ಒಟ್ಟು 22 ಕಡೆಗಳಲ್ಲಿ , 13 ದಾಸರು , 21 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಮತ್ಕಾಂಚನ ಕೋಟಿರನ್ನತನಯಾ | ಕ್ಷೀರಾಂಬುನಿಧಿ ಮಧ್ಯದಿ | ನೇಮದಿಂ ನಿಜಧಾಮದಲ್ಲಿ ರಮೆಯಾ | ಒಡಗೂಡಿ ಸುರಸಿದ್ಧದೀ | ಸಾಮಗಾಯನ ಪ್ರಿಯನಾಗಿನಿರುತಾ | ಪಾಲಿಪ ಲೋಕಂಗಳಂ | ಮಾಧವ ದಯಾನಿಧೇ ವಧುವರಾ | ಕುರ್ಯಾತ್ಸದಾ ಮಂಗಳಂ | 1 ಭಾನುಕೋಟಿಯ ತೇಜದಿಂ ಬೆಳಗುವಾ | ಮುಕಟವು ಮಸ್ತಕದಿ | ಶ್ರೀ ನೀಲಾಳಕ ಭಾಲಮಧ್ಯಮೆರೆವಾ | ಕೇಶರ ಪೌಂಡ್ರಕದಿ | ಸೂನಾಸಿಕದಿ ವಾರಜಾಕ್ಷಅಧರಿಂ | ದೊಪ್ಪುವ ಕರ್ಣಂಗಳಂ | ತಾನೀಕುಂಡಲ ಭೂಷಣಾ ವಧುವರಾ | ಕುರ್ಯಾತ್ಸದಾ ಮಂಗಳಂ 2 ಶ್ರೀ ಲಕ್ಷ್ಮೀ ನಿಜಶಾರದಾಗಿರಿಸುತೇ | ಭಾರತೀ - ಶಚಿ- ಭಾಮಿನೀ | ಕಾಲಿಂದೀವರ ನರ್ಮದಾ ಸರಸ್ವತೀ | ಗಂಗಾ ತ್ರಿಪಥಗಾಮಿನೀ | ಪಾಲಿಸುವ ಗೋದಾವರೀ ಭೀಮರಥೀ | ಶ್ರೀ ಕೃಷ್ಣ ವೇಣಿಂಗಳಂ | ಮೇಲೆ ಕಾವೇರಿತುಂಗೆ ತಾವಧುವರಾ | ಕುರ್ಯಾತ್ಸದಾ ಮಂಗಳಂ 3 ವಾರಿಜಾಸನ ವಾಯು ಶಂಕರಗುರು | ತ್ವಂಹೇಂದ್ರ ವಸಿಷ್ಠನು | ಭಾರದ್ವಾಜ ಪರಾಶರಾತ್ರಿ ಭೃಗು ಕ- ಶ್ಯಪ ಕೌಶಿಕ ಶ್ರೇಷ್ಠನು | ಕಾರುಣೀ ಜಮದಗ್ನಿ ರಾಮ ಮರಿಚೀ | ವ್ಯಾಸಾದಿ ಋಷಿ ಪುಂಗಳಂ | ನಾರದಾದಿ ಮುನೀಂದ್ರರೀ ವಧುವರಾ | ಕುರ್ಯಾತ್ಸದಾ ಮಂಗಳಂ 4 ಇಂದ್ರೋವಹ್ನಿ ಪಿತೃಪತಿ - ನಿಋಋತಿ | ಮಕರೇಶ ಪ್ರಭಂಜನಾ | ಸಾಂದ್ರೈಶ್ವರ್ಯ ಕುಬೇರ ಈಶದಿಕ್ಪಾ ಲಾದಿತ್ಯಶಶಿರಂಜನಾ | ಚಂದ್ರಾತ್ಮಜನುಭೌಮದೇವಗುರುತಾ | ಕವಿಮಂದ ಗ್ರಹಂಗಳಂ | ಸಾಂದ್ರಾಗೀಹ ಸಮಸ್ತಗಿರೀ ವಧುವರಾ | ಕುರ್ಯಾತ್ಸದಾ ಮಂಗಳಂ 5 ಶ್ರೀ ಮತ್ಸ್ಯಾಕೃತಿ ಕೂರ್ಮನಾಗಿ ವರಹಾ | ನರಸಿಂಹನೆಂದೆ ನಿಸಿದಾ | ವಾಮನಾಭೃಗುವರ್ಯರಾಮರಘುಪಾ | ಯದುವಂಶದಲಿ ಜನಿಸಿದಾ | ತಾ ಮತ್ತೇ ನಿಜ ಬೌದ್ಧಕಲ್ಕಿ ಎನಿಸೀ | ತಾಳ್ದಾವತಾರಂಗಳಂ | ಶ್ರೀ ಮನೋಹರ ದೇವಕೀ ವಧುವರಾ | ಕುರ್ಯಾತ್ಸದಾ ಮಂಗಳಂ 6 ಕಾಶೀ ಕಂಚಿ ಅವಂತಿಕಾ ವರಪುರೀ | ದ್ವಾರಾವತೀ ಮಥುರಾ | ದೋಷನಾಶಿಕ ಪುಣ್ಯಕ್ಷೇತ್ರ ಬದರೀ | ಶೇಷಾದ್ರಿವರ ಸೇತುಬಧ ತುಹಿನಾ | ರಜತಾದ್ರಿ ಸೈಲಂಗಳಂ | ಈ ಸಪ್ತಾಂಬುಧೀ ಸರ್ವದೀ ವಧುವರಾ | ಕುರ್ಯಾತ್ಸದಾ ಮಂಗಳಂ 7 ದಶರಥಾತ್ಮಜನಾದ ರಾಮಜಗದೀ | ಜನಕಾತ್ಮಜಾ ಸೀತೆಯಾ | ಕುಶಲದೀ ನರಲೀಲೆಯಿಂದ ಮೆರೆವಾ ವೈಭವ ಸಂಗsತಿಯಾ ಉಸರೀದಾ ಗುರುಮಹಿಪತಿಸುತ ಕ- ನ್ನಡ ಭಾಡೆ ಶ್ಲೋಕಂಗಳಂ | ವಸುಧೆಯಲಿ ಸ್ಮರಿಸುವವರಿಂಗೆ ಕೊಡುವಾ | ರಘುನಾಥ ಜಯಮಂಗಳಂ 8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿ ಹರಿ ಹರಿ ಹರಿ ಹರಿಯೆನಬೇಕು ಹರಿ ಸ್ಮರಣೆಯೋಳನುದಿನವಿರಬೇಕು ಧ್ರುವ ಹರಿಯೇ ಶ್ರೀ ಪರಬ್ರಹ್ಮೆನಬೇಕು ಹರಿ ಪರಂದೈವೆವೆಂದರಿಬೇಕು ಹರಿಯೇ ತಾ ಮನದೈವೆನಬೇಕು ಹರಿ ಋಷಿ ಮುನಿಕುಲಗೋತ್ರೆನಬೇಕು 1 ಹರಿಯೇ ತಾಯಿತಂದೆನಬೇಕು ಹರಿಯೇ ನಿಜ ಬಂಧುಬಳಗೆನಬೇಕು ಹರಿಯೇ ಆಪ್ತ ಮೈತ್ರೆನಬೇಕು ಹರಿಕುಲಕೋಟೀ ಬಳಗೆನಬೇಕು 2 ಹರಿಯೇ ಸಲಹುವ ದೊರೆಯನಬೇಕು ಹರಿ ಸುಖ ಸೌಖ್ಯದ ಸಿರಿಯೆನಬೇಕು ಹರಿ ನಾಮವೆ ಧನದ್ರವ್ಯೆನಬೇಕು ಹರಿಸ್ಮರಣೆಯು ಸಂಪದವೆನಬೇಕು 3 ಹರಿದಾಸರ ಸಂಗದಲಿರಬೇಕು ಹರಿಭಕ್ತರ ಅನುಸರಿಸಿರಬೇಕು ಹರಿಚರಣದಿ ರತಿಮನವಿಡಬೇಕು ಹರಿ ನಿಜರೂಪವ ನೋಡಲಿಬೇಕು 4 ಹರಿ ಮಹಿಮೆಯ ಕೊಂಡಾಡಲಿಬೇಕು ಹರಿಸ್ತುತಿಸ್ತವನ ಪಾಡಲಿಬೇಕು ಹರಿತಾರಕ ಪರಬ್ರಹ್ಮೆನಬೇಕು ಹರಿ ಸರುವೋತ್ತಮ ಸ್ವಾಮೆನಬೇಕು 5 ಹರಿಯೇ ಸಕಲ ತಾ ಧರ್ಮನಬೇಕು ಹರಿ ಸರ್ವಮಯ ಪುಣ್ಯಕ್ಷೇತ್ರೆನಬೇಕು ಹರಿಯೇ ಇಹಪರ ಪೂರ್ಣೆನಬೇಕು ಹರಿ ಸದೋದಿತ ಸಹಕಾರೆನಬೇಕು 6 ಹರಿ ಬಾಹ್ಯಾಂತರೇಕೋಮಯವೆನಬೇಕು ಹರಿ ಸಕಲವು ವ್ಯಾಪಕವೆನಬೇಕು ಹರಿಯೇ ಶ್ರೀ ಪರಮಾತ್ಮೆನಬೇಕು ಹರಿ ಮಹಿಪತಿ ಸದ್ಗತಿಯೆನಬೇಕು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಭಕುತರ ದರುಶನವು ಅತಿಹರುಷವು ಧ್ರುವ ಹರಿ ನೆನೆವರಾ ನೆರಿಯು ನಿಧಾನದಾ ಕೆರೆಯು ಹರಿ ಸ್ಮರಿಸುವರ ಮರಿಯು ವಜ್ರವರಿಯು ಹರಿ ಭಜಿಸುವರ ಸರಿಯು ನಿಜಘನಾತ್ಮದ ಝರಿಯು ಹರಿ ಮಹಿಪರ ಕರಿಯು ಪರಮಾನಂದದ ತೆರಿಯು 1 ಹರಿಶರಣರ ನುಡಿಯು ಕರುಣದಮೃತಧ್ವನಿಯು ಹರಿಯದಾಸರ ನಡೆಯು ನಿಲಕಡೆಯು ಹರಿಭಕ್ತರಿದ್ದೆಡೆಯು ಪುಣ್ಯಕ್ಷೇತ್ರದ ತಡಿಯು ಹರಿಮಹಿಮರ ಕಡಿಯು ಕ್ಯಾದಿಗ್ಹೊಡಿಯು 2 ಹರಿಭಕ್ತರ ಸಂಗ ಸ್ನಾನಗಂಗ ತುಂಗ ಹರಿಮಹಿಮರ ಅಂಗ ಅಂತರಂಗ ಹರಿಪರಮಾನಂದ ಗುರು ಕರುಣಾಕೃಪಾಂಗ ಭಂಗ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪಾಲಿಸೋ ವೆಂಕಟಗಿರಿ ರಾಯಾ ಲಕ್ಷ್ಮೀ |ಲೋಲನೀಲಾಂಬುದ ಸಮ ಕಾಯಾ ಪಮಾಕಮಲಾಸನವಾಸವ- ಸುರ |ನೀಶ ಕರಾಧ್ಯ ಕೇಶವ ||ಲೋಕೇಶ ಯನ್ನಲ್ಲಿ ವಾಸವ-ಮಾಡಿನೂಕು ತುಚ್ಛತರ ಕ್ಲೇಶವ 1ಹಿಂದಿನ ಜನುಮಗಳೆಣಿಕಿಲ್ಲ - ದಯಾ |ಸಿಂಧುಸಾಧನವೀಗಲಿನಿತೆಲ್ಲಾ ||ಮುಂದಿನ ಗತಿಯೇನೋ ತಿಳಿದಿಲ್ಲ - ಇದ |ರಿಂದಲಂಜುವೆ ಜಾಂಬವತೀ ನಲ್ಲ 2ಬಾಲಕನಾದೆ ಕೆಲವು ದಿನ - ಪ್ರಾಯ |ಕಾಲವೊದಗಲು ಪರಾಂಗನಾ ||ಮೇಲೆ ಅಭಕ್ಷಣೆಯಲಿ ಮನವಿಟ್ಟೆ - ಹೇ |ಳಲೊಂದೆರಡೇ ಯನ್ನವಗುಣ 3ಉದಯ ಸ್ನಾನವು ಸಂಧ್ಯಾವಂದನೆ - ಅಘ್ರ್ಯ |ವಿಧಿಗುರುಹಿರಿಯರ ವಂದನೆ |ಮೊದಲಾಗಿ ಪಿತರಾರಾಧನೆ ಬಿಟ್ಟೆ |ಮದದಿಂದ ಹೀನನೆಂಬುವ ನಾನೇ4ಅನ್ಯರ ಮನೆ ದ್ವಾರ ಕಾಯ್ವೆನೋ - ಸ್ವಾಮಿ |ನಿನ್ನ ಸ್ಮರಣೆಯ ಕ್ಷಣ ಮಾಡೆನೋ ||ಅನ್ನಕ್ಕೆ ಬಹುದೂರ ಪೋಪೆನೋ - ಸಾರೆ |ಪುಣ್ಯಕ್ಷೇತ್ರಗಳಿರೆ ನೋಡೆನೋ 5ಧನಹೀನನಾದ ಕಾರಣದಿಂದ -ಸತಿ|ಮನೆ ಹೊಂದಿಸಳೋ ಪರಮಾನಂದ ||ತನುಜರಶನ ವಸನಗಳಿಂದ ಕಾಡು |ವಣು ಮಾತ್ರ ಸುಖವಿಲ್ಲ ಇದರಿಂದ6ಏಸುಹೇಳಲಿ ಮಾತ ಲಾಲಿಸೋ - ಶ್ರೀ ಪ್ರಾ- |ಣೇಶ ವಿಠ್ಠಲ ನೀನೇ ತಾರಿಸೋ ||ಆ ಸತ್ಕರ್ಮದಿ ಮನ ಪ್ರೇರಿಸೋ - ನಿನ್ನ |ದಾಸವರ್ಗದೊಳೆನ್ನ ಕೂಡಿಸೋ 7
--------------
ಪ್ರಾಣೇಶದಾಸರು
ವಂದನೆ ಮಾಡಿರೈಗುರುವರದೇಂದ್ರರ ಪಾಡಿರೈ ಪಬಂದ ದುರಿತಗಳ ಹಿಂದೆ ಮಾಡಿ ಸುಖ |ತಂದುಕೊಡುವ ದಯಾಸಿಂಧುಯತೀಂದ್ರರ ಅ.ಪ.ಮರುತ ಮತಾಂಬುಧಿ ಸೋಮನೆನಿಪ ವಸುಧೇಂದ್ರ - ಸದ್ಗಣಸಾಂದ್ರ|ಗುರುಗಳಕರಕಮಲದಿ ಜನಿಸಿದ ಸುಕುಮಾರಾ - ಕುಜನ ಕುಠಾರಾ ||ನೆರೆನಂಬಿದ ಭಕುತರನನುದಿನದಲಿ ಪೊರೆವಾ - ದುರಿತವ ತರಿವಾ |ಧರೆಯೊಳು ತ್ಯಾಗದಿ ಕರ್ಣನ ಮರೆಸಿದ ನೋಡಿ - ವರಗಳ ಬೇಡಿ1ಕರಿಹಿಂಡೊಳುಹರಿಹೊಕ್ಕ ತೆರದಿ ವಾದಿಗಳ - ಕೀಳು ಮತಗಳ |ವರಶಾಸ್ತ್ರಗಳಲಿ ಗೆಲಿದು ಸುಬುದ್ಧಿಯ ವರದ - ಜಗದೊಳು ಮೆರೆದ ||ಶರಭಂಗವರದಚರಣಸರಸೀರುಹಭೃಂಗ- ವಿಷಯ ಅಸಂಗ |ಸ್ಮರಣೆಯ ಮಾಡೆ ಪಿಶಾಚ ರೋಗಗಳ ಭಯವೂ - ಮುಟ್ಟದಲಿಹವೂ 2ಸಾನುರಾಗದಲಿ ಶ್ರೀ ರಾಘವೇಂದ್ರರ ಸ್ತೋತ್ರ - ಮಾಳ್ಪ ಸುಪಾತ್ರ |ಜಾನಕಿಪತಿ ಆನಂದದೊಳಿವರಿಗೆ ಒಲಿವ - ಹೃದಯದಿ ಸುಳಿವ ||ದೀನ ದಯಾಳು ಅಪರಿಮಿತ ಮಹಿಮ ಗುಣಾಢ್ಯ - ವಾದದಿ ದಾಢ್ರ್ಯಾ |ಧ್ಯಾನಿಸೆ ಮನದೊಳು ಜ್ಞಾನ ಕೀರ್ತಿ ಸುಖ ಕೊಡುವ - ಅಘಗಳ ಕಡಿವ 3ವಿಷ್ಣುನ ಲೋಕ ಪ್ರವೇಶ ಮಾಡಿದ ಚರಿಯಾ - ಕೇಳಿರಿ ಪರಿಯಾ |ಶಿಷ್ಟ ಜನರು ವಿಶ್ವಾವಸು ನಾಮಕ ಅಬ್ದ - ಆಷಾಢ ಶುದ್ಧ ||ಷಷ್ಠಿಯು ಕುಜವಾಸರ ಉತ್ತರಾ ನಕ್ಷತ್ರಾ -ವರಪುಣ್ಯಕ್ಷೇತ್ರ |ನಟ್ಟ ನಡುವೆ ವೃಂದಾವನ ಮಧ್ಯದೊಳಿರುವಾ - ಸೌಖ್ಯವ ಸುರಿವಾ 4ಆನೆ ಹಂಡೆ ವಸನಗಳು ದ್ರವ್ಯವು ನಾನಾ - ಮಾಡಿದ ದಾನಾ |ಆ ನಗರದಿ ಬಹು ಮಂದಿಯು ಭಕುತಿಯಲಿಂದಾ - ಪೂಜಿಪ ಚಂದ ||ಸೂನುಪಡೆದು ಸುಖ ಪಡುವರು ಸರ್ವರುನಿತ್ಯ- ಈತನು ಸತ್ಯ |ನಾನೆಂತುಸಿರಲಿ ಪ್ರಾಣೇಶ ವಿಠಲನ ದಾಸಾ, ಮುನಿ ಉತ್ತಂಸಾ 5
--------------
ಪ್ರಾಣೇಶದಾಸರು
ಹರಿಯ ನೆನೆಯಿರೋ - ನಮ್ಮಹರಿಯ ನೆನೆಯಿರೊ ಪ.ಬರದೆ ಮಾತನಾಡಿ ಬಾಯಬರಡು ಮಾಡಿ ಕೆಡಲುಬೇಡಿ ಅಪನಿತ್ಯವಿಲ್ಲದೀ ಶರೀರವ |ನಿತ್ಯವೆಂದು ನೋಡಿರಯ್ಯ ||ಹೊತ್ತು ಕಳೆಯಬೇಡಿಕಾಲ |ಮೃತ್ಯ ಬಾಹೊದೇಗಲೊ 1ಹಾಳು ಹರಟೆ ಮಾಡಿ ಮನವ |ಬೀಳು ಮಾಡಿಕೊಳ್ಳ ಬೇಡಿ ||ಏಳುದಿನದ ಕಥೆಯಕೇಳಿ |ಏಳಿರಯ್ಯ ವೈಕುಂಠಕೆ 2ಮೆಟ್ಟಿ ಪುಣ್ಯಕ್ಷೇತ್ರಗಳನು |ಸುಟ್ಟು ಹೋಹುದು ಪಾಪ ಮನ ||ಮುಟ್ಟಿ ಭಜಿಸಿರಯ್ಯಪುರಂದರವಿಠಲನಾ ಚರಣವನ್ನು 3
--------------
ಪುರಂದರದಾಸರು