ಒಟ್ಟು 63 ಕಡೆಗಳಲ್ಲಿ , 31 ದಾಸರು , 61 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗಿರಿಧರ ಗೋಪಾಲ | ಗಾನವಿಲೋಲ ಪ ವರನೀಲೋತ್ಪಲ ಶ್ಯಾಮಲ ಕೋಮಲ ಕರುಣಾಲವಾಲಾ ಗೋಪಾಲಬಾಲ ಅ.ಪ ಸಕಲ ಚರಾಚರ ಭರಿತ ಸುಖಂಕರ ಬಕಶಕಟಾಸುರನಿಕರ ಭಯಂಕರ ಶುಕಮೌನೀಶ್ವರನುತ ಕರುಣಾಕರ ಸುಕುಮಾರಾಂಗ ರಾಜಿತ ಮಾಂಗಿರಿವರ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಗಿರಿಶಾ ಗೌರೀಪ್ರಾಣಾಧೀಶ ಜಯ ಜಯದುರಿತ 'ನಾಶ ಮಹೇಶ ಪದಕ್ಷಯಜ್ಞ 'ಧ್ವಂಸಕಾರಿ ಸುರಪಕ್ಷಪಾತಿ ಕಾಮಾರಿ ದುಃಖಹರ 1ಘೋರಪಾಪ ಸಂದೋಹನಾಶನಭೂರಿ ದಯಾಳೋ ಭೋಗಿಭೂಷಣ 2ಈಶಗಿರೀಶ ಧನೇಶ್ವರ 'ುತ್ರಕಾಶೀಶ್ವರ ಸುರಸನ್ನುತಿ ಪಾತ್ರ 3ವಾಸವಾದಿನುತ ದುಷ್ಟಭಯಂಕರವೇಷ ಜಟಾಧರ ಚಂದ್ರಶೇಖರ 4ಕಲಭಪ್ರೌಢ ಮಹಾನಾಟ್ಯೇಶ್ವರಆ'ಮುಕ್ತೇಶ್ವರ ಪ್ರಮಥ ಗಣೇಶ್ವರ 5ಕಾಳಿಂದೀಪ್ರಿಯ ಕಮಲನಯನಸಖಕಾಲಕಾಲ ಕಾಲಾಗ್ನಿ ಪಂಚಮುಖ 6ನೀಲಕಂಠ ನಿಖಿಲಾಮರ ರಕ್ಷಕಫಾಲಚಂದ್ರ ಸಂಸೃತಿ 'ಷಭಕ್ಷಕ 7ಶಾಂತಮೂರ್ತಿವರಕಾಂತಿ ಗುಣಪ್ರಿಯಶಾಂತಿದಾಯಕಾ ಶಾಂತ ಸಂಶಯ 8ಕುಂಭಜಾತ ನುತನಟನ'ಲಾಸಶಂಭು ಹರ ಚಿದಾಕಾಸ ನಿವಾಸ 9
--------------
ಹೊಸಕೆರೆ ಚಿದಂಬರಯ್ಯನವರು
ಜಯ ಜಯ ಶ್ರೀ ನರಕೇಸರಿ ಜಯ ಜಯ ಲೋಕೋಪಕಾರಿ ಜಯಜಯ ದೈತೇಯ ವೈರಿ ಜಯ ಜಯ ನೃಹರೀ ಪ ಜಯ ಜಯ ಜಯತು ಹರಿಶೌರೀ ಜಯ ಜಯ ಜಯತು ಚಕ್ರಧಾರಿ ಕಶಿಪು ಸಂಹಾರಿ ಜಯ ಕಾರುಣ್ಯ ಲಹರೀ ಅ.ಪ ಯಾದವಾದ್ರಿ ನಿಲಯ ನೃಹರೀ ಖಾದ್ರಿನಗರವಾಸ ನೃಹರೀ ವೇದರೂಪ ನೃಹರೀ ಸಾವ ನಾದುರ್ಗವಾಸ ಧೀರ ನೃಹರೀ 1 ಭಾನುಕೋಟಿ ತೇಜ ನೃಹರೀ ದೀನ ಭಕ್ತಪಾಲ ನೃಹರೀ ದಾನವಾರಿ ಯೋಗ ನೃಹರೀ [ಗಾನಲೋಲ ಹಂಪೀ ನೃಹರೀ] 2 ಸ್ಥಂಭಜಾತ ನಾರಸಿಂಹ [ಕನ್ನ ಡಾಂಬೆಯೂರೂರನಾರಸಿಂಹ ತುಂಬುರನುತ ನಾರಸಿಂಹ] ಶಂಭುವಿನುತ ನಾರಸಿಂಹ 3 ಶೀಬಿನಗರ ನಾರಸಿಂಹ ನಾಭಿಕಮಲ ನಾರಸಿಂಹ ಅಭಯಂಕರ ನಾರಸಿಂಹ ಪ್ರಭುಮಾಂಗಿರಿ ನಾರಸಿಂಹ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಜಯ ಜಯ ಸಕಲಾಧಾರಾ | ಕೃಷ್ಣ ಜಯ ಜಯ ಭಕ್ತೋದ್ಧಾರಾ ಜಯಸಕಲಾಲಂಕಾರಾ | ಕೃಷ್ಣಾ ಯಮುನಾ ವೇಗ ಸಂಹಾರಾ ಜಯ ಜಯ ನಂದಕುಮಾರಾ ಕೃಷ್ಣ ಜಯ ಜೀಮೂತ ಶರೀರಾ ಪ ದೇವಕೀಕುಮಾರಾ ನಿಗಮಗೋಚರಾ ಶಂಖಚಕ್ರಧರ ವಸುದೇವಾನಂದಕರ ಸುರುಚಿರ ಪೀತಾಂಬರಧರ 1 ನಯನ ಮನೋಹರ ಗೋಪೀ ಮಂದಿರ ಸರಸಿಜ ದುರುಳ ಭಯಂಕರ ಶಕಟ ಬಕಾಂತಕ ಶೂರಾ ಕೃಷ್ಣ ಪೂತನಿ ಸಂಹಾರಾ ಅಜ ಸುರ ಮುನಿ ಪರಿವಾರ2 ಧೇನುಕ ದೈತ್ಯವಿದಾರಾ | ಕೃಷ್ಣ ಮರಕತ ಮಣಿಮಯ ಹಾರಾ ತರುಣೀ ಮಣಿಗಣನಿಕರಾ | ಕೃಷ್ಣ ಸರಸಿಜಲಸದಾಕಾರಾ ನವನೀತಕರಾ ಘನ ಮುರಳೀಧರ | ಕುಂಜವಿಹಾರಾ ವಿಷಧರ ಭಯಹರ ಗೋವರ್ಧನಧರ | ಮುಷ್ಟಿಕ ಮಧುರಾ 3 ವಿಹಾರಾ | ಕೃಷ್ಣ ನಾದಾನಂದ ಪ್ರಚಾರಾ ಅಕ್ರೂರಾನತ ಚರಣಾ | ಕೃಷ್ಣ ಮುನಿಜನ ಹೃದಯಾಭರಣ ಕುಬ್ಜಾವಂದಿತ ಚರಣ | ಕೃಷ್ಣ ಘನಮಹಿಮಾ ವಿಸ್ತರಣ ಗೋಪೀಜನಗಣ ಮೌಢ್ಯನಿವಾರಣ 4 ದುರುಳ ವಿದಾರಣ | ಭವಜನಕರುಣ ಹಲಧರ ಭುಜಬಲ ಪ್ರಾಣಾ ಕೃಷ್ಣ ಬೃಂದಾರಕಗಣ ಪ್ರಾಣ 5 ಶಿಶುಪಾಲೋತ್ಸವ ಬಾಣಾ | ಕೃಷ್ಣ ರುಕ್ಮ ಲೋಭ ಮದ ಯಾಣಾ ಅರಿಕುಲ ಸೈನ್ಯ ಕೃಪಾಣಾ | ಕೃಷ್ಣ ಚತುರೋಪಾಯ ಪ್ರವೀಣಾ ರುಕ್ಮಿಣೀರಮಣ ಶುಭಕರಕಂಕಣ ಪಾಂಡವಪೋಷಣ ಹರಣ ಚಕ್ರವಿಭೂಷಣ6 ದ್ರುಪದಸುತಾನತಚರಣಾ | ಕೃಷ್ಣ ಪರಮಾನಂದಾವರಣ ವಿದುರಾನತ ನೀಲಾಂಗ | ಕೃಷ್ಣ ಕರಧೃತವ್ಯರಥಾಂಗ ಕುರುಕುಲ ವನ ಸಾರಾಂಗಾ | ಕೃಷ್ಣ ಗೀತಾವನಜತರಂಗಾ ಕಮಲಾ ಅಂಗ | ಸತ್ವ ತುರಂಗಾ | ಧರ್ಮವಿಹಂಗಾ 7 ಮಾಂಗಿರಿ ರಂಗ ಸುಧಾಂಗಾ ಶುಭಾಂಗ | ಜಯ ಜಯ ಮಾಂಗಿರಿ ರಂಗಾ | ಕೃಷ್ಣ ಜಯ ಜಯ ಗರುಡ ತುರಂಗಾ 8
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಜಯದೇವಿ ಜಯದೇವಿ ಜಯ ಬಗಳಾಮುಖಿಯೇಜಯವೆಂದು ಬೆಳಗುವೆನು ಜಯಭಕ್ತ ಸಖಿಯೇ ಪ ನಿತ್ಯ ಪೀತೋಪಚರಣೆಪೀತಕುಂಡಲ ಹಾರಪೀತ ವರ್ಗಾವರಣೆಪೀತಮೂರ್ತಿಯ ನೆನೆವೆ ಪೀತ ಪ್ರಿಯೆ ಸ್ಮರಣೆ 1 ಬತ್ತೀಸಾಯುಧ ಪಿಡಿದೆ ಭಯಂಕರಿ ಉಗ್ರೇಶತ್ರುನಾಶಕಿ ನೀನು ಭಕುತ ಸಾಹಸ್ರೇಮತ್ತೆ ಹುಡುಕುತ್ತಿರುವೆ ದುಷ್ಟರನು ಶೀಘ್ರೆನಿತ್ಯ ನಾ ಭಜಿಸುತಿಹೆ ಮನವ ಏಕಾಗ್ರೇ 2 ಬ್ರಹ್ಮ ಚಿದಾನಂದ ಬಗಳಾಮುಖಿ ರಾಣಿಹಮ್ಮಳಿದ ಮಹಿಮರಾ ಮೆಚ್ಚಿನ ಕಟ್ಟಾಣಿಬ್ರಹ್ಮರಂಧ್ರದೊಳು ವಾಸಿಸುತಿಹ ದಿನಮಣಿಬಿಮ್ಮನೆ ನಮಗೊಲಿಯೆ ಶೀಘ್ರದಿಂ ಕೃಪಾಣಿ 3
--------------
ಚಿದಾನಂದ ಅವಧೂತರು
ಜಯಮಂಗಳಂ ಶ್ರೀ ರಘುಕುಲಾಬ್ಧಿಚಂದ್ರ ಭವತು ತೇ ಶುಭಮಂಗಳಂ ಶ್ರೀರಘುಕುಲಾಬ್ದಿಚಂದ್ರ ಪ. ಸುರರಿಪುಶಮನ | ಕ್ಷೀರಶರಧಿಶಯನಾ ಕರಿವರನಮನ ಮುರಹರ ಶ್ರೀ | ಸುರವೈರಿಭಯಂಕರ ಮಾವರಶ್ರೀ | ಸರಸಿಜಾಕ್ಷ ಸಾಧುಪಕ್ಷ ದುರಳಶಿಕ್ಷ ಶ್ರೀಕಟಾಕ್ಷ 1 ಹರಣ ಭುವಿರ ಜಾರಮಣ ಭಯಹರ | ಪವನಾತ್ಮಜ ಕವಿಜನಾಳಿಪೂರ್ಣಕಾಮ 2 ದಾಸ ಹೃದಯಾವಾಸ | ದಶಶಿರಧ್ವಂಸ ಶಶಿನಿಭಹಾಸ | ದಶರಥಸುತ | ಶ್ರೀ ವಸುಮತೀಶ ಕುಲವಿಭೂಷ | ಶೇಷಶೈಲ ಶಿಖರಾವಾಸ ಜಯಮಂಗಳಂ3
--------------
ನಂಜನಗೂಡು ತಿರುಮಲಾಂಬಾ
ತುತಿಸಲೆನ್ನೊಶವೆ ನಿನ್ನ ಶ್ರೀ ಗುರುರನ್ನ ಪ ತುತಿಸಲೆನ್ನೊಶವೆ ನಿ -ನ್ನತುಳ ಮಹಿಮ ಮಹಾ ಮತಿವಂತ ಜನರು ಸು - ಮತಿಗೆ ಸಿಲ್ಕದ ನಿನ್ನ ಅ.ಪ ಸ್ಮರಿಪ ಜನರ ಸುರ ತರು ಪಾಪಕಾಂತಾರ ನರ ಸಮ ಸಜ್ಜನ | ಶರಜನಿಚಯ ದಿನ ಪಾದ | ಸರಸಿಜ ಭಜಿಸುವ ಪರಮ ಭಕ್ತರ ಕುಮುದ | ವರ ನಿಚಯಕೆ ಸುಧಾ - ಪರಮ ಕರುಣಿಯು ಎಂದು ನಿನ್ನಯ ಪಾದ ಮೊರೆಯ ಪೊಕ್ಕೇನೊ ನಾನಿಂದು ನೀನೆ ಎನ್ನ ಮೊರೆಯ ಲಾಲಿಸು ಎಂದು ಬಿನ್ನೈಸಿದೆ ಪರಮಕೃಪಾಕರ ಪೊರೆಯೊ ಅನಾಥ ಬಂಧೂ 1 ದಯಕರ ನಿಜ - ಭಕ್ತಾ | ಮಯ ಹರ ಸುಖಸಾರಾ ಶ್ರಯವಾಗಿ ಸಂತತ | ನಯದಿಂದ ನಿಜಜನ ಭಯಕರ ಭವಹರ | ಜಯ ಜಯ ಜಯದಾತ ಜಯ ವಿಜಯಾತ್ಮಜ | ಜಯಕುಲ ದಿಗ್ವಿಜಯ ಜಯ ಕಾಲದಲಿ ನಿಜ | ಹಯಗ್ರೀವಮೂರ್ತಿಯ ದಯದಿಳೆಯೊಳು ಜನಿಸೀ | ಜನ್ಮದಿ ಮೂರ್ತಿ ತ್ರಯ ಪಾದವನೆ ಭಜಿಸಿ - ಧರಿಯೊಳು ಕ್ಷ - ತ್ರಿಯ ಕುಲದೊಳು ಜನಿಸಿ ಯುಧಿ ಭೀಮ - ಶಯನನಿಂದ ಹತನಾಗ್ಯಭüಯ ಸ್ಥಾನವನೆ ಬಯಸಿ 2 ಭೂಸುರ ವರನಾಗಿ | ಕಾಶ್ಯಪಿ ಸ್ಥಳದಲ್ಲಿ ವಾಸಮಾಡಿ ಶಿರಿ ವ್ಯಾಸ ಕೃಷ್ಣ ಪಾದೋ - ಪಾಸನ ಮಾಡುತ | ವ್ಯಾಸಮುನಿ ಆಗಿ ಭಾರ | ತೀಶ ಪ್ರತೀಕವ ವಾಸವಾಸರ ಸ್ಥಾ - ಪಿಸಿ ಯಂತ್ರೋದ್ಧಾರಾ ಶ್ರೀಶ ಮಧ್ವಮುನಿಯಾ - ಸ್ಥಾಪಿಸಿ ಅಲ್ಲಿ ವಾಸವ ಮಾಡಿ ತಾನೂ - ಪುರಂದರ ದಾಸರಾಯರಿಗೆ ಇನ್ನು - ಸುಮಂತ್ರೋಪ - ಅನುದಿನ ವಾಸಮಾಡಿದಿ ನೀನು 3 ಕ್ಷೋಣಿತಳದಿ ಕುಂಭ | ಕೋಣನಗರದಲ್ಲಿ ಕ್ಷೋಣಿದೆವೋತ್ತುಮ | ವೀಣವೆಂಕಟನಾಮಾ - ಕ್ಷೀಣಬಲ ಙÁ್ಞನ ತಾಣ | ಗೊಡದೆ ನಿನ್ನ ಜಾಣತನದಿ ನರ | ಮಾಣವಕನಂತೆ ಪಾಣಿ ಭಿಕ್ಷಾನ್ನವಾ | ಟಾಣಿ ಮಾಡುತ ನೀನು ಕ್ಷೋಣಿಪ ಮನಿಗೆ ಬಾರೇ - ನಿನ್ನ ವೀ - ಶುಭ ಲ - ಕ್ಷಣ ಬ್ಯಾರೆ ಬ್ಯಾರೇ ಇರಲು ನಿನ್ನ ಕ್ಷಣ ಬಿಡದಲೆ ಜನ ಮಣಿದು ನಮಿಸುತಿರೆ 4 ಜನಪ ನಿನ್ನಯ ಮಹ | ಘನ ಚರ್ಯವನೆ ನೋಡಿ ದಿನದಿನದಲಿ ಬಹು | ವಿನಯಪೂರ್ವಕ ಪಾದ ವನಜ ಸೇವಕÀನಾಗಿ |ತನು ಮನ ಧನ ಧಾನ್ಯ ಘನ ನಿನಗರ್ಪಿಸಿ | ನಿನ ಸಂಗವಾಗಲೂ ಜನುಮ ಇಲ್ಲೆಂಬುವ | ಘನ ಙÁ್ಞನ ಭಕುತಿಯ ಮನದಲ್ಲಿ ಯೈದುತಲೆ - ತಾನು ನಿತ್ಯ ಅನುಮಾನ ಮಾಡದಲೆ - ಇರಲು ಅವನ ಘನಸುಖ ರೂಪದಲ್ಲೆ - ಇರುವಂತೆ ಮನಪೂರ್ತಿ ಕರುಣಸಿದ್ಯನುಪಮ ಚರಿತಲ್ಲೆ 5 ಸತ್ಯನಾಮಕ ಸುತ | ಮೃತ್ಯುನಿಂದಲಿ ತಾನು ಸತ್ತುಪೋದ ವಾರ್ತೆ | ಬಿತ್ತರಿಸೆ ಲೋಕದಿ ಉತ್ತುಮ ನೀನಾಗ | ಸತ್ಯ ಸಂಕಲ್ಪವ ಗೊತ್ತು ತಿಳಿದು ಅವನ | ಮತ್ತೆ ಈ ಲೋಕಕ್ಕೆ ತತ್ಕಾಲದಲಿ ತಂದು | ಉತ್ತುಮ ಭಾರ್ಯಳ ಜತ್ತು ಮಾಡಿದ ವಾರ್ತೆಯಾ - ಕೇಳೀ ಶೈವ - ರುತ್ತುಮನಾತ್ಮಜನಾ - ಇವಾನಂತೆ ಸತ್ಯವೆಂದು ಪೇಳಿ ಮತ್ತೆ ಪೊರೆದ್ಯೊ ಜೀಯಾ 6 ಇನತೆ ಮೊದಲಾದ | ಫನತರ ನಿನ ಮಹಿಮೆ ನಿತ್ಯ | ಅನಿಮಿಷ ಮುನಿಜನ ಮನಕೆ ಸಿಲ್ಕದೆ ವೃಂದಾ - |ವನದಲಿ ನೀ ನಿಂತು ವನುತೆ ಸುತ ಧನ | ಧಾನ್ಯ ಮೊದಲಾದ ಅನುದಿನ ಸಲಿಸುತ್ತ ಜನರ ಪಾಲಿಸೊಗೋಸುಗಾ - ಹರಿಯು ನಿನಗೆ ಜನುಮಾವನಿತ್ತನೀಗ - ಅದಕೆ ನಿನ್ನ ಅನುದಿನ ತವಪಾದ ವನಜ ನಂಬಿದೆ ವೇಗ 7 ರಕ್ಷಿಸೋ ನೀ ಎನ್ನ | ಲಕ್ಷ್ಮೀರಮಣ ದೂತ ಮೋಕ್ಷಾದಿ ಪುರುಷಾರ್ಥ - | ಪೇಕ್ಷ ಪ್ರದಾಯಕ ಲಕ್ಷ ಜನರೊಳೆನ್ನ | ವೀಕ್ಷಿಸಿ ಪರಜನಾ - ಪೇಕ್ಷಾ ಮಾಡದಂತೆ | ಲಕ್ಷ್ಮೀಶ ನಾತ್ಮಜ ಭಿಕ್ಷಾನ್ನ ಬೇಡೋದು | ಲಕ್ಷಣವೇನಿದು - ಪೇಕ್ಷಾ ಮಾಡದೆ ನೀ ಎನ್ನಾ - ಕಾಯಲಿಬೇಕು ವಿಕ್ಷೀಸಿ ಙÁ್ಞನವನ್ನಾ - ಭಕುತಿ ಇತ್ತು - ರಕ್ಷಿಸು ಎಂದೆ ನಿನ್ನಾ ಇದೆ ಒಂದಾ ಪÉೀಕ್ಷೆ ಪೂರ್ತಿಸೊ ಕಲ್ಪವೃಕ್ಷ ನೀ ಎನಗೆ ಇನ್ನ 8 ಕಿಟಿಜ ಸರಿದ್ವರ | ತಟ ಕೃತ ಮಂದಿರ ಚಟುಲ ಮಧ್ವಮುನಿ | ಪಟು ಶಾಸ್ತ್ರದಿಂದಲಿ ಕುಟಿಲ ದುರ್ವಾದಿಗ | ಳ್ಥಟನೆ ಮುರಿದು ನಿಜ ಘಟನೆ ಮಾಡಿ ಪ್ರತಿ | ಭಟರಿಲ್ಲದಲೆ ನೀನು ಧಿಟನಾಗಿ ತ್ರಿಜಗದಿ - ಮೆರೆಯುತ ಶಠÀಜನರನು ತ್ವರದಿ - ಮರಿದು ಙÁ್ಞನಿ ಕಟಕ ಸುಪಾಲನದಿ ಪಟೋ ಎನಿಸಿ ಧಿಟಗುರು ಜಗನ್ನಾಥ ವಿಠಲನ್ನ ಭಜಿಸಿದೆ 9
--------------
ಗುರುಜಗನ್ನಾಥದಾಸರು
ದಯಮಾಡೋ ದಯಮಾಡೋ ಪ ಭಯಕರ ಸುಮಹ -ದ್ಭಯಹರ ಯತಿವರ ಅ.ಪ ಮೋಕ್ಷದ ಕರುಣ - ಕಟಾಕ್ಷದಿ ಎನ್ನನು ವೀಕ್ಷಿಸಿ ನಿನ್ನ ನಿರೀಕ್ಷಿಸುವಂತೆ 1 ಲಕ್ಷ್ಯಾಧೀಶರ ಲಕ್ಷಿಲ್ಲದೆ ಙÁ್ಞ - ನಾಕ್ಷದಿ ತವಪದ ಲಕ್ಷಿಸುವಂತೆ 2 ಸತ್ಯಾಭಿದ - ನಪ - ಮೃತ್ಯುಹರಿಸಿ ಮುದ ವಿತ್ತು ಪಾಲಿಸಿದ - ಉತ್ತಮ ಎನಗೇ 3 ಬಲ್ಲಿದತರ ಮಹ - ಪ್ರಲ್ಹಾದ ನಿನ್ನೊಳು ನಿಲ್ಲಿಸು ಎನಮನ - ಎಲ್ಲಿ ಚಲಿಸದಂತೆ 4 ದಾತಗುರು ಜಗನ್ನಾಥ ವಿಠಲನ ದೂತಾಗ್ರಣಿ ಸು - ಖೇತರ ಕಳೆದು 5
--------------
ಗುರುಜಗನ್ನಾಥದಾಸರು
ನಾನು ನಿನ್ನ ಸೇವಕ ಏನಾದರೂ ಬರಲಿ ನಿನ್ನ ಬಿಡುವನೆ ರಂಗಾ ಪ ಅಪತ್ತೆ ಬರಲಿ ಅತಿಶಯದ ಕ್ಲೇಶವೇ ಬರಲಿ ಕೋಪ ಕಾಮಾದಿಗಳು ವೆಗ್ಗಳಿಸಲಿ ಪಾಪದ ರಾಶಿಗಳು ಬಂದು ಬೆನ್ನಟ್ಟಲಿ ಶ್ರೀಪತಿ ನಿನ ಪಾದವನು ಬಿಡಬಲ್ಲನೆ 1 ಬಟ್ಟೆ ಅತಿ ಕಠಿಣವಾಗಲಿ ಯಮನಾಳು ಬಲು ಭಯಂಕರರಾಗಲಿ ಯಮನು ದಂಡಿಸಿ ತೀವ್ರ ನಿರಯದೊಳಗೆ ಇಡಲಿ ಕಮಲನಾಭನೆ ನಿನ್ನ ಪಾದವನು ಬಿಡಬಲ್ಲನೆ2 ಲೋಕದೊಳಗಿದ್ದ ಜನರಿಗೆ ಬಪ್ಪ ದೋಷಗಳು ಏಕವಾಗಿ ಎನಗೆ ಬರಲಿ ಇಂದೆ ನಾ ಕಳವಳಿಸಿದರು ನಿನ್ನಂಘ್ರಿಯಗಳಾಣೆ ಶ್ರೀಕಾಂತ ವಿಜಯವಿಠ್ಠಲರಂಗ ಕೇಳೊ3
--------------
ವಿಜಯದಾಸ
ನಿತ್ಯ ಸಲಹೆ ಜನರನು ಅನ್ನಪೂರ್ಣೆ ಪ ಉಲ್ಲಾಸದಿಂದಲಿ ಪಲ್ಲಕ್ಕಿಯ ಮೇಲೆ ನೀ ಕುಳ್ಳಿರ್ದು ಛತ್ರ ಚಾಮರ ವ್ಯಜನಗಳಿಂದ ಅಲ್ಲಿ ಗಲ್ಲಿಗೆ ನೃತ್ಯಗೀತ ವಾದ್ಯುಪಚಾರ ದಲ್ಲಿ ಉತ್ಸವದಿ ಬರುವ ಸಂಭ್ರಮವಕಂಡೆ 1 ಹಾಡಿ ಪಾಡಿಸಿ ಕೊಳುತ ಚತುರ್ವಿಧ ಗೂಡಿದ ಮಂತ್ರ ಸ್ತುತಿಗಳಿಂದಲಿ ಕೂಡಿದ ಜನರ ಸಂದಣಿಯಲ್ಲಿ ಮನೆಯಲ್ಲಿ ಬೇಡಿದ ಜನರಿಂಗಿಷ್ಟಾರ್ಥವ ನೀವುದ ಕಂಡೆ 2 ಮೂರು ಮೂರುತಿ ನೀನೆ ನಿರ್ಮಿಸಿ ಮತ್ತೆ ಮೂರು ಗುಣಂಗಳ ಧರಿಸಿ ತಾರಣ ರೂಪೆ ಸೃಷ್ಟಿಸ್ಥಿತಿಗಳನು ಸಂಹಾರವ ಮಾಳ್ಪ ಚೈತನ್ಯ ರೂಪೆಯಕಂಡೆ 3 ಬಿಂಕವ ಮುರಿದೆ ಜನರ ಸಾಕಿನ್ನು ಭಯಂಕರವನು ಬೀರದಿರು ತಾಯೆ ಎನ್ನ ಮಾಡಲ ಮನೆಯೊಳು ನೆಲಸಿ ಭಕುತರನು ಶಂಕರಿ ಸಲಹೆ ದಯದೊಳನ್ನಪೂರ್ಣೆ 4 ಎಲ್ಲ ಜೀವರಿಗು ಜೀವಳು ನೀನು ಇಲ್ಲಿನ್ನು ನಿನಗಿಂತ ಬಲ್ಲಿದರು ಇಲ್ಲಮ್ಮ ವಿಜಯದಶಮಿಯೊಳು ನೀ ಬಂದು ಕೊಲ್ಲೂರ ಮೂಕಾಂಬೆಯೊಳಿರ್ದುದ ಕಂಡೆ 5
--------------
ಕವಿ ಪರಮದೇವದಾಸರು
ನಿರುಪಮ ಚರಿತಾ ಮಾಂಗಿರಿನಾಥಾ ಈಪ್ಸಿತ ವರದಾತಾ ಪ ಸರಸಿಜ ಸಂಭವ ನುತ ಗಂಗಾಪಿತ ಪಂಕಜಾಕ್ಷ ಮೋಕ್ಷದಾತ ನಾರದ ಮುನಿ ವಿನುತಾ ಅ.ಪ ಭೀಕರ ರಾಕ್ಷಸ ವಂಶ ಭಯಂಕರ ಕಿಂಕರ ಶಂಕರಗಾನಸು ಧಾಕರ ಲೋಕಪಾಲ ಪರಮ ಚತುರ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪಡೆದಲ್ಲದೆ ಮಿಗಿಲು ಬರಲರಿಯದು ಎಡೆ ಬಿಡದೆ ಎಲೆ ಮನವೇ ಏಕೆ ಬಳಲುವಿ ವೃಥಾ ಪ ವನನಿಧಿಯೊಳು ಪೊಕ್ಕು ಸಲಿರೆಡಿ ನೋಡಿದರೂ ಭರದಿ ಬಲುಭಾರವನು ಹೊರಲಿ ಬೆನ್ನಿಲಿ ಧರಗೆ ತಲೆಯನ್ನು ಬಾಗಿ ತಾನು ಯೋಚನೆ ಮಾಡಿ ಪರಿ ಪರಿಯಲಿ ಭಯಂಕರ 1 ಬಡವನೆಂದ್ಹೇಳ ಭರಬಾಗಿಲಲಿ ನಿಂದಿರಲು ದೃಢದಿ ವೈರಿಗಳ ಖಂಡಿಸಲು ಮುದದಿ ಅಡವಿ ಸಂಚರಿಸುತಲಿ ಹಾರೈಸಿ ಹುಡುಕಿದರು ಕಡು ಕಳ್ಳತನ ಕಲೆತು ಕಂಡಕಡೆ ತಿರುಗಿದರು 2 ಬರಿಯ ಬತ್ತಲು ನಿಂತು ನರರಿಗ್ಹೊಂನವ ತೋರಲು ತುರಗವನ್ನೇರಿ ಧರಣಿಯನು ಪಾಲಿಸಲಿ 'ವರ ಹೆನ್ನೆಪುರನಿಲಯ ನರಹರಿಯು ಮಾಡಿದ್ದ ಬರಿದೆ ಚಿಂತಿಸಿ ನೀನು ಭಾಗ್ಯವದರಿಂದೇನು 3
--------------
ಹೆನ್ನೆರಂಗದಾಸರು
ಪರಮ ಸಾಹಸವಂತ ಧೀಮಂತ ಹನುಮಂತ ಪ ಸರಸರನೆ ತಾ ಬೆಳೆದ ತಾ ಮುಗಿಲ ಪರ್ಯಂತ ಅ.ಪ. ಇಳೆಯಿಂದ ನಭವ ಪರಿಯಂತವೇಕಾಕೃತಿಯು ಬೆಳಗುತಿರೆ ನೋಡಲತಿ ಚೋದ್ಯವು ವಿಲಸಿತದ ವಿಂಧ್ಯಗಿರಿಯಂತೆ ಶೋಭಿಸಿತು ಫಲಗುಣಾಗ್ರಜ ನೋಡಿ ಬೆÉರಗಾಗುತಿರಲು 1 ಪಿಂಗಾಕ್ಷಿಗಳು ದಿಕ್ತಟಂಗಳನು ಬೆಳಗುತ್ತ ಕಂಗೊಳಿಸುತಿರ್ದುದಾ ಸಮಯದಿ ಶೃಂಗಾರ ಕಾಂತಿಯಿಂ ತುಂಗವಿಕ್ರಮನ ಉ ತ್ತುಂಗ ದೇಹವು ದಿವ್ಯರಂಗು ಒಡೆದೆಸೆಯೆ 2 ಶರಧಿಶತಯೋಜನ ನೆರೆದಾಂಟಿದಾ ದೇಹ ಅರಿಭಯಂಕರ ದೇಹ ಗುರುತರದ ದೇಹ ಕರಿಗಿರೀಶನ ಚರಣ ಸರಸೀರುಹ ದ್ವಂದ್ವ ಪರಿಚರ್ಯಕ್ಕನುವಾದ ಪರಮದೇಹವಿದೆನಲು 3
--------------
ವರಾವಾಣಿರಾಮರಾಯದಾಸರು
ಪವಮಾನ-ಪಾವನಾ ಜಗಜ್ಜೀವನ ಪ ಶಿವ ಖಗಪತಿ ಅಹಿಸುರ ವಂದಿತಪದ ಅ.ಪ ಸೇವಾ ಕೃಷ್ಣ ಸಾಧನಾ ಕಾವಕರುಣಿ ಕಿಂಪುರುಷ ಖಂಡಾಧಿಪ ಕಾವಳದೊಳು ನಿನ್ನವರನು ಕಾಯ್ದೆ ಭೂವಳಯದೊಳವಿದ್ಯೆಯನಳಿಸಿದ ಸದ್ವರ್ತನು ನೀನೆನ್ನನುದ್ಧರಿಸಯ್ಯ 1 ಶರಧಿ ಹಾರಿದೆ | ಕೌರವ ಕಲಿಯಾ ನೀ ಗದೆಯಿಂ ಛೇದಿಸಿದೆ ಧಾರುಣಿಯೊಳು ಯತಿಪುಂಗವನೆಂದೆನಿಸಿದೆ ನಿರುತದಿ ರಾಮರ ಕಾರ್ಯವ ಸಾಧಿಸಿ ವಿರಥರ ಮಾಡಿದೆ ಅತಿರಥರುಗಳ ಹರಿಸರ್ವೋತ್ತಮ ತರತÀಮ ಸತ್ತತ್ವಗ ಳರುಹಿದ ಸದ್ವರ್ತನು ನೀನೆ 2 ರಾಮಪದಕುಮುದಸೋಮ ಭೀಮಾ ರಿಪುಕುಲ ಧೂಮ ನಿಸ್ಸೀಮ ಶ್ರೀಮದಾನಂದಮುನಿ ಸಾರ್ವಭೌಮ ಭೂಮಿಜೆ ಕುರುಹ ಶ್ರೀರಾಮರಿಗರ್ಪಿಸಿ ಅ ಮಹ ಬಕ ಕೀಚಕರ ಸಂಹರಿಸಿ ತಾಮಸ ಗ್ರಂಥವನಳಿಸಿ ಜನಕೆ ಸದ್ಬೋಧೆ ಇತ್ತ ಗುರು ಪೂರ್ಣಬೋಧನೆ 3 ದ್ರೋಣಾಚಲವ ತಂದ ಪ್ರಾಣ ಎಣೆಯುಂಟೆ ಬಲದೊಳು ನೀನೆ ನಿಸ್ಸೀಮ ಕಾಣೆನೊ ಜಗದಿ ಪರಮಹಂಸರ ಪ್ರಾಣ ಪ್ರಾಣಿಗಳೊಳಗೆ ಮುಖ್ಯಪ್ರಾಣನೆಂದೆನಿಸಿದೆ ಕ್ಷೋಣಿಯೊಳು ಕುರುಸೇನೆ ಸಂಹರಿಸಿ ಕ್ಷೀಣವಾಗುತಲಿಹ ಸುಜನರ ಮನಸ ತ್ರಾಣ ಮಾಡಿ ಸತ್ಪ್ರಮಾಣಗಳಿತ್ತೆ4 ಋಜುಪುಂಗವ ದೇವಾ ಹನುಮಾ ಗಜಪುರಾಗ್ರಣಿ ಕೌರವನಿಗೆ ನೀ ಕಾಲಯಮ ಕುಲಿಶ ನಿಸ್ಸೀಮ ಅಜಪದ ಪಡೆದಿ ಶ್ರೀ ಆಂಜನೇಯನೆ ವಿಜಯಸಾರಥಿನೊಲಿಸಿ ಪೂಜಿಸಿ ಸೃಜಿಸಿ ಮರೆದೆ ಸಚ್ಛಾಸ್ತ್ರದಿಂದ ಈ ಚತುರ್ದಶಭುವನಾಚಾರ್ಯನೆನಿಸಿದೆ 5 ಖೂಳ ಅಕ್ಷಕುವರನ ಹರಿಸೆ ಖಳರ ಕಾಳೋರಗ ಬಾಧೆ ಲೆಕ್ಕಿಸದೆ ಖಳ ಭೂದೈತ್ಯರ ಬಾಧೆ ಹರಿಸಿದೆ ಬಾಲತನದಲಿ ಭಾನುಮಂಡಲ ಹಾರಿದೆ ಲೋಲತನದಿ ಸತಿಗೆ ಪೂವಿತ್ತೆ ಶೀಲಮೂರುತಿ ಮಾಯ ಜಾಲ ಹರಿಸಿ ಜಗಖ್ಯಾತನಾದೆ ಯತಿದಶಪ್ರಮತಿಯೆ 6 ಮಾರುತಿ ಧೀಮಂತಮೂರುತಿ ಭಾರತದಿ ಭೂಭಾರನಿಳುಹಿದ ಖ್ಯಾತಿ ಸಾರ ಶ್ರೀ ಬಾದರಾಯಣಗೆ ಅತಿಪ್ರೀತಿ ಅರಿಪುರ ವೈಶ್ವಾನರನಿಗರ್ಪಿಸಿ ವಾರಣಪುರದೊಳು ಅತಿರಥನೆನಿಸಿ ದುರ್ವಾದಿಮತ್ತಗಜಸಿಂಹನಾಗಿ ನೀ ನಿವ್ರ್ಯಾಜÀದ ಭಕ್ತಿಯ ಹರಿಗರ್ಪಿಸಿದೆಯೊ 7 ಹನುಮಾ ಭೀಮಾ ಆನಂದ ಮುನಿಪಾ ಆ ವಾನರಾಧಿಪಾ ಗಜಪುರಾಧಿಪ ಯತಿಪಾ ಧ್ಯಾನನಿರತ ರಾಮಪದದಿ ಮಾನಸದಲ್ಲಿ ಯದುಪತಿಯ ಪೂಜಿಸಿ ದೀನಜನರುದ್ಧಾರಮಾಡಿ ಸದ್ಬೋಧೆ ಯನಿತ್ತ ಮಧ್ವಮುನಿಯೆ 8 ರಾಮಾಲಿಂಗನ ಮಾಡಿದಾ ರೋಮ ರೋಮಕೆ ಕೋಟಿಲಿಂಗವ ಸೃಜಿಸಿದಾ ಶ್ರೀಮಧ್ಯಗೇಹಾರ್ಯಸೂನುವೆಂದೆನಿಸಿದಾ ಆ ಮಹಾರ್ಣವ ಲಂಘಿಸಿದಾ ಧೀರಾ ಭೀಮಭಯಂಕರ ದ್ರೌಪದೀಪ್ರಿಯಕರ ಈ ಮಹಿಮೆಯೊಳಾರೆಣೆಯೋ ನಿನಗೆ ನಿ ಸ್ಸೀಮನಹುದೋ ಯತಿಸಾರ್ವಭೌಮನೆ 9 ಸುರಜೇಷ್ಠಾನಸ್ತ್ರ ಮಾನಿಸಿದಾ| ಜರೆಯನ ಸೀಳಿ ನಿರಪರ ಸೆರೆಯ ಬಿಡಿಸಿದಾ ಧರೆಯೊಳ್ ಸುರಶ್ರೇಷ್ಠನೆಂದೆನಿಸಿದಾ ಭರದೊಳು ಭರತೆಗೆ ಕುಶಲವ ತಿಳಿಸಿ ಕರುಳಮತಿಯಿಂ ಸತಿಯ ಸಂತೈಸಿ ದುರುಳ ಭಾಷ್ಯಂಗಳ ತತ್ತ್ವವನಳಿಸಿದಾ ಪರಮದಯಾಂಬುನಿಧಿ ಶ್ರೀಮದಾನಂದ 10 ರಕ್ಷಕ ನೀನೆ ಸಜೀವ ಲಾಕ್ಷ್ಯಾಗಾರದ ಬಾಧೆÉಯಿಂ ರಕ್ಷಿಸಿ ಮೆರೆದಯ್ಯ ಈ ಕ್ಷಿತಿಯೊಳು ದೈತ್ಯ ಶಿಕ್ಷಕನೆನಿಸಿದೆ ತಕ್ಷಣ ಸಿಂಹಿಕೆ ಕುಕ್ಷಿಯ ಸೀಳ್ದೆ ಭಿಕ್ಷೆಯಿಂದ ನಿನ್ನವರನು ಕಾಯ್ದೆ ದಕ್ಷನಹುದೊ ನೀನಚ್ಯುತ ಪ್ರೇಕ್ಷರಿಂ ದೀಕ್ಷೆಯ ವಹಿಸಿ ಸತ್ಸಿಕ್ಷಕನಾದ್ಯೊ 11 ನೀ ರಂಜಿಸಿ ಮೆರೆದೆಯೊ ಗುರು ಮಧ್ವಾರ್ಯ ಧೀರ ಕೇಸರಿಕುವರ ಪುರುಷಾಮೃಗವ ಸಾಧಿಸಿ ತಂದ ಶೂರ ಈ ಧರಾವಲಯದಿ ತೋರಿದೆ ತತ್ವಸಾರ ತೋರಿ ಭಕ್ತಿ ಶ್ರೀರಾಮರ ಪದದಿ ಕಂ ಸಾರಿಯ ಸೇವಿಸಿ ಭಾರವನಿಳುಹಿದೆ ಸಾರಿದೆ ಹರಿಸರ್ವೋತ್ತಮ ತರತಮಭೇದವನರುಹಿದ ಪರಮದಯಾಳೊ12 ಅಂಜನೆ ಕುವರಾ ಧೀರಾ ಕುಂಜರಪುರದ ಅರಿಗಳಂಜಿಸಿದ ಶೂರ ಧರಣಿ ದುರ್ಮದಾಂಧರ ದುರ್ವಾದ ಪಂಕಜೋದ್ಭವನ ಪದವ ಪಡೆವೆ ನೀ ಅಂಜದೆ ಗದೆಯಿಂ ಕೊಂದೆ ಕುರುಪನ ಮಂಜುಳವಾಣಿಯ ಜಗಕೆ ಇತ್ತು ನೀ ರಂಜಿಸಿ ಮರೆದೆಯೊ ಗುರುಮಧ್ವಾರ್ಯ 13 ರೋಚಕ ನಾಮಕನೆನಿಸಿ ಪು ರೋಚನನ ಕಾರ್ಯವನೆಲ್ಲಾ ಕೆಡಿಸಿ ಪಾಜಕ ಕ್ಷೇತ್ರ ಪವಿತ್ರ ಮಾಡಿದೀ ಖೇಚರಮಾರ್ಗದಿ ನೆಗಹಿ ನಿ ಶಾಚರರೆÉಲ್ಲರ ಸದೆದೆ ಗದೆಯಿಂ ಸೂಚಿತ ಗ್ರಂಥ ವಿರಚಿಸಿ ಜಗಕೆ ನೀ ಗೋಚರಿಸಿದೆಯೊ ತ್ರಿಜಗಾಚಾರ್ಯ 14 ರಣದೊಳು ಘುಣಿವಿರೂಪಾನೆತ್ತಿದೆ ಬಾಣಸಿಗನೆನಿಸಿ ಮತ್ಸ್ಯದೇಶವ ಸೇರ್ದೆ ಕ್ಷೋಣಿಯೊಳು ಗುಣವಾರಿಧಿ ಎನಿಸಿದೆ ಗಣನೆ ಇಲ್ಲದೆ ಗಿರಿಯನೆಗಹಿದೆ ಹಣಿದೆ ಹಿಡಿಂಬಾಸುರನ ಸೀಳಿದೆ ಮಣಿಮಂತಾದಿ ದುರಾತ್ಮರಿಗೆ ನೀನಂತಕನೆನಿಸಿದೆ ಶಾಂತಮೂರುತಿಯೆ15 ವಿಜಯರಥಕೆ ನೀ ಕೇತುನಾಥ ವಿಜಯಸಾರಥಿಯಾ ದೂತ ವಿಜಯದಶಮಿಯೊಳ್ ಜನಿತ ಸೋಜಿಗ ತೋರಿ ಸಂಜೀವನ ತಂದೆ ಆ ಜಗಜಟ್ಟಿಗಳೆಲ್ಲರ ಸದೆದೆ ಈ ಜಗದೊಳು ಸರಿಗಾಣೆ ಜಗದೊ ಳು ಜಗದ್ಗುರುವಹುದೋ ನೀ ಗುರುಪೀಳಿಗೆಗೆ16 ಮಂಗಳಮೂರುತಿ ಮಾರುತಿ ಸೌಗಂಧಿಕ ನೆವದಿ ಮರುತನೊಳ್ ನೀ ಸೆಣೆಸಿದಿ ಶೃಂಗಾರ ಗೋಪಿನಂದನನ ಸ್ಥಾಪಿಸಿದೆ ಭಂಗಿಸಿ ವನವನು ಉಂಗುರವನು ತಂದೆ ಸಂಗರ ಹನುಮನೊಳ್ ನೀಡಿ ಮೋಹ ತೋರ್ದೆ ಅಂಗಜಪಿತನ ಇಂಗಿತವರಿತು ಭಂಗಿಸಿದೆಯೊ ದುಶ್ಯಾಸ್ತ್ರಂಗಳನು 17 ಕೇಸರಿ ಕ್ಷೇತ್ರ ಜನಿತಾಭೂಸು ರ ಸುತನ ಭೀತಿಯ ನೀ ಬಿಡಿಸಿದೆ ವಸುಮತಿಯೊಳು ಸುರಶ್ರೇಷ್ಠನೆಂದೆನಿಸಿದೆ ಕೋಸಲನಗರಾಧೀಶನ ಪ್ರೀಯ ವಾಸುದೇವಗರ್ಪಿಸಿದೆ ಅಧ್ವರ್ಯ ಶ್ರೀಶನಾಜ್ಞೆಯ ತಾ ಶಿರದಿ ಧರಿಸಿ ಪ್ರ ಕಾಶ ಮಾಡ್ದೆ ಸರ್ವಮೂಲಗ್ರಂಥವ 18 ಶ್ವಾಸನಿಯಾಮಕನೆನಿಸಿದೆ ಪ್ರ ಯಾಸವಿಲ್ಲದೆ ವನವಾಸಂಚರಿಸಿದೆ ಶ್ರೀ ವ್ಯಾಸರಿಗೆ ಅತಿಮೋದವ ಪಡಿಸಿದೆ ಶ್ರೀಶನಾಜ್ಞೆಯಲ್ಲಿ ಕೀಶನಾಗಿ ನಿಂದು ನಿಶಾಚರರೆÉಲ್ಲರ ಸದೆದೆ ಗದೆಯಿಂದ ಶ್ರೀಶನೆ ಸರ್ವೋತ್ತಮನೆಂಬ ಸತ್ಸಿದ್ಧಾಂತವ ತೋರಿದ ಸದ್ಗುಣಪೂರ್ಣ 19 ಸರ್ವಜೀವರ ತ್ರಾಣ ಪ್ರಾಣ ಗರ್ವಿಸಿದವರೊಳು ನೀ ಗರ್ವ ಹರಣ ಸರ್ವಜ್ಞಾಚಾರ್ಯ ಗುರುವರೇಣ್ಯ ಪೂರ್ವದೇವರ ಗರ್ವವನಿಳುಹಿ ಸರ್ವ ಕೌರವರ ಪಡೆಯನು ಸವರಿದೆ ಉರ್ವಿಯೊಳು ಜನಿಸಿದ ದುರ್ಮದಾಂಧರ ಗರ್ವಹರಣಮಾಡಿ ಕರುಣವ ತೋರಿದೆ 20 ಶ್ರೀರಾಮನೇಕಾಂತ ಭಕ್ತ ಶೌರಿಯ ಆಜ್ಞೆಯಿಂ ಸರ್ವಕಾರ್ಯಸಕ್ತ ಧಾರುಣಿಯೊಳು ಸಚ್ಛಾಸ್ತ್ರಕರ್ತ ಹಾರಿದೆ ಶರಧಿಯ ಅಣುಮಹದ್ರೂಪದಿ ತೋರಿದೆ ಶಕ್ತಿಯ ಗಿರಿ ತರುತೃಣವತ್ ಸಾರಿದೆ ಧರಣಿಯ ಸುರಜನುಮದಿ ನೀ ಬೀರಿದೆ ಸುಜನಕೆ ತತ್ವಾಮೃತವ 21 ಕಾಶಿ ಕಂಚುಕವ ಧರಿಸಿದೆ ಕಾಶ್ಯಪಿಯೊಳು ಕಾವಿಶಾಟಿಯ ಧರಿಸಿದೆ ಕೀಶತನದಿ ಹರಿಕಾರ್ಯವ ಸಾಧಿಸಿ ಜಗ ದೀಶಕುಲದೊಳು ಜನಿಸಿ ಮೆರೆದೆ ವೇದ ವ್ಯಾಸ ಪದಕಮಲ ಮಧುಪ ಜಗಖ್ಯಾತನಾ ದ ಶ್ರೀ ಮಧ್ವಸೂರ್ಯನೆ 22 ಸುಗ್ರೀವಗಭಯ ಕೊಡಿಸಿದಾ ಮ ಹೋಗ್ರರಾದ ದ್ವೇಷಿಗಳ ಸವರಿದಾ ಸ ಮಗ್ರ ಸಿದ್ಧಾಂತ ರಚಿಸಿದಾ ವಿಗ್ರಹದೊಳು ಧಾತಾಸ್ತ್ರವ ಮಾನಿಸಿ ಅಗ್ರಹರಿಪುಕುಲ ಕಾಲನೆಂದೆನಿಸಿ ಉಗ್ರವಾದಿಗಳ ದುರಾಗ್ರಹ ವಿಗ್ರಹ ಶೀಘ್ರದಿ ಮಾಡಿ ಅನುಗ್ರಹವಿತ್ತೇ23 ಸೋಮಕುಲದೊಳು ನೀನೆ ಅತಿ ಬಲವಂತ ಈ ಮಹಿಯೊಳು ರೌಪ್ಯಪೀಠದಿ ಜನಿತ ರಾಮಾಂಗನೆಯ ಪ್ರೇಮದ ದೂತ ಸೋಮಶೇಖರನ ಕೇದಾರಕಟ್ಟಿದ ಸ್ವಾಮಿಗೆ ಪ್ರಕೃತಿಯ ಮಾಯವ ಪೇಳ್ವ ಕೇಸರಿ ಎನಿಸಿದೆ 24 ಮಾರ್ಜಾಲರೂಪವ ಧರಿಸಿದೆ ನೀ ನರ್ಜುನಾಗ್ರಜಾದಿಗಳ ಪೊರೆದೇ ನೀ ಸರ್ಜಿಸಿ ತೋರ್ದೆ ಸತ್ಸತ್ವಗಳೆಲ್ಲ ಘರ್ಜಿಸಿ ಅರ್ಜುನನ ರಥದಲಿ ನೆಲೆಸಿದೆ ಮೂರ್ಜಗಜಟ್ಟಿಗಳೆಲ್ಲರ ಸದೆದೆ ವರ್ಜಿಸಿ ಅರಿಷಡ್ವರ್ಗಗಳೆಲ್ಲವ ದುರ್ಜಯವಾದಕೆ ಘರ್ಜನೆ ಮಾಡಿದೆ 25 ವಾಯುಕುವರ ಅಸುವರ ಕಾಯಜನಯ್ಯನ ಅತಿಪ್ರೀಯಾ ಶೂರಾ ಜೀಯಾ ನೀನಿತ್ತೆ ಸದ್ಗ್ರಂಥವಿಸ್ತಾರಾ ಕಾಯಕಭಕುತಿ ಶ್ರೀರಾಮರಿಗರ್ಪಿಸಿ ಮಾನಸದಲಿ ಯದುಪತಿಯ ಪೂಜಿಸಿ ಮಾಯಮತವ ನಿರಾಕರಿಸಿ ವಾಚದಿ ಶ್ರೀಯರಸನ ಮೆಚ್ಚಿಸಿದೆ ಯತೀಂದ್ರ 26 ವಾತಜಾತ ಹನುಮಂತ ಖ್ಯಾತ ದ್ವಾಪರದಿ ದ್ರೌಪದೀಕಾಂತ ಭೂತಳದೊಳು ಯತಿನಾಥ ಅತಿಶಾಂತ ಧತಾಜನಕ ಶ್ರೀ ವೇಂಕಟೇಶನ ಪ್ರೀತಿಪಾತ್ರ ಶ್ರೀಕೃಷ್ಣನಂಘ್ರಿಗೆ ಖ್ಯಾತನಾದೆ ಸೂತ್ರಾರ್ಥಪೇಳಿ ಕೃಪಾಪಾತ್ರನಾದೆ ಶ್ರೀ ಬಾದರಾಯಣಗೆ27
--------------
ಉರಗಾದ್ರಿವಾಸವಿಠಲದಾಸರು
ಪಾರ್ಥಸಾರಥಿ ಪಾಲಿಸೆನ್ನ ಶ್ರೀಹರಿಯೆ ಪ ಅಂದು ಗಜನು ತಾನು ಬಂದು ತಾ ಬಂಧು ಬಳಗವ ಕೂಡಿ ಸೊಂಡಿ- ಲಿಂದ ನೀರನು ಕಲಕಲಾಕ್ಷಣ ಒಂದು ಮಕರ್ಹಲ್ಲಿಂದ ಪಿಡಿಯೆ ಮು- ಕುಂದ ನೀನೆ ಗತಿಯೆಂದರಾಕ್ಷಣ ಬಂದು ಒದಗಿದ್ಯೊ ಸಿಂಧುಶಯನನೆ 1 ದುರುಳಾಸುರನು ತನ್ನ ಕರುಳ ತನ ಕರುಳನಿಟ್ಟುರಿಯಲ್ಲಿ ಗರಳ ಹಾಕಿ ಬಾಧಿಸಲು ಖಳನು ಕಾರಣ ಕಂಬದಲಿ ಬಂದೆಳೆದು ಅವನುರ ಕರುಳ ಮಾಲೆಯ ಕರಾಳವದನವ ತೆರೆದು ತನ್ನಯ ಕೊರಳಲ್ಲಿರಿಸಿದ ಕೋಮಲಾಂಗನೆ 2 ಪಿತನ ತೊಡೆಯಲಿದ್ದ ಸುತನ ಕಂಡು ಸುತನ ಸುರುಚಿಯು ತಾನಾಗ ಹಿತದಂತ್ವಾಕ್ಯಗಳನು ನುಡಿಯಲು ಅತಿಬ್ಯಾಗದಲಜಸುತನ ನುಡಿ ಕೇ ಳುತಲಿ ತಪವನು ಚರಿಸಲಾಕ್ಷಣ ಪತಿತಪಾವನ ಪರಮ ಕರುಣದಿ ಸುತ ಧ್ರುವಗೆ ಸುಖವಿಟ್ಟ ಶ್ರೀಹರಿ3 ಬಾಡಿ ಬಳುಕುವ ದ್ವಿಜನ ನೋಡಿ ತಾ ನೋಡಿ ತಂದವಲಕ್ಕಿ ಬೇಡಿ ಆಡಿ ಭಕ್ತನ ಕೂಡ ನಯನುಡಿ ಮಾಡಿ ಕರುಣವ ತನ್ನ ದಯ ಸೂ- ರ್ಯಾಡಿ ಸಖಗೀಡಿಲ್ಲದರ್ಥವ ನೀಡಿದ್ಯೊ ಬಹು ರೂಢಿಗಧಿಕನೆ 4 ಕಡುಚÉಲ್ವೆಕರೆಯಲುಟ್ಟುಡುಗೆ ಉಟ್ಟ ಉಡುಗೆ ಸೆಳೆಯಲು ಕೃಪ್ಣೆ(ಯಿ)ದ್ದೆಡೆಗೆ ನಡೆದಸುರ ಪಿಡಿದೆಳೆಯೆ ಸೀರೆಯ ಕಡೆಯ ಕಾಣದೆ ಖಳನು ಧರೆಯೊಳು ಯುಡುಗೆಗಕ್ಷಯ ನುಡಿದ ಕೃಷ್ಣನೆ 5 ಸಿಂಧುಶಯನಾರವಿಂದನಯನಾರ- ವಿಂದ ನಯನ ಅಸುರರಿಗತಿ ಭಯಂಕರನಾ- ಗೆಂದಿಗಾದರು ನಿನ್ನ ನಾಮಸುಧೆ ಯಿಂದ ಸುಖ ಸುರಿವಂತೆ ಮಾಡು ಮು- ಕುಂದ ಭೀಮೇಶಕೃಷ್ಣ ನಿನ್ನ ಪ- ದಾಂಬುಜವ ತೋರಾನಂದದಿಂದಲಿ 6
--------------
ಹರಪನಹಳ್ಳಿಭೀಮವ್ವ