ಒಟ್ಟು 157 ಕಡೆಗಳಲ್ಲಿ , 54 ದಾಸರು , 153 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆಪ್ತರಾರೆಂಬುದನು ಆಲೋಚನೆಯ ಮಾಡೆ ಆಪ್ತರೊಬ್ಬರ ಕಾಣೆ ನೀನಲ್ಲದೆ ಪ ಆಪ್ತರನ್ಯರ ನಂಬಿ ತಪ್ತ ಜೀವನನಾದೆ ತೃಪ್ತಿಯ ಬೇಡುವೆ ನಿತ್ಯತೃಪ್ತ ನಿನ್ನನು ದೇವ ಅ.ಪ ಕೋಳಿಕೂಗದೆ ಬೆಳಕು ಬಾರದೆನ್ನುವ ನುಡಿಯ ಕೇಳಿ ತಲೆದೂಗಿದೆನು ಮೂಢತನದಿ ಪೇಳಿದುದು ಮಾಡಿದೆನು ತಾಳಿದೆನು ಮರ್ಮನುಡಿ ಪೇಳಲೇನುಪಯೋಗ ಶ್ರೀಲಲಾಮ ಸುಧಾಮ 1 ದಿಟ್ಟ ಜನರಾಪ್ತರಾಗುವರೆ ಜಗದಿ ಇಷ್ಟರಂದದಿ ಹೊರಗೆ ಕೆಟ್ಟ ಯೋಚನೆಯೊಳಗೆ ಸುಟ್ಟ ಬೆರಳಿಗೆ ಸುಣ್ಣವಿಡುವರೊಬ್ಬರ ಕಾಣೆ 2 ಕೂತ ಕೊಂಬೆಯ ಬುಡವ ತಾ ತರಿವ ಮೇಧಾವಿ ಮಾತು ಕೇಳುವ ಜನಗಳಾಪ್ತರಾಗುವರೆ ಪ್ರೀತ ನೀನಾಗೊ ಅನಿಮಿತ್ತಬಾಂಧವ ನಿನ್ನ ದೂತ ದೂತರ ದೂತನಾಗುವೆ ಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ಆರ ನಂಬುಗೆ ಜಗದೆನಗಿಲ್ಲ ಹರಿಯೆ ಕಾರುಣ್ಯನಿಧಿ ನೀನೆ ಗತಿಯೆನಗೆ ಪೊರೆಯೈ ಪ ತಿಂಡಿಗ್ಹಾಕುವತನಕ ಹೆಂಡತಿಯು ನುಡಿಯುವಳು ಗಂಡನೇ ಗತಿಯೆಂದು ಮಂಡೆಯನು ಬಾಗಿ ತಿಂಡಿತಪ್ಪಿದ ಕ್ಷಣದಿ ಕಂಡಕಂಡತೆ ಕೂಗಿ ಬಂಡುಮಾಡುವಳಿಹ್ಯದಿ ಷಂಡನೆಂದಭವ 1 ಬಂಧುಬಾಂಧವರೆಲ್ಲ ಸಂದುಬಿಡಿದಡಿಗಡಿಗೆ ವಂದಿಸಿ ನುಡಿಯುವರು ತಿಂದುಡುವನತಕ ಸಂಧಿಸಲು ಬಡತನವು ವಂದಿಸಿದವರೆ ಮನ ಬಂದಂತೆ ನಿಂದಿಪರು ಕುಂದ್ಹೊರಿಸಿ ದೇವ 2 ಭೂಮಿಯ ಜನರೆಲ್ಲ ಕ್ಷೇಮ ನೀ ಕೊಟ್ಟಿರಲು ತಾಮಸವ ಬಿಟ್ಟು ಬಲು ಪ್ರೇಮ ಬಳಸುವರು ಸ್ವಾಮಿ ಶ್ರೀರಾಮ ನಿಮ್ಮ ಪ್ರೇಮ ತುಸು ತಪ್ಪಿದರೆ ಭೂಮಿಯೊಳಗಿನ ಕೇಡು ನಾ ಸ್ಮರಿಸಲಾರೆ 3
--------------
ರಾಮದಾಸರು
ಆರು ಸಂಗಡ ಬಾಹೊರೆಲೆ ಮನುಜ ನಿನಗೆ ಹಾರೈಸಿ ಬಳಲುವೆ ಬರಿದೆ ಭವದೊಳಗೆ ಪ ಗುರುಹಿರಿಯರಗ್ನಿಯ ಪರಿಮುಖದಿ ನಿನ್ನಯ ಕರಪಿಡಿದು ಮಾಂಗಲ್ಯ ಧರಿಸಿಕೊಂಡರ್ಧ ಶರೀರವೆನಿಸುವ ಸತಿಯು ಮರಣ ಕಾಲದಿ ನಯನ ತಿರುಗುವುದ ಕಂಡಂಜಿ ತಿರಿಗಿನಿಂತಳುತಿಹ್ಯಳು 1 ತನುಜಮನುಜರಿವರೆಲ್ಲ ನಿನಗತಿಹಿತ ಬಂಧು ಮಣಿದು ಸೇವಿಪರು ನಿನ್ನನುದಿನವು ಬಿಡದೆ ತನುಬಿಟ್ಟ ಕ್ಷಣದಿ ನನನಿನಗೆನುತ ಮನೆಕೀಲಿ ಘನ ಜಗಳ ಕಾಣು ಬಿದ್ದ್ಹೆಣದ ಪರಿವಿಲ್ಲದೆ 2 ಕುಲವಿದ್ಯವ್ಯವಹಾರ ಕಳವುಕೊಲೆ ನೃಪಸೇವೆ ತಲೆ ಬಾಗಿ ಜನರಲ್ಲಿ ಬಲುದೈನ್ಯ ಬಟ್ಟು ಗಳಿಸಿ ಹೂಳಿದ ದ್ರವ್ಯ ಎಳೆದೊಯ್ಯಲ್ಯಮ ನಿನ್ನ ತಲೆಯೆತ್ತಿ ನೋಡದಲೆ ನೆಲದಿ ನಿಲ್ಲುವುದು 3 ಭೂಮಿ ನಿನ್ನದು ಎಂದು ನೇಮವನು ಬರಕೊಂಡು ಕೋಮಲ ಮನೆಕಟ್ಟಿ ತಾಮಸದಿ ನಲಿವಿ ಭೂಮಿಯ ರಿಣತೀರಿ ನೀ ಮಡಿದಾಕ್ಷಣ ಬಹಿ ರ್ಭೂಮಿಯೋಳ್ಹುತಿವರೆಲೆ ಪಾಮರ ಮನುಜ 4 ಬಂಧುಬಾಂಧವರೆಲ್ಲ ಹಿಂದೆ ಉಳಿಯುವರು ಮಂದನಾಗದೆ ತಂದೆ ಶ್ರೀರಾಮ ಪಾದಾರವಿಂದಮಂ ನಂಬಿ ಭವಬಂಧವನು ಗೆಲಿಯೊ 5
--------------
ರಾಮದಾಸರು
ಆರೂ ಸಂಗಡ ಬಾಹೋರಿಲ್ಲ ಪ ನಾರಾಯಣ ನಾಮ ನೆರೆ ಬಾಹೋದಲ್ಲದೆ ಅ ಪರಿಯಂತ ಗರ್ಭದಲಿಹೆತ್ತು ಅತ್ಯಂತ ನೋವು ಬೇನೆಗಳಿಂದಲಿತುತ್ತು ವಸ್ತ್ರವನಿಕ್ಕಿ ಸಲಹಿದಾ ತಾಯ್ತಂದೆಹೊತ್ತುಗಳೆವರಲ್ಲದೆ ಬೆನ್‍ಹತ್ತಿ ಬಹರೆ 1 ಹರಣ ದಾರು ಗತಿಯೆಂದಳುವಳು2 ಮನೆ ಮಕ್ಕಳು ತಮ್ಮ ಧನಕೆ ಬಡಿದಾಡುವರುಧನಕಾಗಿ ನಿನ್ನನೆ ನಂಬಿದವರುಅನುಮಾನವೇಕೆ ಜೀವನು ತೊಲಗಿದಾಕ್ಷಣದಿಇನ್ನೊಂದು ಅರಗಳಿಗೆ ನಿಲ್ಲಗೊಡರು 3 ಸುತ್ತಲು ಕುಳ್ಳಿರ್ದ ಮಿತ್ರ ಬಾಂಧವರೆಲ್ಲಹೊತ್ತು ಹೋದೀತು ಹೊರಗೆ ಹಾಕೆನುವರುಹಿತ್ತಲಾ ಕಸಕಿಂತ ಅತ್ತತ್ತ ಈ ದೇಹಹೊತ್ತುಕೊಂಡೊಯ್ದು ಅಗ್ನಿಯಲಿ ಬಿಸುಡುವರು 4 ಹರಣ ಹಿಂಗದ ಮುನ್ನು ಹರಿಯ ಸೇವೆಯ ಮಾಡಿಪರಗತಿಗೆ ಸಾಧನವ ಮಾಡಿಕೊಳ್ಳೊಕರುಣನಿಧಿ ಕಾಗಿನೆಲೆಯಾದಿಕೇಶವರಾಯನನಿರುತದಲಿ ನೆನೆನೆನೆದು ಸುಖಿಯಾಗೊ ಮನುಜ5 * ಈ ಕೀರ್ತನೆ ಪುರಂದರಾಸರ ಅಂಕಿತದಲ್ಲೂ ಇದೆ.
--------------
ಕನಕದಾಸ
ಆರ್ತಭಾವ ಸುಳಾದಿ ಧ್ರುವತಾಳ ವೊಂದು ತೋರೆನಗರವಿಂದನಯನ ಮಂದಾಕಿನಿಯ ಪಡೆದ ಮುದ್ದು ಚರಣ ಸುಂದರಾಂಗ ತೋರೆನಗೆ ಸುರೇಂದ್ರನಾಥ ಕಂದರ್ಪಪಿತನ ಕಾಲಂದಿಗೆ ರುಳಿ ಗೆಜ್ಜೆ ಚೆಂದುಳ್ಳ ಪದ್ಮರೇಖೆಯಿಂದೊಪ್ಪುವೊ ಇಂದಿರೆ ಕರಕಮಲದಿಂದ ಪೂಜಿತನಾದ ಚಂದ್ರವದನ ನಿನ್ನ ಚೆಲುವ ಪಾದ ಇಂದ್ರಾದಿ ಹರ ನಾರಂದ ಸುರಬ್ರಹ್ಮಾದಿ ವಂದ್ಯ ನಿನಗೆ ಕೋಟಿ ನಮೋ ನಮೋ ಎಂದು ಬೇಡುವೆ ದಯಾಸಿಂಧು ಎನಿಸಿದಾತ ಕಂದನಂದದಿ ನೋಡಿ ಸಲಹೋ ಎನ್ನ ಮಂದಬುದ್ಧಿಯ ಮಹಾಮದಡ ಪಾಮರ ಭವ ಬಂಧನದೊಳು ಸಿಲುಕಿ ನೊಂದೆನಯ್ಯ ಸಂದೇಹ ಮಾಡದೆ ಸಲಹದಿದ್ದರೆ ನಿನ್ನ ಹೊಂದಿ ಬಾಳುವುದೆಂತೊ ಮುಂದರಿಯೆ ಬಿಂದು ಮಾತ್ರದಿ ನಾಮಾಮೃತವ ಭೀಮೇಶಕೃಷ್ಣ ತಂದು ನೀಡೆನಿಗೆ ಇಂದೀವರಾಕ್ಷ 1 ಮಠ್ಯತಾಳ ಯುಗಳ ಪಾದಕೆ ಕೈಯ ಮುಗಿದು ಬೇಡುವೆನಯ್ಯ ಜಗದುದರನೆ ನಿನ್ನ ಜಾಣತನವ ಬಿಟ್ಟು ಅಗಣಿತಗುಣಮಹಿಮ ಅಂತರಾತ್ಮಕ ದೇವ ಬಗೆಬಗೆಯಲಿ ಸಲಹೋ ಭಕ್ತವತ್ಸಲ ನಿನ್ನ ಮಗುವೆಂದೆನ್ನ ಕಾಯೊ ಮಂದರೋದ್ಧರ ದೇವ ನಿಗಮಗೋಚರ ಸ್ವಾಮಿ ನಿಂತು ನೋಡುತ ಎನ್ನ ಚಿಗುರುದೋಷದಕುಡಿಯ ಚಿವುಟಿ ಹಾಕುತ ನಿನ್ನ ಸುಗುಣಗಳನೆ ಬಿಟ್ಟೆನ್ನವಗುಣವೆಣಿಸಿದರೆ ಇಗೋ ನಿನಗಪಕೀರ್ತಿ ಈಗ ಒಪ್ಪಿಸುವೆನು ಬಿಗಿದ ಭವಪಾಶ ಬಿಚ್ಚಿ ಭೀಮೇಶಕೃಷ್ಣ ತೆಗೆಯದೆ ನಿನ್ಹೊರತೀ ಜಗದೊಳಗುಂಟೇನಯ್ಯ 2 ವಚನ ಸಕಲ ಸ್ನಾನವು ನೇಮ ಹೋಮ ಜಪಂಗಳು ಸಕಲ ಪುಣ್ಯಕ್ಷೇತ್ರ ಮೂರ್ತಿನಾಮಂಗಳು ಸಕಲ ಪುರಾಣ ವೇದಾದಿಗ್ರಂಥಗಳು ಸಕಲ ಕಾರ್ಯವು ಸರ್ವೇಷ್ಟ ಫಲಂಗಳು ಸಾಯುಜ್ಯ ಪದವಿಗಳು ಲಕುಮೀಶ ಇವು ನಿನ್ನ ನಖಶಿಖ ಪರಿಯಂತ್ರ ಸಾರಥಿ ಸಮದೃಷ್ಟಿಲಿ ನೋಡಲು ಸಕಲಸಿದ್ಧ್ದಿಯು ಸರಿಯಾಗಿ ಕೈಗೂಡೋದು ಶಕಟಸುರಾಂತಕ ಕಕುಲಾತಿ ಮಾಡದೆ ಬಕನ್ವೈರಿಯೆನ್ನ ಭಾರವ ನೀ ವಹಿಸಲಿ ಬೇಕೊ ಇಕೋ ನಿನ್ನ ಚರಣಕ್ಕೆ ಈ ದೇಹ ಅರ್ಪಿಸುವೆ ಗೋಕುಲಾವಾಸ ನಿನ್ನ ಪಾದಕೆ ನಮಸ್ಕರಿಸುವೆ ಮುಕುತಿದಾಯಕ ಮುದ್ದು ಭೀಮೇಶಕೃಷ್ಣನೆ ಭಕುತಿಜ್ಞಾನದಲಿಡೊ ಭಯಹಾರಿ ಎನ್ನ 3 ಗೋಪಸುತನೆ ನಿನ್ನ ಗುರುವಿನ್ವಲ್ಲಭೆ ಮಹ ದಪರಾಧವೆಣಿಸದೆ ನೀ ಕರುಣದಲೆ ಸಾಂ- ದೀಪಗೆ ಸುತರನಿಟ್ಟ ಪಯಾಂಬುಧಿವಾಸ ಕೋಪದಿ ಬಯ್ದ್ದಾ ಶಿಶುಪಾಲಗೊಲಿದೆಯೊ ಶ್ರೀಪತಿ ಶರಣೆಂದಾ ದ್ರೌಪದಿ ಕಾಯ್ದಂತೆ ಕಾಪಾಡೊ ಈ ಭವಕೂಪದೊಳಗೆ ಬಿದ್ದೆ ನೀ ಪಿಡಿಕೈಯ ದಯಾಪರಮೂರುತಿ ಆಪತ್ತು ಬಾಂಧವ ಈ ದೇಹವೃಕ್ಷದಲಿ ದ್ವಾ- ಸೂಪರಣನಂತೆ ದೂರೇನೋ ಎನ್ನ ಸ- ಮೀಪದಲ್ಲಿದ್ದು ಸ್ವರೂಪ ತೋರದಲೆ ಸಂ- ತಾಪ ಬಡಿಸದಿರೆಂದಾಪನಿತು ಪೇಳ್ವೆ ಭೂಪಾಲ ಭೀಮೇಶಕೃಷ್ಣ ನಿನ್ನ ಪಾದ ನಾ ಪೊಂದಿದೆನೊ ದೊರೆ ನೀ ಪೊರೆಯೆಂದು 4 ಜತೆ ಏಸೇಸು ಕಾಲಕೆ ಬ್ಯಾಸರದೆ ಭೀಮೇಶಕೃಷ್ಣ ಲೇಸು ನೀಡೆನಗೆ ಸದಾ ಸುಮಂಗಳವ 5
--------------
ಹರಪನಹಳ್ಳಿಭೀಮವ್ವ
ಇಂದಿರಾ ರಮಣ ಗೋವಿಂದನಾ ಜ್ಞೆಯ ಪಡೆದು ಬಂದಿರುವ ದಾಸರಿವರು ಪ ಇಂದು ಧರ್ಮದಿ ಹರಿಯ ಬಾಂಧವರ ಗೃಹ ಸ್ವರ್ಣ ಮಂದಿರವಾಗುವುದೆಂದು ಸಂದೇಶ ಕಳಿಸಿರುವ ಅ.ಪ ಸತ್ವ ರಜ ತಮ ಭೇದವಿಹುದು ದಾನಗಳಲ್ಲಿ ಕರ್ತವ್ಯವೆಂದರಿತು ಭಕ್ತಿಯಿಂದ ಉತ್ತಮೋತ್ತಮ ದೇಶ ಪಾತ್ರ ಕಾಲಗಳರಿತು ಪ್ರತ್ಯುಪಕೃತಿಯ ಗಣಿಸದಿತ್ತ ದಾನವೇ ಶ್ರೇಷ್ಠ 1 ಶ್ರಾವಣದ ಶನಿವಾರ ಶ್ರೀ ವ್ಯಾಸರಾಜರ ಮಾಧವ ದೇಶಕಾಲ ಪಾತ್ರ ಈ ವಿಧದ ಯೋಗವಿನ್ಯಾವ ಜನಗಳಿಗುಂಟು ನೀವು ನೀಡುವ ದಾನ ಕಾವುದಾಪತ್ತಿನಲಿ 2 ಒಂದು ಹಿಡಿಯವಲಕ್ಕಿ ತಂದಿತಾ ಬ್ರಾಹ್ಮಣಗೆ ಎಂದೂ ಕೇಳದ ಸಕಲ ಸೌಭಾಗ್ಯವ ಇಂದು ನೀಡಿರಿ ಮಿತ್ರ ಬಾಂಧವರೆ ದೇವಕಿಯ ಕಂದನ ಪ್ರಸನ್ನತೆಯ ಬಂದು ಪಡೆಯಲಿಬಹುದು 3
--------------
ವಿದ್ಯಾಪ್ರಸನ್ನತೀರ್ಥರು
ಇಂದಿರೆ ರಮಣಾ ಪಬಂದನೋಡು ಆನಂದದಿಂದ ಗೋ'ಂದಗೋಕುಲಾನಂದ ಮುಕುಂದಾ ಅ.ಪಶ್ರೀ ಕೇಶವ ನಾರಾಯಣಮಾಧವಶ್ರೀಧರ ಗಿರಿಧರ ಗೋವರ್ಧನಧರಶ್ರೀ ದಾಮೋದರ ಪದ್ಮನಾಭಮುಚಕುಂದವರದ ಮುರಹರ ಶ್ರೀಕೃಷ್ಣ 1ಸರ್ವೋತ್ತಮ ಸರ್ವಜ್ಞ ಶಿಖಾಮಣಿಸರ್ವಪ್ರೇರಕ ಸರ್ವವ್ಯಾಪಕಸರ್ವಾಧಾರಕ ಸರ್ವ ನಿಯಾಮಕಸರ್ವತಂತ್ರ ಸ್ವತಂತ್ರ ಸಮರ್ಥಾ 2ಗೋಪಾಲಾಚ್ಯುತ ಗೋಪ ಕಿಶೋರಾಗೋಪಿ ಜನಮನ ಚಂದ್ರ ಚಕೋರಾಆಪದ್ಬಾಂಧವ ಭೂಪತಿ'ಠ್ಠಲಕೈಪಿಡಿದೆಮ್ಮನು ಕಾಪಾಡಲು ಬಾ 3ಪಾದ ಮ'ಮೆ
--------------
ಭೂಪತಿ ವಿಠಲರು
ಇಂದು ರಂಗಾನಟ್ಟೂಳಿಗೆ | ಇರಲಾರೆವಮ್ಮಾ ನಾವುಬಂದುಪಾಯವ ಕಾಣೆವೆ | ವನಿತೆ ಗೋಪ್ಯಮ್ಮಾ ಕೇಳೆ ಪ ಹಿರಿಯರಾದವರಿಗೆ | ಭರದಿ ಪೇಳೇವೆಂದರೆಸರಸಿಜ ಸಂಭವನಿಗೆ ಹಿರಿಯನೀತ ಕಾಣಮ್ಮ 1 ಮಾಯಗಳ ಮಾಡಿ ನಾವೂ | ಹೊಯಿಲೆಬ್ಬಿಸೇವೆಂದರೆಮಾಯಾದೇವಿಗೆ ಸಿಗದೆ | ಮಾಯಾವ ತೋರುವನಮ್ಮ 2 ಗುಮ್ಮನ ತೋರಿದರೀಗಾ | ಒಮ್ಮೊಮ್ಮೊ ಲೆಕ್ಕಿಸನಮ್ಮ ಅಮ್ಮಮ್ಮ ಶ್ರೀ ನಾರಸಿಂಹ | ಅದ್ಭತಾದ ದೈವ ಕಾಣಮ್ಮ 3 ಅರಿವಿ ಸರ್ಪಾನ ಮಾಡಿ | ಭರದಿ ಅಂಜಿಸೇವೆಂದರೆಖರೆಯವಾಗಿದ್ದ ದೊಡ್ಡಾ | ಉರಗಶಾಯಿ ಕಾಣಮ್ಮ 4 ಅರಸರಿಗ್ಹೇಳಿದರೂ | ಬರಿದಾಗುವುದೇ ನಿಜಧರೆ ಗಗನ ಪಾತಾಳದ | ಅರಸನಲ್ಲವೇನಮ್ಮ 5 ಕಾಸು ವೀಸಾ ಕೈಯ್ಯಾಳಿಟ್ಟೂ | ಕೂಸಿಗೆ ಬುದ್ಧಿ ಹೇಳುವೆಕೋಶ ಭಾಗ್ಯದಭಿಮಾನಿ | ಶ್ರೀಶನೇ ಈಶ ಕಾಣಮ್ಮ 6 ಪಾಪದ ಭೀತಿ ತೊರದು | ಭೂಪ ರಂಗ ಅಂಜಾನಮ್ಮಪಾಪ ರಹಿತರಾದವರ | ತಪಸಿಗಳೊಡೆಯಾನಮ್ಮ 7 ಮ್ಯಾಣದ ಚೇಳು ತೋರುವೆ | ಜಾಣ ರಂಗ ಅಂಜಾನಮ್ಮಮೇಣು ಮೂವತ್ತಾರು ಲಕ್ಷ | ತಾಂ ಶಿಂಶುಮಾರಾನಮ್ಮ 8 ಅನ್ನ ವಸನಗಳಿತ್ತು | ಮನ್ನಿಸೆವೆಂದಾರೆ ಪುಸಿಕನ್ಯೆ ದ್ರೌಪದಿ ದುಮ್ಮಾನ | ಮುನ್ನೆ ಇದಕ್ಕೇ ಸಾಕ್ಷಿಯಲ್ಲೆ 9 ಅಣ್ಣ ತಮ್ಮಾ ಬಂಧೂ ಬಳಗ | ಜನರುಂಟೇನೆ ಹೇಳೇವೆಅನಾದಿ ಕಾಲದಿಂದಾ | ಘನ್ನ ತಾನೇ ಏಕಮೇವ 10 ಚಿಣ್ಣ ನೀ ಅಣ್ಣಾ ಬಾಯೆಂದು | ಮನ್ನಿಸೇವೆಂದಾರೆ ಪುಸಿಅನಂತ ವೇದಗಳಿವನ | ಬಣ್ಣಿಸಿ ಹಿಂದಾಗಲಿಲ್ಲೆ 11 ಊರು ಕೇರಿಗಳಾ ಬಿಟ್ಟು | ದೂರ ಬಾರ ಹೋದೇವೇನೆಸಾರ ವ್ಯಾಪ್ತನಾಗಿ ಇಪ್ಪಾ | ಯಾರಿಗೆ ದೂರುವೆನಮ್ಮಾ 12 ಕದ್ದು ಕದ್ದೋಡುವಾ ನಮ್ಮ | ಲಿದ್ದು ಪಿಡಿಯಾಲೊಶವಲ್ಲೆ ರುದ್ದರನ್ನಾ ಓಡೀಸಿದಾ | ಮುದ್ದು ರಂಗಾನಿವನಮ್ಮ 13 ಹಗ್ಗದಿ ಕಟ್ಟೀದರಾಗ | ಬಗ್ಗನಮ್ಮಾ ನಿನ್ನ ಮಗಅಗ್ಗಳೀಕೆ ಖಳರ ಉಕ್ಕು | ತಗ್ಗಿಸಿ ಬಂದಿಹಾನಮ್ಮ 14 ಇಂದು ನಿನ್ನಾ ಕಂದನಾಟಾ | ಚಂದಾವೆಂದೂ ವಂದಿಸುವೆವೆತಂದೆ ವ್ಯಾಸಾ ವಿಠಲೆ*ಮಗೆ | ಬಾಂಧವಾನಾದನು ಕಾಣೆ 15
--------------
ವ್ಯಾಸವಿಠ್ಠಲರು
ಈ ದೇಹ ನಿನ್ನ ಒಳಗೊಂಡಿತೊ ಇಷ್ಟಾದ ಮೇಲೆ ಪ. ದೇಹ್ಯ ಬಾಹ್ಯ ವ್ಯಾಪಾರವ ನೀ ಪರಿಹರಿಸಿದೇ ದೇವ ಅ.ಪ. ದೇಹದೊಳಗಿದ್ದವರು ಬಾಹ್ಯ ವ್ಯಾಪಾರಕ್ಕೆಳೆಯೆ ಈ ದೇಹ ಬಾಂಧವರು ಎಲ್ಲ ಎನ್ನ ದೇಹ ಕೀಳು ಮಾಡಿ ನೋಡೆ ದಾಹ ಹತ್ತಿತೋ ನಿನ್ನಲ್ಲಿ ದೇಹ ಸಾರ್ಥಕವಾಗಲು 1 ರಂಗ ನಿನ್ನ ಸ್ತುತಿಮಾಡೆ ಹಂಗಿಸುವರೆಂದು ಇದ್ದೆ ಹಂಗಿಸಿ ಭಂಗಿಸಿ ರಂಗಕ್ಕೆಳಸಿ ಎನ್ನ ನಿನ್ನ ಅಂತರಂಗಕ್ಕೆ ಎಳೆತಂದೆ ಹರಿ ರಂಗಾ ನಿನ್ನ ಸಿರಿಯಾರೋ ಮಂಗಳ ಮಹಿಮ 2 ಕಂತು ಜನಕನೆ ನಾ ನೆಂದು ಸ್ತುತಿಸಲು ನಿನ್ನ ಅಂತರದಂತಿರಲಿ ಪಂಥ ಬೇಡ ಎನ್ನ ಮೇಲೆ ಇಂತು ಕೃಪೆ ತೋರಿಸುತ ನಿಂತು ಅಂತರಂಗಕೆ ಬಾ ಲಕ್ಷ್ಮೀಕಾಂತ ಶ್ರೀ ಶ್ರೀನಿವಾಸ 3
--------------
ಸರಸ್ವತಿ ಬಾಯಿ
ಎದೆ ಒಡೆದು ಏಕೆ ನೀ ಹೆದರುತಿ ಮನವೆ ಪಾದ ಭಜನೆ ಹೃದಯದಲಿರೆ ಪ ಅಖಿಲ ಜನಗಳ ಪೊರೆವ ಹರಿಯು ಕರ್ತನಾಗಿರಲು ಸಕಲ ಜಗಬೋಧಗುರು ಸನ್ನಿಧಿ ಇರಲೂ ಸಕಲ ಬ್ರಹ್ಮಾದಿ ದೇವತೆ ಬಂಧು ಬಳಗಿರಲು ನಿಖಿರವಿಲ್ಲದೆ ಚಿತ್ತ ನೀನು ಈ ಪರಿಯಿಂದಾ 1 ಮುದದಿಂದ ಶ್ರೀ ಲಕ್ಷ್ಮೀ ಮಹಾತಾಯಿ ತಾ ----- -----ದಮಲ ಜ್ಞಾನಿಗಳ ಸಂಬಂಧ ವಿರಲೂ ಕುದುರೆಯಂದದಿ ಮನಸು ಕ್ರೂರರಾರ್ವರಕೂಡಿ ಒದರಿ ಪರಿಪರಿಯಲ್ಲಿ ಚಿಂತೆಯೊಳಗಾಗಿ 2 ಪರಮಾತ್ಮ ಪರಬ್ರಹ್ಮ ಪರಲೋಕ ಬಾಂಧವನು ಪರಿಪರಿಯ ಷೋಷಿಸುವ ಭಾರಕನು ಇರಲು ಅರಿತು ನೀ ಚನ್ನಾಗಿ ಹರಿ ಹೊನ್ನ ವಿಠ್ಠಲನ ಸ್ಮರಣೆಯಲಿ ನಿರುತ ಇರೆ ಸಕಲ ಸಂಭ್ರಮವು 3
--------------
ಹೆನ್ನೆರಂಗದಾಸರು
ಎಷ್ಟು ಸುಸ್ವರ ಊದುತಿಹನಮ್ಮ ಶ್ರೀಕೃಷ್ಣ ಕೊಳಲನ ಪ ಎಷ್ಟು ಸುಸ್ವರ ಊದುತಿಹನೋ ಗೋಷ್ಠಿಯೊಳು ಗೋವುಗಳಕಿವಿಗಳು ನೆಟ್ಟನಿಲ್ಲಿಗೆ ಕೇಳಿ ಮೋದದಿ ಕಟ್ಟಿದೆಲೆ ಕಣ್ಣಿಗಳಹರಿವವೊಅ.ಪ ತರಣಿ ತನುಜನ ತೀರದಲ್ಲಿಹನೆ ಕೊರಳೊಳಗೆ ಕೌಸ್ತುಭಹರಳಿನಿಂದ ಜಗವ ಬೆಳಗುವನೆ ಕುರುಳು ಕುಣಿಸುತಬಾಲಬಿಂಬದಿಕರ್ಣಕುಂಡಲ ಗಂಡ ಸುಪ್ರಭ ಮರುಳು ಮಾಡುತಮೂರು ಲೋಕವಸಿರಿಯ ಮೋಹಿಪ ಪರಮ ಪುರುಷನು1 ನಗ ಮುರಿಗೆ ತೋಡೆ ಸುಹಾರಭೂಷಿತಉರದಿ ಕುಳಿತಿಹ ಸಿರಿಯ ಮೋಹಿಪ 2 ಅರಗೀಮನೆ ಬಾಂಧವರು ಬೇಕೆ ನಿಜ ಪತಿಗಳೆಮ್ಮನುಮೀರಿ ಪೋದರು ಅಂದರೆನಲೇಕೆ ಮಾರನಯ್ಯನ ಮುರಲಿಸುಸ್ವರಸಾರಿ ಮನಸಪಹಾರ ಮಾಡಿತು ನಾರಿ ಮಣಿಯರೆ ಕ್ಷಣವುತಡೆಯದೆವಾರಿಜಾಸನ ವನಕೆ ತೆರಳಿರೆ 3 ಎಷ್ಟು ಜನ್ಮದ ಪುಣ್ಯವಿರುತಿಹದೆ ಈ ಮುರಲಿ ಬಾಲನಪುಟ್ಟತುಟಿಯಲಿ ಸುಧೆಯ ಸುರಿಸುವದೇಸೃಷ್ಟಿರವ ಬಳ್ಳಿಮನದಲಿ ವೃಷ್ಟಿಹಿಡಿಸದೆ ಕುಸುಮಫಲಗಳುವೃಷ್ಟಿಯಿಂದಲೆ ಹೊರಗೆ ಚೆಲ್ಲುತ ಅಭೀಷ್ಠೆ ಸುರಿಸುತಪೇಳುತಿಹವೊ 4 ಅರುಣನಂದಧಿ ಅದರ ಸೌಭಗವೊ ವನ ನಿಲಯ ಮೃಗಗಳುತೊರೆದು ವೈರವ ಸುತ್ತು ನಿಂತಿಹವೋ ಹರುಷದಲೆ ಮನತೊರೆದು ನಿಲ್ಲಲು ಇಂದಿರೇಶನ ತರುಣಿಯರು ಪೋಗೋಣ ನಡೆಯಿರಿ 5
--------------
ಇಂದಿರೇಶರು
ಏನಿದ್ದರೇನಯ್ಯಾ ಜ್ಞಾನವಿಲ್ಲದ ಮೇಲೆ ಪ ದೀನರಕ್ಷಕ ನಿನ್ನ ಧ್ಯಾನ ಮಾಡದವನೆ ಅ.ಪ. ಸತಿಸುತ ಬಾಂಧವರು ಬಹಳಿದ್ದರೇನು ಗತಿ ಕಾಣಿಸುವರೇನೋ ದೇವರ ದೇವ ಪತಿತಪಾವನ ನಿನ್ನ ಅತಿಭಕುತಿಯಿಂದ ಸ್ತುತಿಸಿ ಹಿಗ್ಗದಂಥ ಪಾಮರ ಮನಿಜನೆ 1 ಕ್ಷೇತ್ರಮಾನ್ಯಗಳೇಸಿದ್ದರೇನು ಪಾತ್ರೆ ಪದಾರ್ಥಗಳ್ ಗೃಹದಿ ತುಂಬಿದ್ದರೇನು ಪಾತ್ರಂಗಳ ನೋಡಿ ದಾನಧರ್ಮಂಗಳ ಮಾಡಿ ಮಹ ಯಾತ್ರೆಗಳ ಚರಿಸದೆ ಗಾತ್ರವ ಪೋಷಿಪಗೆ 2 ರಾಶಿ ವಿದ್ಯವಿರಲು ಅದರಿಂದ ಫಲವೇನು ಕೋಶವು ಕೊರೆಯಿಲ್ಲದೆ ಇರುತಿರ್ದರೇನೊ ವಿನುತ ಶ್ರೀ ರಂಗೇಶವಿಠಲನೊಳು ಲೇಶ ಭಕುತಿಯಿಲ್ಲದ ಹೇಸೀಕೆ ಮನದವನೆ 3
--------------
ರಂಗೇಶವಿಠಲದಾಸರು
ಏನು ಮರುಳಾಗುವೆಯೇ ಎಲೆಮಾನವ ನಿನ್ನ ಮಾನಿನಿಯ ಗುಣಕೆ ನೀ ಹಿಗ್ಗಿ ಹಿಗ್ಗಿ ಪ ದಾನ ಧರ್ಮಗಳ ಕೊಡಬೇಕೆಂದರೊಡ ಬಡಲು ಹೀನ ಗುಣಗಳನೆ ತಾ ಸೇವಿಸುವಳು ಜ್ಞಾನ ಮೋಕ್ಷಾದಿಗಳ ಹಾದಿಯನುಕಟ್ಟಿ ಭವ ಕಾನನವನೆ ಹೊಗಿಸಿ ತೊಳಲಿಸುವಳು 1 ನರಕವನು ತನ್ನಲ್ಲಿ ನೆಲೆಮಾಡಿ ಕೊಂಡಿಹಳು ಪರಿಪರಿಯ ಮೋಹಗಳ ಬೀಸುತಿಹಳು ಸ್ಮರನ ಬಾಣವ ಮಾಡಿ ಸಾಲು ಗೊಲೆಕೊಲ್ಲುವಳು ಅರಿಯದವರಂತೆ ಮಿಣ್ಣಗೆ ಇರುವಳು 2 ತನ್ನಮನ ಬಂದಂತೆ ಚರಿಸುವಳು ಪಗಲಿರುಳು ಕನ್ನಗೊಯ್ಕರ ವೋಲು ಕೊರೆಯುತಿಹಳು ಭಿನ್ನಭಾವದಿ ನಡೆದು ಮನೆಯ ಪಾಲ್ಮಾಡುವಳು ಕಣ್ಣಿನೊಳು ಕಂಡೊಡವೆಗಳನಿರಿಸಳು 3 ಸುದತಿ ಯಾಕಾರೆ ಯಾಗಿಹಳು ನೋಯೆ ನುಡಿವಳು ಕಂಡ ಕಂಡವರೊಳು ಹೋಯೆಂದು ಕೂಗುವಳು ಶಿಕ್ಷಿಸಳು ನಿನ್ನನುರೆ ಬಾಯೊಳಗೆ ಭಯಬಿಡಿಸಿ ಹಾಗಿಸುವಳು 4 ಕಾಮ ಕ್ರೋಧಾದಿಗಳ ಕೀಲ ಬಲಗೊಳಿಸುವಳು ಪ್ರೇಮ ಗೆಡಿಸುವಳೆಲ್ಲ ಬಾಂಧವರನು ಭೂಮಿಯೋಳಗಧಿಕ ಭೀಮನ ಕೋಣೆ ಲಕ್ಷ್ಮೀಪತಿಯ ನೆನೆನೆನೆದು ಸಖಿಯಾಗು ಕಂಡ್ಯಾ 5
--------------
ಕವಿ ಪರಮದೇವದಾಸರು
ಏನು ಮಾಡಲೀ ಮನ ಮಾತು ಕೇಳದೇನು ಮಾಡಲಿ ಶ್ರೀ ನರಹರಿಯ ನೆನೆಯದೆ ಕಂಡ ಹೀನ ವಿಷಯದಲ್ಲಿ ಶ್ವಾನನಂತೆ ಪೋಪರೇನು ಪ ಸಾಧು ಸಜ್ಜನರ ಬೋಧನೆಯ ಜರಿಸಿ ಮಾಧವನೆ ನಿನ್ನ ಪಾದಕೊಯಿರಿ ಮಾಳ್ಪೊದೇನು 1 ಕಾಯ ಬಾಂಧವರ ಮಾಯಪಾಶಕ್ಹಾಕೆ ತೋಯಜಾಕ್ಷ ಎನ್ನ ಬಾಯ ಬಿಡಿಸೊರೈಯ್ಯ 2 ಗಜ ಸಿಕ್ಕಿಬಿದ್ದು ನೈಜ ದಿಕ್ಕುಕಾಣದಂತೆ ಸಿಕ್ಕೆ ವಿಷಯದಲ್ಲಿ 3 ತಂದು ತಂದು ಗೋವಿಂದ ನಿನ್ನಲಿಡೆ ಸಂದುಗೊಂಡು ಬಿಡಿಸಿಕೊಂಡು ಪೋಪುದೈಯ್ಯ 4 ದೇಹಗೇಹದಲ್ಲಿ ಸ್ನೇಹ ಇಡಿಸಿ ಕೆಡಿಸಿ ಶ್ರೀ ಹಯವದನ ಮೋಹಪಾಶಕ್ಹಾಕೋದೇನು 5 ವಾಕು ಕೇಳೋ ತಂದೆ ಪಾದ ಒಂದೇ ಸಾಕಬೇಕೊ ಇಂದೆ 6 ಹೀನಬುದ್ಧಿಬಿಡಿಸಿ ಜ್ಞಾನ ನಿನ್ನಲಿರಿಸಿ ಗಾನಲೋಲ ಕಾಯೋ ಶ್ರೀ ನರಹರಿಯೆ 7
--------------
ಪ್ರದ್ಯುಮ್ನತೀರ್ಥರು
ಕಂಡೆನೋ ಕಂಡೆ ಗುರುಚಿದಂಬರನಾ ತನು ಗೊಂಡು ಭೂಮಂಡಲದೊಳು ಚರಿಸುವನಾ ಪ ಪರಮಾತ್ಮ ಪರತತ್ವವನು ತಿಳಿದವನ ಧರೆಯ ಜನರನÀು ಪಾವನವ ಮಾಡುವನಾ ಕರುಣ ಸಮುದ್ರ ದೀನರ ದಯಾಪರನಾ ನೆರೆನಂಬಿದವರಿಗೆ ವರವ ಕೊಡುವನಾ 1 ಮಳೆ ಛಳಿ ಬಿಸಿಲು ಹಸಿವಿಗಂಜದವನ ಕಲ್ಲು ಮುಳ್ಳು ಬೆಟ್ಟವೆನ್ನದೆ ಚರಿಸುವನ ನೆಲೆಗಾಣದಂತಹ ಅಪಾರ ಮಹಿಮನು ಕಲಿಮನದೊಡ್ಡದಾನಂದ ನಿರ್ಗುಣನ 2 ಸ್ಮರಹರನಂತೆ ಭಸಿತ ದಿಗಂಬರನಾ ಕೆರೆಬಾವಿ ದೇವಾಲಯವನು ಕಟ್ಟಿಸುವನ ಪುರಹರನಂತೆ ಢಿಕ್ಕನೆ ಧರಿಸಿಹನ ನರ ಗುರಿಗಳು ಬಲ್ಲರೇನೋ ಇಂಥವನಾ 3 ಯಮನಿಯಮ ಅಷ್ಟಾಂಗ ನಿರತನ ಕಮಲಾರಿ ಪಿತನಂತೆ ಗಂಭೀರದವನ ಹಿಮವಂತನಂತೆ ಧೈರ್ಯದೊಳಿರುತಿಹನ ಕಮಲ ಬಾಂಧವನಂತೆ ತೇಜದಿಂದಿರುತಿಹನ 4 ಅರಿಗಳನರುವರ ನುಗ್ಗೊತ್ತಿದವನ ಕರಣೇಂದ್ರಿಯಂಗಳ ನಿಗ್ರಹಿಸಿದವನ ಪರಮ ದಾಸಗೆ ಆಲಿಂಗನವನಿತ್ತನಾ ಸ್ಥಿರ ಚಿದಾನಂದ ಪುರದ ದಿಗಂಬರನ 5
--------------
ಕವಿ ಪರಮದೇವದಾಸರು