ಒಟ್ಟು 32 ಕಡೆಗಳಲ್ಲಿ , 22 ದಾಸರು , 31 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪುರುಷರೈವರು ಕೂಡಿ ಹರುಷದಿ ಬರುತಿರೆ ಸರಸದಿ ಕೃಷ್ಣೆ ಕದವಿಕ್ಕೆ ಸರಸದಿ ಕೃಷ್ಣೆ ಕದವಿಕ್ಕೆ 1 ನಾಗವೇಣಿಯೆ ನೀನು ಸಾಗಿ ಮುಂದಕ್ಕೆ ಬಂದು ಬಾಗಿಲಿಕ್ಕಿದ ಬಗೆ ಪೇಳೆ 2 ಸರ್ಹ್ಯಾಗೆ ತೆಗೆಯಲಿ ಕದವನು ಹ್ಯಾಗೆ ತೆಗೆಯಲಿ ಕದವನು 3 ಹರದಿ ದ್ರೌಪದಿ ಕೇಳೆ ದೊರೆಯು ಧರ್ಮರು ನಾವು ತ್ವರಿತದಿ ಬಂದೆವು ತೆಗೆ ನೀನು 4 ದೊರೆಗಳಾದರೆ ರಾಜ್ಯ ಪರರಿಗೆ ಕೊಟ್ಟು ತಾ- ನಡವಿ ಯಾತಕೆ ತಿರುಗೀರಿ ಅಡವಿ ಯಾತಕೆ ತಿರುಗೀರಿ5 ಪಟ್ಟದರಸನ ಕೂಡ ಇಷ್ಟು ಮಾತುಗಳ್ಯಾಕೆ ಶ್ರೇಷ್ಠ ಭೀಮನು ನಾ ಬಂದೀನೆ ಶ್ರೇಷ್ಠ ಭೀಮನು ನಾ ಬಂದೀನೆ 6 ಶ್ರೇಷ್ಠನಾದರೆ ಕೈಯ್ಯೊಳ್ಹುಟ್ಟು ಹಿಡಿದು ರಾಜ- ಗಟ್ಟ್ಟಿ ಅಡಿಗೆ ಉಣೀಸ್ಹೋಗೋ ರಾಜ- ಗಟ್ಟಿ ಅಡಿಗೆ ಉಣೀಸ್ಹೋಗೋ 7 ಪುಂಡಕೌರವರಿಗೆ ಗಂಡನೆನಿಸುವಂಥ ಗಾಂಡೀವರ್ಜುನ ನಾ ಬಂದೀನೆ ಗಾಂಡೀವರ್ಜುನ ನಾ ಬಂದೀನೆ 8 ದುಂಡು ಹರಡಿನಿಟ್ಟು ಗೊಂಡ್ಯದ್ಹೆರಳನ್ಹಾಕಿ- ಕೊಂಡು ವಿದ್ಯವ ಕಲಿಸ್ಹೋಗೊ ಹಾಕಿ- ಕೊಂಡು ವಿದ್ಯವ ಕಲಿಸ್ಹೋಗೊ 9 ಸಕಲವಿದ್ಯೆಗಳಲ್ಲಿ ಕುಶಲ ಸಂಪನ್ನನಾದ ನಕುಲರಾಯನು ನಾ ಬಂದೀನೆ ನಕುಲರಾಯನು ನಾ ಬಂದೀನೆ 10 ಸಕಲವಿದ್ಯೆಗಳಲ್ಲಿ ಕುಶಲನಾದರೆ ತೇಜಿ ಕೆಲಸ ರಾಯರಿಗೆ ತಿಳಿಸ್ಹೋಗೊ ಕೆಲಸ ರಾಯರಿಗೆ ತಿಳಿಸ್ಹೋಗೊ 11 ಪಾವಕÀತನುಜೆ ಮಾದೇವಹಾರದವೇಣಿ ಸ(ಹ) ದೇವರಾಯನು ನಾ ಬಂದೀನೀಗ ಸ(ಹ)- ದೇವರಾಯನು ನಾ ಬಂದೀನೀಗ 12 ಗೋವ ಕಾಯುತಲಿ ಗೋಪಾಲಕನಾಗಿ ಕೊಳಲೂದಿ ಗೊಲ್ಲರೊಳಾಡಹೋಗೊ ಕೊಳಲೂದಿ ಗೊಲ್ಲರೊಳಾಡಹೋಗೊ 13 ಮಾತುಳಾಂತಕನಲ್ಲಿ ಮಾತು ಕಲಿತು ಬಂದಿ(ಲ್ಲಿ) ಸೋತೆವೆ ನಿನಗೆ ಸುಂದರಾಂಗಿ ಸೋತೆವೆ ನಿನಗೆ ಸುಂದರಾಂಗಿ 14 ಸೋತರೇನಾಯಿತು ದ್ಯೂತಪಗಡೆ ಬಿಟ್ಟು ಅ- ಜ್ಞಾತವಾಸವನೆ ಚರಿಸ್ಹೋಗೊ ಅ- ಜ್ಞಾತವಾಸವನೆ ಚರಿಸ್ಹೋಗೊ15 ತಿರುಗಿ ತಿರುಗಿ ಭಾಳ ಬಳಲಿ ಬಂದೆವೆ ನಾವು ಕರುಣವಿಲ್ಲವೆ ಕಮಲಾಕ್ಷಿ ಕರುಣವಿಲ್ಲವೆ ಕಮಲಾಕ್ಷಿ 16 ಭಾಳ ಬಳಲಿದೆವೆಂದು ಹೇಳಿಕೊಂಡರು ಕರು- ಣಾಳು ನಾನಲ್ಲ ಕರೆಯಲು ಕರು- ಣಾಳು ನಾನಲ್ಲ ಕರೆಯಲು 17 ಕಾಮನಯ್ಯನ ಕರುಣಕ್ಕೆ ಪಾತ್ರರೆ ನಾವು ಸಾಮಜಗಮನೆ ಸರಸ್ಯಾಕೆ ಸಾಮಜಗಮನೆ ಸರಸ್ಯಾಕೆ 18 ಹೇಮಮಾಣಿಕ್ಯದ ಕದವ ತೆಗೆದು ಪತಿಗಳಿಗೆ ಪ್ರೇಮದಿಂದೆರಗಿ ಕರೆದಳು ಪ್ರೇಮದಿಂದೆರಗಿ ಕರೆದಳು 19 ಆದರದಿಂದ ಕರೆಯಲರ್ಜುನ ಭೀಮ ಧರ್ಮ ಸಾದೇವ ನಕುಲ ಸಹಿತಾಗಿ ಸಾದೇವ ನಕುಲ ಸಹಿತಾಗಿ 20 ಪಂಚಪಾಂಡವರು ಬಂದು ಪರಮ ಸಂಭ್ರಮದಿಂದ ಮಂಚದ ಮ್ಯಾಲೆ ಕುಳಿತಾರೊ ಮಂಚದ ಮ್ಯಾಲೆ ಕುಳಿತಾರೊ21 ಥsÀಳಕು ಬೆಳಕಿನಿಂದ ಝಳಕು ಮಿಂಚುಗಳಂತೆ ಬಳುಕುತ ಬಾಳೆಸುಳಿಯಂತೆ ಬಳುಕುತ ಬಾಳೆಸುಳಿಯಂತೆ22 ಗಂಡರೈವರ ಮುಂದೆ ಗರುವಿಲೆ ನಿಂತಳು ದುಂಡುಮಲ್ಲಿಗೆ ಶಿರ ಬಾಗಿ 23 ಕರಕಮಲವ ಪಿಡಿದು ಕರೆದು ಸಾದೇವ ಕೃಷ್ಣೆ- ತುರುವಿಗ್ಹೂಮಾಲೆ ಮುಡಿಸಿದ ಕೃಷ್ಣೆ- ತುರುವಿಗ್ಹೂಮಾಲೆ ಮುಡಿಸಿದ 24 ಮುಖಬೆವರ್ವೊರೆಸುತ ನಕುಲರಾಯನು ಭಾಳ ಸುಖದಿ ಮುದ್ದಿಸಿದ ಮಡದಿಯ ಸುಖದಿ ಮುದ್ದಿಸಿದ ಮಡದಿಯ 25 ಅರ್ಜುನಾಗಲೆ ಮೋಹದಿಂದ ಮುಂಗುರುಳು ತಿದ್ದಿ ವಜ್ರದಾಭರಣನಿಡಿಸಿದ 26 ಭೀಮ ನಗುತ ಬಿಗಿದಪ್ಪಿ ದ್ರೌಪದಿಯ ಧರ್ಮ- ರಾಯನ ತೊಡೆಯಲ್ಲಿರಿಸಿದ ಧರ್ಮ- ರಾಯನ ತೊಡೆಯಲ್ಲಿರಿಸಿದ 27 ಧರ್ಮ ಮುತ್ತಿನ ಹಾರ ಪದಕ ಕೊರಳಿಗೆ ಹಾಕಿ ವರಮೋಹನಾಂಗಿ ಒಲಿಸಿದ ವರಮೋಹನಾಂಗಿ ಒಲಿಸಿದ 28|| ಸಿಂಧುಸುತನ ಮುಖಬಿಂಬ ಸೋಲಿಸುವಂಥ ಚಂದ್ರವದನೆ ಮುನಿಸ್ಯಾಕೆ ಚಂದ್ರವದನೆ ಮುನಿಸ್ಯಾಕೆ 29 ಮಾತಿನರಗಿಳಿಯೆ ನೀ ಜ್ಯೋತಿ ಮುತ್ತಿನ ಗೊಂಬೆ ಪ್ರೀತಿಪತಿಗಳ ನೀ ನೋಡೆ ಪ್ರೀತಿಪತಿಗಳ ನೀ ನೋಡೆ 30 ಪ್ರಾಣಪದಕವೆಂದು ತಿಳದೆವೈವರು ನಿನ್ನ
--------------
ಹರಪನಹಳ್ಳಿಭೀಮವ್ವ
ಪೋಗುವೆವಮ್ಮ ಪ ಉದಯವಾಗದ ಮುನ್ನ ಬರುವ ಕಣಮ್ಮ ಕದವ ಬಾರಿಸಿ ಒಳಪೊಕ್ಕ ಕಣಮ್ಮ ಮೊದಲೆನ್ನ ಮಗಳ ತಕ್ಕೈಸಿದನಮ್ಮ ಸದರದಲಿ ಮೊಸರನೆಲ್ಲ ಕುಡಿದ ಕಣಮ್ಮ 1 ಉಟ್ಟ ಸೀರೆಯ ಬೆಲೆ ಏನೆಂದಮ್ಮ ಪಟ್ಟೆ ಕುಪ್ಪಸಕೇನು ಪಣವೆಂದನಮ್ಮ ತೊಟ್ಟು ಕೊಂಡೆನ್ನನು ಬಿಡದೆ ಕಾಣಮ್ಮ 2 ನಸುಗಪ್ಪಿನೊಳು ಸಜ್ಜೆಮನೆಯೊಳಗಮ್ಮ ಮೊಸರು ಪಾಲ್ಬೆಣ್ಣೆಯ ಮೆದ್ದ ಕಾಣಮ್ಮ ಸೊಸೆಯು ಪಿಡಿಯೆ ಬಿಗಿದಪ್ಪಿದನಮ್ಮ ನಸು ಬೆವರಿಡೆ ತನು ಬಿಡದೆ ಕಾಣಮ್ಮ 3 ಜಾರ ಜೋರರ ಶಿಖಾಮಣಿಯಿವನಮ್ಮ ಯಾರೆಂದು ಹೊರಗೊಬ್ಬ ಕರೆಯೆ ಗೋಪಮ್ಮ ಚೋರ ಗಂಡಿಯ ಪೊಕ್ಕು ಓಡಿದನಮ್ಮ 4 ಊಚು ನೀಚುಗಳೇನು ಇವಗಿಲ್ಲವಮ್ಮ ನಾಚಿಕೆನಮಗಾಗುತಿದೆ ಹೇಳಲಮ್ಮ ಕೀಚಕರಿಪು ಕೋಣೆ ಲಕ್ಷ್ಮೀಶಗಮ್ಮ ವಾಚಿಸೆ ನೀನೊಂದ ಮಾತ ನಮ್ಮಮ್ಮ 5
--------------
ಕವಿ ಪರಮದೇವದಾಸರು
ಬಡನಡುವು ಬಾಲೆಯರ ಕೂಡಿ | ಪಾ | ಲ್ಗಡಲೋಡಿಯನೊಡನೊಡನೆ | ಬಿಡದೆ ಆಡಿದರೊ ವಸಂತ ಪ ಪಾಲ್ಗೆನೆಗಧಿಕ ಮೃದುವಸನಮಂ ಉಟ್ಟ್ಟು ನು | ಣ್ಗೂದಲು ತಿದ್ದಿ ಪಲಪು ಬೈತಲೆ ಸೊಗಸು | ತುಂಬಿ ಕುಂಕುಮ ಮಿಗೆ | ಬಲ್ಕಸ್ತುರಿಯ ತಿಲಕ | ಅರೆರೆ | ಕಾಳ್ಗತ್ತಲೆ ಮೀರಿ ತೋರುತಿರೆ ತಿರ್ತಿತಿರಗಿ | ವಾಲ್ಗಣ್ನು ನೋಟ ವೈಯಾರ ಸೋಲ್ದುರುಬು ವಿ | ಶಾಲ್ಗೊಂಚಲು ಮುತ್ತುಸುತ್ತು ಸೂಸುತಲಿರೆ ಪೇಳ್ಗಾಣೆ ಪೆಂಗಳು ಶೃಂಗರಿಸುವ ಮದವೊ 1 ಸಣ್ಮೊಗ್ಗೆ ಜಗದ ವಿಚಿತ್ರ ಕಂಚುಕವು ಮೋ | ಹನ್ಮಾಲೆ ಪದಕ ನ್ಯಾವಳ ಸರಿಗೆಸರ ಮುತ್ತು | ವಾಲೆ ಪೊಂಪುಷ್ಟ ಬುಗುಡಿ ಥೋ | ರನ್ಮುತ್ತು ನಾಸಾಮಣಿ | ಅರರೆ | ಮನ್ಮನೋಹರವಾದ ಕಡಕ ಕಂಕಣ ಮುದ್ರೆ | ಸನ್ಮೋಹನಾಂಗಿಯರು ಸರ್ವಾಭರಣವಿಟ್ಟು | ಮನ್ಮಥನ ಹಿಡಿದೇಜಿ ಕುಣಿವಂತೆ ಮುಂದೊರಿದು | ಕಣ್ಣಂಚಿನಿಂದ ಜಗವೆಲ್ಲ ಬೆಳಗುತಲಿ 2 ಕರ್ಪುರದ ವೀಳ್ಯೆಯವ ಮೆಲುತ ನಾನಾ ಬಗೆ | ಅಗರು ಶಿರಿಗಂಧ | ಸಾರ್ಪರಿಮಳ ಸಕಲ ದ್ರವ್ಯದಿಂದೋಕುಳಿಯ | ಮಾರ್ಪೆಸರು ಬಾರದಂತೆ | ಅರೆರೆ | ಕರ್ಪಾಣಿಯೊಳಗೆ ದ್ವೀಪಾಂತರದ ತರ ನಿಲುವ | ದರ್ಪಣವ ಪಿಡಿದು ಸರ್ವಾಂಗ ನೋಡಿಕೊಳುತ | ದರ್ಪ ತಗ್ಗಿಸದಲೆ | ಪೊನ್ನುಡೆಗಳ ತುಡುಕಿ ಕಂ | ದರ್ಪನಪ್ಪನ ಮೇಲೆ ಗುಪ್ಪಿರರು ಮುದದೀ 3 ಮೇಲ್ಮೇಲು ಸೊಗಸು ಚನ್ನಿಗರಾಯನಿಲ್ಲ ನಿಲೂ ನೀಲ್ಮೇಘ ವರ್ಣಾನೆ | ಕಾಲ್ದೆಗೆದು ನಮ್ಮಮ್ಮ | ತೋಳ್ಮದವ ತೀರಿಸದೆ ಪೋಗದಿರು ಭಡಭಡಾ | ಕರವ ತೆಕ್ಕೊ | ಅರೆರೆ | ತಾಳ್ಮದತಿಗತಿಯಂತೆ ಹೆಜ್ಜೆಯ ನಿಡುತ | ಸತಿ | ಜಾಲ್ಮೊಗದು ವಾರಿಧಿಯ ಥೆರೆಯಂತೆ ಮೂದಲಿಸಿ | ಆಳ್ಮಾತಿಲಿಂದ ಹೈ ಎನುತ ಚಲ್ಲಿದರೂ4 ಪೆಣ್ಗಳಿರಾ ನಿಮಗೇಕೆ ಪ್ರಬಲತನವೆಂದೆನುತ | ಅಣ್ಗದಾ ಗೋವಳರ ನಡುವೆ ವಪ್ರ್ಪಿರ್ದಸು | ವಣ್ಮಾತ್ರ ಪರಮಾತ್ಮನೀಕ್ಷಿಸಿದ ಅವರವರ | ಕಣ್ಗೊರಳ ಕುಚ ತೊಡೆಗಳ | ಅರೆರೆ | ಹೃತ್ತಾಪ ಹರಿಸುವ | ಸಿರಿ | ಸರ್ರನೆ ಓಕಳಿ ಚಲ್ಲೆ | ಸಣ್ಗೊಲ್ಲತಿಯರು ಬೆರಗಾಗಿ ಮರಳೆÀ ಹರಿಯ | ಬೆಣ್ಗಳ್ಳನೆಂದು ಮುತ್ತಿದರು ಹಾಸ್ಯದಲಿ 6 ತೋರ್ಕೈಯ ಬಚ್ಚಿಡದೆ ಪಳ್ಳಿಗನೆ ಠಕ್ಕಿಸದೆ | ಮಾರ್ಕರೆದುಕೋ ನಿನ್ನ ಗೆಳೆಯರನ ಒಂದಾಗಿ | ಸೂರ್ಕುದೇಗಂತೆ ಸರ್ವೋದ್ಧಾರಗರದ ವೈ | ಜೀರ್ಕೋಳಲಿ ತೆರವಿಲ್ಲದೆ | ಅರೆರೆ | ಅರ್ಕನರ್ಕಕೆ ವಾರಿ ಇಂಗಿ ಪೋಗುವಂತೆ | ನರ್ಕಾಂತಕನ ಕಾಯದೊಳಗೆ ಓಕುಳಿಯಡಗೆ | ಅರ್ಕಾದ್ರಿಯಂತೆ ಶಿರಿ ಕೃಷ್ಣರಾಜಿಸುತಿರೆ | ತರ್ಕೈಪ ಭರದಿಂದ ನಾರಿಯರು ಇರಲು 7 ಹಸ್ತ ಲಾಘವ ನೋಡಿ ತಲೆದೂಗಿ ನಕ್ಕು ಸ | ಮಸ್ತ ನಾರಿಯರಿಟ್ಟು ಉಟ್ಟ ಮಂಗಳವಸನ | ವಸ್ತುಗಳು ಜಿಗಳುವಂತೆ ಓಕುಳಿಯಿಂದ | ವಿಸ್ತಾರವಾಗಿ ಉಗ್ಗೆ | ಅರೆರೆ | ಕಸ್ತೂರಿಮೃಗದಂತೆ ಸುಳಿಸುಳಿಯ ನಿಂದಿರ್ದ| ಹಸ್ತಿಗಮನಿಯರೊಡನೆ ಕ್ರೀಡೆಯನು ಪರಾತ್ಪÀರ | ವಸ್ತು ಲಕುಮಿಯ ರಮಣ ಆಡುತಿರೆ ನಾಲ್ಕೈದು | ಮಸ್ತಕಾದ್ಯರು ವಿಸ್ತರಿಸಲರಿದೆನಲು 8 ಸುಕ್ಕದೆ ಕುಚಗುಳುಬ್ಬಿ ಕಕ್ಕಸವಾಗೆ ಹೆಜ್ಜೆ | ಇಕ್ಕಲಾರದೆ ವಿರಹತಾಪದಿಂದೀಕ್ಷಿಸುತ | ವಖ್ಖಣಿಸುವ ಮಾತು ಹಿಂದಾಗುತಿರೆ ಕಲೆಗ | ಳುಕ್ಕೇರಿ ಬೆವರುತಿರಲು | ಅರೆರೆ | ಅಕ್ಕಕ್ಕೊ ಎಂದು ಅಕ್ಕೋಜಗೆಗೊಳ್ಳುತ್ತ ತಾ | ರಕ್ಕಿಯಂತೆ ಕೃಷ್ಣ ಸುತ್ತ ವಲ್ದರು | ಸಕ್ಕರೆದುಟಿ ಚಲುವ ಉಡುಪನಂತೆ ವಪ್ಪೆ | ದಕ್ಕಿವನಂತೆ ಸಂತರಿಸುತಲಿ ಇಂದೂ 9 ಬೆರ್ದೋಕಳಿಯನಾಡಿ ಸರಿ ಮಿಗಿಲು ಎನಿಸಿ ಕೆಲ | ಸಾರ್ದಿರ್ದ ನಾರಿಯರ ಶಿರವ ತಡವರಿಸಿ ಶತ | ಸಾರ್ದವೆಲೆ ಉಳ್ಳ ಉಡುಗೊರೆನಿತ್ತು ಮನ್ನಿಸಿ | ಮೀರ್ದಾಭರಣವ ತೊಡಿಸಿ | ಅರೆರೆ | ಸಾರ್ದೆಗೆದು ತರ್ಕೈಸಿ ಪ್ರೀತಿಯಿಂ ಬಡಿಸಿ ಮುರ ಮರ್ದನ ವಿಜಯವಿಠ್ಠಲ ಮೆರೆದ ಗೋಕುಲ ದೊರೆ | ಸುಜನ ಜನಸಂಗಾ 10
--------------
ವಿಜಯದಾಸ
ಬಂದಾ ಗೋವಿಂದನು ಗೋಕುಲದಿಂದ ಆನಂದ ಮುಕುಂದನು ಪ ಅಂದಿಗೆ ಕಿರುಗೆಜ್ಜೆಯು ಘಲುಘಲುರೆನೆ ಮಂದಹಾಸನಗೆಯಿಂದಲಿ ಶ್ರೀಹರಿ ಅ.ಪ ಕರದಿ ಕಂಕಣ ವಂಕಿಯು ಹೊಳೆಯುತಲಿ ಸಿರದಿ ಕಿರೀಟ ಮುಂ- ಗುರುಳು ಮುಖ ಬೆವರಿನ ಹೊಸ ಕಾಂತಿಯಲಿ ಬೆರಳುಗಳಲಿ ಉಂಗುರ ಥಳಥಳಥಳ ಹೊಳೆಯುವ ಸೊಬಗಿನಲಿ ಕೊರಳೊಳು ಸರಿಗಿಯ ಸರ ಪರಿ ಸರ ಪದಕಗಳ್ಹೊಳೆಯುತಲಿ ಜರಿ ಪೀತಾಂಬರದ ನಡುವಿಲಿ ಕಿರು ಗೆಜ್ಜೆಗಳ್ಹೊಳೆಯುತಲಿ ತರುತುರು ತರುಣೇರು ಮರುಳಾಗುವ ತೆರ ಪರಿಪರಿ ರಾಗದಿ ಮುರಳಿಯ ನುಡಿಸಲು ಸುರರು ಪುಷ್ಪ ವೃಷ್ಟಿಯ ಸುರಿಸುತಲಿರೆ ತುರುಕರು ಮಧ್ಯದಿ ಪೊಳೆವೊ ಚಂದ್ರಮನಂತೆ1 ತುಂಬುರು ನಾರದರೆಲ್ಲರು ಕೂಡಿ ಅಂಬರದಲಿ ನೆರೆದರು ಗಂಧರ್ವಪ್ಸರ ಸ್ತ್ರೀಯರು ಕುಣಿದಾಡಿ ಪರಮಾತ್ಮನ ಸ್ತುತಿಸುತ ರಂಭೆ ಊರ್ವಶಿ ಮೇನಕೆಯರು ಕೂಡಿ ಆನಂದದಿ ನರ್ತಿಸೆ ಇಂದಿರೆ ರಮಣನ ಗುಣಗಳ ಪಾಡಿ ಅಂಬರದಲಿ ದೇವ ದುಂದುಭಿಗಳು ಮೊಳಗಲು ಕಂದರ್ಪನ ಪಿತ ಕರುಣದಿ ಭಕುತರ ಚಂದದಿ ದುರ್ಮತಿ ನಾಮ ವತ್ಸರದಲಿ ಕುಂದಿಲ್ಲದೆ ಸಲಹುವೆನೆನುತಲಿ ತ್ವರ 2 ಸೃಷ್ಟಿಗೀಶನ ಗುಣಗಳ ಪಾಡುತಲಿ ವ- ಶಿಷ್ಠರು ವಿಶ್ವಾಮಿತ್ರ ಕಶ್ಯಪ ಭಾರದ್ವಾಜ ಮುನಿಗಳು ದೇವೇಶನ ಸ್ತುತಿಸುತ ಅತ್ರಿ ಜಮದಗ್ನಿ ಜಾಬಾಲಿಗಳು ಶ್ರೀಕೃಷ್ಣನೆ ಪರನೆಂದು- ತ್ತಮ ಋಷಿಗಳು ಪೊಗಳುತಲಿರಲು ಪರಮೇಷ್ಠಿ ಪಿತನ ತ- ನ್ನಿಷ್ಟ ಭಕುತರನು ಸಲಹಲು ಕಂಕಣ ಕಟ್ಟಿಹ ಕಮಲನಾಭವಿಠ್ಠಲ ತ್ವರ ಶಿಷ್ಟರ ಸಲಹಲು ಸರಸರ ಓಡುತ 3
--------------
ನಿಡಗುರುಕಿ ಜೀವೂಬಾಯಿ
ಮದನನಗೇಹ ಸುಖ ಮರಣ ಸುಖಮದನನ ತೊತ್ತಿನ ಮಕ್ಕಳಾಗ ಬೇಡಿರೋ ಪ ಸ್ತ್ರೀಯರೂಪವ ಕಂಡು ಸೈರಿಸದೆ ಕಳಕಳಿಸಿಸುಯ್ಗರೆದು ಶರೀರವು ಬೆವರೇರುತಕೈಕಾಲ್ಗಳಿಗೆ ನಡುಕ ಹುಟ್ಟಿ ಕಾಮ ಶರಕೆ ಮೈಯನಿತ್ತುಕೊಯಿಸಿಕೊಳ್ಳುವ ಕೊರಳ ನಿತ್ಯದಿ ಕಷ್ಟದಿ ಸುಖವು 1 ಮುಖ ಕಾಂತಿಯ ನೋಡಿ ಮೋಹದಲಿ ಮುಳುಗಾಡಿಸುಖವೆಂದು ಬಗೆಯುತ ಸಂಗಯೋಗದಕಕುಲಾತಿಪಡುತಲಿ ಕೆಡೆದುತಾಪದಿ ಹೊರಳಿಬಕಧ್ಯಾನದಲಿ ತನ್ನ ನಿಜಸುಖವ ಮರೆವ 2 ಪತಿ ಚಿದಾನಂದ ಕಾಣದ ಸುಖವು3
--------------
ಚಿದಾನಂದ ಅವಧೂತರು
ಮನ್ನೀಸಯ್ಯಾ - ಮನಸಿಜನಯ್ಯಾ |ಮೌನಿಜನರ ಪ್ರಿಯ ಪಂಡರೀರಾಯಾ ಪ ಪರಿ | ಅನಘ ನೀ ಕರುಣಿಸಿ ಅ.ಪ. ಪರಿ ಏನಿದು ಹರಿಮೊರೆ ಕೇಳೆನನ್ನದು | ಪೊರೆವುದು ಜೀಯಾ 1 ಪರಿ ಗೋಪಿ ಜನರ ಪ್ರಿಯದ್ರೌಪತಿ ಗೋಪ್ತಾ | ಬಲು ಆಪ್ತಾ |ಕೈಪಿಡಿಯುವುದೀ | ಪಾಪಿಯಾದೆನ್ನನುಶ್ರೀಪತಿ ಶ್ರೀಹರೇ | ಮುರಾರೇ ||ಲೇಪಿಸು ಕೀರ್ತಿಕ | ಲಾಪಗಳ್ನಿನ್ನ ಸು-ರಾಪಗಪಿತ ಶ್ರೀ ಪಾವನ ಮೂರ್ತೇ 2 ಭವ ಶರ ನಿಧಿಯಲಿ | ಭವಣೆಯ ಪಡಲಾರೆಭವ ಜನಕನ ಪಿತಾ | ಹೇ ದಾತಾ |ಹವಣೆಯು ದಾವುದು | ಭವವನುತ್ತರಿಸಲುತವಪದ ಸ್ಮರಿಸುತಾ | ಸ್ಮರಿಸುತ್ತಾ ||ಸವನ ಮೂರರೊಳು | ಅವಶದಿ ಕೀರ್ತಿಸಿಬೆವರೆಂಬ ವಿರಜೆಯ | ಅವಗಾಹಿಸುವನುಭವವ ಕೊಡಿಸು ಹರಿ | ಅವನಿಜೆ ವಲ್ಲಭಪವನ ವಂದಿತ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಮಾಡಿರೊ ಪಾಡಿರೊ | ಲೋಕದೊಳಗೆ ಇದೆ ಬೀರುತಾ ಸಾರುತಾ ಶ್ರೀಕಾಂತನ ವೊಲಿಸಿ ಪ ದಶಮಿ ಏಕಾದಶಿ ದ್ವಾದಶಿ ದಿನತ್ರಯ | ವಸುಧಿಯೊಳಗೆ ಮಹಾವ್ರತವೆಂದು ತಿಳಿದು ತ್ರಿ | ದಶರೆಲ್ಲ ಕೈ ಕೊಂಡು ಮಾಡಿದರಂದು ರಂ | ಜಿಸುವ ಸತ್ಕರ್ಮದಲ್ಲಿ | ಬಿಸಜನಾಭನು ಲಕುಮಿಗೆ ಪೇಳಿದ ವ್ರತ | ಹಸನಾಗಿ ಬೊಮ್ಮಗೆ ಅರಹು ಮಾಡಲು ದೇವ | ಋಷಿಗೆ ಅಜನು ಪೇಳಲಾ ಮುನಿ ಬೀರಿದಾ ದಶ ದಿಕ್ಕಿನೊಳಗೊಂದು 1 ಉದಯಕಾಲದೆಲೆದ್ದು ಸಂಸಾರಯಾತ್ರೆ ಎಂದು | ಬದಿಯಲ್ಲಿದ್ದವರೆಲ್ಲ ಹರಿದಾಸ ದಾಸಿಯರು ಹೃದಯದೊಳೀಪರಿ ಯೋಚಿಸಿ ಅಜ್ಞಾನ ಒಂದು ಕಡೆಗೆ ನೂಕಿ | ಸದಮಲನಾಗಿ ಸ್ನಾನಾದಿಯ ಮಾಡಿ ಮ ವಿಧಿ ಮುಗಿಸಿ ಶ್ರವಣ ಸಾರಾ ಹೃದಯರಿಂದಲಿ ಕೇಳಿ2 ಗೋವಿಂದನ ಚರಣಕೆ ಎತ್ತಿ ನಿರ್ಮಲ ಚಿತ್ತ | ದಿಂದಲಿ ನಲಿವುತ ಹಿಗ್ಗಿ ಹಾರೈಸಿ ಆನಂದ ವಾರಿಧಿಯಲ್ಲಿ | ಕುಂದದೆ ಸೂಸುತ ಗೆಳೆಯರ ಒಡಗೂಡಿ | ತಂದು ಪುಷ್ಪಗಳಿಂದ ಮಂಟಪವ ವಿರಚಿಸಿ | ಇಂದು ಸ್ಥಾಪಿಸಿ ತುತಿಸಿ 3 ಜ್ಞಾನಿಗಳೊಡನೆ ಕುಳ್ಳಿದ್ದು ಸುಜ್ಞಾನಿಗಳು ಶುದ್ಧ ಗಾ| ಆನನ ಕೂಗುತ ಹಾಡುತ ಪಾಡುತ | ಧ್ಯಾನವ ಗೈವುತಲಿ | ಕಾಣಬಾರದಂತೆ ಪ್ರಜೆದೊಳಗೆ ತೋರಿ | ಮಗುವಿನಂತೆ ಶ್ರೀನಿವಾಸನ ನೆನಸಿ 4 ಕೂಡಿ ಸೋಗು ವೈಯಾರದಿ | ಕಾಲಲಿ ಗೆಜ್ಜೆಯ ಕಟ್ಟಿ | ವಲಯಾಕಾರ | ಮೇಲು ಚಪ್ಪಳೆಯಿಂದ | ಬಾಲವೃದ್ಧರು ನಿಂದು ಕುಣಿಕುಣಿದಾಡಿ ಹಿ | ಯಾಲಲಿ ಹರಿಯ ಸಂಕೀರ್ತನೆ ಕೀರ್ತಿಸಿ | ಸೋಲದೆ ಘನಸ್ವರ ಸ್ವರದಿಂದಲಿ ಕೂಗಿ ವಿ | ಶಾಲ ಭಕುತಿ ಒಲಿಸಿ 5 ಕಿರಿಬೆವರೊದಕ ಮೊಗದಿಂದಿಳಿಯಲು | ಉರದಲಿ ಇದ್ದ ದೇವಗೆ ಅಭಿಷೇಚನೆ | ಪರವಶವಾಗಿ ಮೈಮರೆದು ತಮ್ಮೊಳು ತಾವು | ಕರದು ತರ್ಕೈಸುತಲಿ | ಕಿರಿನಗೆಯಿಂದ ತೋಳುಗಳು ಅಲ್ಲಾಡಿಸಿ | ಎರಡು ಭುಜವ ಚಪ್ಪರಿಸಿ ಏಕಾದಶಿ | ದುರಿತ ರಾಸಿಗೆ ಪಾವಕನೆಂದು ಕೂಗಿ ಬೊಬ್ಬಿರಿದು ಬಿರಿದು ಸಾರಿ6 ಮಧ್ಯ ಮಧ್ಯದಲಿ ಮಂಗಳಾರುತಿ ಎತ್ತಿ | ಮಧ್ವರಾಯರೆ ಮೂರು ಲೋಕಕೆ ಗುರುಗಳು | ಸಿದ್ಧಾಂತ ಮುನಿ ಸಮ್ಮತಾ | ಮಲ ಮೂತ್ರವನು ಕ್ರಿಮಿವ ಮನವು | ಮೆದ್ದಾ ಸದ್ದೋಷಿ ಚಂಡಾಲ ವೀರ್ಯಕ್ಕೆ ಬಿದ್ದವ ನಿಜವೆನ್ನಿ 7 ಸಾಗರ ಮೊದಲಾದ ತೀರ್ಥಯಾತ್ರೆಯ ಫಲ | ಭೂಗೋಳದೊಳಗುಳ್ಳ ದಾನ ಧರ್ಮದ ಫಲ | ಆಗಮ ವೇದಾರ್ಥ ಓದಿ ಒಲಿಸಿದ ಫಲ | ಯೋಗ ಮಾರ್ಗದ ಫಲವೊ | ಜಾಗರ ಮಾಡಿದ ಮನುಜನ ಚರಣಕ್ಕೆ ಬಾಗಿದವಗೆ ಇಂಥ ಫಲಪ್ರಾಪ್ತಿ ನಿರ್ದೋಷನಾಗುವ ವೈರಾಗ್ಯದಿ 8 ನಿತ್ಯಾ ನೈಮಿತ್ಯಕ ಮಾಡು ಮಾಡದಲಿರು | ಪೋಗಾಡದೆ ಸದಾಚಾರ ಸ್ಮøತಿಯಂತೆ ಅತ್ಯಂತ ಪಂಡಿತ ಪಾವನ್ನ | ಉತ್ತಮರೊಡಗೂಡಿ ಮೃಷ್ಟಾನ್ನ ಭುಂಜಿಸಿ | ಮೃತ್ಯು ಜೈಸಿ ಸದ್ಗತಿಗೆ ಸತ್ಪಥಮಾಡು | ಸತ್ಯ ಮೂರುತಿ ನಮ್ಮ ವಿಜಯವಿಠ್ಠಲರೇಯ | ನಿತ್ಯ ಬಿಡದೆ ಕಾವಾ 9
--------------
ವಿಜಯದಾಸ
ಯಾಕೆ ಬಾರಯ್ಯ ನೀ ಏಕೋ ದೇವನೆ ಎನ್ನ ಏಕಾಕಾರದಲೆನ್ನ ಹೊರಿಯಲಾರೇನಯ್ಯ ಧ್ರುವ ನೀರ ಥೆರಿಯ ಕಡಿದು ಹೃದಯದಕರ ಚರಣದಿ ಭರದಿ ಮುಣಗಿ ನೀರ ನಡಿಗಿ ದಣದೇನಯ್ಯ 1 ವಾರಿಧಿಮಥನದಿ ಮೇರುಪರ್ವತವನ್ನು ಭಾರ ಬೆನ್ನಲಿ ಪೊತ್ತು ಬೆವರಿ ದಣಿದೇನಯ್ಯ2 ಧರಿಯ ಕದ್ದಸುರನ ಕೋರೆದಾಡಿಂದ ಸೀಳಿ ಭರದಿಂದ ಹೊಯಿದಾಡಿ ಹೋರಿ ದಣಿದೇನಯ್ಯ 3 ತರಳಗೊಲಿದು ಪ್ರಕಟಿಸಿ ದೈತ್ಯನ ಸೀಳಿ ಕರಳೊನಮಾಲಿಯ ಧರಿಸಿ ದಣಿದೇನಯ್ಯ 4 ಧರಿಯು ಮೂರಡಿ ಮಾಡಿ ಎರೆದು ದಾನವ ಬೇಡಿ ನರನ ಪಾತಾಳಕೊತ್ತಿ ಬಳೆದು ದಣಿದೇಯನಯ್ಯ 5 ಹಿರಿಯಳ ಶಿರವನು ಹರಿದು ಕತ್ತರಿಸಿನ್ನು ಕರದಲ್ಲಿ ಪರಶುವ ಪಿಡದು ದಣಿದೇನಯ್ಯ 6 ಶಿರಗಳ ಚೆಂಡಾಡಿ ರಾವಣೀಂದ್ರ ಜಿತನ ಶರದಿ ಕುಂಭಕರ್ಣನ ಎಚ್ಚದು ದಣಿದೇನಯ್ಯ 7 ಷತುರುಗಳ ಕಾಯಿದು ಉರುಗನ ತುಳದಿನ್ನು ಗಿರಿಯ ಬೆರಳಲೆತ್ತಿ ತೋರಿ ದಣಿದೇನಯ್ಯ 8 ಬರಿಯ ಬತ್ತಲೆ ಅಗಿ ಅರಿಯದೆ ತ್ರಿಪುರವ ಸೇರಿ ನಾರೇರ ವ್ರತವಳಿದು ದಣಿದೇನಯ್ಯ 9 ಏರಿ ಕುದುರಿಯ ತಿರುಹು ರಾಹುತನಾಗಿ ಪರಿ ರೂಪವ ತಾಳಿ ದಣಿದೇನಯ್ಯ 10 ಸರ್ವಾಪರಧವು ಕ್ಷಮೆಯಿಂದ ಮಹಿಪತಿಯ ಮನದೊಳು ಬಂದು ನಿಂದು ಹೊರೆದು ರಕ್ಷಿಸಯ್ಯ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಲಕ್ಷೀದೇವಿ ಕಮಲೇ ಕಮಲಾಲಯೇ ಪ ಕಮಲಭವಾದಿ ಸುರವಂದಿತಪದೆ ಅ.ಪ ತ್ರಿಗುಣಾಭಿಮಾನಿಯೇ ನೀ-ಅಗಣಿತಗುಣಶ್ರೇಣಿಯೇ ಹಗಲು ಇರುಳು ಹರಿಪದಯುಗ ತೋರಿಸೇ 1 ಲಿಂಗಶರೀರವ ಭಂಗವಗೈಯ್ಯಲು ನಿ ನ್ನಂಗದಲ್ಲಿನಾ ಬೆವರಿನಾ ಸಂಗವಾಗಲು ಭವಭಂಗ ಹಿಂಗುವುದು 2 ಧಾಮತ್ರಯರೂಪಿಣೀ ಕಮಲಭವಾಂಡಕಾರಿಣೀ ವಿಮಲಪದುಮ ಸರೋವಾಸಿನೀ ಸ್ವಾಮಿತೀರ್ಥದಿ ನಿಂತ ಶ್ರೀ ವೆಂಕಟೇಶನ ರಾಣಿ 3
--------------
ಉರಗಾದ್ರಿವಾಸವಿಠಲದಾಸರು
ವೆಂಕಟೇಶ ಎನ್ನ ಮುಂದೆ ನಿಂತಿದಂತಿದೆ ಪ ದೆಸೆಗೆ ಪ್ರಜ್ವಲಿಸುವ ಎಸೆವ ಕಿರೀಟ ನೊಸಲೊಳು ತಿದ್ದಿದ ನಾಮದ ಮಾಟ ಅಸಮ ನೇತ್ರಗಳಿಂದ ನೋಡುವ ನೋಟ ಬಿಸಜಭವನ ಪರಿಚರಿಯದ ಆಟ1 ತಿಲಪುಷ್ಟದಂದದಿ ಚಲುವನಾಸಗಳು ಬಿಳಿಯ ಮುಗುಳ್ನಗೆ ಸಾಲು ದಂತಗಳು ಗಳದಿ ಮೂರೇಖೆಯು ವೈಜಯಂತಿಗಳು ಹೊಳೆವ ಮೌಕ್ತಿಕದಂತೆ ಕಿರು ಬೆವರುಗಳು 2 ಕೌಸ್ತುಭ ಎಡಗೈಯ ಶಂಖ ಕಿರು ನೇಸರಂದದಿ ಚಕ್ರದ ಬಿಂಕ ಕರದೊಳು ಜಗವನು ತೋರುವ ವೆಂಕ ಮುರುಕ ಕಟಿಯೊಳು ಇರಿಸಿದ ನಿಃಶಂಕ 3 ತೋರ ಮುತ್ತಿನ ಸರ ಮಕರಕುಂಡಲವು ತೋರುವ ಭುಜಕೀರ್ತಿ ಚಕ್ರದ ಸರವು ಹಾರ ಹೀರಾವಳಿ ಬೆರಳುಂಗುರವು ಚಾರು ಭಾಪುರಿ ಘಂಟೆ ಸರಪಣಿಯಿರವು 4 ಕಿರುಡೊಳ್ಳಿಗೊಪ್ಪುವ ನಾಭಿಯ ಸಿರಿಯು ಸರಸಿಜಮಿತ್ರನ ತೇಜದ ಪರಿಯು ಮರುಗು ಮಲ್ಲಿಗೆ ಜಾಜಿ ಸಂಪಿಗೆ ಸರಿಯು ಪರಿಮಳಿಸುವ ಮೈಯ ಪುಳಕದ ಸಿರಿಯು 5 ಉಡಿಯ ಪೀತಾಂಬರ ಮೇಲುಡುದಾg À ಕಡಹದಂದದಿ ಚಲ್ವ ಕಾಲ್ಗಳ ತೋರ ಅಡಿಯಿಟ್ಟು ನಿಂದಿಹ ಬೆಡಗಿನ ವೀರ ಮಡದಿ ಮಹಾಲಕ್ಷ್ಮೀ ಪುಡುಮಿಯುದಾರ 6 ಸ್ವಾಮಿ ಪುಷ್ಕರಣಿಯ ತೀರ ನಿವಾಸ ಭೂಮಿ ವರಾಹತಿಮ್ಮಪ್ಪನ ದಾಸ ಪ್ರೇಮದಿ ರಚಿಸಿದನಿದರೊಳು ಪ್ರಾಸ ತಾಮಸವಿದ್ದರು ತಿದ್ದಲು ಲೇಸ 7
--------------
ವರಹತಿಮ್ಮಪ್ಪ
ಸುಲಿದ ಬಾಳೆ ಹಣ್ಣು ಸುಟ್ಟು ತಿನ್ನಬೇಡಿರೊ ಹಳೆಯ ಜನರ ಅನುಭವಗಳ ಹಳಿಯಬೇಡಿರೊ ಬಿಳಿಯ ವಸ್ತುವೆಲ್ಲ ಕ್ಷೀರವಲ್ಲ ಕಾಣಿರೊ ಥಳಥಳಿಸುವುದೆಲ್ಲ ರಜತವಲ್ಲ ಕಾಣಿರೊ ಸಿರಿಯು ಬಂದ ಕಾಲದಲ್ಲಿ ಮೆರೆಯಬೇಡವೋ ಶಿರವು ಗಟ್ಟಿಯೆಂದು ಕಂಬ ಗುದ್ದಬೇಡವೊ ಮನಕೆ ತುಷ್ಟಿಕೊಡದ ಕಾರ್ಯಗಣನೆ ಬೇಡವೊ ಅನುವಿನಲ್ಲಿ ಪಿಡಿದ ಕಾರ್ಯ ಕೊನೆಯಗಾಣಿಸೊ ಹಾವು ಕೊಂದು ಹದ್ದುಗಳಿಗೆ ಹಾಕಬೇಡವೊ ಗೋವು ಕೊಂದು ಪಾದರಕ್ಷೆ ದಾನಬೇಡವೊ 10 ಅರಿಯದ ಜನರಲ್ಲಿ ಅಂತರಂಗಬೇಡವೊ ಪರರ ಗೋಪ್ಯ ತಿಳಿದರೆ ಬಹಿರಂಗಬೇಡವೊ ಜಂಭ ಕೊಚ್ಚಬೇಡವೊ ರಗಳೆ ರಂಪದಿಂದ ಪರರ ಒಲಿಸಬೇಡವೊ ಗೆದ್ದರಾ ಎತ್ತು ಬಾಲವನ್ನು ಹಿಡಿಯಬೇಡವೊ ಒದ್ದರೆ ಅದು ಹಲ್ಲುಗಳನು ಕಿರಿಯಬೇಡವೊ ಮೂರ್ಖ ಜನಗಳಲ್ಲಿ ವಾದ ಮಾಡಬೇಡವೊ ಮಕ್ಕಳೆದುರಿನಲ್ಲಿ ಗ್ರಾಮ್ಯವಚನ ಬೇಡವೊ ಬಳಿಕ ಮಾತನಾಡುವನು ಗೆಳೆಯನಲ್ಲಯ್ಯ ಕುಳಿತು ತಿನ್ನುವವನು ಸಾಹುಕಾರನಲ್ಲಯ್ಯ 20 ಗಂಟು ಜಗಳ ಕದನಗಳಲಿ ತಂಟೆಬೇಡಯ್ಯ ನಂಟರಿಷ್ಟರಲ್ಲಿ ಭಂಟನಾಗಬೇಡಯ್ಯ ನಾಕು ಜನರ ಮಾತ ಮೀರಿ ನಡೆಯಬೇಡÀಯ್ಯ ಪೋಕರಿ ಜನಗಳಲಿ ಮೂಕ ಬದಿರನಂತಿರೊ ಕಾಲದಲ್ಲಿ ಕೆಲಸಮಾಡಿ ಮುಗಿಸೆಲೊ ನಾಳೆ ನಾಳೆಯೆಂಬ ಕೆಲಸ ಹಾಳು ಕಾಣಿರೊ ಬಿಂಕದಿಂದ ಹರಿಗುರುಗಳ ಮರೆಯಬೇಡಯ್ಯ ಸಂಕಟ ಬಂದಾಗ ವೆಂಕಟೇಶ ಬರುವನೆ ಸಾಲ ಸೋಲ ಮಾಡಿ ದಾನ ಧರ್ಮ ಬೇಡಯ್ಯ ಕೇಳದಿರಲು ನೀತಿ ಹೇಳ ಹೋಗಬೇಡಯ್ಯ 31 ಪರರು ನೋಯುವಂಥ ಮಾತನಾಡಬೇಡಯ್ಯ ಉರಿವ ಒಲೆಗೆ ಉಪ್ಪುಕಾಳನೆರಚಬೇಡಯ್ಯ ನೆರೆಯು ಬಾಳುತಿರಲು ನೋಡಿ ಕರಗಬೇಡಯ್ಯ ಬರಿದೆ ಅಯ್ಯೊ ಪಾಪವೆನಲು ಮರುಕವಲ್ಲವೊ ದುರುಳ ಜನಗಳಲ್ಲಿ ಸರಳನಾಗಬೇಡಯ್ಯ ಹರಿಯ ಭಜನೆಯಲ್ಲಿ ಮನದಿ ನಾಚಬೇಡವೊ ತಿರುಕನಂತೆ ಜ್ಞಾನದ ಭಿಕ್ಷೆಯನು ಬೇಡೆಲೊ ತುರುಕನಂತೆ ಕಾಮದ ತಲೆ ಬಡಿದು ಜೀವಿಸೊ ಸಜ್ಜನಗಳು ಸಮ್ಮತಿಸುವ ಮಾರ್ಗದಲಿ ನಡಿ ದುರ್ಜನಗಳು ಪೇಳಿ ತೋರಿದೆಲ್ಲವನು ಬಿಡಿ40 ಫಲದ ಚಿಂತೆಯಿಲ್ಲದಂತೆ ಧರ್ಮಗಳಿಸಿರೊ ಫಲವು ಹರಿಯಧೀನ ಕೆಲಸ ಮಾತ್ರ ನಿನ್ನದೊ ಧ್ಯಾನ ಮಾಡದಿರಲೊ ಮನದಿ ದುಷ್ಟ ವಿಷಯದ ಧ್ಯಾನದಿಂದ ವಿಷಯದಲ್ಲಿ ಸಂಗ ಬರುವುದೊ ಸಂಗದಿಂದ ದುಷ್ಟಭೋಗ ಕಾಮ ಬರುವುದೊ ಭಂಗವಾದ ಕಾಮದಿಂದ ಕೋಪ ಬರುವುದೊ ಕೋಪದಿಂದ ಮನದಲಿ ವ್ಯಾಮೋಹ ಬರುವುದೊ ಈ ಪರಿಮೋಹದಲಿ ಸ್ಮರಣೆ ನಾಶಪಡುವುದು ಸ್ಮøತಿಯು ತಪ್ಪಿದವನ ಬುದ್ಧಿಮೃತಿಯು ಪೊಂದಲು ಕ್ಷಿತಿಯೊಳವಗೆ ಸರ್ವನಾಶವೆಂದು ನುಡಿಯಿದೆ 50 ಜ್ಞಾನಕೆ ಸಮ ಸಂಪತ್ತಿಲ್ಲ ಜನಕೆ ಲೋಕದಿ ಮೌನಕೆ ಸಮ ಗುಹ್ಯಕೆ ಪಾಲಕರಿಲ್ಲವೊ ಜ್ಞಾನ ಸರ್ವಕರ್ಮಗಳನು ದಹಿಸಿಬಿಡುವುದೊ ಜ್ಞಾನದಿಂದ ಪರಮಶಾಂತಿ ಪಡೆಯುಬಹುದೆಲೊ ಚಿರತನ ವರ್ಣಾಶ್ರಮಗಳ ಧರ್ಮ ಬಿಡದಿರೊ ಮಿತಿಯ ಮೀರಿ ಭೋಜನವನು ಮಾಡಬೇಡವೊ ಕಾಲ ಕಳೆಯಬೇಡವೊ ಲೋಕವ ಭಯಪಡಿಸಬೇಡ ನಡೆನುಡಿಗಳಲಿ ಲೋಕಕೆ ಭಯಪಡಲಿಬೇಡ ಧರ್ಮ ಪಥದಲಿ 60 ಶತುಮಿತ್ರರಲ್ಲಿ ಒಂದೆ ಭಾವ ಪಡೆಯೆಲೊ ಸ್ತೋತ್ರ ನಿಂದೆಗಳಿಗೆ ಹಿಗ್ಗಿ ಕುಂದಬೇಡವೊ ಭಕ್ತಜನರ ನಡೆನುಡಿಗಳ ನಿಂದಿಸದಿರೆಲೊ ಯುಕ್ತರವರು ಹಿರಿಯ ದಯಕೆ ಪಾತ್ರರಿವರೊ ಜಗವು ಸತ್ಯ ಬಗೆ ಬಗೆಯಲಿ ಸೊಗಸ ನೋಡೆಲೊ ಜಗಕೆ ಕರ್ತನೋರ್ವಗೆ ಕೈ ಮುಗಿದು ಬೇಡೆಲೊ ದೇಶಕಾಲ ಪಾತ್ರವರಿತು ದಾನ ಮಾಡೆಲೊ ಆಸೆ ಮೋಸಗಳಿಗೆ ಮನವ ಲೇಸು ಕೊಡದಿರೊ ಪರರ ಮನವು ಕೆದರದಂತೆ ನಿಜಹಿತ ನುಡಿಯು ಗುರುತರ ವಾಚನಿಕ ತಪವ ಮರೆಯಬೇಡವೊ 70 ಸರ್ವಕರ್ಮ ಫಲಗಳನ್ನು ಬಿಡುವನೆ ಯತಿಯು ಗರ್ವಮತ್ಸರಾದಿಗಳನು ಬಿಡುವುದೆ ಮತಿಯು ಶರಣು ಹೊಡೆಯೊ ಕರುಣಮಯನ ಚರಣಯುಗಳದಿ ಕರಗತವಾಗುವುದು ನಿನಗೆ ಇಹಪರ ಸುಖವು ಮಮತೆ ಬಿಟ್ಟು ಜಗದಿ ತಗಲಿ ತಗಲದೆ ಇರೆಲೊ ಕಮಲಪತ್ರಗಳಲಿ ಜಲದ ಕಣಗಳ ತೆರದಿ ಶುದ್ಧ ಧರ್ಮಲೇಶವು ತಲೆ ಕಾಯಬಲ್ಲದೊ ಪದ್ಮನಾಭ ಜನರ ಚಿತ್ತಶುದ್ಧಿ ನೋಡುವ ನಾನೆ ಬ್ರಹ್ಮನೆಂಬ ವಾದ ಬಾಳಬಲ್ಲದೆ ತಾನೆ ಬೀಳಲಿರುವ ಮರಕೆ ಕೊಡಲಿ ಏತಕೆ 80 ಜ್ಞಾನತೀರ್ಥಗಳಲಿ ಮುಳುಗಿ ಸ್ನಾನ ಮಾಡೆಲೊ ಜ್ಞಾನಕೆ ಜ್ಯೋತಿಗಳ ಬೆಳಕು ಕಾಣುತಿರುವುದೊ ದಾರುಣ ಸಂಸಾರ ಜಲದಿ ಪಾರುಗಾಣಲು ಧೀರನಾಗಿ ಈಜುವವಗೆ ತಾರಣ ಸುಲಭ ತಲೆಯ ಮೇಲೆ ಕೈಯನಿಟ್ಟು ಕೂಡ ಬೇಡವೊ ಬೆಳಸಿದಂತೆ ತರುಲತೆಗಳು ಫಲಕೊಡುವುದೊ ಮುಂದೆ ಇಟ್ಟ ಹೆಜ್ಜೆಗಳನು ಹಿಂದೆಗೆಯದಿರೊ ಮಂದಿಗಳಿಗೆ ಫಲದಲಿ ಸಂದೇಹ ಬೇಡವೊ ಹುಳಿಯ ರಕ್ತವಿರುವತನಕ ತಲೆಯು ಬಾಗದು ಕಾಲ ಸಾಲದೊ 90 ಪರರ ನುಡಿಗಳನ್ನು ಕದ್ದು ಕೇಳಬೇಡವೊ ಅರಿತು ನಿನ್ನ ಹರಿಯು ಗುದ್ದಿ ಬುದ್ಧಿ ಕಲಿಸುವ ಚಾಡಿಯಾಡ ಬೇಡ ಚಾಡಿ ಕೇಳಬೇಡವೊ ಸೇಡನು ತೀರಿಸುವ ಹೇಡಿಯಾಗಬೇಡವೊ ನಿನ್ನ ಮಾನದಂತೆ ಪರರ ಮಾನವೆಂದರಿಯೆಲೊ ಅನ್ನ ಹಾಕುವವರ ಹರಿಸಿ ಘನ್ನವೆನಿಸೆಲೊ ಕುಲವ ಶೋಧಿಸುತಲಿ ಕನ್ಯೆದಾನ ಮಾಡೆಲೊ ತಲೆಯ ಕ್ರಾಪು ಯೋಗ್ಯತೆಗೆ ಪ್ರಮಾಣವಲ್ಲವೊ ಕರವ ಪಿಡಿಯೆಲೊ ಥಳಕು ಬೆಳಕು ನೋಡಿ ಬಲೆಗೆ ಬೀಳ ಬೇಡವೊ 100 ಗಾಳಿಯು ಬಂದಾಗ ಬೇಗ ತೂರಿ ಕೊಳ್ಳಲೊ ಕಾಲದ ಸ್ಥಿತಿಯರಿತು ತಗ್ಗಿ ಬಗ್ಗಿ ನಡೆಯೆಲೊ ಮೇಲಿನ ದರ್ಜೆಯಲಿ ನಡೆದು ಕೇಳಬೇಡವೊ ನಾಲಗೆ ಚೆನ್ನಿರುವ ನರಗೆ ಜಗಳವಿಲ್ಲವೊ ಇರುಳು ಕಂಡ ಬಾವಿಗೆ ನೀ ಉರುಳಬೇಡವೊ ಶಕ್ತಿ ಇರುವ ಕಾಲದಲ್ಲಿ ಉತ್ತಮನೆನಿಸೊ ಶಕ್ತಿಯಲ್ಲಿದಾಗ ಇದ್ದು ಸತ್ತ ಪ್ರಾಯವೊ ಸ್ವೊತ್ತಮ ಜನರಲ್ಲಿ ನಿಯತ ಭಕ್ತಿ ಮಾಡೆಲೊ ಭಕ್ತಿಯಿಲ್ಲದವಗೆ ಮುಕ್ತಿಯಿಲ್ಲ ಕಾಣಿರೊ 110 ಪಾಪಿಯಾಗಬೇಡ ಇತರ ಜನರ ವಂಚಿಸಿ ಕೋಪ ಮಾಡಬೇಡ ಕೊಟ್ಟ ಋಣವ ಕೇಳಲು ಕೂಪ ಕೂರ್ಮದಂತೆ ಜಗವ ನೋಡಬೇಡವೊ ರೂಪುರಂಗುಗಳಿಗೆ ಮನವ ಸೋಲಬೇಡವೊ ಹಡೆದ ಮಕ್ಕಳುಗಳ ಕಾಲದಲ್ಲಿ ತಿದ್ದೆಲೊ ಗಿಡದಲಿ ಬಗ್ಗಿಸದ ಮರವು ಬಗ್ಗಲಾರದೊ ಕೊಡಲಿಯನ್ನು ಸೇರಿ ಮರದ ಕಾವಿನಂದದಿ ನಡತೆ ಕಲಿಸದಿದ್ದರವರು ಬುಡಕೆ ತರುವರೊ ಗಳಿಸಿದವನ ಧನವು ಬಳಸಿದವನಿಗೆಂದರಿಯೆಲೊ ಬಳಸಲು ನೀತಿಯಲಿ ಧನವ ಗಳಿಸಿ ಸುಖಿಸೆಲೊ 120 ತಿಳಿದು ಮರ್ಮ ಕಲಿ ಪುರುಷನ ನೆಲಕೆ ತುಳಿಯಿರಿ ಗುಹ್ಯ ತತ್ವ ಪೇಳಬೇಡವೊ ನಾಯಿಗಳಿಗೆ ಹವ್ಯದಾನ ಮಾಡಬೇಡವೊ ಕಾಯುವ ಗುರುಚರಣವೆ ಬಲುಶ್ರೇಯವೆನ್ನದೆ ಕರ್ಮ ಸುಡುವುದೆ ಉಣಲು ಬದುಕಬೇಡ ಜಗದಿ ಬದುಕಲು ಉಣೆಲೊ ಜನನ ಮರಣ ನಿಯತ ಕಾಲಗಳಲಿ ಬರುವವೊ ಕೊನೆ ಮೊದಲುಗಳಿಲ್ಲವು ಈ ಜಗಪ್ರವಾಹಕೆ ತನಗೆ ತಾನೆ ಬೀಳದು ಜಗದಾಖ್ಯ ವೃಕ್ಷವು 130 ತಾಳಿದವನು ಬಾಳುವನೆಂದರಿತು ನಡೆಯೆಲೊ ಗಾಳಿಗುದ್ದಿ ಕರಗಳನ್ನು ನೋಯಿಸದಿರೆಲೊ ಬಾಲನೆಂದು ಅರಿತು ಸತತ ಜ್ಞಾನವ ಗಳಿಸೆಲೊ ನಾಳೆಯ ದಿನ ನಂಬದಂತೆ ಧರ್ಮಗಳಿಸೆಲೊ ಹರಿಯುಕೊಟ್ಟ ಕಾಲದಲ್ಲಿ ಪರರ ರಕ್ಷಿಸೊ ಹರಿಯು ಕೊಡದ ಕಾಲದಲ್ಲಿ ಹರುಷ ಬಿಡದಿರೊ ದೂಷಕರನು ಎಂದಿಗು ನೀ ದ್ವೇಷಿಸದಿರೆಲೊ ಹೇಸಿಗೆಯನು ನಾಲಿಗೆಯಲಿ ತೆಗೆದುಬಿಡುವರೊ ಹಳ್ಳಕೆ ಬಿದ್ದವನಮೇಲೆ ಕಲ್ಲೆಸೆಯದಿರೊ ಟೊಳ್ಳು ಹರಟೆಗಾರನೆದರು ನಿಲ್ಲ ಬೇಡವೊ 140 ಒಳ್ಳೆಯ ಫಲಕೊಡುವ ಕಾರ್ಯಗಳು ಚಿಂತಿಸೊ ಜಳ್ಳು ಹುಲ್ಲಿಗಾಗಿ ಬೆವರು ಸುರಿಸಬೇಡವೊ ಬಿಂದು ಬಿಂದು ಸೇರಿ ಸಿಂಧುವಾಯಿತೊ ಹಿಂದಿನ ಮೊಳೆಯಿಂದ ದೊಡ್ಡ ವೃಕ್ಷವಾಯಿತೊ ಒಂದನು ಇನ್ನೊಂದು ಸೇರಿ ಕೋಟಿಯಾಯಿತೊ ಮಂದಿಗಳಿದನರಿತು ಪುಣ್ಯರಾಶಿ ಗಳಿಸಿರೊ ನೆರಳು ನೀರು ಕೊಟ್ಟ ಜನರ ಮರೆಯ ಬೇಡವೊ ಸರಿಯುತಿರುವ ಮಾರಿ ಮಸಣಿ ಕರೆಯಬೇಡವೊ ಅರಿಯದ ಅಜ್ಞಾನಿಯೊಡನೆ ಸರಸಬೇಡವೊ ತರುಗು ತಿನ್ನುವವನ ಕೇಳಬೇಡ ಹಪ್ಪಳ 150 ದೇಹಿಯೆಂದು ಬಂದವನಿಗೆ ನಾಸ್ತಿಯೆನದಿರೊ ಸಾಹಸವನು ಮಾಡದಿರೊ ಪ್ರಬಲ ಜನರಲಿ ಮೋಹಕೆ ತುತ್ತಾಗದಿರೆಲೊ ಪರಸತಿಯರಲಿ ದೇಹಕೆ ಬಲ ಶುದ್ಧಿ ಕೊಡುವ ನಿಯಮ ಬಿಡದಿರೊ ಭಾಗ್ಯಹೀನ ಬಡವನೆಂದು ಜರಿಯಬೇಡವೊ ಯೋಗ್ಯತೆಯನು ತಿಳಿಯಲು ಬಲು ಸುಲಭವಲ್ಲವೊ ಶ್ಲಾಘ್ಯವಾದ ಮೂಲಿಕೆಗಳನರಿಯೆ ಸುಲಭವೆ ಯೋಗ್ಯತೆಯನುಸರಿಸಿ ಬರುವ ಭಾಗ್ಯ ಬೇರಿದೆ ಖ್ಯಾತಿಗಾಗಿ ಆತ್ಮಸ್ತುತಿಯ ಮಾಡಬೇಡವೊ ಕೋತಿಯಂತೆ ಕುಣಿಯಬೇಡ ಸರಿಸಮರೊಳಗೆ 160 ಮೂತಿ ತಿರುಗಬೇಡ ಪರರ ಹಿತನುಡಿಗಳಿಗೆ ಸೋತ ಹಾಸ್ಯ ಮಾಡಬೇಡ ರಸಿಕ ಜನರಲಿ ಹಿರಿಯರು ಸಂದೇಹಪಡುವ ಮಾರ್ಗ ತ್ಯಜಿಸೆಲೊ ಬರಿಯ ಮಾತನಾಡಿ ಬೆನ್ನು ತಟ್ಟ ಬೇಡವೊ ಪರರ ಹಳ್ಳಕ್ಕಿಳಿಸಿ ಆಳ ನೋಡಬೇಡವೊ ಕರಕೆ ಸಿಕ್ಕಿದಾಗ ಹಲ್ಲು ಕಿರಿಯಬೇಡವೊ ಅರಳು ಹುಡುಕಬೇಡವೊ ಎದೆಯು ಒಡೆಯುವಂತೆ ಸುದ್ದಿ ಪೇಳಬೇಡವೊ ಬೀದಿಯಲಿರುವ ಜನಗಳ ಬೇಸರಿಸಬೇಡವೊ ಬೆದೆಯಲಿರುವ ದುರುಳನನ್ನು ಕೆಣಕಬೇಡವೊ 170 ಊರು ಕುರಿಯ ಕಾದು ಗೌಡನೆನಿಸಬೇಡವೊ ದೂರು ತರುವ ಜನರ ಕ್ಷಣದಿ ನಂಬಬೇಡವೊ ನಾರಿಯ ಸಾಹಸವ ನಂಬಿ ದುಡುಕಬೇಡವೊ ಎರಡು ಕರವು ಸೇರದೆ ಚಪ್ಪಾಳೆಯಾಗದು ಕುರುಡನು ತೋರಿಸುವುದೆಲ್ಲ ಮಾರ್ಗವಾಗದು ಕರಡಿಯು ಮೈಯಪರಚಲದು ಸೌಖ್ಯವಾಗದು ಗುರುಗಳ ಬಿಟ್ಟೋದಲು ಉಪದೇಶವಾಗದು ಹರಿಯಭಕುತಿ ಹರಿಯದಿರಲು ಗಾನವಾಗದು ಬರಿಯ ಸ್ವರಗಳುರುಳಿಸೆ ಕೀರ್ತನೆಯದಾಗದು 180 ಕರದಿ ತಟ್ಟೆ ಹೊಳೆಯುಂತಿರೆ ಪುರಾಣವಾಗದು ಕಿರಿಯ ಜನರ ಗುಣಗಾನವು ಭಜನೆಯಾಗದು ಅಕ್ಕಿಗಾಗಿ ಅಲೆವರೆಲ್ಲ ದಾಸರಾಗರು ಬೆಕ್ಕಿನಂತೆ ಕಣ್ಣು ಮುಚ್ಚಿ ಯತಿಗಳಾಗರು ಚಿಕ್ಕ ಜಿರಳೆ ಮೀಸೆಯಿರಲು ರಾಯರಾಗದು ಚಿಕ್ಕ ಕೊಳೆಯ ಚೌಕ ಧರಿಸೆ ಮಡಿಯದಾಗದು ಕದ್ದು ಅವಿತುಕೊಂಬರೆಲ್ಲ ಗರತಿಯಾಗರು ಮದ್ದು ಮಾಟ ಮಾಡುವವರು ಸುದತಿಯಾಗರು ಶುದ್ಧ ಧೈರ್ಯ ನಡತೆಯಿಂದ ನಿಂದ್ಯರಾಗರು ಬುದ್ಧಿ ಬದುಕು ಹೇಳುವವರು ದ್ವೇಷಿಯಾಗರು 190 ರೀತಿ ನೀತಿಗಳನು ಪರಗೆ ಹೇಳಲು ಸುಲಭ ಮಾತನಾಡಿದಂತೆ ಮಾಡಿ ತೋರುವರಿಹರೇ ತಾತನ ಕಾಲದಲ್ಲಿ ನುಡಿದ ಮಾತಿದಲ್ಲವು ಹೋತನ ಗಳಸ್ತನವಿದಲ್ಲ ಕೂತು ಕೇಳರಿ ಗಾದೆಗಳನು ವೇದವೆಂದು ಪೇಳಲುಚಿತವು ಮಾದರಿ ಅಣುಶಕ್ತಿಯಿಂದೆ ಗಾದೆ ಗಾದೆಗು ಪರಮ ಭಾಗವತರ ಚರಿತೆಯೋದಿ ನೋಡಿರಿ ಅರಿಯಬಹುದು ನುಡಿದ ನೀತಿಸಾರವೆಲ್ಲವ ನಾಡುನುಡಿಗಳೆಂದು ಮರೆಯಬೇಡವೆಂದಿಗು ಪಾಡಿದರೆ ಪ್ರಸನ್ನ ಹರಿಯು ನೀಡುವ ಫಲವ 200
--------------
ವಿದ್ಯಾಪ್ರಸನ್ನತೀರ್ಥರು
ಹುಚ್ಚುಗೊಳಿಸುವರೆ ಮರುಳೆ ತರುಳಾರ ಅಚ್ಚುತ ಪರಮ ಗಂಭೀರ ಪುರುಷನೆ ಪ ಎಲ್ಲವು ಬಯಸುವ ಹಟದಿ ಶಿಸುವಿಗೆ ಬೆಲ್ಲವ ತೋರಿಸಿ ನಿಲುದಿಪ್ಪೋದು1 ಮಿನುಗುವ ಮಣಿತೋರೆ ತನು ಬೆವರೆ ಪೋಗೆ ಕನಡಿಭಾನಿಂದುದಕ ಕೆಳಗೊಳಿಸುವರೆ 2 ಕಪ್ಪು ವಸ್ತ್ರವ ಕಂಡು ನಡುಗುವಂಗೆ ಕಪ್ಪ ಕಲ್ಪಿಸೆ ಅಪ್ಪಾ ಎನ್ನೆ ಅಪ್ಪಿ ನಗಿಸುವರೆ 3 ನಗುವ ಕೂಸಿನ ಅಳಿಸಿ ಮುದ್ದಾಡಿ ನಗುಸುವೀ ನೀನು ಬಗೆ ಬಗೆಯಿಂದ 4 ಪರಿ ಮಾಡದಿದ್ದರೆ ವಾಸು ಕಾಲ ಕಳೆವದೆಂತೊ 5
--------------
ವ್ಯಾಸತತ್ವಜ್ಞದಾಸರು
ಈಗಲುಪ್ಪವಡಿಸಿದಳು ಇಂದಿರಾದೇವಿಯೋಗರತಿ ನಿದ್ರೆ ತಿಳಿದು ಪಕಡೆಗಣ್ಣಕಪ್ಪಅಂಗೈಯಿಂದಲೊರಸುತಸಡಲಿದ ತುರುಬ ಬಿಗಿದು ಕಟ್ಟುತ ||ನಡುವಿನೊಡ್ಯಾಣವ ನಟನೆಯಿಂ ತಿರುವುತಕಡುಕ ಕಂಕಣ ಬಳೆ ಕರದಿ ಘಲ್ಲೆನುತ 1ಕೂರುಗುರ ಗಾಯವನು ಕೊನೆ ಬೆರಳಲೊತ್ತುತಹಾರದ ತೊಡಕನು ಬಿಚ್ಚಿ ಹಾಕುತ ||ಜಾರಿದ ಜಾಜಿದಂಡೆ ಸರವನೀಡಾಡುತಮೋರೆಯ ಕಿರುಬೆವರ ಮುಂಜೆರಗಿಲೊರಸುತ 2ರಕ್ಕಸ ಕುಚದೊಳಿರ್ದ ಕಸ್ತುರಿಯನೊರಸುತಚಕ್ಕನೆ ಕನ್ನಡಿಯೊಳು ಮುಖ ನೋಡುತ ||ಅಕ್ಕರದ ತಾಂಬೂಲ ಸರಸದಿಂದುಗುಳುತಚೊಕ್ಕಪುರಂದರವಿಠಲ ನೋಡಿ ನಗುತ3
--------------
ಪುರಂದರದಾಸರು
ಎರೆದು ಪೀತಾಂಬರÀವನುಡಿಸಿದಳಾಗವರಗೋಪಿಯು ಬೇಗಪಮುರುಳಿಯನೂದುತ ಪರಿಪರಿ ಗೆಳೆಯರುಪರಮಾತ್ಮನೆ ನಿನ್ನರಸುತಲಿಹರೆಂದು ಅಪಗುರುಳು ಕೂದಲು ಮುಖದಲ್ಲಿ ಹೊಸ ಬೆವರುಥಳಥಳಿಸುತಲಿಹುದುಎಳೆಯ ಶ್ರೀ ತುಳಸಿಯ ವನಮಾಲೆಗಳುಗಳದಲಿ ಶೋಭಿಪುದುಅರಳು ಮಲ್ಲಿಗೆ ಪುಷ್ಪದ ಹಾರಗಳುಮುತ್ತಿನ ಪದಕಗಳುಕೊರಳೊಳು ಮುತ್ತಿನ ಸರಗಳಿಂದೊಪ್ಪುತಮುರುಳಿಯ ನೂದುತ ಸರಸರ ಬಾರೆಂದು 1ಗುರುಳು ಕೂದಲೊಳೊಪ್ಪುವ ಅರಳೆಲೆಯುಸೊಗಸಿನ ನವಿಲ್ಗರಿಯುಬಿಗಿದು ಸುತ್ತಿದ ಸಿರದಲಿ ಕೇಶಗಳುಅತಿ ಶೋಭಿಸುತಿಹವುಚದುರಿದ ಕೇಶದಿ ಕೆಂದೂಳಿಗಳುಮಧುವೈರಿಯ ಕೇಳುವಿಧವಿಧ ರಾಗದಿ ಪಾಡುತ ನಿನ್ನನುಸದನದಿ ಪೂಜಿಸಿ ನೋಡುವೆ ಬಾರೆಂದು 2ನೊಸಲಲ್ಲಿ ಕುಡಿನಾಮವನಿಟ್ಟಿಹಳುನೋಡುತ ಹಿಗ್ಗುವಳುಎಸಳು ಕಣ್ಣಿಗೆ ಕಪ್ಪನೆ ತೀಡುವಳುಬಣ್ಣಿಸಿ ಕರೆಯುವಳುಎಸೆವೊ ಕರ್ಣಕೆ ನೀಲದ ಬಾವುಲಿಯೂರತ್ನದ ಚೌಕಳಿಯುಬಿಸುಜನಾಭ ನಿನ್ನ ಶಶಿಮುಖಿಯರುಗಳುರಸಕಸಿ ಮಾಳ್ಪರು ಹಸನಾಗಿ ಕೂಡೆಂದು 3ಅರಳುಕೆಂದಾವರೆ ಪೋಲುವಚರಣಸ್ಮರಿಸುವರಘಹರಣಸುರರುಕಿನ್ನರರೋಲೈಸುವಚರಣವರಸುಗುಣಾಭರಣಘಲುಘಲುಘಲುರೆಂದೊಪ್ಪುವಚರಣಸಜ್ಜನರಾಭರಣಅಡಿಯಿಡುತಲಿ ಬಾ ಮೃಡಸಖ ನಿನ್ನಯಅಡಿಗೆರಗುವರೈ ತಡೆಯದೆ ಬಾರೆಂದು 4ವರಹಸ್ತದಿ ಬೆಣ್ಣೆಯ ಮುದ್ದೆಯ ಕೊಡುವೆಬಾರೆನ್ನಯ ದೊರೆಯೆಜರದೊಲ್ಲಿಯ ಮುರಳಿಸಹಿತ ನಡುವಿಗೆ ಕಟ್ಟುವೆನುಬಾ ಭಕುತರ ಪೊರೆಯೆಉಗುರಿಂದ ಗಿರಿಯನು ಎತ್ತಿದ ಧಣಿಯೆಸುರಚಿಂತಾಮಣಿಯೆಹಗಲು ಇರಳು ನಿನ್ನಗಲಿರಲಾರೆ ಶ್ರೀ-ಕಮಲನಾಭವಿಠ್ಠಲ ಬೇಗಬಾರೆಂದು 5
--------------
ನಿಡಗುರುಕಿ ಜೀವೂಬಾಯಿ
ಏಕೆ ಮಲಗಿಹೆ ಹರಿಯೆಏಸುಆಯಾಸತಮನೊಡನೆ ಹೋರಾಡಿ ತಪಿಸಿ ಮೈ ಬೆವರಿತೊಆಕಾಶ ಭೇದಿಸಲು ಆ ಕಾಲು ಉಳುಕಿತೊಚಪಲೆಯರ ಮೋಹಿಸಲು ಉಪಟಳವು ಬಹಳಾಯ್ತೊ
--------------
ಗೋಪಾಲದಾಸರು