ಒಟ್ಟು 177 ಕಡೆಗಳಲ್ಲಿ , 54 ದಾಸರು , 151 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದು ನಿನ್ನಪಾದ ಸನ್ನಿಧಿಯ ಘನ್ನ ದರುಶನದಿಂದಲಿಪ ಮುನ್ನ ದುರಿತಗಳೆಲ್ಲವು ಛಿನ್ನಛಿನ್ನವುಮಾಡಿ ಬನ್ನಬಡಿಸದೆ ಎಮ್ಮ ಸಲಹುವಸ್ವಾಮಿ ಅ.ಪ ಸುಮನಸರೊಡೆಯ ಕಾಲನಾಮಕನಾಗಿಪ್ಪ ಮೋದ ನಾಮ ವತ್ಸರದಿ ವಿಮ¯ ಚೈತ್ರಕೃಷ್ಣಪಕ್ಷದಶಮಿ ಸೌಮ್ಯವಾಸರದಿ ದ್ಯುಮಣಿ ಉದಯಕಾಲದಲಿ ಮಮಕುಲಸ್ವಾಮಿಯೆ ಎನ್ನ ವಂಶಜಾಪ್ತರ ಅಮಿತಶ್ರಮ ಪರಿಹರಿಸಿ ಈಗ ಶ್ರೀಮನೋಹರ ನಿನ್ನ ವಿಶ್ವರೂಪವ ತೋರ್ದೆ ಪ್ರೇಮ ಇಂದಿಗೆ ಆಯಿತೆ ಅಮಿತಜನ ಬಂಧು 1 ನಿನ್ನ ದರುಶನವೆಂದಿಗಂದಿಗಾಗಲಿ ಎಂದು ನಿನ್ನ ಧ್ಯಾನವನೆ ಮಾಡಲು ಸನ್ನುತಾಂಗನೆ ನೀನೆ ಘನ್ನ ಕರುಣವು ಮಾಡಿ ಎನ್ನ ಯತ್ನವು ಇಲ್ಲದೆ ನಿನ್ನ ದರುಶನಕ್ಕಾಗಿ ಅನ್ಯರಿಂದ ಪ್ರೇರಿಸಿ ಎನ್ನಲ್ಲಿ ಮನವು ಪುಟ್ಟಿಸಿದೆ ಪನ್ನಗಾಚಲನಿಲಯ ನಿನ್ನ ಮಹಿಮೆ ಎಂತುಂಟೋ ಎನ್ನನಿಲ್ಲಿಗೆ ತಂದು ಘನ್ನ ದರುಶನವಿತ್ತೆ 2 ಪಂಕಜೋದ್ಭವನಯ್ಯ ಮಂಕುಕವಿಸಿದೆ ಪಯಣ ಶಂಕೆಯ ಪರಿಹರಿಸಿ ಸಂಕಟಹರಿಸಿ ನಿನ್ನ ಕಿಂಕರರೊಳು ಸೇರಿಸಿ ಬಿಂಕದಲಿ ಗಿರಿಯನೇರಿಸಿ ಪಂಕಜನಾಭ ಮುಕುಂದ ಗೋವಿಂದ ಶಂಕರನುತಪೂಜಿತ ಶಂಖತೂರ್ಯಾದಿ ವಾದ್ಯಗಳಿಂದಲಿ ಶ್ರೀ ವೇಂಕಟೇಶ ನಿನ್ನ ನೋಡಿದೆ ಬಿಡದೇ 3
--------------
ಉರಗಾದ್ರಿವಾಸವಿಠಲದಾಸರು
ಇಷ್ಟೇಕೆ ಎನ್ನ ಮೇಲೆ ಈ ಸಿಟ್ಟು ಹರಿಯೆ ಸೃಷ್ಟಿಗೆ ನೀ ಕರ್ತನಾಗಿ ಶ್ರೀನಿವಾಸಧೊರಿಯೆ ಪ ಇನ್ಯಾರು ಹರಿ ಎನಗಿನ್ನು ಈ ಜಗದೊಳಗೆ ಎನ್ನ ದೂರು ಯಾರಿಗೆ ಮೊರೆಯಿಡಲಿ ಎನಗೆ ಮನ್ನಿಸಿ ದಯಮಾಡಿ ಸುಮತಿಯ ನೀ ತಂದು ಕೈಯನ್ನೇ ಹಿಡಿದು ಇನ್ನು ಈಗ ರಕ್ಷಿಸದಲೆ 1 ಸಕಲ ಜೀವ ರಕ್ಷಕÀನು ಸಾಧುಜನ ಪೋ- ಷಕನು ಸಕಲ ಲೋಕಗಳೆಲ್ಲ ಸಲಹುತಿಹನೊ ಅಕಳಂಕ ಮಹಿಮ ಶ್ರೀ ಆದಿದೇವರ ದೇವ ಭಕುತ ವತ್ಸಲನೆಂಬ ಬಿರುದು ನಿನ್ನಲ್ಲಿ 2 ಇಂದು ಮಾಡಿದ ಪಾಪಗಳು ಇಂದು ಪರಿಹಾರ ಮಾಡಿ ಎನ್ನ ಮುಂದೆ ಧನ್ಯನ ಮಾಡಿ ಮುಕ್ತಾನಂತೆನಿಸಿ ತಂದೆ ' ಹೊನ್ನಯ ವಿಠಲ’ ದಯಮಾಡಿ ಸಲಹದಲೆ 3
--------------
ಹೆನ್ನೆರಂಗದಾಸರು
ಈ ದೇಹ ನಿನ್ನ ಒಳಗೊಂಡಿತೊ ಇಷ್ಟಾದ ಮೇಲೆ ಪ. ದೇಹ್ಯ ಬಾಹ್ಯ ವ್ಯಾಪಾರವ ನೀ ಪರಿಹರಿಸಿದೇ ದೇವ ಅ.ಪ. ದೇಹದೊಳಗಿದ್ದವರು ಬಾಹ್ಯ ವ್ಯಾಪಾರಕ್ಕೆಳೆಯೆ ಈ ದೇಹ ಬಾಂಧವರು ಎಲ್ಲ ಎನ್ನ ದೇಹ ಕೀಳು ಮಾಡಿ ನೋಡೆ ದಾಹ ಹತ್ತಿತೋ ನಿನ್ನಲ್ಲಿ ದೇಹ ಸಾರ್ಥಕವಾಗಲು 1 ರಂಗ ನಿನ್ನ ಸ್ತುತಿಮಾಡೆ ಹಂಗಿಸುವರೆಂದು ಇದ್ದೆ ಹಂಗಿಸಿ ಭಂಗಿಸಿ ರಂಗಕ್ಕೆಳಸಿ ಎನ್ನ ನಿನ್ನ ಅಂತರಂಗಕ್ಕೆ ಎಳೆತಂದೆ ಹರಿ ರಂಗಾ ನಿನ್ನ ಸಿರಿಯಾರೋ ಮಂಗಳ ಮಹಿಮ 2 ಕಂತು ಜನಕನೆ ನಾ ನೆಂದು ಸ್ತುತಿಸಲು ನಿನ್ನ ಅಂತರದಂತಿರಲಿ ಪಂಥ ಬೇಡ ಎನ್ನ ಮೇಲೆ ಇಂತು ಕೃಪೆ ತೋರಿಸುತ ನಿಂತು ಅಂತರಂಗಕೆ ಬಾ ಲಕ್ಷ್ಮೀಕಾಂತ ಶ್ರೀ ಶ್ರೀನಿವಾಸ 3
--------------
ಸರಸ್ವತಿ ಬಾಯಿ
ಎಂತು ಜೀವಿಸಲಯ್ಯ ಯಾದವೇಶ ಪ ಎನ್ನಸುವಿಗಸು ನೀನು ಭಿನ್ನ ಜ್ಞಾನದಿ ಎನ್ನ ಅ.ಪ ಬನ್ನ ಬಡಿಸುವಿ ಮಾಯ ಜೈಸಲರಿಯೆ ವಿಧಿ ವಾಯು ಶಿವ ಶಕ್ರ ಸುರನಿಕರ ನಿನ್ನಲ್ಲಿ ಸುಖಿಸುವರೊ ಅನ್ನೆಲ್ಲಿ ಅಸತೆಂದು 1 ನೀರಗುಳ್ಳೆಯಂತೆ ಸಂಸೃತಿಯ ಸುಖವೆಂದು ದಾರಿತೋರ್ವವ ನೀನು ಕಣ್ಣುಕಟ್ಟೆ ಆರು ಬಿಚ್ಚುವರಯ್ಯ ಆ ಪಟಲಕಿಕ್ಕಟ್ಟು ವಾರಿಜಾಸನನಯ್ಯ ವಂಚಿಸದೆ ಮೈದೋರು 2 ಕಾಮಾದಿ ಷಡ್ವರ್ಗ ದುಷ್ಕರಣ ದುಮ್ಮಾನದ ತಾಮಸದಿ ಸಿಗಬಿದ್ದು ಪಾಮರಾದೆ ವ್ಯೋಮಕೇಶನ ಮಿತ್ರ ಜಯೇಶವಿಠಲ ನೀ ಮನಸು ಮಾಡಲು ಆತ್ಮಾಪಿ ವೈಕುಂಠ 3
--------------
ಜಯೇಶವಿಠಲ
ಎಂಥ ಮಾತನಾಡಿದಿ ಎಲಾ ನೀನು | ಛೀ | ಸಂತನಾದ ಮೇಲೆ ಮುಂಚಿನದೇನೊ ಪ ಊರ ಮುಂದಿನ ಕೆರೆ ಭಾವಿಯ ನೀರು |ಊರೆಲ್ಲ ಬಳಕಿಗೆ ತಾವು ತರುವರು | ಪಾರಮಾರ್ಥಿಕರ ಪಾದೋದಕ ಮಾಡಲು | ನೀರೆಂದು ಅದಕಿನ್ನು ದಾರಾಡುವರು ? 1 ಕಲ್ಲಲ್ಲಿ ಲಿಂಗವ ಮಾಡಿದರೇನೊ | ಲಿಂಗವಲ್ಲದೆ ಕಲ್ಲು ಎಂಬುವರೇನೊ | ಬಲ್ಲ ಸತ್ಪುರುಷರ ಬಗೆಯನರಿತು | ತನ್ನಲ್ಲಿ ಬ್ರಹ್ಮವ ಕಂಡವನೀಗ ನರನೇನೊ 2 ಕಾಮರ ಅಡವಿಯೊಳಿರುವದಾ ತಂದು | ಕಾಮಿಸಿ ಪಾದುಕ ಮಾಡಲು ಎಂದು | ಸ್ವಾಮಿ ಸದ್ಗುರು ಭವತಾರಕ ಮೆಟ್ಟಲು | ಭೂಮಿ ಜನರಡ್ಡ ಬೀಳ್ವರಿದೇನೋ 3
--------------
ಭಾವತರಕರು
ಎನ್ನ ಮನ ಕಂಡಕಡೆಗೆ ಎರಗುತಿದೆನಿನ್ನಲ್ಲಿ ನಿಲಿಸಿ ಕಾಯೊ ಪ ಚಕ್ಷುರಿಂದ್ರಿಯಗಳಿಂದ ಚದುರೆಯರಈಕ್ಷಿಸಿ ನೊಂದೆನೈಯಶಿಕ್ಷಕನು ನೀನೆ ಎನಗೆ ಸಿರಿಯರಸಭಕ್ಕುತರೊಳಿಟ್ಟು ಕಾಯೋ 1 ಶ್ರೋತ್ರೇಂದ್ರಿಯಗಳಿಂದ ಸತತ ದು-ರ್ವಾರ್ತೆಗಳ ಕೇಳಿ ಕೆಟ್ಟೆಕರ್ತೃ ಎನಗೆ ನಿನ್ನಯಾ ಕಥೆಗಳನುಅರ್ಥಿಯಿಂದೆರೆದು ಕಾಯೋ 2 ಘಾಣೇಂದ್ರಿಯಂಗಳಿಂದ ದುರ್ಗಂಧಗಳಘ್ರಾಣಿಸಿ ನೊಂದೆನೈಯಪ್ರಾಣೇಶ ನಿನಗರ್ಪಿತ ಪರಿಮಳವಮಾಣದೆ ಇತ್ತು ಕಾಯೋ 3 ರಸನೇಂದ್ರಿಯಂಗಳಿಂದ ಷಡ್ರಸಗಳನುಹಸಿದು ನಾ ಸೇವಿಸಿದೆನೋಬಿಸಜಾಕ್ಷನೇ ನಿನ್ನಯ ಪ್ರಸಾದವನುಆಸ್ವಾದಿಸೆನಗೆ ದೇವ 4 ತ್ವಚೇಂದ್ರಿಯಂಗಳಿಂದ ತಾಮಸರಸೋಕಿ ನಾ ಕೆಟ್ಟೆನೆಯ್ಯಕಾಕು ಮಾಡದೆ ಎನ್ನನು ಸಿರಿಕೃಷ್ಣಸಾಕಾರನಾಗಿ ಸಲಹೋ 5
--------------
ವ್ಯಾಸರಾಯರು
ಎನ್ನಲ್ಲಿ ಅವಗುಣ ಶತಸಾವಿರವಿರೆ | ಅನ್ಯರ ಕರೆದಾನು ನಡತೆ ಇದೇನೆಂಬೆ ಪ ವೇದವನೋದಿದೆ ಪರರಿ | ಗಾದÀರಿಸಿ ಮುಕುತಿಗೆ | ಹಾದರಹಳು ನಾರಿ | ಮಾದಿಗÀನ ಪೋದಂತೆ 1 ಧನದಾಸೆಯಿಂದ ಸಾಧನವಾಗದೆಂದು | ಜನರಿಗೆ ಉಪದೇಶವನು ಮಾಡುವೆ | ತೃಣ ಹತ್ತದಿದ್ದ | ವಧನರಾಶಿ ಕದ್ದಂತೆ2 ರಸನೇಂದ್ರಿಯಗಳ ಬಂ | ಧಿಸಬೇಕೆಂದು ನಾನು | ಉಸುರುವೆ ಅಲ್ಲಲ್ಲಿ ಕುಶಲನಾಗಿ | ಅಮೃತ | ರಸವಲ್ಲೆನೆಂದಾವ ಮುಸುರಿಯ ಮೆದ್ದಂತೆ 3 ಒಡಿವೆ ವಸ್ತುಗಳು ಸಂಗಡ ಬಾರವು ಮಮತೆ | ಬಿಡು ಸಂಸಾರವಿದು ಕಡಿಗೆ ಭವದ | ಮಡವು ಸಿದ್ಧವೆಂದು ನುಡಿವೆನೊ ಪರರಿಗೆ | ಯಡಹಿಯೊ ಎಂದಾವ ಗಿಡನೇರಿ ಬಿದ್ದಂತೆ 4 ಭಕುತಿ ಕೂಡಿದ ವಿರಕುತಿ ಲೇಶವಿಲ್ಲಾ | ಯುಕುತಿ ಬಾಯಲಿ ನಾರಕಕೆ ಸಾಧನಾ | ಲಕುಮಿವಲ್ಲಭ ನಮ್ಮ ವಿಜಯವಿಠ್ಠಲ ನಿನ್ನ ಅ | ರ್ಚಕನಾಗಿ ಬದುಕತಕ್ಕದ್ದು ಮಾರ್ಗವ ತೋರೊ 5
--------------
ವಿಜಯದಾಸ
ಎನ್ನೊಡನೆ ಹುಟ್ಟಿದ ಹರಿಯೆ ಪಾಹಿ ಪ ಅನ್ನಂತ ಗುಣವನಧಿ ಎನ್ನಂತೆ ನಟಿಸುವಿ ಅ.ಪ ಸೃಷ್ಟಿಕಾಲದ ಮೊದಲು ಇಷ್ಟು ಪರಿಯಂತರದಿ ಅಷ್ಟು ಕಾಲವು ನಿನ್ನ ನಾಮ ಧರಿಸೆ ತುಷ್ಟಿ ಪೂರ್ಣನೆ ನೀನು ಮಂದಿ ಮೋಹಿಸಿ ಎನ್ನ ಕಷ್ಟಕೆ ಗುರಿಮಾಳ್ಪುದುಚಿತವೇ ನಿನಗೆ 1 ಒಳಗಿದ್ದು ಎನ್ನಲ್ಲಿ ಎಂತೆಂತು ನೀನಾದೆ ತಲೆ ಮಣಿದು ನಾನಂತು ಮಾಡಬೇಕೊ ಮಲಗುವುದು ನಿಲ್ಲುವುದು ನಿದ್ದೆಗೈವುದು ಮತ್ತೆ ತಿಳಿವುದು ತಿನ್ನುವುದು ನಿನ್ನ ಶ್ರೀಯವೊ ದೇವ 2 ಬಿಂಬನೀ ಪ್ರತಿಬಿಂಬ ನಾ ನಿನಗೆ ಎಂದೆಂದು ಸದನ ಜಯೇಶವಿಠಲರಾಯ ಡಿಂಬದಲಿ ನಡೆದ ಶ್ರೇಯ ನಿನ್ನದೆಂಬೊಜ್ಞಾನ ಬೆಂಬಿಡÀದೆ ಪಾಲಿಸಿ ಬಿಂಬ ದರುಶನ ನೀಡೊ 3
--------------
ಜಯೇಶವಿಠಲ
ಎಲ್ಲಮ್ಮಾದೇವಿ ನಮ್ಮ ದೇವರು ಬಂದರು ಕಾಣ ಪ. ಸೋಮಾಸುರನೆಂಬ ದೈತ್ಯನು ಸಾಮಕ ವೇದವನೊಯ್ಯಲು ಮಾ ಸೋಮಾಸುರನೆಂಬವನ ಕೊಂದು ಸಾಮಕವೇದವ ತಂದನು ಮಾ 1 ಗುಡ್ಡವು ಮುಳುಗಿ ಪೋಗಲು ನಮ್ಮದೇವ ಗುಡ್ಡವ ಬೆನ್ನಲ್ಲಿಟ್ಟನು ಮಾ ಗುಡ್ಡದಂಥÀ ದೈತ್ಯರನೆಲ್ಲ ಅಡ್ಡÀಕೆಡಹಿ ಬಿಸುಟನು ಮಾ 2 ಚಿನ್ನಗಣ್ಣಿನವನು ಬಂದು ಕನ್ನೆ ಪೆಣ್ಣನೊಯ್ಯಲು ಮಾ ವರ್ಣರೂಪವ ತಾಳಿ ಅವನ ಭಿನ್ನ ಭಿನ್ನವ ಮಾಡಿದನು ಮಾ 3 ಕಂಭದಿಂದಲೆ ಉದಿಸಿ ನಮ್ಮ ದೇವ ಜಂಭದಸುರನ ಬಡಿದನು ಮಾ ನಂಬಿದ ಪ್ರಹ್ಲಾದನ್ನ ಕಾಯಿದ ಅಂಬುಜನಾಭ ನರಸಿಂಗನು ಮಾ 4 ಬಲು ಮುರುಡನಾಗಿ ಭೂಮಿಯ ಬಲಿಯ ದಾನವ ಬೇಡಿದ ಮಾ ಇಳೆಯ ಈರಡಿಯ ಮಾಡಿ ಬಲಿಯ ಪಾತಾಳಕೊತ್ತಿದ ಮಾ 5 ಕೊಡಲಿಯನ್ನು ಪಿಡಿದು ನಮ್ಮದೇವ ಕಡಿದ ಕ್ಷತ್ರಿಯ ರಾಯರ ಮಾ ಹಡೆದ ತಾಯ ಶಿರವ ತರಿದು ಪಡೆದನಾಕೆÉಯ ಪ್ರಾಣವ ಮಾ 6 ಎಂಟೆರಡು ತಲೆಯ ಅಸುರನ ಕಂಠವ ಛೇದಿಸಿ ಬಿಟ್ಟನು ಮಾ ಒಂಟಿರೂಪವ ತಾಳಿ ಲಂಕೆಯ ಬಂಟ ವಿಭೀಷಣಗಿತ್ತನು ಮಾ 7 ಸೋಳಸಾಸಿರ ಗೋಪಿಯರೊಡನೆ ಕೇಳೀಮೇಳದಲಿಪ್ಪನು ಮಾ ಬಾಲಕನಾಗಿ ಪೆಣ್ಣರೂಪದಲಿ ಶ್ರೀ- ಲೋಲ ಲಕ್ಷ್ಮಿಯ ಅರಸನು ಮಾ 8 ಒಪ್ಪದಿಂದಲಿ ಬಂದು ನಮ್ಮ ದೇವ ಇಪ್ಪೆವನದೊಳಗಿಪ್ಪನು ಮಾ ಸರ್ಪಶರನಾಗಿ ಪೋಗಿ ತ್ರಿಪುರಸಂಹರ ಮಾಡಿದ ಮಾ 9 ಎಲ್ಲಮ್ಮಾ ಎಲ್ಲಮ್ಮಾ ನಮ್ಮದೇವ ಬಲ್ಲಿದ ಕಲ್ಕ್ಯವತಾರನು ಮಾ ಇಳೆಯ ಸ್ವರ್ಗ ಪಾತಾಳಕೊಡೆಯ ಚೆಲುವ ಹಯವದನನು ಮಾ 10
--------------
ವಾದಿರಾಜ
ಏಕಾಂತದಲಿ ಬಂದು ಮಾತು ನುಡಿದೆ ಶ್ರೀ | ಕಾಂತ ನಿನಗಿದು ಸುಲಭವಾಗಿದೆ ನೋಡು ಪ ಪರಧನವನಪಹರಿಸಿಕೊಂಡು ಬೆಳೆದು ಇದ್ದ | ವರ ಮನೆಯೊಳಗಡಲೇತÀಕೆ | ನಿರುತ ಎನ್ನ | ಹೃದಯವೆಂಬೊ ಗಾಡಾಂಧಕಾರ | ಭರಿತವಾಗಿದೆ ಇಲ್ಲಿ ಅಡಗಬಾರದೆ ಬಂದು 1 ಕೇವಲ ಹಕ್ಕಲದ ವನದೊಳು ಪೊಕ್ಕು ಬೇಟೆ | ಕಾವಲಾರಣ್ಯ ಇಲ್ಲಿ ವಿಂಡೂ ತುಂಬಿದೆ | ಸಾವಧಾನದಿ ಬೇಟೆ ಆಡÀಬಾರದೆ ಬಂದು 2 ವೈಕುಂಠ ಮೂರು ಸ್ಥಾನದಲಿ ಮುಕ್ತರಿಗೆ | ಬೇಕಾದದೀಯಾಬೇಕು ಕಡಿಮೆ ಇಲ್ಲಾ | ನೀ ಕೇಳು ಎನ್ನಲ್ಲಿ ಸರಿ ಬಂದಂತೆಯಲ್ಲದೆ | ವಾಕು ಪೇಳುವೆ ನಿಲ್ಲು ವಿಜಯವಿಠ್ಠಲ ಬಂದು3
--------------
ವಿಜಯದಾಸ
ಏಕಿಷ್ಟು ಕರುಣವೊ ಶ್ರೀಕೃಷ್ಣದೇವ ಪ ನಾಲ್ಕ್ಹತ್ತು ಲೋಕದಲಿ ಸುಖ ಸೂರೆ ಮಾಳ್ಪೊ ಹರಿ ಅ.ಪ ಮುಕ್ತಗಣ ನೋಡಯ್ಯ ನಿತ್ಯಮುಕ್ತಳ ನೋಡು ಶಕ್ತವಿಧಿ ವಾಣೀಶ ಭಕ್ತಿ ದೇವ ಫಣಿ ರುದ್ರ ಇವರ ಸತಿಯರ ನೋಡು ಉತ್ತಮೋತ್ತಮ ಸುಖವ ಸೂರೆಗೊಂಬರೊ ಹರಿಯೆ 1 ನಿನ್ನಾರು ಮಹಿಷಿಯರ ಸುರಪ ಸುರಗಣ ನೋಡು ಪುಣ್ಯತಮ ಸುರಮನಿಯ ಭೃಗುವ ನೋಡು ಚಿಣ್ಣ ಪ್ರಹ್ಲಾದನನ್ನ ಬಲಿ ಧ್ರುವ ಭೀಷ್ಮನ್ನ ಇನ್ನು ದ್ರೌಪದಿ ಶುಕನ ಆನಂದ ನೋಡಂiÀi್ಯ 2 ಅಂಬರೀಷನ ನೋಡು ರಾವಣಾನುಜ ಜನಕ ಪರೀಕ್ಷಿತ ವೃತ್ತ ಶಬರಿ ತುಂಬಿದ ಸದ್ಭಕ್ತ ಋಷಿಪತ್ನಿಯರ ನೋಡು ಕಂಬನಿಯ ಸುರಿಸುವೆನೊ ಕರುಣಿಸೊ ಹೃದ್ಗøಹದಿ 3 ನೀಯೆನ್ನ ಸತ್ವ ನೀಯೆನ್ನ ಜ್ಞಾನ ನೀಯೆನ್ನ ಮನ ಬುದ್ಧಿ ಕರುಣ ನಿಧಿಯೆ ನೀಯೆನ್ನ ಪ್ರಾಣರತಿ ನೀಯೆನ್ನ ಸತ್ಕರಣ ನೀಯೆನ್ನ ಧೃತಿ ಶಾಂತಿ ನೀಯೆನ್ನ ಸರ್ವನಿಧಿ 4 ನೀ ಮಾಡೆ ನಾ ಮಾಳ್ಪೆ ನೀನಾಡಿಸಿದರಾಡ್ವೆ ಕಾಮದನೆ ಕಾಮಪಿತ ಜಯೇಶವಿಠಲ ಶ್ರೀ ರಮಣ ಸರ್ವೇಶ ಈ ಮನಸು ನಿನ್ನಲ್ಲಿ ಪ್ರೇಮದಿ ನೆಲಸಿ ಇರುವಂತೆ ಕೃಪೆಮಾಡು 5
--------------
ಜಯೇಶವಿಠಲ
ಏನು ಮರುಳಾಗುವೆಯೇ ಎಲೆಮಾನವ ನಿನ್ನ ಮಾನಿನಿಯ ಗುಣಕೆ ನೀ ಹಿಗ್ಗಿ ಹಿಗ್ಗಿ ಪ ದಾನ ಧರ್ಮಗಳ ಕೊಡಬೇಕೆಂದರೊಡ ಬಡಲು ಹೀನ ಗುಣಗಳನೆ ತಾ ಸೇವಿಸುವಳು ಜ್ಞಾನ ಮೋಕ್ಷಾದಿಗಳ ಹಾದಿಯನುಕಟ್ಟಿ ಭವ ಕಾನನವನೆ ಹೊಗಿಸಿ ತೊಳಲಿಸುವಳು 1 ನರಕವನು ತನ್ನಲ್ಲಿ ನೆಲೆಮಾಡಿ ಕೊಂಡಿಹಳು ಪರಿಪರಿಯ ಮೋಹಗಳ ಬೀಸುತಿಹಳು ಸ್ಮರನ ಬಾಣವ ಮಾಡಿ ಸಾಲು ಗೊಲೆಕೊಲ್ಲುವಳು ಅರಿಯದವರಂತೆ ಮಿಣ್ಣಗೆ ಇರುವಳು 2 ತನ್ನಮನ ಬಂದಂತೆ ಚರಿಸುವಳು ಪಗಲಿರುಳು ಕನ್ನಗೊಯ್ಕರ ವೋಲು ಕೊರೆಯುತಿಹಳು ಭಿನ್ನಭಾವದಿ ನಡೆದು ಮನೆಯ ಪಾಲ್ಮಾಡುವಳು ಕಣ್ಣಿನೊಳು ಕಂಡೊಡವೆಗಳನಿರಿಸಳು 3 ಸುದತಿ ಯಾಕಾರೆ ಯಾಗಿಹಳು ನೋಯೆ ನುಡಿವಳು ಕಂಡ ಕಂಡವರೊಳು ಹೋಯೆಂದು ಕೂಗುವಳು ಶಿಕ್ಷಿಸಳು ನಿನ್ನನುರೆ ಬಾಯೊಳಗೆ ಭಯಬಿಡಿಸಿ ಹಾಗಿಸುವಳು 4 ಕಾಮ ಕ್ರೋಧಾದಿಗಳ ಕೀಲ ಬಲಗೊಳಿಸುವಳು ಪ್ರೇಮ ಗೆಡಿಸುವಳೆಲ್ಲ ಬಾಂಧವರನು ಭೂಮಿಯೋಳಗಧಿಕ ಭೀಮನ ಕೋಣೆ ಲಕ್ಷ್ಮೀಪತಿಯ ನೆನೆನೆನೆದು ಸಖಿಯಾಗು ಕಂಡ್ಯಾ 5
--------------
ಕವಿ ಪರಮದೇವದಾಸರು
ಒಲವಿಲ್ಲವೆನ್ನಬಹುದೇ ನೀರೆ ನಿನ್ನಲ್ಲಿ ಚೆಲುವ ವೇಲಾಪುರದ ಚೆನ್ನಿಗನಿರವ ನೋಡಿ ಪ ತರಳೆ ನಿನ್ನಯ ಮೋಹ ವಿರಹದಿರವದ ಬಗೆಯ ಸ್ಮರನರಳ ಸರಳುಗಳ ಉರವಣಿಯ ಘನವಾ ಪರೆಯದಿಂ ಮೋದಕದಿ ಬಿಂದುಗಳು ಮೊಳಗೆ ಕ ಸ್ತುರಿ ತಿಲಕ ಮಸುಳಿಸಲು ಬಂದ ಗುಣಮಣಿಯೇ 1 ನೀಲಜೀಮೂತಸನ್ನಿಭದೋರೆದುರುಬಿನ ಮೇಲೆ ಸುತ್ತಿದ ಬೆಂಮುರಿ ಜಾರೆಗುರುಳೂ ಭಾಳದಿಂ ಪರೆಯೆ ಕಡುತವಕದಿಂದೆನ್ನ ನುಡಿ ಗೇಳುತಲೆ ಬಂದನಿದೆ ನೋಡೆ ಗುಣಮಣಿಯೇ 2 ಸೋಗೆ ಮುಡಿಯಳೆ ನಿನ್ನ ಕಾಂಬೆನೆಂದರ್ಥಿಯಲಿ ರಾಗ ಮಿಗೆ ವೈಕುಂಠ ವಿಠಲನಾಥ ತಾನಾದ ಬೇಗದಿಂ ನೆರೆದು ಸುಖಿಯಾಗು ಪೆಣ್ಮಣಿಯೆ 3
--------------
ಬೇಲೂರು ವೈಕುಂಠದಾಸರು
ಕಡಲಶಯನ ಹರಿಯ ತೊಡೆಯಲ್ಲಿ ಮಡದ್ಯೇರಿಬ್ಬರು ಕುಳಿತು ಪ ಪನ್ನಂಗಶಯನ ಕೇಳೆ ಸ್ವಾಮಿ ನೀ ಎನ್ನ ಮನೆಗೆ ಏಳೊ ನಿನ್ನ ಪಾದಕ್ಕೆ ಎರಗುವೆನೆಂದು ಭಾಮೆ ಕೈ- ಯನ್ನು ಮುಗಿದಳಾಗ 1 ಎನ್ನ ಮನೆಯಲ್ಲಿದ್ದ ಶ್ರೀಹರಿ- ಯನ್ನು ಕರೆಯಲವರ ಕಣ್ಣೇಸೆನುತಲಿ ಕರ್ಣಿ(ನ್ಯೆ?) ರುಕ್ಮಿಣಿ ಕೋಪ- ವನ್ನು ಧರಿಸಲಾಗ 2 ಎಷ್ಟು ಹಣವ ನೀನು ಕೃಷ್ಣಗೆ ಕೊಟ್ಟು ಕೊಂಡಿ ಹೇಳೆ ದಿಟ್ಟತನದ ಮಾತಾಡೋ ರುಕ್ಮಿಣಿ ನಿನ್ನ ಶ್ರೇಷ್ಠತನವೇನ್ಹೇಳೆ 3 ಹತ್ತು ಆರು ಸಾವಿರದಷ್ಟ ಭಾರ್ಯೇರವೊಳಗೆ ಸತ್ಯಭಾಮೆ ಉತ್ಕøಷ್ಟ ಚೆಲುವೆಯೆಂದು ಕೃಷ್ಣ ನಿನ್ನಲ್ಲಿಹನೆ4 ಹದಿನಾಲ್ಕು ಲೋಕದಲಿ ಹರಿ ಪಾದಾಂಬುಜವ ಕಾಂಬುವೋರಿಲ್ಲೆ ಯದುನಾಥನ ಎದೆ ಮ್ಯಾಲ್ಹತ್ತಿರುವೋದು ಇದು ಸೋಜಿಗವಲ್ಲೆ 5 ಇಷ್ಟೆ ಸೋಜಿಗವೆಂದು ಆಡಲು ದಿಟ್ಟೆ ನಿನಗೆ ಅರಿದೆ ಅಷ್ಟದಿಕ್ಪಾಲಕರನೆ ಓಡಿಸಿ ವೃಕ್ಷ ಕಿತ್ತು ಒದರು(ರುವು?) ದಲ್ಲೆ 6 ಜಲಪ್ರಳಯ ಕಾಲದಲಿ ಜನರಿಲ್ಲದ ಅಂಧಕಾರದಲಿ ಎಲೆಯಾಗಾ ಪರಮಾತ್ಮನ ಮನವ ನೀ ಮೊ- ದಲೆ ಒಲಿಸಿಕೊಂಡೆ 7 ಕಾದು ಸೇವಿಸೆ ಹರಿಯ ಪಾದದ- ಲ್ಲಾದರವಿಲ್ಲದಲೆ ದಾನ ಮಾಡುತ ಮುನಿಹಿಂದಟ್ಟಿದರ್ಹರಿ ಹ್ಯಾಗೆ ಬರುವನ್ಹೇಳೆ 8 ಮೂರು ಲೋಕದ ದೊರೆಯ ಮೂರೆಲೆ ತುಳಸಿ- ಸರಿಯ ಮಾಡಿ ಮುಕುತಿದಾಯಕ ಕೈವಶವಾ- ಗಿರಲು ನೀ ಸಕಲ ಮಾಯವ ಬಲ್ಲೆ 9 ಪಟ್ಟದ್ವೊಲ್ಲಭೆ ನಾನು ಕೃಷ್ಣಗೆ ಮೆಚ್ಚಿ ಬಂದೆಯೆ ನೀನು ಅಚ್ಚುತ ತಾ ಪರಮಾನುಗ್ರ(ಹ)ವ ಮಾಡಿ ಬಂ- ದಿಚ್ಛೆಲಿರುವ ತಾನು10 ಮಾತಾಪಿತರು ಅನುಜನನ್ವಂಚಿಸಿ ಈತಗ್ವಾಲೆಯ ಬರೆದು ಯಾತಕಂಜಿಕೆ ವಲಿಸ್ಯೋಡಿ ಬಂದವಳೆಂದು ಕೀರ್ಹೊಗಳುವುದಲ್ಲೆ 11 ತಂದು ಕೊಡಲು ಮಣಿಯ ಸಭೆಯೊಳು ಅಂದು ತಗ್ಗಿಸಿ ತಲೆಯ ನಿಂದ್ಯದ ಮಾತಿಗೆ ತಂದು ನಿಮ್ಮಯ್ಯ ಮುಂದಿಟ್ಟು ಪೋದನೆ ನಿನ್ನ 12 ಕೇಳೊ ಕೇಳೊ ನುಡಿಯ ನೀನೀ- ರೇಳು ಲೋಕದ ಒಡೆಯ ಹೇಳೋ ಬುದ್ಧಿ ನಿನ್ನಯ ವಲ್ಲಭೆ ಮಾತಾ- ಡೋಳೊ ನಿರ್ಭಿಡೆಯ 13 ರಕ್ಕಸಾಂತಕ ಕೇಳೊ ನಿನ್ನ ಚಿಕ್ಕವಲ್ಲಭೆ ಮ(ಹಿ)ಮೆ ಉಕ್ಕಿ ಉಕ್ಕಿ ಎನ್ನ ಮ್ಯಾಲೆ ಬರಲು ನಿನ- ಗಕ್ಕರ ತೋರುವುದೆ 14 ಆರ್ಯಳೆಂದು ನಾನು ತಾಳಿದೆ- ನಕ್ಕ ರುಕ್ಮಿಣಿ ಮಾತ ಏರಿ ಏರಿ ಏನ್ನಮ್ಯಾಲೆ ಬರಲು ಇದು ನ್ಯಾಯವೇನೊ ನಿನಗೆ 15 ನಾಲ್ಕು ತೋಳಿನಿಂದ ಆಲಿಂಗಿಸಿ ಕಾಂತೆಯರಿಬ್ಬರನು ಯಾತಕಿಂಥ ಕದನವು ಘನವಾಯಿತು ಸಾಕು ಸಾಕುಯೆನುತ16 ವಾರಿಜಾಕ್ಷ ಕೇಳೋ ನಾರದ- ರ್ಹೂಡಿದರೀ ಜಗಳ ಪಾರಿಜಾತ ಸರಿಸವತಿಗೆ ಕೊಟ್ಟ- ರಿನ್ಯಾರು ಸೈರಿಸೋರ್ಹೇಳೊ 17 ನಂದನವನ ತರುವ ನಾ ತಂದಿಟ್ಟೆನಂಗಳದಲ್ಲೆ ಅಂದಿಬ್ಬರನಾನಂದವ ಬಡಿಸಿದ ಚೆಂದದಿಂದಲಿ ನಗುತ 18 ಭಾಮೆ ರುಕ್ಮಿಣಿ ಸಹಿತ ನಡುವೆ ಭೀಮೇಶ ಕೃಷ್ಣನು ಕುಳಿತ ಕಾಮನಯ್ಯನ ಚರಿತ್ರೆಯ ಪಾಡ- ಲಮೃತ ಪಾನವು ನಿರುತ 19
--------------
ಹರಪನಹಳ್ಳಿಭೀಮವ್ವ
ಕನಕಮುನಿ ಕರಕಮಲ ಪೂಜಿತಾಂಘ್ರಿ ಮನುಜಮೃಗವೇಷ ಮಾರಮಣ ನಿನಗಾನಮಿಪೆ ಪ ನಿರವದ್ಯ ನಿರವಧಿಕ ಮಹಮಹಿಮ ಸ್ವರ್ದುನಿ ಪಿತನೆ ಸಮಭ್ಯಧಿಕ ಶೂನ್ಯ ವರ್ಧಿಸಲಿ ನಿನ್ನಲ್ಲಿ ಸದ್ಭಕ್ತಿ ಖಳಸಂಪ್ರ ಮರ್ದನ ಮಮಸ್ವಾಮಿ ಸರ್ವರಂತರ್ಯಾಮಿ 1 ತೀರ್ಥಪದ ನಿನ್ನ ಸತ್ಕೀರ್ತಿ ಸರ್ವತ್ರ ಕೀರ್ತಿಸುವ ಭಕ್ತರ ಭವಾಬ್ಧಿಹರನೆ ಪಾರ್ಥಸಖ ಸರ್ವದಾ ಪ್ರಾರ್ಥಿಸುವೆ ನಿನ್ನ ಚಿ ನ್ಮೂರ್ತಿ ಮನದಲ್ಲಿ ಸ್ಪೂರ್ತಿಸಲಿ ಸರ್ವದಾ 2 ಸೂತ್ರನಾಮಕ ಪ್ರಾಣಮಿತ್ರ ಭಾರತ ಪಂಚ ರಾತ್ರಾದಿ ಆಗಮಸೂತ್ರಪ್ರಿಯ ಕ್ಷೇತ್ರಜ್ಞ ಶ್ರೀ ಜಗನ್ನಾಥವಿಠ್ಠಲ ಅಹೋ ರಾತ್ರಿಯಲಿ ನಿನ್ನವರ ಸಹವಾಸ ಕೊಡು ಎನಗೆ3
--------------
ಜಗನ್ನಾಥದಾಸರು