ಒಟ್ಟು 22 ಕಡೆಗಳಲ್ಲಿ , 16 ದಾಸರು , 22 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸೋಮಾಸುರನೆಂಬ ಅಸುರನು ಸಾಮಕವೇದವ ಒಯ್ಯಲು ಮಾ ಸೋಮಾಸುರದೈತ್ಯನ ಕೊಂದು ಸಾಮಕವೇದವ ತಂದನು ಮಾ 1 ಗುಡ್ಡವು ಮುಳುಗಿ ಪೋಗಲು ನಮ್ಮ ದೇವ ಗುಡ್ಡ ಬೆನ್ನೊಳಗಿತ್ತನು ಮಾ ಗುಡ್ಡದಂಥ ದೈತ್ಯರನೆಲ್ಲ ಅಡ್ಡ ಕೆಡಹಿ ಬಿಸುಟನು ಮಾ 2 ಚಿನ್ನಗಣ್ಣಿನವನು ಬಂದು ಕನ್ನೆ ಹೆಣ್ಣನೊಯ್ಯಲು ಮಾ ವರ್ಣರೂಪವ ತಾಳಿದಸುರನ ಛಿನ್ನಭಿನ್ನವ ಮಾಡಿದನು ಮಾ 3 ಕಂಬದಿಂದಲಿ ಬಂದು ನಮ್ಮ ದೇವ ಇಂಬಾದಸುರನ ಬಗಿದನು ಮಾ ನಂಬಿದ ಪ್ರಹ್ಲಾದನ ಕಾಯ್ದ ಅಂಬುಜನಾಭ ನೃಸಿಂಹನು ಮಾ 4 ಮುರುಡನಾಗಿ ಬಂದು ನಮ್ಮ ದೇವ ಬಲಿಯ ದಾನವ ಬೇಡಿದನು ಮಾ ಇಳೆಯ ಈರಡಿಯ ಮಾಡಿ ಬಲಿಯ ಪಾತಾಳಕ್ಕೊತ್ತಿದನು ಮಾ 5 ಕೊಡಲಿಯನು ಪಿಡಿದು ನಮ್ಮ ದೇವ ಕಡಿದ ಕ್ಷತಿಯರಾಯ (ಯರ?) ನು ಮಾ ಹಡೆದ ತಾಯಿಯ ಶಿರವ ತರಿದು ಪಡೆದನಾಕೆಯ ಪ್ರಾಣ(ಣವ?) ನು ಮಾ 6 ಎಂಟು ಎರಡು ತಲೆಯ ಅಸುರನ ಕಂಠವ ಛೇದಿಸಿ ಬಿಸುಟನು ಮಾ ಒಂಟೀ ರೂಪವ(?) ತಾಳಿದಸುರನ ಗಂಟ ವಿಭೀಷಭಣಗಿತ್ತನು ಮಾ 7 ಸೋಳಸಾಸಿರ ಗೋಪಿಯರೊಡನೆ ಕೇಳಿಮೇಳದೊಳಿದ್ದನು ಮಾ ಬಾಲಕನಾಗಿ ತನ್ನುದರದಲಿ ಲೋಲ ಲಕ್ಷ್ಮಿಗರಸನು ಮಾ 8 ಒಪ್ಪದಿಂದಲಿ ಬಂದು ನಮ್ಮ ದೇವ ಇಪ್ಪ್ಪೆವನದೊಳಗಿಪ್ಪನು ಮಾ ಸರ್ಪಶಯನನಾಗಿ ಪೋಗಿ ತ್ರಿಪುರಸಂಹಾರ ಮಾಡಿದನು ಮಾ 9 ಏನು ಮಾಯನು ಮಾಯನು ಮಾ ನಮ್ಮ ದೇವ ಬಲ್ಲಿದ ಕಲ್ಕ್ಯಾವತಾರನು ಮಾ ಇಳೆಯ ಸ್ವರ್ಗ ಪಾತಾಳಕ್ಕೊಡೆಯ ಚೆಲುವ ಶ್ರೀ ಹಯವದನನು ಮಾ 10
--------------
ವಾದಿರಾಜ
ಹಳೆಯದಾಯಿತು ಕಾಯಾ ಇನ್ನಾರೇ | ತಿಳಿ ಸ್ವಹಿತೋಪಾಯಾ ಪ ಬಾಲಕನಾಗಿ ಕೆಲವು ದಿನ ಕಳೆದೀ | ಮೌಲ್ಯ ಯೌವ್ವನದಲಿ ಉನ್ಮತ್ತನಾದಿ 1 ಸಡಿಲುತ ಬಂದವು ಅಂಗಮಾಟಗಳು | ವಡಮೂಡದು ವಿವೇಕ ಬುದ್ಧಿಗಳು 2 ಮಂಡೂಕ ಸರ್ಪ ನೋಡದೆ ಭರದಿ | ಅಂಡಲುವದು ನೊಣಕದೇ ಪರಿಯಾದಿ 3 ಏನಾದರಾಗಲಿ ಹಿಂದಿನ ಕರಣೆ | ಜ್ಞಾನದೆಚ್ಚರ ಹಿಡಿ ಮನದೊಳು ಪ್ರಾಣಿ 4 ಗುರುವರ ಮಹಿಪತಿ ನಂದನ ಪ್ರಿಯನಾ | ಅರಿತರೆ ಬಂದದೆ ಸಾರ್ಥಕ ಖೂನಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೇಳೆ ಯಶೋದೆ ನಿನ್ನ ಬಾಲಕನಾಟಗಳೂ |ಹೇಳಿಕೊಂಡರೆ ಸುಳ್ಳೇ ಕಾಣಿಸಿತಮ್ಮ ಪನೀರೊಳಾಡುವನಲ್ಲೆ, ಪೋರರ ಕೂಡಿಕೊಂಡು |ಮಾರಿಯೆಂಬೊದೇನು ಸಾರಿ ಬಾಹೊದೆ 1ಎಲ್ಲರಂತುಂಡು ಮನೆಯಲ್ಲಾಡಬಾರದೆ |ಕಲ್ಲೆತ್ತುವನೆ ಯಂಥ ಬಲ್ಲಿದನಂತೆ 2ನಿಮ್ಮ ಹಿತಾರ್ಥನಾಗಿ ಸಮ್ಮೀಸಿ ಪೇಳಿದರೆ |ಬೊಮ್ಮನ ಮಗನಂತೆ ನಮ್ಮನ್ನೇ ಬೈವ 3ಮೂರು ಕಣ್ಣವಪರನಾರೇರ ಮುಟ್ಟಲಾರ |ಊರೊಳಗಿವ ಬಲು ಮೀರಿದನಮ್ಮ 4ಸಣ್ಣವನೆನಬೇಡ ನಿನ್ನ ಮಗನಗೋಪಿ|ಅನ್ನಿಥವಾಡೆವೆಮ್ಮ ಚಿನ್ನಗಳಾಣೆ 5ಬೆಂಕಿಗಂಜದೆ ನಿರಾತಂಕದರೊಳಗಿಹ |ಮಂಕುತನವ ನೋಡೆ ಪಂಕಜನೇತ್ರೆ6ಇನ್ನೊಂದು ಮಾತು ಕೇಳೆ ಮೊನ್ನೆ ಮೊನ್ನೆ ಒಬ್ಬ |ಹೆಣ್ಣಿನ ಕೊಂದನಲ್ಲೆ ಅನ್ಯಾಯ ನೋಡೆ 7ಕಿತ್ತಿದನೊಂದು ಮರ ಮತ್ತೆರಡು ಮೂರೀದ |ಮತ್ತಗಜವ ಕೊಂದುನ್ಮತ್ತನ ನೋಡೆ 8ಸದ್ಯ ಹೋಗಲೀನಿತು ಇದ್ದೊಬ್ಬವನು | ಅಪ್ರ-ಬುದ್ಧನಾಗಬಾರದು ಬುದ್ಧಿಯ ಹೇಳೇ 9ಅಧಮರೊಡನೆನಿತ್ಯಕದನಮಾಡುವದೇಕೆ |ಮಧುಸೂದನನ್ನು ಒಳ್ಳೆ ಹದನದಲ್ಲೀಡೆ 10ಕಾಣ ಬಂದದ್ದಾಡಲು ಪ್ರಾಣೇಶ ವಿಠಲಗೆ |ಹೀನ ತೋರುವದಮ್ಮಾ ಏನನ್ನಬೇಕೆ 11
--------------
ಪ್ರಾಣೇಶದಾಸರು
ತೂಗಿದಳೆಶೋದಾದೇವಿ ಬಾಲಕನಾಸಾಗರ ಶಯನನ ಜೋಗುಳ ಹಾಡಿ ಪಪುಟ್ಟಿದ್ಹನ್ನೊಂದನೆ ದಿವಸ ಶ್ರೀಕೃಷ್ಣನಾತೊಟ್ಟಿಲೊಳಗಿಟ್ಟು ಸಂತೋಷದಿ ಮಗನ ಅ.ಪಜೋಜೋ ಸುಗುಣಶೀಲ ಗೋಪಾಲಜೋಜೋ ಯದುಕುಲ ಬಾಲ ಶ್ರೀಲೋಲನೆ ಎನುತಾ 1ರಂಗ ಕೃಪಾಂಗ ಶ್ರೀರಂಗನೆ ಜೋಜೋಅಂಗಜಪಿತ ನರಸಿಂಗನೆ ಜೋ ಎಂದು 2ನಂದನ ಕಂದನೆ ಜೋಜೋ ಗೋವಿಂದಾಮಂದರಗಿರಿಧರ ಜೋಜೋ ಎಂದೆನುತಾ 3
--------------
ಗೋವಿಂದದಾಸ
ಪಾಲಿಸೋ ವೆಂಕಟಗಿರಿ ರಾಯಾ ಲಕ್ಷ್ಮೀ |ಲೋಲನೀಲಾಂಬುದ ಸಮ ಕಾಯಾ ಪಮಾಕಮಲಾಸನವಾಸವ- ಸುರ |ನೀಶ ಕರಾಧ್ಯ ಕೇಶವ ||ಲೋಕೇಶ ಯನ್ನಲ್ಲಿ ವಾಸವ-ಮಾಡಿನೂಕು ತುಚ್ಛತರ ಕ್ಲೇಶವ 1ಹಿಂದಿನ ಜನುಮಗಳೆಣಿಕಿಲ್ಲ - ದಯಾ |ಸಿಂಧುಸಾಧನವೀಗಲಿನಿತೆಲ್ಲಾ ||ಮುಂದಿನ ಗತಿಯೇನೋ ತಿಳಿದಿಲ್ಲ - ಇದ |ರಿಂದಲಂಜುವೆ ಜಾಂಬವತೀ ನಲ್ಲ 2ಬಾಲಕನಾದೆ ಕೆಲವು ದಿನ - ಪ್ರಾಯ |ಕಾಲವೊದಗಲು ಪರಾಂಗನಾ ||ಮೇಲೆ ಅಭಕ್ಷಣೆಯಲಿ ಮನವಿಟ್ಟೆ - ಹೇ |ಳಲೊಂದೆರಡೇ ಯನ್ನವಗುಣ 3ಉದಯ ಸ್ನಾನವು ಸಂಧ್ಯಾವಂದನೆ - ಅಘ್ರ್ಯ |ವಿಧಿಗುರುಹಿರಿಯರ ವಂದನೆ |ಮೊದಲಾಗಿ ಪಿತರಾರಾಧನೆ ಬಿಟ್ಟೆ |ಮದದಿಂದ ಹೀನನೆಂಬುವ ನಾನೇ4ಅನ್ಯರ ಮನೆ ದ್ವಾರ ಕಾಯ್ವೆನೋ - ಸ್ವಾಮಿ |ನಿನ್ನ ಸ್ಮರಣೆಯ ಕ್ಷಣ ಮಾಡೆನೋ ||ಅನ್ನಕ್ಕೆ ಬಹುದೂರ ಪೋಪೆನೋ - ಸಾರೆ |ಪುಣ್ಯಕ್ಷೇತ್ರಗಳಿರೆ ನೋಡೆನೋ 5ಧನಹೀನನಾದ ಕಾರಣದಿಂದ -ಸತಿ|ಮನೆ ಹೊಂದಿಸಳೋ ಪರಮಾನಂದ ||ತನುಜರಶನ ವಸನಗಳಿಂದ ಕಾಡು |ವಣು ಮಾತ್ರ ಸುಖವಿಲ್ಲ ಇದರಿಂದ6ಏಸುಹೇಳಲಿ ಮಾತ ಲಾಲಿಸೋ - ಶ್ರೀ ಪ್ರಾ- |ಣೇಶ ವಿಠ್ಠಲ ನೀನೇ ತಾರಿಸೋ ||ಆ ಸತ್ಕರ್ಮದಿ ಮನ ಪ್ರೇರಿಸೋ - ನಿನ್ನ |ದಾಸವರ್ಗದೊಳೆನ್ನ ಕೂಡಿಸೋ 7
--------------
ಪ್ರಾಣೇಶದಾಸರು
ಲಾಲಿಮುಕುಂದಲಾಲಿಗೋವಿಂದಲಾಲಿಮಯ್ಯಲಾಲಿಲಾಲಿಮೂರೈದಲಿಪ್ಪೆಲ್ಲಾಲಯರ ಪ್ರಭುಲಾಲಿಮಯ್ಯಲಾಲಿಪ.ಜಗ ಜಗುಳಿಸಿ ವಟಪತ್ರದಿ ಮಲಗಿದೆಲಾಲಿಮಯ್ಯಲಾಲಿಮಗುವಾಗಿ ವ್ರಜದೊಳು ತೊಟ್ಟಿಲೊಳೊಪ್ಪಿದೆಲಾಲಿ ಮಯ್ಯಲಾಲಿ1ಸ್ವಗತ ಭೇದ ವಜ್ರ್ಯ ಪರಮಾತ್ಮ ಪರಬ್ರಹ್ಮಜಗದ ಜೀವರ ಬಿಂಬಮೂರ್ತಿಅನಂತನೆಪಯೋನಿಧಿವಾಸ ಪರೇಶ ಪರಿಪೂರ್ಣಶ್ರೀಯರಸ ವೈಕುಂಠವಲ್ಲಭ ಕೃಷ್ಣಯ್ಯಸುರರ ಪುಣ್ಯದವಲ್ಲಿಫಲಿಸಲಿಲ್ಲುದಯಾದೆಧರೆಯ ಪಾವನ ಮಾಡೆ ಪಾಂಡವರಕಾಯಬಂದೆಅಜಮಿಳ ಗಜರಾಜ ಧ್ರುವ ಅಂಬರೀಷಪಾಲಸುಜನಪ್ರಹ್ಲಾದನ ಸಲಹಿದ ನರಹರಿಅಸಮ ಬಾಲಕನಾದೆ ಅವ್ಯಾಕೃತಾಂಗನೆವಿಷಮ ವಿದೂರಾಗಣಿತ ಸುಗುಣಾರ್ಣವಸ್ಮøತಿಗಿರಿಧರೆಶಿಶು ಮೃಗಚೇಲಧರ ಭಾರ್ಗವಕ್ರತುಕೃಷ್ಣೆಭವಧರ್ಮಪಾಲ ಪ್ರಸನ್ವೆಂಕಟೇಶ
--------------
ಪ್ರಸನ್ನವೆಂಕಟದಾಸರು
ಶೋಭನವೆಹರಿಶೋಭನವೆಪ.ಶೋಭನವೆನ್ನಿರಿ ಶುಭಕರದಿಂದಲಿಶೋಭನ ಶ್ರೀಲೋಲಗೋಪಾಲನೆನ್ನಿರೆಅಪಪಾಲುಗಡಲು ಮನೆಯಾಗಿರಲುಆಲದೆಲೆಯ ಮೇಲೆ ಮಲಗುವರೆ ||ಮೂಲೋಕವೇ ನಿನ್ನುದರದೊಳಿರಲುಬಾಲಕನಾಗಿ ಎತ್ತಿಸಿಕೊಂಬುವರೆ 1ಸಿರಿ ನಿನ್ನ ಕೈವಶವಾಗಿರಲುತಿರುಮಲ ಮಲೆಯನು ಸೇರುವರೆ ||ಸರಸಿಜಭವ -ಭವ ನಿನ್ನ ಪೂಜಿಸಲುನರನ ಬಂಡಿಯ ಬೋವನೆನಿಸುವರೆ 2ಕಮ್ಮಗೋಲನ ಪಿತನಾಗಿರಲುಗಮ್ಮನೆ ಕುಬುಜೆಗೆ ಸೋಲುವರೆ ||ಬ್ರಹ್ಮ ಪರಬ್ರಹ್ಮ ಚರಣಕೆ ಶರಣು
--------------
ಪುರಂದರದಾಸರು