ಸ್ಮರಣೆಯೊಂದಿರೆ ಸಾಲದೆ ಶ್ರೀಹರಿನಾಮ ಪ.
ತರಣಿಕೋಟಿಭಾಸುರ ಶ್ರೀನಾರಾಯಣನ 1
ಕಾಲನವರ ಕಂಡು ಬಾಲನ ಕರೆದಗೆ
ಸಾಲೋಕ್ಯವಿತ್ತ ಶ್ರೀನಾರಾಯಣನ 2
ತರಳ ಪ್ರಹ್ಲಾದನು ಕರೆಯೆ ಕಂಬದಿ ಬಂದು
ನರಮೃಗೇಂದ್ರನಾಗಿ ಪೊರೆದ ನಾರಾಯಣನ 3
ಮಾತೆಯ ಸವತಿಯ ಮಾತಿಗಾಗಿ ಬಂ-
ದಾತನ ಕಾಯ್ದ ಶ್ರೀನಾಥ ನಾರಾಯಣನ 4
ಮೊಸಳೆಯ ಬಾಧೆಗೆ ಹಸಿದು ಕೂಗಲಾಗಿ
ಬಸವಳಿದಿಹನ ರಕ್ಷಿಸಿದ ನಾರಾಯಣನ 5
ಕಾದೆಣ್ಣೆಯೊಳು ಕರುಣೋದಯದಿ ಸುಧನ್ವ-
ಗಾದರಿಸಿ ರಕ್ಷಿಸಿದಾದಿನಾರಾಯಣನ 6
ಮಾರಜನಕ ರಮಾರಮಣ ಲಕ್ಷ್ಮೀ-
ನಾರಾಯಣನ ಪಾದಾರವಿಂದಯುಗ 7