ಒಟ್ಟು 166 ಕಡೆಗಳಲ್ಲಿ , 53 ದಾಸರು , 157 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಸ್ಪೀಟಾಡಬೇಕು ನಮ್ಮಯ ತಸ್ಪೀರ್ ನೋಡಬೇಕು ಪ ನಿಸ್ಪøಹರಾಗದ ಜನರಿಗೆ ಕಡೆಯಲಿ ಸಸೆÀ್ಪಂಟಾದೀತೆಂದು ತಿಳಿದು ಅ.ಪ ಆಸೆಂಬುವದಾತ್ಮ | ರಾಜಾ ತಾಸಗುಣ ಬ್ರಹ್ಮ ಲೇಸಾಗಿ ರಾಣಿಯು ಮೂಲ ಪ್ರಕೃತಿ ಗುಲಾಮನೆಂಬುದು ಚತುರ್ಮಖನೆನ್ನುತ 1 ದಹಿಲವೆಯಿಂದ್ರಿಯಗಳು | ದ್ವಾರವು ನಹಿಲವಿದು ಭುವಿಯೋಳು ಅಹಹಾ ಅಟ್ಟವು ಮದಗಳು ನೋಡಲು ವಿಹಿತವೇಳನೆ ಬಂದು ವೆಸನಗಳು 2 ನಿಜವಿದು ಮೂರನೆ ಬಂದು ತ್ರಿಕಾಲಗಳ್ 3 ಯಿಲ್ಲದಿಹದು ಮರ್ಮ ತುರುಫೆಗುಣರಾಶಿಗಳೆಂದೀಪರಿ ಅರಿತಾಡಲದೆ ಪರಮಾರ್ಥವಹದು 4 ಕ್ಳಾವ್ರಿಸ್ಪೀಟಾಟೀನ್ | ಡೈಮಂಡ್ ಈ ವಿಧ ಪೆಸರಿರಲೇನ್ ಭಕ್ತರ ಗುರುರಾಮ ವಿಠಲ ಕೈಬಿಡ 5
--------------
ಗುರುರಾಮವಿಠಲ
ಈತನೇನೆ ನಿನ್ನ ಮಗನು ಪ ಸೀತಾಪತಿ ರಘುನಾಥನೆಂಬವನು ಅ ವ್ಯಾಸನ ಜನನಿಯ ವಾಸನೆ ತಾಳ್ದನುದೇಶದೊಳಗೆ ಬಲು ಪೆಸರುಳ್ಳವನುನಾಸದೊಳೊರ್ವನ ಪೊತ್ತು ಮುರಿದು ಮು-ನೀಶರ ಶಾಪವ ಪಿಡಿದು ಕೊಂದಾತನು 1 ಶರಧಿ ಶಯನ ಮಾಡಿದಾತನು 2 ಮೂಗ್ರಾಮ ಮುರಿದು ವಾಜಿಯನೇರಿದಾತನುಸಾಗ್ರದಿಂದಿಳೆಯ ಭಾಗ್ಯ ಹಿಂಗಿಸಿದಯೋಗ್ಯದಿಂದ ಬಳಪತಿತನವನಿಗೆಭಾಗ್ಯವಿತ್ತ ಕಾಗಿನೆಲೆಯಾದಿಕೇಶವ 3
--------------
ಕನಕದಾಸ
ಎಂತುನುತಿಪೆ ನಾನು-ಈ ಜಗ | ದಂತರ್ಯಾಮಿಯನು ಪ ಸಂತತ ವಾಙÁ್ಮನ ಅ.ಪ. ಸಾಸಿರ ಮುಖದವನ-ಅವಯವ-ಸಾಸಿರವುಳ್ಳವನ ಸಾಸಿರ ಪೆಸರವನ-ರೂಪಿ ಸಾಸಿರವಾಗಿಹನ ಮೀಸಲಳಿಯದಂತೀ ಸಚರಾಚರ ವಾಸಿಯಾದ ಶ್ರೀ ವಾಸುದೇವನು1 ಜಗವನು ನಿರ್ಮಿಸುವ-ಬೊಮ್ಮನು-ಮಗನೆಂದೆನಿಸಿರುವ ಬಗೆಯುವದೀಜಗವ-ಜಠರದಿ-ನುಸುಳಿಸಿಕೊಂಡಿರುವ ಮಗುಳಿದ ನಳಿಯುವ ನಗಚಾಪರಮೊಮ್ಮಗನೆಂಬುವರೀ | ಯಗಣಿತ ಮಹಿಮನ 2 ನಿಗಮವ ಪೆತ್ತವನ-ಬೊಮ್ಮಗೆ-ನಿಗಮವನಿತ್ತವನ ನಿಗಮೋದ್ಧಾರಕನ-ನಿತ್ಯದಿ-ನಿಗಮಗೋಚರನ ಬಗೆಬಗೆಯೋಗಿಗಳ ಧ್ಯಾನಕೆನುಗಳಿದ ಶ್ರೀಪದ ಯುಗಳಾಂಬುಜನನು 3 ಮಾಯಾಧೀಶ್ವರನ-ದೇವನಿ-ಕಾಯಾರಾಧಿತನ ಕಾಯಜ ಸುಂದರನಾ-ಜೀವನಿ-ಕಾಯಕೆ ಮಂದಿರನಾ ಮಾಯಾಕಾರನಿವ ನಾಯವ ನರಿಯದೆ ದಾಯಗೆಟ್ಟರ ನ್ಯಾಯದಿ ಮುನಿಗಳು 4 ಪರಮಪದದೊಳಿಹನಾ ಪುನರಪಿ- ತರಣಿಯೊಳಿರುತಿಹನ ಶರನಿಧಿ ಮಂದಿರನಾ-ಶ್ರೀ ಪುಲಿಗಿರಿಯೊಳು ನಿಂದಿಹನ ನಿರುತವು ತನ್ನಯ ಚರಣವ ನಂಬಿದ ಶರಣರ ಪೊರೆಯುವ-ವರದ ವಿಠಲನಾ 5
--------------
ಸರಗೂರು ವೆಂಕಟವರದಾರ್ಯರು
ಎನ್ನ ಸಲಹುದೋ ರಂಗಾ ಎನ್ನ ಸಲಹು| ನಿನ್ನ ಚರಣ ಕಮಲದೋರಿ| ಗಮನ ರಂಗಾ ಪ ನಷ್ಟ ಪರಮ ಪತಿತ ಗತಿಯ|ಗೆಟ್ಟು ಅಜಮಿಳ ತನ್ನ| ಕಷ್ಟ ಬಡುವ ಕಾಲದಲ್ಲಿ ಸುತನ ಪೆಸರನು| ಮುಟ್ಟಿ ಕರಿಯೇ ತೃಪ್ತನಾಗಿ|ಅಷ್ಟರಿಂದ ಅವಗ ನಿನ್ನ| ಪಟ್ಟಣಕ ನೀ ಅಟ್ಟಿ ಗತಿಯ|ಕೊಟ್ಟು ಸಲುಹಿದೆ ರಂಗಾ 1 ಸಂಧಿಸಿ ಮಧ್ಯರಾತ್ರಿಯೊಳಗ|ಬಂದು ದೂರ್ವಾಸನ್ನವ ಬೇಡ| ಲಂದು ದೃಪದ ನಂದನೆ|ನಿನ್ನೆ ಸ್ಮರಿಸೆ ತ್ವರಿತದಿ| ಬಂದು ನಿಂದು ಬೇಡಿದುದನು|ಛಂದದಿಂದಲಿತ್ತು ದ್ವಿಜರಾಜ| ನಂದ ಬಿಡಿಸಿ ಐವರ ಮಾನ ಕುಂದಂತೆ ಕಾಯ್ದೆ ರಂಗಾ 2 ಐದು ವರುಷ ಹಸುಮಗನಾ|ಬೈದು ಮಲತಾಯಿ ಪೊರಗೆ| ಹಾಕಲಾಗ ಧೃವನು ನಿನ್ನ ಕುರಿತು ಧ್ಯಾನವಾ| ಗೈಯ್ಯಲಾಗಿ ಅಚಲ ಪದಕ|ಒಯ್ದು ಇಟ್ಟು ನೀನು ಅವನ| ಕಾಯ್ದೆ ಮಹಿಪತಿ ನಂದನೊಡೆಯನಾದ ದೇವ ರಂಗಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎನ್ನನುದ್ಧರಿಸಲಾಗದೆ ಚೆನ್ನರಾಯ ಪ. ಎನ್ನನುದ್ಧರಿಸಲಾಗದೆ ಚೆನ್ನರಾಯ ಬಿನ್ನೈಸುವೆಇನ್ನು ಬೇರೆ ಗತಿಯ ಕಾಣೆ ನಿನ್ನ ಚರಣಕಮಲದಾಣೆ ಅ.ಪ. ನಿಗಮ ಉಸುರುತಿರಲು ನಿನ್ನಚರಣವನ್ನು ಶಿರದೊಳಾಂತೆ ಎನ್ನ ಮೇಲಣಕರುಣವಿಲ್ಲದದೇನುಕಾರಣ ಸಲಹಬೇಕುಸುರರ ಮಸ್ತಕದ ಸುಭೂಷಣ 1 ಹಿಂದೆ ನಾನನಾಥನಾಗಿ ಒಂದೆರಡ[ಲ್ಲಾ]ನೇಕ ಜನ್ಮದಿಬಂದು ನರಕಯಾತನೆಯಲ್ಲಿ ನೊಂದು ಬೆಂದು ಬಾಯಬಿಡುತಬಂದೆ ನಿನ್ನ ಪೆಸರುಗೊಂಡೆನೊ ಸನಾಥನಾಗಿಮುಂದೆ ನಾಮಸುಧೆಯನುಂಡೆನೊ ನೀ ಕೃಪಾಳುಎಂದು ನುಡಿವರನ್ನು ಕಂಡೆನೊ 2 ಹಲವು ಮಾತನಾಡಲೇನು ಒಲಿವುದಿನ್ನು ಹರಿಯೆ ನಿನ್ನಸಲಿಗೆಯೊಳೀ ಬಿನ್ನಪವನು ಸಲಿಸುತಿಹೆನು ಮುಂದಕಿನ್ನುಜಲುಮ ಬಾರದಂತೆ ವರವನು ಇತ್ತು ಎನ್ನಸಲಹೊ ದೊರೆಯೆ ನಿನ್ನ ಕರೆಯೆನೊ ಮುಂದೆ ಮುಕುತಿ-ಲಲನೆಯೊಡನೆ ಸುಖದಲಿರುವೆನು 3 ದೇಶವರಿಯೆ ನಾನು ನಿನ್ನ ದಾಸನೆಂದು ಡಂಗುರವನು ಹೊ-ಯಿಸಿ ತಿರುಗುತಿರÀಲು ಮೋಹಪಾಶವೆನ್ನ ಸುತ್ತಿಕೊಂಡುಘಾಸಿ ಮಾಡುತಿರಲು ಬಿಡಿಸದೆ ಇರುವ ಪಂಥವಾಸಿಯೇನು ಇನ್ನು ಅಲೆಸದೆ ಸಲಹೊ ಸ-ರ್ವೇಶ ನಂಬಿದವನ ಕೆಡಿಸದೆ 4 ಎನ್ನ ದುರ್ಗುಣವನ್ನು ಮರೆದು ನಿನ್ನ ಸದ್ಗುಣದಿ ಪೊರೆದುಮನ್ನಿಸಿದರೆ ಲೋಕದೊಳಗೆ ಧನ್ಯನಹೆನು ಜನಮವೆತ್ತಿಉನ್ನತಾಹುದು ನಿನ್ನ ಕೀರುತಿ ನಾಶವಾಹುದುಎನ್ನ ಭವದ ಬಹಳ ಧಾವತಿ ಸಲಹೊಚೆನ್ನ ಹಯವದನಮೂರುತಿ 5
--------------
ವಾದಿರಾಜ
ಎಂಬ ನಾಮವನು ಉಚ್ಚರಿಸೆ ಸಾರುವರು ಭಕುತರಾದವರು ವೈಕುಂಠವನು ಆರಾದರೇನು ಮರೆಯದೆ ಹರಿಯಧ್ಯಾನಿಸಲು ಸಿರಿಯರಸ ಕಾಯ್ದು ಕೊಂಬ ಪ ಅರಸಕೇಳೈ ಬಳೀಕ ಪಾಂಡ್ಯದೇಶದೊಳೋರ್ವ ಪತಿ ಪೆಸರು ಇಂದ್ರ ದ್ಯುಮ್ನಧರಾತ್ಮ ಹರಿ ಪರಾಯಣನೆನಿಸಿ ನಿರುತಸತ್ಯ ಸುಶೀಲ ಕರಿತುರಗದಾಸೇಯ ತೊರೆದು ವಿರತನಾಗಿಯೆ ಪುರವ ಪೊರಟು ಸುಸ್ಥಿರನಾಗಿ ಬರವಾಯ್ತ ಗಸ್ತ ಶಿಷ್ಯವೆರಸಿ 1 ಸದಮಳಾತ್ಮರನ ಚಿಂತೆಯಿಂದ ಭೂಪೇಳದಿರೆ ಮದಮುಖನ ತಪವ ನೋಡುವೆನೆನುತ ಮುನಿ ಮುನಿದು ತದುಬಿಗರ್ಜಿಸಿ ಶಾಪವೀಯಗಜವಾಗೆನುತ ಸದು ಹೃದಯನೆದ್ದು ಬಳಿಕ ಪಾದಕ್ಕೆ ವಂದಿಸಿ ಶಾಪ ವೆಂದು ಬಿಗುಗಡೆಯೆನಲು ಸಾದರದಿಂ ಮುನಿಪನೆಲ ನೆಗಳು ಪಿಡಿಯೆಗತಿನಿನ ಗೆಂದು ಹೋದ ಮುನಿಪತಿ ಇತ್ತಲು 2 ಇಂತು ಭೂಮೀಶ ಶಾಪವ ತಾಳ್ದು ಬಿಸುಸುಯ್ದು ಕಂತು ಜನಕನೆ ಬಲ್ಲನೆಂತು ಗೆಲಿದಪೆನ್‍ನುತ ದಂತಿ ಮುಖವಾಗಿ ಭೂಕಾಂತೆಯೊಳು ಜನಿಸಿ ಸುರ ಸಂತತಿಗಳಲ್ಲು ಮಾ ಇಂತೆಸೆದನು 3 ತರುನಿಕರ ಚೂತಾಮಲಕ ಸುರಹೊನ್ನೆ ಪುನ್ನಾಗ ಮೆರೆವಬಿಲ್ವಶ್ವತ್ಥಮಾ ಕಿರುಗಿಡುವಿನೊಳಗೆ ಚರಿಸುವ ಕರಡಿ ಸೀಳ್ನಾಯಿ ಭೇರುಂಡ ಮುಂತಿರುತಿರಲು ಗರುಡ ಗಂಧರ್ವ ಚಾರಣರು ಸುರಕಿನ್ನರರು ಇರುತಿಹರು ಕಿಂಪುರುಷರು 4 ತ್ರಿಜಗದೊಳಗೆಣೆ ಗಾಣೆ ಭುಜಗಶಯನನೆ ಬಲ್ಲ ಗಜರಾಜ ಬೆಳೆದು ಕುಜನರ ಮಾರ್ಗವಂ ಪಿಡಿದು ಅಜಸೃಷ್ಟಿ ಬಿರಿಯೆ ಒದರಿ ನಿಜಪುತ್ರ ಮಿತ್ರಸ್ತ್ರೀಜನ ಸಹಿತಲೊಡಗೊಂಡು ಬುಜ್ಜಸತ್ವದಿಂದ ವನವನು ಮುರಿದು ಸಂಹರಿಸಿ ಭೂಜಲವ ನರಸಿ ಬಂದ 5 ಗಂಡು ಹೆಣ್ಣಾನೆಗಳ ತಂಡ ಸಹಿತಲೆ ಬಂದು ಕಂಡು ಜಲವನು ಈಂಟಿಗುಂಡಿ ಮಡುವನುಸಾರಿ ಚಂಡಿಗೊಳಿಸುತ ಧರಣಿಯ ಅಂಡೆಲೆವ ಮದದ ಸ್ತ್ರೀಯರ ಕೂಡಿ ನೆಗಳು ಖತಿಗೊಂಡು ಮಡುವಿನೊಳಗೆಳೆಯಲು 6 ನೆಗಳು ಸುತ್ತಲಿಹ ಕರಿಘಟೆಗಳೇನಿದದ್ಬುತವೆಂದು ಮತ್ತೆ ಸತ್ವದಲೆಳೆಯೆ ತೆತ್ತಿಗನು ಬಾರದಿರೆ ತಮ್ಮಗುತ್ತಿಗುಳಿದಿಹ ಹಸ್ತಿ ಇತ್ತ ಗಜರಾಜ ಕಾದುತಿರಲು ಹಲಕಾಲ ಬತ್ತಿ ಅಸುಗುಂದಿ ಚಿತ್ತದಿ ತಿಳಿದು ಧ್ಯಾನಿಸುತ ಮತ್ತಾರು ಕಾಯ್ವರೆನುತ 7 ಇಕ್ಕರ್ತರಿಂತು ಕಾದುತ್ತಿರಲು ಕರಿವರನ ಸೊಕ್ಕು ಮುರಿದುದು ತಮವುಚೊಕ್ಕಿ ಮುಖವನು ನಭಕೆ ಸೊಕ್ಕಿದುದುನೆಗಳು ಬಳಿಕ ಮುಕ್ಕುರು ದಿವ್ಯಸಾಗರ ವರುಷ ಪರಿಯಂತ ಸಿಕ್ಕಿ ನಗಳೊಳು ಕಾದಿ ಕುಕ್ಕುರಿಸಿ ನೀರಿನೊಳು ದಿಕ್ಕನೊಡುತ್ತ ಕಕ್ಕನೆ ಕರಗಿ ಜ್ಞಾನದಲಿ ಭಕ್ತವತ್ಸಲನ ನೆನೆದ 8 ರಕ್ಷಿಸೆನ್ನನು ಬಿಡದೆ ಪಕ್ಷಿವಾಹನಗಮನ ಸೇವ್ಯ ಕುಕ್ಷಿಯೊಳಗಿಂಬಿಟ್ಟು ರಕ್ಷಿಸುವೆ ಭಜಕರನು ಮೋಕ್ಷದಾಯಕನೆ ಕಾಯೋ ಲಕ್ಷ್ಮೀಶ ಕೇಶವ ಉಪೇಕ್ಷಿಸದೆ ನೀ ಬಂದು ಭಕ್ಷಿಸುವ ನೆಗಳನೀ ಶಿಕ್ಷಿಸಲು ಬೇಕು ಅಕ್ಷಿಯನು ಇಟ್ಟುಬಂದು 9 ಸರಸಿರುಹದಳನಯನ ಮೂರ್ತಿ ಪರಿ ಹರಿಸೋ ಕ್ಷೀರಾಬ್ಧಿ ಶಯನನೆಂದು ಪರಿ ಪರಿಯ ಸ್ತುತಿಸಲಾಕ್ಷಣ ಮಹಿಮ ಧ್ವನಿಗೇಳ್ದು ನಾಗಿಕರದಿ ಚಕ್ರವ ಕೊಂಡು ಭರದಿ ಭಕುತನ ಕಂಡು ಕರಿರಾಜಗಭಯವಿತ್ತ 10 ಸಿರಿ ಮೊಗದ ನಳಿನಾಯತೇಕ್ಷಣದ ತೊಳಪ ಕದಪಿನ ಮಿಸುಪ ನವರತ್ನ ಕುಂಡಲದ ಕೌಸ್ತುಭ ಹಾರದುರಸ್ಥಳದ ಹೊಳೆವ ಮಣಿಮಕುಟ ನೇಳಿವದಂತಪಂಕ್ತಿಯ ಚಾರು ಕೋರವಿಸೆ ಕಂಡ 11 ಮೇಲೆ ಕೈವಾರಿಸುವ ಸುರರ ದುಂದುಭಿ ಮೊಳಗೆ ಹೊಳೆಯ ಎತ್ತಿದ ತೋರ ಸತ್ತಿಗೆಯ ತೋರಣದ ಸಾಲುಗಳ ಸಂದಣಿಯ ಸಂಭ್ರಮದ ಜಾಲವನು ಕಂಡುಗಜವು ಪಾಲಿಸೈ ಗೋವಿಂದನಾಥ ಬಂಧು ತ್ರಾಹಿ ಭವಾಬ್ಧಿಸಾರ ತ್ರಾಹಿ ಪಾಲಿಸೈ ತ್ರಾಹಿ ಎನುತ 12 ಗಡಗಡನೆ ನಡುಗತಿರೆ ಕಡಲಶಯನನು ಕಂಡು ಕಡುಕೃಪೆಯೊಳೈ ತಂದು ಮಡುವ ಧುಮುಕಿಯ ಗಜವ ಪಿಡಿದಾಗ ವಾಮಕರದಿಂದಳೆಯನೆಗಳು ಸಹತಡಿಗೆ ಬರಲಾಗಕಂಡು ಘುಡು ಘುಡಿಸಿ ಕೋಪದಿಂ ತುಡುಕಿ ಚಕ್ರವತೆಗೆದು ಪಿಡಿದು ನೆಗಳನು ಕಡಿಯೆ ಒಡನಾಗ ನಿಜರೂಪ ಬಿಡುಗಡೆಯಾಯಿತೆಂದು ನಡೆದು 13 ಹರಿ ಬಳಿಕ ಕರಿವರಗೆ ವಿಶ್ವರೂಪವತೋರಿ ತರಣಿಕೋಟಿ ಸಹಸ್ರತೇಜದಿಲ ರಂಜಿಸಿಯೆ ಪರಿದುಹರಿವೋಲೆಸೆದನು ಬಳಲಿದೆಯಾ ಎಂದು ಕರುಣಾಕಟಾಕ್ಷದಿಂ ಕರಿವರನ ಸಹಿತ ವಾಸ ದೆಡೆಗೆ 14 ಅವನುದಯ ಕಾಲದೊಳೆದ್ದು ಪೇಳುವನು ಆವರಿದ ಭಕ್ತಿ ಭಾವದಲಿದನು ಕೇಳುವರು ಪಾವನರು ಪುಣ್ಯಾತ್ಮರು ಕೋವಿದರು ಧರಗೆ ಗಜರಾಜೇಂದ್ರ ಮೋಕ್ಷವನು ಸಾವದಾನ ದಲಿದನು ನೇಮದಲಿ ಕೇಳ್ವವರ ನೆನೆದವರ ಕಾಯ್ವನೆಂದು 15
--------------
ಕವಿ ಪರಮದೇವದಾಸರು
ಎಲ್ಲಿ ಹೋಗುವೆ ಮನದಿ ನಿಲ್ಲೊಂದು ಘಳಿಗೆ ಸೊಲ್ಲ ಲಾಲಿಸು ಲಕ್ಷ್ಮೀವಲ್ಲಭನೆ ನೀನು ಪ ನಡುನೀರೊಳಾಡುವೆಯೊ ಅನಿಮಿಷನು ನೀನಾಗಿ ಕಡುಭಾರದಿಂದಿಳಿವ ಗಿರಿಯನೆತ್ತುವೆಯೊ ಅಡವಿಯೊಳು ಚರಿಸುವೆಯೊ ಬಗೆದು ಬೇರನು ತಿನ್ನ ಲೊಡೆಯುವೆಯೊ ಕಂಭವನು ಘನ ಮಹಿಮೆಯಿಂದ 1 ಬೇಡಿ ದೈತ್ಯನ ನೀನು ಮೂರಡಿಯ ಭೂಮಿಯನು ಕಡು ಚೆಲ್ವ ಪಾದದಿಂದದಳೆಯ ಪೋಗುವೆಯೊ ಕೊಡಲಿಯೊಳು ಭೂಭುಜರ ಸಂತತಿಯ ಕೋಪದಿಂ ಕಡಿಕೊಂಬೆ ನೀನೆಂದು ಜಗವೆಲ್ಲ ಹೊಗಳುತಿದೆ 2 ವಾರಿಧಿಯ ಕಟ್ಟುವೆಯೊ ಬೆಟ್ಟವನು ತಂದಿಕ್ಕಿ ನಾರಿಯರ ಸೇರುವೆಯೊ ಕಡು ಮಮತೆಯಿಂದ ಶ- ರೀರದೊಳು ನಾಚಿಕೆಯ ಹೊರಗಿಡುವೆಯೊ ನೀನು ವಾರುವನನೇರುವೆಯೊ ಈರೈದ ತೋರುವೆಯೊ3 ಬೆಟ್ಟದೊಳು ನಿಲ್ಲುವೆಯೊ ಕಟ್ಟುವೆಯೊ ರೊಕ್ಕವನು ಶೆಟ್ಟಗಾರನುಯೆಂದು ಪೆಸರಿಟ್ಟೆಯೊ ವರಾಹ ತಿಮ್ಮಪ್ಪನೆಂಬುದನು ದೃಷ್ಟಿಯಲಿ ನೋಡಿ ಕಿವಿಗೊಟ್ಟು ಮಾತಾಡು 4
--------------
ವರಹತಿಮ್ಮಪ್ಪ
ಎಷ್ಟು ಪುಣ್ಯ ಮಾಡೀ ಕಂಬ ವಿಠ್ಠಲನ್ನ ಗುಡಿ ಸೇರಿತೋ ಪ. ಪುರಂದರ ದಾಸರನ್ನು ಕಟ್ಟಿಸಿಕೊಂಡು ತಾ ಪೂಜೆಗೊಂಡಿತೊ ಅ. ಎಲ್ಲಾ ಕಂಬಗಳಿದ್ದರೂ ಇಂತು ಇಲ್ಲೀ ಇದಕೆ ಈ ಖ್ಯಾತಿಯು ಬಂತು ಸುಜನ ವಂದಿಪರಿ ಪುಲ್ಲನಾಭನ್ನ ಕೃಪೆಯ ಪಡೆದಿತು 1 ಮಾಯಾಕಾರನು ನೀರನು ತಂದು ಈಯಲು ಪುರಂದರದಾಸರಿಗಂದು ನೋಯಿಸೆ ತಿಳಿಯದೆ ಮನಕದ ತಂದು ನ್ಯಾಯದಿ ಕಟ್ಟಿಸಿ ಹೊಡೆಸಿದನಂದು 2 ದಾಸರಂತೆ ತಾನು ವೇಷವ ಧರಿಸಿ ವೇಶ್ಯೆಗೆ ತನ್ನ ಕಂಕಣವನ್ನೆ ಕೊಡಿಸಿ ತಾಸೊತ್ತಿನಾ ರಾತ್ರೆ ಹೊಡೆದದ್ದ ನೆನಸಿ ವಾಸುದೇವ ಬೈಲಿಗೆಳೆಸಿದ ಬಿಗಿಸಿ 3 ಜ್ಞಾನ ಪುಟ್ಟಲು ಹರಿಮಾಯವಿದೆಂದು ಶ್ರೀನಿವಾಸ ತಾ ವಲಿದನು ಅಂದು ಆನಂದದಿಂದೊಂದು ಕವನ ಗೈದು ಶ್ರೀನಿಧೆ ಮುಟ್ಟಿತು ಮುಯ್ಯವಿದೆಂದು4 ದಾಸರ ಅಂಗವು ಸೋಕಿದ್ದರಿಂದ ಶ್ರೀಶನು ಹಗ್ಗದಿ ಬಿಗಿಸಿದ್ದರಿಂದ ದಾಸರ ಪೆಸರಲಿ ಮೆರೆವುದರಿಂದ ಭವ ಬಂಧ5 ಹಿಂದೆ ಕಂಬದಿ ನರಹರಿ ಅವತರಿಸೆ ಅಂದಿನ ಕಂಬವೆ ಈಗಿಲ್ಲ್ಲಿ ಉದಿಸೆ ಸಿಂಧುಶಯನನ್ನ ದಾಸತ್ವ ವಹಿಸೆ ಬಂದಿತು ವಿಠಲನ್ನ ಗುಡಿಯನಾಶ್ರೈಸೆ6 ಕರ್ಮ ಕಳೆವುದು ದಾಸರ ವಾಕ್ಶ್ರವಣ ಜ್ಞಾನವೀಯುವುದು ದಾಸರ ಉಪದೇಶ ಹರಿಯ ತೋರುವುದು ದಾಸರ ಸ್ಪರ್ಶವು ಮುಕ್ತಿಗೊಯ್ಯವುದು7 ಕಂಭವೆ ಸಾಕ್ಷಿಯು ಈ ಕಲಿಯುಗದಿ ಡಾಂಭಿಕ ಜನರಿಗೆ ತಿಳಿಯದು ಹಾದಿ ಬೆಂಬಿಡದೆ ಹರಿ ಕಾಯುವ ಭರದಿ ಇಂಬುಗೊಟ್ಟು ತನ್ನ ನಿಜ ದಿವ್ಯ ಪುರದಿ 8 ದಾಸರ ಮಾರ್ಗವೆ ಸುಲಭವೆಂತೆಂದು ದಾಸರ ಕೃಪೆ ದ್ವಾರ ವಲಿಯುವೆನೆಂದು ದಾಸರ ದೂಷಿಸೆ ಗತಿ ಇಲ್ಲೆಂದು ಶ್ರೀಶ ತಾನಿಲ್ಲೀ ನಿಂತನು ಬಂದು 9 ಶ್ರೀ ರಮಾಪತಿ ಓಡಿ ಬಂದ ನಿಲ್ಲೆಂದೂ ದ್ವಾರಕ ಪುರದೊಂದು ಕಂಭವೆ ಬಂದು ಸೇರಿತೊ ವಿಠಲನ ಮಂದಿರವಂದು ಸೂರೆಗೈದರೊ ಖ್ಯಾತಿ ದಾಸರು ಬಂದು 10 ನಿಜದಾಸರಂಗಸಂಗದ ಫಲದಿ ರಜತದ ಕಟ್ಟಿನಿಂ ಮೆರೆದಿತು ಜಗದಿ ಸುಜನರ ಸಂಗದಿ ಮುಕುತಿಯ ಹಾದಿ ಭುಜಗಶಯನ ತೋರುವ ನಿರ್ಮಲದಿ 11 ತತ್ವವನಿದರಿಂದ ತಿಳಿವುದು ಒಂದು ಉತ್ತಮತ್ವ್ವವು ಜಡಕಾಯಿತು ಬಂದು ಪಾದ ಸೋಂಕಲು ಅಂದು ವ್ಯರ್ಥವಾಗದು ಹರಿಭಕ್ತರೆ ಬಂಧು12 ಪಾಪ ನಿರ್ಲೇಪವಾಗೋದು ವಿಠ್ಠಲನ್ನ ಆಪಾದ ಮೌಳಿಯ ರೂಪ ದರುಶನ್ನ ಪರಿ ಖ್ಯಾತಿ ಪೊಂದಿತು ಕಂಬ ಘನ್ನ ಗೋಪಾಲಕೃಷ್ಣವಿಠ್ಠಲ ಸುಪ್ರಸನ್ನ 13
--------------
ಅಂಬಾಬಾಯಿ
ಏಣನಯನೆ ಏಣಭೋಜ ಮಧ್ಯಳೆ ತೋರೆಏಣಾಂಕ ಬಿಂಬ ಮುಖಿಏಣವೈರಿಯ ವೈರಿಯ ಶಿರಕುಚಯುಗೆ ಕರೆತಾರೆಏಣಾಂಕಧರ ಸಖನ ಪ ಚಳಿಯ ಮಗಳ ತಾಯಳಿಯನ ತನಯನಇಳುಹದೆ ಪೊತ್ತಿಹನಬಳಿದುಣ್ಣಲೀಸದೆ ಸೆಳೆದುಂಡನಣ್ಣನಸಲಹಿದಾತನ ಸುತನಕಳದೊಳು ತಲೆ ಚೆಂಡಾಡಿದ ಧೀರನಬಳಿ ವಾಘೆಯನು ಪಿಡಿದನಇಳೆಯ ಮೊರೆಯನು ಕೇಳಿ ಖಳರುತ್ತಮಾಂಗವನಿಳುಹಿದಾತನ ತೋರೆಲೆ 1 ಇಪ್ಪತ್ತುನಾಲ್ಕು ನಾಮಗಳೊಳಗೇಳನುತಪ್ಪದೆಣಿಸಿ ಕಳೆದುಬಪ್ಪ ಎಂಟನೆಯ ನಾಮದ ಪೆಸರಿನೊಳ್‍ಇಪ್ಪ ಕಡೆಯ ಬೀಡಲಿಅಪ್ಪ ಜಯದರಸನ ಕೂಡೆ ಜನಿಸಿದಕಪ್ಪು ವರ್ಣದ ಮೈಯಳಅಪ್ಪನ ಮಿತ್ರನ ಮಗನೆಂಬ ಬೊಮ್ಮನಬೊಪ್ಪನ ತೋರೆನಗೆ2 ಬಿಡುಗಣ್ಣ ಬಾಲೆ ತನ್ನೊಡೆಯನ ನುಡಿಗೇಳಿದೃಢದಿಂದ ನಡೆದು ಬಂದುಜಡಿವ ಕೋಪಕೆ ಶಾಪ ಪಡೆದುಕೊಂಡಾಕ್ಷಣನುಡಿದ ದಿನವು ದಾಟಲುಪಡೆಯನೆಲ್ಲವ ನಡು ರಣದಲಿ ಸೋಲಿಸಿಜಡಿದು ಗೋವುಗಳನೆಲ್ಲಒಡನೆ ತನ್ನಯ ಪುರಕೆ ಹೊಡೆತಂದ ಧೀರನಒಡೆಯನ ತೋರೆನಗೆ 3
--------------
ಕನಕದಾಸ
ಏನು ಕಾರಣ ಬಂದೆ ಗಂಗೆ | ನಾನೇನು ಪುಣ್ಯವನು ಮಾಡಿದವನಲ್ಲ ಪ ಕಾಸೀಪುರದಿಂದಲಿ ದೇಶ ನೋಡಲು ಬಂದ್ಯೋ | ಬೀಸಿ ಬಿಸುಟುವಂಥ ಅಸ್ಥಿಗಾರದೆ ಒಂದ್ಯೋ | ದಾಸರ ಮಹಿಮೆಯನು ನೋಡುವೆನೆಂದು ಬಂದ್ಯೋ | ದೋಷವರ್ಜಿತ ವಾರಣಾಸಿ ಕಡಿಯದಲೆ | ಲೇಸಾಗಿ ತಿಳಿಪುವದು ಭೀಷ್ಮನ ಜನನೀ 1 ತಿಲನೀರು ಕುಡಿದು ಧರಿಸಲಾರದೆ ಬಂದ್ಯೋ | ಮಲಜನರ ದೋಷವನು ಕಳೆವೆನೆಂದು ಬಂದ್ಯೋ | ಕಲಿಯುಗಕೆ ಈ ಕೃಷ್ಣಾ ಅಧೀನಳೆಂದು ಬಂದ್ಯೋ | ಸುಲಭ ತ್ರಿದದೇಶ್ವರಿ ಗಂಗೆ ತಡೆಯದಲೆ | ನೀರಜ ನಯನೇ 2 ನಿತ್ಯ ಕರ್ಮಗಳು ನೋಡಲಿ ಬಂದ್ಯೋ | ಮಜ್ಜನವ ಮಾಡಿಸಿ ಎನ್ನ ಪೊರಿಯಲು ಬಂದ್ಯೋ | ಮೂಜಗದೊಳು ಪೆಸೆರಾಗಿಪ್ಪೆನೆಂದು ಬಂದ್ಯೋ | ನಿರ್ಜನ ತಟನಿ ನಿರ್ಗುಣಸಾಂದ್ರೆ ತಡಿಯದಲೆ | ನಿಜವ ತಿಳುಪುವದು ವಿಜಯವಿಠ್ಠಲಸುತೆ 3
--------------
ವಿಜಯದಾಸ
ಒಲಿದವಳ ಬಿಡುವುದು ಧರ್ಮವಲ್ಲ | ಚಲುವ ನಿನಗಾಗಿ ನಾ ಯೇಸು ಕಾಲಕೆ ತಪವಿದ್ದೆ ಪ ತಂದೆತಾಯಿಗಳಲ್ಲಿ ಪುಟ್ಟಿದಾಕ್ಷಣದಲ್ಲಿ | ಅಂದೆ ನೇಮಿಸಿದರು ಪೆಸರನಿಟ್ಟು | ಸಂದೇಹಗೊಳದಿರು ಮೈಲಿಗೆಯವಳೆಂದು | ಬಂದ ಪ್ರಾಣವÀ ನೋಡು ಬರಿದೆ ಪೇಳುವಳಲ್ಲ 1 ಕನ್ಯಾವಸ್ಥಿಯಲಿಂದ ನಿನ ನಿನ್ನ ಧ್ಯಾನವಲ್ಲವೇ | ಅನ್ಯಪುರುಷರಾಪೇಕ್ಷೆ ಮಾಡಲಿಲ್ಲ | ಅನ್ಯಾಯವೇನು ಆಗಲಿ ಪೋಗುವರೇನೊ | ಅನ್ಯಥಾ ಈ ನುಡಿಗೆ ನಿಜಕೆ ನಿಲ್ಲುವೆ ನಾನು 2 ಮಲದಲ್ಲಿ ಮೂರುದಿನ ಪೋಗಾಗಿ ಹೋಗಿದ್ದೆ | ಬಲು ಶುಚಿಯಾದೆನೊ ಶುದ್ಧ ಜಲದಿ | ಘಳಿಗೆ ಕಡೆದರೆ ಎನ್ನ ಪ್ರಾಣನಿಲ್ಲವೊ | ಎನ್ನನಗಲಿ ಮೈ ತಪ್ಪಿಸಿ | ದೂರ ಕರೆದೊಯ್ಯೊ ಕರುಣದಲಿ 3 ನಗೆಗೇಡಿ ಮಾಡದಿರು ಜಗದೊಳಗೆ ಇಪ್ಪವಳ | ಸೊಗಸಿಗನೆ ಸರಸವಾಡುವನೆ ಬಾರೊ | ಮಗುಳೆ ಮತ್ತೊಬ್ಬರು ಮೆಚ್ಚಿದರೆ ಇದೆ ಪಾಟು | ಮಗುಳೇನು ಹೊಸ ಪರಿಯು ತೋರುವುದು ನೋಡಿದರೆ 4 ಕಂಡ ಕಾಣದ ಹಾಗೆ ಮಾತನಾಡಿದಿರೆನ್ನ | ಅಂಡೊಲಿವ ಖ್ಯಾತಿ ಎಂದಿಗೆ ತೀರದೂ | ಕುಂಡಲಿಗಿರಿವಾಸ ವಿಜಯವಿಠ್ಠಲ ವೆಂಕಟ | ಹಿಂಡು ಬಂಧುಗಳಿದ್ದರೇನು ಮಾನವನು ತೊರೆದೆ 5
--------------
ವಿಜಯದಾಸ
ಓಡದಿರು ಓಡದಿರು ಖೋಡಿ ಮನವೆ ಮೂಢತನದಲಿ ಬರುವ ಕೇಡುಗಳನರಿದರಿದು ಪ. ಬೀಸುವದು ಬಿರುಗಾಳಿ ಸೂಸುವದು ಉರಿಮಳೆಯು ಪೆಸರಿಲ್ಲದೆ ಕತ್ತಲೆಯು ಮುಸುಕುತಿಹುದು ಈಸು ನೆಲಸಿಹ ಘೋರ ಭೀಷಣಾಟವಿಯೊಳಗೆ ಬೀಸುವನು ಬೇಡನೊಬ್ಬನು ಬಲೆಯನಿಕದಕೊ1 ಅತ್ತೆಯೆಂಬುವಳು ನಿನ್ನ ನೆತ್ತಿಯಲಿ ತೈಲವನು ಒತ್ತಿ ಮೋಹದಿ ವಹಿಸಿಕೊಂಡಿರುವಳು ಅತ್ತ ಕಡೆ ಬೇಡ ಹಿಂದೊತ್ತಿ ಬರುವರೆ ಬೇಗ ತುತ್ತಾಗ ಎನುತ ಬಾಯ್ ತೆರೆದಿರುವಳು 2 ಮುಂಗಡಯೊಳ್ ಸಾಲಾಗಿ ಅಂಗಡಿಗಳಿರುತಿಹವು ಹಂಗಿಗನು ನೀನಾಗಿ ಬೇಡ ಅವರ ಸಂಗ ಗೈಯುತ ವ್ಯಾಪಾರಂಗಳನು ಮಾಡಿದರೆ ಭಂಗಿಯನು ಕೊಟ್ಟು ಬಲು ಭಂಗಪಡಿಸುವರಯ್ಯ 3 ಖೂಳತನ ಬೇಡ ಬಾ ಮಾಳಿಗೆಗೆ ಹೋಗುವ ಏಳು ಮೆಟ್ಟಲ ದಾಂಟಿ ಲೋಲತನದಿ ಅಲದೆಲೆ ಮಂಚದಲಿ ಲೋಲನಾಗಿಹನ ಪದ ಆಲಿಂಗನದಿ ಬಲು ಕುಶಾಲಿನಲ್ಲಿರು ಕಂಡ್ಯ 4 ಈ ರೀತಿಯಲಿ ನಿನಗೆ ಸಾರಿ ಪೇಳಿದೆ ನೋಡು ಭೂರಿ ಮಾಯಾಭ್ರಾಂತಿಗೊಳಗಾಗದೆ ಕಾರಣಿಕ ಲಕ್ಷ್ಮೀನಾರಾಯಣನ ಪಾದ ವಾರಿಜದಿ ನಲಿದು ಸುಖಿಯಾಗು ನೀ ಮನವೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಓಡದಿರು ಓಡದಿರು ಖೋಡಿ ಮನವೆ ಮೂಢತನದಲಿ ಬರುವ ಕೇಡುಗಳನರಿದರಿದುಪ. ಬೀಸುವದು ಬಿರುಗಾಳಿ ಸೂಸುವದು ಉರಿಮಳೆಯು ಪೆಸರಿಲ್ಲದೆ ಕತ್ತಲೆಯು ಮುಸುಕುತಿಹುದು ಈಸು ನೆಲಸಿಹ ಘೋರ ಭೀಷಣಾಟವಿಯೊಳಗೆ ಬೀಸುವನು ಬೇಡನೊಬ್ಬನು ಬಲೆಯನಿಕದಕೊ1 ಅತ್ತೆಯೆಂಬುವಳು ನಿನ್ನ ನೆತ್ತಿಯಲಿ ತೈಲವನು ಒತ್ತಿ ಮೋಹದಿ ವಹಿಸಿಕೊಂಡಿರುವಳು ಅತ್ತ ಕಡೆ ಬೇಡ ಹಿಂದೊತ್ತಿ ಬರುವರೆ ಬೇಗ ತುತ್ತಾಗ ಎನುತ ಬಾಯ್ ತೆರೆದಿರುವಳು 2 ಮುಂಗಡಯೊಳ್ ಸಾಲಾಗಿ ಅಂಗಡಿಗಳಿರುತಿಹವು ಹಂಗಿಗನು ನೀನಾಗಿ ಬೇಡ ಅವರ ಸಂಗ ಗೈಯುತ ವ್ಯಾಪಾರಂಗಳನು ಮಾಡಿದರೆ ಭಂಗಿಯನು ಕೊಟ್ಟು ಬಲು ಭಂಗಪಡಿಸುವರಯ್ಯ 3 ಖೂಳತನ ಬೇಡ ಬಾ ಮಾಳಿಗೆಗೆ ಹೋಗುವ ಏಳು ಮೆಟ್ಟಲ ದಾಂಟಿ ಲೋಲತನದಿ ಅಲದೆಲೆ ಮಂಚದಲಿ ಲೋಲನಾಗಿಹನ ಪದ ಆಲಿಂಗನದಿ ಬಲು ಕುಶಾಲಿನಲ್ಲಿರು ಕಂಡ್ಯ4 ಈ ರೀತಿಯಲಿ ನಿನಗೆ ಸಾರಿ ಪೇಳಿದೆ ನೋಡು ಭೂರಿ ಮಾಯಾಭ್ರಾಂತಿಗೊಳಗಾಗದೆ ಕಾರಣಿಕ ಲಕ್ಷ್ಮೀನಾರಾಯಣನ ಪಾದ ವಾರಿಜದಿ ನಲಿದು ಸುಖಿಯಾಗು ನೀ ಮನವೆ5
--------------
ತುಪಾಕಿ ವೆಂಕಟರಮಣಾಚಾರ್ಯ
ಕಂಡೆ ಕಂಡೆನೊ ಕಂಗಳಲಿ ಭೂ | ಮಂಡಲಾಬ್ಧಿಗೆ ಸೋಮನೆನಿಪ ಅ | ಖಂಡ ಮಹಿಮಾ ವಾದೇಂದ್ರ ಗುರುಗಳ ಪ ನಸುನಗಿಯ ಮೊಗ | ಪಸರಿಸಿದಾ ದ್ವಾದಶನಾಮಗಳು ಶ್ರೀ ಮುದ್ರೆ ಮುದದಿಂದ | ನೊಸಿಲಿಲೊಪ್ಪುವ ಗಂಧ ಅಕ್ಷತಿ ಎಸೆವ ಸಣ್ಣಂಗಾರ ಕಿವಿಯಲಿ ಹಸನಾದ ಎಳೆ ತುಲಸಿ ಶೋಭಿಸಿ | ಬೆಸಸುವ ಒಂದೊಂದು ಮಾತಾ | ಲಿಸಿದರದು ವೇದಾರ್ಥತುಲ್ಯಾ | ಲಸವ ಗೈಯಿಸದೆ ಬರುವ ಗುರುಗಳ1 ಮೊಸಳಿವಾಯಪಲಕ್ಕಿ ಸುತ್ತಾ ಭಾ | ರಿಸುವ ನಾನ ವಾದ್ಯಾದಾ ಘೋಷಾ | ಪುಸಿಕರೆದೆದಲ್ಲಣರು ಎಂಬಾ | ದಶ ದಿಕ್ಕಿನೊಳು ಕೀರ್ತಿ ತುಂಬಿರೆ | ಶಿಶುವು ಮೊದಲಾದವರು ತಮ ತಮ | ಬೆಸನೆ ಪೇಳಲು ಕೇಳಿ ಅವರು | ಋಷಿಕುಲೋತ್ತಮರಾದ ಗುರುಗಳ2 ಶ್ವಶನ ಮತ ವಾರಿಧಿಗೆ ಪೂರ್ಣ | ಶಶಿ ಎನಿಸಿಕೊಂಬ ಧೀರುದಾರರೆ | ಅಸಮ ತತ್ವ ಪ್ರಮೆಯದಲಿ ನಿರ್ಮಿಸಿದನೆ | ಲೋಕೇಶ ಇವರನ್ನ ವಸುಧಿ ಅಮರರು | ಪ್ರಸರ ಎಡಬಲ ಎಸದು ತುತಿಸಲು ಹಿಗ್ಗಿ ಕರುಣಾ | ರಸಭರಿತರಾಗಿ ನೋಡುತ್ತ ಮಾ | ಸನದಿ ಹರಿಪದ ಭಜಿಪ ಗುರುಗಳ3 ಕುಸುವಶರನ ಬಾಣವನು ಖಂಡ್ರಿಸಿ ಬಿಸುಟ ಸಂಪನ್ನ ವಿದ್ಯಾ | ವಸುವಿನಲಿ ಆವಾಗ ತಲೆ ತೂ | ಗಿಸುವರು ಪಂಡಿತರ ಮೆಚ್ಚಿಸಿ | ವಶವೆ ಪೊಗಳಲು ಎನಗೆ ಇವರ ದ | ರುಶನದಿಂದಲಿ ಗತಿಗೆ ಪಥನಿ | ವಿಷದೊಳಗೆ ಇದು ಸಿದ್ಧವೆಂದು ವಂ | ದಿಸಿದಿರೊ ಮರಿಯದೆ ಈ ಗುರುಗಳಾ 4 ಮಿಸುಣಿ ಮಂಟಪದೊಳಗೆ ರಂ | ಜಿಸುವ ರಾಮನÀ ಕುಳ್ಳಿರಿಸಿ ಅ | ರ್ಚಿಸುವ ಚಿತ್ತೇಕಾಗ್ರದಲಿ ವೊ | ಲಿಸುವ ತಂತ್ರ ಸಾರೋಕ್ತ ಬಗೆಯನು | ಕುಶಲರಾದ ಉಪೇಂದ್ರ ಮುನಿಕರ | ಬಿಸಜದಿಂದಲಿ ಜನಿಪ ಭಕುತಿಲಿ | ಸಿರಿ ವಿಜಯವಿಠ್ಠಲನ್ನ | ಪೆಸರುಗಳು ಎಣಿಸುವ ಗುರುಗಳ 5
--------------
ವಿಜಯದಾಸ
ಕದವ ತೆಗೆಯೆ ಸುಂದರಿವಯ್ಯಾರಿ ಮುತ್ತಿನ ಪ ಕಡಲ ಶಯನನೆ ಮಡದಿ ಹರುಷದಿ ಸಡಗರದಿ ಮುಂದಡಿ ಇಡುತ ನಿನ್ನ ಒಡೆಯ ಬಂದಿಹನೆಂದು ಹರುಷದಿ ಬೆಡಗು ಮಾಡದೆ ಬಿಡಿಯ ಮುತ್ತಿನ 1 ಯಾರು ನಿನ್ನಯ ಪೆಸರ ಏನೆಂದು ತಿಳಿಯದೆ ಹೇಗೆ ತೆಗೆಯಲಿ ಕದವಾ ಘೋರ ರಾತ್ರಿಯ ವೇಳೆಯಲಿ ಬಂ- ದೀಗ ಬಾಗಿಲ ಬಡಿಯ ನಿಂದಿರೆ ನಾರಿಯರು ಏನೆಂದು ಕೇಳ್ಪರು ದ್ವಾರ ಬಿಡುಬಿಡುತಲಿ ಸಾಗು ಮುಂದಕೆ2 ತೆಗೆಯಲೊಲ್ಲೆನು ಕದವ ಸಮರಾತ್ರಿ ವೇಳದಿ ರುಕ್ಮನ ಅನುಜೆ ಕೇಳೆ ಪೃಥ್ವಿಯೊಳು ಎನ್ನನು ಚಕ್ರಿ ಎನ್ನುತ ಪೇಳ್ವರೆ ಅರ್ಥಿವಚನಗಳನ್ನು ಕೇಳುತ ಸತ್ವರದಿ ನೀ ಬಂದು ಮುಂದಕೆ ಮುತ್ತಿನ ಕದತೆಗೆದು ಬೇಗನೆ ರತ್ನ ಪೀಠದಿ ಕುಳ್ಳಿರಿಸೆ ಹೊಸ ಮುತ್ತಿನರಗಿಣಿ ಸತ್ಯವಾಣಿಯೆ3 ಕೇಳಿ ಹರ್ಷಿತನಾದೆನು ನಿನ್ನಯ ಮಾತ ಕೇಳಿ ನಗುವರು ಜನರು ಹೇಳಿ ಕೇಳುವರಿಲ್ಲ ನಿನ್ನ ಮನಸಾರ ಮಾತುಗಳಾಡಲೇತಕೆ ಕು- ಲಾಲ ಭವನವಿದಲ್ಲ ಸುಮ್ಮನೆ ಹೇಳ ಕೇಳದೆ ಹೊರಡು ಮುಂದಕೆ 4 ಹೀಗೆ ನುಡಿಯುವದೇತಕೆ ಈಗೆನ್ನ ಮಾತಿಗೆ ಬೇಗದಿ ತೆಗೆ ಕದವ ನಾಗವೇಣಿಯೆ ನಗುತ ಪೇಳುವೆ ಬೇಗದಲಿ ಇನ್ನೊಂದು ನಾಮವ ಈಗ ಧರಣಿಧರನು ಬಂದಿಹೆ ಸಾಗರನ ಸುತೆ ಸರ್ಪವೇಣಿಯೆ 5 ಧರಣೀಧರ ನೀನಾದರೆ ಈ ಧರೆಯನೆಲ್ಲವ ಸಿರದ ಮೇಲಿರಿಸುವೆಯ ಸರ್ವ ಜನರಿಗೆ ಭಯವ ಪಡಿಸುವ ಉರಗರಾಜ ನೀನೆಂದು ತಿಳಿದೆನು ಇರುತ ಸರ್ಪಗಳೊಳಗೆ ನೀ ಬಲು ಹರುಷದಿಂದಲಿ ಸಾಗುಮುಂದಕೆ6 ಹರಿಣಾಕ್ಷಿ ಕೇಳೆ ನೀನು ಎನ್ನನು ಜನರು ಹರಿಯೆಂದು ಕರಿಯುವರು ಕರೆ ಕರೆಯ ಮಾಡದಲೆ ಬೇಗನೆ ವರ ಕನಕ ಕದ ತೆಗೆದು ಸುಮ್ಮನೆ ಇರಿಸು ಸುಖ ಸಾಮ್ರಾಜ್ಯ ಪೀಠವ ಹರುಷದಿಂ ಕುಳಿತೆಲ್ಲ ಪೇಳುವೆ 7 ಕೋತಿ ನೀನಹುದಾದರೆ ಮಾತುಗಳ್ಯಾಕೆ ಜಾತಿ ಕಪಿಗಳ ಕೂಡುತ ಪ್ರೀತಿಯಿಂದಲಿ ಮನಕೆ ಬಂದೆಡೆ ನೀತೆರಳುತಲಿ ಪೋಗು ಮುಂದಕೆ ಕೋತಿಗಳ ಗುಂಪಿದಲ್ಲ ತಿಳಿಮಹ- ರೂಪವತಿಯರಿರುವ ಸ್ಥಳವಿದು 8 ಪ್ರೀತಿಸತಿಯೆ ನೀ ಕೇಳೆ ನಿನ್ನೊಳು ಬಹು ಪ್ರೀತಿಯಿಂದಲಿ ಬಂದೆನು ಶ್ರೀಶನ ನುಡಿಕೇಳಿ ರುಕ್ಮಿಣಿ ಆತುರದಿ ಬಾಗಿಲನೆ ತೆಗೆಯುತ ನಾಥ ಕಮಲನಾಭ ವಿಠ್ಠಲನಿಗೆ ತಾನಮಿಸಿ ವಂದಿಸುತ ಭಕುತಿಯಲಿ ಬಾಗಿಲು ತೆಗೆದಳಾಗ ಭಕುತಿಯಲಿ ಶ್ರೀಶಗೆ ಬಾಗಿಲು ತೆಗೆದಳಾಗ9
--------------
ನಿಡಗುರುಕಿ ಜೀವೂಬಾಯಿ