ಒಟ್ಟು 28 ಕಡೆಗಳಲ್ಲಿ , 14 ದಾಸರು , 24 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರೋ ಮನೆಗೆ ಗೋವಿಂದ ನಿನ್ನಂಘ್ರಿ ಕಮಲವತೋರೋ ಎನಗೆ ಮುಕುಂದ ನಲಿದಾಡು ಮನದಲಿಮಾರಪಿತ ಆನಂದನಂದನ್ನ ಕಂದ ಪ ಭವ ಘೋರ ನಾಶನವಾರಿಜಾಸನ ವಂದ್ಯ ನೀರಜಸಾರ ಸದ್ಗುಣ ಹೇ ರÀಮಾಪತೆ ಅ.ಪ. ನೋಡೋ ದಯದಿಂದೆನ್ನ-ಕರಪದುಮ ಶಿರದಲಿನೀಡೋ ಭಕ್ತಪ್ರಸನ್ನ-ನಲಿದಾಡೊ ಮನದಲಿಬೇಡಿಕೊಂಬೆನೊ ನಿನ್ನ-ಆನಂದ ಘನ್ನಮಾಡದಿರು ಅನುಮಾನವನು ಕೊಂ -ಡಾಡುವೆನು ತವ ಪಾದಮಹಿಮೆಗಳನುಜೋಡಿಸುವೆ ಕರಗಳನು ಚರಣಕೆಕೂಡಿಸೊ ತವ ದಾಸಜನರೊಳು 1 ಹೇಸಿ ವಿಷಯಗಳಲ್ಲಿ-ತೊಳಲ್ಯಾಡಿ ನಾ ಬಲುಕ್ಲೇಶ ಪಡುವುದು ಬಲ್ಲಿ-ಘನಯುವತಿಯರ ಸುಖಲೇಸು ಎಂಬುದನ್ನು ಕೊಲ್ಲಿ-ಆಸೆ ಬಿಡಿಸಿಲ್ಲಿಏಸು ಜನುಮದ ದೋಷದಿಂದಲಿಈಸುವೆನು ಇದರೊಳಗೆ-ಇಂದಿಗೆಮೋಸವಾಯಿತು ಆದುದಾಗಲಿಶ್ರೀಶ ನೀ ಕೈಪಿಡಿದು ರಕ್ಷಿಸು 2 ನೀನೆ ಗತಿಯೆನಗಿಂದು ಉದ್ಧರಿಸೊ ಬ್ಯಾಗನೆದೀನ ಜನರಿಗೆ ಬಂಧು-ನಾ ನಿನ್ನ ಸೇವಕಶ್ರೀನಿವಾಸ ಎಂದೆಂದು-ಕಾರುಣ್ಯ ಸಿಂಧುಪ್ರಾಣಪತಿ ಹೃದಯಾಬ್ಜಮಂಟಪ-ಸ್ಥಾನದೊಳಗಭಿವ್ಯಾಪ್ತ ಚಿನುಮಯಧ್ಯಾನಗೋಚರನಾಗಿ ಕಣ್ಣಿಗೆಕಾಣಿಸುವೆ ಶ್ರೀರಂಗವಿಠಲ 3
--------------
ಶ್ರೀಪಾದರಾಜರು
ಬಿಡುಮನವೆ ಬಿಡದಿಹ್ಯ ಸಂಸಾರ ಪಡಕೊಂಬುದು ಮಾಡು ನೀ ಸುವಿಚಾರ 1 ವಿಚಾರದೊಳಗದ ಬಲು ವಿವೇಕ ಸೂಚಿಸಿಬಾಹುದು ಸ್ವಾತ್ಮದ ಸುಖ2 ಸ್ವಾತ್ಮದ ಸುಖ ತಿಳಿದವ ಸ್ವತ:ಸಿದ್ಧ ಮತ್ತೆಲ್ಲಿಹದವಗೆ ಭವಬಂಧ 3 ಭವಬಂಧವ ತಿಳಿಯಲುಪಾಯ ಭುವನದಲ್ಯದ ಶುಕನಳಿಕನ್ಯಾಯಾ 4 ನ್ಯಾಯವ ತಿಳಿದರೆ ನೋಯವನೆಂದು ಶ್ರಯ ತಿಳಿಯಲು ತಾ ಬಂಧು 5 ಬಂಧು ಹಗೆಯು ತನಗೆ ತಾಯೆಂದು ಸಂಧಿಸಿ ಪಾರ್ಥಗ್ಹೇಳಿದ ಹರಿ ಬಂದು 6 ಹರಿವಾಕ್ಯವೆ ಗುರುಗುಹ್ಯದ ಗುಟ್ಟು ಪರಮಾನಂದದ ಹೆಜ್ಜೆಯ ಮೆಟ್ಟು 7 ಹೆಜ್ಜೆಲೆ ನಡೆವನು ಕೋಟಿಗೊಬ್ಬವನು ಸಜ್ಜನ ಶಿರೋಮಣೆನಿಸಿಕೊಂಬುನು 8 ಶಿರೋಮಣೆನಿಕೊಂಬುದು ಗುರುಕರುಣ ಗುರುಚರಣಕೆ ಬ್ಯಾಗನೆಯಾಗು ಶರಣು 9 ಶರಣ ಹೊಕ್ಕವಗೆಲ್ಲಿಹುದು ಮರಣ ಮರಣಕ ಮರಣವ ತಂದವ ಜಾಣ 10 ಜಾಣನೆ ಜನ್ಮರಹಿತ ವಾದವನು ಜನವನ ಸಕಲ ಸಮವಗಂಡವನು 11 ಸಮಗಂಡವಗಳದಿಹ್ಯ ಶ್ರಮವೆಲ್ಲಾ ರಾಮ ವಸಿಷ್ಠರೊಳಾಡಿದ ಸೊಲ್ಲ 12 ಸೊಲ್ಲಿಗೆ ಮುಟ್ಟಿದವ ಪ್ರತಿಯಿಲ್ಲ ಎಲ್ಲರೊಳಗ ವಂದಾದವ ಬಲ್ಲ 13 ಬಲ್ಲವನೆ ಬಲ್ಲನು ಬಯಲಾಟ ಎಲ್ಲರಿಗಿದೆ ಅಗಮ್ಯದ ನೋಟ 14 ನೋಟಕ ನೀಟ ಮಾಡಿದವನು ಧನ್ಯ ನೀಟಿಲೆ ನಡೆದವ ಕೋಟಿಗೆ ಮಾನ್ಯ 15 ಕೋಟಿಗೆ ಒಬ್ಬನು ತತ್ವಜ್ಞಾನಿ ನೋಟವಗಂಡಿಹ್ಯ ಮಹಾ ಸುಜ್ಞಾನಿ 16 ಸುಜ್ಞಾನಿಗೆ ಘನಮಯ ಸುಕಾಲ ಸುಗಮ ಸುಪಥವಾಗಿಹುದನುಕೂಲ 17 ಅನುಕೂಲದ ನಿಜ ಮಾತನೆ ಕೇಳು ಅನುದಿನ ಘನಗುರು ಸೇವಿಲೆ ಬಾಳು 18 ಪರಿ ಲೇಸು ಕಳೆವುದು ಮಿಕ್ಕಿನ ಭ್ರಾಂತಿಯ ಸೋಸು 19 ಸೋಸ್ಹಿಡಿದರ ಇದೊಂದೇ ಸಾಕು ವೇಷವದೋರುವದ್ಯಾತಕೆ ಬೇಕು 20 ಬೇಕೆಂಬ ಬಯಕೆಯ ಈಡ್ಯಾಡು ಸೋಕಿ ಶ್ರೀ ಸದ್ಗುರು ಪಾದದಿ ಕೂಡು 21 ಪಡೆವುದಿದೇ ಸ್ವಸುಖ ಸಾಧನ 22
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭೃಂಗ ಕುಂತಳೆಯರು ಮುಯ್ಯ ತಂದಾರೆಂದು ಪ. ಅಂದದ ವಸ್ತವಧರಿಸಿ ದೂತೆ ಚಂದದ ಸೀರೆ ಶೃಂಗರಿಸಿಇಂದಿರೇಶಗೆ ನಮಸ್ಕರಿಸಿತಾನು ಬಂದಾಳೆ ದ್ರೌಪತಿ ಸ್ಮರಿಸಿ 1 ಬಾಗಿಲಿಗೆ ಬಂದಾಳು ನೋಡಿದ್ವಾರಪಾಲಕಗೆ ಉಚಿತವ ಹೇಳಿಹೊನ್ನುಂಗುರಆತಗೆ ನೀಡಿಒಳಗೆ ಪೋದಳು ಹರಿಯ ಕೊಂಡಾಡಿ2 ವಂದಿಸಿ ಯದುನಾಥನಢಿಗೆಮಂದಹಾಸವ ಬೀರಿದೂತೆಯಡೆಗೆಬಂದಾರೈವರೆಂಬೊ ನುಡಿಗೆಆನಂದ ಬಟ್ಟ ಕೃಷ್ಣ ಬ್ಯಾಗನೆ3 ವೇಗದಿ ರುಕ್ಮಿಣಿಗೆಬಾಗಿ ಸುದ್ದಿ ಹೇಳಿ ಮುಯ್ಯದ ಬಗಿ ಬಗಿನಾಗವೇಣಿಯು ಹರುಷಾಗಿಕರೆಯ ಬರತೇವಂತ್ಹೇಳೆ ಹೋಗಿ4 ಪುತ್ಥಳಿ ಮನಕೆ ತಾರೆಂದು 5 ಗುರ್ತು ಹೇಳುವೆ ಕೇಳೊ ದೊರೆಯೆ ಕೃಷ್ಣಚರ್ಚೆ ಮಾತಿನ ಚಮತ್ಕಾರಿಯೆಶೃತ್ಯರ್ಥದಾ ಮಳೆಗರಿಯೆಪ್ರತಿಯುತ್ತರವಕೊಡೋದು ಮರಿಯೆ 6 ಕೋಕಿಲ ಸ್ವರದಂತೆ ಅಳಕು ಹರುಷಾಗಿರಾಮೇಶಗ್ಹಾಕಿ ಮಲಕುಆಗಮಾ ತರತಾಳೆ ಮಲಕುಎಲ್ಲಾ ನಾರಿಯರು ಅಕೆಗೆ ಅಳಕು 7
--------------
ಗಲಗಲಿಅವ್ವನವರು
ಮರೆಯದೆ ಸಲಹೆನ್ನನು ಯಾದವಗಿರಿ- ದೊರೆ ಮಂಗರಾಯ ನೀನು ಸರ್ವಜೀವೋತ್ತಮನೆ ನಿನ್ನನು ಮರೆಯಹೊಕ್ಕೆನು ಮಾರುತಾತ್ಮಜ ಕರೆದು ಭಕÀುತರಿಗ್ವರವ ನೀಡುವೊ ಭಾರತೀಶ ಪ ಸೀತಾವಲ್ಲಭ ರಾಮರ ಪಾದಾಂಬುಜ ದೂತನೆಂದೆನಿಸಿದೆಯೊ ಮಾತೆಗಿಟ್ಟ ಮುದ್ರಿಕೆಯನು ಘಾತಕ ರಾವಣನ ಪುರಕೆ ಕಾರ್ತೀಕದುತ್ಸವ ಮಾಡಿ ಮಂಗ- ಳಾರ್ತಿ ಬೆಳಗಿದೆ ಬಾಲದಿಂದ 1 ಬಕ ಹಿಡಿಂಬಕ ಕೀಚಕ ಕಿಮ್ಮೀರ ಮಾಗಧ ಮುಖ್ಯ ಪ್ರಮುಖರನು ಸಕಲ ಅನುಜರ ಸಹಿತ ದುರ್ಯೋಧನನ ಪ್ರಾಣವ ಸೆಳೆದÀು ಬ್ಯಾಗನೆ ನಕುಲ ಧರ್ಮಜನಾ ಸಾದೇವ ದ್ರೌಪದಿಗೆ ಸುಖ ಸಂತೋಷ ನೀಡಿದೆ 2 ಮಧ್ಯಗೇಹರಲ್ಲಿ ಜನಿಸಿ ಸುಜನರಿಗೆ ಶುದ್ಧಶಾಸ್ತ್ರವ ಬೋಧಿಸಿ ಗೆದÀ್ದು ಮಾಯಾವಾದಿಗಳ ವಾದಪ್ರ- ಸಿದ್ಧನೆನಿಸಿದೆ ಮಧ್ವಮುನಿ ಮುದ್ದು ಭೀಮೇಶಕೃಷ್ಣನ ಪ್ರ- ಸಿದ್ಧಿ ಮಾಡಿದೆ ಪರಮ ಗುರುವೆ 3
--------------
ಹರಪನಹಳ್ಳಿಭೀಮವ್ವ
ಮರೆವಾರೆ ಎನ್ನ ರಾಘವೇಂದ್ರ ಗುರುವೆ ಸಂಪನ್ನ ಕರೆದು ಕಾಮಿತಗಳ ಕರವೆ ನಾ ನಿನಗೆಂದು ಪ ದಾರಿಯ ತಪ್ಪಿ ಪೋಗುವ ಧೀರ ಫೋರನ್ನ ದಾರಿಯ ಪಿಡಿಸಿನ್ನು ಪುರವನ್ನೆ ತೋರಿಸೆ ಊರಿನವೊಳಗೆ ಅವನ ಆಗಾ ದೂರ ನೋಡುವರೆ ದೋಷಗಳ ವಿಚಾರಮಾಡುವರೆ ಧೀರರು ಆವ ಪರಿಯಲವನ ಪಾರಗಾಣಿಪರಲ್ಲದೆ 1 ಹಸಿದು ಪರರ ಕೇಳದ ದ್ವಿಜವರಿಯನ್ನ ಶಿಶುವಿನ ನೋಡಿ ದಯದಿಂದ ಕರದಿನ್ನು ಹಸಿದ್ಯಾಕೊ ಎಂದು ಪಾಕವ ಮಾಡಿ ಹಸನಾಗಿ ತಂದು ಬಡಿಸುವ ಅವಸರದಿ ನಿಂದು,ಅವನ ದೋಷ ಪಸರಿಸಿ ಉಣಿಸಿದ ಜನರುಂಟೆ ಧರೆಯೊಳು 2 ಜಲಪಾನಾತುರನಾಗಿ ಜಲವ ಕೇಳಿದ ವಿಪ್ರ- ಕುಲ ತರಳನನು ನೋಡಿ ಕೃಪೆಯಿಂದ ಸುರನದಿ ಜಲವನೀವೆನೆಂದು ಬ್ಯಾಗನೆ ದಿವ್ಯ ಕಲಶವ ತಂದು ಬಾರೆಲೊ ಬಲು ಆಲಸ್ಯವ್ಯಾಕೆಂದು ನಿನ್ನಯ ಪಂಕ ತೊಳಿಯ ಕೊಡುವೆನೆಂದು ತಡವ ಮಾಡುವರೆ 3 ಸುಶರೀರ ತನುವನು ಮನದಲಿ ಬಯಸಿ ತಾ ಉಸರದ ಮುನಿತನಯನ ಕಂಡು ತಾವಾಗಿ ಕುಶಲವ ಕೇಳಿ, ದೇವತ ವೈದ್ಯ ಅಸಮರೆಂದೇಳಿ, ರಸ ಮಾಡೆಂದೇಳಿ, ಅವಗೆ ದಿವ್ಯ ರಸವನು ಪೇಳಿ, ಪಸಿ ನಿನ್ನಲಿದ್ದಾ ಕಿಸರು ಪೋದರೆ ಕೊಡುವೆವೆಂದು ನಿಲುವರೆ 4 ಅರ್ತಿಯ ಭಕುತನ್ನ ನೋಡೀಗ ನಿನ ದಿವ್ಯ ಕೀರ್ತಿಯ ನೋಡಿಕೊ, ವಾಸುದೇವವಿಠಲನ ಮೂರ್ತಿಯ ಭಜಕ ಭಕ್ತರಾಭೀಷ್ಟ ಪೂರ್ತಿಗೆ ಜನಕ ನಿನ್ನಯ ಗುಣ ಸ್ಫೂರ್ತಿಗೆ ಜನಕ, ನಿನ್ನಯ ಗುಣ ಸ್ಫೂರ್ತಿ ಉಳ್ಳನಕ ಪಾಪದ ಲೇಶ ವಾರ್ತಿ ಎನಗೆ ಇಲ್ಲವೆಂದು ನಿಶ್ಚೈಸಿದೆ 5
--------------
ವ್ಯಾಸತತ್ವಜ್ಞದಾಸರು
ಯಮ ತನ್ನ ಪುರದಿ ಸಾರಿದನು ಎಮ್ಮ ಕಮಲನಾಭನ ದಾಸರ ಮುಟ್ಟದಿರಿಯೆಂದು ಪ. ಭುಜದಲೊತ್ತಿದ ಶಂಖಚಕ್ರಾಂಕಿತವನ್ನು ನಿಜ ದ್ವಾದಶನಾಮ ಧರಿಸಿಪ್ಪರಾ ತ್ರಿಜಗವಂದಿತ ತುಲಸಿಯ ಮಾಲೆ ಹಾಕಿದ ಸುಜನರಂಗಣವ ಪೊಗದೆ ಬನ್ನಿರೆಂದು 1 ಗೋಪಿಚಂದನ ಬಿಟ್ಟು ದೇಹಕ್ಕೆ ಭಸ್ಮವ ಲೇಪಿಸಿ ಹರಿಹರರೊಂದೆಂಬ ಪಾಪಿಗಾಳೆಳತಂದು ಕಣ್ಣು ಕಳಚಿ ಅಂಧ ತಾಮಸಿನೊಳಗ್ಹಾಕಿ ಕಲ್ಲು ದಬ್ಬಿರೊ ಎಂದು 2 ತಾಳದಂಡಿಗೆ ನೃತ್ಯಗೀತ ಸಮ್ಮೇಳದಿ ಊಳಿಗವನು ಮಾಳ್ಪ ಹರಿದಾಸರ ಕೇಳುತಲೊಮ್ಮೆ ಕರಗಳ ಮುಗಿದು ನ - ಮ್ಮಾಳುಗಳೆನುತ ಪೇಳದೆ ಬನ್ನಿರೆಂದು 3 ಗುರುಮುದ್ರೆಯವನು ತಾನೆಂದು ಪ್ರಾಣಿಗಳ ಮಂ- ದಿರಕೆ ಪೋಗಿ ಪೋಗಿ ನಿರ್ಬಂಧಿಸಿ ಬರಿದೆ ಬೈದು ಬಳಲಿಸುವ ಪಾಪಿಗಳ ಕೊರೆದು ಕುಟ್ಟಿತಂದು ಮುರಿದು ಕೊಲ್ಲಿರೊ ಎಂದು 4 ಅನ್ಯದೈವ ಅನ್ಯಮಂತ್ರ ತಂತ್ರವ ಬಿಟ್ಟು ಪನ್ನಗಶಯನನೆ ಗತಿಯೆನುತ ಉನ್ನತ ಹರಿದಿನ ವ್ರತವನಾಚರಿಪ ಪ್ರ- ಸನ್ನರ ಗುಣವ ಕೆಣಕದೆ ಬನ್ನಿರೆಂದು 5 ಚರ್ಮಕ್ಕೆ ಸಿಡಿ ಊರಿ ಬೇವಿನುಡುಗೆವುಟ್ಟು ಚಿಮ್ಮುತ ಚೀರುತ ಬೊಬ್ಬೆಗಳಿಡುತ ಕರ್ಮ ಕೂಗುರಿಯಾಗಿ ಪ್ರಾಣಹಿಂಸೆಯ ಮಾಳ್ಪ ಬ್ರಹ್ಮೇತಿಕೋರನ ಬ್ಯಾಗನೆ ಎಳತನ್ನಿ 6 ಕೇಶವ ಹರಿ ಅಚಲಾನಂದವಿಠಲನ್ನ ಶೇಷಗಿರಿಯ ತಿರುಮಲೇಶನ ದಾಸರ ದಾಸರ ದಾಸನೆಂದೆನಿಸುವ ದಾಸರ ಗುಣವ ಕೆಣಕದೆ ಬನ್ನಿರಿ ಎಂದು 7
--------------
ಅಚಲಾನಂದದಾಸ
ರಘುರಾಮರ ಪಾದವ ಹಿಡೀ ಹಿಡಿ ಪ ಕಾಮ ಕ್ರೋಧ ಮದ ಮತ್ಸರಗಳೆಂಬೋ ದುರಿತವ ಬ್ಯಾಗನೆ ಹೊಡಿ ಹೊಡಿ 1 ಹೆಣ್ಣು ಹೊನ್ನು ಮಣ್ಣು ಮೂರರಾಶೆಯ ಮಾಡಿದೆ ಅದರೊಳಗೇನಿದೆ ಹುಡಿ ಹುಡೀ 2 ಶ್ರೀದವಿಠಲನ ಪಾದಸ್ಮರಣೆಯ ಮರೆಯದೆ ಬೇಗನೆ ನುಡಿ ನುಡೀ3
--------------
ಶ್ರೀದವಿಠಲರು
ಸುಳಾದಿ ಧ್ರುವತಾಳ ಶ್ರೀನಿವಾಸನೆ ನೀನು ಬ್ಯಾಗನೆ ಬಂದು ಸಾನುರಾಗದಿ ಸಂಸಾರ ಬಿಡಿಸೋ ಭಾನುಕೋಟಿ ಪ್ರಕಾಶಭಾಗ್ಯನಿಧಿಯೆನ್ನ ಮಾನವ ಕಾಯ್ವುದು ಮಂಗಳಾಂಗನೆ ಏನೇನು ಕಾರ್ಯಗಳು ನಿನ್ನಾಧೀನವಾಗಿರಲು ನಾನುನನ್ನದು ಎಂದು ಮಮತೆಯನೆ ಕೊಟ್ಟು ಅನ್ಯಾಯದಿಂದ ಎನ್ನzಣಿಸುವುದು ದಾನವಾಂತಕರಂಗ ಮುದ್ದುಮೋಹನವಿಠಲ ನೀನೆಗತಿಯೆಂದವಗೆ ನಿರ್ಭಯವೊ ಹರಿಯೆ 1 ಮಠ್ಯತಾಳ ಎನ್ನಪರಾಧಗಳು ಅನಂತವಿರುವದನ್ನು ನಿನ್ನಸ್ಮರಣೆ ಒಂದೆ ಸಾಕೊ ಹರಿಯೆ ಬನ್ನ ಬಡಿಸುವದ್ಯಾಕೊ ಮನ್ಮನದಲಿಪೊಳೆದು ಚೆನ್ನಾಗಿ ಸಲಹೋಘನ್ನಮಹಿಮಾ ಮುದ್ದುಮೋಹನವಿಠಲನೇ 2 ತ್ರಿವಿಡಿತಾಳ ಬಿಂಬನೆನೆಸಿಕೊಂಡು ಪ್ರತಿಬಿಂಬಗಳೊಳಗೆಕಾರ್ಯ ಅಂಭ್ರಣಿಸಹಿತವಾಗಿ ನೀಮಾಡಿ ಮಾಡಿ ಸೂವಿ ಅಂಬುಜನಾಭಾನೆ ಎನ್ನಾಡಂಭಕ ಭಕುತಿ ಬಿಡಿಸಿ ಸಂಭ್ರಮದಿಂದ ಕಾಯೊ ಕರುಣಾನಿಧೆ ಶಂಬರಾರಿಯಜನಕ ಮುದ್ದುಮೋಹನವಿಠಲ ಕಂಬದಿಂದಲಿ ಬಂದು ಭಕುತನ್ನಸಲಹಿದ ದೇವ 3 ಅಟ್ಟತಾಳ ಏನೇನುದಾನ ಅನಂತ ಮಾಡಲೇನು ಕಾನನದಲಿ ಪೋಗಿ ತಿರುಗಿತಿರುಗಿದಂತೆ ಜ್ಞಾನದಿಂದಲಿ ತಾರತಮ್ಯಾನುಸಾರ ನಿನ್ನ ಧ್ಯಾನವನ್ನ ಒಂದು ಕ್ಷಣವಾದರೂತೋರಿಸೊ ವಾನರ ವಂದ್ಯ ಮುದ್ದುಮೋಹನವಿಠಲ ನಾನಾವಿಧದಿಂದ ನಂಬಿದೆನೊ ಹರಿಯೇ4 ಆದಿತಾಳ ನೀನೆ ಅನಾಥಬಂಧು ನೀನೆ ಅದ್ಭುತಮಹಿಮ ನೀನೆ ಅಸುರಾಂತಕ ನೀನೆ ಅಮರಾದಿವಂದ್ಯ ನೀನೆ ಭವರೋಗ ವೈದ್ಯ ನೀನೆ ಭಕ್ತವತ್ಸಲ ನೀನೆ ಪರಿಪೂರ್ಣ ಸುಖ ನೀನೆ ಪರಂಜ್ಯೋತಿ ನೀನೆ ಪರಬ್ರಹ್ಮ ನೀನೆ ಪುರುಷೋತ್ತಮ ನೀನೆ ಪುಣ್ಯೈಶ್ವರ್ಯ ನೀನೆ ನಿರ್ಮಲ ಜ್ಞಾನ ನೀನೆ ಶಶಿ ಕೋಟಿಲಾವಣ್ಯ ನೀನೆ ಮುದ್ದುಮೋಹನ ವಿಠಲ ನೀನೆ ವೇಗದಿ ಬಂದು ನೀನೆ ರಕ್ಷಿಸು ಎನ್ನನು 5 ಜೊತೆ ಸ್ವಾಮಿ ಪುಷ್ಕರಣಿವಾಸ ಕಾಮಿತಫಲದಾನೆ ಶ್ರೀಮನೋಹರ ನಮ್ಮ ಮುದ್ದುಮೋಹನ ವಿಠಲ
--------------
ಮುದ್ದುಮೋಹನವಿಠಲದಾಸರು
ಸೃಷ್ಟಿ ಕಾರಣ ದಯಾ ದೃಷ್ಟಿಯಲಿ ನೋಡೆನ್ನ ಘಟ್ಟಿಗನೆನಬೇಕೊ ಇಷ್ಟಿಲ್ಲ ಅಪರಾಧ ಪ ಇಷ್ಟವರನ ಬಂಧದೋಳೆನ್ನ ಸಿಲುಕಿಸಿ ದುಷ್ಟರೂ ಒಂದಾಗಿ ತಾವೆಲ್ಲ ಎನ್ನನೂ ಲಿಷ್ಟರೊಳು ನೀ ಕೇಳುವಂತೆ ಕೂಗಿದೆನಲ್ಲ 1 ನಿನ್ನ ಮಾತುಗಳಾಡಧ್ಹಾಂಗೆನ್ನ ಮಾಡಿಸಿ ಅನ್ಯವಾರುತಿಗಳು ಚನ್ನಾಗಿ ನುಡಿಸಲು ಅನ್ಯಾಯ ಬಂತೆಂದು ಅವರಂತೆ ನುಡಿದು ನಾ ಮನ್ನದೊಳಗೆ ಮೊರೆ ಇಟ್ಟದನರಿಯಾ 2 ಒಳಗೆ ಹೊರಗೆ ತುಂಬಿಕೊಂಡಿಹರು ಬಹಳ ಖಳರು ಅವರು ದೇಶ ಕಾಲವಯ್ಯ ಬಳಿಯಲಿ ನಿನ್ನವರು ಗೂಢ ವೇಷದಿ ತಾವು ಸುಳಿಯಲು ಅವರನ್ನು ಗುರುತು ಮಾಡಿದೆನಯ್ಯ 3 ಈಗಲೂ ನಿನ್ನ ಬಲಪವನನಾಗಮದಿಂದ ಬ್ಯಾಗನೆ ಖಳರನ್ನ ವರದು ಸವರಿಸೊ ಜಾಗರೂಕನಾಗಿ ಅದೇ ಪದ್ಧತಿ ಪಿಡಿದು ಸಾಗಿ ಬಂದೆನು ಕೇಳು ಎನ್ನಿಂದೇನಪರಾಧ4 ಲೇಸಾಗಿ ಬಲವಿತ್ತು ಎನ್ನನು ಕಳಿಸಲು ಆಸು ಅಸುರರನ್ನು ತರದೊಟ್ಟುವೆಯಾ ವಾಸುದೇವವಿಠಲ ನೀ ಕೈಯ್ಯ ಪಿಡಿದರೆ ಆ ಸುಕಾರ್ಯಕೆ ಬಾಹೆ ನೋಡೆನ್ನ ಶಕುತಿ5
--------------
ವ್ಯಾಸತತ್ವಜ್ಞದಾಸರು