ಒಟ್ಟು 76 ಕಡೆಗಳಲ್ಲಿ , 27 ದಾಸರು , 62 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೂಗೆಲೋ ಮನುಜ ಕೂಗೆಲೋ ಪ ಸಾಗರಶಯನನೆ ಜಗಕೆ ದೈವವೆಂದು ಅ ಮಾಧವ ಕೃಷ್ಣ ಸಚ್ಚಿದಾನಂದೈಕ ಸರ್ವೋತ್ತಮ ಸಚ್ಚರಿತ ರಂಗ ನಾರಾಯಣ ವೇದ ಮತ್ಸ್ಯ ಮೂರುತಿಯೆಂದು1 ನರಹರಿ ಮುಕುಂದ ನಾರಾಯಣ ದೇವ ಪರಮ ಪುರುಷ ಹರಿ ಹಯವದನ ಸಿರಿಧರ ವಾಮನ ದಾಮೋದರ ಗಿರಿ ಕೂರ್ಮ ಮೂರುತಿಯೆಂದು2 ಪುರುಷೋತ್ತಮ ಪುಣ್ಯಶ್ಲೋಕ ಪುಂಡರೀಕ ವರದ ಅಪಾರ ಸದ್ಗುಣನಿಲಯ ಮುರುಮರ್ದನ ಮಂಜು ಭಾಷಣ ಕೇಶವ ನಿರ್ಮಲ ದೇವ ಭೂವರಾಹಮೂರುತಿ ಯೆಂದು 3 ನಿಗಮವಂದಿತ ವಾರಿಜನಾಭ ಅನಿರುದ್ಧ ಅಪ್ರಾಕೃತ ಶರೀರ ಸುಗುಣ ಸಾಕಾರ ಜಗದತ್ಯಂತ ಭಿನ್ನ ನರಮೃಗ ರೂಪಾನೆಂದು 4 ವಟಪತ್ರಶಯನ ಜಗದಂತರ್ಯಾಮಿ ಕೌಸ್ತುಭ ವಿಹಾರ ತಟಿತ್ಕೋಟಿ ನಿಭಕಾಯ ಪೀತಾಂಬರಧರ ನಿಟಿಲಲೋಚನ ಬಾಲವಟು ಮೂರುತಿಯೆಂದು5 ವಿಷ್ಣು ಸಂಕರುಷಣ ಮಧುಸೂದನ ಶ್ರೀ ಕೃಷ್ಣ ಪ್ರದ್ಯುಮ್ನ ಪ್ರಥಮ ದೈವವೆ ಸಾರಥಿ ರಾಮ ಅಚ್ಯುತಾಧೋಕ್ಷಜ ಸೃಷ್ಟಿಗೊಡೆಯ ಭಾರ್ಗವ ಮೂರುತಿಯೆಂದು 6 ಇಭರಾಜ ಪರಿಪಾಲ ಇಂದಿರೆಯರಸ ನಭ ಗಂಗಾಜನಕ ಜನಾದರ್Àನನೆ ವಿಭುವೇ ವಿಶ್ವರೂಪ ವಿಶ್ವನಾಟಕ ಋ ಷಭ ದತ್ತಾತ್ರೇಯ ಶ್ರೀ ರಾಮಮೂರುತಿಯೆಂದು 7 ವಾಸುದೇವ ರಂಗ ನವನೀತ ಚೋರ ಜಾರ ಗೋಕುಲವಾಸಿ ಗೋವಳರಾಯ ಶ್ರೀಧರ ಏಕಮೇವ ಶ್ರೀ ಕೃಷ್ಣ ಮೂರುತಿಯೆಂದು 8 ಹೃಷಿಕೇಶ ಪರಮಾತ್ಮ ಮುಕ್ತಾಮುಕ್ತಾಶ್ರಯ ಭಂಜನ ಕುಸುಮ ಶರನಯ್ಯ ಶಾರ್ಙಧರಾಚಕ್ರಿ ವಿಷಹರ ಧನ್ವಂತ್ರಿ ಬೌದ್ಧ ಮೂರುತಿಯೆಂದು 9 ಸರ್ವಮಂಗಳ ಸರ್ವಸಾರ ಭೋಕ್ತ ಸರ್ವಾಧಾರಕ ಸರ್ವ ಗುಣಗಣ ಪರಿಪೂರ್ಣ ಸರ್ವ ಮೂಲಾಧಾರ ಕಲ್ಕಿ ಮೂರುತಿಯೆಂದು 10 ಪರಿ ಅಪಾರ ಜನ್ಮ ಬೆಂಬಿಡದಲೆ ಸಪ್ತ ದ್ವೀಪಾಧಿಪ ನಮ್ಮ ವಿಜಯವಿಠ್ಠಲರೇಯ ಅಪವರ್ಗದಲ್ಲಿಟ್ಟು ಆನಂದಪಡಿಸುವ 11
--------------
ವಿಜಯದಾಸ
ಗಾಯಿತ್ರಿ ಹಿರಿಮೆ ಹತ್ತು ರೂಪದ ಗಾಯಿತ್ರಿ ನಿನಗೆ ರಂಗದ ತಾನ ಹತ್ತು ರೂಪಗಳಲ್ಲಿ ಕುಣಿಯುತಿಹೆ ನೀನು ಹತ್ತು ಸಲವಾದರೂ ಗಾಯಿತ್ರಿ ಜಪಿಸದಿರೆ ನಿನ್ನಲ್ಲಿ ಭೂಸುರತೆ ಉಳಿಯುವದೆಂತು? 89 ತನ್ನಾಮದರ್ಥವೇ ವ್ಯಾಪ್ತಿರೂಪದ ಮೀನು ಅಮೃತಸವನದಕತದಿ ಕೂರ್ಮನಿಹೆ ನೀನು ಭೂವರಾಹನು ನೀನು ವರೇಣ್ಯನಾಮಕನು ಶತ್ರುಭರ್ಜನದಿಂದ ಭರ್ಗನಾಗಿರುವೆ 90 ಪ್ರಾಣವನು ಮೇಲೆತ್ತಿ ಅಪಾನವನು ಕೆಳಗಿರಿಸಿ ಮಧ್ಯದಲಿ ವಾಮನನು ದೇವ ನೀನಿರುವೆ&ಚಿmಠಿ;ಟಿ, bsಠಿ;91 ಮಹಿಯ ಭಾರವ ತೆಗೆದ ಪರಶುರಾಮನು ನೀನು ಪ್ರಾಣನ ಪ್ರೀತಿಕರ ರಾಮ ನೀನಿರುವೆ 92 ಕಲಿಯುಗದ ದೇವನೇ ಜ್ಞಾನರೂಪದ ಕೃಷ್ಣ ಬುದ್ಧ ನೀನಿರುವೆ ಧರ್ಮ ಪ್ರಸಾರಣಕೆ ಹಯವನ್ನು ಚೋದಿಸುವ ಕಲ್ಕಿನಾಮಕ ನೀನು ತಿಳಿದು ಜಪ ಮಾಡು 93 ಗಾಯನದಿ ರಕ್ಷಿಸುವೆ ಗಾಯಿತ್ರಿಯೇ ನಮಗೆ ಬ್ರಾಹ್ಮತೇಜವನುಳಿಸಿ ರಕ್ಷಿಪುದು ನಮ್ಮ ಗಾಧಿಪುತ್ರನು ತಾನು ಕ್ಷತ್ರಿಯನದಾದರೂ ಬ್ರಹ್ಮರ್ಷಿಯಾಗಿ ಬಾಳಿದನು ನಿಜವೈ 94 ಸಿರಿವರನೆ ನೀನು ಭಾಸ್ಕರನ ಮಂಡಲದಲ್ಲಿ ಕಮಲದಾಸನದಲ್ಲಿ ಶೋಭಿಸುತಲಿರುವೆ ಚಕ್ರ ಶಂಖ ಮಕರಕುಂಡಲಾದಿಗಳಿಂದ ಲೆನ್ನ ಹೃದಯಕೈತಂದು ನೆಲೆನಿಲ್ಲು 95 ನಿನ್ನ ಸೌವರ್ಣ ತೇಜದ ಬೆಳಕಿನಿಂದೆನ್ನ ಆತ್ಮದ ಜ್ಯೋತಿಯನು ಬೆಳಗಿಸುತ ನೀನು ನಿನ್ನನ್ನೆ ಹಂಬಲಿಪ ಭವಬಂಧ ತಪ್ಪಿಸುವ ನಿನ್ನ ಬಳಿಬರುವ ದಾರಿಯನು ತೋರಿಸೆಲಾ 96 ಗಾಯಿತ್ರಿಯ ಜ್ಯೋತಿ ನಂದದಂತಿರಲು ನಾನಷ್ಟಾಕ್ಷರಿಯ ಮಂತ್ರ ಜಪಿಸುವೆನು ನಾನು ವಿದ್ಯುತ್ತಿನದು ರಕ್ಷೆ ನಾರಾಯಣನ ಮಂತ್ರ ಅದರಿಂದ ರಕ್ಷಣೆಯ ಮಾಡುವೆನು ನಾನು 97 ಆತ್ಮರಕ್ಷಕನು ಹರಿ ದೇಹರಕ್ಷಕನು ಹರ ಹರನ ದೇಹವು ಪ್ರಕೃತಿಪಂಚಕದಿ ರಚಿತ ಆತ್ಮದಲ್ಲಿರುವಹಂಕೃತಿಗೊಡೆಯ ಹರ ಹರಿಹರರೇ ದೇಹಾತ್ಮ ರಕ್ಷಣೆಯ ಮಾಡಿ98 ವಿದ್ಯುತ್ತು ಬಿಳಿ ಕಪ್ಪು ಕೆಂಪು ನೀಲಿಗಳೆಂಬ ಐದು ಮುಖ ಹರನಿಗಿಹುದದರಿಂದ ನಾನು ಪಂಚಾಕ್ಷರಿಯ ಮಾಡಿ ಹರನನ್ನು ಧ್ಯಾನಿಸುವೆ ಧರ್ಮಾಯತನದ ದೇಹ ರಕ್ಷಣೆಯ ಮಾಳ್ಪೆ 99 ವೈರಿ ಮನದಲ್ಲೆ ಹುಟ್ಟಿದವ ಮನದೊಡೆಯ ರುದ್ರನನ್ನೇ ಹೊಡೆಯಲೆಂದು ಐದು ಬಯಕೆಗಳೆಂಬ ಬಾಣದಿಂ ಹೊಡೆಯುತಿರೆ ಕಾಮದಹನವ ಹೊಂದಿ ಬೂದಿಯಾದನವ 100 ಆ ಕಾಮನೇ ಮತ್ತೆ ಅಂಗಹೀನನದಾಗಿ ರುದ್ರನನ್ನರ್ಧನಾರೀಶ್ವರನ ಮಾಡಿ ಮನವನ್ನು ಕೆಡಿಸುತಲಿ ಮಾನವರೆಲ್ಲರನು ದುಃಖದಾ ಮಡುವಿನಲಿ ಕೆಡಹುವನು ನಿಜದಿ 101 ದೇಹಸೃಷ್ಟಿಗೆ ಮೂಲ ಮಣ್ಣು ತೇಜವು ನೀರು ಈ ಮೂರು ಮೂರುವಿಧವಾಗಿ ಪರಿಣಮಿಸಿ ಪಾಲನೆಯು ನಡೆಯುವದು ದೇವರಿಂದಲೇ ಇದನು ಉಪನಿಷತಿನಾಧಾರದಿಂದ ಪೇಳುವೆನು 102 ಭಕ್ಷ್ಯಭೋಜ್ಯವು ಲೇಹ್ಯ ಪೇಯವೆಂಬೀ ನಾಲ್ಕು ಪ್ರಾಣದಾಹುತಿಯನ್ನು ನಾವು ಕೊಡುತಿಹೆವು ಅದರಿಂದ ಪಾಕವನು ಮಾಡುತ್ತ ದೇವನವ ಸಪ್ತಧಾತುಗಳನ್ನು ಮಾಡಿ ರಕ್ಷಿಸುವ 103 ತೇಜವದು ವಾಗ್ರೂಪ ತಾಳುವದು ಮತ್ತದುವೆ ಅಸ್ಥಿಮಜ್ಜಗಳಾಗುವವು ನಿಜವ ಪೇಳ್ವೆ ವೈದ್ಯಕೀಯಪರೀಕ್ಷೆಗೊಳಗಾಗಿ ತಿಳಿವೆ ನೀನ್ ಶ್ರುತಿತತ್ವವೆಂದೆಂದು ಸಾರುತಿಹುದಿದನೆ 104 ಮಣ್ಣಿನನ್ನವೆ ಮೊದಲು ಮನವಾಗಿ ಮತ್ತದುವೆ ಮಾಂಸ ರೂಪವ ತಾಳಿ ಮಲವದಾಗುವುದು ನೀರೆ ಮುಖ್ಯ ಪ್ರಾಣ ಮತ್ತೆ ಶೋಣಿತವಾಗಿ ಮೂತ್ರರೂಪವ ತಾಳಿ ಹೊರಗೆ ಹೋಗುವುದು 105 ಸ್ವೇದಜೋದ್ಭಿಜ್ಜ ಮತ್ತಂಡಜ ಜರಾಯುಜಂಗಳು ಎಂಬ ನಾಲ್ಕು ವಿಧ ಜೀವಜಂತುಗಳು ನಾರಾಯಣನು ತಾನು ಜಲವಾಸಿಯಾಗುತಲಿ ಜೀವಜಂತುಗಳನ್ನು ಸೃಷ್ಟಿ ಮಾಡುವನು 106 ನಿನ್ನ ಗುಣದೋಷಗಳ ಪರರೆಂಬ ದರ್ಪಣದಿ ನೋಡಿದರೆ ತೋರುವವು ನಿನ್ನವೇ ತಿಳಿಯೈ ಪರರಲ್ಲಿ ಕಾಣುತಿಹ ದೋಷಗಳನು ತೊರೆಯುತ್ತ ಗುಣಗಳನು ಎಣಿಸುವವ ಲೋಕಮಾನ್ಯ 107 ಊಧ್ರ್ವಮೂಲದ ದೇವನೂಧ್ರ್ವದ ಹಿಮಾಲಯದೊ ಳುತ್ತುಂಗ ನಾರಾಯಣಪರ್ವತದಲಿ ತಾರಕನು ರಾಮನಂತೆಲ್ಲ ನರರನು ತನ್ನ ಬಳಿಗೆ ಕರೆದೊಯ್ಯಲ್ಕೆ ಮೇಲೆ ನಿಂತಿರುವ 108 ಮಧ್ವಗುರುಹೃದಯಭಾಸ್ಕರನು ನಾರಾಯಣನು ಬದರಿಯೊಳಿಹ ನೆಲೆಗೆ ಕರೆಯಿಸುತಲೆಮ್ಮನ್ನು ಸೇವೆಯನು ಕೈಕೊಂಡು ಭಾವಗತನಾಗಿದ್ದು ಪ್ರೇರಿಸಿದನೀಕೃತಿಗೆ ಪ್ರಕೃತಿ ಪರಮಾತ್ಮ&ಚಿmಠಿ;ಟಿbs, ಠಿ; 109 ಆತ್ಮದಲಿ ಒಳಗಿದ್ದು ಅಂತರಾತ್ಮನು ನೀನು ಆತ್ಮದ ಬಹಿರ್ಗತನು ಪರಮಾತ್ಮ ನೀನು ದೇಹದಿಂ ಹೊರಗಿದ್ದು ಕಾಲಾತ್ಮಕನು ನೀನು ನೀನಿಲ್ಲದಿಹ ದೇಶಕಾಲವೆಲ್ಲಿಹುದು? 110 ಮೂರು ನಾಮಗಳಿಹವು ಶ್ರೀನಿವಾಸನೆ ನಿನಗೆ ಅವುಗಳನು ನೆನೆದರೇ ಪಾಪ ಪರಿಹಾರ ಅಚ್ಯುತಾನಂತಗೋವಿಂದನೆನ್ನುವ ನಾಮ ಕೃತದೋಷ ಪರಿಹಾರಕಾಗಿ ಜಪಮಾಳ್ಪೆ 111 ಮಧುರಾಖ್ಯನಾಮವನು ಹಿಂದು ಮುಂದಾಗಿಸುತ ಮಧ್ಯದಕ್ಷರವನ್ನು ಕೈಯಲ್ಲಿಯಿರಿಸು ನಾಮಜಪ ಮಾಡದಿರೆ ಅವನ ಮುಖಕೆಸೆದು ನೀ ನನವರತ ಜಪಮಾಡಿ ಸಿದ್ಧಿಪಡೆ ಮನುಜಾ 112 ಅಣುವಿಂದ ಅಣುವಾಗಿ ಮಹದಿಂದ ಮಹತ್ತಾಗಿ ನಿನ್ನ ದರುಶನವು ಜನರಾರಿಗೂ ಇಲ್ಲ ಮಧ್ಯಕಾಲದಿ ಮಾತ್ರ ದರುಶನವು ವಸ್ತುವಿಗೆ ಅವತಾರ ರೂಪಗಳೆ ಪೂಜಾರ್ಹವಿಹವು 113 ಎಲ್ಲರೂ ಶ್ರೀಹರಿಯ ನೆಲೆಯೆಂದು ನೀನರಿತು ಮಮತೆಯಿಂ ನೋಡುತಲಿ ಸುಖವನನುಭವಿಸು ಹೊಲೆಯನಾದರು ನಿನ್ನ ನಂಬಿ ಮರೆಹೊಕ್ಕಿದರೆ ಕೈಬಿಡದೆ ನೀನವನ ರಕ್ಷಿಸಲೆ ಮನುಜಾ 114 ಹಲವಾರು ಜಾತಿಗಳು ಹಲವಾರು ಮತಗಳಿಹ ವವುಗಳಿಗೆ ಮೂಲಮತ ವೇದಮತವೊಂದೆ ಬೈಬಲ್ ಖುರಾನ್ ಮೊದಲಾದ ಪೆಸರಿಂದದುವೆ ಲೋಕದಲ್ಲೆಲ್ಲು ಪಸರಿಸುತಲಿಹವು 115 ಭವಬಂಧನವ ಕಳೆದು ತನ್ನ ಬಳಿಗೊಯ್ಯುವವ ನೀನಲ್ಲದಿನ್ನಾರು ಹರಿಯೆ ಶ್ರೀರಾಮ ಸಾಂತಾನಿಕದ ಲೋಕಕೊಟ್ಟು ರಕ್ಷಿಸಿದ ಹರಿ ತಾರಕನು ನೀನಿರುವೆ ನೀನೆ ಗತಿ ದೊರೆಯೆನಗೆ 116 ಪರಶುರಾಮನ ರೂಪದಿಂದ ನೀಂ ತಪಗೈದ ಪಾಜಕ ಕ್ಷೇತ್ರದಲಿ ಭಕುತನವತರಿಸೆ ಜ್ಞಾನರೂಪದಿ ನೀನು ಅವನ ಹೃದಯವ ಹೊಕ್ಕು ಮಧ್ವಮತವನು ಜಗದಿ ದೇವ ಪಸರಿಸಿದೆ 117 ಮಿನುಗು ಹುಳಗಳ ಸೃಜಿಸಿ ಬೆಳಕನದರಲ್ಲಿರಿಸಿ ಕಗ್ಗತ್ತಲೆಯ ಕಾಡುಗಳಲಿ ರಕ್ಷಿಸುವೆಯೊ ಅಂತೆಯೇ ನಮ್ಮ ದೇಹದೊಳಗಿದ್ದು ನೀನ್ ಪ್ರತಿಬಿಂಬ ಜೀವವನು ರಕ್ಷಿಸುವೆ ದೇವಾ 118 ಪರಶುರಾಮನು ರಾಮ ಪರಶುರಾಮನು ಕೃಷ್ಣ ನರನು ನಾರಾಯಣನು ವ್ಯಾಸ ಮೊದಲಾಗಿ ಒಂದಾಗಿ ಬೇರೆಯಾಗಿಯೆ ರೂಪ ತಾಳುತ್ತ ಭಕ್ತರಕ್ಷಕನಾಗಿ ದುಷ್ಟವಂಚಕನು 119 ಇಂದ್ರಿಯಂಗಳ ಹೊರಮುಖವಾಗಿ ಸೃಷ್ಟಿಸಿದೆ ಹೃದಯಗುಹೆಯಲ್ಲಿರುವೆ ಕಾಣುವುದದೆಂತು? ಮನದಬಾಗಿಲ ತೆರೆದು ಅಂತರ್ಮುಖದಿ ನೋಡೆ ಪ್ರತ್ಯಗಾತ್ಮನು ನೀನು ಕಾಣುವದು ನಿಜವು 120 ಕುರುಡನಾಗಿಹೆ ನಾನು ಕುರುಡು ಇಂದ್ರಿಯಂಗಳಿಂ ತೋರುಬೆರಳಿಂದ ತೋರಿಸಲು ಬಯಸಿದೆನು ನನಗೆ ಅಂಜನಹಾಕಿ ತೋರು ನಿನ್ನ ಜ್ಯೋತಿ ವಿಶ್ವತಶ್ಚಕ್ಷು ಪರಮಾತ್ಮ ಶರಣೆಂಬೆ 121 ಕೋಟಿ ಗೋದಾನಕ್ಕೂ ಮಿಗಿಲಾಗಿ ಪುಣ್ಯಕರ ನಿನ್ನ ನಾಮದ ಜಪವು ತಾರಕನು ನೀನು ತಿಳಿದ ಗುಣಸಾಗರದ ಹನಿಗಳನು ಹೆಕ್ಕಿ ನಾನ್ ನುತಿಸಿದೆನು ನಿನ್ನನ್ನು ಮುಕ್ತಿದಾಯಕನೆ 122 ಸುಗುಣೇಂದ್ರ ಮೊದಲಾದ ಯತಿವರರ ಪೂಜೆಯಿಂ ಜ್ಞಾನರೂಪದ ನೀನು ಸಂತಸವ ತಾಳಿ ಜ್ಞಾನಭಂಡಾರಿ ಯತಿವರರಿಗೆಲ್ಲರ್ಗೆ ಜ್ಞಾನಾಮೃತವ ಕೊಟ್ಟು ರಕ್ಷಿಸುವೆ ಹರಿಯೇ 123 ಭವದಿ ಬಂಧಿಸಿಯೆನ್ನ ಭಾವಗತನಾಗಿದ್ದು ದುಷ್ಕರ್ಮ ಮಾಡಿಸುತ ಫಲ ಕೊಡುವದೇಕೆ? ಎನ್ನ ಕೈಯಿಂದೆತ್ತಿ ಬಳಿಗೆ ಕರೆದೊಯ್ಯು 124 ಉಚ್ಛ್ವಾಸ ನಿಶ್ವಾಸ ರೂಪದಿಂದೊಳಹೊಕ್ಕು ಆತ್ಮ ಸಂದರ್ಶನವ ಮಾಡುತ್ತ ವಾಯು ಇಪ್ಪತ್ತಒಂದುಸಾಸಿರ ಮತ್ತೆ ಆರ್ನೂರು ಹಂಸಮಂತ್ರದ ಜಪವ ಮಾಡುವನು ದಿನಕೆ 125 ಪರಶುರಾಮನು ರಾಜರೆಲ್ಲರನು ಸಂಹರಿಸಿ ಭೂಮಿಯನು ನಕ್ಷತ್ರಮಂಡಲವ ಮಾಡಿ ವಿಶ್ವಜಿತ್‍ಯಾಗದಲಿ ಕಶ್ಯಪರಿಗೀಯಲದ ಕಾಶ್ಯಪಿಯ ನಾಮವನು ಭೂಮಿ ಪಡೆಯಿತಲಾ 126 ಕಶ್ಯಪರ ತಪದಿಂದ ರಾಜರಿಲ್ಲದ ಭೂಮಿ ಭಾರದಿಂ ಕೆಳಗಿಳಿಯೆ ಊರುವಿಂದೆತ್ತಿ ಅವಳ ಮೊರೆ ಕೇಳಿ ರಾಜವಂಶವನ್ನುದ್ಧರಿಸೆ ಉರ್ವಿನಾಮವ ಪಡೆಯಿತು ಭೂಮಿ ನಿಜವು 127 ವ್ಯಾಸಪುತ್ರನದಾಗಿ ವ್ಯಾಸಪಿತ ನಾನಾಗಿ ವ್ಯಾಸಭವನದ ಒಳಗೆ ಭದ್ರನಾಗಿದ್ದೆ ಈ ಭವನದಿಂದೆನ್ನ ನಿನ್ನ ಭವನಕೆ ಒಯ್ಯು ಅಮೃತಲೋಕದಿ ನಿನ್ನ ಸೇ, ವೆ ಗೈಯ್ಯುವೆನು 128 ರಾಧಿಕಾರಮಣನೆ ಮಧುರಾಪುರಾಧಿಪತಿ ದಾನವಾಂತಕ ಕೃಷ್ಣ ಸತ್ಯಸ್ವರೂಪ ವಿಶ್ವಜ್ಞ ಪೂಜಿತನೆ ರಕ್ಷಿಸೆನ್ನನು ಹರಿಯೇ ಚಿತ್ತದಲಿ ನೆಲೆನಿಲ್ಲು ತಂದೆ ಕಾಪಾಡು 129 ಇಂದ್ರಾಣಿ ತಪಗೈದ ತಾನದಲಿ ಚ್ಯವನಮುನಿ ವೇದಾದ್ರಿ ಎಂಬಲ್ಲಿ ತಪಗೈಯುತ್ತಿದ್ದ ಸ್ವರ್ಣವರ್ಣವನ್ನಿತ್ತು ಕಣ್ಣಿತ್ತ ಸ್ವರ್ಣನದಿ ಹರಿಯುತಿಹುದಿಲ್ಲಿಯೇ ಈಗಲೂ ನಿಜವು 130 ಪ್ರಕೃತಿ ಪ್ರಕೃತಿಯ ಭೇದ ಪ್ರಕೃತಿ ಜೀವದ ಭೇದ ಜೀವ ಜೀವಗಳ ಭೇದ ಮೂರನೇಯದು ಜೀವೇಶ ಭೇದವದು ಪ್ರಕೃತೀಶ ಭೇದವೆಂ ದಿಹವು ಪ್ರಪಂಚದಲಿ ಪಂಚಭೇದಗಳು 131
--------------
ನಿಡಂಬೂರು ರಾಮದಾಸ
ಗೃಹಸಮರ್ಪಣೆ ಪುರುಷಾರ್ಥದಾಯಿ ಶ್ರೀವರ ನೀ ನಿಲಯದಿ ಸ್ಥಿರವಾಗು ಕರುಣಾನಿಧೆ ವರದೇಶ ನಿಜಪಾದ ಸರಸೀಜ ಮಕರಂದ ನಿತ್ಯ ಪ. ಆವ ಕಾಲಕು ಸಿರಿದೇವಿಯರಸ ನೀನೆ ಕಾವಲಾಗಿರುವಿ ಎಂದು ಭಾವಶುದ್ಧದಿ ನಿನ್ನ ಸೇವಾರತಿಯನಿತ್ತು ಪಾವನಗೊಳಿಪ ಬಂಧು ಕಾರುಣ್ಯಸಿಂಧು ವಿರಿಂಚಿ ಭವಾಹಿ ವಿಪತಿ ಸು- ರಾವಳೀಶಯವೆಂದು ರವಿಮುಖ ದೇವ ಋಷಿಗಣ ದೇವ್ಯ ನಿನ್ನ ಕ- ನಿತ್ಯ ಬಯಸುವೆ 1 ನಿನ್ನ ಕಟಾಕ್ಷ ಸಂಪೂರ್ಣವಾಗಿರಲೆನ- ಗನ್ಯರ ಭಯವಿಲ್ಲವು ಪರಮ ಸುಗು- ಣಾರ್ಣವ ನಿನಗೆಲ್ಲವು ತಾ ಸೇರಿರುವವು ಪನ್ನಗಾರಿ ಧ್ವಜ ಪರೇಶ ಮ- ಹೋನ್ನತಿ ಪ್ರದ ಮೂಜಗದ್ಭವ ನಿನ್ನ ದಾಸರದಾಸನೆಂದರಿ- ದೆನ್ನ ಮೇಲ್ಕಡೆಗಂಣನಿರಿಸುತ 2 ಪಂಕಜಾಲಯ ಭೂವರ ಕಿಂಕರಾಧಾರನಿ:- ಶಂಕ ಕೃಪಾಕರ ಅಂಕಿತ ಕೊಡು ಸಾದರ ಬಲಭದ್ರ ಸೋದರ ಶಂಕರನೆ ಶುಭಕರ ಕಮಲವನು ಶಂಕಿಸಿದೆ ಶಿರದಲ್ಲಿ ಕಲ್ಪಿಸಿ ಅಂಕುರಿತ ಭಯ ಬಿಡಿಸು ಸಕಲಾ- ಶಂಕವಾರಣ ವೆಂಕಟೇಶ್ವರ 3
--------------
ತುಪಾಕಿ ವೆಂಕಟರಮಣಾಚಾರ್ಯ
ಚರಣವ ನರ್ಚಿಸುವೆ ಹರಿ ನಿನ್ನ ಮರೆಯದೆ ಕೀರ್ತಿಸುವೆ ನೀನೆ ಎನ್ನರಸ ರಕ್ಷಿಸು ಎಂದು ಪ ರಕ್ಷಿಸು ಎಂದು 1 ಸುಗುಣಂಬರೀಶ ಭೂಪಗೆ ಕೊಡಲಾಕ್ಷಣ ಗಮನ ಚನ್ನಿಗನೆ ರಕ್ಷಿಸು ಎಂದು 2 ಮುಳಿದು ಗಜವ ನೆಗಳೆಳೆಯಲು ಭಯದಲಿ ನಳಿನಾಕ್ಷ ನಿನಗೆ ದೂರಲು ಬೇಗದಲಿ ಸಾರಿ ಸುಲಲಿತ ಮಹಿಮನೆಗಳ ಸೀಳಿ ಕರಿಯನು ಸಲಹಿದೆ ದೇವ ಗೋವಳನೆ ರಕ್ಷಿಸು ಎಂದು 3 ಬೇಗದಲಿ ಕಂಬದಿಬಂದು ಸದೆದು ದಾನವನ ದಾಯದಲಿ ಕಾಯ್ದು ಪದುಮಾಕ್ಷ ನರಹರಿ ಮುದದಿ ರಕ್ಷಿಸು ಎಂದು 4 ದುರುಳ ದುಶ್ಯಾಸನ ಭೂವರ ಪಾಂಡು ತನುಜರ ಅರಸಿಯ ಸೀರೆಯ ಭರದಿ ಸೆಳೆಯಲಾಗ ಮೊರೆಯಿಡಲಕ್ಷಯ ವರವನಿತ್ತು ಸಲಹಿದ ಹರಿ ಸುತ ಕೋಣೆಯ ಲಕ್ಷ್ಮೀಶ ರಕ್ಷಿಸು ಎಂದು 5
--------------
ಕವಿ ಪರಮದೇವದಾಸರು
ಜಗದಾದಿವಂದ್ಯನಿಗೆ ಶರಣುಪ ಪನ್ನಗಾನಗದೊಡೆಯ ಶರಣು 1 ತವಪದನಖಾಗ್ರಕೆ ಶರಣು2 ಮೂಡಲಾಗಿರಿಗೆ ಶರಣು ಗಿರಿಯ ಅಡಿದಾವರೆಗಳಿಗೆ ಶರಣು3 ನಡೆರ್ವಡಿಗಳಿಗೆ ಶರಣು4 ಮೆಟ್ಟು ಮೆಟ್ಟಲಿಗೆ ಶರಣು ಮನಮುಟ್ಟ ಮೆಟ್ಟಲೇರುತಿಹ ನಿನ್ನಿಷ್ಟ ಭಕ್ತರಿಗೆ ಶರಣು 5 ತನುಕಷ್ಟ ಹರಿಸಿ ಮನತುಷ್ಟಿಯನು ತೋರ್ವ ಬೆಟ್ಟದಂದಕ್ಕೆಲ್ಲ ಶರಣು 6 ಪರಿವಾರಕ್ಕೆಲ್ಲ ಶರಣು7 ಸ್ವರಶಬ್ದವಾಚ್ಯತವ ಶರಣು 8 ಚೆಲ್ವ ಗಾಳಿಗೋಪುರ ದ್ವಾರಕ್ಕೆ ಶರಣು 9 ಲೀಲೆಯಿಂದಲಿ ನಿನ್ನನೋಲೈಪ ಭಕ್ತರ ಪಾದಪಲ್ಲವಂಗಳಿಗೆ ಶರಣು 10 ಗೋವಿಂದ ಸಚ್ಚಿದಾನಂದ ಮುಕುಂದನೆಂದು- ಚ್ಚರಿಪ ಭಕ್ತರಿಗೆ ಶರಣು11 ಹರಿ ಹರೀ ಹರಿ ಎಂದು ಹರಿದಾರಿ ಪಿಡಿದ ವರ ಅಡಿದಾವರೆಗಳಿಗೆ ಶರಣು 12 ಪರಿಪರಿ ಭಾಧೆಯಿಂ ತರಳನ್ನ ಕಾಯ್ದ ಶ್ರೀ ನರಹರಿಯ ಚರಣಾರವಿಂದಕ್ಕೆ ಶರಣು 13 ತಿರುದಾರಿ ಮೊಣಕಾಲ ಮುರಿಗೆ ಶರಣು 14 ಭಕ್ತರಾಪತ್ತಳಿವ ಶಕ್ತಿಸಂಪತ್ತೀವ ಉತ್ತಮೋತ್ತಮ ಭಕ್ತರಾ ಮಂಟಪಕ್ಕೆ ಶರಣು 15 ಭಕ್ತಿಯಿಂದಲಿ ಸಪ್ತಗಿರಿಯ ದಾಟಿದ ಹರಿ- ಭಕ್ತಜನಸಂದೋಹಗಳಿಗೆ ಶರಣು 16 ಭಕ್ತರುಧ್ಧರಿಸಲು ನಿಂದ ಸಮೀರನಿಗೆ ಶರಣು17 ಜೀವರಿವರೆನ್ನುವರು ದರುಶನವನೀಯೆಂದು ಕ- ರವ ಮುಗಿದು ಹರಿಯ ಸ್ತುತಿಸುವಗೆ ಶರಣು 18 ಪಾವನಾ ಮೂರ್ತಿಯನು ಮಾನಸದಿ ಧೇನಿಸಲು ಭಾವಶುಧ್ದಿಯನೀವ ಜೀವೇಶನಿಗೆ ಶರಣು 19 ಸಚ್ಚಿದಾನಂದಾತ್ಮ ಶ್ರೀ ಮುಕುಂದನ ದಿವ್ಯ ಅರಮನೆಯ ಮಹಾದ್ವಾರಕ್ಕೆ ಶರಣು 20 ಸಿರಿ ಅವ್ಯಾಕೃತಾಕಾಶಾವರಣಕ್ಕೆ ಶರಣು 21 ತೀರ್ಥಮಹಿಮೋಪೇತ ಸ್ವಾಮಿಪುಷ್ಕರಣೀ- ತಟವಿರಾಜಿತ ಅಶ್ವತ್ಥವೃಕ್ಷರಾಜನಿಗೆ ಶರಣು22 ಭೂದೇವಿಯಾರಮಣ ಆದಿಭೂವರಹ ಮೂರ್ತಿಯ ಶ್ರೀಪಾದಯುಗ್ಮಕ್ಕೆ ಶರಣು 23 ಬ್ರಹ್ಮಾಂಡದೊಡೆಯನ ದಿವ್ಯ ನಿಲಯದೊಳಿರುವ ಬಹಿರಾವರಣಕ್ಕೆ ಶರಣು 24 ಸರ್ವಗುಣಸಂಪೂರ್ಣ ವೈಕುಂಠಮಂದಿರನ ಸ್ವರ್ಣಮಯ ಸುಪರ್ಣಸ್ಥಂಭಕ್ಕೆ ಶರಣು 25 ಗಮನ ನಿರ್ಗಮನವುಳ್ಳ ಸುಮನಸರ ಭಕ್ತಜನಸಂಘಕ್ಕೆ ಶರಣು26 ಅಂತರಾವರಣಕ್ಕೆ ಶರಣು 27 ಕಾಂಚನರೂಪ ಸುವರ್ಣಮುಖರೀನದಿ ವಿ- ರಾಜಿತ ತೊಟ್ಟಿತೀರ್ಥ ಸಮಸ್ತ ತೀರ್ಥಗಳಿಗೆ ಶರಣು 28 ಸುಮನಸರು ಹೃನ್ಮನದಿ ಧೇನಿಸುವ ಕಾಂಚನ ವಿಮಾನದಲಿ ಬೆಳಗುತಿಹ ಶ್ರೀ ಶ್ರೀನಿವಾಸನಿಗೆ ಶರಣು 29 ಭೂಗಿರಿಯ ಸೇರಿದ ಶ್ರೀಹರಿಗೆ ಶರಣು 30 ವಾರಿಯೊಳಗ್ಯೋಲಾಡಿ ಶ್ರೀಶೈಲದೊಳು ನಿಂ- ತ ಶ್ರೀಲೋ¯ನಾಗಿರ್ಪಗೆ ಶರಣು31 ಶೇಷ್ಠನೆನಿಸಿದ ದಿಟ್ಟ ಮೂರುತಿಗೆ ಶರಣು 32 ಧರೆಯ ಕೆದರೀ ಬಂದು ಗಿರಿಯ ವರಹನ ಬೇಡಿ ಮರುಳುಮಾಡಿದ ಮಾಯಾರಮಣನಿಗೆ ಶರಣು 33 ತರಳರೂಪವ ಕೆಡಿಸಿ ಗಿರಿಯ ಹುದರಯೊಳಡಗಿ ಸುರಜೇಷ್ಠನೆಂದೀಗ ಪೂಜೆ ಗೊಂಬುವಗೆ ಶರಣು 34 ವಟಪತ್ರಶಾಯಿ ನೀ ವಟುವಾಗಿ ಬೇಡಿ ಭ- ವಾಟವಿಯ ದಾಟಿಸಲು ನಿಂದವಗೆ ಶರಣು 35 ಪೆತ್ತಮಾತೆಯ ಹರಿಸಿ ಮೆತ್ತನಿಲ್ಲಿಗೆ ಬಂದು ಉತ್ತಮಾಗತಿಪ್ರದ ಸರ್ವೋತ್ತಮಗೆ ಶರಣು 36 ಕ್ಷಿತಿಸುತೆಯ ಮಾತನು ಹಿತದಿ ಪಾಲಿಸೆ ವೇದ- ವತಿಯ ಪತಿಯಾಗಿ ನಿಂದವಗೆ ಶರಣು 37 ಗುಟ್ಟಾಗಿ ಪಾಲ್ಕುಡಿದು ಪೆಟ್ಟಿನಾ ನೆಪದಲ್ಲಿ ದೃಷ್ಟಿಗೋಚರನಾದ ಬೆಟ್ಟದೊಡೆಯನಿಗೆ ಶರಣು38 ಉತ್ತಮಾಸ್ತ್ರೀಯರಿಗೆ ನಾಚಿ ಬತ್ತಲೆಯಾಗಿ ಹುತ್ತದೊಳು ಅಡಗಿಯೆ ಮೆರೆದವಗೆ ಶರಣು 39 ಸಿರಿಯ ಹಯವನು ಮಾಡಿ ಚರಿಸಿ ಹರಿಸಿಕೊಂಡವನಿಗೆ ಶರಣು 40 ಹಿರಣ್ಯಗರ್ಭನ ಜನಕ ಸನ್ಮಹಿಯ ಸನ್ನಿಧಿಯ ಕನಕಮಯಕವಾಟಕ್ಕೆ ಶರಣು 41 ತಟಿಕ್ಕೋಟಿನಿಭ ಪೂರ್ಣ ಸಂಪೂರ್ಣ ಲಕ್ಷಣ ಸನ್ಮಾಂಗಳಾ ಸುಂದರ ಮೂರ್ತೇ ತವ ಶರಣು42 ಮುಕ್ತಾಮುಕ್ತಗಣ ವಂದಿತಾ ತವ ಶರಣು43 ನಂದಸುನಂದನ ಜಯವಿಜಯಾದಿ ಪಾ- ಸಂಸೇವ್ಯಮಾನ ತವ ಶರಣು44 ಸರ್ವಾಂಗುಳ್ಳಂಗುಷ್ಠದಳ ವಿಲಸಿತ ಸತ್ ಪಾದ- ಪಂಕಜ ಧ್ವಜ ವಜ್ರಾಂಕುಶಾದಿ ಸುಚಿಹ್ನ ಚಿಹ್ನಿತ ತವ ಶರಣು 45 ಗುಲ್ಫಾರುಣನಖ ಧೃತಾ ದೀಧಿತಿಯುಕ್ತ ತವ ಶರಣು 46 ಬೃಹತ್ ಕಟಿತಟಶ್ರೋಣಿ ಕರಭೋರು ದ್ವಯಾನಿಶ್ರ ತವ ಶರಣು 47 ವೈಜಯಂತಿ ವನಮಾಲ ತವ ಶರಣು 48 ಪ್ರಲಯ ಪೀವರಭುಜ ತುಂಗಂಶೋರಸ್ಥ ಲಾಶ್ರಯ ತವ ಶರಣು 49 ನ್ವಿತ ತವ ಶರಣು50 ಚಾರುಪ್ರಸನ್ನವದನ ಮಂದಹಾಸ ನಿರೀಕ್ಷಣ ಸು- ಭದ್ರನಾಸ ಚಾರುಸುಕರ್ಣ ಸುಕಪೋಲಅರುಣ ತವ ಶರಣು 51 ಸಹಸ್ರ ಫÀಣಶಿರೋಮಣಿಪ್ರಭಾನ್ವಿತ ಶೇಷಶೈಲಸ್ಥ ಶಾಂತ ಪದ್ಮಪತ್ರಾಯತೇಕ್ಷಣ ತವ ಶರಣು 52 ಅನಂತವೇದೋಕ್ತ ಮಹಿಮೋಪೇತ ಸರ್ವಸ್ವರವರ್ಣ ಸರ್ವಶಬ್ದವಾಚ್ಯ ಪ್ರತಿಪಾದ್ಯ ಶರಣು 53 ಸಚ್ಚಿದಾನಂದಾತ್ಮ ಸರ್ವಸುಗುಣೋಪೇತ ಸರ್ವ ಹೃತ್ಕಮಲಸ್ಥಿತ ತವ ಶರಣು 54 ಅಣುತ್ರ್ಯಣು ತೃಟಿಲವ ಕ್ಷಣಾದಿಕಾಲ ಮಹ- ತ್ಕಾಲಾತ್ಮಕ ನಿತ್ಯನಿರ್ಮಲಮೂರ್ತೇ ತವ ಶರಣು 55 ಪರ ಮೇಷ್ಟಿವಂದಿತ ತವ ಶರಣು 56 ತೈಜಸ ಪ್ರಾಜ್ಞ ತುರ್ಯಾ ದ್ಯಷ್ಟರೂಪಾತ್ಮಕ ತವ ಶರಣು57 ಕಂಸಾರಿ ಮುರಾರಿ ಶ್ರೀಹರಿಯೆ ಶರಣು58 ಭವರೋಗಭೇಷಜ ಭಕ್ತಜನಬಂಧೋ ಮುಚುಕುಂದವರದ ಗೋವಿಂದ ಶರಣು 59 ಮುಕ್ತಾಮುಕ್ತಾಶ್ರಯ ಭಕ್ತಜನಸಂರಕ್ಷಣಾ ವ್ಯಕ್ತಾವ್ಯಕ್ತ ಮಹಿಮ ತವ ಶರಣು 60 ತತ್ತದಾಕಾರ ಜಗದಾಪ್ತ ಶರಣು 61 ಚೇತನಾಚೇತನ ವಿಲಕ್ಷಣ ಸ್ವಗತಭೇದವಿವ- ರ್ಜಿತ ಪತಿತಪಾವನಮೂರ್ತೇ ತವ ಶರಣು 62 ಕ್ಷರಾಕ್ಷರ ಪರುಷಪೂಜಿತ ಪಾದ ಪುರಾಣಪುರುಷೋತ್ತಮನೆ ಶರಣು 63 ರವಿಕೋಟಿಕಿರಣ ರತ್ನಕನಕಮಯ ಮುಕು- ಟಾನ್ವಿತ ತವಶಿರಸ್ಸಿಗೇ ತವ ಶರಣು 64 ಸುಂದರಾನಂದ ಆನನಕೆ ಶರಣು 65 ಶ್ರೀಲೋಲ ಶರಣು 66 ಪೂವಿಲ್ಲನಾ ಬಿಲ್ಲ ಪೋಲ್ವ ಹುಬ್ಬು ಕಂಜ - ದಳದೋಲ್ ಚಂಪಕಾಮುಗುಳಿಗೆಣೆನಾಸಿಕಕೆ ಶರಣು 67 ಮಕರ ಕರ್ಣಕುಂಡಲಾನ್ವಿತ ತವ ಕರ್ಣಕ್ಕೆ ಶರಣು 68
--------------
ಉರಗಾದ್ರಿವಾಸವಿಠಲದಾಸರು
ಜಯ ಕಮಲಾಲಯ ರಮಣ ಜಯಪಾದಾಶ್ರಿತಭರಣ ಜಯಪೂರ್ಣಾಮೃತ ಕರುಣ ಜಯರತ್ನಾಭರಣ ಪ. ನಳಿನನಾಭನು ಪದ್ಮಲಲನೆಯರೊಡಗೂಡಿ ನಲಿವ ಕಾಲದೊಳೊಂದ ನುಡಿದ ಗೋವಿಂದ ಕಲಿಯೊಳಗವತಾರಗೊಳೆನೆಂದ ಮೊದಲಾಗಿ ಚೆಲುವೆ ದಾಸರಿಗೆನ್ನ ನೆಲೆ ತೋರ್ಪದೆಂದು 1 ಇಂದಿರೆ ತೋಷವ ತಾಳಿ ಮಂದಹಾಸದಿ ಪೇಳ್ದಳೊಂದುಪಾಯವನು ಹಿಂದೆ ಲಂಕಾಪುರದಿ ನೊಂದ ವೇದಾವತಿಯ ತಂದು ಲಗ್ನವ ಗಯ್ಯಲೆಂದು ಪೋಗುವುದು 2 ಹೀಗಾದರವತಾರವಾಗದ ಮರ್ಮವು ಸತ್ಯ ಸಾಗುವುದಖಿಳಾರ್ಥ ಭೋಗವ ನೀಡುವುದು ಈಗ ಮುನಿವ ನೆವದಿ ಸಾಗಿ ಕೊಲ್ಲಾಪುರದಿ ನಾಗಶಯನನೆ ನಿನ್ನ ನೆಲೆಯ ನಂಬಿರುವೆ 3 ವಿಕಸಿತ ಪದ್ಮಾನನೆಯ ಯುಕುತಿಯ ಮಾತಿಗೆ ಮೆಚ್ಚಿ ಸಕಲಾವತಾರ ಸಂಭೃತ ಶಕ್ತಿ ಹೆಚ್ಚಿ ಭಕುತ ವತ್ಸಲ ಭೂವರಾಹ ಮೂರ್ತಿಯ ಕಂಡು ಬಕುಳ ದೇವಿಯ ಸಹಾಯವನೆ ಕೈಗೊಂಡು 4 ರಮಾದೇವಿಯ ಕರಸಿ ಬ್ರಹ್ಮಾದಿಗಳ ಬೆರಸಿ ಬ್ರಹ್ಮ ಘೋಷವ ಬೆಳೆಸಿ ಬಹು ಸಂತೋಷಗೊಳಿಸಿ ಅಮರ ಸಭೆಯಲಿ ಭರ್ಮಪೀಠದಿ ಕುಳಿತ ನಿರ್ಮಲಾತ್ಮನ ನೋಡಿ ನಗುತೆಂದಳೊಧುವು 5 ಶುದ್ಧ ಪೂರ್ಣಾನಂದ ಶುಭಗುಣ ಗಣ ಸಾಂದ್ರ ಮುದ್ದು ಮುಖಾಂಬುಜವ ತೋರೊ ಗೋವಿಂದ ಮುದ್ದೆ ಕಸ್ತೂರಿ ಗಂಧಾ ಮೃಗಮದಾದಿಗಳಿಂದ ಮರ್ದಿಸೀದರಶಿನವ ಕೊಳ್ಳೊ ಮುಕುಂದ 6 ಹೂವ ತರುವೆನೆಂದು ಭಾಮೆಯರೊಡಗೊಂಡು ನಾವಂದು ವನದಲ್ಲಿ ನಿಂತಿರುವಲ್ಲಿ ಕಾವಿದಟ್ಟಿಯನುಟ್ಟು ಕುದುರೆ ಮೇಲಳವಟ್ಟು ಕೋವಿದ ಬಂದ್ಯಲ್ಲಿ ಕೋಪವ್ಯಾಕಿಲ್ಲಿ 7 ಮಾನಸವಾಗ ವಿಷಯದ ಮಾತುಗಳಾಡಿದ ಬಗೆಯ ನೀನಿಂದ ಮರೆತೆಯಾ ನಿನ್ನ ಸಂಸ್ಥಿತಿಯ ನಾನಾ ಚಿತ್ರದ ಗತಿಯ ನಿಜ ತುರಂಗದ ಗತಿಯ ಹೀನವಾದರೆ ಹೀಗೆ ತಾಳುವರೆ ಖತಿಯ 8 ಹಳತಾದದೊಂದಶ್ವ ಕಳದ ಚಿಂತೆಯ ತ್ಯಜಿಸು ಪೊಳೆವ ಸಾಸಿರ ಸಂಖ್ಯಗಳಲಿ ಕಣ್ಣಿರಿಸು ಬಳಲಿಸಿದವಳೆಂಬೊ ಛಲವತಾರದೆ ಮನಕೆ ನಲಿನಾಕ್ಷ ಮುಖವೆತ್ತಿ ತೋರೊ ಮಜ್ಜನಕೆ 9 ಹದಿನಾರು ಸಾವಿರ ಚದುರೆಯರನು ರಮಿಸಿ ಮೂರ್ತಿ ಸಾಕೆನಗೆ ಮದನಜನಕ ನಿನ್ನ ಮಹಾತ್ಮ್ಯಯನು ಬಲ್ಲೆ ಪದ ಪದ ಪಾಲಿಸಿದರರಸಿನ ಹಚ್ಚುವೆನು 10 ಕರಿವರ್ಣ ಸಂಕೋಚ ತರದಿರೊ ಮನದಲ್ಲಿ ಕರಿಯಾದ ಕಸ್ತೂರಿ ಪರಿಮಳವಿರದೆ ಸರಸಿಜಾತನ ಶಿರದ ಮೇಲಿರಿಸಿರುವ ಕರಕಂಜವನು ತೋರಲರಿಸಿನ ಹಚ್ಚುವೆನು 11 ಹಿಂಡು ಕೂಡಿದ ದೇವ ಮಂಡಲದೊಳಗಿಂಥ ಪುಂಡು ಮಾತುಗಳೆಂಬ ದಿಂಡೆಯಾತನವು ಗಂಡರಿದಿರು ಚಿಕ್ಕ ಹೆಂಡಿರಾಡುವ ಪರಿಯು ಪುಂಡರೀಕಾಕ್ಷ ಪಾಲಿಸು ತಪ್ಪಿದರೆಯು12 ಈ ನಿಂದಾಸ್ತುತಿಗಳನು ಧ್ಯಾನಿಸಿ ವೆಂಕಟವರನು ಮಾನಿನಿ ಪದ್ಮಾವತಿಗೆ ಮುಖವ ತೋರಿದನು ಸಾನುರಾಗದಿ ಶ್ರೀಭೂಮಾನಿನಿಯರೊಡಗೂಡಿ ತಾನಾಗಿ ದಯಮಾಡಿಲ್ಲಿಗೆ ಬಂದ ನೋಡಿ 13
--------------
ತುಪಾಕಿ ವೆಂಕಟರಮಣಾಚಾರ್ಯ
ದೇವ ನೀನಹುದೋ ದೇವರದೇವ ನೀನಹುದೋ ಪ ದೇವ ರಿಪುವನದಾವ ದುರಿತಾಖ್ಯನಾವ ನಮಿತರ ಕಾವ ಕರುಣಸಂಜೀವ ಜಿತಪೂರ್ಣಕಾಮ ಅ.ಪ ದೇವಕಿಯಲ್ಲವತರಿಸಿ ಗೋಕುಲವನ್ನು ಪಾವನವನ್ನು ಮಾಡಿ ಮಡುಹಿ ಮಾವನ ಮಧು- ರಾವನಿಯನುಗ್ರಸೇನಗಿತ್ತು ದೈತ್ಯಾಳಿಯ ಸವರಿ ಜೀವ ಸಖನಾಗಿ ಪಾಂಡವರಿಗೆ, ಪಾರ್ಥ ಸೇವೆಯಲಿ ಸಂದು ಕೀಲಿಸಿ ಕೌರವರನ್ನು ಭೂವರನ ಹಯಮೇಧಕೊಲಿದು ಬಂದಾ 1 ಧರ್ಮರಾಜನ ಯಜ್ಞತುರಗ ರಕ್ಷೆಗೆ ಕೃತ- ವರ್ಮಜರು ಕೂಡಿ ನಡಸಿ ನೀಲಾಂಕನ ಮರ್ಮವರಿತು ಸೋಲಿಸಿ ಹಂಸಧ್ವಜರನ್ನು ಮಾಮಳಿದಡರಿ ಕರ್ಮವಶದಿಂದ ಬಭ್ರುವಾಹನನ ಕೈಯ ದುರ್ಮರಣವಾದ ವಿಜಯ ಕರ್ಣರನು ನಿತ್ಯ ನಿರ್ಮಳಿಕನಹುದೊ 2 ಮುಂತೆ ನಡೆದರ್ಜುನಿಯ ಗೂಡಿ ತಾಮ್ರಧ್ವ ಜಂ ತುಡುಕಿ ಬರೆ ದ್ವಿಜನಾಗಿ ಶಿಖಿ ದಂತಿಪುರಕೆ ಬಂದರಸನ ಹಯಮೇಧ- ಮಂ ಪಾಲಿಸಿ ತ್ರಿಜಗವನು ಪಾಂಡವರಿ- ಗಿತ್ತೊಲಿದು ಸುರಪುರವ ಪೊರೆವ ಲಕ್ಷ್ಮೀಕಾಂತ ನೀನಹುದೋ 3
--------------
ಕವಿ ಲಕ್ಷ್ಮೀಶ
ದೇವಾ ಬಾರಯ್ಯಾ ವೈಭವದಿ ರಥವನೇರಿ ಸೇವಿಸುವೆನು ಮಧ್ಭಾವದಿ ನೆಲಸೆಂದು ಪಾವನ ಮಣಿಪುರ ಠಾವಿನೊಳಿಹ ಭೂದೇವ ವರ್ಯ ಸಂಶೇವಿತ ಕೇಶವ ಪ ದೇವಗಂಗೆಯಪೆತ್ತ ಪಾವನಗಾತ್ರಧ್ರುವ ಭೂವರೋÀಪಾಸಿತನಾಗಿ ಈ ವಸುಧಿಗೆ ಬಂದು ಪಾವಮಾನ ಶಾಸ್ತ್ರದಿ ಕೋವಿದಯತಿ ವರ ಶ್ರೀ ವಿದ್ಯಾನಿಧಿ ತೀರ್ಥ ಸೇವಿತ ಸಂಸ್ಥಾಪಿತ ಸೇವಕ ಜನ ಸಂಭಾವಿತ ಕಾಮಿತ ವೀವ ಕಾವ ಸದಶಾವತಾರ ನಮೋ ಶ್ರಿವಿರಂಚಿಮುಖ ದೇವನ ಮಿತ ಕಂಚೀವರದನೆ ಪೊರೆ ಶ್ರೀ ವರಕೇಶವ 1 ಕಡು ಶೋಭಿಸುವ ಬಿಳಿಗೊಡೆ ಚಾಮರಾದಿಗಳ ಪಿಡಿದು ಶೇವಿಪ ಜನರೆಡಬಲದಿ ಬರೆ ಸುರರು ಪಂಥsÀವಿಡಿದು ವೇದಪಠಣ ಬಿಡದೆ ಮಾಡುತ ಬರೆ ನುಡಿವ ವಾದ್ಯಗಳಿಂದ ಸಡಗರದಲಿ ದ್ವಿಜಮಡದಿಯರಾರುತಿ ಪಿಡಿದು ಬೆಳಗುತಿರೆ ಕಡು ವೈಭವದಲಿ ಅಡಿಗೆರಗುವೆ ಪಾಲ್ಗಡಲ ಶಯನ ಮೂ- ರಡಿ ರೂಪನೆ ಜಗದೊಡೆಯ ಕೇಶವ 2 ನಂದ ತೀರ್ಥರ ಮತ ಸಿಂಧುವಿಗೆ ಪೂರ್ಣ ಚಂದ್ರರೆನಿಪಯತೀಂದ್ರ ಸತ್ಯ ಪ್ರಮೋದ ರಿಂದ ಪೂಜಿತ ಪದ ದ್ವಂದ್ವ ಮಧ್ಯದೊಳಿಹ ಮಂದಾಕಿನಿಗೆ ಪಿತನೆಂದು ತೋರಿಸಿದಂಥ ಇಂದಿರೆಯರಸನೆ ಮಂದರಧರ ಗೋ ವಿಂದ ಪಾಹಿ ಮುಕುಂದನೆ ಬಾಬಾ- ರೆಂದು ಕರೆವ ದ್ವಿಜ ವೃಂದಮಧ್ಯದಲಿ ಶ್ಯಂದನ ವೇರಿದ ಸುಂದರ ಕೇಶವ 3 ಅಂಬುಜನಾಭನೆ ನಿತಂಬದಿ ಪೊಳೆವ ಪೀ- ತಾಂಬರ ಧೃತ ಶಾತಕುಂಭ ಮಕುಟವದ- ನಾಂಬೋಜವನು ತೋರೋಕುಂಭೀನಸ ಪರಿಯಂಕ ಶಂಭ್ವಾದಿನಮಿತ ನೀಲಾಂಬುಧ ನಿಭಗಾತ್ರ ಕಂಬುಚಕ್ರಸುತ- ದಾಂಬುಜಧರ ಬಲು ಸಂಭ್ರಮದಲಿ ಮುನಿಕುಂಭಜ ಪೂಜಿತ ಕದಂಬ ದುರಿತ ಕಾದಂಬನಿ ಪವನ ಕೃ ಪಾಂಬುಧೆ ಕೇಶವ 4 ಗರುಡ ಮಾರುತರಿಂದ ಪರಶೇವಿತನೆ ಬಾರೊ ಶರಣು ಜನರ ಸುರತರುವೆ ಚನ್ನಕೇಶವ ಧರೆಯೊಳಧಿಕ ಮಣಿಪುರ ಪಂಡಿತಾಗ್ರಣಿ ಸನ್ನುತ ಸರಸಿಜಾಸನ ಪಿತ ಸಿರಿದೇವಿಯು ಈರೆರಡು ರೂಪದಲಿ ಕರದೊಳಗಾರುತಿ ವರಚಾಮರಗಳ ಧರಿಸಿ ಸಿರಿ ' ಕಾರ್ಪರ ನರಹರಿ ' ರೂಪನೆ ಮಾಂ ಪೊರೆವುದು ಕೇಶವ 5
--------------
ಕಾರ್ಪರ ನರಹರಿದಾಸರು
ಧ್ಯಾನ ಮಾಡಿರೊ ರಂಗಯ್ಯನ ಪ ಗಾನ ವಿಲೋಲನ ದೀನಾರ ಪೊರೆವೊನ ಅ.ಪ. ಮೀನ ರೂಪವ ತಾಳಿ ದಾನವಾಖ್ಯನ ಸೀಳಿ ಮಾನವ ಪೊಂದಿದ ಜಾಣ ರಂಗೈಯ್ಯನ 1 ಕೂರ್ಮ ತಾನಾಗಿ ಗಿರಿಯ ಬೆನ್ನಲಿ ಪೊತ್ತು ಸುರರನ್ನೆ ಪೊರೆದ ಗಂಭೀರ ರಂಗೈಯ್ಯನ 2 ವರಾಹ ರೂಪದಿ ಕೋರೆಯ ಕೊನೆಯಲಿ ಧರಣಿಯನೆತ್ತಿದ ಶೂರ ರಂಗೈಯ್ಯನ 3 ನರಹರಿ ರೂಪದಿ ಘೋರ ದೈತ್ಯನ ಸೀಳಿ ತರಳನ ಸಲಹಿದ ಕರುಣಿ ರಂಗೈಯ್ಯನ 4 ಪುಟ್ಟ ಹಾರುವನಾಗಿ | ದಿಟ್ಟ ಬಲಿಗೆ ಒಲಿದು ಕೊಟ್ಟ ವರಗಳ ದಿಟ್ಟ ರಂಗೈಯ್ಯನ 5 ಪರಶು ಪಿಡಿದು ಭೂವರರ ಗೆಲಿದು ಭೂ ಸುರರನ್ನೆ ಸಲಹಿದ ಧೀರ ರಂಗೈಯ್ಯನ6 ಮಾನವ ರೂಪದಿ ದಾನವಾಂತಕನಾಗಿ ದೀನರ ಪೊರೆದ ಸುಜ್ಞಾನಿ ರಂಗೈಯ್ಯನ 7 ಕಂಸನ ವಂಶ ನಿರ್ವಂಶಾಕೋಸುಗ ಯದು ವಂಶದೊಳು ತಾನು ಜನಸಿದನು ಹಿಂಸೆ ಮಾಡುತಲಿರ್ದ ಹಂಸ ಡಿಬಿಕರನ್ನು ಧ್ವಂಸ ಮಾಡಿದ ಮುರಧ್ವಂಸಿ ಕೃಷ್ಣಗೆ 8 ಸತಿಯರ ವ್ರತದಿಂದ ಪತಿತರಳಿಯದಿರೆ ಗತಿ ತೋರದೆ ಭವಕಾತರಿಸೆ ಅತಿ ನಗ್ನದಿ ಬಂದು ವ್ರತಭಂಗ ಮಾಡಿದ ಸಿರಿ ಕಂಠÀನುತನಾದ ಸಿತವಾಹನ ಸಖನ 9 ವೇದ ಬಾಹಿತರನ್ನು ಭೂದೇವಿ ಧರಿಸದೆ ಮಾಧವ ಪೊರೆಯೆಂದು ಮೊರೆಯಿಡಲು ಚದುರತನದಿ ಸತಿಯ ಕುದುರೆಯ ಮಾಡಿತಾ ಕೊಂಡ ಕದನದಿ ಕೊಂದವನ 10 ಮಂಗಳ ಮಹಿಮನ ಶೃಂಗಾರ ಪ್ರಿಯನ ಅಂಗಜಾರಿಯ ಧನುರ್ಭಂಗನ ಅಂಗಳದೊಳು ಮೂರ್ಲೋಕಂಗಳ ತೋರಿದ ತುಂಗ ವಿಕ್ರಮನಾದ ರಂಗೇಶವಿಠಲನ 11
--------------
ರಂಗೇಶವಿಠಲದಾಸರು
ನವವಿಧ ಭಕ್ತಿ ಶ್ರವಣ ಪಾವನವಾದ ಹರಿಕಥೆ ಪುರಾಣ ಮೊದ ಲಾದುದನು ಕೇಳುತ್ತಿ ಪರಮಾತ್ಮನನ್ನು ಹೃದಯ ಪೀಠದಲಿರಿಸಿ ಪೂಜಿಸುವ ಭಕ್ತನೇ ಶ್ರವಣ ಫಲ ಹೊಂದಿದವ ಶ್ರವಣಭಕ್ತಿಯಿದು 64 ದಾಸಕೂಟದ ಭಕ್ತರಿಂ ರಚಿತವಾದ ಸು ಶ್ರಾವ್ಯ ಹಾಡುಗಳನ್ನು ಪಾಡಿ ಕುಣಿಯುತ್ತ ದೇವರನು ನೆನೆನೆನೆದು ಧ್ಯಾನಿಸುವ ಭಕ್ತರೇ ಕೀರ್ತನದ ಭಕ್ತರೆಂದರಿ ಮನುಜ ನೀನು 65 ವ್ಯಾಸ ದಾಸರ ಕೂಟದಿಂದರಿತ ದೇವರನು ಮಾನಸದ ಮಂಟಪದಲ್ಲಿರಿಸಿ ಪೂಜಿಸುತ ಅದನೆ ಪೌನಃಪುನ್ಯದಿಂದ ಮೆಲುಕಾಡುವದು ಸ್ಮರಣಭಕ್ತಿಯಿದೆಂದು ತಿಳಿ ಮನುಜ ನೀನು 66 ಅವತಾರ ರೂಪಗಳ ಮೂರ್ತಿಗಳ ರಚಿಸುತಲಿ ನಿನ್ನ ಚಿತ್ತದ ದೇವರನ್ನಲ್ಲಿಯಿರಿಸಿ ಅವನ ಗುಣಗಳ ನೆನೆದು ಪಾದಸೇವೆಯ ಮಾಡೆ ಪಾದಸೇವನಭಕ್ತಿಯೆಂದು ತಿಳಿ ಮನುಜ 67 ಹೂ ತುಳಸಿ ಮೊದಲಾದ ವಸ್ತುಗಳ ಶೇಖರಿಸಿ ದೇವ ಮೂರ್ತಿಗಳನ್ನು ಇದಿರಲ್ಲಿಯಿರಿಸಿ ಷೋಡಶದ ಉಪಚಾರ ಪೂಜೆಗಳ ನಿತ್ಯದಲಿ ಮಾಡುವುದೆ ಅರ್ಚನದ ಭಕ್ತಿಯಿದು ತಿಳಿಯೈ 68 ಎದೆ ಶಿರಸು ಕಣ್ಣು ಮನ ಕೈಕಾಲು ಮೊಣಕಾಲು ವಾಗೆಂಬುದೆಂಟಂಗಗಳನು ಪಾದದೆಡೆಯೀಡಾಡಿ ನಮಿಸುವುದೇ ವಂದನವು ಸಾಷ್ಟಾಂಗನಮನವಿದು ತಿಳಿಯೈ 69 ದಾಸೋಹವೆಂಬುದನು ತಿಳಿದು ನೀನನವರತ ಫಲದ ಬಯಕೆಯ ತೊರೆದು ಸೇವೆಯನು ಮಾಡೆ ಸೇವಕನ ನಿನ್ನನ್ನು ತನ್ನ ಬಳಿಗೊಯ್ಯುವನು ಭವಬಂಧ ತೊರೆಯಿಸುತ ಪಾಲಿಸುವನವನು 70 ಸಚ್ಚಿದಾನಂದ ಸ್ವರೂಪದವ ಪರಮಾತ್ಮ ತನ್ನ ಗುಣಗಳನ್ನೆಲ್ಲ ಭಕ್ತರಿಗೆ ಕೊಡುವ ನೀರು ಹಾಲನು ನಂಬಿದಂತೆ ನಂಬುವನನ್ನು ಭಕ್ತರಕ್ಷಕನವನು ಮುಕ್ತಿದಾಯಕನು 71 ಕೃಷ್ಣನು ಪರಬ್ರಹ್ಮ ಕೃಷ್ಣನನು ವಂದಿಸುವೆ ಕೃಷ್ಣನಿಂದಲೆ ಸಕಲ ವಿಶ್ವಗಳ ಸೃಷ್ಟಿ ಸುಕೃತ ದುಷ್ಕøತವೆಲ್ಲ ಕೃಷ್ಣನಡಿಯಲಿ ಮುಡಿಯು ಕೃಷ್ಣನಲಿ ಮನವು 72 ಕಾಮಹತಕನು ರುದ್ರದೇವನಿಲ್ಲಿಯೆ ಇದ್ದು ಅಷ್ಟಯತಿಗಳ ಶುದ್ಧಮಾನಸರ ಮಾಡಿ ಬಾಲಯತಿಗಳ ಮೂಲಕವೆ ಪೂಜೆಯನು ಪಡೆದು ರಾರಾಜಿಸುವೆ ದೇವ ಕೃಷ್ಣರೂಪದಲಿ 73 ಭಾರ್ಗವೀಪತಿಯಾದ ಸಿರಿವರನು ಮಾಧವನು ಭಾರ್ಗವೀರೂಪವನು ಶುಕ್ರವಾರದಲಿ ತಾಳ್ದು ಭಕುತರ ಹೃದಯವನ್ನರಳಿಸುವೆ ನೀನು ಮೋಹಿನೀರೂಪವದು ಮೋಹಕವದಲ್ತೆ 74 ಬಲ್ಲಾಳ ವಂಶಜರು ಉಡುಪ ಕುಲದವರೆಂದು ಭಕುತ ಗುರುವಾದಿರಾಜರ ಹಸ್ತದಿಂದ ಮೂರು ಅವತಾರ ಚಿಹ್ನೆಯ ತಾಳ್ದ ಮಾರುತಿಯ ಆರಾಧ್ಯ ಭೂವರಾಹರ ಕೊಡಿಸಿ ಪೊರೆದೆ 75 ದುಷ್ಟ ಜನಮರ್ದನ ಜನಾರ್ದನನು ನೀನಿರುವೆ ನಿನ್ನ ರೂಪವೆ ಪಕ್ಷನಾಥ ಸೇವಿತವು ಚಕ್ರ ಶಂಖಾಸಿ ಪಾನದ ಪಾತ್ರೆಗಳ ಧರಿಸಿ ದುಷ್ಟ ಶಿಕ್ಷಣಕಾಗಿ ಕಾಳಿ ಸೇವಿಪಳು 76 ಜಮದಗ್ನಿಪುತ್ರನಾಗವತರಿಸಿ ನೀನೊಮ್ಮೆ ಕೊಡಲಿಯಿಂ ಕಡಿಕಡಿದು ದುಷ್ಟರಾಜರನು ನಕ್ಷತ್ರ ಮಂಡಲವ ಭೂ ಮಂಡಲವ ಮಾಡಿ ಪರಶುರಾಮನು ಎಂಬ ಪೆಸರನ್ನು ಪಡೆದೆ 77 ಪರಶುರಾಮನು ರಾಮ ಪರಶುರಾಮನು ಕೃಷ್ಣ ಒಬ್ಬನೇ ಹಲವಾರು ರೂಪಗಳ ತಾಳಿ ಸಾಸಿರದ ನಾಮದಿಂ ಸ್ತುತಿಸಿಕೊಳ್ಳುವೆ ಹರಿಯೆ ನಿನ್ನ ಮಾಯಾರೂಪ ತಿಳಿದವರು ಯಾರು? 78 ಮೇಘದೆಡೆಯಿರುವ ಮಿಂಚಿನ ಹಾಗೆ ನೀನೆಂದು ತಿಳಿಸಲ್ಕೆ ನೀನು ಮೇಘದ ವರ್ಣದವನು ನೀಲತೋಯದ ಮಧ್ಯದಲ್ಲಿರುವ ವಿದ್ಯುತ್ತಿನಂತಿರುವಿ ಯೆಂದು ಶ್ರುತಿ ಹೇಳುವುದು ತಿಳಿಯೈ79 ಪುರುಷೋತ್ತಮನೆ ನಿನ್ನ ಪುರವೆಯೆನ್ನಯ ದೇಹ ಉತ್ತಮನು ನೀನಿರುವೆ ಅಧಮ ನಾನಿರುವೆ ಅಜ್ಞಾನದಾಚ್ಛಾದಿಕೆಯನೆನಗೆ ಹಾಕುತಲಿ ಬಿಂಬರೂಪದಲಿದ್ದು ಬೆಳಗಿಸುವೆ ನನ್ನ 80 ಶ್ರವಣಮನನಾದಿ ಸಾಧನದ ಬಲದಿಂದ ನಾ ನನ್ನ ಮುಸುಕನು ತೆಗೆದರೂ ನೀನು ಎನ್ನ ಬಳಿಯಲ್ಲಿದ್ದು ಕಾಣದಿಹೆ ಪರಮಾತ್ಮ ನಿನ್ನ ಪರಮಾಚ್ಛಾದಿಕೆಯ ತೆಗೆದು ತೋರು 81 ಗೋವರ್ಧನೋದ್ಧಾರಿ ಸಿರಿವರನೆ ನೀನೊಮ್ಮೆ ನಾಭಿರಾಜನ ಪುತ್ರನಾಗಿಯವತರಿಸಿ ಅಜನಾಭವೆಂಬ ಮೋಡವನು ಸೃಷ್ಟಿಸಿ ನೀನು ಲೋಕದ ಕ್ಷಾಮವನು ಹೋಗಲಾಡಿಸಿದೆ 82 ನೀನೊಮ್ಮೆ ದಕ್ಷಿಣದ ಕರ್ಣಾಟಕಕೆ ಬಂದು ಅಜಗರದ ವೃತ್ತಿಯಲಿ ದೇಹವನು ತೊರೆದು ನಿರ್ವಾಣ ಬೌದ್ಧಮತ ಜೈನಾದಿ ಮತಗಳಿಗೆ ಮೂಲಪುರುಷನದಾಗಿ ಮೆರೆದೆ ಪರಮಾತ್ಮ 83 ಸತ್ವ ರಜ ತಮವೆಂಬ ಮೂರು ಗುಣ ಪ್ರಕೃತಿಯದು ಪ್ರಾಕೃತದ ದೇಹವನು ಹೊಂದಿದಾ ಜನರು ಹುಟ್ಟುಗುಣ ಮೂರರಿಂ ಕರ್ಮವನು ಮಾಡುತ್ತ ಸುಖ ದುಃಖವನು ಹೊಂದಿ ಜೀವಿಸುವರವರು 84 ಸತ್ಯಾತ್ಮಕನು ನೀನು ಚ್ಯುತಿಯಿಲ್ಲ ಸತ್ಯಕ್ಕೆ ಅಚ್ಯುತನ ನಾಮದಿಂ ಪಾಪ ಪರಿಹರಿಪೆ ಅಂತವಿಲ್ಲದುದಾತ್ಮ ಆತ್ಮರಕ್ಷಕನಾಗಿ ನಾಮದಲನಂತನೆನಿಸಿರುವೆ ಶ್ರೀಹರಿಯೇ 85 ವೇದರಕ್ಷಕನಾಗಿ ಗೋವುಗಳ ರಕ್ಷಿಸುತ ಗೋವಿಂದನಾಮವನು ಧರಿಸುತಲಿ ನೀನು ನಾಮತ್ರಯಗಳಿವನು ಕರ್ಮಾಂತದಲಿ ಪಠಿಸೆ ಕರ್ಮದೋಷದ ಪಾಪ ಪರಿಹಾರವಹುದು 86 ಸಚ್ಚಿದಾನಂದಸ್ವರೂಪ ಹರಿ ನೀನಿರುವೆ ನಿನ್ನ ರೂಪಗಳೆಲ್ಲ ಪೂರ್ಣವಾಗಿಹವು ಜ್ಞಾನವಾನೆಂದವನು ಹೆರವರ್ಗೆ ತಿಳಿಸುತಿರೆ ನಮ್ಮಲ್ಲಿ ಹೆಚ್ಚುವವು ಅದರಿಂದ ಪೂರ್ಣ 87 ಹರದಾರಿ ಸಾವಿರಾರಿದ್ದರೂ ನಾದವನು ಚಣದೊಳಗೆಯಾಕಾಶವಾಣಿ ಕೇಳಿಸುವದು ಕಾಣದಿಹ ವಿದ್ಯುತ್ತುರೂಪವನು ತಾಳಿದವ ದೇವನಲ್ಲದೆ ಬೇರೆ ಯಾರ ಮಾಯೆಯಿದು 88
--------------
ನಿಡಂಬೂರು ರಾಮದಾಸ
ನೀರಜ ಯುಗ ಮನೋ - ವಾರಿಜದಲಿ ನಾ ಭಜಿಸುವೆನು ಪ ಸಾರಿದ ಜನರ‌ಘದೂರದಿ ಓಡಿಸಿ ಧಾರುಣಿಯೊಳು ಸುರಸೌರಭಿ ಎನಿಸಿಹ ಅ.ಪ ಅವರ ಪದಜಲ ಈ ಭುವನತ್ರಯ ಪಾವನ ತರವೆಂದೆನಿಸುವದೋ ಅವರ ಪದಯುಗ ಕೋವಿದಜನರು ಭಾವದಿ ದಿನದಿನ ಸೇವಿಪರೋ ಅವರ ಹೃದಯದಿ ನಾರಾಯಣ ಚ - ಕ್ರಾವತಾರವ ಧರಿಸಿಹನೊ ಶ್ರೀವರ ಹರಿ ಕರುಣಾವಲೋಕನದಿ ದೇವಸ್ವಭಾವವ ನೈದಿಹರೋ 1 ಆವ ಮಾನವನಿವರಚರಣ ಸೇವಕತೆರನೆಂದೆನಿಸುವನ್ನೋ ಕೋವಿದ ಜನರೆಲ್ಲರು ಆವನ ದೇವೋತ್ತುಮನೆಂದೆನಿಸುವನು ಪಾವನಿ ಮುಖ ದೇವೋತ್ತುಮರೆಲ್ಲರು ಈ ವಿಧ ಮಹಿಮೆಯ ತೀವ್ರದಿ ತೋರುವ 2 ಅವರು ಅವನೀ ದೇವತೆಗಳಿಗೆ ಜೀವನವಿತ್ತು ಪೊರೆದಿಹರೋ ಪಾವಕಘಾಕಿದ ಹಾರವ ಮತ್ತೆ ಭೂವರನಿಗೆ ತಂದಿತ್ತಿಹರೋ ಮಾವಿನ ರಸದಲಿ ಬಿದ್ದಿಹ ಶಿಶುವಿಗೆ ಜೀವನವಿತ್ತು ಕಾಯ್ದಿಹರೋ ಶೈವನ ನಿಜಶೈವವ ಬಿಡಿಸೀ ತಮ್ಮ ಸೇವೆಯನಿತ್ತು ಕಾಯ್ದಿಹರೋ 3 ಸಲಿಲವ ತಂದಿರುತಿಹ ನರನಿಗೆ ಸುಲಲಿತ ಮುಕ್ತಿಯನಿತ್ತಿಹರೋ ಚಲುವ ತನಯನಾ ಪುಲಿನದಿ ಪಡೆದಿಹ ಲಲನೆಯ ಚೈಲದಿ ಕಾದಿಹರೋ ಸಲಿಲವು ಇಲ್ಲದೆ ಬಳಲಿದ ಜನಕೆ ಸಲಿಲವನಿತ್ತು ಸಲಹಿದರೋ ಇಳೆಯೊಳು ಯತಿಕುಲತಿಲಕರೆಂದೆನಿಸಿ ಸಲಿದಂಥದು ತಾವು ಸಲಿಸಿಹರೋ 4 ಅನುದಿನದಲಿ ತಮ್ಮ ಪದಕಮಲವನು ಮನದಲಿ ಬಿಡದೆ ಭಜಿಸುವರಾ ಜನರಿಗೆ ನಿಜಘನಸುಖವನು ಕೊಟ್ಟವ - ರನುಸರಿಸೀ ಇರುತಿಹರಾ ಮನೋ ವಾಕ್ಕಾಯದಿ ನಂಬಿದ ಜನಕೆ ಜನುಮವನ್ನುನೀಡರು ಇವರ ಘನಗುಣ ನಿಧಿ ಗುರುಜಗನ್ನಾಥ ವಿಠಲ - ನಣುಗಾಗ್ರೇಸರೆರೆನಿಸಿಹರಾ 5
--------------
ಗುರುಜಗನ್ನಾಥದಾಸರು
ನೋಡಿರೇ ಬೇಲೂರ ಕೇಶವನ ನೋಡಿರೇ ಪ ನೋಡಿ ನೀವವನ ಕೊಂಡ್ಯಾಡಿ | ತನುವೀಡ್ಯಾಡಿ ಅವನ ಚರಣದಿ | ಆಹಜೋಡಿಸಿ ಕರಗಳ | ಬೇಡಲು ವರಗಳಖೋಡಿ ದೈವರ ದೇವ ಗಾಢ ದಯವ ತೋರ್ವ ಅ.ಪ. ಪಣೆ ಸದನ | ಆಹವಜ್ರಿಯ ಮೊರೆ ಕೇಳಿ | ನಿರ್ಜರರ ಸಲಹಿದಕಜ್ಜಗಳಮಿತದಿ | ಸಜ್ಜನರ ಪೊರೆದನ 1 ಕೇಳೆಡ ಕರದಲ್ಲಿ ಗದ | ನೋಡಿಮೇಲ್ಹಸ್ತದಲಿ ಚಕ್ರ ಬಲದ | ಮತ್ತೆಮೇಲ್ಕರ ಶಂಖದ ನಿನದ | ಇನ್ನುಕೀಳು ಕರಾಭಯ ಮಧ್ಯದ | ಆಹಶೀಲ ಭೂವರಹನ | ಶಾಲಿಗ್ರಾಮವ ನೋಡಿಲೀಲ ರೂಪದಿ ಘೋರ | ಕಾಲ್ಯವನನ ಕೊಂದ 2 ಸುಜನ | ಆಹಆವಾವ ಕಾಲಕ್ಕೂ | ನೋವು ರಹಿತ ಧಾಮಆ ವೈಕುಂಠವ ಪೊಕ್ಕ | ಶಾಶ್ವತ ಸುಖ ಪೊಂದ್ವ 3
--------------
ಗುರುಗೋವಿಂದವಿಠಲರು
ಪರದೇವತೆ ಪದ್ಮಾವತಿ ಶರಣಾಗತೋದ್ಧಾರಣೆ ಜನನಿ ಪ ನಿರತವೂ ನಿನ್ನ ಚರಣಕಮಲ ನೆರೆನಂಬಿದೆಕರುಣಾವಾರಿಧೆ ಅ.ಪ ಶಾಪವಿತ್ತ 1 ಭೂವರನಿಗೆ ಮಗಳೆನ್ನಿಸಿ ಮಾಡಿಸಿದಾ 2 ಲೋಕವರಿಯೆ ಪದ್ಮ ಸರಸಿಯೋಳ್ ನೆಲಸಿದೆ ಭೂಕಾಂತ ಗುರುರಾಮವಿಠಲ ಅರಸಿ 3
--------------
ಗುರುರಾಮವಿಠಲ
ಪೂತ ಚರಿತೆ ಭೂಮಿಜಾತೆ ಸೀತಾದೇವಿಯೇ ಪ ಪಾತಕಗಳ ಕಳೆದು ಯಮ್ಮನು ಪಾಲಿಸು ತಾಯೆ ಅ.ಪ ದೇವ ವೈರಿಯ ಕೈಯಲಿ ಸೇರಿ ಭೂವರ ಜನಕರಾಯಗೊಲಿದೌ ಭೂವಿವರದೊಳಿಡಲು ಮಾಯದಿ 1 ವಸುಧೆ ಸುರನಿಂದೋಲೆ ಕಳುಹಿಸಿ ಬಿಸಜಾಕ್ಷ ಕೃಷ್ಣನೊಲಿಸಿ ಕೈಪಿಡಿದೆ 2 ಶರಧಿರಾಜನ ಮಗಳೆ ಚಂದ್ರಸೋ ಗುರುರಾಮ ವಿಠಲನರ್ಧಾಂಗಿಕರುಣಿಸಮ್ಮ ಕೃಪಾ ಪಾಂಗಿ 3
--------------
ಗುರುರಾಮವಿಠಲ
ಪ್ರಸನ್ನ ಶ್ರೀ ವರಾಹ ಆದಿವರಾಹ ಸಾರ ಆದರದಿ ಶರಣಾದೆ ಭೂದರ ವರಾಹನೇ ವಿಧಿ ಶ್ರಧ್ಧೇಶ ವಂದ್ಯ ಬದರಶೇಖರ ಮುಖ ಸುರವಿನುತ ವಾಂಛಿತದ ಮೋದಚಿನ್ಮಯ ಭೂವರಾಹ ಯಜÉ್ಞೀಶ ಪ ಅದ್ವಿತೀಯನು ನೀನೇ ಪದುಮಜಾಂಡದ ಒಡೆಯ ಪದುಮಭವನೊಳಿದ್ದು ಭುವನಗಳ ಸೃಜಿಸಿ ಕೃತಿ ನಡೆಸುತ್ತ ಒದಗುವಿ ಸುಖಜ್ಞಾನ ಬಲಪೂರ್ಣ ಹರಿಯೇ 1 ಅಂದು ಸ್ವಾಯಂಭುವ ಮನು ವೇನಗರ್ಭನಲಿ ಬಂದು ನಮಿಸಿ ಭಿನ್ನಹವ ಮಾಡೆ ವಿಧಿ ಹೇಳಿದ ಜನಾದರ್Àನ ಯಜ್ಞಪರಮಾತ್ಮ ಶ್ರೀದ ಭದ್ರದ ಈಜ್ಯ ಪೂಜ್ಯ ನೀನೇ ಎಂದು 2 ಸ್ವಾಯಂಭುವ ಸಾಮ್ರಾಟ್ ಪೇಳಿದ ಮಹಾ ಈ ಭೂಮಿ ಇರುವುದು ಉದ್ಧರಿಸಿ ಸ್ಥಾನವ ತನ್ ಪ್ರಜೆಗಳಿಗೆ ಒದಗಿಸಬೇಕು ಎಂದ 3 ಇರುವುದಕೆ ಸ್ಥಳ ಪ್ರಜೆಗಳಿಗೆ ಒದಗಿಸಲು ಪರಮೇಷ್ಟಿರಾಯ ತನ್ನ ಹೃದ್ ವನಜದಿ ಸುಪ್ರಕಾಶಿಪ ಪರಮ ಪೂರುಷ ನಿನ್ನನ್ನು ಪರಮಾದರದಲ್ಲಿ ಧ್ಯಾನಿಸಿದನು 4 ಮಹಿಶಿರಿಕಾಂತ ನಿನ್ನನು ಧ್ಯಾನಿಸುತಲಿದ್ದ ಬ್ರಹ್ಮನ ಮೂಗಿಂದ ಹರಿ ಅನಘ ನೀನು ವರಾಹ ಮರಿ ಅಂಗುಷ್ಟ ಮಾತ್ರ ಪ್ರಮಾಣದಿ ಬಹಿರ್ಗತನು ಆದಿಯೋ ಚಿದಾನಂದರೂಪ 5 ಒಂದೇ ಕ್ಷಣದಿ ಗಜಮಾತ್ರ ವರ್ಧಿಸಿದಿಯೋ ಅದ್ಭುತ ಈ ರೂಪ ಕಂಡು ಅಲ್ಲಿ ಇದ್ದ ಮರೀಚಿ ಪ್ರಮುಖ ವಿಪ್ರರು ಮನು ಮೊದಲಾದವರು ಬಹು ಬೆರಗಾದರಾಗ 6 ಸೂಕರ ರೂಪ ಕಂಡಿಲ್ಲ ಎಲ್ಲೂನು ಇದು ಮಹಾಶ್ಚರ್ಯ ಗಂಡ ಶಿಲಾವೋಲ್ ಕ್ಷಣ ಮಾತ್ರದಲಿ ಚಂಡ ಈ ಕ್ರೋಡವು ದೊಡ್ಡದಾಗಿಹುದು 7 ಸೂಕರ ರೂಪವ ನೋಡುತ್ತ ಮುನಿಗಳು ತರ್ಕಿಸಿ ಮೀಮಾಂಸ ಮಾಡೆ ಅನಿಮಿತ್ತಬಂಧು ಹರಿ ಒಲಿದು ಬಂದಿರುವಿ ಎಂದು ವನಜಸಂಭವ ಸಂತೋಷ ಹೊಂದಿದನು 8 ಮಹಾವರಾಹ ರೂಪನೇ ವಿಭೋ ನೀನು ಮಹಾಧ್ವನಿಯಲಿ ಗರ್ಜಿಸಿದಿ ಆಗ ಆ ಹೂಂಕಾರವು ದಿಕ್ಕು ವಿದಿಕ್ಕುಗಳ ಮಹಾಂಬರವ ತುಂಬಿತು ಪ್ರತಿಧ್ವನಿಯಿಂದ9 ಅಪ್ರತಿ ಮಹಾಮಹಿಮ ಉರುಪರಾಕ್ರಮ ನೀನು0 ಅಂಬುಧಿಯೊಳು ಲೀಲೆಯಿಂದಲಿ ಪೊಕ್ಕು ಸುಪವಿತ್ರತಮ ನಿನ್ನ ದಂಷ್ಟ್ರದ ಮೇಲಿಟ್ಟುಕೊಂಡು ಕ್ಷಿಪ್ರದಲಿ ನೀರಮೇಲ್ ತಂದಿ ಭೂಮಿಯನು 10 ನೀರೊಳಗಡೆ ತಡೆದ ಆದಿದೈತ್ಯನ ಕೊಂದು ನೀರಮೇಲ್ ಇರಿಸಿದಿ ಭೂಮಿಯ ಎತ್ತಿ ಸರಸಿಜೋದ್ಭವ ಮುಖ್ಯಸುರಮುನಿ ವೃಂದವು ಕರಮುಗಿದು ಸ್ತುತಿಸಿದರÀು ಕೃತಜ್ಞ ಭಕ್ತಿಯಲಿ 11 ಎಂದು ಜಯಷೋಷವ ಮಾಡಿ ಮುದದಿ ಸುತಪೋನಿಧಿಗಳು ಸ್ತುತಿಸಿ ನಮಿಸಿದರು ವೇದವೇದ್ಯನೇ ಸೂಕರರೂಪ ನಿನ್ನನ್ನ 12 ಅಖಿಳ ಮಂತ್ರದೇವತಾ ದ್ರವ್ಯಾಯ ಸರ್ವಕೃತವೇ ಕ್ರಿಯಾತ್ಮನೇ ವೈರಾಗ್ಯ ಭಕ್ತ್ಯಾತ್ಮಜಯಾನುಭಾವಿತ ಜ್ಞಾನಾಯ ವಿದ್ಯಾ ಗುರುವೇ ನಮೋ ನಮಃ13 ಈ ರೀತಿ ಇನ್ನೂ ಬಹುವಾಗಿ ಸ್ತುತಿಸಿದರು ಹರಿ ವರಾಹನೇ ಭೂದರ ಧರೋದ್ಧಾರ ನರಸುರರು ಶುಚಿಯಿಂ ಪಠಿಸಿ ಎಲ್ಲರೂ ಕೇಳೆ ಸುಪ್ರಸನ್ನನು ಆಗಿ ಭದ್ರÀವನು ಈವಿ 14 ಅನತೇಷ್ಟಪ್ರದ ಭೂವರಾಹ ಹಯಗ್ರೀವ ಶ್ರೀಶ ನರಸಿಂಹ ವಿಧಿತಾತ ನಮಸ್ತುಭ್ಯಂ ಪೂರ್ಣಪ್ರಜ್ಞರ ಹೃತ್‍ಸ್ಥ ಜನ್ಮಾದಿಕರ್ತ 15 -ಇತಿ ಪ್ರಥಮ ಅಧ್ಯಾಯ ಪೂರ್ಣಂ - ದ್ವಿತೀಯ ಅಧ್ಯಾಯ ಹಿರಣ್ಯಾಕ್ಷ ಸಂಹಾರ ಆದರದಿ ಶರಣಾದೆ ಭೂದರ ವರಾಹನೇ ವಿಧಿ ಶ್ರದ್ಧೇಶ ವಂದ್ಯ ಬದರಶೇಖರ ಮುಖ ಸುವಿನುತ ವಾಂಛಿತದ ಮೋದ ಚಿನ್ಮಯ ಭೂವರಾಹ ಯಜÉ್ಞೀಶ À ಜ್ಞಾನಸುಖ ಭೂಮಾದಿ ಗುಣಪೂರ್ಣ ನಿರ್ದೋಷ ಪೂರ್ಣಬಲ ಹರಿ ಯಜ್ಞಮೂರುತಿ ವರಾಹ ಹನನ ಮಾಡಿ ಆದಿದೈತ್ಯನ ನೀರಿಂದ ಕ್ಷೋಣಿಯ ನಿನ್ ದಂಷ್ಟ್ರ ಮೇಲಿಟ್ಟು ತಂದಿ 1 ಭೂಮಿ ಉದ್ಧರಿಸಲು ಮಾತ್ರವಲ್ಲದೇ ಆ ಹೇಮಾಕ್ಷ ಅಸುರನ್ನ ಸಂಹಾರ ಮಾಡೆ ನೀ ಮಹಾಕ್ರೋಡರೂಪವÀ ಪ್ರಕಟಿಸಿದಿ ವಿಭೋ ಅಪ್ರಾಕೃತ ಚಿನ್ಮಯ ವಪುಷ 2 ಏಕದಾ ಬ್ರಹ್ಮನ ಸುತರು ಸನಕಾದಿಗಳು ಏಕಾತ್ಮ ಶ್ರೀ ವಿಷ್ಣುಲೋಕಕ್ಕೆ ಬರಲು ದಿಗ್ವಾಸಸ ಶಿಶುರೂಪ ಆ ಮುನಿವರರ ಲೆಕ್ಕಿಸದೆ ತಡೆದರು ದ್ವಾರಪಾಲಕರು 3 ಜಯವಿಜಯರೆಂಬುವ ಆ ದ್ವಾರಪಾಲಕರಿಗೆ ಮಾಯೇಶ ಹರಿ ಪ್ರಿಯತರ ಮುನಿಶ್ರೇಷ್ಠರು ಈಯಲು ಶಾಪವ ಆ ವಿಷ್ಣು ಪಾರ್ಷದರು ದೈತ್ಯಜನ್ಮವ ಹೊಂದಿದರು ಪತನವಾಗಿ 4 ಪತಿ ಕಶ್ಯಪ ಮುನಿ ಅಹ್ನೀಕದಲಿ ಇರಲು ದಿತಿ ದೇವಿ ಬಂದು ಅಪತ್ಯಕಾಮದಲಿ ಸಂಧ್ಯಾಕಾಲದಿ ಇಚ್ಛಿಸಿ ನಿರ್ಬಂಧಿಸಿ ವಿಧಿ ವಿರುದ್ಧದಲಿ 5 ಸುತಪೋನಿಧಿ ಕಶ್ಯಪ ತೇಜೋಲ್ಬಣದಿ ದಿತಿದೇವಿ ಜಠರದಲಿ ವಿಷ್ಣುಪಾರ್ಶದರು ಪತಿತ ಆ ಜಯವಿಜಯರು ಪ್ರವೇಶಿಸಿದರು ಆ ಆದಿದೈತ್ಯನು ಸಹ ಮೊದಲೇ ಅಲ್ಲಿ ಹೊಕ್ಕಿದ್ದ 6 ಅಬ್ಧಿಯಿಂ ನೀ ಭೂಮಿ ಎತ್ತೆ ತಡೆದು ಹತ - ನಾದ ಆ ದೈತ್ಯನು ಅಬ್ಜದೋದ್ಭವನು ಶ್ರೀದ ನಿನ್ ಪಾರ್ಶದನು ಆವಿಷ್ಟನಾದ 7 ಆದಿ ಹೇಮಾಕ್ಷನೊಳು ವಿಷ್ಣು ದ್ವಾರಪ ವಿಜಯ ದಿತಿದೇವಿ ಅವರ ಸುತ ಹಿರಣ್ಯಾಕ್ಷನೆಂದು ಉದಿಸಿದನು ಅಣ್ಣ ಜಯ ಹಿರಣ್ಯಕಶಿಪು ಸಹ ಅತಿಪರಾಕ್ರಮಯುತನು ಲೋಕಕಂಟಕನು 8 ಗದೆ ಹಿಡಿದು ಹಿರಣ್ಯಾಕ್ಷ ದಿಗ್ವಿಜಯ ಮಾಡಿ ಭೀತಿ ಪಡಿಸಿದ ದೇವತಾ ಜನರನ್ನೆಲ್ಲ ಅತಿಬಲಯುತನಿವ ಧರೆಯ ಸೆಳಕೊಂಡು ಉದಧಿಯೊಳು ಹೊಕ್ಕನು ಆರ್ಭಟಮಾಡುತ್ತ 9 ಸುರರು ನಿನ್ನಲಿ ಮೊರೆ ಇಡಲು ವರಾಹ ಹರಿ ನೀನು ನೀರೊಳು ಲೀಲೆಯಿಂದಲಿ ಪೊಕ್ಕು ಆ ದೈತ್ಯ ಹಿರಣ್ಯಾಕ್ಷನ ಸಹ ಯುದ್ದ ಮಾಡಿದಿಯೋ 10 ಸುರವೃಂದ ಕ್ಷೇಮಾರ್ಥ ಪದುಮಜ ಪ್ರಾರ್ಥಿಸಲು ಕರದಿಂದ ಹೊಡೆದು ಆ ದೈತ್ಯನ ಕೊಂದು ಧರೆಯನುದ್ಧರಿಸಿ ನೀ ಮೇಲೆತ್ತಿ ತಂದಿಯೋ ಉರುಪರಾಕ್ರಮ ಭಕ್ತವತ್ಸಲ ಕೃಪಾಳೋ 11 ವರಾಹ ಹರಿ ನಿನ್ನ ಕೃತಜ್ಞ ಮನದಿ ಸನ್ನಮಿಸಿ ಸ್ತುತಿಸಿದರು ಉದಾರ ವಿಕ್ರಮ ಹಿರಣ್ಯಾಕ್ಷನ್ನ ನೀನು ಕೊಂದ ನಿನ್ನಯ ಕ್ರೀಡಾ ವರ್ಣಿಸಲಶಕ್ಯ 12 ಕಮಲಾರಮಣ ಶ್ವೇತವರಾಹ ಮೂರುತಿ ನಮೋ ಶಾಮಚಾರ್ವಾಂಗ ನಮೋ ಭೂವರಾಹ ಬ್ರಹ್ಮ ಪವಮಾನರಿಂದಲಿ ಸದಾ ಪೂಜ್ಯನೇ ಸ್ವಾಮಿ ಕರುಣಾಂಬುಧಿಯೇ ಶರಣು ಮಾಂಪಾಹಿ 13 ಕೂರ್ಮ ಕ್ರೋಢ ನರಸಿಂಹ ವಾಮನ ರೇಣುಕಾದೇವಿಯ ಸುತ ರಾಮಚಂದ್ರ ಬುದ್ಧ ಕಲ್ಕಿ ವ್ಯಾಸ ಹಯಗ್ರೀವ ಆನಮಿಪೆ ಅವನೀಶ ಭೂ ಶ್ರೀಶ ಪಾಹಿ 14 ವರಾಹ ನಮೋ ಸದಾನಂದಮಯ ಜಗಜ್ಜ£್ಮÁದಿ ಕರ್ತ ನಿರ್ದೋಷ ಗುಣಪೂರ್ಣ ಅನಿಷ್ಟ ಪರಿಹರಿಸಿ ವರ್ಧಿಸುವಿ ದಯದಿ 15 ಶ್ಯಾಮ ಅರಿಶಂಖಧರ ಅಭಯ ಸದ್ವರಹಸ್ತ ಭೂಮಿಧರ ಸರ್ವವಾಂಛಿತ ಸಿದ್ಧಿದಾತ ಭೂಮ ನಿರ್ಮಲ ಕೋಲ ರೂಪ ಸರ್ವೋತ್ತಮನೇ ಮನ್ಮನದಿ ಸರ್ವದಾ ಹೊಳೆಯೋ ಕರುಣಾಳು 16 ಗುರು ಗುರೋರ್ಗುರು ಗುರೋರ್ಗುರುವಿನ ಗುರು ಶ್ರೀ ರಾಘವೇಂದ್ರ ಗುರುರಾಜ ಲಾತವ್ಯ ಋಜುವರ್ಯ ಮಧ್ವ ವಾರಿಜಾಸನ ಸರ್ವಹೃದ್ವನಜ ಅಂತಸ್ಥ ವರಾಹ ನಮೋ ಶರಣು 17 ಜ್ಞಾನಸುಖಪೂರ್ಣ ಪ್ರಸನ್ನ ಶ್ರೀನಿವಾಸ ಅನತೇಷ್ಟಪ್ರದ ಭೂವರಾಹ ಹಯಗ್ರೀವ ಶ್ರೀಶ ನರಸಿಂಹ ವಿಧಿತಾತ ನಮಸ್ತುಭ್ಯಂ ಪೂರ್ಣಪ್ರಜ್ಞರ ಹೃತ್‍ಸ್ಥ ಜನ್ಮಾದಿಕರ್ತ 18 -ಇತಿ ದ್ವಿತೀಯ ಅಧ್ಯಾಯ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು