ಒಟ್ಟು 108 ಕಡೆಗಳಲ್ಲಿ , 5 ದಾಸರು , 106 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆ ನಮಿಪೆ ಗುರುಸಂತತಿಗೆ ಸತತ ಗೆ ಜ್ಞಾನ ಭಕ್ಯಾದಿಗಳ ಕರುಣಿಸಲಿ ಎನಗೆಂದು ಪ ಹಂಸನಾಮಕ ಹರಿ ಬ್ರಹ್ಮಗುರುವರ ಸರೋ ಜಾಸನ ಪುತ್ರರೆನಿಸಿಕೊಂಬಾ ಆ ಸನಕ ಸನಂದನ ಕುಮಾರಕರ ಶಿಷ್ಯ ದೂ ರ್ವಾಸಮುನಿ ಜ್ಞಾನನಿಧಿ ತೀರ್ಥ ಪದಾಬ್ಜಗಳಿಗೆ 1 ಗರುಡವಾಹನತೀರ್ಥ ಕೈವಲ್ಲಜ್ಞಾನೇಶ ಪರತೀರ್ಥ ಸತ್ಯ ಪ್ರಜ್ಞ ಪ್ರಾಜ್ಞರಾ ವರಕುಮಾರಕ ತಪೋರಾಜ ಸಂಯಮಿ ವಿಮಲ ಅಚ್ಯುತ ಪ್ರೇಕ್ಷರಿಗೆ 2 ಪದ್ಮನಾಭ ನರಹರಿಮುನಿಪ ಶ್ರೀ ಮಾಧವಕ್ಷೋಭ್ಯಯತಿ ಜಯಾರ್ಯ ಧೀಮಂತ ವಿದ್ಯಾಧಿರಾಜ ಸುಕವೀಂದ್ರ ನಿ ಸ್ಸೀಮ ವಾಗೀಶಯತಿ ರಾಮಚಂದ್ರಾರ್ಯರಿಗೆ 3 ವಿದ್ಯಾನಿಧಿ ರಘುನಾಥ ರಘುವರ್ಯೋತ್ತಮ ಕರ ಪದ್ಮ ಸಂಜಾತ ವೇದವ್ಯಾಸರಾ ವಿದ್ಯಾಪತಿ ಅಧೀಶನಿಧಿ ಸತ್ಯವ್ರತ ನಿಧಿಯಾ ಪಾದ ಕಮಲಗಳಿಗೆ 4 ಸತ್ಯಾಭಿನವ ಪೂರ್ಣ ಸತ್ಯವಿಜಯ ಪ್ರೀಯಾ ಸತ್ಯಬೋಧರ ಸತ್ಯಸಂಧವರರಾ ನಿತ್ಯದಲಿ ನೆನೆದು ಕೃತಕೃತ್ಯನಾಗುವೆ ಬಿಂಬ ಮೂರ್ತಿ ಜಗನ್ನಾಥವಿಠಲನ ತೋರಿಸಲೆಂದು 5
--------------
ಜಗನ್ನಾಥದಾಸರು
ಆದಿಯುಗದಿ ಮಹ ಆದಿದೈತೇಯನೊಬ್ಬ ಮೇದಿನಿಯೊಳ್ ಸ್ವರ್ಣಕಶ್ಯಪು ನಾಮದಿ ಸಾಧಿಸಿ ಬಂದವಗೊಬ್ಬ ಸೋದರ ಸ್ವರ್ಣಾಂಬಕನೆನಿಸಿ ಮೇದಿನಿ ಚೋರನಾಗಿ ಹತನಾದನು ಆದಿಶೇಷನೆ ವಿಷ್ಟಕ್ಸೇನ ತಾ- ನಾದ ಪ್ರಹ್ಲಾದ ಪ್ರಾಣಾವೇಶದಿಂದ ಸೋದರ ಜೀವಾಂಶಾಪಾನಾವಿಷ್ಟ ಸ- ಲ್ಹಾದನಾಮಕ ಮಿತ್ರನಾದ ಕ ಹ್ಲಾದ ವ್ಯಾನಾವೇಶದಿಂದ ಮೋದದಿ ಸೋಮಾಂಶೋದಾನಾಯುತ ನು- ಹ್ಲಾದ ನಾಮಕ ಸಂಭೂತನಾದ ಆದರೈವರಾದೈತ್ಯಗೆ ಪುತ್ರರು ಮೇದಿನಿ ಸುರರುದ್ಧಾರಗೋಸುಗ ಆದಿದೈವ ನಾರೇಯಣ ತಾ ನಾದಿಕಾರಣ ವಿಶ್ವಕರ್ತಾ ಮೋದಾನಂದ ಮೂರುತಿ ಸುಗುಣ ಭೋಧಪೊರ್ಣ ಸರ್ವಜ್ಞ ಸ್ವಾತಂತ್ರ ವೇದಪುರುಷಾದಿ ಜಡಾದಿ ಜಗಕೆ ಆಧಾರ ಹರಿ ಎಂಬ ಜ್ಞಾನವ ಭೋದಿಸಿ ಬೊಮ್ಮಮುಖರು ಹರಿ ಪಾದಸೇವಕರೆನುತ ನಿತ್ಯ ವಾದದಿ ವಾದಿಗಳ ಜಯಸಿದರವರ ಪಾದಸೇವಿಸಿ ಕರುಣಾಪಡೆದು ಆದಿ ಗುರು ಜಗನ್ನಾಥವಿಠಲನ್ನ ಆದರದಲಿ ಭಜಿಪೆ ಪರಮ ಸುಖ ರಾಗ :ಕಲ್ಯಾಣಿ ಅಸುರರ ಜನ್ಮದಿ ಪುಟ್ಟಿದ ಇವರಿಗೆ ಶ್ವಸನನ ಆವೇಶ ಸುರರಾವೇಶ ಬಲದಿ ಅಸಮಙÁ್ಞನ ಭಕುತಿ ವಿರಾಗವು ವಸುಧಿಯ ತಳದಿ ದಿನದಿನದಲ್ಲಿ ಪಸರಿಪ ಸೂರ್ಯನ ಪ್ರಭೆಯಂದದಲಿ ಮಿಸುಪದಕಿದೇ ಕಾರಣ ಉಂಟು ಬಿಸಜಾಂಬಕ ಹರಿಪೇಳಿದ ಇವರಿಗೆ ಅಸುರೇಶ ಹಿರಣ್ಯಕಶಿಪುವಿನಲ್ಲಿ ಶಿಶುಭಾವದಿಂದ ಜನಿಸಲು ಪೋಗಿರಿ ಪುಸಿಯಲ್ಲ ಮಚ್ಛಾಪÀ ಅಸುರಭಾವ ಪ್ರಲ್ಹಾದಾದ್ಯ ರಸಮಮಹಿಮರಾಗೀ ಜನಿಸಿರೆಂದು ಉಸುರಿದ ವಾಕ್ಯವು ಪ್ರಮಾಣ ಸಿದ್ಧವೆನ್ನಿ ವ್ಯಸನzಲೈವರು ಹರಿಯನೆ ಮತ್ತೆ ಬೆಸಗೊಂಡರೀಪರಿ ಪರಿಯಾ ಅಸುರನ ಪತ್ನಿಯ ಬಸಿರೊಳು ಪುಟ್ಟುವುದು ವಶವಲ್ಲವೋ ಸ್ವಾಮಿ ಕುಸುಮನಾಭನೆ ನಿನ್ನ ಅಸಮಲೋಕದ ಸುಖ ವಸುಧಿತಳಾದಲ್ಲಿ ಎಸಗದು ಎಸಗದು ಎಂದಿನಕಾಲಕ್ಕೂ ಮುಸುಕುವದಙÁ್ಞನ ದುಃಖದ ಭವದಲ್ಲಿ ಕಸವಿಸಿಗೊಳುತಾ ಙÁ್ಞನವನೀಗಿ ಬಿಸನಿಲಯನೆ ನಿನ್ನ ದರುಶನವಿಲ್ಲದೆ ಅಸುನಿಲ್ಲುವ ಬಗೆ ಯಾವುದು ಪೇಳೋ ಶಶಿಧರವಂದ್ಯ ಗುರುಜಗನ್ನಾಥ ವಿಠಲ ನಮ್ಮ ವ್ಯಸನವನು ಕಳೆದು ಸುಖವನು ಸಲಿಸೋ ರಾಗ - ಕಾಂಭೋದಿ ತಾಳ - ತ್ರಿವಿಡಿ ಭಕುತವಾಕ್ಯವ ಲಾಲಿಸಿ ತಾನಾಗ ಪರಿ ನುಡಿದನು ವಿಕಳ ಪೊಂದದೆ ನೀವು ತ್ವರಿತಾದಿ ಧರೆಯೊಳು ಸಕಲರು ಜನಿಸಲು ಮುಸಕದಙÁ್ಞನ ಲಕುಮಿ ಭೂಮಿಯ ಸಹಿತ ಇರುವೆನು ನಿಮ್ಮೊಳು ನಿತ್ಯ ಪರಿಪರಿ ಮಹಿಮವ ಪ್ರಕಟಮಾಡುವೆ ಮುಖ್ಯಪ್ರಾಣನಿಪ್ಪನು ಸತತ ಕಕುಲಾತಿ ಯಾಕಿನ್ನು ನಡಿರೆಂದು ಹರಿಯೆಂದ ಉಕುತ ವಾಕ್ಯದಲಿಂದ ದಿತಿಜನಲ್ಲಿ ಸುಕೃತಿಗಳೈವರು ಉದಯವೈದಿದರಾಗ ಮುಕುತಿದಾಯಕ ಗುರುಜಗನ್ನಾಥ ವಿಠಲನೆಂಬ ಭಕುತಿ ಪೂರ್ವಕ ಙÁ್ಞನವೃದ್ಧಿಯೈದಿದರು ರಾಗ - ಆರಭಿ ತಾಳ - ಅಟ್ಟ ಪಿರಿಯ ಪ್ರಲ್ಹಾದನ್ನ - ಕರದು ತೊಡೆಯ ಮೇಲೆ ಇರಿಸಿ ಪ್ರೇಮದಿ ನಿಮ್ಮ - ಗುರುವೇನು ಪೇಳ್ಯಾನೆ ಮರಿಯಾದೆ ಎನಮುಂದೆ - ಅರಹು ಎನಲು ಬಾಲ ಕಿರಿನಗೆ ಮುಖದಿಂದ - ಹರಿಯೆ ಸರ್ವೋತ್ತಮ ಹರಬೊಮ್ಮ ಮುಖರೆಲ್ಲ - ಪರಿವಾರಭೂತರು ಅರಿದಿಪ್ಪೆ ಎನ್ನಯ್ಯ ಸರಸಿಜಜಾಂಡಕ್ಕೆ ಅರಸು ತಾನಾಗಿದ್ದು ಇರುವಾದಿ ಚೇತನ ತರುವಾದಿ ಜಡಮಯ ಸರ್ವಸ್ಥಳದಲ್ಲಿ ನಿರುತದಿ ವ್ಯಾಪಿಸಿ ಇರುತಿಹ ಹರಿ ಎಂದು ಅರಿತ ಮಾನವÀÀನಿಗೆ ದೊರೆವೋನು ನಿಶ್ಚಯ ಅರಿತು ಪೇಳಿದ ತನ್ನ ತರಳಾನ ನುಡಿಕೇಳಿ ಭರದಿಂದ ಕಂಬವ ಕರದಿಂದ ಬಡಿಯಾಲು ನರಮೃಗಾಕಾರದಿ ಹೊರಗೆ ಬಂದಾದೈತ್ಯನು ದರವ ಬಗೆದು ಕರುಳಮಾಲೆಯತಾ ಕೊರಳೊಳು ಧರಿಸಿದ ಚರಜನ ಪರಿಪಾಲ ಬಿರುದು ಬೀರಿದ ನಮ್ಮ ಗುರುಜಗನ್ನಾಥವಿಠಲ ಶರಣರ ಮರೆಯನೋ ಧರಿತಳದೊಳಗೆ ರಾಗ :ಇಚ್ಛಾ :ತಾಳ - ಆದಿ ಈ ತೆರ ಪ್ರಹ್ಹಾದ ಹರಿಪಾದವ ಭಜಿಸಿ ಪ್ರೀತಿಯ ಪಡೆದು ಭೂಸುರಗಣಕೆ ಭೂತಳದೊಳಗೆ ಯತಿಗಳ ಕುಲಕೆ ನಾಥನು ವ್ಯಾಸಮುನಿ ಎನಿಸಿ ಮರಳಿ ಖ್ಯಾತ ಶ್ರೀ ರಾಘವೇಂದ್ರನೆಂದೆನಿಸಿ ಪ್ರೀತಿಯಿಂದಲಿ ಭಕ್ತರ ಪೊರೆಯಲು ನೀತಿ ಭಾವದಲಿ ಯತಿಯಾಶ್ರಮ ಪೊಂದಿ ಸೀತಾಪತಿರಾಮ ಯದುನಾಯಕ ಕೃಷ್ಣ ಭೀತಿಹರ ನರಸಿಂಹ ವ್ಯಾಸರ ಭಜಿಸಿ ದೂತರ ಮನೋರಥ ಪೂರ್ತಿಸಿ ಪೊರೆವನು ದಾತಗುರುಜಗನ್ನಾಥ ವಿಠಲನ್ನ ನೀತ ವಿಭೂತಿಯ ಪಡೆದು ನಿರ್ಭೀತನಾಗಿಹನು ಜತೆ ದೂತಜನರ ಮಹಾಪಾತಕ ಹರನೆನ್ನಿ ಪ್ರೀತಗುರುಜಗನ್ನಾಥವಿಠಲನೊಲಿವ ರಾಗ :ಶಂಕರಾಭರಣ :ತಾಳ :ಏಕ
--------------
ಗುರುಜಗನ್ನಾಥದಾಸರು
ಆನೆಂತು ತುತಿಪೆ ನಿನ್ನಾ ಶ್ರೀ ಗುರು ರನ್ನಾ ಆನೆಂತು ತುತಿಪೆ ನಿನ್ನಾ ಪ ಆನೆಂತು ತುತಿಪೆ ಪಂಚಾನನಸುತ ಪವ ಮಾನ ಹನುಮ ಭೀಮ ಆನಂದತೀರ್ಥನೆ ಅ.ಪ. ಸನಕನಂದನ ಸನತಕುಮಾರಾದಿ ಮುನಿಗಳು ಹರಿ ದರುಶನವ ಮಾಡುವೆವೆಂದು ಘನಹರುಷದಿ ಮೋಕ್ಷವನು ಕುರಿತು ಬಂದೊ ಡನೆ ಬಾಗಿಲಲಿ ನಿಲ್ಲೆನಲು ಜಯ ವಿಜಯ ರನ ನೋಡಿ ಎರಡೊಂದು ಜನುಮದಲಿ ಕ್ರೂರ ಸಿರಿ ವನಜಾಕ್ಷರಗೋಸ್ಕರಾ ಅವತರಸಿ ಗುಣಪೂರ್ಣ ಗುರು ಸಮೀರಾ ಸೇವಿಪೆನೆಂದಾ ಕ್ಷಣದಿ ಜನಿಸಿ ವಾನರಾ ರೂಪಿಲಿ ಭುವ ವನದೊಳು ಮೆರೆದೆ ಅಸಮಶೂರಾ ಹರಿಹರಾ 1 ಕೋತಿ ಕಟಕಮಾಡಿ ಜಾತರಹಿತ ಹರಿ ಗೇ ತಲೆಬಾಗಿ ಸುಪ್ರೀತಿಯಿಂದಲಿ ರವಿ ಜಾತನ ಸಲಹಿ ಅತೀ ತೀವ್ರದಿಂದಲಿ ವಾತವೇಗದಿ ವನಧಿಯ ತಡಿಲ್ಲದೆ ದಾಟಿ ಮಾತೆಗುಂಗುರವಿತ್ತ ಶೋಕತರುಗಳ ಭೀತಿ ಬಡದಲೆ ಕಿತ್ತಿ ರೋಮ ಬಳ ವ್ರಾತವೆಲ್ಲವ ನುಗ್ಗೊತ್ತೀ ಲಂಕಾಪುರ ಜಾತವೇದಸಗೆ ಇತ್ತೀ ಹನುಮಶಿರಿ ನಾಥನಿಗೆರಗಿ ಪಡೆದ ಬಹುಕೀರ್ತಿ 2 ದುರುಳ ಕಲ್ಯಾದ್ಯರು ಊರ್ವಿಯೊಳ್ಪುಟ್ಟಿ ಸಂ ಚರಿಸುತ್ತ ಇರಲಾಗಿ ಮರುತದೇವನು ಅವ ತರಿಸಿ ಅವನಿಯೊಳು ದುರಿಯೋಧನುಣಲಿತ್ತ ಗರಳವ ಭುಂಜಿಸಿ ಅರಗಿನ ಸದನದಿ ಪುರೋಚನಾದಿಗಳನ್ನು ಉರುಹಿ ಏಕಚಕ್ರಾ ಪುರದಲ್ಲಿದ್ದ ಬಕಾಸುರನ ಸದೆದು ಭೂಮಿ ಸುರವೇಷವನೆ ಧರಿಸೀ ಪಾಂಚಾಲಿ ಸ್ವಯಂ ವರ ಪತಿಕರಿಸಿ ಮಗಧದೇಶ ದರಸನ ಸಂಹರಿಸೀ ರಾಜಸೂಯಜ್ಞ ಹರಿಗೆ ಅರ್ಪಿಸಿದಿ ಮೆರೆಸೀ 3 ಭಕುತಳಾದ ಇಂದುಮುಖಿ ದ್ರೌಪದಿಗೆ ಸೌಗಂ ಧಿಕವ ತರುವೆನೆಂದು ವೃಕೋದರ ಪೋಗಲು ಅಕುಟಿಲ ಹನುಮಂತನನು ಅವಲೋಕಿಸ್ಯಂ ಜಿಕೆಯಿಂದ ನಿಂದು ಮಾರಕಜನರಿಗೆ ಮೋ ಕುಪಥ ಖಳರನೊರಿಸಿ ನೀ ಸಖಿಗೆ ಪೂವಿತ್ತು ಗುರುಕುಮಾರನಸ್ತ್ರಕ ಳುಕದೆ ಯುದ್ಧವ ಮಾಡಿದೆ ದುಶ್ಯಾಸನ ರಕುತ ವೆರಿಸಿ ಕುಡಿದೆ ಉಭಯಗಳ ರ ಥಿಕರ ಬಲವಕರೆದೆ ಭಯದಲಿ ಉ ದಕದಲಿರ್ದ ದುರ್ಯೋಧನನೂರು ಕಡಿದೆ 4 ಭೀಮ ಭಯಂಕರ ಕಾಮಕೋಟಿ ಚಲ್ವ ಧೀಮಂತಜನ ಮನೋಪ್ರೇಮ ಪಾವನ ಗುಣ ಸ್ತೋಮ ಸರ್ವಾಧಾರ ಭ್ರಾಮಕಜನ ವನ ಧೂಮಕೇತುವೆ ಸರ್ವಾಸೀಮ ಸೌಖ್ಯ ಪೂರ್ಣ ಸಾಮಜ ಹರಿಗುರು ರೋಮ ಕೋಟೇಶ್ವರ ಶ್ರೀಮಾನ್ಯ ಭಕುತಲ ಲಾಮ ಭವ್ಯ ಚರಿತಾ ಸೋಮಕುಲ ಸೋಮ ಸುಖ ಭರಿತಾ ಭಕುತ ಪ್ರೀತಾ ಕಾಯ ಹಿತದಿಂದ ನಿರುತಾ 5 ಮಣಿಮಂತನೆಂಬವನಿಯೊಳು ಪುಟ್ಟಿ ವೇ ನನ ಮತ ಪಿಡಿದು ಜೀವನೆ ಪರಮಾತ್ಮನೆಂ ದೆನುತ ಸ್ಥಾಪಿಸಿ ಪಣೆಗಣ್ಣೆನ್ವರದಿಂದ ಅನಿಮಿಷರೆಲ್ಲರು ವನಜಜಗುಸುರಲು ಮುನಿಗಳು ಸಹ ನಾರಾಯಣನ ಪದಕೆ ದಂಡ ಪ್ರಣಾಮವ ಮಾಡಿ ಸ್ತೋತ್ರವಿನಯದಿ ಗೈಯೆ ಅನಿಲನ ಅವಲೋಕಿಸಿ ಪೇಳಲು ಹರಿ ಮನ ಭಾವವನು ಗ್ರಹಿಸಿ ಮಧ್ಯಗೇಹ ಮನೆಯೊಳಗವತರಿಸಿ ಮೆರೆದೆ ಗುರು ಅನುಗಾಲದಲಿ ನಿನ್ನ ಗುಣಗಳಾಶ್ರೈಸೀ 6 ವಾಸುದೇವನೆಂಬ ಭೂಸುರನಾಮದಿ ಲೇಸಾಗಿ ಚರಿಸಿ ಸಂತೋಷ ಭರಿತರಾಗಿ ಸಂ ನ್ಯಾಸಾಚ್ಯುತ ಪ್ರೇಕ್ಷರಾ ಕರಸರಸಿಜ ದೀ ಸಂತೋಷದಿ ಕೊಂಡು ಆಶÀಂಕರರÀ ಭಾಷ್ಯ ದೂಷಿಸೆ ಗರುಗಳುಲ್ಲಾಸ ಸನ್ಮುಖದಲಿ ವಿ ಶೇಷದಿಂದಲಿ ವಿರಚಿಸುವುದೆನಲು ಉ ಲ್ಲಾಸದಿಂದಲಿ ಕೇಳಿ ಆಕ್ಷಣದಿ ಸಂ ತೋಷ ಮನದಲಿ ತಾಳಿ ಮೋಹಕವ ಪರಿಹ ಆಶೆ ಪೂರೈಸಿದ ಘನನಿನ್ನ ಲೀಲೆ 7 ತರಳತನದಲಿ ಬದರಿಗೈದಿ ಪಾರಾ ಶರ ನಾರಾಯಣನ ಸಂದರುಶನ ಕೊಂಡು ತೀ ವರದಿಂದ ಹರಿತತ್ವ ನಿರ್ಣಯ ಶಾಸ್ತ್ರವ ವಿರಚಿಸುವುದಕಿನ್ನು ವರವ ಪಡೆದು ಬಂದು ದುರುಳ ಭಾಷ್ಯಗಳೆಂಬ ಗರಳ ತರುಗಳ ಮುರಿದಿಕ್ಕಿ ನೀ ಮೂವ ತ್ತೆರಡೈದು ಗ್ರಂಥಗಳ ನಿರ್ಮಿಸಿ ವಿಬು ಧರಿಗೆಲ್ಲ ಪೇಳಿ ವ್ಯಾಳ ಭೂಷಣದೇವ ಪರನೆಂಬ ಯುಕುತಿಜಾಲ ಹರಿದು ಹರಿ ಪರ ಶ್ರೀ ಬೊಮ್ಮಾದ್ಯರೆ ಗುರುಗಳೆಂದೆನಲು 8 ನಮೋ ನಮೋ ಸಮೀರನೆ ನಮೋ ಶ್ರೀ ಮುಖ್ಯಪ್ರಾಣ ನಮೋ ನಮೋ ದಯಾಸಿಂಧು ನಮೋ ಭಕ್ತಜನ ಬಂಧು ನಮೋ ನಮೋ ಗುಣಶೀಲ ನಮೋ ಭಾರತಿಲೋಲ ನಮೋ ನಮೋ ಭವ್ಯಾಂಗ ನಮೋ ಅರಿಗಜಸಿಂಗ ನಮೋ ನಮೋ ಜಗದ್ವ್ಯಾಪ್ತ ನಮಿತಜನರಾಪ್ತ ನಮೋ ನಮೋ ಸುಖತೀರ್ಥ ನಮೋ ಮೂರ್ಲೋಕದ ಕರ್ತ ನಮೋ ಗುರುಕುಲ ತಿಲಕ ಪಾಲಿಸು ಎನ್ನ ತಮಹರದೂರಶೋಕ ಸಜ್ಜನರಿಗೆ ಅಮಿತ ಮೋದದಾಯಕ ಶ್ರೀಭೂ ದುರ್ಗಾ ರಮಣ ಜಗನ್ನಾಥವಿಠಲ ಭಕ್ತಾಧಿಕಾ 9
--------------
ಜಗನ್ನಾಥದಾಸರು
ಇದನೆ ಪಾಲಿಸೋ ಹನುಮಾ ಮಾಳ್ಪೆನೊ ಪದ ಪದುಮಯುಗಕೆ ಪ್ರಣಾಮಾ ಪ ಸದಯನೆ ನಾ ನಿನ್ನ ಇದನನು ಬೇಡಿದೆ ಪದುಮ ನಯನ ಶ್ರೀ ಮುದತೀರಥರಾಯಾಅ.ಪ ದಿವಸ ಪೋದವಲ್ಲಾ ಗುರುಗಳ ಅನುಭವಾಗಲಿಲ್ಲಾ ಪವನ ತನಯ ನೀ ಜವದಲಿ ಮಾಡಲು ಭುವನದೊಳಗೆ ಬೃಹಚsÀ್ಪøವನು ಎನಿಸುವೆನು 1 ಜನರು ಮೊದಲೆ ಇಲ್ಲಾ ಧನಪಸಖ ನನ ಜನಕನು ನೀನಿರೆ ಮನುಜರ ಬೇಡೋದು ಫನತಿ ಎ£ಗಲ್ಲಾ 2 ದಾತ ಇದನು ಪೂರ್ತಿ ಮಾಡೊ ಧಾತ ನಾ ಶರಣಾರ್ಥಿ ಯಾತಕೆ ಸುಮ್ಮನೆ ಈ ತೆರ ಇರುವುದು ತಾತನೆ ಗುರುಜಗನ್ನಾಥವಿಠಲದೂತ 3
--------------
ಗುರುಜಗನ್ನಾಥದಾಸರು
ಇಂದಿರೆ ಪಾಲಿಸು ಎನ್ನ ಪ ಇಂದಿರೆ ನಿನ್ನನು ವಂದಿಸಿ ತುತಿಸುವೆ ವಂದಿಪ ಜನಕಾನಂದ ನೀಡುವ ದೇವೀ ಅ.ಪ ಮಂದಜಾಸನ ಮುಖ ಸುರರಾ ಕರುಣ ದಿಂದಲಿ ಪಾಲಿಪೆ ಅವರ ಸದರ ಸದಾ ಪೊಂದಿದ ಜನಕೆ ಅಧಾರಾ ಆಹ - ಳೆಂದು ನಿನ್ನಯ ಪಾದದ್ವಂದ್ವಜಲಜ ಮನೋ - ನಿತ್ಯ ವಂದಿಪೆ ಹರಿರಾಣೀ 1 ಸ್ಮರಣೆ ಮಾಳ್ಪರ ಪಾಪಹÀರಣ ಪರಿ - ಹರಿಸಿ ಮಾಡುವಿ ಪೂರ ಕರುಣಾ ಆಹಾ ಸರಿಯಿಲ್ಲ ನಿನಿಗಿನ್ನು ಹರಿಗೆ ಸಮಾಸಮೆ ತ್ವರಿತಾದಿ ಎನ್ನನು ಮರೆಯದೆ ಪೊರೆಯೆಂದೆ2 ಮಾತೆ ದಾರಿದ್ರ್ಯವ ಕಳೆದು ನಿನ್ನ ದೂತ ನಾನೆಂದು ನೀನೊಲಿದು ಮಾತು ಲಾಲಿಸಿ ಭಾಗ್ಯಗರಿದು ಎನಗೆ ನೀತವಾಗಿ ಸುಖ ಸುರಿದು ಆಹಾ ದಾತಗುರುಜಗನ್ನಾಥವಿಠಲ ನೀ - ಕೇತನ ಸುಖ ಎನಗೆ ಈ ತೆರ ನೀಡಮ್ಮಾ3
--------------
ಗುರುಜಗನ್ನಾಥದಾಸರು
ಇಂದು ಮುಂದಿಲ್ಲ ಪ ಶ್ರೀ ಮುಕುಂದಗೆ ಸಮರೆನಿಸುವರು ಲೋಕದೊಳು ಅ.ಪ. ವನಧಿ ಮಥನದಲ್ಲಿ ಅನಿಮಿಷರನ ಬಿಟ್ಟು ಜನನಿ ಲಕುಮಿ ನಾರಾಯಣನೊಲಿಸಿದಳಾ 1 ಪ್ರಪಿತಾಮಹನು ಲೋಕಾಧಿಪ ಬ್ರಹ್ಮಗೆ ತಪ ತಪವೆಂದು ಪೇಳಿದಗುಪಮೆ ಎನಿಸುವವರು 2 ಕೊಂದು ಶಿವನ ಕಾಯ್ದ ಇಂದಿರಾಪತಿಗೆಣೆ 3 ಮಂದರಾದ್ರಿಯನೆತ್ತಿ ಸಿಂಧುಮಥನ ಮಾಡಿ ವೃಂದಾರಕರಿಗೆ ಆನಂದವಿತ್ತು ಪರಿ4 ಭೃಗು ಮುನಿಪನು ಬ್ರಹ್ಮಾದಿಗಳ ಪರೀಕ್ಷಿಸಿ ಜಗನ್ನಾಥವಿಠಲ ತ್ರಿಗುಣವರ್ಜಿತನೆಂದು 5
--------------
ಜಗನ್ನಾಥದಾಸರು
ಇದು ನಿನಗೆ ಧರ್ಮವೇ ಇಂದಿರೇಶ ಬದಿಗ ನೀನಾಗಿದ್ದು ಭೀತಿ ಪಡಿಸುವುದು ಪ ನಿನ್ನ ಗುಣಗಳ ತುತಿಸಿ ನಿನ್ನನ್ನೇ ಹಾರೈಸಿ ನಿನ್ನವರ ಪ್ರೀತಿಯನು ಸಂಪಾದಿಸಿ ಅನ್ಯರನು ಲೆಕ್ಕಿಸದೆ ಚೆನ್ನಾಗಿ ಬಾಳುವ ಮಾನ್ನವರನ ಈ ಪರಿಯ ಬನ್ನಬಡಿಸುವುದು 1 ದುರುಳನಲ್ಲವೊ ನಿನ್ನ ಚರಣ ಸೇವಕರವನೊ ಪರಿಪಾಲಿಸುವುದು ನಿನ್ನ ಪರಮ ಧರ್ಮ ಗುರುಗಳಂತರ್ಯಾಮಿ ಕರಮುಗಿದು ಬಿನ್ನೈಪೆ ಶರಣ ರಕ್ಷಕನೆಂಬೊ ಬಿರಿದು ಸುಳ್ಳಾಗುತಿದೆ 2 ಶೋಕನಾಶಕ ವಿಗತಶೋಕನೆಂಬೋ ನಾಮ ನಾ ಕೇಳಿ ಮೊರೆಹೊಕ್ಕೆ ಲೋಕಬಂಧು ನಿ ರಾಕರಿಸದೆಮ್ಮ ನೀ ಸಾಕಬೇಕನುದಿನವು ವಾಕು ಮನ್ನಿಪುದು ಲೋಕೈಕ ರಕ್ಷಾಮಣಿಯೆ 3 ಗುಣವೆ ನಿನಗಿದು ಬರಿದೆ ದಣಿಸುವುದು ಶರಣರನು ಪ್ರಣತಾರ್ತಿಹರ ವಿಭೀಷಣ ಪಾಲಕ ಕ್ಷಣಕನಂತಪರಾಧವೆಣಿಸುವರೆ ಕಡೆಯುಂಟೆ ಮಣಿದು ಬಿನ್ನಹ ಮಾಳ್ಪೆ ದನುಜದಲ್ಲಣನೆ 4 ನಮೋ ನಮೋ ಬ್ರಹ್ಮಣ್ಯ ದೇವರ ದೇವ ದುರಿತ ನಮೋ ನಮೋ ಕಾರುಣ್ಯ ಶೀಲ ಸಜ್ಜನ ಪಾಲಾ ನಮೋ ನಮೋ ಜಗನ್ನಾಥವಿಠಲ ವಿಖ್ಯಾತ 5
--------------
ಜಗನ್ನಾಥದಾಸರು
ಇರಬೇಕು ನಿಂದಕರು ಸಜ್ಜನರಿಗೆ ಪ ದುರಿತ ರಾಶಿಗಳ ಪರಿಹರಿಸಲೋಸುಗ ಅ.ಪ. ಕಲುಷ ಕರ್ಮವ ಮಾಡೆ ಕಳೆವರಿನ್ನಾರೆಂದು ಕಮಲಭವನು ತಿಳಿದು ನಿರ್ಮಿಸಿದವನಿಯೊಳಗೆ ನಿಂದಕರ ಕಲುಷರನ ಮಾಡಿ ತನ್ನವರ ಸಲಹುವ 1 ದಿವಿಜರಿಳೆಯೊಳಗೆ ಜನ್ಮಗಳೊಲ್ಲೆವೆಂದಬ್ಜ ಭವಗೆ ಮೊರೆಯಿಡಲು ವರವಿತ್ತನಂದು ಕರ್ಮ ಮಾಡಿದರು ಸರಿಯೆತ ನ್ನವನೆನಿಸದವಗೆ ತಜ್ಜನ್ಯ ಫಲ ಬರಲೆಂದು 2 ಮಾನವಾಧಮ ಜನರು ನೋಡಿ ಸಹಿಸದಲೆ ಹೀನ ಮತಿಯಿಂದ ಮಾತುಗಳಾಡಲು ಭಾನು ಮಂಡಲಕೆ ಮೊಗವೆತ್ತಿ ಉಗುಳಿದರೆ ನ್ನಾನನವೆ ತೊಯ್ವುದಲ್ಲದರ್ಕಗೇನಪಮಾನ 3 ಮಲವ ತೊಳೆವಳು ತಾಯಿ ಕೈಗಳಿಂದಲಿ ನಿತ್ಯ ತೊಳೆವ ನಿಂದಕ ತನ್ನ ನಾಲಗಿಂದ ಬಲು ಮಿತ್ರನಿವನೆಂದು ಕರೆದು ಮನ್ನಿಸಬೇಕು ಹಲವು ಮಹ ಪಾಪಗಳ ಕಳೆದು ಪುಣ್ಯವನೀವ 4 ಅನುಭವಿಪ ದುಷ್ಕರ್ಮಗಳ ಜನ್ಯ ಫಲವು ತ ನ್ನಣುಗರಿಗೆ ಅಪವಾದ ರೂಪದಿಂದ ಉಣಿಸಿ ಮುಕ್ತರ ಮಾಡಿ ಸಂತೈಪ ನರಕ ಯಾ ತನೆಗಳವರಿಗೆ ಇಲ್ಲದುದರಿಂದ ಎಂದೆಂದೂ 5 ಮನುಜಾಧಮರಿಗೆ ಹರಿದಾಸರಲಿ ದ್ವೇಷ ವೆನಿಪ ಸಾಧನವೆ ನಿಸ್ಸಂದೇಹವು ಅನುತಾಪ ಬಿಡದೆ ಹರುಷಿತರಾಗಿ ನಿಷ್ಪ್ರಯೋ ಜನದಿ ಹರಿಪದಾಬ್ಜ ಭಜಿಪ ಭಜಕರಿಗೆ 6 ಲೋಕದೊಳು ನಿರ್ಮಿಸಿದನಿರ್ವರನು ಹರಿ ತಾನು ಭೂ ಕೋವಿದರ ಮಲವು ಪೋಗಲೆಂದು ಶ್ರೀ ಕರಾರ್ಚಿತ ಜಗನ್ನಾಥವಿಠಲ ಗ್ರಾಮ ಸೂಕರರು ನಿಂದಕರು ಕರುಣಾಳು ಇಳೆಯೊಳಗೆ 7
--------------
ಜಗನ್ನಾಥದಾಸರು
ಎಂಥಾ ಬಲವಂತನೋ ಭಾರತೀಕಾಂತಾ ಎಂಥಾ ದಯವಂತನೋ ಪ ಎಂಥ ಮಹಬಲವಂತ ಬಹುಗುಣ - ವಂತ ಸರ್ವದಾನಂತಚೇತನ ರಂತರಾದೋಳ್ನಿಂತು ಪ್ರೇರಿಪ ನಂತು ಮಹಿಮೆಯ ಅಂತು ತಿಳಿಯದೊ ಅ.ಪ ವೀರರಾಘವನಂಘ್ರಿಯ ಭಜಿಸಿ ಕಪಿ - ವೀರನಾದನು ಮಹರಾಯಾ ವಾರಿಧಿಯಾಗಾಧತೋಯ ಲಂಘಿಸಿ ಲಂಕಾ ಸಾರಿ ಪೇಳಿದ ವಾರ್ತೆಯ ವೀರ ವನವನಂಗಾರಮುಖಕೆ ಇತ್ತು ವೀರಾಕ್ಷನೆನಿಪ ಕುಮಾರನ ದಂಡಿಸಿ ಸಾರಿ ಉಂಗುರವಿತ್ತು ಮತ್ತೆ ವಾರಿಧಿ ವಾನÀರೇಶನು ತೋರಿ ರಾಮನ ಪದಕೆ ನಮಿಸಿ ಚಾರು ರಾಗಟೆ ಇತ್ತ ತ್ವರದಿ 1 ತರುಳೆ ದ್ರೌಪದಿಯನ್ನು ಶರಗು ಪಿಡಿದು ಶಳದಾನು ಕರಿಯಲು ಬ್ಯಾಗ ಹರಿ ತಾನಂಬರವಿತ್ತನು ಧುರದಿ ಭೀಮನು ನಿನ್ನ ತರಿದರಕ್ತದಿ ತಾನು ಬೆರೆಸಿ ಕೇಶವ ಕಟ್ಟಿ ಕರುಳ ದಂಡೆಯನಿಟ್ಟು ಮೇರೆವೆ ಕೇಳೆಲೋ ದುರುಳನೆಂದಾ - ತರುಣಿವಚನವ ಸ್ಥಿರವ ಮಾಡಿದ ಧರಿಯತಳದಲಿ ಸರಿಯುಗಾಣೆನೊ ವgವÀೃಕೋದರ ಪರಮ ಕರುಣಿಯೆ 2 ಭೂತೇಶ ಸರ್ವೋತ್ತುಮಾನೆಂಬುವೊ ಮಹಾ - ಪಾತಕಿ ಜನಮಾತನೇಮ ಈತ ಮಾಡಿದ ನಿರ್ಧೂಮ ಹರಿಗೆ ಶಿವ ದೂತಜನರಿಗುತ್ತುಮ ಖ್ಯಾತಿ ಮಾಡಿದ ಜೀವಜಾತಿ ಪ್ರೇರಕನಾಗಿ ಶ್ವೇತವಾಹನ ದೂತನಾಗಿಹ ನಾಥ ಗುರು ಜಗನ್ನಾಥವಿಠಲ ಧಾತನಾಂಡಕೆನಾಥ, ನಿರ್ಜರÀ ನಾಥರೆಲ್ಲರೂ ದೂತರೆಂದರು 3
--------------
ಗುರುಜಗನ್ನಾಥದಾಸರು
ಎಂದು ಕಾಂಬೆನು ಪಾಂಡುರಂಗ ಮೂರುತಿಯಾ ಇಂದು ಭಾಗನಿವಾಸ ನರನ ಸಾರಥಿಯ ಪ ಚಾರು ಚರಣಾಂಗುಲಿ ನಖರ ತರುಣೀಂದುಚ್ಛವಿ ತಿರಸ್ಕರಿಸುವ ಪ್ರಖರ ಕಿರುಗೆಜ್ಜೆ ಕಡಗ ನೂಪುರ ಪೆಂಡೆ ಶಫರ ತೆರಜಾನು ಜಂಘೆ ಭಾಸ್ಕರ ರತ್ನ ಮುಕುರ1 ರಂಭಾ ಪೋಲುವ ಊರು ಪೊಂಬಣ್ಣಾಂಬರವ ಕುಂಭೀ ಮಸ್ತಕದೊಲ್ ನಿತಂಬದಿ ಪೊಳೆವ ಕಂಬು ಮೇಖಳಕಂಜ ಗಂಭೀರ ನಾಭೀ ವಿಧಿ ಶಂಭು ಪೂಜಿತನ 2 ಲವಕುಕ್ಷಿತ್ರವಳಿ ಬಾರ್ಗವಿ ವಕ್ಷ ಉರವು ಕೌಸ್ತುಭ ವೈಜಯಂತಿಯ ಸುವಿಶಾಲ ವಕ್ಷದೊಳ್ ವಿವಿಧ ಹಾರಗಳು ನವನೀತ ಚೋರ ಶ್ರೀ ಪವಮಾನಾರ್ಚಿತನ 3 ಪದಕ ಸರಿಗೆಯ ಜಾಂಬೂನದ ಕಂಬುಕಂಠ ರದನೀಕರ ಬಾಹು ಚದುರ ಭುಜಕೀರ್ತಿ ಬದರ ಸಂಕಾಶಾ ಅಂಗದ ರತ್ನ ಕಟಕಾ ಪದಮಾರುಣ ಕರಯುಗ್ಮ ಕಟಿಯಲ್ಲಿಟ್ಟವನಾ4 ವಿಧುಬಿಂಬೋಪಮ ಚಲ್ವವದನ ಕೆಂದುಟಿಯಾ ಬಿದುರಾಭಾದಶನಾಲಿಂಗದನೊಳ್ ಕಿರುನಗೆಯಾ ಕದಪು ಕನ್ನಡಿ ನಾಸಾ ತುದಿ ಚಂಪಕ ತೆನೆಯಾ ಉದಕೇಜಾಯತ ನೇತ್ರಯದುವಂಶೋದ್ಭವನಾ 5 ಕುಂಡಲ ಕರ್ಣ ಸುಲಲಿತ ಭ್ರೂಯುಗಳ ಪೊಳೆವ ಬಾಲ ಶಶಾಂಕ ತಿಲಕಾಂಕಿತ ಫಾಲ ಅಳಿಬಾಲವೆನಿಪ ಕುಂತಳ ರತ್ನ ಚಕಿತ ಕಲಧೌತ ಮಕುಟ ದಿಗ್ವಲಯ ಬೆಳಗುವನ 6 ಮಾನವ ಹರಿಯಾ ವಟುಭಾರ್ಗವ ಕಾಕುಸ್ಥ ಶಠ ಕಂಸದ್ವಿಷನ ನಿಟೆಲಾಂಬಕ ಸಹಾಯ ಖಳಕಟಕಾರಿ ಭೀಮಾ ತಟವಾಸ ಜಗನ್ನಾಥವಿಠಲ ಮೂರುತಿಯ 7
--------------
ಜಗನ್ನಾಥದಾಸರು
ಎದ್ದು ಬರುತಾರೆ ನೋಡೆ ತಾ - ವೆದ್ದು ಬರುತಾರೆ ನೋಡೆ ಪ ಮುದ್ದು ಬೃಂದಾವನ ಮಧ್ಯದೊಳಗಿದ್ದು ತಿದ್ದಿ ಹಚ್ಚಿದ ನಾಮ - ಮುದ್ರೆಗಳೊಪ್ಪುತೀಗ ಅ.ಪ ಗಳದೊಳು ಶ್ರೀ ತುಳಸಿ ನಳಿನಾಕ್ಷಿ ಮಾಲೆಯು ಚಲುವ ಮುಖದೊಳು ಪೊಳೆವೊ ದಂತಗಳಿಂದ 1 ಹೃದಯ ಸದನದಲ್ಲಿ ಪದುಮನಾಭನ ಭಜಿಸಿ ನಿತ್ಯ ಸದಮಲ ರೂಪತಾಳಿ 2 ದಾತ ಗುರು ಜಗನ್ನಾಥವಿಠಲನ್ನ ಪ್ರೀತಿಯ ಬಡಿಸುತ ದೂತರ ಪೊರೆಯುತ 3
--------------
ಗುರುಜಗನ್ನಾಥದಾಸರು
ಎಲ್ಲಿ ಪೋದ ಶಿರಿನಲ್ಲತಾ ನೆಲ್ಲಿ ಪೋದ ಶಿರಿನಲ್ಲ ಪ ಎಲ್ಲಿ ಪೋದ ಪದಪಲ್ಲವಭಜಿಪರ ನಲ್ಲೆ ಬಿಟ್ಟು ಪರನಲ್ಲೇರಿಗೊಲಿದು ತಾ ಅ.ಪ ಸತಿ ಸುತ ಮುನಿಕಿಂತತಿಹಿತ ಪ್ರೀಯರು ಮತಿವಂತರೆ ಎನಗತಿ ಎಂಬುವ ತಾ 1 ಸಕಲಭಾಗ್ಯ ಪರಸುಖವೆಂಬುವ ತಾ 2 ಕಟ್ಟು ಕಾವಲಿ ಪರರಟ್ಟುಳಿ ಇಲ್ಲವೊ ಬಿಟ್ಟರೆ ಭಕುತರು ಕಟ್ಟೋರು ಎಂಬುವ 3 ಎಲ್ಲಿರಿಗತಿ ನಾ ಬಲ್ಲಿದ ಎನಪಾದ ಪಲ್ಲವ ಭಜಕರು ಬಲ್ಲಿದರೆಂಬುವ 4 ದಾತಗುರು ಜಗನ್ನಾಥವಿಠಲ ನೀ ರೀತಿಯ ಪೇಳಿದ ದೂತ ಪಾಲಕ ತಾ 5
--------------
ಗುರುಜಗನ್ನಾಥದಾಸರು
ಕಮಲ ಸಂಭವೆ ಹಿಮನಗಜಾರಮಣ ಸನ್ನುತೆ ತಮರಿಪು ಶತ ಸಮಸನ್ನಿಭೆ ಇಭ ಇಂದಿರೆ ಶೋಭಾನೆ ಪ ಶೃಂಗಾರ ತರಂಗ ಹೆಳಲಾ ಬಂಗಾರವ ಪೊಂಗ್ಲಾದಿಗೆ ಬಲಿ ವಂಗನೆ ಶಿರೋಮಂಗಳ ಮಡಿ ಜಡ ಜಂಗಮ ವ್ಯಾಪ್ತಿ ಅಂಗಜ ಶರ ಕಂಗಳೆ ದ್ವಿಜೋ ತ್ತುಂಗಮ ರಂಗನ ನಿಜ ಅ ರ್ಧಾಂಗಿನಿಯೆ ಬಾ ಹಸಿಯ ಜಗುಲೀಗೆ 1 ಪೊಸುಕುಸುಮ ಶಿರಸದಲೊಪ್ಪುವ ನೊಸಲಲಿ ರಂಜಿಸುವ ಕಸ್ತೂರಿ ದಿಶದುಂಬಿದ ಬಿಸಿಜಾನನ ಪ್ರಭೆ ಎಸೆವ ಕಂಧರ ಕಕ್ಕಜ ಕುಚಕು ಪ್ಪುಸದಲ್ಲತಿ ಶೋಭಿಸುತಿಹ ಪವಳ ದಾ ಸರವ ತೂಗುವ ಅಸಮೇ ಬಾ ಹಸೆಯ ಜಗುಲೀಗೆ 2 ಕರಿಸೊಂಡಿಲುತೆರ ಚತುರಕರ ವರ ಅಭಯಸರಸಿಜಯುಗಧರ ಜಠರಾ ವರತ್ರಿವಳಿ ಗಂಭೀರನಾಭಿ ಕ ಟಸೂತರೆ ಹೇಮಾಂಬರೆ ಚರಣಂದಿಗಿ ಸಪಳಿ ಪೊಂಗೆಜ್ಜೆಯಾ ಮೆರೆಯುತ ಸರಸಳೆ ಬಾಹಸಿಯ ಜಗುಲೀಗೆ 3 ಮೃಗಲಾಂಛನೆ ಮಿಗೆ ಶೋಭಿಪ ಪದ ನಖ ಪಂಕ್ತಿಗಳೊಪ್ಪುವ ಗತ ಅಗಣಿತ ಮಹಿಮಳೆ ಸುಗುಣ ಸಂಪನ್ನೆ ಭಗವಂತನ ಜಘನದಿ ಪೊಳೆಯುತ ಖಗರಾಜನ ಪೆಗಲನೇರಿ ಅಮ ರ ಗಣವ ಚಿರ ಬಾ ಹಸಿಯ ಜಗಲೀಗೆ 4 ಅಂಭೃಣಿ ಸ್ವಾಯಂಭೂ ಸುರ ನಿಕು ರುಂಬಕರ ಅಂಬುಜ ಪೂಜಿತೆ ನಂಬಿದ ಜನರ್ಹಂಬಲಿಸುವ ಫಲ ಸಂಭ್ರಮದಿ ಕೊಡುವಾ ಗಂಭೀರಾ ಸು ಖಾಂಬೋಧಿ ಹರಿ ನಿತಂಬೆ ಪ ಯಾಂಬೋಧಿ ಸುತೆ ಜಗದಂಬೆ ಬಾ ಹಸಿಯ ಜಗುಲೀಗೆ 5 ಮಾಯೆ ನಾರಾಯಣಿ ಶ್ರೀ ಭೂ ಕೃತಿ ಆಯತಾಕ್ಷಳೆ ಕಾಯಜನ ತಾಯೆ ಶರಣೆ ಪ್ರಿಯ ಪಾವನ್ನೆ ವಾಯುಭುಕು ಶಾಯಿ ಅಮರಾಧೇಯಾ ಜಗನ್ನಾಥವಿಠಲನ ಜಾಯೆ ಬಾ ಹಸಿಯ ಜಗುಲೀಗೆ 6
--------------
ಜಗನ್ನಾಥದಾಸರು
ಕರುಣದಿ ಎನ್ನ ಪೊರಿಯೇ ತೊರಮ್ಮ ಶಿರಿಯೇ ಪ ಚರಣಯುಗಕೆ ನಾ ಶರಣು ಮಾಡಿದೆ ದೇವೀ ಅ.ಪ ವಾರಿಜಾಂಬಕೆ ಅಂಭ್ರಣೀ ಶ್ರೀ ಹರಿಯ ರಾಣಿ ಮಾರಾರಿ ಮುಖಸುರ ಸಂತ್ರಾಣಿ ವಾರವಾರಕೆ ನಿನ್ನ ಸಾರಿಭಜಿಪೆ ಎನ್ನ ದೂರ ನೋಡದೆ ಪೊರಿಭಾರ ನಿನ್ನದು ತಾಯಿ 1 ಸೃಷ್ಟಿ ಸ್ಥಿತಿಲಯ ಕಾರಿಣೀ ಸುಗುಣಸನ್ಮಣಿ ಕಷ್ಟ ದಾರಿದ್ರ್ಯ ದುಃಖ ಹಾರಿಣೀ ದುಷ್ಟರ ಸಂಗದಿ ಕೆಟ್ಟಿಹ ಎನ್ನನು ಥಟ್ಟನೆ ಕರುಣಾದೃಷ್ಟಿಲಿ ನೋಡಿ 2 ಜಾತರೂಪಳೆ ಶುಭಗಾತ್ರಿ ತ್ರಿಜಗಕೆ ಧಾತ್ರೀ ಸೀತೆ ಸತ್ರಾಜಿತನ ಪುತ್ರಿ ದಾತ ಗುರುಜಗನ್ನಾಥವಿಠಲನ ನೀತ ಸತಿಯೆ ಎನ್ನಮಾತೆ ವಿಖ್ಯಾತೇ 3
--------------
ಗುರುಜಗನ್ನಾಥದಾಸರು
ಕರುಣಾರ್ಣವ ಶ್ರೀ ಗುರುವರ ಕರುಣಿಸೊ ನೀ ಎನ್ನ ಕರುಣಾಗತ ರಕ್ಷಾಮಣಿ ತವ ಚರಣಾಂಬುಜ ತೋರಿನ್ನ ಪ ಆನತಜನತತಿಜ್ಞಾನದ ಎನ್ನ - ಙÁ್ಞನವ ಕಳೆದಿನ್ನ ಮಾನದಿ ಸಲಹೆನ್ನಾ 1 ಕಾಮಿತ ಫಲಪ್ರದ ಕಾಮ್ಯಾರ್ಥವನೂ ಕಾಮಿಪ ಜನಕಿನ್ನ ಪ್ರೇಮದಿ ಅವರಭಿಕಾಮವ ಪೂರ್ತಿಸಿ ಕಾಮಧೇನುತೆರ ತೋರುವಿ ಘನ್ನ 2 ಶಿಷ್ಟೇಷ್ಟ ಪ್ರದನಿಷ್ಟಘ್ನನೆ ನೀ ಕಷ್ಟವ ಪರಿಹರಿಸಿನ್ನಾ ಎಷ್ಟೆಂಥೇಳಲಿ ಸೃಷ್ಟಿ ಯೊಳಗೆ ನಿನ್ನ ಶ್ರೇಷ್ಠ ಮಹಿಮೆಗಳನ್ನಾ 3 ಶಿಷ್ಟನೆ ನೀ ಪರಮೇಷ್ಟಿಯ ಸತ್ಪದಾ - ಧಿಷ್ಟತನೆಂದಿನ್ನಾ ಪ್ರೇಷ್ಟನೆ ಎನ್ನಯಭೀಷ್ಟೆಯ ನಿತ್ತು ಶ್ರೇಷ್ಠನ ಮಾಡಿನ್ನಾ 4 ಪಾತಕವನಕುಲ ವಿತಿಹೋತ್ರ ಸುಖ ದಾತನೆ ನೀ ಇನ್ನಾ ಈತೆರ ಮಾಡದೆ ನೀತ ಗುರುಜಗ - ನ್ನಾಥವಿಠಲ ಪ್ರಪನ್ನಾ 5
--------------
ಗುರುಜಗನ್ನಾಥದಾಸರು