂಬಿದೆನುಹರಿ1ವಾತಪಿತ್ತಕಫಾದಿ ರೋಗದ ವ್ರಾತದಿಂದ ಬಲು ನೊಂದೆನುಧಾತುಬಲವತಿ ತಗ್ಗಿ ಉಷ್ಣೋಪೇತದಿಂದಲಿ ಬೆಂದೆನುಚಾತುರ್ಥಿಕ ಜ್ವರಾತಿಶಯದಲಿ ಶೀತಸ್ಥಾನದಿ ನಿಂದೆನುಈ ತೆರದ ಕಷ್ಟಗಳು ಬಾರದ ರೀತಿಯಲಿ ಪರಿಹರಿಸು ಸಂತತ 2ನಿನ್ನನೆ ಮರೆಹೋಗುವ ತೆರದಲಿ ನಿನ್ನ ಸ್ಮರಣೆಯ ಮಾಡುವನಿನ್ನ ಭಕ್ತರ ಮೇಳದಲಿ ಸಂಪನ್ನನಾಗುತ ಕೂಡುವನಿನ್ನ ಮೂರ್ತಿಯ ನೊಡುವದು ಮತ್ತೆನ್ನ ಕಾಮಿತ ಬೇಡುವನಿನ್ನನೇ ಧ್ಯಾನಿಸುವ ಮತಿಸಂಪನ್ನವನು ನೀನಿತ್ತು ಕರುಣದಿ 3ವೀರ ವೈಷ್ಣವ ಮಾರ್ಗದೊಳು ಸಂಚಾರ ಮಾಡುವ ತೆರದಲಿಮಾರುತಿಯ ಚರಣಾರವಿಂದದದಿ ಸೇರಿ ನಿನ್ನನು ಧರೆಯಲಿಭೂರಿಮಹಿಮೆಯ ವರ್ಣಿಸುವ ಸಾಕಾರ ಮತಿಯನು ಎನ್ನಲಿಪ್ರೇರಿಸುತ ಕರುಣಾರಸಾಮೃತ ಬೀರಿ ಭೀತಿಯ ಪರಿಹರಿಸುತ್ತಲಿ4ಕೊಂಚ ಧನವನು ಕೊಟ್ಟು ಎನಗೆ ಪ್ರಪಂಚವಹಗೃಹಗೈದಿಸಿಮುಂಚೆಮಾಡಿದ ಪಾಪವನು ನಿರ್ಲಚದಿಂದಲೆ ಛೇದಿಸಿವಂಚಿಸುವ ಬಂಧುಗಳ ಮನವನುಮಿಂಚಿಯೆನ್ನೊಳು ಮೋದಿಸಿಪಂಚಬಾಣನ ಪಿತನೆ ಮಂಗಳ ವಾಂಛಿತವನೆನಗಿತ್ತು ವಿಭವದಿ 5ಕಷ್ಟದಲಿ ನಿನ್ನ ಧ್ಯಾನ ಬಾರದು ತುಷ್ಟಿಯಲಿ ನಾ ಧ್ಯಾನಿಪೆಇಷ್ಟವೇ ನೀನಿತ್ತೆಯಾದರೆ ಕಷ್ಟಗಳ ನಾ ದೂಷಿಪೆಶ್ರೇಷ್ಠ ಕಾರ್ಕಳ ಪುರದಿ ಭಕ್ತರ ಒಟ್ಟುಗೂಡುತ ತೋಷಿಪೆಭ್ರಷ್ಟಲೋಭದ ಬಂಧುಗಳು ಎನ್ನೊಳಿಷ್ಟವಾಗುವ ತೆರದಿ ದ್ರವ್ಯವ6ಕಾಲಭೈರವ ಪೇಳಿದಂದದಿ ನಾಲಿಗೆಯೊಳು ತಪ್ಪು ನೋಡದೆಪಾಲಿಸುತ ಇಷ್ಟಾರ್ಥವನು ಕೈ ಮೇಳವಿಸು ತಪ್ಪು ನೋಡದೆನೀಲಗಿರಿ ಸಮನಾಗಿ ಕಾರ್ಕಳದಾಲಯವ ನೀ ಮಾಡಿದೆಲೋಲಲಕ್ಷ್ಮೀನಾರಾಯಣಾಶ್ರಿತಪಾಲಪಡುತಿರುಪತಿ ಪುರೇಶನೆ 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ವರವ ಕೊಡೆ ತಾಯೆ ವರವ ಕೊಡೆ ಪ.ಶರಧಿಯ ಕನ್ನೆ ನೀ ಕೇಳೈ ಸಂಪನ್ನಳೆಸೆರಗೊಡ್ಡಿ ಬೇಡುವೆನಮ್ಮ ವರವ ಕೊಡೆನೆರೆನಂಬಿದೆನು ನಿನ್ನ ಚರಣಕಮಲವನುಪರಿಹರಿಸೆಮ್ಮ ದಾರಿದ್ರ್ಯ ಕಷ್ಟವ ತಾಯೆ 1ಹೊಳೆವಂಥ ಅರಸಿನ ಹೊಳೆವ ಕರಿಯಮಣಿಸ್ಥಿರವಾಗಿ ಕಟ್ಟುವಂಥ ವರವ ಕೊಡೆತಾಳೋಲೆ ಹೊನ್ನೋಲೆ ತೊಳೆದೊಯ್ದ ಬಿಚ್ಚೋಲೆಯಾವಾಗಲಿರುವಂಥ ವರವ ಕೊಡೆ 2ಬಾಗಿಲ ತೋರಣ ಮದುವೆ ಮುಂಜಿ ನಾಮಕರಣಯಾವಾಗಲಾಗುವಂಥ ವರವ ಕೊಡೆಬಂಧುಬಳಗ ಹೆಚ್ಚಿ ಹೆಸರುಳ್ಳಮನೆಕಟ್ಟಿಉಂಡಿಟ್ಟಿಡುವಂಥ ವರವ ಕೊಡೆ 3ಹಾಲ ಕರೆಯುವ ಮೇಲಾದ ಸರಳೆಮ್ಮೆಸಾಲಾಗಿ ಕಟ್ಟುವಂಥ ವರವ ಕೊಡೆಕಂಡಕಂಡವರಿಗೆ ಕರೆದು ಮೃಷ್ಟಾನ್ನವತಿಳಿ ನೀರು ಕೊಡುವಂಥ ವರವ ಕೊಡೆ 4ಲಕ್ಷ್ಮೀನಾರಾಯಣನ ವಕ್ಷಸ್ಥಳದಲ್ಲಿಲಕ್ಷ್ಮಣವಾಗಿರುವಂಥ ಮಹಾಲಕ್ಷ್ಮಿಅಷ್ಟೈಶ್ವರ್ಯವು ಪುತ್ರಸಂತಾನವಕೊಟ್ಟು ರಕ್ಷಿಸುವವಮ್ಮ ವರವ ಕೊಡೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಹೀಗೆ ಮಾಡಬೇಕೋ-ವಿಠಲ ತಂದೆಹೀಗೆ ಮಾಡಬೇಕೋ ಪಹೇಗಾದರು ದುರಿತಗಳೆನ್ನ ಕಾಡದಹಾಗೆ ಮಾಡ ಬೇಕೋ ಅ.ಪಹಿಂದಿನ ಸುಕೃತಗಳ ಫಲದಿಂದ ಬಂದೀ ನರಜನುಮಮುಂದೆ ನಾ ತಾಯ ಉದರದಲಿ ಜನಿಸದಹಾಗೆ ಮಡಬೇಕೋ ವಿಠಲ ತಂದೆ 1ದಾನಿ ನಿನ್ನನು ಬೇಡುವೆ ದುಷ್ಕರ್ಮದ -ಹಾನಿಯೊಂದೇ ಸಾಲದೆಹೀನ ಮಾನವರಿಗೆ ನಾನು ಕೈಯಾನದಹಾಗೆ ಮಾಡಬೇಕೋ - ವಿಠಲ ತಂದೆ 2ಕರುಣಿಪುರಂದರವಿಠಲ ತಂದೆನೆರೆನಂಬಿದೆ ನಿನ್ನಶರಣ ರಕ್ಷಕನೆಂಬ ಬಿರುದು ಬೇಕಾದರೆಹೀಗೆ ಮಾಡಬೇಕೋ - ವಿಠಲ ತಂದೆ 3
--------------
ಪುರಂದರದಾಸರು