ಒಟ್ಟು 78 ಕಡೆಗಳಲ್ಲಿ , 24 ದಾಸರು , 73 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕದರ ಉಂಡಲಿಗಿಯ ಹನುಮಾ | ಕಾಯೊಉದಧಿ ಶಯನಗೆ ಬಲು ಪ್ರೇಮಾ ಪ ಸದಮಲಾಂತಃಕರಣದೊಳು ತವ | ಪದವನಜ ದ್ವಯ ಸೇವಿಸೂವರಮುದದಿ ಪಾಲಿಪ ಗುರು ದಯಾಕರ | ವದಗಿ ಭಾಸಿಸೊಮ ಮಹೃದಾಗರ ಅ.ಪ. ಪ್ರಥಮಾಂಗ ಹರಿಗೆ ನೀನೆನಿಸೀ | ಜೀವ ತತಿಯೊಳಂತರ ಬಾಹ್ಯ ನೆಲಸೀ |ತತುವ ಮಾನಿಗಳ್ಕಾರ್ಯ ನಡೆಸೀ | ಹರಿಗೆ ಪೃಥಕ್ಪøಥಕ್ಕವುಗಳರ್ಪಿಸೀ |ವಿತತ ಹರಿ ಸತ್ಪಾತ್ರನೆನಿಸುತ | ಯತನ ಜ್ಞಾನೇಚ್ಛಾದಿ ನಡೆಸುತಸತತ ವಿಶ್ವವ ಪಾಲಿಸುವ ಶ್ರೀ | ಪತಿಯ ಪದಕರ್ಪಿಸುತಲಿರುವ 1 ಶರಧಿ ದಾಟುವ ಲಂಕಾಪುರವ | ಸೇರಿವರ ಮಾತೆಗಿತ್ತೆ ಉಂಗುರವಾ |ಪುರದೊಳಗಶೋಕ ವನವಾ | ಕಿತ್ತುತರಿಯಲಕ್ಷನು ತೆತ್ತ ದೇಹವಉರು ಪರಾಕ್ರಮಿ ಇಂದ್ರ ಜಿತುವಿನ ವರಸುಅಸ್ತ್ರಕೆ ತಾನೆ ಸಿಲುಕುತಪರಿಪರಿಯಲಸುರನನು ಹಿಂಸಿಸಿ | ಉರಿಸಿ ಲಂಕೆಯ ಹರಿಗೆ ಎರಗಿz À 2 ಹದಿನೆಂಟು ಕ್ಷೋಹಿಣಿ ಬಲವಾ | ನೆರಸಿಸದೆದು ಹಾಕಿದ್ಯೊ ದೈತ್ಯಕುಲವಾ |ಮುದದಿ ದ್ರೌಪದಿಗಿತ್ತ ವರವಾ | ಸಲಿಸಿವಧಿಸಿದ್ಯೋ ದುರಳರ ಕುಲವಾ |ಮಧುಮಥನ ನರಹರಿಯ ಸ್ಮರಿಸುತ | ಅದುಭುತವು ಎಂದೆನಿಪ ಕಾರ್ಯವವಿಧಿಸಿ ಭೂಭಾರವನೆ ಕಳೆಯುತ | ಮುದದೊಳಚ್ಯುತಗಿತ್ತೆ ಭೀಮ 3 ವೇದ ವಾದಿ ಜನ ಕೊರಗೀ | ಹರಿಪಾದದ್ವಯವು ವನಜಕೆರಗೀ |ಮೋದದಿ ಸ್ತುತಿಸೈವ ಮರುಗೀ | ಕಳುಹೆ ವೇದಗಳುದ್ಧಾರಕ್ಕಾಗೀ |ಬೋಧಿಸುತ ಬುಧ ಸ್ತೋಮಗಳಿಗಾ | ವೇದಗಳ ಸಾರಾರ್ಥವೆಲ್ಲವವಾದಿಗಳ ಜೈಸುತಲಿ ಪೂರ್ಣ | ಭೋದಯತಿ ಪಾಲಿಸುವುದೆಮ್ಮ 4 ಪಂಕ ಕರ್ಮ ಸ್ವಾಂತ ದೊಳಗನವರತ ಕಾಣುವ 5
--------------
ಗುರುಗೋವಿಂದವಿಠಲರು
ಕರ ಪ ಸೂರಿನಿವಾಸ ಭೋಗಾಪುರ ಮಂದಿರ ಮಾಮುದ್ಧರ ಅ.ಪ ಶ್ರೀರಘುವರನಾಜ್ಞೆಯಿಂದಲಿ ವಾರಿಧಿಯಕ್ಷಣದಲಿ ಹಾರಿ ಭೂಮಿಸುತೆ ಗೆರಗುತಲಿ ಮುದ್ರಿಕೆಯ ಕೊಡುತಲಿ ಶ್ರೀರಾಮಗೊಂದಿಸಿದಿ ಕ್ಷೇಮದಲಿ ಇಹಳೆಂದು ಪೇಳಿ 1 ಇಂದು ಕುಲದಿ ಪಾಂಡು ನೃಪತಿಯ ಎನಿಸಿದೆಯೊ ತನಯ ಬಂಥ ಕೌರವ ವೃಂದ ಮಥಿಸಿದೆಯಾರಣದೊಳಗೆ ವಿಜಯ ನಂದಸುತನ ನೊಲಿಮೆ ಪಡದಿಯಾ ಭೀಮಶೈನರಾಯ 2 ಮೇದಿನಿ ಸುರಗೃಹದಿ ಜನಿಸಿದ ವೇದಾರ್ಥ ತಿಳಿಸಿದ ವಾದಿಗಳ ನಿರ್ವಾದಗೈಸಿದ ದಿಗ್ವಲಯ ಚರಿಸಿದ ಭೇದ ಭೋದಕ ಶಾಸ್ತ್ರವಿರಚಿಸಿದ ಶ್ರೀ ಪೂರ್ಣಬೋಧ 3 ಕಾಲಕಾಲಗಳಲ್ಲಿ ದ್ವಿಜಜನ ಬರುತಿಹರು ನಿನ್ನ ಧೂಳಿ ದರುಶನಾಬಿಷೇಚನ ಶೇವಿಪರು ಘನ್ನ ಪಾಲಿಸಬೇಕಯ್ಯ ಭಕುತರನಾ ಪಾಂಚಾಲಿರಮಣ 4 ನೀರಜಾಸನಾದಿ ಸುರಗಣ ವಂದಿತ ಸುಚರಣ ಕಾರ್ಪರ ಶಿರಿನಾರಸಿಂಹನ ಒಲಿಸಿರುವ ನಿನ್ನ ಹರಣ 5
--------------
ಕಾರ್ಪರ ನರಹರಿದಾಸರು
ಕರಿಗಿರಿ ದುರ್ಗ ನಿವಾಸಾ | ದಯಾಪರಿಪೂರ್ಣ ಪೊರೆಯನ್ನ ಅನಿಶ ಪ ಶಿರಿ ಅಜಭವ ವಿಪಗೇಶಾ | ಹೃತ್‍ಸರಸಿಜ ವಾಸ ಲಕ್ಷ್ಮೀಶಾ ಅ.ಪ. ಗಜ ಬಿಸಜ ಕಿಂಜಲ್ಕದ ಯಸಳು ರಜವ ಶಿರಸಿಯೊಳಗೆ ನೀನಿರಿಸೋ 1 ಮೇಶ ಬ್ರಹ್ಮೇಶ ನಾಶವ ಗೈವೆ ಸಶೇಷಶೇಷಶಯ್ಯ ಜೀವಾದ್ಯರ ಪೋಷಾಈ ಸಮಸ್ತ ಜಗ ನಿನ್ನುದರದಿ ವಾಸಾಕೇಶಾಸುರಪಾದೀಶ ಪರೇಶನೆ ವ್ಯಾಸಾಈಶಿತವ್ಯ ತವ ದಾಸರಿಗೆಲ್ಲ ಉಪದೇಶಿಸು ಶಾಸ್ತ್ರ ವಿಶೇಷ ರಹಸ್ಯ ಮಹಿದಾಸ ಕುಶೇಶಯ ವಿಷಯ ವಿಲಾಸದಿಪೋಷಿಸು ಮನ ಮಧ್ವೇಶ ಮಹಾಪ್ರಭೋ 2 ಕರಿವರ ವರ ಶರಣಾಗತ ಪಾಲಾತರಳೆಗಿತ್ತೆ ನವ ನವ ಸೀರೆಯ ಜಾಲಾವರಸ್ತಂಭೋದಿತ ಹರಿಭಕ್ತಿ ಸುಪಾಲಾಗುರು ಗೋವಿಂದ ವಿಠ್ಠಲಾ ಕಾಲಾಸುರಪಾದಿಯ ತನು ವರ ರಥ ರೂಢ ಪು-ರಾರಿ ಭಯಹರ ಮುರಾರಿ ಮಹ ಭವತರಿ ಎನಿಸಿಹ ಸುಖ ತೀರಥ ಸನ್ಮತಧರಿಸಿಹೆ ಕಣ್ಣೆದುರಿಲಿ ನೀ ಕುಣಿಯೋ 3
--------------
ಗುರುಗೋವಿಂದವಿಠಲರು
ಕುಶಲವರೆ ಲಾಲಿಸಿರಿ ಕಥೆಯನೆಲ್ಲವ ಪೇಳ್ವೆ ಕುಶಲಮತಿಗಳೇ ನಿಮ್ಮ ಕೌತುಕವು ಸಹಜವಲೆ 1 ಬಿಸರುಹಾಕ್ಷನ ಚರಿತೆ ಚಿತ್ರತರಮಹುದಲ್ತೆ ಉಸುರುವೆನು ಪೂರ್ವ ವೃತ್ತಾಂತವನು ನಾ ಮೊದಲೆ 2 ಅಸುರರುಪಟಳದಿಂದ ವಸುಧೆ ಭಾರವು ಹೆಚ್ಚೆ ಬಿಸಜಭವಮುಖ ಸುರರ ಮೊರೆ ಕೇಳಿ ಮನ ಮೆಚ್ಚೆ 3 ಬಿಸಜನೇತ್ರನು ತಾನು ದಶರಥನ ಸುತನೆನಿಸಿ ವಸುಮತಿಯಲುದಿಸಿ ಸಜ್ಜನರ ಸಂತಸಗೊಳಿಸಿ 4 ಹಸುಳೆತನದಲಿ ಅಸುರೆ ತಾಟಕಿಯ ಸಂಹರಿಸಿ ಕುಶಿಕಸುತನಧ್ವರವ ಕಡು ರಕ್ಷಣೆಯ ಮಾಡಿ 5 ಅಶಮವಾಗಿದ್ದಹಲ್ಯೆಯ ತಾನುದ್ಧರಿಸಿ ಅಸಮಾಕ್ಷಚಾಪವನು ಲೀಲೆಯಲಿ ತುಂಡರಿಸಿ 6 ಕರ ಪದ್ಮವನು ಗ್ರಹಿಸಿ ಎಸೆವೆರಡು ರೂಪದಲಿ ಘನಲೀಲೆ ಪ್ರಕಟಿಸಿ 7 ಕುಶಲದಿಂ ಯುವರಾಜ ಪಟ್ಟಕ್ಕೆ ಸನ್ನಾಹ ವೆಸೆದಿರಲು ವಿಧಿಲೀಲೆಯೇನೆಂಬನಾಹ 8 ದಶರಥನ ಕಿರುಮಡದಿ ಪಡೆದ ವರಕನುವಾಗಿ ಸತಿ ಅನುಜ ಸಹಿತನಾಗಿ 9 ವಸುಮತಿಯೊಳವತರಿಸಿ ಬಂದ ಕಾರ್ಯವ ನೆನೆದು ಅಸಮ ನಾಟಕ ಸೂತ್ರಧಾರಿ ಅಡವಿಗೆ ನಡೆದು 10 ಎಸೆವ ಗಂಗೆಯ ದಾಟಿ ಗುಹನನ ಧನ್ಯನಗೈದು ಋಷಿ ಭರದ್ವಾಜರಿಂ ಸತ್ಕಾರವನು ಪಡೆದು 11 ವಸುಮತೀಧರ ಚಿತ್ರಕೂಟದಲಿ ನಿಂತಿರಲು ಅಸಮ ಭಕ್ತವರೇಣ್ಯ ಭರತ ತಾನೈತರಲು 12 ಬಿಸಜಾಂಘ್ರಿ ಸಂಪೂತ ವರ ಪಾದುಕೆಗಳನಿತ್ತು ಕುಶಲಮತಿ ತಾನವನ ಕಳುಹಿ ಯೋಚಿಸಿ ಮತ್ತು 13 ಪೆಸರಾಂತ ದಂಡಕಾ ವನ ಪ್ರವೇಶವ ಮಾಡಿ ಅಸುರರನೇಕರು ಅಂತಕನ ಬಳಿದೂಡಿ14 ಋಷಿವರ್ಯ ಶರಭಂಗಗೀಕ್ಷಣದಿ ಸುಗತಿಯನು ಹಸನಾಗಿ ಕರುಣಿಸಿದ ಬಳಿಕ ಕುಂಭೋದ್ಭವನು 15 ಒಸಗೆಯಿಂದಿತ್ತ ದಿವ್ಯಾಸ್ತ್ರಂಗಳ ಸಂಗ್ರಹಿಸಿ ಪಸರಿಸಿಹ ವಿಲಸಿತದ ಪಂಚವಟಿಯಲಿ ನೆಲಸಿ 16 ಒಸಗೆಯಿಂದಿರೆ ಬಂದ ಶೂರ್ಪನಖಿಗತಿಭಂಗ ವೆಸಗಿ ಸೋದರನಿಂದ ಶೋಭಿಸೆ ಶುಭಾಂಗ 17 ಮಾಯಾ ಮೃಗಾಕಾರ ದಸುರ ಮಾರೀಚನಂ ಸಂಹರಿಸಿ ರಘುವೀರ 18 ಅಸಮ ಸೋದರ ಸಹಿತ ಆಶ್ರಮಕ್ಕೈತಂದು ದೆಸೆದೆಸೆಯೊಳರಸೆ ತನ್ನರಸಿ ಕಾಣದಿರಲು 19 ಹುಸಿವೇಷದಿಂ ಬಂದ ಖಳ ಕುಲಾಗ್ರಣಿಯಿಂದ ಶಶಿಮುಖಿಯು ಹಗರಣವಾಗಿರಲು ನಿತ್ಯಾನಂದ 20 ದೆಸೆಗೆಟ್ಟವನ ಪರಿಯಲತಿಶಯದಿ ಶೋಕಿಸುತ ದೆಸೆದೆಸೆಯೊಳರಸುತ್ತಾ ಬಸವಳಿದು ತಾ ಬರುತ 21 ಎಸೆವವರ ಋಷ್ಯಮೂಕಮತಂಗಾಶ್ರಮದಿ ಬಿಸಜಾಪ್ತಸುತನ ಕಂಡವನೊಡನೆ ತಾ ಮುದದಿ 22 ಉಸುರಿ ವಾಲಿಯ ವಧೆಗೈವೆನೆಂದಭಯವನು ಎಸೆವ ವಿಲಸಿತ ಮಹಿಮ ಕರಿಗಿರೀಶನು ತಾನು 23
--------------
ವರಾವಾಣಿರಾಮರಾಯದಾಸರು
ಕೃಷ್ಣಾ - ಶ್ರೀಕೃಷ್ಣಾ ಪ ಕೃಷ್ಣ ಕೃಷ್ಣ ಹರಿವೃಷ್ಟಿ ಕುಲೋದ್ಭವಸೃಷ್ಟಿ ಕರ್ತ ಹೃತ್ಪುಷ್ಕರ ನಿಲಯ ಅ.ಪ. ವಲಲ ಸಂರಕ್ಷಕ | ಅಲವ ಭೋದನುತಕಲಿಮಲ ಕಲುಷಹ | ನಳಿನೇಕ್ಷಣಪಾಹಿ 1 ನಂದನ ಕಂದ ಮು | ಕುಂದನೆ ಮಾಧವಸಿಂಧು ಶಯನ ಕೃಷ್ಣ | ಮಂದರೋದ್ಧಾರಿ 2 ಕರ | ಪರಿಗ್ರಹಿಸಿದನೇ 3 ಚಿತ್ತಜಾರಿ ಸಖ | ವಿತ್ತವನೊಲ್ಲೆನೊಭೃತ್ಯನ ಗೈ ಸ | ರ್ವೋತ್ತಮ ದೇವ 4 ಪಾಪಿಯು ಎನೆ ನಾ | ಶ್ರೀಪತಿ ನಿನ್ನನುನಾಪೊಂದಲು ಆ | ಪಾಪೆಲ್ಲಿ ಹುದೋ 5 ಕಾಮಪಿತನೆ ಸ | ದ್ಭೂಮ ಗುಣಾರ್ಣವಪಾಮರ ಮನುಜನ | ಪ್ರೇಮದಿ ಸಲಹೋ6 ಶಿರಿ ಸಹ ಗುರು ಗೋ | ವಿಂದ ವಿಠಲ ಹೃತ್‍ಸರಸಿಜ ಪೀಠದಿ | ದರುಶನ ವೀಯೋ7
--------------
ಗುರುಗೋವಿಂದವಿಠಲರು
ಗಣೇಶ ಸ್ತವನ ನೀ ದಯವಾಗು ಶುಭೋದಯ ಗಣಪತಿ ಕಾದುಕೊಂಡಿರು ಸಂತತಂ ಪ. ವಾದವಿರಲಿ ನಿಷುಸೀದ ಗಣಪನೆಂಬ ವೇದಾರ್ಥವ ಪರಿಶೋಧಿಸಿ ನಮಿಸುವೆ ಅ.ಪ. ಯದ್ಯದ್ವಿಭೂತಿಮದೆಂದು ಪೇಳಿದ ಪರಿಶುದ್ಧವಾದ ವಚನ ಶ್ರದ್ಧಾಪೂಜಿತ ಸಕಲ ದೇವರೊಳಗಿದ್ದು ಉಲಿವ ಕಥನ ಮಧ್ವಾಗಮ ಸಂಸಿದ್ಧವಾಗಿರೆ ವೃಥಾ ಪದ್ಧತಿ ತಿಳಿವದು ದುರಾಧ್ಯರಂತಿರಲಿ 1 ಸರ್ವದೇವ ನತಿಯೆಲ್ಲವು ಕೇಶವನಲ್ಲಿ ಸೇರುವದೆಂದು ಯಲ್ಲಾ ಕಡೆಯಲಿ ಚಲ್ಲದೆ ಜಲವ ಬೇರಲ್ಲಿ ಸುರಿಯಿರೆಂದು ಫುಲ್ಲನಾಭ ಶಿರಿವಲ್ಲಭ ವ್ಯಾಸರ ಸೊಲ್ಲ ತಿಳಿದು ನಿಂನಲ್ಲಿಗೆ ಸೇರಿದೆ 2 ವಿಘ್ನಮಹೌಘ ವಿದಾರಣ ಭವಸಂವಿಘ್ನಮನ:ಶರಣಾ ರುಗ್ಣಾತ್ವಾದಿ ನಿವಾರಣ ಸಂಗದ-ಭಗ್ನಸುರಾರಿ ಗಣಾ ನಗ್ನ ಚಿದಾತ್ಮಜ ನೀಲಾಭರಣ ಭ- ಯಾಗ್ನಿ ಶಮನ ನಿರ್ವಿಘ್ನದಿ ಕರುಣಿಸು 3 ಪುಂಡರೀಕ ನಯನ ಅಂಡಜಾಗಮನಾಖಂಡಲ ಸೈನಿಕ ಚಂಡವೈರಿ ಮಥನಾ ಪಂಡಿತ ಪಾಮರ ಸಮದೃಗಭೀಪ್ಸಿತ ಶುಭ ಮಂಡಲ ಮಧ್ಯಗ 4 ವಿಶ್ವಂಭರ ವಿಬುಧೇಶ ಗಣಾರ್ಚಿತ ವಿಶ್ವನಾಥವಿನುತಾ ವಿಶ್ವಜನಿಸ್ಥಿತಿ ಕಾರಣವಾರಣ ವಿಶ್ವಭೂತಿ - ಶರಣ ವಿಶ್ವಾಸಾನುಗುಣಾರ್ಥ ವಿಭಾವನ ವಿಶ್ವದೇವಗತ ವೆಂಕಟರಮಣ 5
--------------
ತುಪಾಕಿ ವೆಂಕಟರಮಣಾಚಾರ್ಯ
ಗೋವಿಂದಾಷ್ಟೋತ್ತರ ನಾಮಾವಳಿ ಹೃದ್ಗತ ತಮನಾಶ ಗೋವಿಂದ | ಎನ್ನಹೃದ್ಗುಹದೊಳು ತೋರೋ ಗೋವಿಂದ ಪ ಅಲವ ಮಹಿಮ ಹರಿ ಗೋವಿಂದ | ನಮ್ಮಅಲವ ಭೋದರ ಪ್ರೀಯ ಗೋವಿಂದ ||ಆಲಯದೊಳು ನಿಲ್ಲೊ ಗೋವಿಂದ | ಹೃ-ದಾಲಯದಲಿ ತೋರೊ ಗೋವಿಂದ 1 ಇಕ್ಷುಚಾಪನ ಪಿತನೆ ಗೋವಿಂದ | ನೀನಿಕ್ಷುಧನ್ವಾರಿ ನುತ ಗೋವಿಂದ ||ಈಕ್ಷಿಸೋ ಕರುಣದಿ ಗೋವಿಂದ | ನಿ-ನ್ನೀಕ್ಷಿಸ ಲೋಶವೇನೊ ಗೋವಿಂದ 2 ಉರಗ ಶಯನನೆ ಗೋವಿಂದ | ನಮ್ಮಉರಗಾಯಿ ವೈಕುಂಠ ಗೋವಿಂದ ||ಊರೂರು ಚರಿಸಿದೆ ಗೋವಿಂದ | ನಿ-ಮ್ಮೂರಿಗೆ ಕರೆದೊಯ್ಯೊ ಗೋವಿಂದ 3 ಋಗಾದಿ ತ್ರಯಿಮಯಿ ಗೋವಿಂದ | ಹರಿಋಗ್ವಿನುತನೆ ಗುರು ಗೋವಿಂದ ||Iೂಕ್ಷ ಸದ್ವಿನುತನೆ ಗೋವಿಂದ | ಹರಿIೂಕಾರ ಪ್ರತಿಪಾದ್ಯ ಗೋವಿಂದ 4 ಏತತ್ತೆನಿಸಿಯು ಹೃದ್ಗ ಗೋವಿಂದ | ನೀ ನೇತಕೆ ಕಾಣಿಯಾಗಿಹೆ ಗೋವಿಂದ ||ಐತದಾತ್ಮ್ಯಕ ಸರ್ವ ಗೋವಿಂದ | ನೀನೈತರುವುದು ಮನಕೆ ಗೋವಿಂದ 5 ಸತಿ ಗೋವಿಂದ | ನೀನೌತು ಕೊಂಡಿಹದೇಕೊ ಗೋವಿಂದ 6 ಅಂಗಾಂಗಿ ಭಾವದಿ ಗೋವಿಂದ | ನೀನಂಗಾಂಗದಿ ಕ್ರೀಡಿಪೆ ಗೋವಿಂದ ||ಅಹರರ್ಹಮನದಲಿ ಗೋವಿಂದ | ನೀಅಹರಹರ್ವಿಹರಿಸೋ ಗೋವಿಂದ 7 ಕಪಿಲಾತ್ಮ ಶ್ರೀ ಹರಿ ಗೋವಿಂದ | ನಮ್ಮಕಪಿವರ ಪೂಜ್ಯನೆ ಗೋವಿಂದ ||ಖಪತಿಗಮನ ಗುರು ಗೋವಿಂದ | ಜಗಖರ್ಪರ ಸೀಳಿದ ಗೋವಿಂದ 8 ಗರುಡಧ್ವಜನೆ ಬಾರೋ ಗೋವಿಂದ | ಜಗಂಗರುವವ ಕಳೆಯೊ ಗೋವಿಂದ ||ಘರ್ಮಾಸ ಸಮಂತಾತು ಗೋವಿಂದ | ಸೂಕ್ತಘರ್ಮಕ್ಕೆ ವಿಷಯನೆ ಗೋವಿಂದ 9 ಓಂಕಾರ ಪ್ರತಿಪಾದ್ಯ ಗೋವಿಂದ | ಪಾ-ಙ್ತವು ಜಗವೆಲ್ಲ ಗೋವಿಂದ ||ಚರ್ಮದೊಳುದ್ಗೀಥ ಗೋವಿಂದ | ಇದ್ದುಚರ್ಮ ಲಾವಣ್ಯದ ಗೋವಿಂದ 10 ಛಂದಸ್ಸಿನಿಂಛನ್ನ ಗೋವಿಂದ | ನಾಗಿಛಂದೋಭಿಧನೆನಿಪೆ ಗೋವಿಂದ ||ಜಂಗಮ ಚರವ್ಯಾಪ್ತ ಗೋವಿಂದ | ಎಮ್ಮಜಂಗುಳಿಗಳ ಕಳೆಯೊ ಗೋವಿಂದ 11 ಝಷ ರೂಪಿ ಕಮಠನೆ ಗೋವಿಂದ | ನಮ್ಮಝಷ ಕೇತುಪಿತ ಕಾಯೊ ಗೋವಿಂದ ||ಜ್ಞಾನ ಜ್ಞೇಯ ಜ್ಞಾತೃ ಗೋವಿಂದ | ಪ್ರ-ಜ್ಞಾನ ಘನನೆನಿಪೆ ಗೋವಿಂದ 12 ಟಂಕಿ ಎಂಬುವನೆ ಗೋವಿಂದ | ನಮ್ಮಾಟಂಕವ ಕಳೆಯೋ ಗೋವಿಂದ ||ಠಕ್ಕು ಠವಳಿಗಾರ ಗೋವಿಂದ | ನಮ್ಮಠಕ್ಕಸಿ ಹಾಕದಿರು ಗೋವಿಂದ 13 ಡರಕೊ ಡರ್ಯಾಭಿಧ ಗೋವಿಂದ | ನಮ್ಮೆಡರನು ಪರಿಹರಿಸೊ ಗೋವಿಂದ ||ಢಣ ಢಣ ನಾದದಿ ಗೋವಿಂದ | ಬಲುಢಣಿರೆಂಬೊ ವಾದ್ಯದಿ ಗೋವಿಂದ 14 ಣನಾಮ ವಾಚ್ಯನೆ ಗೋವಿಂದ | ಪ್ರ-ಣಮನ ಮಾಡುವೆನೋ ಗೋವಿಂದ ||ತರುಣಾರ್ಕ ಪ್ರಭೆಯ ಗೋವಿಂದ | ನಮ್ಮತರುಣಿ ದ್ರೌಪದಿ ವರದ ಗೋವಿಂದ 15 ಥರಥರವರ್ಣನೆ ಗೋವಿಂದ | ಬಲ್ಪ್ರಮಥನ ಶೀಲನೆ ಗುರು ಗೋವಿಂದ ||ದರ ಕಂಬುಧರನೆ ಗೋವಿಂದ | ತ್ರಿ-ದಶರ ಪರಿಪಾಲ ಗೋವಿಂದ 16 ಧರ್ಮಸು ಗೋಪ್ತನೆ ಗೋವಿಂದ | ಸ-ಧ್ದರ್ಮ ನಾಮಕ ಗುರು ಗೋವಿಂದ ||ನರೆಯಣಾಭಿಧ ಗುರು ಗೋವಿಂದ | ನಮ್ಮನರಸಖನೆನಿಸಿಹೆ ಗೋವಿಂದ 17 ಪರಮ ಪುರುಷ ಗುರು ಗೋವಿಂದ | ಕಾಯೊಪರಮಾನಂದ ಪ್ರದನೆ ಗೋವಿಂದ ||ಫಲರೂಪನು ನೀನೆ ಗೋವಿಂದ | ಇದೆಫಲಿತಾರ್ಥವೊ ಗುರು ಗೋವಿಂದ 18 ಬಗೆ ಬಗೆ ಕರ್ಮಗಳ್ ಗೋವಿಂದ | ಮಾಡಿಬಗೆ ಬಗೆ ಲೀಲನೆ ಗೋವಿಂದ ||ಭರ್ಗ ರೂಪಿಯೆ ಗುರು ಗೋವಿಂದ | ನಮ್ಮಭರ್ಮ ಗರ್ಭನ ಪಿತ ಗೋವಿಂದ 19 ಮದಜನಕಮಜ್ಜದಿ ಗೋವಿಂದ | ನಮ್ಮಮದನ ಗೋಪಾಲನೆ ಗೋವಿಂದ ||ಯಜ್ಞ ಭುಗ್ಯಜ್ಞನೆ ಗೋವಿಂದ | ಮತ್ತೆಯಜ್ಞ ಸಾಧನ ನೀನೇ ಗೋವಿಂದ 20 ರಣದೊಳರ್ಜುನ ಪಾಲ ಗೋವಿಂದ | ಹಗರಣವನೆ ಕಳೆಯೊ ಗೋವಿಂದ ||ಲವಕುಶ ಪಿತನೆನಿಪೆ ಗೋವಿಂದ | ನೀನಲವಪೂರ್ಣ ಮಹಿಮ ಗೋವಿಂದ 21 ವರ್ಣಗಳ್ಧ್ವನಿಗಳು ಗೋವಿಂದ | ಸರ್ವವರ್ಣಿಪುದು ನಿನ್ನ ಗೋವಿಂದ ||ಶರೊ ಆಭಿಧ ಜೀವನ್ನ ಗೋವಿಂದ | ಮೀಟಿಶರೀರಾಖ್ಯನೆನಿಸುವೆ ಗೋವಿಂದ 22 ಷಡ್ಗುಣ ಪರಿಪೂರ್ಣ ಗೋವಿಂದ | ನೀನೆಷಡ್ವಾದಿ ಸ್ವರ ವ್ಯಾಪಿ ಗೋವಿಂದ ||ಸತ್ತಾದಿ ಪ್ರದ ರೂಪಿ ಗೋವಿಂದ | ನೀನೆಸತ್ತತ್ವ ಪ್ರತಿಪಾದ್ಯ ಗೋವಿಂದ 23 ಹರಿ ಹರಿ ಎಂದರೆ ಗೋವಿಂದ | ಪಾಪಹರಿ ಸೂವಿ ನೀನೇ ಗೋವಿಂದ ||ಳಾಳೂಕ ಆಭಿಧ ಗೋವಿಂದ | ಕಾಯೊಳಕಾರ ಪ್ರತಿಪಾದ್ಯ ಗೋವಿಂದ 24 ಕ್ಷಮಿಸೆನ್ನ ಅಪರಾಧ ಗೋವಿಂದ | ಬಲಿಕ್ಷಮೆಯನಳೆದ ಗುರು ಗೋವಿಂದ ||ಕ್ಷಮಕ್ಷಾಮಾಭಿಧ ಗುರು ಗೋವಿಂದ | ನೀಲಕ್ಷುಮಿ ಸಹ ನೆಲಸೊ ಗೋವಿಂದ 25 ಜ್ಞಾನಗಮ್ಯನೆ ಗುರು ಗೋವಿಂದ | ತತ್ವಜ್ಞಾನವ ಪಾಲಿಸೋ ಗೋವಿಂದ ||ಜ್ಞಾನಿಗೆ ಪ್ರಿಯತಮ ಗೋವಿಂದ | ನಿನಗೆಜ್ಞಾನಿ ಜನರು ಪ್ರಿಯರು ಗೋವಿಂದ 26 ಏಕ ಪಂಚಾಶತು ಗೋವಿಂದ | ವರ್ಣಏಕಾತ್ಮ ಮಾಲೇಯ ಗೋವಿಂದ ||ಲೋಕೈಕನಾಥ ಗುರು ಗೋವಿಂದ | ವಿಠಲಸ್ವೀಕರಿಸೆನ್ನ ಕಾಯೋ ಗೋವಿಂದ 27
--------------
ಗುರುಗೋವಿಂದವಿಠಲರು
ಜಯ ಮಂಗಳಂ ಮಹಾ ಶುಭಮಂಗಳಂ ಶ್ರೀಯಕರಾನಂದ ಘನಚಿನ್ಮೂರ್ತಿಗೆ ಪ ಅನಿಮಿಷಾಕ್ಷಗ ಧರಮಹೀಗ ಸಂಭೋದ್ಬವಗ ಮುನಿಪಟು ಕ್ಷತ್ರಿ ಕುಲಸಂಹಾರಗ ಇನಕುಲೋದ್ಭವ ವಾಸುದೇವಶ್ರೀ ಬೌದ್ಧಗ ಘನತರದ ತುರಗ ಹರರಾವುತಂಗೆ 1 ಮರಮತ್ಸ್ಯ ಶ್ರೀಕಮಠ ಹಿರಣ್ಯಕ್ಷಮರ್ಧನಗೆ ಕೊರಳೊನಮೂಲಿ ವಾಮನದೇವಗೆ ಧರಿ ಭೂಸುರಗಿತ್ತು ಧಾಶರಥಿ ಶ್ರೀ ಹರಿಗೆ ಸಿರಿದಿಂಗಬರ ಕಲ್ಕಿ ಯವತಾರಗೆ 2 ಕೂರ್ಮ ವರಾಹನರಸಿಂಹಗೆ ಅಗವೈರಿಯನುಜ ಪರಶುರಾಮಗ ರುಘುನಾಥ ಕೃಷ್ಣ ಬೌದ್ದೇಶಕಲಿನಾಶಗ ಜಗದ್ಗುರು ಮಹಿಪತಿ ಸುತಪ್ರಿಯಗೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯಮಂಗಳಂ ಶುಭೋದಯ ಮಂಗಳಂ ಜಯ ಕಕುದ್ಗಿರಿ ಗಂಗಾಧರ ಲಿಂಗಗೆ ಪ ಜಡೆಯುಡುಪತಿಯು ಗಂಗೆಯೊಡಗೂಡ್ದ ಮಸ್ತಕಕೆ ಮಡುಹಿ ಮಾರನ ಭಸಿತದಾಳ್ದ ಪಣೆಗೆ ಪೆಡೆಯೆತ್ತಿ ಗಾನಗೈವಹಿ ಕುಂಡಲಂಗಳಿಗೆ ದೃಢಭಕತರಿಷ್ಟದಾಯಕ ಶಿವನಿಗೆ 1 ಸೋಮಸೂರ್ಯಾಗ್ನಿ ಲೋಚನೆಗೆ ವಿಷದಾಳಿ ಸುರ ಸ್ತೋಮವನು ಕಾಯ್ದ ಶೋಭನ ಕಂಠಕೆ ಭೀಮನಿಗೆ ಭಯಹರಗೆ ಪರಶುಮೃಗ ಹಸ್ತನಿಗೆ ಕಾಮಿತಾರ್ಥದ ವರಾಭಯ ಕರನಿಗೆ 2 ನಾಗಕಂಕಣಧರಗೆ ನಾಗೋತ್ತರೀಯನಿಗೆ ನಾಗಯಜ್ಞೋಪವೀತವ ತಾಳ್ದಗೆ ನಾಗಚರ್ಮಾಂಬರಗೆ ನಗರಾಜ ಚಾಪನಿಗೆ ಗಮನ ಬಾಣಗೆ ಶಿವನಿಗೆ 3 ಗಿರಿಜೆಗರ್ಧಾಂಗವನ್ನಿತ್ತ ಶುಭವಿಗ್ರಹಗೆ ವರ ವೃಷಭವನ್ನೇರಿ ಸಂಚರಿಪಗೆ ಬರೆದುಂಗುಟದಿ ಹೊಳೆದ ಚಕ್ರದಿಂ ದೈತ್ಯಕುಲ ಹರಣ ವರದಾಯಕಗೆ ಸರ್ವೆಶಗೆ 4 ತಿರುಪತಿಯ ವಾಸವನು ದೃಢಗೈದು ಕಕುದ್ಗಿರಿಯ ಪರಮ ಕ್ಷೇತ್ರದಿ ಮಹಿಮೆಗಳ ತೋರ್ಪಗೆ ವರದ ವೆಂಕಟಪತಿಗೆ ಗಂಗಾಧರೇಶ್ವರಗೆ ಶರಣಾಗತರ ಕಾಯ್ವ ಸಾಂಬಶಿವಗೆ 5
--------------
ತಿಮ್ಮಪ್ಪದಾಸರು
ಜಯಮಂಗಳಂ ಶುಭೋದಯ ಮಂಗಳಂ ಭಯಹರಗೆ ತಿರುಪತಿಯ ವೆಂಕಟೇಶ್ವರಗೆ ಪ ಸುರಲೋಕವನು ಪಡೆದ ಶಿರದಮಕುಟದ ಪ್ರಭೆಗೆ ಸ್ಮರಚಾಪವನು ಪೋಲ್ವ ಪುರ್ಬುಗಳ ಚೆಲುವಿಕೆಗೆ ತುಂಬಿ ತುಳುಕುವ ನಯನಗಳಿಗೆ 1 ಕನಕಕುಂಡಲಗಳಿಗೆ ಘನ ನಾಸಿಕದ ಮಣಿಗೆ ಮಿನುಗುತಿಹ ಮುಗುಳುನಗೆಯೊಗುವ ಮುಖಕೆ ಇನಕೋಟಿಪ್ರಭೆಗೆ ಮಿಗಿಲೆನಿಪ ಕೌಸ್ತುಭಮಣಿಗೆ ವನಮಾಲೆಯನು ಧರಿಸಿ ಶೋಭಿಸುವ ಕಂಠಕೆ 2 ಭುಜವೆರಡರಲಿ ಶಂಖಚಕ್ರಗಳನುರೆ ಧರಿಸಿ ಅಜಸುರಾದ್ಯರು ಬಿಡದೆ ಭಜಿಪ ಪದವ ಭಜಿಪರಿಗೆ ಭವಶರಧಿ ಕಟಿಪ್ರಮಾಣವಿದೆಂದು ಅಜಪಿತನು ತೋರುತಿಹ ಕರಚತುಷ್ಟಯಕೆ 3 ಹದಿನಾಲ್ಕು ಲೋಕಕಾಶ್ರಯವಾಗಿ ತೋರುತಿಹ ಪದುಮಭವನನು ಪಡೆದ ನಾಭಿಸಹಿತ ಉದರಮಂಡಲಕೆ ಮತ್ತದರಡಿಯ ಶೋಭಿಸುವ ಹದಿನಾರು ಬಣ್ಣದಪರಂಜಿ ಕಟಿಸೂತ್ರಕೆ 4 ಕಿರಿಘಂಟೆಸರದೊಡನೆ ಹೊಳೆವ ಪೀತಾಂಬರಕೆ ಗರುಡನಂಸದಿ ಮೆರೆವ ಊರುಗಳಿಗೆ ಸುರನದಿಯ ನೆರೆ ಪಡೆದ ಚರಣದುಂಗುಟಗಳಿಗೆತಿರುಪತಿಯ ವೆಂಕಟನ ದಿವ್ಯ ಮೂರುತಿಗೆ 5
--------------
ತಿಮ್ಮಪ್ಪದಾಸರು
ತಿರುಮಲೇಶವಿಠಲಾ | ಪೊರೆಯ ಬೇಕಿವಳಾ ಪ ನಿರುತ ನಿನ್ನಯ ನಾಮ | ಸ್ಮರಣೆ ಸುಖ ಕೊಡುತಾ ಅ.ಪ. ಸ್ವಪ್ನದಲಿ ತವರೂಪ | ಕನ್ಯೆತಾ ಕಾಣುತ್ತಾಉನ್ನಂತ ಹರ್ಷದಲಿ | ಭಿನ್ನವಿಸಿ ಇಹಳೋ |ಪನ್ನಗಾರಿಧ್ವಜನೆ | ಮನ್ನಿಸುತ ಮನ್ಮಾತಕನ್ಯೆಗಭಯದನಾಗಿ | ನನ್ನೆಯಿಂ ಸಲಹೋ 1 ಶೂನ್ಯ | ಭೋಧಾತ್ಮ ಶ್ರೀ ಹರಿಯೆಭೇದಪಂಚಕ ವರುಹಿ | ಮಧ್ವಮತ ದೀಕ್ಷಾ |ಸಾಧಿಸುವುದಿವಳಲ್ಲಿ | ಹೇದಯಾಂಬುದೆ ಪೂರ್ಣಭೋದಮುನಿಯ ಸನ್ನುತನೆ | ವೇದಾಂತ ವೇದ್ಯಾ 2 ವ್ರಾತ ಸಮತೆಲಿಯುಂಬಭೂತಿಕರುಣಿಸು ಹರಿಯೆ | ವಾತಾಂತರಾತ್ಮಾ |ಧಾತಾಂಡ ಸೃಜಿಸಿ ಹರಿ | ಓತ ಪ್ರೋತನು ಇರಲುಮಾತನೊಪ್ಪಿಸೆ ನಿನಗೆ | ಏತರವ ನಾನೂ 3 ಹರಿಗುರೂ ಸದ್ಭಕ್ತಿ | ಹಿರಿಯರಾ ಸತ್ಸೇವೆಕರುಣಿಸುತ ಸಾಧನದ | ವರಮಾರ್ಗ ತೋರೋ |ಶರಣಜನ ವಾತ್ಸಲ್ಯ | ಬಿರಿದು ಪೊತ್ತಾಮೇಲೆಕರುಣಾಬ್ಧಿಪೂರ್ಣೆಂದು | ಕರಪಿಡಿಯೊ ಇವಳಾ 4 ಸಾಮಗಾನವಿಲೋಲ | ಭಾಮೆರುಕ್ಷ್ಮಿಣಿಲೋಲಸಾಮಾಜಾವರವರದ | ಭೂಮಗುಣಪೂರ್ಣ |ಕಾಮಾರಿಸನ್ನುತನೆ | ಕಾಮಿತಪ್ರದನಾಗೊಕಾಮನಯ್ಯನೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ನಡುನೀರೊಳಗೆ ಕೈಯ್ಯ ಬಿಡುವುದೆ ಸಿರಿನಲ್ಲ ಕಡೆ ಹಾಯಿಸದೆ ಮೋಸ ಕೊಡುವುದು ತರವಲ್ಲ ಪ. ನಾನಾ ವಿಧದ ನೀಚಯೋನಿಗಳನು ದಾಟಿ ಮಾನುಷೋತ್ತಮ ಮಧ್ವಮತದಿ ಪುಟ್ಟಿ ನೀನೆ ಮುಕ್ತಿದನೆಂಬೊ ಜ್ಞಾನವಂತರ ಭೇಟಿ ನಾನೈದಬೇಕೆಂದು ಧ್ಯಾನಗೊಂಡಿಹೆನೆಂದು 1 ವೇದ ವಿಹಿತಕರ್ಮವಾದರು ಕ್ರಮವಾಗಿ ಸಾಧಿಸಲಿಲ್ಲ ಸಂತತಿಗಳಿಲ್ಲ ಪಾದ ಪದ್ಮ ಪರಾಗ ಮೋದಾನುಭವದಿ ಶುಭೋದಯಗೊಳಲಿಲ್ಲ 2 ಕೆಲವು ಕಾಲವ ಬಾಲ್ಯದಲಿ ಕಳೆದೆನು ಮತ್ತೆ ಲಲನೇರ ಮೋಹದಿ ಬಳಲಿದೆನು ಬಲವು ಕುಂದುತ ದೇಹ ಗಳಿತವಾಗುವುದಿನ್ನು ನಳಿನಾಕ್ಷ ಪದಪದ್ಮ ನೆಳಲನೈದದ ಮುನ್ನು 3 ಮೂರೊಂದು ಪುರುಷಾರ್ಥ ತೋರುವ ಪುರುಷ ಶ- ರೀರವ ಕರುಣಿಸಿದವನೆ ನೀನು ಮೂರಾರು ವಿಧ ಭಕ್ತಿ ಸಾರುವ ತಿಳಿಸಿ ಕಂ ಪಾದ ಪರಿಯಂತ 4 ಸಂಚಿತಾಗಾಮಿ ದುಷ್ಕøತಗಳನಳಿಸಿ ಪ್ರಾ ಪಂಚಿಕ ಭೋಗ ಪೂರಣಗೊಳಿಸಿ ಪಂಚಭೌತಿಕ ಹರ ವಂಚನೆ ಮಾಡದೆ ಶ್ರೀ ವಿ ರಿಂಚಿವರದ ದೇವ ವೆಂಕಟೇಶ ನೀ ಕರುಣಿಸು 5
--------------
ತುಪಾಕಿ ವೆಂಕಟರಮಣಾಚಾರ್ಯ
ನಭಕೀಶ - ನಭಕೀಶ ಪ ಇಭಮೊಗ ನಿನ್ನಡಿ | ಗಭಿ ವಂದಿಸುವೆನುಇಭವರದನ ಮನ | ನಭದಲಿ ತೋರೋ ಅ.ಪ. ಮೂಷಕ ವಾಹಾಹಿ | ಭೂಷನೆ ತ್ರೈಜಗತೋಷ ಗಣಾಧಿಪ | ಪಾಶಾಂಕುಶಧರ 1 ಶುಭ ಗುಣ ಭಜನೆಯಸುಭಗನೆ ಪಾಲಿಸಿ | ಕುಭವನೆ ಹರಿಸೋ 2 ಅಂಬುಜಾಂಡದಿ ತವ | ಶುಭಗುಣ ಪ್ರಸರಣಸುಭುಜಾಹ್ವಯ ಗೈ | ದ ಭಯವ ನಿತ್ತನು 3 ಅಬುಧಿಗೆ ಸೇತುವೆ | ವಿಭವದಿ ಗೈವಾಗಬುಜಾಂಡೋದರ | ಭಜಿಸಿದ ನಿನ್ನಾ 4 ಕ್ರತು ರಾಜಸೂಯ 5 ರಕ್ತವಾಸ ಅನು | ರಕ್ತ ಹರಿಯಲಿಭಕ್ತಿಯ ಪಾಲಿಸೋ | ಭಕ್ತಾಶ್ರಯನೇ 6 ಅಸಮಾಧಿಕ ಪ್ರಿಯ | ಶಶಿಭೂಷಣ ಸುತಶಶಿ ದ್ವಿಟ್ ಮರ್ಭವ | ಪಾಶವ ಕಳೆಯೋ 7 ಎಕಮೇವ ನಲಿ - ವಿ | ವೇಕವ ಕೊಡುವುದುಏಕದಂತ ಚಾ | ಮೀಕರ ಕೃತ ಭೂಷಾ 8 ಮೋದಕೇಕವಿಂಶ | ಸಾದರ ಸ್ವೀಕೃತಮೋದ ತೀರ್ಥ ಮತ | ಭೋದಿಸು ಗುರುವೇ 9 ಚಾರುದ್ವೇಷ್ಣಾಭಿಧ | ಚಾರ್ವಾಂಗನೆ ಹರಿಚಾರು ಚರಿತೆ ಸತ್ | ಸ್ಫೋರಣ ಕೊಡುವುದು 10 ಭಾವಜಪಿತ ಗುರು | ಗೋವಿಂದ ವಿಠಲನಭಾವದಿ ತೋರಿಸೊ | ಭಾವಜ ಭ್ರಾತಾ11
--------------
ಗುರುಗೋವಿಂದವಿಠಲರು
ನಿನಗೆ ಅಂಜುವನಲ್ಲ ನೀರಜಾಕ್ಷ ಪ ಮನವಚನ ಕಾಯದಿಂ ನಿನ್ನವರಿಗಂಜುವೆನುಅ ರಾಗದಿಂದಲಿ ಇಂದ್ರದ್ಯುಮ್ನ ಭೂಪಾಲಕನು ಯೋಗ ಮಾರ್ಗದಿ ನಿನ್ನ ಭಜಿಸುತಿರಲು ಯೋಗ ಕುಂಭೋದ್ಭವನು ಬಂದು ಶಾಪವೆ ಕೊಡಲು ಆಗ ಮೌನದಲವನನೊಪ್ಪಿಸಿದ ಬಗೆ ಬಲ್ಲೆ 1 ಗುಣವಂತರೀರ್ವರು ಜಯವಿಜಯರು ನಿನ್ನ ಅನುಗಾಲ ಬಾಗಿಲನು ಕಾಯುತಿರಲು ಸನಕಾದಿಗಳು ಬಂದು ಶಪಿಸಲಾಕ್ಷಣದಲ್ಲಿ ಸನುಮತದಲವರ ನೀನೊಪ್ಪಿಸಿದ ಬಗೆಬಲ್ಲೆ 2 ನೃಗರಾಯ ಪುಣ್ಯ ಬರಬೇಕೆನುತ ವಿಪ್ರರಿಗೆ ನಿಗಮೋಕ್ತಿಯಿಂದ ಗೋದಾನ ಕೊಡಲು ಜಗಳ ಪುಟ್ಟಿತು ನೋಡು ಅನ್ಯೋನ್ಯರೊಡಗೂಡಿ ಮಿಗೆ ಶಾಪ ಕೊಡಲವನನೊಪ್ಪಿಸಿದ ಬಗೆ ಬಲ್ಲೆ 3 ಉಣಲಿತ್ತರೆ ಉಂಡು ಪೋಗಲೊಲ್ಲದೆ ಒಂದು ತೃಣದಲ್ಲಿ ಗೋವನ್ನೆ ರಚಿಸಿ ನಿಲಿಸಿ ಮುನಿಪ ಗೌತಮನಿಗೆ ಗೋಹತ್ಯವನು ಹೊರಿಸಿ ಕ್ಷಣದೊಳಗೆ ಅವನ ನೀನೊಪ್ಪಿಸಿದ ಬಗೆ ಬಲ್ಲೆ 4 ಅನಪರಾಧಿಗಳಿಗೆ ಇನಿತಾಯಿತೋ ದೇವ ಎನಗೆ ತನಗೆಂಬುವರಿಗಾವ ಗತಿಯೊ ಮಣಿದು ಬೇಡಿಕೊಂಬೆ ವಿಜಯವಿಠ್ಠಲರೇಯ ನಿನಗಿಂತ ಭಕುತಿ ನಿನ್ನವರಲ್ಲಿ ಕೊಡು ಎನಗೆ 5
--------------
ವಿಜಯದಾಸ
ನೋಡಿದೆ ವೆಂಕಟರಮಣನ | ದ್ವಾರ ವಾಡ ಗ್ರಾಮದಿ ನಿಂತ ದೇವನ ಪ ರೂಢಿಪ ದಾಸರಿಗೆ ನೀಡಲು ದರುಶನ ಗೂಢ ಪಾದಾದ್ರಿಯಿಂ ಬಂದ ಮಹಾತ್ಮನ ಅ.ಪ ಈತನೆ ವೈಕುಂಟನಾಥನು ನಿಜ | ಶಾತಕುಂಭೋದÀರ ತಾತನು ಮಾತಂಗ ವರದಾತ ಶ್ವೇತವಾಹನ ಸೂತ ಜಾತರಹಿತ ದನುಜಾತ ಕುಲಾಂತಕ 1 ತೋಡ ಜನಕೆ ಸುಖದಾತನ | ಅಂಡಜಾತ ಪ್ರಕಾಂಡ ವರೂಥ ಬ್ರ ಹ್ಮಾಂಡನಾಯಕನಾದ ಪಾಂಡವಪಾಲನ 2 ಇಂದು ಧರಾಮರ ವಂದ್ಯನ ಶಾಮ ಸುಂದರ ವಿಠಲನ ಮುಕುಂದನ ಸಂದರುಶನ ಮಾತ್ರದಿ ಹಿಂದೆ ಮಾಡಿದ ದೋಷ ಇಂದು ಬೆಂದು ಪೋದವು ಘನ 3
--------------
ಶಾಮಸುಂದರ ವಿಠಲ